Cow slaughter: ಗೋಹತ್ಯೆ ನಿಷೇಧ ಹಿಂಪಡೆದರೆ ರಾಜ್ಯಾದ್ಯಂತ ಹೋರಾಟ; ಮುತಾಲಿಕ್‌ ಎಚ್ಚರಿಕೆ - Vistara News

ಕರ್ನಾಟಕ

Cow slaughter: ಗೋಹತ್ಯೆ ನಿಷೇಧ ಹಿಂಪಡೆದರೆ ರಾಜ್ಯಾದ್ಯಂತ ಹೋರಾಟ; ಮುತಾಲಿಕ್‌ ಎಚ್ಚರಿಕೆ

Cow slaughter: ಗೋಹತ್ಯೆ ನಿಷೇಧ ಮತ್ತು ಮತಾಂತರ ಕಾಯಿದೆ ಹಿಂಪಡೆಯಲು ಅವಕಾಶ ನೀಡಬಾರದು ಎಂದು ಶ್ರೀರಾಮ ಸೇನೆ ರಾಜ್ಯಪಾಲರಿಗೆ ಮನವಿ ಮಾಡಿದೆ.

VISTARANEWS.COM


on

Pramod mutalik
ರಾಜಭವನಕ್ಕೆ ಭೇಟಿ ನೀಡಿದ ಶ್ರೀರಾಮ ಸೇನೆ ಸಂಚಾಲಕ ಪ್ರಮೋದ್‌ ಮುತಾಲಿಕ್‌ ಮತ್ತು ಇತರ ನಾಯಕರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗೋಹತ್ಯೆ ನಿಷೇಧ ಕಾಯಿದೆ (Anti cow slaughter bill), ಮತಾಂತರ ಕಾಯಿದೆ (Anti Cow slaughter) ಹಿಂಪಡೆದರೆ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಶ್ರೀರಾಮ ಸೇನೆ (Sree Rama sene) ಘೋಷಣೆ ಮಾಡಿದೆ. ಇದರ ಜತೆಗೆ ಯಾವ ಕಾರಣಕ್ಕೂ ಪಠ್ಯದಿಂದ ಸ್ವಾತಂತ್ರ್ಯ ಹೋರಾಟಗಾರರ ಪಾಠವನ್ನು ತೆಗೆದರೆ ಪ್ರತಿಭಟಿಸುವುದಾಗಿ ಹೇಳಿದೆ

ಈ ಮೂರೂ ಅಂಶಗಳನ್ನು ಉಲ್ಲೇಖಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸೋಮವಾರ ಶ್ರೀರಾಮ ಸೇನೆ ವತಿಯಿಂದ ರಾಜ್ಯಪಾಲರಿಗೆ ದೂರು ನೀಡಲಾಯಿತು. ಶ್ರೀ ರಾಮ ಸೇನೆ ರಾಜ್ಯ ಸಂಚಾಲಕ ಪ್ರಮೋದ್‌ ಮುತಾಲಿಕ್‌ (Pramod Mutalik) ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿಸಲಾಯಿತು. ರಾಜ್ಯ ಸರ್ಕಾರ ಹಿಂದು ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಅದಕ್ಕೆ ಅವಕಾಶ ನೀಡಬಾರದು. ಒಂದೊಮ್ಮೆ ಸರ್ಕಾರ ಕಾಯಿದೆಗಳನ್ನು ರದ್ದು ಮಾಡುವುದಾಗಿ ಪ್ರಕಟಿಸಿದರೂ ಅಂತಿಮವಾಗಿ ಅದಕ್ಕೆ ಸಮ್ಮತಿ ಕೊಡಬೇಕಾಗಿರುವುದು ರಾಜ್ಯಪಾಲರು. ಸರ್ಕಾರದ ಇಂಥ ಜನವಿರೋಧಿ ನೀತಿಯನ್ನು ತಡೆ ಹಿಡಿಯಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಪ್ರಮೋದ್‌ ಮುತಾಲಿಕ್‌ ಅವರು ತಮ್ಮ ಬಳಗವನ್ನು ಕಟ್ಟಿಕೊಂಡು ರಾಜಭವನಕ್ಕೆ ತೆರಳಿದರಾದರೂ ಅವರಿಗೆ ರಾಜಭವನದ ಒಳಗೆ ಪ್ರವೇಶ ಸಿಗಲಿಲ್ಲ. ರಾಜ್ಯಪಾಲರ ಪರವಾಗಿ ರಾಜಭವನದ ಅಧಿಕಾರಿಗಳೇ ಮನವಿ ಪತ್ರ ಸ್ವೀಕರಿಸಿದರು.

pramod mutalik near RajBhavan
ರಾಜ ಭವನದ ಮುಂದೆ ಮುತಾಲಿಕ್‌ ಮಾತು

ಮನವಿ ಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಕಾಂಗ್ರೆಸ್‌ 1984ರಲ್ಲೇ ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ತಂದಿತ್ತು. ಬಿಜೆಪಿ ಅದರಲ್ಲಿ ಕೆಲವು ಬದಲಾವಣೆ ಮಾಡಿ ಜಾರಿ ತಂದಿತ್ತು ಅಷ್ಟೆ. ನೀವೇ ಕಾಯ್ದೆ ಮಾಡಿ, ಈಗ ವಿರೋಧ ಮಾಡ್ತಿರೋದು ಸರಿನಾ.? ರೈತರಿಗೆ ಅನ್ಯಾಯ ಮಾಡುವ ಕೆಲಸ ಮಾಡ್ತಾ ಇದ್ದೀರಿʼʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʻʻಸೋನಿಯಾ ಗಾಂಧಿ ಅವರನ್ನು ಓಲೈಸುವುದಕ್ಕೆ ಈ ರೀತಿ ಮಾಡ್ತಾ ಇದ್ದೀರಾ? ಮುಸ್ಲಿಮರನ್ನು ಓಲೈಕೆ ಮಾಡೋದೇ ಕಾಂಗ್ರೆಸ್ ಕಾಯಕವಾಗಿದೆ.‌ ಜನರು ನಿಜಾರ್ಥದಲ್ಲಿ ಕಾಂಗ್ರೆಸ್‌ಗೆ ಬಹುಮತ ನೀಡಿಲ್ಲ. ಬಿಜೆಪಿ ಮಾಡಿದ ತಪ್ಪಿನಿಂದಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆʼʼ ಎಂದು ಮುತಾಲಿಕ್‌ ಹೇಳಿದರು.

ʻʻಪಠ್ಯದಿಂದ ಸ್ವಾತಂತ್ರ್ಯ ಹೋರಾಟಗಾರರ ಪಾಠ ತೆಗೆದಿರುವುದು ಸರಿಯಲ್ಲʼʼ ಎಂದು ಹೇಳಿದ ಮುತಾಲಿಕ್‌, ಅಧಿವೇಶನದಲ್ಲಿ ಸರ್ಕಾರ ಯಾವ ನಿಲುವು ಕೈಗೊಳ್ಳೊತ್ತದೋ ಕಾದು ನೋಡೋಣ. ಒಂದು ವೇಳೆ ಗೋಹತ್ಯೆ ನಿಷೇಧ ಕಾಯಿದೆ ರದ್ದು ಮಾಡಿದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆʼʼ ಎಂದರು.

ʻʻಒಂದು ವೇಳೆ ಕಾಂಗ್ರೆಸ್‌ ಸರ್ಕಾರ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯಿದೆ ಹಿಂಪಡೆಯಲು ಒಪ್ಪಿಗೆ ಪಡೆದರೂ ಅಂತಿಮವಾಗಿ ಅಂಕಿತ ಹಾಕುವುದು ರಾಜ್ಯಪಾಲರು. ಹೀಗಾಗಿ ರಾಜ್ಯಪಾಲರಿಗೆ ಮನವಿ ಮಾಡಲು ಬಂದಿದ್ದೇನೆʼʼ ಎಂದು ಹೇಳಿದರು ಮುತಾಲಿಕ್‌.

ಪಠ್ಯ ಪರಿಷ್ಕರಣೆಯನ್ನೂ ಆಕ್ಷೇಪಿಸಿದ ಮುತಾಲಿಕ್‌, ʻʻದೇಶದ್ರೋಹಿಗಳ, ದೇಶದ ಮೇಲೆ ದಾಳಿ ಮಾಡಿದವರ ಪಠ್ಯವನ್ನು ಮಕ್ಕಳು ಓದಬೇಕಾ? ಸಾರ್ವರ್ಕರ್ ಒಬ್ಬ ದೇಶ ಪ್ರೇಮಿ, ಕ್ರಾಂತಿಕಾರಿ. ಕಾಂಗ್ರೆಸ್‌ಗೆ ಚರಕ ತಿರುಗಿಸೋ ಗಾಂಧೀಜಿ ಬೇಕೇ ಹೊರತು ಕ್ರಾಂತಿಕಾರಿಗಳು ಬೇಡʼʼ ಎಂದರು. ಪಠ್ಯ ಪುಸ್ತಕಕ್ಕೆ ಸಲಹೆ ನೀಡಲು ಪಿಎಚ್‌ಡಿನೇ ಮಾಡಬೇಕು ಅಂತ ಏನೂ ಇಲ್ಲ ಎಂದು ಅವರು ನುಡಿದರು.

ಬರಗೂರು ರಾಮಚಂದ್ರಪ್ಪ ಅವರು ನಾಸ್ತಿಕ ವಿಚಾರಧಾರೆ ಇರುವವರು ಎಂದ ಬರಗೂರು, ಪಾಠಗಳ ಮೂಲಕ ಕಮ್ಯೂನಿಸ್ಟ್, ಇಸ್ಲಾಮಿನ ವಿಚಾರಧಾರೆಗಳನ್ನು ಪ್ರಚಾರ ಮಾಡೋದು ಬೇಡ ಎಂದರು.

ಶಿವಮೊಗ್ಗದಲ್ಲಿ ನಡೆಯುತ್ತಿರುವ ಕಿಡಿಗೇಡಿ ಕೃತ್ಯಗಳಿಗೆ ಬಿಜೆಪಿಯೇ ಹೊಣೆ ಎಂದು ಹೇಳಿದರು ಪ್ರಮೋದ್‌ ಮುತಾಲಿಕ್‌. ಬಿಜೆಪಿ ಅಧಿಕಾರದಲ್ಲಿದ್ದರೂ ಕಿಡಿಗೇಡಿಗಳು, ಪಿಎಫ್ಐ ಅನ್ನ ಯಾಕೆ ಕಂಟ್ರೋಲ್ ಮಾಡ್ಲಿಲ್ಲ.?
ಜಿಲ್ಲೆಯವರೇ ಹೋಂ ಮಿನಿಸ್ಟರ್ ಇದ್ರಲ್ವಾ ಯಾಕೆ ಕಂಟ್ರೋಲ್ ಮಾಡ್ಲಿಲ್ಲ.? ಎಲ್ಲಾ ದಂಗೆ, ಕೊಲೆಗಳಿಗೆ ಬಿಜೆಪಿನೇ ನೇರ ಹೊಣೆ. ಕಾಂಗ್ರೆಸ್ ಬಂದ ಮೇಲೆ ಇದು ಇನ್ನಷ್ಟು ಹೆಚ್ಚಳವಾಗುತ್ತದೆ ಎಂದು ಪ್ರಮೋದ್‌ ಮುತಾಲಿಕ್‌ ನುಡಿದರು.

ಇದನ್ನೂ ಓದಿ: Cow slaughter: ಎಮ್ಮೆ, ಕೋಣವನ್ನು ಕಡಿಯುವುದಾದರೆ ಹಸುಗಳನ್ನು ಏಕೆ ಕಡಿಯಬಾರದು?: ಸಚಿವ ಕೆ. ವೆಂಕಟೇಶ್

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸುನಿಲ್‌ ಕುಮಾರ್‌ ವಿರುದ್ಧವೇ ಕಣಕ್ಕೆ ಇಳಿದಿದ್ದ ಪ್ರಮೋದ್‌ ಮುತಾಲಿಕ್‌ ಅವರು, ʻʻಚುನಾವಣೆಯಲ್ಲಿ ಸೋತ ನಂತರವೂ ನಾನು ಆಕ್ಟಿವ್ ಆಗಿಯೇ ಇದ್ದೇನೆ/ ನನ್ನ ಹೋರಾಟ ನಿರಂತರವಾಗಿ ನಡೀತಾ ಇದೆ. ಕೊನೆ ಉಸಿರು ಇರೋವರೆಗೂ ಹಿಂದುತ್ವದ ಪರವಾದ ಹೋರಾಟ ಇದ್ದೇ ಇರುತ್ತೆʼʼ ಎಂದು ಹೇಳಿದರು.

ಚಿಕ್ಕಮಗಳೂರಿನಲ್ಲೂ ಮನವಿ

 Chandrashekhara swameeji submitting memorandum to Chikkamagaluru DC

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ಸು ಪಡೆಯದಂತೆ ಶಂಕರದೇವರ ಮಠದ ಚಂದ್ರ ಶೇಖರ ಸ್ವಾಮೀಜಿ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್‌ ರಮೇಶ್‌ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ವಿ.ಎಚ್.ಪಿ. ಹಾಗೂ ಬಜರಂಗದಳ ಮುಖಂಡರು ಸ್ವಾಮೀಜಿಗೆ ಸಾಥ್‌ ನೀಡಿದರು. ಕಾಯಿದೆ ಹಿಂಪಡೆದರೆ ಮುಂದಿನ ದಿನದಲ್ಲಿ ತೀವ್ರ ಹೋರಾಟದ ಎಚ್ಚರಿಕೆ ನೀಡಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Self Harming: ಅತ್ತೆ ಮಗಳು ಪ್ರೀತಿ ‌ನಿರಾಕರಿಸಿದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ

Self Harming: ರಾಯಚೂರು ತಾಲೂಕಿನ ಮಲಿಯಾಬಾದ್ ಅರಣ್ಯ ಪ್ರದೇಶದಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅತ್ತೆ ಮಗಳು ಪ್ರೀತಿ ನಿರಾಕರಿಸಿದ ಕಾರಣ ಯುವಕ ವಿಷ ಸೇವಿಸಿದ್ದಾನೆ.

VISTARANEWS.COM


on

Self Harming
Koo

ರಾಯಚೂರು: ಯುವತಿ ಪ್ರೀತಿ ‌ನಿರಾಕರಿಸಿದಕ್ಕೆ ಮನನೊಂದು ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವುದು ತಾಲೂಕಿನ ಮಲಿಯಾಬಾದ್ ಅರಣ್ಯ ಪ್ರದೇಶದಲ್ಲಿ ನಡೆದಿದೆ. ವಿಷ ಸೇವಿಸಿದ ಬಳಿಕ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಯುವಕ ಅಸ್ವಸ್ಥಗೊಂಡು ಮೃತಪಟ್ಟಿದ್ದಾನೆ.

ಗಧಾರ್ ಗ್ರಾಮದ ಹನುಮೇಶ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ನಗರದ ನವಯುಗ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿಯಾಗಿದ್ದಾನೆ. ಈತ ಕೆಲ ವರ್ಷಗಳಿಂದ ಪಿಯುಸಿ ಓದುತ್ತಿದ್ದ ಅತ್ತೆ ಮಗಳನ್ನು ಪ್ರೀತಿ ಮಾಡುತ್ತಿದ್ದ. ಆಕೆಯನ್ನೇ ಮದುವೆ ಆಗುತ್ತೀನಿ ಎಂದು ಹಠ ಹಿಡಿದಿದ್ದ. ಆದರೆ, ಮದುವೆಗೆ ಯುವತಿ ಮನೆಯವರು ನಿರಾಕರಿಸಿದ್ದರು. ಈ ಹಿನ್ನೆಲೆ ಹಾಸ್ಟೆಲ್‌ನಿಂದ ಯುವಕ ಹೊರಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಾಹಿತಿ ತಿಳಿದು ಸ್ಥಳಕ್ಕೆ ಯರಗೇರಾ ಪೊಲೀಸರು ಭೇಟಿ ‌ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಷ ಸೇವನೆ ಬಳಿಕ ನೀರಿನಲ್ಲಿ ಬಿದ್ದಿದ್ದ ಯುವಕನ ಮೃತದೇಹವನ್ನು ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ಸಂಬಂಧ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Farmer Death : ಸಾಲದ ಶೂಲಕ್ಕೆ ಮನನೊಂದ ರೈತ; ಕೆರೆಗೆ ಹಾರಿ ಆತ್ಮಹತ್ಯೆ

ನಿದ್ದೆಗೆ ಜಾರಿದ 3 ವರ್ಷದ ಬಾಲಕನನ್ನು ಕಚ್ಚಿ ಸಾಯಿಸಿದ ನಾಗರಹಾವು

ಚಿಕ್ಕಬಳ್ಳಾಪುರ: ನಾಗರಹಾವು ಕಚ್ಚಿ (Snake Bite) 3 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗುಮ್ಮವಾರಂಡ್ಲಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ದೀಕ್ಷಿತ್ (3) ಮೃತ ದುರ್ದೈವಿ.

ಮಾಲತಿ-ಸುರೇಶ ದಂಪತಿಯ ಏಕೈಕ ಪುತ್ರ ದೀಕ್ಷಿತ್ ಮನೆಯ ಕಾಂಪೌಂಡ್‌ನ ಮುಂದೆ ಮಲಗಿದ್ದಾಗ ನಾಗರಹಾವು ಕಚ್ಚಿದೆ. ಕೂಡಲೇ ಅಸ್ವಸ್ಥಗೊಂಡಿದ್ದ ದೀಕ್ಷಿತ್‌ನನ್ನು ಆಸ್ಪತ್ರೆಗೆ ಕರೆತರಲಾಗಿದೆ. ಆದರೆ ಸಕಾಲಕ್ಕೆ ಬಾಗೇಪಲ್ಲಿ ಆಸ್ಪತ್ರೆಯ ಸ್ಟಾಪ್ ನರ್ಸ್ ಬೋಮ್ಮಣ್ಣ ಸ್ಪಂದಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ವೈದ್ಯರು ಬಂದು ನೋಡುವಷ್ಟರಲ್ಲಿ ಮಗುವಿನ ಸ್ಥಿತಿ ಚಿಂತಾಜನಕವಾಗಿತ್ತು ಎಂದು ಪೋಷಕರು ಗೋಳಾಡಿದ್ದಾರೆ.

ಇದನ್ನೂ ಓದಿ |

ಮೀನು ಹಿಡಿಯಲು ನದಿಗೆ ಇಳಿದವನು ನಾಪತ್ತೆ

ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ಮೀನುಗಾರಿಕೆಗೆ ಇಳಿದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಕುಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಬಾವುಸಾಬ್ ಗಬಾಡೆ ನಾಪತ್ತೆಯಾದವರು.

ನದಿಯಲ್ಲಿ ನಾಪತ್ತೆಯಾದ ಮೀನುಗಾರ ಬಾವುಸಾಬ್‌ ಗಬಾಡೆಗಾಗಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ಬನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನದಿಯಲ್ಲಿ ಶೋಧಕಾರ್ಯ ಮುಂದುವರಿದಿದೆ.

Continue Reading

ಕರ್ನಾಟಕ

Drown in Quarry: ಕ್ವಾರಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು‌

Drown in Quarry: ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರಿನ ಕ್ವಾರಿಯಲ್ಲಿ ಈಜಲು ಹೋಗಿದ್ದಾಗ ಮುಳುಗಿ ಇಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

Drown in Quarry
Koo

ದೇವನಹಳ್ಳಿ: ಕ್ವಾರಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ (Drown in Quarry) ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಮೊಹಮ್ಮದ್ (18), ಉಹೇಸ್ ಖಾನ್ (18) ಮೃತ ಯುವಕರು.

ಸ್ನೇಹಿತರ ಜತೆ ಲಾಂಗ್ ಡ್ರೈವ್‌ ಬಂದಿದ್ದ 6 ಹುಡುಗರ ಪೈಕಿ ಮೂವರು ಯುವಕರು ಈಜಲು ಕ್ವಾರಿಗೆ ತೆರಳಿದ್ದರು. ಈ ವೇಳೆ ಈಜು ಬಾರದೆ ನೀರಿನಲ್ಲಿ ಮುಳುಗುತ್ತಿದ್ದಾಗ ಒಬ್ಬ ಯುವಕನನ್ನು ರಕ್ಷಿಸಲಾಗಿದೆ. ಮತ್ತಿಬ್ಬರು ನೀರಿನಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ.

ನೆನ್ನೆ ಸಂಜೆ ಒಬ್ಬ ಯುವಕನ ಶವವನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹೊರ ತೆಗೆದಿದ್ದಾರೆ. ಮತ್ತೊಬ್ಬ ಯುವಕನ ಮೃತ ದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. ಕುಟುಂಬಸ್ಥರು ಮತ್ತು ಚಿಕ್ಕಜಾಲ ಪೊಲೀಸರು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.

ಇದನ್ನೂ ಓದಿ | Actor Darshan: ಎರಡೇ ಎರಡೇಟು ಬಿಟ್ಟಿದ್ದೆ, ಹಿಂಗಾಗೋಯ್ತು ಸಾರ್‌! ಪೊಲೀಸರ ಮುಂದೆ ದರ್ಶನ್‌ ಹೇಳಿಕೆ!

ನೇರಳೆ ಮರವೇರಿದ ಬಾಲಕನಿಗೆ ಕರೆಂಟ್‌ ಶಾಕ್‌; ಕೆಳಗೆ ಬಿದ್ದೊಡನೆ ಹಾರಿಹೋಯ್ತು ಪ್ರಾಣಪಕ್ಷಿ

Electric shock

ಚಿಕ್ಕಮಗಳೂರು: ವಿದ್ಯುತ್ ಶಾಕ್‌ನಿಂದ (Electric shock) 7ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. ಚಿಕ್ಕಮಗಳೂರಿನ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಆಕಾಶ್ (13) ಮೃತ ದುರ್ದೈವಿ.

ಕಡೂರು ತಾಲೂಕಿನ ಕುಪ್ಪಾಳು ಗ್ರಾಮದ ಮೊರಾರ್ಜಿ ವಸತಿ ಶಾಲೆ ಆವರಣದ ನೇರಳೆ ಮರದಲ್ಲಿ ಹಣ್ಣು ಕೀಳಲು ಆಕಾಶ್ ಮರ ಹತ್ತಿದ್ದ. ಈತನ ಜತೆಗೆ ಮೂವರು ವಿದ್ಯಾರ್ಥಿಗಳು ಮರ ಹತ್ತಿದ್ದರು. ಹಣ್ಣು ಕೀಳುವಾಗ ಆಕಾಶ್‌ ಮರದಿಂದ ಜಾರಿ ಬೀಳುತ್ತಿದ್ದ. ಈ ವೇಳೆ ಅಚಾನಕ್‌ ಆಗಿ ವಿದ್ಯುತ್ ತಂತಿ ಹಿಡಿದಿದ್ದಾನೆ.

ವಿದ್ಯುತ್‌ ತಂತಿ ಹಿಡಿಯುತ್ತಿದ್ದಂತೆ ಕರೆಂಟ್‌ ಶಾಕ್‌ನಿಂದ ಕೆಳಗೆ ಬಿದ್ದಿದ್ದಾನೆ. ಕೂಡಲೇ ಅಲ್ಲಿದ್ದವರು ಆಕಾಶ್‌ನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಕಾಶ್ ಮೃತಪಟ್ಟಿದ್ದಾನೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ನಿದ್ದೆಗೆ ಜಾರಿದ 3 ವರ್ಷದ ಬಾಲಕನನ್ನು ಕಚ್ಚಿ ಸಾಯಿಸಿದ ನಾಗರಹಾವು

ಚಿಕ್ಕಬಳ್ಳಾಪುರ: ನಾಗರಹಾವು ಕಚ್ಚಿ (Snake Bite) 3 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗುಮ್ಮವಾರಂಡ್ಲಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ದೀಕ್ಷಿತ್ (3) ಮೃತ ದುರ್ದೈವಿ.

ಇದನ್ನೂ ಓದಿ: Actor Darshan : ಸಂಕಷ್ಟ ನಿವಾರಣೆಗಾಗಿ ದೇವರ ಮೊರೆ ಹೋದ ನಟ ದರ್ಶನ್‌ ಕುಟುಂಬಸ್ಥರು

ಮಾಲತಿ-ಸುರೇಶ ದಂಪತಿಯ ಏಕೈಕ ಪುತ್ರ ದೀಕ್ಷಿತ್ ಮನೆಯ ಕಾಂಪೌಂಡ್‌ನ ಮುಂದೆ ಮಲಗಿದ್ದಾಗ ನಾಗರಹಾವು ಕಚ್ಚಿದೆ. ಕೂಡಲೇ ಅಸ್ವಸ್ಥಗೊಂಡಿದ್ದ ದೀಕ್ಷಿತ್‌ನನ್ನು ಆಸ್ಪತ್ರೆಗೆ ಕರೆತರಲಾಗಿದೆ. ಆದರೆ ಸಕಾಲಕ್ಕೆ ಬಾಗೇಪಲ್ಲಿ ಆಸ್ಪತ್ರೆಯ ಸ್ಟಾಪ್ ನರ್ಸ್ ಬೋಮ್ಮಣ್ಣ ಸ್ಪಂದಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ವೈದ್ಯರು ಬಂದು ನೋಡುವಷ್ಟರಲ್ಲಿ ಮಗುವಿನ ಸ್ಥಿತಿ ಚಿಂತಾಜನಕವಾಗಿತ್ತು ಎಂದು ಪೋಷಕರು ಗೋಳಾಡಿದ್ದಾರೆ.

Continue Reading

ಯಾದಗಿರಿ

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Actor Darshan : ಪಂಚರ್ ಅಂಗಡಿ ಯುವಕನಿಗೆ ನಟ ದರ್ಶನ್ ಅಭಿಮಾನಿ ಸಂಘದ ರಾಜ್ಯಾಧ್ಯಕ್ಷನಿಂದ ಕೊಲೆ ಬೆದರಿಕೆ ಆರೋಪವೊಂದು ಕೇಳಿ ಬಂದಿದೆ. ಬೆದರಿಕೆ ಹಾಕಿರುವ ಆಡಿಯೊ ವೈರಲ್‌ ಆಗುತ್ತಿದ್ದಂತೆ ಯಾದಗಿರಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

By

Actor Darshan
Koo

ಯಾದಗಿರಿ: ನಟ ದರ್ಶನ್‌ (Actor Darshan) ಅಭಿಮಾನಿಯೊಬ್ಬ ಪಂಚರ್‌ ಅಂಗಡಿ ಯುವಕನಿಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಯಾದಗಿರಿಯ ಅಭಿ ಎಂಬಾತನಿಗೆ ದರ್ಶನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ರಾಜು ಜೀವ ಬೆದರಿಕೆ ಹಾಕಿದ್ದಾನೆ.

ಅಭಿ ತನ್ನ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದ. ಬಾಸ್ ಬಾಸ್ ಎಂದು ಬಕೇಟ್ ಯಾಕೆ ಹಿಡಿತಿರಿ. ನಿಮ್ಮ ತಂದೆ-ತಾಯಿಗೆ ಬಕೆಟ್‌ ಹಿಡಿಯಿರಿ ಎಂದು ಸ್ಟೇಟಸ್ ಹಾಕಿದ್ದ. ಇದನ್ನೂ ಗಮನಿಸಿದ ರಾಜು, ಅಭಿಗೆ ಫೋನ್‌ ಕಾಲ್ ಮಾಡಿ ಜೀವಂತ ಸುಡುವುದಾಗಿ ಬೆದರಿಸಿದ್ದಾನೆ. ಬಾಸ್ ಬಗ್ಗೆ ಮಾತಾಡಿದರೆ ಖಾಲಿ ಆಗುತ್ಯಾ ನೀನು, ನಿನ್ನ ಮನೆ ಹಾಗೂ ಅಂಗಡಿಗೆ ಬೆಂಕಿ ಹಚ್ಚಬೇಕಾಗುತ್ತದೆ.

ಕೂಡಲೇ ಬಾಸ್‌ಗೆ ಕ್ಷಮೆ ಕೇಳಿ ವಿಡಿಯೊ ಮಾಡಿ ಹಾಕು, ಈ ಹಿಂದೆ ಮಾಡಿರುವ ವಿಡಿಯೋ ಡಿಲೀಟ್ ಮಾಡು ಎಂದು ದರ್ಶನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ರಾಜು ಬೆದರಿಕೆ ಹಾಕಿದ್ದಾನೆ. ಇತ್ತ ಅಭಿ ನಾನೇಕೆ ಕ್ಷಮೆ ಕೇಳಬೇಕು, ನಾನು ಡಿ ಬಾಸ್‌ ಅಂತೇನು ಹಾಕಿಲ್ಲ. ಮತ್ಯಾಕೆ ಡಿಲೀಟ್‌ ಮಾಡಬೇಕು ಎಂದು ಪ್ರಶ್ನೆಸಿದ್ದಾನೆ. ಬಾಸ್‌ ಅಂದ್ರೂ, ಡಿ ಬಾಸ್‌ ಅಂದ್ರೂ ಒಂದೇ, ಕೂಡಲೇ ವಿಡಿಯೊ ಡಿಲೀಟ್‌ ಮಾಡು ಎಂದು ರಾಜು ಒತ್ತಾಯಿಸಿದ್ದಾರೆ. ಬೆದರಿಕೆ ಹಾಕಿದ್ದ ಆಡಿಯೋ ವೈರಲ್ ಆಗುತ್ತಿದ್ದಂತೆ ಅಲರ್ಟ್ ಯಾದಗಿರಿ ನಗರ ಠಾಣೆ ಪೊಲೀಸರು ರಾಜು ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Actor Darshan : ಸಂಕಷ್ಟ ನಿವಾರಣೆಗಾಗಿ ದೇವರ ಮೊರೆ ಹೋದ ನಟ ದರ್ಶನ್‌ ಕುಟುಂಬಸ್ಥರು

ಎಲ್ಲ ಖರ್ಚು ನೋಡಿಕೊಳ್ತೇನೆ, ನೀವು ಸರೆಂಡರ್‌ ಆಗಿ ಎಂದಿದ್ದ ದರ್ಶನ್ ತಾನೇ ಪೊಲೀಸ್‌ ಬೋನಿಗೆ ಬಿದ್ದ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renuka Swamy murder case) ಕೊಲೆ ಆರೋಪದಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಂಬಿ ಎಣಿಸುತ್ತಿದ್ದಾರೆ ನಟ ದರ್ಶನ್‌. ದರ್ಶನ್ ಹೇಳಿದಂತೆ ನಡೆದುಕೊಂಡಿದ್ದರಿಂದ ಅನೇಕರು ತೊಂದರೆ ಅನುಭವಿಸಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್, ಪವಿತ್ರಾ, ವಿನಯ್, ಪವನ್ ಸೇರಿ ಹಲವರು ಅರೆಸ್ಟ್ ಆಗಿದ್ದಾರೆ. ಈಗಾಗಲೇ ಜೈಲಿನಲ್ಲಿರುವ ಎ7 ಆರೋಪಿ ಅನುಕುಮಾರ್​ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶರಣಾಗುವ ಮುನ್ನ ನಾಲ್ಕು ಆರೋಪಿಗಳು ಎರಡೆರಡು ಬಾರಿ ದರ್ಶನ್ ಜತೆ ಮಾತುಕತೆ ನಡೆಸಿದ್ದರು ಎಂದು ಪೊಲೀಸರು ಈಗ ಮಾಹಿತಿ ಹಂಚಿಕೊಂಡಿದ್ದಾರೆ. ಮಾತ್ರವಲ್ಲ ದರ್ಶನ್‌ ಅವರು ಆರೋಪಿಗಳಿಗೆ ʻಯಾವುದೇ ತೊಂದರೆ ನಿಮಗೆ ಆಗದಂತೆ ನೋಡಕೇಳುತ್ತೇನೆʼʼ ಎಂದು ಭರವಸೆ ಕೂಡ ನೀಡಿದ್ದರಂತೆ.

ರೇಣುಕಾ ಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಬೆಳಗ್ಗೆ ನಾಲ್ಕು ಆರೋಪಿಗಳು ಪೊಲೀಸರ ಎದುರು ಶರಣಾಗಬೇಕಿತ್ತು. ಆದರೆ ಬೆಳಗ್ಗೆ ಎದ್ದ ಕೂಡಲೇ ಆರೋಪಿಗಳಿಗೆ ಭಯ ಕಾಡ್ತಿತ್ತಂತೆ. ಹೀಗಾಗಿ ಮೈಸೂರಿನಲ್ಲಿರುವ ತಮ್ಮ ಬಾಸ್‌, ಅಂದರೆ ದರ್ಶನ್‌ ಅವರನ್ನು ಭೇಟಿ ಮಾಡಲು ಆರೋಪಿಗಳು ರೆಡಿಯಾಗಿದ್ದರು. ಈ ವೇಳೆ ಪ್ರದೂಶ್ ಕೂಡಲೇ ಆರೋಪಿಗಳನ್ನು ದರ್ಶನ್‌ ಅವರೊಂದಿಗೆ ಭೇಟಿ ಮಾಡಲು ಕರೆದುಕೊಂಡು ಹೋಗಿದ್ದ. ಆಗ ದರ್ಶನ್‌ ಆರೋಪಿಗಳಿಗೆ `ಎಲ್ಲ ಖರ್ಚು ವೆಚ್ಚ ನಾನು ನೋಡಿಕೊಳ್ತೇನೆ. ನಿಮಗೆ ಯಾವುದೇ ತೊಂದರೆ ಆಗಲ್ಲ’ ಎಂದು ಭರವಸೆ ಬೇರೆ ಕೊಟ್ಟಿದ್ದರಂತೆ.

ಇದನ್ನೂ ಓದಿ: Actor Darshan : ಸಂಕಷ್ಟ ನಿವಾರಣೆಗಾಗಿ ದೇವರ ಮೊರೆ ಹೋದ ನಟ ದರ್ಶನ್‌ ಕುಟುಂಬಸ್ಥರು

ಶರಣಾಗುವ ಮುನ್ನ ಎರಡೆರಡು ಬಾರಿ ದರ್ಶನ್ ಜತೆ ಆರೋಪಿಗಳ ಮಾತುಕತೆ!

ರಾತ್ರಿ ಪೊಲೀಸರ ಮುಂದೆ ಶರಣಾಗುತ್ತೇನೆ ಎಂದ ಆರೋಪಿಗಳು ಬೆಳಗ್ಗೆ ಉಲ್ಟಾ ಹೊಡೆದಿದ್ರು. ಪುನಃ ಮತ್ತೆ ದರ್ಶನ್ ಭೇಟಿಗೆ ಮೈಸೂರಿಗೆ ಹೋಗಿದ್ದರು ಆರೋಪಿಗಳು. ದರ್ಶನ್ ಭೇಟಿಯಾಗಿ ವಾಪಸ್ಸು ಬಂದು ಪೊಲೀಸರ ಮುಂದೆ ಶರಣಾಗಿದ್ದಾರೆ. ಪ್ರಕರಣದಲ್ಲಿ ಶರಣಾಗಲು ಭಾನುವಾರವೇ ರಾತ್ರಿ ಆರೋಪಿಗಳು ಮಾತುಕತೆ ನಡೆಸಿದ್ದರು. ಅದರಂತೆ ದರ್ಶನ್‌ಗೆ ಆರೋಪಿಗಳು ಮಾತುಕೊಟ್ಟ ನಂತರ ವಾಪಸ್ಸು ಬೆಂಗಳೂರಿಗೆ ಬಂದು ಸರೆಂಡರ್‌ ಆಗಿದ್ದಾರೆ.

ಇಂದು ಆರೋಪಿಗಳನ್ನು ಪೊಲೀಸರು ಹಾಜರುಪಡಿಸಲಿದ್ದಾರೆ. ಪ್ರಮುಖ ಆರೋಪಿಗಳನ್ನು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಮುಖ ಆರೋಪಿಗಳಾದ ದರ್ಶನ್, ಪವಿತ್ರಾ, ಪವನ್, ವಿನಯ್, ರಾಘವೇಂದ್ರ, ಪ್ರದೋಶ್ ಮಾತ್ರ ಮತ್ತೆ ಕಸ್ಟಡಿಗೆ ಪಡೆಯಲು ನಿರ್ಧಾರ ಆಗಿದೆ ಎನ್ನಲಾಗಿದೆ. ಕೊಲೆ ಪ್ರಕರಣದಲ್ಲಿ ಈ ಆರೋಪಿಗಳು ಹೆಚ್ಚು ಭಾಗಿಯಾದ ಕಾರಣ ಓಪನ್ ಕೋರ್ಟ್‌ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಮತ್ತೆ ಕೆಲವು ದಿನಗಳ ಕಾಲ ವಶಕ್ಕೆ ಪಡೆಯಲು ನಿರ್ಧಾರ ಮಾಡಲಾಗುತ್ತಿದೆ ಎಂದು ಮೂಲ ತಿಳಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Karnataka Politics: ಶಾಸಕ ಸ್ಥಾನಕ್ಕೆ ಎಚ್‌.ಡಿ. ಕುಮಾರಸ್ವಾಮಿ, ಬೊಮ್ಮಾಯಿ ರಾಜೀನಾಮೆ

Karnataka Politics: ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

VISTARANEWS.COM


on

Koo

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Karnataka Politics) ಗೆದ್ದು ಸಂಸತ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ಮಾಜಿ ಸಿಎಂಗಳಾದ ಎಚ್‌.ಡಿ.ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಸ್ಪೀಕರ್‌ ಯು.ಟಿ.ಖಾದರ್‌ ಅವರನ್ನು ಇಬ್ಬರು ನಾಯಕರು ಪ್ರತ್ಯೇಕವಾಗಿ ಭೇಟಿಯಾಗಿ, ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆ ಸಲ್ಲಿಕೆ ವೇಳೆ ಸ್ಪೀಕರ್ ಜತೆಗೆ ಕುಮಾರಸ್ವಾಮಿ ಉಭಯ ಕುಶಲೋಪರಿ ನಡೆಸಿದರು. ಇದೇ ವೇಳೆ ಸ್ಪೀಕರ್ ಅವರು ಕುದುರೆಮುಖ ವಿಚಾರ ಕೇಳಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಒಂದಷ್ಟು ವಿವರಣೆ ನೀಡಿದರು. ಅಲ್ಲದೇ ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL) ಪುನಶ್ಚೇತನದ ಬಗ್ಗೆಯೂ ಮಾತುಕತೆ ನಡೆಸಿದರು.

ರಾಜೀನಾಮೆ ಬಳಿಕ ಎಚ್‌.ಡಿ. ಕುಮಾರಸ್ವಾಮಿ ಅವರು ಮಾತನಾಡಿ, ಸಂಸತ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಎರಡರಲ್ಲಿ ‌ಒಂದು ಸ್ಥಾನ ಉಳಿಸಿಕೊಳ್ಳಬೇಕು. ಹೀಗಾಗಿ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಮುಂದೆ ಮಾತನಾಡೋಣ ಎಂದರು.

ಕುಮಾರಸ್ವಾಮಿ ಚನ್ನಪಟ್ಟಣ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ಎಂಬ ಡಿ.ಕೆ. ಸುರೇಶ್ ಹೇಳಿಕೆಗೆ ಪ್ರತಿಕ್ರಿಯಿಸಿ, ಪಾಪ ದೊಡ್ಡವರು ಅವರೇನೋ ಮಾತನಾಡಿಕೊಳ್ಳಲಿ. ಅವರು ಏನು ಬೇಕಾದರೂ ಮಾತನಾಡಲಿ ಬಿಡಿ ಎಂದು ಡಿಕೆಸುಗೆ ತಿರುಗೇಟು ನೀಡಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಹಾವೇರಿ ಲೋಕಸಭೆ ಕ್ಷೇತ್ರದಿಂದ ಸಂಸದನಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ನಿರಂತರವಾಗಿ 4 ಬಾರಿ ಶಾಸಕನಾಗಿ ಆಯ್ಕೆ ಮಾಡಿ ಅಭಿವೃದ್ಧಿ ಮಾಡಲು ಅವಕಾಶ ಮಾಡಿಕೊಟ್ಟ ಶಿಗ್ಗಾಂವಿ ಕ್ಷೇತ್ರದ ಜನತೆಗೆ ಕೃತಜ್ಞತೆ ಹೇಳುವೆ ಎಂದರು.

ಇದನ್ನೂ ಓದಿ | Actor Darshan: ಕೃಷಿ ಇಲಾಖೆ ರಾಯಭಾರಿ ಹುದ್ದೆಯಿಂದ ಕೊಲೆ ಆರೋಪಿ ದರ್ಶನ್‌ ವಜಾ!

ಶಿಗ್ಗಾಂವಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಇನ್ನಷ್ಟು ಅಭಿವೃದ್ಧಿಗೆ ಈಗಾಗಲೇ ಸಿಎಂ ಅವರ ಜೊತೆ ಮಾತನಾಡಿದ್ದೇನೆ. ಸಿಎಂ ಬೆಂಗಳೂರಿಗೆ ಬಂದ ತಕ್ಷಣ ಅವರ ಬಳಿ ಚರ್ಚಿಸಿ ಅಭಿವೃದ್ಧಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಚರ್ಚಿಸುತ್ತೇನೆ. ಹಾವೇರಿ ಲೋಕಸಭೆ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಕೆಲಸ ಮಾಡುವೆ. ಸಂಸತ್ತಿನಲ್ಲಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಹೆಚ್ಚಿನ ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುವೆ ಎಂದರು.

Continue Reading
Advertisement
Self Harming
ಕ್ರೈಂ3 mins ago

Self Harming: ಅತ್ತೆ ಮಗಳು ಪ್ರೀತಿ ‌ನಿರಾಕರಿಸಿದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ

Fathers Day 2024
ಪ್ರಮುಖ ಸುದ್ದಿ18 mins ago

Fathers Day 2024: ʼಅಪ್ಪʼನೆಂದರೆ ಆಕಾಶ… ಎನ್ನುವವರು ಈ ಭಾನುವಾರ ತಪ್ಪದೇ ವಿಶ್‌ ಮಾಡಿ!

Drown in Quarry
ಕರ್ನಾಟಕ35 mins ago

Drown in Quarry: ಕ್ವಾರಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು‌

Kannada New Movie hiranys song out
ಸ್ಯಾಂಡಲ್ ವುಡ್45 mins ago

Kannada New Movie: ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್

Actor Darshan
ಯಾದಗಿರಿ55 mins ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Narendra Modi
ವೈರಲ್ ನ್ಯೂಸ್1 hour ago

Narendra Modi: ನಗು ನಗುತ್ತಾ ಸೆಲ್ಫಿಗೆ ಪೋಸ್‌ ಕೊಟ್ಟ ಮೋದಿ, ಮೆಲೋನಿ; ಸೋಷಿಯಲ್‌ ಮೀಡಿಯಾದಲ್ಲಿ ʼಮೆಲೋಡಿʼಯದ್ದೇ ಸದ್ದು

Viral Video
ಕ್ರಿಕೆಟ್1 hour ago

Viral Video: ಪಾಕ್​ ಕ್ರಿಕೆಟಿಗ ವಾಸಿಂ ಅಕ್ರಮ್ ಜತೆ​ ಬ್ರೇಕ್​ ಡ್ಯಾನ್ಸ್​ ಮಾಡಿದ ಸುನಿಲ್ ಗಾವಸ್ಕರ್

ಪ್ರಮುಖ ಸುದ್ದಿ1 hour ago

Karnataka Politics: ಶಾಸಕ ಸ್ಥಾನಕ್ಕೆ ಎಚ್‌.ಡಿ. ಕುಮಾರಸ್ವಾಮಿ, ಬೊಮ್ಮಾಯಿ ರಾಜೀನಾಮೆ

Kannappa Teaser Kannada Vishnu Manchu Mohan Babu
ಟಾಲಿವುಡ್2 hours ago

Kannapp Teaser : ವಿಷ್ಣು ಮಂಚು ನಾಯಕನಾಗಿ ನಟಿಸಿರುವ `ಕಣ್ಣಪ್ಪ’ ಚಿತ್ರದ ಟೀಸರ್‌ ಬಿಡುಗಡೆ

RSS V/S BJP
Lok Sabha Election 20242 hours ago

RSS V/S BJP: ಮೋಹನ್ ಭಾಗವತ್ ʼಅಹಂಕಾರʼದ ಹೇಳಿಕೆ ಮೋದಿ ವಿರುದ್ಧವೆ? ಆರ್‌ಎಸ್‌ಎಸ್ ಸ್ಪಷ್ಟನೆ ಇದು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ56 mins ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ21 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು22 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು22 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ23 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌