15 ದಿನದಲ್ಲಿ ಪ್ರಧಾನಿಗೆ ಮತ್ತೊಂದು ಪತ್ರ ಎಂದ ಕೆಂಪಣ್ಣ: ಎರಡನೇ ಸುತ್ತಿನ 40% ವಿವಾದ - Vistara News

ಕರ್ನಾಟಕ

15 ದಿನದಲ್ಲಿ ಪ್ರಧಾನಿಗೆ ಮತ್ತೊಂದು ಪತ್ರ ಎಂದ ಕೆಂಪಣ್ಣ: ಎರಡನೇ ಸುತ್ತಿನ 40% ವಿವಾದ

ಮೊದಲ ಬಾರಿಗೆ ಸರ್ಕಾರದ ವಿರುದ್ಧ 40% ಭ್ರಷ್ಟಾಚಾರ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘ, ಸಾಕಷ್ಟು ರಾಜಕೀಯ ಸಂಚಲನಕ್ಕೆ ಕಾರಣವಾಗಿತ್ತು. ಇದೀಗ ಎರಡನೇ ಸುತ್ತಿನ ವಿವಾದಕ್ಕೆ ವೇದಿಕೆ ಸಿದ್ಧವಾದಂತಾಗಿದೆ.

VISTARANEWS.COM


on

40 percent commission kempanna siddaramaiah
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಗುತ್ತಿಗೆದಾರರ ಸಂಘದ ಸದಸ್ಯರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳಿಗೆ ಗುತ್ತಿಗೆ ನೀಡುವಾಗ 40% ಕಮಿಷನ್‌ ಪಡೆಯಲಾಗುತ್ತಿದೆ ಎಂದು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ವಿವಿಧ ಇಲಾಖೆಗಳಿಗೆ ಪತ್ರ ಬರೆದಿದ್ದ ರಾಜ್ಯ ಗುತ್ತಿಗೆದಾರರ ಸಂಘ ಇದೀಗ ಎರಡನೇ ಹಂತದ ಪತ್ರ ಚಳವಳಿಗೆ ಮುಂದಾಗಿದೆ.

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹಾಗೂ ಸದಸ್ಯರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ತಮ್ಮ ಮನವಿಗೆ ಸರ್ಕಾರದಿಂದ ಸ್ಪಂದನೆ ಸಿಗುತ್ತಿಲ್ಲ ಎಂಬ ಕುರಿತು ಚರ್ಚೆ ನಡೆಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಒಂದು ವರ್ಷ ೨ ತಿಂಗಳಿಂದ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ಸಿಎಂ ಮಾತಿಗೂ ಇಲ್ಲಿ ಬೆಲೆ ಇಲ್ಲದಂತಾಗಿದೆ. ಮಾನ ಮರ್ಯಾದೆ ಇಲ್ಲದ ಪ್ರತಿನಿಧಿಗಳು ಇವರು ಎಂದು ಆಕ್ರೋಶ ವ್ಯಕ್ತಪಡಿಸಿದ ಕೆಂಪಣ್ಣ, ಪ್ರಧಾನಿ ಮೋದಿಯವರಿಗೆ 15 ದಿನದಲ್ಲಿ ಇನ್ನೊಂದು ಪತ್ರ ಬರೆಯುತ್ತಿದ್ದೇ‌ನೆ. ಭ್ರಷ್ಟಾಚಾರ ಮುಕ್ತ ಮಾಡುತ್ತೇವೆ ಎಂದು ಸ್ವತಂತ್ರ ದಿನಾಚರಣೆಯಂದು ಪ್ರಧಾನಿ ಹೇಳಿದ್ದಾರೆ. ಹಾಗಾಗಿ ಮತ್ತೊಂದು ಪತ್ರ ಬರೆಯುತ್ತೇನೆ ಎಂದರು.

ಇದನ್ನೂ ಓದಿ | ಬಿಜೆಪಿ ಮಂತ್ರಿಗಳು ಹಣ ಮಾಡುವುದರಲ್ಲಿ ಬ್ಯುಸಿ, ಇದು 40% ಸರ್ಕಾರ: ವೇಣುಗೋಪಾಲ್‌ ಕಿಡಿ

ಸಿದ್ದರಾಮಯ್ಯ ಅವರಿಗೆ ಯಾವುದೇ ದಾಖಲೆಯನ್ನೂ ಕೊಟ್ಟಿಲ್ಲ ಎಂದ ಕೆಂಪಣ್ಣ, ನ್ಯಾಯಾಂಗ ತನಿಖೆ ಮಾಡಿದರೆ ಮಾತ್ರ ದಾಖಲೆ ಕೊಡುತ್ತೇವೆ. ಈಗಲೇ ದಾಖಲೆಯನ್ನು ಬಹಿರಂಗಪಡಿಸಿದರೆ ಗುತ್ತಿಗೆದಾರರಿಗೆ ತೊಂದರೆ ಆಗುತ್ತದೆ. ಸಿದ್ದರಾಮಯ್ಯ ಅವರಿಗೆ ಒಟ್ಟಾರೆ ಮಾಹಿತಿ ನೀಡಿದ್ದೇವೆ, ಸದನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುತ್ತೇನೆ ಎಂದಿದ್ದಾರೆ ಎಂದು ಕೆಂಪಣ್ಣ ಹೇಳಿದರು.

ಸಿ.ಸಿ. ಪಾಟೀಲ್‌ ವಿರುದ್ಧ ನೇರ ಆರೋಪ

ಕರ್ನಾಟಕದಲ್ಲಿ ಎಲ್ಲ ಎಂಎಲ್‌ಎಗಳು, ಸಚಿವರು ಕರಪ್ಷನ್‌ನಲ್ಲಿ ನಂಬರ್ ಒನ್ ಇದಾರೆ ಎಂದ ಕೆಂಪಣ್ಣ, ಯಾರಿಗೂ ರ‍್ಯಾಂಕಿಂಗ್‌ ನೀಡಲು ಆಗುವುದಿಲ್ಲ. ನಮಗೆ ವರದಿ ಬಂದ ಪ್ರಕಾರ, ಕೊಲಾರ ಉಸ್ತುವಾರಿ ಸಚಿವ ಮುನಿರತ್ನ ಅವರು, ಕಮಿಷನ್ ಕಲೆಕ್ಟ್ ಮಾಡಿ ಕೊಡದಿದ್ದರೆ ಎಕ್ಸಿಕ್ಯುಟಿವ್ ಇಂಜಿನಿಯರ್‌ಗಳನ್ನು ಸಸ್ಪೆಂಡ್ ಮಾಡುತ್ತೇನೆ ಎಂದು ಹೆದರಿಸುತ್ತಿದ್ದಾರೆ. ಕೆಲವು ಸಚಿವರು ನಮ್ಮ ಸಂಘವನ್ನು ಒಡೆಯುವ ಪ್ರಯತ್ನವನ್ನೂ ಮಾಡುತ್ತಿದ್ದಾರೆ. ಪಿಡಬ್ಲುಡಿ ಸಚಿವರು ನಮ್ಮ ರಾಜ್ಯವನ್ನೇ ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಚಿವ ಸಿ.ಸಿ. ಪಾಟೀಲ್‌ ವಿರುದ್ಧ ನೇರ ಆರೋಪ ಮಾಡಿದರು. ಇನ್ನೂ 22 ಸಾವಿರ ಕೋಟಿ ರೂ. ಬಿಲ್ ಪೆಂಡಿಂಗ್ ಇದೆ. ಕೆಲವರದ್ದು ಮೂರು ವರ್ಷಗಳಿಂದ ಬಾಕಿ ಇದೆ. ನನ್ನ ಜೀವನದಲ್ಲಿ ನೋಡಿದ ಅತ್ಯಂತ ಭ್ರಷ್ಟ ಸರ್ಕಾರ ಇದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ | 40% ಕಮಿಷನ್ ತನಿಖೆ ಹಿಂದೆ ಷಡ್ಯಂತ್ರ : ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಆರೋಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಪ್ರಚಾರಕ್ಕೆ ದರ್ಶನ್‌ ಕರೆಸುವ ಡಿ.ಕೆ. ಸುರೇಶ್‌ ಪ್ಲ್ಯಾನ್‌ ಫ್ಲಾಪ್‌ ಮಾಡಿದ ಮುನಿರತ್ನ!

Lok Sabha Election 2024: ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಶಿವಕುಮಾರ್‌ ಎಲ್ಲಿಯೂ ಎಚ್ಚರ ತಪ್ಪಬಾರದು ಎಂಬ ನಿಟ್ಟಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರತಿ ಅಪಾರ್ಟ್‌ಮೆಂಟ್‌ಗಳಿಗೂ ಭೇಟಿ ನೀಡಿ ಮತ ಯಾಚನೆ ಮಾಡುತ್ತಿದ್ದಾರೆ. ಡಿಕೆಶಿ ಮುಂದಿನ ಸಿಎಂ ಎಂಬ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ. ಈ ನಡುವೆ ತಮ್ಮ ಪರವಾಗಿ ಖ್ಯಾತ ಸಿನಿಮಾ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಕರೆತರಲು ಡಿ.ಕೆ. ಸುರೇಶ್‌ ಪ್ಲ್ಯಾನ್‌ ಮಾಡಿದ್ದರು ಎನ್ನಲಾಗಿದೆ. ದರ್ಶನ್ ಬರುವ ಸುಳಿವು ಸಿಗುತ್ತಿದ್ದಂತೆ ಅಲರ್ಟ್‌ ಆದ ಮುನಿರತ್ನ ಅವರು ಯಾವುದೇ ಕಾರಣಕ್ಕೂ ಕ್ಷೇತ್ರಕ್ಕೆ ಬಂದು ಮತ ಯಾಚನೆ ಮಾಡಬಾರದು ಎಂದು ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

VISTARANEWS.COM


on

Lok Sabha Election 2024 Munirathna stops Darshan from campaigning for DK Suresh
Koo

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣಾ (Lok Sabha Election 2024) ಕಣ ಕರ್ನಾಟಕದ ಮಟ್ಟಿಗೆ ರಂಗೇರಿದೆ. ಹಲವು ಕಡೆ ಜಿದ್ದಾಜಿದ್ದಿನ ಹೋರಾಟ ಏರ್ಪಟ್ಟಿದೆ. ಹೈವೋಲ್ಟೇಜ್‌ ಕ್ಷೇತ್ರಗಳಲ್ಲಿ ಒಂದಾಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ (Bangalore Rural Lok Sabha constituency) ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ನೇರಾನೇರ ಪೈಪೋಟಿ ಏರ್ಪಟ್ಟಿದೆ. ಪರಸ್ಪರರನ್ನು ಸೋಲಿಸಲು ನಾನಾ ಕಸರತ್ತುಗಳು ನಡೆಯುತ್ತಿವೆ. ಈ ನಡುವೆ ಡಿಕೆ ಬ್ರದರ್ಸ್‌ (DK Brothers) ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌ ಹಾಕಲು ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಪಣತೊಟ್ಟಿದ್ದಾರೆ. ಪ್ರಚಾರಕ್ಕಾಗಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Challenging Star Darshan) ಅವರನ್ನು ಕರೆತರಲು ಡಿ.ಕೆ. ಸುರೇಶ್‌ (DK Suresh) ಪ್ಲ್ಯಾನ್‌ ಮಾಡಿದ್ದರು ಎಂಬುದು ತಿಳಿಯುತ್ತಿದ್ದಂತೆ ಚುರುಕಾದ ಮುನಿರತ್ನ, ದರ್ಶನ್‌ ಬಾರದಂತೆ ತಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್ ಅವರಿಗೆ ಸೋಲೇ ಇಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಈ ಬಾರಿ ಬಿಜೆಪಿ ಡಾ. ಸಿ.ಎನ್.‌ ಮಂಜುನಾಥ್‌ ಅವರನ್ನು ಕಣಕ್ಕಿಳಿಸುವ ಮೂಲಕ ಪ್ರಬಲ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಇದು ಕ್ಷೇತ್ರದಲ್ಲಿ ಸಂಚಲನವನ್ನುಂಟು ಮಾಡಿತ್ತು. ಅಲ್ಲದೆ, ಕಮಲ-ದಳ ನಾಯಕರು ಒಟ್ಟಾಗಿ ಡಿಕೆ ಸಹೋದರರನ್ನು ಸೋಲಿಸಲು ಪಣ ತೊಟ್ಟಿದ್ದರು.

ಲೆಕ್ಕಾಚಾರವೇ ಉಲ್ಟಾ

ಇದರಿಂದ ಎಚ್ಚೆತ್ತ ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಶಿವಕುಮಾರ್‌ ಎಲ್ಲಿಯೂ ಎಚ್ಚರ ತಪ್ಪಬಾರದು ಎಂಬ ನಿಟ್ಟಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರತಿ ಅಪಾರ್ಟ್‌ಮೆಂಟ್‌ಗಳಿಗೂ ಭೇಟಿ ನೀಡಿ ಮತ ಯಾಚನೆ ಮಾಡುತ್ತಿದ್ದಾರೆ. ಡಿಕೆಶಿ ಮುಂದಿನ ಸಿಎಂ ಎಂಬ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ. ಈ ನಡುವೆ ತಮ್ಮ ಪರವಾಗಿ ಖ್ಯಾತ ಸಿನಿಮಾ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಕರೆತರಲು ಡಿ.ಕೆ. ಸುರೇಶ್‌ ಪ್ಲ್ಯಾನ್‌ ಮಾಡಿದ್ದರು ಎನ್ನಲಾಗಿದೆ. ಕಾರಣ, ದರ್ಶನ್‌ ಅವರಿಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಅವರದ್ದೇ ಆದ ಫ್ಯಾನ್ಸ್‌ ಫಾಲೋವರ್ಸ್‌ಗಳಿದ್ದಾರೆ. ಒಂದು ವೇಳೆ ದರ್ಶನ್‌ ಬಂದು ಪ್ರಚಾರ ಮಾಡಿದರೆ ಯುವ ಸಮುದಾಯದ ಮತಗಳನ್ನು ಸೆಳೆಯಬಹುದು ಎಂಬ ಲೆಕ್ಕಾಚಾರಗಳನ್ನು ಹಾಕಿಕೊಳ್ಳಲಾಗಿತ್ತು ಎನ್ನಲಾಗಿದೆ.

ದರ್ಶನ್‌ ಬಾರದಂತೆ ತಡೆದ ಮುನಿರತ್ನ

ಬೆಂಗಳೂರು ಗ್ರಾಮಾಂತರಕ್ಕೆ ದರ್ಶನ್ ಬರುವ ಸುಳಿವು ಸಿಗುತ್ತಿದ್ದಂತೆ ಅಲರ್ಟ್‌ ಆದ ಮುನಿರತ್ನ ಅವರು ಯಾವುದೇ ಕಾರಣಕ್ಕೂ ಕ್ಷೇತ್ರಕ್ಕೆ ಬಂದು ಮತಯಾಚನೆ ಮಾಡಬಾರದು ಎಂದು ಕೇಳಿಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ದರ್ಶನ್‌ ಅವರ ಹಲವು ಸಿನಿಮಾಗಳಿಗೆ ನಿರ್ಮಾಪಕರಾಗಿರುವ ಮುನಿರತ್ನ ಅವರು ದರ್ಶನ್‌ಗೆ ಒಳ್ಳೆಯ ಸ್ನೇಹಿತರು ಕೂಡಾ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುನಿರತ್ನ ಅವರ ಮಾತನ್ನು ಒಪ್ಪಿ ದರ್ಶನ್‌ ಅವರು ಪ್ರಚಾರಕ್ಕೆ ಬರುವುದರಿಂದ ಹಿಂದೆ ಸರಿದರು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Lok Sabha Election 2024: ಏ. 26ಕ್ಕೆ ವೋಟ್‌ ಹಾಕಿ ಈ ಹೋಟೆಲ್‌ಗಳಿಗೆ ಬನ್ನಿ; ಏನೇ ತಿಂದ್ರೂ 10 ಪರ್ಸೆಂಟ್‌ ಡಿಸ್ಕೌಂಟ್‌!

ಮುನಿರತ್ನಗೆ ಜಿದ್ದು ಏಕೆ?

ಡಿಕೆ ಬ್ರದರ್ಸ್‌ ಅನ್ನು ಸೋಲಿಸಬೇಕು ಎಂದು ಶಾಸಕ ಮುನಿರತ್ನ ಅವರಿಗೆ ಜಿದ್ದು ತುಸು ಹೆಚ್ಚಾಗಿಯೇ ಇದೆ. ಇದಕ್ಕೆ ಕಾರಣ ಇಲ್ಲವೆಂದಲ್ಲ, ಕಳೆದ ಲೋಕಸಭಾ ಚುನಾವಣೆಯಲ್ಲಿ ಮುನಿರತ್ನ ಅವರನ್ನು ಸೋಲಿಸಬೇಕು ಎಂದು ಡಿಕೆ ಸಹೋದರರು ಪಣ ತೊಟ್ಟಿದ್ದರು. ಈ ನಿಟ್ಟಿನಲ್ಲಿ ಸಾಕಷ್ಟು ಕಸರತ್ತು ನಡೆಸಿದ್ದರು. ಆದರೆ, ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಮುನಿರತ್ನ ಗೆಲುವು ಸಾಧಿಸಿದ್ದರು. ಇನ್ನು ಕಾಂಗ್ರೆಸ್‌ ಸರ್ಕಾರ ಬಂದ ಬಳಿಕ ಆರ್‌ ಆರ್‌ ನಗರಕ್ಕೆ ಕೊಟ್ಟ ಅನುದಾನವನ್ನು ಡಿ.ಕೆ. ಶಿವಕುಮಾರ್‌ ವಾಪಸ್‌ ಪಡೆದುಕೊಂಡಿದ್ದರು. ಇದೆಲ್ಲ ರೀತಿಯಲ್ಲಿ ಮುನಿರತ್ನ ಅವರಿಗೆ ಡಿ.ಕೆ. ಸಹೋದರರ ಮೇಲೆ ಸಿಟ್ಟಿದೆ. ಹೀಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ಡಿಕೆ ಬ್ರದರ್ಸ್‌ಗೆ ಸೋಲಿನ ರುಚಿ ತೋರಿಸಲು ಪಣತೊಟ್ಟಿದ್ದಾರೆ ಎನ್ನಲಾಗಿದೆ.

Continue Reading

ಕರ್ನಾಟಕ

Karnataka Weather: ನಾಳೆ ಬೆಳಗಾವಿ, ಕೊಪ್ಪಳ ಸೇರಿ ವಿವಿಧೆಡೆ ಮಳೆ; ಮುಂದಿನ 4 ದಿನ ಶಾಖದ ಅಲೆ ತೀವ್ರತೆ ಹೆಚ್ಚಳ!

Karnataka Weather: ರಾಜ್ಯದಲ್ಲಿ ಏಪ್ರಿಲ್ 28 ರವರೆಗೆ ಶಾಖದ ಅಲೆ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.‌ ಹೀಗಾಗಿ ಜನರು ಎಚ್ಚರಿಕೆಯಿಂದ ಇರಬೇಕು.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 25ರಂದು ಬೆಳಗಾವಿ, ಕೊಪ್ಪಳ, ವಿಜಯಪುರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಇನ್ನು ಏಪ್ರಿಲ್ 28 ರವರೆಗೆ ಶಾಖದ ಅಲೆ (Heat wave) ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.‌

ಇಂದು (ಏ.24) ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗು ಸಂಭವಿಸುವ ಸಾಧ್ಯತೆಯಿದೆ. ಏ.26ರಿಂದ ಮೇ 1ರವರೆಗೆ ರಾಜ್ಯದಾದ್ಯಂತ ರಣ ಬಿಸಿಲಿನ ಹಿನ್ನೆಲೆ ಒಣಹವೆ ಇರುವ ಸಾಧ್ಯತೆ ಇದ್ದು, ಮುಂದಿನ 4 ದಿನ ಶಾಖದ ಅಲೆಯ ತೀವ್ರತೆ ಹೆಚ್ಚಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ | Char Dham Yatra 2024: ಈ ಬೇಸಿಗೆಯಲ್ಲಿ ಚಾರ್ ಧಾಮ್ ಯಾತ್ರೆಗೆ ಸಿದ್ಧರಾಗಿ! ನೋಂದಣಿ ಮಾಹಿತಿ ಇಲ್ಲಿದೆ

ಶಾಖದ ಅಲೆಯ ಎಚ್ಚರಿಕೆ

ಏ.24ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಶಾಖದ ಅಲೆ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.

ಏ.25ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.

ಏ.26ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.

ಏ.27ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.

ಏ.28ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಪಮಾನದ ಮುನ್ಸೂಚನೆ

ಏಪ್ರಿಲ್ 24 ರಿಂದ 28 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ | Karnataka Weather : ಸುಳಿಗಾಳಿ ಪ್ರಭಾವ; ರಭಸ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಎಚ್ಚರಿಕೆ

ಇನ್ನು ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಅಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37° C ಮತ್ತು 23 °C ಇರುವ ಸಾಧ್ಯತೆ ಇದೆ.

ಕೊಡಗಿನಲ್ಲಿ ಮನೆ ಮೇಲೆ ಮರ ಬಿದ್ದು ಮಹಿಳೆಗೆ ಗಾಯ

ಕೊಡಗು: ರಾಜ್ಯದಲ್ಲಿ ಬುಧವಾರ ಬೆಳಗ್ಗೆ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಹಾಗೂ ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ಮಳೆ ಸುರಿದಿದೆ. ಇನ್ನು ಮಂಗಳವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಯು ಕೊಡಗಿನಲ್ಲಿ ಅವಾಂತರ ಸೃಷ್ಟಿಸಿದ್ದು, ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.

ಪೊನ್ನಂಪೇಟೆ ತಾಲೂಕಿನ ಕಾರೆಕಂಡಿ ಹಾಡಿಯಲ್ಲಿ ಘಟನೆ ನಡೆದಿದೆ. ಗಾಳಿ ಮಳೆಗೆ ಮನೆಯ ಮೇಲೆ ಬೃಹತ್ ಮರ ಬಿದ್ದಿದ್ದರಿಂದ ಸೋಮ ಎಂಬುವವರ ಪತ್ನಿ ಭೋಜಮ್ಮ ಗಾಯಗೊಂಡಿದ್ದು, ಮನೆ ಬಳಿ ನಿಲ್ಲಿಸಿದ್ದ ಕಾರು, ಸ್ಕೂಟಿ, ಆಟೋರಿಕ್ಷಾ ಜಖಂಗೊಂಡಿವೆ. ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಗಾಯಗೊಂಡ ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

Continue Reading

Lok Sabha Election 2024

Lok Sabha Election 2024: ಏ. 26ಕ್ಕೆ ವೋಟ್‌ ಹಾಕಿ ಈ ಹೋಟೆಲ್‌ಗಳಿಗೆ ಬನ್ನಿ; ಏನೇ ತಿಂದ್ರೂ 10 ಪರ್ಸೆಂಟ್‌ ಡಿಸ್ಕೌಂಟ್‌!

Lok Sabha Election 2024: ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಹೀಗಾಗಿ ಮತ ಹಾಕುವವರಿಗೆ ಆಫರ್ ಮೇಲೆ ಆಫರ್‌ಗಳು ಬರುತ್ತಿವೆ. ಈ ಬಗ್ಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ಬೆನ್ನಲ್ಲೇ ಮತದಾನ ಮಾಡಿದವರಿಗೆ ಆಫರ್ ನೀಡಲಾಗಿದೆ. ಬಹುತೇಕ ಹೋಟೆಲ್‌ಗಳಲ್ಲಿ 10% ಆಫರ್ ನೀಡಲಾಗಿದೆ. ಮತ ಚಲಾವಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹೀಗಾಗಿ ನಮ್ಮದೊಂದು ಸಣ್ಣ ಪ್ರಯತ್ನ ಎಂದು ಹೋಟೆಲ್‌ ಮಾಲೀಕರು ಹೇಳುತ್ತಾರೆ.

VISTARANEWS.COM


on

Lok Sabha Election 2024 Vote on April 26 and get 10 percent discount on these hotels
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಮತದಾನ ಹೆಚ್ಚಳ ಮಾಡಲು ನಾನಾ ಕಸರತ್ತುಗಳು ನಡೆಯುತ್ತಿವೆ. ಸರ್ಕಾರಿ ಕಚೇರಿ, ಐಟಿ ಕಂಪನಿಗಳಿಗೆ ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ. ಇನ್ನು ಬೆಂಗಳೂರಿನಲ್ಲಿ ಕೆಲವು ಹೋಟೆಲ್‌ ಮಾಲೀಕರು ತಮ್ಮದೊಂದು ಪ್ರಯತ್ನಕ್ಕೆ ಕೈಹಾಕಿದ್ದಾರೆ. ಏಪ್ರಿಲ್‌ 26ರ ಮೊದಲ ಹಂತದ ಚುನಾವಣೆ ದಿನ ಬೆಂಗಳೂರಿನಲ್ಲಿ ಮತ ಹಾಕಿ, ತಮ್ಮ ಹೋಟೆಲ್‌ಗಳಿಗೆ ಬಂದರೆ ಶೇಕಡಾ 10ರಷ್ಟು ರಿಯಾಯಿತಿ (Discounts in Hotels) ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಮತ ಹಾಕಿ, ಬೆರಳು ತೋರಿಸಿ. ಪ್ರತಿ ಐಟಂ ಮೇಲೆ ಶೇಕಡಾ 10 ಡಿಸ್ಕೌಂಟ್‌ ಪಡೆಯಿರಿ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಹೀಗಾಗಿ ಮತ ಹಾಕುವವರಿಗೆ ಆಫರ್ ಮೇಲೆ ಆಫರ್‌ಗಳು ಬರುತ್ತಿವೆ. ಈ ಬಗ್ಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ಬೆನ್ನಲ್ಲೇ ಮತದಾನ ಮಾಡಿದವರಿಗೆ ಆಫರ್ ನೀಡಲಾಗಿದೆ. ಬಹುತೇಕ ಹೋಟೆಲ್‌ಗಳಲ್ಲಿ 10% ಆಫರ್ ನೀಡಲಾಗಿದೆ. ಮತ ಚಲಾವಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹೀಗಾಗಿ ಅವರಲ್ಲಿ ಜಾಗೃತಿ ಮೂಡಿಸಲು (Voter awareness) ನಮ್ಮದೊಂದು ಸಣ್ಣ ಪ್ರಯತ್ನ ಎಂದು ಹೋಟೆಲ್‌ ಮಾಲೀಕರು ಹೇಳುತ್ತಾರೆ.

ನಿಸರ್ಗ ಗ್ರ್ಯಾಂಡ್‌, ಕೆಫೆ ಉಡುಪಿ ರುಚಿ, ಅಯ್ಯಂಗಾರ್‌ ವೆನ್‌ ಫ್ರೆಶ್‌, ಕಾಮತ್‌ ಸೇರಿದಂತೆ ಹಲವು ಹೋಟೆಲ್‌ಗಳು ಆಫರ್‌ಗಳನ್ನು ನೀಡಿವೆ.

Lok Sabha Election 2024 Vote on April 26 and get 10 percent discount on these hotels

ಏ.26ರಂದು ಬೆಂಗಳೂರು ಸೇರಿ 3 ನಗರಗಳಲ್ಲಿ ಮತದಾರರಿಗೆ ರ‍್ಯಾಪಿಡೋದಿಂದ ಉಚಿತ ರೈಡ್‌ ಆಫರ್‌

ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಮತದಾನ ಪ್ರೋತ್ಸಾಹಿಸಲು ಉಚಿತ ಹಾಗೂ ರಿಯಾಯಿತಿ ದರದಲ್ಲಿ ಊಟ, ತಿಂಡಿ ವಿತರಣೆಗೆ ಹಲವು ಹೋಟೆಲ್‌ಗಳಲ್ಲಿ ಮುಂದಾಗಿದೆ. ಅದೇ ರೀತಿ ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಲು ಅನುಕೂಲವಾಗಲು ಭಾರತದ ಅಗ್ರಗಣ್ಯ ಪ್ರಯಾಣ ಅಪ್ಲಿಕೇಶನ್ ರ‍್ಯಾಪಿಡೋ ಸಂಸ್ಥೆ “ಸವಾರಿ ಜಿಮ್ಮೆದಾರಿ ಕಿ” ಉಪಕ್ರಮದ ಭಾಗವಾಗಿ ಏ.26ರಂದು ಬೆಂಗಳೂರು, ಮೈಸೂರು ಹಾಗೂ ಮಂಗಳೂರು ನಗರದಲ್ಲಿ ಮತದಾರರಿಗೆ ರ‍್ಯಾಪಿಡೋ ಉಚಿತ ಬೈಕ್‌ ಸವಾರಿ (Rapido Bike Taxi) ಒದಗಿಸುವಾಗಿ ಘೋಷಿಸಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ವಿಶೇಷಚೇತನರು ಮತ್ತು ಹಿರಿಯ ನಾಗರಿಕ ಮತದಾರರಿಗೆ ಉಚಿತ ಆಟೋ ಮತ್ತು ಕ್ಯಾಬ್ ರೈಡ್‌ ಸೌಲಭ್ಯ ಸಿಗಲಿದೆ.

ಭಾರತದ ಚುನಾವಣಾ ಆಯೋಗ (ಇಸಿಐ) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಹಯೋಗದೊಂದಿಗೆ ರ‍್ಯಾಪಿಡೋ, ಭಾರತದ ಸಾರ್ವತ್ರಿಕ ಚುನಾವಣೆ-2024 ಸಂದರ್ಭದಲ್ಲಿ ಬೆಂಗಳೂರಿನಲ್ಲಿರುವ ವಿಶೇಷಚೇತನರು ಮತ್ತು ಹಿರಿಯ ನಾಗರಿಕ ಮತದಾರರಿಗೆ ಉಚಿತ ಆಟೋ ಮತ್ತು ಕ್ಯಾಬ್ ರೈಡ್‌ ಒದಗಿಸಲು ನಿರ್ಧರಿಸಿದೆ. ಹೀಗಾಗಿ ಏ.26ರಂದು ಬೆಂಗಳೂರಿನ ಮತದಾರರು ರ‍್ಯಾಪಿಡೋ ಉಚಿತ ಸವಾರಿ ಅನುಕೂಲ ಪಡೆಯಬಹುದಾಗಿದೆ.

ಮತದಾನದ (ಏ.26) ದಿನದಂದು, ಮತದಾರರು ‘VOTENOW’ ಕೋಡ್ ಅನ್ನು ಬಳಸಿಕೊಂಡು ರ‍್ಯಾಪಿಡೋ ಅಪ್ಲಿಕೇಶನ್‌ನಲ್ಲಿ ಉಚಿತ ಸವಾರಿಗಳನ್ನು ಪಡೆಯಬಹುದು ಮತ್ತು ತಮ್ಮ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಬಹುದು. ಈ ಉಪಕ್ರಮವು ನಿವಾಸಿಗಳ ಮತದಾನದ ಹಕ್ಕು ಚಲಾವಣೆ ಸುಲಭಗೊಳಿಸುವ ಗುರಿ ಹೊಂದಿದೆ. ಚುನಾವಣಾ ದಿನದಂದು ಉಚಿತ ಸವಾರಿಗಳನ್ನು ಒದಗಿಸಲು 100ಕ್ಕೂ ಹೆಚ್ಚು ನಗರಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಕ್ಯಾಪ್ಟನ್‌ಗಳನ್ನು ರ‍್ಯಾಪಿಡೋ ನಿಯೋಜಿಸುತ್ತದೆ. ಭಾರತದ ಚುನಾವಣಾ ಆಯೋಗ ಬೆಂಬಲದೊಂದಿಗೆ, ರ‍್ಯಾಪಿಡೋ ಕರ್ನಾಟಕದ ಮತದಾರರಿಗೆ ಬೆಂಗಳೂರು, ಮೈಸೂರು ಮತ್ತು ಮಂಗಳೂರು ನಗರಗಳಾದ್ಯಂತ ಚುನಾವಣಾ ದಿನದಂದು ಉಚಿತ ಬೈಕ್ ಟ್ಯಾಕ್ಸಿ ಸವಾರಿಗಳನ್ನು ನೀಡಲಿದೆ.

ಕರ್ನಾಟಕ ರಾಜ್ಯ ಚುನಾವಣಾ ಆಯೋಗದೊಂದಿಗಿನ ರ‍್ಯಾಪಿಡೋ ಪಾಲುದಾರಿಕೆಯು ಉತ್ತಮ ಸಮಾಜಕ್ಕಾಗಿ ಧನಾತ್ಮಕ ಬದಲಾವಣೆಯನ್ನು ಪ್ರೇರೇಪಿಸುವ ಬದ್ಧತೆ ಹೊಂದಿದೆ. ಈ ಕುರಿತು ರ‍್ಯಾಪಿಡೋ ಸಹ-ಸಂಸ್ಥಾಪಕ ಪವನ್ ಗುಂಟುಪಲ್ಲಿ ಮಾತನಾಡಿ, “ಭಾರತೀಯ ಸಾರ್ವತ್ರಿಕ ಚುನಾವಣೆ 2024 ರಲ್ಲಿ ಮತದಾನ ಮಾಡುವ ಮೂಲಕ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನ ಪ್ರತಿಯೊಬ್ಬ ಮತದಾರರು ತಮ್ಮ ನಾಗರಿಕ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಲು ನಾವು ಈ ಉಪಕ್ರಮವನ್ನು ಕೈಗೊಳ್ಳುತ್ತಿದ್ದೇವೆ. ಬೆಂಗಳೂರಿನ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿಕೊಳ್ಳಲು ನಾವು ಲಭ್ಯವಿರುವ ಎಲ್ಲಾ ಸಂಪನ್ಮೂಲಗಳನ್ನು ನಿಯೋಜಿಸಿದ್ದೇವೆ. ವಿಶೇಷವಾಗಿ ವಿಶೇಷಚೇತನರು ಮತ್ತು ಹಿರಿಯ ನಾಗರಿಕ ಮತದಾರರು ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸಲು ಸಮಾನ ಅವಕಾಶ ಹೊಂದಿದ್ದಾರೆ ಎಂದು ನಾವು ನಿರ್ದಿಷ್ಟವಾಗಿ ಖಚಿತಪಡಿಸಿಕೊಳ್ಳಲು ಬಯಸುತ್ತೇವೆ. ಅವರಿಗೆ ಉಚಿತ ಆಟೋ ಮತ್ತು ಕ್ಯಾಬ್ ಸವಾರಿಗಳನ್ನು ವಿಸ್ತರಿಸುವ ಮೂಲಕ, ನಾವು ಒಳಗೊಳ್ಳುವಿಕೆ ಮತ್ತು ಸಾಮಾಜಿಕ ಜವಾಬ್ದಾರಿಗೆ ನಮ್ಮ ಬದ್ಧತೆಯನ್ನು ದ್ವಿಗುಣಗೊಳಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಮುಂದುವರೆದು, ಈ ಉಚಿತ ಸವಾರಿಗಳನ್ನು ನೀಡುವ ಮೂಲಕ, ನಾವು ಕರ್ನಾಟಕದಲ್ಲಿ ನಮ್ಮ ರ‍್ಯಾಪಿಡೋ ನಾಯಕರು ಕೇವಲ ಚಾಲಕರಿಗಿಂತ ಹೆಚ್ಚಿನ ಮತದಾರರು, ಹೆಚ್ಚಿನ ಮತದಾನವನ್ನು ಸಕ್ರಿಯಗೊಳಿಸುತ್ತಾರೆ ಮತ್ತು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಹೆಚ್ಚು ಪ್ರಾತಿನಿಧಿಕ ಚುನಾವಣಾ ವ್ಯವಸ್ಥೆಯನ್ನು ಉತ್ತೇಜಿಸುತ್ತಾರೆ ಎಂದರು.

ಕರ್ನಾಟಕ ರಾಜ್ಯ ಚುನಾವಣಾ ಆಯೋಗದೊಂದಿಗೆ ರ‍್ಯಾಪಿಡೋ ಪಾಲುದಾರಿಕೆಯು ಉತ್ತಮ ಸಮಾಜಕ್ಕಾಗಿ ಬದಲಾವಣೆಯನ್ನು ಪ್ರೇರೇಪಿಸುವ ಬ್ರಾಂಡ್ ಆಗಿರುವ ಅದರ ಬದ್ಧತೆಯನ್ನು ಒತ್ತಿಹೇಳುತ್ತದೆ. ಈ ರೀತಿಯ ಉಪಕ್ರಮಗಳ ಮೂಲಕ, ರ‍್ಯಾಪಿಡೋ ದೇಶಾದ್ಯಂತ ಜನರ ಜೀವನದಲ್ಲಿ ಅರ್ಥಪೂರ್ಣ ಬದಲಾವಣೆಯನ್ನು ಮಾಡುವ ತನ್ನ ಸಮರ್ಪಣೆಯನ್ನು ಪ್ರದರ್ಶಿಸುವುದನ್ನು ಮುಂದುವರೆಸಿದೆ. ಈ ಉಪಕ್ರಮವು ತಮ್ಮ ಮತ ಚಲಾಯಿಸುವ ಮೂಲಕ ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸಲು ಕರ್ನಾಟಕದ ಮತದಾರರ ಜನಸಂಖ್ಯೆಯನ್ನು ಸಶಕ್ತಗೊಳಿಸಲು ಮತ್ತು ಉತ್ತೇಜಿಸಲು ರ‍್ಯಾಪಿಡೋ ಅವರ ಸಮರ್ಪಣೆಯನ್ನು ಒತ್ತಿಹೇಳುತ್ತದೆ.

ಇದನ್ನೂ ಓದಿ | Bike Taxi Services: ಬೈಕ್ ಟ್ಯಾಕ್ಸಿ ಸವಾರರಿಗೆ ಕಿರುಕುಳ ನೀಡುವವರ ವಿರುದ್ಧ ಕ್ರಮಕ್ಕೆ ಹೈಕೋರ್ಟ್‌ ಸೂಚನೆ

ನಾಗರಿಕ ಒಗ್ಗೂಡುವಿಕೆ ಪೂರ್ವಭಾವಿ ಹೆಜ್ಜೆಯಲ್ಲಿ, ರ‍್ಯಾಪಿಡೋ ತನ್ನ ಎಲ್ಲಾ ಸಂಪನ್ಮೂಲಗಳನ್ನು ಭಾರತೀಯ ಚುನಾವಣಾ ಆಯೋಗದೊಂದಿಗೆ (ಇಸಿಐ) ಕೈಜೋಡಿಸುವ ಮೂಲಕ ಬೆಂಗಳೂರಿನ ಮತದಾರರಿಗೆ ಉಚಿತ ಬೈಕ್ ಟ್ಯಾಕ್ಸಿ, ಆಟೋ ಮತ್ತು ಕ್ಯಾಬ್ ರೈಡ್‌ಗಳನ್ನು ನೀಡುತ್ತಿದೆ

Continue Reading

ಕೊಪ್ಪಳ

Neha Murder Case: ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಗಂಗಾವತಿ ಬಂದ್; ಉತ್ತಮ ಪ್ರತಿಕ್ರಿಯೆ

Neha Murder Case: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತೈ ಖಂಡಿಸಿ, ಗಂಗಾವತಿಯ ಸಾರ್ವಜನಿಕ ಹಿತರಕ್ಷಣಾ ವೇದಿಕೆ ಬುಧವಾರ ಕರೆ ನೀಡಿದ್ದ ಗಂಗಾವತಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

VISTARANEWS.COM


on

Condemns Neha murder case Gangavathi bandh
Koo

ಗಂಗಾವತಿ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತ್ಯೆ (Neha Murder Case) ಖಂಡಿಸಿ, ಇಲ್ಲಿನ ಸಾರ್ವಜನಿಕ ಹಿತರಕ್ಷಣಾ ವೇದಿಕೆ ಬುಧವಾರ ಕರೆ ನೀಡಿದ್ದ ಗಂಗಾವತಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ನಗರದ ಪ್ರಮುಖ ವೃತ್ತ, ರಸ್ತೆಗಳಲ್ಲಿರುವ ಅಂಗಡಿ-ಮುಂಗಟ್ಟುಗಳನ್ನು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿದ ವ್ಯಾಪಾರಿಗಳು ಬಂದ್‌ಗೆ ಸಹಕಾರ ನೀಡಿದರು. ಅತ್ಯವಶ್ಯಕ ಸೇವೆಗಳಾದ ಹಾಲಿನ ಕೇಂದ್ರ, ಆರೋಗ್ಯ ಸೇವೆ, ಮೆಡಿಕಲ್ ಶಾಪ್, ತರಕಾರಿ ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು.

ಬಂದ್ ಕರೆ ನೀಡಿದ್ದ ಸಂಘಟನೆಯವರು, ಸಾರ್ವಜನಿಕ ಹಿತದೃಷ್ಟಿಯಿಂದ ಸಂಚಾರಕ್ಕೆ ಅಡ್ಡಿಪಡಿಸದ ಹಿನ್ನೆಲೆ ಜನರ ಓಡಾಟ ಸಹಜವಾಗಿತ್ತು.

ಇದನ್ನೂ ಓದಿ: Summer Tour: ಬೇಸಿಗೆ ಪ್ರವಾಸಕ್ಕೆ ಸೂಕ್ತ ಈ 5 ಅದ್ಭುತ ಗಿರಿಧಾಮಗಳು!

ನಗರದ ಪ್ರಮುಖ ವೃತ್ತ, ರಸ್ತೆಗಳಲ್ಲಿ ಬಹುತೇಕ ಅಂಗಡಿ-ಮುಂಗಟ್ಟು ಬಂದ್ ಆಗಿದ್ದವು. ಬಂದ್ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಬಳ್ಳಾರಿ ವಲಯದ ಐಜಿಪಿ ಆರ್.ಎಸ್. ಲೋಕೇಶ್‌ ಕುಮಾರ್, ಎಸ್ಪಿ ಯಶೋಧಾ ವಂಟೆಗೋಡೆ ಸ್ಥಳದಲ್ಲಿ ಬಿಡಾರ ಹೂಡಿದ್ದರು.

ಬೃಹತ್ ಮೆರವಣಿಗೆ

ಇದಕ್ಕೂ ಮೊದಲು ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತ್ಯೆ ಖಂಡಿಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ, ಸಾರ್ವಜನಿಕ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಎಪಿಎಂಸಿಯ ಮೊದಲ ಗೇಟ್‌ನಿಂದ ಮಹಾತ್ಮಗಾಂಧಿ ವೃತ್ತದವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.

ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಕನ್ನಡಪರ ಸಂಘಟನೆ, ವಿವಿಧ ಪಕ್ಷಗಳ ಮುಖಂಡರು, ಮಹಿಳಾ ಸಂಘಟನೆಗಳು, ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ: Namma Metro: ಏಪ್ರಿಲ್‌ 26ರಂದು ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ತಡರಾತ್ರಿವರೆಗೂ ಸೇವೆ ವಿಸ್ತರಣೆ

ಈ ಸಂದರ್ಭದಲ್ಲಿ ಮಾಜಿ ಸಂಸದ ಎಸ್. ಶಿವರಾಮಗೌಡ, ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ, ಜಿ. ವೀರಪ್ಪ, ಕಾಡಾದ ಮಾಜಿ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ರಾಘವೇಂದ್ರ ಶೆಟ್ಟಿ, ಶಂಕರೇಗೌಡ ಹೊಸಳ್ಳಿ, ಅಶ್ವಿನಿ ದೇಸಾಯಿ, ಮನೋಹರಸ್ವಾಮಿ, ಕವಿತಾ ಗುರುಮೂರ್ತಿ ಸೇರಿದಂತೆ ನಾನಾ ಸಮಾಜದ ಮುಖಂಡರು ಭಾಗಿಯಾಗಿದ್ದರು.

Continue Reading
Advertisement
Pratap Dudhat
ದೇಶ2 mins ago

ರಾಹುಲ್‌ ಗಾಂಧಿ ಗಂಡಸ್ತನ ತಿಳಿಯಲು ಅವರ ಜತೆ ನಿಮ್ಮ ತಾಯಿಯನ್ನು ಮಲಗಿಸಿ ಎಂದ ಕಾಂಗ್ರೆಸ್‌ ನಾಯಕ!

Lok Sabha Election 2024 Munirathna stops Darshan from campaigning for DK Suresh
Lok Sabha Election 202412 mins ago

Lok Sabha Election 2024: ಪ್ರಚಾರಕ್ಕೆ ದರ್ಶನ್‌ ಕರೆಸುವ ಡಿ.ಕೆ. ಸುರೇಶ್‌ ಪ್ಲ್ಯಾನ್‌ ಫ್ಲಾಪ್‌ ಮಾಡಿದ ಮುನಿರತ್ನ!

Money Guide
ಮನಿ-ಗೈಡ್34 mins ago

Money Guide: ಕ್ರೆಡಿಟ್‌ ಕಾರ್ಡ್‌ ಹೊಂದಿದ್ದೀರಾ? ವಂಚಕರ ಬಲೆಗೆ ಬೀಳದಿರಲು ಈ ಟಿಪ್ಸ್‌ ಫಾಲೋ ಮಾಡಿ

Karnataka Weather
ಕರ್ನಾಟಕ42 mins ago

Karnataka Weather: ನಾಳೆ ಬೆಳಗಾವಿ, ಕೊಪ್ಪಳ ಸೇರಿ ವಿವಿಧೆಡೆ ಮಳೆ; ಮುಂದಿನ 4 ದಿನ ಶಾಖದ ಅಲೆ ತೀವ್ರತೆ ಹೆಚ್ಚಳ!

Lok Sabha Election 2024 Vote on April 26 and get 10 percent discount on these hotels
Lok Sabha Election 202457 mins ago

Lok Sabha Election 2024: ಏ. 26ಕ್ಕೆ ವೋಟ್‌ ಹಾಕಿ ಈ ಹೋಟೆಲ್‌ಗಳಿಗೆ ಬನ್ನಿ; ಏನೇ ತಿಂದ್ರೂ 10 ಪರ್ಸೆಂಟ್‌ ಡಿಸ್ಕೌಂಟ್‌!

Actress Saree Fashion
ಫ್ಯಾಷನ್1 hour ago

Actress Saree Fashion: ಟ್ರೆಂಡಿ ಸನ್‌ ಶೇಡ್‌ ಸೀರೆಯಲ್ಲಿ ನಟಿ ತೇಜಸ್ವಿನಿ ಶರ್ಮಾ ಸಮ್ಮರ್‌ ಲುಕ್‌

Sachin Tendulkar Birthday
ಕ್ರೀಡೆ1 hour ago

Sachin Tendulkar Birthday: ಈ ಬಾರಿ ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಚಿನ್‌ ತೆಂಡೂಲ್ಕರ್‌; ವಿಡಿಯೊ ವೈರಲ್​

Condemns Neha murder case Gangavathi bandh
ಕೊಪ್ಪಳ1 hour ago

Neha Murder Case: ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಗಂಗಾವತಿ ಬಂದ್; ಉತ್ತಮ ಪ್ರತಿಕ್ರಿಯೆ

Voter Slip
Lok Sabha Election 20241 hour ago

Voter Slip: ಮತದಾನಕ್ಕೆ ಇನ್ನೊಂದೇ ದಿನ ಬಾಕಿ; ವೋಟರ್ ಸ್ಲಿಪ್ ಸಿಕ್ಕಿಲ್ಲವೇ? ಮೊಬೈಲ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಿ

Lok Sabha Election 2024
Lok Sabha Election 20241 hour ago

Lok Sabha Election 2024: ಚುನಾವಣಾ ಕಣಕ್ಕೆ ಧುಮುಕಿದ ಖಲಿಸ್ತಾನಿ ನಾಯಕ ಅಮೃತ್​ಪಾಲ್​ ಸಿಂಗ್‌; ಯಾವ ಕ್ಷೇತ್ರ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ15 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌