Anil John Sequeira : ಬಂಟ್ವಾಳ ಯುವಕನ ಅಪರೂಪದ ಸಾಧನೆ; 25ನೇ ವಯಸ್ಸಿಗೆ ನ್ಯಾಯಾಧೀಶರಾಗಿ ಆಯ್ಕೆ - Vistara News

ದಕ್ಷಿಣ ಕನ್ನಡ

Anil John Sequeira : ಬಂಟ್ವಾಳ ಯುವಕನ ಅಪರೂಪದ ಸಾಧನೆ; 25ನೇ ವಯಸ್ಸಿಗೆ ನ್ಯಾಯಾಧೀಶರಾಗಿ ಆಯ್ಕೆ

Anil John Sequeira : ಬಂಟ್ವಾಳ ಮೂಲದ ಯುವಕನೊರ್ವ ಕರ್ನಾಟಕದ ಅತ್ಯಂತ ಕಿರಿಯ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ.

VISTARANEWS.COM


on

Anil John Sequeira youngest judge in Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಅನಿಲ್ ಜಾನ್ ಸಿಕ್ವೇರಾ (Anil John Sequeira) ಎಂಬುವವರು 25ನೇ ವಯಸ್ಸಿಗೆ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ರಾಜ್ಯದ ಅತ್ಯಂತ ಕಿರಿಯ ನ್ಯಾಯಾಧೀಶ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

ಕಿರಿಯ ಸಿವಿಲ್‌ ನ್ಯಾಯಧೀಶರಾಗಿ ಸೇವೆ ಸಲ್ಲಿಸಲಿರುವ ಅನಿಲ್ ಜಾನ್ ಸಿಕ್ವೇರಾ, ಪ್ರಿಲಿಮ್ಸ್, ಮೇನ್ಸ್ ಹಾಗೂ ಸಂದರ್ಶನ ಹೀಗೆ 2023ರ ಕರ್ನಾಟಕ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕರ್ನಾಟಕದ ನ್ಯಾಯಾಂಗ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ.

ಇದನ್ನೂ ಓದಿ: Kodagu News : ಮಸೀದಿಯಲ್ಲಿ ನಮಾಜ್‌ ಮಾಡಿದ ಮಹಿಳೆಗೆ ಗ್ರಾಮದಿಂದಲೇ ಬಹಿಷ್ಕಾರ; ಪತಿ ಅಂತ್ಯಕ್ರಿಯೆಗೂ ನಕಾರ

ಕೃಷಿಕರಾದ ಎವರೆಸ್ಟ್ ಸಿಕ್ವೇರಾ ಮತ್ತು ಐವಿ ಸಿಕ್ವೇರಾ ದಂಪತಿಯ ಮೂವರು ಮಕ್ಕಳಲ್ಲಿ ಕಿರಿಯ ಮಗನಾಗಿರುವ ಅನಿಲ್ ಚಿಕ್ಕಂದಿನಿಂದಲೂ ಪ್ರತಿಭಾನ್ವಿತ ವಿದ್ಯಾರ್ಥಿ ಆಗಿದ್ದರು. ಪುತ್ತೂರು ಸಂತ ಫಿಲೋಮಿನಾ ಕಾಲೇಜು ಮತ್ತು ಎಸ್‌ಡಿಎಂ ಕಾನೂನು ಕಾಲೇಜಿನ ಹಳೇಯ ವಿದ್ಯಾರ್ಥಿ ಆಗಿದ್ದಾರೆ. ತಮ್ಮ 25ನೇ ವಯಸ್ಸಿನಲ್ಲಿ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಕರ್ನಾಟಕದ ಅತ್ಯಂತ ಕಿರಿಯ ನ್ಯಾಯಾಧೀಶರಾಗಿದ್ದಾರೆ.

ಅನಿಲ್‌ ಜಾನ್‌ ಸಿಕ್ವೇರಾರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ ಎಂದು ಮಂಗಳೂರಿನ ನ್ಯಾಯವಾದಿ ದೀಪಕ್‌ ಡಿಸೋಜ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ದೀಪಕ್‌ ಡಿಸೋಜರ ಬಳಿಯೇ ಮಂಗಳೂರಿನಲ್ಲಿ ಅನಿಲ್‌ ತರಬೇತಿ ಪಡೆಯುತ್ತಿದ್ದರು. ಮಂಗಳೂರು ಬಾರ್‌ ಅಸೋಸಿಯೇಶನ್‌ನ ಸದಸ್ಯರೂ ಆಗಿದ್ದ ಅನಿಲ್‌ ಶಾಲಾ ದಿನದಲ್ಲೇ ಉತ್ತಮ ನಾಯಕತ್ವ ಗುಣಗಳನ್ನು ಹೊಂದಿದ್ದರು.

ಪ್ರೌಢ ಶಿಕ್ಷಣದಲ್ಲಿ ಇದ್ದಾಗಲೇ ಪೀಪಲ್ ಲೀಡರ್ ಆಗಿದ್ದರು. ಕಾಲೇಜಿನಲ್ಲೂ ವಿದ್ಯಾರ್ಥಿ ನಾಯಕರಾಗಿ ಸೇವೆ ಸಲ್ಲಿಸಿದ್ದ ಅನಿಲ್ ವಿವಿಧ ಸಮಿತಿಗಳ ಪ್ರಮುಖ ಸದಸ್ಯರಾಗಿ ಮಂಗಳೂರಿನಲ್ಲಿ ಗುರುತಿಸಿಕೊಂಡಿದ್ದರು. ಇಷ್ಟೇ ಅಲ್ಲದೇ 2022ರ ಜುಲೈ 25ರಂದು ಮಂಗಳೂರಿನ ಧರ್ಮಪ್ರಾಂತ್ಯದ ಇಂಡಿಯನ್‌ ಕ್ಯಾಥೋಲಿಕ್ ಯೂತ್‌ ಮೂವ್‌ಮೆಂಟ್‌ ( ICMY) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Bengaluru Rains: ಬೆಂಗಳೂರು ಸುತ್ತಮುತ್ತ ಗಾಳಿ ಜತೆಗೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ದೇವಸ್ಥಾನ ಜೀರ್ಣೋದ್ಧಾರದಲ್ಲಿ ಊಟ ಮಾಡುತ್ತಿದ್ದಾಗ ದಿಢೀರ್‌ ಮಳೆಯಿಂದ ಜನರು ಊಟ ಬಿಟ್ಟು ಓಡಿ ಹೋದರು. ಟೇಬಲ್ ಮೇಲಿನ ಊಟವೆಲ್ಲ ನೀರುಪಾಲಾಗಿತ್ತು‌. ಕೆಲವೆಡೆ ಮಳೆ ಅನಾಹುತಗಳು ಸಂಭವಿಸಿವೆ.

VISTARANEWS.COM


on

By

Bengaluru Rains
Koo

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ (Karnataka Rains) ಬಿರುಗಾಳಿ ಸಹಿತ ಮಳೆ ಬಂದು ಹೋಯಿತು. ಆದರೆ ರಾಜಧಾನಿ ಬೆಂಗಳೂರಲ್ಲಿ ಒಂದು ಸಣ್ಣ ಹನಿಯು (Karnataka weather Forecast) ಬೀಳಲಿಲ್ಲ. ಬೆಂಗಳೂರು ಕರಗ ಸಮಯದಲ್ಲಿ ಸಣ್ಣ ಪ್ರಮಾಣದಲ್ಲಿ ಆದರೂ ಮಳೆ ಬಂದೇ ಬರುತ್ತೆ ಎಂಬ ನಂಬಿಕೆ ಇದೆ. ಆದರೆ ಆಗಲೂ ಮಳೆಯು ಕಾಣಲಿಲ್ಲ. ಇದೀಗ ಬಿಸಿಲ ಧಗೆಯಿಂದ ಸುಸ್ತಾಗಿದ್ದ ಮಂದಿಗೆ ಮಳೆಯು ತನ್ನ ಭರ್ಜರಿ ಪ್ರದರ್ಶನ (Bengaluru Rains) ತೋರಿದೆ.

ಲೇಟ್‌ ಆದರೂ ಲೇಟೆಸ್ಟ್‌ ಆಗಿ ಮಳೆರಾಯ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದಾನೆ. ಇದರಿಂದಾಗಿ ಸೋಶಿಯಲ್‌ ಮೀಡಿಯಾದಲ್ಲಿ ನೆಟ್ಟಿಗರು ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್ ಎಂದು ಬೆಂಗಳೂರಿಗರಿಗೆ ವಿಷ್‌ ಮಾಡಿದ್ದಾರೆ. ಜತೆಗೆ ಟ್ವಿಟರ್‌, ಇನ್ಸ್ಟಾಗ್ರಾಂನಲ್ಲಿ Bengaluru rains ಹ್ಯಾಶ್‌ ಟ್ಯಾಗ್‌ ಹಾಕಿ ಸಂತಸವನ್ನು ಹಂಚಿಕೊಳ್ಳುತ್ತಿದ್ದಾರೆ. ಅಂತೂ-ಇಂತೂ ಬೆಂಗಳೂರಲ್ಲಿ ಮಳೆ ಬಂತಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದಾರೆ.

ಶಿವಾಜಿನಗರ, ಮಲ್ಲೇಶ್ವರಂ, ವಿಧಾನಸೌಧ, ರಾಜಾಜಿನಗರ, ರೇಸ್ ಕೋರ್ಸ್, ಮೆಜೆಸ್ಟಿಕ್, ಮಹಾರಾಣಿ ಕಾಲೇಜು, ಸಿಐಡಿ ಆಫೀಸ್, ಪ್ಯಾಲೇಸ್ ರಸ್ತೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಮಧ್ಯಾಹ್ನ ಮೂರು ಗಂಟೆ ಸಮಯವು ರಾತ್ರಿಯಂತೆ ಕತ್ತಲೆ ಆವರಿಸಿತ್ತು. ದಿಢೀರ್ ಮಳೆಗೆ ದ್ವಿಚಕ್ರ ವಾಹನ ಸವಾರರು ಸೇತುವೆ ಕೆಳಗೆ ಹಾಗೂ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದರು.

Bengaluru Rains

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ

ಇನ್ನೂ ಬೆಂಗಳೂರಿನ ಆರ್‌.ಟಿ‌ ನಗರದಲ್ಲಿ ಮರವು ಉರುಳಿ ಬಿದ್ದಿತ್ತು. ಇನೋವಾ ಹಾಗೂ ಓಮಿನಿ ಕಾರು ಜಖಂಗೊಂಡಿತ್ತು. ರವೀಂದ್ರನಾಥ್ ಠಾಗೋರ್ ಸರ್ಕಲ್‌ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿತ್ತು. ಅದೃಷ್ಟವಶಾತ್‌ ಕಾರಿನಲ್ಲಿ ಇದ್ದವರಿಗೆ ಯಾವುದೇ ತೊಂದರೆ ಆಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ, ಬಿಬಿಎಂಪಿ ಸಿಬ್ಬಂದಿ ದೌಡಾಯಿಸಿದ್ದು, ಮರ ತೆರವು ಮಾಡುತ್ತಿದ್ದಾರೆ. ಇತ್ತ ಕೊತ್ತನೂರು ಬಳಿ ಕಾರಿನ ಮೇಲೆ ವಿದ್ಯುತ್‌ ಕಂಬ ಬಿದ್ದು ಕಾರಿನ ಬ್ಯಾನೆಟ್ ಹಾಳಾಗಿತ್ತು. ವಿದ್ಯುತ್‌ ಕಂಬ ಕಳಚಿ ಬಿದ್ದ ಕಾರಣ ಕರೆಂಟ್‌ ಕಟ್ಟ್‌ ಆಗಿತ್ತು.

Bengaluru Rains

ಮೈಸೂರು, ಮಂಡ್ಯದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ

ಮಂಡ್ಯದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗುತ್ತಿದೆ. ಹಲವು ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ಮಂಡ್ಯ ಜನರು ಖುಷಿಯಾಗಿದ್ದಾರೆ. ಭಾರಿ ಶಬ್ಧದೊಂದಿಗೆ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದೆ. ಮೈಸೂರಿನಲ್ಲಿ ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಜನರಿಗೆ ವರುಣ ಸಿಂಚನವಾಗಿದೆ. ತಿ.ನರಸೀಪುರ ತಾಲೂಕಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ಕೆಲವೆಡೆ ಜೋರು ಗಾಳಿ ನಡುವೆ ಆಲಿಕಲ್ಲು ಮಳೆಯಾಗಿದೆ.

ಟ್ರಾನ್ಸ್ ಫಾರ್ಮರ್ ಸ್ಫೋಟ

ಬೆಂಗಳೂರಿನ ಐಟಿಐ ಲೇಔಟ್‌ನಲ್ಲಿ ಮಳೆಗೆ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದೆ. ಗಾಳಿ ಮಳೆಗೆ ಮರಗಳ ಎಲೆ ತಾಗಿ ಟ್ರಾನ್ಸ್ ಫಾರ್ಮನರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಬ್ಲಾಸ್ಟ್‌ ಆಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟ್ರಾನ್ಸ್‌ಫಾರ್ಮನರ್‌ ಸ್ಫೋಟದಿಂದಾಗಿ ವಿದ್ಯುತ್‌ ಕಡಿತವಾಗಿದೆ.

ಹೊಸಕೋಟೆಯಲ್ಲೂ ಬಿರುಗಾಳಿ ಮಳೆ

ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗಿದೆ. ವರ್ಷದ ಮೊದಲ ಮಳೆ ಕಂಡು ಜನರು ಸಂತಸಗೊಂಡಿದ್ದಾರೆ. ಇನ್ನೂ ಗಾಳಿ ಸಹಿತ ಮಳೆಯಿಂದಾಗಿ ದೇವಸ್ಥಾನ ಜೀರ್ಣೋದ್ಧಾರದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಲ್ ಎಲ್ಲಾ ಚೆಲ್ಲಾಪಿಲ್ಲಿಯಾಗಿದ್ದವು. ಊಟ ಮಾಡುತ್ತಿದ್ದವರೆಲ್ಲೂ ಎಲೆ ಬಿಟ್ಟು, ಓಡಿ ಹೋದರು. ಟೇಬಲ್ ಮೇಲಿನ ಊಟವೆಲ್ಲ ನೀರುಪಾಲಾಗಿತ್ತು‌. ಹೊಸಕೋಟೆ ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಚಾಮರಾಜನಗರದಲ್ಲೂ ಮಳೆಯ ಸಿಂಚನ

ಚಾಮರಾಜನಗರದಲ್ಲೂ ವರುಣ ಭೂ ಸ್ಪರ್ಶಿಸಿದ್ದಾನೆ. ಚಾಮರಾಜನಗರ ತಾಲೂಕಿನ ಅಂಕಶೆಟ್ಟಿಪುರ, ಚೆನ್ನಪ್ಪಪುರ, ಅರಕಲವಾಡಿ ವೆಂಕಟಯ್ಯನ ಛತ್ರ ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಬೇಸಿಗೆಯಿಂದ ಬೇಸತ್ತಿದ್ದ ರೈತರ ಮುಖದಲ್ಲಿ ಕೊಂಚ ಮಂದಹಾಸ ಮೂಡಿದೆ. ಚಾಮರಾಜನಗರ ತಾಲೂಕಿನ ತಮ್ಮಡಹಳ್ಳಿ, ಉಡಿಗಾಲ, ಕೆಂಗಾಕಿ, ಕುಮಚಹಳ್ಳಿ ಗ್ರಾಮದಲ್ಲಿ ಗಾಳಿಯ ಅಬ್ಬರದೊಂದಿಗೆ ಮಳೆಯಾಗಿದೆ.

ರಾಮನಗರದಲ್ಲೂ ತಂಪೆರೆದ ಮಳೆ

ಬರಗಾಲದಿಂದ ಬೇಸತ್ತಿದ್ದ ರೇಷ್ಮೆನಾಡು ರಾಮನಗರ ಜಿಲ್ಲೆಯಲ್ಲೂ ಹಲವೆಡೆ ವರುಣ ದರ್ಶನ ಕೊಟ್ಟಿದ್ದಾನೆ. ಗುಡುಗು ಸಹಿತ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಪೂರ್ವಜರ ನಂಬಿಕೆಯಂತೆ ಭರಣಿ ಮಳೆ ಆಗಮಿಸಿದೆ. ಭರಣಿ ಮಳೆ ಬಂದರೆ ರೈತರ ಕೃಷಿ ಚುಟುವಟಿಕೆ ಆರಂಭಿಸಲು ಯಶಸ್ವಿ ಎಂಬ ನಂಬಿಕೆ ಇದೆ. ಸದ್ಯ ಭರಣಿ ಮಳೆಯ ಸಿಂಚನದಿಂದ ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿದೆ.

ಆಲಿಕಲ್ಲು ಸಹಿತ ಮಳೆಯಾರ್ಭಟ

ಇನ್ನೂ ರಾಜ್ಯ ಗಡಿ ಡೆಂಕಣಿಕೋಟೆ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ತಮಿಳುನಾಡಿನ ಡೆಂಕಣಿಕೋಟೆ, ಹೊಸೂರು, ಸೂಲಗಿರಿ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಆನೇಕಲ್, ಎಲೆಕ್ಟ್ರಾನಿಕ್ ಸಿಟಿ, ಚಂದಾಪುರ, ಅತ್ತಿಬೆಲೆ, ಹೆಬ್ಬಗೋಡಿ ಸೇರಿದಂತೆ ಜೋರು ಮಳೆಯಾಗುತ್ತಿದೆ.

Bengaluru rains

ಬ್ಯಾರಿಕೇಟ್‌ ಹಾಕಿ ಅಂಡರ್‌ಪಾಸ್‌ ಕ್ಲೋಸ್‌

ಅರ್ಧ ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಯಿಂದಾಗಿ ಬೆಂಗಳೂರಿನ ರಸ್ತೆಗಳು ನದಿಯಂತಾಗಿತ್ತು. ವಿಧಾನಸೌಧ ಪಕ್ಕದಲ್ಲಿರುವ ಎಂ.ಎಸ್ ಬಿಲ್ಡಿಂಗ್ ಸುತ್ತಮುತ್ತಲಿನ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಎಂಎಸ್‌ ಬಿಲ್ಡಿಂಗ್‌ ಸಮೀಪವೇ ಇರುವ ಅಂಡರ್ ಪಾಸ್‌ಗಳಿಗೆ ಬ್ಯಾರಿಕೇಟ್ ಹಾಕಿ ಕ್ಲೋಸ್ ಮಾಡಲಾಗಿದೆ.

ಧರೆಗೆ ಬಿದ್ದ ಮರಗಳು

ಮಳೆಯಿಂದ ಬೆಂಗಳೂರು ನಗರದಲ್ಲಿ ಮೂರು ಕಡೆ ಬೃಹತ್ ಗಾತ್ರದ ಮರ ಧರೆಗೆ ಬಿದ್ದಿದೆ. ಕೆ.ಆರ್.ಪುರಂನ ಕಸ್ತೂರಿ ನಗರ, ಆರ್‌ಟಿ ನಗರದಲ್ಲಿ ಮಳೆಗೆ ಮರ ಬಿದ್ದಿದೆ. ಇನ್ನೂ ನಾರಾಯಣಪುರದಲ್ಲಿ ಮರ ಬಿದ್ದು, ಕಾರು, ಬೈಕ್ ಜಖಂಗೊಂಡಿದೆ. ಸದ್ಯ ರಸ್ತೆಗೆ ಬಿದ್ದಿದ ಮರವನ್ನು ಬಿಬಿಎಂಪಿ ಸಿಬ್ಬಂದಿ ತೆರವು ಮಾಡಿದ್ದಾರೆ. ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣದ ಎಟಿಎಂ (ATM) ಕೊಠಡಿ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಯಂಕರ ಬಿಸಿಲಿನಲ್ಲೂ ಮಳೆ ಸೂಚನೆ ಕೊಟ್ಟ ಹವಾಮಾನ ತಜ್ಞರು

karnataka Weather Forecast: ಸುಡುವ ಬಿಸಿಲಿನಲ್ಲೂ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಉತ್ತರ ಒಳನಾಡಲ್ಲಿ ಶುಷ್ಕ ವಾತಾವರಣ ಇದ್ದರೆ, ಮಲೆನಾಡು ಹಾಗೂ ದಕ್ಷಿಣ ಒಳನಾಡಲ್ಲಿ ಮಳೆಯಾಗಲಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆಯಿದೆ. ಹಲವೆಡೆ ಗುಡುಗು ಸಹಿತ ಮಳೆ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸಚೂನೆಯನ್ನು (Karnataka Weather Forecast) ನೀಡಿದೆ. ರಾಜ್ಯದ ಉಳಿದೆಡೆ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ರಾಮನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರವಾದ ಮಳೆಯಾಗಬಹುದು. ಮಲೆನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಶಿವಮೊಗ್ಗದಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಶುಷ್ಕ ಹವಾಮಾನವು ಮೇಲುಗೈ ಸಾಧಿಸಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲ ಧಗೆಯು ಹೆಚ್ಚಿರಲಿದೆ. ಗರಿಷ್ಠ ಉಷ್ಣಾಂಶವು 39ರ ಗಡಿದಾಟಲಿದೆ. ಇದರಿಂದಾಗಿ ಉರಿ ಬಿಸಿಲು ಜನರನ್ನು ಹೈರಾಣಾಗಿಸಲಿದೆ.

ಇದನ್ನೂ ಓದಿ: Deepika Padukone: ಸಖತ್‌ ಗ್ಲೋ ಆದ ಪ್ರೆಗ್ನೆಂಟ್‌ ದೀಪಿಕಾ: ಜ್ಯೂನಿಯರ್‌ ಆರ್ಟಿಸ್ಟ್‌ ಕೊಟ್ಟ ಸ್ಪೆಷಲ್‌ ಗಿಫ್ಟ್‌ ಏನು?

ಹೀಟ್‌ ವೇವ್‌

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ. ಉತ್ತರ ಒಳನಾಡು ಭಾಗದಲ್ಲಿ ರಾತ್ರಿ ಹೊತ್ತು ಬೆಚ್ಚಗೆ ಇದ್ದರೆ, ಕರಾವಳಿಯ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ.

ತಾಪಮಾನ ಹೆಚ್ಚಳ ಇರಲಿ ಎಚ್ಚರ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ ಈ ಸಮಯದಲ್ಲಿ ಎಲ್ಲ ವಯೋಮಾನದವರಲ್ಲೂ ಅನಾರೋಗ್ಯ ಸಮಸ್ಯೆ ಕಾಡಬಹುದು. ಶಾಖದ ಹೊಡೆತವನ್ನು ತಪ್ಪಿಸಲು ಜನರು ಕಾಳಜಿ ವಹಿಸುವುದು ಅಗತ್ಯವಿದೆ.

ಕಲಬುರಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಈ ಪ್ರದೇಶದ ಜನರು ದೀರ್ಘಾವಧಿಯವರೆಗೆ ಸೂರ್ಯನಿಗೆ ಒಡ್ಡಿಕೊಳ್ಳುವ ಅಥವಾ ಭಾರವಾದ ಕೆಲಸವನ್ನು ಮಾಡಬಾರದು.

ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಮಧ್ಯಮ ತಾಪಮಾನ ಮತ್ತು ಶಾಖವನ್ನು ಸಾಮಾನ್ಯ ಜನರು ಸಹಿಸಿಕೊಳ್ಳಬಹುದು. ಆದರೆ ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆ ಇರುವವರು ಆರೋಗ್ಯ ಕಾಳಜಿ ವಹಿಸುವುದು ಸೂಕ್ತ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

Karnataka Weather Forecast : ರಾಜ್ಯಾದ್ಯಂತ ತಾಪಮಾನ ಹಾಗೂ ಹೀಟ್‌ ವೇವ್‌ (Heat wave) ಪರಿಸ್ಥಿತಿಗಳು ಮೇಲುಗೈ ಸಾಧಿಸಿವೆ. ಈ ವಾರವೆಲ್ಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ಒಣ ಹವೆ (Dry Weather) ಮುಂದುವರಿಯಲಿದ್ದು, ತಾಪಮಾನ ಏರಿಕೆ ಆಗಲಿದೆ. ಶಾಖದ ಹೊಡೆತಕ್ಕೆ ಈಗಾಗಲೇ ಜನರು ತತ್ತರಿಸಿ ಹೋಗಿದ್ದಾರೆ. ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ ರೆಡ್‌, ಆರೆಂಜ್‌, ಯೆಲ್ಲೊ ಅಲರ್ಟ್‌ ನೀಡಿದೆ. ಇದರೊಟ್ಟಿಗೆ ಆರೋಗ್ಯ ಕಾಳಜಿ ವಹಿಸುವಂತೆ ಜನರಿಗೆ ಸಲಹೆ ಸೂಚನೆಗಳನ್ನು ನೀಡಲಾಗಿದೆ.

ಬಿಸಿಗಾಳಿ ಎಚ್ಚರಿಕೆ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ. ಉತ್ತರ ಒಳನಾಡು ಭಾಗದಲ್ಲಿ ರಾತ್ರಿ ಹೊತ್ತು ಬೆಚ್ಚಗೆ ಇದ್ದರೆ, ಕರಾವಳಿಯ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ.

ಇದನ್ನೂ ಓದಿ: Summer Tips: ಬಿಸಿಲಿನ ಆಘಾತದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ…

ರೆಡ್ ಮತ್ತು ಆರೆಂಜ್‌, ಯೆಲ್ಲೋ ಅಲರ್ಟ್ ಇರುವ ಪ್ರದೇಶಗಳಿವು

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ ಈ ಸಮಯದಲ್ಲಿ ಎಲ್ಲ ವಯೋಮಾನದವರಲ್ಲೂ ಅನಾರೋಗ್ಯ ಸಮಸ್ಯೆ ಕಾಡಬಹುದು. ಶಾಖದ ಹೊಡೆತವನ್ನು ತಪ್ಪಿಸಲು ಜನರು ಕಾಳಜಿ ವಹಿಸುವುದು ಅಗತ್ಯವಿದೆ.

ಕಲಬುರಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಈ ಪ್ರದೇಶದ ಜನರು ದೀರ್ಘಾವಧಿಯವರೆಗೆ ಸೂರ್ಯನಿಗೆ ಒಡ್ಡಿಕೊಳ್ಳುವ ಅಥವಾ ಭಾರವಾದ ಕೆಲಸವನ್ನು ಮಾಡಬಾರದು.

ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಮಧ್ಯಮ ತಾಪಮಾನ ಮತ್ತು ಶಾಖವನ್ನು ಸಾಮಾನ್ಯ ಜನರು ಸಹಿಸಿಕೊಳ್ಳಬಹುದು. ಆದರೆ ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆ ಇರುವವರು ಆರೋಗ್ಯ ಕಾಳಜಿ ವಹಿಸುವುದು ಸೂಕ್ತ.

ಬೆಂಗಳೂರಲ್ಲಿ ತಾಪಮಾನ ಹೆಚ್ಚಳ

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 39 ಮತ್ತು 24 ಡಿ.ಸೆ ಇರಲಿದೆ. ತಾಪಮಾನ ಏರಿಕೆಯು ಜನರನ್ನು ಕಂಗಾಲು ಮಾಡಿದೆ. ಇದೇ ವಾತಾವರಣವು ಈ ಪೂರ್ತಿ ಮುಂದುವರಿಯಲಿದೆ.

ಕೋಲಾರದಲ್ಲಿ ಮಳೆಯ ಸಿಂಚನ

ಕೋಲಾರ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಗುರುವಾರ ಸತತ ಒಂದು ಗಂಟೆಯಿಂದ ಮಳೆ ಸುರಿಯುತ್ತಿದೆ. ಮೂರ್ನಾಲ್ಕು ತಿಂಗಳಿಂದ ಬೇಸಿಗೆ ಬಿಸಿಯಿಂದ ಬಸವಳಿದ ಜನರಿಗೆ ಮಳೆಯು ತಂಪೆರೆದಿದೆ. ಭರಣಿ ನಕ್ಷತ್ರದ ಮೊದಲ ಮಳೆ ಕೋಲಾರ ಜಿಲ್ಲೆಯ ಕೆಜಿಎಫ್‌ನಲ್ಲಿ ಸುರಿಯುತ್ತಿದೆ. ಬಿಸಿಲಿನ ತಾಪ, ಬಿಸಿ ಗಾಳಿಗೆ, ಪರದಾಡುತ್ತಿದ್ದ ಜನರಿಗೆ ಮಳೆಯ ಸಿಂಚನದಿಂದ ಬಿಸಿಯಿಂದ ಮುಕ್ತರಾಗಿದ್ದಾರೆ

ಇದನ್ನೂ ಓದಿ: Viral News: ದೂರದ ಇಂಗ್ಲೆಂಡ್‌ನಲ್ಲಿಯೂ ಕೇರಳ ಕಲರವ; ನೆಟ್ಟಿಗರ ಗಮನ ಸೆಳೆದ ವಿಡಿಯೊ ಇಲ್ಲಿದೆ

ಬೆಂಕಿ ಇಲ್ಲದೆ ರಣ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ಆಮ್ಲೇಟ್ ತಿಂದ ರಾಯಚೂರು ಮಂದಿ

ರಾಯಚೂರು: ಬಿಸಿಲಿನ ತಾಪ ಸಿಕ್ಕಾಪಟ್ಟೆ ಹೆಚ್ಚಾಗುತ್ತಿದೆ. ಬಿಸಿಲು ಈಗಲೇ ಸಹಿಸುವುದಕ್ಕೆ ಅಸಾಧ್ಯವಾಗಿದೆ. ಇದು ಜಸ್ಟ್‌ ಸ್ಯಾಂಪಲ್‌ ಇನ್ನೂ ತಾಪಮಾನ (Temperature Warning ) ಹೆಚ್ಚಾಗಲಿದೆ ಎಂಬ ಮುನ್ಸೂಚನೆ ಹವಾಮಾನ ತಜ್ಞರಿಂದ ದೊರೆತಿದೆ. ಮನೆಯಲ್ಲಿ, ಆಫೀಸ್‌ನಲ್ಲಿ ಎಸಿ ಹಾಕಿಕೊಂಡು ಕುಳಿತುಕೊಳ್ಳುವವರೂ ಕೂಡ ಈ ಬಿಸಿಲಿನ ಝಳಕ್ಕೆ ತತ್ತರಿಸಿದ್ದಾರೆ. ಉರಿಯುತ್ತಿರುವ ಸೂರ್ಯನ ಶಾಖಕ್ಕೆ (Heat wave) ಸ್ವಲ್ಪ ಹೊತ್ತು ಮೈಒಡ್ಡಿದ್ರೆ ಸಾಕು ಸುಟ್ಟು ಹೋಗುವಷ್ಟು ತೀವ್ರತೆ ಇದೆ. ಸದ್ಯ ಈ ಉರಿ ಬಿಸಿಲಿನಲ್ಲೇ ರಾಯಚೂರು ಮಂದಿ ಪ್ರಯೋಗವನ್ನು ಮಾಡಿದ್ದಾರೆ. ಬೆಂಕಿ ಇಲ್ಲದೆ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ತಿಂದಿದ್ದಾರೆ.

ಜನರು ಈಗಾಗಲೇ ಬಿಸಿಲಿನ ಶಾಖದಿಂದ ತತ್ತರಿಸಿ ಹೋಗಿದ್ದು, ಮನೆಯಿಂದ ಹೊರಗೆ ಬರಲು ಆಗದಷ್ಟು ತಾಪಮಾನ ಹೆಚ್ಚಿದೆ. ಆದರೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ಯುವಕರು ಪ್ರಯೋಗ ಮಾಡಿದ್ದಾರೆ. ಬಿಸಿಲಿನಿಂದಲೇ ಮೊಟ್ಟೆಯ ಆಮ್ಲೆಟ್ ಮಾಡಿದ್ದಾರೆ.

ಬಿಸಿಲು ಅದ್ಯಾವ ಪರಿ ಇದೆ ಎಂಬ ಕುತೂಹಲಕ್ಕಾಗಿ ಬೆಂಕಿ ಇಲ್ಲದೆ ಬಿಸಿಲಿನಲ್ಲಿ ಒಂದೂವರೆ ಗಂಟೆವರೆಗೆ ಕಬ್ಬಿಣದ ತವಾ ಇಟ್ಟಿದ್ದಾರೆ. ಅದು ಕಾದ ನಂತರ ಮೊಟ್ಟೆ ಒಡೆದು ಆಮ್ಲೆಟ್ ತಯಾರಿಸಿ ತಿಂದಿದ್ದಾರೆ. ರಾಯಚೂರು ಜಿಲ್ಲೆಯಾದ್ಯಂತ ಒಂದು ವಾರದಿಂದ ಪ್ರತಿ ದಿನ 44 ರಿಂದ 45 ಡಿಗ್ರಿ ಸೆಲ್ಸಿಯಸ್‍ ಗರಿಷ್ಠ ಉಷ್ಠಾಂಶ ದಾಖಲಾಗುತ್ತಿದೆ.

ಇದನ್ನೂ ಓದಿ: Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವಿದ್ಯುತ್‌ ಕಂಬದ ಲೈನ್‌ಗಳಲ್ಲಿ ಶಾರ್ಟ್‌ ಸರ್ಕ್ಯೂಟ್‌

ಇತ್ತ ರಾಯಚೂರಿನಲ್ಲಿ ದಿನೇದಿನೆ ಬಿಸಿಲು ಹೆಚ್ಚಳವಾಗುತ್ತಿದ್ದು, ಏರ್ ಕೂಲರ್ ಮತ್ತು ಎಸಿ ಬಳಕೆ ಅಧಿಕವಾಗಿದೆ. ರಾಯಚೂರು ನಗರದ ಗಾಂಧಿ ಚೌಕ್ ಬಳಿಯ ಖಾಸಗಿ ಆಸ್ಪತ್ರೆ ಪಕ್ಕದಲ್ಲಿ ವಿದ್ಯುತ್ ಲೋಡ್ ಹೆಚ್ಚಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಕೂದಲೆಳೆ ಅಂತರದಲ್ಲಿ ಅನಾಹುತ ತಪ್ಪಿದೆ.

ವಿದ್ಯುತ್ ಕಂಬದಲ್ಲಿದ್ದ ಲೈನ್‌ಗಳಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಸಿನಿಮಾ ಸ್ಟೈಲ್‌ನಲ್ಲಿ ಸ್ಪಾರ್ಕ್ ಉಂಟಾಗಿತ್ತು. ಕೆಲ ಹೊತ್ತು ಸ್ಪಾರ್ಕ್ ನೋಡಿದ ಜನರು ಗಾಬರಿ ಆದರು. ಸದರ್ ಬಜಾರ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಕ್ಷಿಣ ಕನ್ನಡ

Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Gangadhar Puttur : ವೇಷ ಕಳಚುತ್ತಿರುವಾಗಲೇ ಯಕ್ಷಗಾನ ಕಲಾವಿದ (Yakshagana Artist) ಗಂಗಾಧರ ಪುತ್ತೂರು ಇಹಲೋಕ ತ್ಯಜಿಸಿದ್ದಾರೆ. ಮುಖದ ಬಣ್ಣವನ್ನು ಅಳಿಸುತ್ತಿರುವಾಗ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

VISTARANEWS.COM


on

By

Yakshagana Artist No more
Koo

ಮಂಗಳೂರು: ವೇಷ ಕಳಚುತ್ತಿರುವಾಗಲೇ ಹೃದಯಾಘಾತದಿಂದ (Heart attack) ಧರ್ಮಸ್ಥಳ ಯಕ್ಷಗಾನ ಮೇಳದ ಸವ್ಯಸಾಚಿ ಕಲಾವಿದ (Yakshagana Artist) ಗಂಗಾಧರ ಪುತ್ತೂರು(60) ಅವರು ಇಹಲೋಕ ತ್ಯಜಿಸಿದ್ದಾರೆ.

ನಿನ್ನೆ ಬುಧವಾರ (ಮೇ 1) ರಾತ್ರಿ ಕೋಟ ಗಾಂಧಿಮೈದಾನದ ಬಳಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಅವರು ಕುಕ್ಕಿಂತ್ತಾಯ ದೈವದ ವೇಷವನ್ನು ನಿರ್ವಹಿಸಿದ್ದರು. ಬಳಿಕ ಚೌಕಿಗೆ ಆಗಮಿಸಿ ಕಿರೀಟ, ಯಕ್ಷಗಾನದ ಆಭರಣ ತೆಗೆದಿಟ್ಟು, ಮುಖದ ಬಣ್ಣವನ್ನು ಅಳಿಸುತ್ತಿರುವಾಗ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪುತ್ತೂರಿನ ಸೇಡಿಯಾಪು ನಿವಾಸಿಯಾಗಿರುವ ಇವರು ಏಳನೇ ತರಗತಿಯವರೆಗೆ ವಿದ್ಯಾಭ್ಯಾಸ ಹೊಂದಿದ್ದರು. ತಮ್ಮ 18ನೇ ವಯಸ್ಸಿಗೆ ಯಕ್ಷಗಾನ ತಿರುಗಾಟ ಆರಂಭಿಸಿದ ಗಂಗಾಧರ ಪುತ್ತೂರು ಸುದೀರ್ಘ 40 ವರ್ಷಗಳಷ್ಟು ಕಾಲ ಯಕ್ಷಗಾನ ರಂಗದಲ್ಲಿ ವ್ಯವಸಾಯ ಮಾಡಿದ್ದರು. ಕರ್ಗಲ್ಲು ವಿಶ್ವೇಶ್ವರ ಭಟ್ ಹಾಗೂ ಕೆ.ಗೋವಿಂದ ಭಟ್ ಅವರಿಂದ ನಾಟ್ಯಾಭ್ಯಾಸ ಮಾಡಿದರು.

ಯಕ್ಷಗಾನ ರಂಗದ ಸವ್ಯಸಾಚಿ ಕಲಾವಿದರಾದ ಇವರು ಸ್ತ್ರೀವೇಷದಿಂದ ಹಿಡಿದು ಪುಂಡುವೇಷ, ರಾಜವೇಷ, ಹೆಣ್ಣುಬಣ್ಣ ಸಮರ್ಥವಾಗಿ ನಿರ್ವಹಿಸುತ್ತಿದ್ದರು. 30 ವರ್ಷಗಳಿಗಿಂತಲೂ ಅಧಿಕ ಕಾಲದಿಂದ ಗಂಗಾಧರ ಪುತ್ತೂರು ಧರ್ಮಸ್ಥಳ ಮೇಳದಲ್ಲಿಯೇ ಕಲಾವಿದರಾಗಿ ತಿರುಗಾಟ ಮಾಡಿದ್ದರು.

ಇದನ್ನೂ ಓದಿ: Prajwal Revanna case: ತಲೆಮರೆಸಿಕೊಂಡ ಪ್ರಜ್ವಲ್‌ ರೇವಣ್ಣಗೆ ಲುಕೌಟ್‌ ನೋಟಿಸ್‌ ಜಾರಿ, ಬಂದ ಕೂಡಲೇ ಬಂಧನ!

ತೀವ್ರ ಹೃದಯಾಘಾತದಿಂದ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) (Srinivas Prasad) ಅವರು ತೀವ್ರ ಹೃದಯಾಘಾತದಿಂದ (Heart Aattack) ವಿಧಿವಶರಾದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲದಿನಗಳ ಹಿಂದೆ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ 1:20ಕ್ಕೆ (Manipal Hospital ) ಅವರು ನಿಧನರಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್ ಅವರು ಏಪ್ರಿಲ್ 22ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಮೂತ್ರಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಎನ್ನಲಾಗಿದೆ.

ಇನ್ನು ಈ ಬಗ್ಗೆ ಶ್ರೀನಿವಾಸ್ ಪ್ರಸಾದ್ ಅಳಿಯ ಹರ್ಷವರ್ಧನ್ ಮಾಹಿತಿ ನೀಡಿದ್ದು, ಶ್ರೀನಿವಾಸ್ ಪ್ರಸಾದ್ ಅವರು ರಾತ್ರಿ 1:20ರ ಸುಮಾರಿಗೆ ತೀವ್ರವಾದ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರನ್ನು ಉಳಿಸಿಕೊಳ್ಳಲು ವೈದ್ಯರು ಸಾಕಷ್ಟು ರೀತಿಯಲ್ಲಿ ಪ್ರಯತ್ನ ಮಾಡಿದ್ದರು. ಅವರ ಈ ಅಗಲಿಕೆ ಇಡೀ ದಲಿತ ಸಮುದಾಯಕ್ಕೆ ತುಂಬಲಾರದ ನಷ್ಟ. ನನಗೆ ರಾಜಕೀಯಕ್ಕೆ ಜನ್ಮ ಕೊಟ್ಟಂತವರು. ರಾಜಕೀಯದಲ್ಲಿ ಏಕಾಂಗಿಯಾಗಿ ಹೋರಾಟ ಮಾಡೋದಕ್ಕೆ ಬಿಟ್ಟು ಹೋಗಿದ್ದಾರೆ. ಕೊನೆಯ ಉಸಿರು ಇರುವವರೆಗೂ ಹೋರಾಟ ಮಾಡಿದ್ದಾರೆ, ಹೋರಾಟದ ಜೀವಿ ಅವರು. ಐದು ವರ್ಷದ ಹಿಂದೆ ನಾನು ನಂಜನಗೂಡಿನಲ್ಲಿ ಗೆದ್ದಾಗ ಅವರು ಲೋಕಸಭೆಯಲ್ಲಿ ಸ್ಪರ್ಧೆ ಮಾಡ್ತಿನಿ ಅಂದರು. ನನ್ನನ್ನು ಅವರು ತಂದೆ ಸ್ಥಾನದಲ್ಲಿ ನಿಂತು ರಾಜಕೀಯವಾಗಿ ಬೆಳೆಸಿದ್ದಾರೆ ಯಾವುದೆ ವಿಚಾರ ಆಗಿದ್ದರೂ ಅವರ ಜೊತೆ ಚರ್ಚೆ ಮಾಡಿಯೇ ನಿರ್ಧಾರಕ್ಕೆ ಬರುತ್ತಿದೆ. ಈಗ ಯಾರ ಬಳಿ ಹೋಗಿ ಕೇಳಲಿ ಎಂದು ಅನಿಸಿ ಬಿಟ್ಟಿದೆ ಎಂದು ಭಾವುಕರಾಗಿ ಮಾತನಾಡಿದರು.

ಇದನ್ನೂ ಓದಿ:Raja Marga Column :‌ ಕಣ್ಣೇ ಕಾಣದ ಆಕೆ ಎರಡು ಬಾರಿ ಐಎಎಸ್‌ ಪಾಸ್‌ ಮಾಡಿದ್ದರು!

ಚಾಮರಾಜನಗರ ಕ್ಷೇತ್ರದಿಂದ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀನಿವಾಸ್‌ ಪ್ರಸಾದ್‌ 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇನ್ನು 2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿದ್ದರು . 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದ ಅವರು 2019ರಲ್ಲಿ ಚಾಮರಾಜನಗರ ಸಂಸದರಾಗಿ ಆಯ್ಕೆ.ಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದಾಗಿ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ ಅವರು 2024 ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಪಡೆದುಕೊಂಡಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Rachita Taneja
ದೇಶ13 mins ago

Rachita Taneja: ಭಾರತದ ಕಾರ್ಟೂನಿಸ್ಸ್ ರಚಿತಾ ತನೇಜಾಗೆ ಕೋಫಿ ಅನ್ನಾನ್‌ ಪ್ರಶಸ್ತಿ ಗರಿ

Rahul Gandhi
ಪ್ರಮುಖ ಸುದ್ದಿ15 mins ago

Rahul Gandhi : ಮಹಾತ್ಮ ರಾಹುಲ್​, ಕುತಂತ್ರಿ ಗಾಂಧೀಜಿ; ಚರ್ಚೆಗೆ ಗ್ರಾಸವಾಯ್ತು​ ಕಾಂಗ್ರೆಸ್​ ನಾಯಕನ ಹೇಳಿಕೆ

Prajwal Revanna Case Kidnapping case filed against Revanna Anticipatory bail plea postponed
ಕ್ರೈಂ18 mins ago

Prajwal Revanna Case: ರೇವಣ್ಣ ಮೇಲೆ ಕಿಡ್ನ್ಯಾಪ್‌ ಕೇಸ್;‌ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ, ನಾಳೆ SIT ಮುಂದೆ ಹಾಜರ್‌?

Prajwal Revanna Case HD Revanna ready to leave the country SIT issues lookout notice
ಕ್ರೈಂ45 mins ago

Prajwal Revanna Case: ದೇಶ ಬಿಟ್ಟು ಹೋಗಲು ಸಜ್ಜಾದರೇ ಎಚ್.ಡಿ. ರೇವಣ್ಣ? ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ SIT!

IPL 2024
Latest50 mins ago

IPL 2024 : ಕೊಹ್ಲಿಯ ಸ್ಟ್ರೈಕ್ ರೇಟ್ ಪ್ರಶ್ನಿಸುವವರಿಗೆ ತಕ್ಕ ಪಾಠ ಹೇಳಿದ ಕೈಫ್​, ಪಠಾಣ್​​

Faisal Raza Abidi
ದೇಶ56 mins ago

2026ರಲ್ಲಿ ಭಾರತ ಪೀಸ್‌ ಪೀಸ್‌ ಆಗುತ್ತದೆ ಎಂದ ಪಾಕ್‌ ಮಾಜಿ ಸಂಸದ; ಮೋದಿ ಹಿಂದುತ್ವವೂ ಪತನ ಎಂದು ಹೇಳಿಕೆ!

Wonderla Bengaluru
ಕರ್ನಾಟಕ1 hour ago

Wonderla Bengaluru: ಬೇಸಿಗೆ ರಜೆಯನ್ನು ಇನ್ನಷ್ಟು ಮಜವಾಗಿಸಲು ವಂಡರ್‌ಲಾದಲ್ಲಿ ʼಸಮ್ಮರ್‌ಲಾ ಫಿಯೆಸ್ಟಾ-2024ʼ: ಭರಪೂರ ಆಫರ್ಸ್‌

training for election duty staff in Karwar
ಉತ್ತರ ಕನ್ನಡ1 hour ago

Lok Sabha Election 2024: ಗೊಂದಲಕ್ಕೆ ಅವಕಾಶವಿಲ್ಲದೆ ಚುನಾವಣೆ ನಡೆಸಲು ಉ.ಕ ಡಿಸಿ ಸೂಚನೆ

IPL 2024
ಕ್ರೀಡೆ1 hour ago

IPL 2024 : ರಾಜಸ್ಥಾನ್​ ಸೋಲಿನ ಬಳಿಕ ಮೊಹಮ್ಮದ್ ಕೈಫ್​ ಟ್ರೋಲ್ ಮಾಡಿದ ವಾಸಿಮ್ ಜಾಫರ್​!

Rohith Vemula
ದೇಶ2 hours ago

Rohith Vemula: ರೋಹಿತ್‌ ವೇಮುಲ ದಲಿತನೇ ಅಲ್ಲ ಎಂದ ಪೊಲೀಸರು; ಕೇಸ್‌ ಕ್ಲೋಸ್‌, ಸ್ಮೃತಿ ಇರಾನಿ ಸೇರಿ ಹಲವರಿಗೆ ಕ್ಲೀನ್‌ ಚಿಟ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ5 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ16 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌