Acid Attack : ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ ನಿಷೇಧ?; ಪರಮೇಶ್ವರ್‌ ಸುಳಿವು - Vistara News

ದಕ್ಷಿಣ ಕನ್ನಡ

Acid Attack : ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ ನಿಷೇಧ?; ಪರಮೇಶ್ವರ್‌ ಸುಳಿವು

Acid Attack : ಹೆಚ್ಚುತ್ತಿರುವ ಆ್ಯಸಿಡ್‌ ದಾಳಿ ಘಟನೆಗಳನ್ನು ನಿಯಂತ್ರಿಸಲು ಆ್ಯಸಿಡ್‌ ಮಾರಾಟದ ಮೇಲೆ ನಿರ್ಬಂಧ ಹೇರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಕಡಬದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ದಾಳಿ ನಡೆದ ಹಿನ್ನೆಲೆಯಲ್ಲಿ ಈ ಚಿಂತನೆ ಮಹತ್ವ ಪಡೆದಿದೆ.

VISTARANEWS.COM


on

Acid attack G Parameshwar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada News) ಕಡಬದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ (Kadaba Government PU College) ಮೂವರು ದ್ವಿತೀಯ ಪಿಯು ವಿದ್ಯಾರ್ಥಿನಿಯರ (Three Girl Students) ಮೇಲೆ ಕೇರಳದಲ್ಲಿ ಎಂಬಿಎ ಮಾಡುತ್ತಿರುವ ಯುವಕನೊಬ್ಬ ಆ್ಯಸಿಡ್‌ ದಾಳಿ (Acid attack) ನಡೆಸಿದ ಘಟನೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ (Acid Sales) ನಿಷೇಧಿಸುವ ಬಗ್ಗೆ ಚಿಂತನೆ ಶುರು ಮಾಡಿದೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ (G Parameshwar) ಅವರೇ ಈ ಸುಳಿವನ್ನು ನೀಡಿದ್ದಾರೆ. ಆ್ಯಸಿಡ್‌ ಸುಲಭದಲ್ಲಿ ಸಿಗುವುದರಿಂದ ಕೆಲವು ದುಷ್ಕರ್ಮಿಗಳು ಅವುಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಅದರ ಲಭ್ಯತೆ ಮತ್ತು ಖರೀದಿಯ ವಿಚಾರದಲ್ಲಿ ಕೆಲವೊಂದು ನಿರ್ಬಂಧಗಳನ್ನು ಹಾಕಬೇಕಾದ ಅನಿವಾರ್ಯತೆಯನ್ನು ಅವರು ಪ್ರತಿಪಾದಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ‘ಮಹಿಳೆಯರ ಮೇಲಿನ ದೌರ್ಜನ್ಯ’ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಲಹೆಗಳನ್ನು ಆಲಿಸಿ ಮಾತನಾಡಿದ ಪರಮೇಶ್ವರ್‌, ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ. ಮಹಿಳೆಯರು ಮತ್ತು ಮಕ್ಕಳು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ, ವಿಧಾನಸೌಧದ ಕಾರ್ಯಾಲಯ ಅಥವಾ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಭೇಟಿಯಾಗಿ ಸಮಸ್ಯೆಯನ್ನು ಹೇಳಿಕೊಳ್ಳಬಹುದು ಎಂದೂ ಹೇಳಿದ್ದಾರೆ.

ಇದನ್ನೂ ಓದಿ : Acid Attack : ಕಡಬ ಆ್ಯಸಿಡ್ ದಾಳಿಕೋರನ ವಿರುದ್ಧ ಸೂಕ್ತ ಕ್ರಮಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್‌ ಸೂಚನೆ

ಕಡಬದಲ್ಲಿ ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ಸರ್ಕಾರ ಈಗಾಗಲೇ 4 ಲಕ್ಷ ರೂ. ಪರಿಹಾರ ಘೋಷಿಸಿದೆ. ಅವರಿಗೆ ಪ್ಲಾಸ್ಟಿಕ್‌ ಸರ್ಜರಿ ಅವಶ್ಯವಿದ್ದರೆ 20 ಲಕ್ಷದವರೆಗೂ ಖರ್ಚನ್ನು ಭರಿಸಲು ಮುಂದಾಗಿದೆ. ಜತೆಗೆ ಸಂತ್ರಸ್ತರಿಗೆ ನಿವೇಶನವನ್ನು ಕೂಡಾ ನೀಡಲಾಗುವುದು ಎಂದು ಗೃಹ ಸಚಿವರು ಹೇಳಿದ್ದಾರೆ.

ಮಹಿಳೆಯರ ಸಮಸ್ಯೆ ಬಗ್ಗೆ ಪೊಲೀಸರಿಗೂ ಗೌರವವಿರಲಿ ಎಂದ ಪರಮೇಶ್ವರ್‌

ಪೊಲೀಸರು ಕೂಡಾ ಮಹಿಳೆಯರ ಸಮಸ್ಯೆ ಗಳ ವಿಚಾರದಲ್ಲಿ ಹೆಚ್ಚು ಕಾಳಜಿಯಿಂದ ಕ್ರಮ ವಹಿಸಬೇಕು ಎಂದು ಪರಮೇಶ್ವರ್‌ ಸಲಹೆ ನೀಡಿದರು.

  1. ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು. ಮಹಿಳೆಯರು ತಮ್ಮ ಸಮಸ್ಯೆಗಳ ಕುರಿತು ದೂರು ನೀಡಲು ಠಾಣೆಗೆ ಬಂದರೆ ಕೂಡಲೆ ಸಮಸ್ಯೆಗಳನ್ನು ಆಲಿಸಬೇಕು.
  2. ನಮ್ಮ ಬೆನ್ನಿಗೆ ಪೊಲೀಸರು ಇದ್ದಾರೆ ಎಂಬ ಧೈರ್ಯ ಅವರಲ್ಲಿ ಮೂಡಬೇಕು.
  3. ಅವರ ದೂರುಗಳ ಬಗ್ಗೆ ತಾತ್ಸಾರ ಮಾಡಿದರೆ ಸಹಿಸುವುದಿಲ್ಲ.
  4. ಮಹಿಳೆಯರು ಧೈರ್ಯವಾಗಿದ್ದರೆ ಒಳ್ಳೆ ಆಡಳಿತ, ಜನಸ್ನೇಹಿ ಪೊಲೀಸ್ ಎನಿಸಿಕೊಳ್ಳಲು ಸಾಧ್ಯ.
  5. ಈ ಹಿಂದೆ ಪೊಲೀಸ್ ಸಹಾಯವಾಣಿ ಮೂಲಕ ಬಂದ ದೂರುಗಳನ್ನು ಆಧರಿಸಿ, ಹೋಯ್ಸಳ ಸಿಬ್ಬಂದಿ ಸ್ಥಳಕ್ಕೆ ಹೋಗಲು 20 ನಿಮಿಷ ತೆಗೆದುಕೊಳ್ಳುತ್ತಿದ್ದರು. ಪ್ರಸ್ತುತ 7 ನಿಮಿಷದೊಳಗೆ ಸ್ಥಳದಲ್ಲಿ ಹಾಜರಿರುತ್ತಾರೆ.
  6. ಬೆಂಗಳೂರು ನಗರದಲ್ಲಿ 7,500 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪೊಲೀಸರು ನಿರಂತರ ಕಣ್ಗಾವಲು ಇಟ್ಟಿರುತ್ತಾರೆ.

ಪೊಲೀಸ್‌ ಠಾಣೆಯಲ್ಲಿ ಮಹಿಳಾ ಸಿಬ್ಬಂದಿ ಪ್ರಮಾಣ ಹೆಚ್ಚಬೇಕು

ಈಗಿರುವ ಪೊಲೀಸ್ ಸಿಬ್ಬಂದಿಗಳಲ್ಲಿ ಶೇ.8ರಷ್ಟು ಮಹಿಳೆಯರಿದ್ದಾರೆ. ಶೇ.25ರಷ್ಟಾಗಬೇಕು ಎಂಬುದು ಗುರಿ ಹೊಂದಲಾಗಿದೆ. ಮಹಿಳಾ‌ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನೇಮಿಸಲು ಕ್ರಮ ಕೈಗೊಳ್ಳುವುದಾಗಿ ಜಿ. ಪರಮೇಶ್ವರ್‌ ತಿಳಿಸಿದರು.

ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಶಕ್ತಿ ಹೆಚ್ಚಿಸಬೇಕು ಎಂಬುದು ನಮ್ಮ ಸರ್ಕಾರದ ಉದ್ದೇಶ. ಮಹಿಳೆಯರ ಬಗ್ಗೆ ಅವಹೇಳನ ಮಾಡುವುದು, ಅವಾಚ್ಯ ಮಾತುಗಳನ್ನು ಹಾಗೂ ತಿರುಚಿದ ವೀಡಿಯೋಗಳನ್ನು ಪ್ರಕಟಿಸುವರ ವಿರುದ್ಧ ಕಾನೂನು ರಿತ್ಯ ಕ್ರಮ ಜರುಗಿಸಲಾಗುವುದು ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Palthady Ramakrishna Achar: ತುಳು ಸಾಹಿತಿ, ವಿದ್ವಾಂಸ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Palthady Ramakrishna Achar: ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಪೆರುವಾಜೆಯಲ್ಲಿರುವ ತಮ್ಮ ಮಗಳ ಮನೆಯಲ್ಲಿದ್ದ ಆಚಾರ್‌ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರು ಉಂಟಾಗಿತ್ತು. ತಕ್ಷಣ ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

Palthady Rama krishna achar
Koo

ಪುತ್ತೂರು: ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ(Tulu Sahitya academy)ಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್(Palthady Ramakrishna Achar) ಅವರು ವಿಧಿವಶರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಪೆರುವಾಜೆಯಲ್ಲಿರುವ ತಮ್ಮ ಮಗಳ ಮನೆಯಲ್ಲಿದ್ದ ಆಚಾರ್‌ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರು ಉಂಟಾಗಿತ್ತು. ತಕ್ಷಣ ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಅವರ ಮೃತದೇಹವನ್ನು ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಇಂದು ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಪೆಲತ್ತಾಜೆಯಲ್ಲಿ ಹುಟ್ಟಿ ಹೆಚ್ಚಿನ ಕಾಲವನ್ನು ಪಾಲ್ತಾಡಿಯಲ್ಲಿ ಕಳೆದು ನಿವೃತ್ತಿಯ ಬಳಿಕ ಪುತ್ತೂರಿನ ಬೆದ್ರಾಳದಲ್ಲಿ ನೆಲೆಸಿದ್ದರು.ಬೆಟ್ಟಂಪಾಡಿ, ಪಾಣಾಜೆ ಹಿ.ಪ್ರಾ. ಶಾಲೆ, ಬೆಳ್ಳಾರೆ ಬೋರ್ಡ್‌ ಹೈಸ್ಕೂಲ್ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಶಿಕ್ಷಣ ಪೂರೈಸಿದರು. ಅನಂತರ ಉಜಿರೆಯ ಸರಕಾರಿ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಟಿ.ಸಿ.ಎಚ್‌ ಡಿಪ್ಲೊಮಾ ಮಾಡಿದರು. 1963ರಲ್ಲಿ ಕುಂತೂರು ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಕರಾಗಿ ಸೇವೆಗೆ ಸೇರಿದರು. ಕೆಯ್ಯೂರು, ಕಾವು ಮಾಟ್ನೂರು, ಸಾಮೆತ್ತಡ್ಕ ಮೊದಲಾದ ಕಡೆ ಶಿಕ್ಷಕರಾಗಿ ಸೇವೆ ಸಲ್ಲಿಸಿದರು. ಈ ಮಧ್ಯೆ ಪದವಿ ಶಿಕ್ಷಣ ಪಡೆದು ಬಿ.ಎಡ್‌ ಪದವಿ ಪಡೆದರು. ಅನಂತರ ಧಾರವಾಡ ವಿಶ್ವವಿದ್ಯಾಲಯದಿಂದ ಎಂ.ಎ (ಕನ್ನಡ) ಸ್ನಾತಕೋತ್ತರ ಪದವಿ ಪಡೆದರು. ಹಿಂದಿಯಲ್ಲಿ ರಾಷ್ಟ್ರ ಭಾಷಾವಿಶಾರದಾ ಪದವಿಯನ್ನು ಪೂರ್ಣಗೊಳಿಸಿದ್ದರು. ನಿವೃತ್ತಿ ಆದ ಬಳಿಕ ಸವಣೂರಿನ ವಿದ್ಯಾರಶ್ಮಿ ಶಿಕ್ಷಕ ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಗೌರವ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ವಿಶ್ರಾಂತ ಜೀವನ ನಡೆಸುತ್ತಿದ್ದರು.

ಮಕ್ಕಳ ಕವನ ಸಂಕಲನ, ಕಥಾ ಸಂಕಲನ, ಸಂವಹನ ಮಾಧ್ಯಮವಾಗಿ ಜಾನಪದ, ಜಾನಪದ ಪರಿಸರ, ಜಾನಪದ ವೈದ್ಯ, ಜಾನಪದ ಕುಣಿತ, ದೈವಾರಾಧನೆ, ತುಳುನಾಡಿನ ಸಮಗ್ರ ಪ್ರದರ್ಶನ ಕಲೆ ಮತ್ತು ಸಾಕಷ್ಟು ಧ್ವನಿಸುರುಳಿಗಳಿಗೆ ಸಾಹಿತ್ಯವನ್ನು ಒದಗಿಸಿದ ಪಾಲ್ತಾಡಿ ತುಳು ಭಾಷೆಯ ಬೆಳವಣಿಗೆಯಲ್ಲಿ ವಿಶೇಷ ಪಾತ್ರವಹಿಸಿದರು. ತುಳು ಜಾನಪದ ಕೂಡುಕಟ್ಟು ಅಧ್ಯಕ್ಷರಾಗಿ, ತುಳು ಅಕಾಡಮಿ ರಿಜಿಸ್ಟ್ರಾರ್‌ ಆಗಿ, ಬಾಲವನ ಅಭಿವೃದ್ಧಿ ಸಮಿತಿ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಸಾರ್ವಜನಿಕ ಆಟಿ ಉತ್ಸವ, ಕೆಡ್ಡಸ ಕೂಟವನ್ನು ಪರಿಚಯಿಸಿದ ಹಿರಿಮೆ ಇವರದ್ದು. ಪಠ್ಯಪುಸ್ತಕ ರಚನಾ ಸಮಿತಿ ಸದಸ್ಯರಾಗಿ, ತುಳು ಡಿಪ್ಲೊಮಾ ಕೋರ್ಸ್‌ಗಳಿಗೆ ಪಠ್ಯ ರಚನೆಕಾರರಾಗಿ, ತುಳು ಭಾಷೆಯನ್ನು ಎಂಟನೇ ಪರಿಚ್ಛೇದ ಸೇರಿಸಬೇಕು ಎಂಬ ಆಗ್ರಹದಲ್ಲಿ ಮುಂಚೂಣಿಯಲ್ಲಿ ನಿಂತು ಶ್ರಮಿಸಿದವರು.

ಇದನ್ನೂ ಓದಿ: Flights cancelled: 300 ಸಿಬ್ಬಂದಿ ಸಾಮೂಹಿಕ ರಜೆ; 86 ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನಗಳು ಕ್ಯಾನ್ಸಲ್‌

1979ರಲ್ಲಿ “ಬಾಂಗ್ಲಾ ವಿಜಯ’ ಎಂಬ ಯಕ್ಷಗಾನ ಪ್ರಸಂಗ ಕೃತಿ ಪ್ರಕಟಿಸುವ ಮೂಲಕ ಸಾಹಿತ್ಯ ಕ್ಷೇತ್ರದ ಸೇವೆಯಲ್ಲಿ ತೊಡಗಿದ್ದರು. ವಿವಿಧ ಪತ್ರಿಕೆ-ನಿಯತ ಕಾಲಿಕೆಗಳಲ್ಲಿ ಕತೆ ಕವಿತೆಗಳು ಪ್ರಕಟವಾಗಿವೆ. ಕನ್ನಡ ಸಂಘ, ತುಳು ಸಂಘ, ಯಕ್ಷಗಾನ ಸಂಘ, ಸಮುದಾಯ ಸಂಘ ಇಂತಹ ಕೂಟಗಳನ್ನು ಆರಂಭಿಸಿ ತುಳು ಭಾಷೆಯ ಬೆಳವಣಿಗಾಗಿ ಶ್ರಮಿಸಿ ದರು.

Continue Reading

ಕ್ರೈಂ

Murder Case: ಪ್ರಿಯತಮೆ ಎದುರೇ ಮಹಿಳೆಯ ಅತ್ಯಾಚಾರ ಮಾಡಿ ಕೊಂದ ಪಾಪಿ!

Murder Case: ಕೃತ್ಯ ಎಸಗುವ ಮುನ್ನ ಮಹಿಳೆಗೆ ಚೆನ್ನಾಗಿ ಮದ್ಯ ಕುಡಿಸಿ ಅತ್ಯಾಚಾರ ಎಸಗಿ ಕೊಲೆ (woman murder case) ಮಾಡಲಾಗಿದೆ. ಸಂಜೀವಪ್ಪ ಹಾಗೂ ಆತನ ಪ್ರಿಯತಮೆ ರಾಮಾಂಜಿನಮ್ಮ ಜೊತೆಗೂಡಿ ಈ ಕೊಲೆ ಕೃತ್ಯ ಎಸಗಿದ್ದಾರೆ.

VISTARANEWS.COM


on

chikkaballapur woman murder case
Koo

ಚಿಕ್ಕಬಳ್ಳಾಪುರ: ತನ್ನ ಪ್ರಿಯತಮೆಯ (lover) ಎದುರೇ ಇನ್ನೊಬ್ಬ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ (Physical abuse) ಬರ್ಬರವಾಗಿ ಕೊಲೆ ಮಾಡಿದ (woman Murder case) ಪಾಪಿ ಪ್ರಿಯತಮನನ್ನು ಪೊಲೀಸರು (Chikkaballapur crime news) ಬಂಧಿಸಿದ್ದಾರೆ. ಕೃತ್ಯಕ್ಕೆ ಸಹಕಾರ ನೀಡಿದ ಪ್ರಿಯತಮೆಯನ್ನೂ ಹೆಡೆಮುರಿ ಕಟ್ಟಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಕೊನಗಾನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಅಲುಮೇಲಮ್ಮ (40) ವರ್ಷ ಕೊಲೆಯಾದ‌ ಮಹಿಳೆ‌. ಸಂಜೀವಪ್ಪ ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿ. ಕೃತ್ಯ ಎಸಗುವ ಮುನ್ನ ಮಹಿಳೆಗೆ ಚೆನ್ನಾಗಿ ಮದ್ಯ ಕುಡಿಸಿ ಅತ್ಯಾಚಾರ ಎಸಗಿ ಕೊಲೆ (woman murder case) ಮಾಡಲಾಗಿದೆ. ಸಂಜೀವಪ್ಪ ಹಾಗೂ ಆತನ ಪ್ರಿಯತಮೆ ರಾಮಾಂಜಿನಮ್ಮ ಜೊತೆಗೂಡಿ ಈ ಕೊಲೆ ಕೃತ್ಯ ಎಸಗಿದ್ದಾರೆ.

ಸಂಜೀವಪ್ಪ ಹಾಗೂ ರಾಮಾಂಜಿನಮ್ಮ ನಡುವೆ ಅನೈತಿಕ‌ ಸಂಬಂಧವಿತ್ತು. ಇಬ್ಬರ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಅಲುಮೇಲಮ್ಮ ಅಡ್ಡಿಯಾಗಿದ್ದಳು. ಇದರಿಂದ ಆಕ್ರೋಶಗೊಂಡ ಇಬ್ಬರೂ ಸೇರಿ ಕೊಲೆ ಮಾಡಿರುವ ಅನುಮಾನವಿದೆ. ನಾಲ್ಕು ದಿನಗಳಿಂದ ಅಲುಮೇಲಮ್ಮ ಗ್ರಾಮದಲ್ಲಿ ಕಾಣಿಸಿರಲಿಲ್ಲ. ರಾಮಾಂಜಿನಮ್ಮ ವರ್ತನೆ‌ಯಿಂದ ಅನುಮಾನಗೊಂಡ ಗ್ರಾಮಸ್ಥರು ಆಕೆಯನ್ನು ವಿಚಾರಿಸಿಕೊಂಡಾಗ ಸತ್ಯ ಬಾಯಿಬಿಟ್ಟಿದ್ದಾಳೆ.

ಊರಿನ ಹೊರಗಿನ ಕಾಡುಪ್ರದೇಶದಲ್ಲಿ ಅಲುಮೇಲಮ್ಮ ಶವ ಪತ್ತೆಯಾಗಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದೂರು ದಾಖಲಿಸಿಕೊಂಡ‌ ಕೂಡಲೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾಜಿ ಪ್ರಿಯಕರನಿಂದ ಮಹಿಳೆಯ ಕೊಲೆ, ಕಾರಣ ನಿಗೂಢ

ಬೆಂಗಳೂರು: ರಾಜಧಾನಿಯ ಸುಂಕದಕಟ್ಟೆಯ ಬಳಿ ಮಹಿಳೆಯೊಬ್ಬರು ಮಾಜಿ ಪ್ರಿಯಕರನಿಂದ (woman Murder Case) ಕೊಲೆಯಾಗಿದ್ದಾರೆ. ನಿನ್ನೆ ರಾತ್ರಿ 9:40ರ ಸುಮಾರಿಗೆ ಈ ಹತ್ಯೆ ನಡೆದಿದೆ. ದಿವ್ಯಾ (30) ಕೊಲೆಯಾದ ಮಹಿಳೆ.

ತನ್ನ ಜೊತೆಗಿದ್ದ ಪ್ರಿಯಕರ ಶಾಂತಕುಮಾರ್ ಎಂಬಾತನಿಂದ ದಿವ್ಯಾ ಕೊಲೆಯಾಗಿದ್ದಾರೆ. ನಾಲ್ಕು ವರ್ಷದ ಹಿಂದೆ ಶಾಂತಕುಮಾರ್ ಜೊತೆ ಬಂದಿದ್ದ ದಿವ್ಯಾ ಈ ಮೊದಲು ಕಾಮಾಕ್ಷಿಪಾಳ್ಯದಲ್ಲಿ ಮನೆ ಮಾಡಿದ್ದರು. ಅನಂತರ ಇಬ್ಬರ ಮಧ್ಯೆ ಜಗಳವಾಗಿದ್ದು, ಇದರಿಂದ ಶಾಂತಕುಮಾರ್‌ನನ್ನು ದಿವ್ಯಾ ಬಿಟ್ಟುಬಿಟ್ಟಿದ್ದರು. ಇಬ್ಬರೂ ಮದುವೆಯಾಗಿದ್ದರೇ ಇಲ್ಲವೇ ಎಂಬ ಬಗ್ಗೆ ಅನುಮಾನವಿದೆ.

5 ದಿನದ ಹಿಂದೆ ಸುಂಕದಕಟ್ಟೆಯ ಸೊಲ್ಲಾಪುರಂ ಲೇ ಔಟ್‌ನಲ್ಲಿ ದಿವ್ಯಾ ಬಾಡಿಗೆ ಮನೆ ಮಾಡಿದ್ದರು. ಈಕೆ ಮನೆ ಮಾಡಿದ್ದ ಬಗ್ಗೆ ತಿಳಿದುಕೊಂಡಿದ್ದ ಶಾಂತಕುಮಾರ್ ರಾತ್ರಿ 9:30ರ ಸುಮಾರಿಗೆ ಬಾಡಿಗೆ ಮನೆ ಸಮೀಪ ಬಂದಿದ್ದ. ಅನಂತರ ಚಾಕುವಿನ ಮೂಲಕ ದಿವ್ಯಳ ಎದೆ ಭಾಗಕ್ಕೆ ಚುಚ್ಚಿ ಕೊಲೆ ಮಾಡಿದ್ದಾನೆ. ಇಬ್ಬರೂ ಮೂಲತಃ ಬಿಡದಿಯವರು.

“ರಾತ್ರಿ 9:30 ಸುಮಾರಿಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ನಡೆದಿದೆ. ಕೊಲೆಯಾದ ಮಹಿಳೆ ದಿವ್ಯ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದಳು. 35 ವರ್ಷದ ಶಾಂತಕುಮಾರ್ ಎಂಬಾತನಿಂದ ಕೊಲೆಯಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದು ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ” ಎಂದು ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಹೇಳಿದ್ದಾರೆ.

ಮೆಡಿಕಲ್‌ ಕಾಲೇಜಿನ ಲೇಡಿಸ್‌ ಟಾಯ್ಲೆಟ್‌ನಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣ!

ಮಂಗಳೂರು: ಖಾಸಗಿ ಮೆಡಿಕಲ್ ಕಾಲೇಜೊಂದರ ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ (toilet video) ಮಾಡಿಕೊಂಡಿರುವ ಘಟನೆಯೊಂದು ವರದಿಯಾಗಿದ್ದು, ಅಪ್ರಾಪ್ತ ವಯಸ್ಸಿನ ವ್ಯಕ್ತಿಯನ್ನು ಈ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

toilet video shooting in mangalore

ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಮೇ‌ 6ರಂದು ನಡೆದಿರುವ ಘಟನೆ ಇದಾಗಿದೆ. ಮೆಡಿಕಲ್ ಕಾಲೇಜಿಗೆ ರೋಗಿಯಂತೆ ಬಂದಿದ್ದ ಅಪ್ರಾಪ್ತ ಯುವಕ, ಬಳಿಕ ಲೇಡಿಸ್ ಟಾಯ್ಲೆಟ್‌ಗೆ ಹೋಗಿ ಮೊಬೈಲ್ ಇಟ್ಟಿದ್ದ. ಲೇಡಿಸ್ ಟಾಯ್ಲೆಟ್ ಒಳಗಿನಿಂದ ಮೊಬೈಲ್ ರಿಂಗ್ ಆಗುತ್ತಿರುವುದು ಕೇಳಿಸಿ ವಾಚ್‌ಮನ್ ಪರಿಶೀಲನೆ ಮಾಡಿದಾಗ ಮೊಬೈಲ್ ಪತ್ತೆಯಾಗಿದೆ.

ಈ ಹಿನ್ನೆಲೆಯಲ್ಲಿ ಬಂದರು ಪೊಲೀಸ್ ಠಾಣೆಗೆ ಕಾಲೇಜಿನ ವಾಚ್‌ಮನ್ ದೂರು ನೀಡಿದ್ದರು. ಕಾಲೇಜಿನ ಸಿಸಿಟಿವಿ ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸುಮಾರು ಹದಿನೇಳು ವರ್ಷದ ಅಪ್ರಾಪ್ತ ಯುವಕನಿಂದ ಕೃತ್ಯ ನಡೆದಿದೆ. ಕಾಲೇಜಿನ ಸುತ್ತಮುತ್ತವೇ ಈತ ಸುಳಿದಾಡುತ್ತಿದ್ದುದು ಪತ್ತೆಯಾಗಿದೆ. ಯುವಕನನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ಇತ್ತೀಚೆಗೆ ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ (Nethrajyothi College udupi) ಮೂವರು ಮುಸ್ಲಿಂ ವಿದ್ಯಾರ್ಥಿನಿಯರು (Three Muslim students) ಟಾಯ್ಲೆಟ್‌ನಲ್ಲಿ ಮೊಬೈಲ್‌ (Udupi Toilet Video) ಇಟ್ಟು ಇತರ ಹೆಣ್ಣುಮಕ್ಕಳು ಶೌಚಾಲಯ ಬಳಸುವುದನ್ನು ಚಿತ್ರೀಕರಿಸಿಕೊಂಡ (mobile shooting at Ladies toilet) ಪ್ರಕರಣವನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಈ ಪ್ರಕರಣದಲ್ಲಿ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದಲ್ಲದೆ, ರಾಷ್ಟ್ರೀಯ ಸುದ್ದಿಯಾಗಿಯೂ ಬಿತ್ತರಗೊಂಡಿತ್ತು.

ಇದನ್ನೂ ಓದಿ: Murder Case: ಬೆಂಗಳೂರಿನಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ; ನಡು ರಸ್ತೆಯಲ್ಲೇ ಅಟ್ಟಾಡಿಸಿ ಕೊಲೆ

Continue Reading

ಕ್ರೈಂ

Toilet Video: ಮೆಡಿಕಲ್‌ ಕಾಲೇಜಿನ ಲೇಡಿಸ್‌ ಟಾಯ್ಲೆಟ್‌ನಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣ!

Toilet Video: ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಮೇ‌ 6ರಂದು ನಡೆದಿರುವ ಘಟನೆ ಇದಾಗಿದೆ. ಮೆಡಿಕಲ್ ಕಾಲೇಜಿಗೆ ರೋಗಿಯಂತೆ ಬಂದಿದ್ದ ಅಪ್ರಾಪ್ತ ಯುವಕ, ಬಳಿಕ ಲೇಡಿಸ್ ಟಾಯ್ಲೆಟ್‌ಗೆ ಹೋಗಿ ಮೊಬೈಲ್ ಇಟ್ಟಿದ್ದ.

VISTARANEWS.COM


on

toilet video shooting in mangalore
Koo

ಮಂಗಳೂರು: ಖಾಸಗಿ ಮೆಡಿಕಲ್ ಕಾಲೇಜೊಂದರ (Private Medical College) ಲೇಡಿಸ್ ಟಾಯ್ಲೆಟ್‌ನಲ್ಲಿ (Ladies toilet) ಮೊಬೈಲ್ ಇಟ್ಟು ವಿದ್ಯಾರ್ಥಿನಿಯರ ವಿಡಿಯೋ (Toilet Video) ಚಿತ್ರೀಕರಣ ಮಾಡಿಕೊಂಡಿರುವ ಘಟನೆಯೊಂದು ವರದಿಯಾಗಿದ್ದು, ಅಪ್ರಾಪ್ತ ವಯಸ್ಸಿನ ವ್ಯಕ್ತಿಯನ್ನು ಈ ಪ್ರಕರಣದಲ್ಲಿ ಪೊಲೀಸರು (Crime news) ಬಂಧಿಸಿದ್ದಾರೆ.

ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಮೇ‌ 6ರಂದು ನಡೆದಿರುವ ಘಟನೆ ಇದಾಗಿದೆ. ಮೆಡಿಕಲ್ ಕಾಲೇಜಿಗೆ ರೋಗಿಯಂತೆ ಬಂದಿದ್ದ ಅಪ್ರಾಪ್ತ ಯುವಕ, ಬಳಿಕ ಲೇಡಿಸ್ ಟಾಯ್ಲೆಟ್‌ಗೆ ಹೋಗಿ ಮೊಬೈಲ್ ಇಟ್ಟಿದ್ದ. ಲೇಡಿಸ್ ಟಾಯ್ಲೆಟ್ ಒಳಗಿನಿಂದ ಮೊಬೈಲ್ ರಿಂಗ್ ಆಗುತ್ತಿರುವುದು ಕೇಳಿಸಿ ವಾಚ್‌ಮನ್ ಪರಿಶೀಲನೆ ಮಾಡಿದಾಗ ಮೊಬೈಲ್ ಪತ್ತೆಯಾಗಿದೆ.

ಈ ಹಿನ್ನೆಲೆಯಲ್ಲಿ ಬಂದರು ಪೊಲೀಸ್ ಠಾಣೆಗೆ ಕಾಲೇಜಿನ ವಾಚ್‌ಮನ್ ದೂರು ನೀಡಿದ್ದರು. ಕಾಲೇಜಿನ ಸಿಸಿಟಿವಿ ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸುಮಾರು ಹದಿನೇಳು ವರ್ಷದ ಅಪ್ರಾಪ್ತ ಯುವಕನಿಂದ ಕೃತ್ಯ ನಡೆದಿದೆ. ಕಾಲೇಜಿನ ಸುತ್ತಮುತ್ತವೇ ಈತ ಸುಳಿದಾಡುತ್ತಿದ್ದುದು ಪತ್ತೆಯಾಗಿದೆ. ಯುವಕನನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ಇತ್ತೀಚೆಗೆ ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ (Nethrajyothi College udupi) ಮೂವರು ಮುಸ್ಲಿಂ ವಿದ್ಯಾರ್ಥಿನಿಯರು (Three Muslim students) ಟಾಯ್ಲೆಟ್‌ನಲ್ಲಿ ಮೊಬೈಲ್‌ (Udupi Toilet Video) ಇಟ್ಟು ಇತರ ಹೆಣ್ಣುಮಕ್ಕಳು ಶೌಚಾಲಯ ಬಳಸುವುದನ್ನು ಚಿತ್ರೀಕರಿಸಿಕೊಂಡ (mobile shooting at Ladies toilet) ಪ್ರಕರಣವನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಈ ಪ್ರಕರಣದಲ್ಲಿ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದಲ್ಲದೆ, ರಾಷ್ಟ್ರೀಯ ಸುದ್ದಿಯಾಗಿಯೂ ಬಿತ್ತರಗೊಂಡಿತ್ತು.

ಮಾಜಿ ಪ್ರಿಯಕರನಿಂದ ಮಹಿಳೆಯ ಕೊಲೆ, ಕಾರಣ ನಿಗೂಢ

ಬೆಂಗಳೂರು: ರಾಜಧಾನಿಯ ಸುಂಕದಕಟ್ಟೆಯ ಬಳಿ ಮಹಿಳೆಯೊಬ್ಬರು ಮಾಜಿ ಪ್ರಿಯಕರನಿಂದ (woman Murder Case) ಕೊಲೆಯಾಗಿದ್ದಾರೆ. ನಿನ್ನೆ ರಾತ್ರಿ 9:40ರ ಸುಮಾರಿಗೆ ಈ ಹತ್ಯೆ ನಡೆದಿದೆ. ದಿವ್ಯಾ (30) ಕೊಲೆಯಾದ ಮಹಿಳೆ.

ತನ್ನ ಜೊತೆಗಿದ್ದ ಪ್ರಿಯಕರ ಶಾಂತಕುಮಾರ್ ಎಂಬಾತನಿಂದ ದಿವ್ಯಾ ಕೊಲೆಯಾಗಿದ್ದಾರೆ. ನಾಲ್ಕು ವರ್ಷದ ಹಿಂದೆ ಶಾಂತಕುಮಾರ್ ಜೊತೆ ಬಂದಿದ್ದ ದಿವ್ಯಾ ಈ ಮೊದಲು ಕಾಮಾಕ್ಷಿಪಾಳ್ಯದಲ್ಲಿ ಮನೆ ಮಾಡಿದ್ದರು. ಅನಂತರ ಇಬ್ಬರ ಮಧ್ಯೆ ಜಗಳವಾಗಿದ್ದು, ಇದರಿಂದ ಶಾಂತಕುಮಾರ್‌ನನ್ನು ದಿವ್ಯಾ ಬಿಟ್ಟುಬಿಟ್ಟಿದ್ದರು. ಇಬ್ಬರೂ ಮದುವೆಯಾಗಿದ್ದರೇ ಇಲ್ಲವೇ ಎಂಬ ಬಗ್ಗೆ ಅನುಮಾನವಿದೆ.

5 ದಿನದ ಹಿಂದೆ ಸುಂಕದಕಟ್ಟೆಯ ಸೊಲ್ಲಾಪುರಂ ಲೇ ಔಟ್‌ನಲ್ಲಿ ದಿವ್ಯಾ ಬಾಡಿಗೆ ಮನೆ ಮಾಡಿದ್ದರು. ಈಕೆ ಮನೆ ಮಾಡಿದ್ದ ಬಗ್ಗೆ ತಿಳಿದುಕೊಂಡಿದ್ದ ಶಾಂತಕುಮಾರ್ ರಾತ್ರಿ 9:30ರ ಸುಮಾರಿಗೆ ಬಾಡಿಗೆ ಮನೆ ಸಮೀಪ ಬಂದಿದ್ದ. ಅನಂತರ ಚಾಕುವಿನ ಮೂಲಕ ದಿವ್ಯಳ ಎದೆ ಭಾಗಕ್ಕೆ ಚುಚ್ಚಿ ಕೊಲೆ ಮಾಡಿದ್ದಾನೆ. ಇಬ್ಬರೂ ಮೂಲತಃ ಬಿಡದಿಯವರು.

“ರಾತ್ರಿ 9:30 ಸುಮಾರಿಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ನಡೆದಿದೆ. ಕೊಲೆಯಾದ ಮಹಿಳೆ ದಿವ್ಯ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದಳು. 35 ವರ್ಷದ ಶಾಂತಕುಮಾರ್ ಎಂಬಾತನಿಂದ ಕೊಲೆಯಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದು ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ” ಎಂದು ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಹೇಳಿದ್ದಾರೆ.

ಅಟ್ಟಾಡಿಸಿ ಕೊಚ್ಚಿ ರೌಡಿಶೀಟರ್‌ ಕೊಲೆ

Murder Case

ಬೆಂಗಳೂರು: ನಡು ರಸ್ತೆಯಲ್ಲೇ ರೌಡಿಶೀಟರ್‌ನ ಅಟ್ಟಾಡಿಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಭೀಕರ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ರೌಡಿಶೀಟರ್‌ ಪ್ರಾಣ ಬಿಟ್ಟಿದ್ದು, ಘಟನಾ ಸ್ಥಳಕ್ಕೆ ಬಾಣಸವಾಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರ್ತಿಗೇಯನ್ (40) ಕೊಲೆಯಾದವ. ಮೃತ ವ್ಯಕ್ತಿ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್, ಬಾಣಸವಾಡಿ ಪೊಲೀಸ್ ಠಾಣೆಯ ರೌಡಿ ಶೀಟ್‌ ದಾಖಲಾಗಿತ್ತು. ಎರಡು ವರ್ಷಗಳ ಹಿಂದೆ ರೌಡಿಶೀಟ್‌ನಿಂದ ಕೈ ಬಿಡಲಾಗಿತ್ತು. ಈ ಹಿಂದೆ ಬಾಣಸವಾಡಿ ಪೊಲೀಸರಿಂದ ರೌಡಿಶೀಟರ್‌ ಕಾರ್ತಿಗೇಯನ್ ಗಡಿಪಾರಾಗಿದ್ದ. ಮತ್ತೆ ಬೆಂಗಳೂರಿಗೆ ಬಂದು‌ ಬಾಣಸವಾಡಿಯಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದ ಕಚೇರಿ ತೆರೆದಿದ್ದ. ಆದರೆ, ಮಂಗಳವಾರ ರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: Murder Case: ಬೆಂಗಳೂರಿನಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ; ನಡು ರಸ್ತೆಯಲ್ಲೇ ಅಟ್ಟಾಡಿಸಿ ಕೊಲೆ

Continue Reading

ಮಳೆ

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರಿಸಲಿದ್ದು, ವಿವಿಧ ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಘೋಷಿಸಲಾಗಿದೆ. ಮಳೆ ನಡುವೆಯೂ ಕೆಲವು ಜಿಲ್ಲೆಗಳಿಗೆ ಹೀಟ್‌ ವೇವ್‌ ವಾರ್ನಿಂಗ್‌ ಅನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬಿರುಗಾಳಿ ಜತೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ 40-50 ಕಿ.ಮೀ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆ ಜತೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನೂ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಹೀಟ್‌ ವೇವ್‌ ವಾರ್ನಿಂಗ್‌

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Akshaya Tritiya Jewellery
ಫ್ಯಾಷನ್15 mins ago

Akshaya Tritiya Jewellery: ಅಕ್ಷಯ ತೃತೀಯಕ್ಕೆ ಬಂದಿವೆ ವೈವಿಧ್ಯಮಯ ಫ್ಯಾಷನ್‌ ಜ್ಯುವೆಲರಿಗಳು!

Narendra Modi
ದೇಶ20 mins ago

Narendra Modi: ಅಂಬಾನಿ, ಅದಾನಿಯಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಹಣ; ಮೋದಿ ತಿರುಗುಬಾಣ!

Apple New Products
ಗ್ಯಾಜೆಟ್ಸ್25 mins ago

Apple New Products: ಐಪ್ಯಾಡ್ ಪ್ರೊನಿಂದ ಪೆನ್ಸಿಲ್ ಪ್ರೊವರೆಗೆ; 2024ರ ಆಪಲ್‌ ಹೊಸ ಉತ್ಪನ್ನಗಳಿವು

State Education Policy
ಕರ್ನಾಟಕ27 mins ago

State Education Policy: 3 ವರ್ಷದ ಪದವಿಗೆ ರಾಜ್ಯ ಸರ್ಕಾರ ಅಸ್ತು; ಎಸ್‌ಇಪಿ ಆಯೋಗದ ಶಿಫಾರುಸುಗಳ ಅನ್ವಯ ಆದೇಶ

Actor Ravichandran female lead in ravichandrans premaloka 2
ಸ್ಯಾಂಡಲ್ ವುಡ್30 mins ago

Actor Ravichandran: ಕನಸುಗಾರನ ʻಪ್ರೇಮಲೋಕ 2’ ಚಿತ್ರಕ್ಕೆ ನಾಯಕಿ ಫಿಕ್ಸ್‌!

Prajwal Revanna Case Two additional SPPs appointed for SIT cases
ಕ್ರೈಂ34 mins ago

Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇಬ್ಬರು ಹೆಚ್ಚುವರಿ ಎಸ್‌ಪಿಪಿ ನೇಮಕ; ರಾಜ್ಯ ಸರ್ಕಾರದ ಮಹತ್ವದ ಆದೇಶ

Paris Olympics 2024
ಕ್ರೀಡೆ56 mins ago

Paris Olympics 2024: 19ನೇ ಶತಮಾನದ ಹಡಗಿನಲ್ಲಿ ಇಂದು ಫ್ರಾನ್ಸ್‌ಗೆ ಬರಲಿದೆ ಒಲಿಂಪಿಕ್‌ ಜ್ಯೋತಿ

Chicken Shawarma
ಪ್ರಮುಖ ಸುದ್ದಿ1 hour ago

Chicken Shawarma: ಬೀದಿ ಬದಿ ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು; ಚಿಕನ್‌ ಪ್ರಿಯರೇ ಎಚ್ಚರ!

Thug Life Simbu is the new gun wielding gangster in town
South Cinema1 hour ago

Thug Life Movie: ಕಮಲ್‌ ಹಾಸನ್‌ ಸಿನಿಮಾಗೆ ಕಾಲಿವುಡ್‌ ನಟ ಸಿಂಬು ಎಂಟ್ರಿ!

Viral video
ವೈರಲ್ ನ್ಯೂಸ್1 hour ago

Viral Video: ಅಂಬಾನಿಗಿಂತಲೂ ರಿಚ್‌ ಈತ.. ಗದ್ದೆ ಉಳುಮೆಗೆ 20 ಲಕ್ಷದ ಕಾರೇ ಬೇಕು..!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ20 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ23 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌