Power Point with HPK : ಕೆಜಿ ಹಳ್ಳಿ ಗಲಭೆ ಕೇಸ್‌ ವಾಪಸ್‌ ಹಿಂದೆ ಸಿಎಂ ಸಿದ್ದರಾಮಯ್ಯ: ಆರಗ ಜ್ಞಾನೇಂದ್ರ - Vistara News

ಕರ್ನಾಟಕ

Power Point with HPK : ಕೆಜಿ ಹಳ್ಳಿ ಗಲಭೆ ಕೇಸ್‌ ವಾಪಸ್‌ ಹಿಂದೆ ಸಿಎಂ ಸಿದ್ದರಾಮಯ್ಯ: ಆರಗ ಜ್ಞಾನೇಂದ್ರ

Power Point with HPK : ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ ಅವರು ನಡೆಸಿಕೊಡುವ “ಪವರ್‌ ಪಾಯಿಂಟ್‌ ವಿತ್‌ ಎಚ್‌ಪಿಕೆ” ವಿಶೇಷ ಸಂದರ್ಶನದಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣವನ್ನು ಕೈಬಿಡುವ ಹುನ್ನಾರ ನಡೆಯುತ್ತಿದ್ದು, ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾರೆ ಎಂದು ದೂರಿದ್ದಾರೆ.

VISTARANEWS.COM


on

Araga Gyanendra in Power Point with HPK
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ (KG Halli and DJ Halli riot cases) ಆರೋಪಿಗಳನ್ನು ಬಿಡುಗಡೆ ಮಾಡಲು ರಾಜ್ಯ ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ. ಇದು ಈಗ ಶಾಸಕ ತನ್ವೀರ್‌ ಸೇಠ್‌ (MLA Tanveer Sait) ಬರೆದಿರುವ ಪತ್ರವು ಈ ಸರ್ಕಾರದ ಪ್ರೀ ಪ್ಲ್ಯಾನ್ ಆಗಿದೆ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಇದ್ದಾರೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ (Former Home Minister Araga Jnanendra) ಅವರು ಪವರ್‌ ಪಾಯಿಂಟ್‌ ವಿತ್ ಎಚ್‌ಪಿಕೆ (Power Point with HPK) ಸಂದರ್ಶನದಲ್ಲಿ ಗುಡುಗಿದ್ದಾರೆ.

ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ (Hariprakash Konemane) ಅವರು ನಡೆಸಿಕೊಡುವ “ಪವರ್‌ ಪಾಯಿಂಟ್‌ ವಿತ್‌ ಎಚ್‌ಪಿಕೆ” ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಈ ಪ್ರಕರಣದಲ್ಲಿ ಬಂಧಿತರಾದವರು “ಅಮಾಯಕರು” ಎಂದು ಕೇವಲ ಶಾಸಕ ತನ್ವೀರ್‌ ಸೇಠ್‌ ಪತ್ರ ಬರೆಯಲಿಲ್ಲ. ಗೃಹ ಸಚಿವ ಪರಮೇಶ್ವರ್‌ ಅದಕ್ಕೆ ಕ್ರಮ ವಹಿಸಿ ಎಂದು ಪೊಲೀಸ್‌ ಅಧಿಕಾರಿಗಳಿಗೆ ಹೇಳಲಿಲ್ಲ. ನೀನು ಪತ್ರ ಬರಿ ಎಂದು ತನ್ವೀರ್‌ ಸೇಠ್‌ ಅವರಿಗೆ ಹೇಳಿಸಿ, ಗೃಹ ಸಚಿವರಿಂದ ಕ್ರಮವಹಿಸಲು ಆದೇಶ ನೀಡಿಸಲಾಗಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಂತ್ರದ ಭಾಗವಾಗಿದೆ ಎಂದು ಆರೋಪ ಮಾಡಿದರು.

ಇದನ್ನೂ ಓದಿ: Karnataka Politics : ಸಚಿವರ ವಿರುದ್ಧದ ಪತ್ರಕ್ಕೆ ಕ್ಷಮೆ ಕೇಳಿಲ್ಲ, ಕೇಳೋದೂ ಇಲ್ಲ: ಬಿ.ಆರ್.‌ ಪಾಟೀಲ್

ಇದು ಬಹಳ ದುರದೃಷ್ಟಕರ ಸಂಗತಿಯಾಗಿದೆ. ತಮ್ಮ ವೋಟ್‌ ಬ್ಯಾಂಕ್‌ ಎಂಬ ಕಾರಣಕ್ಕೆ ಈ ರೀತಿ ಮಾಡುತ್ತಿದ್ದಾರೆ. ಈ ಪ್ರಕರಣವನ್ನು ನಾವು ಎನ್‌ಐಎಗೆ ವಹಿಸಿದ್ದೇವೆ. ಪ್ರತಿಯೊಬ್ಬರ ಮೇಲೆ ಚಾರ್ಜ್‌ಶೀಟ್‌ ಆಗಿದೆ. ಎನ್‌ಐಎ ಈ ಪ್ರಕರಣವನ್ನು ಈಗ ಮುನ್ನಡೆಸುತ್ತಿದೆ. ನನಗೆ ಗೊತ್ತಿರುವಂತೆ ಈ ಪ್ರಕರಣವನ್ನು ವಾಪಸ್‌ ಪಡೆಯಲು ಬರುವುದಿಲ್ಲ. ಆದರೆ, ಈ ಪ್ರಕರಣದಲ್ಲಿರುವವರನ್ನು ಇವರು ಯಾವುದಾದರೂ ಒಂದು ಮಾರ್ಗದಲ್ಲಿ ವಾಪಸ್‌ ಕರೆತರುವ ಸಾಧ್ಯತೆ ಇದೆಯೋ ಇಲ್ಲವೋ ನನಗೆ ಗೊತ್ತಿಲ್ಲ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.

ಸರ್ಕಾರದ ಈ ಕ್ರಮಕ್ಕೆ ಏನರ್ಥ?

ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣವು ಮೀಡಿಯಾದಲ್ಲಿ ಬಿತ್ತರವಾಗಿದೆ. ಅಂದು ಅರ್ಧ ಬೆಂಗಳೂರು ಹೊತ್ತಿ ಉರಿಯಿತು. ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದ್ದರು. ಕಾಂಗ್ರೆಸ್‌ನ ಒಬ್ಬ ದಲಿತ ಶಾಸಕನ ಮನೆಗೆ ಬೆಂಕಿ ಇಡಲಾಯಿತು. ಅವರು ಅಂದು ಯಾವ ರೀತಿ ತಪ್ಪಿಸಿಕೊಂಡರು ಎಂಬುದು ಎಲ್ಲರಿಗೂ ಗೊತ್ತಿದೆ. ಅವರು ಅಂದು ಉಟ್ಟ ಬಟ್ಟೆಯಲ್ಲಿ ಓಡಿ ಹೋಗಿ ಜೀವ ಉಳಿಸಿಕೊಂಡಿದ್ದರು. ಇಂಥ ಒಂದು ಭಯಾನಕವಾದ ಪರಿಸ್ಥಿತಿಯನ್ನು ನೋಡಿಯೂ ಸಹ ಶಾಸಕ ತನ್ವೀರ್‌ ಸೇಠ್‌ ಅವರು ಬಂಧಿತರಾದವರು ಅಮಾಯಕರು ಎಂದು ಪತ್ರ ಬರೆಯುತ್ತಾರೆ. ಅದಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರು ಇದನ್ನು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡುತ್ತಾರೆ ಎಂದರೆ ಏನರ್ಥ? ಮಂತ್ರಿಯೊಬ್ಬರು ಬರೆಯುವ ಒಂದೊಂದು ಶಬ್ದಕ್ಕೆ ಅರ್ಥ ಇರುತ್ತದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

ಈ ಪ್ರಕರಣದಲ್ಲಿ ಒಬ್ಬರೇ ಒಬ್ಬ ಅಮಾಯಕರಿದ್ದರೆ ಜನರು ಹೇಳಲಿ. ಅಂದು ನಡೆದ ವಿಡಿಯೊ ನೋಡಿದರೇ ಎಲ್ಲರಿಗೂ ತಿಳಿಯುತ್ತದೆ. ಅಂದು ನಡೆದ ಘಟನಾವಳಿಯ ವಿಡಿಯೊ ಚಿತ್ರೀಕರಣವನ್ನು ಇಟ್ಟುಕೊಂಡು ಅದರಲ್ಲಿ ಕಂಡುಬಂದವರನ್ನು ಕರೆಸಿ ಅವರ ಬಳಿಯೇ ಕೇಳಿದ್ದೇವೆ. ಅಲ್ಲಿರುವುದು, ಕಲ್ಲು ಹೊಡೆದಿರುವುದು ತಾವೇ ಎಂದು ಆರೋಪಿಗಳು ಬಾಯಿ ಬಿಟ್ಟ ಬಳಿಕವೇ ನಾವು ಅಂಥವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಆದರೆ, ಈ ಸರ್ಕಾರ ಬಂದ ಮೇಲೆ ಅಪರಾಧ ಕೃತ್ಯ ಮಾಡಿದವರಿಗೆ ಬಿಡುಗಡೆ ಮಾಡಲಾಗುತ್ತದೆ ಎಂಬ “ಗ್ಯಾರಂಟಿ” ಸಿಗುತ್ತಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

ದಲಿತ ಶಾಸಕನ ಜೀವಂತ ಸಮಾಧಿಗೆ ನಡೆದಿತ್ತು ಪ್ಲ್ಯಾನ್!‌

ಈ ಘಟನೆಯನ್ನು ಸಂಘಟಿತವಾಗಿ ಮಾಡಿದ್ದು, ದಲಿತ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರನ್ನು ಹಾಗೂ ಕುಟುಂಬವನ್ನು ಜೀವಂತವಾಗಿ ಸುಟ್ಟುಹಾಕುವ ಹುನ್ನಾರ ಇತ್ತು. ಸುದೈವ ವಶಾತ್‌ ಪೊಲೀಸರು ಅವರ ಮನೆಗೆ ನುಗ್ಗಿ ರಕ್ಷಣೆ ಮಾಡಿದರು. ಇಲ್ಲದಿದ್ದರೆ ಈ ಪ್ರಕರಣ ನಿಯಂತ್ರಣಕ್ಕೆ ತಕ್ಷಣ ಬರುತ್ತಿರಲಿಲ್ಲ. ಗಲಭೆಕೋರರು ಪೊಲೀಸರು ಬಾರದಂತೆ ತಡೆಯೊಡ್ಡಿದ್ದರು. ಈ ಎಲ್ಲವೂ ಇದಕ್ಕೆ ಪುಷ್ಟಿ ನೀಡುತ್ತದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

ಇಂಥ ಗಲಭೆಗಳು ಪ್ರತಿ ಊರಿನಲ್ಲಿಯೂ ನಡೆಯಬಹುದು

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣವು ಒಂದು ವ್ಯವಸ್ಥಿತ, ಸಂಘಟಿತ ಪಿತೂರಿಯಾಗಿದೆ. ಈ ಕೃತ್ಯಕ್ಕೆ ಮುಂಚೆ ಅವರು ದೂರವಾಣಿ ಸಂಭಾಷಣೆಯಲ್ಲಿ ತೊಡಗಿರುವುದರ ಬಗ್ಗೆ ನ್ಯಾಯಾಲಯದಲ್ಲಿಯೂ ದಾಖಲೆ ಸಲ್ಲಿಕೆಯಾಗಿದೆ. ತಮ್ಮ ವಿರುದ್ಧ ಹೆಚ್ಚುಕಡಿಮೆಯಾದರೆ ನಾವು ಏನು ಎಂಬುದನ್ನು ತೋರಿಸಬೇಕು ಎಂದು ನಡೆದಿದ್ದ ಕೃತ್ಯ ಅದಾಗಿತ್ತು. ಹಾಗಾಗಿ ಮುಂದೆ ಈ ರೀತಿ ಆಗಬಾರದು ಎಂಬ ಕಾರಣಕ್ಕಾಗಿ ಇಂಥವರನ್ನು ಎಷ್ಟು ಮಟ್ಟ ಹಾಕಬೇಕೋ ಆ ಕೆಲಸವನ್ನು ನಾವು ಮಾಡಿದ್ದೇವೆ. ಆದರೆ, ಈಗ ಈ ಸರ್ಕಾರ ಮಾಡುತ್ತಿರುವ ರೀತಿಯನ್ನು ನೋಡಿದರೆ, ಇಂಥ ಗಲಭೆಗಳು ಪ್ರತಿ ಊರಿನಲ್ಲಿಯೂ ನಡೆಯಬಹುದು ಎಂದು ಆರಗ ಹೇಳಿದರು.

ಹರಿಪ್ರಕಾಶ್‌ ಕೋಣೆಮನೆ ಅವರೊಂದಿಗೆ ಆರಗ ಜ್ಞಾನೇಂದ್ರ ಅವರ ನೇರ ಮಾತು; ವಿಡಿಯೊ ಇಲ್ಲಿದೆ

ನಾವು ಕೈಬಿಟ್ಟಿದ್ದೇ ಬೇರೆ ಪ್ರಕರಣಗಳು

ಎಲ್ಲ ಸರ್ಕಾರಗಳೂ ಪ್ರಕರಣವನ್ನು ಕೈಬಿಡುತ್ತವೆ. ಆದರೆ, ಕೈಬಿಟ್ಟಿರುವ ಪ್ರಕರಣ ಯಾವುದು ಎಂಬುದನ್ನು ನೋಡಬೇಕು. ಸಿದ್ದರಾಮಯ್ಯ ಅವರ ಈ ಹಿಂದಿನ ಸರ್ಕಾರ ಅಧಿಕಾರಕ್ಕೆ ಮೊದಲ ಕ್ಯಾಬಿನೆಟ್‌ನಲ್ಲಿ ಪಿಎಫ್‌ಐ ಸಂಘಟನೆಯವರ ಮೇಲಿದ್ದ ಕೇಸ್‌ ಅನ್ನು ವಾಪಸ್‌ ಪಡೆಯಿತು. ಈಗ ಹೀಗೆ ಮಾಡುತ್ತಿದೆ. ಆದರೆ, ನಮ್ಮ ಸರ್ಕಾರ ಇದ್ದಾಗ ಕನ್ನಡ ಪರ ಸಂಘಟನೆಯವರ ಮೇಲಿನ ಕೇಸ್‌, ಗಣಪತಿ ಉತ್ಸವದಲ್ಲಿ ಡಿಜೆ ಹಾಕಿದವರ ಮೇಲೆ ಹಾಕಿದಂತಹ ಕೇಸ್‌ಗಳನ್ನು ವಾಪಸ್‌ ಪಡೆದಿದ್ದೇವೆ. ಅದು ಬಿಟ್ಟು ಹೀಗೆ ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದವರನ್ನು, ಸಾರ್ವಜನಿಕರ ಆಸ್ತಿ ಪಾಸ್ತಿಯನ್ನು ಹಾನಿ ಮಾಡಿದವರ ಮೇಲಿನ ಕೇಸ್‌ ಅನ್ನು ನಾವು ವಾಪಸ್‌ ಪಡೆದಿಲ್ಲ ಎಂದು ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದರು.

ಬಿಜೆಪಿ ಉಗ್ರ ಹೋರಾಟ ಮಾಡುತ್ತದೆ

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಕೇಸಲ್ಲಿ ಒಬ್ಬನನ್ನು ಕೈಬಿಟ್ಟರೂ ಬೇರೆಯ ಸಂದೇಶವೇ ಹೋಗುತ್ತದೆ. ಒಂದು ಮನೆಗೆ, ಪೊಲೀಸ್‌ ಠಾಣೆಗೆ, ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಇದು ಅಪರಾಧಿ ಕೃತ್ಯ ಮಾಡುವವರಿಗೆ ಬೇರೆ ಸಂದೇಶವನ್ನು ಕೊಟ್ಟಂತೆ ಆಗುತ್ತದೆ. ಈ ಸಂಬಂಧ ಬಿಜೆಪಿ ಈಗಾಗಲೇ ಪ್ರತಿಭಟನೆ ನಡೆಸಿದೆ. ಮತ್ತೂ ಹೋರಾಟ ಮುಂದುವರಿಯಲಿದೆ. ಈ ಪ್ರಕರಣದಲ್ಲಿ ಸಂತ್ರಸ್ತರಾಗಿದ್ದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಗೆ ಘಟನೆ ನಡೆದು ಮೂರ್ನಾಲ್ಕು ದಿನವಾದರೂ ಯಾವುದೇ ಒಬ್ಬ ಕಾಂಗ್ರೆಸ್‌ ನಾಯಕರು ಹೋಗಿಲ್ಲ. ಇದರ ಅರ್ಥ ಏನು? ಇಷ್ಟೆಲ್ಲ ಘಟನೆ ನಡೆದ ಮೇಲೆಯೂ ಮುಸ್ಲಿಂ ಸಮುದಾಯದ ಓಲೈಕೆ, ತುಷ್ಟೀಕರಣಕ್ಕೆ ಇವರು ಮುಂದಾಗಿರುವುದು ಎಷ್ಟು ಸರಿ? ಎಂದು ಆರಗ ಜ್ಞಾನೇಂದ್ರ ಪ್ರಶ್ನೆ ಮಾಡಿದರು.

ಪೊಲೀಸ್‌ ಇಂಟಲಿಜೆನ್ಸ್‌ಗೆ ವಿಶೇಷ ತರಬೇತಿ ಬೇಕು!

ಎಲ್ಲಿಯೂ ಸಲ್ಲದವನು ಇಂಟೆಲಿಜೆನ್ಸಿಯಲ್ಲಿರುತ್ತಾನೆ. ಟ್ರಾನ್ಸ್‌ಫರ್‌ ಮಾಡಿಸಿಕೊಳ್ಳಲು ಶಕ್ತಿ ಇಲ್ಲದವರು ಅನೇಕರು ಅಲ್ಲಿಗೆ ಹೋಗುತ್ತಾರೆ. ಎಲ್ಲರೂ ಹಾಗೇ ಎಂದು ನಾನು ಹೇಳುವುದಿಲ್ಲ. ಕೆಲವರು ಇಲ್ಲಿ ಸಮರ್ಥರೂ ಇರುತ್ತಾರೆ. ಆದರೆ, ಅವರು ಎಷ್ಟರಮಟ್ಟಿಗೆ ಮಾಹಿತಿಯನ್ನು ಸಂಗ್ರಹಿಸಬಹುದೋ ಅಷ್ಟನ್ನು ಸಂಗ್ರಹ ಮಾಡುತ್ತಾರೆ. ಹೀಗಾಗಿ ಇಲ್ಲಿ ಸಂಘಟನಾ ಪ್ರಯತ್ನ ಬೇಕು. ಈ ವ್ಯವಸ್ಥೆಯನ್ನು ಪುನರ್‌ ಬಲಪಡಿಸುವ ಕೆಲಸ ಮಾಡಬೇಕಿದೆ. ಇಲ್ಲಿ ದುಡಿಯುವ ಅಪೇಕ್ಷೆ ಇದ್ದವನನ್ನು ಅಲ್ಲಿಗೆ ಹಾಕಬೇಕು ಎಂಬುವವರನ್ನು ಅಲ್ಲಿಗೆ ನೇಮಕ ಮಾಡಬೇಕು. ಕೆಲವರಿಗೆ ಇಂಟೆಲಿಜನ್ಸ್‌ ಪೊಲೀಸ್‌ ನೌಕರಿಯೇ ಅಲ್ಲ, ಪೊಲೀಸ್‌ ಸಮವಸ್ತ್ರ ಹಾಕಿದರೆ ಮಾತ್ರವೇ ಅದು ಉದ್ಯೋಗ ಎಂಬ ಭಾವನೆ ಇದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

ಇದನ್ನೂ ಓದಿ: Pradeep Eshwar : ಆಟೋ ಡ್ರೈವರ್‌ ಆದ ಪ್ರದೀಪ್‌ ಈಶ್ವರ್;‌ ಪ್ರತಿ ವರ್ಷ 5000 ಧನಸಹಾಯ!

ಪೊಲೀಸ್‌ ಇಂಟಲಿಜೆನ್ಸ್‌ಗೆ ಪ್ರತ್ಯೇಕವಾದ ಘಟಕವನ್ನು ಮಾಡಬೇಕು. ಅವರಿಗೆ ವಿಶೇಷವಾದ ತರಬೇತಿ ಕೊಡಬೇಕಿದೆ. ಉದಾಹರಣೆಗೆ ಕೇಂದ್ರ ಸರ್ಕಾರದಲ್ಲಿನ ಎನ್‌ಐಎ ಸೇರಿದಂತೆ ಇತರ ಘಟಕಗಳಿಗೆ ನೀಡುವ ವಿಶೇಷ ತರಬೇತಿಯಂತೆ ಇವರಿಗೂ ಪರಿಣಿತಿ ಸಾಧಿಸಲು ಟ್ರೈನಿಂಗ್‌ ಕೊಡಬೇಕಿದೆ. ಆಗ ಕೆಜಿ ಹಳ್ಳಿ, ಡಿಜೆ ಹಳ್ಳಿಯಂತಹ ಘಟನೆಗಳನ್ನು ತಪ್ಪಿಸಬಹುದು ಎಂದು ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Aplastic anemia : ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ ಆಫ್ರಿಕಾ ಮೂಲದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Aplastic anemia : ಆಫ್ರಿಕಾ ಮೂಲದ ಬಾಲಕ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ. ಆತನಿಗೆ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನೀಡಿದೆ.

VISTARANEWS.COM


on

By

African boy successfully undergoes surgery for rare aplastic anemia
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾಗಿದ್ದ ಕಾರಣ ಅತಿ ವಿರಳ ಕಾಯಿಲೆಯಾದ ಅಪ್ಲ್ಯಾಸ್ಟಿಕ್ ರಕ್ತ ಹೀನತೆಯಿಂದ ಬಳಲುತ್ತಿದ್ದ 16 ವರ್ಷದ ಬಾಲಕನಿಗೆ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ (Aplastic anemia) ನೀಡಲಾಗಿದೆ.

ಫೋರ್ಟಿಸ್ ಆಸ್ಪತ್ರೆಯ ಮೆಡಿಕಲ್‌ ಮತ್ತು ಹೆಮಟೋ ಆಂಕೊಲಾಜಿಯ ಹಿರಿಯ ನಿರ್ದೇಶಕಿ ಡಾ. ನೀತಿ ರೈಜಾದಾ, ಹೆಮಟೋ ಆಂಕೊಲಾಜಿ ಸಮಾಲೋಚಕ ಡಾ ನಿಶಿತ್ ಓಜ್ಹಾ, ಪೀಡಿಯಾಟ್ರಿಕ್ ಹೆಮಟೋ ಆಂಕೊಲಾಜಿಯ ಸಲಹೆಗಾರರಾದ ಡಾ ತನುಶ್ರೀ ಪಾಲ್ ಅವರ ವೈದ್ಯ ತಂಡ ಈ ಬಾಲಕನಿಗೆ ಸಮಯೋಚಿತವಾಗಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಬಾಲಕನ ಜೀವ ಉಳಿಸಲಾಗಿದೆ.

ಈ ಕುರಿತು ಮಾತನಾಡಿದ ಡಾ. ನೀತಿ ರೈಜಾದಾ, ಆಫ್ರೀಕಾ ಮೂಲದ 16 ವರ್ಷದ ಮೈಕೆಲ್ ಎಂಬಾತನಿಗೆ ಕಳೆದ ಎರಡು ತಿಂಗಳಿನಿಂದ ತೀವ್ರವಾದ ಜ್ವರ, ಆಯಾಸ, ದೌರ್ಬಲ್ಯಗಳಿಂದ ಬಳಲುತ್ತಿದ್ದರು. ಅಷ್ಟೇ ಅಲ್ಲದೆ, ಆತನ ಬಲ ಕಿವಿಯಿಂದ ರಕ್ತಸ್ತ್ರಾವವಾಗಲು ಪ್ರಾರಂಭಗೊಂಡಿತ್ತು. ಇದರಿಂದ ಭಯಭೀತಗೊಂಡ ಅವರ ಕುಟುಂಬ ಆಫ್ರಿಕಾದಲ್ಲಿರುವ ಎಲ್ಲಾ ಆಸ್ಪತ್ರೆಗಳಿಗೆ ತೋರಿಸಿದರೂ, ಬಾಲಕನ ಆರೋಗ್ಯ ಸಮಸ್ಯೆ ಏನೆಂದು ತಿಳಿಯಲಿಲ್ಲ. ಹೀಗಾಗಿ ಅವರು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು.

African boy successfully undergoes surgery for rare aplastic anemia
African boy successfully undergoes surgery for rare aplastic anemia

ಬಾಲಕನ ಸಂಪೂರ್ಣ ತಪಾಸಣೆ ಬಳಿಕ, ಆ ಬಾಲಕನಿಗೆ ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆ ಆಗಿರುವುದು ತಿಳಿದುಬಂತು. ಇದು ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾದ ಕಾರಣ ಆ ಬಾಲಕ ರಕ್ತ ಹೀನತೆಗೆ ಒಳಗಾಗಿದ್ದ. ಹೀಗಾಗಿ ಆತನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿ ಮಾಡುವ ಅವಶ್ಯಕತೆ ಅನಿವಾರ್ಯವಾಗಿತ್ತು. ಆದರೆ, ಬಾಲಕನ ರಕ್ತದ ಗುಂಪಿಗೆ ಹೊಂದುವಂತೆ ಸ್ಟೆಮ್‌ಸೆಲ್‌ ಸಿಗದೇ ಸಮಸ್ಯೆ ಎದುರಾಗಿತ್ತು.

ಈ ಮಧ್ಯೆ ಬಾಲಕನ ಹಿರಿಯ ಸಹೋದರಿಯೇ ತನ್ನ ತಮ್ಮನಿಗೆ ಹ್ಯಾಪ್ಲೊಂಡೆಂಟಿಕಲ್‌ ದಾನ ಮಾಡಲು ಮುಂದಾದರು. ಆದರೆ, ಬಾಲಕನಿಗೆ ಬಲಕಿವಿ ಸೋಂಕಿನಿಂದ ಸೋರುತ್ತಿದ್ದ ಕಾರಣ, ಮೊದಲು ಕಿವಿ ಶಸ್ತ್ರಚಿಕಿತ್ಸೆ ಮುಂದಾಗಬೇಕಾಯಿತು. ಬಾಲಕನ ಬಲ ಕಾರ್ಟಿಕಲ್‌ ಮಾಸ್ಟೊಡೆಕ್ಟಮಿ (ಕಿವಿ ಸುತ್ತ ಇರುವ ಸೋಂಕಿನ ಅಂಗಾಂಶ) ತೆಗೆದು ಹಾಕಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ಇದಾದ ಬಳಿಕ ಬಾಲಕನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿಯನ್ನು ಯಶಸ್ವಿಯಾಗಿ ನಡೆಸಲಾಯಿತು. ಇದೀಗ ಬಾಲಕ ಗುಣಮುಖರಾಗುತ್ತಿದ್ದಾನೆ ಎಂದು ವಿವರಿಸಿದರು.

Continue Reading

ಚಿತ್ರದುರ್ಗ

Self Harming: ಪ್ರೀತ್ಸೆ ಅಂತ ಪ್ರಾಣ ತಿಂದ ಯುವಕ; ಕಾಲೇಜು ಕಟ್ಟಡದ ಮೇಲಿಂದು ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Self Harming: ಯುವಕನ ಕಾಟಕ್ಕೆ ಬೇಸತ್ತ ಯುವತಿಯೊಬ್ಬಳು ಕಾಲೇಜು ಕಟ್ಟದ ಮೇಲಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Self Harming
Koo

ಚಿತ್ರದುರ್ಗ/ ಬೆಂಗಳೂರು: ಕಾಲೇಜು ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿ (Self Harming) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಟ್ಟಡ ಮೇಲಿಂದ ಬಿದ್ದು ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ. ಚಿತ್ರದುರ್ಗ ನಗರದ ಚಿತ್ರಾ ಡಾನ್ ಬೋಸ್ಕೋ ಕಾಲೇಜಲ್ಲಿ ಪ್ರಥಮ ಬಿಎಸ್ಸಿ ಓದುತ್ತಿದ್ದ ಪ್ರೇಮಾ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟವಳು.

ಚಿತ್ರದುರ್ಗದ ಮೆದೆಹಳ್ಳಿ ನಿವಾಸಿ ಆಗಿದ್ದ ಪ್ರೇಮಾ, ಶುಕ್ರವಾರ ಬೆಳಗ್ಗೆ ಕಾಲೇಜಿಗೆ ಬಂದು ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಬಡಾವಣೆ ಪೊಲೀಸ್ ಠಾಣೆ ಪಿಎಸ್‌ಐ ರಘು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಪ್ರೇಮಾಳಿಗೆ ಯುವಕನೊಬ್ಬ ಕಿರುಕುಳ ನೀಡುತ್ತಿದ್ದ ಎನನ್ಲಾಗಿದೆ. ತರುಣ್‌ ಎಂಬಾತ ಪ್ರೀತಿ‌ ಮಾಡುವಂತೆ ಪ್ರೇಮಾಳಿಗೆ ಪೀಡುಸುತ್ತಿದ್ದ ಎನ್ನಲಾಗಿದೆ. ವಾಟ್ಸ್‌ ಆ್ಯಪ್‌ನಲ್ಲಿ ನಿತ್ಯವೂ ಚಾಟಿಂಗ್ ಮಾಡಿ ಕಿರಿಕಿರಿ ಮಾಡುತ್ತಿದ್ದ. ಆತ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ತರುಣ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದರು.

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಇಂಡ್ಲವಾಡಿ ಕ್ರಾಸ್ ಬಳಿ ನಡೆದಿದೆ. ಇಬ್ರಾಜ್ ಗುರುಂಗ(49) ಆತ್ಮಹತ್ಯೆಗೆ ಶರಣಾದವರು. ಅಸ್ಸಾಂ ಮೂಲದ ಇಬ್ರಾಜ್ ಗುರುಂಗ ಪ್ಯೊಚರ್ ಕಿಚನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಂಡ್ಲವಾಡಿ ಬಳಿ ಬಾಡಿಗೆ ಮನೆಯಲ್ಲಿ ಮೂವರು ಸ್ನೇಹಿತರೊಂದಿಗೆ ವಾಸವಿದ್ದರು. ಕಳೆದ ರಾತ್ರಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸ್ನೇಹಿತರು ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೆ. ಮೃತದೇಹವನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಸಾವು

ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ – ರಾಜಾನುಕುಂಟೆ ರೈಲ್ವೆ ಮಾರ್ಗದ ಮಧ್ಯೆ ಘಟನೆ ನಡೆದಿದೆ. 55 ವರ್ಷದ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ. ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಸಾವೋ ಎನ್ನುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಲಿಸುತ್ತಿದ್ದ ರೈಲಿನಿಂದ ಬಿದ್ದು ಸಾವನ್ನಪ್ಪಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಸಿನಿಮಾ

Deepak Aras: ನಟಿ ಅಮೂಲ್ಯ ಸಹೋದರ ಚಲನಚಿತ್ರ ನಿರ್ದೇಶಕ ದೀಪಕ್ ಅರಸ್ ಅನಾರೋಗ್ಯದಿಂದ ನಿಧನ

Deepak Aras: ನಟಿ ಅಮೂಲ್ಯ ಸಹೋದರ ಚಲನಚಿತ್ರ ನಿರ್ದೇಶಕ ದೀಪಕ್ ಅರಸ್ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

VISTARANEWS.COM


on

By

Actress Amulyas brother film director Deepak aras passes away
Koo

ಬೆಂಗಳೂರು: ನಟಿ ಅಮೂಲ್ಯ ಸಹೋದರ, ಚಲನಚಿತ್ರ ನಿರ್ದೇಶಕ ದೀಪಕ್ ಅರಸ್ (46) ಬದುಕಿನ ಪಯಣ ಮುಗಿಸಿದ್ದಾರೆ. ದೀರ್ಘ ಅನಾರೋಗ್ಯದಿಂದ ಬಳಲುತ್ತಿದ್ದ ದೀಪಕ್ (Deepak Aras) ಶುಕ್ರವಾರ ಬೆಳಗ್ಗೆ 6 ಗಂಟೆಗೆ ನಿಧನರಾಗಿದ್ದಾರೆ. ಮನಸಾಲಜಿ, ಶುಗರ್ ಫ್ಯಾಕ್ಟರಿ ಸಿನಿಮಾಗಳನ್ನು ದೀಪಕ್ ಅರಸ್ ನಿರ್ದೇಶಿಸಿದ್ದರು. 3 ದಿನಗಳಿಂದ ಕೋಮದಲಿದ್ದ ದೀಪಕ್ ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಮಲ್ಲೇಶ್ವರಂ ಪೈಪ್ ಲೈನ್ ರಸ್ತೆಯಲ್ಲಿರುವ ಮನೆ ಬಳಿ ದೀಪಕ್ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಶುಕ್ರವಾರ ಮಧ್ಯಾಹ್ನ 4 ಗಂಟೆಗೆ ಸುಮ್ಮನಹಳ್ಳಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ದೀಪಕ್ ಸಹೋದರ ಪವನ್ ಮಾಹಿತಿ ನೀಡಿದ್ದಾರೆ. ಅಣ್ಣ ದೀಪಕ್ ಕುರಿತು ನಟಿ ಅಮೂಲ್ಯ ಪೋಸ್ಟ್ ಹಾಕಿದ್ದಾರೆ. ದೀಪಣ್ಣ ಇಂದು ಬೆಳಗ್ಗೆ 6ಗಂಟೆಗೆ ನಮೆಲ್ಲರನ್ನು ಅಗಲಿದ್ದಾರೆ.

ಮದುವೆ ಆಗಿ ಎರಡು ಮಕ್ಕಳಿರುವ ದೀಪಕ್‌ಗೆ ಕಿಡ್ನಿ ಫೆಲ್ಯುರ್‌ ಆಗಿತ್ತು, ಡಯಾಲಿಸಿಸ್ ಮಾಡಿಸುತ್ತಿದ್ದರು. ಆರ್ ಆರ್ ನಗರದಲ್ಲಿರುವ ಬಿಜಿಎಸ್ ಆಸ್ಪತ್ರೆಯಲ್ಲಿ ದೀಪಕ್ ಅರಸ್ ಕೊನೆಯುಸಿರೆಳೆದಿದ್ದಾರೆ.

Continue Reading

ಬೆಂಗಳೂರು

Fraud Case : ಲೋಕಸಭೆ ಚುನಾವಣೆಗೆ ಟಿಕೆಟ್‌ ಕೊಡಿಸುವುದಾಗಿ ಕೋಟಿ ರೂ. ಲೂಟಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹೋದರನ ವಿರುದ್ಧ ಎಫ್‌ಐಆರ್‌ ದಾಖಲು

Fraud Case : ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಮಾಜಿ ಶಾಸಕನಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಸಹೋದರ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಕೊಟ್ಟ ಹಣ ಕೇಳಿದರೆ ಹಲ್ಲೆ ಮಾಡಿ, ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ.

VISTARANEWS.COM


on

By

Fraud case Union Minister Pralhad Joshis brother duped of ticket for Lok Sabha polls
ಮಾಜಿ ಶಾಸಕ ದೇವಾನಂದ್ ಚೌಹಾಣ್ ಹಾಗೂ ಗೋಪಾಲ್‌ ಜೋಶಿ
Koo

ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಸಹೋದರನ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ. ಪ್ರಲ್ಹಾದ ಜೋಶಿ ಸಹೋದರ ಗೋಪಾಲ್‌ ಜೋಶಿ ಎಂಬುವವರು ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಬರೋಬ್ಬರಿ 2 ಕೋಟಿ ರೂ. ವಂಚಿಸಿರುವುದಾಗಿ (Fraud Case) ಎಫ್‌ಐಆರ್‌ ದಾಖಲಾಗಿದೆ. ಗೋಪಾಲ್ ಜೋಶಿ ಸೇರಿದಂತೆ ಸಹೋದರಿ ವಿಜಯಲಕ್ಷ್ಮಿ ಜೋಶಿ, ಪುತ್ರ ಅಜಯ್ ಜೋಶಿ ವಿರುದ್ಧವೂ ಕೇಸ್ ದಾಖಲಾಗಿದೆ.

ಮಾಜಿ ಶಾಸಕ ದೇವಾನಂದ್ ಚೌಹಾಣ್ ಅವರ ಪತ್ನಿ ಸುನೀತಾ ಚೌಹಾಣ್ ಎಂಬುವರಿಂದ ಬಸವೇಶ್ವರ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. 2018ರಲ್ಲಿ ನಾಗಠಾಣಾ ಕ್ಷೇತ್ರದಿಂದ ಜೆಡಿಎಸ್‌ (JDS)ದೇವಾನಂದ್ ಚೌಹಾಣ್ ಶಾಸಕರಾಗಿದ್ದರು. 2023ರ ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ದೇವಾನಂದ್ ಚೌಹಾಣ್ ಸೋತಿದ್ದರು. ಬಳಿಕ ಪರಿಚಯಸ್ಥ ಶೇಖರ್ ನಾಯಕ್ ಮೂಲಕ ಗೋಪಾಲ್ ಜೋಶಿ ಪರಿಚಯವಾಗಿದ್ದರು. ಮಾರ್ಚ್ ಮೊದಲ ವಾರ ಹುಬ್ಬಳ್ಳಿಯಲ್ಲಿ ಗೋಪಾಲ್ ಜೋಶಿ ಚೌಹಾಣ್ ದಂಪತಿಯನ್ನು ಭೇಟಿ ಮಾಡಿದ್ದರು. ಈ ವೇಳೆ 2024ರ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿದ್ದರು. ನನ್ನ ತಮ್ಮನಿಗೆ ಕೇಂದ್ರ ಸರ್ಕಾರದಲ್ಲಿ ವರ್ಚಸ್ಸು ಚೆನ್ನಾಗಿದೆ. ಪ್ರಹ್ಲಾದ್ ಜೋಶಿ ಹೇಳಿದಂತೆ ಮೋದಿ, ಅಮಿತ್ ಶಾ ಕೇಳುತ್ತಾರೆ. ಹೀಗಾಗಿ ಬಿಜಾಪುರ ಕ್ಷೇತ್ರದಿಂದ ನಿಮಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿದ್ದರು.

ಗೋಪಾಲ್ ಜೋಶಿ ಟಿಕೆಟ್‌ಗೆ ಬರೋಬ್ಬರಿ 5 ಕೋಟಿ ರೂ. ಬೇಡಿಕೆ ಇಟ್ಟಿದ್ದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಚೇರಿಯಲ್ಲಿಯೇ ಡೀಲ್ ನಡೆದಿತ್ತು. ಆದರೆ 5 ಕೋಟಿ ರೂ.‌ಸಾಧ್ಯವಿಲ್ಲ ಎಂದು ಚೌಹಣ್ ದಂಪತಿ ಹೊರಟು ಹೋಗಿದ್ದರು ಎನ್ನಲಾಗಿದೆ. ಬಳಿಕ ಗೋಪಾಲ್ ಜೋಶಿ ಮತ್ತು ಶೇಖರ್ ಇಬ್ಬರು ಚೌಹಣ್ ದಂಪತಿ ಮನವೊಲಿಸಿದ್ದರು. ಸದ್ಯಕ್ಕೆ 25 ಲಕ್ಷ ರೂ. ಕೊಟ್ಟು ಉಳಿದ ಹಣಕ್ಕೆ ಚೆಕ್ ಕೊಡಿ ಎಂದಿದ್ದರಂತೆ. ಹೀಗಾಗಿ ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ಗೋಪಾಲ್ ಜೋಶಿ ಸಹೋದರಿ ವಿಜಯಲಕ್ಷ್ಮಿ ಮನೆಗೆ 25 ಲಕ್ಷ ರೂ. ಹಣವನ್ನು ತಂದು ಸುನೀತಾ ಚೌಹಣ್ ನೀಡಿದ್ದರು. ಆದರೆ ದೇವನಾಂದ್‌ಗೆ ಗೋಪಾಲ್ ಜೋಶಿ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸಲಿಲ್ಲ.

ಸುನೀತಾ ಚೌಹಾಣ್ ತಮ್ಮ 25 ಲಕ್ಷ ರೂ.‌ ಹಣ ನೀಡುವಂತೆ ಕೇಳಿದ್ದಾರೆ. ಹಣ ಕೇಳಿದರೆ 200 ಕೋಟಿ ರೂ. ಪ್ರಾಜೆಕ್ಟ್ ಹಣ ಬರಬೇಕು ಕೊಡುವುದಾಗಿ ಸಬೂಬು ನೀಡಿದ್ದಾರೆ. ಅಷ್ಟಲ್ಲದೇ ಗೋಪಾಲ್ ಜೋಶಿ, ಸುನೀತಾ ಬಳಿ ಮತ್ತೆ 1.75 ಕೋಟಿ ರೂ. ಹಣ ಕೇಳಿದ್ದರು. ಮುಂದಿನ ಚುನಾವಣೆಗೆ ಸಹಾಯ ಮಾಡುವುದಾಗಿ ಹಣ ಕೇಳಿದ್ದರು. ಈ ಮಾತನ್ನು ನಂಬಿ ಮತ್ತೆ 1.75 ಕೋಟಿ ಹಣವನ್ನು ವಿಜಯಲಕ್ಷ್ಮಿಗೆ ಸುನೀತಾ ಚೌಹಣ್ ನೀಡಿದ್ದರು. ಆದರೆ ಹಣ ಕೇಳಿದಾಗ ಸಬೂಬು ಗೋಪಾಲ್, ವಿಜಯಲಕ್ಷ್ಮಿ ಹೇಳುತ್ತಿದ್ದರು.

ಈ ವೇಳೆ ಗೋಪಾಲ್ ಜೋಶಿ ಪುತ್ರ ಅಜಯ್ ಜೋಶಿ ಹಣ ನಾನು ವಾಪಸ್ ಕೊಡುವುದಾಗಿ ಹೇಳಿದ್ದರು. ಆದರೆ ಯಾರು ಕೂಡ ಸುನೀತಾಗೆ ಹಣ ವಾಪಸ್ ನೀಡಿರಲಿಲ್ಲ. ಕಳೆದ ಆ. 1ರಂದು ವಿಜಯಲಕ್ಷ್ಮಿ ಮನೆ ಬಳಿ ಬಂದಿದ್ದ ಸುನೀತಾ, ಹಣ ಕೇಳಿದಾಗ, ಹಲ್ಲೆ ಮಾಡಿ, ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ. ಪೊಲೀಸರ ಮೊರೆ ಹೋಗಿರುವ ಸುನೀತಾ ಚೌಹಣ್ ಬಸವೇಶ್ವರ ನಗರ ಠಾಣೆಯಲ್ಲಿ ವಂಚನೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

Continue Reading
Advertisement
African boy successfully undergoes surgery for rare aplastic anemia
ಬೆಂಗಳೂರು51 ನಿಮಿಷಗಳು ago

Aplastic anemia : ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ ಆಫ್ರಿಕಾ ಮೂಲದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Self Harming
ಚಿತ್ರದುರ್ಗ4 ಗಂಟೆಗಳು ago

Self Harming: ಪ್ರೀತ್ಸೆ ಅಂತ ಪ್ರಾಣ ತಿಂದ ಯುವಕ; ಕಾಲೇಜು ಕಟ್ಟಡದ ಮೇಲಿಂದು ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Actress Amulyas brother film director Deepak aras passes away
ಸಿನಿಮಾ5 ಗಂಟೆಗಳು ago

Deepak Aras: ನಟಿ ಅಮೂಲ್ಯ ಸಹೋದರ ಚಲನಚಿತ್ರ ನಿರ್ದೇಶಕ ದೀಪಕ್ ಅರಸ್ ಅನಾರೋಗ್ಯದಿಂದ ನಿಧನ

Fraud case Union Minister Pralhad Joshis brother duped of ticket for Lok Sabha polls
ಬೆಂಗಳೂರು6 ಗಂಟೆಗಳು ago

Fraud Case : ಲೋಕಸಭೆ ಚುನಾವಣೆಗೆ ಟಿಕೆಟ್‌ ಕೊಡಿಸುವುದಾಗಿ ಕೋಟಿ ರೂ. ಲೂಟಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹೋದರನ ವಿರುದ್ಧ ಎಫ್‌ಐಆರ್‌ ದಾಖಲು

Dina bhavishya
ಭವಿಷ್ಯ12 ಗಂಟೆಗಳು ago

Dina Bhavishya : ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಪಿತೂರಿ ಮಾಡುವ ಜನರ ಬಗ್ಗೆ ಇರಲಿ ಎಚ್ಚರ

Gosavi samaj lathicharged Sri Ram Sene calls for bandh in Lakshmeshwara town on October 19
ಗದಗ1 ದಿನ ago

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

A man killed his wife and her lover then committed suicide
ಬೆಂಗಳೂರು1 ದಿನ ago

Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

Parvati Nair to play dual role in suspense thriller un Paravail Tamil film
ಸಿನಿಮಾ1 ದಿನ ago

Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

ಬೆಂಗಳೂರು1 ದಿನ ago

Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

Jio Cloud PC to turn home TV into computer
ಹೊಸ ಸುದ್ದಿ1 ದಿನ ago

Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌