M B Patil : ವಿಸ್ತಾರ ನ್ಯೂಸ್ ಕಚೇರಿಗೆ ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್ ಭೇಟಿ - Vistara News

ಕರ್ನಾಟಕ

M B Patil : ವಿಸ್ತಾರ ನ್ಯೂಸ್ ಕಚೇರಿಗೆ ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್ ಭೇಟಿ

M B Patil: ವಿಸ್ತಾರ ಮೀಡಿಯಾ ಸಂಸ್ಥೆಯ ಟಿವಿ ಚಾನೆಲ್, ನ್ಯೂಸ್ ವೆಬ್ ಸೈಟ್ ಮತ್ತು ಯುಟ್ಯೂಬ್ ಚಾನೆಲ್ ಗಳು ವಿಭಿನ್ನತೆಯಿಂದ ಮತ್ತು ಗುಣಮಟ್ಟದಿಂದ ಕೂಡಿವೆ ಎಂದು ಕಾಂಗ್ರೆಸ್ ಶಾಸಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ (M B Patil) ಮೆಚ್ಚುಗೆ ವ್ಯಕ್ತಪಡಿಸಿದರು.

VISTARANEWS.COM


on

Congress leader M.B. Patil visits to vistara news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಂಗ್ರೆಸ್ ಶಾಸಕ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ್ (M B Patil) ಅವರು ವಿಸ್ತಾರ ನ್ಯೂಸ್ ಕಚೇರಿಗೆ ಬುಧವಾರ ಭೇಟಿ ನೀಡಿ, ಸುದ್ದಿ ಗುಣಮಟ್ಟದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ವಿಸ್ತಾರ ಮೀಡಿಯಾ ಸಂಸ್ಥೆಯು ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿಕೊಂಡಿದೆ ಎನ್ನುವುದನ್ನು ಕೇಳಿದ್ದೆ. ಈಗ ಪ್ರತ್ಯಕ್ಷ ನೋಡಿ ಬೆರಗಾಗಿದ್ದೇನೆ. ನ್ಯೂಸ್ ಚಾನೆಲ್, ನ್ಯೂಸ್ ವೆಬ್ ಸೈಟ್ ಮತ್ತು ಯುಟ್ಯೂಬ್ ಚಾನೆಲ್‌ಗಳಲ್ಲಿ ಉಪಯುಕ್ತ ಮಾಹಿತಿಗಳಿವೆ ಎಂದು ಪಾಟೀಲ್ ಅವರು ಹೇಳಿದರು.

ವಿಸ್ತಾರ ನ್ಯೂಸ್‌ ಕಚೇರಿಯಲ್ಲಿ ಎಂ ಬಿ ಪಾಟೀಲ್‌ ಅವರನ್ನು ಗೌರವಿಸಲಾಯಿತು. ಪ್ರಧಾನ ಸಂಪಾದಕ ಮತ್ತು ಸಿಇಒ ಹರಿಪ್ರಕಾಶ್‌ ಕೋಣೆಮನೆ ಮತ್ತು ವಿಸ್ತಾರ ನ್ಯೂಸ್‌ ಸಿಬ್ಬಂದಿ ಹಾಜರಿದ್ದರು.

ವಿಸ್ತಾರ ನ್ಯೂಸ್ ಪ್ರಧಾನ ಸಂಪಾದಕ ಮತ್ತು ಸಿಇಒ ಹರಿಪ್ರಕಾಶ್ ಕೋಣೆಮನೆ ಅವರು ಎಂ. ಬಿ. ಪಾಟೀಲ್ ಅವರಿಗೆ ವಿಸ್ತಾರ ನ್ಯೂಸ್‌ನ ರೂಪುರೇಷೆ, ಮುಂದಿನ ಯೋಜನೆಗಳನ್ನು ವಿವರಿಸಿದರು. ಎಂಟರ್‌ಟೇನ್‌ಮೆಂಟ್ ಮತ್ತು ಮ್ಯೂಸಿಕ್ ಚಾನೆಲ್ ಸದ್ಯದಲ್ಲೇ ಆರಂಭವಾಗಲಿದೆ ಎಂದವರು ತಿಳಿಸಿದರು.

ಇದನ್ನೂ ಓದಿ | ರಾಜಮಾರ್ಗ ಅಂಕಣ : ಬ್ರಿಟಿಷ್ ವಿಜ್ಞಾನಿಗಳು ವಿಷ ಎಂದು ಕೊಟ್ಟ ದ್ರಾವಣವನ್ನು ಆ ಭಾರತೀಯ ವಿಜ್ಞಾನಿ ಗಟಗಟನೆ ಕುಡಿದಿದ್ದರು!

ಈ ಸಂದರ್ಭದಲ್ಲಿ ಎಂ. ಬಿ. ಪಾಟೀಲ್ ಅವರನ್ನು ಹೂಗುಚ್ಛ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವಿಸ್ತಾರ ನ್ಯೂಸ್ ಸಂಪಾದಕ ಶರತ್ ಎಂ. ಎಸ್., ಸಿಒಒ ಪರಶುರಾಮ್, ಸಂಸ್ಥೆಯ ನಿರ್ದೇಶಕ (ಬ್ಯುಸಿನೆಸ್‌) ವಿನಯ್‌ ಶೇಷಗಿರಿ, ಇನ್ ಪುಟ್ – ಔಟ್ ಪುಟ್ ಮುಖ್ಯಸ್ಥ ಮಂಜುನಾಥ್ ಪಿ, ವಿಸ್ತಾರ ನ್ಯೂಸ್ ಡಿಜಿಟಲ್ ಸಂಪಾದಕ ರಮೇಶ್ ಕುಮಾರ್ ನಾಯಕ್, ಸ್ಪೆಷಲ್ ಆಪರೇಷನ್ ಎಡಿಟರ್ ಕಿರಣ್ ಕುಮಾರ್ ಡಿ.ಕೆ ಮತ್ತಿತರರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಬೆಂಗಳೂರಿನಲ್ಲಿ ದೊರೆಯಲಿದೆ ಕ್ಯುಆರ್‌ ಕೋಡ್ ಸಹಿತ ವೋಟರ್‌ ಸ್ಲಿಪ್‌:‌ ಏನಿದರ ಉಪಯೋಗ?

Lok Sabha Election 2024: ಇದೇ ಮೊದಲ ಬಾರಿಗೆ ಇಂಥದೊಂದು ಉಪಕ್ರಮವನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಕ್ಯೂಆರ್ ಕೋಡ್‌ಗಳಿಂದ ಕೂಡಿರುವ ವೋಟರ್ ಸ್ಲಿಪ್‌ಗಳು, ನಗರದ ನಿವಾಸಿಗಳಿಗೆ ಮತದಾನಕ್ಕಾಗಿ ಮತಗಟ್ಟೆಗಳನ್ನು ಹುಡುಕಾಡುತ್ತ ಹೋಗುವ ಕಷ್ಟವನ್ನು ತಪ್ಪಿಸುತ್ತವೆ.

VISTARANEWS.COM


on

lok sabha Election 2024 digital QR code voter slip
Koo

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ (Election commission) ಈ ಸಲ ಲೋಕಸಭೆ ಚುನಾವಣೆ (Lok Sabha Election 2024) ಮತದಾನದ (voting) ಮೊದಲ ಪರಿಚಯಿಸುತ್ತಿರುವ ಕೆಲವು ನೂತನ ಉಪಕ್ರಮಗಳಲ್ಲಿ ಒಂದು, ಕ್ಯುಆರ್‌ ಕೋಡ್‌ ಇರುವ ವೋಟರ್‌ ಸ್ಲಿಪ್ (digital QR code voter slip).‌ ಇದು ಬೆಂಗಳೂರಿನಲ್ಲಿ ಹಾಗೂ ರಾಜ್ಯದ ಕಲವು ಮಹಾನಗರ ಪಾಲಿಕೆಗಳಲ್ಲಿ ಮನೆ-ಮನೆಗೆ ವಿತರಿಸುವ ವೋಟರ್ ಸ್ಲಿಪ್‌ಗಳಲ್ಲಿ ಕ್ಯೂಆರ್ ಕೋಡ್‌ಗಳನ್ನು ಹೊಂದಿದೆ.

ಇದರ ಉದ್ದೇಶವೇನು? ಈ ಮುಂದಾಲೋಚನೆಯ ಉಪಕ್ರಮವು ನಗರ ಪ್ರದೇಶಗಳಲ್ಲಿ, ವಿಶೇಷವಾಗಿ ಬೆಂಗಳೂರಿನಂತಹ ಜನಜಂಗುಳಿಯ ನಗರಗಳಲ್ಲಿ ಮತಗಟ್ಟೆಗಳನ್ನು ಪತ್ತೆಹಚ್ಚುವ ಪ್ರಕ್ರಿಯೆಯನ್ನು ಸರಳಗೊಳಿಸುವ ಗುರಿಯನ್ನು ಹೊಂದಿದೆ.

ಇದೇ ಮೊದಲ ಬಾರಿಗೆ ಇಂಥದೊಂದು ಉಪಕ್ರಮವನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಕ್ಯೂಆರ್ ಕೋಡ್‌ಗಳಿಂದ ಕೂಡಿರುವ ವೋಟರ್ ಸ್ಲಿಪ್‌ಗಳು, ನಗರದ ನಿವಾಸಿಗಳಿಗೆ ಮತದಾನಕ್ಕಾಗಿ ಮತಗಟ್ಟೆಗಳನ್ನು ಹುಡುಕಾಡುತ್ತ ಹೋಗುವ ಕಷ್ಟವನ್ನು ತಪ್ಪಿಸುತ್ತವೆ. ಅವರು ತಮಗಾಗಿ ಗೊತ್ತುಪಡಿಸಿದ ಮತದಾನ ಕೇಂದ್ರಗಳಿಗೆ ಹೋಗುವ ದಾರಿಯನ್ನು ಸೂಚಿಸುತ್ತದೆ.

ವೋಟರ್ ಸ್ಲಿಪ್‌ಗಳಲ್ಲಿ ಸಂಯೋಜಿಸಲಾದ QR ಕೋಡ್‌ಗಳು ಮತದಾನ ಕೇಂದ್ರದ ವಿವರಗಳು, ಚುನಾವಣಾ ದಿನಾಂಕ ಮತ್ತು ಸಮಯದಂತಹ ಪ್ರಮುಖ ಮಾಹಿತಿಯನ್ನು ಒಳಗೊಂಡಿರುತ್ತವೆ. ಆದರೆ ಈ ಸ್ಲಿಪ್‌ಗಳು ಮತದಾರರ ಭಾವಚಿತ್ರಗಳನ್ನು ಒಳಗೊಂಡಿಲ್ಲ. ಮತಗಟ್ಟೆ ಮಟ್ಟದ ಅಧಿಕಾರಿಗಳು ಮತದಾರರ ಮಾಹಿತಿ ಕಾರ್ಡ್ ಅನ್ನು ಎಲ್ಲಾ ನೋಂದಾಯಿತ ಮತದಾರರಿಗೆ ಒದಗಿಸುತ್ತಾರೆ. ಆದರೆ ಈ ಕಾರ್ಡ್ ಮತದಾರರ ಗುರುತಿನ ಪುರಾವೆ ಅಥವಾ ಐಡಿ ಕಾರ್ಡ್‌ ಆಗಿ ಕಾರ್ಯನಿರ್ವಹಿಸುವುದಿಲ್ಲ.

ತಮ್ಮ ಗುರುತನ್ನು ಮತಗಟ್ಟೆಯಲ್ಲಿ ಖಚಿತಪಡಿಸಲು, ಮತದಾರರು ಕೇಂದ್ರ ಚುನಾವಣಾ ಆಯೋಗವು ನೀಡಿದ ಮತದಾರರ ಗುರುತಿನ ಚೀಟಿ ಅಥವಾ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ನೀಡಲಾದ ಯಾವುದೇ ಮಾನ್ಯತೆಯುಳ್ಳ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕು.

ಈ ಪ್ರಗತಿಪರ ಉಪಕ್ರಮವು ಮತದಾನ ಪ್ರಕ್ರಿಯೆಯನ್ನು ಸುವ್ಯವಸ್ಥಿತಗೊಳಿಸುವುದಲ್ಲದೆ, ವಿಶೇಷವಾಗಿ ಬೆಂಗಳೂರಿನಂತಹ ಜನನಿಬಿಡ ನಗರ ಪ್ರದೇಶಗಳಲ್ಲಿ ಮತದಾರರಿಗೆ ಸುಗಮತೆಯನ್ನು ಉಂಟುಮಾಡಲಿದೆ. QR ಕೋಡ್-ಸಕ್ರಿಯಗೊಳಿಸಿದ ವೋಟರ್ ಸ್ಲಿಪ್‌ಗಳ ಪರಿಚಯದೊಂದಿಗೆ, ಚುನಾವಣಾ ಪ್ರಕ್ರಿಯೆಯು ಹೆಚ್ಚು ಪರಿಣಾಮಕಾರಿ ಮತ್ತು ಬಳಕೆದಾರ ಸ್ನೇಹಿಯಾಗಲು ಸಿದ್ಧವಾಗಿದೆ. ನಾಗರಿಕರಿಗೆ ಸುಗಮ ಮತದಾನದ ಅನುಭವವನ್ನು ನೀಡಲಿದೆ.

ಇದನ್ನೂ ಓದಿ: Lok Sabha Election 2024: ನಾಳೆ ರಾಜ್ಯಕ್ಕೆ ರಾಹುಲ್‌ ಗಾಂಧಿ, ಪವನ್‌ ಕಲ್ಯಾಣ್‌ ಎಂಟ್ರಿ

Continue Reading

ಕರ್ನಾಟಕ

Parliament Flashback: ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿದ್ದ ಕಾಂಗ್ರೆಸ್‌ ಕಿರುಕುಳದಿಂದಾಗಿ ಪ್ರಧಾನಿ ಹುದ್ದೆ ತೊರೆದಿದ್ದ ದೇವೇಗೌಡರು!

ಅಟಲ್‌ ಬಿಹಾರಿ ವಾಜಪೇಯಿ (Parliament Flashback) ಅವರ 13 ದಿನಗಳ ಸರ್ಕಾರ ಬಹುಮತ ಇಲ್ಲದೆ ಪತನಗೊಂಡ ಬಳಿಕ ಸಂಯುಕ್ತ ರಂಗ ಸರ್ಕಾರ ಅಸ್ತಿತ್ವಕ್ಕೆ ಬಂತು. ಈ ಸರ್ಕಾರ ಕಾಂಗ್ರೆಸ್‌ನ ಬಾಹ್ಯ ಬೆಂಬಲವನ್ನೇ ಆಧರಿಸಿತ್ತು. 1996ರ ಜೂನ್‌ 1ರಂದು ದೇವೇಗೌಡರು ದೇಶದ 11ನೇ ಪ್ರಧಾನಿಯಾಗಿ ಪ್ರಮಾಣವ ವಚನ ಸ್ವೀಕರಿಸಿದರು. ಆದರೆ ಪ್ರಧಾನಿ ದೇವೇಗೌಡರಿಗೆ ಆಗಿನ ಕಾಂಗ್ರೆಸ್‌ ಅಧ್ಯಕ್ಷ ಸೀತಾರಾಮ್‌ ಕೇಸರಿ ಅವರು ನಾನಾ ರೀತಿಯ ಕಿರುಕುಳ ಕೊಡಲಾರಂಭಿಸಿದರು.

VISTARANEWS.COM


on

EX PM HD Devegowda
Koo

ಬೆಂಗಳೂರು: ಆಗ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಎಚ್‌ ಡಿ ದೇವೇಗೌಡರು ಅನಿರೀಕ್ಷಿತ ಸನ್ನಿವೇಶದಲ್ಲಿ ದೇಶದ ಪ್ರಧಾನಿಯಾದರು. ಮಣ್ಣಿನ ಮಗ ಪ್ರಧಾನಿಯಾದ ಬಗ್ಗೆ ರಾಜ್ಯದಲ್ಲಿ ಹರ್ಷದ ವಾತಾವರಣ ಉಂಟಾಗಿತ್ತು. ಆದರೆ ಒಂದು ವರ್ಷದೊಳಗೇ ಅವರು ಪ್ರಧಾನಿ ಹುದ್ದೆಯಿಂದ ಕೆಳಗೆ ಇಳಿಯಬೇಕಾಯಿತು.
ಅಟಲ್‌ ಬಿಹಾರಿ ವಾಜಪೇಯಿ ಅವರ 13 ದಿನಗಳ ಸರ್ಕಾರ ಬಹುಮತ ಇಲ್ಲದೆ ಪತನಗೊಂಡ ಬಳಿಕ ಸಂಯುಕ್ತ ರಂಗ ಸರ್ಕಾರ ಅಸ್ತಿತ್ವಕ್ಕೆ ಬಂತು. ಈ ಸರ್ಕಾರ ಕಾಂಗ್ರೆಸ್‌ನ ಬಾಹ್ಯ ಬೆಂಬಲವನ್ನೇ ಆಧರಿಸಿತ್ತು. 1996ರ ಜೂನ್‌ 1ರಂದು ದೇವೇಗೌಡರು ದೇಶದ 11ನೇ ಪ್ರಧಾನಿಯಾಗಿ ಪ್ರಮಾಣವ ವಚನ ಸ್ವೀಕರಿಸಿದರು. ಆದರೆ ಪ್ರಧಾನಿ ದೇವೇಗೌಡರಿಗೆ ಆಗಿನ ಕಾಂಗ್ರೆಸ್‌ ಅಧ್ಯಕ್ಷ ಸೀತಾರಾಮ್‌ ಕೇಸರಿ ಅವರು ನಾನಾ ರೀತಿಯ ಕಿರುಕುಳ ಕೊಡಲಾರಂಭಿಸಿದರು.

Kalyan Singh

ಕಲ್ಯಾಣ್‌ ಸಿಂಗ್‌ ಸರ್ಕಾರ ಅಸ್ಥಿರಗೊಳಿಸಲು ಯತ್ನ

ಆಗ ಉತ್ತರ ಪ್ರದೇಶದಲ್ಲಿ ಕಲ್ಯಾಣ್‌ ಸಿಂಗ್‌ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿತ್ತು. ಕಾಂಗ್ರೆಸ್‌ ಕೇವಲ 33 ಸ್ಥಾನ ಗೆದ್ದು ನಾಲ್ಕನೇ ಸ್ಥಾನಕ್ಕೆ ಕುಸಿದಿತ್ತು. ಕಲ್ಯಾಣ್‌ ಸಿಂಗ್‌ ಸರ್ಕಾರಕ್ಕೆ ಬಹುಮತ ಇರಲಿಲ್ಲ. ಸ್ಥಳೀಯ ಕೆಲವು ಪ್ರಾದೇಶಿಕ ಪಕ್ಷಗಳ ಬೆಂಬಲ ಪಡೆದು ಬಿಜೆಪಿ ಸರ್ಕಾರ ರಚಿಸಿತ್ತು. ಈ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಬೇಕು ಎಂದು ಸೀತಾರಾಮ್‌ ಕೇಸರಿ ಅವರು ದೇವೇಗೌಡರ ಮೇಲೆ ಒತ್ತಡ ಹಾಕುತ್ತಿದ್ದರು.
ರಾಜೀವ್‌ ಗಾಂಧಿ ಮತ್ತು ಪಿ ವಿ ನರಸಿಂಹ ರಾವ್‌ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಗಳ ತನಿಖೆಯನ್ನು ನಿಷ್ಕ್ರಿಯಗೊಳಿಸಬೇಕು ಎಂದೂ ಕಾಂಗ್ರೆಸ್‌ ದೇವೇಗೌಡರ ಮೇಲೆ ಒತ್ತಡ ಹಾಕಲಾರಂಭಿಸಿತು.

ಬೆಂಬಲ ವಾಪಸ್‌ ಪಡೆದ ಕಾಂಗ್ರೆಸ್‌

ಕಾಂಗ್ರೆಸ್‌ನ ಒತ್ತಡಕ್ಕೆ ದೇವೇಗೌಡರು ಮಣಿಯಲಿಲ್ಲ. ಹಾಗಾಗಿ ದೇವೇಗೌಡ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಕಾಂಗ್ರೆಸ್‌ 1997ರ ಮಾರ್ಚ್‌ 30ರಂದು ವಾಪಸ್‌ ಪಡೆಯಿತು. ದೇವೇಗೌಡರು ಸಂಸತ್‌ನಲ್ಲಿ 1997ರ ಮಾರ್ಚ್‌ 30ರಂದು ಏಪ್ರಿಲ್‌ 11ರಂದು ವಿಶ್ವಾಸಮತ ಯಾಚನೆ ಮಾಡಬೇಕಾಯಿತು. ಆದರೆ 545 ಸದಸ್ಯ ಬಲದ ಸಂಸತ್‌ನಲ್ಲಿ 158 ಸಂಸದರು ಮಾತ್ರ ದೇವೇಗೌಡ ಸರ್ಕಾರದ ಪರ ಮತ ಚಲಾಯಿಸಿದರು. ಅನಿವಾರ್ಯವಾಗಿ ದೇವೇಗೌಡರು 1997ರ ಏಪ್ರಿಲ್‌ 21ರಂದು ರಾಜೀನಾಮೆ ನೀಡಿದರು. ಕೇವಲ ಹತ್ತು ತಿಂಗಳಲ್ಲೇ ದೇವೇಗೌಡರ ಪ್ರಧಾನಿ ಆಳ್ವಿಕೆ ಕೊನೆಗೊಂಡಿತು.

IK Gujral

ಐ ಕೆ ಗುಜ್ರಾಲ್‌ ಪ್ರಧಾನಿಯಾದರು

ಕಾಂಗ್ರೆಸ್‌ ಮರ್ಜಿಯಲ್ಲಿ ಅಧಿಕಾರ ಮುಂದುವರಿಸುವುದಕ್ಕಿಂತ, ಸಂಸತ್‌ ವಿಸರ್ಜಿಸಿ ಮತ್ತೆ ಚುನಾವಣೆಯ ಮೊರೆ ಹೋಗುವುದೇ ಸೂಕ್ತ ಎಂದು ದೇವೇಗೌಡರು ಅಭಿಪ್ರಾಯಪಟ್ಟರು. ಆದರೆ ಅದೇ ಹೊತ್ತಿಗೆ ಮಾಧ್ಯಮಗಳು ನಡೆಸಿದ ಸಮೀಕ್ಷೆಗಳು, ತಕ್ಷಣ ಚುನಾವಣೆ ನಡೆದರೆ ಬಿಜೆಪಿ ಬಹುಮತ ಗಳಿಸುತ್ತದೆ, ಕಾಂಗ್ರೆಸ್‌ಗೆ ಮತ್ತಷ್ಟು ಧೂಳೀಪಟವಾಗುತ್ತದೆ ಎಂದು ಸಾರಿದವು. ಹಾಗಾಗಿ ಕಾಂಗ್ರೆಸ್‌ಗೆ ಚುನಾವಣೆಗೆ ಹೋಗಲು ಹಿಂಜರಿಯಿತು. ಸಂಯುಕ್ತ ರಂಗದ ಮತ್ತೊಬ್ಬ ನಾಯಕನನ್ನು ಪ್ರಧಾನಿ ಪಟ್ಟಕ್ಕೇರಿಸುವ ನಿಟ್ಟಿನಲ್ಲಿ ತೆರೆಮರೆಯಲ್ಲಿ ಕಸರತ್ತು ನಡೆಸಿತು. ಆಗ ವಿದೇಶಾಂಗ ಸಚಿವರಾಗಿದ್ದ ಇಂದರ್‌ ಕುಮಾರ್‌ ಗುಜ್ರಾಲ್‌ ಹೆಸರು ಮುಂಚೂಣಿಗೆ ಬಂತು. ಗುಜ್ರಾಲ್‌ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ಕಾಂಗ್ರೆಸ್‌ ಘೋಷಿಸಿತು. 1997ರ ಏಪ್ರಿಲ್‌ 21ರಂದು ಇಂದರ್‌ ಕುಮಾರ್‌ ಕುಜ್ರಾಲ್‌ (ಐ ಕೆ ಗುಜ್ರಾಲ್‌) ಅವರು ಭಾರತದ 12ನೇ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಇದನ್ನೂ ಓದಿ: Parliament Flashback: ಇಂದಿರಾ ಗಾಂಧಿಯ ತುರ್ತು ಪರಿಸ್ಥಿತಿಯ ಎಫೆಕ್ಟ್‌; 1977ರಲ್ಲಿ ಧೂಳಿಪಟವಾಗಿದ್ದ ಕಾಂಗ್ರೆಸ್‌!

1984ರ ಲೋಕಸಭೆ ಚುನಾವಣೆಯಲ್ಲಿ 400 ಪ್ಲಸ್‌ ಸೀಟುಗಳನ್ನು ಗೆದ್ದಿದ್ದ ಕಾಂಗ್ರೆಸ್‌!

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ (Parliament Flashback) ಬಿಜೆಪಿ 400ಕ್ಕಿಂತ ಹೆಚ್ಚು ಸೀಟುಗಳನ್ನು ಗೆಲ್ಲುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು (Lok Sabha Election 2024) ಘೋಷಿಸಿದ್ದಾರೆ. ಇಷ್ಟೊಂದು ಸಂಖ್ಯೆಯ ಸೀಟುಗಳನ್ನು 1984ರಲ್ಲಿ ಕಾಂಗ್ರೆಸ್‌ ಗೆದ್ದಿತ್ತು.
1984ರಲ್ಲಿ ಇಂದಿರಾ ಗಾಂಧಿಯವರು ಖಲಿಸ್ತಾನಿ ಉಗ್ರರ ಸಂಚಿಗೆ ಬಲಿಯಾದರು. ಇನ್ನೂ ಒಂದು ವರ್ಷದ ಅವಧಿ ಬಾಕಿ ಇದ್ದರೂ ಇಂದಿರಾ ಹತ್ಯೆ ಅನುಕಂಪದ ಲಾಭ ಪಡೆಯಲು ಕಾಂಗ್ರೆಸ್‌ ಮೊದಲೇ ಚುನಾವಣೆಯ ಮೊರೆ ಹೋಯಿತು. ಆ ವರ್ಷ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಒಟ್ಟು 516 ಲೋಕಸಭೆ ಸ್ಥಾನಗಳಲ್ಲಿ 404 ಸೀಟುಗಳನ್ನು ಬಾಚಿಕೊಂಡಿತು! ಇದು ಲೋಕಸಭೆ ಚುನಾವಣೆ ಇತಿಹಾಸದಲ್ಲಿ ಕಾಂಗ್ರೆಸ್‌ನ ಅತಿ ಹೆಚ್ಚು ಸೀಟು ಗಳಿಕೆಯ ದಾಖಲೆ. ಕಾಂಗ್ರೆಸ್‌ ಮತ ಗಳಿಕೆ ಪ್ರಮಾಣ ಆ ಚುನಾವಣೆಯಲ್ಲಿ ಶೇ. 49.10 ಇತ್ತು. ಪ್ರತಿಪಕ್ಷಗಳೆಲ್ಲ ಧೂಳೀಪಟವಾದವು. 30 ಸ್ಥಾನ ಗಳಿಸಿದ ತೆಲುಗು ದೇಶಂ ಪಾರ್ಟಿ ಎರಡನೇ ಅತಿದೊಡ್ಡ ಪಕ್ಷದ ಸ್ಥಾನ ಪಡೆಯಿತು. ಸಿಪಿಐಎಂಗೆ 22 ಮತ್ತು ಎಐಎಡಿಎಂಕೆಗೆ 12 ಸೀಟುಗಳು ಲಭಿಸಿದವು.

ಬಿಜೆಪಿಗೆ ಎರಡೇ ಸೀಟು

ಬಿಜೆಪಿ ಗೆದ್ದಿದ್ದು ಕೇವಲ ಎರಡೇ ಎರಡು ಕ್ಷೇತ್ರಗಳಲ್ಲಿ ಮಾತ್ರ! ಗುಜರಾತ್‌ನ ಮೆಹಸಾನಾದಿಂದ ಡಾ. ಎ ಕೆ ಪಟೇಲ್‌ ಮತ್ತು ಆಂಧ್ರಪ್ರದೇಶದ ಹನಮಕೊಂಡ ಕ್ಷೇತ್ರದಿಂದ ಜಂಗಾ ರೆಡ್ಡಿ ಬಿಜೆಪಿ ಅಭ್ಯರ್ಥಿಗಳಾಗಿ ಗೆಲುವು ಸಾಧಿಸಿದರು. ಬಿಜೆಪಿ ಮೇರು ನಾಯಕ ಅಟಲ್‌ ಬಿಹಾರಿ ವಾಜಪೇಯಿ ಅವರೇ ತಮ್ಮ ಹುಟ್ಟೂರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲೇ ಮಾಧವ್‌ ರಾವ್‌ ಸಿಂಧಿಯಾ ಎದುರು ಹೀನಾಯವಾಗಿ ಸೋತು ಹೋದರು. ಕಾಂಗ್ರೆಸ್‌ ಪಾಲಿಗೆ ಇದು ಸ್ಮರಣೀಯ ಲೋಕಸಭಾ ಚುನಾವಣೆಯಾಗಿ ದಾಖಲಾಯಿತು.

ಇದನ್ನೂ ಓದಿ: Parliament Flashback: ಭ್ರಷ್ಟಾಚಾರಕ್ಕೆ ಜನಾಕ್ರೋಶ; 1989ರ ಲೋಕಸಭೆಯಲ್ಲಿ 404ರಿಂದ 197ಕ್ಕೆ ಇಳಿದಿದ್ದ ಕಾಂಗ್ರೆಸ್‌ ಸೀಟುಗಳು!

Continue Reading

Lok Sabha Election 2024

Lok Sabha Election 2024: ನಾಳೆ ರಾಜ್ಯಕ್ಕೆ ರಾಹುಲ್‌ ಗಾಂಧಿ, ಪವನ್‌ ಕಲ್ಯಾಣ್‌ ಎಂಟ್ರಿ

Lok Sabha Election 2024: ರಾಜ್ಯದಲ್ಲಿ ಚುನಾವಣಾ ಕಾವು ಏರತೊಡಗಿದ್ದು, ಬುಧವಾರ ಕರ್ನಾಟಕಕ್ಕೆ ರಾಹುಲ್‌ ಆಗಮಿಸುತ್ತಿದ್ದಾರೆ. ರಾಹುಲ್‌ ಗಾಂಧಿ ಮೊದಲು ಮಂಡ್ಯಕ್ಕೆ ಆಗಮಿಸಲಿದ್ದು, ಪಕ್ಷ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ಪ್ರಚಾರ ನಡೆಸಲಿದ್ದಾರೆ. ಬಳಿಕ ಕೋಲಾರಕ್ಕೆ ತೆರಳಿ ಪ್ರಚಾರ ನಡೆಸಲಿದ್ದಾರೆ. ಇನ್ನು ಬೆಂಗಳೂರು, ಚಿಕ್ಕಬಳ್ಳಾಪುರ, ರಾಯಚೂರು, ಬಳ್ಳಾರಿ ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪವನ್‌ ಕಲ್ಯಾಣ್‌ ಪ್ರಚಾರಕ್ಕೆ ಆಗಮಿಸಲಿದ್ದಾರೆ.

VISTARANEWS.COM


on

Lok Sabha Election 2024 Rahul Gandhi and Pawan Kalyan to visit Karnataka April 17
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಜೋರಾಗಿಯೇ ನಡೆಯುತ್ತಿದೆ. ಆಯಾ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಸ್ಟಾರ್‌ ನಾಯಕರು, ಸಿನಿಮಾ ಹೀರೋಗಳು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ (ಏಪ್ರಿಲ್‌ 17) ಕರ್ನಾಟಕಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಹಾಗೂ ಆಂಧ್ರಪ್ರದೇಶದ ಜನಸೇನಾ ಪಕ್ಷದ ನಾಯಕ, ಖ್ಯಾತ ನಟ ಪವನ್ ಕಲ್ಯಾಣ್‌ (Pavan Kalyan) ಎಂಟ್ರಿ ಕೊಡಲಿದ್ದಾರೆ.

ರಾಜ್ಯದಲ್ಲಿ ಚುನಾವಣಾ ಕಾವು ದಿನೇ ದಿನೆ ಏರತೊಡಗಿದ್ದು, ಒಂದು ಹಂತದ ಪ್ರಚಾರ ಕಾರ್ಯಗಳು ಮುಗಿಯುತ್ತಾ ಬಂದಿದೆ. ಮತದಾನಕ್ಕೆ ಇನ್ನು ಕೆಲವೇ ದಿನ ಇದೆ ಎಂಬ ಹೊತ್ತಿನಲ್ಲಿ ರಾಹುಲ್‌ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ರಾಹುಲ್‌ ಗಾಂಧಿ ಮೊದಲು ಮಂಡ್ಯಕ್ಕೆ ಆಗಮಿಸಲಿದ್ದು, ಪಕ್ಷ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ಪ್ರಚಾರ ನಡೆಸಲಿದ್ದಾರೆ. ಬಳಿಕ ಕೋಲಾರಕ್ಕೆ ತೆರಳಿ ಪ್ರಚಾರ ನಡೆಸಲಿದ್ದಾರೆ.

ಟಕ್ಕರ್‌ ಕೊಡಲು ರಾಗಾ ರೆಡಿ?

ದೇಶಾದ್ಯಂತ ನಡೆಸುತ್ತಿರುವ ನ್ಯಾಯಯಾತ್ರೆಯಲ್ಲಿ ಬ್ಯುಸಿಯಾಗಿದ್ದ ರಾಹುಲ್‌ ಗಾಂಧಿ ಬುಧವಾರ ರಾಜ್ಯಕ್ಕೆ ಆಗಮಿಸಿ ನೇರವಾಗಿ ಮಂಡ್ಯಕ್ಕೆ ಬರಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸಮಾವೇಶದಲ್ಲಿ ಭಾಗಿಯಾಗಲಿದ್ದು, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ರಣಕಹಳೆ ಊದಲಿದ್ದಾರೆ. ಎನ್‌ಡಿಎ ಅಭ್ಯರ್ಥಿಗೆ ಅಲ್ಲಿಂದಲೇ ಸಂದೇಶ ರವಾನೆ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆ ಬಳಿಕ ಕೋಲಾರಕ್ಕೆ ಆಗಮಿಸಲಿದ್ದು, ಅಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ.

ಇದನ್ನೂ ಓದಿ: Lok Sabha Election 2024: ಡಿಕೆಶಿ – ಎಚ್‌ಡಿಕೆ ವೈಯಕ್ತಿಕ ಕಾದಾಟಕ್ಕೆ ಇದೇ ಕಾರಣ! ಏನಿದು ಇನ್‌ಸೈಡ್‌ ಕಹಾನಿ?

ಬೆಂಗಳೂರಿನಲ್ಲಿ ಪವನ್‌ ಕಲ್ಯಾಣ್‌ ಹವಾ!

ಇತ್ತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ತೇಜಸ್ವಿ ಸೂರ್ಯ ಹಾಗೂ ಚಿಕ್ಕಬಳ್ಳಾಪುರ, ರಾಯಚೂರು, ಬಳ್ಳಾರಿ ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪವನ್‌ ಕಲ್ಯಾಣ್‌ ಪ್ರಚಾರಕ್ಕೆ ಆಗಮಿಸಲಿದ್ದಾರೆ. ಅವರ ಸಿನಿಮಾ ಸ್ಟೈಲ್‌ ಡೈಲಾಗ್‌ಗಳು ಎಷ್ಟು ಜನರನ್ನು ಮುಟ್ಟಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಆಂಧ್ರಪ್ರದೇಶದ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್‌ ಅವರಿಗೆ ಕರ್ನಾಟಕದಲ್ಲಿ ಅವರದ್ದೇ ಆದ ಫ್ಯಾನ್‌ ಫಾಲೋವರ್ಸ್‌ ಇದ್ದಾರೆ. ಪ್ರಚಾರ ಕಾರ್ಯವನ್ನು ನಡೆಸಿದ್ದು, ಕರ್ನಾಟಕದ ನಾಲ್ಕು ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿದ್ದಾರೆ. ತೆಲುಗು ಭಾಷಿಕರು ಹೆಚ್ಚಾಗಿ ಇರುವ ಕ್ಷೇತ್ರಗಳಲ್ಲಿ ಇವರನ್ನು ಕರೆತರಲಾಗುತ್ತಿದೆ. ಮಾಸ್ ಡೈಲಾಗ್ ಮೂಲಕ ಹುಚ್ಚೆಬ್ಬಿಸುವ ಪವನ್ ಕಲ್ಯಾಣ್ ಅವರ ಎಂಟ್ರಿಯಿಂದ ರಾಜ್ಯದ ರಾಜಕೀಯ ಅಖಾಡ ರಂಗೇರಿದೆ. ಆಂಧ್ರ ಪ್ರದೇಶದಲ್ಲಿ ಜಗನ್ ಮೋಹನ್ ರೆಡ್ಡಿ ವಿರುದ್ಧ ತೆಲುಗು ಸಿನಿಮಾ ಸ್ಟೈಲ್‌ನಲ್ಲಿ ರಾಜಕಾರಣ ಮಾಡುತ್ತಾ ಬಂದಿದ್ದಾರೆ.

Continue Reading

ಬಳ್ಳಾರಿ

Ballari News: ಬಳ್ಳಾರಿಯ ವಾರ್ಡ್ಲಾ ಕಾಲೇಜಿನಲ್ಲಿ ಸ್ನೇಹ ಸಮ್ಮಿಲನ

Ballari News: ಬಳ್ಳಾರಿ ನಗರದ ವಾರ್ಡ್ಲಾ ಕಾಲೇಜಿನಲ್ಲಿ ಸೋಮವಾರ ಕಾಲೇಜಿನ 2001-2003 ನೇ ಸಾಲಿನ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ ಕಾರ್ಯಕ್ರಮ ಜರುಗಿತು.

VISTARANEWS.COM


on

Snehasammilana programme at Wardlaw College Ballari
Koo

ಬಳ್ಳಾರಿ: ನಗರದ ವಾರ್ಡ್ಲಾ ಕಾಲೇಜಿನಲ್ಲಿ ಸೋಮವಾರ ಕಾಲೇಜಿನ 2001-2003ನೇ ಸಾಲಿನ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು (Ballari News) ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಗುರುಗಳಾದ ಹರಿಕುಮಾರ್, ಪಿ.ವಿಕ್ಟರ್ ಇಮ್ಯಾನುಯೆಲ್, ಕುಲಕರ್ಣಿ, ಕೆ. ರಾಜಶೇಖರ್, ಲಕ್ಷ್ಮೀ ನಾರಾಯಣ, ಪ್ರಸನ್ನ ಡಬ್ಲ್ಯೂ ಉಳ್ಳಾಗಡ್ಡಿ, ಪಿ. ಸಿಸಿಲಿಯಾ ಜೋಸಿಲಿನ್, ಎಂ.ಸೈಲಾ ಕುಮಾರಿ, ಅಗಸ್ಟೀನ್ ಲೂಥರ್ ಕಿಂಗ್, ಕೆ.ಎಂ. ಶಂಬುನಾಥ, ಕೆ. ಶೈಕ್ಷಾವಲಿ ಮತ್ತು ಶಿವಕುಮಾರ್ ಅವರನ್ನು 2001-2003 ನೇ ಸಾಲಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳು ಗೌರವಿಸಿ, ಸನ್ಮಾನಿಸಿದರು.

ಇದನ್ನೂ ಓದಿ: Innova Hycross: ಇನ್ನೋವಾ ಹೈಕ್ರಾಸ್ ಪೆಟ್ರೋಲ್ GX (O) ಗ್ರೇಡ್ ಬಿಡುಗಡೆ; ದರ ಎಷ್ಟು?

ಆ ಬ್ಯಾಚ್‌ನಲ್ಲಿ ಓದಿರುವ ವಿದ್ಯಾರ್ಥಿಗಳು ಉನ್ನತ ಮಟ್ಟದಲ್ಲಿ ಬೆಳೆಯುವ ಜತೆಗೆ ದೇಶದ ನಾನಾ ಭಾಗದಲ್ಲಿ, ವಿದೇಶದಲ್ಲಿಯೂ ಇದ್ದಾರೆ. ಜರ್ಮನ್, ಖತಾರ್, ದುಬೈ, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸಿ ಸುಮಾರು 3,62,001 ರೂ.ಗಳನ್ನು ತಮ್ಮ ಕಾಲೇಜಿನ ಅಭಿವೃದ್ಧಿಗೆ ದೇಣಿಗೆ ನೀಡಿದರು.

ಇದನ್ನೂ ಓದಿ: NEET PG-2024: ನೀಟ್‌ ಪಿಜಿ ಅರ್ಜಿ ಸಲ್ಲಿಕೆ ಇಂದಿನಿಂದ ಪ್ರಾರಂಭ; ಇಲ್ಲಿದೆ ನೋಂದಣಿ ಮಾಹಿತಿ

ತಮ್ಮ ನೆಚ್ಚಿನ ಗುರುಗಳಿಂದ ಆಶೀರ್ವಾದ ಪಡೆದು ಸಂತಸ ಪಟ್ಟರು.ಇದೇ ವೇಳೆ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

Continue Reading
Advertisement
lok sabha Election 2024 digital QR code voter slip
Lok Sabha Election 202425 seconds ago

Lok Sabha Election 2024: ಬೆಂಗಳೂರಿನಲ್ಲಿ ದೊರೆಯಲಿದೆ ಕ್ಯುಆರ್‌ ಕೋಡ್ ಸಹಿತ ವೋಟರ್‌ ಸ್ಲಿಪ್‌:‌ ಏನಿದರ ಉಪಯೋಗ?

Silence 2
ಸಿನಿಮಾ14 mins ago

Silence 2 review: ಕುತೂಹಲ ಕೆರಳಿಸುವ ಕತೆ; ಮನೋಜ್ ಬಾಜಪೇಯಿ ಮನೋಜ್ಞ ಅಭಿನಯ!

EX PM HD Devegowda
ಕರ್ನಾಟಕ23 mins ago

Parliament Flashback: ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿದ್ದ ಕಾಂಗ್ರೆಸ್‌ ಕಿರುಕುಳದಿಂದಾಗಿ ಪ್ರಧಾನಿ ಹುದ್ದೆ ತೊರೆದಿದ್ದ ದೇವೇಗೌಡರು!

Sri Rama
ಪ್ರಮುಖ ಸುದ್ದಿ23 mins ago

Ram Navami 2024: ವನವಾಸದ ವೇಳೆ ಶ್ರೀರಾಮ ಭೇಟಿ ನೀಡಿದ ಈ ಸ್ಥಳಗಳೀಗ ಪವಿತ್ರ

Lok Sabha Election 2024 Rahul Gandhi and Pawan Kalyan to visit Karnataka April 17
Lok Sabha Election 202432 mins ago

Lok Sabha Election 2024: ನಾಳೆ ರಾಜ್ಯಕ್ಕೆ ರಾಹುಲ್‌ ಗಾಂಧಿ, ಪವನ್‌ ಕಲ್ಯಾಣ್‌ ಎಂಟ್ರಿ

Baba Ramdev
ದೇಶ35 mins ago

Baba Ramdev: ನೀವೇನು ಅಮಾಯಕರಲ್ಲ, ಕ್ಷಮಿಸಲ್ಲ; ಬಾಬಾ ರಾಮದೇವ್‌ಗೆ ಸುಪ್ರೀಂ ಚಾಟಿ!

Snehasammilana programme at Wardlaw College Ballari
ಬಳ್ಳಾರಿ41 mins ago

Ballari News: ಬಳ್ಳಾರಿಯ ವಾರ್ಡ್ಲಾ ಕಾಲೇಜಿನಲ್ಲಿ ಸ್ನೇಹ ಸಮ್ಮಿಲನ

Lok Sabha Election 2024
ಬೆಂಗಳೂರು1 hour ago

Lok Sabha Election 2024 : ಜಯನಗರದಲ್ಲಿ ಸೀಜ್‌ ಆದ ಕೋಟ್ಯಂತರ ಹಣ; ಇಬ್ಬರ ವಿರುದ್ಧ ಎಫ್‌ಐಆರ್‌

actor dwarakish
ಪ್ರಮುಖ ಸುದ್ದಿ1 hour ago

Actor Dwarakish: ಕನ್ನಡ ಸಿನಿಮಾದ ʼಪ್ರಚಂಡ ಕುಳ್ಳʼ ದ್ವಾರಕೀಶ್ ಬಗ್ಗೆ ನೀವರಿಯದ 12 ವಿಶಿಷ್ಟ ಸಂಗತಿಗಳು ಇಲ್ಲಿವೆ

ಕ್ರೀಡೆ1 hour ago

IPL 2024: ವಿಮಾನ ಚಲಾಯಿಸಿದ ಯಜುವೇಂದ್ರ ಚಹಲ್; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ9 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ2 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ3 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ4 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌