d code column an analysis of karnataka political environmentD ಕೋಡ್‌ ಅಂಕಣ: ರಾಜಕೀಯ ಹವಾಮಾನ ವರದಿ: ಕಾಂಗ್ರೆಸ್ ಕಡೆಗೆ ಬೀಸುವಂತಿದೆ ತಂಗಾಳಿ; ಪಕ್ಷಾಂತರಿಗಳಿಗೆ ತಿಳಿದಿದೆಯೇ ಒಳಸುಳಿ? - Vistara News

ಕರ್ನಾಟಕ

D ಕೋಡ್‌ ಅಂಕಣ: ರಾಜಕೀಯ ಹವಾಮಾನ ವರದಿ: ಕಾಂಗ್ರೆಸ್ ಕಡೆಗೆ ಬೀಸುವಂತಿದೆ ತಂಗಾಳಿ; ಪಕ್ಷಾಂತರಿಗಳಿಗೆ ತಿಳಿದಿದೆಯೇ ಒಳಸುಳಿ?

ಚುನಾವಣೆಗೂ ಮುನ್ನ ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹಾರುವುದು, ಚುನಾವಣೆಯ ನಂತರ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎನ್ನುವುದರ ಸೂಚಕವೇ?

VISTARANEWS.COM


on

d k shivakumar nomination approved by election commission
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

“ಎನ್‌ಡಿಎ 40 ಸ್ಥಾನವನ್ನೂ ಗೆಲ್ಲುತ್ತೆ ಅಂತ ಮೊದಲಿಂದಲೂ ಹೇಳುತ್ತಲೇ ಇದ್ದೆ. ಆದರೆ ನನ್ನ ಮಾತನ್ನು ನೀವು ಕೇಳಲೇ ಇಲ್ಲ.”
2019ರಲ್ಲಿ ಅಂದಿನ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿದ ಮಾತಿದು. ಬಿಹಾರದ 40ರಲ್ಲಿ ಅಷ್ಟೂ ಲೋಕಸಭೆ ಕ್ಷೇತ್ರವನ್ನು ಬಿಜೆಪಿ ನೇತೃತ್ವದ ಎನ್‌ಡಿಎ ಗೆಲ್ಲುತ್ತದೆ ಎಂದು ಪಾಸ್ವಾನ್ ಆಗಾಗ ಹೇಳುತ್ತಲೇ ಇದ್ದರು. ಆದರೆ ವಿವಿಧ ಸಮೀಕ್ಷೆಗಳು ಅಷ್ಟು ಲೀಡ್ ಕೊಡಲು ಸಿದ್ಧವಿರಲಿಲ್ಲ. ಪಾಸ್ವಾನ್ ಬಹುಶಃ ಓವರ್ ಆ್ಯಕ್ಟಿಂಗ್ ಮಾಡುತ್ತಾ ಇರಬೇಕು ಎಂದೇ ಭಾವಿಸಿದ್ದವು. ಆದರೆ ಫಲಿತಾಂಶ ಬಂದಾಗ, 40ರಲ್ಲಿ 39ನ್ನು ಎನ್‌ಡಿಎ ಗೆದ್ದಿತ್ತು!

ಡೆಪ್ಯುಟಿ ಸೂಪರಿಂಟೆಂಡೆಂಟ್ ಹುದ್ದೆಗೆ ಪ್ರಮೋಷನ್ ಕೊಡಲಿಲ್ಲ ಎಂದು ರಾಜೀನಾಮೆ ನೀಡಿ ರಾಜಕೀಯ ಕಣಕ್ಕಿಳಿದ ರಾಮ್ ವಿಲಾಸ್ ಪಾಸ್ವಾನ್‌ರನ್ನು ಭಾರತೀಯ ರಾಜಕಾರಣದ ಹವಾಮಾನ ತಜ್ಞ ಎಂದು ಕರೆಯಲಾಗುತ್ತದೆ! ಏಕೆಂದರೆ ಅವರಷ್ಟು ನಿಖರವಾದ ಮುನ್ಸೂಚನೆಯನ್ನು ಬಹುಶಃ ಹವಾಮಾನ ಇಲಾಖೆಯೂ ನೀಡುವುದಿಲ್ಲವೇನೊ!

ಬಿಹಾರದ ಮತಪ್ರಮಾಣದಲ್ಲಿ ಪಾಸ್ವಾನ್‌ರ ಲೋಕ ಜನಶಕ್ತಿ ಪಾರ್ಟಿ(ಎಲ್‌ಜೆಪಿ) ಹೊಂದಿದ್ದು ಕೇವಲ ಶೇ.6-8 ಮತ. ಆದರೆ ಅಚ್ಚರಿಯ ವಿಚಾರ ಏನು ಅಂದರೆ 1989ರಿಂದ 2020ರ ಅಕ್ಟೋಬರ್ 8ರಂದು ನಿಧನರಾಗುವವರೆಗೆ ಪಾಸ್ವಾನ್ ಎಂಟು ಕೇಂದ್ರ ಸರ್ಕಾರಗಳಲ್ಲಿ ಸಚಿವರಾಗಿದ್ದರು. ಆರು ಪ್ರಧಾನಮಂತ್ರಿಗಳ ಕೆಳಗೆ ಕೆಲಸ ಮಾಡಿದ್ದರು. 1989-90ರಲ್ಲಿ ವಿ.ಪಿ. ಸಿಂಗ್ ಸರ್ಕಾರ, 1996-98ರರಲ್ಲಿ ಎಚ್.ಡಿ. ದೇವೇಗೌಡ ಹಾಗೂ ಐ.ಕೆ. ಗುಜ್ರಾಲ್ ಸರ್ಕಾರ, 1999-2004ರವರೆಗೆ ಅಟಲ್ ಬಿಹಾರಿ ವಾಜಪೇಯಿ ಸರ್ಕಾರ, 2004-2009ರವರೆಗೆ ಮನಮೋಹನ್ ಸಿಂಗ್ ಸರ್ಕಾರ (ಯುಪಿಎ-1), 2014-2020ರವರೆಗೆ ನರೇಂದ್ರ ಮೋದಿ ಸರ್ಕಾರದಲ್ಲಿ ಪಾಸ್ವಾನ್ ಸಚಿವರಾಗಿದ್ದರು.
ಮುಂದಿನ ಚುನಾವಣೆಯಲ್ಲಿ ಗಾಳಿ ಯಾವ ಕಡೆಗೆ ಬೀಸುತ್ತಿದೆ, ಯಾರು ಗೆಲ್ಲಬಹುದು, ಯಾರು ಸೋಲಬಹುದು ಎನ್ನುವುದನ್ನು ಪಾಸ್ವಾನ್ ಗ್ರಹಿಸುತ್ತಿದ್ದರು. ಅದಕ್ಕೆ ತಕ್ಕಂತೆ ಚುನಾವಣೆಗೆ ಮುನ್ನ ಅವರೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರದಲ್ಲಿ ಸೇರಿಕೊಂಡುಬಿಡುತ್ತಿದ್ದರು. ಇದಕ್ಕಾಗಿಯೇ ಅವರನ್ನು ಭಾರತೀಯ ಚುನಾವಣಾ ಹವಾಮಾನ ತಜ್ಞ ಎಂದು ಗುರುತಿಸಲಾಗುತ್ತದೆ.

ಇದೀಗ ಕರ್ನಾಟಕದಲ್ಲಿ ಚುನಾವಣೆ ಹೊಸ್ತಿಲಲ್ಲಿದ್ದೇವೆ. ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹಾರುವ ಕಾರ್ಯ ಜೋರಾಗಿಯೇ ನಡೆದಿದೆ. ಕಾಂಗ್ರೆಸ್ ಕಡೆಗೆ ಹೆಚ್ಚು ಜನರು ಹಾರುತ್ತಿದ್ದಾರೆ. ಇದನ್ನೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹವಾಮಾನ ಮುನ್ಸೂಚನೆ ಎಂಬಂತೆ ಹೇಳುತ್ತಿದ್ದಾರೆ. “ಜೆಡಿಎಸ್ ಹಾಗೂ ಬಿಜೆಪಿ ಶಾಸಕರು ಸ್ವಯಂಪ್ರೇರಿತರಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ. ಈ ಸಂದರ್ಭದಲ್ಲಿ ದಲಿತ ಕವಿ ಸಿದ್ದಲಿಂಗಯ್ಯ ಅವರ ಮಾತು ನೆನಪಾಗುತ್ತಿದೆ. ಹೋರಾಟದ ಸಾಗಾರಕ್ಕೆ ಸಾವಿರಾರು ನದಿಗಳು ಸೇರಿದಂತೆ ಎಂದು ಅವರು ಹೇಳಿದ್ದಾರೆ. ಅದೇ ರೀತಿ ಕಾಂಗ್ರೆಸ್ ಎಂದರೆ ಹೋರಾಟದ ಸಾಗರ, ಈ ಪಕ್ಷಕ್ಕೆ ಸೇರುತ್ತಿರುವ ಶಾಸಕರು, ನಾಯಕರು ನದಿಯಾಗಿದ್ದಾರೆ” ಎಂದು ಡಿ.ಕೆ. ಶಿವಕುಮಾರ್ ಇತ್ತೀಚೆಗೆ ಬಣ್ಣಿಸಿಬಿಟ್ಟರು.

ರಾಜಕಾರಣಿಗಳು ಅನೇಕ ಕಾರಣಕ್ಕೆ ಪಕ್ಷಗಳನ್ನು ಬದಲಿಸುತ್ತಾರೆ. ಸೈದ್ಧಾಂತಿಕ ಭಿನ್ನಮತ, ಅವಮಾನ, ನಾಯಕತ್ವದ ತೊಂದರೆಗಳೂ ಅವುಗಳಲ್ಲಿರುತ್ತವೆ. ಇತ್ತೀಚೆಗಂತೂ ಇವೆಲ್ಲಕ್ಕಿಂತ ಮುಖ್ಯವಾಗಿ ತಮಗೆ ಅಧಿಕಾರ ಸಿಗುತ್ತದೆಯೇ ಎಂದು ಖಾತ್ರಿಪಡಿಸಿಕೊಂಡು ಪಕ್ಷ ಬದಲಾವಣೆ ಮಾಡುತ್ತಾರೆ. ಇದರ ತಾತ್ವಿಕ, ಸೈದ್ಧಾಂತಿಕ, ನೈತಿಕ ಇತ್ಯಾದಿ ವಿಶ್ಲೇಷಣೆ ಬೇರೆ ವಿಚಾರ. ಇಲ್ಲಿ ಚರ್ಚಿಸಲು ಹೊರಟಿರುವುದು ಕೇವಲ ಪಕ್ಷಾಂತರದ ಹಿಂದಿನ ಲೆಕ್ಕಾಚಾರದ ಬಗ್ಗೆ. ಹೆಚ್ಚಿನ ರಾಜಕಾರಣಿಗಳು ಒಂದಲ್ಲಾ ಒಂದು ಪಕ್ಷವನ್ನೇ ಸೇರಲು ಏಕೆ ಬಯಸುತ್ತಾರೆ? ಸ್ವತಂತ್ರ ಅಭ್ಯರ್ಥಿ ಆದರೆ ನೆಮ್ಮದಿಯಾಗಿ ಗೆದ್ದು, ಯಾರ ಹಂಗೂ ಇಲ್ಲದೆ, ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆಯೋ ಆ ಪಕ್ಷವನ್ನು ಬೆಂಬಲಿಸಿಕೊಂಡು ಸಚಿವ ಆಗಬಹುದಲ್ಲವೇ ಎನ್ನಿಸಬಹುದು. ಅದು ಅಷ್ಟು ಸುಲಭದ ಲೆಕ್ಕವಲ್ಲ. ಉದಾಹರಣೆಗೆ ಕರ್ನಾಟಕವನ್ನೇ ನೋಡೋಣ. ಕರ್ನಾಟಕದ ಮಟ್ಟಿಗೆ ಪಕ್ಷೇತರ ಶಾಸಕರಾಗುವುದು ಅತ್ಯಂತ ಸವಾಲಿನ ಕೆಲಸ. ಈ ಮಾತಿಗೆ ಪೂರಕವಾಗಿ ಕೆಳಗಿನ ಟೇಬಲ್ ನೋಡಬಹುದು.

#image_title

1957ರಲ್ಲಿ 35 ಪಕ್ಷೇತರರನ್ನು ಹೊಂದಿದ್ದ ಕರ್ನಾಟಕದಲ್ಲಿ ಈ ಸಂಖ್ಯೆ ನಿರಂತರ ಇಳಿಯುತ್ತಲೇ ಸಾಗಿ 2018ರಲ್ಲಿ ಕೇವಲ 1ಕ್ಕೆ ಬಂದು ನಿಂತಿದೆ. ಪಕ್ಷೇತರರಿಗೆ ಲಭಿಸುವ ಮತ ಪ್ರಮಾಣವೂ ಅಷ್ಟೆ. ಶೇ.28.74ರಿಂದ ಶೇ.3.93ಕ್ಕೆ ಇಳಿದಿದೆ.
ಪಕ್ಷೇತರರಾಗಿ ಗೆದ್ದು ಬರುವುದು ಈಗ ಕಷ್ಟದ ಕೆಲಸ. ಹಣ, ಪ್ರಚಾರ, ಕಾರ್ಯಕರ್ತರ ಪಡೆ, ಅಧಿಕಾರದಂತಹ ಅನೇಕ ಅನುಕೂಲಗಳು ಪಕ್ಷೇತರರಿಗೆ ಇರುವುದಿಲ್ಲ. ಚುನಾವಣೆಯು ಬರಬರುತ್ತಾ ಸಾಂಸ್ಥೀಕರಣ ಆಗುತ್ತಿರುವುದರ ಸೂಚನೆ ಇದು. ʼಸ್ವತಂತ್ರ ಅಭ್ಯರ್ಥಿಗಳು ಕಣ್ಮರೆ ಆಗುತ್ತಿರುವುದು ಪ್ರಜಾಪ್ರಭುತ್ವಕ್ಕೆ ಪೂರಕವೋ? ಮಾರಕವೋ?ʼ ಎನ್ನುವುದು ಒಂದು ರಾಷ್ಟ್ರೀಯ ವಿಚಾರ ಸಂಕಿರಣ ನಡೆಸುವಂತಹ ವಿಷಯ. ಾದರ ಚರ್ಚೆಯೂ ಇಲ್ಲಿ ಬೇಡ, ಮುಂದಕ್ಕೆ ಹೋಗೋಣ.

ಒಂದು ಅಂದಾಜಿನ ಪ್ರಕಾರ 1967ರಿಂದ 1971ರವರೆಗೆ ದೇಶದ ವಿವಿಧ ರಾಜ್ಯಗಳಲ್ಲಿ ಆಯ್ಕೆ ಆದ ಸುಮಾರು 4 ಸಾವಿರ ಶಾಸಕರ ಪೈಕಿ ಅರ್ಧದಷ್ಟು ಶಾಸಕರು ಪಕ್ಷಾಂತರ ಮಾಡಿದ್ದಾರೆ. ಎಡಿಆರ್ ಎಂಬ ಸಂಸ್ಥೆ ಇತ್ತೀಚೆಗೆ ನಡೆಸಿದ ಅಧ್ಯಯನದ ಪ್ರಕಾರ 2016ರಿಂದ 2020ರ ಅವಧಿಯಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಗೆದ್ದ 405 ಶಾಸಕರು ಪಕ್ಷಾಂತರ ಮಾಡಿದ್ದಾರೆ. ಇವರಲ್ಲಿ ಶೇ.45 ಶಾಸಕರು ಬಿಜೆಪಿ ಸೇರ್ಪಡೆಯಾಗಿ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ.

405ರಲ್ಲಿ ಶೇ.42 ಶಾಸಕರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. ಬಿಜೆಪಿಯನ್ನು ತೊರೆದು ಶೇ.4.4(18) ಶಾಸಕರು ಅನ್ಯಪಕ್ಷ ಸೇರಿದ್ದಾರೆ. ಅಂದರೆ ಈ ಅವಧಿಯಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ (ಬಿಜೆಪಿ) ಕಡೆಗೇ ಚುನಾವಣಾ ಗಾಳಿ ಬೀಸುತ್ತಿದೆ ಎನ್ನುವುದನ್ನು ಇವರೆಲ್ಲ ಗ್ರಹಿಸಿದ್ದಾರೆ ಎನ್ನಬಹುದು. ಇವರನ್ನು ಹೆದರಿಸಿ, ಬೆದರಿಸಿ, ಐಟಿ, ಇಡಿ ದಾಳಿ ಭೂತ ತೋರಿಸಿ ಕರೆದುಕೊಂಡಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತವೆ, ಅದು ಮತ್ತೊಂದು ರಾಷ್ಟ್ರೀಯ ವಿಚಾರ ಸಂಕಿರಣದ ವಿಚಾರ.

ಸ್ವತಂತ್ರ ಅಭ್ಯರ್ಥಿಗಿಂತಲೂ ನೋಂದಾಯಿತ ಪಕ್ಷಗಳಿಂದ ಸ್ಪರ್ಧೆ ಮಾಡಿದರೆ ಮಾತ್ರವೇ ಗೆಲ್ಲುವ ಸಾಧ್ಯತೆ ಇರುತ್ತದೆ ಎಂದು ಅನೇಕರು ಸ್ಪರ್ಧೆ ಮಾಡುತ್ತಿದ್ದಾರೆ. ಪಕ್ಷಾಂತರ ನಿಷೇಧ ಕಾನೂನು ಜಾರಿಗೆ ಬಂದ ನಂತರ ಭಾರತದಲ್ಲಿ ರಾಜಕೀಯ ಪಕ್ಷಗಳು ಅಣಬೆಗಳಂತೆ ಹೆಚ್ಚಾಗುತ್ತಿವೆ.

1952ರಲ್ಲಿ ಕೇವಲ 14 ನೋಂದಾಯಿತ ರಾಜಕೀಯ ಪಕ್ಷಗಳಿದ್ದವು. 1960ರ ವೇಳೆಗೆ ಈ ಸಂಖ್ಯೆ 40ಕ್ಕೆ ಏರಿತು. 1970ರ ಸುಮಾರಿಗೆ ಈ ಸಂಖ್ಯೆ 150ಕ್ಕೆ ಏರಿತು. ಇದೇ ವೇಳೆ 1985ರಲ್ಲಿ ಪಕ್ಷಾಂತರ ನಿಷೇದ ಕಾನೂನು ಜಾರಿಯಾಯಿತು. ಒಂದು ಪಕ್ಷದ ಮೂರನೇ ಎರಡರಷ್ಟು ಶಾಸಕರು ಪಕ್ಷಾಂತರ ಮಾಡಿದರೆ ಮಾತ್ರವೇ ಊರ್ಜಿತ ಎಂಬ ಕಾನೂನು ಜಾರಿಯಾಗಿದ್ದೇ ತಡ, ಭಾರತದಲ್ಲಿ ಪಕ್ಷಗಳ ನೋಂದಣಿ ವೇಗ ಪಡೆಯಿತು. ಇದಕ್ಕೆ ಪ್ರಾದೇಶಿಕ ಕಾರಣಗಳೂ ಜತೆಯಾದವು. ತಮ್ಮದೇ ಪಕ್ಷ ಮಾಡಿಕೊಂಡು ಒಂದಷ್ಟು ಶಾಸಕರನ್ನು ಗೆಲ್ಲಿಸಿಕೊಂಡುಬಿಟ್ಟರೆ ಪಕ್ಷಾಂತರ ನಿಷೇಧ ಕಾನೂನಿನ ಭಯ ಇಲ್ಲದೆ, ಯಾವ ಪಕ್ಷಕ್ಕೆ ಸರಳ ಬಹುಮತದ ಅವಶ್ಯಕತೆ ಇರುತ್ತದೆಯೋ ಅತ್ತ ವಾಲಬಹುದು ಎಂಬ ಲೆಕ್ಕಾಚಾರ ಇದರ ಹಿಂದಿದೆ. 1980-1990ರ ಅವಧಿಯಲ್ಲಿ ದೇಶದಲ್ಲಿ 500 ರಾಜಕೀಯ ಪಕ್ಷಗಳಾದವು. 2000ನೇ ಇಸವಿ ವೇಳೆಗೆ ಇದು 1,200ಕ್ಕೆ ಏರಿತು. 2010ರ ವೇಳೆಗೆ 2,300ಕ್ಕೆ ಏರಿಕೆ ಆಗಿತ್ತು. 2021ರ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ 2,858 ನೋಂದಾಯಿತ ರಾಜಕೀಯ ಪಕ್ಷಗಳಿವೆ. ಇದರಲ್ಲಿ 8 ರಾಷ್ಟ್ರೀಯ, 54 ರಾಜ್ಯ ಪಕ್ಷಗಳಿವೆ.

ಇಷ್ಟಾದರೂ ಕರ್ನಾಟಕದಲ್ಲಿ 2019ರಲ್ಲಿ ನಡೆದಂತಹ ಪಕ್ಷಾಂತರಗಳು ನಡೆಯುತ್ತಲೇ ಇವೆ. ವಿಪಕ್ಷಗಳು ಇದನ್ನು ಆಪರೇಷನ್ ಕಮಲ ಎಂದು ಕರೆಯುತ್ತವೆ. ಆದರೆ ಚುನಾವಣೆಗೂ ಮೊದಲೇ ನಡೆಯುವ ಪಕ್ಷಾಂತರವನ್ನು ಆಪರೇಷನ್ ಎನ್ನಲಾಗದು. ಈ ಬಾರಿ ಚುನಾವಣೆಗೂ ಮುನ್ನ ವಿವಿಧ ಪಕ್ಷಗಳಿಂದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಸೇರಿಕೊಂಡಿರುವವರ ಪ್ರಮುಖರ ಪಟ್ಟಿ ಈ ರೀತಿ ಇದೆ.

ಮೇಲಿನ ಪಟ್ಟಿ ನೋಡಿದರೆ, ನಾಲ್ವರು ಹಾಲಿ ಶಾಸಕರು ಹಾಗೂ ಮೂವರು ವಿಧಾನ ಪರಿಷತ್ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿ ಸೇರಿರುವವರಲ್ಲಿ ಒಬ್ಬರು ಹಾಲಿ ಶಾಸಕರು, ಇನ್ನಿಬ್ಬರು ಮಾಜಿ ಶಾಸಕರು. ಜೆಡಿಎಸ್ ಸೇರಿರುವವರೂ ಮಾಜಿ ಶಾಸಕರು. ಹೀಗೆ ಮೇಲ್ನೋಟಕ್ಕೆ ರಾಜ್ಯ ರಾಜಕೀಯ ಹವಾ ಕಾಂಗ್ರೆಸ್ ಕಡೆ ವಾಲುತ್ತಿದೆ ಎಂದು ತೋರುತ್ತದೆ.

ಇದೀಗ ಕಾಂಗ್ರೆಸ್ ಸೇರಿರುವ ನಾಲ್ವರು ಶಾಸಕರು, ಮುಂದಿನ ಸರ್ಕಾರ ರಚನೆ ಸಲುವಾಗಿ ಕಾಂಗ್ರೆಸ್‌ಗೆ ಹೋಗಿದ್ದಾರೆಯೇ? ಬಾಬುರಾವ್ ಚಿಂಚನಸೂರು ಕಾಂಗ್ರೆಸ್ ಸೇರಿದ್ದು ಬಿಜೆಪಿಯಲ್ಲಿ ಟಿಕೆಟ್ ಲಭಿಸಲಿಲ್ಲ ಎಂಬ ಕಾರಣಕ್ಕೆ. ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ತೆರಳಿದ್ದು ಎಚ್.ಡಿ. ಕುಮಾರಸ್ವಾಮಿಯವರೊಂದಿಗಿನ ಮುನಿಸಿನ ಕಾರಣಕ್ಕೆ. ಕೋಲಾರ ಶ್ರೀನಿವಾಸ ಗೌಡ ಕಾಂಗ್ರೆಸ್ ಕೈ ಹಿಡಿದಿದ್ದು ಸಿದ್ದರಾಮಯ್ಯ ಅವರ ಆತ್ಮೀಯತೆ ಕಾರಣಕ್ಕೆ. ಅರಸೀಕೆರೆ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರುತ್ತಿರುವುದೂ ಜೆಡಿಎಸ್ ನಾಯಕರ ಜತೆಗಿನ ಭಿನ್ನಾಭಿಪ್ರಾಯದ ಕಾರಣಕ್ಕೆ. ಎಂಎಲ್‌ಸಿ ಪುಟ್ಟಣ್ಣ ಕಾಂಗ್ರೆಸ್ ಸೇರಿದ್ದು ರಾಜಾಜಿನಗರ ಶಾಸಕರಾಗಬೇಕು ಎಂಬ ಕಾರಣಕ್ಕೆ. ಆಯನೂರು ಮಂಜುನಾಥ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದ್ದು, ಅದಕ್ಕೆ ಕಾರಣ ಶಿವಮೊಗ್ಗದಲ್ಲಿ ಕೆ.ಎಸ್‌. ಈಶ್ವರಪ್‌ ಅವರಿಗೆ ಬದಲಾಗಿ ಟಿಕೆಟ್ ಸಿಗುವುದಿಲ್ಲ ಎನ್ನುವ ಕಾರಣಕ್ಕೆ. ಬಿಜೆಪಿಯಿಂದ ಟಿಕೆಟ್ ನೀಡಿದ್ದರೆ ಆಯನೂರು ಬಹುಶಃ ಅಲ್ಲೇ ಇರುತ್ತಾರೆ.

ಕಾಂಗ್ರೆಸ್‌ಗೆ ಆಗಮಿಸಿದರೆ ತಮಗೊಂದು ಟಿಕೆಟ್‌ ಸಿಗಬಹುದು, ಶಾಸಕರಾಗಬಹುದು ಎನ್ನುವಂಥವರು ಹೆಚ್ಚಿದ್ದಾರೆಯೇ ವಿನಃ ತಾವು ಇದ್ದ ಪಕ್ಷದಲ್ಲೇ ಅತ್ಯಂತ ಸಬಲರಾಗಿರುವವರು, ಮುಂದೆ ಸೇರಲಿರುವ ಪಕ್ಷ ಅಧಿಕಾರಕ್ಕೆ ಬಂದರೆ ಖಡಾಖಂಡಿತವಾಗಿ ಸಚಿವರಾಗಿಯೇ ತೀರುತ್ತಾರೆ ಎನ್ನುವವರು ಇನ್ನೂ ಕಾಂಗ್ರೆಸ್ ಸೇರಿಲ್ಲ. ಉದಾಹರಣೆಗೆ, ಈಗ ಬಿಜೆಪಿಯಲ್ಲಿರುವ ಸಚಿವರುಗಳಾದ ಎಸ್.ಟಿ. ಸೋಮಶೇಖರ್, ಕೆ. ಗೋಪಾಲಯ್ಯ, ನಾರಾಯಣ ಗೌಡ ಆಗಮಿಸುತ್ತಾರೆ ಎಂದು ಕಾಂಗ್ರೆಸ್ ಕಾಯುತ್ತಾ ಇತ್ತು. ಇದೇ ಕಾರಣಕ್ಕೆ ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಕೆ.ಆರ್. ಪೇಟೆ ಕ್ಷೇತ್ರಗಳಿಗೆ 124 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಹೆಸರು ಘೋಷಣೆ ಮಾಡಿರಲಿಲ್ಲ. ಆದರೆ ಅವರ್ಯಾರೂ ಬಿಜೆಪಿ ಬಿಟ್ಟು ಕದಲುವುದಿಲ್ಲ ಎಂದು ಗೊತ್ತಾದಾಗ 42 ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಘೋಷಣೆ ಮಾಡಿದೆ. ಈ ಮೂವರು ಕಾಂಗ್ರೆಸ್ ಸೇರಿದ್ದರೆ ನಿಶ್ಚಿತವಾಗಿ ಕಾಂಗ್ರೆಸ್ ಕಡೆಗೆ ಅತ್ಯಂತ ಸ್ಪಷ್ಟವಾದ ಗಾಳಿ ಬೀಸುತ್ತಿದೆ ಎಂದು ಹೇಳಬಹುದಾಗಿತ್ತು.

ಬಿಜೆಪಿ ಇನ್ನೂ ಮೊದಲ ಪಟ್ಟಿಯನ್ನೇ ಬಿಡುಗಡೆ ಮಾಡಲಿಲ್ಲ. ಪಟ್ಟಿ ಘೋಷಣೆ ನಂತರ ನಡೆಯುವ ಹಾರಾಟಗಳನ್ನು ತಡೆಯಲು ಘೋಷಣೆಯನ್ನು ತಡ ಮಾಡುತ್ತಿದೆ ಎನ್ನುತ್ತವೆ ರಾಜಕೀಯ ಮೂಲಗಳು. ಆಗ ಟಿಕೆಟ್ ಸಿಗದವರು ಕಾಂಗ್ರೆಸ್ ಕಡೆಗೆ ಹಾರಬಹುದು. ಕಾಂಗ್ರೆಸ್ ಪಕ್ಷವು ಗೆಲ್ಲುವ ಅಭ್ಯರ್ಥಿಗಳಿಗಾಗಿ ಹುಡುಕಾಡುತ್ತಿದೆ. ಕಾಂಗ್ರೆಸ್‌ಗೆ ತೆರಳಿದರೆ ಗೆಲ್ಲಬಹುದು ಎಂಬ ವಿಶ್ವಾಸ ಈ ಪಕ್ಷಾಂತರಿಗಳಿಗೆ ಇದೆ. ಇದನ್ನು ಮಾನದಂಡ ಎಂದು ಪರಿಗಣಿಸಿದರೆ ಒಂದಷ್ಟು ಪ್ರಮಾಣದಲ್ಲಿ ಕಾಂಗ್ರೆಸ್‌ ಕಡೆಗೆ ತಂಗಾಳಿ ಬೀಸುತ್ತಿದೆ ಎನ್ನುವುದು ನಿಶ್ಚಿತ. ಆದರೆ ಕಾಂಗ್ರೆಸ್‌ ನಾಯಕರು ಹೇಳಿಕೊಳ್ಳುತ್ತಿರುವಂತೆ ಭಾರೀ ಅಲೆಯಂತೂ ಇಲ್ಲ.

ಇನ್ನು, ಪ್ರಬಲ ನಾಯಕರುಗಳು ಬಿಜೆಪಿಯಿಂದ ಕಾಂಗ್ರೆಸ್‌ಗಾಗಲಿ, ಕಾಂಗ್ರೆಸ್‌ನಿಂದ ಬಿಜೆಪಿಗಾಗಲಿ ತೆರಳದೇ ಇರುವುದನ್ನು ನೋಡಿದರೆ, ಈ ಬಾರಿಯ ಫಲಿತಾಂಶಗಳ ಕುರಿತು ಅವರಲ್ಲೂ ಗೊಂದಲ ಇದೆ ಎಂದು ತೋರುತ್ತದೆ. ಇಲ್ಲಿಯವರೆಗಿನ ಬಹುತೇಕ ಸಮೀಕ್ಷೆಗಳು ತಿಳಿಸಿರುವಂತೆ ಇದು ಅತಂತ್ರ ವಿಧಾನಸಭೆಯ ಮುನ್ಸೂಚನೆ ಎನ್ನುವಂತೆಯೇ ಇದೆ. ಹಾಗೇನಾದರೂ ಅತಂತ್ರ ಫಲಿತಾಂಶವೇ ನಿಜವಾದರೆ, ಅವರನ್ನು ಬಿಟ್ಟು ಇವರನ್ನು ಬಿಟ್ಟು ಮೂರನೇ ಪಕ್ಷವೇ ಖುಷಿ ಪಡುವ ಸರದಿ.

ಇದನ್ನೂ ಓದಿ: D ಕೋಡ್‌ ಅಂಕಣ: ಮೋದಿ ನೇತೃತ್ವದಲ್ಲಿ 50 ವಿಧಾನಸಭೆ ಚುನಾವಣೆ: ಎಷ್ಟು ಸೋಲು? ಎಷ್ಟು ಗೆಲುವು? ಕರ್ನಾಟಕಕ್ಕೆ ಪಾಠವೇನು?“>ಕೋಡ್‌ ಅಂಕಣ: ಮೋದಿ ನೇತೃತ್ವದಲ್ಲಿ 50 ವಿಧಾನಸಭೆ ಚುನಾವಣೆ: ಎಷ್ಟು ಸೋಲು? ಎಷ್ಟು ಗೆಲುವು? ಕರ್ನಾಟಕಕ್ಕೆ ಪಾಠವೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Car Catches Fire: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ

Car Catches Fire: ಬಾಗಲಕೋಟೆ ಜಿಲ್ಲೆಯ ಕಮತಗಿ ಸಮೀಪದ ಇಂಗಳಗಿ ರಸ್ತೆಯಲ್ಲಿ ಅವಘಡ ನಡೆದಿದೆ. ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದರಿಂದ ಕಾರಿನಲ್ಲಿದ್ದ ವ್ಯಕ್ಯಿ ಸಜೀವ ದಹನವಾಗಿದ್ದಾರೆ.

VISTARANEWS.COM


on

car catches fire
Koo

ಬಾಗಲಕೋಟೆ: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿಯೊಬ್ಬ ಸಜೀವ ದಹನವಾಗಿರುವ ಘಟನೆ (Car Catches Fire) ಜಿಲ್ಲೆಯ ಕಮತಗಿ ಸಮೀಪದ ಇಂಗಳಗಿ ರಸ್ತೆಯಲ್ಲಿ ನಡೆದಿದೆ. ಹುನಗುಂದ ತಾಲೂಕಿನ ಚಿಕ್ಕಮಾಗಿ ಗ್ರಾಮದ ಸಂಗನಗೌಡ ಪಾಟೀಲ (ಗೌಡರ) (50) ಮೃತ ವ್ಯಕ್ತಿ. ಕಾರಿಗೆ ಹೇಗೆ ಬೆಂಕಿ ಹೊತ್ತಿಕೊಂಡಿತು ಎಂಬ ಬಗ್ಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ರಸ್ತೆ ಪಕ್ಕ ಕಾರು ಹೊತ್ತಿ ಉರಿದಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಪೊಲೀಸರು ದೌಡಾಯಿಸಿ ಪರಿಶೀಲಿಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಲಾರಿಗೆ ಬೆಂಕಿ

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಲಾರಿಗೆ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಧಾರವಾಡದ ಕಣಿವಿ ಹೊನ್ನಾಪುರ ಬಳಿ ನಡೆದಿದೆ. ಕೇರಳದಿಂದ ದೆಹಲಿಗೆ ಕಡೆಗೆ ಹೊರಟಿದ್ದ ಲಾರಿ ಪಲ್ಟಿಯಾಗಿದ್ದು, ಈ ವೇಳೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಬ್ಯಾಟರಿ, ಟಿವಿ ಸಾಮಗ್ರಿ ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಘಟನಾ ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ | Murder Case: ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ; ಬಾಲಕಿಯ ಅಪಹರಿಸಿ ಕತ್ತು ಕೊಯ್ದ ಕಿರಾತಕರು

Continue Reading

ಬೆಂಗಳೂರು

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

Child Actor Master OM: ಕರ್ನಾಟಕ ಸೂಪರ್‌ ಟೀನ್‌ ಮಾಡೆಲ್‌ ಹಾಗೂ ಬಾಲ ನಟ ಮಾಸ್ಟರ್ ಓಂ‌, ಇದೀಗ 10ನೇ ತರಗತಿಯ ಬೋರ್ಡ್‌ ಎಕ್ಸಾಂ (ಐಸಿಎಸ್‌ಇ ಸಿಲಬಸ್)ನಲ್ಲಿ 97% ಅಂಕ ಗಳಿಸುವ ಮೂಲಕ ಬೆಂಗಳೂರಿನ ಆಚಾರ್ಯ ಪಾಠಶಾಲೆಯ ಟಾಪರ್ಸ್‌ ಲಿಸ್ಟ್‌ಗೆ ಸೇರಿದ್ದಾನೆ. ನಟನೆ, ಮಾಡೆಲಿಂಗ್‌ನಂಥ ಪಠ್ಯೇತರ ಚಟುವಟಿಕೆ ತನ್ನ ಓದಿಗೆ ಅಡ್ಡಿಯಾಗಲಿಲ್ಲ ಎನ್ನುವ ಓಂ, ಮುಂದಿನ ತರಗತಿಗಳಲ್ಲೂ ಉತ್ತಮ ಅಂಕ ಗಳಿಸುವ ಗುರಿ ಹೊಂದಿದ್ದಾನೆ.

VISTARANEWS.COM


on

ಕರ್ನಾಟಕ ಸೂಪರ್‌ ಟೀನ್‌ ಮಾಡೆಲ್‌ ಮತ್ತು ಬಾಲ ನಟ ಓಂ
Koo

ಬೆಂಗಳೂರು: ಕರ್ನಾಟಕ ಸೂಪರ್‌ ಟೀನ್‌ ಮಾಡೆಲ್‌ ಹಾಗೂ ಬಾಲ ನಟನಾಗಿದ್ದ (Child Actor Master OM) ಮಾಸ್ಟರ್ ಓಂ, ಇದೀಗ 10ನೇ ತರಗತಿ ಬೋರ್ಡ್‌ ಎಕ್ಸಾಂ (ಐಸಿಎಸ್‌ಇ ಸಿಲಬಸ್) ಪರೀಕ್ಷೆಯಲ್ಲಿ 97% ಅಂಕ ಗಳಿಸುವ ಮೂಲಕ ಪ್ರತಿಷ್ಠಿತ ಆಚಾರ್ಯ ಪಾಠಶಾಲೆಯ ಟಾಪರ್ಸ್‌ ಲಿಸ್ಟ್‌ಗೆ ಸೇರಿದ್ದಾನೆ. ಐಸಿಎಸ್‌ಸಿ ಸಿಲಬಸ್‌ನಲ್ಲಿ ಓದುವವರು ಕನ್ನಡವೆಂದರೇ ಕಬ್ಬಿಣದ ಕಡಲೆ ಎಂದು ಭಾವಿಸುತ್ತಾರೆ. ಆದರೆ, ಓಂ ಕನ್ನಡದಲ್ಲಿ 100 ಕ್ಕೆ 97 ಅಂಕಗಳನ್ನು ಗಳಿಸುವ ಮೂಲಕ ಇದನ್ನು ಸಾಧಿಸಿ ತೋರಿಸಿದ್ದಾನೆ. ಗಣಿತ ಹಾಗೂ ಹಿಸ್ಟರಿಯಲ್ಲಿ 100ಕ್ಕೆ 99 ಮಾರ್ಕ್ಸ್‌ ಗಳಿಸಿದ್ದಾನೆ. ಇನ್ನುಳಿದ ಎಲ್ಲಾ ವಿಷಯಗಳಲ್ಲೂ ಕ್ರಮವಾಗಿ 95, 96, 97 ಹೀಗೆ ಅತ್ಯಧಿಕ ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ. ಇದಕ್ಕೆಲ್ಲಾ ಶಾಲೆಯ ಪ್ರಾಂಶುಪಾಲರು, ಟೀಚರ್ಸ್‌ ಹಾಗೂ ಪೋಷಕರ ಸಹಕಾರವೇ ಕಾರಣ ಎಂದು ಸಂತಸ ಹಂಚಿಕೊಂಡಿದ್ದಾನೆ.

ಓಂ ಸಿನಿಮಾ, ಫ್ಯಾಷನ್‌ ಜರ್ನಿ

ಮದುವೆಯ ಮಮತೆಯ ಕರೆಯೊಲೆ, ಲೀ, ವೇಷಧಾರಿ, ಪ್ರೇಮಂ, ಸಂತೋಷ-ಸಂಗೀತ, ಕಾಳಿದಾಸ ಕನ್ನಡ ಮೇಷ್ಟ್ರು, ಕಾಫಿ(ತಮಿಳು) ಸೇರಿದಂತೆ 10ಕ್ಕೂ ಹೆಚ್ಚು ಸಿನಿಮಾ, 35ಕ್ಕೂ ಅಧಿಕ ಜಾಹೀರಾತು ಮತ್ತು ಅಂತಾರಾಷ್ಟ್ರೀಯ ಮಟ್ಟದ ಫ್ಯಾಷನ್‌ ಶೋಗಳಲ್ಲಿ ಸೆಲೆಬ್ರೆಟಿ ಶೋ ಸ್ಟಾಪರ್‌ ಆಗಿ ವಾಕ್‌ ಮಾಡಿರುವ ಓಂ ಓದಿನಲ್ಲೂ ಮುಂದಿರುವುದು ಸಿನಿಮಾ ಬಾಲ ನಟ-ನಟಿಯರಿಗೆ ಮಾದರಿಯಾಗುವಂತಿದೆ. ಇವೆಲ್ಲದರ ಜೊತೆಗೆ ಶಾಲೆಯ ಕ್ಯಾಪ್ಟನ್‌ಶಿಪ್‌ ಹಾಗೂ ತೇಜಸ್ವಿ ಸೂರ್ಯರ ಸೌತ್‌ ಸ್ಕೂಲ್‌ ಲೀಡರ್ಸ್‌ ಟೀಮ್‌ನ ಸಾಮಾಜಿಕ ಕಾರ್ಯಾಗಾರಗಳಲ್ಲೂ ಶಾಲೆಯ ಪ್ರತಿನಿಧಿಯಾಗಿ ಪಾಲ್ಗೊಂಡ ಹೆಗ್ಗಳಿಕೆ ಓಂನದು.

ಇದನ್ನೂ ಓದಿ | Girls Pleats Skirts Fashion: ಹುಡುಗಿಯರ ಮೆಚ್ಚಿನ ಆಯ್ಕೆ ಕೊರಿಯನ್‌ ಪ್ಲೀಟ್ಸ್‌ ಸ್ಕರ್ಟ್ಸ್‌ಗಳು

ನಟನೆ, ಮಾಡೆಲಿಂಗ್‌ನಂಥ ಪಠ್ಯೇತರ ಚಟುವಟಿಕೆ ತನ್ನ ಓದಿಗೆ ಅಡ್ಡಿಯಾಗಲಿಲ್ಲ ಎನ್ನುವ ಓಂ, ಮುಂದಿನ ತರಗತಿಗಳಲ್ಲೂ ಉತ್ತಮ ಅಂಕ ಗಳಿಸುವ ಗುರಿ ಹೊಂದಿದ್ದಾನೆ. ಹಾಗೆಯೇ, ನಟನೆ-ಮಾಡೆಲಿಂಗ್‌ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಬಯಕೆಯನ್ನೂ ವ್ಯಕ್ತಪಡಿಸಿದ್ದಾನೆ.

Continue Reading

ಬೆಂಗಳೂರು

LuLu Fashion Week 2024: ಲುಲು ಫ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

LuLu Fashion Week 2024: ಬೆಂಗಳೂರಿನ ಲುಲು ಮಾಲ್‌ನಲ್ಲಿ ಮೇ 10ರಿಂದ 12ರವರೆಗೆ ಮೂರು ದಿನಗಳವರೆಗೆ ಲುಲು ಫ್ಯಾಷನ್ ವೀಕ್ʼ 2ನೇ ಆವೃತ್ತಿ ಆಯೋಜಿಸಲಾಗಿದೆ. ಶನಿವಾರ ನಡೆದ ಸ್ಪ್ರಿಂಗ್‌ ಸಮ್ಮರ್‌ 2024 ಕಾರ್ಯಕ್ರಮದಲ್ಲಿ ವಿವಿಧ ಬ್ರ್ಯಾಂಡ್‌ಗಳ ಫ್ಯಾಷನ್ ಶೋ ನಡೆಯಿತು. ಕಾರ್ಯಕ್ರಮಕ್ಕೆ ವಿಸ್ತಾರ ನ್ಯೂಸ್‌ ಮಾಧ್ಯಮ ಸಹಯೋಗ ನೀಡಿದೆ.

VISTARANEWS.COM


on

Koo

ಬೆಂಗಳೂರು: ನಗರದ ಲುಲು ಮಾಲ್‌ನಲ್ಲಿ ʼಲುಲು ಫ್ಯಾಷನ್ ವೀಕ್ʼ 2ನೇ ಆವೃತ್ತಿಯ (LuLu Fashion Week 2024) ಭಾಗವಾಗಿ ನಡೆದ ಸ್ಪ್ರಿಂಗ್‌ ಸಮ್ಮರ್‌ 2024 ಕಾರ್ಯಕ್ರಮವು 2ನೇ ದಿನವೂ ಅದ್ಧೂರಿಯಾಗಿ ನೆರವೇರಿತು. ಕಲರಫುಲ್ ಸಂಜೆಯಲ್ಲಿ ಮೂಡಿಬಂದ ಫ್ಯಾಷನ್ ಶೋ ನೋಡಲು ಸಾವಿರಾರು ಜನರು ಆಗಮಿಸಿದ್ದರು.

ಮೇ 10ರಂದು ಆರಂಭವಾದ ಕಾರ್ಯಕ್ರಮ ಮೇ 12 ಭಾನುವಾರದವರೆಗೆ ನಡೆಯಲಿದೆ. ಕಾರ್ಯಕ್ರಮಕ್ಕೆ ವಿಸ್ತಾರ ನ್ಯೂಸ್‌ ಮಾಧ್ಯಮ ಸಹಯೋಗ ನೀಡಿದೆ. ಶನಿವಾರ ನಡೆದ ಸ್ಪ್ರಿಂಗ್‌ ಸಮ್ಮರ್‌ 2024 ಕಾರ್ಯಕ್ರಮದಲ್ಲಿ ನುವಾ, ಪೆಪೆ ಜೀನ್ಸ್ ಲಂಡನ್, ಪೀಟರ್ ಇಂಗ್ಲೆಂಡ್, ಅಮೆರಿಕನ್ ಟೂರಿಸ್ಟರ್, ಕ್ರೊಯ್ಡಾನ್ ಸೇರಿದಂತೆ ಹಲವಾರು ಬ್ರ್ಯಾಂಡ್‌ಗಳ ಫ್ಯಾಷನ್ ಶೋ ನಡೆಯಿತು. ಜೊತೆಗೆ ಬಿಗ್ ಚೋಕೋ ಡೇಸ್ ಲೋಗೋ ಲಾಂಚ್ ಮಾಡಲಾಯಿತು. ನಂತರ ಫ್ಯಾಷನ್ ಫೋರಂನಲ್ಲಿ ಭವಿಷ್ಯದ ಫ್ಯಾಷನ್ ಬಗ್ಗೆ ಚರ್ಚಿಸಲಾಯಿತು. ಈ ವೇಳೆ ಚಂದನವನದ ನಟ ರಿಷಿ ಭಾಗಿಯಾಗಿದ್ದರು.

ಇನ್ನು ಹಲವಾರು ಕಲೆಗಳಿಗೆ ಕಾರ್ಯಕ್ರಮ ವೇದಿಕೆಯಾಯಿತು. ವಿವಿಧ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ಲುಲು ಮಾಲ್ ಅಂಗಳದಲ್ಲಿ ನಡೆದ ಫ್ಯಾಷನ್ ಶೋನಲ್ಲಿ ವಿಭಿನ್ನವಾದ ಬಟ್ಟೆ ತೊಟ್ಟು ನಾರಿಯರು ಕಂಗೊಳಿಸಿದರು. ವಾರಾಂತ್ಯವಾಗಿದ್ದರಿಂದ ಹೆಚ್ಚಿನ ಜನರು ಆಗಮಿಸಿದ್ದು, ಮಕ್ಕಳು ಸಹ ಖುಷಿಪಟ್ಟರು.

ಇದನ್ನೂ ಓದಿ | Hair Color Fashion: ವೈರಲ್‌ ಆದ ಹೇರ್‌ ಕಲರ್ ಸ್ಟೈಲ್‌

ಒಟ್ಟಿನಲ್ಲಿ ಲುಲು ಫ್ಯಾಷನ್ ವೀಕ್ ಬಹು ಜೋರಾಗಿದ್ದು, ಪ್ಯಾಷನ್ ಶೋ ನೋಡಿ ನೆರೆದಿದ್ದ ಜನರು ಫುಲ್ ಫಿದಾ ಆಗಿದ್ದಾರೆ. ಇನ್ನು ಮೇ 12 ಭಾನುವಾರ ಫ್ಯಾಷನ್ ವೀಕ್ ಮುಕ್ತಾಯಗೊಳ್ಳಲಿದೆ.

Continue Reading

ಕರ್ನಾಟಕ

ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್;‌ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಹೊಳೆನರಸೀಪುರದ ಜೆಎಂಎಫ್‌ಸಿ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದೆ.

VISTARANEWS.COM


on

Devarajegowda
Koo

ಹಾಸನ: ಮಹಿಳೆಗೆ ಲೈಂಗಿಕ ಕಿರುಕುಳ, ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡ (Devaraje Gowda) ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಮೇ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಹೊಳೆನರಸೀಪುರದ ಜೆಎಂಎಫ್‌ಸಿ ನ್ಯಾಯಾಲಯವು ಆದೇಶ ಹೊರಡಿಸಿದೆ. ಇದರೊಂದಿಗೆ, ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ನಲ್ಲಿ (Prajwal Revanna Case) ಸುದ್ದಿಯಾಗಿದ್ದ ದೇವರಾಜೇಗೌಡ ಅವರೂ ಜೈಲುಪಾಲಾದಂತಾಗಿದೆ.

ಹಿರಿಯೂರಿನಲ್ಲಿ ವಕೀಲ ದೇವರಾಜೇಗೌಡ ಅವರನ್ನು ಮೇ 10ರಂದು ಪೊಲೀಸರು ವಶಕ್ಕೆ ಪಡೆದಿದ್ದರು. ಹೊಳೆನರಸೀಪುರ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಬೆಂಗಳೂರಿನಿಂದ ಬಳ್ಳಾರಿಗೆ ಹೋಗುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದೇವರಾಜೇಗೌಡ ವಿರುದ್ಧ ಏ.1ರಂದು ಕೇಸ್‌ ದಾಖಲಾಗಿತ್ತು. ಹಾಗಾಗಿ, ಅವರನ್ನು ವಶಕ್ಕೆ ಪಡೆಯಲಾಗಿತ್ತು.

Prajwal Revanna Case

ಆಡಿಯೊ ವೈರಲ್‌

ಪೊಲೀಸರು ವಶಕ್ಕೆ ಪಡೆಯುವ ಮುನ್ನ ವಿಡಿಯೊದಲ್ಲಿ ಮಾತನಾಡಿದ್ದ ವಕೀಲ ದೇವರಾಜೇಗೌಡ, ನಾನು ಎಲ್ಲೂ ಕಾಣೆ ಆಗಿಲ್ಲ. ಮೂರು ದಿನ ರಜೆ ಇರುವುದರಿಂದ ದೇವಾಲಯಕ್ಕೆ ಹೊಗುತ್ತಿದ್ದೇನೆ. ಕಾಣೆ ಆಗುವ ಪರಿಸ್ಥಿತಿ ನನಗೆ ಬಂದಿಲ್ಲ. ಕುಟುಂಬ ಸಮೇತ ದೇವಸ್ಥಾನಕ್ಕೆ ತೆರಳಿದ್ದೇನೆ. ಆಗಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಇನ್ನು ಇದೇ ವೇಳೆ ಹಾಸನ ಅಶ್ಲೀಲ‌ ವಿಡಿಯೋ ಪ್ರಕರಣದ ಸಂಬಂಧ ಅಜ್ಞಾತ ಸ್ಥಳದಿಂದ ದೇವರಾಜೇಗೌಡ ಮೂರು ಆಡಿಯೊ ಕ್ಲಿಪ್ ಬಿಡುಗಡೆ ಮಾಡಿದ್ದರು. ಮಾಜಿ ಸಂಸದ ಶಿವರಾಮೇಗೌಡ ಜತೆ ಮಾತನಾಡಿರುವ ಎನ್ನಲಾದ ಎರಡು ಆಡಿಯೊ ತುಣುಕು ವೈರಲ್‌ ಆಗಿದ್ದವು. ಹನಿಟ್ರ್ಯಾಪ್ ಸಂಬಂಧ ಮಹಿಳೆ ಗಂಡನ ಜತೆ ಮಾತನಾಡಿದ ಒಂದು ಆಡಿಯೊ ಇದೆ. ಇನ್ನು ಡಿಕೆಶಿ ವಿಚಾರ ಶಿವರಾಮೇಗೌಡ ಜತೆ ದೇವರಾಜೇಗೌಡ ಮಾತನಾಡುತ್ತಿರುವ ಆಡಿಯೊ ಕೂಡ ಇದ್ದು, ಎಸ್‌ಐಟಿ ವಿಚಾರಣೆಯಲ್ಲಿ ಡಿಕೆಶಿ ಹೆಸರೇಳದಂತೆ ಶಿವರಾಮೇಗೌಡ ಸೂಚಿಸಿದ್ದರು.

ಕಾರ್ತಿಕ್‌, ದೇವರಾಜೇಗೌಡ ಪೆನ್‌ಡ್ರೈವ್‌ ರೂವಾರಿಗಳು

ದೇವರಾಜೇಗೌಡ ಬಂಧನದ ಬಳಿಕ ಮಾತನಾಡಿದ್ದ ಮಾಜಿ ಸಂಸದ ಶಿವರಾಮೇಗೌಡ, ಹಲವು ಆರೋಪ ಮಾಡಿದ್ದಾರೆ. “ಪೆನ್‌ಡ್ರೈವ್‌ ರಿಲೀಸ್‌ ಮಾಡಿರುವುದರ ಹಿಂದೆ ಕಾರು ಚಾಲಕ ಕಾರ್ತಿಕ್‌ ಹಾಗೂ ದೇವರಾಜೇಗೌಡ ಇದ್ದಾರೆ. ಏಟ್ರಿಯಾ ಹೋಟೆಲ್‌ನಲ್ಲಿ ಮಾತನಾಡುವಾಗ ನನ್ನ ವಿರುದ್ಧ ತನಿಖೆ ಮಾಡಬೇಕು ಅಂತಿದ್ದಾರೆ ಎಂದ. ಡಿ.ಕೆ.ಶಿವಕುಮಾರ್‌ ಹಾಗೂ ಮುಖ್ಯಮಂತ್ರಿ ಬಗ್ಗೆ ಪದೇಪದೆ ಮಾತನಾಡಬೇಡ ಎಂದೆ. ನಿನ್ನದು ನೀನು ಸರಿಮಾಡಿಕೊ. ಉಳಿದ ಉಸಾಬರಿ ನಿನಗೆ ಬೇಡ ಎಂಬುದಾಗಿ ಹೇಳಿದ್ದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Continue Reading
Advertisement
Solar
ಸಂಪಾದಕೀಯ7 mins ago

ವಿಸ್ತಾರ ಸಂಪಾದಕೀಯ: ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಭಾರತ ಆತ್ಮನಿರ್ಭರ ಸಾಧನೆ ಶ್ಲಾಘನೀಯ

Protein Supplements
ಆರೋಗ್ಯ38 mins ago

Protein Supplements: ಪ್ರೊಟಿನ್‌ ಸಪ್ಲಿಮೆಂಟ್‌ನ ಸೈಡ್‌ ಎಫೆಕ್ಟ್‌ ಏನೇನು? ರಾಷ್ಟ್ರೀಯ ಪೌಷ್ಟಿಕಾಂಶ ಸಂಸ್ಥೆಯ ಸೂಚನೆ ಇಲ್ಲಿದೆ

Shankara Jayanti 2024
ಧಾರ್ಮಿಕ53 mins ago

Shankara Jayanti 2024: ಇಂದು ಶಂಕರ ಜಯಂತಿ; ಶಂಕರಾಚಾರ್ಯರ ಕುರಿತ 9 ಕುತೂಹಲಕರ ಸಂಗತಿಗಳು

International Nurses’s Day
ಆರೋಗ್ಯ1 hour ago

International Nurses’s Day: ಇಂದು ನರ್ಸ್‌ಗಳ ದಿನ; ಈ ದಿನಾಚರಣೆ ಹಿನ್ನೆಲೆ ಏನು?

Dina Bhavishya
ಭವಿಷ್ಯ1 hour ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

IPL 2024
ಪ್ರಮುಖ ಸುದ್ದಿ5 hours ago

IPL 2024 : ಮುಂಬೈ ವಿರುದ್ಧ 18 ರನ್ ಜಯ, ಪ್ಲೇಆಫ್​ ಪ್ರವೇಶಿಸಿದ ಕೆಕೆಆರ್​ ತಂಡ

car catches fire
ಕ್ರೈಂ6 hours ago

Car Catches Fire: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ

jay Shah
ಪ್ರಮುಖ ಸುದ್ದಿ7 hours ago

Jay Shah : ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳ ಸೂಚನೆ ನೀಡಿದ ಜಯ್​ ಶಾ

ಬೆಂಗಳೂರು7 hours ago

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

ಬೆಂಗಳೂರು8 hours ago

LuLu Fashion Week 2024: ಲುಲು ಫ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 hour ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು15 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

ಟ್ರೆಂಡಿಂಗ್‌