Crocodile attack | ಈಶ್ವರ ದೇವಸ್ಥಾನದ ಬಳಿ ಕಾಳಿ ನದಿಗೆ ಈಜಲು ಇಳಿದ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ - Vistara News

ಉತ್ತರ ಕನ್ನಡ

Crocodile attack | ಈಶ್ವರ ದೇವಸ್ಥಾನದ ಬಳಿ ಕಾಳಿ ನದಿಗೆ ಈಜಲು ಇಳಿದ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ

ದಾಂಡೇಲಿಯ ಕುಳಗಿ ದೇವಸ್ಥಾನದ ಬಳಿ ಕಾಳಿ ನದಿಯಲ್ಲಿ ಈಜುತ್ತಿದ್ದ ವ್ಯಕ್ತಿಯೊಬ್ಬರನ್ನು ಮೊಸಳೆಯೊಂದು ಎಳೆದೊಯ್ದಿದೆ. ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

VISTARANEWS.COM


on

Crocodile attack
ಮೊಸಳೆ ಪೀತಾಂಬರಿ ದಾಸ್‌ ಅವರನ್ನು ಎಳೆದೊಯ್ದ ಜಾಗ ಇದು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿರಸಿ: ಕಾಳಿ ನದಿಯಲ್ಲಿ ಈಜಲು ಹೋದ ವ್ಯಕ್ತಿಯೊಬ್ಬರನ್ನು ಮೊಸಳೆಗಳು ಎಳೆದೊಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕುಳಗಿ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಗುರುವಾರ ಬೆಳಗ್ಗೆ ನಡೆದಿದೆ.

ಬೆಳಗ್ಗೆ ಕಾಳಿ ನದಿಯಲ್ಲಿ ಈಜಲು ತೆರಳಿದ್ದ ಗುಜರಾತ್ ಮೂಲದ ದಾಂಡೇಲಿ ನಿವಾಸಿ ಪೀತಾಂಬರಿ ದಾಸ್ ಅವರೇ ಮೊಸಳೆ ಬಾಯಿಗೆ ಸಿಕ್ಕಿದವರು.

ಪೀತಾಂಬರ ದಾಸ್‌ ಅವರು ದಂಡೆಯ ಮೇಲೆ ಚಪ್ಪಲಿ, ಬಟ್ಟೆಯನ್ನು ಇಟ್ಟು ನದಿಯಲ್ಲಿ ಇಳಿದಿದ್ದಾರೆ. ಈ ವೇಳೆ ಎರಡು ಮೊಸಳೆಗಳು ಈತನ ಮೇಲೆ ದಾಳಿ ನಡೆಸಿ ಹೊತ್ತೊಯ್ದಿದೆ ಎನ್ನಲಾಗಿದೆ. ಇದನ್ನು ಸ್ಥಳೀಯ ಜನರು ನೋಡಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದು ವ್ಯಕ್ತಿಯ ಶವಕ್ಕಾಗಿ ಹುಡುಕಾಟ ನಡೆದಿದೆ. ಪೀತಾಂಬರಿ ದಾಸ್‌ ಅವರು ವ್ಯಾಪಾರಿಯಾಗಿದ್ದು, ಕುಟುಂಬದೊಂದಿಗೆ ಇಲ್ಲಿಗೆ ಬಂದಿದ್ದರು ಎನ್ನಲಾಗಿದೆ.

ಇದು ಕಾಳಿ ನದಿಯ ಸೇತುವೆಯ ಪಕ್ಕದಲ್ಲೇ ಇರುವ ಪ್ರದೇಶವಾಗಿದ್ದು, ಸೇತುವೆಯಲ್ಲಿ ನಿಂತಿದ್ದವರೊಬ್ಬರು ಪೀತಾಂಬರಿ ದಾಸ್‌ ಅವರು ಈಜುತ್ತಿರುವುದನ್ನು ಮತ್ತು ಮೊಸಳೆಗಳು ಬಂದು ಅವರನ್ನು ಎಳೆದೊಯ್ಯುತ್ತಿರುವುದನ್ನು ನೋಡಿದ್ದಾರೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉತ್ತರ ಕನ್ನಡ

Uttara Kannada News: ನಾನು ಉತ್ತರಕನ್ನಡದವಳಲ್ಲ ಎನ್ನುವ ಬಿಜೆಪಿಗರೂ ಪ್ರಚಾರಕ್ಕಾಗಿ ನನ್ನ ಕ್ಷೇತ್ರಕ್ಕೇ ಬರಬೇಕು: ನಿಂಬಾಳ್ಕರ್

Uttara Kannada News: ಉತ್ತರ ಕನ್ನಡ 30 ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ ಎಂದು ಹೇಳುತ್ತಾರೆ. ಆದರೆ ಈಗ ಪ್ರತಿ ಕಾರ್ಯಕರ್ತರೂ “ನಾನೇ ಅಂಜಲಿ ನಿಂಬಾಳ್ಕರ್ʼ ಎಂಬಂತೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಹಾಗಾಗಿ ಈ ಭದ್ರಕೋಟೆಯನ್ನು ಒಡೆಯಲು ಹೆಚ್ಚೇನೂ ಶ್ರಮ ಬೇಕಿಲ್ಲವೆಂದೆನಿಸುತ್ತಿದೆ ಎಂದು ಅಂಜಲಿ ನಿಂಬಾಳ್ಕರ್‌ ಹೇಳಿದ್ದಾರೆ.

VISTARANEWS.COM


on

Uttara Kannada Lok Sabha Constituency Congress Candidate Dr. Anjali Hemant Nimbalkar spoke in Lok Sabha election pre meeting in Ankola
Koo

ಅಂಕೋಲಾ: ಜಾತಿ- ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಬಿಜೆಪಿಗರು ಉತ್ತರ ಕನ್ನಡದ ಹೆಸರು ಕೆಡಿಸಿರುವುದನ್ನು ಸರಿಪಡಿಸಲು ನಮಗೆ ಈ ಬಾರಿ ಉತ್ತಮ ಅವಕಾಶವಿದೆ. ನಾನು ಈ ಜಿಲ್ಲೆಯವಳಲ್ಲ ಎನ್ನುವ ಬಿಜೆಪಿಗರು ಕೂಡ ನನ್ನ ಕ್ಷೇತ್ರಕ್ಕೆ ಪ್ರಚಾರಕ್ಕೆ ಬರಲೇಬೇಕು. ಬಹುಶಃ ಅವರಿಗೆ ಖಾನಾಪುರ ಬ್ಲಾಕ್ ಎಲ್ಲಿದೆ ಎನ್ನುವುದೂ ಗೊತ್ತಿರಲಿಕ್ಕಿಲ್ಲ. ಯಾಕೆಂದರೆ ಅಲ್ಲಿಗೆ ಅವರು ಬರುವುದೇ ಅಪರೂಪ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ (Uttara Kannada News) ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್ ವ್ಯಂಗ್ಯವಾಡಿದರು.

ಅಂಕೋಲಾದ ನಾಡವರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ 30 ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ ಎಂದು ಹೇಳುತ್ತಾರೆ. ಆದರೆ ಈಗ ಪ್ರತಿ ಕಾರ್ಯಕರ್ತರೂ “ನಾನೇ ಅಂಜಲಿ ನಿಂಬಾಳ್ಕರ್ʼ ಎಂಬಂತೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಹಾಗಾಗಿ ಈ ಭದ್ರಕೋಟೆಯನ್ನು ಒಡೆಯಲು ಹೆಚ್ಚೇನೂ ಶ್ರಮ ಬೇಕಿಲ್ಲವೆಂದೆನಿಸುತ್ತಿದೆ. ರಾಜಕೀಯ ನನಗೆ ಹೊಸದಲ್ಲ. ಖಾನಾಪುರದಲ್ಲಿ ಕೇವಲ ಮಹಿಳೆಯರಿಗಾಗಿ ಎಂಸಿಎಚ್ ಆಸ್ಪತ್ರೆ ಕಟ್ಟಿದ್ದೇನೆ. ಕಾಡುಪ್ರದೇಶದಲ್ಲಿ ಅಂಥದ್ದೊಂದು ಆಸ್ಪತ್ರೆ ಕಟ್ಟಿಸಬೇಕೆಂಬುದು ನನ್ನ ಕನಸಾಗಿತ್ತು. ಬಿಜೆಪಿ ಸರ್ಕಾರವಿದ್ದರೂ ಅಂಥ ದೊಡ್ಡ ಆಸ್ಪತ್ರೆ ಕಟ್ಟಿ ತೋರಿಸಿದ್ದೀನಿ. ಜಿಲ್ಲೆಯಲ್ಲೂ ಸುಸಜ್ಜಿತ ಆಸ್ಪತ್ರೆ ಆಗಬೇಕೆಂಬ ಆಸೆ ಇಲ್ಲಿಯ ಜನರದ್ದಿದೆ. ಅದನ್ನು ಮಾಡಲು ಪ್ರಯತ್ನಿಸೋಣʼʼ ಎಂದರು.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲೇ ಇಂಡಿಗೋ, ಏರ್‌ ಇಂಡಿಯಾ ವಿಮಾನ ಡಿಕ್ಕಿ; ಪ್ರಯಾಣಿಕರಿಗೆ ಶಾಕ್!

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮಾತನಾಡಿ, ಡಬಲ್ ಎಂಜಿನ್ ಸರ್ಕಾರವಿದ್ದರೂ ಬಿಜೆಪಿಗರಿಂದ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಲು ಆಗಿಲ್ಲ. ಸುಳ್ಳು ಹೇಳುವುದಷ್ಟೇ ಬಿಜೆಪಿಗರ ಕೆಲಸವಾಗಿದೆ. ಈಗಾಗಲೇ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಇದರೊಂದಿಗೆ ಸುಸಜ್ಜಿತ ಇನ್ನೊಂದು ಆಸ್ಪತ್ರೆ ಕೂಡ ಶೀಘ್ರವೇ ನಿರ್ಮಾಣವಾಗಲಿದೆ. ನಮ್ಮ ಪಕ್ಷ ಒಬ್ಬ ವೈದ್ಯರನ್ನೇ ಈಗ ಲೋಕಸಭಾ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಅವರ ಆಸೆ ಕೂಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡುವುದಾಗಿದೆ ಎಂದರು.

ಚುನಾವಣಾ ಪೂರ್ವ ಗ್ಯಾರಂಟಿ ಕಾರ್ಡ್ ಕೊಟ್ಟು ಮತ ಕೇಳಿದ್ದೆವು. ಈ ಬಾರಿ ಅದೇ ಗ್ಯಾರಂಟಿ ಯೋಜನೆಯ ಆಧಾರದಲ್ಲಿ ನಾವು ಮತ ಕೇಳಬೇಕಿದೆ. 30 ವರ್ಷ ಸಂಸತ್‌ನಲ್ಲಿ ಒಂದೇ ಒಂದು ಬಾರಿ ನಮ್ಮ ಜಿಲ್ಲೆಯ ಹೆಸರು ಕೇಳಿ ಬಂದಿಲ್ಲ. ಅರಣ್ಯ ಅತಿಕ್ರಮಣ ಸಮಸ್ಯೆಗಳ ಬಗ್ಗೆ ಸಂಸತ್‌ನಲ್ಲೇ ಪರಿಹಾರ ಸಿಗಬೇಕಿದೆ. ಜಿಲ್ಲೆಯಲ್ಲಿರುವ ಅನೇಕ ಸಮಸ್ಯೆಗಳು ಕೂಡ ಕೇಂದ್ರದಿಂದ ಪರಿಹಾರವಾಗಬೇಕಿದೆ. ಅದಕ್ಕಾಗಿ ನಮ್ಮ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಅವರನ್ನು ಆಯ್ಕೆ ಮಾಡಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಸತೀಶ್ ಸೈಲ್, ಕೆಪಿಸಿಸಿ ಸದಸ್ಯ ರಮಾನಂದ ನಾಯಕ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ ಮಾತನಾಡಿದರು.

ಇದನ್ನೂ ಓದಿ: Job Alert: ಎಸ್‌ವಿಸಿ ಕೋ-ಆಪರೇಟಿವ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಏ. 9ರೊಳಗೆ ಅರ್ಜಿ ಸಲ್ಲಿಸಿ

ಈ ವೇಳೆ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಗೋಪಾಲ ನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾಂಡುರಂಗ ಗೌಡ, ಪ್ರಮುಖರಾದ ಜಿ.ಎಂ.ಶೆಟ್ಟಿ, ನಾರಾಯಣ ನಾಯಕ, ಬಿ.ಡಿ.ನಾಯಕ, ಶಂಭು ಶೆಟ್ಟಿ, ನವಾಜ್ ಶೇಖ್, ಆರ್.ಎಚ್.ನಾಯ್ಕ, ವಿನೋದ ನಾಯಕ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Karnataka Weather : ಮುಂದಿನ 5 ದಿನ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ; ಉತ್ತರ ಒಳನಾಡಲ್ಲಿ ಹೀಟ್‌ ವೇವ್‌!

Karnataka Weather : ಮುಂದಿನ ಮೂರು ದಿನಗಳ ಕಾಲ ಅಂದರೆ, ಮಾರ್ಚ್‌ 28ರಿಂದ 30ರವರೆಗೆ ಉತ್ತರ ಒಳನಾಡಿನ ಕೆಲವು ಕಡೆ ಹೀಟ್‌ ವೇವ್‌ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶವು ಮುಂದಿನ ನಾಲ್ಕೈದು ದಿನ 36 – 37 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

VISTARANEWS.COM


on

Karnataka Weather Heavy rains lash in Karnataka for next 5 days also Heat wave caution and Girl enjoying rain
Koo

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಅಂದರೆ (ಮಾ. 28 – ಏಪ್ರಿಲ್‌ 1) ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಗುಡುಗು – ಮಿಂಚುಗಳ ಸಹಿತ ಸಾಧಾರಣದಿಂದ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಬೆಂಗಳೂರು ಮಾತ್ರ ಸೆಕೆಯಲ್ಲಿ ಮತ್ತಷ್ಟು ಬೇಯಲಿದೆ ಎಂದು ಅಂದಾಜಿಸಲಾಗಿದೆ. ಕಾರಣ, ಏಪ್ರಿಲ್‌ 2ರವರೆಗೆ ಗರಿಷ್ಠ ಉಷ್ಣಾಂಶವು 36 – 37 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast) ಉಲ್ಲೇಖಿಸಿದೆ. ಇನ್ನು ರಾಜ್ಯದ ಹಲವು ನದಿಗಳಲ್ಲಿ ನೀರು ಬತ್ತಿರುವ ದೃಶ್ಯಗಳನ್ನು ನೆಟ್ಟಿಗರು ಸೋಷಿಯಲ್‌ ಮೀಡಿಯಾಗಳಲ್ಲಿ ಪೋಸ್ಟ್‌ ಮಾಡುವ ಮೂಲಕ ಬರದ ಭೀಕರತೆಯ ದರ್ಶನ ಮಾಡಿಸಿದ್ದಾರೆ. ಹೀಗಾಗಿ ಕಾವೇರಿ ಕೊಳ್ಳ ಸೇರಿದಂತೆ ನದಿ ಒಡಲು ಇರುವ ಕಡೆಗಳಲ್ಲಿ ಉತ್ತಮ ಮಳೆಯಾಗಬಹುದು ಎಂಬ ನಿರೀಕ್ಷೆಯನ್ನು ಹೊಂದಲಾಗಿದೆ.

ಇದರ ಜತೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು 2 – 3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಒಳನಾಡಲ್ಲಿ ಹೀಟ್‌ ವೇವ್‌!

ಮುಂದಿನ ಮೂರು ದಿನಗಳ ಕಾಲ ಅಂದರೆ, ಮಾರ್ಚ್‌ 28ರಿಂದ 30ರವರೆಗೆ ಉತ್ತರ ಒಳನಾಡಿನ ಕೆಲವು ಕಡೆ ಹೀಟ್‌ ವೇವ್‌ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಬಿಸಿಲಿನ ಬೇಗೆಯ ಜತೆಗೆ ಬಿಸಿ ಗಾಳಿಯನ್ನೂ ಜನರು ತಡೆದುಕೊಳ್ಳಬೇಕಿದೆ.

ಹಾಟ್‌ ಬೆಂಗಳೂರು

ಬೆಂಗಳೂರಲ್ಲಿ ಬಿಸಿಲಿನ ತೀವ್ರತೆ ಇರಲಿದ್ದು, ಸೆಕೆಯು ಕಾಡಲಿದೆ. ಇಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಲಿದ್ದು, ಹಾಲಿ 35 ಡಿಗ್ರಿ ಸೆಲ್ಸಿಯಸ್‌ ಇರುವ ಗರಿಷ್ಠ ಉಷ್ಣಾಂಶವು ಮುಂದಿನ ನಾಲ್ಕೈದು ದಿನ 36 – 37 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹೇಳಲಾಗಿದೆ. ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಹೇಳಿದೆ.

ಶಿವಮೊಗ್ಗ, ದಾವಣಗೆರೆಯಲ್ಲಿ ಗುಡುಗಿನೊಂದಿಗೆ ಮಳೆ

ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ ಸೇರಿ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಉಳಿದೆಡೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಆಗಾಗ ಮಳೆಯಾಗಬಹುದು ಎಂದು ಹೇಳಲಾಗಿದೆ.

ಉತ್ತರ ಕರ್ನಾಟಕದಲ್ಲಿ ಕೆಲವು ಕಡೆ ಅಲ್ಪ ಮಳೆ

ಉತ್ತರ ಒಳನಾಡಿನ ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಚದುರಿದಂತೆ ಅಲ್ಪ ಪ್ರಮಾಣದ ಮಳೆಯಾಗುವ ಸಂಭವ ಇದೆ. ಗದಗ, ಕೊಪ್ಪಳ, ಬಾಗಲಕೋಟೆ, ವಿಜಯನಗರ ಮತ್ತು ವಿಜಯಪುರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ.

ಕರಾವಳಿ – ಮಲೆನಾಡಲ್ಲಿ ಸಾಧಾರಣ ಮಳೆ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆಯನ್ನು ಹೊಂದಲಾಗಿದೆ.

ಇದನ್ನೂ ಓದಿ: Summer Skincare: ಬೇಸಿಗೆಯಲ್ಲಿ ನಿಮ್ಮ ಚರ್ಮ ಕಪ್ಪಾಗದಂತೆ ತಡೆಯಲು ಹೀಗೆ ಮಾಡಿ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 35 ಡಿ.ಸೆ – 21 ಡಿ.ಸೆ
ಮಂಗಳೂರು: 35 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 37 ಡಿ.ಸೆ – 23 ಡಿ.ಸೆ
ಗದಗ: 38 ಡಿ.ಸೆ – 22 ಡಿ.ಸೆ
ಹೊನ್ನಾವರ: 34 ಡಿ.ಸೆ- 24 ಡಿ.ಸೆ
ಕಲಬುರಗಿ: 41 ಡಿ.ಸೆ – 26 ಡಿ.ಸೆ
ಬೆಳಗಾವಿ: 37 ಡಿ.ಸೆ – 21 ಡಿ.ಸೆ
ಕಾರವಾರ: 35 ಡಿ.ಸೆ – 25 ಡಿ.ಸೆ

ದುಬಾರೆಯ ಪರಿಸ್ಥಿತಿ ಹೇಗಿದೆ ನೋಡಿ!

ಕಾವೇರಿ ನದಿಯಲ್ಲೂ ನೀರಿಲ್ಲ

ಮಳೆ ಇಲ್ಲದೆ ಕರ್ನಾಟಕದ ಬಹುತೇಕ ನದಿಗಳು ಬತ್ತುವ ಹಂತವನ್ನು ತಲುಪಿವೆ. ನೀರಿಲ್ಲದೆ ನದಿ ಮಾರ್ಗಗಳು ಒಣಗಿ ಹೋಗಿವೆ. ಖಾಲಿ ರಸ್ತೆಯಂತಾಗಿವೆ. ಕಾವೇರಿ ನದಿ ತೀರದ ಪ್ರದೇಶದಲ್ಲಿರುವ ದುಬಾರೆ ಪರಿಸ್ಥಿತಿ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಕೊಡಗು ಕನೆಕ್ಟ್‌ ಎಂಬ ಖಾತೆಯಲ್ಲಿ ಫೋಟೊಗಳನ್ನು ಪೋಸ್ಟ್‌ ಮಾಡಲಾಗಿದೆ. ಇದು ನೀರಿನ ಕೊರತೆಯ ತೀವ್ರತೆಯನ್ನು ಎತ್ತಿ ತೋರಿಸುತ್ತದೆ.

Continue Reading

ಉತ್ತರ ಕನ್ನಡ

Uttara Kannada News: ಮುಂಡಗೋಡದಲ್ಲಿ ಉದ್ಯೋಗ ಖಾತ್ರಿ ಅಭಿಯಾನ

Uttara Kannada News: ಮುಂಡಗೋಡ ತಾಲೂಕಿನ ಇಂದೂರು, ಹುನಗುಂದ, ನಂದಿಕಟ್ಟಾ, ಗುಂಜಾವತಿ ಹಾಗೂ ಮೈನಳ್ಳಿ ಗ್ರಾ.ಪಂ. ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಉದ್ಯೋಗ ಖಾತ್ರಿ ಅಭಿಯಾನ ಹಾಗೂ ಲೋಕಸಭಾ ಚುನಾವಣೆಯ ಮತದಾನ ಜಾಗೃತಿ ಜಾಥಾ ನಡೆಯಿತು.

VISTARANEWS.COM


on

Employment Guarantee Campaign in Mundagoda
Koo

ಕಾರವಾರ: ತೀವ್ರವಾಗಿ ಆವರಿಸಿರುವ ಬೇಸಿಗೆ ಹಾಗೂ ಬರಗಾಲವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ನರೇಗಾ ಯೋಜನೆ ಸಹಕಾರಿಯಾಗಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿಡಿಒ (PDO), ಅಧಿಕಾರಿಗಳು, ಸಿಬ್ಬಂದಿ, ಬಿಎಫ್‌ಟಿಗಳು, ಕಾಯಕ ಬಂಧುಗಳು ಕಾರ್ಯಪ್ರವೃತ್ತರಾಗಿ ಗ್ರಾಮೀಣ ಜನರಿಗೆ ಕೆಲಸ ಒದಗಿಸಲು ಮುಂದಾಗಬೇಕು, ಮನೆ-ಮನೆಗೆ ಭೇಟಿ ನೀಡಿ ಕೆಲಸದ ಬೇಡಿಕೆ ಅರ್ಜಿಗಳನ್ನು ಸಂಗ್ರಹಿಸಿ, ಏಪ್ರಿಲ್ 1 ರಿಂದ ಬೇಡಿಕೆಗೆ ಅನುಗುಣವಾಗಿ ಕೆಲಸ ನೀಡಬೇಕು ಎಂದು ಮುಂಡಗೋಡ ತಾ.ಪಂ. ಸಹಾಯಕ ನಿರ್ದೇಶಕ ಸೋಮಲಿಂಗಪ್ಪ ಛಬ್ಬಿ (Uttara Kannada News) ಹೇಳಿದರು.

ಇದನ್ನೂ ಓದಿ: Tumkur News: ಶಿರಾದಲ್ಲಿ ಈಜಲು ಹೋದ ವಿದ್ಯಾರ್ಥಿ ಹೊಂಡದಲ್ಲಿ ಮುಳುಗಿ ಸಾವು

ಜಿಲ್ಲೆಯ ಮುಂಡಗೋಡ ತಾಲೂಕಿನ ಇಂದೂರು, ಹುನಗುಂದ, ನಂದಿಕಟ್ಟಾ, ಗುಂಜಾವತಿ ಹಾಗೂ ಮೈನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಬುಧವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶನದಂತೆ ಆಯೋಜಿಸಲಾಗಿದ್ದ ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತ್ರಿ/ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ ಅಭಿಯಾನದ ಭಾಗವಾದ, ಮನೆ ಮನೆ ಭೇಟಿ ಮಾಡಿ ನಮೂನೆ 6ರಲ್ಲಿ ಕೂಲಿ ಬೇಡಿಕೆ ಸಂಗ್ರಹಿಸುವ ಕಾರ್ಯ ಮತ್ತು ಲೋಕಸಭಾ ಚುನಾವಣೆಯ ಮತದಾನ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇದೇ ವೇಳೆ ಲೋಕಸಭಾ ಚುನಾವಣೆ ಪ್ರಯುಕ್ತ ಗ್ರಾಮಸ್ಥರಿಗೆ ಹಾಗೂ ಮತದಾರರಿಗೆ ಚುನಾವಣೆ ಮಹತ್ವ, ನಿಷ್ಪಕ್ಷಪಾತ ಮತದಾನ, ಮತದಾನ ಪ್ರಕ್ರಿಯೆ ಕುರಿತು ಮತದಾನ ಜಾಗೃತಿ ಮೂಡಿಸಲಾಯಿತು.

ಇದನ್ನೂ ಓದಿ: Karnataka Weather : ಇನ್ನೆರಡು ದಿನ ದಕ್ಷಿಣ ಒಳನಾಡಲ್ಲಿ ಭರ್ಜರಿ ಮಳೆ; ಬೆಂಗಳೂರು ಸಖತ್‌ ಹಾಟ್!

ಈ ಸಂದರ್ಭದಲ್ಲಿ ಇಂದೂರು ಹಾಗೂ ಮೈನಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರಿನಿವಾಸ ಮರಾಠೆ, ಮಂಜುನಾಥ, ಐಇಸಿ ಸಂಯೋಜಕ ಫಕ್ಕೀರಪ್ಪ ತುಮ್ಮಣ್ಣನವರ, ಬಿಎಫ್‌ಟಿ ಗಳಾದ ಗಣಪತಿ ಪವಾರ, ಹನುಮಂತ ಇಡಗೋಡ, ಯುವರಾಜ್ ಕೆ, ಮಂಜು ಸಾಗರ, ಮಂಜು ಪೂಜಾರ ಸಂತೋಷ ಹಿರೇಮಠ ಮತ್ತು ಜಿಕೆಎಂ ಶಿವಲೀಲಾ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕಲೆ/ಸಾಹಿತ್ಯ

Dr Shripad Bhat: ಖ್ಯಾತ ರಂಗ ನಿರ್ದೇಶಕ ಡಾ. ಶ್ರೀಪಾದ ಭಟ್‌ಗೆ ‘ರಂಗ ಭೂಪತಿ’ ಪ್ರಶಸ್ತಿ

Dr Shripad Bhat: ಮಾರ್ಚ್ 30ರಂದು ಸಂಜೆ 6.30ಕ್ಕೆ ಧಾರವಾಡದ ರಂಗಾಯಣ ಆವರಣದ ಪಂ.ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಹಿರಿಯ ರಂಗ ನಿರ್ದೇಶಕ ಶ್ರೀಪಾದ ಭಟ್ ಅವರಿಗೆ ʼರಂಗ ಭೂಪತಿʼ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

VISTARANEWS.COM


on

Dr Shripad Bhat
Koo

ಧಾರವಾಡ: ಹಿರಿಯ ರಂಗ ನಿರ್ದೇಶಕ ಶ್ರೀಪಾದ ಭಟ್ (Dr Shripad Bhat) ಅವರಿಗೆ ಖ್ಯಾತ ನಾಟಕಕಾರ ದಿ. ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ ‘ರಂಗ ಭೂಪತಿ’ ಮೊದಲ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಧಾರವಾಡದ ಗೋ.ವಾ. ರಂಗ-ಸಂಗ, ಆಟ-ಮಾಟ, ಹಾಗೂ ಬೆಂಗಳೂರಿನ ಬಹುರೂಪಿ ಫೌಂಡೇಶನ್ ಈ ಪ್ರಶಸ್ತಿಯನ್ನು ಸ್ಥಾಪಿಸಿದ್ದು, ಮಾರ್ಚ್ 30 (ಶನಿವಾರ) ಸಂಜೆ 6.30ಕ್ಕೆ ಧಾರವಾಡದ ರಂಗಾಯಣ ಆವರಣದಲ್ಲಿರುವ ಪಂ.ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಹಿರಿಯ ಸಾಹಿತಿ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದು, ರಂಗಕರ್ಮಿ ಧನಂಜಯ ಕುಲಕರ್ಣಿ ಹಾಗೂ ಹಿರಿಯ ಪತ್ರಕರ್ತ, ಬಹುರೂಪಿ ಫೌಂಡೇಶನ್ ಸಂಸ್ಥೆಯ ಮುಖ್ಯಸ್ಥರಾದ ಜಿ.ಎನ್. ಮೋಹನ್, ರವಿ ಕುಲಕರ್ಣಿ ಅವರು ಮುಖ್ಯ ಅತಿಥಿಗಳಾಗಿರುತ್ತಾರೆ. ಗೋಪಾಲ ವಾಜಪೇಯಿ ಅವರು ರಚಿಸಿದ ರಂಗಗೀತೆಗಳ ಹಬ್ಬ ಆಯೋಜಿಸಲಾಗಿದ್ದು, ರಂಗಾಯಣ ಕಲಾವಿದ ರಾಘವ ಕಮ್ಮಾರ, ಹೂವಿನ ಹಡಗಲಿಯ ಶಶಿಧರ.ಕೆ.ಎಂ, ರವಿ ಯಲ್ಲಪ್ಪನವರ್, ಪರಶುರಾಮ ನಾಗೋಜಿ ರಂಗಗೀತೆಗಳನ್ನು ಪ್ರಸ್ತುತಪಡಿಸಲಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರಾದ ಗೋ.ವಾ. ರಂಗ-ಸಂಗದ ರಾಜಕುಮಾರ ಮಡಿವಾಳರ ಅವರು ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಧಾರೇಶ್ವರದ ಶ್ರೀಪಾದ ಭಟ್ ಅವರು ಕನ್ನಡ ರಂಗಭೂಮಿಯ ಮಹತ್ವದ ಹೆಸರು. ರಂಗಭೂಮಿಯ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಎರಡೂ ರಂಗಗಗಳಲ್ಲಿ ನುರಿತವರು. ಸಾಹಿತ್ಯ, ಶಿಕ್ಷಣ, ರಂಗಭೂಮಿ, ಜಾನಪದ ಅಧ್ಯಯನ, ಸಂಗೀತ, ಸಂಘಟನೆ ಇವರ ಆಸಕ್ತಿಯ ಕ್ಷೇತ್ರಗಳು. ಶಿಕ್ಷಣ, ಕಾವ್ಯ ಹಾಗೂ ಮಕ್ಕಳ ರಂಗಭೂಮಿಯಲ್ಲಿ ಇವರು ನಡೆಸಿದ ಪ್ರಯೋಗಗಳು ದೇಶಾದ್ಯಂತ ಹೆಸರುವಾಸಿಯಾಗಿದೆ. ಗಾಂಧಿ- 150 ರ ಸಂದರ್ಭದಲ್ಲಿ ಇವರು ನಿರ್ದೇಶಿಸಿದ ‘ಪಾಪು-ಬಾಪು’ ನಾಟಕವು 2 ಸಾವಿರ ಪ್ರಯೋಗ ಕಂಡಿದೆ. ಇದುವರೆಗೂ ಸುಮಾರು 150 ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ. ‘ದಡವ ನೆಕ್ಕಿದ ಹೊಳೆ’ ನಟನೆಯ ಕೈಪಿಡಿ ಸೇರಿದಂತೆ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ರಂಗಭೂಮಿ ಕುರಿತ ಅಧ್ಯಯನಕ್ಕೆ ಪಿಎಚ್‌ಡಿ ಪಡೆದಿದ್ದಾರೆ.

ಇದನ್ನೂ ಓದಿ | Raja Marga Column :‌ ಕಣ್ಣೇ ಕಾಣದ ಆಕೆ ಎರಡು ಬಾರಿ ಐಎಎಸ್‌ ಪಾಸ್‌ ಮಾಡಿದ್ದರು!

ಹಲವು ವರ್ಷಗಳ ಕಾಲ ಪತ್ರಿಕಾ ರಂಗದಲ್ಲಿ ಅನುಪಮ ಸೇವೆ ಸಲ್ಲಿಸುವುದರ ಜತೆ ಕವಿ, ನಾಟಕಕಾರ, ನಟ, ನಿರ್ದೇಶಕರಾಗಿ, ಆಕಾಶವಾಣಿ, ರಂಗಭೂಮಿ, ಸಿನಿಮಾ, ಜನಸಮುದಾಯ ಅತಿ ಇಷ್ಟದ ಮಾಧ್ಯಮಗಳ ಮೂಲಕ ಮೂರು ದಶಕಗಳಿಗೂ ಹೆಚ್ಚು ಕಾಲ ತಮ್ಮ ಬರಹದ ಮೂಲಕ ಪ್ರಭಾವಿಸಿದವರು ಗೋಪಾಲ ವಾಜಪೇಯಿ ಅವರು. ಉತ್ತರ ಕರ್ನಾಟಕದ ಗಟ್ಟಿ ಆಡುಭಾಷೆಯಲ್ಲಿ ಸಾಹಿತ್ಯ ಕೃಷಿ ಮಾಡಿದ ಅವರು ರಂಗಭೂಮಿಗೆ ನೀಡಿದ ಕೊಡುಗೆ ಅಪಾರ.

Continue Reading
Advertisement
Side Effects Of Pillow
ಆರೋಗ್ಯ8 mins ago

Side Effects Of Pillow: ಎತ್ತರದ ದಿಂಬು ಬಳಸುತ್ತೀರಾ? ಸಮಸ್ಯೆ ತಪ್ಪಿದ್ದಲ್ಲ!

Naveen Polishetty
ಸಿನಿಮಾ13 mins ago

Naveen Polishetty: ಅಮೆರಿಕದಲ್ಲಿ ಬೈಕ್‌ ಅಪಘಾತ; ಅನುಷ್ಕಾ ಶೆಟ್ಟಿ ಜತೆ ತೆರೆ ಹಂಚಿಕೊಂಡಿದ್ದ ನಟನಿಗೆ ಗಾಯ

Hardik Pandya
ಕ್ರೀಡೆ28 mins ago

Hardik Pandya : ಹೈದರಾಬಾದ್​ನಲ್ಲೂ ಪಾಂಡ್ಯಗೆ ಕಾಟ ಕೊಟ್ಟ ಕ್ರಿಕೆಟ್​ ಪ್ರೇಕ್ಷಕರು

money guide
ಮನಿ-ಗೈಡ್38 mins ago

Money Guide: ಗಮನಿಸಿ; ಏ. 1ರಿಂದ ಬದಲಾಗುತ್ತವೆ ಈ ಎಲ್ಲ ಹಣಕಾಸು ನಿಯಮಗಳು

IPL 2024-CSKRCB
ಕ್ರೀಡೆ50 mins ago

IPL 2024 : ವೀಕ್ಷಣೆಯಲ್ಲಿ ದಾಖಲೆ ಬರೆದ ಚೆನ್ನೈ- ಆರ್​ಸಿಬಿ ಮ್ಯಾಚ್​!

Prithviraj Sukumaran
ಸಿನಿಮಾ1 hour ago

Prithviraj Sukumaran: ಪೃಥ್ವಿರಾಜ್ ಸುಕುಮಾರನ್‌ ಅಭಿನಯದ ‘ಆಡುಜೀವಿತಂ’ ಚಿತ್ರಕ್ಕೆ ಪ್ರೇಕ್ಷಕರು ಫಿದಾ!

Lok Sabha Election 2024 DK Shivakumar Suresh assetsworth Rs 598 crore and 259.19 crore Increase in 5 years
Lok Sabha Election 20241 hour ago

Lok Sabha Election 2024: ಡಿ.ಕೆ. ಸುರೇಶ್‌ ಆಸ್ತಿ ಮೌಲ್ಯ 598 ಕೋಟಿ ರೂ.; 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

Summer Fashion
ಫ್ಯಾಷನ್1 hour ago

Summer Fashion: ಸಮ್ಮರ್‌ ಸೀಸನ್‌ನಲ್ಲಿ ಸಿಂಪಲ್‌ ಸ್ಲಿವ್‌ಲೆಸ್‌ ಗೌನ್‌ಗಳ ಹಂಗಾಮ!

job alert
ಉದ್ಯೋಗ1 hour ago

Job Alert: ಗುಡ್‌ನ್ಯೂಸ್‌; 93 ಬ್ಯಾಂಕ್‌ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

Aditi Rao Hydari engaged to Siddharth
ಟಾಲಿವುಡ್1 hour ago

Aditi Rao Hydari: ಎಂಗೇಜ್‌ ಆಗಿರುವ ಫೋಟೊ ಶೇರ್‌ ಮಾಡಿದ ಅದಿತಿ ರಾವ್ ಹೈದರಿ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20244 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20246 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ13 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌