Site icon Vistara News

CM Siddaramaiah: ಹಾವೇರಿ ಗೋಲಿಬಾರ್‌ಗೆ ಮತ್ತೆ ಅವಕಾಶ ಮಾಡಬೇಡಿ: ಡಿಸಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್‌ ಎಚ್ಚರಿಕೆ

cm siddaramaiah warns officials never allow situation like haveri golibar to happen aggain

#image_title

ಬೆಂಗಳೂರು: ಮುಂಗಾರು ಶುರುವಾಗ್ತಾ ಇದೆ. ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸಿ. ನಾನು ಕೇವಲ ಸೂಚನೆ ಕೊಡೋದಿಲ್ಲ. ಎಚ್ಚರಿಕೆ ಕೊಡ್ತಾ ಇದ್ದೇನೆ. ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡದಿದ್ದರೆ ಕಠಿಣ ಕ್ರಮಕ್ಕೆ ಸಿದ್ದರಾಗಿ ಎಂದು ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ವಿಡಿಯೋ ಸಂವಾದದಲ್ಲಿ ಸಿದ್ದರಾಮಯ್ಯ ಮಾತನಾಡಿದ್ದಾರೆ.

  1. ರಾಜ್ಯದ ಕೆಲವು ಭಾಗದಲ್ಲಿ ಮಳೆ ಪ್ರಾರಂಭ, ಬಿತ್ತನೆ ಪ್ರಾರಂಭ. ಜೂನ್‌ನಲ್ಲಿ ಮುಂಗಾರು ಪ್ರಾರಂಭವಾಗುತ್ತದೆ. ಏಪ್ರಿಲ್‌ ತಿಂಗಳಿನಲ್ಲಿಯೇ ಪ್ರಿ-ಮಾನ್ಸೂನ್‌ ಮಳೆ ಪ್ರಾರಂಭವಾಗಿದೆ. ಭಾರಿ ಮಳೆ, ಗಾಳಿಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಅನಾಹುತಗಳಾಗಿವೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.
  2. ನಿಮ್ಮ ಬಳಿ ಅನುದಾನ ಲಭ್ಯವಿದೆ. ಅಗತ್ಯವಿದ್ದರೆ, ಕೇಳಬೇಕು. ಪರಿಹಾರ ಕ್ರಮ ಕೈಗೊಳ್ಳಲು ತೊಂದರೆ ಇಲ್ಲ. ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸಬೇಕು. ಹಾವೇರಿ ಗೋಲಿಬಾರಿನಂತಹ ಘಟನೆ ಮರುಕಳಿಸಬಾರದು.
  3. ಮಳೆ ಬಂದು ಮರಗಳು ಬಿದ್ದುಹೋದರೆ, ಕೂಡಲೇ ತೆರವು ಗೊಳಿಸಬೇಕು. ವಿದ್ಯುಚ್ಚಕ್ತಿ ಕಂಬಗಳು ಬಿದ್ದು ಹೋದರೆ, ಟ್ರಾನ್‌ಫಾರ್ಮರ್‌ ಹಾಳಾಗಿದ್ದರೆ, ಸೇತುವೆಗಳು ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಈಗಲೇ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ.
  4. ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್‌ ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ.
  5. ಯಾವುದೇ ಕಾರಣಕ್ಕೆ ಕರ್ತವ್ಯ ಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೆ ಲೋಪ ಆಗಬಾರದು.
  6. ಲೋಪ ಎಸಗಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜನ ಸರ್ಕಾರದಿಂದ ಬದಲಾವಣೆ ಬಯಸಿದ್ದಾರೆ. ಸರ್ಕಾರಕ್ಕೆ ಹೊಸ ಇಮೇಜ್‌ ಕೊಡಲೇಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರ ಬಂದಿದೆ ಎಂಬ ಸಂದೇಶ ಹೋಗಬೇಕು.
  7. ಜಿಲ್ಲಾಧಿಕಾರಿಗಳು, ಸಿಇಒಗಳದ್ದು ಜವಾಬ್ದಾರಿಯುತ ಸ್ಥಾನ. ಜೊತೆಗೆ ಪೊಲೀಸ್‌ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಕರ್ನಾಟಕದ ಜನತೆ ಬದಲಾವಣೆ ಬಯಸಿದ್ದಾರೆ. ಆಲಸ್ಯ ಬಿಟ್ಟು ಕೆಲಸ ಮಾಡಿ. ಬಹಳ ಜನ ಜಿಲ್ಲಾಧಿಕಾರಿಗಳು ತಾಲ್ಲೂಕುಗಳಿಗೆ ಭೇಟಿ ನೀಡಿರುವುದಿಲ್ಲ. ಇನ್ನು ಮುಂದೆ ಇಂತಹುದಕ್ಕೆ ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ಮಾಡಬೇಕು.
  8. ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ- ಮುನ್ಸೂಚನೆ ಅರಿತು ಕೆಲಸ ಮಾಡಿ. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು.

ಕೂಡಲೆ ಪರಿಹಾರ ನೀಡಿ:

ಈಗಾಗಲೇ ಪೂರ್ವಮುಂಗಾರು ಮಳೆ ಬಂದಿದೆ. ಏಪ್ರಿಲ್, ಮೇ ತಿಂಗಳಲ್ಲೇ ಪೂರ್ವ ಮುಂಗಾರು ಮಳೆ ಶುರುವಾಗುತ್ತದೆ. ಈ ಬಾರಿ ವಾಡಿಕೆಯಿಂದ 10% ಹೆಚ್ಚಿನ ಪೂರ್ವ ಮುಂಗಾರು ಮಳೆ ಬಂದಿದೆ. ಈ ಮಳೆಯಲ್ಲಿ 52 ಜನ ಸತ್ತಿದ್ದಾರೆ. 331 ಜಾನುವಾರು ಸಾವಾಗಿದೆ. 20 ಸಾವಿರ ಹೆಕ್ಟೆರ್‌ನಲ್ಲಿ ಬೆಳೆನಾಶವಾಗಿದೆ. 814 ಮನೆಗಳಿಗೆ ಹಾನಿಯಾಗಿದೆ. ಎಲ್ಲದಕ್ಕೂ ಕೂಡಲೇ ಪರಿಹಾರ ನೀಡಬೇಕೆಂದು ಸೂಚಿಸಲಾಗಿದೆ. ಕೆಲವರಿಗೆ 5 ಲಕ್ಷ ಪರಿಹಾರ ಕೂಡ ಕೊಡಲಾಗಿದೆ ಎಂದರು.

ಇದನ್ನೂ ಓದಿ: Karnataka CM: ಡಿ.ಕೆ. ಶಿವಕುಮಾರ್‌ ಸಿಎಂ ಆಗಲ್ಲ, ಆಗಲು ಸಿದ್ದರಾಮಯ್ಯ ಬಿಡುವುದೂ ಇಲ್ಲ: ಕಾಲೆಳೆದ ಬಿಜೆಪಿ

Exit mobile version