Cyclone Mandous‌ | ರಾಜ್ಯದಲ್ಲಿ ಮಾಂಡೌಸ್ ಚಂಡಮಾರುತ ಎಫೆಕ್ಟ್, ಬೆಂಗಳೂರಿನಲ್ಲಿ ಮಲೆನಾಡಿನ ವಾತಾವರಣ - Vistara News

ಕರ್ನಾಟಕ

Cyclone Mandous‌ | ರಾಜ್ಯದಲ್ಲಿ ಮಾಂಡೌಸ್ ಚಂಡಮಾರುತ ಎಫೆಕ್ಟ್, ಬೆಂಗಳೂರಿನಲ್ಲಿ ಮಲೆನಾಡಿನ ವಾತಾವರಣ

ರಾಜ್ಯದಲ್ಲಿ ಮಾಂಡೌಸ್‌ ಚಂಡಮಾರುತ ತನ್ನ ಪ್ರಭಾವ ಬೀರಿದ್ದು, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಮಳೆ-ಚಳಿಯ ವಾತಾವರಣೆ ಸೃಷ್ಟಿಯಾಗಿದೆ. ಬೆಂಗಳೂರಿನಲ್ಲಿ (Cyclone Mandous‌) ತಾಪಮಾನ ಇಳಿಕೆಯಾಗಿದೆ.

VISTARANEWS.COM


on

rain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಮಾಂಡೌಸ್ ಚಂಡಮಾರುತ ಪ್ರಭಾವ ಬೀರಿದ್ದು, ಹವಾಮಾನದಲ್ಲಿ ಬದಲಾವಣೆಯಾಗಿದೆ. ಬೆಂಗಳೂರಿನಲ್ಲಿ ಊಟಿ, ಮಡಿಕೇರಿಯನ್ನು ಕೂಡ ಮೀರಿಸುವಂತೆ ಮಲೆನಾಡಿನ ಮಳೆ-ಚಳಿಯ ವಾತಾವರಣ ಸೃಷ್ಟಿಯಾಗಿದೆ. ಕಳೆದೆರಡು ದಿನಗಳಲ್ಲಿ ಕನಿಷ್ಠ ತಾಪಮಾನ ದಾಖಲಾಗಿದೆ. (Cyclone Mandous‌) ಬೆಂಗಳೂರಿನಲ್ಲಿ ತಾಪಮಾನ 18 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಮಳೆಗಿಂತ‌ ಚಳಿಯೇ ಹೆಚ್ಚು ಕಾಡುತ್ತಿದೆ. ಚಂಡಮಾರುತದ ಗಾಳಿ ಕೆಳಭಾಗದಲ್ಲಿ ಬೀಸುತ್ತಿದ್ದು, ಚಳಿ ಜೋರಾಗಿದೆ.

ವೀಕೆಂಡ್ ಮೂಡ್‌ನಲ್ಲಿದ್ದ ಬೆಂಗಳೂರಿಗರಿಗೆ ಮಳೆ ಮತ್ತು ಚಳಿಯ ಅಬ್ಬರಕ್ಕೆ ಥಂಡ ಹೊಡೆದಂತಾಗಿದೆ. ಇನ್ನೂ ಮೂರು ದಿನಗಳವರೆಗೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಮಳೆಯಿಂದ ತತ್ತರಿಸಿದ ಜನರಿಗೆ ಮಾಂಡೌಸ್ ಚಂಡಮಾರುತದ ಎಫೆಕ್ಟ್ ಎದುರಿಸುವಂತಾಗಿದೆ.

ಬೀದರ್‌ ವರದಿ: ಮಾಂಡೋಸ್ ಚಂಡಮಾರುತದ ಪರಿಣಾಮ ಬೀದರ್‌ನಲ್ಲಿ ಮಳೆಯಾಗಿದ್ದು, ಚಳಿಯನ್ನೂ ಹೆಚ್ಚಿಸಿದೆ. ದೈನಂದಿನ ಕೆಲಸ ಕಾರ್ಯಗಳಿಗೆ ಮನೆಯಿಂದ ಹೊರ ಬರಲು ಜನ ಹಿಂದೇಟು ಹಾಕುತ್ತಿದ್ದಾರೆ. ಕೊಪ್ಪಳದಲ್ಲೂ ತಂಪಾದ ಹವೆ ಉಂಟಾಗಿದೆ.

ಚಿಕ್ಕ ಬಳ್ಳಾಪುರದಲ್ಲಿ ಬೆಳೆ ಹಾನಿ: ಚಿಕ್ಕಬಳ್ಳಾಪುರದಲ್ಲೂ ಮಾಂಡೋಸ್ ಅಬ್ಬರ ಕಂಡು ಬಂದಿದ್ದು, ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಹೂವು, ತರಕಾರಿ, ರೇಷ್ಮೆ ಬೆಳೆಗಳಿಗೆ ಹಾನಿ ಸಂಭವಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Chikkaballapur News : ಒಂದೇ ಗ್ರಾಮದಲ್ಲಿ ನಾಲ್ವರ ಸರಣಿ ಸಾವು ; ಸ್ಥಳೀಯರಲ್ಲಿ ಆತಂಕ

Chikkaballapur News : ಎಲ್ಲರೂ ವಾಂತಿ, ಭೇದಿಯಿಂದ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಆದರೆ, ಎಲ್ಲರೂ ಒಂದೇ ವಯಸ್ಸಿನವರು ಮೃತಪಡುತ್ತಿರುವುದು ಸ್ಥಳೀಯರ ಪಾಲಿಗೆ ವಿಶೇಷ ಎನಿಸಿದೆ. ಒಂದೇ ವಯಸ್ಸಿನವರು ಅನಾರೋಗ್ಯಕ್ಕೆ ಒಳಗಾಗುಗುವುದು ಯಾಕೆ. ಏನಾದರೂ ಸಮಸ್ಯೆ ಇದೆಯೇ ಎಂಬುದಾಗಿ ಅವರೆಲ್ಲರೂ ಮಾತನಾಡಿಕೊಳ್ಳುತ್ತಿದ್ದಾರೆ.

VISTARANEWS.COM


on

Chikkaballapur News
Koo

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ(Chikkaballapur News ) ವೀರಪ್ಪಲ್ಲಿ ಗ್ರಾಮದಲ್ಲಿ ಒಂದೇ ವಯಸ್ಸಿನ ನಾಲ್ವರು ಮೃತಪಟ್ಟಿರುವ ಘಟನೆ ಸ್ಥಳೀಯರ ಆತಂತಕ್ಕೆ ಕಾರಣವಾಗಿದೆ. ಮೃತಪಟ್ಟವರೆಲ್ಲರೂ 70 ವರ್ಷ ದಾಟಿದವರಾಗಿದ್ದಾರೆ. ಹೀಗಾಗಿ ವಯೋವೃದ್ಧರಿಗೆ ಆತಂಕ ಹೆಚ್ಚಾಗಿದೆ. ಆದರೆ, ಸಾಂಕ್ರಾಮಿಕ ರೋಗದಿಂದ ಅವರ ಮೃತಪಟ್ಟಿರಬಹುದು ಎಂದು ಆರೋಗ್ಯ ಅಧಿಕಾರಿಗಳು ಶಂಕಿಸಿದ್ದಾರೆ. ಆರೋಗ್ಯ ಸಿಬ್ಬಂದಿ ಗ್ರಾಮದಲ್ಲಿ ಬೀಡುಬಿಟ್ಟು ಹಿರಿಯ ವಯಸ್ಸಿನವರ ಬಗ್ಗೆ ಕಾಳಜಿ ವಹಿಸಿದ್ದಾರೆ.

ಗಂಗಮ್ಮ,(70), ಮುನಿನಾರಾಯಣಮ್ಮ(74), ಲಕ್ಷ್ಮಮ್ಮ (70), ನರಸಿಂಹಪ್ಪ (75) ಮೃತಪಟ್ಟವರು. ಎಲ್ಲರೂ ವಾಂತಿ, ಭೇದಿಯಿಂದ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಆದರೆ, ಎಲ್ಲರೂ ಒಂದೇ ವಯಸ್ಸಿನವರು ಮೃತಪಡುತ್ತಿರುವುದು ಸ್ಥಳೀಯರ ಪಾಲಿಗೆ ವಿಶೇಷ ಎನಿಸಿದೆ. ಒಂದೇ ವಯಸ್ಸಿನವರು ಅನಾರೋಗ್ಯಕ್ಕೆ ಒಳಗಾಗುಗುವುದು ಯಾಕೆ. ಏನಾದರೂ ಸಮಸ್ಯೆ ಇದೆಯೇ ಎಂಬುದಾಗಿ ಅವರೆಲ್ಲರೂ ಮಾತನಾಡಿಕೊಳ್ಳುತ್ತಿದ್ದಾರೆ.

ಮೃತಪಟ್ಟವರೆಲ್ಲರೂ ಕಲುಷಿತ ನೀರು ಸೇವನೆ ಮಾಡಿ ಅಸ್ವಸ್ಥಗೊಂಡಿದ್ದಾರೆ ಎಂದು ವೈದ್ಯಕೀಯ ಸಿಬ್ಬಂದಿ ಹೇಳುತ್ತಿದ್ದಾರೆ. ಗ್ರಾಮದ ಹಲವರಲ್ಲಿ ಅದೇ ಲಕ್ಷಣ ಕಂಡು ಬಂದಿದೆ. ಆದರೆ ಅವರೆಲ್ಲರೂ ಸುಧಾರಿಸಿಕೊಳ್ಳುತ್ತಿದ್ದಾರೆ. ಆದರೆ, ಹೆಚ್ಚು ವಯಸ್ಸಿನವರು ಬದುಕುತ್ತಿಲ್ಲ ಎಂಬುದಾಗಿ ಹೇಳಿದ್ದಾರೆ. ಆದರೆ ವೈದ್ಯರ ಮಾತನ್ನು ತಕ್ಷಣಕ್ಕೆ ಗ್ರಾಮಸ್ಥರು ನಂಬುತ್ತಿಲ್ಲ.

ಇದನ್ನೂ ಓದಿ: Murder News : ಖಾಸಗಿ ಕ್ಷಣದ ಫೋಟೋಗಳನ್ನಿಟ್ಟು ಬೆದರಿಕೆ ಹಾಕುತ್ತಿದ್ದವನನ್ನು ಕೊಲೆ ಮಾಡಿದ ವಿವಾಹಿತ ಮಹಿಳೆ

ಅರಿವು ಮೂಡಿಸಿದ ವೈದ್ಯರು

ಆರೋಗ್ಯ ಇಲಾಖೆ ಸಿಬ್ಬಂದಿ ಮನೆಮನೆಗೂ ಭೇಟಿ ನೀಡಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಸ್ಥಳಕ್ಕೆ ಡಿಎಚ್​ಒ ,ಇಒ ,ಟಿಎಚ್​​ ಒ, ಡಿ ಎಸ್ ಒ , ಡಿಎಂಒ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅವರೆಲ್ಲರೂ ಹೆದರಿದ ಗ್ರಾಮಸ್ಥರಿಗೆ ಆತ್ಮಸ್ಥೈರ್ಯ್ಯ ತುಂಬುತ್ತಿದ್ದಾರೆ. ಕಳೆದ ಹಲವು ದಿನಗಳಿಂದ ಗ್ರಾಮದ ಸರ್ಕಾರಿ ಶಾಲೆಯಲ್ಲೇ ಬೀಡು ಬಿಟ್ಟಿರುವ ವೈದ್ಯಕೀಯ ಸಿಬ್ಬಂದಿ ಪ್ರಕರಣಗಳ ಬಗ್ಗೆ ಗಮನ ಹರಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

ರಾಜಮಾರ್ಗ ಅಂಕಣ : ನನ್ನ ಬದುಕೇ ಬೇರೆ, ನನ್ನ ಸಿನಿಮಾನೇ ಬೇರೆ ಅಂದರೆ ಹೀಗೇ ಆಗೋದು!

ಒಬ್ಬ ಸಿನೆಮಾ ನಟ ತಾನು ಸಿನೆಮಾದಲ್ಲಿ ಮಾಡುವ ಪಾತ್ರಗಳಿಗೂ, ನಿಜ ಜೀವನದಲ್ಲಿ ಆತನ ವ್ಯಕ್ತಿತ್ವಕ್ಕೂ ಅಜಗಜಾಂತರ ಇದೆ ಅಂತಾದರೆ ಸಹಿಸಿಕೊಳ್ಳುವುದು ಹೇಗೆ? ಒಬ್ಬ ಸ್ಟಾರ್ ನಟ ಆಪಾದಿತನಾಗಿ ಕಟಕಟೆಯಲ್ಲಿ ತಲೆ ತಗ್ಗಿಸಿ ನಿಂತಾಗಲೂ ಜೈಕಾರ ಹಾಕುವ ಹುಚ್ಚು ಅಭಿಮಾನಿಗಳಿಗೆ ಏನೆಂದು ಹೇಳಬೇಕು? ಒಬ್ಬ ಸ್ಟಾರ್ ನಟನ ಕೋಟಿ ಅಭಿಮಾನಿಗಳು ಆತನ ಖಾಸಗಿ ಜೀವನವನ್ನು ಅನುಕರಣೆ ಮಾಡಲು ಹೋದರೆ ಸಮಾಜ ಹೇಗಿರಬಹುದು?

VISTARANEWS.COM


on

Actor Darshan
Koo

ರಾಜೇಂದ್ರ ಭಟ್ ಕೆ

Rajendra-Bhat-Raja-Marga-Main-logo

ಮೊದಲೇ ಹೇಳಿಬಿಡುತ್ತೇನೆ, ನಾನು ಯಾವುದೇ ಸಿನಿಮಾ ನಟನ ಅಭಿಮಾನಿಯಲ್ಲ. ದರ್ಶನ್ (Actor Darshan) ಎಂಬ ಕನ್ನಡದ ಸ್ಟಾರ್ ನಟನ ಬದುಕಿನಲ್ಲಿ ಈ ಎರಡು ದಿನಗಳ ಅವಧಿಯಲ್ಲಿ ಏನೆಲ್ಲ ಆಗಿದೆ ಅದರ ಬಗ್ಗೆ ನಾನು ತೀರ್ಪು ಕೊಡಲು ಹೋಗುವುದಿಲ್ಲ. ಆದರೆ ಈ ಘಟನೆಯು ಸಮಾಜಕ್ಕೆ ಬಹು ದೊಡ್ಡ ಸಂದೇಶ ಉಳಿಸಿ ಹೋಗಿದೆ. ಆತನ ಸಿನೆಮಾಗಳಲ್ಲಿ ಅವನು ಮಾಡುವ ಪಾತ್ರಗಳು, ಕೊಡುವ ಪೋಸ್, ಹೊಡೆಯುವ ಡೈಲಾಗುಗಳು, ಪ್ರಕಟಿಸುವ ಮೌಲ್ಯಗಳು….
ಛೇ! ಹೀಗಾಗಬಾರದಿತ್ತು. ಅವನನ್ನು ಕೋರ್ಟಿಗೆ ವಿಚಾರಣೆಗೆ ಕರೆತಂದಾಗ ಅಲ್ಲಿದ್ದ ಕೆಲವು ಅಭಿಮಾನಿಗಳು ‘ ಡಿ ಬಾಸಿಗೆ ಜಯವಾಗಲಿ’ ಅಂತ ಘೋಷಣೆ ಕೂಗಿದರಂತೆ! ಇನ್ನು ಅವನು ಈ ಕೇಸನ್ನು ಗೆದ್ದು ಬಂದರೆ ಸಾವಿರಾರು ಅಭಿಮಾನಿಗಳು ಮಾಲೆ ಹಿಡಿದು ಜೈಕಾರ ಹಾಕಲು ಕಾಯುತ್ತಿರುತ್ತಾರೆ! ಅಂಧಾಭಿಮಾನ ಈ ಮಟ್ಟಕ್ಕೆ ಹೋಗಬಾರದು.

ನಮ್ಮ ಖಾಸಗಿ ಜೀವನ ಮತ್ತು ವೃತ್ತಿ ಜೀವನ

ಪ್ರತಿಯೊಬ್ಬ ವ್ಯಕ್ತಿಗೂ ಒಂದು ಖಾಸಗಿ ಜೀವನ ಮತ್ತು ಇನ್ನೊಂದು ವೃತ್ತಿ ಜೀವನ ಇರುತ್ತದೆ. ಅದರ ಮಧ್ಯೆ ಒಂದು ಸಣ್ಣ ಗ್ಯಾಪ್ ಇದ್ದೇ ಇರುತ್ತದೆ. ಅದು ಸಹಜ ಕೂಡ.

ಆದರೆ ಅದೇ ಗ್ಯಾಪ್ ದೊಡ್ಡದಾದರೆ? ಒಬ್ಬ ಸಿನೆಮಾ ನಟ ತಾನು ಸಿನೆಮಾದಲ್ಲಿ ಮಾಡುವ ಪಾತ್ರಗಳಿಗೂ, ನಿಜ ಜೀವನದಲ್ಲಿ ಆತನ ವ್ಯಕ್ತಿತ್ವಕ್ಕೂ ಅಜಗಜಾಂತರ ಇದೆ ಅಂತಾದರೆ ಸಹಿಸಿಕೊಳ್ಳುವುದು ಹೇಗೆ? ಒಬ್ಬ ಸ್ಟಾರ್ ನಟ ಆಪಾದಿತನಾಗಿ ಕಟಕಟೆಯಲ್ಲಿ ತಲೆ ತಗ್ಗಿಸಿ ನಿಂತಾಗಲೂ ಜೈಕಾರ ಹಾಕುವ ಹುಚ್ಚು ಅಭಿಮಾನಿಗಳಿಗೆ ಏನೆಂದು ಹೇಳಬೇಕು? ಒಬ್ಬ ಸ್ಟಾರ್ ನಟನ ಕೋಟಿ ಅಭಿಮಾನಿಗಳು ಆತನ ಖಾಸಗಿ ಜೀವನವನ್ನು ಅನುಕರಣೆ ಮಾಡಲು ಹೋದರೆ ಸಮಾಜ ಹೇಗಿರಬಹುದು? ಒಬ್ಬ ಬಡ ಕುಟುಂಬದ ಹುಡುಗ ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿ ತೊಂದರೆ ಕೊಟ್ಟ ಎಂಬ ಕಾರಣಕ್ಕೆ ಸ್ಟಾರ್ ನಟ ಮತ್ತು ಅವನ ಗೆಳೆಯರು ಹೊಡೆದು ಕೊಲೆ ಮಾಡುವ ಮಟ್ಟಕ್ಕೆ ಹೋಗುತ್ತಾರೆ (ನನಗೆ ಗೊತ್ತಿಲ್ಲ) ಅಂದರೆ ಅದೆಂತಹ ಕ್ರೌರ್ಯ? ದರ್ಶನ್ ಸಿನೆಮಾದಲ್ಲಿ ಮಾಡುವ ಪಾತ್ರಗಳಿಗೂ ಇಂತಹ ಘಟನೆಗಳಿಗೂ ಎಷ್ಟೊಂದು ವ್ಯತ್ಯಾಸ ಅಲ್ವಾ?

ಹುಚ್ಚು ಅಭಿಮಾನಿಗಳ ಅತಿರೇಕಗಳು!:

ಬಹಳ ಹಿಂದೆ ಡಾಕ್ಟರ್ ರಾಜಕುಮಾರ್ ಅವರ ‘ಸಮಯದ ಗೊಂಬೆ ‘ ಸಿನೆಮಾ ಬಿಡುಗಡೆ ಆಗಿತ್ತು. ನಾನು ಅದನ್ನು ಬೆಂಗಳೂರಿನ ಒಂದು ಥಿಯೇಟರ್ ಒಳಗೆ ಕೂತು ನೋಡುತ್ತಾ ಇದ್ದೆ. ಅದರಲ್ಲಿ ರಾಜ್ ಅವರದ್ದು ಒಬ್ಬ ಸಾಮಾನ್ಯ ಕಾರ್ ಡ್ರೈವರ್ ಪಾತ್ರ ಆಗಿತ್ತು. ನಟ ಶ್ರೀನಾಥ್ ಅವರದ್ದು ಆ ಕಾರ್ ಯಜಮಾನನ ಪಾತ್ರ. ಒಂದು ಭಾವನಾತ್ಮಕ ಪಾತ್ರದಲ್ಲಿ ಸಿಟ್ಟು ಮಾಡಿಕೊಂಡ ಶ್ರೀನಾಥ್ ತನ್ನ ಡ್ರೈವರ್ ಆದ ರಾಜಕುಮಾರ್ ಅವರ ಕಪಾಳಕ್ಕೆ ಹೊಡೆಯುವ ಸನ್ನಿವೇಶ. ಸಿನೆಮಾದ ಕಥೆಯೇ ಹಾಗಿತ್ತು. ಆದರೆ ಅದನ್ನು ರಾಜ್ ಅಭಿಮಾನಿಗಳು ಸಹಿಸಿಕೊಳ್ಳಲಿಲ್ಲ.
‘ಏನೋ, ನಮ್ಮ ಅಣ್ಣಾವ್ರಿಗೆ ಹೊಡೀತಿಯೇನೋ?’ ಎಂದೆಲ್ಲ ಕೂಗಾಡಿದರು. ಥಿಯೇಟರ್ ಮೇಲೆ ಕಲ್ಲು ಬಿತ್ತು. ಶ್ರೀನಾಥ್ ಎಂಬ ನಟನಿಗೆ ಬೈಗುಳದ ಅಭಿಷೇಕವೇ ಆಯಿತು. ಕೊನೆಗೆ ಚಿತ್ರ ನಿರ್ಮಾಪಕರು ಕ್ಷಮೆ ಕೇಳಿ ಆ ದೃಶ್ಯವನ್ನು ಕತ್ತರಿಸುವ ಭರವಸೆ ಕೊಟ್ಟ ನಂತರ ಪ್ರೇಕ್ಷಕರ ಆಕ್ರೋಶವು ತಣಿಯಿತು.

ತಮಿಳುನಾಡಿನಲ್ಲಿ ಈ ಹುಚ್ಚು ಅಭಿಮಾನ ಇನ್ನೂ ಜಾಸ್ತಿ. ಎಂ ಜಿ ಆರ್, ಜಯಲಲಿತಾ, ಅಜಿತ್, ವಿಜಯ್, ರಜನೀಕಾಂತ್ ಅವರನ್ನು ದೇವರಾಗಿ ಕಂಡ ಜನ ಅವರು. ನಟಿ ಖುಷ್ಬೂಗೆ ಒಂದು ದೇವಸ್ಥಾನವನ್ನು ಕಟ್ಟಿದ ಜನ ಅವರು! ಒಬ್ಬ ನಟನ ಅಭಿಮಾನಿಗಳು ಇನ್ನೊಬ್ಬ ನಟನ ಅಭಿಮಾನಿಗಳ ಮೇಲೆ ಹಲ್ಲೆ ನಡೆಸುವ ಘಟನೆಗಳು ಅಲ್ಲಿ ನಿತ್ಯವೂ ನಡೆಯುತ್ತವೆ. ಅಂತಹ ಅಂಧಾಭಿಮಾನಿಗಳಿಗೆ ಕಪಾಳಕ್ಕೆ ಹೊಡೆದ ಹಾಗೆ ನಡೆದಿದೆ ಈ ಮರ್ಡರ್ ಕಥೆ. ಆದರೆ ಬಲಿಯಾದದ್ದು ಒಬ್ಬ ಬಡ ಅಪ್ಪ , ಅಮ್ಮನ ಒಬ್ಬನೇ ಮಗ, ಕುಟುಂಬದ ಒಬ್ಬನೇ ಆಧಾರ ಅನ್ನೋದು, ಒಬ್ಬ ಚೊಚ್ಚಲ ಬಾಣಂತಿಯ ಗಂಡ ಅನ್ನೋದು ಮಾತ್ರ ದುರಂತ!

ಕರಾವಳಿಯ ಜನ ಬುದ್ಧಿವಂತರು!:

ಇಲ್ಲಿಯ ಸಿನೆಮಾ ಪ್ರೇಕ್ಷಕರು ಕೇವಲ ಮನರಂಜನೆಗಾಗಿ ಸಿನೆಮಾ ನೋಡುತ್ತಾರೆ. ಕಥೆ ಚೆನ್ನಾಗಿದ್ದರೆ ಮಾತ್ರ ನೋಡುತ್ತಾರೆ. ಯಾವ ಸ್ಟಾರ್ ನಟ ಅಥವಾ ಸ್ಟಾರ್ ನಟಿಯ ಸಿನೆಮಾ ಬಂದರೂ ಆ ಸ್ಟಾರಗಿರಿಗೆ ಮೆಚ್ಚಿ ಸಿನೆಮಾ ನೋಡಲು ಬರುವುದೇ ಇಲ್ಲ. ‘ಹೀರೋ ವರ್ಶಿಪ್ ‘ ಕರಾವಳಿಯಲ್ಲಿ ತುಂಬಾ ಕಡಿಮೆ. ಈ ಪ್ರಬುದ್ಧತೆಯೇ ಇಂದು ನಿಜವಾಗಿ ಬೇಕಾಗಿರುವುದು. ಹಾಗೆಯೇ ನಾನು ಹಿಂದೊಮ್ಮೆ ಬರೆದ ವರನಟ ರಾಜಕುಮಾರ್ ಅವರ ಮಾತುಗಳನ್ನು ಇಲ್ಲಿ ಉಲ್ಲೇಖ ಮಾಡಬೇಕು.

ಇದನ್ನೂ ಓದಿ: Rajeev Taranath : ಮಹೋನ್ನತ ಪ್ರತಿಭೆಯ ರಾಜೀವ್ ತಾರಾನಾಥ್ ಸರೋದ್ ಲೋಕದ ಅದ್ಭುತ!

‘ನಮ್ಮಂತಹ ನಟರನ್ನು ಸಾವಿರಾರು ಅಭಿಮಾನಿಗಳು ಅನುಕರಣೆ ಮಾಡುತ್ತಾರೆ. ಆದ್ದರಿಂದ ನಮ್ಮ ಖಾಸಗಿ ಜೀವನವೂ ಅವರಿಗೆ ಅನುಕರಣೀಯ ಆಗಿರಬೇಕು.’ ಅವರು ತೆರೆಯ ಮೇಲೆ ಯಾವ ಪಾತ್ರಗಳನ್ನು ಮಾಡಿದ್ದರೋ ಅದೇ ರೀತಿ ಬದುಕಿದ್ದರು. ‘ನನ್ನ ಜೀವನವೇ ನನ್ನ ಸಂದೇಶ ‘ ಅಂದಿದ್ದರು ಗಾಂಧೀಜಿ. ಅವರ ಬದುಕಿನಲ್ಲಿಯೂ ಕೆಲವು ಕಪ್ಪು ಪುಟಗಳು ಇದ್ದವು. ಅದ್ಯಾವುದನ್ನೂ ಅವರು ಮುಚ್ಚಿಡಲಿಲ್ಲ. ಅವರ ಆತ್ಮಚರಿತ್ರೆಯ ಪುಸ್ತಕವಾದ
‘ಸತ್ಯಾನ್ವೇಷಣೆ ‘ಯಲ್ಲಿ ಅವರು ಆ ಕಪ್ಪು ಪುಟಗಳನ್ನು ಬರೆಯಲು ಹೇಸಿಗೆ ಮಾಡಲಿಲ್ಲ. ಅದಕ್ಕಾಗಿ ಅವರು ಲೆಜೆಂಡ್ ಆದರು. ನಮ್ಮ ಬದುಕು ಕೂಡ ಒಂದು ತೆರೆದ ಪುಸ್ತಕ ಆಗೋದು ಯಾವಾಗ?

Continue Reading

ಕರ್ನಾಟಕ

Tata Motors: ಟಾಟಾ ಮೋಟಾರ್ಸ್‌ನಿಂದ ʼಆಲ್ಟ್ರೋಜ್ ರೇಸರ್ʼ ಬಿಡುಗಡೆ; ದರ ಎಷ್ಟು?

Tata Motors: ಟಾಟಾ ಮೋಟಾರ್ಸ್ ಇಂದು ಕಂಪನಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ ಸ್ಪೋರ್ಟಿ ವರ್ಷನ್ ಆಗಿರುವ ಆಲ್ಟ್ರೋಜ್ ರೇಸರ್ ಅನ್ನು ಬಿಡುಗಡೆ ಮಾಡಿದೆ. 1.2 ಲೀ ಟರ್ಬೊ ಪೆಟ್ರೋಲ್ ಎಂಜಿನ್‌ ಹೊಂದಿರುವ ಅಲ್ಟ್ರೋಜ್ ಅತ್ಯುನ್ನತ ಕಾರ್ಯಕ್ಷಮತೆಯನ್ನು ಒದಗಿಸುವಂತೆ ವಿನ್ಯಾಸಗೊಂಡಿದೆ. 360 ಡಿಗ್ರಿ ಕ್ಯಾಮೆರಾ, 26.03 ಸೆಂ ಇನ್ಫೋಟೈನ್‌ಮೆಂಟ್ ಟಚ್‌ಸ್ಕ್ರೀನ್, ವೆಂಟಿಲೇಟೆಡ್ ಸೀಟ್‌ಗಳು ಮತ್ತು 6 ಏರ್‌ಬ್ಯಾಗ್‌ಗಳು ಹೀಗೆ ಹಲವಾರು ಫೀಚರ್‌ಗಳನ್ನು ಹೊಂದಿವೆ.

VISTARANEWS.COM


on

Altroz Racer launched by Tata Motors
Koo

ಬೆಂಗಳೂರು: ಭಾರತದ ಪ್ರಮುಖ ವಾಹನ ತಯಾರಕ ಸಂಸ್ಥೆಯಾದ ಟಾಟಾ ಮೋಟಾರ್ಸ್ (Tata Motors) ಇಂದು ಕಂಪನಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ ಸ್ಪೋರ್ಟಿ ವರ್ಷನ್ ಆಗಿರುವ ಆಲ್ಟ್ರೋಜ್ ರೇಸರ್ ಅನ್ನು ಬಿಡುಗಡೆ ಮಾಡಿದೆ. 1.2 ಲೀ ಟರ್ಬೊ ಪೆಟ್ರೋಲ್ ಎಂಜಿನ್‌ ಹೊಂದಿರುವ ಅಲ್ಟ್ರೋಜ್ ಅತ್ಯುನ್ನತ ಕಾರ್ಯಕ್ಷಮತೆಯನ್ನು ಒದಗಿಸುವಂತೆ ವಿನ್ಯಾಸಗೊಂಡಿದೆ. ರೇಸ್ ಕಾರ್‌ಗಳಿಂದ ಸ್ಫೂರ್ತಿ ಪಡೆದು ರಚಿಸಿದ ಹೊರಾಂಗಣ ಮತ್ತು ಒಳಾಂಗಣ ಲುಕ್ ಅನ್ನು ಹೊಂದಿದೆ.

5500 ಆರ್‌ಪಿಎಂನಲ್ಲಿ 120 ಪಿಎಸ್ ಉತ್ಪಾದಿಸುವ, 1750ರಿಂದ 4000 ಆರ್‌ಪಿಎಂನಲ್ಲಿ 170 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿರುವ ಅಲ್ಟ್ರೋಜ್ ಅತ್ಯುನ್ನತ ಡ್ರೈವಿಂಗ್ ಅನುಭವವನ್ನು ಒದಗಿಸಲಿದೆ. 360 ಡಿಗ್ರಿ ಕ್ಯಾಮೆರಾ, 26.03 ಸೆಂ ಇನ್ಫೋಟೈನ್‌ಮೆಂಟ್ ಟಚ್‌ಸ್ಕ್ರೀನ್, ವೆಂಟಿಲೇಟೆಡ್ ಸೀಟ್‌ಗಳು ಮತ್ತು 6 ಏರ್‌ಬ್ಯಾಗ್‌ಗಳು (ರೇಸರ್‌ನಲ್ಲಿ ಸ್ಟ್ಯಾಂಡರ್ಡ್ ಆಗಿ ಬರುತ್ತವೆ) ಹೀಗೆ ಹಲವಾರು ಫೀಚರ್‌ಗಳನ್ನು ಹೊಂದಿರುವ ರೇಸರ್ ಆವೃತ್ತಿಯು ಆಲ್ಟ್ರೊಜ್‌ ಕಾರು ಆವೃತ್ತಿಗಳಲ್ಲಿಯೇ ಅಗ್ರಸ್ಥಾನದಲ್ಲಿದೆ.

ಇದನ್ನೂ ಓದಿ: University Grants Commission : ಇನ್ನು ಮುಂದೆ ವಿಶ್ವವಿದ್ಯಾಲಯಗಳಲ್ಲಿ ವರ್ಷಕ್ಕೆ ಎರಡು ಬಾರಿ ಅಡ್ಮಿಷನ್​

ಇದು 6 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅನ್ನು ಒದಗಿಸುವ ಏಕೈಕ ಹ್ಯಾಚ್‌ಬ್ಯಾಕ್ ಆಗಿದ್ದು, ನಗರದ ಟ್ರಾಫಿಕ್ ಮತ್ತು ಹೆದ್ದಾರಿಗಳಲ್ಲಿ ಅತ್ಯುತ್ತಮ ಚಾಲನಾ ಅನುಭವವನ್ನು ಒದಗಿಸುತ್ತದೆ. ಸುಧಾರಿತ ತಂತ್ರಜ್ಞಾನ, ವೈಶಿಷ್ಟ್ಯಗಳು ಮತ್ತು ಹ್ಯಾಚ್‌ಬ್ಯಾಕ್‌ನಲ್ಲಿ ಕ್ಲಾಸ್-ಲೀಡಿಂಗ್ ಸುರಕ್ಷತೆಯನ್ನು ಹೊಂದಿರುವ ಆಲ್ಟ್ರೋಜ್ ರೇಸರ್ 3 ವೇರಿಯಂಟ್‌ಗಳಲ್ಲಿ (ಆರ್1, ಆರ್2 ಮತ್ತು ಆರ್3) ಲಭ್ಯವಿರುತ್ತದೆ. ಮೂರು ಬಣ್ಣಗಳ (ಪ್ಯೂರ್ ಗ್ರೇ, ಅಟಾಮಿಕ್ ಆರೆಂಜ್ ಮತ್ತು ಅವೆನ್ಯೂ ವೈಟ್) ಆಯ್ಕೆ ಗ್ರಾಹಕರಿಗೆ ಸಿಗುತ್ತದೆ.

ಇದರ ಜತೆಗೆ ಅಲ್ಟ್ರೋಜ್ ಶ್ರೇಣಿಯನ್ನು ವಿಸ್ತರಿಸುತ್ತಾ ಟಾಟಾ ಮೋಟಾರ್ಸ್ ಎರಡು ಹೊಸ ವೇರಿಯಟ್‌ಗಳನ್ನು (ಎಕ್ಸ್‌ ಝಡ್‌ ಎಲ್‌ಯುಎಕ್ಸ್‌ ಮತ್ತು ಎಕ್ಸ್‌ ಝಡ್‌+ಎಸ್‌ ಎಲ್‌ಯುಎಕ್ಸ್‌) ಪರಿಚಯಿಸಿದೆ ಮತ್ತು ಅಲ್ಟ್ರೋಜ್ ಶ್ರೇಣಿಯ ಒಂದು ವೇರಿಯಂಟ್ ಅನ್ನು (ಎಕ್ಸ್‌ ಝಡ್‌+ಓಎಸ್) ನವೀಕರಿಸಿದೆ. ಈ ಎರಡು ಹೊಸ ಹೆಚ್ಚುವರಿ ವೇರಿಯಂಟ್‌ಗಳು ಪೆಟ್ರೋಲ್ ಮ್ಯಾನ್ಯುವಲ್, ಪೆಟ್ರೋಲ್ ಡಿಸಿಎ, ಡೀಸೆಲ್ ಮತ್ತು ಸಿ ಎನ್ ಜಿ ವಿಭಾಗಗಳ ಆಯ್ಕೆಯಲ್ಲಿ ಲಭ್ಯವಿರುತ್ತವೆ.

ದರ ಪಟ್ಟಿ

ರೇಸರ್ ವೇರಿಯಂಟ್‌ಗಳು ಪರಿಚಯಾತ್ಮಕ ಬೆಲೆ (ಪೆಟ್ರೋಲ್ ಎಂಟಿ), ಭಾರತೀಯ ರೂಪಾಯಿಗಳಲ್ಲಿ, ಎಕ್ಸ್ ಶೋರೂಂ, ದೆಹಲಿ ಆರ್1 -9,49,000, ಆರ್2- 10,49,000, ಆರ್3- 10,99,000 ಆಗಿವೆ.

ವೇರಿಯಂಟ್‌ಗಳು ಪರಿಚಯಾತ್ಮಕ ಬೆಲೆ (ಪೆಟ್ರೋಲ್ ಎನ್ಎ ಎಂಟಿ), ಭಾರತೀಯ ರೂಪಾಯಿಗಳಲ್ಲಿ, ಎಕ್ಸ್ ಶೋರೂಂ, ದೆಹಲಿ ಎಕ್ಸ್‌ ಝಡ್‌ ಎಲ್‌ಯುಎಕ್ಸ್ (ಹೊಸತು) – 8,99,900, ಎಕ್ಸ್‌ ಝಡ್‌+ಎಸ್ ಎಲ್‌ಯುಎಕ್ಸ್ – (ಹೊಸತು) -9,64,990, ಎಕ್ಸ್‌ ಝಡ್‌+ಓಎಸ್ (ಅಪ್ ಗ್ರೇಡೆಡ್) -9,98,900 ರಷ್ಟಿದೆ.

ಇದನ್ನೂ ಓದಿ: EPF Account Rules: ಕ್ಲೈಮ್ ಇತ್ಯರ್ಥ ಇನ್ನು ಸುಲಭ; ಇಪಿಎಫ್‌ಒ ಮಾಡಿದೆ ಹಲವು ಹೊಸ ಬದಲಾವಣೆ

ಟಾಟಾ ಆಲ್ಟ್ರೊಜ್ ರೇಸರ್ ಬಿಡುಗಡೆಯ ಕುರಿತು ಪ್ರತಿಕ್ರಿಯಿಸಿದ ಟಾಟಾ ಪ್ಯಾಸೆಂಜರ್ ಎಲೆಕ್ಟ್ರಿಕ್ ಮೊಬಿಲಿಟಿ ಲಿಮಿಟೆಡ್‌ನ ಮುಖ್ಯ ವಾಣಿಜ್ಯ ಅಧಿಕಾರಿ ವಿವೇಕ್ ಶ್ರೀವತ್ಸ ಮಾತನಾಡಿ, ಪ್ರತಿ ದಿನ ವಾಹನ ಚಾಲನೆ ಮಾಡುವವರಿಗೆ ಉತ್ಕೃಷ್ಟ ಅನುಭವ ಒದಗಿಸಲೆಂದೇ ವಿನ್ಯಾಸಗೊಂಡಿರುವ ಆಲ್ಟ್ರೋಜ್ ರೇಸರ್ ಅನ್ನು ಬಿಡುಗಡೆ ಮಾಡವ ಮೂಲಕ ಆಲ್ಟ್ರೋಜ್ ಶ್ರೇಣಿಯನ್ನು ಬಲಪಡಿಸಲು ಹೆಮ್ಮೆ ಪಡುತ್ತೇವೆ. ವಿಭಾಗ ಪ್ರಮುಖ ವೈಶಿಷ್ಟ್ಯಗಳನ್ನು ಹೊಂದಿರುವ ಮತ್ತು ತಂತ್ರಜ್ಞಾನ ಆಧರಿತವಾಗಿ ರೂಪುಗೊಂಡಿರುವ, ಅತ್ಯುನ್ನತ ಶಕ್ತಿ ಉತ್ಪಾದಿಸುವ ಸಾಮರ್ಥ್ಯ ಹೊಂದಿರುವ ರೇಸರ್, ವಿಭಿನ್ನ ಕಾರನ್ನು ಡ್ರೈವ್ ಮಾಡಲು ಬಯಸುವ, ಕನೆಕ್ಟೆಡ್ ಆಗಿರುವ ಮತ್ತು ಫ್ಯಾಷನ್ ಆಸಕ್ತಿಯನ್ನು ಹೊಂದಿರುವ ಹೊಸ ಪೀಳಿಗೆಯ ಗ್ರಾಹಕರನ್ನು ಹೆಚ್ಚು ಆಕರ್ಷಿಸಬಹುದಾಗಿದೆ.

ಅದ್ಭುತ ಕಾರ್ಯಕ್ಷಮತೆಯ ಡಿಎನ್ಎ ಹೊಂದಿರುವ ಮತ್ತು ರೇಸ್ ಕಾರ್‌ನಿಂದ ಸ್ಫೂರ್ತಿ ಪಡೆದಿರುವ ಲುಕ್ ಹೊಂದಿರುವ ರೇಸರ್ ನಿಮ್ಮನ್ನು #RacePastTheRoutine ಎಂಬ ಭಾವನೆ ಉಂಟು ಮಾಡುವ ಪರಿಪೂರ್ಣ ಒಡನಾಡಿಯಾಗುವ ವಿಶ್ವಾಸ ನಮಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜೂ. 29ರಂದು ನಿವೃತ್ತ ನ್ಯಾ. ಚಂದ್ರಶೇಖರಯ್ಯಗೆ ಅಭಿನಂದನೆ

2.5 ಲಕ್ಷ ಗ್ರಾಹಕರನ್ನು ಹೊಂದಿರುವ ಅಲ್ಟ್ರೋಜ್ ಅದರ ಸೊಗಸಾದ ವಿನ್ಯಾಸ, ಅಪೂರ್ವ ವೈಶಿಷ್ಟ್ಯಗಳು, ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಉತ್ತಮ ಸುರಕ್ಷತೆಯ ಮೂಲಕ ಭಾರತದಲ್ಲಿನ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ಗಳಲ್ಲಿಯೇ ಉನ್ನತ ಮಾನದಂಡವನ್ನು ಸ್ಥಾಪಿಸಿದೆ. ಈ ಕಾರು ಅನೇಕ ವಿಭಾಗಗಳಲ್ಲಿ ಪ್ರವರ್ತಕ ಫೀಚರ್ ಗಳನ್ನು ಹೊಂದಿದೆ. ಗ್ಲೋಬಲ್ ಎಸಿಎಪಿ 5 ಸ್ಟಾರ್ ಸುರಕ್ಷತಾ ರೇಟಿಂಗ್ ಗಳಿಸಿದ ಭಾರತದ ಮೊದಲ ಹ್ಯಾಚ್‌ಬ್ಯಾಕ್ ಎಂಬ ಹೆಗ್ಗಳಿಗೆ ಗಳಿಸಿದೆ. ಟ್ವಿನ್-ಸಿಲಿಂಡರ್ ತಂತ್ರಜ್ಞಾನವನ್ನು ಒಳಗೊಂಡಿರುವ ದೇಶದ ಮೊದಲ ಸಿಎನ್‌ಜಿ ಕಾರ್ ಮತ್ತು ಗ್ರಾಹಕರಿಗೆ ಆಯ್ಕೆ ಮಾಡಲು ಪವರ್‌ಟ್ರೇನ್ ಆಯ್ಕೆಗಳನ್ನು ಒದಗಿಸುವ ಏಕೈಕ ಹ್ಯಾಚ್‌ಬ್ಯಾಕ್ ಆಗಿದೆ.

Continue Reading

ಕರ್ನಾಟಕ

Bengaluru News: 10 ದಿನಗಳ ‘ಯೋಗೋತ್ಸವ’ಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Bengaluru News: ಆಯುಷ್ ಇಲಾಖೆಯ ವತಿಯಿಂದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಇಂದಿನಿಂದ ಹಮ್ಮಿಕೊಂಡಿರುವ 10 ದಿನಗಳ ಯೋಗೋತ್ಸವ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

VISTARANEWS.COM


on

Minister Dinesh Gundurao drives 10 days Yogotsava programme in Bengaluru
Koo

ಬೆಂಗಳೂರು: ಯೋಗ ದಿನಾಚರಣೆ (Yoga Day) ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಜನರು ಪ್ರತಿನಿತ್ಯ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಆಗಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Bengaluru News) ತಿಳಿಸಿದರು.

ಆಯುಷ್ ಇಲಾಖೆಯು 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಇಂದಿನಿಂದ ಹಮ್ಮಿಕೊಂಡಿರುವ 10 ದಿನಗಳ ಯೋಗೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ 10 ದಿನಗಳಲ್ಲಿ ಯೋಗವನ್ನು ಹೇಳಿಕೊಡಲಾಗುತ್ತದೆ. ಅಲ್ಲದೇ ಆಯುರ್ವೇದ ಚಿಕಿತ್ಸಾ ಪದ್ದತಿಗಳ ಮಾಹಿತಿಯನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸ ಆಗಲಿದೆ ಎಂದ ಅವರು, ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಯೋಗ ಹಾಗೂ ಆಯುರ್ವೇದದ ಮಹತ್ವ ನಮ್ಮ ಸಾಮಾನ್ಯ ಜನರಿಗೆ ತಲುಪಿಸುವುದು ಮುಖ್ಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Fortis Hospital: ನೈಜೀರಿಯನ್ ಯುವತಿಗೆ ಯಶಸ್ವಿ ‘ಡ್ಯುಯಲ್ ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿ’

ಯೋಗೋತ್ಸವದ ಅಂಗವಾಗಿ ವಿವಿಧ ಸಂಘ-ಸಂಸ್ಥೆಗಳು/ಇಲಾಖೆಗಳು ಆಯುಷ್ಇಲಾಖೆ ಸಹಕಾರದೊಂದಿಗೆ ಜೂನ್ 11 ರಿಂದ 20 ರವರೆಗೆ ಹತ್ತು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಿವೆ. ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು /ಸಂಘ ಸಂಸ್ಥೆ ಯೋಗೋತ್ಸವದಲ್ಲಿ ಭಾಗವಹಿಸುತ್ತಿದ್ದು, ಈ 04 ಸಂಸ್ಥೆಗಳಲ್ಲಿ ಸುಮಾರು 4 ಲಕ್ಷ ಮಂದಿ ರಾಜ್ಯಾದ್ಯಂತ ಯೋಗ ಪ್ರದರ್ಶನವನ್ನು ಮಾಡುವುದರ ಮೂಲಕ ಯೋಗೋತ್ಸವನ್ನು ಆಚರಿಸಲಿದ್ದಾರೆ. ಅಲ್ಲದೆ ಈ ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯಿಂದ ಆರೋಗ್ಯಕರ ಜೀವನ ಶೈಲಿಯ ಕುರಿತು ಮಾಹಿತಿ ಹಾಗೂ ಆಯುಷ್ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಬೆಂಗಳೂರಿನಲ್ಲಿನ ಬೆಂಗಳೂರು ಅಪಾರ್ಟ್‌ಮೆಂಟ್ ಅಸೋಸಿಯೇಷನ್, ಪ್ರಜಾಪಿತ ಬ್ರಹ್ಮಕುಮಾರಿ ಸಂಸ್ಥೆ, ಜೈನ್ ಯುನಿರ್ವಸಿಟಿ, ಲೂಲು ಮಾಲ್ ಹಾಗೂ ಮಾಲ್ ಆಫ್ ಏಷ್ಯಾ, ಸ್ಥಳಗಳಲ್ಲಿ ಯೋಗ ತರಬೇತಿ, ಆಯುಷ್ ವೈದ್ಯ ಪದ್ಧತಿಗಳ ಕುರಿತು ಅರಿವು ಹಾಗೂ ಆಯುಷ್ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯುಷ್ ಇಲಾಖಾ ವತಿಯಿಂದ ನಡೆಸಲಾಗುತ್ತಿದೆ.

ಈ ಕಾರ್ಯಕ್ರಮಗಳಿಗೆ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಯೋಗ ಗಂಗೋತ್ರಿ ಟ್ರಸ್ಟ್, ಶ್ರೀ ಪತಂಜಲಿ ಯೋಗಾಶ್ರಮ ಟ್ರಸ್ಟ್, ಸಂಯಮ ಟ್ರಸ್ಟ್ ಹಾಗೂ ಇನ್ನಿತರ ಖಾಸಗಿ ಯೋಗ ಸಂಸ್ಥೆಗಳು ಅಗತ್ಯ ಸಹಕಾರವನ್ನು ನೀಡಲಿದ್ದು, ಮಾನಸಿಕ ಆರೋಗ್ಯ ಹಾಗೂ ದೈಹಿಕ ಆರೋಗ್ಯದ ಕುರಿತು ಸಾರ್ವಜನಿಕರಿಗೆ ಮಾಹಿತಿ ದೊರೆಯಲಿದೆ.‌

ಇದೇ ಸಂದರ್ಭದಲ್ಲಿ ಆಯುರ್ವೇದ ಶಬ್ದಕೋಶ, ಯೋಗೋತ್ಸವ ಪೋಸ್ಟರ್, ಯೋಗೋತ್ಸವ ವೆಬ್‌ಸೈಟ್‌ಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜೂ. 29ರಂದು ನಿವೃತ್ತ ನ್ಯಾ. ಚಂದ್ರಶೇಖರಯ್ಯಗೆ ಅಭಿನಂದನೆ

ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯ ಆಯುಕ್ತ ಶ್ರೀನಿವಾಸುಲು, ಟ್ರಾನ್ಸ್‌ ಡಿಸಿಪ್ಲಿನರಿ ವಿಶ್ವವಿದ್ಯಾಲಯದ ಉಪಕುಲಪತಿ ದರ್ಶನ್ ಶಂಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading
Advertisement
Actor Darshan a Want To Escape From This Case
ಸ್ಯಾಂಡಲ್ ವುಡ್2 mins ago

Actor Darshan: ಕೊಲೆ ಕೇಸ್‌ನಿಂದ ಎಸ್ಕೇಪ್‌ ಆಗಲು 30 ಲಕ್ಷ ರೂ. ಕೊಟ್ಟಿದ್ದ ʻಡೆವಿಲ್‌ʼ? ಆದರೆ ಫ್ಲ್ಯಾನ್‌ ಆಗಿದ್ದು ಮಾತ್ರ ಉಲ್ಟಾ!

Terroris Attack
ಪ್ರಮುಖ ಸುದ್ದಿ28 mins ago

Terrorist Attack : ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಯೋಧ ಹುತಾತ್ಮ , ಆರು ಯೋಧರಿಗೆ ಗಾಯ

Actor Darshan Murder accusations Chetan Kumar Ahimsa react
ಸಿನಿಮಾ37 mins ago

Actor Darshan: ನಿಜ ಜೀವನದಲ್ಲಿ ನಟ ದರ್ಶನ್‌ನಂತಹ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು; ಚೇತನ್‌ ಅಹಿಂಸಾ!

Bird Flu
ಆರೋಗ್ಯ42 mins ago

Bird Flu: ದೇಶದಲ್ಲಿ ಎರಡನೇ ಹಕ್ಕಿ ಜ್ವರದ ಪ್ರಕರಣ ಪತ್ತೆ; ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ

Actor Darshan 10 Biryani For Sent To Police Custody
ಸ್ಯಾಂಡಲ್ ವುಡ್49 mins ago

Actor Darshan: ಆರೋಪಿ ದರ್ಶನ್​ಗೆ 10ಕ್ಕೂ ಹೆಚ್ಚು ದೊನ್ನೆ ಬಿರಿಯಾನಿ ತರಿಸಿದ್ದ ಪೊಲೀಸರು!

Chikkaballapur News
ಪ್ರಮುಖ ಸುದ್ದಿ50 mins ago

Chikkaballapur News : ಒಂದೇ ಗ್ರಾಮದಲ್ಲಿ ನಾಲ್ವರ ಸರಣಿ ಸಾವು ; ಸ್ಥಳೀಯರಲ್ಲಿ ಆತಂಕ

Nagarjuna Sagar
ಪ್ರವಾಸ1 hour ago

Nagarjuna Sagar: ನಾಗಾರ್ಜುನಸಾಗರದ ಈ ಸ್ಥಳಗಳು ವಾರಾಂತ್ಯ ಪ್ರವಾಸಕ್ಕೆ ಸೂಕ್ತ

Actor Darshan
ಪ್ರಮುಖ ಸುದ್ದಿ1 hour ago

ರಾಜಮಾರ್ಗ ಅಂಕಣ : ನನ್ನ ಬದುಕೇ ಬೇರೆ, ನನ್ನ ಸಿನಿಮಾನೇ ಬೇರೆ ಅಂದರೆ ಹೀಗೇ ಆಗೋದು!

Job Alert
ಉದ್ಯೋಗ2 hours ago

Job Alert: ಎಚ್‌ಎಎಲ್‌ನಲ್ಲಿದೆ ಉದ್ಯೋಗಾವಕಾಶ; ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Actor Darshan political leaders appeal to the CM and Home Minister not to twist case
ಸ್ಯಾಂಡಲ್ ವುಡ್2 hours ago

Actor Darshan : ದರ್ಶನ್‌ ಪರ ವಹಿಸಿ ಸಿಎಂ, ಗೃಹ ಸಚಿವರಿಗೆ ಮನವಿ ಮಾಡಿದ್ರಾ ರಾಜಕೀಯ ನಾಯಕರು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ17 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ19 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ20 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ21 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ24 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌