CM Siddaramaiah: ರಾಜಭವನದ ದುರ್ಬಳಕೆ ಮಾಡಿ ಚುನಾಯಿತ ಸರ್ಕಾರ ಅಸ್ಥಿರಗೊಳಿಸಲು ಕೇಂದ್ರ ಪ್ರಯತ್ನ: ಸಿಎಂ ಕಿಡಿ - Vistara News

ಕರ್ನಾಟಕ

CM Siddaramaiah: ರಾಜಭವನದ ದುರ್ಬಳಕೆ ಮಾಡಿ ಚುನಾಯಿತ ಸರ್ಕಾರ ಅಸ್ಥಿರಗೊಳಿಸಲು ಕೇಂದ್ರ ಪ್ರಯತ್ನ: ಸಿಎಂ ಕಿಡಿ

CM Siddaramaiah: ಕೆ. ಜೆ.ಅಬ್ರಹಾಂ ಒಬ್ಬ ಬ್ಲ್ಯಾಕ್ ಮೇಲರ್. ಆತನ ದೂರಿನ ಮೇಲೆ ಕ್ರಮ ಕೈಗೊಂಡಿರುವುದು ಕಾನೂನು ಬಾಹಿರವಾದ ವಿಚಾರ. ಆತ ಈ ರೀತಿ ಅನೇಕ ಜನರ ಮೇಲೆ ದೂರುಗಳನ್ನು ನೀಡಿದ್ದಾನೆ. ನಾನು ಯಾವುದೇ ಅಪರಾಧವನ್ನು ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ರಾಜಭವನದ ದುರ್ಬಳಕೆ ಮಾಡಿ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಮೈಸೂರಿನಲ್ಲಿ ಕೊಡಗು ಜಿಲ್ಲೆಗೆ ತೆರಳುವ ಮುನ್ನ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೋಕಾಸ್ ನೋಟಿಸ್‌ ಕೊಟ್ಟಿರುವುದು ಕಾನೂನುಬಾಹಿರವಾಗಿದೆ, ಸಂವಿಧಾನಕ್ಕೆ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಕಿಡಿಕಾರಿದರು.

ನೋಟಿಸ್‌ ಹಿಂಪಡೆಯಲು ರಾಜ್ಯಪಾಲರಿಗೆ ಸಲಹೆ ನೀಡಲು ನಿರ್ಧಾರ

ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟಿರುವ ಸಂದರ್ಭದಲ್ಲಿ ಏನು ಬೆಳವಣಿಗಳಾಗಿವೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ನೆನ್ನೆ ನಡೆದ ಸಚಿವ ಸಂಪುಟ ಸಭೆಗೆ ಕೆಟ್ಟ ಸಾಂಪ್ರದಾಯವಾಗುತ್ತದೆ ಎಂದು ಸಭೆಗೆ ಹೋಗದೇ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟ ಸಭೆ ನಡೆಸಲು ನೇಮಿಸಲಾಗಿತ್ತು. ಶೋಕಾಸ್ ನೋಟಿಸ್ ಬಗ್ಗೆ ಸುದೀರ್ಘ ಚರ್ಚೆ ಮಾಡಿ, ನೋಟಿಸು ನೀಡಿರುವುದು ಕಾನೂನು ಬಾಹಿರವಾಗಿದ್ದು, ನೋಟಿಸನ್ನು ಹಿಂಪಡೆಯಬೇಕೆಂದು ನಿರ್ಧರಿಸಲಾಗಿದೆ ಎಂದರು.

ಇದನ್ನೂ ಓದಿ | BBMP Property Tax: ಆಸ್ತಿ ತೆರಿಗೆ ಒನ್‌ ಟೈಮ್‌ ಸೆಟ್ಲ್‌ಮೆಂಟ್‌ಗೆ ಮತ್ತೆ 1 ತಿಂಗಳು ಕಾಲಾವಕಾಶ ವಿಸ್ತರಣೆ ಮಾಡಿದ ಬಿಬಿಎಂಪಿ

ಯಾವುದೇ ಅಪರಾಧ ಮಾಡಿಲ್ಲ

ಕೆ. ಜೆ.ಅಬ್ರಹಾಂ ಒಬ್ಬ ಬ್ಲ್ಯಾಕ್ ಮೇಲರ್. ಆತನ ದೂರಿನ ಮೇಲೆ ಕ್ರಮ ಕೈಗೊಂಡಿರುವುದು ಕಾನೂನು ಬಾಹಿರವಾದ ವಿಚಾರ. ಆತ ಈ ರೀತಿ ಅನೇಕ ಜನರ ಮೇಲೆ ದೂರುಗಳನ್ನು ನೀಡಿದ್ದಾನೆ. ನಾನು ಯಾವುದೇ ಅಪರಾಧವನ್ನು ಮಾಡಿಲ್ಲ. ಜುಲೈ 26ರಂದು ಬೆಳಗ್ಗೆ 11.30 ಗೆ ದೂರು ನೀಡಿದ್ದು, ಅಂದೇ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. ಒಂದೇ ದಿನದಲ್ಲಿ ಕಾನೂನು ವಿಷಯವನ್ನು ಒಳಗೊಂಡ ವಿಚಾರವನ್ನು, 136 ಜನ ಶಾಸಕರನ್ನು ಜನ ಆಶೀರ್ವಾದ ಮಾಡಿ ಕಳಿಸಿರುವ ಚುನಾಯಿತ ಸರ್ಕಾರದ ಮುಖ್ಯಮಂತ್ರಿಗೆ ನೋಟಿಸ್‌ ಕೊಡುವಾಗ ಎಲ್ಲಾ ಕಾನೂನನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಏನೂ ನೋಡದೇ ಆತುರವಾಗಿ ಕೆಲಸ ಮಾಡಿದ್ದಾರೆ. ಅಂದೇ ನೋಟಿಸ್‌ ನೀಡಿ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರಿಗೆ ವಿಶೇಷ ಕರ್ತವ್ಯಾಧಿಕಾರಿ ಪ್ರಭು ಶಂಕರ್ ಎಂಬುವರು ಕರೆ ಮಾಡಿ ಶೋಕಾಸ್ ನೋಟಿಸ್ ಸಿದ್ಧವಿದೆ ತೆಗೆದುಕೊಳ್ಳಬೇಕು ಎಂದಿದ್ದಾರೆ. ರಾತ್ರಿಯಾಗಿರುವುದರಿಂದ ಅದನ್ನು ಪಡೆಯಲಾಗಲಿಲ್ಲ. ಮಾರನೇ ದಿನ 2 ಗಂಟೆಗೆ ನೋಟಿಸನ್ನು ಆತುರವಾಗಿ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಕಳೆದ ಸರ್ಕಾರದ ಸಚಿವರ ಮೇಲಿನ ದೂರಿನ ಬಗ್ಗೆ ಕ್ರಮ ಏಕಿಲ್ಲ

ಶಶಿಕಲಾ ಜೊಲ್ಲೆ , ಮುರುಗೇಶ್ ನಿರಾಣಿ , ಜನಾರ್ಧನ್ ರೆಡ್ಡಿಯವರುಗಳ ಮೇಲೆ ವರ್ಷಗಟ್ಟಲೇ ದೂರಿದೆ. ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಏನೂ ಇಲ್ಲದೆ ಅನಗತ್ಯವಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು.

ಯಾವುದನ್ನೂ ಪರಿಗಣಿಸದೆ ಆತುರವಾಗಿ ನೋಟಿಸ್‌

ರಾಜ್ಯಪಾಲರಿಗೆ ಸಲಹೆ ನೀಡಬೇಕಿರುವುದು ನಮ್ಮ ಮಂತ್ರಿ ಮಂಡಲದವರು. ನಾವು ಸಲಹೆ ನೀಡಿಲ್ಲ. ಮುಖ ಕಾರ್ಯದರ್ಶಿಗಳು ವಿವರವಾದ ಪತ್ರವನ್ನು ಜುಲೈ 26 ರಂದು ಸಂಜೆ 6.30 ಗಂಟೆಗೆ ರಾಜ್ಯಪಾಲರಿಗೆ ತಲುಪಿಸಿದ್ದಾರೆ. ಅದನ್ನೂ ಅವರು ನೋಡಿಲ್ಲ. ಮುಡಾ ಪ್ರಕರಣದ ಬಗ್ಗೆ ನ್ಯಾಯಾಂಗ ಆಯೋಗವನ್ನು ಜುಲೈ 14 ರಂದು ಸರ್ಕಾರ ರಚಿಸಿದೆ. ಆಯೋಗದ ವರದಿಯನ್ನು ನಿರೀಕ್ಷಿಸಲಾಗಿದೆ. ತನಿಖೆ ನಡೆಸಿ ತಪ್ಪುಗಳಾಗಿದ್ದರೆ ವರದಿ ಸಲ್ಲಿಸುತ್ತಾರೆ. ಅದನ್ನೂ ಪರಿಗಣಿಸದೆ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ ಎಂದರು.

ವರಿಷ್ಠರಿಗೆ ಮನವರಿಕೆ‌

ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿಕೊಡಲಾಗಿದೆ. ಅವರಿಗೆ ವಸ್ತುಸ್ಥಿತಿ ಅರ್ಥವಾಗಿದೆ ಎಂದರು.

ಆರ್.ಅಶೋಕ್ ಹೆದರಿರಬೇಕು

ರಾಜ್ಯಪಾಲರು ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಹೆದರಿದ್ದಾರೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಅಶೋಕ್ ಅವರು ಹೆದರಿರಬಹುದು, ನನಗೆ ಯಾಕೆ ಹೆದರಿಕೆಯಾಗಬೇಕು. ಕಾನೂನಿನ ರೀತ್ಯಾ ಅವರು ನೋಟಿಸ್ ನೀಡಿಲ್ಲ. ತಪ್ಪು ಮಾಡಿದ್ದರೆ ಹೆದರಬೇಕು. ನಾನು ತಪ್ಪು ಮಾಡಿಲ್ಲ ಎಂದರು.

ಕುಮಾರಸ್ವಾಮಿ ಸ್ವಇಚ್ಛೆಯಿಂದ ಪಾದಯಾತ್ರೆ ಮಾಡುತ್ತಿಲ್ಲ

ಬಿಜೆಪಿ ಪಾದಯಾತ್ರೆ ಮಾಡುವ ಬಗ್ಗೆ ಅಭ್ಯಂತರವಿಲ್ಲ ಎಂದ ಮುಖ್ಯಮಂತ್ರಿಗಳು, ಕೇಂದ್ರ ಸಚಿವ ಹಾಗೂ ಜೆಡಿಎಸ್ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಈ ಪ್ರಕರಣದಲ್ಲಿ ಏನೂ ಇಲ್ಲ ಎಂದು ಪಾದಯಾತ್ರೆ ಬೇಡ ಎಂದರು. ಮಳೆ ಹೆಚ್ಚಾಗಿದೆ, ಜಲಾಶಯಗಳು ತುಂಬಿ ಪ್ರವಾಹ ಬಂದಿದೆ, ಅದರ ಕಡೆಗೆ ಗಮನ ನೀಡಬೇಕೆಂದು ಹೇಳಿದರು. ಈಗ ಅದು ಮರೆತುಹೋಯಿತೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಅಂದರೆ ಅವರ ಸ್ವ ಇಚ್ಛೆಯಿಂದ ಮಾಡುತ್ತಿಲ್ಲ ಎಂದಾಯಿತು ಎಂದರು.

ಮಳೆಯಿಂದಾದ ಹಾನಿಯ ಬಗ್ಗೆ ವರದಿ

ಮಳೆಯಿಂದ ಮನೆ ಬಿದ್ದಿರುವುದು, ರಸ್ತೆ ಹಾಳಾಗಿರುವುದು, ಸೇತುವೆಗಳು, ವಿದ್ಯುತ್ ಕಂಬಗಳು ಬಿದ್ದಿರುವುದ್ದರ ಬಗ್ಗೆ ವರದಿ ತರಿಸುತ್ತಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಹಾನಿಗೊಳಗಾದ ಮನೆಗಳ ನಿರ್ಮಾಣ

ಮನೆಗಳನ್ನು ಕಟ್ಟಿಕೊಡುವುದು ಹಾಗೂ ಪರಿಹಾರ ಕೊಡುತ್ತೇವೆ ಎಂದು ಕಂದಾಯ ಸಚಿವರು ಹೇಳಿರುವುದು ಗೊಂದಲ ಮೂಡಿಸಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಎಸ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ಎಷ್ಟು ಕೊಡಬೇಕೋ ಅಷ್ಟು ಪರಿಹಾರ ನೀಡಿ ಮನೆಯನ್ನೂ ಕಟ್ಟಿಕೊಡಲಾಗುವುದು ಎಂದರು.

ಇದನ್ನೂ ಓದಿ | Viral Video: ನಿನಗೆಷ್ಟು ಬಾಯ್‌ಫ್ರೆಂಡ್‌ ಎನ್ನುತ್ತ ಗೆಳತಿಗೆ ಭೀಕರವಾಗಿ ಇರಿದ ಯುವ ಕಾಂಗ್ರೆಸ್ ಮುಖಂಡ!

ನಾಳೆ ಬೆಳಗ್ಗೆ ನಂಜನಗೂಡಿಗೆ ತೆರಳುತ್ತಿದ್ದು, ಇಂದು ಕೊಡಗು ಜಿಲ್ಲೆಯಲ್ಲಿ ಮಳೆಯಿಂದಾಗಿರುವ ಅನಾಹುತಗಳನ್ನು ಪರಿಶೀಲಿಸಲಾಗುವುದು. ಪ್ರವಾಹ ಬಂದಿರುವ ಸ್ಥಳಗಳಿಗೆ ಎಲ್ಲಾ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಜನರನ್ನು ಭೇಟಿ ಮಾಡುತ್ತಿದ್ದಾರೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Workshop: ಬೆಂಗಳೂರಿನಲ್ಲಿ ಆ.10ರಂದು ಸಿನಿಮಾಸಕ್ತರಿಗೆ ಕಾರ್ಯಾಗಾರ

Workshop: ʼಜಿ ಅಕಾಡೆಮಿʼ ವತಿಯಿಂದ ಕನ್ನಡ ಚಲನಚಿತ್ರ ಉದ್ಯಮದ ಮೇಲೆ ಸಕಾರಾತ್ಮಕ ಪರಿಣಾಮ ಬೀರಲು, ಹೊಸದಾಗಿ ಕಲಾವಿದರು, ನಿರ್ದೇಶಕರು ಮತ್ತು ನಿರ್ಮಾಪಕರಾಗ ಬಯಸುವವರಿಗೆ ಆ.10 ರಂದು ಬೆಂಗಳೂರು ನಗರದ ನಾಗರಭಾವಿಯ ಡಿ-ಗ್ರೂಪ್ ಲೇಔಟ್‌ನಲ್ಲಿರುವ ಜಿ ಅಕಾಡೆಮಿಯಲ್ಲಿ ಬೆಳಿಗ್ಗೆ 9.40 ಕ್ಕೆ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.

VISTARANEWS.COM


on

One day workshop on 10th August by G Academy in Bengaluru
Koo

ಬೆಂಗಳೂರು: ʼಜಿ ಅಕಾಡೆಮಿʼ ವತಿಯಿಂದ ಕನ್ನಡ ಚಲನಚಿತ್ರ ಉದ್ಯಮದ ಮೇಲೆ ಸಕಾರಾತ್ಮಕ ಪರಿಣಾಮ ಬೀರಲು, ಹೊಸದಾಗಿ ಕಲಾವಿದರು, ನಿರ್ದೇಶಕರು ಮತ್ತು ನಿರ್ಮಾಪಕರಾಗ ಬಯಸುವವರಿಗೆ ಆ.10 ರಂದು ಬೆಂಗಳೂರು ನಗರದ ನಾಗರಭಾವಿಯ ಡಿ-ಗ್ರೂಪ್ ಲೇಔಟ್‌ನಲ್ಲಿರುವ ಜಿ ಅಕಾಡೆಮಿಯಲ್ಲಿ ಬೆಳಗ್ಗೆ 9.40ಕ್ಕೆ ಒಂದು ದಿನದ ಕಾರ್ಯಾಗಾರವನ್ನು (Workshop) ಏರ್ಪಡಿಸಲಾಗಿದೆ.

ಇದನ್ನೂ ಓದಿ: Pralhad Joshi: ಪ್ರಸಕ್ತ ಸಕ್ಕರೆ ಋತುವಿನಲ್ಲಿ 1 ಲಕ್ಷ ಕೋಟಿ ರೂ. ರೈತರ ಬಾಕಿ ಪಾವತಿ

ಕಾರ್ಯಾಗಾರದಲ್ಲಿ ಚಲನಚಿತ್ರ ಉದ್ಯಮದ ನಿರ್ಮಾಪಕ-ನಿರ್ದೇಶಕ ಗುರು ದೇಶಪಾಂಡೆ, ನಿರ್ದೇಶಕರಾದ ಬಿ.ಎಂ. ಗಿರಿರಾಜ್ ಮತ್ತು ಆಕಾಶ್ ಶ್ರೀವತ್ಸ, ಪತ್ರಕರ್ತ ಎಸ್. ಶ್ಯಾಮ್ ಪ್ರಸಾದ್ ಪಾಲ್ಗೊಳ್ಳಲಿದ್ದಾರೆ. ಅತಿಥಿ ಭಾಷಣಕಾರರಾಗಿ ಎಂ.ಎಲ್.ಎಂ. ಶರತ್ ಪಾಲ್ಗೊಳ್ಳಲಿದ್ದು, ಚಿತ್ರರಂಗದ ಕಾರ್ಯವಿಧಾನಗಳ ಕುರಿತು ಅವರು ಆಳವಾದ ಮಾಹಿತಿ ನೀಡಲಿದ್ದಾರೆ.

ಇದನ್ನೂ ಓದಿ: Teachers Transfer : ಇಂದಿನಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಶುರು; ವಿವಿಧ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಕಾರ್ಯಾಗಾರವು ಅಂದು ಬೆಳಗ್ಗೆ 9:40 ರಿಂದ ಮಧ್ಯಾಹ್ನ 3:00 ರವರೆಗೆ ನಡೆಯಲಿದ್ದು, ನೋಂದಾಯಿಸಿಕೊಳ್ಳಲು ಮೊ.ಸಂ: 99007 77222 / 99001 95195 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading

ಕರ್ನಾಟಕ

Book Release: ಬೆಂಗಳೂರಿನಲ್ಲಿ ಆ.4ರಂದು ʼರಣಧುರಂಧರʼ ಗ್ರಂಥ ಲೋಕಾರ್ಪಣೆ

Book Release: ಯಾಜಿ ಪ್ರಕಾಶನದಿಂದ ಬೆಂಗಳೂರಿನ ಗಿರಿನಗರದ ಸಂಸ್ಕೃತ ಭಾರತ ಅಕ್ಷರಂ ನಲ್ಲಿ ಇದೇ ಆಗಸ್ಟ್‌ 4 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ “ರಣಧುರಂಧರ” (ಛತ್ರಪತಿ ಶಿವಾಜಿ ಮಹಾರಾಜರ ಹತ್ತು ನಿರ್ಣಾಯಕ ಯುದ್ಧಗಳು ಮತ್ತು ಅವರ ಕಟ್ಟಕಡೆಯ ಯುದ್ಧ- ಒಂದು ವಿಶ್ಲೇಷಣೆ) ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

VISTARANEWS.COM


on

Ranadhurandhara book release in Bengaluru on August 4
Koo

ಬೆಂಗಳೂರು: ಯಾಜಿ ಪ್ರಕಾಶನದಿಂದ ಬೆಂಗಳೂರಿನ ಗಿರಿನಗರದ ಸಂಸ್ಕೃತ ಭಾರತ ಅಕ್ಷರಂನಲ್ಲಿ ಇದೇ ಆಗಸ್ಟ್‌ 4ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ “ರಣಧುರಂಧರ” (ಛತ್ರಪತಿ ಶಿವಾಜಿ ಮಹಾರಾಜರ ಹತ್ತು ನಿರ್ಣಾಯಕ ಯುದ್ಧಗಳು ಮತ್ತು ಅವರ ಕಟ್ಟಕಡೆಯ ಯುದ್ಧ- ಒಂದು ವಿಶ್ಲೇಷಣೆ) ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ (Book Release) ಏರ್ಪಡಿಸಲಾಗಿದೆ.

ಇದನ್ನೂ ಓದಿ: Pralhad Joshi: ಪ್ರಸಕ್ತ ಸಕ್ಕರೆ ಋತುವಿನಲ್ಲಿ 1 ಲಕ್ಷ ಕೋಟಿ ರೂ. ರೈತರ ಬಾಕಿ ಪಾವತಿ

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ತೇಜಸ್ವಿ ಸೂರ್ಯ ಪಾಲ್ಗೊಳ್ಳುವರು. ನವದೆಹಲಿಯ ಸಂಸ್ಕೃತ ಭಾರತಿ ಅಖಿಲ ಭಾರತ ಸಂಘಟನ ಮಂತ್ರಿ ದಿನೇಶ ಕಾಮತ್‌ ಅಧ್ಯಕ್ಷತೆ ವಹಿಸುವರು. ಲೇಖಕ ಸತ್ಯೇಶ್‌ ಬೆಳ್ಳೂರ್‌ ಪುಸ್ತಕ ಪರಿಚಯಿಸುವರು.

ಇದನ್ನೂ ಓದಿ: KSET 2024: ಕೆಸೆಟ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆ.22 ಕೊನೆ ದಿನ; ವೇಳಾಪಟ್ಟಿ ಹೀಗಿದೆ

ಪೂರ್ಣಪ್ರಮತಿ ಶಾಲೆಯ ಮಕ್ಕಳಿಂದ “ಮಹಾನ್‌ ರಾಜಾ ಶಿವಾಜಿ” ಕುರಿತಾಗಿ ಕಿರು ನಾಟಕ ಏರ್ಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading

ಕರ್ನಾಟಕ

Woman Deliver Baby in Auto: ಆಸ್ಪತ್ರೆಗೆ ಹೋಗುವಾಗ ಆಟೋದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

Woman Deliver Baby in Auto: ಆಟೋದಲ್ಲಿ ಹೋಗುತ್ತಿದ್ದಾಗ ಗರ್ಭಿಣಿಗೆ ಹೆರಿಗೆ ನೋವು ಹೆಚ್ಚಾಗಿದ್ದರಿಂದ ಚಾಲಕ ಮಾರ್ಗ ಮಧ್ಯದಲ್ಲಿಯೇ ಆಟೊ ನಿಲ್ಲಿಸಿದ್ದಾನೆ. ನೆರೆಹೊರೆ ಮಹಿಳೆಯರು ಹಾಗೂ ಕುಟುಂಬದ ಸದಸ್ಯರು ಆಟೋ ಸುತ್ತ ಪರದೆ ಕಟ್ಟಿ ಹೆರಿಗೆ ಮಾಡಿಸಿದ್ದಾರೆ.

VISTARANEWS.COM


on

Woman Deliver Baby in Auto
Koo

ರಾಯಚೂರು: ಗರ್ಭಿಣಿಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ತೆರಳುವ ವೇಳೆ ಆಟೊದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಶುಕ್ರವಾರ ನಡೆದಿದೆ. ಪಟ್ಟಣದ ಸಂತೆ ಬಜಾರ್‌ ರಸ್ತೆಯ ಮನೆಯೊಂದರ ಗರ್ಭಿಣಿಗೆ ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕುಟುಂಬಸ್ಥರು ತಕ್ಷಣ ಆಟೋ ಕರೆಸಿದ್ದರು. ಆಟೋದಲ್ಲಿ ಮಹಿಳೆಯನ್ನು ಕೂರಿಸಿಕೊಂಡು ಆಸ್ಪತ್ರೆಗೆ ಹೋಗುವ ವೇಳೆ ಹೆರಿಗೆ ನೋವು ಹೆಚ್ಚಾಗಿದ್ದು, ಈ ವೇಳೆ ಗಂಡು ಮಗುವಿಗೆ ಜನ್ಮ (Woman Deliver Baby in Auto) ನೀಡಿದ್ದಾಳೆ.

ಆಟೋದಲ್ಲಿ ಹೋಗುತ್ತಿದ್ದಾಗ ಗರ್ಭಿಣಿಗೆ ಹೆರಿಗೆ ನೋವು ಹೆಚ್ಚಾಗಿದ್ದರಿಂದ ಚಾಲಕ ಮಾರ್ಗ ಮಧ್ಯದಲ್ಲಿಯೇ ಆಟೊ ನಿಲ್ಲಿಸಿದ್ದಾನೆ. ನೆರೆಹೊರೆ ಮಹಿಳೆಯರು ಹಾಗೂ ಕುಟುಂಬದ ಸದಸ್ಯರು ಆಟೋ ಸುತ್ತ ಪರದೆ ಕಟ್ಟಿ ಹೆರಿಗೆಗೆ ಸಹಕಾರ ನೀಡಿದ್ದಾರೆ. ಮಹಿಳೆಯು ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಆಶಾ ಕಾರ್ಯಕರ್ತೆಯರು ಮಹಿಳೆ ಹಾಗೂ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲು ನೆರವಾಗಿದ್ದಾರೆ.

ಇದನ್ನೂ ಓದಿ | Viral Video: ನಿನಗೆಷ್ಟು ಬಾಯ್‌ಫ್ರೆಂಡ್‌ ಎನ್ನುತ್ತ ಗೆಳತಿಗೆ ಭೀಕರವಾಗಿ ಇರಿದ ಯುವ ಕಾಂಗ್ರೆಸ್ ಮುಖಂಡ!

Viral Video: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ಬಿದ್ದ ಕಬ್ಬಿಣದ ಗೇಟ್; ಶಾಕಿಂಗ್‌ ವಿಡಿಯೊ

Viral Video
Viral Video

ಪುಣೆ : ಮಕ್ಕಳನ್ನು ಮನೆಯ ಹೊರಗೆ ಆಟವಾಡಲು ಬಿಡುವಾಗ ಪೋಷಕರು ಸ್ವಲ್ಪ ಎಚ್ಚರ ವಹಿಸಬೇಕು. ಮಕ್ಕಳನ್ನು ಅವರ ಪಾಡಿಗೆ ಬಿಡಬಾರದು. ಅವರು ಮನೆಯ ಹೊರಗೆ ಆಟವಾಡುತ್ತಿದ್ದರೆ ಅವರ ಕಡೆ ಗಮನ ಕೊಡುತ್ತಿರಬೇಕು. ಇಲ್ಲವಾದರೆ ಇದರಿಂದ ದುರ್ಘಟನೆಗಳು ಸಂಭವಿಸಿ ಮಕ್ಕಳಿಗೆ ಅಪಾಯವಾಗಬಹುದು. ಅಂತಹದೊಂದು ಘಟನೆ ಪುಣೆಯಲ್ಲಿ ಬೆಳಕಿಗೆ ಬಂದಿದೆ. ಮನೆಯ ಹೊರಗೆ ಆಟವಾಡುತ್ತಿದ್ದ ಮೂರುವರೆ ವರ್ಷದ ಬಾಲಕಿಯ ಮೇಲೆ ಭಾರವಾದ ಕಬ್ಬಿಣದ ಗೇಟ್ ಬಿದ್ದು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಪುಣೆಯ ಪಿಂಪ್ರಿ-ಚಿಂಚ್ವಾಡಿಯ ಗಣೇಶ್ ನಗರದ ಬೋಪ್ಖೇಲ್‍ನಲ್ಲಿ ಬುಧವಾರ ನಡೆದಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ನಾಲ್ಕು ಮಕ್ಕಳು ತಮ್ಮ ಮನೆಯ ಹೊರಗೆ ಆಟವಾಡುತ್ತಿದ್ದರು. ಕೆಲವು ಕ್ಷಣಗಳ ನಂತರ, ಹುಡುಗರಲ್ಲಿ ಒಬ್ಬ ಸೈಕಲ್ ಹೊಂದಿರುವ ಮತ್ತೊಂದು ಹುಡುಗನಿಗೆ ಮನೆಯೊಳಗೆ ಹೋಗಲು ಗೇಟ್ ಅನ್ನು ಹಿಂದಕ್ಕೆ ತಳ್ಳಿದನು. ಹುಡುಗ ಪ್ರವೇಶಿಸಿದಾಗ, ಅವನು ಅದನ್ನು ಲಾಕ್ ಮಾಡಲು ಗೇಟ್ ಅನ್ನು ಮುಂದಕ್ಕೆ ಎಳೆದಿದ್ದಾನೆ. ಇದನ್ನು ನೋಡಿದ ಇಬ್ಬರು ಹುಡುಗಿಯರು ಕಬ್ಬಿಣದ ಗೇಟ್ ಕಡೆಗೆ ಓಡಿ ಬಂದಿದ್ದಾರೆ. ಆಗ ಗೇಟ್ ಆಯತಪ್ಪಿ ಕೆಳಗೆ ಬಿದ್ದಿದೆ. ಆ ವೇಳೆ ಟೆಡ್ಡಿ ಬೇರ್ ಹಿಡಿದಿದ್ದ ಒಬ್ಬ ಹುಡುಗಿ ಸಮಯಕ್ಕೆ ಸರಿಯಾಗಿ ಅಲ್ಲಿಂದ ಜಿಗಿದರೆ, ಗೇಟ್ ಕೆಳಗೆ ಬಿದ್ದು ಇನ್ನೊಬ್ಬ ಹುಡುಗಿ ನಜ್ಜುಗುಜ್ಜಾಗಿದ್ದಾಳೆ.

ಭಯಭೀತರಾದ ಮಕ್ಕಳು ಸಹಾಯಕ್ಕಾಗಿ ಕೂಗುತ್ತಾ ಓಡಿಹೋದರು. ನಂತರ ಅಲ್ಲಿಗೆ ಬಂದ ವ್ಯಕ್ತಿಯೊಬ್ಬರು ಗೇಟ್ ಅನ್ನು ಎತ್ತಿ ಮಗುವನ್ನು ಎತ್ತಿಕೊಂಡು ಓಡಿದ್ದಾರೆ. ವರದಿಗಳ ಪ್ರಕಾರ, ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಪ್ರಾರಂಭವಾಗುವ ಮೊದಲೇ ಅವಳು ಸತ್ತಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಪ್ರೀತಿಸಿದ ಹುಡುಗಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವಕ; ಗಾಬರಿಗೊಳಿಸುವ ವಿಡಿಯೊ

ಮೃತಪಟ್ಟ ಹುಡುಗಿಯನ್ನು ಗಿರಿಜಾ ಗಣೇಶ್ ಶಿಂಧೆ ಎಂದು ಗುರುತಿಸಲಾಗಿದೆ. ಕಟ್ಟಡದ ಮಾಲೀಕರು ಮತ್ತು ನಿವಾಸಿಗಳು ಗೇಟ್ ಸರಿಯಾಗಿರಲಿಲ್ಲ. ಹಾಗಾಗಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ತನಿಖೆಯ ವೇಳೆ ತಿಳಿಸಿದ್ದಾರೆ. ಈ ಘಟನೆಯು ನಿವಾಸಿಗಳಲ್ಲಿ ಆಕ್ರೋಶವನ್ನು ಹುಟ್ಟುಹಾಕಿದ್ದು, ಕಟ್ಟಡ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Continue Reading

Latest

Mangaluru Train Timings: ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲು; ಪ್ರಯಾಣಿಕರಿಗೆ ಏನು ಲಾಭ?

Mangaluru Train Timings ಮಂಗಳೂರಿನಿಂದ ಬೆಂಗಳೂರಿನ ಯಶವಂತಪುರಕ್ಕೆ ಸಂಚರಿಸುತ್ತಿದ್ದ ನಂ.16576 ಎಕ್ಸ್ ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಬದಲಾಯಿಸುವಂತೆ ಸಾರ್ವಜನಿಕರು ಬಹುದಿನಗಳಿಂದ ಮನವಿ ಮಾಡುತ್ತಿದ್ದರು. ಇದೀಗ ಸಾರ್ವಜನಿಕರ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆ ನಂ.16576 ಎಕ್ಸ್ ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಬದಲಾಯಿಸಿ ನವೆಂಬರ್ 1ರಿಂದ ಅದು ಜಾರಿಗೆ ಬರಲಿದೆ ಎಂಬುದಾಗಿ ತಿಳಿಸಿದ್ದಾರೆ. ಈ ಮೂಲಕ ರೈಲ್ವೆ ಇಲಾಖೆ ತನ್ನ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿದೆ.

VISTARANEWS.COM


on

Mangaluru Train Timings
Koo


ಬೆಂಗಳೂರು: ವಾರದಲ್ಲಿ ಮೂರು ದಿನ ಸೋಮವಾರ, ಬುಧವಾರ ಮತ್ತು ಶುಕ್ರವಾರ ಮಾತ್ರ ಮಂಗಳೂರಿನಿಂದ ಬೆಂಗಳೂರಿನ ಯಶವಂತಪುರಕ್ಕೆ ಸಂಚರಿಸುತ್ತಿದ್ದ ನಂ.16576 ಎಕ್ಸ್ ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಬದಲಾಯಿಸುವಂತೆ ಸಾರ್ವಜನಿಕರು ಬಹುದಿನಗಳಿಂದ ಮನವಿ ಮಾಡುತ್ತಿದ್ದರು. ಇದೀಗ ಸಾರ್ವಜನಿಕರ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆ ನಂ.16576 ಎಕ್ಸ್ ಪ್ರೆಸ್ ರೈಲಿನ (Mangaluru Train Timings) ವೇಳಾಪಟ್ಟಿಯನ್ನು ಬದಲಾಯಿಸಿದೆ. ನವೆಂಬರ್ 1ರಿಂದ ಅದು ಜಾರಿಗೆ ಬರಲಿದೆ. ಈ ಮೂಲಕ ರೈಲ್ವೆ ಇಲಾಖೆ ತನ್ನ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿದೆ. ರೈಲ್ವೆ ಸಹಾಯಕ ಸಚಿವ ವಿ ಸೋಮಣ್ಣ ಅವರು ಎಕ್ಸ್‌ ಮೂಲಕ ಈ ಮಾಹಿತಿ ನೀಡಿದ್ದಾರೆ.

ಈಗಿನ ರೈಲ್ವೆ ವೇಳಾಪಟ್ಟಿಯ ಪ್ರಕಾರ, ಈ ರೈಲು ಬೆಳಗ್ಗೆ 11:30ಕ್ಕೆ ಮಂಗಳೂರಿನಿಂದ ಹೊರಟು ರಾತ್ರಿ 8:45ರ ಸುಮಾರಿಗೆ ಯಶವಂತಪುರ ರೈಲು ನಿಲ್ದಾಣವನ್ನು ತಲುಪುತಿತ್ತು. ಇನ್ನು ಮುಂದಿನ ದಿನಗಳಲ್ಲಿ ಈ ರೈಲು ಬೆಳಗ್ಗೆ 7 ಗಂಟೆಗೆ ಮಂಗಳೂರಿನಿಂದ ಹೊರಟು ಸಂಜೆ 4.30ಕ್ಕೆ ಬೆಂಗಳೂರಿನ ಯಶವಂತಪುರ ತಲುಪಲಿದೆ. ಈ ವರ್ಷದ ನವೆಂಬರ್ 1ರಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹೊಸ ವೇಳಾಪಟ್ಟಿ ಜಾರಿಗೆ ಬರಲಿದೆ. ಹಾಗಾಗಿ ಇದುವರೆಗೆ ಬೆಳಗ್ಗೆ ತಡವಾಗಿ ಹೊರಟು, ರಾತ್ರಿ ಬೆಂಗಳೂರಿಗೆ ತಲುಪುತ್ತಿದ್ದ ಈ ರೈಲು, ಇನ್ನುಮುಂದೆ ಬೆಳಗ್ಗೆ ಬೇಗ ಹೊರಟು ಸಂಜೆಯ ವೇಳೆಗೆ ಬೆಂಗಳೂರು ತಲುಪಲಿದೆ. ಇದರಿಂದ ಪ್ರಯಾಣಿಕರು ರಾತ್ರಿಯೊಳಗೆ ತಮ್ಮ ಮನೆಗೆ ಸೇರಬಹುದು.

ಈ ಬಗ್ಗೆ ರೈಲ್ವೆ ಇಲಾಖೆಯ ಸಹಾಯಕ ಸಚಿವ ವಿ.ಸೋಮಣ್ಣ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. “ಮಂಗಳೂರು ಜಂಕ್ಷನ್ – ಯಶವಂತಪುರಕ್ಕೆ (ರೈಲು ಸಂಖ್ಯೆ 16576) ವಾರಕ್ಕೆ 3 ಬಾರಿ ಕಾರ್ಯಾಚರಿಸುವ ರೈಲಿನ ಸಮಯ ಬದಲಾಯಿಸುವಂತೆ ಬಹುದಿನಗಳಿಂದಲೂ ಸಾರ್ವಜನಿಕರಿಂದ ಮನವಿಯಿತ್ತು. ಇದೀಗ, ಸಾರ್ವಜನಿಕರ ಕೋರಿಕೆಯನ್ನು ಈಡೇರಿಸಲಾಗಿದೆ. ಈ ರೈಲು ಬೆಳಗ್ಗೆ 7 ಗಂಟೆಗೆ ಮಂಗಳೂರಿನಿಂದ ಹೊರಟು ಸಂಜೆ 4.30ಕ್ಕೆ ಬೆಂಗಳೂರಿನ ಯಶವಂತಪುರ ತಲುಪಲಿದೆʼʼ ಎಂದಿದ್ದಾರೆ.

ಇದನ್ನೂ ಓದಿ: ಅಮೆಜಾನ್‌ನಲ್ಲಿ 55,000 ರೂ. ಮೊಬೈಲ್ ಫೋನ್ ಆರ್ಡರ್ ಮಾಡಿದವನಿಗೆ ಸಿಕ್ಕಿದ್ದು ಟೀ ಕಪ್!

ಸಾರ್ವಜನಿಕರು ಈ ರೈಲಿನ ಸೇವೆಯ ಪ್ರಯೋಜನ ಪಡೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ವಿ. ಸೋಮಣ್ಣ ತಮ್ಮ ಸೋಶಿಯಲ್ ಮೀಡಿಯಾದ ಪೇಜ್‌ನಲ್ಲಿ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ “ಸಮಯ ಬದಲಾವಣೆ ಮಾಡಲು ರೈಲ್ವೇ ಸಚಿವರನ್ನು ಒತ್ತಾಯಿಸಲಾಗಿತ್ತು. ನಮ್ಮ ಮನವಿಗೆ ಸ್ಪಂದಿಸಿರುವ ರೈಲ್ವೆ ಇಲಾಖೆ ಈಗ ಆದೇಶ ಹೊರಡಿಸಿರುವುದು ಕಂಡು ಖುಷಿಯಾಗಿದೆʼʼ ಎಂದು ತಿಳಿಸಿದ್ದಾರೆ.

Continue Reading
Advertisement
Wayanad Landslide
ದೇಶ26 mins ago

Wayanad Landslide: 144 ಸೈನಿಕರು 31 ಗಂಟೆಯೊಳಗೆ 190 ಅಡಿ ಉದ್ದದ ಸೇತುವೆ ನಿರ್ಮಿಸಿದ್ದು ಹೇಗೆ?

Actress Kiara Aadvani
Latest28 mins ago

Actress Kiara Aadvani: ಬಿಕಿನಿ ಪ್ರಿಯರು ಕಿಯಾರಾ ಅಡ್ವಾಣಿಯ ಈ ಟಾಪ್ 5 ಬಿಕಿನಿ ಟ್ರೈ ಮಾಡಬಹುದು!

Indian 2 OTT Release
ಸಿನಿಮಾ29 mins ago

Indian 2 OTT Release: ಒಟಿಟಿಯಲ್ಲಿ ಇಂಡಿಯನ್ 2 ಬಿಡುಗಡೆ ವಿಳಂಬ ಆಗುತ್ತಿರುವುದು ಈ ಕಾರಣಕ್ಕೆ!

One day workshop on 10th August by G Academy in Bengaluru
ಬೆಂಗಳೂರು37 mins ago

Workshop: ಬೆಂಗಳೂರಿನಲ್ಲಿ ಆ.10ರಂದು ಸಿನಿಮಾಸಕ್ತರಿಗೆ ಕಾರ್ಯಾಗಾರ

Ranadhurandhara book release in Bengaluru on August 4
ಕರ್ನಾಟಕ39 mins ago

Book Release: ಬೆಂಗಳೂರಿನಲ್ಲಿ ಆ.4ರಂದು ʼರಣಧುರಂಧರʼ ಗ್ರಂಥ ಲೋಕಾರ್ಪಣೆ

Manu Bhaker
ಕ್ರೀಡೆ50 mins ago

Manu Bhaker : 25 ಮೀಟರ್ ಪಿಸ್ತೂಲ್ ವಿಭಾಗದಲ್ಲಿ ಮನು ಭಾಕರ್​ ಫೈನಲ್​ಗೆ​​; ಒಂದೇ ಒಲಿಂಪಿಕ್ಸ್​ನಲ್ಲಿ ಮೂರನೇ ಬಾರಿ ಫೈನಲ್​ಗೆ

Woman Deliver Baby in Auto
ಕರ್ನಾಟಕ60 mins ago

Woman Deliver Baby in Auto: ಆಸ್ಪತ್ರೆಗೆ ಹೋಗುವಾಗ ಆಟೋದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

Mangaluru Train Timings
Latest1 hour ago

Mangaluru Train Timings: ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲು; ಪ್ರಯಾಣಿಕರಿಗೆ ಏನು ಲಾಭ?

BSNL 5G Service
ಪ್ರಮುಖ ಸುದ್ದಿ1 hour ago

BSNL 5G Service : ಬಿಎಸ್​ಎನ್​​ಎಲ್​ 5ಜಿ ಸಿಮ್​ಕಾರ್ಡ್​ಗಳು ವಿತರಣೆಗೆ ರೆಡಿ​; ಬೆಂಗಳೂರಿನಲ್ಲಿಯೂ ಲಭ್ಯವೇ?

karnataka Rain
ಮಳೆ1 hour ago

Karnataka Rain : ಹಾಸನದಲ್ಲಿ ಗಾಳಿ- ಮಳೆಗೆ ಕುಸಿದು ಬಿದ್ದ ಮನೆ; ಮಂಗಳೂರಿನಲ್ಲಿ ಜಾನುವಾರುಗಳು ಸಾವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 day ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 day ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌