Site icon Vistara News

Mangalore News: ಪಣಂಬೂರು ಬೀಚ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕ ನಾಪತ್ತೆ

Boy goes missing

ಮಂಗಳೂರು: ನಗರದ ಪಣಂಬೂರು ಬೀಚ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ. ಬಾಗಲಕೋಟೆ ಮೂಲದ, ಪ್ರಸ್ತುತ ಮೀನಕಳಿಯಲ್ಲಿ (Mangalore News) ವಾಸವಾಗಿರುವ ತುಕರಾಮ (13) ನಾಪತ್ತೆಯಾದ ಬಾಲಕ.

ಸ್ಥಳೀಯ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ತುಕರಾಮ, ಸಂಜೆ ಗೆಳೆಯರೊಡನೆ ಈಜಾಡಲು ತೆರಳಿದ್ದ ಎನ್ನಲಾಗಿದೆ. ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅಲೆಗಳ ರಭಸಕ್ಕೆ ಸಿಲುಕಿ ಬಾಲಕ ನಾಪತ್ತೆಯಾಗಿದ್ದಾನೆ. ಜೀವರಕ್ಷಕ ದಳ, ಸ್ಥಳೀಯರಿಂದ ಬಾಲಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಪಣಂಬೂರು ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ | Assault Case : ದಾರಿ ಬಿಡು ಎಂದಿದ್ದಕ್ಕೆ ಬಸ್‌ಗೆ ಕಲ್ಲೆಸೆದ ಕುಡುಕ; ಕಾರ್‌ ಪಾರ್ಕಿಂಗ್‌ ವಿಷ್ಯಕ್ಕೆ ಹೊಡಿಬಡಿ

ಚಾರಣಕ್ಕೆ ಹೋದ ಇಬ್ಬರು ಯುವಕರು ನಾಪತ್ತೆ

ಮಂಗಳೂರು: ಚಾರಣಕ್ಕೆ ಹೋದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಬೆಂಗಳೂರು ಮೂಲದ 10 ಯುವಕರ ಚಾರಣಕ್ಕೆ ತೆರಳಿತ್ತು. ಸಂಜೆ ದುರ್ಗದ ಹಳ್ಳಿಯಿಂದ ಚಾರಣಕ್ಕೆ ತೆರಳಿದ್ದಋು. ಈ ವೇಳೆ ಇಬ್ಬರು ನಾಪತ್ತೆಯಾಗಿದ್ದು, ಅರಣ್ಯ ಅಧಿಕಾರಿಗಳು ಹುಡುಕಾಟ ಆರಂಭಿಸಿದ್ದಾರೆ.

Exit mobile version