Site icon Vistara News

ಹಿರಿಯ ನಟ ಜೈ ಜಗದೀಶ್‌ ವಿರುದ್ಧ ಹಲ್ಲೆ ಆರೋಪ

jai jagadeesh

ಮಂಡ್ಯ: ವ್ಯಕ್ತಿಯೊಬ್ಬರಿಗೆ ಹಲ್ಲೆ ಮಾಡಿದ ಆರೋಪದ ಹಿನ್ನಲೆಯಲ್ಲಿ ಹಿರಿಯ ನಟ ಜೈ ಜಗದೀಶ್‌ ವಿರುದ್ಧ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಜೂನ್‌ 5 ರಂದು ನಾಗಮಂಗಲ ತಾಲೂಕಿನ ಬೆಳ್ಳೂರು ಹೋಬಳಿಯ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನಲ್ಲಿಗೆರೆ  ಟೋಲ್ ಬಳಿ ಈ ಘಟನೆ ನಡೆದಿದ್ದು, ಜಯರಾಮೇಗೌಡ ಎಂಬುವವರು ಬಸ್ಸಿನಿಂದ ಕೆಳಕ್ಕೆ ಇಳಿಯುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಜೈಜಗದೀಶ್ ಅವರ ಕಾರು ಬಂದಿದೆ. ಈ ವೇಳೆ ಜಯರಾಮೇಗೌಡರಿಗೆ ಬಸ್ಸಿನಿಂದ ಯಾಕೆ ಬಾಟಲಿ ಬಿಸಾಡುತ್ತಿಯಾ ಎಂದು ಪ್ರಶ್ನಿಸಿ, ಅವಾಚ್ಯ ಶಬ್ದಗಳಿಂದ ಬೈದಿದ್ದಲ್ಲದೆ ಹಲ್ಲೆ ನಡೆಸಿದ್ದಾರೆ ಎಂದು ಜಯರಾಮೇಗೌಡ ದೂರಿದ್ದಾರೆ.

ಇದನ್ನೂ ಓದಿ | KFCC Election | ಭಾ. ಮಾ. ಹರೀಶ್‌ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ, ಸಾ. ರಾ ಸೋಲು

ಸದ್ಯ ಜಯರಾಮೇಗೌಡ ಅವರು ಬೆಳ್ಳೂರು ಪೊಲೀಸ್‌ ಠಾಣೆಗೆ ದೂರು ದಾಖಲಿಸಿದ್ದಾರೆ. ತಮ್ಮನ್ನು ಕೆಟ್ಟದಾಗಿ ನಿಂದಿಸಿದ್ದಲ್ಲದೆ, ಹಲ್ಲೆ ಕೂಡ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಬೆಳ್ಳೂರು ಪೊಲೀಸ್‌ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ.

ಇದನ್ನು ಓದಿ|ವಿದಾಯದ ವೇಳೆಯಲ್ಲಿ ನೆನಪು; ಗಾಯಕ ಕೆಕೆ ಕಂಠದ ಕನ್ನಡ ಹಾಡು ಕೇಳಿದ್ದೀರಾ?

Exit mobile version