ಬೀದಿಯಲ್ಲಿ ಬಿದ್ದವರನ್ನು ಬಾದಾಮಿಗೆ ತಂದವರಾರು?: ಸಿದ್ದರಾಮಯ್ಯ ಕುರಿತು ಸಿ.ಎಂ. ಇಬ್ರಾಹಿಂ ಪ್ರಶ್ನೆ - Vistara News

ಕರ್ನಾಟಕ

ಬೀದಿಯಲ್ಲಿ ಬಿದ್ದವರನ್ನು ಬಾದಾಮಿಗೆ ತಂದವರಾರು?: ಸಿದ್ದರಾಮಯ್ಯ ಕುರಿತು ಸಿ.ಎಂ. ಇಬ್ರಾಹಿಂ ಪ್ರಶ್ನೆ

ಎಚ್‌.ಡಿ. ಕುಮಾರಸ್ವಾಮಿ ಮತ್ತೆ ಸಿಎಂ ಹೇಗೆ ಆಗುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಇಬ್ರಾಹಿಂ, ಪ್ರಾದೇಶಿಕ ಪಕ್ಷಗಳಾದ ವೈಎಸ್‌ಆರ್‌ ಪಕ್ಷದ ಜಗನ್‌ ಮೋಹನ್‌ರೆಡ್ಡಿ, ಡಿಎಂಕೆ ಪಕ್ಷದ ಸ್ಟಾಲಿನ್‌ ಸಿಎಂ ಆಗಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

VISTARANEWS.COM


on

ಸಿಎಂ ಇಬ್ರಾಹಿಂ
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಗಲಕೋಟೆ: ಭಾರತದ ಇತಿಹಾಸದಲ್ಲೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕ ಬಿಜೆಪಿಗೆ ಮೊದಲ ಪ್ರಾಶಸ್ತ್ಯದ ಮತ ಹಾಕಿಸಿದ್ದು ಎಂದೂ ನೋಡಿಲ್ಲ. ರಾಜ್ಯಸಭೆ ಚುನಾವಣೆ ಬಗ್ಗೆ ಸೋನಿಯಾ ಗಾಂಧಿಗೆ ಪತ್ರ ಬರೆದರೂ ಈ ಬಗ್ಗೆ ಪ್ರತಿಕ್ರಿಯೆ ಇಲ್ಲ. ಹಾಗೆಯೇ ಡಿ.ಕೆ. ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಕೂಡ ಎಲ್ಲೂ ಉತ್ತರ ಕೊಡುತ್ತಿಲ್ಲ. ಹಾಗಾದರೆ ಬಿಜೆಪಿ ಬಿ ಟೀಮ್ ಯಾರು ಎಂದು ಜನ ತೀರ್ಮಾನ ಮಾಡುತ್ತಾರೆ ಎಂದು ಜೆಡಿಎಸ್‌ ರಾಜ್ಯ ಅಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಬೀದಿಯಲ್ಲಿ ಬಿದ್ದಿದ್ದವರನ್ನು ಬಾದಾಮಿಗೆ ಕರೆತಂದವರು ಯಾರು? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಬಾಗಲಕೋಟೆ ಜೆಡಿಎಸ್ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಸಿ.ಎಂ. ಇಬ್ರಾಹಿಂ ಮಾತನಾಡಿದರು. ಎಚ್‌.ಡಿ. ಕುಮಾರಸ್ವಾಮಿ ಮತ್ತೆ ಸಿಎಂ ಹೇಗೆ ಆಗುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬೀದಿಯಲ್ಲಿ ಬಿದ್ದ ಸಿದ್ದರಾಮಯ್ಯನನ್ನು ಬಾದಾಮಿಗೆ ತಂದವರು ಯಾರು? ನಾನು ತಾನೆ? ನನ್ನ ಜತೆ ಮಂತ್ರಿಯಾಗಿದ್ದ ಬಿ.ಬಿ. ಚಿಮ್ಮನಕಟ್ಟಿ, ತಿಮ್ಮಾಪುರ ಹಾಗೂ ಎಸ್.ಆರ್. ಪಾಟಿಲ್ ಅವರನ್ನು ಒಪ್ಪಿಸಿ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಬಾದಾಮಿಯಲ್ಲಿ ನಿಲ್ಲಿಸಿದೆವು. ವೈಎಸ್‌ಆರ್ ಜಗನ್, ಡಿಎಂಕೆ ಪಕ್ಷದ ಸ್ಟಾಲಿನ್ ಯಾವ ರಾಷ್ಟ್ರೀಯ ಪಕ್ಷದವರಲ್ಲ, ಆದರೂ ಅವರು ಸಿಎಂ ಆಗಿಲ್ಲವೇ? ಹಾಗೆಯೇ ನಾವೂ ಮುಂದಿನ ದಿನದಲ್ಲಿ ಆಡಳಿತಕ್ಕೆ ಬರುತ್ತೇವೆ ಎಂದರು.

ಇದನ್ನೂ ಓದಿ | ಹಾಕಿರುವ ತೇಪೆಗಿಂತ ಉಳಿದಿರುವ ತೂತುಗಳೇ ಹೆಚ್ಚು: ಪಠ್ಯ ಪರಿಷ್ಕರಣೆ ಕುರಿತು ಸಿದ್ದರಾಮಯ್ಯ ಟೀಕೆ

ಸಿದ್ದರಾಮಯ್ಯ ಕ್ಷೇತ್ರ ಇನ್ನೂ ಫೈನಲ್ ಆಗಿಲ್ಲ ಎಂಬ ಪ್ರಶ್ನೆಗೆ ಸ್ಪಂದಿಸಿದ ಅವರು, ಅವರಿಗೆ ಕ್ಷೇತ್ರ ಇಲ್ಲವೇ ಇಲ್ಲ. ಅವರ ಜತೆಯಲ್ಲಿ ಇವತ್ತು ಯಾರಿದ್ದಾರೆ ಹೇಳಿ?, ನಾನೊಬ್ಬನೇ ಮಾತಾಡುತ್ತೇನೆ, ನನ್ನ ಪರ ಯಾರೂ ಮಾತನಾಡಲ್ಲ ಅಂತ ಸ್ವತಃ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೊಂದಿಕೆ ಆಗುವುದಿಲ್ಲ. ಅದು(ಕಾಂಗ್ರೆಸ್)ಕ್ಯಾಬರೆ, ಜೆಡಿಎಸ್ ಭರತನಾಟ್ಯ, ಬಿಜೆಪಿ ಆಂಗ್ಲೋ ಇಂಡಿಯನ್, ಕ್ಯಾಬರೆಯಲ್ಲಿ ನರ್ತನ ಮಾಡೋರು ಡಿ.ಕೆ.ಶಿವಕುಮಾರ್ ಎಂದರು.

ಇತ್ತೀಚೆಗೆ ಭರತ ನಾಟ್ಯದಿಂದ(ಜೆಡಿಎಸ್) ಕ್ಯಾಬರೆಗೆ(ಕಾಂಗ್ರೆಸ್) ಹೋಗುವ ಮಂದಿ ಜಾಸ್ತಿಯಾಗಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕಿಯಿಸಿ, ಸೆಪ್ಟೆಂಬರ್, ಅಕ್ಟೋಬರ್ ಆದಮೇಲೆ ವಿಪರೀತ ಜನ ಬರುತ್ತಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್‌ನಿಂದಲೇ ಜೆಡಿಎಸ್‌ಗೆ ತುಂಬಾ ಜನ ಹೊರ ಬರುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ | ಹಾಕಿರುವ ತೇಪೆಗಿಂತ ಉಳಿದಿರುವ ತೂತುಗಳೇ ಹೆಚ್ಚು: ಪಠ್ಯ ಪರಿಷ್ಕರಣೆ ಕುರಿತು ಸಿದ್ದರಾಮಯ್ಯ ಟೀಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Road Accident : ಮುಖಾಮುಖಿಯಾಗಿ ಬಂದ ಕಾರುಗಳು ಪೀಸ್‌ ಪೀಸ್‌; ಚಾಲಕ ಸ್ಪಾಟ್‌ ಡೆತ್‌

Road Accident : ಪ್ರತ್ಯೇಕ ಕಡೆಗಳಲ್ಲಿ ಅಪಘಾತ ಸಂಭವಿಸಿದ್ದು ಸಾವು-ನೋವಿಗೆ ಕಾರಣವಾಗಿದೆ. ಶಿವಮೊಗ್ಗದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಗೆ ಚಾಲಕ ಪ್ರಾಣ ಬಿಟ್ಟರೆ, ಉಡುಪಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಗೂಡ್ಸ್‌ ಗಾಡಿ ಗುದ್ದಿದೆ. ಚಿಕ್ಕಮಗಳೂರಲ್ಲಿ ಕಾರೊಂದು ಹೊತ್ತಿ ಉರಿದಿದೆ. ಉಡುಪಿಯಲ್ಲಿ ನಿಯಂತ್ರಣ ತಪ್ಪಿದ ಆಯಿಲ್‌ ಟ್ಯಾಂಕರ್‌ ಪಲ್ಟಿಯಾಗಿದೆ.

VISTARANEWS.COM


on

By

Road Accident in shivamogga
Koo

ಶಿವಮೊಗ್ಗ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತ (Road Accident ) ಸಂಭವಿಸಿದೆ. ಮಾರುತಿ ಓಮ್ನಿ ಹಾಗೂ ಇಂಡಿಕಾ ಕಾರು ನಡುವೆ ಡಿಕ್ಕಿಯ ರಭಸಕ್ಕೆ ಓಮ್ನಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಜೇಯ (21) ಮೃತ ದುರ್ದೈವಿ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಂಚಾಲೆ ಗ್ರಾಮದ ಬಳಿ ಅಪಘಾತ ನಡೆದಿದೆ. ಓಮ್ನಿ ಕಾರು ಜೋಗದಿಂದ ಶಿವಮೊಗ್ಗ ಕಡೆ ಹೊರಟಿತ್ತು. ಇಂಡಿಕಾ ಕಾರು ಆನಂದಪುರದಿಂದ ಸಾಗರ ಕಡೆಗೆ ತೆರಳುತ್ತಿದ್ದ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಂಡಿಕಾ ಕಾರು ಚಾಲಕ ಹಾಗೂ ಮಾರುತಿ ಓಮ್ನಿಯಲ್ಲಿದ್ದ ಯುವಕನಿಗೆ ಗಾಯವಾಗಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚೆಲ್ಲಾಪಿಲ್ಲಿಯಾಗಿದ್ದ ಬಿದ್ದಿದ್ದ ಕಾರುಗಳನ್ನು ತೆರವು ಮಾಡಿದ್ದಾರೆ. ಆನಂದಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಗೂಡ್ಸ್‌ ಲಾರಿ ಡಿಕ್ಕಿ

ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಗೂಡ್ಸ್‌ ಲಾರಿಯೊಂದು ಡಿಕ್ಕಿ ಹೊಡೆದಿದೆ. ಉಡುಪಿಯ ರಾಷ್ಟ್ರೀಯ ಹೆದ್ದಾರಿ 66 ಉದ್ಯಾವನದಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದೆ.

ಲಾರಿಯು ತಾಂತ್ರಿಕ ಸಮಸ್ಯೆಯಿಂದ ರಾಷ್ಟ್ರೀಯ ಹೆದ್ದಾರಿ ನಡುವೆಯೇ ಕೆಟ್ಟು ನಿಂತಿತ್ತು. ಇದನ್ನೂ ಗಮನಿಸಿದ ಗೂಡ್ಸ್‌ ಚಾಲಕ ವೇಗವಾಗಿ ಬಂದಿದ್ದಾನೆ. ಈ ವೇಳೆ ಅಪಘಾತ ಸಂಭವಿಸಿದೆ. ಉಡುಪಿಯ ಕಾಪು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Fire Accident: ಹಾವೇರಿಯಲ್ಲಿ ಧಗಧಗಿಸಿದ ಬೆಂಕಿ; ಸುಟ್ಟು ಭಸ್ಮವಾಯ್ತು 5 ಅಂಗಡಿ

ಉಡುಪಿಯಲ್ಲಿ ಆಯಿಲ್‌ ಟ್ಯಾಂಕರ್‌ ಪಲ್ಟಿ

ಉಡುಪಿಯ ಸಂತೆಕಟ್ಟೆ ಜಂಕ್ಷನ್‌ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಖಾದ್ಯ ತೈಲ ಸಾಗಣೆ ಮಾಡುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದೆ. ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಆಯಿಲ್ ಟ್ಯಾಂಕರ್ ಕೆಸರು ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನಿಗೆ ತರಚಿದ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಹೈವೇ ಕಾಮಗಾರಿ ಸೂಚನಾ ಫಲಕ ನೋಡದೆ ಮುಚ್ಚಿದ್ದ ಸರ್ವಿಸ್ ರಸ್ತೆಯಲ್ಲಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣವಾಗಿದೆ.

ಶಾರ್ಟ್‌ ಸರ್ಕ್ಯೂಟ್‌ಗೆ ಹೊತ್ತಿ ಉರಿದ ಕಾರು

ಚಿಕ್ಕಮಗಳೂರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಕಾರೊಂದು ಹೊತ್ತಿ ಉರಿದಿದೆ. ಚಿಕ್ಕಮಗಳೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಸ್ಟಿಫ್ಟ್‌ ಕಾರೊಂದು ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ಬಂದಾಗ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಲ್ಲಿದ್ದ ನಾಲ್ವರು ಕೆಳಗಿಳಿದು ಜೀವ ಉಳಿಸಿಕೊಂಡಿದ್ದಾರೆ. ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಸ್ವಿಫ್ಟ್ ಕಾರು ಸುಟ್ಟು ಹೋಗಿದೆ. ಕಡೂರು ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದಲ್ಲಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೆಸರು; ಡಾ. ಜಿ.ಪರಮೇಶ್ವರ್‌ ಹೇಳಿದ್ದೇನು?

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣ (Valmiki Corporation Scam)ದಲ್ಲಿ ಈಗಾಗಲೇ ರಾಜ್ಯ ಸರ್ಕಾರದ ಸಚಿವರೊಬ್ಬರ ತಲೆದಂಡವಾಗಿದೆ. ಇದೀಗ ಈ ಪ್ರಕರಣದಲ್ಲಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೆಸರೂ ಕೇಳಿ ಬರುತ್ತಿದೆ. ಅವರು ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಪ್ರತಿಕ್ರಿಸಿ, ಅದನ್ನು ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಾರೆ, ನಾವು ಅದರ ಬಗ್ಗೆ ವ್ಯಾಖ್ಯಾನ ಮಾಡೋದು ಸರಿಯಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣ (Valmiki Corporation Scam)ದಲ್ಲಿ ಈಗಾಗಲೇ ರಾಜ್ಯ ಸರ್ಕಾರದ ಸಚಿವರೊಬ್ಬರ ತಲೆದಂಡವಾಗಿದೆ. ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ (B Nagendra) ಗುರುವಾರ ರಾಜೀನಾಮೆ ನೀಡಿದ್ದಾರೆ. ಇದೀಗ ಈ ಪ್ರಕರಣದಲ್ಲಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೆಸರೂ ಕೇಳಿ ಬರುತ್ತಿದೆ. ಅವರು ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಪ್ರತಿಕ್ರಿಸಿ, ಅದನ್ನು ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಾರೆ, ನಾವು ಅದರ ಬಗ್ಗೆ ವ್ಯಾಖ್ಯಾನ ಮಾಡೋದು ಸರಿಯಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಪರಮೇಶ್ವರ್‌, ʼʼತನಿಖೆ ಮಾಡುವಾಗ ಯಾರು ಅಪರಾಧಿ ಸ್ಥಾನದಲ್ಲಿ ಇರ್ತಾರೆ ಅವರು ಹೇಳಿಕೆಗಳನ್ನು ಕೊಡುತ್ತಾರೆ. ಆ ಹೇಳಿಕೆಯಲ್ಲಿ ಹಲವರ ಹೆಸರು ಕೇಳಿ ಬರುತ್ತದೆ. ಈ ಬಗ್ಗೆ ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಾರೆ. ಶರಣ ಪ್ರಕಾಶ್‌ ಪಾಟೀಲ್‌ ರಾಜೀನಾಮೆಗೆ ಬಿಜೆಪಿಯವರು ಒತ್ತಾಯಿಸುತ್ತಿದ್ದಾರೆ. ಆದರೆ ಯಾರು ಏನೇ ಹೇಳಿದ್ರೂ ಅದನ್ನು ಪರಿಶೀಲಿಸಬೇಕಾಗುತ್ತದೆ. ನಾವು ಅದರ ಬಗ್ಗೆ ವ್ಯಾಖ್ಯಾನ ಮಾಡೋದು ಸರಿಯಲ್ಲ. ಜತೆಗೆ ಈಗಲೇ ಅದಕ್ಕೆ ಸಂಬಂಧಪಟ್ಟ ಹೇಳಿಕೆ ಕೊಡಲು ಆಗಲ್ಲ. ಅದನ್ನು ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಾರೆʼʼ ಎಂದು ತಿಳಿಸಿದ್ದಾರೆ.

ಬಸನಗೌಡ ದದ್ದಲ್‌ಗೂ ಸಂಕಷ್ಟ

ರಾಯಚೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಭ್ರಷ್ಟಾಚಾರ ಪ್ರಕರಣದಲ್ಲಿ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಹೆಸರು ತಳಕು ಹಾಕಿಕೊಂಡಿದೆ. ನಾಗೇಂದ್ರ ಬೆನ್ನಲ್ಲೇ ಶಾಸಕ ಬಸನಗೌಡ ದದ್ದಲ್ ಅವರಿಗೂ ಸಂಕಷ್ಟ ಎದುರಾಗಿದೆ. ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರೂ ಆಗಿರುವ ಬಸನಗೌಡ ದದ್ದಲ್ ಅವರು ಆರೋಪಿ ನಂ 8ರ ಜತೆ ವಾಟ್ಸ್‌ಆ್ಯಪ್‌ ಚಾಟಿಂಗ್ ಮಾಡಿದ್ದಾರೆ ಎನ್ನುವ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಳಿಕ ಅವರು ವಾಟ್ಸ್‌ಆ್ಯಪ್‌ ಚಾಟಿಂಗ್ ನಡೆದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನ್ಯಾಯಾಲಯಕ್ಕೆ ಸಲ್ಲಿಸಿದ 3 ಪುಟಗಳ ಹೇಳಿಕೆಯಲ್ಲಿ ಪ್ರಸ್ತಾವಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸುವಂತೆಯೂ ಮನವಿ ಸಲ್ಲಿಸಲಾಗಿದೆ.

ರಾಜೀನಾಮೆಗೆ ಆಗ್ರಹ

ಈ ಬೆಳವಣಿಗೆ ಬೆನ್ನಲ್ಲೇ ಶಾಸಕ ಬಸನಗೌಡ ದದ್ದಲ್ ಅವರ ರಾಜೀನಾಮೆಗೆ ಆಗ್ರಹ ಕೇಳಿ ಬಂದಿದೆ. ರಾಯಚೂರು ಜಿಲ್ಲಾ ಜೆಡಿಎಸ್ ನಿಯೋಗದ ವರಿಷ್ಠರು ಎನ್.ಎಸ್.ಬೋಸರಾಜ್ ಮತ್ತು ಶಾಸಕ ಬಸನಗೌಡ ದದ್ದಲ್ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಬಸನಗೌಡ ದದ್ದಲ ಭ್ರಷ್ಟಾಚಾರಕ್ಕೆ ಮೂಲ ಕಾರಣ. ಎಸ್‌ಐಟಿ ಹಾಗೂ ಸಿಬಿಐ ಎನ್.ಎಸ್. ಬೋಸರಾಜು ಹಾಗೂ ಬಸನಗೌಡ ದದ್ದಲ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಇಬ್ಬರನ್ನೂ ವಿಚಾರಣೆಗೆ ಒಳಪಡಿಸಬೇಕು ಮತ್ತು ಬಂಧಿಸಬೇಕು ಎಂದು ಜೆಡಿಎಸ್‌ ಒತ್ತಾಯಿಸಿದೆ.

ʼʼಪ್ರಕರಣ ದಾಖಲಾಗುತ್ತಿದ್ದಂತೆ ಕೆಲವರು ಹಣ ಹಿಂದಿರುಗಿಸಿದ್ದಾರೆ. ಹಣ ಹಿಂದಿರುಗಿಸುವಲ್ಲಿ ಶಾಸಕ ಬಸನಗೌಡ ದದ್ದಲ ಪಾತ್ರವಿದೆ. ಜೆಡಿಎಸ್ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಪತ್ರ ಹಸ್ತಾಂತರಿಸಲಿದೆʼʼ ಎಂದು ರಾಯಚೂರಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವಿರೂಪಾಕ್ಷಿ ತಿಳಿಸಿದ್ದಾರೆ.

ಇದನ್ನೂ ಓದಿ: Valmiki Corporation Scam: ಬಿ. ನಾಗೇಂದ್ರ ನೀಡಿದ ರಾಜೀನಾಮೆ ಅಂಗೀಕಾರ ಮಾಡಿದ ರಾಜ್ಯಪಾಲರು

Continue Reading

ಕೊಡಗು

Love‌ Torture : ಪ್ರೀತ್ಸೆ ಅಂತ ಪ್ರಾಣ ತಿಂದ; ಒಪ್ಪದೇ ಇದ್ದಾಗ ಯುವತಿಯ ಖಾಸಗಿ ಫೋಟೋ ಹರಿಬಿಟ್ಟ ಪಾಗಲ್‌ ಪ್ರೇಮಿ

Love‌ Torture : ಯುವತಿಯ ಖಾಸಗಿ ಫೋಟೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟು ಪ್ರೀತಿಸುವಂತೆ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದ ದುಷ್ಟ ಪ್ರೇಮಿಯನ್ನು ಪೊಲೀಸರು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

VISTARANEWS.COM


on

By

love Torture Man uploads private photo of young woman on social media
ಮುಂಬೈ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿದ ಸಿದ್ದಾಪುರ ಪೊಲೀಸರು
Koo

ಕೊಡಗು: ಅನ್ಯಕೋಮಿನ ಯುವತಿಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಪ್ರೀತಿಸುವಂತೆ (Love‌ Torture) ಒತ್ತಾಯಿಸಿದ್ದ ಪಾಗಲ್‌ ಪ್ರೇಮಿಯನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೊಡಗಿನ ನೆಲ್ಯಹುದಿಕೇರಿ ನಿವಾಸಿ ಅಶ್ರಪ್ ಎಂಬುವವರ ಪುತ್ರ ಅಫ್ರೀದ್ (21) ಎಂಬಾತ ಅದೇ ಗ್ರಾಮದ ಅನ್ಯಕೋಮಿನ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಅಫ್ರೀದ್‌ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನಲಾಗಿದೆ. ತನ್ನನ್ನು ಪ್ರೀತಿಸುವಂತೆ ಯುವತಿಯನ್ನು ಪೀಡಿಸುತ್ತಾ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ.

ಈ ನಡುವೆ ಅಫ್ರೀದ್‌ ಕಳೆದ ಆರು ತಿಂಗಳ ಹಿಂದೆ ಕೆಲಸದ ನಿಮಿತ್ತ ವಿದೇಶಕ್ಕೆ ತೆರಳಿದ್ದ. ವಿದೇಶದಿಂದಲೇ ತಾನು ಪ್ರೀತಿಸುತ್ತಿದ್ದ ಯುವತಿಯ ಖಾಸಗಿ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಯುವತಿಯನ್ನು ಬೆದರಿಸಿದ್ದಾನೆ. ಆದರೆ ಆಫ್ರೀದ್‌ ಬೆದರಿಕೆಗೆ ಯುವತಿ ಬಗ್ಗದೇ ಇದ್ದಾಗ ಯುವತಿಯ ಖಾಸಗಿ ಚಿತ್ರಗಳನ್ನು‌ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.

ಇದನ್ನೂ ಓದಿ: Niveditha Gowda: ಚಂದನ್‌-ನಿವೇದಿತಾ ಡಿವೋರ್ಸ್‌ಗೆ ಸೃಜನ್ ಲೋಕೇಶ್ ಕಾರಣ? ಯಾಕೆ ಈ ಗಾಸಿಪ್‌?

ಈ ವಿಷಯ ತಿಳಿಯುತ್ತಿದ್ದಂತೆ ಈ ಕುರಿತು ಯುವತಿ ಕಳೆದ 2023ರ ಡಿಸೆಂಬರ್‌ನಲ್ಲೇ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಯುವತಿ ನೀಡಿದ ದೂರಿನ‌‌ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಪ್ರಾರಂಭಿಸಿದ್ದರು. ವಿದೇಶದಲ್ಲಿದ್ದು ಕೃತ್ಯವೆಸಗಿದ ಆರೋಪಿ ಅಫ್ರೀದಿಯನ್ನು ಆರು ತಿಂಗಳ ನಂತರ ಸಿದ್ದಾಪುರ ಪೊಲೀಸರು ಮುಂಬೈ ವಿಮಾನ‌ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಆರೋಪಿಯ ವಿರುದ್ಧ ವಿವಿಧ ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ತಲೆಮರೆಸಿಕೊಳ್ಳುವ ಯತ್ನದಲ್ಲಿದ್ದ. ಆರೋಪಿಯು ವಿದೇಶದಿಂದ ಬರುತ್ತಿರುವ ಖಚಿತ ಮಾಹಿತಿ ಮೇರೆಗೆ ತೆರಳಿದ ಸಿದ್ದಾಪುರ ಪೊಲೀಸರು ಆರೋಪಿಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಮಾನ‌ ನಿಲ್ದಾಣದಲ್ಲೇ ಆತ್ಮ‌ಹತ್ಯೆಗೆ ಯತ್ನಿಸಿ ಹೈಡ್ರಾಮಾ

ವಿಮಾನ ನಿಲ್ದಾಣದಲ್ಲಿ ಪೊಲೀಸರು ಅರೆಸ್ಟ್‌ ಮಾಡಲು ಬಂದರೆ ಆಫ್ರೀದಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಯುವತಿಯ ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದಲ್ಲಿ ಮುಂಬೈನಲ್ಲಿ ಬಂಧಿತನಾದ ಆರೋಪಿ ಅಫ್ರೀದಿ, ಪೊಲೀಸರ ಎದುರೇ ಚೂಪಾದ ವಸ್ತುವಿನಿಂದ ತನ್ನ ಕೈಗೆ ಗಾಯ ಮಾಡಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಈ ಸಂಧರ್ಭದಲ್ಲಿ ಎಚ್ಚೆತ್ತುಕೊಂಡ ಮುಂಬಯಿ ಪೊಲೀಸರು ಹಾಗೂ ಸಿದ್ದಾಪುರ ಪೊಲೀಸರು ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಿ ಕರೆತಂದು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಮಾರ್ಗದರ್ಶನದೊಂದಿಗೆ ಮಡಿಕೇರಿ‌ ವೃತ್ತ ನಿರೀಕ್ಷ ರಾಜು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿ ಬಸವರಾಜ್, ಕಿರಣ್ ಭಾಗಿಯಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bhavani Revanna: ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ ಹೇಳಿದ್ದೇನು?

Bhavani Revanna: ಕೆ.ಆರ್‌.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಭವಾನಿ ರೇವಣ್ಣ ಕೊನೆಗೂ ಶುಕ್ರವಾರ ವಿಚಾರಣೆಗಾಗಿ ಎಚ್ಐಟಿ ಕಚೇರಿಗೆ ಹಾಜರಾಗಿದ್ದರು. ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಹೈಕೋರ್ಟ್‌ ಒಂದು ವಾರದ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದ ಬೆನ್ನಲ್ಲೇ ಎಸ್‌ಐಟಿ ವಿಚಾರಣೆಗೆ ಭವಾನಿ ಹಾಜರಾಗಿದ್ದರು. ಆದರೆ ಸೂಕ್ತ ಮಾಹಿತಿ ಲಭಿಸದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಇಂದು (ಶನಿವಾರ) ಮತ್ತೆ ಭವಾನಿ ಅವರನ್ನು ವಿಚಾರಣೆ ನಡೆಸುವ ಸಾಧ್ಯತೆ ಇದೆ.

VISTARANEWS.COM


on

Bhavani Revanna
Koo

ಬೆಂಗಳೂರು: ಕಳೆದ ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ (Bhavani Revanna) ಅವರನ್ನು ಇಂದು (ಶನಿವಾರ) ಮತ್ತೆ ಎಸ್‌ಐಟಿ ವಿಚಾರಣೆಗೆ ಒಳಪಡಿಸಲಿದೆ. ಕೆ.ಆರ್‌.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದ ವಿಚಾರಣೆಗಾಗಿ ಕೊನೆಗೂ ಶುಕ್ರವಾರ ಎಚ್ಐಟಿ ಕಚೇರಿಗೆ ಭವಾನಿ ರೇವಣ್ಣ ಹಾಜರಾಗಿದ್ದರು. ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಹೈಕೋರ್ಟ್‌ ಒಂದು ವಾರದ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದ ಬೆನ್ನಲ್ಲೇ ಎಸ್‌ಐಟಿ ವಿಚಾರಣೆಗೆ ಭವಾನಿ ಹಾಜರಾಗಿದ್ದರು. ಸೂಕ್ತ ಮಾಹಿತಿ ಲಭಿಸದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಇಂದು ಮತ್ತೆ ಭವಾನಿ ಅವರನ್ನು ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಆರೋಪ ನಿರಾಕರಿಸಿದ ಭವಾನಿ ರೇವಣ್ಣ

ಸಿಐಡಿಯಲ್ಲಿರುವ ಎಸ್ಐಟಿ ಕಚೇರಿಗೆ ವಕೀಲರ ಜತೆ ಭವಾನಿ ರೇವಣ್ಣ‌ ಆಗಮಿಸಿದ್ದರು. ವಿಚಾರಣೆ ವೇಳೆ ಭವಾನಿ, ನಾನು ಮಹಿಳೆಯನ್ನು ಅಪಹರಣ ಮಾಡಿಸಿಲ್ಲ. ಎಲ್ಲವೂ ಷಡ್ಯಂತ್ರ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆದಿದ್ದರೂ ಹೆಚ್ಚಿನ ಮಾಹಿತಿ ಲಭಿಸದೇ ಇರುವುದರಿಂದ ಅದಿಕಾರಿಗಳು ಮತ್ತೆ ಭವಾನಿ ಅವರನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ.

ಭವಾನಿ ರೇವಣ್ಣ ಹೇಳಿದ್ದೇನು?

ʼʼಸಂತ್ರಸ್ತೆ ನಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ನಾನು ಅವರನ್ನು ಅಪಹರಣ ಮಾಡಿಸಿಲ್ಲ. ಆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ನನ್ನನ್ನು ರಾಜಕೀಯವಾಗಿ ಮುಗಿಸಲು ಯಾರೋ ಸಂಚು ರೂಪಿಸಿದ್ದು, ಇದರ ಭಾಗವಾಗಿ ಈ ಆರೋಪ ಹೊರಿಸಲಾಗುತ್ತಿದೆʼʼ ಎಂದು ಭವಾನಿ ರೇವಣ್ಣ ಅದಿಕಾರಿಗಳ ಮುಂದೆ ಹೇಳಿದ್ದಾರೆ.

ಒಂದು ವಾರ ಮಧ್ಯಂತರ ಜಾಮೀನು

ಕೆ.ಆರ್. ನಗರ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣದಲ್ಲಿ ಎಸ್‌ಐಟಿ ತನಿಖೆಗೆ ಬೇಕಾಗಿದ್ದು, ತನಿಖೆಗೆ ಸಹಕರಿಸಿದೆ ತಲೆ ಮರೆಸಿಕೊಂಡಿರುವ ಭವಾನಿ ಅವರಿಗೆ ಮುಂದಿನ ಶುಕ್ರವಾರದವರೆಗೆ ಮಧ್ಯಂತರ ಜಾಮೀನು ನೀಡಿ ಕೋರ್ಟ್‌ ಆದೇಶ ನೀಡಿತ್ತು. ಮಧ್ಯಾಹ್ನ 1 ಗಂಟೆಗೆ ಎಸ್‌ಐಟಿ ಮುಂದೆ ತನಿಖೆಗೆ ಹಾಜರಾಗಬೇಕು. ಒಂದು ಗಂಟೆಯಿಂದ ಐದು ಗಂಟೆಯವರೆಗೆ ತನಿಖೆ ನಡೆಸಬಹುದು. ಐದು ಗಂಟೆಯ ನಂತರ ಅವರನ್ನು ಎಸ್‌ಐಟಿ ಕಚೇರಿಯಲ್ಲಿ ಇಟ್ಟುಕೊಳ್ಳಬಾರದು ಎಂದು ಕೋರ್ಟ್‌ ಸೂಚನೆ ನೀಡಿತ್ತು.

ಭವಾನಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು 11 ಕಾರಣಗಳಿವೆ ಎಂದು ಭವಾನಿ ಪರ ಹಿರಿಯ ವಕೀಲ ಸಂದೇಶ್‌ ಚೌಟ ವಾದ ಮಂಡಿಸಿದರು. ಈ ವಾದಗಳನ್ನು ಕೋರ್ಟ್‌ ಮಾನ್ಯ ಮಾಡಿತು. ಆದರೆ ಕಳೆದೆರಡು ಸಲದ ನೋಟೀಸ್‌ಗೆ ಭವಾನಿ ಹಾಜರಾಗದಿದ್ದುದಕ್ಕೆ ಬಂಧನ ವಾರೆಂಟ್‌ ಜಾರಿ ಮಾಡಲಾಗಿದೆ. ಸದ್ಯ ಆ ಆದೇಶವನ್ನು ಅಮಾನತಿನಲ್ಲಿ ಇಡಲಾಗಿದೆ. ಮುಂದಿನ ಶುಕ್ರವಾರದವರೆಗೂ ಮಧ್ಯಂತರ ಜಾಮೀನು ನೀಡಲಾಗಿದ್ದು, ಮುಂದಿನ ಶುಕ್ರವಾರಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ಕೋರ್ಟ್‌ ಹೇಳಿದೆ. ಪೊಲೀಸರ ಕಣ್ಣಿಂದ ತಪ್ಪಿಸಿಕೊಂಡು ಓಡಾಡುತ್ತಿರುವ ಭವಾನಿಯನ್ನು ವಶಕ್ಕೆ ಪಡೆಯಲು ಪೊಲೀಸರ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿತ್ತು. 

ಪ್ರಕರಣಕ್ಕೆ ಸಂಬಂಧಿಸಿ ನಿಯಮದ 41a ಅಡಿ ಭವಾನಿ ರೇವಣ್ಣಗೆ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು. ಆದರೆ, ತಾವು ಹೊಳೆನರಸೀಪುರದ ಮನೆಯಲ್ಲಿ ಸಿಗುವುದಾಗಿ ಭವಾನಿ ತಿಳಿಸಿದ್ದರು. ಇದಕ್ಕಾಗಿ ಎಸ್‌ಐಟಿ ಟೀಮ್‌ ಅಲ್ಲಿಗೆ ತೆರಳಿದಾಗ, ಭವಾನಿ ಅಲ್ಲಿರದೆ ಕಣ್ಮರೆಯಾಗಿದ್ದರು. ಹೀಗಾಗಿ ಭವಾನಿ ಬಂಧನಕ್ಕಾಗಿ ಆರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು. 

ಇದನ್ನೂ ಓದಿ: Prajwal Revanna Case: ಮಧ್ಯಂತರ ಜಾಮೀನು ಬೆನ್ನಲ್ಲೇ ಭವಾನಿ ರೇವಣ್ಣ‌ ಪ್ರತ್ಯಕ್ಷ; ಎಸ್ಐಟಿ ವಿಚಾರಣೆಗೆ ಹಾಜರು!

Continue Reading
Advertisement
Kannada New Movie Ramesh Suresh Movie June 21st release
ಸ್ಯಾಂಡಲ್ ವುಡ್4 mins ago

Kannada New Movie: ʻರಮೇಶ್ ಸುರೇಶ್‌ʼ ಸಿನಿಮಾದಲ್ಲಿ ಇಬ್ಬರು ನಿರ್ದೇಶಕರು, ಇಬ್ಬರು ನಾಯಕರು ; ಜೂನ್ 21ರಂದು ತೆರೆಗೆ!

Road Accident in shivamogga
ಕ್ರೈಂ9 mins ago

Road Accident : ಮುಖಾಮುಖಿಯಾಗಿ ಬಂದ ಕಾರುಗಳು ಪೀಸ್‌ ಪೀಸ್‌; ಚಾಲಕ ಸ್ಪಾಟ್‌ ಡೆತ್‌

Rahul Gandhi
ದೇಶ12 mins ago

Rahul Gandhi: ಷೇರುಪೇಟೆಯಲ್ಲಿ ಭಾರಿ ಹಗರಣವಾಗಿದೆ ಎಂದಿದ್ದ ರಾಹುಲ್ ಗಾಂಧಿಗೆ ಐದೇ ದಿನದಲ್ಲಿ 25 ಲಕ್ಷ ರೂ. ಲಾಭ!

Raja Rani Show started Today onwards
ಕಿರುತೆರೆ22 mins ago

Raja Rani Show: ಇಂದಿನಿಂದ ʻರಾಜ ರಾಣಿ ರೀಲೋಡೆಡ್ʼ ರಿಯಾಲಿಟಿ ಶೋ ಶುರು!

Valmiki Corporation Scam
ಕರ್ನಾಟಕ38 mins ago

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದಲ್ಲಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೆಸರು; ಡಾ. ಜಿ.ಪರಮೇಶ್ವರ್‌ ಹೇಳಿದ್ದೇನು?

World Brain Tumor Day
ಆರೋಗ್ಯ52 mins ago

World Brain Tumor Day: ಇಂದು ವಿಶ್ವ ಬ್ರೇನ್‌ ಟ್ಯೂಮರ್‌ ದಿನ; ಮೊದಲೇ ಎಚ್ಚೆತ್ತುಕೊಂಡರೆ ಈ ಕಾಯಿಲೆಯಿಂದ ಪಾರಾಗಬಹುದು

love Torture Man uploads private photo of young woman on social media
ಕೊಡಗು55 mins ago

Love‌ Torture : ಪ್ರೀತ್ಸೆ ಅಂತ ಪ್ರಾಣ ತಿಂದ; ಒಪ್ಪದೇ ಇದ್ದಾಗ ಯುವತಿಯ ಖಾಸಗಿ ಫೋಟೋ ಹರಿಬಿಟ್ಟ ಪಾಗಲ್‌ ಪ್ರೇಮಿ

Actress Sunaina To Get Married Soon
ಸ್ಯಾಂಡಲ್ ವುಡ್1 hour ago

Actress Sunaina: ಸದ್ದಿಲ್ಲದೇ ಎಂಗೇಜ್‌ ಆದ ‘ಗಂಗೆ ಬಾರೆ ತುಂಗೆ ಬಾರೆ’ ನಾಯಕಿ!

Bhavani Revanna
ಕರ್ನಾಟಕ2 hours ago

Bhavani Revanna: ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ ಹೇಳಿದ್ದೇನು?

Niveditha Gowda reason behind srujan lokesh name
ಸ್ಯಾಂಡಲ್ ವುಡ್2 hours ago

Niveditha Gowda: ಚಂದನ್‌-ನಿವೇದಿತಾ ಡಿವೋರ್ಸ್‌ಗೆ ಸೃಜನ್ ಲೋಕೇಶ್ ಕಾರಣ? ಯಾಕೆ ಈ ಗಾಸಿಪ್‌?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ17 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ19 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌