HD Kumaraswamy: ಕೆಲವು ವರ್ಗಗಳ ಓಲೈಕೆ ಸಿಎಂ ಅಜೆಂಡಾ: ಎಚ್.ಡಿ. ಕುಮಾರಸ್ವಾಮಿ ಕಿಡಿ - Vistara News

ಕರ್ನಾಟಕ

HD Kumaraswamy: ಕೆಲವು ವರ್ಗಗಳ ಓಲೈಕೆ ಸಿಎಂ ಅಜೆಂಡಾ: ಎಚ್.ಡಿ. ಕುಮಾರಸ್ವಾಮಿ ಕಿಡಿ

HD Kumaraswamy : ಸಿಎಂ ಸಿದ್ದರಾಮಯ್ಯ ಅವರ ಸಾರ್ವಜನಿಕ ಹೇಳಿಕೆ ಮತ್ತು ಅಜೆಂಡಾವನ್ನು ನೋಡಿದರೆ ಕೆಲವು ವರ್ಗಗಳನ್ನು ಮಾತ್ರ ಓಲೈಕೆಗೆ ಮುಂದಾಗಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

HD Kumaraswamy attack on CM Siddaramaiah and congress Government
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಈಗ ಮುಸ್ಲಿಂ ಸಮುದಾಯದ (Muslim community) ಓಲೈಕೆ ಮಾಡುವುದಷ್ಟೇ ಅಲ್ಲ. ಅವರ ಸಾರ್ವಜನಿಕ ಹೇಳಿಕೆ ಮತ್ತು ಅಜೆಂಡಾವನ್ನು ನೋಡಿದರೆ ಕೆಲವು ವರ್ಗಗಳನ್ನು ಮಾತ್ರ ಓಲೈಕೆಗೆ ಮುಂದಾಗಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರಗಳ ಚರ್ಚೆ ಆಗಬೇಕು. ಈ ಹಿನ್ನೆಲೆಯಲ್ಲಿ ಈಗ ವೈಯಕ್ತಿಕ ಸೇರಿದಂತೆ ಹಲವು ವಿಚಾರ ಬಗ್ಗೆ ನಾನು ಮಾತನಾಡುವುದಿಲ್ಲ. ಮುಂದೆ ಅದರ ಬಗ್ಗೆ ಮಾತನಾಡುತ್ತೇನೆ. ಉತ್ತರ ಕರ್ನಾಟಕ ಅಭಿವೃದ್ಧಿ ಆಗುತ್ತಿಲ್ಲ. ಆಡಳಿತ ಪಕ್ಷದ ಶಾಸಕರೇ ಮಾತನಾಡಿರುವುದನ್ನು ಗಮನಿಸಿದ್ದೇನೆ ಎಂದು ಹೇಳಿದರು.

ಅಧಿವೇಶನ ಆರಂಭವಾಗಿ ಚರ್ಚೆ ಸುಗಮವಾಗಿ ನಡೆಯುತ್ತಿದೆ. ಇಂದು ಬರಗಾಲದ ಸಂಬಂಧಿಸಿದಂತೆ ಚರ್ಚೆಗೆ ಸಮಯ ನಿಗದಿ ಮಾಡಿದ್ದಾರೆ. ರೈತರು ಹಲವಾರು ಸಮಸ್ಯೆ ಎದುರಿಸುತ್ತಿದ್ದಾರೆ. ಕೊಬ್ಬರಿಗೆ 1250 ರೂಪಾಯಿ ಪ್ರೋತ್ಸಾಹಧನ ಕೊಡುತ್ತೇವೆ ಎಂದು ಹೇಳಿದ್ದಾರೆ. ಈಗ ಆ ವಿಚಾರಕ್ಕೆ ಧರಣಿ ನಡೆಯುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.

ಪಂಚರಾಜ್ಯ ಚುನಾವಣೆ ಫಲಿತಾಂಶವು ದಿಕ್ಸೂಚಿಯಾಗಿದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿ ಆಗಬೇಕು ಅಂತ ಈಗಾಗಲೇ ಜನರ ತೀರ್ಮಾನ ಮಾಡಿದ್ದಾರೆ. ಸದ್ಯಕ್ಕೆ ಮೈತ್ರಿ ಮಾತುಕತೆ ಕುರಿತು ದೆಹಲಿಗೆ ಹೋಗುತ್ತಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಸಿದ್ದರಾಮಯ್ಯರಿಂದ ಮುಸ್ಲಿಂ ಓಲೈಕೆ ಎಂದ ಬಿಜೆಪಿ; ಹೇಳಿದ್ದರಲ್ಲಿ ತಪ್ಪಿಲ್ಲ ಎಂದ ಸಿಎಂ!

ಸೋಮವಾರ (ಡಿ. 4) ಹುಬ್ಬಳ್ಳಿಯಲ್ಲಿ ನಡೆದಿದ್ದ ಸಮಾವೇಶದಲ್ಲಿ ಮುಸ್ಲಿಂ ಸಮುದಾಯದ (Muslim community) ರಕ್ಷಣೆ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿರುವ ಮಾತಿಗೆ ಈಗ ವಿವಾದ ಸ್ವರೂಪ ಪಡೆದುಕೊಂಡಿದೆ. ಬಿಜೆಪಿ ನಾಯಕರು (BJP leaders) ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ. ಒಂದು ಸಮುದಾಯದ ಓಲೈಕೆ ರಾಜಕಾರಣ ಇದಾಗಿದೆ. ಈ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಲಾಗುವುದು ಎಂದು ಕಿಡಿಕಾರಿದೆ. ಅಲ್ಲದೆ, ಕಾಂಗ್ರೆಸ್‌ ಪಕ್ಷವನ್ನು ಕಟುವಾದ ಮಾತುಗಳಿಂದ ಟೀಕೆ ಮಾಡಲಾಗಿದೆ. ಆದರೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ನಾನು ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ನಾನು ಹೇಳಿದ್ದರಲ್ಲಿ ತಪ್ಪು ಏನಿದೆ…!? ನಾನು ಹೇಳಿದ್ದು ಒಂದು ನೀವು ಬರೆದಿರುವುದು ಒಂದು. ಒಂದು ಪತ್ರಿಕೆಯವರು ಸರಿಯಾಗಿ ಬರೆದಿದ್ದಾರೆ. ಮುಸ್ಲಿಂ ಸೇರಿದಂತೆ ಎಲ್ಲ ಸಮುದಾಯಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ ಅಂತ ನಾನು ಹೇಳಿರೋದು. ನೀವು ಅದಕ್ಕೆ ಉಪ್ಪು ಖಾರ ಹಾಕಬೇಡಿ ಎಂದು ಹೇಳಿದರು.

ಇದನ್ನೂ ಓದಿ: Belagavi Winter Session: ಸದನದಲ್ಲಿ ಎಲೆ ಚುಕ್ಕಿ ರೋಗ ಸದ್ದು; ಗಂಭೀರವಾಗಿ ಪರಿಗಣಿಸಿದ ಸರ್ಕಾರ

ಅಲ್ಪಸಂಖ್ಯಾತರನ್ನು ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ

ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ. ಅಲ್ಪಸಂಖ್ಯಾತರಿಗೆ 4 ರಿಂದ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿಡುವುದಾಗಿ ಹೇಳಿದ್ದೇನೆ. ಇದನ್ನು ಬಿಜೆಪಿ ಓಲೈಕೆ ರಾಜಕಾರಣ ಎಂದು ಕರೆದರೆ ಹೇಗೆ? ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಮುದಾಯದ ಪರ ಇದ್ದೇವೆ ಎಂದು ಹೇಳಬೇಕಾಗುತ್ತೆ: ಸತೀಶ್‌ ಜಾರಕಿಹೊಳಿ

ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಸಚಿವ ಸತೀಶ್ ಜಾರಕಿಹೊಳಿ ಸಮರ್ಥನೆ ಮಾಡಿಕೊಂಡಿದ್ದಾರೆ. ಸಮುದಾಯದ ಕಾರ್ಯಕ್ರಮಗಳಲ್ಲಿ ಅಂತಹ ಹೇಳಿಕೆ ಸಹಜ. ಸಮುದಾಯದ ಪರ ಇದ್ದೇವೆ ಎಂದು ಹೇಳಬೇಕಾಗುತ್ತದೆ. ಅದು ಮುಸ್ಲಿಂ ಸಮುದಾಯ ಇರಲಿ ಯಾವುದೇ ಸಮುದಾಯ ಇರಲಿ ಎಂದು ಹೇಳಿದ್ದಾರೆ.

ಮಾಜಿ ಡಿಸಿಎಂ ಅಶ್ವತ್ಥನಾರಾಯಣ ಕಿಡಿ

ಈ ಸರ್ಕಾರ ಬಂದ ದಿನದಿಂದಲೂ ಈ ಕೆಲಸವನ್ನು ಮಾಡುತ್ತಿದ್ದಾರೆ. ಮುಸ್ಲಿಂ ಸಮುದಾಯವನ್ನು ಓಲೈಸುವುದು ಅಷ್ಟೇ ಇವರ ರಾಜಕಾರಣ. ಅಭಿವೃದ್ಧಿ ರಾಜಕಾರಣ ಇಲ್ಲ. ಬರೀ ದ್ವೇಷದ ರಾಜಕಾರಣ ಮಾಡುವುದು ಅಷ್ಟೇ ಇವರ ಕೆಲಸ. ಸದನದಲ್ಲಿ ಈ ಎಲ್ಲ ವಿಚಾರಗಳನ್ನು ಗಂಭೀರವಾಗಿ ಚರ್ಚೆ ಮಾಡುತ್ತೇವೆ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ ಹೇಳಿದ್ದಾರೆ.

ಇದೊಂದು ಎಡಬಿಡಂಗಿ ಸರ್ಕಾರ: ಆರ್.‌ ಅಶೋಕ್

ಇದೊಂದು ಎಡಬಿಡಂಗಿ ಸರ್ಕಾರವಾಗಿದೆ. ಹಿಂದು ಸೆಕೆಂಡ್ ದರ್ಜೆ ಪ್ರಜೆಗಳಲ್ಲ. ಮುಸ್ಲಿಂ ಓಲೈಕೆ ಮಾಡುವುದನ್ನು ಬಿಡಲಿ. ಒಬ್ಬ ಸಿಎಂ ಒಂದು ಸಮುದಾಯದ ಪರ ನಿಲ್ಲೋದು ಸರಿಯಲ್ಲ. ಸಚಿವ ಜಮೀರ್ ಅಹಮದ್ ಖಾನ್ ಆಯಿತು. ಈಗ ಸಿದ್ದರಾಮಯ್ಯ‌ ಮಾತನಾಡುತ್ತಿದ್ದಾರೆ. ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಅವರು ಶಾದಿ ಭಾಗ್ಯ ಮಾಡಿದರು. ಎಸ್ಸಿ ಸಮುದಾಯದಲ್ಲಿ ಬಡವರು ಇರಲಿಲ್ವಾ? ಇವರನ್ನು ಕಳೆದ ಬಾರಿ ಜನ ಸೋಲಿಸಿದ್ದರು. ಈಗ ಅಧಿಕಾರಕ್ಕೆ ಬಂದ ಮೇಲೆ ಮತ್ತೆ ಚಾಳಿ ಶುರು ಮಾಡಿದ್ದಾರೆ. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಬೇಕು. ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಇದು ಖಂಡನೀಯ. ಹಿಂದುಗಳು ಕೆಳಗೆ, ಮುಸ್ಲಿಮರು ಮೇಲೆ ಅಂತ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದರು. ಸಂವಿಧಾನ ಪೀಠಿಕೆಯನ್ನು ಹೇಳುವಾಗ ಎಲ್ಲರೂ ಒಂದೇ ಅಂತ ಹೇಳಲಾಗುವುದು. ಈಗ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಇದು ಬಹುಸಂಖ್ಯಾತ ಹಿಂದುಗಳ ಭಾವನೆಗೆ ಧಕ್ಕೆ ತಂದಿದೆ. ಟಿಪ್ಪು ಸುಲ್ತಾನ್ ಆಚರಣೆಯಂತಹ ಕಾರ್ಯಕ್ರಮವನ್ನು ಬಿಡಬೇಕು ಎಂದು ಆರ್.‌ ಅಶೋಕ್‌ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಒಂದು ಸಮುದಾಯಕ್ಕೆ ಓಲೈಕೆ ಮಾಡಬಾರದು: ಆರಗ

ಒಬ್ಬ ಮುಖ್ಯಮಂತ್ರಿಯಾಗಿ ಒಂದು ಸಮುದಾಯಕ್ಕೆ ಓಲೈಕೆ ಮಾಡಬಾರದು. ನಾನು ನಿಮಗೆ ರಕ್ಷಣೆ ಕೊಡುತ್ತೇವೆ ಎಂದು ಹೇಳುತ್ತಾರೆ. ಅವರಿಗೆ ಏನು ಭಯ ಇದೆ? ಸಿಎಂ ಅವರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಇಂತಹ ತುಷ್ಟೀಕರಣದಿಂದ ಮೂರು ರಾಜ್ಯವನ್ನು ಕಳೆದುಕೊಂಡಿದ್ದಾರೆ. ಸಿಎಂ ಹೇಳಿಕೆಯನ್ನು ನಾನು ಖಂಡಿಸತ್ತೇನೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.

ಇದನ್ನೂ ಓದಿ: Illegal Arecanut: ರಾಜ್ಯದಲ್ಲಿ ಅಕ್ರಮ ಅಡಿಕೆ ದಂಧೆ? ಬೆಂಗಳೂರಲ್ಲಿ ಅಂತಾರಾಜ್ಯ ಜಾಲ ಪತ್ತೆ

ಧರ್ಮದ ಹೆಸರಲ್ಲಿ ರಾಜಕಾರಣ: ಚಲವಾದಿ ನಾರಾಯಣ ಸ್ವಾಮಿ

ಪರಿಷತ್‌ ಸದಸ್ಯ ಚಲವಾದಿ ನಾರಾಯಣ ಸ್ವಾಮಿ ಪ್ರತಿಕ್ರಿಯೆ ನೀಡಿ, ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಮರು ಈಗ ಹುಟ್ಟಿದ್ದಾರೆ ಅಂದುಕೊಂಡಿದ್ದಾರೆ. ಅವರಿಗೆ ಈ ದೇಶ ಯಾವುದೇ ಅನ್ಯಾಯ ಮಾಡಿಲ್ಲ‌. ನಮ್ಮ‌ ಸರ್ಕಾರ ಇದ್ದಾಗಲೂ ಸಹಾಯ ಮಾಡಿದೆ. ಅವರು ಧರ್ಮದ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಮುಸಲ್ಮಾನರು ನಮ್ಮ ಪಕ್ಷದಲ್ಲೂ ಇದ್ದಾರೆ. ಕಾಂಗ್ರೆಸ್‌ನವರು ಅವರನ್ನು ಓಲೈಕೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಆಯ್ತು ಮುಸ್ಲಿಂರನ್ನು ಸಿಎಂ ಮಾಡಿದ್ದಾರಾ, ಅಧ್ಯಕ್ಷ ಮಾಡಿದ್ದಾರಾ? ಎಂದು ಪ್ರಶ್ನೆ ಮಾಡಿದರು.

ಏನಿದು ವಿವಾದ?

ಹುಬ್ಬಳ್ಳಿ‌ಯಲ್ಲಿ ಸೋಮವಾರ ನಡೆದಿದ್ದ‌ ಮುಸ್ಲಿಂ ಸಮಾವೇಶದಲ್ಲಿ ಸಿಎಂ‌ ಸಿದ್ದರಾಮಯ್ಯ ಮಾತನಾಡಿ, ರಾಜಕೀಯ ‌ಲಾಭಕ್ಕೆ ಕೆಲವರು ಧರ್ಮಗಳ ನಡುವೆ ಸಂಘರ್ಷ ಉಂಟು ಮಾಡುತ್ತಾರೆ. ಇದರಿಂದ ತಾತ್ಕಾಲಿಕ ಲಾಭ ಸಿಗಬಹುದು. ಪರಸ್ಪರ ಪ್ರೀತಿ ಇರಬೇಕಾದರೆ ನಾವು ಮನುಷ್ಯತ್ವದಿಂದ ಇರಬೇಕು. ಈ ವರ್ಷ ನಾಲ್ಕು ಸಾವಿರ ಕೋಟಿ ಅನುದಾನ ಅಲ್ಪಸಂಖ್ಯಾತರ ಇಲಾಖೆಗೆ ಕೊಟ್ಟಿದ್ದೇವೆ. 10 ಸಾವಿರ ಕೋಟಿ ಹಣ ಅಲ್ಪಸಂಖ್ಯಾತ ಇಲಾಖೆಗೆ ಖರ್ಚು ಮಾಡಬೇಕು ಅನ್ನೋದು ನಮ್ಮ ಉದ್ದೇಶ. ನಾನು ಕೊಟ್ಟಿದ್ದ ಹಣ ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು. ನಿಮ್ಮ ಧಾರ್ಮಿಕ ಕೇಂದ್ರಗಳಿಗೆ ಅನುದಾನ ಬೇಕು. ದೇಶದ ಸಂಪತ್ತಲ್ಲಿ ನಿಮಗೆ ಪಾಲು ಸಿಗಬೇಕು. ದೇಶದ ಸಂಪತ್ತು ನಿಮಗೂ ಹಂಚುತ್ತೇನೆ. ನಿಮಗೆ ಅನ್ಯಾಯ ಮಾಡೋಕೆ ನಾನು ಬಿಡಲ್ಲ. ನಿಮ್ಮನ್ನು ನಾನು ರಕ್ಷಣೆ ಮಾಡುತ್ತೇನೆ ಎಂದು ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ

Karnataka Weather Forecast: ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ ಎಂದು (Rain News) ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆ ಭರ್ಜರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗಲಿದೆ.

ಬೆಳಗಾವಿ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಕೋಲಾರ, ಹಾಸನದ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಇನ್ನು ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಒಳನಾಡಿನ ಬೀದರ್‌, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳುರು, ಚಿತ್ರದುರ್ಗ, ದಾವಣಗೆರೆ, ಕೊಡಗು ಹಾಗೂ ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ವಿಜಯನಗರದ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾಗಲಿದೆ.

ಇದನ್ನೂ ಓದಿ: Physical Abuse : ಮಹಿಳೆಯರು ಚಳಿ ಬಿಡಿಸಲು ಬಂದಾಗ ಕಾಂಪೌಂಡ್‌ ಹಾರಿದ ಪುರಸಭೆ ಮಾಜಿ ಅಧ್ಯಕ್ಷೆಯ ಪತಿಗೆ ಧರ್ಮದೇಟು

ಮುಂದುವರಿದ ಮಳೆ ಅವಾಂತರ

ಕೋಲಾರದಲ್ಲಿ ಗುರುವಾರ ಸುರಿದ ದಿಢೀರ್‌ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತಗೊಂಡಿತ್ತು. ಸುಮಾರು 2-3 ಅಡಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಬೇಕಾಯಿತು. ದೊಡ್ಡ ದೊಡ್ಡ ವಾಹನಗಳು ಜಲಾವೃತಗೊಂಡ ರಸ್ತೆಯಲ್ಲೇ ಬಂದರೆ, ಬೈಕ್‌ ಸವಾರರು ತಳ್ಳಿಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂತು.

karnataka weather Forecast

ಇತ್ತ ಶಾಲಾ ‌ಮಕ್ಕಳು ಮನೆಗೆ ತೆರಳಲು ಹರಸಾಹಸ ಪಡೆಬೇಕಾಯಿತು. ಅಪಾಯವನ್ನು ಲೆಕ್ಕಿಸದೆ ಸೈಕಲ್‌ನಲ್ಲಿ ಹೋದ ಶಾಲಾ ವಿದ್ಯಾರ್ಥಿಯೊಬ್ಬ ನೀರಿನ ರಭಸಕ್ಕೆ ವಾಪಸ್‌ ಹಿಂದಕ್ಕೆ ಬಂದಿದ್ದ. ಅಂಡರ್‌ಪಾಸ್‌ನಲ್ಲಿ ನೀರು ಸರಿಯಾಗಿ ಹರಿದು ಹೋಗಲು ಆಗದ ಕಾರಣಕ್ಕೆ ಈ ಸಮಸ್ಯೆ ಆಗಿದೆ ಎಂದು ಸಾರ್ವಜನಿಕರು ಕಿಡಿಕಾರಿದರು.

karnataka weather Forecast

ಮಾವಿನ ಮಾರುಕಟ್ಟೆಗೆ ತೆರಳಲು ಇರುವ ಏಕೈಕ ಮಾರ್ಗವಿದು. ಪ್ರತಿ ಬಾರಿ ಮಳೆಯಾದರೂ ಇದೇ ಪರಿಸ್ಥಿತಿ ಎದುರಾಗುತ್ತದೆ. ಆದರೆ ಸಂಬಂಧ ಪಟ್ಟ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

Karnataka weather Forecast

ಇನ್ನೂ ರಾಜಧಾನಿ ಬೆಂಗಳೂರು ನಗರದಲ್ಲಿ ಮಳೆ ಅಬ್ಬರಕ್ಕೆ ಮರಗಳು ನೆಲಕ್ಕುರುಳಿವೆ. ಆದರೆ ಕೆಲವೆಡೆ ಮರಗಳ ತೆರವು ಕಾರ್ಯಾಚರಣೆ ನಡೆದಿಲ್ಲ. ರಸ್ತೆ ಹಾಗೂ ಫುಟ್‌ಪಾತ್‌ ಮಧ್ಯೆ ಮರದ ರೆಂಬೆ, ಕೊಂಬೆಗಳು ಬಿದ್ದಿವೆ. ಹೀಗಾಗಿ ಜನರ ಓಡಾಟ ಸೇರಿ ವ್ಯಾಪಾರಸ್ಥರು ಪರದಾಡಬೇಕಾಗಿದೆ. ಇನ್ನೂ ಜಯನಗರದಲ್ಲಿ ಮರಗಳು ಬಿದ್ದ ಕಾರಣ ವ್ಯಾಪಾರಸ್ಥರಿಗೆ ಅನಾನುಕೂಲವಾಗಿದೆ. ಬಿಬಿಎಂಪಿ‌ಯವರು ಮರ ಕತ್ತರಿಸಿ ಪಕ್ಕಕ್ಕೆ ಹಾಕಿ ಹೋಗಿದ್ದಾರೆ. ಆದರೆ ಅದನ್ನು ತೆರವು ಮಾಡದೆ ಇರುವುದರಿಂದ ವ್ಯಾಪಾರ ಮಾಡಲು ಕಷ್ಟವಾಗುತ್ತಿದೆ ಎಂದು ವೃದ್ಧೆಯೊಬ್ಬರು ಅಳಲು ತೋಡಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Valmiki Corporation Scam: ರಾಜೀನಾಮೆ ಸ್ವಯಂಪ್ರೇರಿತ, ಯಾರ ಒತ್ತಡಕ್ಕೂ ಮಣಿದಿಲ್ಲ: ಬಿ.ನಾಗೇಂದ್ರ

Valmiki Corporation Scam: ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ನಿಗಮದ ಅಧಿಕಾರಿ ಕೂಡ ನನ್ನ ಹೆಸರನ್ನು ಎಲ್ಲೂ ಪ್ರಸ್ತಾಪ ಮಾಡಿಲ್ಲ. ಆದರೂ ನಿಸ್ಪಕ್ಷಪಾತವಾಗಿ ತನಿಖೆ ನಡೆಯಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದೇನೆ ಎಂದು ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.

VISTARANEWS.COM


on

Koo

ಬೆಂಗಳೂರು: ಕಳೆದ ಹತ್ತು ದಿನಗಳಿಂದ ವಾಲ್ಮೀಕಿ ನಿಗಮ ಅಕ್ರಮದ (Valmiki Corporation Scam) ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆ ಆಗುತ್ತಿದೆ. ವಿಪಕ್ಷದವರು ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧಿಕಾರಿ ಕೂಡ ನನ್ನ ಹೆಸರನ್ನು ಎಲ್ಲೂ ಪ್ರಸ್ತಾಪ ಮಾಡಿಲ್ಲ. ನನಗೆ ಯಾರ ಒತ್ತಡಜಕ್ಕೂ ಮಣಿದಿಲ್ಲ, ನಿಸ್ಪಕ್ಷಪಾತವಾಗಿ ತನಿಖೆ ನಡೆಯಲು ಸಚಿವ ಸ್ಥಾನಕ್ಕೆ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುತ್ತಿದ್ದೇನೆ. ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ತರುವುದು ಬೇಡ ಎಂದು ಈ ನಿರ್ಧಾರ ಕೈಗೊಂಡಿರುವುದಾಗಿ ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜೀನಾಮೆ ನೀಡುವುದು ನನ್ನ ಸ್ವ ನಿರ್ಧಾರವಾಗಿದೆ. ರಾಜೀನಾಮೆ ನೀಡಲು ಯಾರೂ ಒತ್ತಡ ಹಾಕಿಲ್ಲ. ಆತ್ಮ ಸಾಕ್ಷಿಯಾಗಿ ರಾಜೀನಾಮೆ ನೀಡುತ್ತಿದ್ದೇನೆ. ಇದಕ್ಕಾಗಿ ಸಿಎಂ ಬಳಿ ಸಮಯ ಕೇಳಿದ್ದೇನೆ. 7.30ಕ್ಕೆ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ. ಈ ಬಗ್ಗೆ ನಾನು ಸಿಎಂ, ಡಿಸಿಎಂ ಹಾಗೂ ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ನಾನು ಯಾವ ತಪ್ಪೂ ಮಾಡಿಲ್ಲ, ನಾನು ನಿರ್ದೋಷಿ. ಪ್ರಕರಣದಲ್ಲಿ ತನಿಖೆ ನಡೆದು ಸತ್ಯಾಂಶ ಜನರಿಗೆ ತಿಳಿಯಲಿದೆ ಎಂದು ತಿಳಿಸಿದ್ದಾರೆ.

ರಾಜೀನಾಮೆಗೆ ಬಿಜೆಪಿ ನಾಯಕರ ಒತ್ತಾಯ

ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿ, ರಾಜ್ಯಪಾಲರಿಗೆ ಗುರುವಾರ ಬೆಳಗ್ಗೆ ಮನವಿ ಪತ್ರಸಲ್ಲಿಸಿದ್ದರು. ನಂತರ ಸಚಿವ ಸ್ವಯಂ ಪ್ರೇರಿತವಾಗಿಯೇ ರಾಜೀನಾಮೆ ನೀಡಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದರು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ.

ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಈಗಾಗಲೇ ಎಸ್‌ಐಟಿ ರಚಿಸಿದೆ. ಒಂದು ವೇಳೆ ಸಿಬಿಐ ಎಂಟ್ರಿಯಾದರೆ ಎಸ್‌ಐಟಿಗೆ ತನಿಖೆ ನಡೆಸುವ ಅವಕಾಶ ಇರಲ್ಲ. ಹೀಗಾಗಿ ಸಿಬಿಐ ತನಿಖೆ ಬಿಸಿ ತಟ್ಟುವ ಮುನ್ನ ನಾಗೇಂದ್ರ ರಾಜಿನಾಮೆ ಪಡೆಯುವುದು ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತವಾಗಿತ್ತು. ಹೀಗಾಗಿ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು. ನಂತರ ಅಧಿಕಾರಿಗಳ ಬಂಧನವಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿದೆ.

ಇದನ್ನೂ ಓದಿ | Prajwal Revanna Case: ಭವಾನಿ ರೇವಣ್ಣ ವಿರುದ್ಧ ಬಂಧನ ವಾರಂಟ್‌ ಹೊರಡಿಸಿದ ಕೋರ್ಟ್

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆಯುತ್ತಿದ್ದಾರೆ. ಶಿವಮೊಗ್ಗ ಮತ್ತು ಬೆಂಗಳೂರಿನ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Actress Hema: ರೇವ್ ಪಾರ್ಟಿಯಲ್ಲಿ ಡ್ರಗ್ಸ್​ ಸೇವಿಸಿದ ಪ್ರಕರಣ; ನಟಿ ಹೇಮಾಗೆ ಮತ್ತೆ ನ್ಯಾಯಾಂಗ ಬಂಧನ

Actress Hema: : ಗುರುವಾರ ಆನೇಕಲ್ ಕೋರ್ಟ್‌ಗೆ ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಹಾಜರುಪಡಿಸಿದ್ದರು. ಆನೇಕಲ್​ನ ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್​​ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಬುಧವಾರ ಹೇಮಾರನ್ನು ಕೋರ್ಟ್​ಗೆ ಹಾಜರುಪಡಿಸಿದ್ದ ಸಿಸಿಬಿ ಪೊಲೀಸರು ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು. ಅದಕ್ಕೆ ಸಮ್ಮತಿ ಸಿಕ್ಕಿತ್ತು.

VISTARANEWS.COM


on

Actress Hema:
Koo

ಬೆಂಗಳೂರು: ರೇವ್‌ ಪಾರ್ಟಿ ಪ್ರಕರಣದಲ್ಲಿ (Rave Party) ಬಂಧನವಾಗಿದ್ದ ತೆಲುಗು ನಟಿ ಹೇಮಾ (Actress Hema: ) ಅವರ ಸಿಸಿಬಿ ಕಸ್ಟಡಿ ಅಂತ್ಯಗೊಂಡಿದ್ದು ಮತ್ತೆ ನ್ಯಾಯಾಂಗ ಬಂಧಕ್ಕೆ ಒಪ್ಪಿಸಲಾಗಿದೆ. ನ್ಯಾಯಾಂಗ ಬಂಧನದಲ್ಲಿದ್ದ ಅವರು ಸಿಸಿಬಿ ಅಧಿಕಾರಿಗಳು ಒಂದು ದಿನದ ಕಸ್ಟಡಿಗೆ ತೆಗೆದುಕೊಂಡಿದ್ದರು. ಗುರುವಾರ ಆ ಅವಧಿ ಮುಕ್ತಾಯಗೊಂಡ ಕಾರಣ ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಈ ಹಿಂದೆ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಸಲ್ಮಾ .ಎ.ಎಸ್ ಅವರು ನಟಿ ಹೇಮಾ ಅವರನ್ನು ಜೂನ್‌ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದರು.

ಗುರುವಾರ ಆನೇಕಲ್ ಕೋರ್ಟ್‌ಗೆ ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಹಾಜರುಪಡಿಸಿದ್ದರು. ಆನೇಕಲ್​ನ ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್​​ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಬುಧವಾರ ಹೇಮಾರನ್ನು ಕೋರ್ಟ್​ಗೆ ಹಾಜರುಪಡಿಸಿದ್ದ ಸಿಸಿಬಿ ಪೊಲೀಸರು ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು. ಅದಕ್ಕೆ ಸಮ್ಮತಿ ಸಿಕ್ಕಿತ್ತು.

ಏನಿದು ಪ್ರಕರಣ

ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯ (Electronic city) ಫಾರ್ಮ್‌ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ಸೋಮವಾರ ಸಂಜೆ ನಟಿ ಹೇಮಾ ಹಾಜರಾಗಿದ್ದರು. ಈ ವೇಳೆ ಅವರನ್ನು ಅಧಿಕಾರಿಗಳು ಬಂಧಿಸಿದ್ದರು.

ರೇವ್ ಪಾರ್ಟಿಯಲ್ಲಿ ಮಾದಕ ವಸ್ತು ಸೇವಿಸಿದ ಹಿನ್ನೆಲೆಯಲ್ಲಿ ತೆಲುಗು ನಟಿ ಹೇಮಾ (Telugu actress Hema) ಅವರನ್ನು ಸಿಸಿಬಿ ಪೊಲೀಸರು ಅರೆಸ್ಟ್‌ ಮಾಡಿದ್ದರು. ಚಾಮರಾಜಪೇಟೆ ಬಳಿ ಇರುವ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾದಾಗ ಅವರನ್ನು ಬಂಧಿಸಲಾಗಿತ್ತು. ವೈದ್ಯಕೀಯ ಪರೀಕ್ಷೆ ಬಳಿಕ ರಾತ್ರಿ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಅವರ ಮುಂದೆ ನಟಿಯನ್ನು ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶೆ, ನಟಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

ಡ್ರಗ್ಸ್ ಮತ್ತು ರೇವ್ ಪಾರ್ಟಿ ಆಯೋಜನೆಯಲ್ಲಿ ನಟಿ ಪ್ರಮುಖ ಪಾತ್ರ ವಹಿಸಿದ್ದರು. ಹಾಗೆಯೇ ತಾವು ಬೇರೆ ಕಡೆ ಇರುವುದಾಗಿ ವಿಡಿಯೊ ಮಾಡಿ ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸಿದ್ದರಿಂದ ನಟಿಯನ್ನು ಬಂಧಿಸಲಾಗಿದೆ.

ನಾನೇನು ತಪ್ಪು ಮಾಡಿಲ್ಲ ಎಂದ ನಟಿ

ಕೋರ್ಟ್‌ಗೆ ಹಾಜರುಪಡಿಸುವಾಗ ನಟಿ ಹೇಮಾ ಮಾತನಾಡಿ, ನಾನೇನು ತಪ್ಪು ಮಾಡಿಲ್ಲ. ನಾನು ನಿಜವಾಗಿಯೂ ಹೈದರಾಬಾದ್‌ನಿಂದಲೇ ವಿಡಿಯೊ ಕಳುಹಿಸಿದ್ದೆ. ಬರ್ತ್ ಡೇ ಕೇಕ್ ಕಟ್ ಮಾಡಿ ಹೈದರಾಬಾದ್‌ಗೆ ಹೋಗಿಬಿಟ್ಟಿದ್ದೆ. ನಮ್ಮ ಮನೆಯಿಂದ ಬಿರಿಯಾನಿ ಮಾಡುವ ವಿಡಿಯೊ ಹಾಕಿದ್ದೆ. ನಾನು ಡ್ರಗ್ಸ್ ತೆಗೆದುಕೊಂಡಿಲ್ಲ. ಅವರು ಎಲ್ಲಾ ಟೆಸ್ಟ್‌ಗಳನ್ನು ಮಾಡಿದ್ದಾರೆ. ಸುಖಾಸುಮ್ಮನೆ ನನ್ನನ್ನು ಸಿಲುಕಿಸುವ ಕೆಲಸ ಆಗುತ್ತಿದೆ ಎಂದು ಆರೋಪಿಸಿದ್ದಾರೆ.

ಎಂಡಿಎಂಎ ಸೇವಿಸಿದ್ದ ನಟಿ

ನಟಿ ಹೇಮಾ ಯಾವ ಡ್ರಗ್ಸ್ ಸೇವಿಸಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಅವರು ಎಂಡಿಎಂಎ ಎಂಬ ಡ್ರಗ್ಸ್ ಅನ್ನು ಸೇವನೆ ಮಾಡಿದ್ದರು ಎಂದು ವರದಿ ಹೇಳುತ್ತಿದೆ. ಮಾತ್ರೆ ರೂಪದಲ್ಲಿ ಇರುವ ಈ ಡ್ರಗ್ಸ್ ಅನ್ನು ಪಾರ್ಟಿಯಲ್ಲಿ ನೀಡಲಾಗಿತ್ತು. ಹೇಮಾ ಅವರು ಈ ಎಂಡಿಎಂಎ ಮಾತ್ರೆಯನ್ನು ತೆಗೆದುಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: Prajwal Revanna : ಪ್ರಜ್ವಲ್​ ರೇವಣ್ಣ ಮತ್ತೆ ನಾಲ್ಕು ದಿನ ಎಸ್​​ಐಟಿ ಕಸ್ಟಡಿಗೆ

ಸದ್ಯ ಈ ಪಾರ್ಟಿಯನ್ನು ಆಯೋಜನೆ ಮಾಡಿರುವ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆ ಐವರನ್ನು ಈಗ ವಶಕ್ಕೆ ಪಡೆದುಕೊಳ್ಳಲು ಸಿಸಿಬಿ ಅರ್ಜಿ ಸಲ್ಲಿಸಲು ಮುಂದಾಗಿದೆ. ಅವರನ್ನು ಮತ್ತಷ್ಟು ವಿಚಾರಣೆಗೊಳಪಡಿಸಲು ಪ್ಲ್ಯಾನ್‌ ಮಾಡಿದ್ದು, ಈ ಡ್ರಗ್ಸ್‌ಗಳು ಎಲ್ಲಿಂದ ಬಂದವು? ಯಾರು ವಿತರಣೆ ಮಾಡುತ್ತಿದ್ದಾ

ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದ ತೆಲುಗು ನಟಿ ಹೇಮಾ!

ರೇವ್‌ ಪಾರ್ಟಿಗೆ ಸಂಬಂಧಪಟ್ಟಂತೆ ತೆಲುಗು ನಟಿ ಹೇಮಾ ಅವರು ಪೊಲೀಸರ ಮುಂದೆ ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದಾರೆ ಎಂಬ ಸಂಗತಿ ಗೊತ್ತಾಗಿದೆ. ನಾನು ತೆಲುಗಿನ ಫೇಮಸ್‌ ನಟಿ ಎಂದು ಹೇಳಿಕೊಂಡಿದ್ದೇ ಅವರಿಗೆ ಮುಳುವಾಗಿದೆ ಎನ್ನಲಾಗಿದೆ.

ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಅಪಾರ ಪ್ರಮಾಣದ ಮಾದಕ ವಸ್ತು ಸಿಕ್ಕಿರುವ ಕೇಸ್‌ನ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಎರಡು ದಿನ ಎಗ್ಗಿಲ್ಲದೆ ಪಾರ್ಟಿ ನಡೆದಿದೆ. ಹೀಗಾಗಿ ಆ ಜೋಶ್‌ನಲ್ಲಿದ್ದ ನಟಿ ಹೇಮಾ ಅವರು ಪೊಲೀಸರು ದಾಳಿ ಮಾಡಿದ ವೇಳೆ ತಮ್ಮ ಬಗ್ಗೆ ಹೇಳಿಕೊಂಡು ಸರಿಯಾಗಿ ಸಿಕ್ಕಿಬಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ತಾವು ದೊಡ್ಡ ಹಳ್ಳ ತೋಡಿ ಬಚಾವ್‌ ಆಗುತ್ತೇನೆ ಎಂದು ಮಾಡಿದ ಪ್ಲ್ಯಾನ್‌ ಫ್ಲಾಪ್‌ ಆಗಿದ್ದು, ಆ ಹಳ್ಳಕ್ಕೆ ಅವರೇ ಬಿದ್ದಂತೆ ಆಗಿದೆ.

Continue Reading

ಪ್ರಮುಖ ಸುದ್ದಿ

MLC Election: ವಿಧಾನ ಪರಿಷತ್ ಚುನಾವಣೆ; ಯತೀಂದ್ರ, ಸಿ.ಟಿ.ರವಿ ಸೇರಿ 11 ಅಭ್ಯರ್ಥಿಗಳ ಅವಿರೋಧ ಆಯ್ಕೆ, ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

MLC Election: ವಿಧಾನ ಪರಿಷತ್‌ ಚುನಾವಣೆಗೆ 11 ಅಭ್ಯರ್ಥಿಗಳು ಹೊರತುಪಡಿಸಿ ಯಾರೊಬ್ಬರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆ ಘೋಷಿಸಲಾಗಿದೆ.

VISTARANEWS.COM


on

ಸಿ.ಟಿ.ರವಿ, ಯತೀಂದ್ರ ಸಿದ್ದರಾಮಯ್ಯ ಮತ್ತು ಬಲ್ಕೀಸ್‌ ಬಾನು
Koo

ಬೆಂಗಳೂರು: ವಿಧಾನಪರಿಷತ್‌ ಚುನಾವಣೆಗೆ (MLC Election) ನಾಮಪತ್ರ ಸಲ್ಲಿಸಿದ್ದ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯಿಂದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಜೂನ್‌ 13ರಂದು ಮತದಾನ ನಿಗದಿಯಾಗಿತ್ತು. ಆದರೆ, 11 ಅಭ್ಯರ್ಥಿಗಳು ಹೊರತುಪಡಿಸಿ ಯಾರೊಬ್ಬರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆ ಘೋಷಿಸಲಾಗಿದೆ. ಕಾಂಗ್ರೆಸ್‌ನ 7, ಬಿಜೆಪಿಯ 3 ಹಾಗೂ ಜೆಡಿಎಸ್‌ನ ಒಬ್ಬರು ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದಾರೆ.

ವಿಧಾನ ಪರಿಷತ್‌ ನೂತನ ಸದಸ್ಯರ ಪಟ್ಟಿ (ಒಟ್ಟು 11)

ಕಾಂಗ್ರೆಸ್‌ ಸದಸ್ಯರು7
1.ಐವಾನ್‌ ಡಿಸೋಜ
2.ಕೆ.ಗೋವಿಂದರಾಜ್
3.ಜಗದೇವ ಗುತ್ತೇದಾರ್‌
4.ಬಲ್ಕೀಸ್‌ ಬಾನು
5.ಎನ್‌.ಎಸ್‌.ಭೋಸರಾಜು
6.ಡಾ.ಯತೀಂದ್ರ ಸಿದ್ದರಾಮಯ್ಯ‌,
7. ಎ. ವಸಂತ್‌ ಕುಮಾರ್

ಬಿಜೆಪಿ ಸದಸ್ಯರು-3
1.ಸಿ.ಟಿ.ರವಿ
2.ಎನ್‌.ರವಿಕುಮಾರ್
3.ಮಾರುತಿರಾವ್‌ ಮುಳೆ

ಜೆಡಿಎಸ್‌ ಸದಸ್ಯರು-1
1.ಟಿ.ಎನ್. ಜವರಾಯಿ ಗೌಡ

ಈ ಬಗ್ಗೆ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಸುತ್ತೋಲೆ ಹೊರಡಿಸಿದ್ದಾರೆ. ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ 11 ಸದಸ್ಯರನ್ನು ಆಯ್ಕೆ ಮಾಡಲು ಜೂನ್‌ 13ರಂದು ದ್ವೈವಾರ್ಷಿಕ ಚುನಾವಣೆ ನಿಗದಿಯಾಗಿತ್ತು. ಅದರಂತೆ ಜೂನ್ 3ರಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ಒಟ್ಟು 12 ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದರು. ನಾಮಪತ್ರಗಳ ಪರಿಶೀಲನೆಯ ಸಂದರ್ಭದಲ್ಲಿ ಆಸಿಫ್ ಪಾಷಾ ಆರ್.ಎಮ್. ಎಂಬುವವರ ನಾಮಪತ್ರವು ಸೂಚಕರಿಲ್ಲದ ಕಾರಣ ತಿರಸ್ಕೃತಗೊಂಡಿದ್ದು, ಉಳಿದ 11 ಜನ ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರಗೊಂಡಿದ್ದವು.

ಇದನ್ನೂ ಓದಿ | HD Kumaraswamy: ಎಚ್‌ಡಿ ಕುಮಾರಸ್ವಾಮಿ ಕೇಳಿದ ಕೃಷಿ ಖಾತೆ ಮೇಲೇ ನಿತೀಶ್‌ ಕಣ್ಣು; ಯಾರಿಗೆ ಒಲಿಯತ್ತೆ ಇಲಾಖೆ?

ಜೂನ್ 6 ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿತ್ತು, ಯಾರು ನಾಮಪತ್ರ ಹಿಂಪಡೆದಿದಿಲ್ಲ. ಹೀಗಾಗಿ ಭರ್ತಿ ಮಾಡಬೇಕಾದ 11 ಸ್ಥಾನಗಳಿಗೆ 11 ಜನ ಅಭ್ಯರ್ಥಿಗಳು ಮಾತ್ರ ಅಂತಿಮವಾಗಿ ಕಣದಲ್ಲಿದ್ದರು. ಹೀಗಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಐವಾನ್ ಡಿಸೋಜಾ, ಕೆ. ಗೋವಿಂದರಾಜ್, ಜಗದೇವ ಗುತ್ತೇದಾರ್, ಬಲ್ಕೀಸ್ ಬಾನು, ಯತೀಂದ್ರ ಎಸ್. ಎ. ವಸಂತ ಕುಮಾರ, ಭಾರತೀಯ ಜನತಾ ಪಾರ್ಟಿಯ ಮಾರುತಿರಾವ್ ಮುಳೆ , ಸಿ.ಟಿ. ರವಿ,ರವಿಕುಮಾರ. ಎನ್ ಹಾಗೂ ಜನತಾದಳ(ಜಾ) ಪಕ್ಷದ ಟಿ.ಎನ್. ಜವರಾಯಿ ಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆಂದು ಘೋಷಿಸಿದ್ದಾರೆ.

Continue Reading
Advertisement
Karnataka weather Forecast
ಮಳೆ4 mins ago

Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ

Kangana Ranaut
ಪ್ರಮುಖ ಸುದ್ದಿ12 mins ago

Kangana Ranaut : ರೈತ ವಿರೋಧಿ ಹೇಳಿಕೆ ನೀಡಿದ್ದಕ್ಕೆ ಕೋಪ;​ ನಟಿ, ಸಂಸದೆ ಕಂಗನಾ ರಣಾವತ್​ಗೆ ಏರ್​ಪೋರ್ಟ್​ ಭದ್ರತಾ ಸಿಬ್ಬಂದಿಯಿಂದಲೇ ಕಪಾಳಮೋಕ್ಷ

ಕರ್ನಾಟಕ28 mins ago

Valmiki Corporation Scam: ರಾಜೀನಾಮೆ ಸ್ವಯಂಪ್ರೇರಿತ, ಯಾರ ಒತ್ತಡಕ್ಕೂ ಮಣಿದಿಲ್ಲ: ಬಿ.ನಾಗೇಂದ್ರ

Parachute Pants Fashion
ಫ್ಯಾಷನ್33 mins ago

Parachute Pants Fashion: ಪ್ಯಾರಾಶೂಟ್‌ ಪ್ಯಾಂಟ್ಸ್; ಟೀನೇಜ್‌ ಹುಡುಗಿಯರ ಹೊಸ ಟ್ರೆಂಡ್‌!

Actress Hema:
ಪ್ರಮುಖ ಸುದ್ದಿ34 mins ago

Actress Hema: ರೇವ್ ಪಾರ್ಟಿಯಲ್ಲಿ ಡ್ರಗ್ಸ್​ ಸೇವಿಸಿದ ಪ್ರಕರಣ; ನಟಿ ಹೇಮಾಗೆ ಮತ್ತೆ ನ್ಯಾಯಾಂಗ ಬಂಧನ

Money Guide
ಮನಿ-ಗೈಡ್52 mins ago

Money Guide: ಈ ಯೋಜನೆಯಲ್ಲಿ ಪ್ರತಿ ತಿಂಗಳು 3,475 ರೂ. ಹೂಡಿಕೆ ಮಾಡಿ 1 ಲಕ್ಷ ರೂ. ಮಾಸಿಕ ಪಿಂಚಣಿ ಪಡೆಯಿರಿ

Kangana Ranaut leaves for Delhi in pretty purple saree
ಬಾಲಿವುಡ್59 mins ago

Kangana Ranaut: ನೇರಳೆ ಬಣ್ಣದ ಸೀರೆಯುಟ್ಟು ದೆಹಲಿಗೆ ಹೊರಟ ಕಂಗನಾ ರಣಾವತ್!

Uric Acid
ಆರೋಗ್ಯ1 hour ago

Uric Acid: ಆರೋಗ್ಯ ಹದಗೆಡಿಸುವ ಯೂರಿಕ್ ಆಮ್ಲವನ್ನು ನಿಯಂತ್ರಿಸುವ ನೈಸರ್ಗಿಕ ವಿಧಾನಗಳಿವು

IND vs PAK T20 Match
ಕ್ರಿಕೆಟ್1 hour ago

IND vs PAK T20 Match: 10 ಸೆಕೆಂಡ್‌ ಜಾಹೀರಾತಿಗೆ ಕನಿಷ್ಠ 50 ಲಕ್ಷ ನಿಗದಿ!

ಪ್ರಮುಖ ಸುದ್ದಿ1 hour ago

MLC Election: ವಿಧಾನ ಪರಿಷತ್ ಚುನಾವಣೆ; ಯತೀಂದ್ರ, ಸಿ.ಟಿ.ರವಿ ಸೇರಿ 11 ಅಭ್ಯರ್ಥಿಗಳ ಅವಿರೋಧ ಆಯ್ಕೆ, ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌