CM Siddaramaiah: ಸಿದ್ದರಾಮಯ್ಯ ಈಗ ಕನ್ನಡ ಮೇಷ್ಟ್ರು; ಶಾಲೆಗೆ ಭೇಟಿ ನೀಡಿ ವ್ಯಾಕರಣ ಪಾಠ ಮಾಡಿದ ಸಿಎಂ! - Vistara News

ಕರ್ನಾಟಕ

CM Siddaramaiah: ಸಿದ್ದರಾಮಯ್ಯ ಈಗ ಕನ್ನಡ ಮೇಷ್ಟ್ರು; ಶಾಲೆಗೆ ಭೇಟಿ ನೀಡಿ ವ್ಯಾಕರಣ ಪಾಠ ಮಾಡಿದ ಸಿಎಂ!

CM Siddaramaiah: ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಸಿದ್ದರಾಮಯ್ಯ, ಮಕ್ಕಳಿಗೆ ಕನ್ನಡ ವ್ಯಾಕರಣದ ಪಾಠ ಮಾಡಿದರು. ಮೊರಾರ್ಜಿ ದೇಸಾಯಿ ಶಾಲೆಗಳನ್ನು ರಾಜ್ಯದಲ್ಲಿ ಯಾರು , ಯಾವಾಗ ಆರಂಭಿಸಿದರು ಎಂದು ಸಿಎಂ ಪ್ರಶ್ನೆ ಕೇಳಿದರು. ನೀವೇ ಆರಂಭಿಸಿದ್ದು ಎಂದ ವಿದ್ಯಾರ್ಥಿ ಇಸವಿ ಹೇಳಲಿಲ್ಲ. ಬಳಿಕ 94-95ರಲ್ಲಿ ಆರಂಭಿಸಿದ್ದಾಗಿ ಸಿಎಂ ಹೇಳಿದರು. ಆಗ ಮಕ್ಕಳು ಚಪ್ಪಾಳೆ ತಟ್ಟಿದರು.

VISTARANEWS.COM


on

CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಾಲು ಸಾಲು ರ‍್ಯಾಲಿಗಳು, ಚುನಾವಣಾ ಸಮಾವೇಶಗಳು, ಅಬ್ಬರದ ಭಾಷಣಗಳಲ್ಲೇ ನಿರತರಾಗಿದ್ದ, ದಿನ ಬೆಳಗಾದರೆ ಹತ್ತಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಯಾವಾಗಲೂ ಬ್ಯುಸಿ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಶುಕ್ರವಾರ (ಜುಲೈ 5) ಕನ್ನಡ ಮೇಷ್ಟ್ರಾಗಿ ಮಕ್ಕಳಿಗೆ ಒಂದಷ್ಟು ಪಾಠ ಮಾಡಿದರು. ಹೌದು, ದಿನನಿತ್ಯದ ಬ್ಯುಸಿ ಚಟುವಟಿಕೆಗಳ ಮಧ್ಯೆಯೇ ಅವರು ಬೆಂಗಳೂರಿನ (Bengaluru) ಚಾಮರಾಜಪೇಟೆಯಲ್ಲಿರುವ (Chamarajpet) ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಸಿದ್ದರಾಮಯ್ಯ, ಮಕ್ಕಳಿಗೆ ಕನ್ನಡ ವ್ಯಾಕರಣದ ಪಾಠ ಮಾಡಿದರು.

ಸುಮಾರು 250 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿಢಿರ್‌ ಭೇಟಿ ನೀಡಿದ ಅವರು ಮೊದಲು 10ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು. ಇದೇ ವೇಳೆ, ಪಠ್ಯಪುಸ್ತಕ, ಬಾತ್‌ ರೂಮ್‌ ಕಿಟ್‌ಗಳ ಸಮರ್ಪ ವಿತರಣೆ ಆಗುತ್ತಿದೆ ಎಂದು ಮಕ್ಕಳು ಸಿಎಂಗೆ ತಿಳಿಸಿದರು. ಊಟದ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳಿಂದ ಕೇಳಿ ತಿಳಿದರು. ಮಕ್ಕಳು ಕೂಡ ಉತ್ಸಾಹದಿಂದ, ಬೆಳಗ್ಗೆ ದೋಸೆ, ಮಧ್ಯಾಹ್ನ ಊಟ ಚೆನ್ನಾಗಿರುತ್ತದೆ, ಆಗಾಗ ಪಲಾವ್ ಕೂಡ ಕೊಡುತ್ತಾರೆ ಎಂದು ವಿವರಿಸಿದರು.

ಮಕ್ಕಳಿಗೆ ಸಿಎಂ ವ್ಯಾಕರಣ ಪಾಠ…

ಭೇಟಿ ವೇಳೆ ಮಕ್ಕಳಿಗೆ ಸಿಎಂ ವ್ಯಾಕರಣ ಪಾಠ ಮಾಡಿದರು. ಸಂದಿ ಎಂದರೇನು? ಸಂದಿಗಳಲ್ಲಿ ಎಷ್ಟು ವಿಧ? ಕನ್ನಡ ಅಕ್ಷರ ಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ? ಅವುಗಳು ಯೋಗವಾಹಗಳು ಎಷ್ಟು? ಸ್ವರ ಎಂದರೇನು? ವ್ಯಂಜನಗಳು ಎಂದರೇನು? ಎಷ್ಟಿವೆ? ವರ್ಗೀಯ, ಅವರ್ಗೀಯ ವ್ಯಂಜನಗಳು ಎಷ್ಟಿವೆ? ಅಲ್ಪಪ್ರಾಣ, ಮಹಾಪ್ರಾಣ ಎಂದರೇನು? ಅಲ್ಪ ಪ್ರಾಣಕ್ಕೆ ಉದಾಹರಣೆ ಹೇಳಿ ಎನ್ನುವ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದ ಸಿಎಂ ಮಕ್ಕಳ ಉತ್ತರಗಳನ್ನು ತಿದ್ದಿ ಹೇಳಿದರು.

ಮೊರಾರ್ಜಿ ದೇಸಾಯಿ ಶಾಲೆಗಳನ್ನು ರಾಜ್ಯದಲ್ಲಿ ಯಾರು , ಯಾವಾಗ ಆರಂಭಿಸಿದರು ಎಂದು ಸಿಎಂ ಪ್ರಶ್ನೆ ಕೇಳಿದರು. ನೀವೇ ಆರಂಭಿಸಿದ್ದು ಎಂದ ವಿದ್ಯಾರ್ಥಿ ಇಸವಿ ಹೇಳಲಿಲ್ಲ. ಬಳಿಕ 94-95ರಲ್ಲಿ ಆರಂಭಿಸಿದ್ದಾಗಿ ಸಿಎಂ ಹೇಳಿದರು. ಆಗ ಮಕ್ಕಳು ಚಪ್ಪಾಳೆ ತಟ್ಟಿದರು.

ಶಾಲೆಯ ಸಾಧನೆ ಬಗ್ಗೆಯೂ ಶಿಕ್ಷಕರು ಸಿಎಂ ಗಮನಕ್ಕೆ ತಂದರು. “ಕಳೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಎಲ್ಲರೂ ಡಿಸ್ಟಿಂಕ್ಷನ್‌ ಹಾಗು ಒಬ್ಬ ವಿದ್ಯಾರ್ಥಿನಿ ಮಾತ್ರ ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದಾಳೆ” ಎಂದು ವಿವರಿಸಿದರು. ಮಕ್ಕಳು ಶಾಲೆಯ ವ್ಯವಸ್ಥೆ ಬಗ್ಗೆ ತಿಳಿಸುತ್ತ, “ನಮ್ಮ ಆರೋಗ್ಯ ತಪಾಸಣೆಗೆ ನಿಯಮಿತವಾಗಿ ವೈದ್ಯರು ಬರುತ್ತಿದ್ದಾರೆ” ಎಂದು ತಿಳಿಸಿದರು. ಇದೇ ವೇಳೆ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ, ವಿಧಾನ ಪರಿಷತ್‌ ಸದಸ್ಯ ಪ್ರಕಾಶ್ ರಾಥೋಡ್ ಸೇರಿ ಹಲವರು ಸಿಎಂಗೆ ಸಾಥ್‌ ನೀಡಿದರು.

ಇದನ್ನೂ ಓದಿ: CM Siddaramaiah: ನಮಗೆ ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ; ಸಿದ್ದರಾಮಯ್ಯ ಸವಾಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Paris Olympics 2024: ಸರ್ಕಾರಿ, ಖಾಸಗಿ ವಲಯದ ಪಾಲುದಾರಿಕೆಯಿಂದ ಕ್ರೀಡೆಗಳ ಭವಿಷ್ಯ ನಿರ್ಧಾರ: ಪಾರ್ಥ್ ಜಿಂದಾಲ್

Paris Olympics 2024: ಮುಂಬೈನಲ್ಲಿ ಜೆಎಸ್‌ಡಬ್ಲ್ಯು ಗ್ರೂಪ್‌, ಏಷ್ಯಾ ಸೊಸೈಟಿ ಇಂಡಿಯಾ ಸೆಂಟರ್ ಮತ್ತು ಮುಂಬೈನಲ್ಲಿರುವ ಫ್ರಾನ್ಸ್‌ನ ಕಾನ್ಸುಲೇಟ್ ಜನರಲ್ ಸಹಯೋಗದಲ್ಲಿ ತಜ್ಞರ ಚರ್ಚಾಗೋಷ್ಠಿ ನಡೆಯಿತು. ಚರ್ಚಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಜೆಎಸ್‌ಡಬ್ಲ್ಯು ಸ್ಪೋರ್ಟ್ಸ್‌ನ ಸ್ಥಾಪಕ ಪಾರ್ಥ್ ಜಿಂದಾಲ್, ಸರ್ಕಾರ ಒದಗಿಸುವ ನೆರವು ಮತ್ತು ಹಣಕಾಸಿನ ಬೆಂಬಲ ಗಮನಾರ್ಹವಾಗಿದೆ. ಕ್ರೀಡೆಗೆ ಅಗತ್ಯವಾಗಿರುವ ಕ್ರೀಡಾ ವಿಜ್ಞಾನ, ಪೋಷಣೆ ಮತ್ತು ತಂತ್ರಜ್ಞಾನದಂತಹ ಅಗತ್ಯ ಸಂಗತಿಗಳನ್ನು ಖಾಸಗಿ ವಲಯವು ಒದಗಿಸುತ್ತಿದೆ. ಇದು ಸರ್ಕಾರದ ಪ್ರಯತ್ನಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ತಿಳಿಸಿದ್ದಾರೆ.

VISTARANEWS.COM


on

Paris Olympics 2024
Koo

ಮುಂಬೈ: ಸರ್ಕಾರಿ ಮತ್ತು ಖಾಸಗಿ ಸದೃಢ ಪಾಲುದಾರಿಕೆಯು ಭಾರತದ ಕ್ರೀಡೆಗಳ ಭವಿಷ್ಯ ನಿರ್ಧರಿಸಲಿದೆ ಎಂಬುದು ನನ್ನ ನಂಬಿಕೆಯಾಗಿದೆ ಎಂದು ಜೆಎಸ್‌ಡಬ್ಲ್ಯು ಸ್ಪೋರ್ಟ್ಸ್‌ನ ಸ್ಥಾಪಕ ಪಾರ್ಥ್ ಜಿಂದಾಲ್ (Paris Olympics 2024) ತಿಳಿಸಿದರು.

ಮುಂಬೈನಲ್ಲಿ ಜೆಎಸ್‌ಡಬ್ಲ್ಯು ಗ್ರೂಪ್‌, ಏಷ್ಯಾ ಸೊಸೈಟಿ ಇಂಡಿಯಾ ಸೆಂಟರ್ ಮತ್ತು ಮುಂಬೈನಲ್ಲಿರುವ ಫ್ರಾನ್ಸ್‌ನ ಕಾನ್ಸುಲೇಟ್ ಜನರಲ್ ವತಿಯಿಂದ ಆಯೋಜಿಸಿದ್ದ ತಜ್ಞರ ಚರ್ಚಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರ್ಕಾರ ಒದಗಿಸುವ ನೆರವು ಮತ್ತು ಹಣಕಾಸಿನ ಬೆಂಬಲ ಗಮನಾರ್ಹವಾಗಿದೆ. ಕ್ರೀಡೆಗೆ ಅಗತ್ಯವಾಗಿರುವ ಕ್ರೀಡಾ ವಿಜ್ಞಾನ, ಪೋಷಣೆ ಮತ್ತು ತಂತ್ರಜ್ಞಾನದಂತಹ ಅಗತ್ಯ ಸಂಗತಿಗಳನ್ನು ಖಾಸಗಿ ವಲಯವು ಒದಗಿಸುತ್ತಿದೆ. ಇದು ಸರ್ಕಾರದ ಪ್ರಯತ್ನಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ ಎಂದರು.

ಈ ಸಹಯೋಗವು ಹಿಂದಿನ ದಶಕದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. ಟಾರ್ಗೆಟ್ ಒಲಿಂಪಿಕ್ ಪೋಡಿಯಂ ಸ್ಕೀಮ್ (ಟಿಒಪಿಎಸ್‌), ಮಿಷನ್ ಒಲಿಂಪಿಕ್ ಸೆಲ್ ಮತ್ತು ಖೇಲೊ ಇಂಡಿಯಾದಂತಹ ಉಪಕ್ರಮಗಳು ಖಾಸಗಿ ವಲಯದ ಜತೆಗೆ ಸಮಾಲೋಚಿಸಿ ಅಭಿವೃದ್ಧಿಪಡಿಸಿದ ಇಂತಹ ಸಹಯೋಗದ ಫಲಶ್ರುತಿಗಳಾಗಿವೆ ಎಂದು ತಿಳಿಸಿದರು.

ಇದನ್ನೂ ಓದಿ: Sourav Ganguly : ಸೌರವ್​ ಗಂಗೂಲಿಗೆ 52ನೇ ಜನ್ಮದಿನ; ದಾದಾನ ಅಭೂತಪೂರ್ವ ವೃತ್ತಿ ಜೀವನದ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ವಿವರ

ಈ ಪ್ರಗತಿಯ ಹೊರತಾಗಿಯೂ, ಇನ್‌ಸ್ಪೈರ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೋರ್ಟ್ಸ್‌ನಂತಹ (ಐಐಎಸ್‌) ಕೆಲವು ಗಮನಾರ್ಹ ಸಂಸ್ಥೆಗಳನ್ನು ಹೊರತುಪಡಿಸಿ ಖಾಸಗಿ ವಲಯವು ಮೂಲತಃ ಈಗಾಗಲೇ ಅಸ್ತಿತ್ವದಲ್ಲಿರುವ ಸರ್ಕಾರಿ ಮೂಲಸೌಕರ್ಯದ ನೆರವಿನಿಂದ ಕಾರ್ಯನಿರ್ವಹಿಸುತ್ತದೆ. ಭಾರತದ ಕ್ರೀಡೆಗಳನ್ನು ನಿಜವಾಗಿಯೂ ಹೊಸ ಎತ್ತರಕ್ಕೆ ಕೊಂಡೊಯ್ಯಲು ನಮಗೆ ದೇಶದಾದ್ಯಂತ ಕನಿಷ್ಠ ಇಂತಹ 10 ಕೇಂದ್ರಗಳ ಅಗತ್ಯವಿದೆ. ಅದರಲ್ಲೂ ವಿಶೇಷವಾಗಿ ಪ್ರತಿಯೊಂದು ರಾಜ್ಯದಲ್ಲಿ ಇಂತಹ ಒಂದು ಕೇಂದ್ರ ಇರಬೇಕಾದ ಅಗತ್ಯ ಇದೆ. ಈ ಕೇಂದ್ರಗಳನ್ನು ನಿರ್ವಹಿಸಲು ಸರ್ಕಾರ ಈಗಾಗಲೇ ಖಾಸಗಿ ಸಂಸ್ಥೆಗಳನ್ನು ಪ್ರೋತ್ಸಾಹಿಸುತ್ತಿದೆ, ಆದರೆ, ಇನ್ನೂ ಹೆಚ್ಚಿನ ಒಳಗೊಳ್ಳುವಿಕೆ ಅಗತ್ಯವಿದೆ ಎಂದರು.

ಭಾರತದ ಕ್ರೀಡೆಗಳಲ್ಲಿ ಎರಡು ಪ್ರಮುಖ ಸವಾಲುಗಳಿವೆ. ಅವುಗಳೆಂದರೆ, ಖಾಸಗಿ ವಲಯದ ಭಾಗವಹಿಸುವಿಕೆ ತೃಪ್ತಿದಾಯಕ ಮಟ್ಟದಲ್ಲಿ ಇಲ್ಲದಿರುವುದು ಮತ್ತು ಕ್ರೀಡಾ ಒಕ್ಕೂಟಗಳ ಒಳಗೆ ಇರುವ ನಿರಂತರ ಸಮಸ್ಯೆಗಳು. ಕ್ರೀಡಾ ಫೆಡರೇಷನ್‌ಗಳು ನಿರಂತರವಾಗಿ ರಾಜಕೀಯ ಹಸ್ತಕ್ಷೇಪದಿಂದ ಬಳಲುತ್ತಿದ್ದರೂ, ಪ್ರತಿ ವರ್ಷ ಅಲ್ಲಲ್ಲಿ ಕೆಲ ಸುಧಾರಣೆಗಳು ಕಣ್ಣಿಗೆ ಬೀಳುತ್ತವೆ. ಪ್ಯಾರಿಸ್ ಒಲಿಂಪಿಕ್ಸ್ ಸಮೀಪಿಸುತ್ತಿರುವಾಗ, ಸರ್ಕಾರ ಮತ್ತು ಖಾಸಗಿ ವಲಯದ ನಡುವಣ ಸಹಯೋಗದ ಬಗ್ಗೆ ಹೆಚ್ಚು ಗಮನ ಹರಿಸಲಾಗುತ್ತಿದೆ. ಈ ಮೊದಲಿಗಿಂತ ಹೆಚ್ಚಿನ ಸಹಯೋಗ ಕಂಡುಬರುತ್ತಿದೆ. ಇದರ ಫಲಶ್ರುತಿ ಬಗ್ಗೆ ನಾನು ಹೆಚ್ಚು ಆಶಾವಾದಿಯಾಗಿದ್ದೇನೆ.

ನಮ್ಮ ಕ್ರೀಡಾ ಪಯಣದ ಒಂದು ಮಹತ್ವದ ಬೆಳವಣಿಗೆ ಏನೆಂದರೆ, ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುವ ಕ್ರೀಡಾ ತಾರೆಯರು ಪ್ರವರ್ಧಮಾನಕ್ಕೆ ಬರುತ್ತಿರುವುದು ಗಮನಿಸಬೇಕಾದ ಸಂಗತಿಯಾಗಿದೆ. 2008ರಲ್ಲಿ ಮೂವರು ಕ್ರೀಡಾ ತಾರೆಯರು ಗಮನ ಸೆಳೆದರೆ, 2012 ರಲ್ಲಿ ಇನ್ನೂ ಆರು ಕ್ರೀಡಾ ತಾರೆಯರು ಹೊಸದಾಗಿ ಹೊರಹೊಮ್ಮಿದ್ದಾರೆ. ನಂತರ 2016ರಲ್ಲಿ ಇಬ್ಬರು ಬೆಳಕಿಗೆ ಬಂದಿದ್ದಾರೆ. ಟೋಕಿಯೊದಲ್ಲಿ, ನಮ್ಮ ಹಾಕಿ ತಂಡ ಮತ್ತು ಇತರ ಆರು ಪದಕ ವಿಜೇತರು, ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ ಅಸಾಧಾರಣ ಪ್ರದರ್ಶನ ನೀಡಿದ ನೀರಜ್ ಚೋಪ್ರಾ ಅವರ ಜತೆಗೆ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: Kalki 2898 AD: ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಮಾಡಿದ ʻಕಲ್ಕಿ 2898 ಎಡಿʼಸಿನಿಮಾ!

ಬಾಕ್ಸಿಂಗ್‌ನಲ್ಲಿ ವಿಜೇಂದರ್ ಸಿಂಗ್ ಅಥವಾ ಕುಸ್ತಿಯಲ್ಲಿ ಸಾಕ್ಷಿ ಮಲಿಕ್ ಅವರಂತೆ ಪ್ರತಿಯೊಬ್ಬ ಕ್ರೀಡಾ ತಾರೆ ತಮ್ಮ ತಮ್ಮ ಕ್ರೀಡೆಗಳಲ್ಲಿ ಕನಸುಗಳು ಮತ್ತು ಸಾಧ್ಯತೆಗಳನ್ನು ಬೆಳಗಿಸುತ್ತಾರೆ. ಜಾವೆಲಿನ್‌ನಲ್ಲಿ ನೀರಜ್ ಚೋಪ್ರಾ ಅವರ ಸಾಧನೆಗಳು, ಅವರ ವಿಶಿಷ್ಟ ಸಾಧನೆಯು ಭವಿಷ್ಯದ ಚಾಂಪಿಯನ್‌ಗಳಿಗೆ ದಾರಿ ಮಾಡಿಕೊಟ್ಟಿದೆ. ಈಗ, ಭಾರತದ ಪುರುಷರ ತಂಡದಲ್ಲಿ ಮೂವರು ಜಾವೆಲಿನ್ ಎಸೆತಗಾರರು ಪ್ಯಾರಿಸ್‌ಗೆ ಹೋಗುತ್ತಿದ್ದಾರೆ. ಇದು ನಮ್ಮ ಬದಲಾಗುತ್ತಿರುವ ಅಥ್ಲೆಟಿಕ್ ಪರಾಕ್ರಮಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಮಾತನಾಡಿ, ಒಲಿಂಪಿಕ್ ಕನಸು ಕೇವಲ ಒಬ್ಬ ಕ್ರೀಡಾಪಟುವಿನ ಕನಸು ಆಗಿರದೆ, ಅದು ಅವನ ಇಡೀ ಕುಟುಂಬದ ಕನಸಾಗಿರುತ್ತದೆ. ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವುದು ಅಥ್ಲೀಟ್‌ನ ಜೀವನವನ್ನು ಮಾತ್ರವಲ್ಲದೆ ಅವನ ಕುಟುಂಬ, ಸಮಾಜ ಮತ್ತು ಹಳ್ಳಿಯ ಜೀವನವನ್ನೂ ಬದಲಾಯಿಸುತ್ತದೆ. ನಾನು ಪದಕ ಪಡೆದ ನಂತರ ಗಮನಾರ್ಹ ಬದಲಾವಣೆಗಳು ಕಂಡು ಬಂದವು. ನಾನು ತರಬೇತಿ ಪಡೆದ ರೋಹ್ಟಕ್‌ನ ಛೋಟು ರಾಮ್‌ ಕ್ರೀಡಾಂಗಣವು ತಗಡಿನ ಚಾವಣಿಯಿಂದ ವಾತಾನುಕೂಲಿ ಸಭಾಂಗಣವಾಗಿ ಬದಲಾಯಿತು. ನಾನು ಹುಟ್ಟಿ ಬೆಳೆದ ನನ್ನ ಹಳ್ಳಿಯಲ್ಲಿ ಒಂದು ಕ್ರೀಡಾಂಗಣವನ್ನು ನನ್ನ ಹೆಸರಿನಲ್ಲಿ ನಿರ್ಮಿಸಲಾಯಿತು.

ಒಲಿಂಪಿಕ್ ಪದಕವು ವಿಶೇಷವಾಗಿ ಮಕ್ಕಳಿಗೆ ಉತ್ತಮ ತರಬೇತಿ ನೀಡುವುದು ಸೇರಿದಂತೆ ಹಲವಾರು ಅವಕಾಶಗಳನ್ನು ಸೃಷ್ಟಿಸುತ್ತದೆ. ಮಕ್ಕಳಿಗೆ ಉತ್ತಮ ತರಬೇತಿ ಸೌಲಭ್ಯಗಳು ದೊರೆಯುತ್ತವೆ ಎಂದು ಹೇಳಿದರು.

ಹರಿಯಾಣದಲ್ಲಿ ಕುಸ್ತಿಯ ಬಗೆಗಿನ ಅಭಿಮಾನ ಈಗ ಬಹಳಷ್ಟು ಹೆಚ್ಚಿದೆ. ಪ್ರತಿ ಹತ್ತು ನಿಮಿಷದ ಪ್ರಯಾಣದ ನಂತರ ಒಂದು ಕ್ರೀಡಾಂಗಣ ನಿಮಗೆ ಎದುರಾಗುತ್ತದೆ. ಪ್ರತಿಯೊಂದು ಕ್ರೀಡಾಂಗಣದಲ್ಲಿ ಬಾಲಕಿಯರು ಕುಸ್ತಿ ತರಬೇತಿ ಪಡೆಯುತ್ತಿರುವುದನ್ನು ಕಾಣಬಹುದು.

ಹೆಣ್ಣುಮಕ್ಕಳು ಕುಸ್ತಿಯಾಡಲು ಸಾಧ್ಯವಿಲ್ಲ ಎಂದು ಜನರು ನಂಬುತ್ತಿದ್ದ ಒಂದು ಕಾಲವಿತ್ತು. ಆದರೆ, ಇಂದು ಅಂತಹ ಮನಸ್ಥಿತಿ ಬದಲಾಗಿದೆ. ಮೊದಲ ಬಾರಿಗೆ, ಐವರು ಹೆಣ್ಣುಮಕ್ಕಳು ಕುಸ್ತಿಗಾಗಿ ಒಲಿಂಪಿಕ್ಸ್‌ಗೆ ಹೋಗುತ್ತಿದ್ದಾರೆ. ಒಂದು ಕಾಲದಲ್ಲಿ ದಮನಕ್ಕೊಳಗಾಗಿದ್ದ ಹೆಣ್ಣುಮಕ್ಕಳು ಈಗ ದಿಟ್ಟತನದಿಂದ ಮುನ್ನುಗ್ಗಿ ಕುಸ್ತಿಯಲ್ಲಿ ಮಿಂಚುತ್ತಿದ್ದಾರೆ ಎಂದ ಅವರು, ನಾನು ಪದಕ ಗೆದ್ದ ನಂತರ, ಯಾರೊಬ್ಬರೂ ಕೇವಲ ಉದ್ಯೋಗ ಅಥವಾ ಲಾಭದ ಬಗ್ಗೆ ಯೋಚಿಸುತ್ತಾ ಕುಸ್ತಿಗೆ ಪ್ರವೇಶಿಸುವುದಿಲ್ಲ. ಅವರು ಈಗ ಒಲಿಂಪಿಕ್ ಪದಕ ಗೆಲ್ಲುವ ಗುರಿಯೊಂದಿಗೆ ತಮ್ಮ ಕುಸ್ತಿ ಅಭ್ಯಾಸ ಪ್ರಾರಂಭಿಸುತ್ತಾರೆ. ಹೆಣ್ಣುಮಕ್ಕಳ ಮನಸ್ಥಿತಿಯಲ್ಲಿನ ಈ ಬದಲಾವಣೆಯು ನಂಬಲಾಗದಷ್ಟು ಸ್ಪೂರ್ತಿದಾಯಕವಾಗಿದೆ ಎಂದು ಅವರು ತಿಳಿಸಿದರು.

ಭಾರತದ ಜಿಮ್ನ್ಯಾಸ್ಟಿಕ್‌ ಪಟು ದೀಪಾ ಕರ್ಮಾಕರ್ ಮಾತನಾಡಿ, ಯಾವುದೇ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಪಡೆಯುವುದು ಯಾವುದೇ ಕ್ರೀಡಾಪಟುವಿನ ಸಾಧನೆ ಹಾದಿಯಲ್ಲಿನ ಕೆಟ್ಟ ಗಳಿಗೆಯಾಗಿರುತ್ತದೆ. ನನಗೆ ಮಾತ್ರವಲ್ಲ, ನಾಲ್ಕನೇ ಸ್ಥಾನ ತಲುಪುವ ಯಾವುದೇ ಕ್ರೀಡಾಪಟುವಿಗೆ ಅದು ನಿರಂತರವಾಗಿ ದುಃಸ್ವಪ್ನವಾಗಿ ಕಾಡುತ್ತಲೇ ಇರುತ್ತದೆ. ನಿದ್ದೆಯೇ ಬರುವುದಿಲ್ಲ. ಒಲಿಂಪಿಕ್ಸ್ ನೋಡುತ್ತ ಬಂದಿರುವ ನನಗೆ ಅಲ್ಲಿ ನಾಲ್ಕನೇ ಸ್ಥಾನಕ್ಕೆ ಬರುವ ಕ್ರೀಡಾಪಟುಗಳು ರೋದಿಸುವುದನ್ನು ಕಾಣುತ್ತಲೇ ಬಂದಿರುವೆ.

ನಾಲ್ಕನೇ ಸ್ಥಾನವು, ನಾಲ್ಕನೇ ಸ್ಥಾನವಾಗಿಯೇ ಇರುತ್ತದೆ. ಏಕೆಂದರೆ ನೀವು ಅದನ್ನು ಬದಲಾಯಿಸಲು ಸಾಧ್ಯವೇ ಇಲ್ಲ. ಯಾವುದೇ ಪದಕ ಗೆಲ್ಲುವ ಕ್ರೀಡಾಪಟು ಸದಾ ಕಾಲವು ಪದಕ ಗೆದ್ದ ಕ್ರೀಡಾಪಟು ಆಗಿಯೇ ಉಳಿಯುತ್ತಾನೆ. ಹೀಗಾಗಿ ಉತ್ತಮ ಸಾಧನೆ ಮಾಡಲು ಏನು ಮಾಡಬೇಕು ಎನ್ನುವುದನ್ನು ಇಲ್ಲಿ ಚಿಂತಿಸಲು ಇದು ಹೆಚ್ಚು ಸೂಕ್ತವಾಗಿದೆ. ನಾಲ್ಕನೇ ಸ್ಥಾನ ತಲುಪಿರುವ ಕ್ರೀಡಾಪಟುಗಳು ಮಾತ್ರ ಅದರ ನೋವನ್ನು ಹೆಚ್ಚು ಅರ್ಥಮಾಡಿಕೊಳ್ಳಲು ಸಾಧ್ಯ ಎಂದು ತಿಳಿಸಿದರು.

ತ್ರಿಪುರಾ ರಾಜ್ಯದಲ್ಲಿನ ಜಿಮ್ನ್ಯಾಸ್ಟಿಕ್ಸ್ ಸಂಸ್ಕೃತಿಯ ಕುರಿತು ಮಾತನಾಡಿದ ದೀಪಾ ಕರ್ಮಾಕರ್, “2016 ರ ರಿಯೊ ಒಲಿಂಪಿಕ್ಸ್ ನಂತರ, ತ್ರಿಪುರಾದಲ್ಲಿ ಬಹಳಷ್ಟು ಸಂಗತಿಗಳು ಬದಲಾಗಿವೆ. ಜಿಮ್ನ್ಯಾಸ್ಟಿಕ್‌ಗೆ ಹೋಗಬಾರದು ಎಂಬ ಮನಸ್ಥಿತಿಯು ಸ್ಥಳೀಯರಲ್ಲಿ ಮನೆ ಮಾಡಿತ್ತು. ಈಗ ತ್ರಿಪುರಾದಲ್ಲಿ ಗಮನಾರ್ಹ ಬದಲಾವಣೆಗಳಾಗಿವೆ. ಉದಾಹರಣೆಗೆ ಹೇಳುವುದಾದರೆ, ಮೂಲಸೌಕರ್ಯಗಳು ಸುಧಾರಣೆಗೊಂಡಿವೆ. ನೀವು ನೋಡುವ ವಾಲ್ಟ್‌ಗೆ ನಿಮಗೆ ಅತಿ ಹೆಚ್ಚಿನ ಫೋಮ್ ಪಿಟ್ಸ್‌ಗಳು ಬೇಕಾಗುತ್ತವೆ. ಇವುಗಳು ಮೊದಲು ತ್ರಿಪುರಾದಲ್ಲಿ ಇದ್ದಿರಲಿಲ್ಲ. 2016ರ ಒಲಿಂಪಿಕ್ಸ್ ನಂತರ ಫೋಮ್ ಪಿಟ್ಸ್‌ಗಳನ್ನು ನಿರ್ಮಿಸಿದರು.

ಇದನ್ನೂ ಓದಿ: Kundapura Kannada:  ಅರಮನೆ ಮೈದಾನದಲ್ಲಿ ಈ ಬಾರಿ `ವಿಶ್ವ ಕುಂದಾಪುರ ಕನ್ನಡ ಹಬ್ಬ’; ಕಾರ್ಯಕ್ರಮದ ವಿವರ ಪಟ್ಟಿ ಇಲ್ಲಿದೆ!

ಇದರಿಂದ ಮಕ್ಕಳಲ್ಲಿ ಜಿಮ್ನ್ಯಾಸ್ಟಿಕ್ ಬಗೆಗಿನ ಆಸಕ್ತಿಯ ಮಟ್ಟವು ಗಮನಾರ್ಹವಾಗಿ ಹೆಚ್ಚಾಯಿತು. ಈಗ ಅದು ಸರ್ಕಾರಿ ಅಥವಾ ಖಾಸಗಿಯಾಗಿರಲಿ ಜಿಮ್ನ್ಯಾಸ್ಟಿಕ್‌ ತರಬೇತಿ ಕೇಂದ್ರಗಳ ಸಂಖ್ಯೆಯು ಗಮನಾರ್ಹವಾಗಿ ಹೆಚ್ಚಿದೆ. ನನ್ನ ಪ್ರಕಾರ, 2016 ರ ರಿಯೊ ಒಲಿಂಪಿಕ್ಸ್ ನಂತರ, ಬಹಳಷ್ಟು ಜನರ ಮನಸ್ಥಿತಿಯು ಮೊದಲೆಂದೂ ಕಾಣದ ರೀತಿಯಲ್ಲಿ ಬದಲಾಗಿರುವುದು ಬಹಳ ಮುಖ್ಯವಾಗಿದೆ ಎಂದು ಅವರು ವಿಶ್ಲೇಷಿಸಿದ್ದಾರೆ.

Continue Reading

ಕರ್ನಾಟಕ

Gold Rate Today: ಬಂಗಾರ ಖರೀದಿಸುವ ಪ್ಲ್ಯಾನ್‌ ಇದೆಯೇ? ಚಿನ್ನದ ದರ ಹೀಗಿದೆ ನೋಡಿ

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,745 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,358 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,960, 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,450 ಮತ್ತು ₹ 6,74,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 58,864 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 73,580 ಮತ್ತು ₹ 7,35,800 ವೆಚ್ಚವಾಗಲಿದೆ.

VISTARANEWS.COM


on

gold rate today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ದರ ಇಂದು ಇಳಿಕೆ ಕಂಡಿದೆ (Gold Rate Today). 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 20ರೂ ಇಳಿಕೆ ಆಗಿದ್ದು, ಸ್ವರ್ಣ ಪ್ರಿಯರಿಗೆ ಸ್ವಲ್ಪ ಸಮಾಧಾನವಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,745 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,358 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,960, 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,450 ಮತ್ತು ₹ 6,74,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 58,864 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 73,580 ಮತ್ತು ₹ 7,35,800 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,760₹ 7,373
ಮುಂಬೈ₹ 6,745₹ 7,358
ಬೆಂಗಳೂರು₹ 6,745₹ 7,358
ಚೆನ್ನೈ₹ 6,800₹ 7,418

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಕೂಡ ಏರಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 94.50 ಹಾಗೂ 8 ಗ್ರಾಂಗೆ ₹ 756 ಇದೆ. 10 ಗ್ರಾಂಗೆ ₹ 945 ಹಾಗೂ 1 ಕಿಲೋಗ್ರಾಂಗೆ ₹ 94,500 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: Mahadayi Water Dispute: ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ್ ತಂಡ ಭೇಟಿ; ನಾಲೆಗಳ ಪರಿಶೀಲನೆ

Continue Reading

ಕ್ರೈಂ

Self Harming: ನವೋದಯ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

Self Harming: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಉಡುವಳ್ಳಿಯ ನವೋದಯ ಶಾಲೆಯಲ್ಲಿ 8 ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

Self Harming
Koo

ಚಿತ್ರದುರ್ಗ: ನವೋದಯ ಶಾಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಹಿರಿಯೂರು ತಾಲೂಕಿನ ಉಡುವಳ್ಳಿಯಲ್ಲಿ ನಡೆದಿದೆ. 8ನೇ ತರಗತಿ ವಿದ್ಯಾರ್ಥಿ ಪ್ರೇಮ್ ಸಾಗರ್ (13) ನೇಣಿಗೆ ಶರಣಾದ ವಿದ್ಯಾರ್ಥಿ.

ಹೊಳಲ್ಕೆರೆ ತಾಲೂಕಿನ ಕೆಂಗುಂಟೆ ಗ್ರಾಮದ ನಿವಾಸಿಯಾದ ಪ್ರೇಮ ಸಾಗರ್‌ 8ನೇ ತರಗತಿ ಓದುತ್ತಿದ್ದ. ಆದರೆ, ಕೊಠಡಿಯಲ್ಲಿ ಸೋಮವಾರ ನೇಣಿಗೆ ಶರಣಾಗಿದ್ದಾನೆ. ಸೀನಿಯರ್ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಪ್ರೇಮ ಸಾಗರ್ ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಲಬಾಧೆ ತಾಳಲಾರದೇ ವಿಷ ಸೇವಿಸಿ ರೈತ ಆತ್ಮಹತ್ಯೆ

ದಾವಣಗೆರೆ: ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವುದು ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಬೆಳಗುತ್ತಿ ಗ್ರಾಮದಲ್ಲಿ ನಡೆದಿದೆ. ಬೆಳಗುತ್ತಿ ಗ್ರಾಮದ ಸೋಮಸುಂದರ ರಾಜ್ ಅರಸ್ (60) ಮೃತ ರೈತ.

ಸತತ ಮಳೆ ಕೊರತೆ ಹಾಗೂ ಕೃಷಿಗೆ ಮಾಡಿದ ಸಾಲದಿಂದ ಮನನೊಂದು ಕೀಟನಾಶಕ ಸೇವಿಸಿ ಆತ್ಮಹತ್ಯೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗುತ್ತಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2 ಲಕ್ಷ, ಎಲ್‌ಎನ್‌ಟಿ ಫೈನಾನ್ಸ್‌ನಲ್ಲಿ 1 ಲಕ್ಷ, ಗ್ರಾಮೀಣ ಕೂಟ ಫೈನಾನ್ಸ್‌ನಲ್ಲಿ 1 ಲಕ್ಷ, ಧರ್ಮಸ್ಥಳ ಸಂಘದಲ್ಲಿ 1 ಲಕ್ಷ ಸೇರಿದಂತೆ ಕೈ ಗಡ ಸೇರಿ 10 ಲಕ್ಷ ರೂ. ಸಾಲ ಮಾಡಿದ್ದರು. ಸಾಲಗಾರರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಟಿಪ್ಪರ್ ಹರಿದು ಬೈಕ್ ಸವಾರ ಸಾವು

ಕೊಪ್ಪಳ: ಟಿಪ್ಪರ್ ಹರಿದು ಬೈಕ್ ಸವಾರ ಮೃತಪಟ್ಟಿರುವ ಘಟನೆ ಕೊಪ್ಪಳ ತಾಲೂಕಿನ ಕಾಸನಕಂಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ವೇಗವಾಗಿ ಬಂದ ಟಿಪ್ಪರ್ ಬೈಕ್‌ಗೆ ಡಿಕ್ಕಿಯಾಗಿದೆ. ಈ ವೇಳೆ ಟಿಪ್ಪರ್ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃತಪಟ್ಟಿದ್ದಾನೆ.

ಇದನ್ನೂ ಓದಿ | Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

Student Death : ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Student death Nursing college student commits suicide in Bengaluru

ಬೆಂಗಳೂರು: ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ (Student Death) ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ.

ಪಶ್ಚಿಮ ಬಂಗಾಳ‌ ಮೂಲದ ದಿಯಾ ಮಂಡೋಲ್‌ ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು. ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇದನ್ನೂ ಓದಿ: Pakistan: ಛೇ..ಇವನೆಂಥಾ ಪಾಪಿ ತಂದೆ! ಚಿಕಿತ್ಸೆಗೆ ಹಣ ಇಲ್ಲವೆಂದು 15 ದಿನದ ಹಸುಳೆಯ ಜೀವಂತ ಸಮಾಧಿ

ಸಹಪಾಠಿಗಳು ರೂಮಿಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಾಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

Continue Reading

ಮಳೆ

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜುಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Karnataka Rain : ಸಮುದ್ರಕ್ಕೆ ಇಳಿಯದಂತೆ ಕಡಲತೀರದಲ್ಲಿ ರೆಡ್ ಫ್ಲ್ಯಾಗ್ ಅಳವಡಿಸಿದರೂ ಹುಚ್ಚಾಟ ತೋರಿದ ಪ್ರವಾಸಿಗರಿಗೆ ಲೈಫ್‌ಗಾರ್ಡ್‌ಗಳು ಬಿಸಿ ಮುಟ್ಟಿಸಿದ್ದಾರೆ. ಅಪಾಯವನ್ನು ಲೆಕ್ಕಿಸದೇ ಈಜಲುತ್ತಿದ್ದವರನ್ನು ದಡಕ್ಕೆ ಎಳೆದು ತಂದು ಥಳಿಸಿದ್ದಾರೆ.

VISTARANEWS.COM


on

By

Karnataka weather Forecast
Koo

ಕಾರವಾರ: ಭಾರಿ ಮಳೆ (Karnataka Rain) ನಡುವೆ ರಕ್ಕಸ ಅಲೆಗಳ ಮಧ್ಯೆ ಈಜುಲು ಹೋದ ಪ್ರವಾಸಿಗರನ್ನು ದರದರನೇ ಎಳೆದುತಂದು ಲೈಫ್‌ಗಾರ್ಡ್‌ ಸಿಬ್ಬಂದಿ ಥಳಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ರವೀಂದ್ರನಾಥ ಟಾಗೋರ್ ಕಡಲತೀರದಲ್ಲಿ ಘಟನೆ ನಡೆದಿದೆ.

ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಅಬ್ಬರ ಒಂದೆಡೆ ಸಮುದ್ರತೀರದಲ್ಲಿ ಪ್ರವಾಸಿಗರ ಹುಚ್ಚಾಟ ಮಿತಿಮೀರಿದೆ. ಅಪಾಯದ ಎಚ್ಚರಿಕೆಯನ್ನು ನಿರ್ಲಕ್ಷಿಸಿದ ಕೆಲ ಪ್ರವಾಸಿಗರು ಸಮುದ್ರಕ್ಕಿಳಿದು, ಈಜುತ್ತಿದ್ದರು. ಅಪಾಯಕಾರಿ ರೀತಿಯಲ್ಲಿ ಅಲೆಗಳು ಅಪ್ಪಳಿಸುತ್ತಿದ್ದರೂ ಲೆಕ್ಕಿಸದೇ ಮೋಜು ಮಸ್ತಿ ಮಾಡುತ್ತಿದ್ದರು.

ಹೀಗಾಗಿ ನೀರಲ್ಲಿ ಈಜಲು ತೆರಳಿದ್ದ ಪ್ರವಾಸಿಗರಿಗೆ ಥಳಿಸಿ ಲೈಫ್‌ಗಾರ್ಡ್‌ಗಳು ದಡಕ್ಕೆ ಕರೆತಂದಿದ್ದಾರೆ. ಬಳಿಕ ಸೂಚನೆಯನ್ನು ನಿರ್ಲಕ್ಷ್ಯಿಸಿ ನೀರಿಗಿಳಿದಿದ್ದಕ್ಕೆ ಹೊಡೆದು ಬುದ್ಧಿ ಹೇಳಿದ್ದಾರೆ. ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜತೆಗೆ ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿಯೇ ನೀರಿಗಿಳಿಯದಂತೆ ಕಡಲತೀರದಲ್ಲಿ ರೆಡ್ ಫ್ಲ್ಯಾಗ್ ಅಳವಡಿಸಿದರೂ ಹುಚ್ಚಾಟ ತೋರಿದ ಪ್ರವಾಸಿಗರಿಗೆ ಬಿಸಿ ಮುಟ್ಟಿಸಲಾಗಿದೆ.

ನಿರಂತರ ಮಳೆಯಿಂದಾಗಿ ಚಾರ್ಮಾಡಿ ಘಾಟ್‌ ಅಧೋಗತಿ

ಚಿಕ್ಕಮಗಳೂರಿನಲ್ಲಿ ರಣಮಳೆಗೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಮಳೆಯ ಅಬ್ಬರಕ್ಕೆ ಚಾರ್ಮಾಡಿ, ಕೊಟ್ಟಿಗೆಹಾರದಲ್ಲಿ ಕೇವಲ 7 ದಿನಕ್ಕೆ 96 ಇಂಚು ಪ್ರಮಾಣದ ಮಳೆ ದಾಖಲಾಗಿದೆ. ಇತ್ತ ನಿರಂತರ ಮಳೆಯಿಂದಾಗಿ ಚಾರ್ಮಾಡಿ ಹೆದ್ದಾರಿ ಸಂಚಾರ ಅಧೋಗತಿ ತಲುಪಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಲ್ಲಿ ವಾಹನ ಚಲಾಯಿಸಲು ಚಾಲಕರು ಪರದಾಡುತ್ತಿದ್ದಾರೆ. ಮಂಜು ಮಿಶ್ರಿತ ಮಳೆಯಿಂದಾಗಿ ಸಂಚಾರಕ್ಕೆ ಅಡೆತಡೆಯಾಗಿದ್ದು ಜತೆಗೆ ಗುಡ್ಡ ಕುಸಿತದ ಆತಂಕವು ಹೆಚ್ಚಿದೆ. ಕಳೆದ ಭಾನುವಾರ ರಾತ್ರಿ ಚಾರ್ಮಾಡಿಯ ಆಲೆಖಾನ್ ಬಳಿ ಗುಡ್ಡ ಕುಸಿದಿತ್ತು.

ಇದನ್ನೂ ಓದಿ: Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

ಮನೆಗಳಿಗೆ ನುಗ್ಗುತ್ತಿರುವ ನೀರು, ಕೆರೆಯಂತಾದ ಜಮೀನು

ಉತ್ತರಕನ್ನಡ ಜಿಲ್ಲೆಯಲ್ಲಿ ನಿಲ್ಲದ ಮಳೆ ಅಬ್ಬರಕ್ಕೆ ಹಲವೆಡೆ ಮನೆಗಳಿಗೆ ನೀರು ನುಗ್ಗುತ್ತಿದೆ. ಅಂಕೋಲಾ ತಾಲ್ಲೂಕಿನ ಅವರ್ಸಾದಲ್ಲಿ ಹೆದ್ದಾರಿ ಪಕ್ಕದ ಜಮೀನು ಕೆರೆಯಂತಾಗಿತ್ತು. ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಗುಡ್ಡ ಕುಸಿಯುವ ಭೀತಿಯಲ್ಲಿ ಜನರು ಕಾಲಕಳೆಯುತ್ತಿದ್ದಾರೆ. ಕಾರವಾರ, ಅಂಕೋಲಾ ಭಾಗದಲ್ಲಿ ಸಮುದ್ರಕ್ಕೆ ನೀರು ಹರಿದುಹೋಗದೇ ಹಲವೆಡೆ ಅವಾಂತರವೇ ಸೃಷ್ಟಿಯಾಗಿದೆ.

ಇನ್ನೂ ಉತ್ತರಕನ್ನಡದಲ್ಲಿ ಭಾರೀ ಮಳೆಯಿಂದಾಗಿ ಜಲಾಶಯಗಳಿಗೆ ನೀರು ಹರಿದುಬರುತ್ತಿದೆ. ಸೂಪಾ ಜಲಾಶಯದಲ್ಲಿ ನೀರಿನ ಒಳಹರಿವು ಹೆಚ್ಚಿದೆ. ಜೋಯಿಡಾದ ಗಣೇಶಗುಡಿಯಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೂಪಾ ಜಲಾಶಯದ ಗರಿಷ್ಠ 564 ಮೀ ಸಾಮರ್ಥ್ಯ ಇದ್ದು, ಸದ್ಯ ಜಲಾಶಯದಲ್ಲಿ 532.32 ಮೀ ನೀರು ಸಂಗ್ರಹವಾಗಿದೆ.

ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಗುಂಡಬಾಳ ನದಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನದಿ ತೀರ ಪ್ರದೇಶದ ತೋಟ, ಮನೆಗಳಿಗೆ ನೀರು ನುಗ್ಗಿದೆ. ನೆರೆಯಿಂದಾಗಿ ಗ್ರಾಮದ ಜನರು ಸಂತ್ರಸ್ತರಾಗುವ ಆತಂಕ ಎದುರಾಗಿದೆ. ಮಲೆನಾಡಿನಲ್ಲಿ ಹೆಚ್ಚು ಮಳೆಯಾದ ಕಾರಣ ಗುಂಡಬಾಳ ನದಿ ನೀರಿನಮಟ್ಟ ಏರಿಕೆ ಆಗಿದೆ. ನದಿ ಪಾತ್ರದ ನಿವಾಸಿಗಳನ್ನು ಎತ್ತರದ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸ್ಥಳೀಯಾಡಳಿತದಿಂದ ಸೂಚನೆ ನೀಡಿದೆ.

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶ, ಗದ್ದೆ ಸಾಲುಗಳಿಗೆ ಭಾರೀ ಪ್ರಮಾಣದ ನೀರು ಹರಿದುಹೋಗುತ್ತಿದೆ. ಜನವಸತಿ ಪ್ರದೇಶಗಳತ್ತ ನೀರು ನುಗ್ಗಿ, ರಸ್ತೆಯಲ್ಲಿ ನದಿಯಂತೆ ಹರಿಯುತ್ತಿದೆ. ಸಗ್ರಿ, ಗುಂಡಿಬೈಲು, ಚಕ್ರತೀರ್ಥ ಪ್ರದೇಶದಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.

ಜತೆಗೆ ಬೈಲಕೆರೆ, ಕಲ್ಸಂಕ ಮಠದಬೆಟ್ಟು ಜಲಾವೃತಗೊಂಡಿದೆ. ಬೈಲಕೆರೆ ಸಮೀಪ ಮನೆಗಳಿಗೆ ನೀರು ನುಗ್ಗಿ ನೆರೆ ಸೃಷ್ಟಿಯಾಗಿತ್ತು. ಹೀಗಾಗಿ ಗುಂಡಿಬೈಲು ಸಮೀಪ ಐದಾರು ಕುಟುಂಬಗಳ ಸದಸ್ಯರನ್ನು ಅಗ್ನಿಶಾಮಕ ದಳದಿಂದ ರಕ್ಷಣೆ ಮಾಡಲಾಗಿದೆ. ಒಂದು ಮನೆಯ ಮೂವರನ್ನು ರಕ್ಷಣೆ ಮಾಡಿ, ಪಾಡಿಗಾರು ಸಮೀಪ ನಾಲ್ಕು ಮನೆಗಳ ಜನರನ್ನು ಎತ್ತರ ಪ್ರದೇಶಕ್ಕೆ ಶಿಫ್ಟ್ ಮಾಡಿದ್ದಾರೆ. ಉಡುಪಿ ಅಂಬಾಗಿಲು ಕಲ್ಸಂಕ ರಸ್ತೆಯಲ್ಲಿ ಸಂಪೂರ್ಣ ನೆರೆಯಾಗಿದೆ. ಉಡುಪಿ ನಗರಕ್ಕೆ ಸಂಪರ್ಕ ಕಲ್ಪಿಸುವ ಬಹುಮುಖ್ಯ ರಸ್ತೆಯಲ್ಲಿ ನೀರು ನಿಂತಿದ್ದು, ನಗರದ ಗುಂಡಿಬೈಲು ವಾಹನ ಸಂಚಾರ ದುಸ್ತರ ಪರಿಸ್ಥಿತಿಯಲ್ಲಿ ಇದೆ.

ರಾಷ್ಟ್ರೀಯ ಹೆದ್ದಾರಿ 66ರ ಅಂಡರ್ ಪಾಸ್ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನೀರು ನಿಂತು ಸಮಸ್ಯೆಯಾಗಿದೆ. ಸರ್ವಿಸ್ ರಸ್ತೆಯಲ್ಲಿ ನೀರು ನಿಂತು ದಿನವು ಇಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಅಂಡರ್ ಪಾಸ್ ಕಾಮಗಾರಿ ವೇಳೆ ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಸರ್ವಿಸ್ ರಸ್ತೆ ಬ್ಲಾಕ್ ಆಗಿದೆ ಎಂದು ಸ್ಥಳೀಯರು ಕಿಡಿಕಾರಿದರು. ಸ್ಥಳೀಯರ ದೂರಿನ ಹಿನ್ನೆಲೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಪರಿಸ್ಥಿತಿ ಅವಲೋಕಿಸಿದರು. ತಕ್ಷಣ ಈ ಸಮಸ್ಯೆಗೆ ತುರ್ತು ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸಂಸದರು ಸೂಚಿಸಿದರು. ಸರ್ವಿಸ್ ರಸ್ತೆ ಪಕ್ಕದಲ್ಲಿರುವ ಚರಂಡಿ ವ್ಯವಸ್ಥೆ, ಸರಿ ಮಾಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಸಂಸರಿಗೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಾಥ್‌ ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Mumbai Cricket Association
ಪ್ರಮುಖ ಸುದ್ದಿ4 mins ago

Mumbai Cricket Association : ಮುಂಬೈನಲ್ಲಿ ನಿರ್ಮಾಣವಾಗಲಿದೆ 1 ಲಕ್ಷ ಪ್ರೇಕ್ಷಕರ ಸಾಮರ್ಥ್ಯದ ಕ್ರಿಕೆಟ್​ ಸ್ಟೇಡಿಯಮ್​

Paris Olympics 2024
ದೇಶ18 mins ago

Paris Olympics 2024: ಸರ್ಕಾರಿ, ಖಾಸಗಿ ವಲಯದ ಪಾಲುದಾರಿಕೆಯಿಂದ ಕ್ರೀಡೆಗಳ ಭವಿಷ್ಯ ನಿರ್ಧಾರ: ಪಾರ್ಥ್ ಜಿಂದಾಲ್

gold rate today
ಕರ್ನಾಟಕ22 mins ago

Gold Rate Today: ಬಂಗಾರ ಖರೀದಿಸುವ ಪ್ಲ್ಯಾನ್‌ ಇದೆಯೇ? ಚಿನ್ನದ ದರ ಹೀಗಿದೆ ನೋಡಿ

Self Harming
ಕ್ರೈಂ25 mins ago

Self Harming: ನವೋದಯ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

Karnataka weather Forecast
ಮಳೆ35 mins ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜುಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Deepika Padukone
Latest38 mins ago

Deepika Padukone: 1.92 ಲಕ್ಷ ರೂ. ಬೆಲೆಯ ʼಹುಕುಮ್‌ ಕಿ ರಾಣಿʼ ಸೀರೆಯಲ್ಲಿ ಮಿಂಚಿದ ದೀಪಿಕಾ ಪಡುಕೋಣೆ!

CM Siddaramaiah
ಕರ್ನಾಟಕ39 mins ago

CM Siddaramaiah: ಡಿಸಿಗಳು ಮಹಾರಾಜರಲ್ಲ; ಬೀದಿಗಿಳಿದು ಡೆಂಗ್ಯು ನಿಯಂತ್ರಿಸದಿದ್ದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

Sourav Ganguly
ಪ್ರಮುಖ ಸುದ್ದಿ58 mins ago

Sourav Ganguly : ಸೌರವ್​ ಗಂಗೂಲಿಗೆ 52ನೇ ಜನ್ಮದಿನ; ದಾದಾನ ಅಭೂತಪೂರ್ವ ವೃತ್ತಿ ಜೀವನದ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ವಿವರ

Riteish Deshmukh Genelia Deshmukh Pledge To Donate Their Organ
ಬಾಲಿವುಡ್59 mins ago

Riteish Deshmukh: ಅಂಗಾಗ ದಾನ ಮಾಡುವ ಘೋಷಣೆ ಮಾಡಿದ  ರಿತೇಶ್- ಜೆನಿಲಿಯಾ ದಂಪತಿ!

Mumbai hit and run
ದೇಶ1 hour ago

Mumbai Hit And Run: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ಘಟನೆಗೂ ಮುನ್ನ ಬಾರ್‌ಗೆ ಹೋಗಿದ್ದ ಆರೋಪಿ, 18 ಸಾವಿರ ಬಿಲ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ35 mins ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜುಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

karnataka weather Forecast
ಮಳೆ17 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ20 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ20 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

ಟ್ರೆಂಡಿಂಗ್‌