Site icon Vistara News

Congress leader attacked : ಯುವ ಕಾಂಗ್ರೆಸ್‌ ಅಧ್ಯಕ್ಷನಿಗೆ ಚೂರಿಯಿಂದ ಇರಿದು ಪರಾರಿಯಾದ ದುಷ್ಕರ್ಮಿಗಳು

Congress leader

#image_title

ಚಿಕ್ಕೋಡಿ: ಕಾಗವಾಡ ಯುತ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ ಅಪರಾಜ ಅವರ ಮೇಲೆ ದುಷ್ಕರ್ಮಿಗಳು (Congress leader attacked) ಗಂಭೀರವಾಗಿ ಹಲ್ಲೆ ಮಾಡಿದ್ದಾರೆ. ಐನಾಪುರ ಪಟ್ಟಣದಲ್ಲಿದ್ದ ಅವರ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದು, ಬಳಿಕ ಪರಾರಿಯಾಗಿದ್ದಾರೆ.

ಪ್ರಶಾಂತ್‌ ಅವರು ತಮ್ಮ ವಾಹನದಲ್ಲಿ ಸಾಗುತ್ತಿದ್ದಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಅವರಿಗೆ ದಾಳಿ ನಡೆಸಿದ್ದಾರೆ. ತೀವ್ರ ಗಾಯಗೊಂಡಿರುವ ಪ್ರಶಾಂತ್‌ ಅಪರಾಜ ಅವರಿಗೆ ಕಾಗವಾಡ ಸಾರ್ವಜನಿಕ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಶಾಂತ್‌ ಅವರು ಪ್ರಾಣಹಾನಿಯಿಂದ ಪಾರಾಗಿದ್ದಾರೆ. ಆದರೆ, ದೇಹದ ಕೆಲವು ಭಾಗಗಳಿಗೆ ತೀವ್ರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಪಕ್ಷ ಬದಲಾಯಿಸಿದ್ದರು ಪ್ರಶಾಂತ

ಪ್ರಶಾಂತ್‌ ಅವರು ಈ ಮೊದಲು ಕಾಗವಾಡ ಬಿಜೆಪಿ ಶಾಸಕ ಆಪ್ತನಾಗಿದ್ದರು. ಕೆಲದಿನಗಳ ಹಿಂದೆ ಕಾಂಗ್ರೆಸ್ ಸೇರಿ ಪಕ್ಷದ ಸಂಘಟನೆ ತೀವ್ರಗೊಳಿಸಿದ್ದರು. ಜತೆಗೆ ಅವರಿಗೆ ಯುವ ಕಾಂಗ್ರೆಸ್‌ ಅಧ್ಯಕ್ಷನ ಹುದ್ದೆಯನ್ನೂ ನೀಡಿದ್ದರು.

ಪಟ್ಟಣ ಬಂದ್‌ ಮಾಡಿ ಪ್ರತಿಭಟನೆ

ಕಾಂಗ್ರೆಸ್ ಮುಖಂಡ ಪ್ರಶಾಂತ್‌ ಮೇಲಿನ ಹಲ್ಲೆ ಖಂಡಿಸಿ ಮಂಗಲವಾರ ಐನಾಪೂರದಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ. ಐನಾಪೂರ ಪಟ್ಟಣ ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

ಚಾಮರಾಜ ನಗರ: ಅಪರಿಚಿತ ವ್ಯಕ್ತಿ ಬರ್ಬರ ಕೊಲೆ

ಚಾಮರಾಜನಗರ ಜಿಲ್ಲೆಯ ಯಳಂದೂರು ಪಟ್ಟಣದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 209 ಬಳಿ ಕೆಸ್ತೂರು ರಸ್ತೆಯಲ್ಲಿ ವ್ಯಕ್ತಿಯ ರಕ್ತ ಸಿಕ್ತ ಶವ ಪತ್ತೆಯಾಗಿದೆ. ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿರುವ ಶಂಕೆ ಇದ್ದು, ಮೃತ ವ್ಯಕ್ತಿ ಯಾರು ಎನ್ನುವ ಬಗ್ಗೆ ಮಾಹಿತಿ ಇಲ್ಲ.

ಸ್ಥಳಕ್ಕೆ ಯಳಂದೂರು ಪಟ್ಟಣ ಪೊಲೀಸರು ಶ್ವಾನದಳದೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : Bengaluru Murder case: ಅಪ್ಪನ ಕೊಲೆಗೆ 1 ಕೋಟಿ ರೂ. ಸುಪಾರಿ ಕೊಟ್ಟ ಮಗ ಸೇರಿ ಆರೋಪಿಗಳು ಅರೆಸ್ಟ್‌

Exit mobile version