Power Point with HPK : ಕೆಜಿ ಹಳ್ಳಿ ಗಲಭೆ ಕೇಸ್‌ ವಾಪಸ್‌ ಹಿಂದೆ ಸಿಎಂ ಸಿದ್ದರಾಮಯ್ಯ: ಆರಗ ಜ್ಞಾನೇಂದ್ರ - Vistara News

ಕರ್ನಾಟಕ

Power Point with HPK : ಕೆಜಿ ಹಳ್ಳಿ ಗಲಭೆ ಕೇಸ್‌ ವಾಪಸ್‌ ಹಿಂದೆ ಸಿಎಂ ಸಿದ್ದರಾಮಯ್ಯ: ಆರಗ ಜ್ಞಾನೇಂದ್ರ

Power Point with HPK : ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ ಅವರು ನಡೆಸಿಕೊಡುವ “ಪವರ್‌ ಪಾಯಿಂಟ್‌ ವಿತ್‌ ಎಚ್‌ಪಿಕೆ” ವಿಶೇಷ ಸಂದರ್ಶನದಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣವನ್ನು ಕೈಬಿಡುವ ಹುನ್ನಾರ ನಡೆಯುತ್ತಿದ್ದು, ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾರೆ ಎಂದು ದೂರಿದ್ದಾರೆ.

VISTARANEWS.COM


on

Araga Gyanendra in Power Point with HPK
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ (KG Halli and DJ Halli riot cases) ಆರೋಪಿಗಳನ್ನು ಬಿಡುಗಡೆ ಮಾಡಲು ರಾಜ್ಯ ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ. ಇದು ಈಗ ಶಾಸಕ ತನ್ವೀರ್‌ ಸೇಠ್‌ (MLA Tanveer Sait) ಬರೆದಿರುವ ಪತ್ರವು ಈ ಸರ್ಕಾರದ ಪ್ರೀ ಪ್ಲ್ಯಾನ್ ಆಗಿದೆ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಇದ್ದಾರೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ (Former Home Minister Araga Jnanendra) ಅವರು ಪವರ್‌ ಪಾಯಿಂಟ್‌ ವಿತ್ ಎಚ್‌ಪಿಕೆ (Power Point with HPK) ಸಂದರ್ಶನದಲ್ಲಿ ಗುಡುಗಿದ್ದಾರೆ.

ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ (Hariprakash Konemane) ಅವರು ನಡೆಸಿಕೊಡುವ “ಪವರ್‌ ಪಾಯಿಂಟ್‌ ವಿತ್‌ ಎಚ್‌ಪಿಕೆ” ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಈ ಪ್ರಕರಣದಲ್ಲಿ ಬಂಧಿತರಾದವರು “ಅಮಾಯಕರು” ಎಂದು ಕೇವಲ ಶಾಸಕ ತನ್ವೀರ್‌ ಸೇಠ್‌ ಪತ್ರ ಬರೆಯಲಿಲ್ಲ. ಗೃಹ ಸಚಿವ ಪರಮೇಶ್ವರ್‌ ಅದಕ್ಕೆ ಕ್ರಮ ವಹಿಸಿ ಎಂದು ಪೊಲೀಸ್‌ ಅಧಿಕಾರಿಗಳಿಗೆ ಹೇಳಲಿಲ್ಲ. ನೀನು ಪತ್ರ ಬರಿ ಎಂದು ತನ್ವೀರ್‌ ಸೇಠ್‌ ಅವರಿಗೆ ಹೇಳಿಸಿ, ಗೃಹ ಸಚಿವರಿಂದ ಕ್ರಮವಹಿಸಲು ಆದೇಶ ನೀಡಿಸಲಾಗಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಂತ್ರದ ಭಾಗವಾಗಿದೆ ಎಂದು ಆರೋಪ ಮಾಡಿದರು.

ಇದನ್ನೂ ಓದಿ: Karnataka Politics : ಸಚಿವರ ವಿರುದ್ಧದ ಪತ್ರಕ್ಕೆ ಕ್ಷಮೆ ಕೇಳಿಲ್ಲ, ಕೇಳೋದೂ ಇಲ್ಲ: ಬಿ.ಆರ್.‌ ಪಾಟೀಲ್

ಇದು ಬಹಳ ದುರದೃಷ್ಟಕರ ಸಂಗತಿಯಾಗಿದೆ. ತಮ್ಮ ವೋಟ್‌ ಬ್ಯಾಂಕ್‌ ಎಂಬ ಕಾರಣಕ್ಕೆ ಈ ರೀತಿ ಮಾಡುತ್ತಿದ್ದಾರೆ. ಈ ಪ್ರಕರಣವನ್ನು ನಾವು ಎನ್‌ಐಎಗೆ ವಹಿಸಿದ್ದೇವೆ. ಪ್ರತಿಯೊಬ್ಬರ ಮೇಲೆ ಚಾರ್ಜ್‌ಶೀಟ್‌ ಆಗಿದೆ. ಎನ್‌ಐಎ ಈ ಪ್ರಕರಣವನ್ನು ಈಗ ಮುನ್ನಡೆಸುತ್ತಿದೆ. ನನಗೆ ಗೊತ್ತಿರುವಂತೆ ಈ ಪ್ರಕರಣವನ್ನು ವಾಪಸ್‌ ಪಡೆಯಲು ಬರುವುದಿಲ್ಲ. ಆದರೆ, ಈ ಪ್ರಕರಣದಲ್ಲಿರುವವರನ್ನು ಇವರು ಯಾವುದಾದರೂ ಒಂದು ಮಾರ್ಗದಲ್ಲಿ ವಾಪಸ್‌ ಕರೆತರುವ ಸಾಧ್ಯತೆ ಇದೆಯೋ ಇಲ್ಲವೋ ನನಗೆ ಗೊತ್ತಿಲ್ಲ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.

ಸರ್ಕಾರದ ಈ ಕ್ರಮಕ್ಕೆ ಏನರ್ಥ?

ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣವು ಮೀಡಿಯಾದಲ್ಲಿ ಬಿತ್ತರವಾಗಿದೆ. ಅಂದು ಅರ್ಧ ಬೆಂಗಳೂರು ಹೊತ್ತಿ ಉರಿಯಿತು. ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದ್ದರು. ಕಾಂಗ್ರೆಸ್‌ನ ಒಬ್ಬ ದಲಿತ ಶಾಸಕನ ಮನೆಗೆ ಬೆಂಕಿ ಇಡಲಾಯಿತು. ಅವರು ಅಂದು ಯಾವ ರೀತಿ ತಪ್ಪಿಸಿಕೊಂಡರು ಎಂಬುದು ಎಲ್ಲರಿಗೂ ಗೊತ್ತಿದೆ. ಅವರು ಅಂದು ಉಟ್ಟ ಬಟ್ಟೆಯಲ್ಲಿ ಓಡಿ ಹೋಗಿ ಜೀವ ಉಳಿಸಿಕೊಂಡಿದ್ದರು. ಇಂಥ ಒಂದು ಭಯಾನಕವಾದ ಪರಿಸ್ಥಿತಿಯನ್ನು ನೋಡಿಯೂ ಸಹ ಶಾಸಕ ತನ್ವೀರ್‌ ಸೇಠ್‌ ಅವರು ಬಂಧಿತರಾದವರು ಅಮಾಯಕರು ಎಂದು ಪತ್ರ ಬರೆಯುತ್ತಾರೆ. ಅದಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರು ಇದನ್ನು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡುತ್ತಾರೆ ಎಂದರೆ ಏನರ್ಥ? ಮಂತ್ರಿಯೊಬ್ಬರು ಬರೆಯುವ ಒಂದೊಂದು ಶಬ್ದಕ್ಕೆ ಅರ್ಥ ಇರುತ್ತದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

ಈ ಪ್ರಕರಣದಲ್ಲಿ ಒಬ್ಬರೇ ಒಬ್ಬ ಅಮಾಯಕರಿದ್ದರೆ ಜನರು ಹೇಳಲಿ. ಅಂದು ನಡೆದ ವಿಡಿಯೊ ನೋಡಿದರೇ ಎಲ್ಲರಿಗೂ ತಿಳಿಯುತ್ತದೆ. ಅಂದು ನಡೆದ ಘಟನಾವಳಿಯ ವಿಡಿಯೊ ಚಿತ್ರೀಕರಣವನ್ನು ಇಟ್ಟುಕೊಂಡು ಅದರಲ್ಲಿ ಕಂಡುಬಂದವರನ್ನು ಕರೆಸಿ ಅವರ ಬಳಿಯೇ ಕೇಳಿದ್ದೇವೆ. ಅಲ್ಲಿರುವುದು, ಕಲ್ಲು ಹೊಡೆದಿರುವುದು ತಾವೇ ಎಂದು ಆರೋಪಿಗಳು ಬಾಯಿ ಬಿಟ್ಟ ಬಳಿಕವೇ ನಾವು ಅಂಥವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಆದರೆ, ಈ ಸರ್ಕಾರ ಬಂದ ಮೇಲೆ ಅಪರಾಧ ಕೃತ್ಯ ಮಾಡಿದವರಿಗೆ ಬಿಡುಗಡೆ ಮಾಡಲಾಗುತ್ತದೆ ಎಂಬ “ಗ್ಯಾರಂಟಿ” ಸಿಗುತ್ತಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

ದಲಿತ ಶಾಸಕನ ಜೀವಂತ ಸಮಾಧಿಗೆ ನಡೆದಿತ್ತು ಪ್ಲ್ಯಾನ್!‌

ಈ ಘಟನೆಯನ್ನು ಸಂಘಟಿತವಾಗಿ ಮಾಡಿದ್ದು, ದಲಿತ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರನ್ನು ಹಾಗೂ ಕುಟುಂಬವನ್ನು ಜೀವಂತವಾಗಿ ಸುಟ್ಟುಹಾಕುವ ಹುನ್ನಾರ ಇತ್ತು. ಸುದೈವ ವಶಾತ್‌ ಪೊಲೀಸರು ಅವರ ಮನೆಗೆ ನುಗ್ಗಿ ರಕ್ಷಣೆ ಮಾಡಿದರು. ಇಲ್ಲದಿದ್ದರೆ ಈ ಪ್ರಕರಣ ನಿಯಂತ್ರಣಕ್ಕೆ ತಕ್ಷಣ ಬರುತ್ತಿರಲಿಲ್ಲ. ಗಲಭೆಕೋರರು ಪೊಲೀಸರು ಬಾರದಂತೆ ತಡೆಯೊಡ್ಡಿದ್ದರು. ಈ ಎಲ್ಲವೂ ಇದಕ್ಕೆ ಪುಷ್ಟಿ ನೀಡುತ್ತದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

ಇಂಥ ಗಲಭೆಗಳು ಪ್ರತಿ ಊರಿನಲ್ಲಿಯೂ ನಡೆಯಬಹುದು

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣವು ಒಂದು ವ್ಯವಸ್ಥಿತ, ಸಂಘಟಿತ ಪಿತೂರಿಯಾಗಿದೆ. ಈ ಕೃತ್ಯಕ್ಕೆ ಮುಂಚೆ ಅವರು ದೂರವಾಣಿ ಸಂಭಾಷಣೆಯಲ್ಲಿ ತೊಡಗಿರುವುದರ ಬಗ್ಗೆ ನ್ಯಾಯಾಲಯದಲ್ಲಿಯೂ ದಾಖಲೆ ಸಲ್ಲಿಕೆಯಾಗಿದೆ. ತಮ್ಮ ವಿರುದ್ಧ ಹೆಚ್ಚುಕಡಿಮೆಯಾದರೆ ನಾವು ಏನು ಎಂಬುದನ್ನು ತೋರಿಸಬೇಕು ಎಂದು ನಡೆದಿದ್ದ ಕೃತ್ಯ ಅದಾಗಿತ್ತು. ಹಾಗಾಗಿ ಮುಂದೆ ಈ ರೀತಿ ಆಗಬಾರದು ಎಂಬ ಕಾರಣಕ್ಕಾಗಿ ಇಂಥವರನ್ನು ಎಷ್ಟು ಮಟ್ಟ ಹಾಕಬೇಕೋ ಆ ಕೆಲಸವನ್ನು ನಾವು ಮಾಡಿದ್ದೇವೆ. ಆದರೆ, ಈಗ ಈ ಸರ್ಕಾರ ಮಾಡುತ್ತಿರುವ ರೀತಿಯನ್ನು ನೋಡಿದರೆ, ಇಂಥ ಗಲಭೆಗಳು ಪ್ರತಿ ಊರಿನಲ್ಲಿಯೂ ನಡೆಯಬಹುದು ಎಂದು ಆರಗ ಹೇಳಿದರು.

ಹರಿಪ್ರಕಾಶ್‌ ಕೋಣೆಮನೆ ಅವರೊಂದಿಗೆ ಆರಗ ಜ್ಞಾನೇಂದ್ರ ಅವರ ನೇರ ಮಾತು; ವಿಡಿಯೊ ಇಲ್ಲಿದೆ

ನಾವು ಕೈಬಿಟ್ಟಿದ್ದೇ ಬೇರೆ ಪ್ರಕರಣಗಳು

ಎಲ್ಲ ಸರ್ಕಾರಗಳೂ ಪ್ರಕರಣವನ್ನು ಕೈಬಿಡುತ್ತವೆ. ಆದರೆ, ಕೈಬಿಟ್ಟಿರುವ ಪ್ರಕರಣ ಯಾವುದು ಎಂಬುದನ್ನು ನೋಡಬೇಕು. ಸಿದ್ದರಾಮಯ್ಯ ಅವರ ಈ ಹಿಂದಿನ ಸರ್ಕಾರ ಅಧಿಕಾರಕ್ಕೆ ಮೊದಲ ಕ್ಯಾಬಿನೆಟ್‌ನಲ್ಲಿ ಪಿಎಫ್‌ಐ ಸಂಘಟನೆಯವರ ಮೇಲಿದ್ದ ಕೇಸ್‌ ಅನ್ನು ವಾಪಸ್‌ ಪಡೆಯಿತು. ಈಗ ಹೀಗೆ ಮಾಡುತ್ತಿದೆ. ಆದರೆ, ನಮ್ಮ ಸರ್ಕಾರ ಇದ್ದಾಗ ಕನ್ನಡ ಪರ ಸಂಘಟನೆಯವರ ಮೇಲಿನ ಕೇಸ್‌, ಗಣಪತಿ ಉತ್ಸವದಲ್ಲಿ ಡಿಜೆ ಹಾಕಿದವರ ಮೇಲೆ ಹಾಕಿದಂತಹ ಕೇಸ್‌ಗಳನ್ನು ವಾಪಸ್‌ ಪಡೆದಿದ್ದೇವೆ. ಅದು ಬಿಟ್ಟು ಹೀಗೆ ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದವರನ್ನು, ಸಾರ್ವಜನಿಕರ ಆಸ್ತಿ ಪಾಸ್ತಿಯನ್ನು ಹಾನಿ ಮಾಡಿದವರ ಮೇಲಿನ ಕೇಸ್‌ ಅನ್ನು ನಾವು ವಾಪಸ್‌ ಪಡೆದಿಲ್ಲ ಎಂದು ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದರು.

ಬಿಜೆಪಿ ಉಗ್ರ ಹೋರಾಟ ಮಾಡುತ್ತದೆ

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಕೇಸಲ್ಲಿ ಒಬ್ಬನನ್ನು ಕೈಬಿಟ್ಟರೂ ಬೇರೆಯ ಸಂದೇಶವೇ ಹೋಗುತ್ತದೆ. ಒಂದು ಮನೆಗೆ, ಪೊಲೀಸ್‌ ಠಾಣೆಗೆ, ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಇದು ಅಪರಾಧಿ ಕೃತ್ಯ ಮಾಡುವವರಿಗೆ ಬೇರೆ ಸಂದೇಶವನ್ನು ಕೊಟ್ಟಂತೆ ಆಗುತ್ತದೆ. ಈ ಸಂಬಂಧ ಬಿಜೆಪಿ ಈಗಾಗಲೇ ಪ್ರತಿಭಟನೆ ನಡೆಸಿದೆ. ಮತ್ತೂ ಹೋರಾಟ ಮುಂದುವರಿಯಲಿದೆ. ಈ ಪ್ರಕರಣದಲ್ಲಿ ಸಂತ್ರಸ್ತರಾಗಿದ್ದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಗೆ ಘಟನೆ ನಡೆದು ಮೂರ್ನಾಲ್ಕು ದಿನವಾದರೂ ಯಾವುದೇ ಒಬ್ಬ ಕಾಂಗ್ರೆಸ್‌ ನಾಯಕರು ಹೋಗಿಲ್ಲ. ಇದರ ಅರ್ಥ ಏನು? ಇಷ್ಟೆಲ್ಲ ಘಟನೆ ನಡೆದ ಮೇಲೆಯೂ ಮುಸ್ಲಿಂ ಸಮುದಾಯದ ಓಲೈಕೆ, ತುಷ್ಟೀಕರಣಕ್ಕೆ ಇವರು ಮುಂದಾಗಿರುವುದು ಎಷ್ಟು ಸರಿ? ಎಂದು ಆರಗ ಜ್ಞಾನೇಂದ್ರ ಪ್ರಶ್ನೆ ಮಾಡಿದರು.

ಪೊಲೀಸ್‌ ಇಂಟಲಿಜೆನ್ಸ್‌ಗೆ ವಿಶೇಷ ತರಬೇತಿ ಬೇಕು!

ಎಲ್ಲಿಯೂ ಸಲ್ಲದವನು ಇಂಟೆಲಿಜೆನ್ಸಿಯಲ್ಲಿರುತ್ತಾನೆ. ಟ್ರಾನ್ಸ್‌ಫರ್‌ ಮಾಡಿಸಿಕೊಳ್ಳಲು ಶಕ್ತಿ ಇಲ್ಲದವರು ಅನೇಕರು ಅಲ್ಲಿಗೆ ಹೋಗುತ್ತಾರೆ. ಎಲ್ಲರೂ ಹಾಗೇ ಎಂದು ನಾನು ಹೇಳುವುದಿಲ್ಲ. ಕೆಲವರು ಇಲ್ಲಿ ಸಮರ್ಥರೂ ಇರುತ್ತಾರೆ. ಆದರೆ, ಅವರು ಎಷ್ಟರಮಟ್ಟಿಗೆ ಮಾಹಿತಿಯನ್ನು ಸಂಗ್ರಹಿಸಬಹುದೋ ಅಷ್ಟನ್ನು ಸಂಗ್ರಹ ಮಾಡುತ್ತಾರೆ. ಹೀಗಾಗಿ ಇಲ್ಲಿ ಸಂಘಟನಾ ಪ್ರಯತ್ನ ಬೇಕು. ಈ ವ್ಯವಸ್ಥೆಯನ್ನು ಪುನರ್‌ ಬಲಪಡಿಸುವ ಕೆಲಸ ಮಾಡಬೇಕಿದೆ. ಇಲ್ಲಿ ದುಡಿಯುವ ಅಪೇಕ್ಷೆ ಇದ್ದವನನ್ನು ಅಲ್ಲಿಗೆ ಹಾಕಬೇಕು ಎಂಬುವವರನ್ನು ಅಲ್ಲಿಗೆ ನೇಮಕ ಮಾಡಬೇಕು. ಕೆಲವರಿಗೆ ಇಂಟೆಲಿಜನ್ಸ್‌ ಪೊಲೀಸ್‌ ನೌಕರಿಯೇ ಅಲ್ಲ, ಪೊಲೀಸ್‌ ಸಮವಸ್ತ್ರ ಹಾಕಿದರೆ ಮಾತ್ರವೇ ಅದು ಉದ್ಯೋಗ ಎಂಬ ಭಾವನೆ ಇದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

ಇದನ್ನೂ ಓದಿ: Pradeep Eshwar : ಆಟೋ ಡ್ರೈವರ್‌ ಆದ ಪ್ರದೀಪ್‌ ಈಶ್ವರ್;‌ ಪ್ರತಿ ವರ್ಷ 5000 ಧನಸಹಾಯ!

ಪೊಲೀಸ್‌ ಇಂಟಲಿಜೆನ್ಸ್‌ಗೆ ಪ್ರತ್ಯೇಕವಾದ ಘಟಕವನ್ನು ಮಾಡಬೇಕು. ಅವರಿಗೆ ವಿಶೇಷವಾದ ತರಬೇತಿ ಕೊಡಬೇಕಿದೆ. ಉದಾಹರಣೆಗೆ ಕೇಂದ್ರ ಸರ್ಕಾರದಲ್ಲಿನ ಎನ್‌ಐಎ ಸೇರಿದಂತೆ ಇತರ ಘಟಕಗಳಿಗೆ ನೀಡುವ ವಿಶೇಷ ತರಬೇತಿಯಂತೆ ಇವರಿಗೂ ಪರಿಣಿತಿ ಸಾಧಿಸಲು ಟ್ರೈನಿಂಗ್‌ ಕೊಡಬೇಕಿದೆ. ಆಗ ಕೆಜಿ ಹಳ್ಳಿ, ಡಿಜೆ ಹಳ್ಳಿಯಂತಹ ಘಟನೆಗಳನ್ನು ತಪ್ಪಿಸಬಹುದು ಎಂದು ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Electric shock : ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

Electric shock : ಭಾರಿ ಮಳೆ ಗಾಳಿಗೆ (Karnataka rain) ವಿದ್ಯುತ್‌ ತಂತಿ ತುಂಡಾಗಿ ಬಿದ್ದಿದ್ದು, ಇದನ್ನು ಗಮನಿಸದೆ ವ್ಯಕ್ತಿಯೊಬ್ಬರು ವಿದ್ಯುತ್‌ ತಂತಿ ತುಳಿದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು, ಮೆಸ್ಕಾಂ ಸಿಬ್ಬಂದಿ ದೌಡಾಯಿಸಿದ್ದಾರೆ.

VISTARANEWS.COM


on

By

Electric shock in udupi
Koo

ಉಡುಪಿ: ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ (Electric shock) ಮೃತಪಟ್ಟಿದ್ದಾರೆ. ಇರ್ಷಾದ್ (56) ಮೃತ ದುರ್ದೈವಿ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ಘಟನೆ ನಡೆದಿದೆ.

ಮನೆಯಿಂದ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆ (Rain News) ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ವಿದ್ಯುತ್ ತಂತಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸದ ಇರ್ಷಾದ್ ತುಳಿದಿದ್ದಾರೆ. ಕ್ಷಣಾರ್ಧದಲ್ಲೇ ಇರ್ಷಾದ್‌ ಶಾಕ್‌ನಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಮತ್ತು ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇನ್ನೂ ತುಂಡಾಗಿದ್ದ ವಿದ್ಯುತ್ ತಂತಿಯನ್ನು ಸರಿಪಡಿಸುವ ಕಾರ್ಯದಲ್ಲಿ ಮೆಸ್ಕಾಂ ಸಿಬ್ಬಂದಿ ತೊಡಗಿದ್ದಾರೆ.

ಇದನ್ನೂ ಓದಿ: Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

ಚೆಂಡೆಂದು ಭಾವಿಸಿ ಬಾಂಬ್‌ ಎತ್ತಿಕೊಂಡ ಮದರಸಾ ವಿದ್ಯಾರ್ಥಿ; ಸ್ಫೋಟಕ್ಕೆ ಮೌಲಾನಾ ಸಾವು

ಪಾಟ್ನಾ:ಲೋಕಸಭೆ ಚುನಾವಣೆ(Lok Sabha Election 2024)ಗೆ ಇನ್ನೇನು ಕೆಲವೇ ದಿನಗಳ ಬಾಕಿ ಉಳಿದಿರುವಗಲೇ ಬಿಹಾರ(Bihar)ದಲ್ಲಿ ಬಾಂಬ್‌ ಸ್ಫೋಟ(Bomb blast)ಗೊಂಡಿದ್ದು, ಮೌಲಾನ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅಪ್ರಾಪ್ತ ಬಾಲಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಸರನ್‌ ಜಿಲ್ಲೆಯ ಮದರಸಾವೊಂದರಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೌಲಾನ ಮೌಲಾನಾ ಇಮಾಮುದ್ದೀನ್ ಮತ್ತು ವಿದ್ಯಾರ್ಥಿ ನೂರ್ ಆಲಂ (15) ಗಾಯಗೊಂಡಿದ್ದರು. ಇವರಿಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಇಮಾಮುದ್ದೀನ್‌ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಘಟನೆ ವಿವರ:

ಬುಧವಾರ ತಡರಾತ್ರಿ ಸರನ್‌ನ ಓಲ್ಹಾನ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮದರಸಾದ ಎದುರು ಬಿದ್ದಿದ್ದ ಚೆಂಡಿನಂತಹ ವಸ್ತುವನ್ನು ಚೆಂಡೆಂದು ಭಾವಿಸಿ ಆಲಂ ಮದರಸಾದೊಳಗೆ ಕೊಂಡೊಯ್ದಿದ್ದಾನೆ. ಮೌಲಾನಾ ಆ ವಸ್ತುವನ್ನು ನೋಡಿದ್ದರು. ಅವರು ಆಲಂನಿಂದ ಅದನ್ನು ತೆಗೆದುಕೊಂಡು ಅದನ್ನು ಬಾಂಬ್ ಎಂದು ಶಂಕಿಸಿ ಎಸೆದರು. ವಸ್ತು ಸ್ಫೋಟಗೊಂಡು ಇಬ್ಬರಿಗೂ ಗಾಯಗಳಾಗಿವೆ.  ಘಟನೆಯಲ್ಲಿ ಇಮಾಮುದ್ದೀನ್‌ ಮತ್ತು ಆಲಂ ಗಂಭೀರವಾಗಿ ಗಾಯಗೊಂಡಿದ್ದ ಇವರಿಬ್ಬರನ್ನೂ ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿತ್ತು.

ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾದರಿಗಳನ್ನು ಸಂಗ್ರಹಿಸಿದೆ. ನಾವು ಅವರ ವರದಿಯನ್ನು ಪಡೆದ ನಂತರ, ವಸ್ತುವು ಬಾಂಬ್ ಅಥವಾ ಪಟಾಕಿಯೇ ಎನ್ನುವುದನ್ನು ಖಚಿತವಾಗಿ ಹೇಳಬಹುದು ಎಂದು ಸರನ್ ಎಸ್ಪಿ ಗೌರವ್ ಮಂಗಳಾ ತಿಳಿಸಿದ್ದಾರೆ. ಇನ್ನು ಪ್ರಕರಣದ ವಿಚಾರ ರಾಜ್ಯದಲ್ಲಿ ಸುದ್ದಿಯಾಗುತ್ತಿದ್ದಂತೆ ಪೊಲೀಸರು ಪ್ರಕರಣವನ್ನು ಕೂಲಂಕಷ ತನಿಖೆ ಮಾಡಲು ನಿರ್ಧಾರ ಮಾಡಿದ್ದಾರೆ. ಶುಕ್ರವಾರದ ವೇಳೆ ಬ್ಲಾಸ್ಟ್‌ನಲ್ಲಿ ಗಾಯಗೊಂಡವರು ಇಬ್ಬರು ವ್ಯಕ್ತಿಗಳು ಎಂದು ತಿಳಿಸಲಾಗಿದೆ.  ಎಸ್ಪಿ ಗೌರವ್ ಮಂಗಳಾ ನೀಡಿರುವ ಮಾಹಿತಿಯ ಪ್ರಕಾರ, ಪ್ರಕರಣದ ನಡೆದ ಬಳಿಕ ಸ್ಥಳೀಯ ಜನರು ಸಾಕ್ಷ್ಯವನ್ನು ನಾಶ ಮಾಡಿದ್ದರಿಂದ ಇಲ್ಲಿ ಬ್ಲಾಸ್ಟ್‌ ಆದ ವಸ್ತು ಯಾವುದು ಅನ್ನೋದರ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ತಿಳಿಸಿದ್ದಾರೆ.

ಮದರಸಾದಲ್ಲಿ ಸ್ಫೋಟದ ನಂತರ, ಎಫ್‌ಎಸ್‌ಎಲ್ ತಂಡ ತನಿಖೆ ಆರಂಭಿಸಿದೆ. ಸ್ಫೋಟದ ಹಿಂದಿನ ನಿಜವಾದ ಕಾರಣ ಇನ್ನೂ ಬಹಿರಂಗವಾಗಿಲ್ಲ. ಸ್ಫೋಟದ ಹಿಂದೆ ಬಾಂಬ್ ಇದೆಯೇ ಅಥವಾ ಪಟಾಕಿಯಿಂದ ಸ್ಫೋಟ ಸಂಭವಿಸಿದೆಯೇ ಎಂಬುದು ಇಲ್ಲಿಯವರೆಗೆ ಸ್ಪಷ್ಟವಾಗಿಲ್ಲ. ಆದರೆ ಈ ಘಟನೆಯ ನಂತರ ಮದರಸಾದಲ್ಲಿ ಯಾರೂ ಪತ್ತೆಯಾಗಿಲ್ಲ. ಘಟನೆಗೂ ಮುನ್ನ ಮದರಸಾದಲ್ಲಿ 12 ಮಕ್ಕಳು ಓದುತ್ತಿದ್ದರು. ಘಟನೆಯ ನಂತರ ಸ್ಥಳವನ್ನು ತೊಳೆಯಲಾಗಿದೆ. ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸುವ ಯತ್ನ ನಡೆದಿದೆ ಎಂಬ ಆರೋಪಗಳಿವೆ ಎನ್ನಲಾಗಿದೆ. ಸ್ಫೋಟದ ನಂತರ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಬಿಹಾರದ ಮದರಸಾಗಳು ಭಯೋತ್ಪಾದನೆಯ ಗೂಡು ಎಂಬುದನ್ನು ಚಾಪ್ರಾ ಘಟನೆ ಸಾಬೀತುಪಡಿಸಿದೆ ಎಂದು ಹೇಳಿದ್ದಾರೆ. ಬಿಹಾರದ ಮದರಸಾಗಳು ಭಯೋತ್ಪಾದಕರ ತಾಣಗಳಾಗಿವೆ ಎಂದು ನಾವು ಮೊದಲೇ ಹೇಳಿದ್ದೆವು ಎಂದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Anjali Murder Case: ಅಂಜಲಿ ಹತ್ಯೆ ಪ್ರಕರಣ; ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

Anjali Murder Case: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ ಮನನೊಂದು ಫಿನಾಯಿಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಯಶೋದಾ ಅವರ ಅಜ್ಜಿ ಗಂಗಮ್ಮ, ʼʼಅಕ್ಕನ ಕೊಲೆಯಿಂದ ಮಾನಸಿಕವಾಗಿ ನೊಂದಿದ್ದ ಯಶೋದಾ ಶನಿವಾರ ರಾತ್ರಿ ಫಿನಾಯಿಲ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಳು. ಅಸ್ವಸ್ಥಳಾಗಿದ್ದ ಅವಳನ್ನು ಕೂಡಲೇ ಕಿಮ್ಸ್​ (KIMS) ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಯಶೋದಾ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಜತೆಗೆ ಚಿಕಿತ್ಸೆ ಮುಂದುವರಿದಿದೆʼʼ ಎಂದು ವಿವರಿಸಿದ್ದಾರೆ.

VISTARANEWS.COM


on

Anjali Murder Case
Koo

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ (Anjali Murder Case) ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ ಮನನೊಂದು ಫಿನಾಯಿಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಯಶೋದಾ ಅವರ ಅಜ್ಜಿ ಗಂಗಮ್ಮ, ʼʼಅಕ್ಕನ ಕೊಲೆಯಿಂದ ಮಾನಸಿಕವಾಗಿ ನೊಂದಿದ್ದ ಯಶೋದಾ ಶನಿವಾರ ರಾತ್ರಿ ಫಿನಾಯಿಲ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಳು. ಅಸ್ವಸ್ಥಳಾಗಿದ್ದ ಅವಳನ್ನು ಕೂಡಲೇ ಕಿಮ್ಸ್​ (KIMS) ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಯಶೋದಾ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಜತೆಗೆ ಚಿಕಿತ್ಸೆ ಮುಂದುವರಿದಿದೆʼʼ ಎಂದು ವಿವರಿಸಿದ್ದಾರೆ.

ಕಾರಣವೇನು?

ಅಂಜಲಿ ಅವರನ್ನು ಕೊಲೆ ಮಾಡಿದ್ದ ಗಿರೀಶ್‌ನನ್ನು ಸದ್ಯ ಗಾಯಗೊಂಡಿದ್ದು, ಪೊಲೀಸರು ಆತನಿಗೆ ಚಿಕಿತ್ಸೆ ಕೊಡಿಸುತ್ತಿದ್ದಾರೆ. ʼʼಪೊಲೀಸರು ತನ್ನ ಅಕ್ಕನನ್ನು ಕೊಂದ ಗಿರೀಶ್‌ಗೆ ಚಿಕಿತ್ಸೆ ನೀಡಿ ಗುಣಮುಖನನ್ನಾಗಿ ಮಾಡಲು ಯತ್ನಿಸುತ್ತಿದ್ದಾರೆ. ಆತನನ್ನು ಎನ್‌ಕೌಂಟರ್‌ ಮಾಡುವ ಬದಲು ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ವಿಚಾರವನ್ನೇ ಮನಸ್ಸಿಗೆ ಹಚ್ಚಿಕೊಂಡಿದ್ದಾಳೆ. ಈ ಬಗ್ಗೆ ನಿನ್ನೆ ಬೆಳಿಗ್ಗೆಯಿಂದಲೂ ಆಕೆ ಮಾನಸಿಕವಾಗಿ ಕುಗ್ಗಿದ್ದಳು. ಇದರಿಂದ ಆತ್ಮಹತ್ಯೆ ಮಾಡಲು ಮುಂದಾಗಿದ್ದಳುʼʼ ಎಂದು ಗಂಗಮ್ಮ ತಿಳಿಸಿದ್ದಾರೆ.

ಎನ್‌ಕೌಂಟರ್‌ ಮಾಡಿ

ಶುಕ್ರವಾರ ವಿಸ್ತಾರ ನ್ಯೂಸ್‌ ಜತೆ ಮಾತನಾಡಿದ್ದ ಅಂಜಲಿಯ ಇನ್ನೋರ್ವ ಸಹೋದರಿ ಪೂಜಾ, ʼʼಗಿರೀಶ್‌ನನ್ನು ಎನ್‌ಕೌಂಟರ್ ಮಾಡಬೇಕು. ಯಾವುದೇ ಕಾರಣಕ್ಕೂ ಆರೋಪಿಗೆ ಚಿಕಿತ್ಸೆ ಕೊಡಬಾರದು. ಅವನನ್ನು ಆದಷ್ಟು ಬೇಗ ಎನ್‌ಕೌಂಟರ್ ಮಾಡಬೇಕು. ನಮ್ಮ ಅಕ್ಕ ಹೇಗೆ ರಕ್ತ ಸುರಿದು ಪ್ರಾಣ ಬಿಟ್ಟಳೋ ಅದೇ ರೀತಿ ಅವನು ಸಾಯಬೇಕುʼʼ ಎಂದು ಆಗ್ರಹಿಸಿದ್ದರು.

ʼʼನಮ್ಮ ಅಕ್ಕನಿಗೂ ಅವನಿಗೂ ಯಾವುದೇ ಸಂಬಂಧ ಇಲ್ಲ. ಏನೇನೋ ಹೇಳಿ ದಿಕ್ಕು ತಪ್ಪಿಸುತ್ತಿದ್ದಾರೆ. ಪೊಲೀಸರು ಹೇಗೆ ಬೇಕೋ ಹಾಗೆ ಮಾಡುವ ವಿಚಾರದಲ್ಲಿದ್ದಾರೆ. ಇದನ್ನು ಆದಷ್ಟು ಬೇಗ ತನಿಖೆ ಮಾಡಬೇಕು. ಬೆಳಿಗ್ಗೆ ಮಾತನಾಡಲು ಬಂದವನು ಚಾಕು ಹಾಕಿದ. ನಾವು ನಮ್ಮ ಅಕ್ಕನ ಜತೆ ಮಾತನಾಡಲು ಸಹ ಆಗಲಿಲ್ಲ. ಕೊನೆ ಗಳಿಗೆಯಲ್ಲಿ ಪೊಲೀಸರು ಬಂದು ಡಾಕ್ಟರ್ ಸಹ ಕರೆಯಲಿಲ್ಲ. ಕೇವಲ ಪೋಟೋ ತೆಗೆದುಕೊಂಡು ಹೋದರು. ಅವನಿಗೆ ಅದೇ ರೀತಿ ಶಿಕ್ಷೆ ಆಗಬೇಕುʼʼ ಎಂದು ಹೇಳಿದ್ದರು.

ʼʼನಮ್ಮ ಅಕ್ಕನಿಗೂ ಗಿರೀಶ್‌ಗೂ ಏನೇನೋ ಸಂಬಂಧ ಕಲ್ಪಿಸುತ್ತಿದ್ದಾರೆ. ಹಾಗಾದರೆ ರೈಲಿನಲ್ಲಿ ಅವನು ಯಾರದೋ ಜತೆ ಜಗಳ ಮಾಡಿದ್ದ. ಅವರಿಗೂ, ಅವನಿಗೂ ಸಂಬಂಧ ಇದೆಯಾ?ʼʼ ಎಂದು ಸಹೋದರಿ ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ: Anjali Murder Case: ಅಂಜಲಿ ಕೊಂದವನ ಎನ್‌ಕೌಂಟರ್ ಮಾಡಿ: ಸಹೋದರಿ ಪೂಜಾ ಆಗ್ರಹ

ಶಾಸಕ ಅರವಿಂದ ಬೆಲ್ಲದ್ ಭೇಟಿ

ಅಂಜಲಿ ಮನೆಗೆ ಭಾನುವಾರ ಭೇಟಿ ನೀಡಿದ ಶಾಸಕ ಅರವಿಂದ ಬೆಲ್ಲದ್ ಸಾಂತ್ವಾನ ಹೇಳಿದ್ದಾರೆ. ವೀರಾಪುರ ಓಣಿಯಲ್ಲಿರುವ ಅಂಜಲಿ ಮನೆಗೆ ಆಗಮಿಸಿ ಅಂಜಲಿ ಅವರ ಅಜ್ಜಿ ಗಂಗಮ್ಮ, ಸಹೋದರಿಯರಿಗೆ ಸಾಂತ್ವನ ಹೇಳಿದ್ದಾರೆ. ಕುಟುಂಬದ ಜತೆಗೆ ಇರುತ್ತೇವೆ ಎಂದು ಧೈರ್ಯ ಹೇಳಿದ್ದಾರೆ. ಕೊಲೆಗಡುಕ ಗಿರೀಶ್‌ಗೆ ಗಲ್ಲು ಶಿಕ್ಷೆ ಆಗಬೇಕೆಂದು ಬೆಲ್ಲದ್ ಆಗ್ರಹಿಸಿದ್ದಾರೆ.

Continue Reading

ಮೈಸೂರು

Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

Suspicious Case : ಮೈಸೂರಿನಲ್ಲಿ ಮನೆಯೊಂದರಲ್ಲಿ ದಂಪತಿ ಶವ ಪತ್ತೆಯಾಗಿದೆ. ಶವದ ಮೇಲೆ ಯಾವುದೇ ಗಾಯದ ಗುರುತು ಪತ್ತೆಯಾಗಿಲ್ಲ. ಹೀಗಾಗಿ ದಂಪತಿಯ ಅನುಮಾನಾಸ್ಪದ ಸಾವಿನ ಸಂಬಂಧ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Suspicious Case in Mysuru
Koo

ಮೈಸೂರು: ಮನೆಯಲ್ಲೇ ದಂಪತಿ ಅನುಮಾನಾಸ್ಪದವಾಗಿ (Suspicious Case) ಮೃತಪಟ್ಟಿದ್ದಾರೆ. ಮೈಸೂರಿನ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿ ಘಟನೆ ನಡೆದಿದೆ. ಪ್ರಕಾಶ್ (51), ಯಶೋಧ (48) ಮೃತಪಟ್ಟವರು.

ಪ್ರಕಾಶ್‌ ಅವರು ರಸ್ತೆ ಬದಿ ಕ್ಯಾಂಟಿನ್ ನಡೆಸುತ್ತಿದ್ದರೆ, ಯಶೋಧಾ ಪ್ಲೋರ್ ಮಿಲ್ ನಡೆಸುತ್ತಿದ್ದರು. ಭಾನುವಾರ ಇಬ್ಬರು ಮನೆಯಲ್ಲೇ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನೂ ದೇಹದ ಮೇಲೂ ಯಾವುದೇ ಗಾಯದ ಗುರುತು ಇಲ್ಲ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದನ್ನು ತಿಳಿಯಲು ಎಲ್ಲ ಆಯಾಮದಲ್ಲೂ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಮೃತರ ಮೊಬೈಲ್‌ಗಳನ್ನು ವಶಕ್ಕೆ ಪಡೆದು, ಅಕ್ಕ-ಪಕ್ಕದ ಸಿಸಿಟಿವಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಮೋರಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

35 ವರ್ಷದಿಂದ 40 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಮೈಸೂರಿನ ಹೂಟಗಳ್ಳಿ ಬಳಿಯ ಮೋರಿಯಲ್ಲಿ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಹೀಗಾಗಿ ವ್ಯಕ್ತಿ ಕುರಿತು ಮಾಹಿತಿ ತಿಳಿದರೇ ವಿಜಯನಗರ ಠಾಣೆ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Yelahanka flyover : ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಯುವಕನ ಡೆಡ್ಲಿ ಬೈಕ್‌ ರೈಡಿಂಗ್‌!

ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ; ಕೆಆರ್‌ ಮಾರ್ಕೆಟ್‌ನಲ್ಲಿ ಶವ ಪತ್ತೆ

ವಿಜಯಪುರ: ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ (Murder Case) ಆಗಿದೆ. ವಿಜಯಪುರ ನಗರದ ಎಪಿಎಂಸಿ ಮೇಕೆ ಹಾಗೂ ಕುರಿ ಮಾರುಕಟ್ಟೆಯ ಬಳಿ (Vijayapura Murder Case) ಘಟನೆ ನಡೆದಿದೆ. ರೋಹಿತ್ ಸುಭಾಶ ಪವಾರ (22) ಕೊಲೆಯಾದವನು.

ವಿಜಯಪುರ ನಗರದ ಕಂಬಾರ ಓಣಿ ನಿವಾಸಿ ರೋಹಿತ್‌ನನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದು ಬಳಿಕ ಮುಳ್ಳುಕಂಟಿಯಲ್ಲಿ ಶವ ಬಿಸಾಡಿದ್ದಾರೆ. ಸ್ಥಳದಲ್ಲಿ ಬಿಯರ್ ಬಾಟಲ್, ಚಿಪ್ಸ್ ಪ್ಯಾಕೇಟ್ ಪತ್ತೆಯಾಗಿದೆ. ಹೀಗಾಗಿ ಕುಡಿದ ಮತ್ತಿನಲ್ಲಿ ಪರಿಚಯಸ್ಥರಿಂದ ಕೊಲೆ ಆಗಿರಬಹುದೆಂದು ಶಂಕಿಸಲಾಗಿದೆ.

ಖಾಲಿದ್ ಇನಾಂದಾರ್ ಎಂಬಾತ ರೋಹಿತ್ ಪೋಷಕರಿಗೆ ನಿನ್ನೆ ಭಾನುವಾರ ತಡರಾತ್ರಿ 2.21ಕ್ಕೆ ಕರೆ ಮಾಡಿ ರೋಹಿತ್ ಕೊಲೆಯಾಗಿದೆ ಎಂದು ಮಾಹಿತಿ ನೀಡಿದ್ದ. ಕರೆ ಅನ್ವಯ ರೋಹಿತ್ ಮನೆಯವರು ಆತನಿಗಾಗಿ ಹುಡುಕಾಡಿದ್ದರು. ಖಾಲೀದ್ ಮನೆಗೆ ಹೋದರೂ ಆತ ಅಲ್ಲಿರಲಿಲ್ಲ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ನಂತರ ರೋಹಿತ್‌ಗಾಗಿ ಹುಡುಕಾಡಿದಾಗ ಆತನ ಶವ ಎಪಿಎಂಸಿ ಆವರಣದಲ್ಲಿ ಕಂಡು ಬಂದಿದೆ.

ಇದನ್ನೂ ಓದಿ: IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

ಕೂಡಲೇ ರೋಹಿತ್‌ ಕುಟುಂಬಸ್ಥರು ಎಪಿಎಂಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಜಯಪುರ ಡಿವೈಎಸ್‌ಪಿ ಬಸವರಾಜ ಯಲಿಗಾರ ಹಾಗೂ ಇತರೆ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿ‌ ಘಟನೆ ನಡೆದಿದೆ. ಕೊಲೆಗಾರರಿಗಾಗಿ ಹುಡುಕಾಟ ನಡೆಸಿದ್ದಾರೆ.

ಬೆಂಗಳೂರು ಸಿಟಿ ಮಾರ್ಕೆಟ್‌ನಲ್ಲಿ ಅಪರಿಚಿತ ಶವ ಪತ್ತೆ

ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯ ಕೊಲೆಯಾಗಿದೆ. ಸಿಟಿ ಮಾರ್ಕೆಟ್ ಕಾಂಪ್ಲೆಕ್ಸ್ ಹಿಂಭಾಗದಲ್ಲಿ ಮೃತದೇಹ ಪತ್ತೆಯಾಗಿದೆ. ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತುಹಾಕಿ ಕೊಲೆ ಮಾಡಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಸಿಟಿ ಮಾರ್ಕೆಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Yelahanka flyover : ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಯುವಕನ ಡೆಡ್ಲಿ ಬೈಕ್‌ ರೈಡಿಂಗ್‌!

Yelahanka flyover : ಬೆಂಗಳೂರಿನ ಯಲಹಂಕ ಫ್ಲೈಓವರ್‌ನಲ್ಲಿ ಜೋಡಿಯೊಂದರ ಡೆಡ್ಲಿ ಬೈಕ್ ರೈಡಿಂಗ್ (Bike Riding) ವಿಡಿಯೊ ವೈರಲ್‌ ಆಗಿದೆ. ಯುವತಿಯನ್ನು ತೊಡೆಯ ಮೇಲೆ ಕೂರಿಸಿಕೊಂಡ ಯುವಕ ಫ್ಲೈಓವರ್‌ನಲ್ಲಿ ಜಾಲಿ ರೈಡ್‌ ಮಾಡಿದ್ದಾನೆ. ಇದನ್ನೂ ಇತರೆ ಸವಾರರು ತಮ್ಮ ಮೊಬೈಲ್‌ನಲ್ಲಿ ಸೆರೆಯಿಡಿದ್ದಾರೆ.

VISTARANEWS.COM


on

By

yelahanka flyover
Koo

ಬೆಂಗಳೂರು: ಇತ್ತೀಚೆಗೆ ಜೋಡಿಗಳು ಬೈಕ್​ನಲ್ಲಿ ಹೋಗುತ್ತಲೇ ರೊಮ್ಯಾನ್ಸ್ (Romance in bike riding) ಮಾಡುವ ಪ್ರಕರಣಗಳು ಹೆಚ್ಚಾಗುತ್ತಿದೆ. ಹುಚ್ಚು ಸಾಹಸವೂ, ಪ್ರೇಮದ ಉನ್ಮಾದವೋ ಗೊತ್ತಿಲ್ಲ. ಇದು ಅಪಾಯಕಾರಿ ಎಂದು ಗೊತ್ತಿದ್ದರೂ ಪರಸ್ಪರ ಎದುರುಬದುರು ಕುಳಿತುಕೊಂಡು ಮುದ್ದಾಡಿಕೊಂಡು ಹೋಗುವುದು, ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಡೆಡ್ಲಿ ರೈಡಿಂಗ್‌ ಮಾಡುವುದು ಹೆಚ್ಚುತ್ತಿದೆ. ಸದ್ಯ ಬೆಂಗಳೂರಲ್ಲಿ (Yelahanka flyover) ಜೋಡಿಯೊಂದರ ಬೈಕ್ ರೈಡಿಂಗ್ (Bike Riding ವಿಡಿಯೊ ವೈರಲ್‌ ಆಗಿದೆ.

ಯುವತಿಯನ್ನು ತೊಡೆಯ ಮೇಲೆ ಕೂರಿಸಿಕೊಂಡು ಯುವಕ ಬೈಕ್‌ ರೈಡ್ ಮಾಡಿದ್ದಾನೆ. ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯ ಯಲಹಂಕ ಫ್ಲೈ‌ಓವರ್‌ನಲ್ಲಿ ಮೇ 17ರ ರಾತ್ರಿ‌ ಈ ಘಟನೆ ನಡೆದಿದೆ. ಯುವ ಜೋಡಿಗಳು ಹೆಲ್ಮೆಟ್ ಧರಿಸದೇ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿದ್ದಾರೆ. ಜೋಡಿಗಳ ಜಾಲಿ‌ ರೈಡ್‌ನ ದೃಶ್ಯ ಕಾರಿನಲ್ಲಿ ಹೋಗುತ್ತಿದ್ದ ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಿಡಿದ್ದಾರೆ.

ಇದನ್ನೂ ಓದಿ: Viral Video: ಐಸ್ ಕ್ರೀಮ್‌ನಲ್ಲಿ ಚಿನ್ನದ ಉಂಗುರ ಅಡಗಿಸಿಕೊಟ್ಟ ಪ್ರಿಯತಮ! ಮುಂದೇನಾಯ್ತು?

ಇತ್ತ ಸೋಶಿಯಲ್‌ ಮೀಡಿಯಾದಲ್ಲಿ ಈ ವಿಡಿಯೊ ವೈರಲ್‌ ಆಗಿದ್ದು, ಸಾರ್ವಜನಿಕ ಸುರಕ್ಷತೆ ಅಪಾಯಗಳ ಬಗ್ಗೆ ವ್ಯಾಪಕ ಕಳವಳ ಹುಟ್ಟುಹಾಕಿದೆ. ಹೆಲ್ಮೆಟ್ ಧರಿಸದೆ ಇರುವುದು ಜತೆಗೆ ಯುವತಿ ಪೆಟ್ರೋಲ್‌ ಟ್ಯಾಂಕ್ ಮೇಲೆ ಕುಳಿತು ತನ್ನ ಸಂಗಾತಿಯನ್ನು ಅಪ್ಪಿಕೊಂಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಅಜಾಗರೂಕ ಮತ್ತು ಅನುಚಿತ ವರ್ತನೆಗಾಗಿ ದಂಡ ವಿಧಿಸಿ ಎಂದು ನೆಟ್ಟಿಗರು ಕಾಮೆಂಟ್‌ ಹಾಕಿದ್ದಾರೆ. ರಸ್ತೆ ಸುರಕ್ಷತೆಯ ಬಗ್ಗೆ ಮತ್ತು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಅಗತ್ಯತೆಯ ಬಗ್ಗೆ ಚರ್ಚಿಸಿದ್ದಾರೆ. ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Murder Case : ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ; ಕೆಆರ್‌ ಮಾರ್ಕೆಟ್‌ನಲ್ಲಿ ಶವ ಪತ್ತೆ

ಛೀ…ಈತನೆಂಥಾ ಕಾಮುಕ! ಸಾರ್ವಜನಿಕ ಸ್ಥಳದಲ್ಲಿ ಈ ಪಾಪಿ ಬಾಲಕಿಗೆ ಮಾಡಿದ್ದೇನು ಗೊತ್ತಾ?

ನವದೆಹಲಿ: ಕಾಮುಕನೋರ್ವ ಸಾರ್ವಜನಿಕ ಸ್ಥಳದಲ್ಲಿ ಅಪ್ರಾಪ್ತ ಬಾಲಕಿ(Minor Girl)ಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್‌ (Viral Video) ಆಗಿದ್ದು, ಈ ಹೇಯ ಕೃತ್ಯಕ್ಕೆ ನೆಟ್ಟಿಗರು ಕಿಡಿ ಕಾರಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ತನ್ನ ತಾಯಿಯೊಂದಿಗೆ ನಿಂತಿದ್ದ ಬಾಲಕಿಯ ಹಿಂದೆ ಹೋಗಿ ನಿಲ್ಲುವ ಕಾಮುಕ ತನ್ನ ಕುಚೇಷ್ಠೆ ಶುರು ಮಾಡುತ್ತಾನೆ. ಆಕೆಯ ಹಿಂಬಂದಿಯನ್ನು ಅನುಚಿತವಾಗಿ ಮುಟ್ಟಿ ವಿಕೃತಿ ಮೆರೆಯುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ದೆಹಲಿಯ ಸಾದರ್‌ ಬಜಾರ್‌ನಲ್ಲಿ ಈ ಘಟನೆ ನಡೆದಿದ್ದು, ಕಾಮುಕನ ಕುಚೇಷ್ಠೆಯನ್ನು ಅಲ್ಲೇ ಇದ್ದ ವ್ಯಕ್ತಿಯೊಬ್ಬ ರೆಕಾರ್ಡ್‌ ಮಾಡಿದ್ದಾನೆ. ವಿಡಿಯೋ ಮಾಡುತ್ತಿರುವುದು ಗೊತ್ತಾಗುತ್ತಿದ್ದಂತೆ ಆ ವ್ಯಕ್ತಿ ಸ್ಥಳದಿಂದ ಎಸ್ಕೇಪ್‌ ಆಗಿದ್ದಾನೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿದ್ದು, ಪೊಲೀಸರು ಸ್ವಯಂಪ್ರೇರಿತ ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ಇನ್ನು ಪತ್ತೆಯಾಗದ ಕಿಡಿಗೇಡಿ

ಇನ್ನು ಘಟನೆಗೆ ಸಂಬಂಧಿಸಿದಂತೆ ಈ ನೀಚ ಕೃತ್ಯ ಎಸಗಿರುವ ಕಾಮುಕ ಇನ್ನೂ ಪತ್ತೆಯಾಗಿಲ್ಲ. ಪೊಲೀಸ್‌ ದೂರು ಕೂಡ ದಾಖಲಾಗಿಲ್ಲ. ಇನ್ನು ಅಪ್ರಾಪ್ತ ಬಾಲಕಿಗೆ ಈ ನೀಚ ಕೃತ್ಯದ ಬಗ್ಗೆ ಅರಿವಾಗಿಲ್ಲ ಎಂಬಂತೆ ವಿಡಿಯೋದಲ್ಲಿ ಭಾಸವಾಗುತ್ತಿದೆ. ಇನ್ನು ಮತ್ತೊಂದು ವರದಿ ಪ್ರಕಾರ ಪೊಲೀಸರಿಗೆ ಈ ಬಗ್ಗೆ ದೂರು ನೀಡಲಾಗಿದ್ದು, ಕಿಡಿಗೇಟಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಾಗಿ ಪೊಲೀಸರ ತೀವ್ರ ಶೋಧ ನಡೆಸುತ್ತಿದ್ದಾರೆ ಎನ್ನಲಾಗಿದೆ.

ನೆಟ್ಟಿಗರಿಂದ ಆಕ್ರೋಶ:

ಇನ್ನು ಈ ಹೇಯ ಕೃತ್ಯದ ವಿಡಿಯೋ ಎಲ್ಲೆಡೆ ವೈರಲ್‌ ಆಗುತ್ತಿದ್ದಂತೆ ನೆಟ್ಟುಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ರಿಮಿನಲ್ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಈತ ನಿಮ್ಮ ಕಣ್ಣಿಗೆ ಬಿದ್ದರೆ ಪೊಲೀಸರಿಗೆ ಒಪ್ಪಿಸಬೇಡಿ..ನಿಮಗೇನು ಮಾಡಬೇಕು ಅಂತ ಅನಿಸುತ್ತದೆಯೋ ಅದನ್ನೇ ಮಾಡಿ ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಇವರೆಲ್ಲ ಅತ್ಯಾಚಾರಿಗಳು..ಇವರು ಅಷ್ಟು ಸುಲಭವಾಗಿ ಕೈಗೆ ಸಿಗುವುದಿಲ್ಲ. ಇವನನ್ನು ತಕ್ಷಣ ಅರೆಸ್ಟ್‌ ಮಾಡಿ, ಕಠಿಣ ಶಿಕ್ಷೆ ವಿಧಿಸಿ ಎಂದು ಬರೆದುಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Electric shock in udupi
ಉಡುಪಿ15 mins ago

Electric shock : ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

Anjali Murder Case
ಕರ್ನಾಟಕ24 mins ago

Anjali Murder Case: ಅಂಜಲಿ ಹತ್ಯೆ ಪ್ರಕರಣ; ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

IT Raid
ದೇಶ25 mins ago

IT Raid: ಶೂ ವ್ಯಾಪಾರಿಗಳಿಗೆ ಐಟಿ ಶಾಕ್‌; 40 ಕೋಟಿ ರೂ. ಸೀಜ್‌-ಕಂತೆ ಕಂತೆ ನೋಟು ನೋಡಿ ದಂಗಾದ ಅಧಿಕಾರಿಗಳು

Suspicious Case in Mysuru
ಮೈಸೂರು45 mins ago

Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

IPL 2024 The people paid revenge for the controversial post ashwini Puneeth Rajkumar
ಸ್ಯಾಂಡಲ್ ವುಡ್46 mins ago

IPL 2024 : ʻಅಶ್ವಿನಿ ದೊಡ್ಮನೆಯ ಅದೃಷ್ಟ ದೇವತೆ’: ತುಚ್ಛ ಪದ ಬಳಸಿದವರಿಗೆ ಭಾರೀ ತಿರುಗೇಟು!

Kattappa To Turn Modi Sathyaraj To Play Biopic On Prime Minister
ಬಾಲಿವುಡ್53 mins ago

Kattappa To Turn Modi: ಮೋದಿ ಪಾತ್ರದಲ್ಲಿ `ಬಾಹುಬಲಿ’ ಕಟ್ಟಪ್ಪ!

yelahanka flyover
ಬೆಂಗಳೂರು1 hour ago

Yelahanka flyover : ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಯುವಕನ ಡೆಡ್ಲಿ ಬೈಕ್‌ ರೈಡಿಂಗ್‌!

Bomb Threat
ಕರ್ನಾಟಕ1 hour ago

Bomb Threat: ಏರ್‌ಪೋರ್ಟ್‌ನಲ್ಲಿ ಬಾಂಬ್‌ ಇದೆ ಎಂದು ತಮಾಷೆ ಮಾಡಲು ಹೋಗಿ ಜೈಲು ಪಾಲಾದ

Gold Rate Today
ಕರ್ನಾಟಕ1 hour ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ

viral video
ವೈರಲ್ ನ್ಯೂಸ್2 hours ago

Viral Video: ಅಬ್ಬಾ..ಹಸುಗಳ ಫೈಟ್‌ಗೆ ಬಾಲಕಿ ಅಪ್ಪಚ್ಚಿ! ಶಾಕಿಂಗ್‌ ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌