Cyclone Biparjoy: ಬಿಪರ್‌ಜಾಯ್‌ ಚಂಡಮಾರುತ ಭೀತಿ; ಈ ಪದದ ಅರ್ಥ ಏನು? ಮೊದಲು ಎಲ್ಲಿ ಬಳಕೆ? - Vistara News

ಕರ್ನಾಟಕ

Cyclone Biparjoy: ಬಿಪರ್‌ಜಾಯ್‌ ಚಂಡಮಾರುತ ಭೀತಿ; ಈ ಪದದ ಅರ್ಥ ಏನು? ಮೊದಲು ಎಲ್ಲಿ ಬಳಕೆ?

Cyclone Biparjoy: ಕರ್ನಾಟಕ, ಕೇರಳ ಸೇರಿ ಹಲವು ರಾಜ್ಯಗಳಲ್ಲಿ ಭೀತಿ ಹುಟ್ಟಿಸಿರುವ ಬಿಪರ್‌ಜಾಯ್‌ ಚಂಡಮಾರುತ ಪದದ ಅರ್ಥ, ಮೊದಲು ಎಲ್ಲಿ ಬಳಸಲಾಯಿತು ಎಂಬುದು ಸೇರಿ ವಿವಿಧ ಮಾಹಿತಿ ಇಲ್ಲಿದೆ.

VISTARANEWS.COM


on

Cyclone Biparjoy Meaning
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಅದು ಚಂಡಮಾರುತದ ರೂಪ ತಾಳಿದೆ. ಈ ಚಂಡಮಾರುತಕ್ಕೆ ಬಿಪರ್‌ಜಾಯ್‌ (Cyclone Biparjoy) ಎಂದು ಕರೆಯಲಾಗಿದ್ದು, ಕರ್ನಾಟಕ, ಕೇರಳ ಸೇರಿ ಹಲವು ರಾಜ್ಯಗಳಲ್ಲಿ ಇದು ಭಾರಿ ಪರಿಣಾಮ ಬೀರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಬಿಪರ್‌ಜಾಯ್‌ ಚಂಡಮಾರುತದಿಂದ ಮುಂಗಾರು ಕೂಡ ವಿಳಂಬವಾಗಲಿದೆ ಎಂದು ಹೇಳಲಾಗುತ್ತಿದೆ. ಅಷ್ಟರಮಟ್ಟಿಗೆ ಪರಿಣಾಮ ಬೀರಿರುವ ಚಂಡಮಾರುತ ‘ಬಿಪರ್‌ಜಾಯ್’‌ ಪದವನ್ನು ಮೊದಲು ಎಲ್ಲಿ ಬಳಸಲಾಯಿತು? ಈ ಪದದ ಅರ್ಥ ಏನು ಎಂಬುದರ ಮಾಹಿತಿ ಇಲ್ಲಿದೆ.

ಬಿಪರ್‌ಜಾಯ್‌ ಪದದ ಅರ್ಥವೇನು?

ಚಂಡಮಾರುತಕ್ಕೆ ಬಿಪರ್‌ಜಾಯ್‌ ಎಂದು ಬಾಂಗ್ಲಾದೇಶ ಹೆಸರಿಟ್ಟಿದೆ. ಬಿಪರ್‌ಜಾಯ್‌ ಎಂದರೆ ಹವಾಮಾನ ವೈಪರೀತ್ಯ ಅಥವಾ ವಿಪತ್ತು ಎಂಬ ಅರ್ಥವಿದೆ. ಈ ಪದವನ್ನು ವಿಶ್ವ ಹವಾಮಾನ ಸಂಸ್ಥೆ (WMO) 2020ರಲ್ಲಿ ಅಳವಡಿಸಿಕೊಂಡಿದೆ. ಅರಬ್ಬೀ ಸಮುದ್ರ ಸೇರಿ ಆಯಾ ಪ್ರಾದೇಶಿಕ ನಿಯಮಗಳಿಗೆ ಅನ್ವಯವಾಗುವಂತೆ ಚಂಡಮಾರುಗಳಿಗೆ ಹೆಸರಿಡಲಾಗುತ್ತದೆ.

ಯಾವ ಆಧಾರದ ಮೇಲೆ ನಾಮಕರಣ?

ಚಂಡಮಾರುತಗಳಿಗೆ ಡಬ್ಲ್ಯೂಎಂಒ ಮತ್ತು ವಿಶ್ವಸಂಸ್ಥೆ ಆರ್ಥಿಕ ಹಾಗೂ ಸಾಮಾಜಿಕ ಆಯೋಗದ (ESCAP) ಸದಸ್ಯ ರಾಷ್ಟ್ರಗಳು ಹೆಸರಿಡುತ್ತವೆ. ಅಟ್ಲಾಂಟಿಕ್‌, ಭಾರತೀಯ ಸಾಗರ ಹಾಗೂ ದಕ್ಷಿಣ ಪೆಸಿಫಿಕ್‌ನಲ್ಲಿ ವರ್ಣಮಾಲೆಯ ಪ್ರಕಾರ ಚಂಡಮಾರುತಗಳಿಗೆ ಹೆಸರಿಡಲಾಗುತ್ತದೆ. ಹಾಗೆಯೇ, ಮಹಿಳೆಯರು ಹಾಗೂ ಪುರುಷರ ಹೆಸರುಗಳನ್ನು ಕೂಡ ಕೆಲವೊಮ್ಮೆ ಇಡಲಾಗುತ್ತದೆ. ಉತ್ತರ ಭಾರತ ಸಾಗರ ಪ್ರದೇಶದ ಕಡೆಯೂ ವರ್ಣಮಾಲೆ ಆಧಾರದ ಮೇಲೆ ಹೆಸರಿಡುತ್ತಾರೆ. ಆದರೆ, ಲಿಂಗ ತಟಸ್ಥವಾಗಿ ಚಂಡಮಾರುತಗಳಿಗೆ ನಾಮಕರಣ ಮಾಡಲಾಗುತ್ತದೆ.

ಇದನ್ನೂ ಓದಿ: Cyclone Biporjoy: ಬಿಪರ್‌ಜಾಯ್‌ ಚಂಡಮಾರುತದಿಂದ ಮಳೆ; ಮುಂಗಾರು ಮತ್ತಷ್ಟು ದೂರ

ಕರ್ನಾಟಕದ ಮೇಲೆ ಬೀರುವ ಪರಿಣಾಮ ಏನು?

ಬಿಪರ್‌ಜಾಯ್‌ ಚಂಡಮಾರುತದ ಕುರಿತು ಬುಧವಾರ ಬೆಳಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಗಂಟೆಗೆ 135-160 ಕಿ.ಮೀ. ವೇಗದಲ್ಲಿ ಚಂಡಮಾರುತ ಬೀಸಲಿದ್ದು, ಕರ್ನಾಟಕ, ಕೇರಳ ಹಾಗೂ ಗೋವಾ ರಾಜ್ಯಗಳಲ್ಲಿ ಭಾರಿ ಮಳೆಯಾಗಿದೆ. ಈ ರಾಜ್ಯಗಳಲ್ಲಿ ಚಂಡಮಾರುತದ ಪರಿಣಾಮವೂ ತೀವ್ರವಾಗಿರಲಿದೆ ಎಂದು ತಿಳಿಸಿದೆ. ಹಾಗಾಗಿ, ಕರಾವಳಿ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Auto Fare : ಮೆಜೆಸ್ಟಿಕ್‌ ಟು ಲಾಲ್‌ಬಾಗ್‌ಗೆ ಆಟೋ ಚಾರ್ಜ್‌ 400 ರೂ; ಸೆಕೆಂಡ್‌ಗೆ 5ರೂ ಏರಿಕೆಗೆ ಪ್ರಯಾಣಿಕ ಕಕ್ಕಾಬಿಕ್ಕಿ

Bengaluru New : ಹಿಂದೊಮ್ಮೆ ಟಿನ್‌ ಫ್ಯಾಕ್ಟರಿಯಿಂದ ಉಬರ್ ಆಟೋ ಹತ್ತಿದವನಿಗೆ 1 ಕೋಟಿ ರೂ. ಚಾರ್ಜ್‌ ತೋರಿತ್ತು. ಇದೀಗ ಮತ್ತೊಬ್ಬ ಪ್ರಯಾಣಿಕನಿಗೂ ಇಂತಹದ್ದೇ ಅನುಭವವಾಗಿದ್ದು, ತಬ್ಬಿಬ್ಬಾಗಿದ್ದಾರೆ. ಆಟೋದಲ್ಲಿ ಮೆಜೆಸ್ಟಿಕ್‌ನಿಂದ ಲಾಲ್‌ಬಾಗ್‌ಗೆ ಬರೋಬ್ಬರಿ 400 ರೂ. ಚಾರ್ಜ್‌ ಆಗಿದೆ.

VISTARANEWS.COM


on

By

Auto Fare in Bengaluru
Koo

ಬೆಂಗಳೂರು: ಬೆಂಗಳೂರಲ್ಲಿ ಆಟೋ ಮೀಟರ್‌ಗೆ ಪ್ರಯಾಣಿಕರೊಬ್ಬರು (Auto Fare) ಬೆಚ್ಚಿ ಬಿದ್ದಿದ್ದಾರೆ. ಅಲಾಮ್ ಸುಲ್ತಾನ್ ಎಂಬಾತ ಮೆಜೆಸ್ಟಿಕ್‌ನಿಂದ ಆಟೋ ಹಿಡಿದು ಲಾಲ್ ಬಾಗ್‌ಗೆ ಬಂದು ಇಳಿದಿದ್ದರು. ಈ ವೇಳೆ ಆಟೋ ಮೀಟರ್‌ ಚಾರ್ಜ್‌ ಕಂಡು ಶಾಕ್‌ ಆಗಿದ್ದರು.

ಯಾಕಂದರೆ ಮೆಜೆಸ್ಟಿಕ್‌ನಿಂದ ಲಾಲ್‌ಬಾಗ್‌ 5 ರಿಂದ 6 ಕಿ.ಮೀ ಅಷ್ಟೇ ಅಂತರವಿದ್ದು, ಆಟೋ ಚಾರ್ಜ್‌ 400 ರೂಪಾಯಿ ತೋರಿಸಿತ್ತು. ಅಂದರೆ ಸೆಕೆಂಡ್‌ಗೆ 5 ರೂಪಾಯಿನಂತೆ ಮೀಟರ್ ಚಾರ್ಜ್‌ ಆಗಿತ್ತು. ಆಟೋ ಚಾಲಕನಿಗೆ ಅಲಾಮ್‌ ಇದನ್ನೂ ಪ್ರಶ್ನಿಸಿದ್ದಕ್ಕೆ 400 ರೂಪಾಯಿ ಆದರೂ ಡಬಲ್ ಮೀಟರ್ ಚಾರ್ಚ್ ಕೊಡಬೇಕೆಂದು ಡಿಮ್ಯಾಂಡ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅಲಾಮ್ ಸುಲ್ತಾನ್ ಈ ಬಗ್ಗೆ ಫೋಟೊ ಸಮೇತ ಪೊಲೀಸರಿಗೆ ಪೋಸ್ಟ್ ಮಾಡಿ ದೂರು ನೀಡಿದ್ದಾರೆ. ಇನ್ನೂ ಹೆಚ್ಚುವರಿ ಹಣ ಕೊಡದ ಹಿನ್ನೆಲೆಯಲ್ಲಿ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿರುವ ಆರೋಪವೂ ಕೇಳಿ ಬಂದಿದೆ.

ಇದನ್ನೂ ಓದಿ: Theft Case : ಹಗಲಿನಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್‌; ರಾತ್ರಿಯಲ್ಲಿ ಬೈಕ್ ಕದಿಯುವ ಕಳ್ಳ

ಟಿನ್‌ ಫ್ಯಾಕ್ಟರಿಯಿಂದ ಉಬರ್ ಆಟೋ ಹತ್ತಿದವನಿಗೆ 1 ಕೋಟಿ ರೂ. ಚಾರ್ಜ್‌

ಬೆಂಗಳೂರು: ಆಂಧ್ರ ಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದ ಆ ವ್ಯಕ್ತಿ ತುರ್ತು ಕೆಲಸಕ್ಕೆಂದು ಉಬರ್‌ ಆಟೋ (Uber Auto) ಬುಕ್‌ ಮಾಡಿದ್ದರು. ಟಿನ್‌ ಫ್ಯಾಕ್ಟರಿಯಿಂದ ಆಟೋ ಹತ್ತಿ ಕೋರಮಂಗಲಕ್ಕೆ ಇಳಿದ ಪ್ರಯಾಣಿಕ (Uber Auto Fare) ತಬ್ಬಿಬ್ಬಾಗಿದ್ದರು. ಯಾಕೆಂದರೆ ಟಿನ್‌ ಫ್ಯಾಕ್ಟರಿಯಿಂದ ಕೋರಮಂಗಲಕ್ಕೆ ಜಸ್ಟ್‌ 15 ಕಿ.ಮೀ ದೂರದ ಪ್ರಯಾಣಕ್ಕೆ ಆಟೋ ಚಾರ್ಜ್‌ 500-1000 ರೂ. ಅಲ್ಲ ಬದಲಿಗೆ 1 ಕೋಟಿ ರೂ. (Uber Auto Fare) ತೋರಿಸಿತ್ತು.

ಆ್ಯಪ್ ಆಧಾರಿತ ಉಬರ್‌ ಆಟೋ ಬುಕ್‌ ಮಾಡಿ ಪ್ರಯಾಣಿಸಿದ ಆಂಧ್ರ ಪ್ರಯಾಣಿಕ ನಿಜಕ್ಕೂ ಕಕ್ಕಾಬಿಕ್ಕಿಯಾಗಿದ್ದರು. ಕೆಲಸ ನಿಮಿತ್ತ ಹೊರಹೋಗಲು ಉಬರ್ ಆಟೋ ಬುಕ್‌ ಮಾಡಿ ಟಿನ್‌ಫ್ಯಾಕ್ಟರಿಯಿಂದ ಆಟೋ ಹತ್ತಿ ಕೋರಮಂಗಲದಲ್ಲಿ ಬಂದು ಇಳಿದಿದ್ದರು. ಆಟೋ ಚಾರ್ಜ್‌ ಕೊಡೊಣಾ ಎಂದು ಪಾಕೆಟ್‌ನಿಂದ ಪರ್ಸ್‌ ತೆಗೆದು ಮೊಬೈಲ್‌ ನೋಡಿದಾಗ ಶಾಕ್‌ವೊಂದು ಕಾದಿತ್ತು.

Uber auto fare
ಪ್ರಯಾಣಿಕನಿಗೆ ಶಾಕ್‌

ಉಬರ್‌ ಆ್ಯಪ್‌ನಲ್ಲಿ ತೋರಿಸಿದ ಆಟೋ ಚಾರ್ಜ್‌ ನೋಡಿ, ಒಂದು ಕ್ಷಣ ತಲೆ ತಿರುಗುವಂತೆ ಮಾಡಿತ್ತು. ಯಾಕಂದರೆ ಟಿನ್‌ ಫ್ಯಾಕ್ಟರಿಯಿಂದ ಕೋರಮಂಗಲಗೆ 1,03,11,055 ರೂ. ಆಟೋ ಚಾರ್ಜ್ ತೋರಿತ್ತು. 207 ರೂ. ಆಗಿದ್ದ ಜಾಗದಲ್ಲಿ ಕೋಟಿ ರೂ. ನೋಡುತ್ತಿದ್ದಂತೆ ಬೆಚ್ಚಿಬಿದ್ದಿದ್ದ.

ಸದ್ಯ ಕೋಟಿ ರೂ. ಆಟೋ ಚಾರ್ಜ್‌ ತೋರಿಸುತ್ತಿದ್ದ ಉಬರ್ ಆ್ಯಪ್‌ನ ವಿಡಿಯೊ ಮಾಡಿ ಪ್ರಯಾಣಿಕ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ಇಂತಹ ಆ್ಯಪ್ ಆಧಾರಿತ ಆಟೋಗಳನ್ನು ಬಳಕೆ ಮಾಡದಂತೆ ಮನವಿ ಮಾಡಿದ್ದಾರೆ. ಕೂಡಲೇ ಇಂತಹ ಆ್ಯಪ್‌ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಪ್ರಯಾಣಿಕರಿಂದ ಕಂಪೆನಿಗಳು ಹೇಗೆಲ್ಲ ಸುಲಿಗೆ ಮಾಡುತ್ತವೆ. 100-200ಪ್ರಯಾಣದ ಶುಲ್ಕಕ್ಕೆ 1 ಕೋಟಿ ರೂ. ತೋರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿನ್ನದ ದರ

Gold Rate Today: ಏರಿಕೆಯಲ್ಲಿ ದಾಖಲೆ ಬರೆಯುತ್ತಲೇ ಇದೆ ಚಿನ್ನದ ದರ! ಇಂದಿನ ಬೆಲೆ ₹74,130 !

Gold Rate Today: ಚಿನ್ನದ ಬೆಲೆ ಈ ತಿಂಗಳಲ್ಲಿ ತೀವ್ರವಾಗಿ ಏರಿದೆ. ಮಂಗಳವಾರ ಮತ್ತೆ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ ಚಿನ್ನದ ಬೆಲೆಯಲ್ಲಿ (gold price today) ಕ್ರಮವಾಗಿ ₹90 ಮತ್ತು ₹98 ಹೆಚ್ಚಳವಾಗಿದೆ.

VISTARANEWS.COM


on

gold rate today tapasi
Koo

ಬೆಂಗಳೂರು: ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕಳೆದ ಒಂದು ತಿಂಗಳಿನಿಂದ ಏರುತ್ತಲೇ ಇದೆ. ಮಂಗಳವಾರ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ ಚಿನ್ನದ ಬೆಲೆಯಲ್ಲಿ (gold price today) ಕ್ರಮವಾಗಿ ₹90 ಮತ್ತು ₹98 ಹೆಚ್ಚಳವಾಗಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,795ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,360 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,950 ಮತ್ತು ₹6,79,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,413 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,304 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹74,130 ಮತ್ತು ₹7,41,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹84.65, ಎಂಟು ಗ್ರಾಂ ₹677.20 ಮತ್ತು 10 ಗ್ರಾಂ ₹846.50ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,465 ಮತ್ತು 1 ಕಿಲೋಗ್ರಾಂಗೆ ₹84,650 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ68,10074,280
ಮುಂಬಯಿ67,950 74,130
ಬೆಂಗಳೂರು67,950 74,130
ಚೆನ್ನೈ68,70074,950

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ವೀಕೆಂಡ್‌ನಲ್ಲಿ ಚಿನ್ನ ಖರೀದಿಸುವವರಿಗಿಲ್ಲ ಬೆಲೆ ಏರಿಕೆ ಬಿಸಿ; ಇಂದಿನ ದರ ಇಷ್ಟು

Continue Reading

ಪ್ರಮುಖ ಸುದ್ದಿ

Actor Dwarakish: ಕರುನಾಡ ಕುಳ್ಳ, ಹಿರಿಯ ನಟ ದ್ವಾರಕೀಶ್‌ ಇನ್ನಿಲ್ಲ

ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್‌ (81) (Actor Dwarakish) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್‌ ಅವರು ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಮಂಗಳವಾರ (ಏಪ್ರಿಲ್‌ 81) ನಿಧನರಾಗಿದ್ದಾರೆ. ಇವರ ನಿಧನಕ್ಕೆ ಗಣ್ಯರು, ಸ್ಯಾಂಡಲ್‌ವುಡ್‌ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ.

VISTARANEWS.COM


on

Actor Dwarakish
Koo

ಬೆಂಗಳೂರು: ಕರುನಾಡ ಕುಳ್ಳ, ಮನೋಜ್ಞ ನಟನೆಯ ಮೂಲಕ ಮನೆಮಾತಾಗಿದ್ದ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್‌ (81) (Actor Dwarakish) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್‌ ಅವರು ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಮಂಗಳವಾರ (ಏಪ್ರಿಲ್‌ 81) ನಿಧನರಾಗಿದ್ದಾರೆ. ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ದ್ವಾರಕೀಶ್‌ ಅವರ ಅಗಲಿಕೆಗೆ ಸ್ಯಾಂಡಲ್‌ವುಡ್‌ ನಟರು ಸೇರಿ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

1942ರ ಆಗಸ್ಟ್‌ 19ರಂದು ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಜನಸಿದ ಅವರು ನಟನೆಯ ಮೂಲಕವೇ ಮನೆಮಾತಾಗಿದ್ದರು. ಇವರ ತಂದೆ ಶಾಮರಾವ್‌ ಹಾಗೂ ತಾಯಿ ಜಯಮ್ಮ. ಶಾರದಾ ವಿಲಾಸ್‌ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದ ಇವರು ಸಿಪಿಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಮಾಡಿದರು. ಆರಂಭದಲ್ಲಿ ಸಹೋದರನ ಜತೆಗೂಡಿ ಭಾರತ್ ಆಟೋ ಸ್ಪೇರ್ ಸ್ಟೋರ್ ಪ್ರಾರಂಭಿಸಿದರು. ಆದರೆ, ಅವರ ಆಸಕ್ತಿ ಸಿನಿಮಾ ಕಡೆಗೆ ಇತ್ತು.

ಡಿಕೆಶಿ ಸಂತಾಪ, ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ

ದ್ವಾರಕೀಶ್‌ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ನಟಿ ಗಿರಿಜಾ ಲೋಕೇಶ್‌ ಸೇರಿ ಹಲವರು ಕಂಬನಿ ಮಿಡಿದಿದ್ದಾರೆ. “ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾದ ಶ್ರೀ ದ್ವಾರಕೀಶ್‌ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. 1964ರಲ್ಲಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಅವರು, ಹಾಸ್ಯ ಕಲಾವಿದ, ನಾಯಕ ಹಾಗೂ ಪೋಷಕ ನಟನಾಗಿ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಕನ್ನಡ ಚಿತ್ರರರಂಗಕ್ಕೆ ಅಮೂಲ್ಯ ಕೊಡುಗೆ ನೀಡಿದ ದ್ವಾರಕೀಶ್‌ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಡಿಕೆಶಿ ಪೋಸ್ಟ್‌ ಮಾಡಿದ್ದಾರೆ. ಇನ್ನು, ದ್ವಾರಕೀಶ್‌ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇರಿಸಲು ತೀರ್ಮಾನಿಸಲಾಗಿದೆ.

ಡಾ.ರಾಜಕುಮಾರ್‌ ಸೇರಿ ಹಲವು ಗಣ್ಯರೊಂದಿಗೆ ನಟಿಸಿ ಅವರು ಸೈ ಎನಿಸಿಕೊಂಡಿದ್ದರು. ಕನ್ನಡ ಸಿನಿಮಾ ಜಗತ್ತಿನ ಪ್ರಚಂಡ ಕುಳ್ಳ ಎಂದೇ ಖ್ಯಾತರಾಗಿದ್ದ ಅವರು 1963ರಲ್ಲಿ ವೀರಸಂಕಲ್ಪ ಎಂಬ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದರು. ಅದರಲ್ಲೂ, 1966ರಲ್ಲಿ ಡಾ.ರಾಜಕುಮಾರ್‌ ಅಭಿನಯದ ಮೇಯರ್‌ ಮುತ್ತಣ್ಣ ಸಿನಿಮಾ ನಿರ್ಮಾಣ ಮಾಡಿದರು. ಅಲ್ಲಿಂದ ಡಾ.ರಾಜಕುಮಾರ್‌ ಅವರ ಜತೆ ಸಾಲು ಸಾಲು ಸಿನಿಮಾಗಳಲ್ಲಿ ಕಾಣಿಸಿಕೊಂಡರು.

1985ರಲ್ಲಿ ಸಿನಿಮಾ ನಿರ್ದೇಶನಕ್ಕೆ ಕಾಲಿಟ್ಟ ದ್ವಾರಕೀಶ್‌ ಅವರು ಅಲ್ಲೂ ಯಶಸ್ವಿಯಾದರು. ಡಾ.ವಿಷ್ಣುವರ್ಧನ್‌ ಅಭಿನಯದ ನೀ ಬರೆದ ಕಾದಂಬರ್‌ ಸೂಪರ್‌ ಹಿಟ್‌ ಆಯಿತು. ಕಿಟ್ಟು-ಪುಟ್ಟು, ಸಿಂಗಾಪುರದಲ್ಲಿ ರಾಜಕುಳ್ಳ, ಭಾಗ್ಯವಂತರು, ಗುರು ಶಿಷ್ಯರು, ಪೆದ್ದ-ಗೆದ್ದ, ಆಪ್ತಮಿತ್ರ ಸೇರಿದಂತೆ ಹಲವು ಹಿಟ್‌ ಚಿತ್ರಗಳನ್ನು ಕೊಟ್ಟ ಹೆಗ್ಗಳಿಕೆ ದ್ವಾರಕೀಶ್‌ ಅವರದ್ದಾಗಿದೆ. ಚೌಕ ಇವರ ಕೊನೆಯ ಸಿನಿಮಾ ಆಗಿದೆ. ʼದ್ವಾರಕೀಶ್‌ ಚಿತ್ರʼ ಇವರ ನಿರ್ಮಾಣ ಸಂಸ್ಥೆಯಾಗಿತ್ತು. ಇವರು ಸುಮಾರು 400ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು.

19 ಸಿನಿಮಾಗಳ ನಿರ್ದೇಶನ

ಡಾ.ವಿಷ್ಣುವರ್ಧನ್‌ ಹಾಗೂ ದ್ವಾರಕೀಶ್‌ ಜೋಡಿಯು ರಾಜ್ಯಾದ್ಯಂತ ಮೋಡಿ ಮಾಡಿತು. ಈ ಜೋಡಿಯು ಕಳ್ಳ-ಕುಳ್ಳ ಎಂದೇ ಖ್ಯಾತಿಯಾಯಿತು. ನೀ ಬರೆದ ಕಾದಂಬರಿ ಮೂಲಕ ನಿರ್ದೇಶನಕ್ಕೆ ಕಾಲಿಟ್ಟ ದ್ವಾರಕೀಶ್‌ ಅವರು 19 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ರಾಯರು ಬಂದರು ಮಾವನ ಮನೆಗೆ ಡಾನ್ಸ್‌ ರಾಜ ಡಾನ್ಸ್‌, ಶ್ರುತಿ ಹಾಕಿದ ಹೆಜ್ಜೆ ನಿರ್ದೇಶನ ಮಾಡಿದ ಪ್ರಮುಖ ಚಿತ್ರಗಳಾಗಿವೆ. ಕನ್ನಡದ ಜತೆಗೆ ಹಿಂದಿ, ತಮಿಳು, ತೆಲುಗು ಸಿನಿಮಾಗಳನ್ನೂ ನಿರ್ಮಾಣ ಮಾಡಿದ ಕೀರ್ತಿ ಇವರದ್ದು. ಇವರು 52 ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.

ಇದನ್ನೂ ಓದಿ: Meera Jasmine: ʻಮೌರ್ಯʼ, ʻಅರಸುʼ ಖ್ಯಾತಿ ನಟಿಯ ತಂದೆ ಇನ್ನಿಲ್ಲ

Continue Reading

ಬೆಂಗಳೂರು

Theft Case : ಹಗಲಿನಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್‌; ರಾತ್ರಿಯಲ್ಲಿ ಬೈಕ್ ಕದಿಯುವ ಕಳ್ಳ

Theft Case : ಬೆಳಗ್ಗೆ ಹೊತ್ತು ಸ್ವಿಗ್ಗಿ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುವ ಆ ಯುವಕ, ರಾತ್ರಿಯಾದರೆ ಸಾಕು ವರಸೆಯೇ ಬದಲಾಯಿಸಿಕೊಳ್ಳುತ್ತಿದ್ದ. ಮನೆ ಮುಂದೆ ನಿಲ್ಲಿಸುತ್ತಿದ್ದ ಬೈಕ್‌ಗಳನ್ನು ಕ್ಷಣ ಮಾತ್ರದಲ್ಲೆ ಕದ್ದು ಪರಾರಿ ಆಗುತ್ತಿದ್ದ. ಇದೀಗ ಪೊಲೀಸರು ಕಾರ್ಯಾಚರಣೆ ನಡೆಸಿ ನಟೋರಿಯಸ್‌ ಕಳ್ಳನನ್ನು ಬಂಧಿಸಿದ್ದಾರೆ.

VISTARANEWS.COM


on

By

Theft Case in Bengaluru
Koo

ಬೆಂಗಳೂರು: ಬೈಯ್ಯಪ್ಪನಹಳ್ಳಿ ಪೊಲೀಸರು ನಟೋರಿಯಸ್ ಬೈಕ್ ಕಳ್ಳನನ್ನು (Theft Case) ಬಂಧಿಸಿದ್ದಾರೆ. ದೀಪಕ್ ಅಲಿಯಾಸ್‌ ದೀಪು ಬಂಧಿತ ಆರೋಪಿಯಾಗಿದ್ದಾನೆ. ದೀಪಕ್‌ ಸ್ವಿಗ್ಗಿ ಡೆಲಿವರಿ ಬಾಯ್ (Swiggy Boy) ಆಗಿ ಕೆಲಸ ಮಾಡುತ್ತಿದ್ದ. ಈತನ ಮೇಲೆ ವಿವಿಧ ಪೊಲೀಸ್ ಠಾಣೆಯಲ್ಲಿ ಸುಮಾರು 14 ಪ್ರಕರಣ ದಾಖಲಾಗಿವೆ.

ಬೆಳಗಿನಿಂದ ಸಂಜೆವರೆಗೂ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿ, ರಾತ್ರಿ ವೇಳೆ ಮನೆ ಮುಂದೆ ನಿಲ್ಲಿಸಿದ ಬೈಕ್ ಕದಿಯುತ್ತಿದ್ದ. ಕದ್ದ ಬೈಕ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ. ಬೈಕ್‌ ಮಾರಾಟಕ್ಕೂ ಮೊದಲು ದಾಖಲಾತಿಯನ್ನೆಲ್ಲ ನಂತರ ಕೊಡುತ್ತೇನೆ ಎಂದು ಯಮಾರಿಸಿ, ಕಡಿಮೆ ಬೆಲೆಗೆ ಬೈಕ್ ಮಾರುತ್ತಿದ್ದ.

ಸದ್ಯ ಬೈಯ್ಯಪ್ಪನಹಳ್ಳಿ ಪೊಲೀಸರು ಈ ಖತರ್ನಾಕ್‌ ಕಳ್ಳನಿಂದ ಮೂರು ಲಕ್ಷ ಮೌಲ್ಯದ ಐದು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಬೈಯ್ಯಪ್ಪನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Road Accident : ಹುಬ್ಬಳ್ಳಿಯಲ್ಲಿ ಭೀಕರ ಅಪಘಾತಕ್ಕೆ ಮೂವರು ಬಲಿ, ಮತ್ತೋರ್ವ ಗಂಭೀರ

ಬುಲೆಟ್‌ ಬೈಕ್‌ ಕದಿಯಲು ಕಳ್ಳನ ಒದ್ದಾಟ

ಮನೆ ಮುಂದೆ ನಿಲ್ಲಿಸಿದ್ದ ಬುಲೆಟ್‌ ಬೈಕ್ ಕಳ್ಳತನಕ್ಕೆ ಕಳ್ಳನೊಬ್ಬ ವಿಫಲ ಯತ್ನ ನಡೆಸಿದ್ದಾನೆ. ಬುಲೆಟ್ ಬೈಕ್‌ನ ಹ್ಯಾಂಡಲ್ ಲಾಕ್‌ ಕಾಲಿನಿಂದ ಒದ್ದು ಮುರಿಯಲು ಯತ್ನಿಸಿದ್ದಾನೆ. ಬೈಕ್ ಕದಿಯಲು ಕಳ್ಳನ ಒದ್ದಾಟವು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಏಪ್ರಿಲ್‌ 14ರ ಮಧ್ಯರಾತ್ರಿ 2:25ರ ಸುಮಾರಿಗೆ ಕಳ್ಳನೊಬ್ಬ ಬೆಂಗಳೂರಿನ ಜೆ.ಪಿ ನಗರದ ಮನೆ ಬಳಿ ಬಂದಿದ್ದ. ಒಂದೆರಡು ನಿಮಿಷ ಬುಲೆಟ್‌ ಬೈಕ್‌ ಅನ್ನೇ ನೋಡುತ್ತಾ, ಜತೆಗೆ ಧರಿಸಿದ್ದ ಟೀ ಶರ್ಟ್‌ನಲ್ಲೇ ಮುಖವನ್ನು ಮುಚ್ಚಿಕೊಂಡಿದ್ದ. ನಂತರ ಬುಲೆಟ್‌ ಬೈಕ್‌ ಏರಿ ಕುಳಿತು ಅತ್ತಿಂದಿತ್ತ ಕಣ್ಣಾಡಿಸಿ ಕಾಲಿನಿಂದ ಒದ್ದು ಹ್ಯಾಂಡಲ್‌ ಮುರಿಯಲು ಯತ್ನಿಸಿದ್ದಾನೆ. ಹೀಗೆ ನಾಲ್ಕೈದು ಬಾರಿ ಪ್ರಯತ್ನಿಸಿದ ನಂತರ ಮತ್ತ ಮನೆ ಮುಂದೆಯೇ ಬೈಕ್‌ ನಿಲ್ಲಿಸಿ, ಬಂದ ದಾರಿಗೆ ಸುಂಕವಿಲ್ಲ ಎಂದು ತಿಳಿದು ಹೊರಟು ಹೋಗಿದ್ದಾನೆ. ಸದ್ಯ ಕಳ್ಳನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಳ್ಳತನವನ್ನೇ ಕಾಯಕ ಮಾಡಿಕೊಂಡ ಅಪ್ಪ-ಮಗ; ಗರಿ ಗರಿ ನೋಟು, ಡೈಮಂಡ್‌ ಕದ್ದವರು ಜೈಲುಪಾಲು

ಬೆಂಗಳೂರು: ಮಾದನಾಯಕನಹಳ್ಳಿ ಪೊಲೀಸರು (Madanayakanahalli Police) ಕುಖ್ಯಾತ ಮನೆಗಳ್ಳರನ್ನು (Theft Case) ಬಂಧಿಸಿದ್ದಾರೆ. ಮಿರ್ಜಾ ಸೈಯದ್ ಬೇಗ್ ಅಲಿಯಾಸ್‌ ಎಂಎಸ್ ಬೇಗ್ ಹಾಗೂ ಮಿರ್ಜಾ ನೂರುದ್ದಿನ್ ಬೇಗ್ ಬಂಧಿತರು. ಕಳ್ಳತನವನ್ನೇ ಕೆಲಸ ಮಾಡಿಕೊಂಡಿದ್ದ ಅಪ್ಪ-ಮಗನಿಂದ ಪೊಲೀಸರು ಸುಮಾರು 1 ಕೋಟಿ ಮೌಲ್ಯದ 1.25 ಕೆಜಿ ತೂಕದ ಡೈಮಂಡ್ ಹಾಗೂ ಚಿನ್ನಾಭರಣ, 2 ಕೆಜಿ ಬೆಳ್ಳಿ, 21 ಲಕ್ಷ ರೂ. ನಗದು ಸೇರಿದಂತೆ ಪೂಜೆಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಇವರಿಬ್ಬರು ರಿಹ್ಯಾಬಿಲೇಷನ್ ಸೆಂಟರ್‌ನಲ್ಲಿ 11 ಲಕ್ಷ ಮೌಲ್ಯದ ಚಿನ್ನಾಭರಣ ನಗದು ಕದ್ದಿದ್ದರು. ಮಿರ್ಜಾ ಸೈಯದ್ ಬೇಗ್ ಕ್ಲೀನಿಂಗ್ ಕೆಲಸಕ್ಕೆಂದು 15 ದಿನಕ್ಕೊಮ್ಮೆ ಓಲ್ಡ್ ಏಜ್ ಹೋಮ್‌ಗೆ ಬರುತ್ತಿದ್ದಾಗ, ಚಿನ್ನಾಭರಣಗಳು ಇರುವುದನ್ನು ಕಂಡಿದ್ದ. ದುರಾಸೆಗೆ ಬಿದ್ದ ಬೇಗ್‌ ಓಲ್ಡ್ ಏಜ್ ಹೋಮ್‌ ಮಾಲೀಕರ ಮನೆಗೆ ಕನ್ನ ಹಾಕಲು ಸ್ಕೆಚ್ ಹಾಕಿದ್ದ.

ಮಾತ್ರವಲ್ಲ ಕಳ್ಳತನಕ್ಕೆ ತಂದೆಯನ್ನೇ ಪಾರ್ಟ್ನರ್ ಆಗಿ ಮಾಡಿಕೊಂಡು, ಕಳ್ಳತನಕ್ಕೆ ಸ್ಕೆಚ್‌ ಹಾಕಿರುವುದಾಗಿ ಹೇಳಿದ್ದ. ಇದಕ್ಕೆ ಒಪ್ಪಿ ಕಳ್ಳತನಕ್ಕೆ ಸಾಥ್ ನೀಡಿದ ತಂದೆ ಮಿರ್ಜಾ ನೂರುದ್ದಿನ್ ಬೇಗ್, ಮನೆ ಮಾಲೀಕರು ಇಲ್ಲದ ಸಮಯದಲ್ಲಿ ಬಂದು ಇಡೀ ಮನೆಯನ್ನೇ ದೋಚಿದ್ದರು. ಸಿಕ್ಕಿ ಬೀಳಬಾರದೆಂದು ನಂತರ ಖಾರದಪುಡಿ ಹಾಕಿ ಸಾಕ್ಷಿ ನಾಶಕ್ಕೆ ಮುಂದಾಗಿದ್ದರು.

ಇನ್ನು ಮಿರ್ಜಾ ಸೈಯದ್‌ ಬೇಗ್‌ ತಂದೆಗೆ ಹೃದಯ ಸಂಬಂಧಿ ಖಾಯಿಲೆ ಜತೆಗೆ ಮೂರು ಬಾರಿ ಶಸ್ತ್ರಚಿಕಿತ್ಸೆಯಾಗಿತ್ತು. ಹೀಗಾಗಿ ಚಿನ್ನಾಭರಣವನ್ನೆಲ್ಲ ಕದ್ದು ಅದನ್ನು ಮಾರಾಟ ಮಾಡಿದರೆ, ಅದರಿಂದ ಬಂದ ಹಣದಲ್ಲಿ ಆರಾಮವಾಗಿ ಇರಬಹುದು ಎಂದು ಕಳ್ಳತನದ ದಾರಿ ತುಳಿದಿದ್ದರು. ಆದರೆ ಕರ್ಮ ರಿರ್ಟನ್ಸ್‌ ಎಂಬಂತೆ ಅಪ್ಪ-ಮಗ ಇಬ್ಬರು ಸಿಕ್ಕಿ ಬಿದ್ದಿದ್ದಾರೆ. ಈ ಸಂಬಂಧ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಬಂಧನವಾಗಿದೆ. ಮತ್ತಷ್ಟು ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
NEET PG-2024
ಶಿಕ್ಷಣ5 mins ago

NEET PG-2024: ನೀಟ್‌ ಪಿಜಿ ಅರ್ಜಿ ಸಲ್ಲಿಕೆ ಇಂದಿನಿಂದ ಪ್ರಾರಂಭ; ಇಲ್ಲಿದೆ ನೋಂದಣಿ ಮಾಹಿತಿ

Auto Fare in Bengaluru
ಬೆಂಗಳೂರು7 mins ago

Auto Fare : ಮೆಜೆಸ್ಟಿಕ್‌ ಟು ಲಾಲ್‌ಬಾಗ್‌ಗೆ ಆಟೋ ಚಾರ್ಜ್‌ 400 ರೂ; ಸೆಕೆಂಡ್‌ಗೆ 5ರೂ ಏರಿಕೆಗೆ ಪ್ರಯಾಣಿಕ ಕಕ್ಕಾಬಿಕ್ಕಿ

Dinesh Karthik
ಕ್ರೀಡೆ12 mins ago

Dinesh Karthik: ಕಾರ್ತಿಕ್​ಗೆ ಟಿ20 ವಿಶ್ವಕಪ್​ನಲ್ಲಿ ಅವಕಾಶ ನೀಡಿ; ದಿಗ್ಗಜ ಕ್ರಿಕೆಟಿಗರ ಒತ್ತಾಯ

gold rate today tapasi
ಚಿನ್ನದ ದರ15 mins ago

Gold Rate Today: ಏರಿಕೆಯಲ್ಲಿ ದಾಖಲೆ ಬರೆಯುತ್ತಲೇ ಇದೆ ಚಿನ್ನದ ದರ! ಇಂದಿನ ಬೆಲೆ ₹74,130 !

Actor Dwarakish
ಪ್ರಮುಖ ಸುದ್ದಿ22 mins ago

Actor Dwarakish: ಕರುನಾಡ ಕುಳ್ಳ, ಹಿರಿಯ ನಟ ದ್ವಾರಕೀಶ್‌ ಇನ್ನಿಲ್ಲ

Theft Case in Bengaluru
ಬೆಂಗಳೂರು40 mins ago

Theft Case : ಹಗಲಿನಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್‌; ರಾತ್ರಿಯಲ್ಲಿ ಬೈಕ್ ಕದಿಯುವ ಕಳ್ಳ

actor prakash Rai
ವೈರಲ್ ನ್ಯೂಸ್1 hour ago

Actor Prakash Rai: “ರಂಗಾಯಣಗಳಿಗೆ ಬಿಡಿಗಾಸೂ ಇಲ್ಲ; ನಿರ್ದಿಗಂತಕ್ಕೆ ಹಣದ ಹೊಳೆ!” ಸಿಡಿದೆದ್ದ ಜೆಡಿಎಸ್‌ನಿಂದ ನಟ ಪ್ರಕಾಶ್‌ ರೈಗೆ ಚಾಟಿ

IPL 2024
ಕ್ರೀಡೆ1 hour ago

IPL 2024: ಸ್ಟ್ರೈಕ್ ರೇಟ್​ ಮೂಲಕ ನೂತನ ದಾಖಲೆ ಬರೆದ ಅಬ್ದುಲ್​ ಸಮದ್

Breast Cancer
ಲೈಫ್‌ಸ್ಟೈಲ್1 hour ago

Breast Cancer: ಮಹಿಳೆಯರೇ ಹುಷಾರ್‌; 2040ರ ವೇಳೆಗೆ ಸ್ತನ ಕ್ಯಾನ್ಸರ್‌ಗೆ 10 ಲಕ್ಷ ಜನ ಬಲಿಯಾಗಲಿದ್ದಾರಂತೆ!

BSP Candidates List
ಪ್ರಮುಖ ಸುದ್ದಿ1 hour ago

BSP List: ವಾರಾಣಸಿಯಲ್ಲಿ ಮೋದಿ ವಿರುದ್ಧ ಬಿಎಸ್‌ಪಿ ಅಭ್ಯರ್ಥಿ ಯಾರು? ಗ್ಯಾಂಗ್‌ಸ್ಟರ್‌ ಪತ್ನಿಗೂ ಟಿಕೆಟ್!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ7 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 202424 hours ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ2 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ3 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ4 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌