Communal Harmony : ಗಣೇಶ ಬಪ್ಪ ಮೋರಯಾ ಎಂದ ಮುಸ್ಲಿಮರು; ಗಣಪನ ಶೋಭಾಯಾತ್ರೆಗಾಗಿ ಈದ್‌ ಮೆರವಣಿಗೆಯೇ ಮುಂದಕ್ಕೆ! - Vistara News

ಕರ್ನಾಟಕ

Communal Harmony : ಗಣೇಶ ಬಪ್ಪ ಮೋರಯಾ ಎಂದ ಮುಸ್ಲಿಮರು; ಗಣಪನ ಶೋಭಾಯಾತ್ರೆಗಾಗಿ ಈದ್‌ ಮೆರವಣಿಗೆಯೇ ಮುಂದಕ್ಕೆ!

Communal Harmony: ದೇಶವನ್ನು ಒಂದುಗೂಡಿಸಿದ ಗಣೇಶ ಹಬ್ಬ ಧರ್ಮಗಳನ್ನೂ ಒಂದುಗೂಡಿಸುವ ಅಪರೂಪದ ಸಂಭ್ರಮಕ್ಕೆ ಕಾರಣವಾಗಿದೆ. ನಾಡಿನ ಹಲವು ಕಡೆ ಹಿಂದು ಮುಸ್ಲಿಮರು ಜತೆಯಾಗಿ ಹಬ್ಬದ ಆಚರಣೆ ಮಾಡಿ ಹೊಸ ಭರವಸೆ ಹುಟ್ಟಿಸಿದ್ದಾರೆ.

VISTARANEWS.COM


on

Communal harmony
ಮೈಸೂರಿನಲ್ಲಿ ಹಿಂದು-ಮುಸ್ಲಿಮರು ಜತೆಯಾಗಿ ಗಣೇಶನ ಹಬ್ಬ ಆಚರಿಸಿದ ದೃಶ್ಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು/ಆನೆಕಲ್‌/ಬೆಳಗಾವಿ: ಒಂದು ಕಡೆ ಸಮಾಜವನ್ನು ಧರ್ಮದ ಹೆಸರಿನಲ್ಲಿ ಒಡೆಯುವ ಪ್ರಯತ್ನಗಳು ನಡೆಯುತ್ತಿದ್ದರೂ ಇನ್ನೊಂದು ಕಡೆ ಅದೇ ಧರ್ಮದ ಮೂಲಕ ಜನರನ್ನು ಬೆಸೆಯುವ, ಸೌಹಾರ್ದದ ಸಂದೇಶವನ್ನು ಸಾರುವ ಕೆಲಸಗಳು (Communal Harmony) ಕೂಡಾ ನಡೆಯುತ್ತಿವೆ. ಈ ಮೂಲಕ ಹೊಸ ಭರವಸೆಯ ನಾಳೆಗಳನ್ನು ಸೃಷ್ಟಿ ಮಾಡುವ ಪ್ರಯತ್ನ ನಡೆಯುತ್ತಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಮುಸ್ಲಿಮರು ಗಣೇಶನ ಹಬ್ಬದಲ್ಲಿ (Muslims in Ganesha Festival) ಸಕ್ರಿಯವಾಗಿ ಭಾಗಿಯಾಗಿದ್ದು ಮಾತ್ರವಲ್ಲ, ಗಣೇಶ ಬಪ್ಪ ಮೋರಯಾ (Ganapati Bappa Moraya) ಎಂದು ಜಯಕಾರ ಹಾಕಿದ್ದಾರೆ. ಕೆಲವು ಕಡೆಗಳಲ್ಲಿ ಮುಸ್ಲಿಮರೇ ಹಿಂದೂಗಳ ಮನೆಗೆ ಗೌರಿ ಗಣೇಶನ ಮೂರ್ತಿ ಕೊಟ್ಟು (Muslims distribute Ganesh idols to hindu homes) ಶುಭ ಹಾರೈಸಿದ್ದಾರೆ. ಅಷ್ಟೇ ಅಲ್ಲ, ಒಂದು ಕಡೆ ಗಣೇಶನ ಶೋಭಾಯಾತ್ರೆಗೆ (Ganesha Shobhayatre) ಯಾವ ಕಾರಣಕ್ಕೂ ಅಡ್ಡಿಯಾಗಬಾರದು ಎಂಬ ಕಾರಣಕ್ಕೆ ಈದ್‌ ಮಿಲಾದ್‌ ಮೆರವಣಿಗೆಯನ್ನೇ (Eid Milad procession postpone) ಮುಂದಕ್ಕೆ ಹಾಕಿದ್ದಾರೆ. ಭಾರತದ ಸೌಹಾರ್ದ ಪರಂಪರೆಯ ಕೆಲವು ತುಣುಕುಗಳು ಇಲ್ಲಿವೆ.

ಮೈಸೂರಿನಲ್ಲಿ ಹಿಂದು-ಮುಸ್ಲಿಮರು ಒಟ್ಟಾಗಿ ಗೌರಿ-ಗಣೇಶ ಹಬ್ಬ ಆಚರಣೆ

ಮೈಸೂರು: ಇಲ್ಲಿನ ಅಗ್ರಹಾರದ ಕುಂದೂರು ಮಠದ ರಸ್ತೆಯಲ್ಲಿ ಹಿಂದು ಮುಸ್ಲಿಮರು ಜತೆಯಾಗಿ ಗಣೇಶನ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಶ್ರೀ ಗಣಪತಿ ಯುವಕರ ಸಂಘದ ಪದಾಧಿಕಾರಿಗಳು ಆಯೋಜನೆ ಮಾಡಿದ ಹಬ್ಬದಲ್ಲಿ ಮುಸ್ಲಿಮರೂ ಸಡಗರದಿಂದ ಪಾಲ್ಗೊಂಡರು.

Communal harmony: muslims at Ganesha pendal at Mysore
ಮೈಸೂರಿನ ಅಗ್ರಹಾರದ ಕುಂದೂರು ಮಠದ ರಸ್ತೆಯಲ್ಲಿ ಹಿಂದು-ಮುಸ್ಲಿಂ ಸೌಹಾರ್ದ ಗಣಪ

ಹಿಂದೂ ಮುಸ್ಲಿಮ್ ಯುವಕರು ಒಟ್ಟಾಗಿ ಗೌರಿ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದರು. ಮುಸ್ಲಿಮರು ಪೂಜೆಗಳಲ್ಲೂ ಪಾಲ್ಗೊಂಡರು. ಗಣೇಶ ಬಪ್ಪ ಮೋರಯಾ ಅಂದಾಗ ಖುಷಿಯಿಂದ ಧ್ವನಿಗೂಡಿಸಿದರು. ಗಣೇಶನ ಅಂದ ಚಂದಗಳನ್ನು ವಿವರಿಸಿದಾಗ ಐಸಾ ಎಂದು ಸಂಭ್ರಮಿಸಿದರು.

Muslims at Ganesha Habba

ಹಿಂದು-ಮುಸ್ಲಿಮರು ಅಣ್ಣ ತಮ್ಮಂದಿರು ಎಂಬ ಸಂದೇಶವನ್ನು ಸಾರುವ ಕಾರಣಕ್ಕಾಗಿಯೇ, ಸಮಾಜಕ್ಕೆ ಉತ್ತಮ ಸಂದೇಶ ತಲುಪಿಸುವುದಕ್ಕಾಗಿ ಮುಸ್ಲಿಂ ಸಮಾಜದ ಹಿರಿಯರೆಲ್ಲ ಸೇರಿ ಈ ಕಾರ್ಯಕ್ರಮಕ್ಕೆ ಬೆಂಬಲ ನೀಡಿದ್ದರು. ಜತೆಗೆ ಮುಸ್ಲಿಮ್‌ ಯುವಕರು, ಮಕ್ಕಳು ಕೂಡಾ ಬಂದು ಗಣೇಶನಿಗೆ ಜಯಕಾರ ಹಾಕಿದರು.

ಪರಸ್ಪರ ಗೌರಿಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಪರಸ್ಪರ ಸಿಹಿ ತಿನಿಸಿ ಹಿಂದೂ-ಮುಸ್ಲಿಂ ಭಾಯಿ ಭಾಯಿ ಎಂಬ ಸಂದೇಶ ರವಾನೆ ಮಾಡಿದರು.

ಕೃಷ್ಣಗಿರಿಯಲ್ಲಿ ಮುಸ್ಲಿಮರಿಂದ ಮನೆಮನೆಗೆ ಗಣೇಶ ಮೂರ್ತಿ

ಆನೇಕಲ್: ರಾಜ್ಯ ಗಡಿಭಾಗ ಕೃಷ್ಣಗಿರಿಯಲ್ಲಿ ಮುಸ್ಲಿಮ್‌ ಯುವಕರ ತಂಡ ಮನೆ ಮನೆಗೆ ಗಣೇಶ ಮೂರ್ತಿ ನೀಡುವ ಮೂಲಕ ಹಬ್ಬದಲ್ಲಿ ಭಾಗಿಯಾಯಿತು. ಸುಮಾರು 20 ಮಂದಿ ಮುಸ್ಲಿಂ ಯುವಕರ ತಂಡ ಮನೆಗಳಿಗೆ ಹೋಗಿ ಗಣೇಶನ ಮೂರ್ತಿ ಮತ್ತು ಪೂಜಾ ಸಾಮಗ್ರಿಗಳನ್ನು ಒಳಗೊಂಡ ಕಿಟ್‌ ಅನ್ನು ನೀಡಿತು.

Muslims distributing Ganesha Idols to hindu families
ಹಿಂದೂಗಳ ಮನೆಗೆ ಗಣೇಶ ಮೂರ್ತಿ ನೀಡಿ ಸಂಭ್ರಮಿಸಿದ ಮುಸ್ಲಿಮರು

ಹಿಂದೂಗಳ ಮನೆಗಳಿಗೆ ತೆರಳಿ ಅಲ್ಲಿ ಅವರಿಗೆ ಶುಭಾಶಯಗಳನ್ನು ಕೋರಿದ ತಂಡ ಗಣೇಶ ಮೂರ್ತಿ ಹಾಗೂ ಪೂಜಾ ಸಾಮಗ್ರಿ ನೀಡಿತು. ನಾವು ಯಾವತ್ತಿದ್ದರೂ ಜತೆಯಾಗಿ ಬಾಳಬೇಕು, ಯಾವತ್ತೂ ನಮ್ಮ ನಡುವೆ ಭಿನ್ನಾಭಿಪ್ರಾಯ ಬರಬಾರದು. ನಾವು ಅಣ್ಣ-ತಮ್ಮಂದಿರಂತೆ ಇರಬೇಕು ಎಂದು ಹೇಳಿದರು ಹುಡುಗರು.

Ganesha Idols to hindu Families by Muslims

ಅಸ್ಲಾಂ ಎಂಬವರ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಮುಸ್ಲಿಂ ಹುಡುಗರು ಸೇರಿ ಈ ಹೊಸ ಸೌಹಾರ್ದ ಪರಂಪರೆಗೆ ನಾಂದಿ ಹಾಡಿದ್ದಾರೆ.

ಬೆಳಗಾವಿಯಲ್ಲಿ ಈದ್‌ ಮೆರವಣಿಗೆಯನ್ನೇ ಮುಂದಕ್ಕೆ ಹಾಕಿದ ಮುಸ್ಲಿಮರು

ಬೆಳಗಾವಿ: ಬೆಳಗಾವಿಯಲ್ಲಿ ಗಣೇಶನ ವೈಭವದ ಶೋಭಾಯಾತ್ರೆ ಮತ್ತು ಈದ್‌ ಮಿಲಾದ್‌ ಮೆರವಣಿಗೆ ಒಂದೇ ದಿನ ಬರುತ್ತದೆ. ಅಂದರೆ ಸೆ. 28ರಂದೇ ಎರಡೂ ಕಾರ್ಯಕ್ರಮಗಳು ನಡೆಯುತ್ತವೆ. ಎರಡೂ ಕಾರ್ಯಕ್ರಮಗಳು ಭಾರಿ ಜನಸಂದಣಿಯೊಂದಿಗೆ ಅದ್ದೂರಿಯಾಗಿ ನಡೆಯುತ್ತವೆ. ಹೀಗಾಗಿ ಜನರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಮುಸ್ಲಿಮರು ಈದ್‌ ಮೆರವಣಿಗೆಯನ್ನೇ ಮುಂದಕ್ಕೆ ಹಾಕಿದ್ದಾರೆ

ಒಂದೇ ದಿನ ಎರಡೂ ಮೆರವಣಿಗೆಗಳು ನಡೆದರೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸುತ್ತದೆ. ಜತೆಗೆ ಸಮಾಜ ವಿರೋಧಿ ಶಕ್ತಿಗಳು ಇದರ ದುರ್ಲಾಭ ಪಡೆಯುವ ಸಾಧ್ಯತೆಗಳೂ ಇರುತ್ತವೆ. ಹೀಗಾಗಿ ಮುಸ್ಲಿಂ ಧರ್ಮಗುರುಗಳು , ಅಂಜುಮನ್ -ಏ-ಇಸ್ಲಾಂ ಸಂಸ್ಥೆಯವರು ಸಭೆ ನಡೆಸಿ ತಮ್ಮ ಹಬ್ಬವನ್ನು ಅಕ್ಟೋಬರ್ 1 ರಂದು ಆಚರಿಸಲು ನಿರ್ಧರಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅಂಜುಮನ್ -ಏ-ಇಸ್ಲಾಂ ಸಂಸ್ಥೆ ಅಧ್ಯಕ್ಷ ಹಾಗೂ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ರಾಜು ಸೇಠ್, ಸಿರತ್ ಕಮಿಟಿ, ಅಂಜುಮನ್ ಸಂಸ್ಥೆ ಎಲ್ಲ ಜಮಾತ್ ಧರ್ಮಗುರುಗಳು ಸೇರಿಕೊಂಡು ಸಮಾಜಕ್ಕೆ ಒಂದು ಒಳ್ಳೆಯ ಸಂದೇಶ ನೀಡುವ ಉದ್ದೇಶದಿಂದ ಈದ್ ಮಿಲಾದ್ ಮುಂದೂಡಲಾಗಿದೆ. ಗಣೇಶೋತ್ಸವ ಮೆರವಣಿಗೆಗೆ ನಾವು ಹೋಗುತ್ತೇವೆ. ನಮ್ಮ ಹಬ್ಬಕ್ಕೆ ಹಿಂದೂ ಸಮಾಜ ಬಾಂಧವರನ್ನೂ ಆಹ್ವಾನಿಸುತ್ತೇವೆ. ಇದರಿಂದ ಸೌಹಾರ್ದಯುತ ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Ganesha Chathurhti : ಮುಂಬಯಿಯ ಈ ಗಣೇಶ ಜಗತ್ತಿಗೇ ಶ್ರೀಮಂತ; ಮೈಮೇಲೆ ಇದೆ 69 ಕೆ.ಜಿ ಚಿನ್ನ, 336 ಕೆ. ಜಿ ಬೆಳ್ಳಿ

ಗಣೇಶ ಮಂಡಳಿ ಮುಖಂಡ ವಿಕಾಸ ಕಲಘಟಗಿ ಮಾತನಾಡಿ, ಮುಸ್ಲಿಂ ಬಾಂಧವರು ಕೈಗೊಂಡಿರುವುದು ಐತಿಹಾಸಿಕ ನಿರ್ಧಾರ. ಎರಡು ಸಮಾಜದವರು ಒಗ್ಗಟ್ಟಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬವನ್ನು ಯಶಸ್ವಿಗೊಳಿಸುತ್ತೇವೆ ಎಂದು ತಿಳಿಸಿದರು.

ಶಿವಮೊಗ್ಗ ನಗರದಲ್ಲಿ ಕೂಡಾ ಈದ್‌ ಮಿಲಾದ್ ಮೆರವಣಿಗೆಯನ್ನು ಮುಂದೂಡಬೇಕು ಎಂಬ ಪ್ರಸ್ತಾಪ ಇತ್ತಾದರೂ ಸೌಹಾರ್ದಯುತವಾಗಿ ನಡೆಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅದೇ ದಿನ ನಡೆಯಲಿದೆ. ಅಲ್ಲಿ ಒಂದೇ ದಿನ ನಡೆಸಿದರೂ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುವ ಸಂಕಲ್ಪ ಮಾಡಿದ್ದು ಕೂಡಾ ವಿಶೇಷವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Murder case : ಪ್ರೀತಿ ವಿಷ್ಯಕ್ಕೆ ಬೀದಿ ಹೆಣವಾದ! ಮಗನ ಡೆಡ್‌ಬಾಡಿ ನೋಡಿ ಮೂರ್ಛೆ ಹೋದ ತಾಯಿ

Murder Case : ಸ್ನೇಹಿತರ ಜತೆ ಹೊರಹೋದ ಯುವಕನೊಬ್ಬ ಬೀದಿ ಹೆಣವಾಗಿದ್ದಾನೆ. ಮಗನ ಮೃತದೇಹವನ್ನು ಕಂಡು ತಾಯಿ ಮೂರ್ಛೆ ಹೋಗಿದ್ದಾರೆ. ಯುವಕ ಪ್ರೀತಿಸುತ್ತಿದ್ದ ಯುವತಿ ಮನೆಯವರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Murder Case
Koo

ಬೆಂಗಳೂರು: ಬೆಂಗಳೂರಿನ ಎಸ್‌ಆರ್‌ ನಗರ ಠಾಣಾ ವ್ಯಾಪ್ತಿಯಲ್ಲಿ ಯುವಕನ ಶವ (Dead Body Found) ಪತ್ತೆಯಾಗಿದೆ. ಮಿಷನ್ ರೋಡ್‌ನ ಪಿ.ಸಿ.ಮೋಹನ್ ಆ್ಯಂಡ್‌ ಕೊ ಕಾಂಪ್ಲೆಕ್ಸ್‌ನ ಗ್ರೌಂಡ್ ಫ್ಲೋರ್‌ನಲ್ಲಿ ಶವ (Murder Case) ಪತ್ತೆಯಾಗಿದೆ. ಮೃತನನ್ನು ಕೆ.ಎಸ್. ಗಾರ್ಡನ್ ನಿವಾಸಿ ಸತ್ಯ (22) ಎಂದು ಗುರುತಿಸಲಾಗಿದೆ.

ಪ್ಲಂಬರ್ ಕೆಲಸ ಮಾಡಿಕೊಂಡಿದ್ದ ಸತ್ಯ ಗುರುವಾರ ರಾತ್ರಿ ಸ್ನೇಹಿತರ ಜತೆಗೆ ಮನೆಯಿಂದ ಹೊರಗಡೆ ಹೋಗಿದ್ದ. ಆದರೆ ಬೆಳಗಾಗುವುದರಲ್ಲಿ ಬೀದಿ ಹೆಣವಾಗಿದ್ದಾನೆ. ಸ್ಥಳೀಯರು ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲಿಸಿದಾಗ ಮೃತ ಗುರುತು ಪತ್ತೆ ಮಾಡಿದ್ದಾರೆ. ಸತ್ಯನ ಕಿವಿಯಿಂದ ರಕ್ತ ಬಂದಿರುವುದು ಪತ್ತೆಯಾಗಿದೆ. ಮಗನ ಮೃತದೇಹ ಕಂಡು ಸತ್ಯ ತಾಯಿ ಮೂರ್ಚೆ ಹೋಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರೀತಿ ವಿಷ್ಯಕ್ಕೆ ಬಲಿ?

ಸತ್ಯ ಹುಡುಗಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ವಿಷಯ ತಿಳಿದ ಯುವತಿಯ ಮನೆಯವರು ಸತ್ಯನಾ ವಿರುದ್ಧ ಬಲವಂತವಾಗಿ ಯುವತಿ ಕಡೆಯಿಂದ ಪೊಲೀಸರಿಗೆ ದೂರು ಕೊಡಿಸಿದ್ದರು. ಈ ಸಂಬಂಧ ಸತ್ಯನನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಯಲ್ಲಿಯೇ ಕೂರಿಸಿಕೊಂಡಿದ್ದರು. ಈ ಘಟನೆಯ ಬಳಿಕ ಸತ್ಯ ಸಾಕಷ್ಟು ನೊಂದಿದ್ದ. ಆದರೆ ಇತ್ತೀಚೆಗೆ ಮತ್ತೆ ಯುವತಿಯ ಜತೆ ಮಾತಾಡುತ್ತಿದ್ದ ಎನ್ನಲಾಗಿದೆ. ಈ ವಿಚಾರ ತಿಳಿದು ಯುವತಿಯ ಕಡೆಯವರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸದ್ಯ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇದು ಕೊಲೆಯೋ ಆಕಸ್ಮಿಕ ಸಾವೋ ಎಂಬುದನ್ನು ತಿಳಿಯಲು ಮುಂದಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

PM Narendra Modi: ವಿಡಿಯೋ ಸಂದೇಶ ಮೂಲಕ ಬಸವೇಶ್ವರ ಜಯಂತಿಗೆ ಶುಭ ಕೋರಿದ ಪಿಎಂ

PM Narendra Modi: ಶತಮಾನಗಳಷ್ಟು ಮೊದಲೇ ಬಸವೇಶ್ವರರು ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯಂಥ ಮಹತ್ವದ ಸಂಗತಿಗಳ ಬಗ್ಗೆ ಸಮಾಜಕ್ಕೆ ಬೋಧಿಸಿದ್ದರು. ನಾವು ಅವರ ವಚನಗಳು- ಆದರ್ಶಗಳನ್ನು ಜಾಗತಿಕವಾಗಿ ಪಸರಿಸಬೇಕು. ಜಗತ್ತನ್ನು ಆ ಮೂಲಕ ಇನ್ನಷ್ಟು ಸುಂದರಗೊಳಿಸೋಣ ಎಂದು ಮೋದಿ ಹೇಳಿದ್ದಾರೆ.

VISTARANEWS.COM


on

pm narendra modi basava jayanti 2024
Koo

ಹೊಸದಿಲ್ಲಿ: ಭಕ್ತಿ ಭಂಡಾರಿ, ಸಮಾಜ ಸುಧಾರಕ, ವಚನ ಚಳವಳಿಯ ಆದ್ಯ ಪೂಜ್ಯ ಶ್ರೀ ಬಸವೇಶ್ವರ ಜಯಂತಿ (Basava Jayanti 2024) ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ತಮ್ಮ ಶುಭಾಶಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸೋಶಿಯಲ್‌ ಮೀಡಿಯಾ (Social media) ಎಕ್ಸ್‌ನಲ್ಲಿ ಪಠ್ಯ ಸಂದೇಶ ಹಾಗೂ ವಿಡಿಯೋ ಸಂದೇಶಗಳೆರಡನ್ನೂ ಅವರು ನೀಡಿದ್ದಾರೆ.

“ಬಸವ ಜಯಂತಿಯ ಸಂದರ್ಭದಲ್ಲಿ ನಾನು, ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಆದರ್ಶಗಳು ಕೋಟ್ಯಂತರ ಜನರ ಬದುಕಿಗೆ ಬೆಳಕು ನೀಡಿವೆ. ನ್ಯಾಯಯುತ ಮತ್ತು ಸಮೃದ್ಧ ಸಮಾಜದ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಶ್ರಮಿಸುತ್ತಿದ್ದೇವೆ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

“ಭಗವಾನ್‌ ಬಸವೇಶ್ವರರ ಸಂದೇಶ ಹಾಗೂ ಅವರ ವಚನಗಳು ನನಗೆ ಹೊಸಹೊಸದಾಗಿ ಕಲಿಸುತ್ತಲೇ ಇರುತ್ತವೆ. ನಾವು ಅವರಿಂದ ಅವರ ದೈವೀಯ ಗುಣವನ್ನೂ ಕಲಿಯಬಹುದು; ಜೊತೆಗೆ ಅವರು ಉತ್ತಮ ಆಡಳಿತಗಾರ, ಸುಧಾರಕನೂ ಹೌದು. ಸಮಾಜ ಸುಧಾರಣೆಯ ಅವರ ಬದುಕು ನಮಗೆ ಪ್ರೇರಣೆಯಾಗುವಂಥದು. ಬಸವಣ್ಣನವರ ವಚನಗಳು ಹಾಗೂ ಸಂದೇಶಗಳು ಆಧ್ಯಾತ್ಮಿಕವೂ ಹೌದು, ಬದುಕಿನ ಪ್ರಾಯೋಗಿಕ ಮಾರ್ಗದರ್ಶಕ ಸೂತ್ರಗಳೂ ಹೌದು” ಎಂದು ಅವರು ಕೊಂಡಾಡಿದ್ದಾರೆ.

“ಅವರ ಉಪದೇಶಗಳು ನಮಗೆ ಉತ್ತಮ ಮಾನವರಾಗುವುದನ್ನು ಕಲಿಸುತ್ತವೆ. ಇನ್ನಷ್ಟು ದಯಾಳು, ಅಧಿಕ ಉದಾರಿ, ಹೆಚ್ಚಿನ ಮಾನವೀಯ ಸಂವೇದನೆಗಳನ್ನು ನಮ್ಮಲ್ಲಿ ತುಂಬುತ್ತದೆ. ಶತಮಾನಗಳಷ್ಟು ಮೊದಲೇ ಬಸವೇಶ್ವರರು ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯಂಥ ಮಹತ್ವದ ಸಂಗತಿಗಳ ಬಗ್ಗೆ ಸಮಾಜಕ್ಕೆ ಬೋಧಿಸಿದ್ದರು. ನಾವು ಅವರ ವಚನಗಳು- ಆದರ್ಶಗಳನ್ನು ಜಾಗತಿಕವಾಗಿ ಪಸರಿಸಬೇಕು. ಜಗತ್ತನ್ನು ಆ ಮೂಲಕ ಇನ್ನಷ್ಟು ಸುಂದರಗೊಳಿಸೋಣ. ಈ ಶುಭಸಂದರ್ಭದಲ್ಲಿ ನಿಮಗೆಲ್ಲರಿಗೂ ಶುಭಕಾಮನೆಗಳು” ಎಂದು ಅವರು ಹಾರೈಸಿದ್ದಾರೆ.

ಇದನ್ನೂ ಓದಿ: Basava Jayanti 2024: ಬದುಕಿನ ಪಾಠ ಕಲಿಸುವ ಬಸವಣ್ಣನ 10 ವಚನಗಳಿವು

Continue Reading

ಮಳೆ

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Rain Effect : ಭಾರಿ ಮಳೆ ಗಾಳಿಗೆ (Heavy Rain) ಅನಾಹುತಗಳು ಸಂಭವಿಸುತ್ತಿವೆ. ನೆಲಮಂಗಲದಲ್ಲಿ ರಭಸವಾಗಿ ಬೀಸಿದ ಬಿರುಗಾಳಿ ಮನೆಯ ಗೇಟ್‌ ಕಿತ್ತು ಬಂದು, ಅಲ್ಲೆ ಆಡವಾಡುತ್ತಿದ್ದ ಬಾಲಕಿ ಮೇಲೆ ಬಿದ್ದಿದೆ. ಪರಿಣಾಮ ಗಂಭೀರ ಗಾಯಗೊಂಡು ದಾರುಣವಾಗಿ ಮೃತಪಟ್ಟಿದ್ದಾಳೆ. ಸಿಡಿಲಿಗೆ ಎತ್ತುಗಳು ಬಲಿಯಾದರೆ, ಮರ ಬಿದ್ದರೂ ನಾಲ್ವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

VISTARANEWS.COM


on

By

Rain Effect In karnataka
ಮೃತ ಬಾಲಕಿ ಯಲ್ಲಮ್ಮ ಹಾಗೂ ಸಿಡಿಲಿಗೆ ಬಲಿಯಾದ ಎತ್ತುಗಳು
Koo

ನೆಲಮಂಗಲ: ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ (Rain Effect) ಮನೆಯ ಗೇಟ್ ಕಿತ್ತು ಬಂದಿದ್ದು,ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7 ವರ್ಷದ ಬಾಲಕಿ ಮೇಲೆ ಗೇಟ್‌ ಬಿದ್ದಿದೆ. ಪರಿಣಾಮ ಬಾಲಕಿ ಯಲ್ಲಮ್ಮ (7) ಎಂಬಾಕೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಬೆಂಗಳೂರು ಗ್ರಾಮಾಂತರದ ನೆಲಮಂಗಲ ತಾಲೂಕಿನ ವಾಜರಹಳ್ಳಿಯಲ್ಲಿ ಘಟನೆ ನಡೆದಿದೆ.

ನಿನ್ನೆ ಗುರುವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಗೇಟ್ ಕಟ್ ಆಗಿ ಈ ದುರ್ಘಟನೆ ಸಂಭವಿಸಿದೆ. ರಾಯಚೂರು ಜಿಲ್ಲೆಯ ದೇವದುರ್ಗದ ಮೂಲದ ಮುಕ್ಕಣ್ಣ ಹಾಗೂ ಬಾಲಮ್ಮರ ದಂಪತಿ ಕೂಲಿ ಕೆಲಸ ಮಾಡಿಕೊಂಡು ಬೆಂಗಳೂರಲ್ಲಿ ಜೀವನ ನಡೆಸುತ್ತಿದ್ದರು. ಆದರೆ ಮಳೆಯು ಮುದ್ದು ಮಗಳನ್ನು ಕಸಿದುಕೊಂಡಿದೆ.

ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಬಳ್ಳಾರಿಯಲ್ಲಿ ಸಿಡಿಲು ಬಡಿದು ಎತ್ತುಗಳು ಸಾವು

ಗುರುವಾರ ಸಂಜೆ ಸಿಡಿಲು ಬಡಿದು ಎರಡು ಎತ್ತುಗಳು ಮೃತಪಟ್ಟಿವೆ. ಬಳ್ಳಾರಿ ತಾಲೂಕಿನ ಕಪ್ಪಗಲ್ಲು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಸಂಜೆ ವೇಳೆ ಸಿಡಿಲು, ಗುಡುಗು ಸಹಿತ ಮಳೆ ಸುರಿದಿದೆ. ನಾಯಕರ ದೊಡ್ಡಬಸಪ್ಪ ಎಂಬುವವರಿಗೆ ಸೇರಿದ ಎತ್ತುಗಳು ಸಿಡಿಲಿಗೆ ಬಲಿಯಾಗಿವೆ. ತಲಾ ಒಂದು ಲಕ್ಷ ರೂ. ಮೌಲ್ಯದ ಎರಡು ಎತ್ತುಗಳು ಮೃತಪಟ್ಟಿದ್ದಕ್ಕೆ ರೈತ ಕಂಗಲಾಗಿದ್ದರು. ಪರಿಹಾರಕ್ಕೆ ಸರ್ಕಾರವನ್ನು ಒತ್ತಾಯಿಸಿದರು.

ಇದನ್ನೂ ಓದಿ: Dog Bite : ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿ ನಾಯಿಗಳು ಅಟ್ಯಾಕ್‌

ಸ್ವಲ್ಪ ಯಾಮಾರಿದರೂ ಹಾರಿಹೋಗುತ್ತಿತ್ತು ನಾಲ್ವರ ಪ್ರಾಣ ಪಕ್ಷಿ

ಬೆಂಗಳೂರಿನ ನಾಗರಭಾವಿಯ ಎನ್‌ಜಿಎಫ್‌ ಲೇಔಟ್‌ನಲ್ಲಿ ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಸ್ವಲ್ಪ ಯಾಮಾರಿದರೂ ನಾಲ್ವರ ಪ್ರಾಣ ಪಕ್ಷಿ ಹಾರಿಹೋಗುತ್ತಿತ್ತು. ಶಿವು ಎಂಬುವವರು ರಾಯಚೂರಿನಿಂದ ಕೂಲಿ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದರು.

ಶೆಡ್‌ವೊಂದರಲ್ಲಿ ಶಿವು ದಂಪತಿ ಮತ್ತು ಇಬ್ಬರು ಮಕ್ಕಳು ವಾಸಿಸುತ್ತಿದ್ದರು. ನಿನ್ನೆ ಬುಧವಾರ ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಬೃಹತ್‌ ಮರ ಹಾಗೂ ವಿದ್ಯುತ್‌ ಕಂಬ ಧರೆಗೆ ಉರುಳಿದ್ದವು. ವಿದ್ಯುತ್ ಕಂಬದ ಮೇಲೆ ಬೃಹತ್ ಮರ ಬಿದ್ದು, ಶೆಡ್‌ಗೆ ಉರುಳಿತ್ತು. ಅದೃಷ್ಟವಶಾತ್‌ ಆ ಸಮಯದಲ್ಲಿ ಶೆಡ್‌ನಲ್ಲಿ ಯಾರು ಇರಲಿಲ್ಲ. ಹೀಗಾಗಿ ಅನಾಹುತವೊಂದು ತಪ್ಪಿತ್ತು. ಮೊನ್ನೆ ಮರ ಬಿದ್ದ ಬಗ್ಗೆ ಬಿಬಿಎಂಪಿಗೆ ದೂರು ನೀಡಿದರೂ ಪಾಲಿಕೆ ಅಧಿಕಾರಿಗಳು ಕ್ಯಾರೆ ಎಂದಿಲ್ಲ. ಯಾವುದೇ ಕ್ರಮಕ್ಕೆ ಮುಂದಾಗದ ಅಧಿಕಾರಿಗಳ ನಡೆಗೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಮನೆಗಳಿಗೆ ನುಗ್ಗಿದ ಚರಂಡಿ ಮಿಶ್ರಿತ ಮಳೆ ನೀರು

ರಾತ್ರಿ ಪೂರ್ತಿ ಸುರಿದ ಮಳೆಗೆ ಮನೆಗಳಿಗೆ ನೀರು ನುಗ್ಗಿದೆ. ಬೆಂಗಳೂರಿನ ಉಲ್ಲಾಳದಲ್ಲಿರುವ ಮನೆಗಳಿಗೆ ನೀರು ನುಗ್ಗಿತ್ತು. ಪರಿಣಾಮ ನಿವಾಸಿಗಳು ಜಾಗರಣೆ ಇದ್ದು, ರಾತ್ರಿಯಿಡೀ ನೀರು ತೆಗೆಯುವ ಕಾರ್ಯದಲ್ಲಿ ಮಗ್ನರಾಗಿದ್ದರು. ಇತ್ತ ಚಾಮರಾಜಪೇಟೆಯ ಜೆಜೆಆರ್ ನಗರದ ಮನೆಗಳಿಗೆ ಭಾರಿ ಮಳೆಗೆ ಕೊಳಚೆ ನೀರು ನುಗ್ಗಿತ್ತು ಈ ಹಿನ್ನೆಲೆಯಲ್ಲಿ ನಿವಾಸಿಗಳ ಆಕ್ರೋಶ ಹೊರಹಾಕಿದರು. ಮಳೆಗಾಲದಲ್ಲಿ ಬಿನ್ನಿ ಮಿಲ್ ಮುಖ್ಯ ರಸ್ತೆಯಲ್ಲಿರುವ ಸಲಾರ್ಪುರಿಯ ಅಪಾರ್ಟ್ಮೆಂಟ್‌ನಿಂದ ಕೊಳಚೆ ನೀರು ಮನೆಗಳಿಗೆ ನುಗ್ಗುತ್ತಿದೆ ಎಂದು ನಿವಾಸಿಗಳು ಆಕ್ರೋಶಿಸಿದರು. ನಿನ್ನೆ ಬುಧವಾರ ಸ್ಥಳೀಯರು ಅಪಾರ್ಟ್‌ಮೆಂಟ್ ಎದುರು ಪ್ರತಿಭಟನೆಯನ್ನೂ ನಡೆಸಿದ್ದರು.

ಏರ್‌ಪೋರ್ಟ್‌ಗೂ ನುಗ್ಗಿದ ನೀರು

ದೇವನಹಳ್ಳಿ ಸುತ್ತಮುತ್ತ ಕಳೆದ ರಾತ್ರಿ ಧಾರಾಕಾರ ಮಳೆಯಾಗಿದೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ನೀರು ನುಗ್ಗಿತ್ತು. ಮೇಲ್ಚಾವಣಿಯಿಂದ ಟರ್ಮಿನಲ್ ಒಳಗಡೆಗೆ ನೀರು ಸೋರುತ್ತಿದ್ದು, ಲಗೇಜ್ ಬೇ ಬಳಿ ನೀರು ಬಂದ ಹಿನ್ನೆಲೆಯಲ್ಲಿ ಸಿಬ್ಬಂದಿ ಪರದಾಡಬೇಕಾಯಿತು. ಇನ್ನೂ ರನ್ ವೇ ಕ್ಲಿಯರೆನ್ಸ್ ಇಲ್ಲದ ಕಾರಣ 18ಕ್ಕೂ ಅಧಿಕ ವಿಮಾನಗಳು ಬೇರೆಡೆಗೆ ಡೈವರ್ಟ್ ಮಾಡಲಾಯಿತು.

ಉದ್ಘಾಟನೆಗೂ ಮುನ್ನವೇ ಮುಳುಗಿದ ಅಂಡರ್ ಪಾಸ್

ಮೈಸೂರು ರಸ್ತೆಯ ಆರ್‌ವಿ ಕಾಲೇಜ್ ಮುಂಭಾಗದ ಅಂಡರ್ ಪಾಸ್ ಉದ್ಘಾಟನೆಗೂ ಮುನ್ನವೇ ಮುಳುಗಿತ್ತು. ರೈಲ್ವೆ ಟ್ರ್ಯಾಕ್ ಕೆಳಗೆ ನೂತನವಾಗಿ ನಿರ್ಮಾಣ ಆಗಿರುವ ಅಂಡರ್ ಪಾಸ್‌ನಲ್ಲಿ ಮಳೆ ನೀರು ನಿಲ್ಲುವಂತಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Prajwal Revanna Case: “ಟ್ರಾನ್ಸ್‌ಫರ್‌ಗಾಗಿ ಪೀಡಿಸಿ ತಿಂದ…” ಪ್ರಜ್ವಲ್‌ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಯಿಂದಲೂ ದೂರು!

Prajwal Revanna Case: ಮೊದಲಿಗೆ, ಈ ವಿಚಾರದಲ್ಲಿ ನಮ್ಮನ್ನ ಎಳೆಯಬೇಡಿ ಎಂದು ಮಹಿಳೆಯರು ಹೇಳಿದ್ದರು. ತಾವು ಮದುವೆಯಾಗಿ ಸಂಸಾರದೊಂದಿಗೆ ಇದ್ದು, ತಮ್ಮನ್ನು ಅನಗತ್ಯವಾಗಿ ಪ್ರಕರಣದಲ್ಲಿ ತನಿಖೆ, ವಿಚಾರಣೆಗಾಗಿ ಕರೆಯುವುದರಿಂದ ಕುಟುಂಬದ ಶಾಂತಿ, ಮನಶ್ಶಾಂತಿ ಕೆಡಲಿದೆ. ಸಾಮಾಜಿಕವಾಗಿಯೂ ಕೆಟ್ಟ ಪರಿಸ್ಥಿತಿ ಎದುರಿಸಲಿದ್ದೇವೆ ಎಂದು ಸಂತ್ರಸ್ತೆಯರು ಆತಂಕ ತೋಡಿಕೊಂಡಿದ್ದರು.

VISTARANEWS.COM


on

prajwal revanna case women
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna Case) ಅವರಿಂದ ಆಗಿದೆ ಎನ್ನಲಾದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಕೊನೆಗೂ ವಿಡಿಯೋದಲ್ಲಿ (obscene video) ಕೆಲವು ಮಹಿಳಾ ಸರ್ಕಾರಿ ಅಧಿಕಾರಿಗಳು ಮೌನ ಮುರಿದಿದ್ದು, ಎಸ್‌ಐಟಿಗೆ (SIT) ದೂರು ಕೊಡಲು ಮುಂದೆ ಬಂದಿದ್ದಾರೆ.

ಇಬ್ಬರು ಸರ್ಕಾರಿ ಇಲಾಖೆಗಳ ಮಹಿಳಾ ಅಧಿಕಾರಿಗಳಿಂದ ಎಸ್ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡಿದ್ದಾರೆ. “ಟ್ರಾನ್ಸ್‌ಫರ್ ಲೆಟರ್ ಕೊಡುವುದಾಗಿ ಕರೆಸಿಕೊಂಡು ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಎಸಗಿದ್ದರು. ಅದನ್ನು ವೀಡಿಯೊ ಮಾಡಿಟ್ಟುಕೊಂಡು ಪದೇ ಪದೆ ಕರೆಸಿ ಬಟ್ಟೆಬಿಚ್ಚುವಂತೆ ಒತ್ತಾಯ ಮಾಡಿದ್ದರು. ವೀಡಿಯೊ ಇಟ್ಟುಕೊಂಡು ವೀಡಿಯೊ ಕಾಲ್ ಮಾಡಿ ಬಟ್ಟೆ ಬಿಚ್ಚಿ ತೋರಿಸುವಂತೆ ಬೆದರಿಕೆ ಹಾಕುತ್ತಿದ್ದರು” ಎಂದು ಹೇಳಿಕೆ ನೀಡಿದ್ದಾರೆ.

ಇಬ್ಬರು ಸರ್ಕಾರಿ ಅಧಿಕಾರಿಗಳ ಹೇಳಿಕೆಯ ಮೇಲೆ ಪೊಲೀಸರು ಕಾನೂನು ತಜ್ಞರ ಮೊರೆ ಹೋಗಿದ್ದಾರೆ. ಸಂತ್ರಸ್ತ ಮಹಿಳೆಯರ ಹೇಳಿಕೆಯನ್ನು ಪ್ರತ್ಯೇಕ ಎಫ್ಐಆರ್‌ನಲ್ಲಿ ದಾಖಲಿಸಬೇಕೇ, ಅಥವಾ ಹಳೆಯ ಎಫ್ಐಆರ್‌ಗೆ ಸೇರಿಸಬೇಕೆ ಎಂದು ಕಾನೂನು ತಜ್ಞರ ಜೊತೆ ಚರ್ಚೆ ನಡೆಸಲಾಗುತ್ತಿದೆ.

ಮೊದಲಿಗೆ, ಈ ವಿಚಾರದಲ್ಲಿ ನಮ್ಮನ್ನ ಎಳೆಯಬೇಡಿ ಎಂದು ಮಹಿಳೆಯರು ಹೇಳಿದ್ದರು. ತಾವು ಮದುವೆಯಾಗಿ ಸಂಸಾರದೊಂದಿಗೆ ಇದ್ದು, ತಮ್ಮನ್ನು ಅನಗತ್ಯವಾಗಿ ಪ್ರಕರಣದಲ್ಲಿ ತನಿಖೆ, ವಿಚಾರಣೆಗಾಗಿ ಕರೆಯುವುದರಿಂದ ಕುಟುಂಬದ ಶಾಂತಿ, ಮನಶ್ಶಾಂತಿ ಕೆಡಲಿದೆ. ಸಾಮಾಜಿಕವಾಗಿಯೂ ಕೆಟ್ಟ ಪರಿಸ್ಥಿತಿ ಎದುರಿಸಲಿದ್ದೇವೆ ಎಂದು ಸಂತ್ರಸ್ತೆಯರು ಆತಂಕ ತೋಡಿಕೊಂಡಿದ್ದರು. ಕೆಲವರು ರಜೆ ಪಡೆದು ತನಿಖೆಯಿಂದ ದೂರ ಉಳಿದಿದ್ದರು.

ಎಸ್‌ಐಟಿ ಇವರ ಮನವೊಲಿಸಲು ಪ್ರಯತ್ನಿಸಿತ್ತು. ಇದೀಗ ಒತ್ತಡಕ್ಕೆ ಮಣಿದು ಎಸ್ಐಟಿ ಮುಂದೆ ಹೇಳಿಕೆ ಕೊಟ್ಟರೇ ಎಂಬ ಅನುಮಾನವೂ ಮೂಡಿದೆ.

ಪ್ರಜ್ವಲ್‌ ರೇವಣ್ಣ ಮೇಲೆ ಸುಳ್ಳು ಆರೋಪ ನೀಡಲು ಒತ್ತಡ: ಮಹಿಳೆ ದೂರು

ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna case) ವಿರುದ್ಧ ಸುಳ್ಳು ಕೇಸ್ (Fake case) ಹಾಕಲು ತನಗೆ ಒತ್ತಾಯಿಸಲಾಗುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (National Commission for Women) ಮಹಿಳೆಯೊಬ್ಬರು ದೂರು ನೀಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ ರೇವಣ್ಣ (HD revanna jailed) ಅವರ ವಿರುದ್ಧ ರಾಜಕೀಯ ಪ್ರೇರಿತ ಸುಳ್ಳು ದೂರುಗಳನ್ನು ದಾಖಲಿಸಲಾಗುತ್ತಿದೆ ಎಂದು ಜೆಡಿಎಸ್‌ (JDS) ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಈ ದೂರು ಮಹತ್ವ ಪಡೆದುಕೊಂಡಿದೆ. ಸೂಕ್ತ ಭದ್ರತೆಗೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡುವಂತೆ ನನಗೆ ಒತ್ತಡ ಹಾಕಲಾಗುತ್ತಿದೆ. ಮೂವರು ಸಿವಿಲ್ ಡ್ರೆಸ್‌ನಲ್ಲಿ ಬಂದವರು ಒತ್ತಡ ಹಾಕಿದ್ದು, ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಬೆದರಿಕೆ ಹಾಕಿದ್ದಾರೆ. ನನ್ನ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.

ಮಹಿಳೆ ಪತ್ರ ಬರೆದಿರುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಮಾಹಿತಿ ನೀಡಿದೆ. ಹಾಸನ ಮೂಲದ ಮಹಿಳೆ ಪತ್ರ ಬರೆದಿದ್ದು, ಪತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮಾಹಿತಿ ನೀಡಲಾಗಿದೆ. ದೂರಿನ ಪ್ರತಿ ಹಾಗೂ ಸೂಕ್ತ ಭದ್ರತೆಗೆ ಮನವಿ ಮಾಡಲಾಗಿದೆ.

ಪ್ರಜ್ವಲ್ ಕೇಸ್‌ನಲ್ಲಿ ಮಹಿಳೆಗೆ ದೂರು ನೀಡುವಂತೆ ಒತ್ತಡ ಹಾಕಲಾಗ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆಯೋಗದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಇಂದು ಮತ್ತೆ ಪತ್ರ ಬರೆಯುತ್ತೇವೆ. ಆಯೋಗದ ಅಧಿಕಾರಿಗಳು ಪತ್ರ ಬರೆದ ಮಹಿಳೆಯನ್ನು ಭೇಟಿ ಮಾಡುತ್ತೇವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.

ವಕೀಲ ದೇವರಾಜೇಗೌಡ ಮೇಲೂ ಲೈಂಗಿಕ ದೌರ್ಜನ್ಯ ದೂರು

ಪೆನ್ ಡ್ರೈವ್ ಪ್ರಕರಣದಲ್ಲಿ (Prajwal Revanna Case) ಹೋರಾಟ ನಡೆಸುತ್ತಿದ್ದ ವಕೀಲ ದೇವರಾಜೇಗೌಡ (Devaraje Gowda) ವಿರುದ್ದ ಎಫ್ಐಆರ್ ದಾಖಲಾಗಿದೆ. ಮಹಿಳೆಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಹತ್ತು ತಿಂಗಳ ಹಿಂದೆ ಪರಿಚಯವಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಪತಿಯು ಮಾಲೀಕತ್ವದ ಸೈಟ್ ವಿಚಾರವಾಗಿ ದೇವರಾಜೇಗೌಡ ಅವರನ್ನು ಸಂತ್ರಸ್ತ ಮಹಿಳೆ ಭೇಟಿಯಾಗಿದ್ದರು. ಆ ಪರಿಚಯವನ್ನು ದುರ್ಬಳಕೆ ಮಾಡಿಕೊಂಡು ವಾಟ್ಸ್​ಆ್ಯಪ್​ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪ ದೇವರಾಜ್ ವಿರುದ್ಧ ಕೇಳಿ ಬಂದಿದೆ. ಅದೇ ರೀತಿ ಬಳಿಕ ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪವೂ ಕೇಳಿ ಬಂದಿದೆ.

ಮಹಿಳೆಗೆ ಫೋನ್ ಮಾಡಿ ತಾವು ಜೊತೆಯಲ್ಲಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡೋದಾಗಿ ಬೆದರಿಕೆ ಹಾಕಿದ ಆರೋಪವೂ ದಾಖಲಾಗಿದೆ. ಅದೇ ರೀತಿ ಮಹಿಳೆಗೆ ವಿಡಿಯೋ ಕಾಲ್‌ ಮಾಡಿ‌ ಖಾಸಗಿ ಅಂಗಗಳನ್ನು ಪ್ರದರ್ಶನದ ಮಾಡಿರುವ ಆರೋಪವೂ ದಾಖಲಾಗಿದೆ.

ತಾನು ಹೇಳಿದ ಹಾಗೆ ಕೇಳಬೇಕು.ಇಲ್ಲದೇ ಹೋದರೆ ಪತಿಯ ಜೀವಕ್ಕೆ ಪಾಯ ತಂದೊಡ್ಡುವುದಾಗಿ ದೇವರಾಜೇಗೌಡ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ತನ್ನ ಬೆಂಬಲಿಗರನ್ನು ಕಳುಹಿಸಿ ಜೀವ ಬೆದರಿಕೆ ಹಾಕಿದ ಅರೋಪವೂ ಕೇಳಿ ಬಂದಿದೆ. ಹಲವಾರು ಆರೋಪಗಳ ಮೇಲೆ ದೂರು ದಾಖಲಾಗಿದೆ. ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ: Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Continue Reading
Advertisement
Yogi Adityanath
ದೇಶ26 seconds ago

Yogi Adityanath: ʼಅಕ್ಬರ್‌ಪುರʼದ ಮೇಲೆ ಯೋಗಿ ಆದಿತ್ಯನಾಥ್ ಮಾಸ್ಟರ್‌ ಸ್ಟ್ರೋಕ್‌; ಹೆಸರು ಬದಲಾವಣೆಯ ಸೂಚನೆ

mani shankar iyer
ದೇಶ4 mins ago

Mani Shankar Aiyar: ಪಾಕಿಸ್ತಾನವನ್ನು ಕೆಣಕಿದರೆ ಅಣು ಬಾಂಬ್ ಬೀಳಬಹುದು ಹುಷಾರ್! ಮೋದಿಗೆ ಮಣಿಶಂಕರ್ ಅಯ್ಯರ್ ಎಚ್ಚರಿಕೆ!

ICMR Dietary Guidelines
ಆರೋಗ್ಯ18 mins ago

ICMR Dietary Guidelines: ಬೊಜ್ಜು ತಡೆಯಲು ಏನು ಮಾಡಬೇಕು? ಮಾರ್ಗಸೂಚಿ ಬಿಡುಗಡೆ ಮಾಡಿದ ಸಂಶೋಧನಾ ಸಂಸ್ಥೆ

Murder Case
ಬೆಂಗಳೂರು21 mins ago

Murder case : ಪ್ರೀತಿ ವಿಷ್ಯಕ್ಕೆ ಬೀದಿ ಹೆಣವಾದ! ಮಗನ ಡೆಡ್‌ಬಾಡಿ ನೋಡಿ ಮೂರ್ಛೆ ಹೋದ ತಾಯಿ

pm narendra modi basava jayanti 2024
ಪ್ರಮುಖ ಸುದ್ದಿ53 mins ago

PM Narendra Modi: ವಿಡಿಯೋ ಸಂದೇಶ ಮೂಲಕ ಬಸವೇಶ್ವರ ಜಯಂತಿಗೆ ಶುಭ ಕೋರಿದ ಪಿಎಂ

Sharia law
ವಿದೇಶ1 hour ago

Sharia Law: “ಅಮೆರಿಕನ್ನರ ಮೇಲೂ ಷರಿಯಾ ಕಾನೂನು ಹೇರಲಾಗುತ್ತದೆ…”; ಸಂಚಲನ ಮೂಡಿಸಿದ ವೈರಲ್‌ ವಿಡಿಯೋ

Rain Effect In karnataka
ಮಳೆ1 hour ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

NEET-UG
ದೇಶ1 hour ago

NEET-UG: ನೀಟ್‌ ಪರೀಕ್ಷೆ ವೇಳೆ ವಂಚನೆ; 10 ಲಕ್ಷ ರೂ.ಗೆ ಬೇಡಿಕೆ ಇಟ್ಟ ಶಿಕ್ಷಕ ಸೇರಿ ಮೂವರ ವಿರುದ್ಧ ಬಿತ್ತು ಕೇಸು

prajwal revanna case women
ಪ್ರಮುಖ ಸುದ್ದಿ1 hour ago

Prajwal Revanna Case: “ಟ್ರಾನ್ಸ್‌ಫರ್‌ಗಾಗಿ ಪೀಡಿಸಿ ತಿಂದ…” ಪ್ರಜ್ವಲ್‌ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಯಿಂದಲೂ ದೂರು!

Dog Bite in Belgavi
ಬೆಳಗಾವಿ2 hours ago

Dog Bite : ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿ ನಾಯಿಗಳು ಅಟ್ಯಾಕ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect In karnataka
ಮಳೆ1 hour ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ8 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ15 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ16 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ17 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ23 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ23 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ24 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು24 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ1 day ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

ಟ್ರೆಂಡಿಂಗ್‌