Site icon Vistara News

Corona Alert: ರಾಜ್ಯಕ್ಕೆ‌ ಶುರುವಾಯ್ತು ಮತ್ತೆ ಕೊರೊನಾ ಆತಂಕ, 4 ಜಿಲ್ಲೆಗಳಿಗೆ ಅಲರ್ಟ್‌

corona case

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್‌ ಆತಂಕ ಶುರುವಾಗಿದ್ದು, ನಾಲ್ಕು ಜಿಲ್ಲೆಗಳಿಗೆ ಕೊರೋನಾ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಕಲಬುರಗಿ, ಮೈಸೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ಹೆಚ್ಚಿನ ಎಚ್ಚರ ವಹಿಸಲು ಸೂಚಿಸಲಾಗಿದೆ.

ಈ ಕುರಿತು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ರಾಜ್ಯದಲ್ಲಿ ಇತ್ತೀಚೆಗೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಶಿವಮೊಗ್ಗ, ಕಲಬುರಗಿ, ಮೈಸೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಕೆಲವು ವಾರಗಳಲ್ಲಿ ಹೆಚ್ಚಿನ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಕಳೆದ 5 ತಿಂಗಳಿಂದ ನಿಯಂತ್ರಣದಲ್ಲಿದ್ದ ಕೊರೊನಾ ಪ್ರಕರಣಗಳು ಮಾ.8ರಿಂದ ಕಳೆದ ಎರಡು ವಾರದ ಅವಧಿಯಲ್ಲಿ ಹೆಚ್ಚುತ್ತಿವೆ. ಪಾಸಿಟಿವಿಟಿ ದರ ಶೇ.2.77ಕ್ಕೆ ಏರಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಕೊರೊನಾ ನಿಯಂತ್ರಿಸಲು ಪರೀಕ್ಷೆ, ಪತ್ತೆ, ನಿಗಾ, ಚಿಕಿತ್ಸೆ ಹಾಗೂ ಲಸಿಕೆಗೆ ಒತ್ತು ಕೊಡಬೇಕು ಎಂದು ಸೂಚಿಸಲಾಗಿದೆ.

ಏನು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು?

ಇದನ್ನೂ ಓದಿ: kidney disease: ಕೊರೊನಾ ಕಾಣಿಸಿಕೊಂಡವರಲ್ಲಿ ಕಾಡುತ್ತಿದೆ ಕಿಡ್ನಿ ಸಮಸ್ಯೆ; ನಿರ್ಲಕ್ಷ್ಯ ಮಾಡಿದ್ರೆ ಅಪಾಯ ಗ್ಯಾರಂಟಿ

Exit mobile version