Site icon Vistara News

Pampa Award: ಸಿ.ಪಿ. ಕೃಷ್ಣಕುಮಾರ್, ಬಾಬು ಕೃಷ್ಣಮೂರ್ತಿ, ಎಸ್.ಆರ್. ರಾಮಸ್ವಾಮಿಗೆ ಪಂಪ ಪ್ರಶಸ್ತಿ

CP Krishnakumar, Babu Krishnamurthy, SR Ramaswamy Selected for Pampa Award

#image_title

ಬೆಂಗಳೂರು: ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅನನ್ಯ ಸೇವೆ ಸಲ್ಲಿಸಿದವರಿಗೆ ನೀಡುವ ಪ್ರತಿಷ್ಠಿತ ʼಪಂಪ ಪ್ರಶಸ್ತಿʼ ಯನ್ನು ರಾಜ್ಯ ಸರ್ಕಾರ ಘೋಷಿಸಿದೆ. 2020-21, 2021-22 ಹಾಗೂ 2022-23ನೇ ಸಾಲಿನ ಪಂಪ ಪ್ರಶಸ್ತಿಗೆ (Pampa Award) ಕ್ರಮವಾಗಿ ಮೈಸೂರಿನ ಪ್ರೊ. ಸಿ.ಪಿ.ಕೃಷ್ಣಕುಮಾರ್, ಬೆಂಗಳೂರಿನ ಡಾ. ಬಾಬು ಕೃಷ್ಣಮೂರ್ತಿ ಹಾಗೂ ಡಾ.ಎಸ್.ಆರ್.ರಾಮಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ.

ಬೆಂಗಳೂರಿನ ಡಾ. ಜಿ.ಬಿ. ಹರೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಹಿತ್ಯ ಮತ್ತು ನಾಟಕ ಪ್ರಶಸ್ತಿಗಳ ಆಯ್ಕೆ ಉಪ ಸಮಿತಿ ಸಭೆಯಲ್ಲಿ ಮೂವರು ಸಾಹಿತ್ಯ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 2020-21ನೇ ಸಾಲಿನ ಪಂಪ ಪ್ರಶಸ್ತಿಗೆ ಮೈಸೂರಿನ ಹಿರಿಯ ಸಾಹಿತಿ, ಸಂಶೋಧಕ ಪ್ರೊ. ಸಿ.ಪಿ.ಕೃಷ್ಣಕುಮಾರ್, 2021-22ನೇ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಲೇಖಕ ಡಾ.ಬಾಬು ಕೃಷ್ಣಮೂರ್ತಿ ಹಾಗೂ 2022-23ನೇ ಸಾಲಿನ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಸಾಹಿತಿ ಡಾ. ಎಸ್.ಆರ್.ರಾಮಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ಒಂದು ಫಲಕ ಹಾಗೂ ಐದು ಲಕ್ಷ ರೂ. ನಗದು ಹೊಂದಿದೆ.

Exit mobile version