Congress protests against Centre Demand for supply of rice to Annabhagya schemeCongress Protest: ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸಲು ಆಗ್ರಹ; ಕೇಂದ್ರದ ವಿರುದ್ಧ ಹಲವೆಡೆ ಕಾಂಗ್ರೆಸ್‌ ಪ್ರತಿಭಟನೆ Vistara News

ಉತ್ತರ ಕನ್ನಡ

Congress Protest: ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸಲು ಆಗ್ರಹ; ಕೇಂದ್ರದ ವಿರುದ್ಧ ಹಲವೆಡೆ ಕಾಂಗ್ರೆಸ್‌ ಪ್ರತಿಭಟನೆ

Congress Protest: ಅನ್ನಭಾಗ್ಯ ಯೋಜನೆಗಾಗಿ ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ಪೂರೈಸಬೇಕು ಎಂದು ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

VISTARANEWS.COM


on

congress protest
ಹಾಸನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಲಾಯಿತು. ಶಾಸಕ ಕೆ.ಎಂ.ಶಿವಲಿಂಗೇಗೌಡ ಸೇರಿ ಹಲವು ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಪೂರೈಸದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯದ ವಿವಿಧೆಡೆ ಕಾಂಗ್ರೆಸ್‌ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಅಕ್ಕಿ ಪೂರೈಕೆಯಲ್ಲೂ ಮೋದಿ ಸರ್ಕಾರ ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಕೈ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಕೇಂದ್ರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಗ್ಯಾರಂಟಿ ಯೋಜನೆ ತಡೆಗೆ ಹ್ಯಾಕಿಂಗ್‌ ನಡೆಯುತ್ತಿದೆ: ಸತೀಶ್‌ ಜಾರಕಿಹೊಳಿ

ಬೆಳಗಾವಿ: ನಗರದ ಚೆನ್ನಮ್ಮ ವೃತ್ತದಲ್ಲಿ ಸಚಿವ ಸತೀಶ್ ಜಾರಕಿಹೊಳಿ‌ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮತ್ತಿತರರು ಇದ್ದರು.

ಸಚಿವ ಸತೀಶ್ ಜಾರಕಿಹೊಳಿ‌ ಮಾತನಾಡಿ, ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಕೊಡುತ್ತಿಲ್ಲ. ಇದನ್ನು ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. ನಾವು ಹಣಕೊಟ್ಟು ಅಕ್ಕಿ ಖರೀದಿ ಮಾಡುತ್ತಿದ್ದೇವೆ. ಹಾಗೆಯೇ ಕೇಂದ್ರದಿಂದ ಅಕ್ಕಿ ಕೇಳುತ್ತಿಲ್ಲ ಎಂದು ಹೇಳಿದರು.

10 ಕೆಜಿ ಅಕ್ಕಿ ಕೊಟ್ಟೆ ಕೊಡುತ್ತೇವೆ. ಒಂದು ತಿಂಗಳು ವಿಳಂಬ ಆಗಬಹುದು ಅಷ್ಟೇ ಎಂದ ಅವರು, ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆ ಐದು ವರ್ಷ ಕೊಡುತ್ತೇವೆ ಎಂದ ಅವರು, ಗ್ಯಾರಂಟಿ ಯೋಜನೆಗಳನ್ನು ತಡೆಯಲು ನಮ್ಮ ಮಷಿನ್‌ಗಳನ್ನು ಹ್ಯಾಕ್ ಮಾಡಲಾಗುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಮಾತು ತಪ್ಪಿದೆ

ಕಾರವಾರ: ಕಾರವಾರದ ಸುಭಾಷ್ ವೃತ್ತದಲ್ಲಿ ಜಿಲ್ಲಾಧ್ಯಕ್ಷ ಸಾಯಿ ಗಾಂವ್ಕರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು. ಅಕ್ಕಿ ಕೊಡುವುದಾಗಿ ಹೇಳಿ ಕೇಂದ್ರ ಸರ್ಕಾರ ಮಾತು ತಪ್ಪಿದೆ. ಅನ್ನ ಭಾಗ್ಯ ಯೋಜನೆಗೆ ತೊಂದರೆ ಕೊಡಲು ಕೇಂದ್ರ ಅಕ್ಕಿ ನೀಡುತ್ತಿಲ್ಲ. ಇದು ಸಣ್ಣತನದ ರಾಜಕೀಯ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದರು. ಶಿರಸಿ ಶಾಸಕ ಭೀಮಣ್ಣ ನಾಯ್ಕ, ಕಾರವಾರ ಶಾಸಕ ಸತೀಶ್ ಸೈಲ್, ಮಾಜಿ ಶಾಸಕ ವಿ.ಎಸ್ ಪಾಟೀಲ್ ಭಾಗಿಯಾಗಿದ್ದರು.

ಕೇಂದ್ರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ

congress protest in vijayapur

ವಿಜಯಪುರ: ನಗರದ ಅಂಬೇಡ್ಕರ್ ಸರ್ಕಲ್ ಬಳಿ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೈ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಕೇಂದ್ರ ಅಕ್ಕಿ ಕೊಡದೇ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದು ಕಿಡಿಕಾರಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮ್ಮಿದ್ ಮುಶ್ರಿಫ್, ಕೆಪಿಸಿಸಿ ವಕ್ತಾರ ಎಸ್.ಎಂ. ಪಾಟೀಲ್ ಗಣಿಹಾರ, ಗಂಗಾಧರ ಸಂಬಣ್ಣಿ, ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರು, ಕಾರ್ಯಕರ್ತರು ಭಾಗಿಯಾಗಿದ್ದರು.

congress protest in kolar
ಕೋಲಾರದಲ್ಲಿ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು

ಬಡವರ ಸೇವೆಗೆ ಕೇಂದ್ರ ಅಡ್ಡಗಾಲು

ಚಿತ್ರದುರ್ಗ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಸಚಿವ ಡಿ. ಸುಧಾಕರ್ ಮಾತನಾಡಿ. ಕೇಂದ್ರವು ರಾಜ್ಯದ ಬಡವರಿಗೆ ಅಕ್ಕಿ ಕೊಡುವ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಹಾಗಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಎಫ್‌ಸಿಐಗೆ ಪತ್ರ ಬರೆದಾಗ ಅಕ್ಕಿ ಕೊಡುತ್ತೇವೆ ಎಂದಿದ್ದರು. ಈಗ ಅಕ್ಕಿ ದಾಸ್ತಾನು ಇಲ್ಲ ಎನ್ನುತ್ತಿದ್ದಾರೆ. ಕಾಂಗ್ರೆಸ್ ಮಾಡುತ್ತಿರುವ ಬಡವರ ಸೇವೆಗೆ ಕೇಂದ್ರ ಅಡ್ಡಗಾಲು ಹಾಕುತ್ತಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ನೂರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ದರು. ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಸೇರಿ ಹಲವರು ಭಾಗಿಯಾಗಿದ್ದರು.

congress protest in Ramanagara
ರಾಮನಗರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

ಬಡವರ ಅಕ್ಕಿಗೆ ಕೇಂದ್ರ ಸರ್ಕಾರ ಕನ್ನ

ಬಳ್ಳಾರಿ: ನಗರದ ರಾಯಲ್ ವೃತ್ತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಬಡವರ ಅಕ್ಕಿಗೆ ಕೇಂದ್ರ ಸರ್ಕಾರ ಕನ್ನ ಹಾಕಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

congress protest in tumkur
ತುಮಕೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

ಅಕ್ಕಿ ಕೊಳೆತು ಹೋಗುತ್ತಿದ್ದರೂ ಕೇಂದ್ರ ನೀಡುತ್ತಿಲ್ಲ

ರಾಯಚೂರು: ನಗರದ ಭಾರತ ಆಹಾರ ನಿಗಮ ಸಂಗ್ರಹಣಾ ಘಟಕ ಎದುರು ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ ನೇತೃತ್ವದಲ್ಲಿ ಕೈ ಕಾರ್ಯಕರ್ತರು ಹೋರಾಟ ನಡೆಸಿದರು.

ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ ಮಾತನಾಡಿ, ಎಫ್‌ಸಿಐ ಗೋದಾಮಿನಲ್ಲಿ ಅಕ್ಕಿ ಕೊಳೆತು ಹೋಗುತ್ತಿದೆ. ಬಡವರಿಗೆ ಹಂಚಲು ಅಕ್ಕಿ ಕೇಳುತ್ತಿದ್ದೇವೆ. ಆದರೆ. ಬಿಜೆಪಿ ಕೊಡುತ್ತಿಲ್ಲ. ಗ್ಯಾರಂಟಿ ಯೋಜನೆ ಭರವಸೆಯಂತೆ 10 ಕೆ.ಜಿ. ಅಕ್ಕಿ ಕೊಟ್ಟೆ ಕೊಡುತ್ತೇವೆ. ಬಿಜೆಪಿಯವರ ರಾಜಕೀಯವನ್ನು ಜನರಿಗೆ ತೋರಿಸಲು ಹೋರಾಟ ನಡೆಸಿದ್ದೇವೆ ಎಂದು ತಿಳಿಸಿದರು.

congress protest in madikeri
ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

ಮಂಡ್ಯದಲ್ಲಿ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ

ಮಂಡ್ಯ: ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಕೈ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ ಕಾರ್ಯಕರ್ತರು, ಹಾಡಿನ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವ್ಯಂಗ್ಯವಾಡಿದರು. ಇದೇ ವೇಳೆ ಮೊಸರನ್ನ ವಿತರಣೆ ಮಾಡುವ ಮೂಲಕ ಕೇಂದ್ರದ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ಶಾಸಕ ರವಿಕುಮಾರ್ ಗಣಿಗ, ರಮೇಶ್ ಬಾಬು, ಬಂಡಿಸಿದ್ದೇಗೌಡ ಸೇರಿ ಹಲವರು ಭಾಗಿಯಾಗಿದ್ದರು.

congress protest in chikkamagaluru
ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

ಅನ್ಯಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕುತ್ತಿದೆ

ಹಾವೇರಿ: ನಗರದ ಪುರಸಿದ್ದೇಶ್ವರ ಗುಡಿಯಿಂದ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಡವರ ಹೊಟ್ಟೆ ಮೇಲೆ ಕೇಂದ್ರ ಸರ್ಕಾರ ಹೊಡೆಯುತ್ತಿದೆ, ಅನ್ಯಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕುತ್ತಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಶಾಸಕರಾದ ಯುಬಿ ಬಣಕಾರ, ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ್, ಶ್ರೀನಿವಾಸ ಮಾನೆ, ಪ್ರಕಾಶ ಕೋಳಿವಾಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

congress protest in Dharwad
ಧಾರಾವಾಡ ಡಿಸಿ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು ಜಿಲ್ಲಾ<br>ಉಸ್ತುವಾರಿ ಸಚಿವ ಸಂತೋಷ ಲಾಡ್ ಸೇರಿ ಹಲವರು ಭಾಗಿಯಾಗಿದ್ದರು
congress protest in bagalkot
ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್ಬಿತಿಮ್ಮಾಪೂರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉತ್ತರ ಕನ್ನಡ

Uttara Kannada News: ಕಿರವತ್ತಿ ಭಾಗದ 100ಕ್ಕೂ ಹೆಚ್ಚು ಜನ ಕಾಂಗ್ರೆಸ್‌ಗೆ ಸೇರ್ಪಡೆ

Uttara Kannada News: ಯಲ್ಲಾಪುರ ಪಟ್ಟಣದ ಕಲ್ಮಠದಲ್ಲಿ (ಸೀತಾಪುರ) ಗುರುವಾರ ಬ್ಲಾಕ್ ಕಾಂಗ್ರೆಸ್‌ನ ನೂತನ ಕಾರ್ಯಾಲಯದ ಉದ್ಘಾಟನೆ ಹಾಗೂ ಕಿರವತ್ತಿ ಭಾಗದ ನೂರಕ್ಕೂ ಹೆಚ್ಚಿನ ಜನರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು.

VISTARANEWS.COM


on

More than a hundred people from Kiravatti have joined the Congress party
ಯಲ್ಲಾಪುರ ಪಟ್ಟಣದ ಕಲ್ಮಠದಲ್ಲಿ (ಸೀತಾಪುರ) ಗುರುವಾರ ಬ್ಲಾಕ್ ಕಾಂಗ್ರೆಸ್‌ನ ನೂತನ ಕಾರ್ಯಾಲಯದ ಉದ್ಘಾಟನೆ ಹಾಗೂ ಕಿರವತ್ತಿ ಭಾಗದ 100ಕ್ಕೂ ಹೆಚ್ಚಿನ ಜನರು ಕಾಂಗ್ರೆಸ್‌ಗೆ ಸೇರ್ಪಡೆಯಾದರು.
Koo

ಯಲ್ಲಾಪುರ: ಪಟ್ಟಣದ ಕಲ್ಮಠದಲ್ಲಿ (ಸೀತಾಪುರ) ಬ್ಲಾಕ್ ಕಾಂಗ್ರೆಸ್‌ನ ನೂತನ ಕಾರ್ಯಾಲಯದ ಉದ್ಘಾಟನೆ ಹಾಗೂ ಕಿರವತ್ತಿ (Kiravatti) ಭಾಗದ ನೂರಕ್ಕೂ ಹೆಚ್ಚಿನ ಜನರ ಪಕ್ಷ ಸೇರ್ಪಡೆ ಕಾರ್ಯಕ್ರಮವು ಗುರುವಾರ ನಡೆಯಿತು.

ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ ವಿ.ಎಸ್. ಪಾಟೀಲ್, ಗ್ರಾಮದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಿದಾಗ, ಕ್ಷೇತ್ರದಲ್ಲಿ ಒಬ್ಬ ನಾಯಕ ಹಾಗೂ ಪಕ್ಷವನ್ನು ಬಲಪಡಿಸಲು ಸಾಧ್ಯ. ಇಂದಿನ ಕಾಲಘಟ್ಟದಲ್ಲಿ ಅಧಿಕಾರ ವಿಕೇಂದ್ರಿಕರಣಗೊಳಿಸುವ ಅವಶ್ಯಕತೆ ಇದೆ. ಗ್ರಾಮ ಮಟ್ಟದ ಸದಸ್ಯನಿಗೂ ಸರಿಯಾದ ನಿರ್ಣಯ ಕೈಗೊಳ್ಳುವ ಹಕ್ಕನ್ನು ನೀಡಬೇಕಿದೆ.

ಚುನಾವಣೆಯ ಸಂದರ್ಭದಲ್ಲಿ ಪಕ್ಷ ಸೇರ್ಪಡೆಗೊಳ್ಳುವುದು ಸಹಜ. ಆದರೆ ಯಾವುದೇ ಕಾರಣವಿಲ್ಲದೆ, ಕೇವಲ ಪಕ್ಷದ ಸಿದ್ಧಾಂತಗಳನ್ನು ಮೆಚ್ಚಿ ಇಂದು ನೂರಕ್ಕೂ ಹೆಚ್ಚು ಕಾರ್ಯಕರ್ತರು ಸೇರ್ಪಡೆಗೊಂಡಿರುವುದು ಸಂತಸದ ಸಂಗತಿ. ಶಾಸಕರು ಯಾರೇ ಆಗಿರಲಿ, ಸರ್ಕಾರ ನಮ್ಮದಿದೆ. ಹೀಗಾಗಿ ಬಡವರ, ಅಗತ್ಯ ಉಳ್ಳವರ ಸಹಾಯ ಮಾಡುವ ಮೂಲಕ ಪಕ್ಷದ ಬಲವರ್ಧನೆ ಮಾಡೋಣ. ನಾವು ಪಕ್ಷದಲ್ಲಿ ಬೇಧಭಾವವನ್ನು ಮರೆತು, ಎಲ್ಲರೂ ಸೇರಿ ಕೆಲಸ ಮಾಡಿದಾಗ ವಿರೋಧಿಗಳನ್ನು ಸುಲಭವಾಗಿ ಸೋಲಿಸಬಹುದು. ರಾಜಕೀಯಕ್ಕೆ ದುಡ್ಡು ಮುಖ್ಯವಲ್ಲ, ಜನಸೇವೆಯೇ ಮುಖ್ಯ ಎಂಬುದನ್ನು ನಾವೆಲ್ಲ ಸಮಾಜಕ್ಕೆ ತೋರೋಣ ಎಂದರು.

ಇದನ್ನೂ ಓದಿ: ನಾಳೆಯಿಂದ ಅಂಡರ್​-19 ಏಷ್ಯಾಕಪ್; ಭಾರತ-ಪಾಕ್​ ಮುಖಾಮುಖಿ ಯಾವಾಗ?

ಕಿರವತ್ತಿ ಭಾಗದ ಪ್ರಮುಖ ವಿಲ್ಸನ್ ಫರ್ನಾಂಡಿಸ್‌ ಮಾತನಾಡಿ, ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ಮೆಚ್ಚಿ ಪಕ್ಷ ಸೇರ್ಪಡೆಗೊಂಡಿದ್ದೇವೆ. ಇದು ಕೇವಲ ಟ್ರೈಲರ್ ಆಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಕ್ಷ ಸೇರಲಿದ್ಧಾರೆ. ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಶಕ್ತಿ ತುಂಬುವ ಪ್ರಯತ್ನ ಮಾಡುತ್ತೇವೆ ಎಂದರು.

ತಾಲೂಕಾಧ್ಯಕ್ಷ ಎನ್‌.ಕೆ. ಭಟ್, ಪ್ರಮುಖರಾದ ರಾಘವೇಂದ್ರ ಭಟ್, ಟಿ.ಸಿ. ಗಾಂವ್ಕರ್, ಉಲ್ಲಾಸ್ ಶ್ಯಾನಭಾಗ್, ನರಸಿಂಹ ನಾಯ್ಕ, ನರ್ಮದಾ ನಾಯ್ಕ, ಪೂಜಾ ನೇತ್ರೇಕರ್, ಬಾಬಾಜಾನ್ ಎಂ. ಶೇಖ್, ನೂರ್ ಮಹಮ್ಮದ್, ಮತ್ತಿತರರು ಇದ್ದರು.

ಇದನ್ನೂ ಓದಿ: Job News: ಕೇಂದ್ರ ಸರ್ಕಾರ, ರಕ್ಷಣಾ ಇಲಾಖೆಗಳಲ್ಲಿ ಶೇ.14ರಷ್ಟು ಉದ್ಯೋಗ ಹೆಚ್ಚಳ

ಈ ಸಂದರ್ಭದಲ್ಲಿ ಚೆನ್ನಪ್ಪ ಹಾಗೂ ವಿಲ್ಸನ್ ಫರ್ನಾಂಡಿಸ್ ನೇತೃತ್ವದಲ್ಲಿ ಕಿರವತ್ತಿ ಭಾಗದ ನೂರಕ್ಕೂ ಹೆಚ್ಚು ಜನರು ಕಾಂಗ್ರೆಸ್ ಸೇರ್ಪಡೆಗೊಂಡರು. ಅನಿಲ್ ಮರಾಠೆ ಸ್ವಾಗತಿಸಿದರು, ವಿ.ಎಸ್. ಭಟ್ ಪ್ರಾಸ್ತಾವಿಕ ಮಾತನಾಡಿದರು. ರವಿ ನಾಯ್ಕ ಎಂಜಿನಿಯರ್‌ ವಂದಿಸಿದರು.

Continue Reading

ಉತ್ತರ ಕನ್ನಡ

Uttara Kannada News: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಒತ್ತಾಯ

Uttara Kannada News: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ ನಿರ್ಮಿಸುವ ಕುರಿತು ಒತ್ತಾಯಿಸಿ, ಯಲ್ಲಾಪುರ ನಗರ ಬೈಪಾಸ್‌ ರಸ್ತೆ ಹೋರಾಟ ಸಮಿತಿ ವತಿಯಿಂದ ಡಿ.11 ರಂದು ಮೆರವಣಿಗೆ ಮೂಲಕ ತಹಸೀಲ್ದಾರ್‌ ಕಛೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ನಾಗರಿಕ ವೇದಿಕೆ ಅಧ್ಯಕ್ಷ ಹಾಗೂ ಹೋರಾಟ ಸಮಿತಿ ಸಂಚಾಲಕ ರಾಮು ನಾಯ್ಕ ತಿಳಿಸಿದ್ದಾರೆ.

VISTARANEWS.COM


on

Pressmeet for Demand for construction of bypass road in Yallapur
ಯಲ್ಲಾಪುರ ಪಟ್ಟಣದಲ್ಲಿ ನಾಗರಿಕ ವೇದಿಕೆ ಅಧ್ಯಕ್ಷ ಹಾಗೂ ಯಲ್ಲಾಪುರ ನಗರ ಬೈಪಾಸ್‌ ರಸ್ತೆ ಹೋರಾಟ ಸಮಿತಿ ಸಂಚಾಲಕ ರಾಮು ನಾಯ್ಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
Koo

ಯಲ್ಲಾಪುರ: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ (Bypass Road) ನಿರ್ಮಿಸುವ ಕುರಿತು ಒತ್ತಾಯಿಸಿ, ಡಿ.11 ರಂದು ಮೆರವಣಿಗೆ ಮೂಲಕ ತಹಸೀಲ್ದಾರ್‌ ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಲು ಯಲ್ಲಾಪುರ ನಗರ ಬೈಪಾಸ್‌ ರಸ್ತೆ ಹೋರಾಟ ಸಮಿತಿ ವತಿಯಿಂದ ತೀರ್ಮಾನಿಸಲಾಗಿದೆ ಎಂದು ನಾಗರಿಕ ವೇದಿಕೆ ಅಧ್ಯಕ್ಷ ಹಾಗೂ ಹೋರಾಟ ಸಮಿತಿ ಸಂಚಾಲಕ ರಾಮು ನಾಯ್ಕ ತಿಳಿಸಿದರು.

ಪಟ್ಟಣದ ಫಾರೆಸ್ಟ್‌ ಐ.ಬಿ.ಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿಯು ಪಟ್ಟಣದ ಮಧ್ಯಭಾಗದಲ್ಲಿ ಹಾದು ಹೋಗಿದ್ದು, ಪ್ರತಿನಿತ್ಯ ಸಂಚರಿಸುವ ಸಾವಿರಾರು ವಾಹನಗಳಿಂದಾಗಿ ಸಾರ್ವಜನಿಕರ, ವಿದ್ಯಾರ್ಥಿಗಳ ಹಾಗೂ ಸ್ಥಳೀಯ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಪಟ್ಟಣದಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಈಗಾಗಲೇ ಅಂಕೋಲಾ ತಾಲೂಕಿನ ಬಾಳೆಗುಳಿವರೆಗೆ ಚತುಷ್ಪಥ ರಸ್ತೆ ಆಗಿದ್ದು, ಮುಂದುವರೆದು ಯಲ್ಲಾಪುರದ ಮೂಲಕ ಈ ರಸ್ತೆ ಹಾದು ಹೋದಲ್ಲಿ, ಯಲ್ಲಾಪುರ ನಗರದಲ್ಲಿ ನಡೆದಾಡುವುದು ಸಹ ಕಷ್ಟ ಸಾಧ್ಯವಾಗಲಿದೆ.

ಇದನ್ನೂ ಓದಿ: T20 World Cup 2024:​ ನೂತನ ಲೋಗೋ ವಿನ್ಯಾಸಕ್ಕೆ ಫಿದಾ ಆದ ಕ್ರಿಕೆಟ್​ ಅಭಿಮಾನಿಗಳು

ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಮುಂಚಿತವಾಗಿಯೇ ಬೈಪಾಸ್ ನಿರ್ಮಾಣಕ್ಕೆ ಸರ್ಕಾರ ಆದೇಶಿಸಬೇಕು. ಈ ಪ್ರಯುಕ್ತ ಡಿ. 11 ರಂದು ಬೆಳಗ್ಗೆ 10 ಗಂಟೆಗೆ ವೈಟಿಎಸ್‌ಎಸ್‌ ಮೈದಾನದಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಪಾಲಕರು, ಅಂಗಡಿಕಾರರೆಲ್ಲ ಸೇರಿ ಬೃಹತ್ ಮೆರವಣಿಗೆಯಲ್ಲಿ ಸಾಗಿ ತಹಶೀಲ್ದಾರರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಸಾರ್ವಜನಿಕರು ಸಹ ತಮ್ಮ ಮಕ್ಕಳ ಸುರಕ್ಷತೆಗಾಗಿ, ಸ್ವಯಂ ಪ್ರೇರಣೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸರ್ಕಾರಕ್ಕೆ ಅಗತ್ಯತೆಯ ಕುರಿತು ಮನದಟ್ಟು ಮಾಡಲು ಪಾಲ್ಗೊಳ್ಳುವಂತೆ ಕೋರಿದರು.

ಸಮಿತಿಯ ಪ್ರಮುಖರಾದ ರವಿ ಶ್ಯಾನಭಾಗ್ ಮಾತನಾಡಿ, ಹೆದ್ದಾರಿಯ ಅಕ್ಕ ಪಕ್ಕದ ಅಂಗಡಿಕಾರರು ಹೆಚ್ಚಿನದಾಗಿ ಈ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಅವಶ್ಯಕತೆ ಇದೆ. ಬೈಪಾಸ್ ನಿರ್ಮಾಣವಾಗದೆ ಹೆದ್ದಾರಿ ಅಗಲೀಕರಣವಾದಲ್ಲಿ, ಯಲ್ಲಾಪುರದ ಬಹುತೇಕ ಅಂಗಡಿಗಳು ನೆಲೆ ಕಳೆದುಕೊಳ್ಳಲಿದೆ. ಹೀಗಾಗಿ ಮುಂದಿನ ಭವಿಷ್ಯಕ್ಕಾಗಿ ಪಾಲ್ಗೊಳ್ಳಬೇಕು. ಬೈಪಾಸ್ ನಿರ್ಮಾಣಕ್ಕೆ ಸಮಯ ಆಗಲಿದ್ದು, ಅಲ್ಲಿಯವರೆಗೆ ಟ್ರಾಫಿಕ್ ಪೊಲೀಸರ ತಂಡ ಪ್ರಾರಂಭಿಸಿ, ಟ್ರಾಫಿಕ್ ನಿರ್ವಹಣೆಯ ಕಾರ್ಯ ಮಾಡಬೇಕಿದೆ ಎಂದರು.

ಇದನ್ನೂ ಓದಿ: The Nandi Awards: ನಂದಿ ಫಿಲ್ಮ್‌ ಅವಾರ್ಡ್; ಅತ್ಯುತ್ತಮ ನಟ, ನಿರ್ದೇಶಕ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲ ಬೀರಣ್ಣ ನಾಯಕ ಮೊಗಟಾ,‌ ಎ.ಎ. ಶೇಖ್‌, ಮಹ್ಮದ್‌ ಗೌಸ್‌, ವಕೀಲೆ ಬೇಬಿ ಅಮಿನಾ, ಸುರೇಶ್ ಬೊರಕರ, ಪ್ರಭಾಕರ ನಾಯ್ಕ, ಮಾಧವ ನಾಯಕ, ದಾಸಿಂತ್ ಫರ್ನಾಂಡಿಸ್, ಉಲ್ಲಾಸ್ ಮಹಾಲೆ, ವೇಣುಗೋಪಾಲ ಮದ್ಗುಣಿ, ಜಗನ್ನಾಥ ರೇವಣಕರ ಇದ್ದರು.

Continue Reading

ಆರೋಗ್ಯ

ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ; ಉ.ಕ ಜಿಲ್ಲಾ ಶಾಸಕರಲ್ಲೇ ಒಡಕು! ತಮ್ಮ ತಾಲೂಕಿಗೇ ಬೇಕೆಂದು ಸದನದಲ್ಲಿ ಕಿತ್ತಾಟ

Super Speciality Hospital : ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಶಾಸಕರಲ್ಲೇ ಒಡಕು ಮೂಡಿದೆ. ನನ್ನ ತಾಲೂಕಿಗೆ ಕೊಡಿ, ನನ್ನ ತಾಲೂಕಿಗೆ ಕೊಡಿ ಎಂದು ವಿಧಾನ ಮಂಡಲ ಅಧಿವೇಶನದಲ್ಲಿ ಬೇಡಿಕೆ ಇಟ್ಟಿದ್ದಾರೆ. ಕಾರವಾರ ಶಾಸಕ ಸತೀಶ್ ಸೈಲ್‌, ಕುಮಟಾ ಶಾಸಕ ದಿನಕರ್ ಶೆಟ್ಟಿ, ಶಿರಸಿ ಶಾಸಕ ಭೀಮಣ್ಣ ನಾಯ್ಕ್, ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ತಮ್ಮ ತಮ್ಮ ತಾಲೂಕಿಗೆ ಬೇಕು ಎಂದು ಕೇಳಿದ್ದಾರೆ.

VISTARANEWS.COM


on

super speciality hospital in Uttara Kannada District
Koo

ಬೆಳಗಾವಿ: ಉತ್ತರ ಕನ್ನಡ ಜಿಲ್ಲೆಯ (Uttara Kannada District) ದಶಕಗಳ ಬೇಡಿಕೆಯಾಗಿದ್ದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ (Super Speciality Hospital) ಕನಸು ಸದ್ಯಕ್ಕೆ ಈಡೇರುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಕೊನೇ ಬಜೆಟ್‌ನಲ್ಲಿ ಕುಮಟಾದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದರು. ಇದಕ್ಕಾಗಿ ಕುಮಟಾದಲ್ಲಿ ಜಾಗವನ್ನೂ ಗುರುತಿಸಿ ಓಕೆ ಮಾಡಲಾಗಿತ್ತು. ಆದರೆ, ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಕಳೆದ ಬಜೆಟ್‌ನಲ್ಲಿ (Karnataka budget 2023) ಅನುದಾನ ನೀಡಿರಲಿಲ್ಲ. ಈಗ ಜಿಲ್ಲೆಯ ಶಾಸಕರಲ್ಲೇ ಒಡಕು ಮೂಡಿದೆ. ನನ್ನ ತಾಲೂಕಿಗೆ ಕೊಡಿ, ನನ್ನ ತಾಲೂಕಿಗೆ ಕೊಡಿ ಎಂದು ವಿಧಾನ ಮಂಡಲ ಅಧಿವೇಶನದಲ್ಲಿ (Belagavi Winter Session) ಬೇಡಿಕೆ ಇಟ್ಟಿದ್ದಾರೆ. ಕಾರವಾರ ಶಾಸಕ ಸತೀಶ್ ಸೈಲ್‌, ಕುಮಟಾ ಶಾಸಕ ದಿನಕರ್ ಶೆಟ್ಟಿ, ಶಿರಸಿ ಶಾಸಕ ಭೀಮಣ್ಣ ನಾಯ್ಕ್, ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ತಮ್ಮ ತಮ್ಮ ತಾಲೂಕಿಗೆ ಬೇಕು ಎಂದು ಕೇಳಿದ್ದಾರೆ.

ವಿಧಾನ ಪರಿಷತ್‌ ಕಲಾಪ ವೇಳೆ ಕಾರವಾರ ಶಾಸಕ ಸತೀಶ್‌ ಸೈಲ್‌ ಮಾತನಾಡಿ, ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕೇ ಬೇಕು. ಹೀಗಾಗಿ ಸದ್ಯಕ್ಕೆ ಕಾರವಾರದಲ್ಲಿ ಮಾಡಿಕೊಡಿ. ನಂತರ ಉತ್ತರ ಕನ್ನಡದ ಬೇರೆ ಪ್ರದೇಶದಲ್ಲಿ ನಿರ್ಮಾಣ ಮಾಡಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Road Accident : ಆಯತಪ್ಪಿ ಬಿದ್ದ ಸವಾರನ ಮೇಲೆ ಹರಿದ ಲಾರಿ! ತುಂಡಾದ ದೇಹ

ಇದರಿಂದ ಅಸಮಾಧಾನಗೊಂಡ ಕುಮಟಾ ಶಾಸಕ ದಿನಕರ್ ಶೆಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಬೇಕು. ಈಗಾಗಲೇ ಈ ಬಗ್ಗೆ ಒಮ್ಮೆ ನಿರ್ಣಯ ಕೂಡಾ ಆಗಿದೆ. ಅಲ್ಲದೆ, ಸ್ಥಳವನ್ನೂ ಗುರುತಿಸಲಾಗಿದ್ದು, ಎಲ್ಲರೂ ಆಗ ಒಪ್ಪಿಗೆ ನೀಡಿದ್ದರು. ಹೀಗಾಗಿ ಕುಮಟಾದಲ್ಲಿಯೇ ಆಗಬೇಕು. ಇದು ಜಿಲ್ಲೆಯ ಹೃದಯ ಸ್ಥಳ ಆಗಿರುವುದರಿಂದ ಜಿಲ್ಲೆಯ ಎಲ್ಲರಿಗೂ ಇಲ್ಲಿಗೆ ಬರಲು ಅನುಕೂಲ ಆಗಲಿದೆ ಎಂದು ಆಗ್ರಹಿಸಿದರು.

ಆಗ ಶಿರಸಿ ಶಾಸಕ ಭೀಮಣ್ಣ ನಾಯ್ಕ್ ಮಾತನಾಡಿ, ಶಿರಸಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಿ ಎಂದು ಆಗ್ರಹಿಸಿದ್ದಾರೆ. ಅದಕ್ಕೆ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ಅವರು, ಘಟ್ಟದ ಮೇಲೊಂದು, ಘಟ್ಟದ ಕೆಳಗೊಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಒತ್ತಾಯ ಮಾಡಿದರು. ಹೀಗಾಗಿ ತಮ್ಮ ತಮ್ಮ ಕ್ಷೇತ್ರಗಳಲ್ಲೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂಬ ಡಿಮ್ಯಾಂಡ್‌ ಉತ್ತರ ಕನ್ನಡ ಜಿಲ್ಲೆಯ ಎಲ್ಲ ಶಾಸಕರಿಂದಲೂ ಕೇಳಿಬಂತು.

ಇದಕ್ಕೆ ಸಚಿವ ಶರಣ ಪ್ರಕಾಶ್ ಪಾಟೀಲ್ ಉತ್ತರ ನೀಡಿ, ಬಹಳ ದಿನಗಳಿಂದ ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬೇಡಿಕೆ ಇದೆ. ಕಾರವಾರದ ಮೆಡಿಕಲ್ ಕಾಲೇಜಿನಲ್ಲಿ ಮಾಡಬೇಕು ಎಂಬ ಪ್ರಯತ್ನ ನಡೆದಿದೆ. ಆದರೆ, ಕಾರವಾರದಲ್ಲಿ ಅಗತ್ಯ ವೈದ್ಯ ಹುದ್ದೆಗಳಿಗೆ ಎರಡು ಸಲ ಕಾಲ್ ಫಾರ್ ಮಾಡಿದರೂ ಯಾರೂ ಅರ್ಜಿ ಹಾಕಿಲ್ಲ. ಮತ್ತೊಮ್ಮೆ ವೈದ್ಯ ಹುದ್ದೆಗಳಿಗೆ ಆಹ್ವಾನ ನೀಡಲಾಗುತ್ತದೆ. ಈ ಕೆಲಸವಾದರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸುಲಭವಾಗಲಿದೆ ಎಂದು ಹೇಳಿದರು.

ಉ.ಕ. ಜನರಿಂದ ನಡೆದಿದ್ದ ಆಂದೋಲನ

ಉತ್ತರ ಕನ್ನಡ ಜಿಲ್ಲೆಯು ಭೌಗೋಳಿಕವಾಗಿ ಬಹಳ ದೊಡ್ಡದಿರುವ ಕಾರಣ, ಅಪಘಾತವಾದರೆ ಇಲ್ಲವೇ ತುರ್ತು ಚಿಕಿತ್ಸೆ ಬೇಕಿದ್ದರೆ ಪಕ್ಕದ ಮಂಗಳೂರು, ಗೋವಾ ಇಲ್ಲವೇ ಹುಬ್ಬಳ್ಳಿಯಂತಹ ಕಡೆಗಳಿಗೆ ಹೋಗಬೇಕು. ಇದರಿಂದ ಸಾಕಷ್ಟು ಜೀವ ಹಾನಿಯಾಗುತ್ತಲಿದೆ. ರಾಜ್ಯಕ್ಕೆ ವಿದ್ಯುತ್‌ ಕೊಟ್ಟ ಜಿಲ್ಲೆಯ ಜನರಿಗೆ ಕನಿಷ್ಠ ಮೂಲ ಸೌಕರ್ಯವೂ ಇಲ್ಲದಂತೆ ಆಗಿದ್ದು, ಕೊನೇ ಪಕ್ಷ ಒಂದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನಾದರೂ ನೀಡಬೇಕು ಎಂದು ಈಚೆಗೆ ಭಾರಿ ಹೋರಾಟ ನಡೆದಿತ್ತು.

ಈ ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಮೇಲೆ ಸಾಕಷ್ಟು ಒತ್ತಡವನ್ನು ಹೇರಲಾಗಿತ್ತು. ಹೀಗಾಗಿ ಆಗಿನ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಅವರು ಉತ್ತರ ಕನ್ನಡ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಸಭೆ ನಡೆಸಿದ್ದಲ್ಲದೆ, ಜಿಲ್ಲೆಗೆ ಭೇಟಿ ನೀಡಿ ಸ್ಥಳಪರಿಶೀಲನೆಯನ್ನೂ ನಡೆಸಿದ್ದರು. ಕೊನೆಗೆ ಸರ್ಕಾರ ಸಹ ಬಜೆಟ್‌ನಲ್ಲಿ ಘೋಷಣೆ ಮಾಡಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸುವಾಗ ಇದರ ಪ್ರಸ್ತಾಪವೇ ಇರಲಿಲ್ಲ. ಇದು ಉತ್ತರ ಕನ್ನಡ ಜಿಲ್ಲೆಯ ಜನರ ಕೆಂಗಣ್ಣಿಗೆ ಗುರಿಯಾಗಿತ್ತು.

ಬಗೆಹರಿದಿದ್ದ ಜಾಗದ ಗೊಂದಲ

ಉತ್ತರ ಕನ್ನಡ ಜಿಲ್ಲೆಯ ಹೃದಯಭಾಗ ಕುಮಟಾದಲ್ಲಿ ಆಸ್ಪತ್ರೆ ನಿರ್ಮಾಣಕ್ಕಾಗಿ ಸರ್ವೆ ನಂಬರ್ 440ರಲ್ಲಿ 15.35 ಎಕರೆ ಜಾಗವನ್ನು ಮೀಸಲಿಡಲಾಗಿದೆ. ಹಿಂದೆ ಈ ಜಾಗವನ್ನು ಏಕಲವ್ಯ ಮಾದರಿ ವಸತಿ ಶಾಲೆ ನಿರ್ಮಾಣಕ್ಕಾಗಿ ಮೀಸಲಿಡಲಾಗಿತ್ತು. ಆಸ್ಪತ್ರೆ ನಿರ್ಮಾಣಕ್ಕೆ ಸೂಕ್ತ ಜಾಗವಾಗಿರುವ ಹಿನ್ನೆಲೆಯಲ್ಲಿ ಸದ್ಯ ಈ ಜಾಗವನ್ನು ಆಸ್ಪತ್ರೆಗಾಗಿ ನೀಡುವಂತೆ ಸೂಚನೆ ನೀಡಲಾಗಿತ್ತು. ವಸತಿ ಶಾಲೆ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ಪರ್ಯಾಯ ಜಾಗವನ್ನು ಒದಗಿಸುವ ಭರವಸೆಯನ್ನು ನೀಡಲಾಗಿತ್ತು.

ಇದನ್ನೂ ಓದಿ: NPS Cancellation: ರಾಜ್ಯದಲ್ಲಿ ಹಳೇ ಪಿಂಚಣಿ ಶೀಘ್ರ ಜಾರಿ? 10 ದಿನದಲ್ಲಿ ಸಮಿತಿ ಪುನಾರಚನೆ: ಕೃಷ್ಣ ಬೈರೇಗೌಡ

ವಸತಿ ಶಾಲೆಯ ಜಾಗ ಆಸ್ಪತ್ರೆಗೆ

ಉತ್ತರ ಕನ್ನಡ ಜಿಲ್ಲಾಡಳಿತವು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಏಕಲವ್ಯ ವಸತಿ ಶಾಲೆಗೆ ಮೀಸಲಿರಿಸಲಾಗಿದ್ದ ಜಾಗವನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ನೀಡುವಂತೆ ಇಲಾಖೆಗೆ ಕಳೆದ ವರ್ಷ ಪತ್ರ ಬರೆಯಲಾಗಿತ್ತು. ಆಗಿನ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಉತ್ತರ ಕನ್ನಡದ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದರು. ಅವರು ಆ ಜಾಗವನ್ನು ಸರ್ಕಾರಕ್ಕೆ ಹಿಂದಿರುಗಿಸಲು ಅನುಮತಿ ನೀಡಿದ್ದರು. ಅದರಂತೆ ಏಕಲವ್ಯ ವಸತಿ ಶಾಲೆಗಾಗಿ ನಿಗದಿಪಡಿಸಿ ಇರಿಸಲಾಗಿದ್ದ 17 ಎಕರೆ 14 ಗುಂಟೆ ಜಮೀನಿನಲ್ಲಿ, 15 ಎಕರೆ 35 ಗುಂಟೆಯಷ್ಟು ಪ್ರದೇಶವನ್ನು ಸರ್ಕಾರಕ್ಕೆ ಹಿಂದಿರುಗಿಸಿತ್ತು. ಜತೆಗೆ ಏಕಲವ್ಯ ವಸತಿ ಶಾಲೆಗೆ ಪರ್ಯಾಯ ಜಾಗ ಒದಗಿಸುವಂತೆ ಜಿಲ್ಲಾಡಳಿತಕ್ಕೆ ಷರತ್ತು ವಿಧಿಸಿ, ಆ ಪ್ರದೇಶವನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಕಾಯ್ದಿರಿಸಲು ಸರ್ಕಾರದ ಆಪ್ತ ಕಾರ್ಯದರ್ಶಿಗಳು ಆದೇಶದಲ್ಲಿ ತಿಳಿಸಿದ್ದರು.

Continue Reading

ಉಡುಪಿ

Karnataka Weather : ಮತ್ತೆ ಬದಲಾಯ್ತು ವಾತಾವರಣ; ಮಳೆ ಹೋಯ್ತು, ಬಿಸಿಲು ಬಂತು!

Karnataka Weather Forecast : ಮಿಚುಂಗ್‌ ಸೈಕ್ಲೋನ್‌ ಪ್ರಭಾವದಿಂದಾಗಿ ಕಳೆದೊಂದು ವಾರದಿಂದ ರಾಜ್ಯದ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇತ್ತು. ಇದೀಗ ಪ್ರಭಾವ ಕಡಿಮೆ ಆಗಿದ್ದು, ರಾಜ್ಯಾದ್ಯಂತ ಇನ್ನೆರಡು ದಿನಗಳು ಶುಷ್ಕ ವಾತಾವರಣ (Dry weather) ಇರಲಿದ್ದು, ಮಳೆಗೆ (Rain News) ಬ್ರೇಕ್‌ ಬಿದ್ದಿದೆ.

VISTARANEWS.COM


on

By

dry weather karnataka weather Forecast
Koo

ಬೆಂಗಳೂರು: ರಾಜ್ಯದ ಹಲವೆಡೆ ಮತ್ತೆ ವಾತಾವರಣ ಬದಲಾಗಿದೆ. ಮಳೆಗೆ ಹೋಗಿ ಮತ್ತೆ ಬಿಸಿಲು ಆವರಿಸುತ್ತಿದೆ. ಇನ್ನೆರಡು ದಿನಗಳು ರಾಜ್ಯದಲ್ಲಿ ಒಣಹವೆ (Dry weather) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಡಿ.7-8ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗೆ ಯಾವುದೇ ಮಳೆ ಮುನ್ಸೂಚನೆಯಿಲ್ಲ. ಬದಲಿಗೆ ಒಣಹವೆಯೇ ಮೇಲುಗೈ ಸಾಧಿಸಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Winter Cardigan Fashion: ಚಳಿಗಾಲದಲ್ಲಿ ಸ್ಟೈಲಿಶ್‌ ಆಗಿ ಕಾಣಿಸುವ ಕಾರ್ಡಿಗಾನ್‌ ಫ್ಯಾಷನ್‌

ಹಗುರ ಮಳೆಯಷ್ಟೇ!

ಇನ್ನೂ ದಕ್ಷಿಣ ಒಳನಾಡಿನ ಚಾಮರಾಜನಗರದಲ್ಲಿ ಮಾತ್ರ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ ಸೇರಿ ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಲ್ಲಿ ಒಣಹವೆ ಇರಲಿದೆ.

ಇತ್ತ ಮಲೆನಾಡಿನ ಹಾಸನ, ಕೊಡಗು, ಶಿವಮೊಗ್ಗ,ಚಿಕ್ಕಮಗಳೂರಲ್ಲೂ ಮಳೆ ಮುನ್ಸೂಚನೆ ಇಲ್ಲ. ಬಿಸಿಲಿನಿಂದ ಕೂಡಿರಲಿದೆ. ಇನ್ನು ಬೆಂಗಳೂರಲ್ಲಿ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -19 ಡಿ.ಸೆ
ಮಂಗಳೂರು: 33 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 18 ಡಿ.ಸೆ
ಗದಗ: 30 ಡಿ.ಸೆ – 18 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 26 ಡಿ.ಸೆ – 21 ಡಿ.ಸೆ
ಬೆಳಗಾವಿ: 29 ಡಿ.ಸೆ – 17 ಡಿ.ಸೆ
ಕಾರವಾರ: 35 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading
Advertisement
Dina Bhavishya
ಪ್ರಮುಖ ಸುದ್ದಿ56 mins ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Vistara News impact, Governmet to scrap 7 d rule of SCSP and TSP act
ಕರ್ನಾಟಕ6 hours ago

ವಿಸ್ತಾರ ನ್ಯೂಸ್ ಇಂಪ್ಯಾಕ್ಟ್; ಎಸ್ಸಿ, ಎಸ್ಟಿ‌ ಹಣ ಅನ್ಯ ಕಾರ್ಯದ ಬಳಕೆಗೆ ತಡೆ, ಕಾಯ್ದೆ ತಿದ್ದುಪಡಿಗೆ ಸಂಪುಟ ನಿರ್ಧಾರ

WPL Auction 2024
ಕ್ರಿಕೆಟ್6 hours ago

WPL Auction 2024: ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆಗೆ ಕೇವಲ 2 ದಿನ ಬಾಕಿ

Supreme Court will deliver judgment on Dece 11 about J and K Special Status scrap
ಕೋರ್ಟ್7 hours ago

ಆರ್ಟಿಕಲ್ 370 ರದ್ದು ಸಿಂಧುವೇ?; ಡಿ.11ಕ್ಕೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು

Pro Kabaddi
ಕ್ರೀಡೆ7 hours ago

Pro Kabaddi: ಗುಜರಾತ್ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಿದ ಪಾಟ್ನಾ

Is 500 note with star symbol is fake, What Fact Check says?
Fact Check8 hours ago

Fact Check: ಸ್ಟಾರ್ ಗುರುತಿರುವ 500 ರೂಪಾಯಿ ನೋಟು ನಕಲಿಯೇ?

kavya maran
ಐಪಿಎಲ್ 20238 hours ago

ಸ್ಟಾರ್​​ ಆಟಗಾರನ ಖರೀದಿಗೆ ಸ್ಕೆಚ್​ ಹಾಕಿದ ಸಖತ್ ಕ್ಯೂಟ್ ಓನರ್ ಕಾವ್ಯ ಮಾರನ್

Inauguration of Hulleshwar Jnana vikas Center at Yakshi Village
ಶಿವಮೊಗ್ಗ8 hours ago

Shivamogga News: ಯಕ್ಷಿ ಗ್ರಾಮದಲ್ಲಿ ಹುಲ್ಲೇಶ್ವರ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

14 Medium and Large Irrigation Projects Completed in Kalyana Karnataka says Minister Ramalinga reddy
ಕರ್ನಾಟಕ8 hours ago

ಕಲ್ಯಾಣ ಕರ್ನಾಟಕ ಭಾಗದಲ್ಲಿ 14 ಮಧ್ಯಮ, ಬೃಹತ್ ನೀರಾವರಿ ಯೋಜನೆಗಳು ಪೂರ್ಣ: ರಾಮಲಿಂಗಾರೆಡ್ಡಿ

More than a hundred people from Kiravatti have joined the Congress party
ಉತ್ತರ ಕನ್ನಡ9 hours ago

Uttara Kannada News: ಕಿರವತ್ತಿ ಭಾಗದ 100ಕ್ಕೂ ಹೆಚ್ಚು ಜನ ಕಾಂಗ್ರೆಸ್‌ಗೆ ಸೇರ್ಪಡೆ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Dina Bhavishya
ಪ್ರಮುಖ ಸುದ್ದಿ56 mins ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ11 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ12 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ18 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ1 day ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ2 days ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ2 days ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ2 days ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ2 days ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

ಟ್ರೆಂಡಿಂಗ್‌