ಶಿವಮೊಗ್ಗ: ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿರುವ 124 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ (Congress Ticket) ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಘೋಷಣೆಯಾಗಿದೆ.
ನಿರೀಕ್ಷೆಯಂತೆ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ ಮತ್ತು ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರ ಹೆಸರು ಮೊದಲ ಪಟ್ಟಿಯಲ್ಲಿದೆ. ಈ ಎರಡೂ ಕ್ಷೇತ್ರಗಳಲ್ಲಿ ಇವರು ಮಾತ್ರ ಅರ್ಜಿ ಸಲ್ಲಿಸಿದ್ದರು.
ಪಟ್ಟಿಯಲ್ಲಿ ಇರುವ ಇನ್ನೊಂದು ಕ್ಷೇತ್ರ ಸಾಗರ. ಇಲ್ಲಿ ಸಾಕಷ್ಟು ಆಕಾಂಕ್ಷಿಗಳಿದ್ದು, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ.ರಾಜನಂದಿನಿ ಮತ್ತು ಮಾಜಿ ಶಾಸಕ ಗೋಪಾಲಕೃಷ್ಣ ನಡುವೆ ಟಿಕೆಟ್ ಗಾಗಿ ಭಾರಿ ಪೈಪೋಟಿ ನಡೆದಿತ್ತು. ಮೊನ್ನೆಯಷ್ಟೇ ಇಬ್ಬರು ಬೆಂಬಲಿಗರು ಬೆಂಗಳೂರಿಗೆ ತೆರಳಿ ಟಿಕೆಟ್ ಗಾಗಿ ಪೈಪೋಟಿ ನಡೆಸಿದ್ದರು. ಕೊನೆಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನುಳಿದ ನಾಲ್ಕು ಕ್ಷೇತ್ರಗಳಲ್ಲಿ ಸಾಕಷ್ಟು ಆಕಾಂಕ್ಷಿಗಳಿದ್ದು, ತೀರ್ಥಹಳ್ಳಿ ಕ್ಷೇತ್ರದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್ ಎಂ ಮಂಜುನಾಥ್ ಗೌಡ ನಡುವೆ ತಿಕ್ಕಾಟವಿದೆ.
ಇದನ್ನೂ ಓದಿ: Pakistan Economic Crisis: ಚುನಾವಣೆ ನಡೆಸಲೂ ಕಾಸಿಲ್ಲ ನಮ್ಮ ಬಳಿ ಎಂದ ಪಾಕಿಸ್ತಾನ ರಕ್ಷಣಾ ಸಚಿವ