congress-plan-for-parliament-election: Is it Sumalatha VS Ramya in Mandya?Loksabha Election 2024: ಲೋಕಸಭೆಗೆ ಕಾಂಗ್ರೆಸ್‌ ತಯಾರಿ; ಮಂಡ್ಯದಲ್ಲಿ ಸುಮಲತಾ ವಿರುದ್ಧ ರಮ್ಯ? - Vistara News

ಪ್ರಮುಖ ಸುದ್ದಿ

Loksabha Election 2024: ಲೋಕಸಭೆಗೆ ಕಾಂಗ್ರೆಸ್‌ ತಯಾರಿ; ಮಂಡ್ಯದಲ್ಲಿ ಸುಮಲತಾ ವಿರುದ್ಧ ರಮ್ಯ?

ಲೋಕಸಭಾ ಚುನಾವಣೆ: ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್‌ ಲೋಕಸಭಾ ಚುನಾವಣೆಗೆ ಸಿದ್ಧವಾಗುತ್ತಿದೆ. ಯಾವ ಕ್ಷೇತ್ರಕ್ಕೆ ಯಾರು ಎಂಬ ಚರ್ಚೆ ಶುರುವಾಗಿದೆ.

VISTARANEWS.COM


on

Is it Sumalatha Vs Ramya in Mandya in Loksabha Election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) 224 ಸ್ಥಾನಗಳ ಪೈಕಿ 135ರಲ್ಲಿ ಗೆಲುವು ಸಾಧಿಸಿ ಬೀಗುತ್ತಿರುವ ಕಾಂಗ್ರೆಸ್‌ ತನ್ನ ಗೆಲುವಿನ ಅಭಿಯಾನವನ್ನು (Congress politics) ಲೋಕಸಭಾ ಚುನಾವಣೆಗೂ (Loksabha Election 2024) ಮುಂದುವರಿಸಲು ಕಾರ್ಯತಂತ್ರ ರೂಪಿಸಿದೆ. ವಿಧಾನಸಭಾ ಚುನಾವಣೆಯಲ್ಲಿ ಸಾಕಷ್ಟು ಮೊದಲೇ ಕಾರ್ಯತಂತ್ರಗಳನ್ನು ರೂಪಿಸಿ ಜನರ ಮನಸ್ಸಿನಲ್ಲಿ ಅಚ್ಚೊತ್ತುವ ಮೂಲಕ ಗೆಲುವನ್ನು ದಾಖಲಿಸಿದ ಪಕ್ಷ ಲೋಕಸಭಾ ಚುನಾವಣೆಗೂ ಈಗಿನಿಂದಲೇ ತಯಾರಿಗೆ ಮುಂದಾಗಿದೆ. ಅದರಲ್ಲೂ ಮುಖ್ಯವಾಗಿ ಕ್ಷೇತ್ರವಾರು ಯಾರ ವಿರುದ್ಧ ಯಾರನ್ನು ನಿಲ್ಲಿಸಬೇಕು ಎಂಬ ವಿಚಾರದಲ್ಲಿ ಚರ್ಚೆಗಳು ಆರಂಭವಾಗಿವೆ.

2019ರ ಲೋಕಸಭಾ ಚುನಾವಣೆಯಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 25ರಲ್ಲಿ ಗೆಲುವು ಸಾಧಿಸಿತ್ತು. ಹಾಸನದಲ್ಲಿ ಜೆಡಿಎಸ್‌ನ ಎಚ್.ಡಿ. ರೇವಣ್ಣ, ರಾಮನಗರದಲ್ಲಿ ಕಾಂಗ್ರೆಸ್‌ನ ಡಿ.ಕೆ. ಸುರೇಶ್‌, ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಗೆಲುವು ಸಾಧಿಸಿದರು. ಸುಮಲತಾ ಈಗ ಬಿಜೆಪಿ ಬೆಂಬಲಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದಲೇ ಕಣಕ್ಕಿಳಿಯುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಜನರಿಂದ ಮೂಡಿಬಂದಿರುವ ಉತ್ತಮ ಅಭಿಪ್ರಾಯವನ್ನು ಮತವಾಗಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ನಡೆಸುವಂತೆ ಈಗಾಗಲೇ ಕಾಂಗ್ರೆಸ್‌ ನಾಯಕರು ಸೂಚನೆ ನೀಡಿದ್ದಾರೆ. ಇದು ಎಲ್ಲಿವರೆಗೆ ಹೋಗಿದೆ ಎಂದರೆ ಸಚಿವ ಸಂಪುಟ ವಿಸ್ತರಣೆಯಲ್ಲೂ ಮುಂದಿನ ಲೋಕಸಭಾ ಚುನಾವಣೆಯದ್ದೇ ಜಪ ಮಾಡಲಾಗಿದೆ.

ಕಾಂಗ್ರೆಸ್‌ ಟಾರ್ಗೆಟ್‌ 20 ಸೀಟು

ಕಳೆದ ಬಾರಿ ಒಂದೇ ಸ್ಥಾನದಲ್ಲಿ ಗೆದ್ದಿದ್ದ ಕಾಂಗ್ರೆಸ್‌ ಈ ಬಾರಿ 20 ಸ್ಥಾನಗಳಲ್ಲಿ ಗೆಲ್ಲಬೇಕು ಎನ್ನುವ ಪ್ಲ್ಯಾನ್‌ ಹಾಕಿಕೊಂಡಿದೆ. ಈ ಬಾರಿ ಅದು 42% ಮತಗಳನ್ನು ಪಡೆದುಕೊಂಡಿರುವುದು ನೋಡಿದರೆ, ವಿಧಾನಸಭಾ ಕ್ಷೇತ್ರವಾರು ನೋಡಿದರೆ ಇದು ಕಷ್ಟಸಾಧ್ಯವಲ್ಲ. ಆದರೆ, ಕರ್ನಾಟಕಕ್ಕೆ ಮತ್ತು ಕೇಂದ್ರಕ್ಕೆ ಪ್ರತ್ಯೇಕವಾದ ಯೋಚನೆಗಳೊಂದಿಗೆ ಜನರು ಮತ ಹಾಕುವುದರಿಂದ ಅಷ್ಟರ ಮಟ್ಟಿಗೆ ಸೀಟು ಬರಬಹುದೇ ಎನ್ನುವ ಸಂಶಯ ಕಾಂಗ್ರೆಸ್‌ನ ಒಳಗೂ ಇದೆ. ಆದರೆ, ಪ್ರಯತ್ನ ಪಟ್ಟರೆ ಕನಿಷ್ಠ 15 ಸೀಟು ಆದರೂ ಬರಬಹುದು ಎನ್ನುವ ನಿರೀಕ್ಷೆ ಪಕ್ಷದ್ದು. ಕಳೆದ ಬಾರಿ ಜೆಡಿಎಸ್‌ ಜತೆಗೂ ಸಂಸತ್‌ ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅದು ಕೂಡಾ ಹಿನ್ನಡೆಯಾಯಿತು ಎಂಬ ಅಭಿಪ್ರಾಯದಲ್ಲಿದೆ. ಹೀಗಾಗಿ ಈ ಬಾರಿ ಸ್ವತಂತ್ರವಾಗಿ ಕಣಕ್ಕಿಳಿಯುವುದು ಕೂಡಾ ಲಾಭ ತರಲಿದೆ ಎಂಬ ನಿರೀಕ್ಷೆ ಹೊತ್ತಿದೆ.

ಕ್ಷೇತ್ರವಾರು ಫೈಟ್‌

ಈ ಬಾರಿ ಕಾಂಗ್ರೆಸ್‌ ಒಟ್ಟಾರೆಯಾಗಿ ಸ್ಪರ್ಧೆ ಮಾಡದೆ ಕ್ಷೇತ್ರವಾರು ಪ್ಲ್ಯಾನಿಂಗ್‌ ಮಾಡಲು ನಿರ್ಧರಿಸಿದೆ. ಈಗಿನಿಂದಲೇ ಹಾಲಿ ಸಂಸದರದ ಬಲ ಮತ್ತು ದೌರ್ಬಲ್ಯಗಳನ್ನು ಅಧ್ಯಯನ ಮಾಡಲಾಗುತ್ತಿದೆ. ಜತೆಗೆ ಅವರ ವಿರುದ್ಧ ಕಾಂಗ್ರೆಸ್‌ ನಿಂದ ಯಾರನ್ನು ಕಣಕ್ಕಿಳಿಸಬಹುದು ಎಂಬ ಚರ್ಚೆಯೂ ಆರಂಭಗೊಂಡಿದೆ.

ಪ್ರತಿಯೊಂದು ಕ್ಷೇತ್ರದಲ್ಲಿ ಯಾರ ವಿರುದ್ಧ ಯಾರು ಎಂಬ ವಿಚಾರ ಚರ್ಚೆಯಲ್ಲಿದೆ. ಸದ್ಯಕ್ಕೆ ಬಿಜೆಪಿ ಸಂಸದರಾದ ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹ, ಬಿ.ವೈ. ರಾಘವೇಂದ್ರ, ಪ್ರಹ್ಲಾದ ಜೋಶಿ ಅವರ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕೆ ಇಳಿಸಲು ಪ್ಲ್ಯಾನ್‌ ರೂಪಿಸಲಾಗಿದೆ. ಸುಮಲತಾ ವಿರುದ್ಧ ಅತ್ಯಂತ ಕಠಿಣ ಅಭ್ಯರ್ಥಿಯನ್ನು ಇಳಿಸುವುದು ಕಾಂಗ್ರೆಸ್‌ ಚಿಂತನೆ.

ಯಾರ ವಿರುದ್ಧ ಯಾರ ಸ್ಪರ್ಧೆ?

ತೇಜಸ್ವಿ ಸೂರ್ಯ ವಿರುದ್ಧ ಸೌಮ್ಯಾ ರೆಡ್ಡಿ?

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಈಗ ಬಿಜೆಪಿಯ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿರುವ ತೇಜಸ್ವಿ ಸೂರ್ಯ ಅವರ ವಿರುದ್ಧ ಜಯನಗರದ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆದಿದೆ. ಕಳೆದ ಚುನಾವಣೆಯಲ್ಲಿ ಸೌಮ್ಯ ರೆಡ್ಡಿ ಅವರು ಕೇವಲ 16 ಮತಗಳಿಂದ ಸೋಲು ಕಂಡಿದ್ದರು. ಅವರ ತಂದೆ ರಾಮಲಿಂಗಾ ರೆಡ್ಡಿ ಅವರು ಈಗ ಸಚಿವರಾಗಿದ್ದಾರೆ. ಬೆಂಗಳೂರು ದಕ್ಷಿಣ ಭಾಗದಲ್ಲಿ ಇವರಿಬ್ಬರಿಗೂ ಚೆನ್ನಾಗಿ ಹಿಡಿತ ಇರುವುದರಿಂದ ಬಿಜೆಪಿಗೆ ಪ್ರಬಲ ಸ್ಪರ್ಧೆ ಒಡ್ಡಬಹುದು ಎನ್ನುವುದು ಕಾಂಗ್ರೆಸ್‌ ಲೆಕ್ಕಾಚಾರ.

ಬೆಂಗಳೂರು ಉತ್ತರದಲ್ಲಿ ಸದಾನಂದ ಗೌಡ VS ಕೃಷ್ಣ ಬೈರೇಗೌಡ

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರ ವಿರುದ್ಧವಾಗಿ ಬ್ಯಾಟರಾಯನಪುರದ ಹಾಲಿ ಶಾಸಕರಾಗಿರುವ ಕೃಷ್ಣಭೈರೇಗೌಡರನ್ನು ಕಣಕ್ಕಿಳಿಸಲು ಈಗಿನಿಂದಲೇ ಸಿದ್ಧಪಡಿಸುವ ಯೋಚನೆ ನಡೆಯುತ್ತಿದೆ. ಇದು ಒಕ್ಕಲಿಗರೇ ದೊಡ್ಡ ಪ್ರಮಾಣದಲ್ಲಿರುವ ಕ್ಷೇತ್ರವಾಗಿದೆ.

ಮೈಸೂರಿನಲ್ಲಿ ಪ್ರತಾಪಸಿಂಹ ವಿರುದ್ಧ ಯತೀಂದ್ರ?

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಈಗ ಬಿಜೆಪಿ ಹಿಡಿತ ಕಡಿಮೆಯಾಗಿದೆ ಎನ್ನುವುದು ಕಾಂಗ್ರೆಸ್‌ನ ಲೆಕ್ಕಾಚಾರ. ಇದಕ್ಕೆ ಪೂರಕವಾಗಿಯೇ ಕೊಡಗಿನ ಎರಡೂ ಕ್ಷೇತ್ರಗಳನ್ನು ಅದು ಗೆದ್ದುಕೊಂಡಿದೆ. ಹೀಗಾಗಿ ಲೋಕಸಭಾ ಕ್ಷೇತ್ರವನ್ನೂ ಗೆಲ್ಲಬಹುದು ಎಂಬ ಲೆಕ್ಕಾಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆದಿದೆ.

ಶಿವಮೊಗ್ಗದಲ್ಲಿ ರಾಘವೇಂದ್ರ ವಿರುದ್ಧ ಗೀತಾ ಶಿವರಾಜ್‌ ಕುಮಾರ್?

Raghavendra VS Geetha Shivarajkumar

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರ ವಿರುದ್ಧ ಗೀತಾ ಶಿವರಾಜ್‌ ಕುಮಾರ್‌ ಅವರು ಕಣಕ್ಕಿಳಿಯಬೇಕು ಎನ್ನುವುದು ಕಾಂಗ್ರೆಸ್‌ ನಿರೀಕ್ಷೆ. ಕಳೆದ ಚುನಾವಣೆಯಲ್ಲಿ ಅವರು ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ಬಾರಿ ಮಧು ಬಂಗಾರಪ್ಪ ಅವರು ಕಾಂಗ್ರೆಸ್‌ನಿಂದ ಗೆದ್ದಿದ್ದಾರೆ. ಹೀಗಾಗಿ ಇದನ್ನೇ ಬಂಡವಾಳ ಮಾಡಿಕೊಂಡು ಗೆಲುವು ಪಡೆಯುವ ಪ್ರಯತ್ನ ನಡೆಯಲಿದೆ. ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ಸ್ವಲ್ಪ ಅಸಮಾಧಾನ ಇದೆ ಎಂಬ ಮಾತು ಕೇಳಿಬರುತ್ತಿತ್ತು. ಅದಾದ ಬಳಿಕ ಕಾಂಗ್ರೆಸ್‌ ನಾಯಕ, ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ತಾವೇ ಶಿವರಾಜ್‌ ಕುಮಾರ್‌ ಅವರ ಮನೆಗೆ ಹೋಗಿ ಮಾತುಕತೆ ನಡೆಸಿದ್ದರು. ಈ ವೇಳೆ, ಶಿವಮೊಗ್ಗದಲ್ಲಿ ಕಣಕ್ಕಿಳಿಯಬೇಕು ಎಂಬ ವಿನಂತಿಯನ್ನೂ ಗೀತಾ ಅವರಿಗೆ ಮಾಡಿದ್ದಾರೆ ಎನ್ನಲಾಗಿದೆ.

ಹುಬ್ಬಳ್ಳಿ-ಧಾರವಾಡದಲ್ಲಿ ಪ್ರಲ್ಹಾದ್‌ ಜೋಶಿ ವಿರುದ್ಧ ಶೆಟ್ಟರ್‌?

pralhad Joshi vs Jagadish Shettar?

ಕೇಂದ್ರ ಸಚಿವರಾಗಿರುವ ಪ್ರಲ್ಹಾದ್‌ ಜೋಶಿ ಅವರ ವಿರುದ್ಧ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಲ್ಲಿ ಜಗದೀಶ್‌ ಶೆಟ್ಟರ್‌ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ಯೋಚಿಸುತ್ತಿದೆ. ಬಿಜೆಪಿಯಲ್ಲಿ ಟಿಕೆಟ್‌ ಸಿಗದೆ ಕಾಂಗ್ರೆಸ್‌ಗೆ ಹೋಗಿ ಸ್ಪರ್ಧಿಸಿದ್ದ ಶೆಟ್ಟರ್‌ ಅವರು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಈಗ ಪ್ರಲ್ಹಾದ್‌ ಜೋಶಿ ವಿರುದ್ಧ ಕಠಿಣ ಸ್ಪರ್ಧೆ ನೀಡಲು ಶೆಟ್ಟರ್‌ ಸೂಕ್ತವೇ ಎಂಬ ಚರ್ಚೆ ನಡೆದಿದೆ. ಒಟ್ಟಾರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಈ ಬಾರಿ ಬಲ ಬಂದಿರುವುದರಿಂದ ಅದು ಸಂಸತ್‌ ಚುನಾವಣೆಯಲ್ಲೂ ಮತವಾಗಿ ಉಳಿದರೆ ಗೆಲುವು ಸಾಧಿಸಬಹುದು ಎನ್ನುವುದು ಕೈ ಲೆಕ್ಕಾಚಾರ.

ಮಂಡ್ಯದಲ್ಲಿ ನಡೆಯುತ್ತಾ ರಮ್ಯ ಮತ್ತು ಸುಮಲತಾ ಕದನ?

ರಾಜ್ಯಾದ್ಯಂತ ಮಾತ್ರವಲ್ಲ ದೇಶದೆಲ್ಲೆಡೆ ಕುತೂಹಲ ಕೆರಳಿಸಿದ ಕಣ ಮಂಡ್ಯ. ಇಲ್ಲಿ ಕಳೆದ ಬಾರಿ ಪಕ್ಷೇತರರಾಗಿ ಕಣಕ್ಕಿಳಿದ ಸುಮಲತಾ ಅವರು ಜೆಡಿಎಸ್‌ನ ನಿಖಿಲ್‌ ಕುಮಾರಸ್ವಾಮಿ ಅವರನ್ನು ದೊಡ್ಡ ಅಂತರದಿಂದ ಸೋಲಿಸಿದ್ದರು. ಬಿಜೆಪಿ ನೇರವಾಗಿ ಸುಮಲತಾ ಅವರನ್ನು ಬೆಂಬಲಿಸಿದ್ದರು ಕಾಂಗ್ರೆಸ್‌ ಕಾರ್ಯಕರ್ತರು ಕೂಡಾ ಬೆಂಗಾವಲಾಗಿ ನಿಂತಿದ್ದರು.

ಈಗ ಸುಮಲತಾ ಅವರು ಅಧಿಕೃತವಾಗಿ ಬಿಜೆಪಿಯನ್ನು ಬೆಂಬಲಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧಿಸುವ ಸಾಧ್ಯತೆ ಇದೆ. ಇಲ್ಲಿ ಈಗ ಸುಮಲತಾ ಅವರ ಪ್ರಭಾವ ಕಡಿಮೆಯಾಗಿದ್ದರೆ ಕಾಂಗ್ರೆಸ್‌ ಬಲ ಹೆಚ್ಚಾಗಿದೆ. ಹೀಗಾಗಿ, ಸುಮಲತಾ ಅವರನ್ನು ಸೋಲಿಸಬಹುದು ಎನ್ನುವುದು ಕೈ ಲೆಕ್ಕಾಚಾರ. ಒಂದು ವೇಳೆ ಹೀಗಾದರೆ ಇಲ್ಲಿ ಕಾಂಗ್ರೆಸ್‌-ಜೆಡಿಎಸ್‌-ಬಿಜೆಪಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ. ಇಂಥ ಪರಿಸ್ಥಿತಿಯಲ್ಲಿ ಅತ್ಯಧಿಕ ಜನರನ್ನು ಸೆಳೆಯಬಲ್ಲ ಒಬ್ಬ ತಾರೆಯನ್ನು ಸುಮಲತಾ ವಿರುದ್ಧ ಕಣಕ್ಕಿಳಿಸಬೇಕು ಎಂಬ ಲೆಕ್ಕಾಚಾದರಲ್ಲಿದೆ ಕಾಂಗ್ರೆಸ್‌. ಹೀಗೆ ಯೋಚಿಸಿದಾಗ ಕಂಡದ್ದೇ ಕಾಂಗ್ರೆಸ್‌ನ ಸ್ಟಾರ್‌ ಪ್ರಚಾರಕಿ ಹಾಗೂ ಈ ಹಿಂದೆ ಮಂಡ್ಯದ ಸಂಸದೆಯಾಗಿ ದೊಡ್ಡ ಹೆಸರು ಮಾಡಿದ್ದ ಚಿತ್ರನಟಿ ರಮ್ಯಾ. ಮಂಡ್ಯದ ಜನರ ನಡುವೆ ನಿರಂತರ ಸಂಪರ್ಕ ಇಟ್ಟುಕೊಂಡಿರುವ ರಮ್ಯಾ ಅವರಿಗೆ ದೊಡ್ಡ ಪ್ರಮಾಣದಲ್ಲಿ ಅಭಿಮಾನಿಗಳಿದ್ದಾರೆ. ಇದನ್ನು ನಗದೀಕರಿಸಿಕೊಂಡು ಗೆಲ್ಲಬಹುದು ಎಂಬುದು ಕಾಂಗ್ರೆಸ್‌ ಪ್ಲ್ಯಾನ್‌. ರಮ್ಯಾ ಅವರು ಸುಮಲತಾ ವಿರುದ್ಧ ಕಣಕ್ಕಿಳಿಯುತ್ತಾರಾ ಎನ್ನುವುದು ಕುತೂಹಲ.

ಇದೇ ರೀತಿ ಬೇರೆ ಕ್ಷೇತ್ರಗಳಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎಂಬ ಬಗ್ಗೆ ವಿಸ್ತೃತವಾದ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ : Karnataka Election: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಸಾಧ್ಯ: ಸುಮಲತಾ ಅಂಬರೀಶ್
ಇದನ್ನೂ ಓದಿ: Actress Ramya : ನಾನು ಮಂಡ್ಯದ ಗೌಡ್ತಿ, ನೀವೇ ನಂಗೊಬ್ಬ ಒಳ್ಳೆ ಗೌಡ್ರ ಹುಡುಗನ್ನ ಹುಡುಕಿ ಕೊಡಿ ಪ್ಲೀಸ್‌ ಅಂದ್ರು ರಮ್ಯಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

IPL 2024 : ವೀಕ್ಷಣೆಯಲ್ಲಿ ದಾಖಲೆ ಬರೆದ ಚೆನ್ನೈ- ಆರ್​ಸಿಬಿ ಮ್ಯಾಚ್​!

IPL 2024 : ಐಪಿಎಲ್​ನ 17 ನೇ ಸೀಸನ್ ಐಪಿಎಲ್ ಆರಂಭಿಕ ದಿನದಂದು ಅತಿ ಹೆಚ್ಚು ಟಿವಿ ವೀಕ್ಷಣೆಗೆ ಸಾಕ್ಷಿಯಾಯಿತು. ಡಿಸ್ನಿ ಸ್ಟಾರ್ ನೆಟ್ವರ್ಕ್​ನಲ್ಲಿ ಏಕಕಾಲದಲ್ಲಿ ಪ್ರಸಾರವನ್ನು 6.1 ಕೋಟಿ ವೀಕ್ಷಕರು ವೀಕ್ಷಿಸಿದರು.

VISTARANEWS.COM


on

IPL 2024-CSKRCB
Koo

ಮುಂಬೈ ಐಪಿಎಲ್ ನ 2024ರ (IPL 2024) ಅಧಿಕೃತ ಪ್ರಸಾರಕ ಡಿಸ್ನಿ ಸ್ಟಾರ್ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ದಾಖಲೆಯೊಂದಿಗೆ ಆರಂಭಿಸಿದೆ. ಐಪಿಎಲ್ 2024 ರ ಮೊದಲ ದಿನದಂದು 16.8 ಕೋಟಿ ವಿಶಿಷ್ಟ ವೀಕ್ಷಕರು 1276 ಕೋಟಿ ನಿಮಿಷಗಳ ವೀಕ್ಷಣೆಯ ಸಮಯವನ್ನು ದಾಖಲಿಸಿದೆ. ಐಪಿಎಲ್​ನ 17 ನೇ ಸೀಸನ್ ಐಪಿಎಲ್ ಆರಂಭಿಕ ದಿನದಂದು ಅತಿ ಹೆಚ್ಚು ಟಿವಿ ವೀಕ್ಷಣೆಗೆ (TV viewers) ಸಾಕ್ಷಿಯಾಯಿತು. ಡಿಸ್ನಿ ಸ್ಟಾರ್ ನೆಟ್ವರ್ಕ್​ನಲ್ಲಿ ಏಕಕಾಲದಲ್ಲಿ ಪ್ರಸಾರವನ್ನು 6.1 ಕೋಟಿ ವೀಕ್ಷಕರು ವೀಕ್ಷಿಸಿದರು.

ಸ್ಟಾರ್ ಸ್ಪೋರ್ಟ್ಸ್ ವಕ್ತಾರರು “ಇದು ಒಂದು ಸ್ಮರಣೀಯ ಸಾಧನೆಯಾಗಿದ್ದು, ಸ್ಟಾರ್ ಸ್ಪೋರ್ಟ್ಸ್ ಮೇಲಿನ ಅಭಿಮಾನಿಗಳ ಪ್ರೀತಿಯ ಪ್ರತಿಫಲನವಾಗಿದೆ. ಇದು ನೆಟ್ವರ್ಕ್​ ಅಚಲ ಬದ್ಧತೆಗೆ ಸಾಧ್ಯವಾಗಿದೆ. ಕ್ರಿಕೆಟ್ ಮತ್ತು ಐಪಿಎಲ್ ಅನ್ನು ಬೆಳೆಸಲು ಸ್ಟಾರ್ ಸ್ಪೋರ್ಟ್ಸ್ ನಿರಂತರವಾಗಿ ಕೈಗೊಂಡಿರುವ ವ್ಯಾಪಕ ಶ್ರೇಣಿಯ ಉಪಕ್ರಮಗಳಿಗೆ ಬೆಂಬಲ ನೀಡಿದ್ದಕ್ಕಾಗಿ ನಾವು ನಮ್ಮ ಎಲ್ಲಾ ಪಾಲುದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ ಮತ್ತು ಬಿಸಿಸಿಐಗೆ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ವೇಗವನ್ನು ಮುಂದುವರಿಸಲು ಮತ್ತು ಅಭೂತಪೂರ್ವ ವೀಕ್ಷಕರನ್ನು ತಲುಪಲು ನಾವು ವಿಶ್ವದ ಅತಿದೊಡ್ಡ ಕ್ರೀಡಾಕೂಟದಲ್ಲಿ ನಮ್ಮ ಸಾಮರ್ಥ್ಯವನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.

ವೀಕ್ಷಕ ವಿವರಣೆ ತಂಡದಲ್ಲಿರುವ ಸ್ಟಾರ್​ಗಳು ಇವರು

ನವಜೋತ್ ಸಿಂಗ್ ಸಿಧು ಅವರು ಭಾರತದ ವಿಶ್ವ ಚಾಂಪಿಯನ್ ಹರ್ಭಜನ್ ಸಿಂಗ್, ಇರ್ಫಾನ್ ಪಠಾಣ್, ರವಿ ಶಾಸ್ತ್ರಿ, ಸುನಿಲ್ ಗವಾಸ್ಕರ್ ಮತ್ತು ಕ್ರಿಸ್ ಶ್ರೀಕಾಂತ್. ಸ್ಟೀವ್ ಸ್ಮಿತ್ ಮತ್ತು ಸ್ಟುವರ್ಟ್ ಬ್ರಾಡ್, ಬ್ರಿಯಾನ್ ಲಾರಾ, ಮ್ಯಾಥ್ಯೂ ಹೇಡನ್, ಕೆವಿನ್ ಪೀಟರ್ಸನ್, ಜಾಕ್ ಕಾಲಿಸ್ ಮತ್ತು ಡೇಲ್ ಸ್ಟೇನ್ ಅವರೊಂದಿಗೆ ಟಾಟಾ ಐಪಿಎಲ್ 2024 ಅನ್ನು ಪ್ರಸ್ತುತಪಡಿಸಿದರು. ಸಿಎಸ್ಕೆಯ ಮಾಜಿ ತಾರೆಗಳಾದ ಅಂಬಾಟಿ ರಾಯುಡು, ಮುರಳಿ ವಿಜಯ್, ಎಲ್ ಬಾಲಾಜಿ ಮತ್ತು ಸುಬ್ರಮಣ್ಯಂ ಬದ್ರಿನಾಥ್, ಐಪಿಎಲ್ ಚಾಂಪಿಯನ್​ಗಳಾದ ವಿನಯ್ ಕುಮಾರ್ ಮತ್ತು ವೇಣುಗೋಪಾಲ್ ರಾವ್ ಅವರು ಡಿಸ್ನಿ ಸ್ಟಾರ್​ನ 9 ಭಾಷೆಗಳಲ್ಲಿ ಪ್ರಾದೇಶಿಕ ಫೀಡ್​ನ ಮುಂಚೂಣಿಯಲ್ಲಿದ್ದರು.

ಜಿಯೊಗೆ 11.3 ಕೋಟಿ ವೀಕ್ಷಕರು

ಡಿಜಿಟಲ್​ನಲ್ಲಿ ಜಿಯೋ ಸಿನೆಮಾ ಐಪಿಎಲ್​ನ ಮೊದಲ ದಿನದಂದು 11.3 ಕೋಟಿ ವೀಕ್ಷಕರನ್ನು ಗಳಿಸಿದೆ. ಐಪಿಎಲ್ 2023 ರ ಮೊದಲ ದಿನಕ್ಕಿಂತ ಇದು 51% ಜಿಗಿತವನ್ನು ದಾಖಲಿಸಿದೆ ಎಂದು ಜಿಯೊ ಹೇಳಿಕೊಂಡಿದೆ. ಮೊದಲ ದಿನ ಜಿಯೋ ಸಿನೆಮಾದಲ್ಲಿ ಒಟ್ಟು ವೀಕ್ಷಣೆಯ ಸಮಯ 660 ಕೋಟಿ ನಿಮಿಷಗಳು.

ಇದನ್ನೂ ಓದಿ : IPL 2024 : ಅಪ್ಪನ ಸಿಕ್ಸರ್​​ಗೆ ಚಿಯರ್ಸ್ ಹೇಳಿದ ಕ್ಲಾಸೆನ್ ಪುತ್ರಿ, ಇಲ್ಲಿದೆ ವಿಡಿಯೊ

ಸ್ಟಾರ್ ಸ್ಪೋರ್ಟ್ಸ್ ಪ್ರಮುಖ ಡಿಟಿಎಚ್ ಪ್ಲಾಟ್ ಫಾರ್ಮ್ ಗಳಲ್ಲಿ ಅಟ್ಮೋಸ್ ಸೌಂಡ್ ನೊಂದಿಗೆ 4 ಕೆ ನಲ್ಲಿ ಐಪಿಎಲ್ ಪ್ರಸಾರ ಪ್ರಾರಂಭಿಸಿದೆ.

ಸ್ಟಾರ್ ಸ್ಪೋರ್ಟ್ಸ್ ವಿಶೇಷ ಚೇತನರಿಗಾಗಿ, ದೃಷ್ಟಿಹೀನರು, ಕಿವುಡರು ಅಥವಾ ಶ್ರವಣದೋಷವುಳ್ಳ ಅಭಿಮಾನಿಗಳಿಗಾಗಿ ಕಾಮೆಂಟರಿ ಮತ್ತು ಸಂಜ್ಞೆ ಭಾಷೆಯ ವಿಶೇಷ ಫೀಡ್ ಅನ್ನು ಪ್ರಾರಂಭಿಸಿದೆ. ಇದು ಈ ಐಪಿಎಲ್ ಅನ್ನು ನಿಜವಾಗಿಯೂ ಒಳಗೊಳ್ಳುವಂತೆ ಮಾಡುತ್ತದೆ. ವಿಶ್ವದ ಯಾವುದೇ ಪ್ರಮುಖ ಕ್ರೀಡಾಕೂಟವು ವಿಕಲಚೇತನರಿಗೆ ಲೈವ್ ಫೀಡ್ ಹೊಂದಿರುವುದು ಇದೇ ಮೊದಲು.

Continue Reading

Lok Sabha Election 2024

Lok Sabha Election 2024: ಡಿ.ಕೆ. ಸುರೇಶ್‌ ಆಸ್ತಿ ಮೌಲ್ಯ 598 ಕೋಟಿ ರೂ.; 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

Lok Sabha Election 2024: ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ವೇಳೆ ನೀಡಿದ್ದ ಅಫಿಡವಿಟ್‌ನಲ್ಲಿ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ. ಇದರಂತೆ ಡಿ.ಕೆ. ಸುರೇಶ್ ಅವರ ಒಟ್ಟು ಆಸ್ತಿ ಮೌಲ್ಯ 593 ಕೋಟಿ ರೂಪಾಯಿ ಆಗಿದೆ. ಆದರೆ, ಅವರಿಗೆ ಒಟ್ಟು 207 ಕೋಟಿ ರೂಪಾಯಿ ಸಾಲ ಇದೆ ಹೇಳಿಕೊಂಡಿದ್ದಾರೆ. ಜತೆಗೆ ಕುಟುಂಬದವರಿಗೆ 43 ಕೋಟಿ ರೂಪಾಯಿ ಸಾಲವನ್ನೂ ನೀಡಿದ್ದಾರೆ. ಒಂದೂ ಕಾಲು ಕೆಜಿ ಚಿನ್ನ, ಸುಮಾರು 5 ಕೆಜಿಯಷ್ಟು ಬೆಳ್ಳಿಯನ್ನು ಹೊಂದಿರುವ ಇವರು ದ್ವಿತೀಯ ಪಿಯುಸಿವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ಇನ್ನು ಲುಲು ಮಾಲ್‌ಗೆ 3 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿರುವುದಾಗಿ ಡಿ.ಕೆ. ಸುರೇಶ್‌ ಅವರು ತಮ್ಮ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.

VISTARANEWS.COM


on

Lok Sabha Election 2024 DK Shivakumar Suresh assetsworth Rs 598 crore and 259.19 crore Increase in 5 years
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ (Bangalore Rural Lok Sabha constituency) ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್ (DK Suresh) ಅವರು ನಾಮಪತ್ರ ಸಲ್ಲಿಸಿದ್ದು, ಒಟ್ಟು ಆಸ್ತಿ ಮೌಲ್ಯ 598 ಕೋಟಿ ರೂಪಾಯಿ ಎಂದು ಘೋಷಿಸಿದ್ದಾರೆ. ಇವರ ಹೆಸರಲ್ಲಿ ಒಟ್ಟು 207 ಕೋಟಿ ರೂಪಾಯಿ ಸಾಲವಿದ್ದು, ಕಳೆದ 5 ವರ್ಷದಲ್ಲಿ 259.19 ಕೋಟಿ ರೂಪಾಯಿಯಷ್ಟು ಆಸ್ತಿ ಮೌಲ್ಯವು ಹೆಚ್ಚಳಗೊಂಡಿದೆ.

ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ವೇಳೆ ನೀಡಿದ್ದ ಅಫಿಡವಿಟ್‌ನಲ್ಲಿ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ. ಇದರಂತೆ ಡಿ.ಕೆ. ಸುರೇಶ್ ಅವರ ಒಟ್ಟು ಆಸ್ತಿ ಮೌಲ್ಯ 593 ಕೋಟಿ ರೂಪಾಯಿ ಆಗಿದೆ.

207 ಕೋಟಿ ರೂಪಾಯಿ ಸಾಲದಲ್ಲಿರುವ ಡಿಕೆಸು

ಡಿ.ಕೆ. ಸುರೇಶ್ ಹೆಸರಿನಲ್ಲಿ ಒಟ್ಟು 207 ಕೋಟಿ ರೂಪಾಯಿ ಸಾಲ ಇದೆ ಎಂದು ಅಫಿಡವಿಟ್‌ನಲ್ಲಿ ತೋರಿಸಲಾಗಿದೆ. ಇಷ್ಟಾದರೂ ಇದರಲ್ಲಿ ತಾಯಿ ಗೌರಮ್ಮ, ಅಣ್ಣ ಡಿ.ಕೆ. ಶಿವಕುಮಾರ್‌, ಅಣ್ಣನ ಮಕ್ಕಳಾದ ಐಶ್ವರ್ಯ ಹಾಗೂ ಮಗ ಆಕಾಶ್‌ ಕೆಂಪೇಗೌಡ ಅವರಿಗೂ ಸಾಲವನ್ನು ನೀಡಿದ್ದಾರೆ.

Lok Sabha Election 2024 DK Brothers hold roadshow in Ramanagara and DK Suresh file nomination

ಕುಟುಂಬದವರಿಗೆ ನೀಡಿದ ಸಾಲು ಎಷ್ಟು?

  • ತಾಯಿ ಗೌರಮ್ಮಗೆ ನಾಲ್ಕೂ ಮುಕ್ಕಾಲು ಕೋಟಿ ರೂಪಾಯಿ ಸಾಲ
  • ಅಣ್ಣ ಡಿಕೆ ಶಿವಕುಮಾರ್‌ಗೆ 30 ಕೋಟಿ ರೂಪಾಯಿ ಸಾಲ ಕೊಟ್ಟಿರುವ ಸುರೇಶ್
  • ಅಣ್ಣನ ಮಗಳು ಐಶ್ವರ್ಯಾಗೆ 8 ಕೋಟಿ ರೂಪಾಯಿ ಸಾಲ ನೀಡಿರುವ ಸುರೇಶ್
  • ಡಿಕೆಶಿ ಮಗ ಆಕಾಶ್‌ ಕೆಂಪೇಗೌಡಗೆ 1 ಕೋಟಿ ರೂಪಾಯಿ ಸಾಲವನ್ನು ಡಿ.ಕೆ. ಸುರೇಶ್ ನೀಡಿದ್ದಾರೆ

ಡಿ.ಕೆ. ಸುರೇಶ್‌ ಬಳಿ ಇದೆ ಒಂದೂ ಕಾಲು ಕೆಜಿ ಚಿನ್ನ!

ಚರಾಸ್ತಿ 106.71 ಕೋಟಿ ರೂಪಾಯಿ, ಸ್ಥಿರಾಸ್ತಿ 486.33 ಕೋಟಿ ರೂಪಾಯಿ, ಒಂದೂ ಕಾಲು ಕೆಜಿ ಚಿನ್ನ, ಸುಮಾರು 5 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ.

ರಾಮನಗರ ಜಿಲ್ಲಾಧಿಕಾರಿಗೆ ಸಂಸದ ಡಿ.ಕೆ. ಸುರೇಶ್‌ ಸಲ್ಲಿಸಿರುವ ಅಫಿಡವಿಟ್‌ ಪ್ರತಿ ಇಲ್ಲಿದೆ. ಪೂರ್ಣ ವಿವರ ಓದಲು ಡೌನ್ಲೋಡ್‌ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.

ಇವರ ಬಳಿ ಸ್ವಂತ ಕಾರೂ ಇಲ್ಲ!

ತಮ್ಮ ಬಳಿ ಸ್ವಂತ ಕಾರು ಸಹ ಇಲ್ಲ ಎಂಬ ಮಾಹಿತಿಯನ್ನು ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್ ಹೇಳಿದ್ದಾರೆ. 70 ಲಕ್ಷ ರೂಪಾಯಿ ಮೌಲ್ಯದ ಪೀಠೋಪಕರಣವನ್ನು ಸುರೇಶ್ ಹೊಂದಿದ್ದಾರೆ.

5 ವರ್ಷಗಳಲ್ಲಿ 259.19 ಕೋಟಿ ರೂ. ಹೆಚ್ಚಳ

2019ರಲ್ಲಿ ಸುರೇಶ್ ಆಸ್ತಿ ಮೌಲ್ಯ 333.86 ಕೋಟಿ ರೂಪಾಯಿ ಆಗಿತ್ತು. 5 ವರ್ಷಗಳಲ್ಲಿ 259.19 ಕೋಟಿ ರೂಪಾಯಿಯಷ್ಟು ಆಸ್ತಿ ಮೌಲ್ಯ ಹೆಚ್ಚಳವಾಗಿದೆ. ಈ ವೇಳೆ ಲುಲು ಮಾಲ್‌ಗೆ 3 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿರುವುದಾಗಿ ಡಿ.ಕೆ. ಸುರೇಶ್‌ ಉಲ್ಲೇಖಿಸಿದ್ದಾರೆ. ಇನ್ನು ಅವರು ದ್ವಿತೀಯ ಪಿಯುಸಿವರೆಗೆ ವಿದ್ಯಾಭ್ಯಾಸ ಮಾಡಿದ್ದಾಗಿ ತಿಳಿಸಿದ್ದಾರೆ.

Continue Reading

ಉದ್ಯೋಗ

Job Alert: ಗುಡ್‌ನ್ಯೂಸ್‌; 93 ಬ್ಯಾಂಕ್‌ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

Job Alert: ಬೆಂಗಳೂರಿನಲ್ಲೇ ಉದ್ಯೋಗ ಹೊಂದಬೇಕು ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ 93 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್‌ 6.

VISTARANEWS.COM


on

job alert
Koo

ಬೆಂಗಳೂರು: ಬೆಂಗಳೂರಿನಲ್ಲೇ ಉದ್ಯೋಗ ಹೊಂದಬೇಕು ಎನ್ನುವ ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ (The Karnataka State Co-Operative Apex Bank Ltd)ದ ಬೆಂಗಳೂರು ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 93 ಬ್ಯಾಂಕ್‌ ಸಹಾಯಕ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್‌ 6 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಾಮಾನ್ಯ 85, ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ 8 ಹುದ್ದೆಗಳಿವೆ. ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಭಾಷಾ ವಿಷಯಗಳು ಸೇರಿದಂತೆ ಕ್ರೋಢೀಕೃತ ಶೇ. 55ರಷ್ಟು ಅಂಕ ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮತ್ತು ಅಂಗವಿಕಲ ಅಭ್ಯರ್ಥಿಗಳು ಕನಿಷ್ಠ ಶೇ. 50ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.

ಕಂಪ್ಯೂಟರ್‌ ಜ್ಞಾನ ಕಡ್ಡಾಯ

ಅಭ್ಯರ್ಥಿಗಳು ಕನ್ನಡ ಓದುವ ಜತೆಗೆ ಬರೆಯಲು, ಸ್ಪಷ್ಟವಾಗಿ ಮಾತನಾಡಲು ಮತ್ತು ಅರ್ಥ ಮಾಡಿಕೊಳ್ಳುವಂತಿರಬೇಕು. ಕಂಪ್ಯೂಟರ್ ಅಪರೇಷನ್ ಮತ್ತು ಅಪ್ಲಿಕೇಷನ್‌ನಲ್ಲಿ ಉತ್ತಮ ಜ್ಞಾನ ಹೊಂದಿರಬೇಕು. ಸಹಕಾರ ವಿಷಯದಲ್ಲಿ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿರುವವರಿಗೆ ಆದ್ಯತೆ ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ

ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-Iರ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ಜಾತಿ, ಹಿಂದುಳಿದ ವರ್ಗಗಳ ಅಂದರೆ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು 500 ರೂ. + ಜಿಎಸ್‌ಟಿ, ಸಾಮಾನ್ಯ ವರ್ಗ ಮತ್ತು ಇತರ ಹಿಂದುಳಿದ ಜಾತಿ, ಹಿಂದುಳಿದ ವರ್ಗಗಳ ಅಂದರೆ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 1,000 ರೂ. + ಜಿಎಸ್‌ಟಿಯನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಅರ್ಜಿ ಪರಿಶೀಲನೆಯ ನಂತರ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಮೌಖಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ 28,425 ರೂ.- 87,125 ರೂ. ಮಾಸಿಕ ವೇತನ ಸಿಗಲಿದೆ. ಗಮನಿಸಿ ಅಭ್ಯರ್ಥಿಯ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಒಂದು ಹಾಳೆಯ ಮೇಲಿಟ್ಟು ಆದರ ಕೆಳಗೆ ಕಪ್ಪು ಶಾಹಿಯ ಸ್ಕೆಚ್/ ಮಾರ್ಕರ್ ಪೆನ್‌ನಲ್ಲಿ ಸಹಿಯನ್ನು ಸ್ಕ್ಯಾನ್ ಮಾಡಿ ಅರ್ಜಿ ಜತೆಗೆ ಅಪ್‌ಲೋಡ್‌ ಮಾಡಬೇಕು. ಭಾವಚಿತ್ರ ಹಾಗೂ ಸಹಿಯನ್ನು ಅಪ್‌ಲೋಡ್‌ ಮಾಡದ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಆಗ್ನೇಯ ಮಧ್ಯ ರೈಲ್ವೆಯಿಂದ 733 ಅಪ್ರೆಂಟಿಸ್‌ಗಳ ನೇಮಕಕ್ಕೆ ಅರ್ಜಿ ಆಹ್ವಾನ; ಐಟಿಐ ಪಾಸಾದವರು ಅಪ್ಲೈ ಮಾಡಿ

Continue Reading

ಪ್ರಮುಖ ಸುದ್ದಿ

IPL 2024 : ಅಪ್ಪನ ಸಿಕ್ಸರ್​​ಗೆ ಚಿಯರ್ಸ್ ಹೇಳಿದ ಕ್ಲಾಸೆನ್ ಪುತ್ರಿ, ಇಲ್ಲಿದೆ ವಿಡಿಯೊ

IPL 2024 : ಪಂದ್ಯದಲ್ಲಿ ಹೆನ್ರಿಚ್ ಕ್ಲಾಸೆನ್​ 34 ಎಸೆತಗಳಲ್ಲಿ 80 ರನ್ ಬಾರಿಸುವ ಮೂಲಕ ದೊಡ್ಡ ಮೊತ್ತ ಪೇರಿಸಲು ನೆರವಾಗಿದ್ದರು.

VISTARANEWS.COM


on

Henrich Klasen- IPL
Koo

ಹೈದರಾಬಾದ್​: ಬುಧವಾರ ನಡೆದ ಸನ್​ರೈಸರ್ಸ್​​ ಹೈದರಾಬಾದ್ (Sun Risers Hyderabad​​) ಮತ್ತು ಮುಂಬೈ ಇಂಡಿಯನ್ಸ್ (Mumbai Indians ) ನಡುವಿನ ಐಪಿಎಲ್ 2024 ರ 8 ನೇ ಪಂದ್ಯವು ಹಲವು ದಾಖಲೆಗಳಿಗೆ ಕಾರಣವಾಗಿದ್ದವು. ಇದು ಟಿ20 ಮಾದರಿಯಲ್ಲಿ ತಂಡವೊಂದರ ಗರಿಷ್ಠ ಸ್ಕೋರ್​, ಐಪಿಎಲ್​ನಲ್ಲಿ (IPL 2024) ಪಂದ್ಯವೊಂದರ ಒಟ್ಟು ಅತ್ಯಧಿಕ ಸ್ಕೋರ್ ಸೇರಿದಂತೆ ಹಲವು ದಾಖಲೆಗಳಿಗೆ ಕಾರಣವಾದರು. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟರ್​ ಹೆನ್ರಿಚ್ ಕ್ಲಾಸೆನ್​ 34 ಎಸೆತಗಳಲ್ಲಿ 80 ರನ್​ ಬಾರಿಸಿದ್ದರು. ಆದಾಗ್ಯೂ, ಎಲ್ಲಾ ಕ್ರಿಕೆಟ್ ಚಟುವಟಿಕೆಗಳ ನಡುವೆ, ಕ್ಲಾಸೆನ್ ಅವರ 14 ತಿಂಗಳ ಪುತ್ರಿ ಲಯಾ ಸ್ಟ್ಯಾಂಡ್​ನಲ್ಲಿ ತಂದೆಯವನ್ನು ಬೆಂಬಲಿಸುವ ಅಪರೂಪದ ಕ್ಷಣ ವೈರಲ್ ಆಗಿದೆ.

ಎಸ್ಆರ್​ಎಚ್​ನ ಬ್ಯಾಟರ್​ಗಳು ಆರು ಹೊಡೆತಗಳ ಉತ್ಸಾಹದಲ್ಲಿದ್ದಾಗ ಕ್ಲಾಸೆನ್ ಕೇವಲ 34 ಎಸೆತಗಳಲ್ಲಿ ನಾಲ್ಕು ಬೌಂಡರಿಗಳು ಮತ್ತು ಏಳು ಅತ್ಯುನ್ನತ ಸಿಕ್ಸರ್​ಗಳನ್ನು ಒಳಗೊಂಡಂತೆ 80* ರನ್ ಗಳಿಸಿದ್ದರು. ಆದಾಗ್ಯೂ, ದಕ್ಷಿಣ ಆಫ್ರಿಕಾದ ಆಟಗಾರನನ್ನು ಸ್ಥಳೀಯ ಅಭಿಮಾನಿಗಳು ಹುರಿದುಂಬಿಸುವ ನಡುವೆ ಅವರ ಮಗಳು ಎಸ್​ಆರ್​ಎಚ್​ ಬಾವುಟ ಬೀಸಿ ಅವರಿಗೆ ಬೆಂಬಲ ನೀಡಿದರು.

ಎಸ್​ಆರ್​​ಎಚ್​ ಅಪರೂಪದ ದಾಖಲೆ

ಸನ್​ರೈಸರ್ಸ್​ ಹೈದರಾಬಾದ್​ ತಂಡ ಐಪಿಎಲ್​ನಲ್ಲಿ ನೂತನ ದಾಖಲೆಯೊಂದನ್ನು ಬರೆದಿದೆ. ಐಪಿಎಲ್​(IPL 2024) ಇತಿಹಾಸದಲ್ಲೇ ಅತ್ಯಧಿಕ ರನ್​ ಪೇರಿಸಿದ ಮೊದಲ ತಂಡ ಎನಿಸಿಕೊಂಡಿದೆ. ಈ ಮೂಲಕ ಆರ್​ಸಿಬಿ ಹೆಸರಿನಲ್ಲಿದ ದಾಖಲೆಯನ್ನು ಮುರಿದಿದೆ.

ಇದನ್ನೂ ಓದಿ : IPL 2024 : ಕೊಹ್ಲಿ- ಗಂಭೀರ್ ಮುಖಾಮುಖಿಯಲ್ಲಿ ವಿಜಯ ಯಾರಿಗೆ?

ಇಲ್ಲಿನ ರಾಜೀವ್​ ಗಾಂಧಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್​ ವಿರುದ್ಧ ನಡೆಯುತ್ತಿರುವ ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್​ ನಡೆಸಿ 20 ಓವರ್​ಗಳಲ್ಲಿ 3 ವಿಕೆಟ್​ಗೆ 277 ರನ್​ ಬಾರಿಸಿದೆ. ಈ ಮೂಲಕ ಆರ್​ಸಿಬಿ ಹೆಸರಿನಲ್ಲಿದ್ದ ದಾಖಲೆಯನ್ನು ಹಿಂದಿಕ್ಕಿದೆ. ಆರ್​ಸಿಬಿ 2013ರಲ್ಲಿ ಪುಣೆ ವಾರಿಯರ್ಸ್​ ವಿರುದ್ಧ 5 ವಿಕೆಟ್​ಗೆ 263 ರನ್​ ಬಾರಿಸಿತ್ತು. ಇದೀಗ ಈ ದಾಖಲೆಯನ್ನು ಹೈದರಾಬಾದ್​ 11 ವರ್ಷಗಳ ಬಳಿಕ ಮೀರಿ ನಿಂತಿದೆ.
10 ಓವರ್​ನಲ್ಲಿ ಗರಿಷ್ಠ ಮೊತ್ತ

ಹೈದರಾಬಾದ್​ ತಂಡ 10 ಓವರ್​ಗಳಲ್ಲಿ ಕೇವಲ 2 ವಿಕೆಟ್​ಗೆ 148 ರನ್​ ಬಾರಿಸುವ ಮೂಲಕ ಇದುವರೆಗಿನ ಐಪಿಎಲ್​ ಇತಿಹಾಸದಲ್ಲಿಯೇ 10 ಓವರ್​ಗೆ ಅ್ಯಧಿಕ ಮೊತ್ತ ಗಳಿಸಿದ ಮೊದಲ ತಂಡ ಹೆಗ್ಗಳಿಕೆಗೆ ಪಾತ್ರವಾಯಿತು. ಇದುವರೆಗೂ ಈ ದಾಖಲೆ ಮುಂಬೈ ತಂಡದ ಪರವಾಗಿತ್ತು. ಮುಂಬೈ 2021 ರಲ್ಲಿ ಹೈದರಾಬಾದ್​ ವಿರುದ್ಧವೇ 131/3 ಬಾರಿಸಿತ್ತು. ಇದೀಗ ಹೈದರಾಬಾದ್​ ಈ ದಾಖಲೆಯನ್ನು ಮುಂಬೈ ವಿರುದ್ಧವೇ ಆಡಿ ಸೇಡು ತೀರಿಸಿಕೊಂಡಿದೆ.

ಅತಿ ಕಡಿಮೆ ಓವರ್​ನಲ್ಲಿ 100 ರನ್​​

7 ಓವರ್​ನಲ್ಲಿ 100 ರನ್​ ಗಡಿ ದಾಟುವ ಮೂಲಕ ಐಪಿಎಲ್​ ಇತಿಹಾಸದ ಅತಿ ಕಡಿಮೆ ಓವರ್​ನಲ್ಲಿ 100 ರನ್​ ಬಾರಿಸಿದ ತಂಡಗಳ ದಾಖಲೆಪಟ್ಟಿಯಲ್ಲಿ ಹೈದರಾಬಾದ್​ 4ನೇ ಸ್ಥಾನ ಪಡೆದುಕೊಂಡಿತು. ದಾಖಲೆ ಮುಂಬೈ ತಂಡದ ಹೆಸರಿನಲ್ಲಿದೆ. 2014ರಲ್ಲಿ ಪಂಜಾಬ್​ ವಿರುದ್ಧ ಮುಂಬೈ ಕೇವಲ 6 ಓವರ್​ನಲ್ಲಿ ಈ ಸಾಧನೆ ಮಾಡಿತ್ತು. ಪವರ್​ ಪ್ಲೇಯಲ್ಲಿ ಅತ್ಯಧಿಕ ರನ್​ ಗಳಿಸಿದ ಮೊದಲ ತಂಡ ಎಂಬ ದಾಖಲೆ ಕೂಡ ಮುಂಬೈ ಪರವೇ ಇದೆ.

Continue Reading
Advertisement
IPL 2024-CSKRCB
ಕ್ರೀಡೆ8 mins ago

IPL 2024 : ವೀಕ್ಷಣೆಯಲ್ಲಿ ದಾಖಲೆ ಬರೆದ ಚೆನ್ನೈ- ಆರ್​ಸಿಬಿ ಮ್ಯಾಚ್​!

Prithviraj Sukumaran
ಸಿನಿಮಾ19 mins ago

Prithviraj Sukumaran: ಪೃಥ್ವಿರಾಜ್ ಸುಕುಮಾರನ್‌ ಅಭಿನಯದ ‘ಆಡುಜೀವಿತಂ’ ಚಿತ್ರಕ್ಕೆ ಪ್ರೇಕ್ಷಕರು ಫಿದಾ!

Lok Sabha Election 2024 DK Shivakumar Suresh assetsworth Rs 598 crore and 259.19 crore Increase in 5 years
Lok Sabha Election 202423 mins ago

Lok Sabha Election 2024: ಡಿ.ಕೆ. ಸುರೇಶ್‌ ಆಸ್ತಿ ಮೌಲ್ಯ 598 ಕೋಟಿ ರೂ.; 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

Summer Fashion
ಫ್ಯಾಷನ್25 mins ago

Summer Fashion: ಸಮ್ಮರ್‌ ಸೀಸನ್‌ನಲ್ಲಿ ಸಿಂಪಲ್‌ ಸ್ಲಿವ್‌ಲೆಸ್‌ ಗೌನ್‌ಗಳ ಹಂಗಾಮ!

job alert
ಉದ್ಯೋಗ26 mins ago

Job Alert: ಗುಡ್‌ನ್ಯೂಸ್‌; 93 ಬ್ಯಾಂಕ್‌ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

Aditi Rao Hydari engaged to Siddharth
ಟಾಲಿವುಡ್33 mins ago

Aditi Rao Hydari: ಎಂಗೇಜ್‌ ಆಗಿರುವ ಫೋಟೊ ಶೇರ್‌ ಮಾಡಿದ ಅದಿತಿ ರಾವ್ ಹೈದರಿ!

Henrich Klasen- IPL
ಪ್ರಮುಖ ಸುದ್ದಿ35 mins ago

IPL 2024 : ಅಪ್ಪನ ಸಿಕ್ಸರ್​​ಗೆ ಚಿಯರ್ಸ್ ಹೇಳಿದ ಕ್ಲಾಸೆನ್ ಪುತ್ರಿ, ಇಲ್ಲಿದೆ ವಿಡಿಯೊ

Actor Govinda
ದೇಶ38 mins ago

Actor Govinda: ಶಿವಸೇನೆ ನಾಯಕನ ಜತೆ ನಟ ಗೋವಿಂದಾ ಚರ್ಚೆ; ಚುನಾವಣಾ ಕಣಕ್ಕೆ ಎಂಟ್ರಿ?

SSLC Students Fighting
ಬೆಂಗಳೂರು45 mins ago

SSLC Students Fight: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಹೊಡಿಬಡಿ; ಮೂವರಿಗೆ ಚಾಕು ಇರಿತ

RCB team
ಕ್ರೀಡೆ1 hour ago

IPL 2024 : ಕೊಹ್ಲಿ- ಗಂಭೀರ್ ಮುಖಾಮುಖಿಯಲ್ಲಿ ವಿಜಯ ಯಾರಿಗೆ?

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20244 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20245 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ12 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌