Site icon Vistara News

ಮುಖ್ಯಮಂತ್ರಿ ಬೊಮ್ಮಾಯಿ ಮಾಧ್ಯಮ ವಿಭಾಗಕ್ಕೆ ಶಂಕರ ಪಾಗೋಜಿ, ಮೋಹನ್‌ ಕೃಷ್ಣ ನೇಮಕ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಶಂಕರ ಪಾಗೋಜಿ ಹಾಗೂ ಮಾಧ್ಯಮ ಸಲಹೆಗಾರರನ್ನಾಗಿ ಬಿಜೆಪಿ ಮುಖಂಡ ಮೋಹನ್‌ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ.

ಈ ಹಿಂದೆ ಸುವರ್ಣ ನ್ಯೂಸ್‌ ಸೇರಿ ಅನೇಕ ಮಾಧ್ಯಮಗಳಲ್ಲಿ ಪತ್ರಕರ್ತರಾಗಿದ್ದ ಶಂಕರ ಪಾಗೋಜಿ ಅವರು ಸದ್ಯ ಉದಯವಾಣಿ ದಿನಪತ್ರಿಕೆಯ ರಾಜಕೀಯ ವಿಭಾಗದ ವರದಿಗಾರರಾಗಿದ್ದರು. ಅವರನ್ನು ಸಿಎಂ ಮಾಧ್ಯಮ ಸಂಯೋಜಕರಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ.

ಮೋಹನ್‌ ಕೃಷ್ಣ ಅವರು ಬಿಜೆಪಿ ಕಾರ್ಯಕರ್ತರಾಗಿದ್ದು, ಈ ಹಿಂದೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಬಿಜೆಪಿ ಪ್ರಭಾರಿ ಅರುಣ್‌ ಸಿಂಗ್‌ ಅವರ ಮಾಧ್ಯಮ ಸಂಯೋಜಕರಾಗಿದ್ದರು. ರಾಜ್ಯ ಹಾಗೂ ರಾಷ್ಟ್ರೀಯ ಸುದ್ದಿವಾಹಿನಿಗಳ ಚರ್ಚೆಯಲ್ಲಿ ಭಾಗವಹಿಸಿ ಬಿಜೆಪಿ ನಿಲುವುಗಳನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದರು. ಮೋಹನ್‌ ಕೃಷ್ಣ ಅವರನ್ನು ಸಿಎಂ ಮಾಧ್ಯಮ ಸಲಹೆಗಾರರನ್ನಾಗಿ ನೇಮಿಸಿ ಆದೇಶಿಸಲಾಗಿದೆ.

ಇದನ್ನೂ ಓದಿ | ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೃದಯಾಘಾತದಿಂದ ನಿಧನ

Exit mobile version