Site icon Vistara News

COVID Subvariant JN1: ಆರೋಗ್ಯ ಕಾರ್ಯಕರ್ತರಿಗೆ ಮಾಸ್ಕ್‌ ಕಡ್ಡಾಯ; ಮತ್ತೇನಿದೆ ಕೊರೊನಾ ನಿರ್ಬಂಧ?

Dinesh gundu rao in helath meeting

ಬೆಂಗಳೂರು: ಕೇರಳದಲ್ಲಿ ಕೋವಿಡ್ ಉಪ ತಳಿ ಜೆಎನ್‌ 1 (COVID Subvariant JN1) ಪತ್ತೆಯಾದ ಹಿನ್ನೆಲೆಯಲ್ಲಿ ಕೋವಿಡ್‌ ಸೇರಿದಂತೆ ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವ ಎಲ್ಲ ಆರೋಗ್ಯ ಕಾರ್ಯಕರ್ತರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ (Health Minister Dinesh Gundu Rao) ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕೇಂದ್ರ ಆರೋಗ್ಯ ಸಚಿವರ ಜತೆ ಸಭೆಯಲ್ಲಿ ಕೆಲವೊಂದು ಮಹತ್ವದ ಅಂಶಗಳನ್ನು ಚರ್ಚೆ ಮಾಡಿದ್ದಾರೆ. ರಾಜ್ಯದ ಕೋವಿಡ್‌ ಸ್ಥಿತಿಗತಿಗಳು ಹಾಗೂ ಸಿದ್ಧತೆ, ಜಿನೋಮಿಕ್ ಸೀಕ್ವೆನ್ಸ್ ಬಗ್ಗೆ ವಿವರಣೆ ನೀಡಿದ್ದಾರೆ. ಆಕ್ಸಿಜನ್ ಸಿದ್ಧತೆ, ಬೆಡ್‌ಗಳ ವ್ಯವಸ್ಥೆಗಳ ಬಗ್ಗೆ ಈ ವೇಳೆ ಚರ್ಚೆ ನಡೆದಿದೆ. ಕೇರಳ‌ ಹಾಗೂ ಕರ್ನಾಟಕ ಗಡಿಯಲ್ಲಿ ತೆಗೆದುಕೊಳ್ಳಲಾದ ಕ್ರಮಗಳೇನು? ಕೇರಳದಿಂದ ಬಂದವರಿಗೆ ಟೆಸ್ಟಿಂಗ್ ಮಾಡಲಾಗುತ್ತಿದೆಯೇ ಎಂಬ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.

ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌, ಆರೋಗ್ಯ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿರುವ ಎಲ್ಲ ಸಿಬ್ಬಂದಿಯು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಇವರು ಯಾವುದೇ ರೋಗಿಗಳಿಗೆ ಹತ್ತಿರದಿಂದ ಕಾರ್ಯನಿರ್ವಹಣೆ ಮಾಡುವುದರಿಂದ ಮಾಸ್ಕ್‌ ಧಾರಣೆ ಸೇರಿದಂತೆ ಕೋವಿಡ್‌ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಅಲ್ಲದೆ, 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡರೆ ಒಳ್ಳೆಯದು ಎಂದು ಹೇಳಿದ್ದಾರೆ.

ಕ್ರಿಸ್ಮಸ್, ನ್ಯೂಇಯರ್‌ ಸೆಲೆಬ್ರೇಷನ್‌ಗೆ ನಿರ್ಬಂಧ ಇಲ್ಲ

ಡಿಸೆಂಬರ್‌ 21ರ ಗುರುವಾರ ಸಿಎಂ ಸಿದ್ದರಾಮಯ್ಯ ಅವರ ಜತೆ ಸಭೆ ಇದೆ. ಅಲ್ಲಿ ರಾಜ್ಯದಲ್ಲಿ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಕ್ರಿಸ್ಮಸ್ ಹಾಗೂ ನ್ಯೂಇಯರ್‌ ಸೆಲೆಬ್ರೇಷನ್‌ಗೆ ಸದ್ಯಕ್ಕೆ ಯಾವುದೇ ನಿರ್ಬಂಧವನ್ನು ವಿಧಿಸುವುದಿಲ್ಲ. ಮುಂದಿನ ಪರಿಸ್ಥಿತಿಯನ್ನು ಗಮನಿಸಿ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾಗುವುದು. ವಿದೇಶಗಳಿಂದ ಬಂದವರ ಮೇಲೆ ನಿಗಾ ಇಡುವ ಬಗ್ಗೆ ಕೇಂದ್ರ ಆರೋಗ್ಯ ಸಚಿವರ ಜತೆಗಿನ ಸಭೆಯಲ್ಲಿ ಪ್ರಶ್ನೆ ಮಾಡಲಾಗಿದೆ. ಆದರೆ, ಅದಕ್ಕೆ ಯಾವುದೇ ನಿರ್ಬಂಧ ಹೇರುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

ಈ ವೇಳೆ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌, ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳ ಗಡಿ ಭಾಗದಲ್ಲಿ ಕರ್ನಾಟಕದ 4 ಜಿಲ್ಲೆಗಳಿವೆ. ಹೀಗಾಗಿ ರಾಜ್ಯದಲ್ಲಿ ನಾವು ಎಚ್ಚರಿಕೆಯನ್ನು ವಹಿಸಿದ್ದೇವೆ. ಸದ್ಯಕ್ಕೆ ಕರ್ನಾಟಕದಲ್ಲಿ ಪ್ಯಾನಿಕ್ ಆಗುವಂತಹ ಪರಿಸ್ಥಿತಿ ಇಲ್ಲ. ನಾವು ಕೋವಿಡ್ ಟೆಸ್ಟಿಂಗ್‌ಗಳನ್ನು ಹೆಚ್ಚು ಮಾಡುತ್ತಿದ್ದೇವೆ. ಐಸಿಯು ಬೆಡ್, ವೆಂಟಿಲೇಟರ್ಸ್, ಆಕ್ಷಿಜನ್ ಸೇರಿದಂತೆ ಅಗತ್ಯ ಮೂಲಸೌಕರ್ಯವನ್ನು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಂಡಿದ್ದೇವೆ. ಈಗಾಗಲೇ ಎಲ್ಲ ಜಿಲ್ಲಾಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ. ಅಗತ್ಯ ಬಿದ್ದಾಗ ಕೇಂದ್ರದ ನೆರವನ್ನು ಕೋರಲಾಗುವುದು. ಆಗ ಸಹಕಾರ ನೀಡಿ ಎಂದು ಮನವಿ ಮಾಡಿದರು.

ಕೊರೊನಾ ರೂಪಾಂತರಿಗೆ ಮೊದಲ ಬಲಿ

ರಾಜ್ಯದಲ್ಲಿ ಒಬ್ಬರು ಡಿ. 14 ರಂದು ಮೃತಪಟ್ಟಿದ್ದಾರೆ. ಇವರಿಗೆ ಕೋವಿಡ್‌ ಇದ್ದು, ರೂಪಾಂತರಿ ವೈರಸ್‌ನಿಂದಾಗಿ ಮೃತಪಟ್ಟಿದ್ದಾರೆಯೇ ಎಂಬ ಬಗ್ಗೆ ವರದಿ ಪಡೆಯಲಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ.

ವಿಕಾಸಸೌಧದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೋವಿಡ್‌ ಭಾದಿತರಾಗಿದ್ದ 64 ವರ್ಷದ ಪುರುಷರೊಬ್ಬರು ಮೃತಪಟ್ಟಿದ್ದಾರೆ. ಅವರು ಚಾಮರಾಜನಗರ ನಿವಾಸಿಯಾಗಿದ್ದರು. ಅವರನ್ನು ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲದೆ, ಆ ವ್ಯಕ್ತಿಯು ಟಿಬಿ, ಹೃದಯ ಸಮಸ್ಯೆ ಹಾಗೂ ಅಸ್ತಮಾಗಳಿಂದ ಬಳಲುತ್ತಿದ್ದರು. ಅವರಿಗೆ ಲಂಗ್‌ ಡಿಸೀಸ್‌ ಇತ್ತು. ಅವರು ಹಾರ್ಟ್‌ ಫೈಲ್ಯೂರ್‌ನಿಂದ ಮೃತಪಟ್ಟಿದ್ದಾರೆ ಎಂದು ಸಭೆಯಲ್ಲಿ ಮಾಹಿತಿ ನೀಡಿದರು.

ಮೃತಪಟ್ಟ ವ್ಯಕ್ತಿಗೆ JN1 ಇತ್ತೇ ಎಂಬುದುರ ಬಗ್ಗೆ ಖಚಿತಪಡಿಸಿಕೊಳ್ಳಲು ಜಿನೋಮಿಕ್ ಸಿಕ್ವೆನ್ಸ್ ಟೆಸ್ಟ್‌ಗೆ ಕಳುಹಿಸಲಾಗುತ್ತದೆ. ಟೆಸ್ಟಿಂಗ್ ವಸ್ತುಗಳ ಅಭಾವ ಇದೆ. ಅದನ್ನು ಒದಗಿಸಲಾಗುತ್ತದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳ ಗಡಿ ಭಾಗದಲ್ಲಿ ಕರ್ನಾಟಕದ 4 ಜಿಲ್ಲೆಗಳಿವೆ. ಹೀಗಾಗಿ ರಾಜ್ಯದಲ್ಲಿ ನಾವು ಎಚ್ಚರಿಕೆಯನ್ನು ವಹಿಸಿದ್ದೇವೆ. ಸದ್ಯಕ್ಕೆ ಕರ್ನಾಟಕದಲ್ಲಿ ಪ್ಯಾನಿಕ್ ಆಗುವಂತಹ ಪರಿಸ್ಥಿತಿ ಇಲ್ಲ. ನಾವು ಕೋವಿಡ್ ಟೆಸ್ಟಿಂಗ್‌ಗಳನ್ನು ಹೆಚ್ಚು ಮಾಡುತ್ತಿದ್ದೇವೆ. ಐಸಿಯು ಬೆಡ್, ವೆಂಟಿಲೇಟರ್ಸ್, ಆಕ್ಷಿಜನ್ ಸೇರಿದಂತೆ ಅಗತ್ಯ ಮೂಲಸೌಕರ್ಯವನ್ನು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಂಡಿದ್ದೇವೆ. ಈಗಾಗಲೇ ಎಲ್ಲ ಜಿಲ್ಲಾಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ. ಅಗತ್ಯ ಬಿದ್ದಾಗ ಕೇಂದ್ರದ ನೆರವನ್ನು ಕೋರಲಾಗುವುದು. ಆಗ ಸಹಕಾರ ನೀಡಿ ಎಂದು ಮನವಿ ಮಾಡಿದರು.

ರಾಜ್ಯದ ಕ್ರಮಗಳ ಬಗ್ಗೆ ವಿವರಿಸಿದ ಸಚಿವ ದಿನೇಶ್‌ ಗುಂಡೂರಾವ್

ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ ಹಾಗೂ ಸಿದ್ಧತೆ, ಜಿನೋಮಿಕ್ ಸೀಕ್ವೆನ್ಸ್ ಬಗ್ಗೆ ಮಾಹಿತಿ ನೀಡಿದರು. ಆಕ್ಸಿಜನ್ ಸಿದ್ಧತೆ, ಬೆಡ್‌ಗಳ ವ್ಯವಸ್ಥೆಗಳ ಬಗ್ಗೆ ಈ ವೇಳೆ ಚರ್ಚೆ ನಡೆದಿದೆ. ಕೇರಳ‌ ಹಾಗೂ ಕರ್ನಾಟಕ ಗಡಿಯಲ್ಲಿ ತೆಗೆದುಕೊಳ್ಳಲಾದ ಕ್ರಮಗಳೇನು? ಕೇರಳದಿಂದ ಬಂದವರಿಗೆ ಟೆಸ್ಟಿಂಗ್ ಮಾಡಲಾಗುತ್ತಿದೆಯೇ ಎಂಬ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಾಹಿತಿಯನ್ನು ನೀಡಿದರು.

ಅಂತಾರಾಷ್ಟ್ರೀಯ ಮಟ್ಟದ ಪರಿಸ್ಥಿತಿ ಹಾಗೂ ರಾಷ್ಟ್ರದ ಪರಿಸ್ಥಿತಿ ಬಗ್ಗೆ ಕೇಂದ್ರ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ. ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ಸಲಹೆ-ಸೂಚನೆಗಳನ್ನು ನೀಡಿದ್ದಾರೆ. ಓಮಿಕ್ರಾನ್ ಫ್ಯಾಮಿಲಿಗೆ ಸೇರಿರುವ JN1 ವೈರಸ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಬ್ಬಿದೆ. ಯುರೋಪ್‌ ರಾಷ್ಟ್ರಗಳಲ್ಲಿ ಮೂರು ತಿಂಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ. ಬೇರೆ ರಾಷ್ಟ್ರಗಳಲ್ಲಿ ವೇಗವಾಗಿ ಹರಡುತ್ತಿದೆ. JN1 ವೈರಸ್‌ನಿಂದ ಹಾನಿ ಕಡಿಮೆ ಎಂಬುದು ಸಮಾಧಾನದ ಸಂಗತಿ. ಅಲ್ಲದೆ, ಸಾವುಗಳು ಆಗೋದು ಕಡಿಮೆ ಎಂದು ಹೇಳಲಾಗಿದೆ. ಇದರಿಂದ ಭಯ ಬೀಳುವ ಅಥವಾ ಆತಂಕ ಪಡೆಯುವ ಅವಶ್ಯಕತೆ ಇಲ್ಲ‌ ಎಂದು ಕೇಂದ್ರ ಸರ್ಕಾರ ಹೇಳಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

ದೇಶದಲ್ಲಿ ಒಟ್ಟು 20 Jn1 ಕೇಸ್‌ಗಳು ಪತ್ತೆ

ದೇಶದ ಹಲವು ಕಡೆ Jn1 ವೈರಸ್ ಪತ್ತೆಯಾಗಿದೆ. ಗೋವಾದಲ್ಲಿ 18, ಕೇರಳದಲ್ಲಿ 1 ಹಾಗೂ ಮಹಾರಾಷ್ಟ್ರದಲ್ಲಿ 1 ಕೇಸ್ ಪತ್ತೆಯಾಗಿದೆ. ದೇಶದಲ್ಲಿ ಒಟ್ಟು 20 Jn1 ಕೇಸ್‌ಗಳು ಪತ್ತೆಯಾಗಿವೆ. ನಮ್ಮ ರಾಜ್ಯದಲ್ಲಿ ಕೋವಿಡ್ ಟೆಸ್ಟ್ ಪ್ರಕ್ರಿಯೆ ಆರಂಭವಾಗಿದೆ. ನಿನ್ನೆ (ಮಂಗಳವಾರ) 772 ಟೆಸ್ಟಿಂಗ್ ಮಾಡಿದ್ದೇವೆ. ನಾಳೆಯಿಂದ (ಡಿ.21) 5 ಸಾವಿರ ಕೋವಿಡ್ ಟೆಸ್ಟ್ ಮಾಡುತ್ತೇವೆ. ಸಾರಿ ಕೇಸ್‌ಗಳು ಬಂದಲ್ಲಿ ಕಡ್ಡಾಯವಾಗಿ ಆರ್‌ಟಿಪಿಸಿಆರ್ ಟೆಸ್ ಮಾಡುತ್ತೇವೆ. ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಆರ್‌ಟಿಪಿಸಿಆರ್ ಟೆಸ್ಟ್ ಮಾಡಿಸಲು ವ್ಯವಸ್ಥೆ ಮಾಡಿದ್ದೇವೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಇದನ್ನೂ ಓದಿ: BBMP Scam: ಬಿಜೆಪಿ ಅವಧಿಯ ಬಿಬಿಎಂಪಿ ಕಾಮಗಾರಿ ತನಿಖೆಗೆ ರಚಿಸಿದ್ದ ಎಸ್​ಐಟಿ ರದ್ದು ಮಾಡಿದ ಕೈ ಸರ್ಕಾರ

ಆಕ್ಸಿಜನ್‌ ನಿರ್ವಹಣೆ ದುಬಾರಿ; ದರ ತಗ್ಗಿಸಲು ಮನವಿ

ಆಕ್ಸಿಜನ್ ನಿರ್ವಹಣೆ ದುಬಾರಿಯಾಗಿದ್ದು, ಅದನ್ನು ಕಡಿಮೆ ಮಾಡಲು ಮನವಿ ಮಾಡಿದ್ದೇವೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮವಹಿಸಿದರೆ ನಮಗೆ ಅನುಕೂಲವಾಗಲಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

Exit mobile version