Site icon Vistara News

ಕಲಬುರಗಿಯಲ್ಲಿ ಹಿಂದು ಮಹಾ ಗಣಪತಿಯ ದರ್ಶನ ಪಡೆದ ಸಿಎಂ ಬೊಮ್ಮಾಯಿ

ಸಿಎಂ ಬೊಮ್ಮಾಯಿ

ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಐತಿಹಾಸಿಕ ಕೋಟೆಯ ಮುಂಭಾಗದಲ್ಲಿ ಹಿಂದು ಜಾಗರಣ ವೇದಿಕೆಯಿಂದ ಪ್ರತಿಷ್ಠಾಪನೆ ಮಾಡಲಾಗಿರುವ ಹಿಂದು ಮಹಾ ಗಣಪತಿಯ ದರ್ಶನ ಪಡೆದರು.

ಈ ವೇಳೆ ಹಿಂದು ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ಹಾಗೂ ಹಿಂದು ಮಹಾಗಣಪತಿಯ ಸಮಿತಿ ಅಧ್ಯಕ್ಷರಾದ ನಾಗೇಂದ್ರ ಕಾಬಾಡೆ ಅವರು ಮುಖ್ಯಮಂತ್ರಿ ಅವರಿಗೆ ಭಾರತ ಮಾತೆಯ ಭಾವಚಿತ್ರ ನೀಡಿ, ಸನ್ಮಾನಿಸಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ, ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ, ಸಚಿವ ಮುನಿರತ್ನ, ಪ್ರಾಂತ ಬೌದ್ಧಿಕ ಪ್ರಮುಖರಾದ ಕೃಷ್ಣ ಜೋಶಿ, ವಿಭಾಗ ಪ್ರಚಾರಕರಾದ ವಿಜಯ್ ಮಹಾಂತೇಶ, ವಿಭಾಗದ ಸಂಘಟನಾ ಕಾರ್ಯದರ್ಶಿ ಅರುಣ ಬಿನ್ನಾಡಿ, ಶಿವರಾಜ್ ಸಂಗೋಳಗಿ, ಅಶ್ವಿನ್ ಕುಮಾರ್, ಸತೀಶ್ ಮಾಹುರ್, ಪ್ರಶಾಂತ್ ಗುಡ್ಡಾ, ಭಾರ್ಗವಿ ಸೇರಿ ಜಿಲ್ಲೆಯ ಶಾಸಕರು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ | ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ₹5 ಸಾವಿರ ಕೋಟಿ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

Exit mobile version