ರೋಹಿತ್‌ ʼಚಕ್ರವ್ಯೂಹʼದಲ್ಲಿ CM ಬಸವರಾಜ ಬೊಮ್ಮಾಯಿ: ಇಂದು ಕ್ಲೈಮ್ಯಾಕ್ಸ್‌? - Vistara News

ಕರ್ನಾಟಕ

ರೋಹಿತ್‌ ʼಚಕ್ರವ್ಯೂಹʼದಲ್ಲಿ CM ಬಸವರಾಜ ಬೊಮ್ಮಾಯಿ: ಇಂದು ಕ್ಲೈಮ್ಯಾಕ್ಸ್‌?

ಟಿಪ್ಪು ಸುಲ್ತಾನ್‌, ಹೆಡಗೆವಾರ್‌ ಕುರಿತು ವಿವಾದವಿದ್ದಾಗ ಸಮರ್ಥವಾಗಿ ಎದುರಿಸುತ್ತಿದ್ದ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ, ನಾಡಗೀತೆ ಹಾಗೂ ಕುವೆಂಪು ವಿಚಾರ ಬಂದ ಕೂಡಲೆ ತಿಣುಕಾಡುತ್ತಿದೆ.

VISTARANEWS.COM


on

basavaraj bommai trying to escape from controversy
ಸಿಎಂ ಬಸವರಾಜ ಬೊಮ್ಮಾಯಿ ಅವರು ಉಡುಪಿಯಲ್ಲಿರುವ 1500 ವರ್ಷಗಳ ಇತಿಹಾಸವಿರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿ ದೇವಿಯ ದರ್ಶನ ಮಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಠ್ಯಪುಸ್ತದ ವಿಷಯಕ್ಕಿಂತಲೂ ಹೆಚ್ಚಾಗಿ ಪಠ್ಯಪುಸ್ತಕ ಪರಿಷ್ಕರಣೆಗೆ ರಚನೆ ಮಾಡಿದ್ದ ಸಮಿತಿ ಹಾಗೂ ಅದರ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಸುತ್ತಲೇ ಗಿರಕಿ ಹೊಡೆಯುತ್ತಿದೆ. ಟಿಪ್ಪು ಸುಲ್ತಾನ ಪಠ್ಯದಿಂದ ವಿವಾದ ಆರಂಭವಾದಾಗ ಧೈರ್ಯದಿಂದ ಮುನ್ನುಗ್ಗುತ್ತಿದ್ದ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಇದೀಗ ಬಸವಣ್ಣ, ರಾಷ್ಟ್ರಕವಿ ಕುವೆಂಪು ವಿಚಾರ ತಳುಕುಹಾಕಿಕೊಂಡಾಗ ಸಂಕಷ್ಟಕ್ಕೊಳಗಾಗಿದೆ.

ಅಸಲಿಗೆ ಈ ವಿವಾದ ಶುರವಾಗಿದ್ದು ಟಿಪ್ಪು ಪಠ್ಯ ಕೈಬಿಟ್ಟ ಕುರಿತು. ಸಿದ್ದರಾಮಯ್ಯ ಸರ್ಕಾರದಲ್ಲಿ ರಚಿಸಿದ್ದ ಪ್ರೊ. ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ರಚಿಸಿದ್ದ ಪಠ್ಯಪುಸ್ತಕದಲ್ಲಿ ಯಜ್ಞ ಯಾಗಗಳ ಕುರಿತು ಸುಳ್ಳು ಮಾಹಿತಿ ನೀಡಲಾಗಿದೆ ಎಂಬ ಆರೋಪವಿತ್ತು. ಟಿಪ್ಪುವನ್ನು ಅನಗತ್ಯವಾಗಿ ವೈಭವೀಕರಿಸಲಾಗಿದೆ ಎಂಬುದು ಬಿಜೆಪಿ ಆರ್‌ಎಸ್‌ಎಸ್‌ ವಲಯದಲ್ಲಿದ್ದ ಆಕ್ರೋಶ.

ಈ ಸಮಸ್ಯೆಯನ್ನು ಸರಿಪಡಿಸಲು ರೋಹಿತ್‌ ಚಕ್ರತೀರ್ಥ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಯಿತು. ಅನೇಕ ತಿಂಗಳೂ ಕಾರ್ಯನಿರ್ವಹಿಸಿದ ಸಮಿತಿ ಕೇವಲ ಒಂದೆರಡು ವಿಷಯ ಬದಲಿಸಲು ಸೀಂಇತವಾಗಲಿಲ್ಲ. ಕನ್ನಡ ಹಾಗೂ ಸಮಾಜವಿಜ್ಞಾನದ ಪಠ್ಯ ಪರಿಷ್ಕರಣೆಯನ್ನೂ ಕೈಗೆತ್ತಿಕೊಂಡಿತು. ಟಿಪ್ಪು ಸುಲ್ತಾನ್‌ ಪಾಠವನ್ನು ಕೈಬಿಡಲಾಗಿದೆ ಎಂಭ ಸುದ್ದಿ ಪ್ರಾರಂಭದಲ್ಲಿ ಹರಿದಾಡಿದವು. ಇದಕ್ಕೆ ಉತ್ತರಿಸಿದ್ದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌, ಸದ್ಯಕ್ಕೆ ಟಿಪ್ಪುವಿನ ಸಂಪೂರ್ಣ ಪಠ್ಯವನ್ನು ತೆಗೆಯಲು ಹೋಗಿಲ್ಲ. ಅನಗತ್ಯ ಎನ್ನಿಸಿದ, ಉತ್ಪ್ರೇಕ್ಷೆಯಿಂದ ಕೂಡಿದ ಅಂಶಗಳನ್ನು ತೆಗೆದಿದ್ದೇವೆ. ಈ ರೀತಿ ಇತರೆ ವಿಚಾರಗಳಲ್ಲೂ ಮಾಡಿದ್ದೇವೆ. ಟಿಪ್ಪುವಿನ ಕುರಿತು ಹೇಳಲಾಗುವ ʼಮೈಸೂರು ಹುಲಿʼ ಬಿರುದನ್ನೂ ತೆಗೆದಿಲ್ಲ. ಮುಂದಿನ ವಾರದಲ್ಲಿ ಪಠ್ಯದ ಕುರಿತು ಪೂರ್ಣ ಮಾಹಿತಿಯನ್ನು ನೀಡುತ್ತೇನೆ ಎಂದಿದ್ದರು.

ಆನಂತರದಲ್ಲಿ ಇಡೀ ಚರ್ಚೆ ಆರ್‌ಎಸ್‌ಎಸ್‌ ಸಂಸ್ಥಾಪಕ ಡಾ. ಕೇಶವ ಬಲಿರಾಂ ಹೆಡಗೆವಾರ್‌ ಕುರಿತು ಹೊರಳಿತು. ಹೆಡಗೆವಾರ್‌ ಅವರ ಬಗ್ಗೆ ಪಾಠ ಇದೆ ಎಂದು ಪ್ರಾರಂಭದಲ್ಲಿ ಹೇಳಲಾಯಿತು. ನಂತರ, ಅದು ಹೆಡಗೆವಾರ್‌ ಕುರಿತ ಪಾಠವಲ್ಲ, ಆದರ್ಶ ವ್ಯಕ್ತಿಗಳ ಕುರಿತು ಹೆಡಗೆವಾರ್‌ ಮಾಡಿರುವ ಭಾಷಣ ಎಂದು ತಿಳಿಯಿತು. ಇಷ್ಟಕ್ಕೆ ತಣ್ಣಗಾಗದ ವಿವಾದ, ಹೆಡಗೆವಾರ್‌ ಭಾಷಣದಲ್ಲಿದ್ದ ಭಗವಾಧ್ವಜವನ್ನು ಕೇವಲ ಧ್ವಜ ಎಂದು ಸಮಿತಿ ಬದಲಾಯಿಸಿ ಮೋಸ ಮಾಡುತ್ತಿದೆ ಎನ್ನಲಾಯಿತು.

ಇದನ್ನೂ ಓದಿ | ʼವಿವಾದದ ಚಕ್ರತೀರ್ಥʼದಲ್ಲಿ ಪಠ್ಯಪುಸ್ತಕ : ಹೊಸ ಪಠ್ಯವನ್ನು ತಡೆಹಿಡಿಯಲು ಹಂಪನಾ ಆಗ್ರಹ

ಇಷ್ಟೆಲ್ಲ ಸಮಯದಲ್ಲಿ ಸರ್ಕಾರವು ಬಲವಾದ ಸಮರ್ಥನೆ ಮಾಡಿಕೊಳ್ಳುತ್ತಿತ್ತು. ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌, ಅತ್ಯಂತ ಸಮರ್ಥವಾಗಿ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡುತ್ತಿದ್ದರು. ಆರ್‌ಎಸ್‌ಎಸ್‌ ಸಂಸ್ಥಾಪಕರ ಪಾಠ ಸೇರಿಸಿದರೆ ತಪ್ಪೇನು? ಎನ್ನುತ್ತಿದ್ದರು. ಬಿಜೆಪಿಯ ಅನೇಕ ಸಚಿವರು, ಕೇಂದ್ರದ ನಾಯಕರೂ ಇದಕ್ಕೆ ದನಿಗೂಡಿಸುತ್ತಿದ್ದರು. ಆದರೆ ಇಡೀ ವಿವಾದ ರಾಷ್ಟರ್ಕವಿ ಕುವೆಂಪು ಕಡೆಗೆ ತಿರುಗಿತು.

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ 2017ರಲ್ಲಿ ಮಾಡಿದ್ದ ಫೇಸ್‌ಬುಕ್‌ ಪೋಸ್ಟ್‌ ಇದೀಗ ಐದು ವರ್ಷದ ನಂತರ ಕಾಡಲಾರಂಭಿಸಿತು. ನಾಡಗೀತೆಯನ್ನು ತಿರುಚಿ ವ್ಯಂಗ್ಯವಾಗಿ ಬರೆದಿದ್ದ ಸಾಲುಗಳನ್ನು ಚಕ್ರತೀರ್ಥ ಷೇರ್‌ ಮಾಡಿದ್ದರು. ಇದು ವಾಟ್ಸ್‌ಅಪ್‌ನಿಂ ಬಂದ ಸಂದೇಶ ಎಂದೂ ಅದರಲ್ಲಿ ನಮೂದಿಸಿದ್ದರು. ಆದರೆ ಈಗ ವಿವಾದಕ್ಕೆ ಅಷ್ಟು ಸಾಕಾಗಿತ್ತು. ಪಠ್ಯಪುಸ್ತಲದಲ್ಲಿ ಕುವೆಂಪು ಅವರ ಪರಿಚಯವನ್ನು ಬೇಕಾಬಿಟ್ಟಿಯಾಗಿ ಮಾಡಲಾಗಿದೆ ಎಂಬ ಆರೋಪಕ್ಕೆ ರೋಹಿತ್‌ ಚಕ್ರತೀರ್ಥ ಅವರ ಫೇಸ್‌ಬುಕ್‌ ಪೋಸ್ಟ್‌ ತಳುಕು ಹಾಕಿಕೊಂಡಿತು.

ಕುವೆಂಪು ಅವರ ಪರಿಚಯವನ್ನು ಬರಗೂರು ರಾಂಚಂದ್ರಪ್ಪ ಸಮಿತಿಯೇ ಮಾಡಿದ್ದು ಎಂದು ಬಿ.ಸಿ. ನಾಗೇಶ್‌, ರೋಹಿತ್‌ ಚಕ್ರತೀರ್ಥ ಹೇಳಿದ್ದು ಯಾರಿಗೂ ಕೇಳಲೇ ಇಲ್ಲ. ಹಿರಿಯ ಸಾಹಿತಿ ಹಂಪನಾ ಸೇರಿ ಸಾಲುಸಾಲಾಗಿ ಅನೇಕರು ಸರ್ಕಾರದ ವಿವಿಧ ಸಮಿತಿಗಳಿಗೆ ರಾಜೀನಾಮೆ ನೀಡುವುದರ ಮೂಲಕ ʼಹುದ್ದೆ ವಾಪ್ಸಿʼ ಅಭಿಯಾನ ಆರಂಭಿಸಿದರು. ರೋಹಿತ್‌ ಚಕ್ರತೀರ್ಥ ತಲೆದಂಡಕ್ಕೆ ಒತ್ತಾಯಿಸಿದರು. ನಾಡಗೀತೆ, ಕುವೆಂಪು ವಿಚಾರ ಬಂದ ಕೂಡಲೆ ರಾಜ್ಯದ ಒಕ್ಕಲಿಗ ಸಂಘಟನೆಗಳು ಮೇಲೆದ್ದವು. ಕರ್ನಾಟಕ ರಕ್ಷಣಾ ವೇದಿಕೆ ಸಹ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ನಡೆಸಿದವು. ಇದರ ಬೆನ್ನಿಗೇ ಆದಿಚುಂಚನಗಿರಿ ಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಮುಖ್ಯಮಂತ್ರಿಯವರಿಗೆ ಪತ್ರ ಬರೆದರು. ಆಗ ಇಡೀ ಪ್ರಕರಣ ಹೊಸ ತಿರುವು ಪಡೆಯಿತು.

ನಾಡಗೀತೆ ಹಾಗೂ ಕುವೆಂಪು ಅವರಿಗೆ ಅವಮಾನ ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ನಿರ್ಮಲಾನಂದನಾಥ ಸ್ವಾಮೀಜಿಯವರು ಪತ್ರ ಬರೆದದ್ದು ನೇರವಾಗಿ ಸಿಎಂ ಬೊಮ್ಮಾಯಿ ಅವರಿಗೇ ತಟ್ಟಿತು. ಈ ಕುರಿತು ಶನಿವಾರ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ನಿರ್ಮಲಾನಂದನಾಥ ಸ್ವಾಮೀಜಿಯವರ ಪತ್ರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ. ಶೀಘ್ರದಲ್ಲೆ ನಿರ್ಧಾರ ಮಾಡುತ್ತೇನೆ ಎಂದಿದ್ದರು.

ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಅನೇಕ ಹೊತ್ತು ಚರ್ಚೆಗೆ ಬಂದಿದೆ. ನಿರ್ಮಲಾನಂದನಾಥ ಸ್ವಾಮೀಜಿಯವರ ಪತ್ರಕ್ಕೆ ನಾವು ಕ್ರಮ ಕೈಗೊಳ್ಳದೆ ಇದ್ದರೆ ತಪ್ಪು ಸಂದೇಶ ಹೋಗುತ್ತದೆ. ವಿಶೇಷವಾಗಿ ಹಳೆ ಮೈಸೂರು ಭಾಗದಲ್ಲಿ ಚುನಾವಣೆ ವೇಳೆ ಕಷ್ಟವಾಗುತ್ತದೆ ಎಂದು ಅನೇಕ ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇತ್ತ ರೋಹಿತ್‌ ಚಕ್ರತೀರ್ಥ ಅವರ ರಾಜೀನಾಮೆ ಪಡೆದರೆ ಸಂಘ ಪರಿವಾರದ ವಲಯದಲ್ಲಿ ಸಂಕಷ್ಟ ಎದುರಾಗುತ್ತದೆ. ಹೀಗಾಗಿ ಏನು ಮಾಡಬೇಕೆಂದು ಚರ್ಚೆ ನಡೆದಿದೆ.

ಇದಕ್ಕೆ ಪರಿಹಾರವಾಗಿ, ಸ್ವತಃ ತಾವೇ ಸ್ವಾಮೀಜಿಯವರನ್ನು ಭೇಟಿ ಮಾಡಿ ಮನವೊಲಿಕೆ ಮಾಡುತ್ತೇನೆ ಎಂದು ಸಚಿವ ನಾಗೇಶ್‌ ಹೊಣೆ ಹೊತ್ತಿದ್ದರು. ಅಂದೇ ಬೆಂಗಳೂರಿನ ವಿಜಯನಗರದ ಶಾಖಾ ಮಠಕ್ಕೆ ತೆರಳಿದ ನಾಗೇಶ್‌ ಸ್ವಾಮೀಜಿಯವರಿಗೆ ಪಠ್ಯಪುಸ್ತಕದಲ್ಲಾದ ಬದಲಾವಣೆಯನ್ನು ವಿವರಿಸಿದರು. ಜತೆಗೆ, ರೋಹಿತ್‌ ಚಕ್ರತೀರ್ಥ ವಿರುದ್ಧ ಸಿದ್ದರಾಮಯ್ಯ ಸರ್ಕಾರದಲ್ಲಿ ದಾಖಲಾಗಿದ್ದ ಪ್ರಕರಣ, ಅದಕ್ಕೆ ಬಿ, ರಿಪೋರ್ಟ್‌ ಸಲ್ಲಿಕೆಯಾಗಿದ್ದನ್ನೂ ವಿವರಿಸಿದ್ದಾರೆ.

ಇದಕ್ಕೆ ಬೆನ್ನ ಹಿಂದೆಯೇ ರೋಹಿತ್‌ ಚಕ್ರತೀರ್ಥ ಸಹ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದರು. ಅನವಶ್ಯಕವಾಗಿ ತಮ್ಮ ತೇಜೋವಧೆ ಮಾಡಬಾರದು ಎಂದು ವಿನಂತಿ ಮಾಡಿದರು. ನನ್ನನ್ನು ಕುವೆಂಪು ವಿರೋಧಿ ಎಂಬ ರೀತಿಯಲ್ಲಿ
ನಾಡಿನಾದ್ಯಂತ ಬಿಂಬಿಸಲು ನೋಡುತ್ತಿರುವುದು ನನಗಂತೂ ಮನಸ್ಸಿಗೆ ಘಾಸಿಯನ್ನು ಮಾಡಿದೆ. ನನ್ನ ಕನ್ನಡಪ್ರೀತಿ,
ಕುವೆಂಪು ಪ್ರೀತಿ ಪ್ರಶ್ನಾತೀತವಾಗಿದೆ. ಯಾರೋ ಬರೆದ ಸಾಲುಗಳನ್ನು, ಅವು ಬೇರೆಯವರದು ಎಂದು ನಾನೇ ಸ್ವತಃ
ಉಲ್ಲೇಖಿಸಿದ್ದ ಹೊರತಾಗಿಯೂ, ನನ್ನದೇ ಎಂಬಂತೆ ಬಿಂಬಿಸಿ ನನ್ನ ವ್ಯಕ್ತಿತ್ವಕ್ಕೆ ಅಪಚಾರ ಮಾಡುವ ಕೆಲಸವನ್ನು
ಮಾಡುತ್ತಿರುವವರ ಬಗ್ಗೆ ನನಗೆ ಅಪಾರ ದುಃಖ, ಬೇಸರಗಳಿವೆ ಎಂದರು.

ಈ ಕುರಿತು ಮಂಗಳವಾರ ಪ್ರತಿಕ್ರಿಯಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ನಾಗೇಶ್‌ ಅವರು ವರದಿ ನೀಡುವುದಾಗಿ ಹೇಳಿದ್ದಾರೆ. ಅವರು ಯಾವ ಸಮರ್ಥನೆ ನೀಡುತ್ತಾರೆ ಎಂಬುದರ ಆಧಾರದಲ್ಲಿ ನಿರ್ಧಾರ ಕೈಗೊಳ್ಳುತ್ತೇನೆ ಎಂದಿದ್ದರು. ಬುಧವಾರ ಉಡುಪಿಯಲ್ಲಿಯೂ ಇದೇ ಮಾತನ್ನು ಬೊಮ್ಮಾಯಿ ಹೇಳಿದ್ದು, ತೀರ್ಮಾನ ಕೈಗೊಳ್ಳಲು ಹೆಣಗಾಡುತ್ತಿರುವುದನ್ನು ಸ್ಪಷ್ಟವಾಗಿ ಸೂಚಿಸಿದೆ.

ಚುನಾವಣಾ ಸಮಯದಲ್ಲಿ ಎದುರಾದ ಈ ಸಂಕಷ್ಟದಿಂದ ಹೊರಬಂದರೆ ಸಾಕು ಎಂಬಂತಾಗಿದೆ ಸಿಎಂ ಬೊಮ್ಮಾಯಿ ಅವರಿಗೆ. ರೋಹಿತ್‌ ಚಕ್ರತೀರ್ಥ ಅವರು ಬಿಸಿತುಪ್ಪವಾಗಿ ಪರಿಣಮಿಸಿದ್ದಾರೆ. ಚಕ್ರತೀರ್ಥ ಅವರನ್ನು ವಜಾ ಮಾಡಿದರೆ ಸಂಘಪರಿವಾರದ ವಿರೋಧ, ವಜಾ ಮಾಡದಿದ್ದರೆ ಆದಿಚುಂಚನಗಿರಿ ಪೀಠಕ್ಕೆ ಅಗೌರವ ಆರೋಪ. ರೋಹಿತ್‌ ಚಕ್ರತೀರ್ಥ ಅವರ ಕುರಿತು ಸುತ್ತಿಕೊಂಡಿರುವ ಚಕ್ರವ್ಯೂಹದಿಂದ ಬೊಮ್ಮಾಯಿ ಹೇಗೆ ಹೊರಬರುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ | ʼಹುದ್ದೆ ವಾಪ್ಸಿʼ ಅಭಿಯಾನ: ರೋಹಿತ್‌ ಚಕ್ರತೀರ್ಥ ತಲೆದಂಡಕ್ಕಾಗಿ ಸಾಲುಸಾಲು ರಾಜೀನಾಮೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಪ್ರಜ್ವಲ್‌ ರೇವಣ್ಣ ಕೊನೆಗೂ ಬಂಧನ; ಮುಂದೇನಾಗುತ್ತದೆ? ಏನಿದೆ ಪ್ರಕ್ರಿಯೆ?

Prajwal Revanna Case: ಪ್ರಜ್ವಲ್‌ ರೇವಣ್ಣ ಸಂಸದರಾಗಿರುವ ಕಾರಣ, ಅವರ ಬಳಿ ಡಿಪ್ಲೋಮ್ಯಾಟಿಕ್‌ ಪಾಸ್‌ಪೋರ್ಟ್‌ ಇರುವ ಕಾರಣ ವಿಮಾನ ನಿಲ್ದಾಣದಲ್ಲಿಯೇ ಇನ್ನಷ್ಟು ಪ್ರಕ್ರಿಯೆ ನಡೆಯಲಿದೆ. ಪ್ರಜ್ವಲ್‌ ರೇವಣ್ಣ ಬಂಧನದ ಕುರಿತು ಲೋಕಸಭೆ ಸ್ಪೀಕರ್‌ಗೆ ಎಸ್‌ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಸಿಲುಕಿ, ಕಳೆದ 34 ದಿನಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರನ್ನು ಕೊನೆಗೂ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Air Port) ಬಂಧಿಸಲಾಗಿದೆ. ದೇವನಹಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್‌ 2ಗೆ ಆಗಮಿಸುತ್ತಲೇ ಇಮಿಗ್ರೇಷನ್‌ ಅಧಿಕಾರಿಗಳು ವಿಚಾರಣೆ ನಡೆಸಿ, ಸಂಸದನನ್ನು ಎಸ್‌ಐಟಿ ಅಧಿಕಾರಿಗಳಿಗೆ ವಹಿಸಿದ್ದಾರೆ.

ಮುಂದೇನಾಗುತ್ತದೆ?

ಪ್ರಜ್ವಲ್‌ ರೇವಣ್ಣ ಸಂಸದರಾಗಿರುವ ಕಾರಣ, ಅವರ ಬಳಿ ಡಿಪ್ಲೋಮ್ಯಾಟಿಕ್‌ ಪಾಸ್‌ಪೋರ್ಟ್‌ ಇರುವ ಕಾರಣ ವಿಮಾನ ನಿಲ್ದಾಣದಲ್ಲಿಯೇ ಇನ್ನಷ್ಟು ಪ್ರಕ್ರಿಯೆ ನಡೆಯಲಿದೆ. ಪ್ರಜ್ವಲ್‌ ರೇವಣ್ಣ ಬಂಧನದ ಕುರಿತು ಲೋಕಸಭೆ ಸ್ಪೀಕರ್‌ಗೆ ಎಸ್‌ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲ, ಸುಮಾರು 45 ಪುಟಗಳ ದಾಖಲೆಗಳನ್ನು ಎಸ್‌ಐಟಿ ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ. ಇಮಿಗ್ರೇಷನ್‌ ಅಧಿಕಾರಿಗಳ ಬಳಿ ಎಸ್‌ಐಟಿ ಅಧಿಕಾರಿಗಳು ಹಲವು ದಾಖಲೆಗಳ ಪರಿಶೀಲನೆ ಸೇರಿ ವಿವಿಧ ಪ್ರಕ್ರಿಯೆ ನಡೆಯಲಿದೆ. ಇದಾದ ಬಳಿಕವೇ ಎಸ್‌ಐಟಿ ಅಧಿಕಾರಿಗಳ ವಶಕ್ಕೆ ನೀಡಲಾಗುತ್ತದೆ.

ಇಮಿಗ್ರೇಷನ್‌ ಅಧಿಕಾರಿಗಳಿಂದ ಪ್ರಜ್ವಲ್‌ ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡಿರುವ ಎಸ್‌ಐಟಿ ಅಧಿಕಾರಿಗಳು ನಂತರ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯುವ ಸಾಧ್ಯತೆ ಇದೆ. ವೈದ್ಯಕೀಯ ತಪಾಸಣೆ ಬಳಿಕ ಸಿಐಡಿ ಕಚೇರಿಗೆ ಕರೆದೊಯ್ಯಲಿದ್ದಾರೆ. ಬೆಳಗ್ಗೆ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಹಾಗಾಗಿ, ಸಿಐಡಿ ಕಚೇರಿಗೆ ಎದುರು ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ನಾಳೆ ಜಾಮೀನು ಅರ್ಜಿ ವಿಚಾರಣೆ

ಲೈಂಗಿಕ ದೌರ್ಜನ್ಯ, ಸಂತ್ರಸ್ತೆಯ ಅಪಹರಣ ಸೇರಿ ಎಫ್‌ಐಆರ್‌ ದಾಖಲಾಗಿರುವ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಬೇಕು ಎಂಬುದಾಗಿ ಪ್ರಜ್ವಲ್‌ ರೇವಣ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮೇ 31ರಂದು ಅರ್ಜಿಯ ವಿಚಾರಣೆ ನಡೆಯಲಿದೆ. ಇನ್ನು, ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತ ತೀರ್ಪು ಕೂಡ ಶುಕ್ರವಾರವೇ ಹೊರಬೀಳಲಿದೆ. ಇದರಿಂದಾಗಿ ಶುಕ್ರವಾರವು ಎಚ್‌.ಡಿ.ರೇವಣ್ಣ ಕುಟುಂಬಕ್ಕೆ ಬಿಗ್‌ ಡೇ ಆಗಿದೆ.

ಇದನ್ನೂ ಓದಿ: Bhavani Revanna: ಭವಾನಿ ರೇವಣ್ಣ ‘ಜಾಮೀನು’ ತೀರ್ಪು ಕಾಯ್ದಿರಿಸಿದ ಕೋರ್ಟ್;‌ ಮೇ 31 ಅಮ್ಮ-ಮಗನಿಗೆ ಬಿಗ್‌ ಡೇ!

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್ ರೇವಣ್ಣ ಬಂಧನ ಆಗಿದ್ದು ಹೇಗೆ? ಏರ್​ಪೋರ್ಟ್​​ನಲ್ಲಿ ನಡೆದ ಪ್ರಕ್ರಿಯೆಗಳೇನು?

Prajwal Revanna Case: ಪ್ರಜ್ವಲ್ ರೇವಣ್ಣ ನೇರವಾಗಿ ಎಸ್ಐಟಿ ವಶಕ್ಕೆ ಸಿಗಲಿಲ್ಲ. ರಾಜತಾಂತ್ರಿಕ ಪಾಸ್ ಪೋರ್ಟ್ ಇದ್ದ ಕಾರಣ ಅವರನ್ನು ನೇರವಾಗಿ ವಶಕ್ಕೆ ಪಡೆಯಲು ಸಾಧ್ಯವಾಗಲಿಲ್ಲ. ಲೋಕಸಭಾ ಸ್ಪೀಕರ್ ಗೆ ಮನವಿ ಮಾಡಿದ ವಲಸೆ ಅಧಿಕಾರಿಗಳು ಅನುಮತಿ ಪಡೆದುಕೊಂಡಿದ್ದರು. ಅಂತೆಯ ಪ್ರಕರಣಕ್ಕೆ ಸಂಬಂಧಿಸಿದ 55 ಪುಟಗಳ ದಾಖಲೆಗಳನ್ನು ತಂದು ಎಸ್ಐಟಿ ಮುಖ್ಯಸ್ಥ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲರ ಮುಂದೆ ಸಹಿ ಹಾಕಲಾಯಿತು. ಅಲ್ಲಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ, ಮತ್ತು ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಾಸನ ಜೆಡಿಎಸ್‌ ಸಂಸದ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್‌ ರೇವಣ್ಣನನ್ನು (Prajwal Revanna Case) ಕೊನೆಗೂ ಎಸ್​ಐಟಿ ಪೊಲೀಸರ ವಶಕ್ಕೆ ಸಿಕ್ಕಿದ್ದಾರೆ. ವಿಡಿಯೊಗಳು ವೈರಲ್‌ ಆಗುತ್ತಲೇ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್‌ ರೇವಣ್ಣ, ಶುಕ್ರವಾರ (ಮೇ 31) ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಬಂಧನಕ್ಕೆ ಒಳಗಾಧರು.

ಜರ್ಮನಿಯ ಮ್ಯೂನಿಚ್​​ನಿಂದ ಮಧ್ಯಾಹ್ನ ಹೊರಟ ಲುಫ್ತಾನ್ಸಾ ಸಂಸ್ಥೆಯ ವಿಮಾನದಲ್ಲಿ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಆಗಮಿಸಿದರು. ಸಂಸದರಾಗಿರುವ ಕಾರಣ ಹಲವು ಪ್ರಕ್ರಿಯೆಗಳನ್ನು ನಡೆಸಿದ ಬಳಿಕ ಎಸ್‌ಐಟಿ ಅಧಿಕಾರಿಗಳ ವಶಕ್ಕೆ ಪಡೆದರು.

ಪ್ರಜ್ವಲ್ ರೇವಣ್ಣ ನೇರವಾಗಿ ಎಸ್ಐಟಿ ವಶಕ್ಕೆ ಸಿಗಲಿಲ್ಲ. ರಾಜತಾಂತ್ರಿಕ ಪಾಸ್ ಪೋರ್ಟ್ ಇದ್ದ ಕಾರಣ ಅವರನ್ನು ನೇರವಾಗಿ ವಶಕ್ಕೆ ಪಡೆಯಲು ಸಾಧ್ಯವಾಗಲಿಲ್ಲ. ಲೋಕಸಭಾ ಸ್ಪೀಕರ್ ಗೆ ಮನವಿ ಮಾಡಿದ ವಲಸೆ ಅಧಿಕಾರಿಗಳು ಅನುಮತಿ ಪಡೆದುಕೊಂಡಿದ್ದರು. ಅಂತೆಯ ಪ್ರಕರಣಕ್ಕೆ ಸಂಬಂಧಿಸಿದ 55 ಪುಟಗಳ ದಾಖಲೆಗಳನ್ನು ತಂದು ಎಸ್ಐಟಿ ಮುಖ್ಯಸ್ಥ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲರ ಮುಂದೆ ಸಹಿ ಹಾಕಲಾಯಿತು. ಅಲ್ಲಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಜ್ವಲ್ ರೇವಣ್ಣ ವಿಮಾನದಿಂದಿಳಿದ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಪ್ರಕ್ರಿಯೆ ನಡೆಯಿತು.

ಬಿಗಿ ಬಂದೋಬಸ್ತ್​

ಪ್ರಜ್ವಲ್​ ರೇವಣ್ಣ ಬೆಂಗಳೂರಿಗೆ ವಾಪಸಾದ ಕಾರಣ ಏರ್​ಪೋರ್ಟ್​ ಸುತ್ತಮುತ್ತು ಭಾರಿ ಬಂದೋಬಸ್ತ್​ ಏರ್ಪಡಿಸಲಾಗಿತ್ತು. ವಿಮಾನ ನಿಲ್ದಾಣದ ಟರ್ಮಿನಲ್​ 2 ಬಳಿ ಬ್ಯಾರಿಕೇಡ್​ಗಳನ್ನು ಹಾಕಿ ಜನ ದಟ್ಟಣೆ ನಿಯಂತ್ರಿಸಲಾಗಿತ್ತು. ಅದೇ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಆಗಮಿಸುವ ರಸ್ತೆಯುದ್ದಕ್ಕೂ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿತ್ತು. ಪ್ರತಿಭಟನಾಕಾರರು ಅಥವಾ ಇನ್ಯಾವುದೇ ದಾಳಿಯನ್ನು ತಡೆಯುವ ಉದ್ದೇಶ ಪೊಲೀಸರದ್ದಾಗಿತ್ತು.

ಸಿಐಡಿ ಕಚೇರಿ ಮುಂದೆಯೂ ಬಿಗಿ ಪೊಲೀಸ್ ಬಂದೋಬಸ್ತೆ ಏರ್ಪಡಿಸಲಾಗಿತ್ತು. ಅಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿತ್ತು. ಹೆಚ್ಚುವರಿಯಾಗಿ ಕೆಎಸ್​ಆರ್​​ಪಿ ತುಕಡಿ ನಿಯೋಜನೆ ಮಾಡಲಾಗಿತ್ತು. ಐಡಿ ಕಚೇರಿ ಮುಂದೆ ಬ್ಯಾರಿಕೇಡ್ ಗಳನ್ನು ಸಿದ್ಧಪಡಿಸಿ ಇಟ್ಟುಕೊಂಡಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯನ್ನು ಪೊಲೀಸರು ವಹಿಸಿದ್ದರು.

ಮುಂದೇನು?

ಪ್ರಜ್ವಲ್‌ ರೇವಣ್ಣ ವಿರುದ್ಧ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದ ಕಾರಣ ಪ್ರಜ್ವಲ್‌ ರೇವಣ್ಣ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಇಮಿಗ್ರೇಷನ್‌ ಅಧಿಕಾರಿಗಳು ಸಂಸದನ ಪಾಸ್‌ಪೋರ್ಟ್‌ಗೆ ಶೀಲ್‌ ಹಾಕಿದರು. ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿರುವ ಎಸ್‌ಐಟಿ ಅಧಿಕಾರಿಗಳು ಮೊದಲು ಅವರನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಲಿದ್ದಾರೆ. ಅಲ್ಲಿನ ಪ್ರಕ್ರಿಯೆ ಮುಗಿಸಿ ಬಳಿಕ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಬಂಧಿಸಿದ 24 ಗಂಟೆಯೊಳಗೆ ಎಸ್‌ಐಟಿ ಅಧಿಕಾರಿಗಳು ಸಂಸದನನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Continue Reading

ಕರ್ನಾಟಕ

Prajwal Revanna Case: ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣ ಕೊನೆಗೂ ಬಂಧನ; ಏರ್‌ಪೋರ್ಟ್‌ನಲ್ಲೇ ಅರೆಸ್ಟ್!

Prajwal Revanna Case: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣನನ್ನು ಕೊನೆಗೂ ಭಾನುವಾರ ಬಂಧಿಸಲಾಗಿದೆ. ವಿದೇಶದಿಂದ ವಿಮಾನದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಬಂಧಿಸಲಾಯಿತು. ಆ ಮೂಲಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯ ಅಪಹರಣ ಮಾಡಿದ ಕೇಸ್‌ನಲ್ಲಿ ಎಚ್‌.ಡಿ.ರೇವಣ್ಣ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕಾಗಿ ಅವರ ಪುತ್ರ ಪ್ರಜ್ವಲ್‌ ರೇವಣ್ಣ ಬಂಧನಕ್ಕೀಡಾಗಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಲೈಂಗಿಕ ದೌರ್ಜನ್ಯಕ್ಕೀಡಾದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಾಸನ ಜೆಡಿಎಸ್‌ ಸಂಸದ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್‌ ರೇವಣ್ಣನನ್ನು (Prajwal Revanna Case) ಕೊನೆಗೂ ಬಂಧಿಸಲಾಗಿದೆ. ಅಶ್ಲೀಲ ವಿಡಿಯೊಗಳು ವೈರಲ್‌ ಆಗುತ್ತಲೇ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್‌ ರೇವಣ್ಣ, ಶುಕ್ರವಾರ (ಮೇ 31) ಭಾರತಕ್ಕೆ ಲುಫ್ತಾನ್ಸಾ ವಿಮಾನಯಾನ ಸಂಸ್ಥೆಯ ಎಲ್‌ಎಚ್‌764 ವಿಮಾನದಲ್ಲಿ ಆಗಮಿಸಿದರು. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಎಸ್‌ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದರು.

ಜರ್ಮನಿಯ ಮ್ಯೂನಿಕ್‌ನಿಂದ ಲುಫ್ತಾನ್ಸಾ ವಿಮಾನದಲ್ಲಿ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಇಮಿಗ್ರೇಷನ್‌ ಪ್ರಜ್ವಲ್‌ ರೇವಣ್ಣನನ್ನು ವಿಚಾರಣೆ ನಡೆಸಿದರು. ಇದಾದ ಬಳಿಕ ವಿಮಾನ ನಿಲ್ದಾಣದ ಸಿಬ್ಬಂದಿಯು ಎಸ್‌ಐಟಿ ಅಧಿಕಾರಿಗಳ ವಶಕ್ಕೆ ನೀಡಲಾಯಿತು. ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಈಗಾಗಲೇ ಮಾಜಿ ಸಚಿವ, ಪ್ರಜ್ವಲ್‌ ರೇವಣ್ಣ ತಂದೆ ಎಚ್‌.ಡಿ.ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಪ್ರಜ್ವಲ್‌ ರೇವಣ್ಣ ಕಾಮಕೇಳಿಯ ಸಾವಿರಾರು ವಿಡಿಯೊಗಳು ಪೆನ್‌ಡ್ರೈವ್‌ ಮೂಲಕ ಲಭ್ಯವಾಗಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಅವರು ವಿದೇಶಕ್ಕೆ ಹಾರಿದ್ದರು. ಇದಾದ ಬಳಿಕ ಅವರ ಬಂಧನಕ್ಕಾಗಿ ಲುಕ್‌ಔಟ್‌ ನೋಟಿಸ್‌ ಹೊರಡಿಸಲಾಗಿತ್ತು. ಅಲ್ಲದೆ, ಎಸ್‌ಐಟಿ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದ ರೇವಣ್ಣ, ವಿಚಾರಣೆಗೆ ಹಾಜರಾಗಲು ಒಂದು ವಾರ ಸಮಯ ಕೇಳಿದ್ದರು. ಆದರೆ, ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಪೊಲೀಸರು ಬಂಧಿಸುತ್ತಲೇ ಪ್ರಜ್ವಲ್‌ ಕೂಡ ಬೆಂಗಳೂರಿಗೆ ಆಗಮಿಸಲು ತೀರ್ಮಾನಿಸಿದರು ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ವಿರುದ್ಧ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದ ಕಾರಣ ಪ್ರಜ್ವಲ್‌ ರೇವಣ್ಣ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಇಮಿಗ್ರೇಷನ್‌ ಅಧಿಕಾರಿಗಳು ಸಂಸದನ ಪಾಸ್‌ಪೋರ್ಟ್‌ಗೆ ಶೀಲ್‌ ಹಾಕಿದರು. ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿರುವ ಎಸ್‌ಐಟಿ ಅಧಿಕಾರಿಗಳು ಮೊದಲು ಅವರನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಲಿದ್ದಾರೆ. ಅಲ್ಲಿನ ಪ್ರಕ್ರಿಯೆ ಮುಗಿಸಿ ಬಳಿಕ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಬಂಧಿಸಿದ 24 ಗಂಟೆಯೊಳಗೆ ಎಸ್‌ಐಟಿ ಅಧಿಕಾರಿಗಳು ಸಂಸದನನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ಗೆ ವೋಟ್‌ ಹಾಕಿ ಎಂಬ ಸಿದ್ದರಾಮಯ್ಯ ಟ್ವೀಟ್‌; ಬಿಜೆಪಿಯಿಂದ ಫುಲ್‌ ಕ್ಲಾಸ್‌!

Continue Reading

ದೇಶ

Reliance Industries: ಟೈಮ್ ಮ್ಯಾಗಜೀನ್‌ನ ಜಗತ್ತಿನ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌

Reliance Industries: ಅಮೆರಿಕದ ಜನಪ್ರಿಯ ನಿಯತಕಾಲಿಕ ಟೈಮ್‌ ಬಿಡುಗಡೆ ಮಾಡಿರುವ ಜಗತ್ತಿನ ಪ್ರಮುಖ 100 ಪ್ರಭಾವಿ ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌, ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಮತ್ತು ಟಾಟಾ ಸಮೂಹವು ಸ್ಥಾನ ಪಡೆದುಕೊಂಡಿವೆ. ಟೈಮ್‌ ನಿಯತಕಾಲಿಕವು ರಿಲಯನ್ಸ್‌ ಇಂಡಸ್ಟ್ರೀಸ್‌ಗೆ ʼಭಾರತದ ಶಕ್ತಿʼ ಎನ್ನುವ ಉಪನಾಮವನ್ನು ನೀಡಿದೆ.

VISTARANEWS.COM


on

3 Indian companies have featured in Time magazines list of 100 most influential companies in the world
ರಿಲಯನ್ಸ್ ಇಂಡಸ್ಟ್ರೀಸ್‌.
Koo

ನವದೆಹಲಿ: ಅಮೆರಿಕದ ಜನಪ್ರಿಯ ನಿಯತಕಾಲಿಕ ಟೈಮ್‌ (Time magazine) ಬಿಡುಗಡೆ ಮಾಡಿರುವ ಜಗತ್ತಿನ ಪ್ರಮುಖ 100 ಪ್ರಭಾವಿ ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌ (Reliance Industries) ಸೇರಿದಂತೆ ಭಾರತದ ಮೂರು ಕಂಪನಿಗಳು ಸ್ಥಾನ ಪಡೆದುಕೊಂಡಿವೆ.

ರಿಲಯನ್ಸ್‌ ಇಂಡಸ್ಟ್ರೀಸ್‌, ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಮತ್ತು ಟಾಟಾ ಸಮೂಹವು ʼಟೈಮ್‌ʼ ಬಿಡುಗಡೆ ಮಾಡಿರುವ 100 ಕಂಪನಿಗಳಲ್ಲಿ ಸ್ಥಾನ ಪಡೆದುಕೊಂಡಿವೆ.

ಇದನ್ನೂ ಓದಿ: Modi Meditation: ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಧ್ಯಾನ ಆರಂಭಿಸಿದ ಮೋದಿ; ಹಗಲು-ರಾತ್ರಿ ಪ್ರಧಾನಿ ಮೆಡಿಟೇಷನ್

ಈ ಪಟ್ಟಿಯನ್ನು 5 ವಿಭಾಗಗಳಾಗಿ ವರ್ಗೀಕರಿಸಲಾಗಿದ್ದು, ನಾಯಕ, ಆವಿಷ್ಕಾರ, ನಾವೀನ್ಯ, ಟೈಟಾನ್‌ (ಶಕ್ತಿಶಾಲಿ) ಮತ್ತು ಪ್ರವರ್ತಕ ಎಂದು ವರ್ಗೀಕರಿಸಲಾಗಿದೆ. ರಿಲಯನ್ಸ್‌ ಇಂಡಸ್ಟ್ರೀಸ್‌ ಮತ್ತು ಟಾಟಾ ಸಮೂಹವು ಟೈಟಾನ್‌ (ಶಕ್ತಿಶಾಲಿ) ವಿಭಾಗದಲ್ಲಿ ಸ್ಥಾನ ಪಡೆದುಕೊಂಡಿವೆ. ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಪ್ರವರ್ತಕರ ವಿಭಾಗದಲ್ಲಿ ಸ್ಥಾನ ಪಡೆದುಕೊಂಡಿದೆ.

ಟೈಮ್‌ ನಿಯತಕಾಲಿಕವು ರಿಲಯನ್ಸ್‌ ಇಂಡಸ್ಟ್ರೀಸ್‌ಗೆ ʼಭಾರತದ ಶಕ್ತಿʼ ಎನ್ನುವ ಉಪನಾಮವನ್ನು ನೀಡಿದೆ. ಜವಳಿ ಮತ್ತು ಪಾಲಿಸ್ಟರ್‌ ಉದ್ದಿಮೆಯಾಗಿ ಆರಂಭವಾದ ರಿಲಯನ್ಸ್‌ ಕಂಪನಿಯು ಇಂದು ಅತಿದೊಡ್ಡ ಮತ್ತು ಶಕ್ತಿಶಾಲಿ ಉದ್ಯಮ ಸಮೂಹವಾಗಿ ಹೊರಹೊಮ್ಮಿದೆ. ಮಾತ್ರವಲ್ಲ ದೇಶದ ಅತ್ಯಂತ ಮೌಲ್ಯಯುತ ಕಂಪನಿ ಕೂಡಾ ಆಗಿದೆ ಎಂದು ಟೈಮ್‌ ನಿಯತಕಾಲಿಕವು ರಿಲಯನ್ಸ್‌ ಇಂಡಸ್ಟ್ರೀಸ್‌ ಬಗ್ಗೆ ಬರೆದಿದೆ. ಮುಕೇಶ್‌ ಅಂಬಾನಿ ಅವರ ನಾಯಕತ್ವದಲ್ಲಿ ಕಂಪನಿಯು ಇಂಧನ, ರಿಟೇಲ್‌ ಮತ್ತು ದೂರಸಂಪರ್ಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತನ್ನ ವಹಿವಾಟನ್ನು ವಿಸ್ತರಿಸಿಕೊಂಡಿದೆ.

ಇದನ್ನೂ ಓದಿ: Fortis Hospital: ರಾಜ್ಯದಲ್ಲೇ ಮೊದಲ ಬಾರಿಗೆ ಅಪರೂಪದ ಶಸ್ತ್ರಚಿಕಿತ್ಸೆ

ಭಾರತದ ಅತಿದೊಡ್ಡ ಡಿಜಿಟಲ್‌ ಸೇವಾ ಪೂರೈಕೆದಾರ ಮತ್ತು ದೂರಸಂಪರ್ಕ ಕಂಪನಿ ಜಿಯೊ ಪ್ಲಾಟ್‌ಫಾರಂ 2021ರಲ್ಲಿ ಈ ಪಟ್ಟಿಗೆ ಸೇರಿಕೊಂಡಿತು. ರಿಲಯನ್ಸ್‌ ಮತ್ತು ಡಿಸ್ನಿ ನಡುವಿನ 8.5 ಬಿಲಿಯನ್‌ ಡಾಲರ್‌ ಒಪ್ಪಂದದ ಬಗ್ಗೆಯೂ ಟೈಮ್‌ ನಿಯತಕಾಲಿಕ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

Continue Reading
Advertisement
Prajwal Revanna Case
ಕರ್ನಾಟಕ3 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೊನೆಗೂ ಬಂಧನ; ಮುಂದೇನಾಗುತ್ತದೆ? ಏನಿದೆ ಪ್ರಕ್ರಿಯೆ?

Prajwal Revanna Case
ಪ್ರಮುಖ ಸುದ್ದಿ3 hours ago

Prajwal Revanna Case: ಪ್ರಜ್ವಲ್ ರೇವಣ್ಣ ಬಂಧನ ಆಗಿದ್ದು ಹೇಗೆ? ಏರ್​ಪೋರ್ಟ್​​ನಲ್ಲಿ ನಡೆದ ಪ್ರಕ್ರಿಯೆಗಳೇನು?

Prajwal Revanna Case
ಕರ್ನಾಟಕ4 hours ago

Prajwal Revanna Case: ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣ ಕೊನೆಗೂ ಬಂಧನ; ಏರ್‌ಪೋರ್ಟ್‌ನಲ್ಲೇ ಅರೆಸ್ಟ್!

3 Indian companies have featured in Time magazines list of 100 most influential companies in the world
ದೇಶ5 hours ago

Reliance Industries: ಟೈಮ್ ಮ್ಯಾಗಜೀನ್‌ನ ಜಗತ್ತಿನ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌

Murder News
ಪ್ರಮುಖ ಸುದ್ದಿ6 hours ago

Murder News : ಬಾಯ್​ಫ್ರೆಂಡ್​ ಜತೆ ಸೇರಿ ಅಪ್ಪ, ತಮ್ಮನನ್ನು ಕೊಂದು ಕತ್ತರಿಸಿ ಫ್ರಿಜ್​ನಲ್ಲಿಟ್ಟಿದ್ದ 16ರ ಬಾಲಕಿ

Reserve Bank of India
ದೇಶ6 hours ago

Reserve Bank of India : ಭಾರತದ ಬ್ಯಾಂಕ್​ಗಳಲ್ಲಿವೆ ವಾರಸುದಾರರಿಲ್ಲದ 78,213 ಕೋಟಿ ರೂಪಾಯಿ!

Modi Meditation
ದೇಶ7 hours ago

Modi Meditation: ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸಲ್ಲ ಮೋದಿ; 2 ದಿನ ಪಾನೀಯವೇ ಆಹಾರ!

Virat kohli
ಕ್ರಿಕೆಟ್7 hours ago

Virat Kohli : ವಿರಾಟ್​ ಕೊಹ್ಲಿ ಟೀಕಿಸಿದ ನ್ಯೂಜಿಲ್ಯಾಂಡ್​ ಮಾಜಿ ಆಟಗಾರನಿಗೆ ಕೊಲೆ ಬೆದರಿಕೆ!

Hindu Janajagruthi Samithi demands declaration of Zakir Naik as international terrorist
ಬೆಂಗಳೂರು8 hours ago

Zakir Naik: ಜಾಕೀರ್ ನಾಯಕ್‌ನನ್ನು ಭಯೋತ್ಪಾದಕನೆಂದು ಘೋಷಿಸಿ; ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Necessary Preparation for North East Graduate Constituency Election Voting says DC M S Diwakar
ವಿಜಯನಗರ8 hours ago

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ ಮತದಾನಕ್ಕೆ ಸಿದ್ಧತೆ: ಡಿಸಿ ಎಂ.ಎಸ್. ದಿವಾಕರ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ15 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌