Coronavirus News: ಬಳ್ಳಾರಿಯಲ್ಲಿ ಕೋವಿಡ್‌ಗೆ ಮಹಿಳೆ ಬಲಿ - Vistara News

ಆರೋಗ್ಯ

Coronavirus News: ಬಳ್ಳಾರಿಯಲ್ಲಿ ಕೋವಿಡ್‌ಗೆ ಮಹಿಳೆ ಬಲಿ

Coronavirus News: ಬಳ್ಳಾರಿಯ 50 ವರ್ಷದ ಮಹಿಳೆ ಅಜುಂ ಮೃತ ಮಹಿಳೆಯಾಗಿದ್ದಾರೆ. ಇವರು ಕೊಮಾರ್ಬಿಡಿಟೀಸ್‌ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಕೋವಿಡ್‌ ಸೋಂಕಿಗೆ ತುತ್ತಾಗಿ ಒಂದು ವಾರದಲ್ಲೇ ಅವರು ಮೃತಪಟ್ಟಿದ್ದಾರೆ. ಒಂದೇ ದಿನದಲ್ಲಿ ಜಿಲ್ಲೆಯಲ್ಲಿ ಒಟ್ಟು 6 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ.

VISTARANEWS.COM


on

COVID 19 test
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಳ್ಳಾರಿ: ರಾಜ್ಯದಲ್ಲಿ ಮಂಗಳವಾರ 252 ಕೊರೊನಾ ಪ್ರಕರಣಗಳು (coronavirus News) ಪತ್ತೆಯಾಗಿದ್ದು, ಸೋಂಕಿನಿಂದ ಇಬ್ಬರು (Death in Corona) ಮೃತಪಟ್ಟಿದ್ದರು. ಇದೀಗ ಬಳ್ಳಾರಿಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಬಳ್ಳಾರಿಯ 50 ವರ್ಷದ ಮಹಿಳೆ ಅಜುಂ ಮೃತ ಮಹಿಳೆಯಾಗಿದ್ದಾರೆ. ಇವರು ಕೊಮಾರ್ಬಿಡಿಟೀಸ್‌ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಕೋವಿಡ್‌ ಸೋಂಕಿಗೆ ತುತ್ತಾಗಿ ಒಂದು ವಾರದಲ್ಲೇ ಅವರು ಮೃತಪಟ್ಟಿದ್ದಾರೆ. ಒಂದೇ ದಿನದಲ್ಲಿ ಜಿಲ್ಲೆಯಲ್ಲಿ ಒಟ್ಟು 6 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಮಂಗಳವಾರ ಬಳ್ಳಾರಿಯಲ್ಲಿ 5, ಸಂಡೂರಿನಲ್ಲಿ 1 ಪ್ರಕರಣ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಕ್ರಿಯ ಕೇಸ್‌ಗಳ ಸಂಖ್ಯೆ 34ಕ್ಕೆ ಏರಿಕೆ ಕಂಡಂತೆ ಆಗಿದೆ. ಬಳ್ಳಾರಿ 21, ಕಂಪ್ಲಿ 1, ಸಂಡೂರು 9, ಸಿರುಗುಪ್ಪದಲ್ಲಿ 3 ಕೇಸ್ ಸಕ್ರಿಯವಾಗಿದೆ. ಹೀಗಾಗಿ ಕೋವಿಡ್ ಟೆಸ್ಟ್ ಹೆಚ್ಚಳ ಮಾಡಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ನೂರಾರು ಕೈಗಾರಿಕೆಗಳನ್ನು ಹೊಂದಿರುವ ಬಳ್ಳಾರಿಯಲ್ಲಿ ಹೊರ ರಾಜ್ಯದವರು ಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಮರಣ ಪ್ರಮಾಣ ದರ ಶೇ. 0.79

ರಾಜ್ಯದಾದ್ಯಂತ ಒಟ್ಟು 7359 ಮಂದಿಗೆ COVID 19 ತಪಾಸಣೆ (RTPCR – 6514, RAT – 845) ನಡೆಸಲಾಗಿದ್ದು, ಈ ಪೈಕಿ 252 ಮಂದಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಅಂದರೆ 470 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಕೋವಿಡ್‌ ಪಾಸಿಟಿವಿಟಿ ದರ ಶೇ.3.42 ಇದ್ದು, ಮರಣ ಪ್ರಮಾಣ ದರ ಶೇ. 0.79 ವರದಿಯಾಗಿದೆ.

ಒಟ್ಟು 1031 ಸಕ್ರಿಯ ಪ್ರಕರಣಗಳ ಪೈಕಿ 962 ಮಂದಿ ಹೋಮ್ ಐಸೋಲೇಟ್‌ ಆಗಿದ್ದು, 69 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಸೋಮವಾರ ರಾಜ್ಯದಲ್ಲಿ 279 ಕೋವಿಡ್‌ ಪ್ರಕರಣ ದಾಖಲಾಗಿತ್ತು. 235 ಮಂದಿ ಡಿಸ್ಚಾರ್ಜ್‌ ಆಗಿದ್ದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ ಕೊರೊನಾ; ಕಾರ್ಯಕ್ರಮ ಕ್ಯಾನ್ಸಲ್

Governor Thaawar Chand Gehlot tests positive for COVID 19

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರಿಗೆ (Thaawar Chand Gehlot) ಕೊರೊನಾ ಧೃಡಪಟ್ಟಿದೆ. ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ ಎಂದು ತಿಳಿಸಿದ್ದಾರೆ. ರಾಜ್ಯಪಾಲರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಎಲ್ಲ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ | Hit and Run Case: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರ ಸಾವು

ಶೀಘ್ರ ಗುಣಮುಖರಾಗುವಂತೆ ಆರ್.‌ ಅಶೋಕ್‌ ಟ್ವೀಟ್

“ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್-19 ಸೋಂಕು ಧೃಢಪಟ್ಟಿರುವ ಸುದ್ದಿ ತಿಳಿಯಿತು. ಅವರು ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ಕಾರ್ಯೋನ್ಮುಖರಾಗಲಿ ಎಂದು ಹಾರೈಸುತ್ತೇನೆ” ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Sleeping Tips: ದಿನಕ್ಕೆಷ್ಟು ತಾಸು ನಿದ್ದೆ ಮಾಡುತ್ತೀರಿ ನೀವು? ಇದು ಗಂಭೀರ ವಿಷಯ!

ನಿದ್ದೆ ಹಾಳಾಗುವುದಕ್ಕೆ ಕಾರಣಗಳು (Sleeping Tips) ಸಾವಿರ ಇರಬಹುದು. ಆದರೆ ಅದನ್ನು ಸರಿ ಮಾಡಿಕೊಳ್ಳುವುದು ಅಸಾಧ್ಯವಲ್ಲ. ನಮ್ಮ ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಂಡರೆ, ರಾತ್ರಿ ಕಣ್ತುಂಬಾ ನಿದ್ರಿಸಬಹುದು. ನಿದ್ದೆ ಹಾಳಾಗುವುದಕ್ಕೆ ಕಾರಣಗಳು ಸಾವಿರ ಇರಬಹುದು. ಅದನ್ನು ಸರಿ ಮಾಡಿಕೊಳ್ಳುವುದು ಅಸಾಧ್ಯವಲ್ಲ. ನಮ್ಮ ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಂಡರೆ, ರಾತ್ರಿ ಕಣ್ತುಂಬಾ ನಿದ್ರಿಸಬಹುದು, ದೇಹ-ಮನಸ್ಸುಗಳನ್ನು ಸ್ವಸ್ಥವಾಗಿ ಇರಿಸಿಕೊಳ್ಳಬಹುದು.

VISTARANEWS.COM


on

Sleeping Tips
Koo

ಕುಂಭಕರ್ಣನ ಬಗ್ಗೆ ನಾವೆಲ್ಲ ಕೇಳಿದ್ದೇವೆ. ಅವನನ್ನು ಎಬ್ಬಿಸುವದಕ್ಕೆ ರಾವಣನ ಸೈನ್ಯವೇ ಒದ್ದಾಡಿದರೂ ತಬ್ಬಿದ ನಿದ್ರಾಂಗನೆಯನ್ನು ಆತ ಬಿಡುತ್ತಿರಲಿಲ್ಲವಂತೆ. ಈಗಿನವರೂ ಒಂಥರಾ ಕುಂಭಕರ್ಣರೇ! ಆದರೆ ಎಬ್ಬಿಸಲಿಕ್ಕಲ್ಲ, ನಿದ್ರಿಸುವುದಕ್ಕೇ ಹರಸಾಹಸ ಪಡಬೇಕು. ಲೋಕವೆಲ್ಲಾ ಬಂದು ಲಾಲಿ ಹಾಡಿದರೂ ನಿದ್ದೆ ಮಾತ್ರ ಸಾಧ್ಯವಿಲ್ಲ (Sleeping Tips) ಇಂದಿನವರಿಗೆ. ದಿಂಬಿಗೆ ತಲೆ ಕೊಡುವ ಕೆಲಸವನ್ನು ಸರಿಯಾಗಿ ಮಾಡದಿದ್ದರೆ ಬೇಗನೇ ʻಹಾಸಿಗೆ ಹಿಡಿಯುವುದುʼ ಸತ್ಯ ಎನ್ನುತ್ತಾರೆ ಆರೋಗ್ಯ ತಜ್ಞರು. ಭಾರತೀಯರಲ್ಲಿ ದಿನಕ್ಕೆ 6 ತಾಸುಗಳ ಗಾಢ ನಿದ್ರೆಗೂ ಗತಿಯಿಲ್ಲದವರು ಶೇ. 61 ಮಂದಿ ಎನ್ನುತ್ತದೆ ಇತ್ತೀಚಿನ ಸಮೀಕ್ಷೆಯೊಂದು. ಶೇ. 34ರಷ್ಟು ಜನ 4 ತಾಸುಗಳ ಗಾಢ ನಿದ್ದೆ ಮಾಡುತ್ತೇವೆ ಎಂದಿದ್ದರೆ ಉಳಿದವರಿಗೆ ಅದೂ ಅಲಭ್ಯವಾಗಿದೆ. ಇದಕ್ಕಿಂತ ಆತಂಕಕಾರಿ ಸಂಗತಿಯೆಂದರೆ 2022ಕ್ಕೆ ಹೋಲಿಸಿದರೆ, 2023ರಲ್ಲಿ ನಿದ್ದೆಬಿಡುವವರು, ನಿದ್ದೆಗೆಡುವವರ ಸಂಖ್ಯೆ ಶೇ. 50ರಷ್ಟು ಹೆಚ್ಚಾಗಿರುವುದು. ಈ ಪ್ರಮಾಣ 2024ಕ್ಕೆ ಮತ್ತೂ ಏರುತ್ತಿರುವುದಂತೂ ಇನ್ನಷ್ಟು ಕಳವಳಕ್ಕೆ ಕಾರಣವಾಗಿದೆ. ನಿದ್ದೆಗೆಟ್ಯೊ ಬುದ್ಧಿಗೆಟ್ಯೊ ಎನ್ನುವ ಹಳೆಯ ಜನರ ಮಾತನ್ನು ಮರೆಯುವಂತಿಲ್ಲ ಈಗ. ನಿದ್ದೆ ಹಾಳಾಗುವುದಕ್ಕೆ ಕಾರಣಗಳು ಸಾವಿರ ಇರಬಹುದು. ಅದನ್ನು ಸರಿ ಮಾಡಿಕೊಳ್ಳುವುದು ಅಸಾಧ್ಯವಲ್ಲ. ನಮ್ಮ ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಂಡರೆ, ರಾತ್ರಿ ಕಣ್ತುಂಬಾ ನಿದ್ರಿಸಬಹುದು, ದೇಹ-ಮನಸ್ಸುಗಳನ್ನು ಸ್ವಸ್ಥವಾಗಿ ಇರಿಸಿಕೊಳ್ಳಬಹುದು. ಯಾವುದು ಆ ಬದಲಾವಣೆಗಳು? ಏನನ್ನು ಬದಲಿಸಿಕೊಳ್ಳಬೇಕು?

Sleeping alaram

ನಿದ್ದೆಗೊಂದು ಅಲರಾಂ

ಅಂದರೆ ಬೆಳಗ್ಗೆ ಏಳುವುದಕ್ಕೆ ಅಲರಾಂ ಇಡುವುದರ ಬಗ್ಗೆ ಅಲ್ಲ. ರಾತ್ರಿ ಮಲಗುವುದಕ್ಕೆ ಅಲರಾಂ ಇಡುವ ಬಗ್ಗೆ ಇಲ್ಲಿ ಹೇಳುತ್ತಿರುವುದು. ಹೌದು. ಒಂದೊಂದು ದಿನ ಒಂದೊಂದು ಸಮಯಕ್ಕೆ ಮಲಗುವುದಲ್ಲ, ಸಾಧ್ಯವಾದಷ್ಟೂ ನಿಗದಿತ ಸಮಯಕ್ಕೆ ಮಲಗುವ ಅಭ್ಯಾಸ ರೂಢಿಸಿಕೊಳ್ಳಿ. ರಾತ್ರಿ ತೀರಾ ತಡವಾಗಿ ಮಲಗುವುದು, ಇದಕ್ಕೆ ಬದಲಿಗೆ ಹಗಲಿಗೆ ಒಂದೆರಡು ತಾಸು ನಿದ್ರಿಸುವುದು ಸರಿಯಲ್ಲ. 7 ತಾಸುಗಳ ಗಾಢ ನಿದ್ರೆ ರಾತ್ರಿಯೇ ದೊರೆಯುವಂತೆ ನಿಮ್‌ ಕೆಲಸಗಳನ್ನು ಹೊಂದಿಸಿಕೊಳ್ಳಲು ಪ್ರಯತ್ನಿಸಿ. ಇದರಿಂದ ದೇಹದ ಸರ್ಕೇಡಿಯನ್‌ ಲಯಕ್ಕೆ ತೊಂದರೆಯಾಗದೆ, ಸ್ವಾಸ್ಥ್ಯ ಸುಧಾರಿಸುತ್ತದೆ.

Savasana Yoga Asanas For Best Sleep

ರಿಲ್ಯಾಕ್ಸ್‌ ಪ್ಲೀಸ್!

ಮಲಗುವ ಮುನ್ನ ಭಯಾನಕ ಸಿನೆಮಾಗಳನ್ನು ನೋಡುವುದು, ಮನಸ್ಸನ್ನು ಅಶಾಂತಗೊಳಿಸುವ ಸುದ್ದಿಗಳನ್ನು ಹೇಳಿ-ಕೇಳುವುದು- ಇಂಥ ಯಾವುದೇ ಸಂಗತಿಗಳನ್ನು ನಿದಿರೆಯನ್ನು ಹಾಳು ಮಾಡಬಲ್ಲವು. ಹಾಗಾಗಿ ಮಲಗುವ ಮುನ್ನ ದೇಹವನ್ನು ಮಾತ್ರವೇ ಅಲ್ಲ, ಮನಸ್ಸನ್ನು ವಿಶ್ರಾಂತಿಗೆ ದೂಡಿ. ಬೆವರು ಹರಿಸಿ ವ್ಯಾಯಾಮ ಮಾಡುವುದು ಸಹ ಮಲಗುವ ಮೊದಲು ಬೇಡ. ಬದಲಿಗೆ, ಹಗಲು ಹೊತ್ತಿನಲ್ಲಿ ಚೆನ್ನಾಗಿ ವ್ಯಾಯಾಮ ಮಾಡಿ. ಮಲಗುವ ಮುನ್ನ ಹದವಾದ ಬಿಸಿ ನೀರಿನ ಸ್ನಾನ, ದೀರ್ಘ ಉಸಿರಾಟ, ಸಂಗೀತ ಕೇಳುವುದು, ಏನನ್ನಾದರು ಓದುವುದು, ತಂಗಾಳಿಯಲ್ಲಿ ಹತ್ತಾರು ನಿಮಿಷ ಲಘುವಾಗಿ ಓಡಾಡುವುದು ಇತ್ಯಾದಿಗಳು ನಿದ್ದೆಗೆ ಪೂರಕ.

ಮಲಗುವ ಸ್ಥಳ

ಇದು ಸಹ ಮುಖ್ಯವಾಗುತ್ತದೆ. ಸ್ವಚ್ಛವಾದ, ಗಾಳಿಯಾಡುವ ಸ್ಥಳದಲ್ಲಿ ಮಲಗುವುದು ಒಳ್ಳೆಯದು. ಸೊಳ್ಳೆಗಳ ಉಪದ್ರವಿದ್ದರೆ ಪರದೆ ಬಳಸಿ. ಗಲಾಟೆಯಿಲ್ಲದ ಮಂದ ಬೆಳಕಿನ ವಾತಾವರಣ ಏರ್ಪಡಿಸಿಕೊಳ್ಳಿ. ಹಾಸಿಗೆ ಮತ್ತು ದಿಂಬುಗಳು ಕೂಡಾ ಆರಾಮದಾಯಕವಾಗಿರಲಿ. ಒಂದೊಮ್ಮೆ ಹೊರಗಿನ ಗಲಾಟೆಗೆ ನಿದ್ದೆ ಬರುತ್ತಿದ್ದ ಎಂದಾದರೆ, ಅದನ್ನು ಮರೆಮಾಚುವುದಕ್ಕೆ ನಿಮ್ಮಿಷ್ಟದ ಮೆಲು ಸಂಗೀತ ಹಾಕಿಕೊಳ್ಳಿ. ಅದು ಬೇಡದಿದ್ದರೆ, ಇಯರ್‌ ಪ್ಲಗ್‌ ಬಳಕೆ ಸಾಧ್ಯವೇ ನೋಡಿ.

Sleeping Tips

ನೀಲಿ ಬೆಳಕು ಬೇಡ

ಯಾವುದೇ ಎಲೆಕ್ಟ್ರಾನಿಕ್‌ ಉಪಕರಣದಿಂದ ಸೂಸುವ ನೀಲಿ ಬೆಳಕು ನಿದ್ದೆಯ ಶತ್ರುವಿದ್ದಂತೆ. ಮಲಗುವ ಒಂದು ತಾಸು ಮೊದಲೇ ಇವುಗಳಿಂದ ಸನ್ಯಾಸ ತೆಗೆದುಕೊಳ್ಳಿ. ಸ್ಮಾರ್ಟ್‌ ಫೋನ್‌, ಟ್ಯಾಬ್ಲೆಟ್‌, ಕಂಪ್ಯೂಟರ್‌ ಮುಂತಾದವು ದೇಹದ ಆಂತರಿಕ ಗಡಿಯಾರಕ್ಕೆ ತೊಂದರೆ ನೀಡುತ್ತವೆ. ಮಲಗುವ ಹಾಸಿಗೆಯಲ್ಲಿ ಫೋನ್‌ ಇರಿಸಿಕೊಳ್ಳುವ ತಪ್ಪನ್ನಂತೂ ಮಾಡಲೇಬೇಡಿ.

ಇದನ್ನೂ ಓದಿ: Drinks for Summer: ಬೇಸಿಗೆಯಲ್ಲಿ ತಂಪಾಗಿರಬೇಕೆ? ಈ ಪೇಯಗಳನ್ನು ತಪ್ಪದೇ ಕುಡಿಯಿರಿ

ಆಹಾರ

ಊಟ ಮಾಡಿ ಕೈ ತೊಳೆಯುತ್ತಿದ್ದಂತೆ ಹಾಸಿಗೆ ಸೇರಿದರೆ ನಿದ್ದೆಯೂ ಹಾಳು, ಹೊಟ್ಟೆಗೂ ಗೋಳು! ರಾತ್ರಿಯೂಟವನ್ನು ಆದಷ್ಟೂ ಸರಳವಾಗಿಡಿ, ಕೊಬ್ಬು, ಖಾರದ ವಸ್ತುಗಳನ್ನು ರಾತ್ರಿ ಕಡಿಮೆ ಮಾಡಿ. ರಾತ್ರಿ ಮಲಗುವ ಮೂರು ತಾಸುಗಳ ಮುನ್ನ ಊಟ ಮಾಡುವುದು ಸರಿಯಾದ ಕ್ರಮ. ಆನಂತರ ಕಾಫಿ, ಚಹಾ ಸೇರಿದಂತೆ ಯಾವುದೇ ಕೆಫೇನ್‌ ಸೇವನೆ ಸಲ್ಲದು. ಆಲ್ಕೋಹಾಲ್‌ ಸೇವನೆಯನ್ನು ರೂಢಿಸಿಕೊಂಡರೆ ಕ್ರಮೇಣ ನಿದ್ದೆ ಹಾಳಾಗುತ್ತದೆ.

Continue Reading

ಆರೋಗ್ಯ

Tooth Decay: ನಮ್ಮ ಈ ದುರಭ್ಯಾಸಗಳು ಹಲ್ಲಿನ ಹುಳುಕಿಗೆ ಕಾರಣವಾಗುತ್ತವೆ

ಎಲ್ಲರನ್ನೂ ಒಂದಲ್ಲ ಒಂದು ದಿನ ಕಾಡುವ ಸಾರ್ವಕಾಲಿಕ ತೊಂದರೆಯೆಂದರೆ ಅದು ಹಲ್ಲು ನೋವು. ಇದು ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ. ನಿತ್ಯವೂ ಬಾಯಿಯ ಸ್ವಚ್ಛತೆ ಬಗ್ಗೆ ಹಾಗೂ ನಮ್ಮ ಜೀವನಶೈಲಿಯ ಬಗ್ಗೆ ಗಮನ ಹರಿಸಿದರೆ ಹಲ್ಲಿನ ಆರೋಗ್ಯ ಚೆನ್ನಾಗಿ ಇಡಬಹುದು. ನಮ್ಮ ಯಾವ ಯಾವ ನಿರ್ಲಕ್ಷ್ಯಗಳಿಂದ ಹಲ್ಲಿನ ಹುಳುಕಿಗೆ ಕಾರಣವಾಗುತ್ತದೆ ಹಾಗೂ ನಾವು ಇದಕ್ಕೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಇಲ್ಲಿದೆ (tooth decay) ಮಾಹಿತಿ.

VISTARANEWS.COM


on

Tooth Decay
Koo

ಹಲ್ಲು ಹುಳುಕಾಗುವುದು ಸಾಮಾನ್ಯವಾಗಿ ಎಲ್ಲರೂ ಅನುಭವಿಸುವ ಸಾಮಾನ್ಯ ತೊಂದರೆ. ವಯಸ್ಸಿನ ಭೇದವಿಲ್ಲದೆ, ಬಡವ ಶ್ರೀಮಂತನೆಂಬ ಹಂಗಿಲ್ಲದೆ, ಎಲ್ಲರನ್ನೂ ಒಂದಲ್ಲ ಒಂದು ದಿನ ಕಾಡುವ ಸಾರ್ವಕಾಲಿಕ ತೊಂದರೆಯಿದು. ಆದರೆ, ಅಷ್ಟೇ ನಿರ್ಲಕ್ಷ ವಹಿಸುವ ಆರೋಗ್ಯವೂ ಕೂಡಾ ಇದೇ. ಆದರೆ, ನಿತ್ಯವೂ ಬಾಯಿಯ ಸ್ವಚ್ಛತೆ ಹಾಗೂ ಆಹಾರದ ಬಗ್ಗೆ, ನಮ್ಮ ಜೀವನಶೈಲಿಯ ಬಗ್ಗೆ ಗಮನ ಹರಿಸಿದರೆ ಹಲ್ಲಿನ ಆರೋಗ್ಯ ಚೆನ್ನಾಗಿಟ್ಟಿರಬಹುದು. ಬನ್ನಿ, ನಮ್ಮ ಯಾವ ಯಾವ ನಿರ್ಲಕ್ಷ್ಯಗಳಿಂದ ಹಲ್ಲಿನ ಹುಳುಕಿಗೆ ಕಾರಣವಾಗುತ್ತದೆ ಹಾಗೂ ನಾವು ಇದಕ್ಕೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು (tooth decay) ಎಂಬುದನ್ನು ನೋಡೋಣ.

Young Man Suffering from Acute Toothache and Touching Cheek with Grimace of Pain

ಬಾಯಿಯ ಆರೋಗ್ಯದ ಕಾಳಜಿ ಸರಿಯಾಗಿ ಮಾಡದೇ ಇರುವುದು

ದಿನಕ್ಕೆ ಎರಡು ಬಾರಿ ಅಂದರೆ ಬೆಳಗ್ಗೆ ಹಾಗೂ ರಾತ್ರಿ ಮಲಗುವ ಮೊದಲು ಹಲ್ಲುಜ್ಜುವುದು ಮಾಡದೆ ಇದ್ದರೆ, ಸರಿಯಾಗಿ ಕಾಳಜಿ ವಹಿಸದಿದ್ದರೆ, ಹಲ್ಲಿನ ಸಮಸ್ಯೆಗಳು ಬಹುಬೇಗನೆ ಬರುತ್ತವೆ. ಹಲ್ಲು ಹುಳುಕಾಗಲು ಇರುವ ಪ್ರಮುಖ ಕಾರಣಗಳಲ್ಲಿ ಇದೂ ಒಂದು.

Selection of Colorful Sweets

ಸಕ್ಕರೆಯುಕ್ತ ಆಹಾರ ಅಥವಾ ಸಿಹಿತಿಂಡಿಗಳ ಅತಿಯಾದ ಸೇವನೆ

ಹೆಚ್ಚು ಸಿಹಿತಿಂಡಿಗಳನ್ನು ಸೇವಿಸುವುದರಿಂದ ಹಲ್ಲು ಬಹುಬೇಗನೆ ಹುಳುಕಾಗುತ್ತದೆ. ಸಕ್ಕರೆಯುಕ್ತ ಆಹಾರಗಳಿಂದ ಬಾಯಿಯಲ್ಲಿ ಬಹಳ ಹೊತ್ತಿನವರೆಗೆ ಬ್ಯಾಕ್ಟೀರಿಯಾ ಇರುವುದರಿಂದ ಹಲ್ಲು ಹುಳುಕಿಗೆ ಕಾರಣವಾಗುತ್ತದೆ.

ಆಗಾಗ ದಂತವೈದ್ಯರನ್ನು ಭೇಟಿಯಾಗದೆ ಇರುವುದು

ಆಗಾಗ ದಂತವೈದ್ಯರನ್ನು ಸಂಪರ್ಕಿಸಿ ಹಲ್ಲಿನ ಆರೋಗ್ಯದ ಕಾಳಜಿ ತೆಗೆದುಕೊಳ್ಳುವುದು ಬಹಳ ಮುಖ್ಯ. ಹಲ್ಲಿನ ಕ್ಲೀನಿಂಗ್‌ ಇರಬಹುದು, ಸಣ್ಣ ಹುಳುಕಾದಾಗ ಫಿಲ್ಲಿಂಗ್‌ ಇರಬಹುದು ಅಥವಾ ಆಯಾ ಸಮಸ್ಯೆಗಳಿಗೆ ತಕ್ಕ ಪರಿಹಾರವನ್ನು ಆಗಾಗ ಕಂಡುಕೊಳ್ಳುವುದರಿಂದ ಮುಂದಿನ ಪರಿಣಾಮ ಘೋರವಾಗಿರುವುದಿಲ್ಲ. ಕ್ಲೀನಿಂಗ್‌ ಆಗಾಗ ಮಾಡಿಸಿಕೊಳ್ಳುವುದು, ಹಲ್ಲಿನ ಸಂದುಗಳಲ್ಲಿ ಸಿಕ್ಕಿ ಹಾಕಿಕೊಂಡಿರುವ ಆಹಾರದ ಸಣ್ಣ ತುಣುಕುಗಳನ್ನು ತೆಗೆದು ಕ್ಲೀನ್‌ ಮಾಡುವುದು ಬಹಳ ಮುಖ್ಯ. ಇದರಿಂದ ಹಲ್ಲಿನ ಆರೋಗ್ಯ ಚೆನ್ನಾಗಿರುತ್ತದೆ. ಹುಳುಕು ಹತ್ತಿರ ಸುಳಿಯುವುದಿಲ್ಲ.

Smoking Heart Attack Causes

ಧೂಮಪಾನ ಹಾಗೂ ತಂಬಾಕಿನ ಸೇವನೆ

ಧೂಮಪಾನಕ್ಕೂ ಹಲ್ಲು ಹುಳುಕಿಗೂ ಏನು ಸಂಬಂಧ ಎಂದು ಯೋಚಿಸಬೇಡಿ. ಹಲ್ಲು ಹುಳುಕಾಗುವುದಕ್ಕೆ ಇನ್ನೊಂದು ಮುಖ್ಯ ಕಾರಣ ಎಂದರೆ ಧೂಮಪಾನ ಹಾಗೂ ತಂಬಾಕಿನ ಬಳಕೆ. ತಂಬಾಕಿನ ಯಾವುದೇ ವಸ್ತುಗಳನ್ನು ಬಳಸಿದರೂ ಕೂಡಾ, ಹಲ್ಲಿನ ಆರೋಗ್ಯ ಹದಗೆಡುತ್ತದೆ. ಹಲ್ಲು, ಸವಡು ಸೇರಿದಂತೆ ಬಾಯಿಯ ಆರೋಗ್ಯ ಹಾಳಾಗುತ್ತದೆ.

Drunk Man Drinking Alcohol and Smoking Cigarette Stomach Bloating Relief

ಆಲ್ಕೋಹಾಲ್‌ ಸೇವನೆ

ಮದ್ಯಪಾನ ಮಾಡುವುದರಿಂದಲೂ ಹಲ್ಲಿನ ಆರೋಗ್ಯ ಹಾಳಾಗುತ್ತದೆ. ಹೆಚ್ಚು ಆಲ್ಕೋಹಾಲ್‌ ಕುಡಿಯುವುದರಿಂದ ಬಾಯಿ ಒಣಗಿದಂತಾಗಿ, ಬಾಯಿಯ ಜೊಲ್ಲಿನ ಉತ್ಪತ್ತಿ ಕಡಿಮೆಯಾಗುತ್ತದೆ. ಕಡಿಮೆ ಸಲೈವಾ ಉತ್ಪತ್ತಿಯಾದಾಗ ಸಹಜವಾಗಿಯೇ ಹಲ್ಲಿನ ಹುಳುಕು ಹೆಚ್ಚುತ್ತದೆ.

ಹಲ್ಲನ್ನು ಉಪಕರಣವಾಗಿ ಬಳಸುವುದರಿಂದ

ಹಲ್ಲು ಗಟ್ಟಿಯಾಗಿದೆ ಎಂದುಕೊಂಡು ಗಟ್ಟಿ ಕವಚವಿರುವ ಬೀಜಗಳನ್ನು ಒಡೆಯಲು, ಯಾವುದಾದರೂ ಪ್ಯಾಕೆಟ್ಟನ್ನು ಬಿಡಿಸಲು ಹಲ್ಲಿನಿಂದ ಕಚ್ಚುವ ಮೂಲಕ ಹಲ್ಲಿನ ಸಹಾಯವನ್ನು ತೆಗೆದುಕೊಳ್ಳುತ್ತೇವೆ. ಇದರಿಂದಲೂ ಹಲ್ಲಿನ ಆರೋಗ್ಯ ಹಾಳಾಗುತ್ತದೆ. ಹಾಗಾದರೆ ಹಲ್ಲಿನ ಆರೋಗ್ಯ ಹೆಚ್ಚಿಸಲು ಏನು ಮಾಡಬಹುದು ಎಂಬುದನ್ನು ನೋಡೋಣ ಬನ್ನಿ.

Tooth brushing

ದಿನಕ್ಕೆ ಎರಡು ಬಾರಿ ಹಲ್ಲಿಜ್ಜಿ

ಇದು ಹಲ್ಲು ಹುಳುಕಾಗಿಸುವುದನ್ನು ತಪ್ಪಿಸುತ್ತದೆ. ಹಲ್ಲಿನ ಸಂದಿನಲ್ಲಿ ಸೇರಿದ ಕೊಳೆ ಹೊರಟು ಹೋಗಿ, ಹಲ್ಲು ಆರೋಗ್ಯಪೂರ್ಣವಾಗಿ ಇರುತ್ತದೆ. ಹಲ್ಲುಜ್ಜಲು ಯಾವಾಗಲೂ ಫ್ಲೋರೈಡ್‌ ಟೂತ್‌ಪೇಸ್ಟ್‌ ಹಾಗೂ ಮೆತ್ತಗಿನ ಬ್ರಷ್‌ ಅನ್ನು ಬಳಸುವುದು ಒಳ್ಳೆಯದು.

ಹಲ್ಲನ್ನು ಆಗಾಗ ಫ್ಲಾಸ್‌ ಮಾಡುವುದು ಒಳ್ಳೆಯದು

ಟೂತ್‌ ಬ್ರಷ್‌ನಿಂದ ತೆಗೆಯಲು ಸಾಧ್ಯವಾಗದ, ಹಲ್ಲಿನ ಸಂದಿಯಲ್ಲಿ ಸೇರಿಕೊಂಡಿರುವ ಆಹಾರ ಹಳೆಯ ತುಣುಕುಗಳುಫ್ಲಾಸ್‌ ಮಾಡುವ ಮೂಲಕ ಮಾತ್ರ ತೆಗೆಯಬಹುದು.

Sweet CANDAY

ಅಸಿಡಿಕ್‌ ಹಾಗೂ ಸಕ್ಕರೆಯುಕ್ತ ಆಹಾರಗಳ ಸೇವನೆ ಕಡಿಮೆ ಮಾಡಿ

ಸೋಡಾಗಳು, ಹಣ್ಣಿನ ಜ್ಯೂಸ್‌ಗಳು, ಕ್ಯಾಂಡಿ ಇತ್ಯಾದಿಗಳನ್ನು ತಿಂದಾಗ ಅಥವಾ ಕುಡಿದಾಗ ಬಾಯಿಯನ್ನು ಸ್ವಚ್ಛಗೊಳಿಸುವುದನ್ನು ಮರೆಯಬೇಡಿ.

ಆಗಾಗ ಏನಾದರೊಂದು ಜಗಿಯುತ್ತಿರುವ ಅಭ್ಯಾಸವಿದ್ದರೆ ಬಿಡಿ

ಆಗಾಗ ಏನಾದರೂ ತಿನ್ನುವುದರಿಂದ ಬಾಯಿಯಲ್ಲಿ ಆಹಾರಗಳು ಹಾಗೆಯೇ ಉಳಿದುಹೋಗುತ್ತವೆ. ಈ ತುಣುಕುಗಳು ಹಲ್ಲಿನ ಆರೋಗ್ಯವನ್ನು ಹಾಳುಗೆಡವುತ್ತದೆ.

Chewing gum

ಚ್ಯೂಯಿಂಗ್‌ ಗಮ್‌ ತಿನ್ನುವ ಮೂಲಕ ಬಾಯಿಯನ್ನು ಫ್ರೆಶ್‌ ಆಗಿರಿಸಬಹುದು

ಆದರೆ, ಸಿಹಿಯಾದ ಚ್ಯೂಯಿಂಗ್‌ಗಮ್‌ ಒಳ್ಳೆಯದಲ್ಲ. ಪುದಿನಯುಕ್ತ ಸಕ್ಕರೆ ರಹಿತ ಚ್ಯೂಯಿಂಗ್‌ ಗಮ್‌ ಯಾವಾಗಲಾದರೊಮ್ಮೆ ಅಗತ್ಯ ಬಿದ್ದಾಗ ಬಳಸಬಹುದು.

ಆಗಾಗ ದಂತ ವೈದ್ಯರನ್ನು ಭೇಟಿಯಾಗಿ

ಹಲ್ಲಿನ ಆರೋಗ್ಯದ ಬಗ್ಗೆ ಪರೀಕ್ಷೆ ಮಾಡಿಸಿಕೊಳ್ಳಿ. ಅಗತ್ಯ ಬಿದ್ದಾಗ ಕ್ಲೀನಿಂಗ್‌ ಮಾಡಿಸಿಕೊಳ್ಳಿ.

ಇದನ್ನೂ ಓದಿ: Drinks for Summer: ಬೇಸಿಗೆಯಲ್ಲಿ ತಂಪಾಗಿರಬೇಕೆ? ಈ ಪೇಯಗಳನ್ನು ತಪ್ಪದೇ ಕುಡಿಯಿರಿ

Continue Reading

ದೇಶ

Vitamin D: ಎಚ್ಚರ..ಎಚ್ಚರ! ಕ್ಯಾನ್ಸರ್‌ಗೂ ಕಾರಣವಾಗುತ್ತೆ ವಿಟಮಿನ್‌ ಡಿ ಕೊರತೆ

Vitamin D:ವಿಟಮಿನ್‌ ಡಿ ಕೊರತೆ ಕ್ಯಾನ್ಸರ್‌ಗೆ ಕಾರಣವಾಗಲಿದೆ ಎಂಬ ಶಾಕಿಂಗ್‌ ವರದಿಯೊಂದು ಹೊರ ಬಿದ್ದಿದೆ. ವಿವಿಧ ಅಧ್ಯಯನಗಳ ವರದಿ ಪ್ರಕಾರ ವಿಟಮಿನ್‌ ಡಿ ಕೊರತೆಯಿಂದ ಓವರಿಯನ್‌, ಸ್ತನ ಸೇರಿದಂತೆ ವಿವಿಧ ಕ್ಯಾನ್ಸರ್‌ಗೆ ತುತ್ತಾಗುವ ಸಾಧ್ಯತೆ ಇದೆ.

VISTARANEWS.COM


on

Foods rich in vitamin D
Koo

ನವದೆಹಲಿ:ವಿಟಮಿನ್‌ ಡಿ(Vitamin D) ಕೊರತೆ ಎಂಬುದು ಪ್ರಪಂಚಾದ್ಯಂತ ಹೆಚ್ಚಿನ ಜನರಲ್ಲಿ ಅತ್ಯಂತ ಸಾಮಾನ್ಯವಾಗಿ ಕಂಡು ಬರುವ ಪೌಷ್ಟಿಕಾಂಶ ಕೊರತೆ(Nutrient shortages)ಯಾಗಿದೆ. ಇದು ಸಾಮಾನ್ಯವಾಗಿ 65 ವರ್ಷ ಮೇಲ್ಪಟ್ಟ ಜನರಲ್ಲಿ ಕಂಡು ಬರುವ ಪೌಷ್ಠಿಕಾಂಶ ಕೊರತೆ. ಪ್ರಪಂಚದ ಶೇ.13ರಷ್ಟು ಜನರಲ್ಲಿ ವಿಟಮಿನ್‌ ಡಿ ಕೊರತೆ ಕಂಡು ಬರುತ್ತದೆ. ವಿಟಮಿನ್‌ ಡಿ ಕೊರತೆಯಿಂದ ಎಲುಬು, ಗಂಟು ನೋವು, ಸಂಧು ನೋವು, ಮೂಡ್‌ ಚೇಂಜ್‌ ಹೀಗೆ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಆದರೆ ಇದೀಗ ವಿಟಮಿನ್‌ ಡಿ ಕೊರತೆ ಕ್ಯಾನ್ಸರ್‌(Cancer)ಗೆ ಕಾರಣವಾಗಲಿದೆ ಎಂಬ ಶಾಕಿಂಗ್‌ ವರದಿಯೊಂದು ಹೊರ ಬಿದ್ದಿದೆ. ವಿವಿಧ ಅಧ್ಯಯನಗಳ ವರದಿ ಪ್ರಕಾರ ವಿಟಮಿನ್‌ ಡಿ ಕೊರತೆಯಿಂದ ಓವರಿಯನ್‌, ಸ್ತನ ಸೇರಿದಂತೆ ವಿವಿಧ ಕ್ಯಾನ್ಸರ್‌ಗೆ ತುತ್ತಾಗುವ ಸಾಧ್ಯತೆ ಇದೆ.

ವಿಟಮಿನ್‌ ಡಿ ಕೊರತೆ ಹೇಗೆ ಕ್ಯಾನ್ಸರ್‌ಗೆ ಕಾರಣವಾಗುತ್ತದೆ?

ವಿಟಮಿನ್‌ ಡಿ 3 ಮತ್ತು ಕ್ಯಾಲ್ಸಿಯಂ ಮಾತ್ರೆ ಸೇವನೆಯಿಂದ ಕ್ಯಾನ್ಸರ್‌ ತಡೆಯಲು ಸಾಧ್ಯವಿಲ್ಲ ಎಂದು ಅಧ್ಯಯನ ವರದಿ ಹೇಳಿದೆ. ವಿಟಮಿನ್‌ ಡಿ ಕ್ಯಾನ್ಸರ್‌ ಸೆಲ್‌ಗಳ ವಿಡಿಜನ್‌ ಮತ್ತು ಅವುಗಳ ಬೆಳವಣಿಗೆಯನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೇ . ಅದರ ಕೊರತೆ ಆದಲ್ಲಿ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರ್‌ಗೆ ತುತ್ತಾಗು ಸಾಧ್ಯತೆ ಹೆಚ್ಚಿರುತ್ತದೆ. ವೈದ್ಯರ ಹೇಳುವ ಪ್ರಕಾರ ವಿಟಮಿನ್‌ ಡಿ ಮನುಷ್ಯನ ಎಲುಬುಗಳ ಆರೋಗ್ಯ ಕಾಪಾಡುವುದು ಮಾತ್ರವಲ್ಲದೇ ದೇಹದಲ್ಲಿರುವ ದೋಷಯುಕ್ತ ಜೀನ್‌ಗಳನ್ನು ಸರಿಪಡಿಸುವ ಪ್ರಕ್ರಿಯೆಯಲ್ಲೂ ಪ್ರಮುಖ ಪಾತ್ರ ವಹಿಸುತ್ತದೆ. ಈ ಪ್ರಕ್ರಿಯೆಗೆ MMR ಎಂದು ಕರೆಯಲಾಗಿದ್ದು, ಇದಕ್ಕೆ ವಿಟಮಿನ್‌ ಡಿ ಅಗತ್ಯ ಹೆಚ್ಚಾಗಿದೆ. ಇನ್ನು ವಿಟಮಿನ್‌ ಡಿ ಕೊರತೆ ಕ್ಯಾನ್ಸರ್‌ ಗೆ ಕಾರಣವಾಗುತ್ತದೇಯೇ ಎಂಬ ವಿಷಯದ ಬಗ್ಗೆ ಮತ್ತಷ್ಟು ಅಧ್ಯಯನ ಮುಂದುವರೆದಿದೆ.

ವಿಟಮಿನ್ ಡಿ ಕೊರತೆ ಉಂಟಾಗದಿರಲು ಏನು ಮಾಡಬೇಕು?

1. ವಿಟಮಿನ್ ಡಿ ಕೊರತೆಗೆ ಪ್ರಮುಖ ಮದ್ದು ಎಂದರೆ ಬೆಳಗ್ಗೆ ಸ್ವಲ್ಪ ಹೊತ್ತು ಬಿಸಿಲಿನಲ್ಲಿ ನಿಲ್ಲುವುದು. ತ್ವಚೆಯ ಮೇಲೆ ಯುವಿ-ಬಿ ಕಿರಣಗಳು ಬಿದ್ದಾಗ ಕೊಲೆಸ್ಟ್ರಾಲ್ ವಿಟಮಿನ್ ಡಿ ಆಗಿ ಪರಿವರ್ತನೆ ಆಗುವುದು. ನಿಮ್ಮ ತ್ವಚೆಯ ಬಣ್ಣದ ಮೇಲೆ ನೀವು ಬಿಸಿಲಿನಲ್ಲಿ ನಿಲ್ಲುವ ಸಮಯಲ್ಲಿ ವ್ಯತ್ಯಾಸವಿರುತ್ತದೆ. ಕಪ್ಪು ಬಣ್ಣದ ತ್ವಚೆಯವರು ಬಿಳಿ ಬಣ್ಣದ ತ್ವಚೆಯವರಿಗಿಂತ ಹೆಚ್ಚು ಹೊತ್ತು ಬಿಸಿಲಿನಲ್ಲಿ ನಿಲ್ಲಬೇಕು. ಇನ್ನು ವಯಸ್ಸು ಹೆಚ್ಚಾದಂತೆ ಬಿಸಿಲಿನಲ್ಲಿ ಹೆಚ್ಚು ಹೊತ್ತು ನಿಂತರೆ ಒಳ್ಳೆಯದು.

ಇದನ್ನೂ ಓದಿ:IPL 2024 Points Table: ಲಕ್ನೋ, ಮುಂಬೈ ಸೋಲಿನ ಬಳಿಕ ಅಂಕಪಟ್ಟಿ ಹೇಗಿದೆ?

2. ಮೀನು ಹಾಗೂ ಸಮುದ್ರ ಆಹಾರಗಳಲ್ಲಿ ವಿಟಮಿನ್ ಡಿ ಇರುತ್ತದೆ. ಬೂತಾಯಿ, ಮೃದ್ವಂಗಿಗಳು, ಸಿಗಡಿ, ಬಂಗುಡೆ ಈ ಮೀನುಗಳಲ್ಲಿ ವಿಟಮಿನ್ ಡಿ ಅಂಶವಿರುತ್ತದೆ.

3. ಬೆಳಸುವ ಅಣಬೆಗಳಿಗಿಂತ ನೈಸರ್ಗಿಕವಾಗಿ ಸಿಗುವ ಅಣಬೆಗಳಲ್ಲಿ ವಿಟಮಿನ್ ಡಿ ಅಧಿಕವಿರುತ್ತದೆ.

4. ಮೀನು ತಿನ್ನದವರು ಮೊಟ್ಟೆಯನ್ನು ತಿಂದರೆ ಅದರಲ್ಲಿ ಸ್ವಲ್ಪ ಪ್ರಮಾಣದ ವಿಟಮಿನ್ ಡಿ ದೊರೆಯುವುದು. ಮೊಟ್ಟೆಯ ಬಿಳಿ ಜತೆಗೆ ಅರಿಶಿಣ ಕೂಡ ತಿನ್ನಿ.

5. ಇನ್ನು ದನದ ಹಾಲು ಕುಡಿಯುವುದು, ಸೋಯಾ ಹಾಲು, ಕಿತ್ತಳೆ ಜ್ಯೂಸ್‌ ಇವುಗಳನ್ನು ಕೂಡ ಡಯಟ್‌ನಲ್ಲಿ ಸೇರಿಸಿ.
ಓಟ್‌ಮೀಲ್ ಹಾಗೂ ಧಾನ್ಯಗಳಲ್ಲಿ ಕೂಡ ಸ್ವಲ್ಪ ಪ್ರಮಾಣದಲ್ಲಿ ವಿಟಮಿನ್ ಡಿ ಇರುತ್ತದೆ.

Continue Reading

ಆರೋಗ್ಯ

Outdoor Exercise: ಹೊರಾಂಗಣ ವ್ಯಾಯಾಮ ಖಿನ್ನತೆಯನ್ನು ದೂರ ಮಾಡುವುದೇ?

Outdoor Exercise: ಆರೋಗ್ಯವಾಗಿರಲು ವ್ಯಾಯಾಮ ಬಹು ಮುಖ್ಯ. ವ್ಯಾಯಾಮ ಮಾಡುವ ಪ್ರತಿಯೊಂದು ವಿಧಾನಗಳು ಮಾನಸಿಕ ಆರೋಗ್ಯ ಕಾಪಾಡಲು ನಮಗೆ ಸಹಕಾರಿಯಾಗುತ್ತದೆ. ಆದರಲ್ಲೂ ಹೊರಗಣ ವ್ಯಾಯಾಮ ಮಾಡುವುದರಿಂದ ಮಾನಸಿಕ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಅದು ಹೇಗೆ ಗೊತ್ತೇ? ಈ ಕುರಿತು ಇಲ್ಲಿದೆ ಉಪಯುಕ್ತ ಮಾಹಿತಿ.

VISTARANEWS.COM


on

By

Outdoor Exercise
Koo

ಆರೋಗ್ಯವಾಗಿರಲು (healthy) ವ್ಯಾಯಾಮ (exercise) ಬಹುಮುಖ್ಯ. ಪ್ರತಿಯೊಂದು ರೀತಿಯ ವ್ಯಾಯಾಮವೂ ದೇಹ, ಮನಸ್ಸಿನ ಆರೋಗ್ಯಕ್ಕೆ ತನ್ನದೇ ಆದ ರೀತಿಯಲ್ಲಿ ಪರಿಣಾಮ ಬೀರುತ್ತದೆ. ಅದರಲ್ಲೂ ಹೊರಾಂಗಣ ವ್ಯಾಯಾಮ ದೇಹಕ್ಕೆ ಮಾತ್ರವಲ್ಲ ಮಾನಸಿಕ ಆರೋಗ್ಯಕ್ಕೆ (mental health) ಬಹು ಪ್ರಯೋಜನಕಾರಿಯಾಗಿದೆ.

ಹೊರಾಂಗಣದಲ್ಲಿ ವ್ಯಾಯಾಮ (Outdoor Exercise) ಖಿನ್ನತೆಯ (depression) ಅಪಾಯವನ್ನು ಕಡಿಮೆ ಮಾಡುವುದು ಮಾತ್ರವಲ್ಲ ವಿವಿಧ ಮಾನಸಿಕ ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ ತಜ್ಞರು. ಹೊರಾಂಗಣದಲ್ಲಿ ವ್ಯಾಯಾಮ ಮಾಡುವುದರಿಂದ ಭಾವನಾತ್ಮಕ, ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಹೊರಾಂಗಣ ವ್ಯಾಯಾಮ ಮಾಡುವುದರಿಂದ ಖಿನ್ನತೆಯ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುವ ಕೆಲವು ಅಂಶಗಳು.

ಇದನ್ನೂ ಓದಿ: Vampire Facial: ಹೆಣ್ಣುಮಕ್ಕಳೇ ಎಚ್ಚರ; ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ!


ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದು

ಸೂರ್ಯನ ಬೆಳಕು ನಮ್ಮ ದೇಹದ ಸಿರೊಟೋನಿನ್ ಉತ್ಪಾದನೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ನರಗಳ ಯೋಗಕ್ಷೇಮ ಮತ್ತು ಸಂತೋಷದ ಭಾವನೆಗಳಿಗೆ ಸೂರ್ಯನ ಬೆಳಕು ಸಾಕಷ್ಟು ಕೊಡುಗೆ ನೀಡುತ್ತದೆ. ನೈಸರ್ಗಿಕ ಬೆಳಕಿಗೆ ಒಡ್ಡಿಕೊಳ್ಳುವುದರಿಂದ ಸೀಸನಲ್ ಎಫೆಕ್ಟಿವ್ ಡಿಸಾರ್ಡರ್ (ಎಸ್‌ಎಡಿ) ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ ಮತ್ತು ಸಾಮಾನ್ಯವಾಗಿ ಮನಸ್ಥಿತಿಯನ್ನು ಸುಧಾರಿಸುತ್ತದೆ.

ವಿಟಮಿನ್ ಡಿ ಉತ್ಪಾದನೆ

ಸೂರ್ಯನ ಬೆಳಕಿಗೆ ನಮ್ಮನ್ನು ನಾವು ಒಡ್ಡಿಕೊಳ್ಳುವುದರಿಂದ ವಿಟಮಿನ್ ಡಿ ಅನ್ನು ಉತ್ಪಾದಿಸಲು ಚರ್ಮಕ್ಕೆ ಉತ್ತೇಜಿನ ಸಿಕ್ಕಂತಾಗುತ್ತದೆ. ಮೆದುಳಿನ ಕಾರ್ಯವನ್ನು ಒಳಗೊಂಡಂತೆ ಒಟ್ಟಾರೆ ಆರೋಗ್ಯಕ್ಕೆ ನಿರ್ಣಾಯಕವಾಗಿದೆ. ಕಡಿಮೆ ಮಟ್ಟದ ವಿಟಮಿನ್ ಡಿ ಖಿನ್ನತೆ ಮತ್ತು ಇತರ ಮಾನಸಿಕ ಅಸ್ವಸ್ಥತೆಗಳನ್ನು ದೂರ ಮಾಡುತ್ತದೆ.

ದೈಹಿಕ ಚಟುವಟಿಕೆ

ವ್ಯಾಯಾಮ ಎಂಡಾರ್ಫಿನ್ ಗಳನ್ನು ಬಿಡುಗಡೆ ಮಾಡುತ್ತದೆ. ಮೆದುಳಿನಲ್ಲಿ ನೈಸರ್ಗಿಕ ನೋವು ನಿವಾರಕಗಳು ಮತ್ತು ಮೂಡ್ ಎಲಿವೇಟರ್ ಗಳಾಗಿ ಇದು ಕಾರ್ಯನಿರ್ವಹಿಸುವ ರಾಸಾಯನಿಕಗಳು. ಹೊರಾಂಗಣ ವ್ಯಾಯಾಮವು ಚಲನೆ ಮತ್ತು ದೈಹಿಕ ಪರಿಶ್ರಮವನ್ನು ಉತ್ತೇಜಿಸುತ್ತದೆ, ಇದು ಮನಸ್ಥಿತಿಯನ್ನು ಸುಧಾರಿಸುತ್ತದೆ ಮತ್ತು ಖಿನ್ನತೆಯ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ.

ಸಾಮಾಜಿಕ ಸಂವಹನ

ಹೊರಾಂಗಣದಲ್ಲಿ ವ್ಯಾಯಾಮ ಮಾಡುವುದು ಸಾಮಾನ್ಯವಾಗಿ ನಡಿಗೆ, ಜಾಗಿಂಗ್ ಅಥವಾ ತಂಡದ ಕ್ರೀಡೆಗಳಂತಹ ಚಟುವಟಿಕೆಗಳನ್ನು ಒಳಗೊಂಡಿರುತ್ತದೆ. ಇದನ್ನು ಇತರರೊಂದಿಗೆ ಮಾಡಬಹುದಾಗಿದೆ. ಮಾನಸಿಕ ಆರೋಗ್ಯಕ್ಕೆ ಸಾಮಾಜಿಕ ಸಂವಹನವು ಅತ್ಯಗತ್ಯ. ಏಕೆಂದರೆ ಇದು ಒಂಟಿತನದ ಭಾವನೆಗಳನ್ನು ಕಡಿಮೆ ಮಾಡುತ್ತದೆ ಮತ್ತು ಭಾವನಾತ್ಮಕ ಬೆಂಬಲವನ್ನು ನೀಡುತ್ತದೆ.


ಪ್ರಕೃತಿಯೊಂದಿಗೆ ಸಂಪರ್ಕ

ಪರಿಸರದ ಮಧ್ಯೆ ಇರುವುದು ಮನಸ್ಸನ್ನು ಶಾಂತಗೊಳಿಸುತ್ತದೆ. ಹೊರಾಂಗಣ ವ್ಯಾಯಾಮವನ್ನು ಉದ್ಯಾನವನ, ಅರಣ್ಯ ಅಥವಾ ಕಡಲತೀರದಲ್ಲಿ ಅಥವಾ ಮನೆಯ ಬಾಲ್ಕನಿಯಲ್ಲಿ ಮಾಡುವುದರಿಂದ ಪ್ರಕೃತಿಯ ದೃಶ್ಯಗಳು, ಶಬ್ದಗಳು ಮತ್ತು ವಾಸನೆಗಳು ಮನಸ್ಸಿಗೆ ವಿಶ್ರಾಂತಿಯನ್ನು ನೀಡುತ್ತದೆ. ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ.

ಒತ್ತಡ ಕಡಿಮೆ ಮಾಡುವುದು

ಹೊರಾಂಗಣ ವ್ಯಾಯಾಮವು ಮನಸ್ಸಿಗೆ ಸಾವಧಾನತೆಯನ್ನು ಒದಗಿಸುತ್ತದೆ. ಯಾಕೆಂದರೆ ಇದು ನಮ್ಮ ಸುತ್ತಮುತ್ತಲಿನ ಮತ್ತು ದೈಹಿಕ ಸಂವೇದನೆಗಳ ಮೇಲೆ ಕೇಂದ್ರೀಕರಿಸಲು ಸಹಾಯ ಮಾಡುತ್ತದೆ. ಸಾವಧಾನತೆಯು ಒತ್ತಡ ಮಟ್ಟವನ್ನು ಕಡಿಮೆ ಮಾಡಲು ಮತ್ತು ಮನಸ್ಸಿನ ಶಾಂತಿ ಮತ್ತು ಯೋಗಕ್ಷೇಮವನ್ನು ಉತ್ತೇಜಿಸಲು ಇದು ಸಹಾಯ ಮಾಡುತ್ತದೆ.

ಹೊಸ ಅನುಭವ

ಹೊರಾಂಗಣದಲ್ಲಿ ವ್ಯಾಯಾಮವು ದೃಶ್ಯಾವಳಿಗಳ ಬದಲಾವಣೆ ಹೊಸ ಅನುಭವಗಳನ್ನು ನೀಡುತ್ತದೆ. ಇದು ಒಳಾಂಗಣ ಜೀವನಕ್ರಮಗಳ ಏಕತಾನತೆಯನ್ನು ಹೋಗಲಾಡಿಸುತ್ತದೆ. ವ್ಯಾಯಾಮದ ದಿನಚರಿಗಳಲ್ಲಿನ ವೈವಿಧ್ಯತೆಯು ಬೇಸರವನ್ನು ದೂರ ಮಾಡುತ್ತದೆ ಮತ್ತು ಹೆಚ್ಚಿನ ಪ್ರೇರಣೆಯನ್ನು ನೀಡುತ್ತದೆ.


ಉತ್ತಮ ನಿದ್ರೆ

ನಿಯಮಿತ ವ್ಯಾಯಾಮವನ್ನು ವಿಶೇಷವಾಗಿ ಹೊರಾಂಗಣದಲ್ಲಿ ಮಾಡಿದಾಗ ಉತ್ತಮ ನಿದ್ರೆ ಆವರಿಸುವುದು. ಇದು ನಿದ್ರೆಯ ಗುಣಮಟ್ಟವನ್ನು ಸುಧಾರಿಸಬಹುದು. ಮಾನಸಿಕ ಆರೋಗ್ಯಕ್ಕೆ ಸಾಕಷ್ಟು ನಿದ್ರೆ ಅತ್ಯಗತ್ಯ, ಮತ್ತು ಸಾಕಷ್ಟು ವಿಶ್ರಾಂತಿ ಪಡೆಯುವುದು ಖಿನ್ನತೆಯ ಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಸ್ವಾಭಿಮಾನವನ್ನು ಹೆಚ್ಚಿಸುತ್ತದೆ

ಹೊರಾಂಗಣ ವ್ಯಾಯಾಮದಲ್ಲಿ ಸಾಕಷ್ಟು ಸವಾಲುಗಳು ಎದುರಾಗುತ್ತದೆ. ಇದರಿಂದ ಸ್ವಾಭಿಮಾನ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಬಹುದು. ಸಾಧನೆ ಮತ್ತು ಸಮರ್ಥ ಭಾವನೆಯು ಖಿನ್ನತೆಗೆ ಸಂಬಂಧಿಸಿದ ನಿಷ್ಪ್ರಯೋಜಕತೆ ಅಥವಾ ಅಸಮರ್ಪಕತೆಯ ಭಾವನೆಗಳನ್ನು ಹೋಗಲಾಡಿಸುತ್ತದೆ.

ನಕಾರಾತ್ಮಕ ಆಲೋಚನೆಗಳಿಂದ ಮುಕ್ತಿ

ಹೊರಾಂಗಣ ವ್ಯಾಯಾಮದಲ್ಲಿ ತೊಡಗಿಸಿಕೊಳ್ಳುವುದರಿಂದ ಖಿನ್ನತೆಗೆ ಕಾರಣವಾಗುವ ಒತ್ತಡಗಳು ಮತ್ತು ನಕಾರಾತ್ಮಕ ಆಲೋಚನೆಗಳಿಂದ ದೂರವಾಗಬಹುದು. ದೈಹಿಕ ಚಟುವಟಿಕೆಯ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸುವುದರಿಂದ ಮನಸ್ಸು ನಕಾರಾತ್ಮಕ ಯೋಚನೆಗಳನ್ನು ಮಾಡುವುದನ್ನು ಬಿಡುತ್ತದೆ.

Continue Reading
Advertisement
Amith Shah
ಪ್ರಮುಖ ಸುದ್ದಿ5 mins ago

Amit Shah: ಎಸ್​​ಸಿ, ಎಸ್​ಟಿ ಮೀಸಲು ರದ್ದು; ಅಮಿತ್​ ಶಾ ನಕಲಿ ವಿಡಿಯೊ ಬಗ್ಗೆ ಡೆಲ್ಲಿಯಲ್ಲಿ ಎಫ್​ಐಆರ್​​

Mahanati Show complaint against Gagana Contestant and Ramesh
ಕಿರುತೆರೆ15 mins ago

Mahanati Show: ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕೆಟ್ಟ ಡೈಲಾಗ್‌ ಹೊಡೆದ ಗಗನಾ; ರಮೇಶ್‌ ಸೇರಿ ಹಲವರ ವಿರುದ್ಧ ದೂರು!

Physical Abuse
ಪ್ರಮುಖ ಸುದ್ದಿ30 mins ago

Physical Abuse : ಮದುವೆ ಪ್ರಸ್ತಾಪ ತಿರಸ್ಕರಿಸಿದ ಬಾಲಕಿ ಮೇಲೆ ಅತ್ಯಾಚಾರ, ಮುಖಕ್ಕೆ ಕಬ್ಬಿಣದಿಂದ ಬರೆ

ದೇಶ40 mins ago

Pakistan Spy: ATS ಭರ್ಜರಿ ಕಾರ್ಯಾಚರಣೆ; ಪಾಕಿಸ್ತಾನ ಗೂಢಾಚಾರ ಅರೆಸ್ಟ್‌

srinivasa prasad sutturu sri
ಕರ್ನಾಟಕ1 hour ago

Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

Gurucharan Singh soon to get married faced financial crunch
ಸಿನಿಮಾ2 hours ago

Gurucharan Singh: ನಿಗೂಢವಾಗಿ ನಾಪತ್ತೆಯಾದ ಈ ನಟನಿಗೆ ಶೀಘ್ರದಲ್ಲೇ ಮದುವೆ!

IPL 2024
ಪ್ರಮುಖ ಸುದ್ದಿ2 hours ago

IPL 2024 : ಡೇವಿಡ್ ವಾರ್ನರ್ ಅವರೊಂದಿಗೆ ‘ಈ’ ಅದ್ಭುತ ಐಪಿಎಲ್ ದಾಖಲೆಯನ್ನು ಸರಿಗಟ್ಟಿದ ಕೊಹ್ಲಿ

War 2 A galaxy of stars descended at a Mumbai restaurant on Sunday evening
ಸ್ಯಾಂಡಲ್ ವುಡ್2 hours ago

War 2 Movie: `ವಾರ್‌2′, `ಬ್ರಹ್ಮಾಸ್ತ್ರ’ ತಂಡಕ್ಕೆ ಸ್ಪೆಷಲ್‌ ಡಿನ್ನರ್‌ ಪಾರ್ಟಿ ಆಯೋಜಿಸಿದ ಅಯಾನ್ ಮುಖರ್ಜಿ !

hd revanna prajwal revanna
ಪ್ರಮುಖ ಸುದ್ದಿ2 hours ago

Hasan Pen Drive Case: ಎಲ್ಲೂ ಕಾಣದ ಪ್ರಜ್ವಲ್‌, ಇಂದು ಎಚ್‌ಡಿ ರೇವಣ್ಣ ಹೈಕೋರ್ಟ್‌ ಮೊರೆ

ವಿದೇಶ2 hours ago

Stab wound: ಗರ್ಲ್‌ಫ್ರೆಂಡ್‌ನ ಚುಚ್ಚಿ ಕೊಲ್ಲೋ ಮುನ್ನ ಗೂಗಲ್‌ ಸರ್ಚ್‌ ಮಾಡಿದ್ದ ಹಂತಕ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202419 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202421 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202423 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202423 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌