Costly Egg: ದರ ಏರಿಕೆ ರೇಸಿಂಗ್‌ನಲ್ಲಿ ಮೊಟ್ಟೆ ಫಸ್ಟ್‌, ಕೋಳಿ ಲಾಸ್ಟ್‌! - Vistara News

ಆಹಾರ/ಅಡುಗೆ

Costly Egg: ದರ ಏರಿಕೆ ರೇಸಿಂಗ್‌ನಲ್ಲಿ ಮೊಟ್ಟೆ ಫಸ್ಟ್‌, ಕೋಳಿ ಲಾಸ್ಟ್‌!

Costly Egg : ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯ ಜೂಟಾಟಕ್ಕೆ ಜನರು ಸುಸ್ತಾಗಿದ್ದಾರೆ. ಈ ನಡುವೆ ದರ ಏರಿಕೆ ರೇಸಿಂಗ್‌ನಲ್ಲಿ ಮೊಟ್ಟೆ ಬೆಲೆ ಜಾಸ್ತಿ ಆಗಿದ್ದರೆ, ಕೋಳಿ ದರ ಕಡಿಮೆ ಆಗಿದೆ.

VISTARANEWS.COM


on

Chicken egg price hiked Poultry prices come down
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದಿನ ಬಳಕೆ ವಸ್ತುಗಳ ಬೆಲೆಯು ಗಗನಕ್ಕೇರುತ್ತಿದ್ದು, ಜನರು ಹೆಣಗಾಡುತ್ತಿದ್ದಾರೆ. ಬಡವರು, ಮಧ್ಯಮ ವರ್ಗದವರು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಮಾಂಸಹಾರ ಬೆಲೆಯು ಏರಿಳಿತ ಕಾಣುತ್ತಿದೆ. ಒಂದು ಕಡೆ ಮೊಟ್ಟೆ ಪ್ರಿಯರಿಗೆ ರೇಟು ಶಾಕ್‌ ಕೊಟ್ಟರೆ, ಕೋಳಿ ರೇಟು ಕಡಿಮೆ (Costly Egg) ಆಗಿರುವುದು ಖುಷಿ ತಂದಿದೆ.

ಕೋಳಿ ಮೊಟ್ಟೆ ದರವು ಹೆಚ್ಚಾಗಿದ್ದರೆ, ಇತ್ತ ಚಿಕನ್ ದರ ಇಳಿಕೆಯಾಗಿದೆ. ಕಳೆದ 15 ದಿನಗಳಿಂದ ಮೊಟ್ಟೆ ದರ ಏರಿಕೆ ಕಂಡಿದೆ. ಕಳೆದ ವಾರ ಮೊಟ್ಟೆ ದರ 5 ರೂ. ಇತ್ತು. ಆದರೆ ಈಗ 7.50 ರೂ.ಗೆ ಮಾರಾಟವಾಗುತ್ತಿದೆ.

ಮುಂಗಾರು ಮಳೆ ಕೈಕೊಟ್ಟ ಕಾರಣ ಕುಕ್ಕುಟೋದ್ಯಮದ ಮೇಲೆ ಪರಿಣಾಮ ಬೀರಿದೆ ಎನ್ನಲಾಗುತ್ತಿದೆ. ಕೋಳಿಗೆ ನೀಡುವ ಆಹಾರ ದರ ಏರಿಕೆ ಹಾದಿಯಲ್ಲಿದ್ದು, ವಿದ್ಯುತ್ ದರ, ಕಾರ್ಮಿಕರ ವೇತನ ಮೊದಲಾದ ಉತ್ಪಾದನಾ ವೆಚ್ಚಗಳಿಂದ ಮೊಟ್ಟೆ ದರವು ಏರಿಕೆಯಾಗಿದೆ. ಇನ್ನು ಮಾರುಕಟ್ಟೆಯಲ್ಲಿ ಕೋಳಿ ಮಾಂಸದ ಬೇಡಿಕೆಗಿಂತ ಪೂರೈಕೆ ಹೆಚ್ಚಳವಾಗಿದೆ. ಬ್ರಾಯ್ಸರ್ ಕೋಳಿ ಈ ಹಿಂದೆ 180 -200 ರೂ.ವರೆಗೂ ಮಾರಾಟವಾಗಿತ್ತು. ಈಗ ಕೆಜಿಗೆ 140 -160 ರೂ. ಇದೆ.

ಇದನ್ನೂ ಓದಿ: Sesame benefits: ಬಂದಿದೆ ಚಳಿಗಾಲ; ಎಳ್ಳು ತಿನ್ನಲು ಇದು ಸಕಾಲ!

ಇಲ್ಲಿವೆ ಬಗೆಬಗೆಯ ಉಪ್ಪು: ಯಾರು ಹಿತವರು ನಿಮಗೆ ಈ ಉಪ್ಪಿನೊಳಗೆ!

ಉಪ್ಪಿಗಿಂತ ರುಚಿಯಿಲ್ಲ ಎಂಬ ಗಾದೆ ಮಾತಿದೆ. ಉಪ್ಪಿಗಿಂತ ಶ್ರೇಷ್ಠವಾದ ರುಚಿ ಬೇರೆ ಇಲ್ಲ. ಯಾಕೆಂದರೆ, ಯಾವ ರುಚಿಯೂ ಇಲ್ಲದೆ ಅಡುಗೆ ಮಾಡಬಹುದೇನೋ, ಆದರೆ, ಉಪ್ಪಿಲ್ಲದ ಊಟ ಕಷ್ಟ. ಉಪ್ಪು ಹಾಕದ ಅಡುಗೆ ಸಪ್ಪೆಯೇ. ಖಾರ, ಹುಳಿ, ಸಿಹಿಯಿಲ್ಲದೆಯೂ ಊಟ ನಡೆದೀತು. ಆದರೆ ಉಪ್ಪಿಲ್ಲದೆ ಬಹಳ ಕಷ್ಟ. ಅದಕ್ಕಾಗಿಯೇ ಉಪ್ಪಿಗೆ ಅಂಥ ಸ್ಥಾನ. ಉಪ್ಪು ಅಂದ ತಕ್ಷಣ ನಾವು ಬೆಳ್ಳನೆಯ ಪುಡಿ ಎಂದೇ ನೆನೆಸಿಕೊಳ್ಳುತ್ತೇವೆ. ಆದರೆ, ಉಪ್ಪಿನಲ್ಲೂ ಸಾಕಷ್ಟು ವಿಧಗಳಿವೆ. ಬಗೆಬಗೆಯ ಖನಿಜಾಂಶಗಳಿಂದ (mineral rich) ಸಮೃದ್ಧವಾಗಿರುವ ಬೇರೆ ಬೇರೆ ಬಗೆಯ ಉಪ್ಪುಗಳು ದೊರೆಯುತ್ತವೆ. ಇವುಗಳ ಆರೋಗ್ಯ ಲಾಭಗಳೂ (health benefits) ವಿಭಿನ್ನ. ಇಂಥ ಉಪ್ಪಿನ ಬಗೆಗಳ ಬಗ್ಗೆ ತಿಳಿದುಕೊಳ್ಳುವುದರಿಂದ ಹಾಗೂ ಅವುಗಳನ್ನು ಬಳಸುವುದರಿಂದ ನಿಮ್ಮ ಅಡುಗೆಯಲ್ಲೂ ಸಾಕಷ್ಟು ವ್ಯತ್ಯಾಸ (Food Tips, kitchen tips) ಕಂಡುಕೊಳ್ಳಬಹುದು.  ಬನ್ನಿ, ಹಾಗಾದರೆ ಬಗೆಬಗೆಯ ಉಪ್ಪುಗಳ (Salt variety) ಬಗೆಗೆ ಸ್ವಲ್ಪ ತಿಳಿಯೋಣ.

1. ಟೇಬಲ್‌ ಸಾಲ್ಟ್‌: ಟೇಬಲ್‌ ಸಾಲ್ಟ್‌ ಎಂಬುದು ಬಹು ಸಾಮಾನ್ಯವಾಗಿ ಎಲ್ಲರೂ ನಿತ್ಯವೂ ಬಳಸುವ ಉಪ್ಪು. ಸಾಮಾನ್ಯ ಉಪ್ಪು ಎಂದೇ ಜನಜನಿತವಾಗೊರುವ ಇದು ಪುಡಿಯಾದ ರೂಪದಲ್ಲಿ ಬೆಳ್ಳಗೆ ಇರುತ್ತದೆ. ನೀರಿನಲ್ಲಿ ಬಹುಬೇಗನೆ ಕರಗುವ ಇದು ಅಡುಗೆಗೆ ಬಹುತೇಕರು ನಿತ್ಯವೂ ಬಳಸುವ ಉಪ್ಪು. ಅತಿಯಾದ ಸಂಸ್ಕರಣಕ್ಕೆ ಒಳಪಟ್ಟು ತಯಾರಾಗಿ ಬಂದಿರುವುದರಿಂದ ಇದರಲ್ಲಿ ಸಾಕಷ್ಟು ಖನಿಜಾಂಶಗಳು ಇರುವುದಿಲ್ಲ. ಬಹುತೇಕವು ಸಂಸ್ಕರಣದ ಸಂದರ್ಭ ನಷ್ಟವಾಗಿರುತ್ತದೆ. ಸಂಸ್ಕರಿಸುವ ಸಂದರ್ಭ ಅಯೋಡಿನ್‌ ಸೇರಿಸಿರುವ ಉಪ್ಪಿದು.

2. ಕೋಶರ್‌ ಸಾಲ್ಟ್‌: ಇದು ಟೇಬಲ್‌ ಸಾಲ್ಟ್‌ನಷ್ಟು ಪುಡಿಯಾದ ರೂಪದಲ್ಲಿ ಇರುವುದಿಲ್ಲ. ಕೊಂಚ ಹರಳಿನ ಗಾತ್ರದಲ್ಲಿ ದೊರೆಯುತ್ತದೆ. ಇದೂ ಕೂಡಾ ಅಡುಗೆಗೆ ಸಾಮಾನ್ಯವಾಗಿ ಬಳಸಲ್ಪಡುತ್ತದೆ. ಇದನ್ನು ಸೋಡಿಯಂ ಕ್ಲೋರೈಡ್‌ನಿಂದ ನೇರವಾಗಿ ತಯಾರಿಸಿರುತ್ತಾರೆ. ಜೊತೆಗೆ ಇದು ಟೇಬಲ್‌ ಸಾಲ್ಟ್‌ ಮಾದರಿಯಲ್ಲಿ ಅಯೋಡಿನ್‌ ಹಾಗೂ ಕ್ಯಾಲ್ಶಿಯ ಸಿಲಿಕೇಟ್‌ ಸೇರಿಸಲ್ಪಟ್ಟಿರುವುದಿಲ್ಲ. ಹಾಗಾಗಿ ಟೇಬಲ್‌ ಸಾಲ್ಟ್‌ನಂತೆ ಇದು ಗಾಢತೆ ಪಡೆದಿರುವುದಿಲ್ಲ. ಅದಕ್ಕಾಗಿಯೇ ಟೇಬಲ್‌ ಸಾಲ್ಟ್‌ ಕೋಶರ್‌ ಸಾಲ್ಟ್‌ಗಿಂತ ಹೆಚ್ಚು ಉಪ್ಪಾಗಿರುತ್ತದೆ.

3. ಸೀ ಸಾಲ್ಟ್‌ (ಸಮುದ್ರ ಉಪ್ಪು): ಹೆಸರೇ ಹೇಳುವಂತೆ ಈ ಉಪ್ಪನ್ನು ಸಮುದ್ರದ ನೀರಿನಿಂತ ಮಾಡಲಾಗುತ್ತದೆ. ಸಮುದ್ರದ ನೀರನ್ನು ಗದ್ದೆಗಳಂಥ ರಚನೆಯಲ್ಲಿ ಹಾಯುವಂತೆ ಮಾಡಿ, ಅಲ್ಲಿ ಉಪ್ಪು ತಯಾರಿಸಲಾಗುತ್ತದೆ. ಈ ಉಪ್ಪು ಅತ್ಯಂತ ಕಡಿಮೆ ಸಂಸ್ಕರಣಕ್ಕೆ ಒಳಪಡುವುದರಿಂದ ಇದರಲ್ಲಿ ಖನಿಜಾಂಶಗಳು ನಷ್ಟವಾಗಿರುವುದಿಲ್ಲ. ಇದು ನೈಸರ್ಗಿಕವಾಗಿ ತಯಾರು ಮಾಡುವುದರಿಂದ ಬಹಳ ಹಿಂದಿನಿಂದಲೂ ಮನೆಗಳಲ್ಲಿ ಅಡುಗೆಯಲ್ಲಿ ಬಳಸಲ್ಪಡುತ್ತಿದೆ. ಕಲ್ಲುಪ್ಪು ಹೆಸರಿನಲ್ಲಿ ಬಳಕೆಯಾಗುವ ಇದಕ್ಕೆ ನಿರ್ಧಿಷ್ಟ ಪುಡಿಯ ಆಕಾರವಿರುವುದಿಲ್ಲ.

4. ಬ್ಲ್ಯಾಕ್‌ ಸಾಲ್ಟ್‌: ಕಾಲಾ ನಮಕ್‌ ಎಂಬ ಹೆಸರಿನಲ್ಲಿ ಜನಪ್ರಿಯವಾಗಿರುವ ಈ ಉಪ್ಪು ಇನ್ನೊಂದು ಸಾಮಾನ್ಯ ಬಗೆಯ ಉಪ್ಪು. ಇದನ್ನು ಹಿಮಾಲಯದ ಅಗ್ನಿಪರ್ವತಗಳ ಬಂಡೆಗಳಿಂದ ತಯಾರಿಸಲಾಗುತ್ತದೆ. ಇದರಲ್ಲಿ ಹೆಚ್ಚು ಪ್ರಮಾಣದಲ್ಲಿ ಕ್ಯಾಲ್ಶಿಯಂ, ಕಬ್ಬಿಣಾಂಶ, ಮೆಗ್ನೀಶಿಯಂ ಮೊದಲಾದ ಖನಿಜಾಂಶಗಳಿವೆ. ಸ್ವಲ್ಪ ಬೆರೆಯದೇ ಪರಿಮಳವಿರುವ ಈ ಉಪ್ಪನ್ನು ಕಡಿಮೆ ಪ್ರಮಾಣದಲ್ಲಿ ಕೆಲವು ಅಡುಗೆಗೆ ಬಳಸಬಹುದು.

5. ಹಿಮಾಲಯನ್‌ ಪಿಂಕ್‌ ಸಾಲ್ಟ್:‌ ಹಿಮಾಲಯನ್‌ ಸಾಲ್ಟ್‌ ಕೂಡಾ ಹೆಚ್ಚು ಪುಡಿಯಾದ ಆಕಾರದಲ್ಲಿರುವುದಿಲ್ಲ. ಕಲ್ಲುಪ್ಪಿನ ಹಾಗೆ ಹರಳಿನ ರೂಪದಲ್ಲಿರುತ್ತದೆ. ಪಾಕಿಸ್ತಾನ ಹಾಗೂ ಪಂಜಾಬ್‌ ಪ್ರಾಂತ್ಯದಿಂದ ಗಣಿಗಾರಿಕೆ ಮಾಡಿ ಈ ಉಪ್ಪನ್ನು ಸಂಗ್ರಹಿಸಲಾಗುತ್ತದೆ. ಇದು ಪ್ರಕೃತಿ ಸಹಜವಾಗಿಯೇ ಪಿಂಕ್‌ ಬಣ್ಣದಲ್ಲಿದ್ದು, ಇದರಲ್ಲಿ ಸಾಕಷ್ಟು ಖನಿಜ ಲವಣಗಳಿವೆ. ಹಾಗಾಗಿ ಬಹುತೇಕರು ಇತ್ತೀಚೆಗೆ ಟೇಬಲ್‌ ಸಾಲ್ಟ್‌ ಬದಲಾಗಿ ಪಿಂಕ್‌ ಸಾಲ್ಟ್‌ ಬಳಸುತ್ತಿದ್ದಾರೆ. ಇದರ ಬಣ್ಣದಿಂದಾಗಿ ಈ ಉಪ್ಪು ಆಕರ್ಷಕ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

MDH, Everest Spices: ಸಿಂಗಾಪುರ, ಹಾಂಕಾಂಗ್‌ ಬಳಿಕ ಇದೀಗ ನೇಪಾಳದಲ್ಲಿಯೂ ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ

MDH, Everest Spices: ಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇದೀಗ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನಗಳನ್ನು ನೇಪಾಳ ನಿಷೇಧಿಸಿದೆ. ʼʼಈ ಮಸಲಾ ಪದಾರ್ಥಗಳಲ್ಲಿ ಹಾನಿಕಾರಕ ರಾಸಾಯನಿಕಗಳಿವೆ ಬಗ್ಗೆ ಸುದ್ದಿ ಬಂದ ನಂತರ ಒಂದು ವಾರದ ಹಿಂದೆ ಆಮದನ್ನು ನಿಷೇಧಿಸಲಾಗಿದೆ. ಜತೆಗೆ ನಾವು ಮಾರುಕಟ್ಟೆಯಲ್ಲಿ ಅದರ ಮಾರಾಟವನ್ನು ನಿಲ್ಲಿಸಿದ್ದೇವೆ” ಎಂದು ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯ ವಕ್ತಾರ ಮೋಹನ್ ಕೃಷ್ಣ ಮಹರ್ಜನ್ ತಿಳಿಸಿದ್ದಾರೆ.

VISTARANEWS.COM


on

MDH, Everest Spices
Koo

ಕಾಠ್ಮಂಡುಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇದೀಗ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನ (MDH, Everest Spices)ಗಳನ್ನು ನೇಪಾಳ ನಿಷೇಧಿಸಿದೆ. ಈ ಹಿಂದೆ ಇದೇ ಕಾರಣಕ್ಕೆ ಈ ಉತ್ಪನ್ನಗಳನ್ನು ಸಿಂಗಾಪುರ, ಹಾಂಕಾಂಗ್‌ ಮುಂತಾದೆಡೆ ಬ್ಯಾನ್‌ ಮಾಡಲಾಗಿತ್ತು. ಕ್ಯಾನ್ಸರ್‌ಗೆ ಕಾರಣವಾಗಬಹುದಾದ ಎಥಿಲೀನ್ ಆಕ್ಸೈಡ್ (Ethylene Oxide) ಅಂಶ ಇದೆ ಎನ್ನುವ ದೂರು ಕೇಳಿ ಬಂದ ಕಾರಣಕ್ಕೆ ಈ ಉತ್ಪನ್ನಗಳ ಆಮದು, ಮಾರಾಟ ಮತ್ತು ಬಳಕೆಯನ್ನು ನೇಪಾಳದಲ್ಲಿ ನಿಷೇಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಎರಡು ನಿರ್ದಿಷ್ಟ ಬ್ರ್ಯಾಂಡ್‌ಗಳ ಮಸಾಲೆಗಳಲ್ಲಿನ ರಾಸಾಯನಿಕಗಳ ಬಗ್ಗೆ ಪರೀಕ್ಷೆಗಳು ನಡೆಯುತ್ತಿವೆ. ಅಂತಿಮ ವರದಿ ಬರುವವರೆಗೆ ನಿಷೇಧವು ಜಾರಿಯಲ್ಲಿರುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ʼʼಈ ಮಸಲಾ ಪದಾರ್ಥಗಳಲ್ಲಿ ಹಾನಿಕಾರಕ ರಾಸಾಯನಿಕಗಳಿವೆ ಬಗ್ಗೆ ಸುದ್ದಿ ಬಂದ ನಂತರ ಒಂದು ವಾರದ ಹಿಂದೆ ಆಮದನ್ನು ನಿಷೇಧಿಸಲಾಗಿದೆ. ಜತೆಗೆ ನಾವು ಮಾರುಕಟ್ಟೆಯಲ್ಲಿ ಅದರ ಮಾರಾಟವನ್ನು ನಿಲ್ಲಿಸಿದ್ದೇವೆ” ಎಂದು ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯ ವಕ್ತಾರ ಮೋಹನ್ ಕೃಷ್ಣ ಮಹರ್ಜನ್ ತಿಳಿಸಿದ್ದಾರೆ.

“ಹಾಂಗ್‌ಕಾಂಗ್ ಮತ್ತು ಸಿಂಗಾಪುರ್ ಈಗಾಗಲೇ ಈ ಉತ್ಪನ್ನಗಳಿಗೆ ನಿಷೇಧ ಹೇರಿವೆ. ಅಮೆರಿಕ ಹಾಗೂ ಆಸ್ಟ್ರೇಲಿಯಾ ಕೂಡ ಈ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಹೀಗಾಗಿ ನಾವು ಕೂಡ ಪರೀಕ್ಷೆ ನಡೆಸಲು ಮುಂದಾಗಿದ್ದೇವೆʼʼ ಎಂದು ಅವರು ವಿವರಿಸಿದ್ದಾರೆ. ಈ ಮಧ್ಯೆ ರಫ್ತಾಗುವ ಭಾರತೀಯ ಮಸಾಲೆಗಳ ಸುರಕ್ಷತೆ ಮತ್ತು ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಭಾರತೀಯ ಸ್ಪೈಸ್ ಮಂಡಳಿ ಕ್ರಮ ಕೈಗೊಂಡಿದೆ. ಮಂಡಳಿ ಟೆಕ್ನೋ-ಸೈಂಟಿಫಿಕ್ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತಂದಿದೆ. ಜತೆಗೆ ಪರೀಕ್ಷೆಗಾಗಿ ಮಾದರಿಗಳನ್ನು ಸಂಗ್ರಹಿಸಿದೆ.

ಅಖಿಲ ಭಾರತ ಸಾಂಬಾರ ಪದಾರ್ಥಗಳ ರಫ್ತುದಾರರ ವೇದಿಕೆ ಮತ್ತು ಭಾರತೀಯ ಮಸಾಲೆ ಮತ್ತು ಆಹಾರ ಪದಾರ್ಥ ರಫ್ತುದಾರರ ಸಂಘದಂತಹ 130ಕ್ಕೂ ಹೆಚ್ಚು ಸಂಘಗಳೊಂದಿಗೆ ಭಾರತೀಯ ಸ್ಪೈಸ್ ಮಂಡಳಿ ಸಮಾಲೋಚನೆಯನ್ನೂ ನಡೆಸಿದೆ. ಮಂಡಳಿಯು ಎಲ್ಲ ರಫ್ತುದಾರರಿಗೆ ಎಥಿಲೀನ್ ಆಕ್ಸೈಡ್ ಬಳಕೆ ಬಗ್ಗೆ ಎಚ್ಚರಿಕೆ ನೀಡಿದೆ.

ಕೆಲವು ದಿನಗಳ ಹಿಂದೆ ಎಂಡಿಎಚ್‌, ಎವರೆಸ್ಟ್‌ ಮಸಾಲೆ ಸೇರಿದಂತೆ ಭಾರತದ ಒಟ್ಟು 527 ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲಿನ್‌ ಆಕ್ಸೈಡ್‌ ಹೆಚ್ಚಿನ ಪ್ರಮಾಣದಲ್ಲಿದೆ ಎಂಬುದನ್ನು ಯುರೋಪಿಯನ್ ಯೂನಿಯನ್ ಆಹಾರ ಸುರಕ್ಷತಾ ಅಧಿಕಾರಿಗಳು ಬಹಿರಂಗಪಡಿಸಿದ್ದರು. ಹೀಗಾಗಿ 572 ಉತ್ಪನ್ನಗಳ ಪೈಕಿ 87 ಉತ್ಪನ್ನಗಳ ರಫ್ತನ್ನು ಈಗಾಗಲೇ ಗಡಿಯಲ್ಲಿ ರದ್ದುಗೊಳಿಸಲಾಗಿದೆ.

ಇನ್ನು ಅಪಾಯಕಾರಿ ರಾಸಾಯನಿಕಗಳು ಎಳ್ಳು ಬೀಜಗಳು, ಗಿಡಮೂಲಿಕೆಗಳು, ಮಸಾಲೆಗಳು ಮತ್ತು ಇತರ ಆಹಾರ ಪದಾರ್ಥಗಳಲ್ಲೂ ಕಂಡು ಬಂದಿವೆ. ಇನ್ನು ಎಥಿಲೀನ್ ಆಕ್ಸೈಡ್ ಅನ್ನು ಮೂಲತಃ ವೈದ್ಯಕೀಯ ಸಾಧನಗಳನ್ನು ಸ್ವಚ್ಛಗೊಳಿಸ ಬಳಸುವ ಕ್ರಿಮಿನಾಶಕವಾಗಿ ಬಳಸಲಾಗುತ್ತದೆ. ಈ ರಾಸಾಯನಿಕ ದೇಹಕ್ಕೆ ಸೇರಿದರೆ ಲಿಂಫೋಮಾ ಮತ್ತು ಲ್ಯುಕೇಮಿಯಾ ಸೇರಿದಂತೆ ವಿವಿಧ ಕ್ಯಾನ್ಸರ್‌ಗಳು ಬರು ಸಾಧ್ಯತೆ ಅತಿ ಹೆಚ್ಚಿದೆ.

ಇದನ್ನೂ ಓದಿ: MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಗುಣಮಟ್ಟ ತಪಾಸಣೆಗೆ ಸೂಚನೆ

Continue Reading

ಆಹಾರ/ಅಡುಗೆ

Milk Products: ಹಾಲು, ಹಾಲಿನ ಉತ್ಪನ್ನ ಸೇವಿಸಿದರೆ ಲಾಭವೋ ನಷ್ಟವೋ?

ನಿತ್ಯವೂ ಹಾಲು ಕುಡಿಯುವುದು, ಹಾಲು ಹಾಕಿದ ಚಹಾ ಕಾಫಿ ಸೇವನೆ, ಮೊಸರು, ಮಜ್ಜಿಗೆ, ತುಪ್ಪಗಳ ಸೇವನೆ, ಹಾಲಿನ ಉತ್ಪನ್ನಗಳಾದ (Milk products) ಪನೀರ್‌, ಖೋವಾ ಮತ್ತಿತರ ವಸ್ತುಗಳನ್ನು ಧಾರಳವಾಗಿ ಬಳಸುತ್ತೇವೆ. ಆದರೆ, ಇತ್ತೀಚೆಗಿನ ದಿನಗಳಲ್ಲಿ ವೀಗನ್‌ ಆಗಿ ಬದಲಾದ ಮಂದಿ ಸೇರಿದಂತೆ ಅನೇಕರು ಈ ಡೈರಿ ಉತ್ಪನ್ನಗಳನ್ನು (Dairy products) ಬಿಡುವ ಟ್ರೆಂಡ್‌ ಹೆಚ್ಚಾಗುತ್ತಿದೆ. ಹಾಲು ಸೇವನೆಯ ಲಾಭ ನಷ್ಟಗಳೇನು?

VISTARANEWS.COM


on

Milk Products
Koo

ನಿತ್ಯಾಹಾರದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ (Milk products) ಸೇವನೆ ನಮ್ಮ ಭಾರತೀಯ ಆಹಾರ ಪದ್ಧತಿಯಲ್ಲಂತೂ ಬಹಳ ಸಾಮಾನ್ಯ. ನಿತ್ಯವೂ ಹಾಲು ಕುಡಿಯುವುದು, ಹಾಲು ಹಾಕಿದ ಚಹಾ ಕಾಫಿ ಸೇವನೆ, ಮೊಸರು, ಮಜ್ಜಿಗೆ, ತುಪ್ಪಗಳ ಸೇವನೆ, ಹಾಲಿನ ಉತ್ಪನ್ನಗಳಾದ ಪನೀರ್‌, ಖೋವಾ ಮತ್ತಿತರ ವಸ್ತುಗಳನ್ನು ಧಾರಳವಾಗಿ ಬಳಸುತ್ತೇವೆ. ಆದರೆ, ಇತ್ತೀಚೆಗಿನ ದಿನಗಳಲ್ಲಿ ವೀಗನ್‌ ಆಗಿ ಬದಲಾದ ಮಂದಿ ಸೇರಿದಂತೆ ಅನೇಕರು ಈ ಡೈರಿ ಉತ್ಪನ್ನಗಳನ್ನು ಬಿಡುವ ಟ್ರೆಂಡ್‌ ಹೆಚ್ಚಾಗುತ್ತಿದೆ. ಇನ್ನೂ ಕೆಲವರಿಗೆ, ಹಾಲಿನಲ್ಲಿ ಇರುವ ಲ್ಯಾಕ್ಟೋಸ್‌ ಕಾರಣದಿಂದಲೂ ಕೆಲವರು ಹಾಲಿನ ಉತ್ಪನ್ನಗಳನ್ನು ಬಿಡುವುದುಂಟು. ಆದರೆ ಇದರಿಂದ ಲಾಭಗಳೂ ಇವೆ, ನಷ್ಟವೂ ಇವೆ. ಬನ್ನಿ, ಲ್ಯಾಕ್ಟೋಸ್‌ ರಹಿತ ಆಹಾರ ಸೇವನೆಯಿಂದ ಆಗುವ ಲಾಭ ನಷ್ಟಗಳನ್ನು ಗಮನಿಸೋಣ.

Health Tips Kannada Stay away from these foods to get rid of acne

ಮೊಡವೆ ನಿವಾರಣೆ

ಹಾಲಿನ ಉತ್ಪನ್ನಗಳನ್ನು ಬಿಡುವುದರಿಂದ ಮೊಡವೆಗಳ ಸಮಸ್ಯೆ ಕಡಿಮೆಯಾಗಬಹುದು. ಕೆಲವು ಮಂದಿಗೆ ಹಾಲಿನ ಉತ್ಪನ್ನ ಸೇವನೆಯಿಂದ ಚರ್ಮ ಎಣ್ಣೆಯುಕ್ತವಾಗುವುದರಿಂದ ಮೊಡವೆಗಳುಂಟಾಗುತ್ತವೆ. ಹೀಗಾಗಿ ಕೆಲವರಿಗೆ ಹಾಲು ಹಾಗೂ ಹಾಲಿನ ಉತ್ಪನ್ನ ಬಿಟ್ಟ ಕೂಡಲೇ, ಚರ್ಮದ ಆರೋಗ್ಯ ಗಣನೀಯವಾಗಿ ಸುಧಾರಿಸುತ್ತದೆ.

Weight Loss

ತೂಕ ಇಳಿಕೆ

ತೂಕ ಇಳಿಸಬೇಕು ಎಂದು ಬಯಸುವ ಮಂದಿಯೂ ಹಾಲಿನ ಉತ್ಪನ್ನಗಳಿಗೆ ಗುಡ್‌ಬೈ ಹೇಳುತ್ತಾರೆ. ಲ್ಯಾಕ್ಟೋಸ್‌ನಲ್ಲಿ ನೈಸರ್ಗಿಕ ಸಕ್ಕರೆ ಇರುವುದರಿಂದ ಇದನ್ನು ಬಿಟ್ಟ ಕೂಡಲೇ, ಸಹಜವಾಗಿಯೇ ತೂಕದಲ್ಲಿ ಇಳಿಕೆಯಾಗುತ್ತದೆ.

Pay attention to the causes of allergy flare-ups There can be many reasons like pollen dust food etc Monsoon Allergies

ಅಲರ್ಜಿ ನಿವಾರಣೆ

ಕೆಲವು ಮಂದಿಗೆ ಲ್ಯಾಕ್ಟೋಸ್‌ನಿಂದ ಅಲರ್ಜಿಗಳುಂಟಾಗುವ ಕಾರಣದಿಂದ ಇದನ್ನು ಬಿಟ್ಟ ಕೂಡಲೇ ಅಲರ್ಜಿ ಸಮಸ್ಯೆ ಪರಿಹಾರವಾಗುತ್ತದೆ.

Dairy products Protein Foods

ಡೇರಿ ಉತ್ಪನ್ನದ ಕತೆ ಏನು?

ಆದರೆ, ಡೇರಿ ಉತ್ಪನ್ನಗಳನ್ನು ಬಿಡುವುದು ಬಹಳ ಕಷ್ಟ. ಕೇವಲ ಹಾಲು ಬಿಡುವುದರಿಂದ ಡೈರಿ ಉತ್ಪನ್ನ ಬಿಟ್ಟಂತಾಗುವುದಿಲ್ಲ. ಬಹಳಷ್ಟು ಆಹಾರಗಳಲ್ಲಿ ಇಂದು ಡೇರಿ ಉತ್ಪನ್ನಗಳನ್ನು ಬಳಸುವುದರಿಂದ ಸಾಕಷ್ಟು ಆಹಾರ ಪದಾರ್ಥಗಳನ್ನು ನಾವು ಬಿಡಬೇಕಾಗುತ್ತದೆ. ಇದು ಬಹಳ ಕಷ್ಟ.

ಪೋಷಕಾಂಶ ಕೊರತೆ

ಹಾಲು ಹಾಗೂ ಹಾಲಿನ ಉತ್ಪನ್ನಗಳಲ್ಲಿ ನಮ್ಮ ದೇಹಕ್ಕೆ ನಿತ್ಯವೂ ಬೇಕಾದ ಸಾಕಷ್ಟು ಪೋಷಕಾಂಶಗಳು ಸಿಗುವುದರಿಂದ ಇದನ್ನು ಬಿಟ್ಟರೆ, ಇದಕ್ಕೆ ಪರ್ಯಾಯವಾಗಿ ಪೋಷಕಾಂಶಗಳನ್ನು ಹುಡುಕಬೇಕಾಗುತ್ತದೆ. ಇಲ್ಲವಾದರೆ ಈ ಪೋಷಕಾಂಶಗಳ ಕೊರತೆಯಾಗಬಹುದು.

ಇದನ್ನೂ ಓದಿ: Moringa Leaves Health Benefits: ನುಗ್ಗೆ ಸೊಪ್ಪು ಏಕೆ ತಿನ್ನಬೇಕು? ಏನಿದೆ ಇದರಲ್ಲಿ ವಿಶೇಷ ಗುಣ?

ಪೋಷಕಾಂಶ ಪೂರೈಕೆ

ಹಾಲಿನ ಉತ್ಪನ್ನಗಳಿಂದ ನಮ್ಮ ದೇಹಕ್ಕೆ ನಿತ್ಯವೂ ಸಿಗುವ ಪ್ರೊಟೀನ್‌, ಕ್ಯಾಲ್ಸಿಯಂ ಸೇರಿದಂತೆ ಪ್ರಮುಖ ಪೋಷಕಾಂಶಗಳನ್ನು ಬೇರೆ ಆಹಾರಗಳಿಂದ ಭರಿಸುವುದು ಬಹಳ ಕಷ್ಟ. ಇದಕ್ಕಾಗಿ ಸಪ್ಲಿಮೆಂಟ್‌ಗಳ ಸೇವನೆಯನ್ನೂ ಮಾಡಬೇಕಾಗಬಹುದು. ಸಪ್ಲಿಇಮೆಂಟ್‌ ಸೇವನೆ ಮಾಡದೇ ಇದ್ದರೆ, ಹಾಳಿಗೆ ಪರ್ಯಾಯ ಮೂಲಗಳನ್ನು ಹುಡುಕಿ ನಿತ್ಯವೂ ಆ ಪೋಷಕಾಂಶಗಳು ಸರಿಯಾದ ಪ್ರಮಾಣದಲ್ಲಿ ಸೇರುವಂತೆ ಮಾಡಬೇಕು. ಈ ಕಾರಣಗಳಿಂದಾಗಿ, ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಬಿಡುವುದರಿಂದ ಕೆಲವು ಲಾಭಗಳಿದ್ದರೂ, ನಷ್ಟದ ಪ್ರಮಾಣ ಅಧಿಕವಾಗಿರುವುದರಿಂದ ಅದನ್ನು ಬಿಡುವುದು ಆರೋಗ್ಯಕರ ಲಕ್ಷಣವಲ್ಲ ಎನ್ನಲಾಗುತ್ತದೆ. ಇವು ನಮ್ಮ ನಿತ್ಯ ಆಹಾರದ ಪ್ರಮುಖ ಭಾಗವಾಗಿರುವುದರಿಂದ ಇದನ್ನು ಬಿಡುವುದು ಯೋಗ್ಯ ಆಯ್ಕೆಯಲ್ಲ ಎಂದು ತಜ್ಞರು ಹೇಳುತ್ತಾರೆ.

Continue Reading

ಆಹಾರ/ಅಡುಗೆ

Food Tips Kannada: ಸಸ್ಯಾಹಾರಿಗಳಿಗೆ ಒಮೇಗಾ 3 ಕೊಬ್ಬಿನಾಮ್ಲ ಯಾವುದರಲ್ಲಿ ದೊರೆಯುತ್ತದೆ?

ಒಮೇಗಾ 3 ಕೊಬ್ಬಿನಾಮ್ಲ ಎನ್ನುತ್ತಿದ್ದಂತೆ ಕೊಬ್ಬಿನ ಮೀನುಗಳು ನೆನಪಾಗುತ್ತವೆ. ಸಾಗರೋತ್ಪನ್ನಗಳಿಂದ ಹೆಚ್ಚಿನ ಪ್ರಮಾಣದ ಒಮೇಗಾ 3 ದೊರೆಯುವುದು ಹೌದು. ಅದರರ್ಥ ಸಸ್ಯಾಹಾರಿಗಳಿಗೆ ಈ ಸತ್ವ ಇಲ್ಲವೆಂದಲ್ಲ. ಹಾಗಾದರೆ ಯಾವೆಲ್ಲ ಸಸ್ಯಜನ್ಯ ವಸ್ತುಗಳಿಂದ ಒಮೇಗಾ 3 ಕೊಬ್ಬಿನಾಮ್ಲವನ್ನು (Food Tips Kannada) ಪಡೆಯಬಹುದು?

VISTARANEWS.COM


on

Food Tips Kannada
Koo

ದೇಹವು ಪೂರ್ಣಾರೋಗ್ಯದಲ್ಲಿ ಇರಬೇಕೆಂದಾದರೆ ಆವಶ್ಯಕ ಪೌಷ್ಟಿಕಾಂಶಗಳೆಲ್ಲ ಪೂರ್ಣ ಪ್ರಮಾಣದಲ್ಲಿ ದೊರೆಯಬೇಕು. ಉದಾ, ಒಮೇಗಾ ೩ ಕೊಬ್ಬಿನಾಮ್ಲ ಹಲವು ಕಾರಣಗಳಿಂದಾಗಿ ದೇಹಕ್ಕೆ ಬೇಕೆಬೇಕು. ಮುಖ್ಯವಾಗಿ ಹೃದಯದ ಆರೋಗ್ಯ ರಕ್ಷಣೆಗೆ ಮತ್ತು ಮೆದುಳಿನ ಸಂರಕ್ಷಣೆಗೆ ಒಮೇಗಾ ೩ ಕೊಬ್ಬಿನಾಮ್ಲ ಅಗತ್ಯವಾಗಿ ಬೇಕು. ಮೀನಿನಲ್ಲಿ ಈ ಅಂಶ ಯಥೇಚ್ಛವಾಗಿ ದೊರೆಯುತ್ತದೆ. ಆದರೆ ಸಸ್ಯಾಹಾರಿಗಳಿಗೆ? ಅವರೇನು ತಿಂದರೆ ಒಮೇಗಾ ೩ ಕೊಬ್ಬಿನಾಮ್ಲವನ್ನು ಸಾಕಷ್ಟು ಪ್ರಮಾಣದಲ್ಲಿ (Food Tips Kannada) ಪಡೆಯುವುದಕ್ಕ್ ಸಾಧ್ಯ?

Flax Seeds with Pottery

ಅಗಸೆ ಬೀಜ

ಸಸ್ಯಾದಿಗಳಲ್ಲಿ ದೊರೆಯುವ ಒಮೇಗಾ 3 ಕೊಬ್ಬಿನಾಮ್ಲದ ಮೂಲಗಳ ಪೈಕಿ ಅಗಸೆ ಬೀಜ ಅತ್ಯಂತ ಹೆಚ್ಚಿನದ್ದು. ಆಲ್ಫಲಿನೊಲೆನಿಕ್‌ ಆಮ್ಲವು ಈ ಸಣ್ಣ ಬೀಜಗಳಲ್ಲಿ ಸಾಂದ್ರವಾಗಿದೆ. ಇದಲ್ಲದೆ, ನಾರು, ಪ್ರೊಟೀನ್‌, ಹಲವು ರೀತಿಯ ವಿಟಮಿನ್‌ಗಳು, ಖನಿಜಗಳು ಇದರಲ್ಲಿ ಹೇರಳವಾಗಿವೆ. ಹಾಗಾಗಿ ಈ ಬೀಜದ ಚಟ್ಣಿಪುಡಿಯಿಂದ ತೊಡಗಿ, ಎಣ್ಣೆಯವರೆಗೆ ಹಲವು ರೀತಿಯಲ್ಲಿ ಇದನ್ನು ನಿತ್ಯವೂ ಆಹಾರದಲ್ಲಿ ಉಪಯೋಗಿಸುವುದು ಶ್ರೇಷ್ಠ.

Chia Different Types of Seeds with Health Benefits

ಚಿಯಾ ಬೀಜ

ಈ ಬೀಜಗಳಂತೂ ಅಗಸೆ ಬೀಜಕ್ಕಿಂತಲೂ ಸಣ್ಣವು. ಆದರೆ ಒಮೇಗಾ 3 ಕೊಬ್ಬಿನಾಮ್ಲದ ವಿಷಯಕ್ಕೆ ಬಂದರೆ ಮಾತ್ರ ಸಣ್ಣವಲ್ಲ. ಇದರಲ್ಲೂ ಆಲ್ಫ ಲಿನೋಲೆನಿಕ್‌ ಆಮ್ಲ ಧಾರಾಳವಾಗಿದೆ. ಇದನ್ನು ಆಹಾರದಲ್ಲಿ ಬಳಸುವುದೂ ಸಹ ಕಷ್ಟವಲ್ಲ. ನಿತ್ಯವೂ ನೀರಿಗೆ ಹಾಕಿ ಕುಡಿದರೂ ಸಾಕಾಗುತ್ತದೆ. ಇದರಿಂದ ಜೀರ್ಣಾಂಗಗಳ ಆರೋಗ್ಯ ವೃದ್ಧಿಸುತ್ತದೆ, ತೂಕ ನಿರ್ವಹಣೆಗೆ ಸಹಾಯವಾಗುತ್ತದೆ, ಹೃದಯದ ಆರೋಗ್ಯ ರಕ್ಷಣೆಗೂ ನೆರವಾಗುತ್ತದೆ.

Hemp seed Different Types of Seeds with Health Benefits

ಹೆಂಪ್‌ ಬೀಜಗಳು

ಭಾರತದಲ್ಲಿ ಅಷ್ಟಾಗಿ ಪ್ರಚಲಿತವಿಲ್ಲದ ಬೀಜಗಳಿವು. ಆದರೆ ಸತ್ವಗಳ ವಿಷಯದಲ್ಲಿ ಕಡಿಮೆಯಿಲ್ಲ. ಇದರಲ್ಲಿಯೂ ಒಮೇಗಾ 3 ಕೊಬ್ಬಿನಾಮ್ಲ ಸಾಂದ್ರವಾಗಿದೆ. ಜೊತೆಗೆ ಹಲವು ರೀತಿಯ ಅಮೈನೊ ಆಮ್ಲಗಳು, ಖನಿಜಗಳು ದೇಹಕ್ಕೆ ದೊರೆಯುತ್ತವೆ. ಇದರ ತೈಲವೂ ಲಭ್ಯವಿದ್ದು, ಅಡುಗೆಗೆ ಬಳಸಲು ಸಾಧ್ಯವಿದೆ. ಗೋಡಂಬಿಯಂತೆಯೇ ಹೆಂಪ್‌ ಬೀಜಗಳನ್ನು ಸಹ ನಾನಾ ಖಾದ್ಯಗಳಿಗೆ ಉಪಯೋಗಿಸಬಹುದು.

Walnuts Dry Fruits For Hair Fall

ವಾಲ್‌ನಟ್‌

ಒಮೇಗಾ 3 ಕೊಬ್ಬಿನಾಮ್ಲವನ್ನು ನೈಸರ್ಗಿಕವಾಗಿಯೇ ಯಥೇಚ್ಛವಾಗಿ ಹೊಂದಿರುವ ಇನ್ನೊಂದು ವಸ್ತುವಿದು. ನೋಡಿದಾಗ ಮೆದುಳನ್ನು ನೆನಪಿಸುವ ವಾಲ್‌ನಟ್‌ನಲ್ಲಿ ಪ್ರೊಟೀನ್‌, ನಾರು ಮತ್ತು ಹಲವು ರೀತಿಯ ಉತ್ಕರ್ಷಣ ನಿರೋಧಕಗಳಿವೆ. ಇವುಗಳನ್ನು ಹಾಗೆಯೇ ಬಾಯಾಡಬಹುದು ಅಥವಾ ಸಲಾಡ್‌ಗಳಿಗೆ, ಬ್ರೆಡ್‌, ಓಟ್‌ಮೀಲ್‌ ಮುಂತಾದ ಹಲವು ತಿನಿಸುಗಳೊಂದಿಗೆ ಇದನ್ನು ಸೇರಿಸಲೂಬಹುದು.

ಕ್ಯಾನೊಲ ಎಣ್ಣೆ

ಅಡುಗೆಗೆ ಬಳಸುವ ಎಣ್ಣೆಯನ್ನು ಉಳಿದೆಲ್ಲದರ ಬದಲಿಗೆ ಕ್ಯಾನೊಲ ಎಣ್ಣೆಯನ್ನು ಬಳಸಬಹುದು. ಇದರಲ್ಲೂ ಒಮೇಗಾ 3 ಕೊಬ್ಬಿನಾಮ್ಲ ಧಾರಾಳವಾಗಿದೆ. ಗಾಣದಲ್ಲಿ ತೆಗೆದ ಅಥವಾ ಕೋಲ್ಡ್‌ ಪ್ರೆಸ್ಡ್‌ ರೀತಿಯಿಂದ ತೆಗೆದ ಕ್ಯಾನೊಲ ಎಣ್ಣೆಯನ್ನು ಬಳಸುವುದು ಸೂಕ್ತ. ಇದನ್ನು ಒಗ್ಗರಣೆಗೆ, ಹುರಿಯಲು, ಕರಿಯಲು ಹಾಗೂ ಉಳಿದ ಎಲ್ಲ ರೀತಿಯಲ್ಲೂ ಬಳಸಬಹುದು.

It provides good protein for vegetarians Soybeans Benefits

ಸೋಯಾ ಉತ್ಪನ್ನಗಳು

ತೋಫು, ಎಡಮೇಮ್‌ ಮುಂತಾದ ಎಲ್ಲ ರೀತಿಯ ಸೋಯಾ ಉತ್ಪನ್ನಗಳಲ್ಲಿ ಒಮೇಗಾ 3 ಕೊಬ್ಬಿನಾಮ್ಲ ದೊರೆಯುತ್ತದೆ. ಸೋಯಾ ಹಾಲನ್ನು ಕೂಡ ಈ ಪಟ್ಟಿಗೆ ಸೇರಿಸಬಹುದು. ಪನೀರ್‌ನಂತೆಯೇ ತೋಫು ಬಳಕೆಗೆ ಬರುತ್ತದೆ. ಉಳಿದೆಲ್ಲ ಕಾಳುಗಳಂತೆ ಎಡಮೇಮ್‌ ಬಳಸಬಹುದು. ಸೋಯಾ ಚಂಕ್‌ಗಳನ್ನು ತರಕಾರಿಗಳ ಜೊತೆಗೆ ಬೇಯಿಸಲು ಸಾಧ್ಯವಿದೆ.

ಇದನ್ನೂ ಓದಿ: Digestion Tips: ಜೀರ್ಣಾಂಗಗಳ ಕ್ಷಮತೆ ಹೆಚ್ಚಿಸುವುದು ಹೇಗೆ?

ಇತರ ಮೂಲಗಳು

ಲಘುವಾದ ಅಡಿಕೆಯಂಥ ಘಮವನ್ನು ಹೊಂದಿರುವ ಸೆಣಬಿನ ಬೀಜಗಳು, ಪಾಚಿಯೊಂದರಿಂದ ಸಿದ್ಧಪಡಿಸುವ ಆಲ್ಗಲ್‌ ಎಣ್ಣೆ, ಬ್ರಸೆಲ್‌ ಸ್ಪ್ರೌಟ್‌ ಮುಂತಾದ ಆಹಾರಗಳಲ್ಲೂ ಒಮೇಗಾ 3 ಕೊಬ್ಬಿನಾಮ್ಲ ಸಾಕಷ್ಟು ಪ್ರಮಾಣದಲ್ಲಿ ಇರುತ್ತದೆ. ಹೀಗೆ ಸಸ್ಯಾಹಾರಿಗಳಿಗೂ ಒಮೇಗಾ ೩ ಕೊಬ್ಬಿನಾಮ್ಲ ದೇಹಕ್ಕೆ ಅಗತ್ಯವಾದಷ್ಟು ದೊರೆಯುವುದಕ್ಕೆ ಸಾಧ್ಯವಿದೆ. ಇದಕ್ಕಾಗಿ ಇದಿಷ್ಟೂ ರೀತಿಯ ಆಹಾರಗಳನ್ನು ನಿಯಮಿತವಾಗಿ ಬಳಕೆ ಮಾಡುವುದು ಆವಶ್ಯಕ.

Continue Reading

ಆಹಾರ/ಅಡುಗೆ

Health Tips Kannada: ಈ ಆಹಾರಗಳಿಂದ ದೂರವಿದ್ದರೆ ಮೊಡವೆ ಸಮಸ್ಯೆಯಿಂದ ಪಾರಾಗಬಹುದು!

ಒಬ್ಬೊಬ್ಬರ ದೇಹ ಪ್ರಕೃತಿ ಒಂದೊಂದು ಬಗೆ. ಮೊಡವೆಗಳ ಸಮಸ್ಯೆಗೆ ಎಲ್ಲರ ಕಾರಣಗಳೂ ಒಂದೇ ಆಗಿರಬೇಕಾಗಿಲ್ಲ. ಆದರೆ, ಬಹುತೇಕರ ಸಮಸ್ಯೆ ಎಂದರೆ ಎಣ್ಣೆ ಚರ್ಮ. ಚರ್ಮದಲ್ಲಿ ಅತಿಯಾದ ಎಣ್ಣೆ ಸ್ರವಿಸಲ್ಪಡುವುದು ಹಾಗೂ ಇದರಿಂದ ಉಂಟಾಗುವ ಮೊಡವೆಗಳು. ಇದಕ್ಕಾಗಿ ಅನೇಕರು ಬಳಸದ ಕ್ರೀಮ್‌ಗಳಿಲ್ಲ, ಮಾಡದ ಮನೆಮದ್ದುಗಳಿಲ್ಲ, ಹೋಗದ ಪಾರ್ಲರ್‌ಗಳಿಲ್ಲ. ಆದರೆ ಸಮಸ್ಯೆ ಮಾತ್ರ ಎಂದಿನದ್ದೇ. ಹಾಗಾದರೆ ಮೊಡವೆಗಳಿಗೆ ಪರಿಹಾರವೇ ಇಲ್ಲವೇ? ಈ ಲೇಖನ ಓದಿ.

VISTARANEWS.COM


on

Health Tips Kannada Stay away from these foods to get rid of acne
Koo

ಬೆಂಗಳೂರು: ಮೊಡವೆ ಮತ್ತು ಮೊಡವೆಗಳ ಕಲೆಗಳಿಂದ ಬೇಸತ್ತ (Health Tips Kannada) ಮಂದಿ ಏನೆಲ್ಲ ಸರ್ಕಸ್‌ ಮಾಡಿದರೂ ಮೊಡವೆಯಿಂದ ಮುಕ್ತಿ ಸಿಗುವುದಿಲ್ಲ ಎಂದು ಬೇಸರ ಪಡಬಹುದು. ನೂರೆಂಟು ಮಂದಿ ನೂರಾರು (foods to get rid of acne) ಸಲಹೆ ಕೊಡಬಹುದಾದರೂ, ಎಲ್ಲರಿಗೂ ಎಲ್ಲ ಸಲಹೆಗಳೂ ಹೊಂದಲಾರದು. ಕಾರಣ, ಒಬ್ಬೊಬ್ಬರ ದೇಹ ಪ್ರಕೃತಿ ಒಂದೊಂದು ಬಗೆ. ಮೊಡವೆಗಳ ಸಮಸ್ಯೆಗೆ ಎಲ್ಲರ ಕಾರಣಗಳೂ ಒಂದೇ ಆಗಿರಬೇಕಾಗಿಲ್ಲ. ಆದರೆ, ಬಹುತೇಕರ ಸಮಸ್ಯೆ ಎಂದರೆ ಎಣ್ಣೆ ಚರ್ಮ. ಚರ್ಮದಲ್ಲಿ ಅತಿಯಾದ ಎಣ್ಣೆ ಸ್ರವಿಸಲ್ಪಡುವುದು ಹಾಗೂ ಇದರಿಂದ ಉಂಟಾಗುವ ಮೊಡವೆಗಳು. ಇದಕ್ಕಾಗಿ ಅನೇಕರು ಬಳಸದ ಕ್ರೀಮ್‌ಗಳಿಲ್ಲ, ಮಾಡದ ಮನೆಮದ್ದುಗಳಿಲ್ಲ, ಹೋಗದ ಪಾರ್ಲರ್‌ಗಳಿಲ್ಲ. ಆದರೆ ಸಮಸ್ಯೆ ಮಾತ್ರ ಎಂದಿನದ್ದೇ. ಹಾಗಾದರೆ ಮೊಡವೆಗಳಿಗೆ ಪರಿಹಾರವೇ ಇಲ್ಲವೇ ಎಂದು ನೀವು ಕೇಳಬಹುದು. ಖಂಡಿತ ಇದ್ದೇ ಇದೆ. ಮುಖ್ಯವಾಗಿ, ಚರ್ಮದ ಹೊರಗಿನ ಆರೈಕೆಗಿಂತ ಒಳಗಿನ ಆರೈಕೆ ಮುಖ್ಯ. ಒಳಗೆ ತೆಗೆದುಕೊಳ್ಳುವ ಆಹಾರದ ಬಗ್ಗೆಯೂ ಕಾಳಜಿ ಮಾಡಬೇಕು. ಬನ್ನಿ, ಯಾವೆಲ್ಲ ಆಹಾರಗಳ ಬಗ್ಗೆ ಎಚ್ಚರ ಅಗತ್ಯ ಎಂಬುದನ್ನು ನೋಡೋಣ.

ಹಾಲು

ಹಾಲಿನಿಂದ ಮೊಡವೆಗಳುಂಟಾಗಬಹುದು. ಆಶ್ಚರ್ಯವಾದರೂ ಸತ್ಯವೇ. ಹಸುವಿನ ಹಾಲಿನಲ್ಲಿ ಬೆಳವಣಿಗೆಯ ಹಾರ್ಮೋನ್‌ ಐಜಿಎಫ್‌-1 ಹಾಗೂ ಬೊವಿನ್‌ ಇರುವುದರಿಂದ ಇವು ನಮ್ಮ ದೇಹಕ್ಕೆ ಸೇರುವುದರಿಂದ ಇವು ಚರ್ಮದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುತ್ತದೆ. ಇದರಿಂದ ಮುಖದಲ್ಲಿ ಕೂದಲ ಬೆಳವಣಿಗೆ ಹಾಗೂ ಮೊಡವೆಗಳೂ ಉಂಟಾಗುತ್ತದೆ.

ಇದನ್ನೂ ಓದಿ: Food Tips Kannada: ಕಲಬೆರಕೆ ಆಹಾರಗಳಿಂದ ನಮ್ಮ ಆರೋಗ್ಯದ ಮೇಲಾಗುವ ಪರಿಣಾಮಗಳೇನು?

ಅಯೋಡಿನ್

ಮೊಡವೆಗಳಿಗೂ ಅಯೋಡಿನ್‌ಗೂ ಅವಿನಾಭಾವ ಸಂಬಂಧವಿದೆ. ಅಂದರೆ, ಉಪ್ಪು ಹೆಚ್ಚಿರುವ ತಿನಿಸುಗಳನ್ನು, ಆಗಾಗ ತಿನ್ನುವ ಆಹಾರಗಳಲ್ಲಿರುವ ಉಪ್ಪಿನ ಪ್ರಮಾಣ ಎಲ್ಲವೂ ನಮ್ಮ ಚರ್ಮದ ಮೇಲೆ ಪ್ರಭಾವ ಬೀರುತ್ತದೆ. ಆದರೆ, ಪೂರ್ತಿಯಾಗಿ ಉಪ್ಪನ್ನು ಬಿಡಬೇಡಿ. ಅಯೋಡಿನ್‌ ಕೊರತೆ ದೇಹಕ್ಕೆ ಆಗಬಾರದು ಎಂಬುದನ್ನೂ ನೆನಪಿನಲ್ಲಿಟ್ಟುಕೊಂಡು ಕೊಂಚ ಕಡಿಮೆ ಪ್ರಮಾಣದಲ್ಲಿ ಉಪ್ಪನ್ನು ತಿನ್ನುವ ಅಭ್ಯಾಸ ರೂಢಿಸಿಕೊಳ್ಳಿ. ಇದು ನಿಮ್ಮ ಚರ್ಮದ ಮೇಲೆ ಮ್ಯಾಜಿಕ್‌ ಮಾಡಬಹುದು.

ಹೆಚ್ಚು ಗ್ಲಿಸೆಮಿಕ್‌ ಇಂಡೆಕ್ಸ್‌ ಇರುವ ಆಹಾರಗಳು

ಕಡಿಮೆ ಗ್ಲಿಸೆಮಿಕ್‌ ಇಂಡೆಕ್ಸ್‌ ಇರುವ ಆಹಾರಗಳ ಸೇವನೆ ನಿಮ್ಮ ಮೊಡವೆಗಳ ಸಮಸ್ಯೆಯನ್ನೇ ಸಂಪೂರ್ಣವಾಗಿ ಇಲ್ಲವಾಗಿಸುತ್ತದೆ ಎನ್ನಲಾಗುತ್ತದೆ. ಕಾರ್ನ್‌ ಸಿರಪ್‌, ಮೈದಾ, ಸಕ್ಕರೆ, ರಿಫೈನ್ಡ್‌ ಧಾನ್ಯಗಳು, ಸಾಸ್‌ ಹಾಗೂ ಕೆಚಪ್‌ಗಳು, ಸ್ಪೋರ್ಟ್ಸ್‌ ಡ್ರಿಂಕ್‌ಗಳು ಸಂಸ್ಕರಿಸಿದ ಮಾಂಸ ಹಾಗೂ ಇತರ ಆಹಾರಗಳು, ಇತರ ಆಹಾರಗಳ ಮೂಲಕ ಗೊತ್ತೇ ಆಗದಂತೆ ದೇಹದೊಳಕ್ಕೆ ಸೇರುವ ಸಕ್ಕರೆ ಎಲ್ಲವೂ ಹೆಚ್ಚು ಗ್ಲಿಸೆಮಿಕ್‌ ಇಂಡೆಕ್ಸ್‌ ಹೊಂದಿವೆ. ಆದಷ್ಟೂ ನೈಸರ್ಗಿಕ ಆಹಾರಗಳು, ಒಣಬೀಜಗಳು, ಹಣ್ಣುಗಳು ಇತ್ಯಾದಿಗಳನ್ನೇ ತಿನ್ನಿ.

ಇದನ್ನೂ ಓದಿ: Prajwal Revanna Case: ದಿಕ್ಕು ತಪ್ಪಿದೆ ಪ್ರಜ್ವಲ್ ರೇವಣ್ಣ ಕೇಸ್‌; ಡಿಕೆಶಿ ವಿಚಾರಣೆಯೂ ಆಗಲಿ ಎಂದ ಬಸವರಾಜ ಬೊಮ್ಮಾಯಿ

ಹಾಗಾದರೆ ಏನು ತಿಂದರೆ ಮೊಡವೆಗಳು ಬರದಂತೆ ತಡೆಯಬಹುದು, ಚರ್ಮವನ್ನು ನುಣುಪಾಗಿ ಇರಿಸಬಹುದು ಎನ್ನುತ್ತೀರಾ? ಝಿಂಕ್‌ ಹೆಚ್ಚಿರುವ ಆಹಾರಗಳು ಮೊಡವೆ ಸಮಸ್ಯೆಗೆ ಬಹಳ ಒಳ್ಳೆಯದು. ಇದರಲ್ಲಿರುವ ಆಂಟಿ ಇನ್‌ಫ್ಲಮೇಟರಿ ಗುಣಗಳು ಮೊಡವೆ ಉಂಟು ಮಾಡುವ ಬ್ಯಾಕ್ಟೀರಿಯಾಗಳನ್ನು ಓಡಿಸುತ್ತವೆ. ಕಿಡ್ನಿ ಬೀನ್ಸ್‌, ಓಯ್ಸ್ಟರ್‌, ಕೆಂಪು ಮಾಂಸ ಹಾಗೂ ಸಿಹಿಕುಂಬಳದ ಬೀಜ ಇವುಗಳಲ್ಲಿ ಹೆಚ್ಚು ಝಿಂಕ್‌ ಇವೆ.

ಅಷ್ಟೇ ಅಲ್ಲ, ಒಮೆಗಾ 3 ಇರುವ ಆಹಾರಗಳನ್ನು ಹೆಚ್ಚಿಸಿ ಒಮೆಗಾ ಇರುವ ಆಹಾರಗಳಾದ ಸಂಸ್ಕರಿಸಿದ ಎಣ್ಣೆಗಳು, ಬೇಕ್ಡ್‌ ಆಹಾರಗಳು ಇತ್ಯಾದಿಗಳನ್ನು ಕಡಿಮೆ ಮಾಡಿ. ನದಿಯ ಮೀನನ್ನು ವಾರಕ್ಕೆರಡು ಬಾರಿ ತಿನ್ನಿ. ಚಿಯಾ ಬೀಜಗಳು, ಅಗಸೆ ಬೀಜಗಳನ್ನು ನಿತ್ಯವೂ ಸೇವಿಸಿ. ಆಹಾರ ಸೇವನೆಯ ಪ್ರಮಾಣದ ಮೇಲೆ ಹಿಡಿತವಿರಲಿ. ನೈಸರ್ಗಿಕ ಆಹಾರಗಳನ್ನೇ ಹೆಚ್ಚು ಸೇವಿಸಿ. ಎಲ್ಲ ಪೋಷಕಾಂಶಗಳನ್ನೊಳಗೊಂಡ ಸಂಪೂರ್ಣ ಆಹಾರದೆಡೆಗೆ ಗಮನ ಇರಲಿ. ಇಷ್ಟು ಮಾಡಿದರೆ ಖಂಡಿತವಾಗಿಯೂ ನಿಮ್ಮ ಚರ್ಮವೂ ಆರೋಗ್ಯಕರವಾಗಿ ಫಲಫಳಿಸುತ್ತದೆ ಎನ್ನುತ್ತಾರೆ ವೈದ್ಯರು.

Continue Reading
Advertisement
Mother Teresa Series life in the works
ಸಿನಿಮಾ7 mins ago

Mother Teresa Series: 30 ಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ ‘ಮದರ್ ಥೆರೆಸಾʼ ಸಿರೀಸ್‌!

Virat Kohli
ಪ್ರಮುಖ ಸುದ್ದಿ26 mins ago

Virat kohli : ಗವಾಸ್ಕರ್​​ಗೆ ವಿರಾಟ್​ ಕೊಹ್ಲಿಯನ್ನು ಬೈಯುವುದೇ ಕೆಲಸ, ಇದೀಗ ಮತ್ತೊಂದು ಬಾರಿ ಟೀಕೆ

gold rate today aditi
ಚಿನ್ನದ ದರ28 mins ago

Gold Rate Today: ಬಂಗಾರದ ದರಗಳಲ್ಲಿ ಭಾರಿ ಏರಿಕೆ; ಇಂದು ಕೊಳ್ಳಲು ಮುಂದಾಗುತ್ತೀರಾ? ಗಮನಿಸಿ

Advisory for Students
ವಿದೇಶ29 mins ago

Advisory for Students: ಕಿರ್ಗಿಸ್ತಾನದಲ್ಲಿನ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಭಾರತ, ಪಾಕಿಸ್ತಾನ; ಕಾರಣವೇನು?

Gas Cylinder Blast
ಬೆಳಗಾವಿ36 mins ago

Gas Cylinder Blast: ಲೈಟ್ ಆನ್ ಮಾಡುತ್ತಿದ್ದಂತೆ ಸಿಲಿಂಡರ್‌ ಸ್ಫೋಟ; ಪತಿ- ಪತ್ನಿ ಗಂಭೀರ

crimes in karnataka
ಕ್ರೈಂ51 mins ago

Crimes in Karnataka: 4 ತಿಂಗಳಲ್ಲಿ ಮಿತಿಮೀರಿದ ಕ್ರೈಂ; ಸ್ತ್ರೀಯರೇ ಹೆಚ್ಚಿನ ಟಾರ್ಗೆಟ್!‌ ʼಗೃಹ ಇಲಾಖೆ ಇದೆಯಾ?ʼ ಎಂದು ಪ್ರಶ್ನಿಸಿದ ಎಚ್‌ಡಿಕೆ

Kiara Advani Makes Cannes Debut In Thigh-High Slit Dress
ಬಾಲಿವುಡ್1 hour ago

Cannes 2024: ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಶ್ವೇತ ವರ್ಣದ ಗೌನ್​ ಧರಿಸಿ ಮಿಂಚಿದ ಕಿಯಾರ! ಇಲ್ಲಿದೆ ವಿಡಿಯೊ

Accident Case in Mysuru
ಮೈಸೂರು1 hour ago

Accident Case : ಟ್ರ್ಯಾಕ್ಟರ್ ರೋಟವೇಟರ್‌ಗೆ ಸಿಲುಕಿ ಬಾಲಕನ ದೇಹ ಛಿದ್ರ ಛಿದ್ರ

JP Nadda
Lok Sabha Election 20241 hour ago

JP Nadda: ಬಿಜೆಪಿ ಈಗ ಬೆಳೆದಿದೆ, ಸಶಕ್ತವಾಗಿದೆ; ಆರ್‌ಎಸ್‌ಎಸ್ ನೆರವಿನ ಪ್ರಶ್ನೆಗೆ ನಡ್ಡಾ ಉತ್ತರ

IPL 2024
ಪ್ರಮುಖ ಸುದ್ದಿ1 hour ago

IPL 2024 : ಬೆಂಗಳೂರಿನ ಬೀದಿ ಬೀದಿಗಳಲ್ಲಿ ‘ಧೋನಿ, ಧೋನಿ’ ಘೋಷಣೆ, ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ16 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌