Assault Case : ಹುಡ್ಗಿ ವಿಷ್ಯಕ್ಕೆ ರೂಮ್‌ನಲ್ಲಿ ಕೂಡಿ ಹಾಕಿ ಯುವಕನಿಗೆ ರಕ್ತ ಬರುವಂತೆ ಥಳಿತ; ವಿಡಿಯೊ ವೈರಲ್‌ - Vistara News

ದಕ್ಷಿಣ ಕನ್ನಡ

Assault Case : ಹುಡ್ಗಿ ವಿಷ್ಯಕ್ಕೆ ರೂಮ್‌ನಲ್ಲಿ ಕೂಡಿ ಹಾಕಿ ಯುವಕನಿಗೆ ರಕ್ತ ಬರುವಂತೆ ಥಳಿತ; ವಿಡಿಯೊ ವೈರಲ್‌

Assault Case : ಹುಡುಗಿ ವಿಚಾರಕ್ಕೆ ಯುವಕನನ್ನು ರೂಮ್‌ವೊಂದರಲ್ಲಿ ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಯುವಕನನ್ನು ಥಳಿಸುವ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Assault case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಯುವಕನನ್ನು ಮನೆಯಲ್ಲಿ ಕೂಡಿ ಹಾಕಿ (Assault Case) ಯದ್ವಾತದ್ವಾ ಹಲ್ಲೆ ನಡೆಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಘಟನೆ ನಡೆದಿದೆ. ಯುವಕನಿಗೆ ಥಳಿಸುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬೊಳಂತೂರು ನಿವಾಸಿ ರಹೀಮ್ ಎಂಬಾತನ ಮೇಲೆ ಯುವಕರ ಗುಂಪು ಮಾರಣಾಂತಿಕ ಹಲ್ಲೆ ನಡೆದಿದೆ. ರಹೀಮ್‌ನನ್ನು ಎಲ್ಲಿ ಕರೆದುಕೊಂಡು ಹೋಗಿ ಹೊಡೆದಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಪೊಲೀಸ್ ಮೂಲದ ಪ್ರಕಾರ ಪುತ್ತೂರು ಯುವಕರ ತಂಡದಿಂದ ಈ ಕೃತ್ಯ ನಡೆದಿದೆ. ಹುಡುಗಿ ವಿಚಾರಕ್ಕೆ ಕೂಡಿ ಹಾಕಿ ಥಳಿಸಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಜಿಲ್ಲೆಯ ಯಾವುದೇ ಠಾಣೆಯಲ್ಲಿ ದೂರು ದಾಖಲಾಗಿಲ್ಲ. ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Murder case : ಬಾಳೆತೋಟದಲ್ಲಿತ್ತು ದಲಿತ ಮಹಿಳೆ ಶವ; ಕಾಲ್ಕಿತ್ತ ಮಾಲೀಕ, ಅತ್ಯಾಚಾರ ಶಂಕೆ

ಹುಡುಗಿ ವಿಷ್ಯಕ್ಕೆ ಕಿರಿಕ್‌; ಬೆಂಗಳೂರು-ತುಮಕೂರು ಹುಡುಗರ ಮಧ್ಯೆ ಹೊಡಿಬಡಿ‌

ತುಮಕೂರು: ಹುಡುಗಿ ವಿಚಾರಕ್ಕೆ ಕಾಲೇಜು ವಿದ್ಯಾರ್ಥಿಗಳ ನಡುವೆ ಕಿರಿಕ್ (Students Fighting) ನಡೆದಿದೆ. ಯುವಕನೊಬ್ಬನಿಗೆ ಮನಬಂದಂತೆ ಹಲ್ಲೆ ನಡೆಸಿ ಪುಂಡಾಟ ಮೆರೆದಿದ್ದಾರೆ. ಹಲ್ಲೆ ನಡೆಸುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತುಮಕೂರು ನಗರದ ವಿದ್ಯಾನಿಧಿ ಪಿಯು ಕಾಲೇಜು ಬಳಿ ಘಟನೆ ನಡೆದಿದೆ.

ಜಯವರ್ಧನ್ ಎಂಬಾತ ಹಲ್ಲೆಗೆ ಒಳಗಾದ ವಿದ್ಯಾರ್ಥಿಯಾಗಿದ್ದಾನೆ. ಮನೋಜ್ ಹಾಗೂ ಗಣೇಶ್ ಎಂಬುವವರು ಜಯವರ್ಧನ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಜಯವರ್ಧನ್‌ ವಿದ್ಯಾನಿಧಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದರೆ, ಮನೋಜ್‌ ಬೆಂಗಳೂರಿನ ಬಿಎಂಎಸ್ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾನೆ.

ಮನೋಜ್‌ ಕಾಲೇಜಿನಲ್ಲಿ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದ.ಆಕೆ ಜತೆಗೆ ಈ ಜಯವರ್ಧನ್ ಮಾತನಾಡಿದ ಎಂಬ ವಿಚಾರಕ್ಕೆ ಗಲಾಟೆ ನಡೆದಿದೆ. ನಮ್ಮ ಹುಡುಗಿ ಜತೆ ಯಾಕೆ ಮಾತನಾಡುತ್ಯಾ ಎಂದು ಮನೋಜ್‌ ಜಯವರ್ಧನ್‌ಗೆ ಫೋನ್‌ ಮೂಲಕ ಬೆದರಿಕೆ ಹಾಕಿದ್ದ.

Students Fighting
ಮನೋಜ್‌ ಹಾಗೂ ಜಯವರ್ಧನ್‌

ಇದನ್ನೂ ಓದಿ: POCSO case: ಮೂಡುಬಿದಿರೆ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ತಂದೆಯ ಬಂಧನ

ಇಷ್ಟಲ್ಲದೆ ಕಾಲೇಜು ಬಳಿ ಬಂದು ತನ್ನ ಸ್ನೇಹಿತ ಗಣೇಶ್ ಎಂಬಾತನ ಜತೆ ಸೇರಿ ಜಯವರ್ಧನ್ ಮೇಲೆ ಹಲ್ಲೆ ನಡೆಸಿದ್ದಾನೆ. ಜಯವರ್ಧನ್ ಮುಖಕ್ಕೆ ಗುದ್ದಿ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ಮಾಡುತ್ತಿದ್ದನ್ನು ನೋಡಿದ ಕಾಲೇಜಿನ ಬಸ್ ಚಾಲಕರು, ಕೂಡಲೇ ಹಲ್ಲೆ ನಡೆಸುತ್ತಿದ್ದ ಮನೋಜ್‌ನನ್ನು ಹಿಡಿದು ಕಾಲೇಜು ಪ್ರಾಂಶುಪಾಲರಿಗೆ ಒಪ್ಪಿಸಿದ್ದಾರೆ. ಈ ವೇಳೆ ಜತೆಗೆ ಇದ್ದ ಸ್ನೇಹಿತ ಗಣೇಶ್ ನಾಪತ್ತೆಯಾಗಿದ್ದಾನೆ.

ಘಟನೆ ಸಂಬಂಧ ಹಲ್ಲೆಗೊಳಾಗದ ಜಯವರ್ಧನ್ ಪೋಷಕರಿಂದ ಮನೋಜ್ ವಿರುದ್ಧ ದೂರು ದಾಖಲಾಗಿದೆ. ಎನ್‌ಇಪಿಎಸ್ ಠಾಣೆ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬೆಂಗಳೂರು ಸೇರಿದಂತೆ ಉಡುಪಿ, ಉತ್ತರ ಕನ್ನಡದಲ್ಲಿಂದು ಭಾರಿ ಮಳೆ ಎಚ್ಚರ

Karnataka Rain : ಕರಾವಳಿಯಲ್ಲಿ ಇಂದಿನಿಂದ ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರಿಗೂ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Karnataka Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಉತ್ತರ ಒಳನಾಡು, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Assault Case : ಹುಡ್ಗಿ ವಿಷ್ಯಕ್ಕೆ ರೂಮ್‌ನಲ್ಲಿ ಕೂಡಿ ಹಾಕಿ ಯುವಕನಿಗೆ ರಕ್ತ ಬರುವಂತೆ ಥಳಿತ; ವಿಡಿಯೊ ವೈರಲ್‌

ಬೆಳಗಾವಿಯಲ್ಲಿ ಭಾರಿ ಮಳೆ ಎಚ್ಚರಿಕೆ

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ. ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆ ಇವೆ.

ಕರಾವಳಿಗೂ ಮಳೆ ಅಲರ್ಟ್‌

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಕರಾವಳಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಆಗಸ್ಟ್‌ 27 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಮೇಲಿನ ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

ಮುಂದಿನ 48 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲಿಯಸ್ಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

Karnataka Rain news : ಒಂದು ಸಣ್ಣ ಮಳೆ ಬಂದರೂ ಅವಾಂತರವೇ (Karnataka Weather forecast) ಸೃಷ್ಟಿಯಾಗುತ್ತದೆ. ವಿಜಯನಗರದಲ್ಲಿ ಸ್ಮಶಾನಕ್ಕೆ ಮೃತದೇಹವನ್ನು ಸಾಗಿಸಲು ಗ್ರಾಮಸ್ಥರು ಪರದಾಡಿದರೆ ಇತ್ತ ಚಿಕ್ಕಮಗಳೂರಿನಲ್ಲಿ ಕಂದಕ ಸೃಷ್ಟಿಯಾಗಿದ್ದು, ಅಡಿಕೆ ತೋಟಗಳು ಭೂಮಿ ಪಾಲಾಗುತ್ತಿದೆ.

VISTARANEWS.COM


on

By

Koo

ವಿಜಯನಗರ: ವಿಜಯನಗರ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ಸುರಿಯುತ್ತಿರುವ ( karnataka Rain news) ಮಳೆಯಿಂದಾಗಿ (Karnataka Weather Forecast) ಹಳ್ಳ – ಕೊಳ್ಳಗಳು ತುಂಬಿ ಹರಿಯುತ್ತಿವೆ. ಹೊಸಪೇಟೆ ತಾಲೂಕಿನ ಜಿ.ನಾಗಲಾಪೂರ ಗ್ರಾಮದಲ್ಲಿ ಹಳ್ಳ ತುಂಬಿ ಹರಿಯುತ್ತಿರುವುದರಿಂದ ಹೆಣ ಹೂಳಲು ಸಹ ಹೆಣಗಾಡಬೇಕಾಯಿತು.

ಗ್ರಾಮಕ್ಕೆ ಮೀಸಲಿಟ್ಟ ಸ್ಮಶಾನಕ್ಕೆ ಹೋಗಲು ರಸ್ತೆಯೇ ಇಲ್ಲ. ಅಕ್ಕ – ಪಕ್ಕದವರ ಜಮೀನಿನ ಪಕ್ಕದಲ್ಲಿ ಹೋದರೆ ಕಿರಿಕಿರಿ ಮಾಡುತ್ತಾರೆ. ಹೀಗಾಗಿ ಹರಿಯುವ ಹಳ್ಳದಲ್ಲೇ ಹೆಣ ಹೊತ್ತು ಗ್ರಾಮಸ್ಥರು ಸಾಗಿದ್ದರು. ಹೆಣ ಹೊತ್ತು ಸಾಗುವ ವೇಳೆ ನೀರಿನ ರಭಸ ಹೆಚ್ಚಾದರೆ ಹೆಣ ಸಮೇತ ಕೊಚ್ಚಿಹೋಗುವ ಆತಂಕ ಇದೆ.

ಹೆಣ ಹೂಳುವ ಜಾಗ ಗ್ರಾಮದಿಂದ ಒಂದೂವರೆ ಕಿ.ಮೀ ದೂರದಲ್ಲಿದೆ. ಶವ ಸಂಸ್ಕಾರಕ್ಕೆ ಹೋಗಲು ಸೂಕ್ತ ರಸ್ತೆ ಮಾಡಿಕೊಡದೇ ಜಿಲ್ಲಾಡಳಿತ, ಕಂದಾಯ ಇಲಾಖೆ ದಿವ್ಯ ನಿರ್ಲಕ್ಷ್ಯ ವಹಿಸಿದೆ. ಕೆಲವು ದಿನಗಳ ಹಿಂದೆ ಐತಿಹಾಸಿಕ ಒಪ್ಪತ್ತೇಶ್ವರ ರಥೋತ್ಸವ ಇದೇ ಹಳ್ಳದಲ್ಲಿ ಸಾಗಿತ್ತು. ಸ್ಮಶಾನಕ್ಕೆ, ಜಮೀನುಗಳಿಗೆ ಹೋಗಲು ಸೇತುವೆ ನಿರ್ಮಿಸಿ ಕೊಡಲು ಹತ್ತಾರು ಬಾರಿ ಮನವಿ ಮಾಡಿದ್ದಾರೆ. ಆದರೂ ಗ್ರಾಮಸ್ಥರ ಮನವಿಗೆ ಕ್ಯಾರೇ ಎನ್ನದೇ ಶಾಸಕರು, ಸಚಿವರು, ಅಧಿಕಾರಿಗಳ ಧೋರಣೆಗೆ ಕಿಡಿಕಾರಿದ್ದಾರೆ.

ಭಾರಿ ಮಳೆಗೆ ಅಡಿಕೆ ತೋಟದಲ್ಲಿ ಕಂದಕ ಸೃಷ್ಟಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರಿದಿದೆ. ಇದ್ದಕ್ಕಿದ್ದ ಹಾಗೆ ಸ್ವಲ್ಪ ಸ್ವಲ್ಪವೇ ಅಡಿಕೆ ತೋಟ ಕುಸಿಯುತ್ತಿದೆ. ತೋಟದಲ್ಲಿ 10-15 ಅಡಿ ಕಂದಕ ಸೃಷ್ಟಿಯಾಗಿದೆ. ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ದೂಪದ ಖಾನ್ ಗ್ರಾಮದಲ್ಲಿ ಘಟನೆ ನಡೆದಿದೆ.

ಭೂಮಿ ಕುಸಿತದಿಂದ ನೂರಾರು ಅಡಿಕೆ ಮರಗಳು ನೆಲಕ್ಕುರುಳಿದೆ. ಗ್ರಾಮದ ಆಶಾ ಕೃಷ್ಣ ಎಂಬುವರಿಗೆ ಸೇರಿದ ಅಡಿಕೆ ತೋಟ ನಾಶವಾಗಿದೆ. ಜೀವನಕ್ಕೆ ಆಧಾರವಾಗಿದ್ದ ತೋಟ ನಾಶವಾಗುತ್ತಿರುವುದರಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಮಳೆ ಬೀಳುತ್ತಿದ್ದಂತೆ ಮತ್ತೆ ಮತ್ತೆ ತೋಟ ಕುಸಿಯುತ್ತಿದೆ.

ಇದನ್ನೂ ಓದಿ: KEA : ಕೆಯುಡಬ್ಲ್ಯೂಎಸ್‌ಡಿಬಿ ಪರೀಕ್ಷೆಯ ತಾತ್ಕಾಲಿಕ ಅಂಕಪಟ್ಟಿ ಪ್ರಕಟ; ಆ.27ರವರೆಗೆ ಆಕ್ಷೇಪಣೆಗೆ ಅವಕಾಶ

ವಿಕೆಂಡ್‌ ಮಸ್ತಿಗೆ ಮಳೆ ಅಡ್ಡಿ

ನೈರುತ್ಯ ಮಾನ್ಸೂನ್‌ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿದ್ದರೆ, ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕಲಬುರಗಿಯ ಚಿಂಚೋಳಿಯಲ್ಲಿ 7 ಸೆಂ.ಮೀ ಮಳೆಯಾಗಿದೆ. ನಾಳೆ ಭಾನುವಾರ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದ್ದು, ಕೆಲವೊಮ್ಮೆ ಗುಡುಗು ಇರಲಿದೆ. ನಿರಂತರ ಗಾಳಿ ಗಂಟೆಗೆ 40-50 ಕಿ.ಮೀ ತಲುಪಲಿದೆ. ಇನ್ನೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಗಂಟೆಗೆ 40-50 ಕಿ.ಮೀ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Karkala Shocker: ಕಾರ್ಕಳದಲ್ಲಿ ಹಿಂದೂ ಯುವತಿ ಮೇಲೆ ಅತ್ಯಾಚಾರ; ಕಾಂಗ್ರೆಸ್‌ ಸರ್ಕಾರದಡಿ ಹಿಂದೂಗಳಿಗೆ ರಕ್ಷಣೆಯಿಲ್ಲ: ಬಿಜೆಪಿ

Karkala Shocker: ಕಾರ್ಕಳದಲ್ಲಿ ನಡೆದ ಪ್ರಕರಣ, ಕಾಂಗ್ರೆಸ್‌ ಸರ್ಕಾರ ಬಂದ ನಂತರ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲ ಎಂಬುದನ್ನು ತೋರಿಸುತ್ತಿದೆ. ಅತ್ಯಾಚಾರ ಮಾಡ್ತಾರೆ, ಇಲ್ಲ ಕೇಸ್ ಮುಚ್ಚಿ ಹಾಕ್ತಾರೆ. ಹಾವೇರಿ, ಹುಬ್ಬಳ್ಳಿಯಲ್ಲಿ ನಡೆದ ಘಟನೆ ಕಾರ್ಕಳದಲ್ಲಿ ಮರುಕಳಿಸಿದೆ ಎಂದು ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ಟೀಕಿಸಿದ್ದಾರೆ.

VISTARANEWS.COM


on

karkala physical abuse case 2
Koo

ಬೆಂಗಳೂರು: ಕಾರ್ಕಳದಲ್ಲಿ (Karkala news) ಹಿಂದೂ ಯುವತಿಗೆ (Hindu Girl) ಮತ್ತು ಬರಿಸುವ ಔಷಧ ನೀಡಿ ಮುಸ್ಲಿಂ ಯುವಕ ಅತ್ಯಾಚಾರ ಎಸಗಿದ (Physical Abuse) ಪ್ರಕರಣವನ್ನು ವಿಪಕ್ಷ ಬಿಜೆಪಿ (BJP) ನಾಯಕರು ಖಂಡತುಂಡವಾಗಿ ಖಂಡಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ (Congress) ಸರಕಾರ ಬಂದ ಬಳಿಕ ಹಿಂದೂಗಳಿಗೆ ರಕ್ಷಣೆಯೇ ಇಲ್ಲ (Karkala Shocker) ಎಂದು ಕನಲಿದ್ದಾರೆ.

ಕಾರ್ಕಳದಲ್ಲಿ ನಡೆದ ಪ್ರಕರಣ, ಕಾಂಗ್ರೆಸ್‌ ಸರ್ಕಾರ ಬಂದ ನಂತರ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲ ಎಂಬುದನ್ನು ತೋರಿಸುತ್ತಿದೆ. ಅತ್ಯಾಚಾರ ಮಾಡ್ತಾರೆ, ಇಲ್ಲ ಕೇಸ್ ಮುಚ್ಚಿ ಹಾಕ್ತಾರೆ. ಹಾವೇರಿ, ಹುಬ್ಬಳ್ಳಿಯಲ್ಲಿ ನಡೆದ ಘಟನೆ ಕಾರ್ಕಳದಲ್ಲಿ ಮರುಕಳಿಸಿದೆ ಎಂದು ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ಟೀಕಿಸಿದ್ದಾರೆ.

ಕಾಂಗ್ರೆಸ್‌ ಮುಖಂಡ ಐವಾನ್ ಡಿಸೋಜಾನೇ ಭಾರತವನ್ನು ಬಾಂಗ್ಲಾ ದೇಶ ಮಾಡ್ತೀನಿ ಅಂತ ಹೇಳಿದ್ದಾನೆ. ಇವನ ಮೇಲೂ ಕಾಂಗ್ರೆಸ್‌ನವರು ಕ್ರಮ ತಗೊಂಡಿಲ್ಲ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕುಸಿದಿದೆ. ಅಧಿಕಾರ ನಡೆಸಲು ಕಾಂಗ್ರೆಸ್‌ನವರಿಗೆ ನೈತಿಕತೆ ಇಲ್ಲ. ಒಂದುವರೆ ವರ್ಷಗಳಿಂದ ಒಂದೇ ಒಂದು ರೂಪಾಯಿ ಅಭಿವೃದ್ಧಿ ಕೆಲಸಗಳು ಮಾಡಿಲ್ಲ ಎಂದು ಅಶೋಕ್‌ ಆರೋಪಿಸಿದ್ದಾರೆ.

ಕಾರ್ಕಳ ಶಾಸಕ ಸುನಿಲ್ ಕುಮಾರ್ (Sunil Kumar), ಅತ್ಯಾಚಾರ ಕೃತ್ಯವನ್ನು ಖಂಡಿಸಿದ್ದಾರೆ. ಇದೊಂದು ಪೂರ್ವ ಯೋಜಿತ ಕೃತ್ಯವಾಗಿದೆ. ಅಮಲು ಬರಿಸುವ ವಸ್ತುವನ್ನ ನೀಡಿ ಅತ್ಯಾಚಾರ ಮಾಡಿದ್ದಾರೆ. ಕಾನೂನು ಸುವ್ಯವಸ್ಥೆ ಹಾಳಾಗುವ ಜೊತೆಗೆ, ಇಂತ ಕೃತ್ಯಗಳನ್ನ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಲವ್ ಜಿಹಾದ್‌ನಂತಹ ಪ್ರಕರಣಗಳ ಬಗ್ಗೆ ಸರ್ಕಾರ ಎಚ್ಚರ ವಹಿಸಬೇಕು ಎಂದು ಹೇಳಿದ್ದಾರೆ.

ಯುವತಿಯರು ಇಂತಹ ಘಟನೆಗಳ ಬಗ್ಗೆ ಎಚ್ಚರದಿಂದ ಇರಬೇಕು. ಸರ್ಕಾರ ಇಂತಹ ಪ್ರಕರಣಗಳ ಬಗ್ಗೆ ಗಂಭೀರವಾಗಿ ಚಿಂತಿಸಿ ಕ್ರಮ ತೆಗೆದುಕೊಳ್ಳಬೇಕು. ಹಿಂದೂ ಯುವತಿಯರೂ ಕೂಡ ಇದರಿಂದ ದೂರ ಇರಬೇಕು. ಆಸೆ, ಆಮಿಷಗಳಿಗೆ ಒಳಗಾಗಬಾರದು. ಮುಂದೆ ಇಂತಹ ಘಟನೆಗಳು ನಡೆಯದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಸರ್ಕಾರಕ್ಕೆ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.

ಕಾರ್ಕಳದ ಹಿಂದೂ ಯುವತಿ ಅತ್ಯಾಚಾರ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದ ಕುರಿತು ಮಾಹಿತಿ ಪಡೆಯಲು ಕಾರ್ಕಳ ಠಾಣೆಗೆ ಪಶ್ಚಿಮ ವಲಯ ಐಜಿ ಅಮಿತ್ ಸಿಂಗ್ ಆಗಮಿಸಿದ್ದಾರೆ. ಉಡುಪಿ ಎಸ್ಪಿ ಅರುಣ್ ಕೆ., ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ಜೊತೆ ಮಾತುಕತೆ ನಡೆಸಿ ಪ್ರಕರಣದ ಕುರಿತು ಸಂಪೂರ್ಣ ಮಾಹಿತಿ ಪಡೆದರು.

ಹಿಂದೂ ಯುವತಿಗೆ ಮತ್ತು ಬೆರೆಸುವ ಔಷಧ ಕುಡಿಸಿ ಮುಸ್ಲಿಂ ಯುವಕನಿಂದ ಅತ್ಯಾಚಾರ, ಕಾರ್ಕಳ ಉದ್ವಿಗ್ನ

ಉಡುಪಿ: ಕಾರ್ಕಳದಲ್ಲಿ (Karkala news) ನಿನ್ನೆ ಸಂಜೆ ಬರ್ಬರ ಅತ್ಯಾಚಾರ (Physical Abuse) ಪ್ರಕರಣ ವರದಿಯಾಗಿದೆ. ಇನ್‌ಸ್ಟಾಗ್ರಾಂನಲ್ಲಿ (Instagram) ಸ್ನೇಹ ಬೆಳೆಸಿದ ಹಿಂದೂ ಯುವತಿಯನ್ನು (Hindu girl) ಕರೆದೊಯ್ದ ಮುಸ್ಲಿಂ ಯುವಕ, ಆಕೆಗೆ ಬಿಯರ್‌ನಲ್ಲಿ ಮತ್ತು ಬರಿಸುವ ಔಷಧ ಸೇರಿಸಿ ಕುಡಿಸಿ ಅತ್ಯಾಚಾರ ಎಸಗಿದ್ದಾನೆ. ಇದಕ್ಕೆ ಆತನ ಇಬ್ಬರು ಸ್ನೇಹಿತರು ಸಹಕರಿಸಿದ್ದು, ಸಾಮೂಹಿಕ ಅತ್ಯಾಚಾರ ನಡೆದಿದೆಯೇ ಎಂಬುದು ಇನ್ನೂ ದೃಢಪಡಬೇಕಿದೆ. ಈ ಪ್ರಕರಣದಲ್ಲಿ ಕಾರ್ಕಳ ನಗರದಲ್ಲಿ ಕೋಮು ಉದ್ವಿಗ್ನತೆಗೆ ಕಾರಣವಾಗಿದೆ.

ನಿನ್ನೆ ಸಂಜೆ ನಡೆದ ಪ್ರಕರಣ ರಾತ್ರಿಯ ಹೊತ್ತಿಗೆ ಉಲ್ಬಣಿಸಿದ್ದು, ಹಿಂದೂ ಸಂಘಟನೆಗಳ ಕಾರ್ಯಕರ್ತರು ಠಾಣೆಯ ಮುಂದೆ ಜಮಾವಣೆಗೊಂದು ಯುವಕನ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು. ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಈ ಕುರಿತು ಹೇಳಿಕೆ ನೀಡಿದ್ದಾರೆ.

“ಕಾರ್ಕಳ ಠಾಣೆ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರ ದೂರು ಬಂದಿದೆ. ಸಂತ್ರಸ್ತೆಗೆ ಆರೋಪಿ ಜೊತೆಗೆ ಮೂರು ತಿಂಗಳಿಂದ ಪರಿಚಯವಿತ್ತು. ಇನ್ಸ್ಟಾಗ್ರಾಮ್ ಮೂಲಕ ಪರಸ್ಪರ ಪರಿಚಯ ಹೊಂದಿದ್ದರು. ಶುಕ್ರವಾರ ಆರೋಪಿ ಅಲ್ತಾಫ್ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಬಂದಾಗ ಅಲ್ಲಿಂದ ಅಪಹರಿಸಿದ್ದ. ಬಿಯರ್‌ನಲ್ಲಿ ಏನನ್ನೊ ಬೆರೆಸಿ ಕುಡಿಸಿ ಮತ್ತು ಬರಿಸಿ ಅತ್ಯಾಚಾರ ಮಾಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಾಳೆ. ಆರೋಪಿ ಅಲ್ತಾಫ್‌ನನ್ನು ಬಂಧಿಸಲಾಗಿದೆ” ಎಂದು ಅರುಣ್‌ ಕುಮಾರ್‌ ಹೇಳಿದ್ದಾರೆ.

ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರು ಆರೋಪಿಗಳ ಪೈಕಿ ಸುಬೇರ್ ಎಂಬಾತನನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ವಾಹನವನ್ನು ಸೀಜ್ ಮಾಡಲಾಗಿದೆ. ಸಂತ್ರಸ್ತೆಗೆ ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್‌ಪಿ ತಿಳಿಸಿದ್ದಾರೆ. ಯುವತಿ ಜೇನು ಕೃಷಿ ಇಲಾಖೆಯಲ್ಲಿ ಕೆಲಸಕ್ಕಿದ್ದಳು. ಇನ್‌ಸ್ಟಾಗ್ರಾಂನಲ್ಲಿ ಇವರಿಗೆ ಸ್ನೇಹ ಬೆಳೆದಿತ್ತು ಎಂದು ತಿಳಿದುಬಂದಿದೆ.

ಮಾದಕ ಪದಾರ್ಥ ನೀಡಿ ಹಿಂದೂ ಯುವತಿಯ ರೇಪ್ ಎಸಗಿದ ಪ್ರಕರಣದಲ್ಲಿ ಕಾರ್ಕಳ ನಗರ ಠಾಣೆಯಲ್ಲಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಲ್ತಾಫ್ & ಇಬ್ಬರ ವಿರುದ್ಧ ಕಾರಿನಲ್ಲಿ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ರೇಪ್ ಮಾಡಿದ ಆರೋಪ ಪ್ರಕರಣ ದಾಖಲಾಗಿದೆ. ನಿನ್ನೆ ಮಧ್ಯಾಹ್ನ ಆಕೆಯನ್ನು ಕರೆದೊಯ್ದಿದ್ದ ಅಲ್ತಾಫ್, ಮಾದಕ ಪಾನೀಯ ಕುಡಿಸಿ ಮತ್ತು ಬರಿಸಿ ಸಂಜೆಯವರೆಗೆ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.

ಆರೋಪಿ ಅಲ್ತಾಫ್ ವಿರುದ್ಧ ಹಿಂದೂ ಯುವತಿಯ ತಾಯಿಯಿಂದ ರೇಪ್ & ಕಿಡ್ನಾಪ್ ಪ್ರಕರಣ ದಾಖಲಾಗಿದೆ. ಪ್ರಮುಖ ಆರೋಪಿ ಅಲ್ತಾಫ್ ಮತ್ತು ಸಹಕರಿಸಿದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಗೆ ಬಲೆ ಬೀಸಲಾಗಿದೆ.

ಶುಕ್ರವಾರ ಮಧ್ಯಾಹ್ನ ಆಕೆಯನ್ನು ಪುಸಲಾಯಿಸಿ ಕರೆದೊಯ್ದಿದ್ದ ಆರೋಪಿ, ಸಂಜೆ ಆಕೆಯನ್ನು ಮನೆ ಸಮೀಪ ಬಿಟ್ಟು ಹೋಗಿದ್ದ. ನಿನ್ನೆ ರಾತ್ರಿ ಠಾಣೆ ಎದುರು ಜಮಾಯಿಸಿದ್ದ ಹಿಂದೂ ಕಾರ್ಯಕರ್ತರು, ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Love Jihad: ಹಿಂದೂ ಯುವತಿಯ ಕರೆದೊಯ್ದ ಮುಸ್ಲಿಂ ಯುವಕ; ಕಾರ್ಕಳ ಪ್ರಕ್ಷುಬ್ಧ

Continue Reading

ಉಡುಪಿ

POCSO case: ಮೂಡುಬಿದಿರೆ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ತಂದೆಯ ಬಂಧನ

POCSO Case: ಈ ಬಗ್ಗೆ ಬಾಲಕಿಯ ತಂದೆಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಆರಂಭದಲ್ಲಿ ಬೇರೆಯವರ ಹೆಸರು ಹೇಳಿದ್ದನೆನ್ನಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾನೆ.

VISTARANEWS.COM


on

POCSO Case udupi
Koo

ಮೂಡುಬಿದಿರೆ: ಅಪ್ರಾಪ್ತ ವಯಸ್ಸಿನ (Minor) ಸ್ವಂತ ಮಗಳ ಮೇಲೆ ಅತ್ಯಾಚಾರ (Physical Abuse) ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ (Pregnant) ಆರೋಪದ ಮೇರೆಗೆ ವಿಕೃಕಾಮಿ ತಂದೆಯೊಬ್ಬನನ್ನು ಮೂಡುಬಿದಿರೆ ಪೋಲಿಸರು ಬಂಧಿಸಿ ಪೋಕ್ಸೋ ಪ್ರಕರಣ (POCSO case) ದಾಖಲಿಸಿದ್ದಾರೆ.

55 ವರ್ಷ ಪ್ರಾಯದ ಕೂಲಿ ಕಾರ್ಮಿಕ ಬಂಧಿತನಾಗಿದ್ದು, ಈತ ಪ್ರೌಢಶಾಲೆಯಲ್ಲಿ ಓದುತ್ತಿರುವ ಮಗಳ ಮೇಲೆ ಆರು ತಿಂಗಳ ಹಿಂದೆ ಮನೆಯಲ್ಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಇತ್ತೀಚೆಗೆ ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾದಾಗ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ದಿದ್ದ. ಅಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಗಳು 6 ತಿಂಗಳ ಗರ್ಭಿಣಿಯಾಗಿರುವುದು ತಿಳಿದುಬಂದಿದೆ.

ಈ ಬಗ್ಗೆ ಬಾಲಕಿಯ ತಂದೆಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಆರಂಭದಲ್ಲಿ ಬೇರೆಯವರ ಹೆಸರು ಹೇಳಿದ್ದನೆನ್ನಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿದೆ. ಆರೋಪಿ ಮೂಲತಃ ಕಾರ್ಕಳದವನಾಗಿದ್ದು ದಶಕಗಳ ಹಿಂದೆ ಮೂಡುಬಿದಿರೆ ತಾಲೂಕಿನ ಗ್ರಾಮವೊಂದರ ಸರಕಾರಿ ಜಾಗದಲ್ಲಿ ಮನೆ ಕಟ್ಟಿ ನೆಲೆಸಿದ್ದ.

Murder Case : ಉಡುಪಿಯಲ್ಲಿ ಪತ್ನಿಯನ್ನು ಕಡಿದು ಕೊಂದು ಹಾಕಿದ ಪತಿ!

ಉಡುಪಿ: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳ್ಳಂಬೆಳಗ್ಗೆ ನೆತ್ತರು (Murder Case ಹರಿದಿದೆ. ಪತಿಯೇ ತನ್ನ ಪತ್ನಿಯನ್ನು ಕಡಿದು ಕೊಲೆ ಮಾಡಿರುವ ಶಂಕೆ ಇದೆ. ಜಯಶ್ರೀ (28) ಕೊಲೆಯಾದವಳು. ಕಿರಣ್ ಉಪಾಧ್ಯ(30) ಕೊಲೆ ಆರೋಪಿಯಾಗಿದ್ದಾನೆ.

ಉಡುಪಿಯಲ್ಲಿ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ಘಟನೆ ನಡೆದಿದೆ. ಈ ಜೋಡಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶುಕ್ರವಾರ ಮುಂಜಾನೆ ಪತ್ನಿಯನ್ನು ಕಿರಣ್ ಉಪಾಧ್ಯ ಕೊಲೆ ಮಾಡಿದ್ದ ಎನ್ನುವ ಮಾಹಿತಿ ಇದೆ.

ಶಂಕೆ ಮೇರೆಗೆ ಪತಿ ಕಿರಣ್ ಉಪಾಧ್ಯ ಗುಂಡ್ಮಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ದೂರು ದಾಖಲಾಗಿದ್ದು,ಈ ಕುರಿತು ಪೊಲೀಸರು ವಿವರ ಸಂಗ್ರಹಿಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Murder case

ಟ್ಯಾರೆಸ್‌ನಿಂದ ಬಿದ್ದು ಗಾಯಗೊಂಡಿದ್ದಳು ಜಯಶ್ರೀ!

ಜಯಶ್ರೀ (31) ಬೀದರ್ ದೊಣಗಪುರ ಮೂಲದವರು. ಕಿರಣ್‌ ಗುರು ನರಸಿಂಹ ದೇವಸ್ಥಾನದಲ್ಲಿ ಎರಡು ವರ್ಷದಿಂದ ಅಡುಗೆ ಕೆಲಸ ಮಾಡುತ್ತಿದ್ದ. ಮನೆಯ ಟ್ಯಾರೆಸ್‌ನಿಂದ ಬಿದ್ದು ಜಯಶ್ರೀ ಗಾಯಗೊಂಡಿರುವುದಾಗಿ ಕಿರಣ್‌ ಹೇಳಿದ್ದಾನೆ. ಗಾಯಾಳು ಪತ್ನಿಯನ್ನು ಆಸ್ಪತ್ರೆಗೆ ಸೇರಿಸಿದ್ದ ಎನ್ನಲಾಗಿದೆ. ಸದ್ಯ ಉಡುಪಿಯ ಅಜ್ಜರ ಕಾಡು ಸರಕಾರಿ ಆಸ್ಪತ್ರೆಯಲ್ಲಿ ಮೃತದೇಹ ಇದ್ದು, ಜಯಶ್ರೀ ಕುಟುಂಬಸ್ಥರ ಆಗಮನಕ್ಕಾಗಿ ಪೊಲೀಸರು ಕಾಯುತ್ತಿದ್ದಾರೆ.

ಇದನ್ನೂ ಓದಿ: Assault Case : ಹುಡುಗಿ ವಿಷ್ಯಕ್ಕೆ ನಡುರಸ್ತೆಯಲ್ಲಿ ಲಾಂಗ್‌ ಝಳಪಿಸಿದ ಯುವಕರು

Continue Reading
Advertisement
unified pension scheme
ಪ್ರಮುಖ ಸುದ್ದಿ2 hours ago

Unified pension scheme: ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ಸಂಘಗಳ ವಿರೋಧ

Sunita Williams
ದೇಶ2 hours ago

Sunita Williams: ಮುಂದಿನ ವರ್ಷ ಫೆಬ್ರುವರಿಯಲ್ಲಿ ಭೂಮಿಗೆ ಮರಳಲಿದ್ದಾರೆ ಸುನೀತಾ ವಿಲಿಯಮ್ಸ್;‌ ನಾಸಾ ಘೋಷಣೆ

karnataka weather forecast
ಮಳೆ2 hours ago

Karnataka Weather : ಬೆಂಗಳೂರು ಸೇರಿದಂತೆ ಉಡುಪಿ, ಉತ್ತರ ಕನ್ನಡದಲ್ಲಿಂದು ಭಾರಿ ಮಳೆ ಎಚ್ಚರ

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರ ಬಹು ದಿನಗಳ ಕನಸು ನನಸು; ಕುಟುಂಬದ ಆಪ್ತರಿಂದ ಶುಭ ಸುದ್ದಿ

Rahul Gandhi
ದೇಶ8 hours ago

Rahul Gandhi: ಮಿಸ್‌ ಇಂಡಿಯಾ ಪಟ್ಟಿಯಲ್ಲಿ ದಲಿತ, ಬುಡಕಟ್ಟು, ಒಬಿಸಿ ಮಹಿಳೆಯರು ಇಲ್ಲವೇ ಇಲ್ಲ-ರಾಹುಲ್‌ ಗಾಂಧಿ ಹೊಸ ಆರೋಪ

Sudha Murthy
ಬೆಂಗಳೂರು9 hours ago

Sudha Murthy: ವೈದ್ಯಕೀಯ ಸೇವೆಯಲ್ಲಿ ಬದ್ಧತೆ, ನೈತಿಕತೆ ಇಂದಿನ ಅಗತ್ಯ: ಸುಧಾಮೂರ್ತಿ

Unified Pension scheme
ಪ್ರಮುಖ ಸುದ್ದಿ9 hours ago

Unified Pension scheme: ಏಕೀಕೃತ ಪಿಂಚಣಿ ಯೋಜನೆ ಸರ್ಕಾರಿ ನೌಕರರಿಗೆ ಕೇಂದ್ರ ನೀಡುತ್ತಿರುವ ಆರ್ಥಿಕ ಭದ್ರತೆ- ಪ್ರಧಾನಿ ನರೇಂದ್ರ ಮೋದಿ

Amit Shah
ದೇಶ10 hours ago

Amit Shah: 2026ರ ವೇಳೆಗೆ ನಕ್ಸಲಿಸಂ ಸಂಪೂರ್ಣ ನಿರ್ಣಾಮ; ಬಿಗ್‌ ಟಾರ್ಗೆಟ್‌ ಫಿಕ್ಸ್‌ ಮಾಡಿದ ಕೇಂದ್ರ

Vijayanagara News
ವಿಜಯನಗರ10 hours ago

Vijayanagara News: ಮೀನುಗಾರರಿಗೆ ರಾಜ್ಯ‌ ಸರ್ಕಾರದಿಂದ ನಾನಾ ಸೌಕರ್ಯ; ಸಚಿವ ಮಂಕಾಳ ವೈದ್ಯ

NPS v/s UPS
ದೇಶ11 hours ago

NPS v/s UPS: ಏಕೀಕೃತ ಪಿಂಚಣಿ ಯೋಜನೆ ಅಂದ್ರೆ ಏನು? ಇದು NPSಗಿಂತ ಹೇಗೆ ಭಿನ್ನ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ17 hours ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌