ಎಲೆಕ್ಷನ್‌ ಹವಾ | ಮಂಗಳೂರು | ʼಖಾದರ್‌ʼ ಖಾನ್‌ದಾನ್‌ ಎದುರು ಬಿಜೆಪಿ ಭವಿಷ್ಯ ಮಂಕಾಗಿದೆ, ಪ್ರಯತ್ನ ಜಾರಿಯಲ್ಲಿದೆ - Vistara News

ಕರ್ನಾಟಕ ಎಲೆಕ್ಷನ್

ಎಲೆಕ್ಷನ್‌ ಹವಾ | ಮಂಗಳೂರು | ʼಖಾದರ್‌ʼ ಖಾನ್‌ದಾನ್‌ ಎದುರು ಬಿಜೆಪಿ ಭವಿಷ್ಯ ಮಂಕಾಗಿದೆ, ಪ್ರಯತ್ನ ಜಾರಿಯಲ್ಲಿದೆ

ಮಂಗಳೂರು ವಿಧಾನಸಭಾ ಕ್ಷೇತ್ರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಇರುವ ಏಕೈಕ ಭದ್ರ ಕೋಟೆ. ಮುಸ್ಲಿಮ್‌ ಮತಗಳೇ ಇಲ್ಲಿ ನಿರ್ಣಾಯಕವಾಗಿರುವ ಕಾರಣ ಕಳೆದ 14 ಚುನಾವಣೆಯಲ್ಲಿ 10 ಬಾರಿ ಮುಸ್ಲಿಂ ಅಭ್ಯರ್ಥಿಗೇ ಜಯವಾಗಿದೆ.

VISTARANEWS.COM


on

Mangaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಜೇಶ್‌ ಪುತ್ತೂರು, ಮಂಗಳೂರು
ಉಳ್ಳಾಲ ಕ್ಷೇತ್ರವಾಗಿದ್ದ ಈ ಕ್ಷೇತ್ರ ಕ್ಷೇತ್ರ ಪುನರ್‌ವಿಂಗಡಣೆಯ ಬಳಿಕ ವಿಟ್ಲ ಹಾಗೂ ಸುರತ್ಕಲ್‌ ವಿಧಾನಸಭಾ ಕ್ಷೇತ್ರದ ಗ್ರಾಮಗಳನ್ನು ಒಳಗೊಂಡ ಮಂಗಳೂರು ವಿಧಾನಸಭಾ ಕ್ಷೇತ್ರವಾಗಿ ನಾಮಕರಣಗೊಂಡಿದೆ. ಮಂಗಳೂರು ನಗರದಿಂದ ಹತ್ತು ಕಿಲೋ ಮೀಟರ್‌ ದೂರದಲ್ಲಿ ಇರುವ ಕ್ಷೇತ್ರ. ಒಂದು ಕಡೆ ನೇತ್ರಾವತಿ ನದಿ ಮತ್ತೊಂದು ಕಡೆ ಅರಬ್ಬೀ ಸಮುದ್ರದ ಅಲೆಗಳ ಮೂಲಕ ಪ್ರವಾಸಿಗರನ್ನು ಆಕರ್ಶಿಸುವ ಪ್ರವಾಸಿ ತಾಣ ಕೂಡಾ ಹೌದು.

ರಾಣಿ ಅಬ್ಬಕ್ಕನ ರಾಜಧಾನಿಯಾಗಿದ್ದ ಈ ಉಳ್ಳಾಲದ ಸೋಮನಾಥೇಶ್ವರ ದೇವಾಲಯ ಹಾಗೂ ದೇವಾಲಯಕ್ಕೆ ತಾಗಿಕೊಂಡು ಇರುವ ಬಂಡೆಗಳಿಗೆ ಅಪ್ಪಳಿಸುವ ಸಮುದ್ರದ ಅಲೆಗಳ ಮೂಲಕ ಸೋಮೇಶ್ವರ ಬೀಚ್‌ ಇಂದು ಸಾವಿರಾರು ಪ್ರವಾಸಿಗರು ಭೇಟಿ ನೀಡುವ ಸ್ಥಳ.

ಮುಸ್ಲಿಂ ಸಮುದಾಯದ ಪ್ರಾಬಲ್ಯ

ಉಳ್ಳಾಲದಲ್ಲಿ ಇರುವ 400 ವರ್ಷಗಳ ಇತಿಹಾಸವಿರುವ ಸಯ್ಯದ್ ಮಹಮ್ಮದ್‌ ಷರೀಫ್‌ ಮದನಿ ದರ್ಗಾ ಸರ್ವಧರ್ಮದ ಜನರ ಆರಾಧನಾ ಸ್ಥಳ. ಐದು ವರ್ಷಗಳಿಗೊಮ್ಮೆ ಇಲ್ಲಿ ನಡೆಯುವ ಉರೂಸ್‌ನಲ್ಲಿ ಎಲ್ಲ ಜಾತಿ, ಧರ್ಮದ ಜನರು ಭಾಗವಹಿಸುವ ಮೂಲಕ ಇಂದಿಗೂ ಸೌಹಾರ್ದ ಕೇಂದ್ರ ಎನ್ನುವುದನ್ನು ಸಾಬೀತು ಮಾಡಿದೆ. ಉಳ್ಳಾಲದಲ್ಲಿ ಇವಿಷ್ಟಿದ್ದರೆ, ಮಂಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಐಟಿ ಪಾರ್ಕ್‌, ಪ್ರತಿಷ್ಠಿತ ಮೆಡಿಕಲ್‌ ಕಾಲೇಜುಗಳು ಇರುವ ಕಾರಣ ಇಲ್ಲಿ ಹಲವು ರಾಜ್ಯಗಳ ಹಲವು ಭಾಷೆಗಳ ಜನ ವಾಸವಾಗಿದ್ದಾರೆ. ಕೇರಳದ ಗಡಿಗೆ ತಾಗಿಕೊಂಡೇ ಇರುವ ಈ ಕ್ಷೇತ್ರದಲ್ಲಿ ಮಲೆಯಾಳಂ ಭಾಷೆಯ ಪ್ರಾಬಲ್ಯದ ಜತೆಗೆ ಮುಸ್ಲಿಂ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ.

ಯು.ಟಿ. ಖಾದರ್‌ ಸೋಲಿಲ್ಲದ ಸರದಾರ

ಈ ಕ್ಷೇತ್ರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಇರುವ ಏಕೈಕ ಭದ್ರ ಕೋಟೆ. ಮುಸ್ಲಿಮ್‌ ಮತಗಳೇ ಇಲ್ಲಿ ನಿರ್ಣಾಯಕವಾಗಿರುವ ಕಾರಣ ಕಳೆದ 14 ಚುನಾವಣೆಯಲ್ಲಿ 10 ಬಾರಿ ಮುಸ್ಲಿಂ ಅಭ್ಯರ್ಥಿಗೇ ಜಯವಾಗಿದೆ. ಒಮ್ಮೆ ಬಿಜೆಪಿ ಒಂದು ಬಾರಿ ಗೆದ್ದಿರುವುದನ್ನು ಹೊರತು ಪಡಿಸಿದರೆ ಬಳಿಕ ನಿರಂತರವಾಗಿ ಈಗಿನ ಶಾಸಕ ಯು.ಟಿ. ಖಾದರ್‌ ಹಾಗೂ ಅದಕ್ಕೂ ಮೊದಲು ಅವರ ತಂದೆ ಯು.ಟಿ. ಫರೀದ್‌ ಶಾಸಕರಾಗಿ ಕಾಂಗ್ರೆಸ್‌ಗೆ ಇಲ್ಲಿ ಸೋಲಿಲ್ಲದಂತೆ ನೋಡಿಕೊಂಡಿದ್ದಾರೆ. ಬಿಜೆಪಿಯ ಯಾವುದೇ ತಂತ್ರಗಾರಿಕೆ ಇಲ್ಲಿ ವರ್ಕೌಟ್‌ ಆಗಿಲ್ಲ.

ಶಾಸಕ ಯು.ಟಿ. ಫರೀದ್‌ ಅವರ ನಿಧನದ ಕಾರಣಕ್ಕೆ 2006ರಲ್ಲಿ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆಯಿತು. ಯು.ಟಿ. ಫರೀದ್‌ ಅವರ ಪುತ್ರ ಯು.ಟಿ. ಖಾದರ್‌ ಮೊದಲ ಬಾರಿಗೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದರು. ಜೆಡಿಎಸ್‌ನ ಮುಸ್ಲಿಂ ಅಭ್ಯರ್ಥಿ ಪರ ಎಚ್‌.ಡಿ. ದೇವೇಗೌಡರು, ಎಚ್‌.ಡಿ. ಕುಮಾರಸ್ವಾಮಿ ಸಾಕಷ್ಟು ಪ್ರಚಾರ ನಡೆಸಿದರೂ ಕಾಂಗ್ರೆಸಿನ ಮುಸ್ಲಿಂ ಮತ ಸೆಳೆಯುವಲ್ಲಿ ವಿಫಲರಾಗಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಚಂದ್ರಶೇಖರ್‌ ಉಚ್ಚಿಲ್‌ ಕೂಡಾ ಪೈಪೋಟಿ ನೀಡಲು ಸಾಧ್ಯವಾಗಿರಲಿಲ್ಲ.

2008 ರಲ್ಲಿ ಕ್ಷೇತ್ರ ಪುನರ್‌ವಿಂಗಡಣೆಯಾದಾಗ ವಿಟ್ಲ ವಿಧಾನಸಭಾ ಕ್ಷೇತ್ರದ ಹಲವು ಗ್ರಾಮಗಳು ಮಂಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರಿದ್ದವು. ತಂದೆ ಯು.ಟಿ.ಫರೀದ್‌ ಅವರಂತೆ ಶಾಸಕ ಯು.ಟಿ. ಖಾದರ್‌ ತನ್ನ ಕ್ಷೇತ್ರಕ್ಕೆ ಹಲವು ಕೊಡುಗೆ ನೀಡಿದ್ದಾರೆ. ಕ್ಷೇತ್ರದ ಎಲ್ಲ ಗ್ರಾಮಗಳಿಗೂ ಓಡಾಡಿ ಜನರ ಜತೆ ಉತ್ತಮ ಸಂಪರ್ಕ ಬೆಳೆಸಿಕೊಂಡಿರುವ ಯು.ಟಿ. ಖಾದರ್‌, ಕ್ಷೇತ್ರದ ಅಭಿವೃದ್ದಿ ವಿಚಾರದಲ್ಲಿ ರಾಜಿ ಮಾಡಿಕೊಂಡಿಲ್ಲ. ಕಳೆದ ಚುನಾವಣೆಯಲ್ಲಿ ಬಿಜೆಪಿ, ಕ್ಷೇತ್ರವನ್ನು ಗೆದ್ದೇ ಗೆಲ್ಲುತ್ತೇವೆ ಎಂದು ಹಿಂದುತ್ವದ ಹಲವು ಕಾರ್ಡ್‌ ಬಳಸಿತ್ತಾದರೂ ಕೊನೆಗೂ ಖಾದರ್ ಎದುರು ಸೋಲೊಪ್ಪಿಕೊಂಡಿತ್ತು.

ಗೆಲುವು-ಸೋಲಿಗೆ ಕಾರಣ

ಕೇವಲ ಒಂದು ಬಾರಿಯಷ್ಟೇ ಇಲ್ಲಿ ಗೆದ್ದು ಬೀಗಿದ್ದ ಬಿಜೆಪಿಗೆ ಪೂರ್ಣ ಪ್ರಮಾಣದಲ್ಲಿ ಹಿಂದು ಮತಗಳನ್ನು ಸೆಳೆಯಲು ಅಸಾದ್ಯವಾಗಿರುವುದು ಸೋಲಿಗೆ ಕಾರಣ. ಮುಸ್ಲಿಂ ಮತಗಳು ಇಲ್ಲಿ ನಿರ್ಣಾಯಕವಾಗಿದ್ದರೂ ಎಸ್‌ಡಿಪಿಐ ಪಕ್ಷ ಇಲ್ಲಿ ಮುಸ್ಲಿಂ ಮತವನ್ನು ಒಡೆಯಲು ವಿಫಲವಾಗಿತ್ತು. ಯು.ಟಿ. ಖಾದರ್‌ ಎಲ್ಲ ಧರ್ಮ ಹಾಗೂ ಸಮುದಾಯದ ಜನರ ಜತೆ ಉತ್ತಮ ಬಾಂಧವ್ಯ ಹೊಂದಿರುವುದು ಖಾದರ್‌ ಗೆಲುವಿಗೆ ಕಾರಣ. ಬಿಜೆಪಿಗೆ ಖಾದರ್‌ ಎದುರು ಸಮರ್ಥ ಅಭ್ಯರ್ಥಿಯ ಕೊರತೆ ಇಲ್ಲಿ ಕಾಣುತ್ತಿದೆ.

2023ರ ಚುನಾವಣೆಗೆ ಹಣಾಹಣಿ

ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಯು.ಟಿ. ಖಾದರ್‌ ಹೊರತುಪಡಿಸಿದರೆ ಬೇರೆ ಪರ್ಯಾಯ ನಾಯಕ ಇಲ್ಲ. ಬಿಜೆಪಿಯಲ್ಲಿ ಆಕಾಂಕ್ಷಿಗಳ ಸಾಲು ದೊಡ್ಡದಿದೆ. ಕಳೆದ ಬಾರಿ ಸ್ಪರ್ಧಿಸಿದ್ದ ಸಂತೋಷ್‌ ಕುಮಾರ್‌ ಬೋಳಿಯಾರು ಈ ಭಾರಿಯೂ ಸ್ಪರ್ಧೆಗೆ ಇಳಿಯುವ ಇಂಗಿತ ಹೊಂದಿದ್ದಾರೆ. ಹೀಗಾಗಿ ಕ್ಷೇತ್ರದಲ್ಲಿ ಈಗಾಗಲೇ ಓಡಾಟ ನಡೆಸುವ ಮೂಲಕ, ನಾನೇ ಮುಂದಿನ ಬಿಜೆಪಿ ಅಭ್ಯರ್ಥಿ ಎಂದು ಬಿಂಬಿಸಿಕೊಂಡಿದ್ದಾರೆ. ಈ ಬಾರಿ ಹೇಗಾದರೂ ಮಾಡಿ ಕ್ಷೇತ್ರವನ್ನು ಕೈ ವಶ ಮಾಡಿಕೊಳ್ಳಬೇಕು ಎಂದು ಪ್ಲ್ಯಾನ್‌ ಮಾಡಿರುವ ಬಿಜೆಪಿ, ಸಂಘ ಪರಿವಾರದ ನಾಯಕನಿಗೆ ಮಣೆ ಹಾಕುವ ಸಾದ್ಯತೆ ದಟ್ಟವಾಗಿದೆ.

ಸಾಕಷ್ಟು ವರ್ಷಗಳಿಂದ ಬಜರಂಗದಳದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿರುವ ಶರಣ್‌ ಪಂಪ್‌ವೆಲ್‌ಗೆ ಮಣೆ ಹಾಕುವ ಸಾದ್ಯತೆ ಇದೆ. ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯ ಸತೀಶ್‌ ಕುಂಪಲ, ಹರೀಶ್‌ ಕುತ್ತಾರು ಹಾಗೂ ಚಂದ್ರಹಾಸ್‌ ಪಂಡಿತ್‌ ಹೌಸ್‌ ಈ ಬಾರಿ ತಮಗೆ ಟಿಕೆಟ್‌ ಸಿಗಬಹುದು ಎನ್ನುವ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕೊನೆಯ ಕ್ಷಣದಲ್ಲಿ ಯಾವ ಬದಲಾವಣೆ ಆದರೂ ಸಂತೋಷ್‌ ಕುಮಾರ್‌ ಬೋಳಿಯಾರು ಅಥವಾ ಶರಣ್‌ ಪಂಪ್‌ವೆಲ್‌ಗೆ ಟಿಕೆಟ್‌ ಒಲಿಯೋ ಸಾದ್ಯತೆ ಹೆಚ್ಚು.

2023ಕ್ಕೆ ಸಂಭಾವ್ಯ ಪ್ರತಿಸ್ಪರ್ಧಿಗಳು
1. ಯು.ಟಿ.ಖಾದರ್‌ (ಕಾಂಗ್ರೆಸ್‌)
2. ಸಂತೋಷ್ ಕುಮಾರ್ ರೈ ಬೋಳಿಯಾರ್, ಶರಣ್‌ ಪಂಪ್‌ವೆಲ್‌, ಸತೀಶ್‌ ಕುಂಪಲ, ಹರೀಶ್‌ ಕುತ್ತಾರು, ಚಂದ್ರಹಾಸ್‌ ಪಂಡಿತ್‌ ಹೌಸ್‌ (ಬಿಜೆಪಿ)

ಮಂಗಳೂರು ವಿಧಾನಸಭಾ ಕ್ಷೇತ್ರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಇರುವ ಏಕೈಕ ಭದ್ರ ಕೋಟೆ.
ಮಂಗಳೂರು ವಿಧಾನಸಭಾ ಕ್ಷೇತ್ರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಇರುವ ಏಕೈಕ ಭದ್ರ ಕೋಟೆ.

ಇದನ್ನೂ ಓದಿ | ಎಲೆಕ್ಷನ್‌ ಹವಾ | ಶಿವಮೊಗ್ಗ ಗ್ರಾಮಾಂತರ | ಹೆಚ್ಚುತ್ತಲೇ ಇದೆ BJP ಗೆಲುವಿನ ಅಂತರ, ಅವಕಾಶಕ್ಕಾಗಿ ಕಾಂಗ್ರೆಸ್‌-ಜೆಡಿಎಸ್‌ ಕಾತರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Surapura Assembly constituency: ಸುರಪುರ ಉಪ ಚುನಾವಣೆಗೆ ರಾಜುಗೌಡ ಬಿಜೆಪಿ ಅಭ್ಯರ್ಥಿ; ಹೇಗಿದೆ ಕ್ಷೇತ್ರ ಚಿತ್ರಣ?

Surapura Assembly constituency: ಬಿ.ಎಸ್.‌ ಯಡಿಯೂರಪ್ಪ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ರಾಜುಗೌಡ ಕ್ಷೇತ್ರದಲ್ಲಿ ಜನರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರು. ಆದರೆ, ಕಾಂಗ್ರೆಸ್‌ ಅಭ್ಯರ್ಥಿಗೆ ಇರುವ ಅನುಕಂಪದ ಅಲೆಯನ್ನು ದಾಟಿ ಇವರು ಜಯಗಳಿಸಬೇಕೆಂದರೆ ಹೆಚ್ಚಿನ ಶ್ರಮವನ್ನು ಹಾಕಲೇಬೇಕಿದೆ.

VISTARANEWS.COM


on

Raju Gowda Shorapur or Surapura Assembly constituency BJP Candidate
Koo

ಬೆಂಗಳೂರು: ದೇಶದೆಲ್ಲೆಡೆ ಲೋಕಸಭಾ ಚುನಾವಣೆಯ (Lok Sabha Election 2024) ಫೀವರ್‌ ಹೆಚ್ಚಾಗಿದೆ. ಈ ನಡುವೆ ಮುಖ್ಯ ಚುನಾವಣಾ ಆಯೋಗವು ಹಲವು ರಾಜ್ಯಗಳ ಉಪ ಚುನಾವಣೆಯನ್ನೂ ಸಹ ಘೋಷಣೆ ಮಾಡಿದೆ. ಇದಕ್ಕೆ ಈಗ ರಾಜ್ಯದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ (Raja Venkatappa Nayaka) ಅವರ ನಿಧನದಿಂದ ತೆರವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ (Surapura Assembly constituency) ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಸಿಂಹ ನಾಯಕ (ರಾಜೂಗೌಡ) (Raju Gowda) ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ.

ರಾಜುಗೌಡ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ರಾಜಾ ವೆಂಕಟಪ್ಪ ನಾಯಕ ವಿರುದ್ಧ ಸೋಲು ಕಂಡಿದ್ದರು. ಆದರೆ, ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಿದೆ. 2023ರಲ್ಲಿ ನಡೆದ ಚುನಾವಣೆಯಲ್ಲಿ ರಾಜೂಗೌಡ ಅವರು 25223 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಆದರೆ, ಕಳೆದ 2018ರ ಚುನಾವಣೆಯಲ್ಲಿ ರಾಜುಗೌಡ ಅವರು ಗೆದ್ದಿದ್ದರು. ಅಲ್ಲದೆ, ಬಿ.ಎಸ್.‌ ಯಡಿಯೂರಪ್ಪ (BS Yediyurappa) ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಇವರು ಕ್ಷೇತ್ರದಲ್ಲಿ ಜನರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರು. ಆದರೆ, ಕಾಂಗ್ರೆಸ್‌ ಅಭ್ಯರ್ಥಿಗೆ ಇರುವ ಅನುಕಂಪದ ಅಲೆಯನ್ನು ದಾಟಿ ಇವರು ಜಯಗಳಿಸಬೇಕೆಂದರೆ ಹೆಚ್ಚಿನ ಶ್ರಮವನ್ನು ಹಾಕಲೇಬೇಕಿದೆ.

ಕಾಂಗ್ರೆಸ್‌ನಿಂದ ರಾಜಾ ವೇಣುಗೋಪಾಲ ನಾಯಕ ಸ್ಪರ್ಧೆ

ಕಾಂಗ್ರೆಸ್‌ನಿಂದ ಈಗಾಗಲೇ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ. ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ (Raja Venugopala Nayaka) ಸ್ಪರ್ಧೆ ಮಾಡುತ್ತಿದ್ದಾರೆ. ತಂದೆ ನಿಧನವಾಗಿದ್ದರಿಂದ ಅನುಕಂಪದ ಅಲೆ ಹಾಗೂ ಕಾಂಗ್ರೆಸ್‌ ಆಡಳಿತದಲ್ಲಿರುವುದು ಅವರಿಗೆ ಪ್ಲಸ್‌ ಆಗಲಿದೆ. ಜತೆಗೆ ವೇಣುಗೋಪಾಲ ನಾಯಕ್‌ಗೆ ಚುನಾವಣೆ ಹೊಸದೇನಲ್ಲ. ಅವರದ್ದು ರಾಜಕೀಯ ಹಿನ್ನೆಲೆಯ ಕುಟುಂಬವಾಗಿದೆ. ಇವರ ಅಜ್ಜ ರಾಜಾ ಕುಮಾರ ನಾಯಕ ಅವರು ಎರಡು ಬಾರಿ, ತಂದೆ ರಾಜಾ ವೆಂಕಟಪ್ಪ ನಾಯಕ 4 ಬಾರಿ, ಚಿಕ್ಕಪ್ಪ ಒಂದು ಬಾರಿ ಸುರಪುರ ಕ್ಷೇತ್ರದಿಂದ ಶಾಸಕರಾಗಿದ್ದರು. ಅಲ್ಲದೆ, ತಂದೆಯ ಜತೆಗೆ ಚುನಾವಣೆ ಸಂದರ್ಭದಲ್ಲಿ ಕ್ಯಾಂಪೇನ್‌ ಮಾಡುವುದು, ತಂತ್ರಗಾರಿಕೆಯನ್ನು ರೂಪಿಸುವ ಕೆಲಸವನ್ನು ವೇಣುಗೋಪಾಲ ನಾಯಕ ಮಾಡುತ್ತಿದ್ದರು. ಹೀಗಾಗಿ ಅವರಿಗೆ ಈ ಚುನಾವಣೆ ಹೊಸದಲ್ಲ.

ಎಲ್ಲ ಪಕ್ಷದವರೂ ಇಲ್ಲಿ ಗೆದ್ದಿದ್ದಾರೆ

2008ರ ಕ್ಷೇತ್ರ ಮರು ವಿಂಗಡಣೆವರೆಗೂ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಸಾಮಾನ್ಯ ವರ್ಗದವರು ಸ್ಪರ್ಧೆ ಮಾಡಬಹುದಾಗಿತ್ತು. ಇದರ ಬಳಿಕ ಎಸ್‌ಟಿ ಮೀಸಲು ಕ್ಷೇತ್ರವಾಯಿತು. 1957ರಿಂದ ಇಲ್ಲಿಯವರೆಗೆ ಒಟ್ಟು 16 ಬಾರಿ ಚುನಾವಣೆಗಳು ನಡೆದಿವೆ. ಇದರಲ್ಲಿ ಕಾಂಗ್ರೆಸ್‌ 8, ಬಿಜೆಪಿ 2 ಹಾಗೂ ಸ್ವತಂತ್ರ ಪಕ್ಷ, ಕರ್ನಾಟಕ ಕಾಂಗ್ರೆಸ್‌ ಪಕ್ಷ (ಕೆಸಿಪಿ), ಕನ್ನಡ ನಾಡು ಪಕ್ಷ (ಕೆಎನ್‌ಡಿಪಿ) ಮತ್ತು ಸ್ವತಂತ್ರ್ಯ ಅಭ್ಯರ್ಥಿಗಳು ತಲಾ ಒಮ್ಮೆ ವಿಜಯ ಸಾಧಿಸಿದ್ದಾರೆ.

ಪಕ್ಷಾಂತರ ಮಾಡಿದ್ದ ರಾಜುಗೌಡ

2013ರ ಚುನಾವಣೆಯಲ್ಲಿ ಬಿಜೆಪಿ ತೊರೆದು ಜೆಡಿಎಸ್‌ ಸೇರಿದ್ದ ರಾಜು ಗೌಡ ಸೋಲು ಕಂಡಿದ್ದರು. ಆಗ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ರಾಜಾ ವೆಂಕಟಪ್ಪ ನಾಯಕ 65,033 ಮತಗಳನ್ನು ಪಡೆದು ಗೆದ್ದಿದ್ದರು. ರಾಜುಗೌಡ 60,958 ಮತಗಳನ್ನು ಪಡೆದಿದ್ದರು. ಕೇವಲ 4,075 ಮತಗಳ ಅಂತರದಿಂದ ಸೋಲು ಕಂಡಿದ್ದರು.

2018ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಸೇರಿದ ರಾಜು ಗೌಡ 1,04,426 ಮತಗಳನ್ನು ಪಡೆದು ಮೂರನೇ ಬಾರಿಗೆ ಜಯ ಸಾಧಿಸಿದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ರಾಜಾ ವೆಂಕಟಪ್ಪ ನಾಯಕ 81,851 ಮತಗಳನ್ನು ಪಡೆದುಕೊಂಡಿದ್ದರು. ಹೀಗಾಗಿ 22,568 ಮತಗಳ ಅಂತರದಲ್ಲಿ ರಾಜುಗೌಡ ಗೆದ್ದಿದ್ದರು.

ಸಮುದಾಯವಾರು ಮತಗಳು ಎಷ್ಟಿವೆ?

ಸದ್ಯದ ಮಾಹಿತಿ ಪ್ರಕಾರ ಸುರಪುರ ಕ್ಷೇತ್ರದಲ್ಲಿ 1,41, 618 ಪುರುಷರು, 1,39,729 ಮಹಿಳಾ, 28 ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಸೇರಿ ಒಟ್ಟು 2,81,375 ಮತದಾರರಿದ್ದಾರೆ. ಎಸ್‌ಟಿ ಮೀಸಲು ಕ್ಷೇತ್ರವಾಗಿರುವ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡದ ಜನರೇ ನಿರ್ಣಾಯಕರು.

  • ಪರಿಶಿಷ್ಟ ಪಂಗಡ: 1 ಲಕ್ಷಕ್ಕೂ ಅಧಿಕ ಮತದಾರರು
  • ದಲಿತ: 80 ಸಾವಿರಕ್ಕೂ ಅಧಿಕ ಮತದಾರರು
  • ಮುಸ್ಲಿಂ: 45 ಸಾವಿರಕ್ಕೂ ಅಧಿಕ ಮತದಾರರಿದ್ದಾರೆ.

ಇದನ್ನೂ ಓದಿ: Lok Sabha Election 2024: ಮಂಡ್ಯನಾ? ರಾಮನಗರವಾ? ಧರ್ಮ ಸಂಕಟದಲ್ಲಿ ಮಾಜಿ ಸಿಎಂ ಎಚ್‌ಡಿಕೆ!

ಉಪ ಚುನಾವಣೆಯ ಫಲಿತಾಂಶ ಜೂ. 4ಕ್ಕೆ ಇದ್ದು, ಯಾರು ವಿಜಯಶಾಲಿಯಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಆದರೆ, ಸುರಪುರ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್‌ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ.

Continue Reading

ದೇಶ

Kota Srinivas Poojary : ಫೋಟೊಗ್ರಾಫರ್‌ನಿಂದ ಸಂಸತ್‌ ಟಿಕೆಟ್‌ವರೆಗೆ; ಸಿಂಪಲ್​ ಮ್ಯಾನ್​ ಕೋಟ ಶ್ರೀನಿವಾಸ ಪೂಜಾರಿ ಜರ್ನಿ

kota srinivas poojary : ಗ್ರಾಮ ಪಂಚಾಯಿತಿ ಚುನಾವಣೆ ಮೂಲಕ ರಾಜಕೀಯ ಆರಂಭಿಸಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರು ಇದೀಗ ಪಾರ್ಲಿಮೆಂಟ್​ ಮೆಟ್ಟಿಲೇರಲು ಸಜ್ಜಾಗಿದ್ದಾರೆ.

VISTARANEWS.COM


on

Lok sabha Election 2024 Kota Srinivas Poojary12
Koo

ಬೆಂಗಳೂರು: ಮುಂಬರುವ ಲೋಕಸಭಾ ಕ್ಷೇತ್ರ ಚುನಾವಣೆಗೆ (Lok Sabha Election) ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬುಧವಾರ (ಮಾರ್ಚ್​ 13ರಂದು) ಬಿಡುಗಡೆ ಮಾಡಿದೆ. ಒಟ್ಟು 72 ಅಭ್ಯರ್ಥಿಗಳಲ್ಲಿ ಕರ್ನಾಟಕದ 20 ಅಭ್ಯರ್ಥಿಗಳಿದ್ದಾರೆ. ಈ ಪಟ್ಟಿಯಲ್ಲಿ ವಿಶೇಷವಾಗಿ ಗಮನ ಸೆಳೆದಿರುವುದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ (Kota srinivas poojary). ಜನರ ನಡುವಿನ ನಾಯಕ ಹಾಗೂ ಅತ್ಯಂತ ಸರಳ ವ್ಯಕ್ತಿತ್ವದ ಶ್ರೀನಿವಾಸ ಪೂಜಾರಿ ಚುನಾವಣೆಯಲ್ಲಿ ಗೆದ್ದರೆ ಪಾರ್ಲಿಮೆಂಟ್ ಮೆಟ್ಟಿಲೇರುವುದು ನಿಶ್ಚಿತ. ಸಜ್ಜನ ಜನಪ್ರತಿನಿಧಿ ಎನಿಸಿಕೊಂಡಿರುವ ಅವರಿಗೆ ಬಿಜೆಪಿ ವರಿಷ್ಠರು ಟಿಕೆಟ್​ ನೀಡಿರುವುದು ಅವರ ಕ್ಷೇತ್ರದ ಬಿಜೆಪಿ ಅಭಿಮಾನಿಗಳ ಪಾಲಿಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ.

Lok-sabha-Election-2024-Kota-Srinivas-Poojary1

ಕರ್ನಾಟಕ ಸರ್ಕಾರದಲ್ಲಿ ಮೂರು ಬಾರಿ ಸಚಿವರಾಗಿದ್ದ ಅವರೀಗ ವಿಧಾನ ಪರಿಷತ್​ನಲ್ಲಿ ವಿರೋಧ ಪಕ್ಷದ ನಾಯಕ. ಅವರನ್ನು ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ಕಣಕ್ಕೆ ಇಳಿಸಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರು ಅತ್ಯಂತ ಸರಳ ವ್ಯಕ್ತಿತ್ವದವರು ಎಂಬುದು ಅವರನ್ನು ಬಲ್ಲವರು ಹೇಳುವ ಮೊದಲ ಮಾತು. ಅವರನ್ನು ಜನರು ಪಕ್ಷವನ್ನು ನೋಡದೇ ಪ್ರೀತಿಸುತ್ತಾರೆ ಎಂಬುದು ಕೂಡ ವಿಶೇಷ. ಅಭಿಮಾನಿಗಳ ದಂಡನ್ನು ಬಿಟ್ಟು ಸಾಮಾನ್ಯ ಜನರಂತೆ ಸುತ್ತಾಡುವ ಅವರು ಊಟ, ತಿಂಡಿಗೂ ಸಣ್ಣ ಪುಟ್ಟ ಹೋಟೆಲ್​ಗೆ ಹೋಗುತ್ತಾರೆ ಎಂಬುದು ವಿಶೇಷ.

ಸರಳ ರಾಜಕಾರಣಿ

ಸಾಮಾನ್ಯ ಛಾಯಾಗ್ರಾಹಕನಾಗಿ ವೃತ್ತಿ ಆರಂಭಿಸಿದ್ದ ಶ್ರೀನಿವಾಸ ಪೂಜಾರಿ ಅವರು ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ಹಲವು ಇಲಾಖೆಗಳಲ್ಲಿ ಸಚಿವರಾಗಿದ್ದಾರೆ . ಅವರೀಗ ಲೋಕ ಸಭಾ ಟಿಕೆಟ್​ ಪಡೆದು ತಮ್ಮ ವ್ಯಾಪ್ತಿಯನ್ನು ರಾಷ್ಟ್ರೀಯ ರಾಜಕಾರಣದ ಮಟ್ಟಿಗೆ ವಿಸ್ತರಿಸಿಕೊಂಡಿದ್ದಾರೆ. ನೇರ ಮಾತು, ಒಲವು ನಿಲುವುಗಳಿಂದಲೇ ಸಾಧನೆಯ ಉತ್ತುಂಗಕ್ಕೇರಿ, ಬಿಜೆಪಿ ಪಕ್ಷದಲ್ಲಿಯೂ ಪ್ರಭಾವಿ ನಾಯಕನಾಗಿ ಬೆಳೆದಿದ್ದಾರೆ ಅವರು. ಆದರೆ, ಅವರ ಸರಳ ವ್ಯಕ್ತಿತ್ವ ಇಂದಿಗೂ ಬದಲಾಗಿಲ್ಲ.

Kota Srinivas Poojary

ಕೋಟ ಶ್ರೀನಿವಾಸ ಪೂಜಾರಿ, 1993ರಲ್ಲಿ ಗ್ರಾಮ ಪಂಚಾಯತ್ ಸದಸ್ಯರಾಗುವುದರೊಂದಿಗೆ ರಾಜಕೀಯ ಜೀವನ ಆರಂಭಿಸಿದ್ದರು. 1996ರಲ್ಲಿ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಗೊಂಡಿದ್ದರು. 2006ರಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆರಿಸಿ ಬಂದರು. ಅವರು ಕರ್ನಾಟಕ ರಾಜಕೀಯದಲ್ಲಿ ಹಲವಾರು ನಿರ್ಣಾಯಕ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಅವರು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರವನ್ನು ಪ್ರತಿನಿಧಿಸಿ 6 ಜನವರಿ 2010 ರಿಂದ 4 ಜನವರಿ 2016 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿಗೆ ಮೊದಲ ಬಾರಿಗೆ ಆಯ್ಕೆಯಾದರು ಮತ್ತು 6 ಜನವರಿ 2016 ರಿಂದ 5 ಜನವರಿ 2022 ರವರೆಗೆ ಅವಧಿಗೆ ಮರು ಆಯ್ಕೆಯಾದರು. 2022ರಲ್ಲಿ ಮತ್ತೆ ಆಯ್ಕೆಯಾಗಿದ್ದಾರೆ. ಫೆಬ್ರವರಿ 7, 2018 ರಿಂದ ಜುಲೈ 26, 2019 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದು, ಮತ್ತದೇ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಅಕ್ಟೋಬರ್ 7, 2021ರಂದು ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ನೇಮಿಸಲಾಗಿತ್ತು.

ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ ಸೇರಿದಂತೆ ವಿವಿಧ ಹುದ್ದೆಗಳನ್ನಲಂಕರಿಸಿ ಅವುಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಬಳಿಕ ಸದ್ಯ ಹಿಂದುಳಿದ ಮೋರ್ಚಾದ ರಾಜ್ಯಾಧ್ಯಕ್ಷರಾಗಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಪಂಚಾಯತ್ ರಾಜ್ ವ್ಯವಸ್ಥೆಯ ಕುರಿತು ಆಳವಾದ ಅರಿವು, ಅಧ್ಯಯನಗಳಿವೆ.

ಫೋಟೋಗ್ರಫಿಯಿಂದ ಲೋಕಸಭಾ ಟಿಕೆಟ್​ ವರೆಗೆ

ಶ್ರೀನಿವಾಸ ಪೂಜಾರರು ಒಬ್ಬ ಸೃಜನಶೀಲ ರಾಜಕಾರಣಿ . ಆರಂಭದಲ್ಲಿ ಫೋಟೋಗ್ರಫಿಯನ್ನು ವೃತ್ತಿಯನ್ನಾಗಿಸಿಕೊಂಡ ಅವರು ಬರವಣಿಗೆಯಲ್ಲಿಯೂ ಸಿದ್ಧಹಸ್ತರು. ಅನೇಕ ದಿನಪತ್ರಿಕೆಗಳಲ್ಲಿ ಅಂಕಣಕಾರರಾಗಿದ್ದರು. ನಮ್ಮ ಕಮಲ ಎಂಬ ಪಂಚಾಯತ್ ರಾಜ್ ವ್ಯವಸ್ಥೆಯ ಬಗೆಗೆ ಮಾಸ ಪತ್ರಿಕೆಯೊಂದನ್ನು ಆರಂಭಿಸಿ ಅದರ ಸಂಪಾದಕರಾಗಿದ್ದರು. ಆಕರ್ಷಕ ಮಾತಿನ ವರಸೆ ಪೂಜಾರಿಯವರಿಗೆ ಸಲೀಸು. ಡಾ. ಶಿವರಾಮ ಕಾರಂತರ ಅಭಿಮಾನಿಯಾಗಿ ತನ್ನ ಹುಟ್ಟೂರಿನಲ್ಲಿ ಕಾರಂತ ಭವನ ನಿರ್ಮಾಣ, ಕಾರಂತ ಹುಟ್ಟೂರ ಪ್ರಶಸ್ತಿ ಸೇರಿದಂತೆ ಅವರ ನೆನಪನ್ನು ಕೋಟದಲ್ಲಿ ಚಿರಸ್ಥಾಯಿಯಾಗಿಸಿದ ಕೀರ್ತಿಯಲ್ಲಿ ಇವರದ್ದು ದೊಡ್ಡ ಪಾಲಿದೆ.

Continue Reading

Lok Sabha Election 2024

Lok Sabha Election 2024: ಮಂಡ್ಯ ಕ್ಷೇತ್ರದ ಮೈತ್ರಿ ಟಿಕೆಟ್ 100% ನನಗೇ ಸಿಗ್ತದೆ ಎಂದ ಸುಮಲತಾ

Lok Sabha Election 2024: ಅಭ್ಯರ್ಥಿಗಳ ಘೋಷಣೆಗೂ ಮೊದಲು ದೆಹಲಿಗೆ ಹೋಗುವ ಅಗತ್ಯವಿಲ್ಲ. ಒಂದು ವೇಳೆ ಬರಲು ಹೇಳಿದರೆ ಹೋಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್‌ ತಿಳಿಸಿದ್ದಾರೆ.

VISTARANEWS.COM


on

Sumalatha
Koo

ಮಂಡ್ಯ: ಯಾವುದೇ ಅನುಭವ ಇಲ್ಲದೇ ಕಳೆದ ಬಾರಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ನಿಂತಿದ್ದೆ. ನನಗೆ ಬೇಕಾದವರು ನಿಮ್ಮ ಜೊತೆ ಇರುತ್ತೇವೆ ಎಂದು ಗಟ್ಟಿಯಾಗಿ ನಿಂತಿದ್ದರು. ಈಗಿನ ಸಂದರ್ಭ ಬೇರೆಯೇ ಇದೆ. ಈ ಬಾರಿ ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ 100% ನನಗೆ ಸಿಗಲಿದೆ ಎಂದು ಸಂಸದೆ ಸುಮಲತಾ ಅಂಬರೀಶ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ನೆನ್ನೆಯ ಲಿಸ್ಟ್ ನೋಡಿದರೆ ರಾಜ್ಯವಾರು ಪಟ್ಟಿ ಬಿಡುಗಡೆ ಮಾಡಿದ್ದಾರೆ. ಹಾಗೆ ಕರ್ನಾಟಕದ್ದು ಬಂದಾಗ ನಮ್ಮ ಎಲ್ಲರ ಹೆಸರು ಬರಬಹುದು. ಅಭ್ಯರ್ಥಿಗಳ ಘೋಷಣೆಗೂ ಮೊದಲು ದೆಹಲಿಗೆ ಹೋಗುವ ಅಗತ್ಯವಿಲ್ಲ. ಒಂದು ವೇಳೆ ನನ್ನು ಬರಲು ಹೇಳಿದರೆ ಹೋಗುತ್ತೇನೆ ಎಂದು ಹೇಳಿದರು.

ಈ ಬಾರಿಯ ಚುನಾವಣೆಯ ಪ್ರಚಾರ, ಹೋರಾಟ ಡಿಫೆರೆಂಟ್ ಆಗಿ ಇರುತ್ತೆ. ಯಶ್, ದರ್ಶನ್ ಬಂದ್ರೆ ಬಲ ಇರುತ್ತೆ, ಎಲ್ಲರ ಸಪೋರ್ಟ್ ಇದೆ. ಅವರು ನನಗೋಸ್ಕರ ಬರಿ ಸಪೋರ್ಟ್ ಅಲ್ಲ. ತ್ಯಾಗ ಮಾಡಿದ್ದಾರೆ. ಇಬ್ಬರೂ 25 ದಿನ ಸ್ವಾರ್ಥವಿಲ್ಲದೆ ನನ್ನ ಪರ ನಿಂತಿದ್ದರು. ಪದೇ ಪದೇ ಎಲ್ಲಾ ಬಿಟ್ಟು ಬನ್ನಿ ಎಂದು ಕರೆಯಲು ನನ್ನ ಮನಸ್ಸು ಒಪ್ಪಲ್ಲ.
ಯಶ್, ದರ್ಶನ್ ಸಿನಿಮಾಗಳಲ್ಲಿ ಬ್ಯುಸಿ ಇರುತ್ತಾರೆ. ಅವರು ಬಂದರೆ ಖಂಡಿತವಾಗಿ ಸ್ವಾಗತಿಸುವೆ ಎಂದು ತಿಳಿಸಿದರು.

ಇದನ್ನೂ ಓದಿ | BJP Candidates List: ಬಿಜೆಪಿ ಮೊದಲ ಪಟ್ಟಿಯಲ್ಲಿ 33 ಹಾಲಿ ಸಂಸದರಿಗೆ ಟಿಕೆಟ್‌ ನಕಾರ!

ಯಶ್ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಪ್ಯಾನ್ ಇಂಡಿಯಾ ಸ್ಟಾರ್‌ ಆಗಿದ್ದಾರೆ, ಅವರಿಂದ ಹೆಚ್ಚು ನಿರೀಕ್ಷೆ ಮಾಡುವುದು ಸರಿಯಲ್ಲ. ಅವರು ಬಂದರೆ ಸಂತೋಷಪಡುತ್ತೇನೆ. ಕಳೆದ ಚುನಾವಣೆಯಲ್ಲಿ ನನ್ನ ಮನೆಯ ಮಕ್ಕಳು ತರ ಓಡಾಡಿದ್ದಾರೆ. ಆವತ್ತಿನ ಸ್ಥಿತಿಯಲ್ಲಿ ನನ್ನ ಜೊತೆ ನಿಂತಿದ್ದರು. ಈ ಬಾರಿ ಅವರು ಬರದಿದ್ದರೂ ನಾನು ಬೇಜಾರು ಮಾಡಿಕೊಳ್ಳಲ್ಲ ಎಂದು ತಿಳಿಸಿದರು.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಇದು ಅತ್ಯಂತ ಭಯಾನಕ‌ ವಿಚಾರ. ಇದನ್ನು ಎಲ್ಲರೂ ಖಂಡಿಸಬೇಕು. ತಪ್ಪಿತಸ್ಥರಿಗೆ ಕಠಿಣಾತಿ ಕಠಿಣ ಶಿಕ್ಷೆ ವಿಧಿಸಬೇಕು. ಈ ಪ್ರಕರಣದಲ್ಲಿ ಬೇರೆ ಬೇರೆ ಹೇಳಿಕೆ ಕೊಡೋದು ಮಹಾಪರಾಧ. ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳನ್ನು ಬೇಗ ಬಂಧಿಸಲಿದ್ದಾರೆ ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕಿಂತ ಹೆಚ್ಚಾಗಿ ಉಗ್ರವಾದಿ ಅಥವಾ ಆತಂಕವಾದಿಗಳು ಈ ರೀತಿಯ ಕೃತ್ಯಗಳನ್ನು ಮಾಡಬಹುದು ಎಂಬಂತೆ ಪ್ರೋತ್ಸಾಹವಂತೂ ಇದೆ. ಯಾರೇ ಆದರೂ ಇದನ್ನು ಉತ್ತೇಜನ ನೀಡುವಂತಹ ಹೇಳಿಕೆ‌ ಕೊಡಬಾರದು ಎಂದು ಹೇಳಿದರು.

ವಿಧಾನಸೌಧದಲ್ಲಿ ಪಾಕಿಸ್ತಾನ‌ ಪರ ‌ಘೋಷಣೆ ವಿಚಾರಕ್ಕೆ ಸ್ಪಂದಿಸಿ, ಎಫ್‌ಎಸ್‌ಎಲ್ ವರದಿಯಲ್ಲೂ ಅದು ಫೇಕ್ ಅಲ್ಲ ಎಂಬಂತೆ ಬಂದಿದೆ. ಪಕ್ಷಗಳು ಒಂದು ಸಮುದಾಯವನ್ನು ಯಾವುದೇ ತಪ್ಪು ಮಾಡಿದರೂ ಖಂಡಿಸದೇ, ರಕ್ಷಣೆ ಮಾಡಿಕೊಂಡು ಬರಬರಬಾರದು. ಎಲ್ಲಾ‌‌ ಚಾನೆಲ್‌ಗಳೂ ಆ ವಿಚಾರವನ್ನ ಪ್ರಚಾರ ಮಾಡಿವೆ. ಒಂದೆರಡು ಚಾನೆಲ್ ಆದ್ರೆ ತಪ್ಪು ಮಾಡಬಹುದು. ಎಲ್ಲಾ ಚಾನೆಲ್‌ಗಳು ತಪ್ಪು ಮಾಡುತ್ತವೆಯೇ ಎಂದು ಪ್ರಶ್ನಿಸಿದರು.

ಮಂಡ್ಯದಲ್ಲಿ ಮನೆ ಕಟ್ಟುವ ಬಗ್ಗೆ ಪ್ರತಿಕ್ರಿಯಿಸಿ, ಮಂಡ್ಯದಲ್ಲಿ ನನ್ನ ಮನೆ ಇದೆ, ಅದು ಬಾಡಿಗೆ ಮನೆ. ಅಂಬರೀಶ್ ಇದ್ದ ಕಾಲದಿಂದಲೂ ಈ ಮನೆಯಲ್ಲಿ ಬಾಡಿಗೆಗೆ ಇದ್ದೇವೆ. ಹನಕೆರೆ ಬಳಿ ಲ್ಯಾಂಡ್ ತೆಗೆದುಕೊಂಡು ಮನೆಕಟ್ಟುವ ಆಸೆ ಇತ್ತು.
ಆದ್ರೆ ಅದರಲ್ಲಿ ರಾಜಕಾರಣ ನಡೆಯಿತು. ಮನೆ ಕಟ್ಟುವಾಗ ಅಡಚಣೆಗಳು ಉಂಟಾದವು. ದೇವರು ಆಶೀರ್ವಾದ ಮಾಡಿದ್ರೆ ಮುಂದೆ ಮನೆ ಕಟ್ಟೋಣ., ನನಗಿಂತ ಅಭಿಗೆ ಮಂಡ್ಯದಲ್ಲಿ ಮನೆ ಕಟ್ಟಲು ತುಂಬಾ ಆಸೆ ಇದೆ‌ ಎಂದು ತಿಳಿಸಿದರು.

ಇದನ್ನೂ ಓದಿ | R Ashok : ಸರ್ಕಾರಕ್ಕೆ ಬುದ್ಧಿ ಬರಲು ಇನ್ನೆಷ್ಟು ಬಾಂಬ್‌ ಬ್ಲಾಸ್ಟ್‌ ಆಗಬೇಕು; ಆರ್‌ ಅಶೋಕ್‌ ಪ್ರಶ್ನೆ

ಮಂಡ್ಯದಲ್ಲಿ ಹೊಸ ಸಕ್ಕರೆ‌ ಕಾರ್ಖಾನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೈಷುಗರ್ ಕಾರ್ಖಾನೆಯನ್ನು ಯಾರು ಟಚ್ ಮಾಡಬಾರದು, ಈ ಹಿಂದೆ ಭ್ರಷ್ಟಾಚಾರ ಆಗಿರುವುದು ಗೊತ್ತಿದೆ. ಇದರಿಂದ ನೂರಾರು ಕೋಟಿ ನಷ್ಟವಾಗಿದೆ. ಈ ಹಿಂದೆ ಯಡಿಯೂರಪ್ಪ ಮಾತು ಕೊಟ್ಟು, ಬೊಮ್ಮಾಯಿ ಅವರು 50 ಕೋಟಿ ಕೊಟ್ಟು ಕಾರ್ಖಾನೆ ಶುರು ಮಾಡಿಸಿದ್ದರು. ಈಗಿನ ಸರ್ಕಾರ 100 ಕೋಟಿ ಕೊಟ್ಟಿದೆ. ಇನ್ನೂ ಕೂಡ ಕಬ್ಬು ಅರೆಯುತ್ತಿಲ್ಲ, ಮತ್ತೆ 500 ಕೋಟಿಯ ಹೊಸ ಕಾರ್ಖಾನೆ ಅಂದ್ರೆ ಅರ್ಥ ಏನು? ಒಂದಲ್ಲ 5 ಕಾರ್ಖಾನೆ ಮಾಡಿ. ಮೈಷುಗರ್ ಕಾರ್ಖಾನೆ ಮಂಡ್ಯಕ್ಕೆ ಪ್ರತಿಷ್ಠೆಯಾಗಿದೆ. ಹಳೆಯ ಕಾರ್ಖಾನೆ ಏನು ಮಾಡ್ತೀರಾ? ಮತ್ತೆ ಕ್ಲೋಸ್ ಮಾಡ್ತೀರಾ? ಐತಿಹಾಸಿಕ ಕಾರ್ಖಾನೆ ಎಂದು ನಾವು ಕಾಪಾಡಲು ಹೋರಾಟ ಮಾಡಿದ್ದು ವ್ಯರ್ಥನಾ? ಇದು ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆಯಾಗಿದ್ದು, ಭಾವನಾತ್ಮಕ ಸಂಬಂಧ ಇದೆ. 500 ಕೋಟಿಯನ್ನು ಈ ಕಾರ್ಖಾನೆಗೆ ಹಾಕಿ ಸರಿಪಡಿಸಬೇಕು. ಮೈಷುಗರ್ ಕಾರ್ಖಾನೆ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.

Continue Reading

ಪ್ರಮುಖ ಸುದ್ದಿ

Karnataka Budget 2024: ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಮೇಲ್ದರ್ಜೆಗೆ, ಕಾಲೇಜುಗಳಿಗೆ 400 ಕೋಟಿ ಅನುದಾನ

Karnataka Budget 2024: 2024-25ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ.ಗಳ ಅನುದಾನವನ್ನು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ.ಗಳ ಅನುದಾನವನ್ನು ಕೂಡ ಸಿಎಂ ಒದಗಿಸಿದ್ದಾರೆ.

VISTARANEWS.COM


on

siddaramaiah budget medical education
Koo

ಬೆಂಗಳೂರು: ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರವು (Medical Education) ಸರ್ಕಾರಿ ವಲಯದಲ್ಲಿಯೂ ವ್ಯಾಪಕ ಬೆಳವಣಿಗೆ ಹೊಂದಿರುವುದರಿಂದ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು (directorate) ಆಯುಕ್ತಾಲಯವನ್ನಾಗಿ ಉನ್ನತೀಕರಿಸುವ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ (Karnataka Budget 2024) ಪ್ರಕಟಿಸಿದ್ದಾರೆ.

ಇದರ ಜೊತೆಗೆ, 2024-25ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ.ಗಳ ಅನುದಾನವನ್ನು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ.ಗಳ ಅನುದಾನವನ್ನು ಕೂಡ ಸಿಎಂ ಒದಗಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ವಲಯಕ್ಕಾಗಿ ಈ ಸಾಲಿನ ಬಜೆಟ್‌ನಲ್ಲಿ ಸಿಎಂ ನೀಡಿದ ಕೊಡುಗೆಗಳು ಇಂತಿವೆ:

1) ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ Nephro-Urology ಆಸ್ಪತ್ರೆಯನ್ನು 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲಾಗುವುದು.

2) ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯ ತಾಂತ್ರಿಕ ನೆರವಿನೊಂದಿಗೆ ಸ್ಥಾಪಿಸಲಾಗುವುದು.

3) ಗದಗ, ಕೊಪ್ಪಳ ಮತ್ತು ಚಾಮರಾಜನಗರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳು ನಿರ್ಮಾಣವಾಗಿದ್ದು, ಈ ಆಸ್ಪತ್ರೆಗಳಿಗೆ ಅವಶ್ಯವಿರುವ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ 150 ಕೋಟಿ ರೂ.ಗಳನ್ನು ಒದಗಿಸಲಾಗುವುದು.

4) ಬೆಂಗಳೂರಿನ ನೆಫ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ 20 ಕೋಟಿ ರೂ.ಗಳ ವೆಚ್ಚದಲ್ಲಿ ರೋಬೋಟಿಕ್ ಯಂತ್ರದ ಮೂಲಕ ಉತ್ತಮ ಶಸ್ತ್ರಚಿಕಿತ್ಸೆಯನ್ನು ನೀಡಲು ಕ್ರಮವಹಿಸಲಾಗುವುದು.

5) ವೈದ್ಯಕೀಯ ಕಾಲೇಜುಗಳಲ್ಲಿನ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 114 Modular OT ಗಳನ್ನು 177 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.

6) ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ Cathlab ಸೌಲಭ್ಯದೊಂದಿಗೆ Super Speciality Cardiac Unit ಅನ್ನು 10 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಪಿ ಮಾದರಿಯಲ್ಲಿ Cardiac Unit ಪ್ರಾರಂಭಿಸಲಾಗುವುದು.

7) ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ವೈದ್ಯಕೀಯ ಸಂಸ್ಥೆಗಳಲ್ಲಿ 64 Anaesthesia Workstation ಗಳನ್ನು 34 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿ ಅಳವಡಿಸಲಾಗುವುದು.

8) ರಾಜ್ಯದಲ್ಲಿ ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ Human Milk Bank ಘಟಕಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ರಾಯಚೂರು, ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಹೊಸ ಘಟಕಗಳನ್ನು ಸ್ಥಾಪಿಸಲಾಗುವುದು.

9) ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗಗಳು ಮತ್ತು ವೈರಲ್ ಸೋಂಕುಗಳನ್ನು ಪತ್ತೆ ಹಚ್ಚಲು Viral Research & Diagnostic Laboratory (VRDL) ಅನ್ನು ಸ್ಥಾಪಿಸಲಾಗುವುದು.

10) ಸಾರ್ವಜನಿಕರ ಎಲ್ಲಾ ಆರೋಗ್ಯ ಮಾಹಿತಿಯನ್ನು ಡಿಜಿಟಲೀಕರಣಗೊಳಿಸುವ ಸಂಬಂಧ ಡಿಜಿಟಲ್ ಹೆಲ್ತ್ ಸೊಸೈಟಿಯನ್ನು ಆರಂಭಿಸಲು ಈಗಾಗಲೇ ಕ್ರಮವಹಿಸಲಾಗಿರುತ್ತದೆ. ಇದರಡಿಯಲ್ಲಿ ಒಂದು Health Repository ಯನ್ನು ಸೃಜಿಸಿ ಸಾರ್ವಜನಿಕರ ಚಿಕಿತ್ಸಾ ಮಾಹಿತಿಯು ಒಂದೇ ಮೂಲದಿಂದ ಎಲ್ಲಾ ಆಸ್ಪತ್ರೆಗಳು ಮತ್ತು ವೈದ್ಯರಿಗೆ ಲಭ್ಯವಾಗುವಂತೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡುವುದನ್ನು ಮತ್ತು ಚಿಕಿತ್ಸಾ ಸಮಯವನ್ನು ಸ್ವಯಂಚಾಲಿತವಾಗಿ ನಿಗದಿಪಡಿಸುವ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು.

11) ಚಿತ್ರದುರ್ಗ ಜಿಲ್ಲೆಯಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು 500 ಕೋಟಿ ರೂ.ಗಳ ವೆಚ್ಚದಲ್ಲಿ 2023-24ನೇ ಸಾಲಿನಿಂದ 150 ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳ ದಾಖಲಾತಿಯೊಂದಿಗೆ ಪ್ರಾರಂಭಿಸಲಾಗಿರುತ್ತದೆ. ವೈದ್ಯಕೀಯ ಕಾಲೇಜಿನ ಕಟ್ಟಡ, ವಿದ್ಯಾರ್ಥಿ ವಸತಿ ನಿಲಯ, ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.

12) ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಶತಮಾನೋತ್ಸವದ ನೆನಪಿಗಾಗಿ ಕೆ.ಆರ್. ಆಸ್ಪತ್ರೆ ಆವರಣದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರ ರೋಗಿ ವಿಭಾಗದ ಕಟ್ಟಡವನ್ನು ನಿರ್ಮಿಸಲಾಗುವುದು.

ಇದನ್ನೂ ಓದಿ: Karnataka Budget 2024 : ಸಿದ್ದು ಬಜೆಟ್‌ನ ಘೋಷಣೆಗಳ ಸಂಪೂರ್ಣ ಪಟ್ಟಿ; ಇದನ್ನು ಓದಿದ್ರೆ ಸಾಕು!

Continue Reading
Advertisement
ipl 2024
ಪ್ರಮುಖ ಸುದ್ದಿ46 mins ago

IPL 2024 : ಲಕ್ನೊ ವಿರುದ್ಧವೂ ಸೋತ ಮುಂಬೈ; ಹತ್ತನೇ ಸ್ಥಾನ ಕಾಯಂ

Anjali Murder Case
ಕರ್ನಾಟಕ1 hour ago

Anjali Murder Case: ಅಂಜಲಿ ಕೊಂದವನ ಎನ್‌ಕೌಂಟರ್ ಮಾಡಿ: ಸಹೋದರಿ ಪೂಜಾ ಆಗ್ರಹ

Kanhaiya Kumar
ದೇಶ2 hours ago

Kanhaiya Kumar: ಪ್ರಚಾರದ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ; ವಿಡಿಯೊ ಇಲ್ಲಿದೆ

Murder Case
ಬೆಂಗಳೂರು2 hours ago

Murder Case: ಯಲಹಂಕದಲ್ಲಿ ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ

Siddaramaiah
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಗ್ರೇಸ್‌ ಮಾರ್ಕ್ಸ್‌ ಅಲ್ಲ, ಗುಣಮಟ್ಟದ ಶಿಕ್ಷಣವೇ ಫಲಿತಾಂಶಕ್ಕೆ ದಾರಿ

Pavithra Jayaram
ಸಿನಿಮಾ2 hours ago

ನಟಿ ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಪ್ರಿಯತಮ ಚಂದ್ರಕಾಂತ್ ಆತ್ಮಹತ್ಯೆ; ಖಿನ್ನತೆಗೆ ನಟ ಬಲಿ?

Rohit Sharma
ಕ್ರೀಡೆ2 hours ago

Rohit Sharma : ಆಡಿಯೊ ಬಂದ್ ಮಾಡಪ್ಪ; ಕ್ಯಾಮೆರಾಮನ್​ಗೆ ಕೈಮುಗಿದು ಬೇಡಿಕೊಂಡ ರೋಹಿತ್​ ಶರ್ಮಾ

Road Accident
ಪ್ರಮುಖ ಸುದ್ದಿ3 hours ago

Road Accident: ಕೊಪ್ಪಳ ಬಳಿ ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿಯಾಗಿ ಮೂವರ ದುರ್ಮರಣ; 20ಕ್ಕೂ ಹೆಚ್ಚು ಮಂದಿಗೆ ಗಾಯ

Virat Kohli
ಕ್ರೀಡೆ3 hours ago

Virat kohli : ಪಾಕಿಸ್ತಾನಕ್ಕೆ ಬರುವೆ ಎಂದು ಅಲ್ಲಿನ ಪರ್ವತಾರೋಹಿಗೆ ಭರವಸೆ ಕೊಟ್ಟಿದ್ದ ವಿರಾಟ್​ ಕೊಹ್ಲಿ! ಇಲ್ಲಿದೆ ವಿಡಿಯೊ

Narendra modi
ದೇಶ3 hours ago

Narendra Modi: ಕಾಂಗ್ರೆಸ್‌ ಗೆದ್ದರೆ ಬುಲ್ಡೋಜರ್‌ನಿಂದ ರಾಮಮಂದಿರ ನೆಲಸಮ ಎಂದ ಮೋದಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ5 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ19 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ20 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌