ಗೋಡಂಬಿ ಅಲ್ಲ ಇದು ಮೊಟ್ಟೆ! - Vistara News

ದಕ್ಷಿಣ ಕನ್ನಡ

ಗೋಡಂಬಿ ಅಲ್ಲ ಇದು ಮೊಟ್ಟೆ!

ಈ ಮೊಟ್ಟೆಯ ಆಕಾರ ನೋಡಿ ಎಲ್ಲರೂ ಅಶ್ಚರ್ಯಪಡುವಂತಾಗಿದೆ.‌

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲಾ ಅನ್ನೋ ಗ್ರಾಮದಲ್ಲಿ ಕೋಳಿಯೊಂದು ಗೋಡಂಬಿ ಆಕಾರದ ಮೊಟ್ಟೆಗಳನ್ನ ಇಡ್ತಾ ಇದೆ.

ಬೇಲಾಜೆ ಪ್ರಶಾಂತ್ ಎಂಬವರ ಮನೆಯಲ್ಲಿ ಸಾಕಿದ್ದ ಕೋಳಿಯೊಂದು ಕಳೆದ ಕೆಲವು ದಿನಗಳಿಂದ ಮೊಟ್ಟೆ ಇಡುತ್ತಿದೆ. ಇದನ್ನು ಗಮನಿಸಿದಾಗ ಗೋಡಂಬಿ ರೀತಿಯಲ್ಲಿ ಕಂಡು ಬರುತ್ತಿದೆ. ಈ ಮೊಟ್ಟೆಯ ಆಕಾರ ನೋಡಿ ಎಲ್ಲರೂ ಅಶ್ಚರ್ಯಪಡುವಂತಾಗಿದೆ.‌

ಇದನ್ನೂ ಓದಿ: ಚಿಕನ್‌ ಖರೀದಿಸಿದರೆ ಮೊಟ್ಟೆ Free !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ಕರಾವಳಿ, ಮಲೆನಾಡು ಸೇರಿ ಉತ್ತರ ಒಳನಾಡಿನಲ್ಲಿ ಹಗುರ ಮಳೆ

Karnataka Weather : ಕರಾವಳಿ, ಮಲೆನಾಡು ಸೇರಿ ಉತ್ತರ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಒಣಹವೆ ಮುಂದುವರಿಯಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯವಾಗಿದ್ದರೆ, ಒಳನಾಡಿನಲ್ಲಿ ದುರ್ಬಲಗೊಂಡಿದೆ. ಈ ದಿನ ಬುಧವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ. ಉಳಿದಂತೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಇರಲಿದೆ.

ಇನ್ನು ಬೆಂಗಳೂರು ನಗರ ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಭಾಗಶಃ ಮೋಡ ಕವಿದ ಆಕಾಶ ಇರಲಿದೆ. ಒಣ ಹವಾಮಾನ ಮುಂದುವರಿಯಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 20 ಡಿ.ಸೆ ಇರಲಿದೆ.

ಇಲ್ಲೆಲ್ಲ ಮಳೆ?

ಪುತ್ತೂರು ಎಚ್‌ಎಂಎಸ್, ಕೋಟ, ಹಣಂಬೂರು ವೀಕ್ಷಣಾಲಯ, ಗೋಕರ್ಣ, ಅಂಕೋಲಾ, ಕಾರ್ಕಳದಲ್ಲಿ ತಲಾ 3 ಸೆಂ.ಮೀ ಮಳೆಯಾಗಲಿದೆ. ಕಾರವಾರ ವೀಕ್ಷಣಾಲಯ, ಮಂಕಿ, ಮಂಗಳೂರು ಎಪಿ ಅನ್ಸರ್ವೇಟರಿ, ಗೇರ್ಸೊಪ್ಪ, ಕುಮಟಾ, ಉಡುಪಿ, ಶಿರಾಲಿ ಪಿಟಿಒ, ಲಿಂಗನಮಕ್ಕಿ ಎಚ್‌ಎಂಎಸ್, ಶೃಂಗೇರಿ ಎಚ್‌ಎಂಎಸ್ 2 ಸೆಂ.ಮೀ ಮಳೆಯಾಗಿದೆ. ಸಿದ್ದಾಪುರ, ಸುಳ್ಯ, ಮೂಲ್ಕಿ , ಕುಂದಾಪುರ, ಧಾರವಾಡ ಪಿಟಿಒ, ಶಿರಹಟ್ಟಿ , ಧಾರವಾಡ, ನರಗುಂದ, ಭಾಗಮಂಡಲ, ಕಮ್ಮರಡಿ ಸೇರಿ ಕೊಟ್ಟಿಗೆಹಾರ, ಜಯಪುರ, ಪೊನ್ನಂಪೇಟೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಇಂದು ಕರಾವಳಿಯಲ್ಲಿ ಸಾಧಾರಣ ಮಳೆ; ಉಳಿದೆಡೆ ಮುಂದುವರಿಯಲಿದೆ ಒಣಹವೆ

Karnataka Weather Forecast : ಕರಾವಳಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ (Karnataka Weather Forecast) ಕಡಿಮೆ ಆಗಿದೆ. ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲಗೊಂಡಿದೆ ಎಂದು ಹವಾಮಾನ ಇಲಾಖೆ (Rain News) ಮುನ್ಸೂಚನೆಯನ್ನು ನೀಡಿದೆ. ಸೆ.16ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ ಸೇರಿ ಮಲೆನಾಡನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಮುಖ್ಯವಾಗಿ ಒಣ ಹವೆಯೇ ಮುಂದುವರಿಯುವ ಸಾಧ್ಯತೆಯಿದೆ. ಒಳನಾಡಿನ ಕೆಲವೆಡೆ ಪ್ರತ್ಯೇಕ ಸ್ಥಳದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇಲ್ಲೆಲ್ಲ ಮಳೆಯ ಸಿಂಚನ

ನಿನ್ನೆ ಕರಾವಳಿಯ ಹಲವು ಸ್ಥಳಗಳಲ್ಲಿ ಮತ್ತು ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗಿದೆ. ಉಡುಪಿಯ ಕೋಟ 3 ಸೆಂ.ಮೀ, ಗೋಕರ್ಣ, ಹೊನ್ನಾವರ ವೀಕ್ಷಣಾಲಯ, ಶಿರಾಲಿ ಪಿಟಿಒ, ಸಿದ್ದಾಪುರ, ಗೇರ್ಸೊಪ್ಪದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಕುಂದಾಪುರ, ಉಡುಪಿ, ಕ್ಯಾಸಲ್ ರಾಕ್, ಉಪ್ಪಿನಂಗಡಿ, ಕಾರ್ಕಳ, ಕುಮಟಾ ಹಾಗೂ ಲೋಂಡಾ, ಕಮ್ಮರಡಿ, ಹಾಸನ ಪಿಟ್ಟಿಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಕ್ಷಿಣ ಕನ್ನಡ

Snake Bite : ಹೆಬ್ಬಾವಿನ ಮರಿ ಎಂದು ವಿಷದ ಹಾವಿನ ಮರಿ ಬರಿಗೈಯಲ್ಲಿ ಹಿಡಿದು ಜೀವ ಬಿಟ್ಟ

Snake Bite : ಹೆಬ್ಬಾವಿನ ಮರಿ ಎಂದು ವಿಷದ ಹಾವಿನ ಮರಿ ಬರಿಗೈಯಲ್ಲಿ ಹಿಡಿದು ವ್ಯಕ್ತಿಯೊಬ್ಬರು ಜೀವ ಬಿಟ್ಟಿದ್ದಾರೆ.

VISTARANEWS.COM


on

By

Snake
Koo

ಮಂಗಳೂರು: ಹೆಬ್ಬಾವಿನ ಮರಿ ಎಂದು ವಿಷದ ಹಾವಿನ ಮರಿ (Snake Bite) ಬರಿಗೈಯಲ್ಲಿ ಹಿಡಿದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹೆಬ್ಬಾವಿನ ಮರಿಯೆಂದು ತಪ್ಪು ಗ್ರಹಿಕೆ ಜೀವಕ್ಕೇ ಎರವಾದ ಪ್ರಸಂಗ ಮಂಗಳೂರು ಹೊರವಲಯದ ಬಜಪೆ ಎಂಬಲ್ಲಿ ನಡೆದಿದೆ. ಬಂಟ್ವಾಳದ ರಾಮಚಂದ್ರ ಪೂಜಾರಿ (58) ಮೃತ ದುರ್ದೈವಿ.

ಇಲ್ಲಿಯ ಮರವೂರಿನ ಮನೆಯೊಂದರಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಬಂಟ್ವಾಳ ರಾಮಚಂದ್ರ ಪೂಜಾರಿ, ಸೆ.4 ರಂದು ಮಧ್ಯಾಹ್ನ ಮನೆಯ ಮೆಟ್ಟಿಲು ಸಮೀಪ ಹಾವಿನ ಮರಿ ಕಂಡಿದ್ದಾರೆ. ಕನ್ನಡಿ ಹಾವಿನ ಮರಿಯನ್ನು ಹೆಬ್ಬಾವಿನ ಮರಿ ಎಂದು ಭಾವಿಸಿ ಬರಿಗೈಯಲ್ಲಿ ಹಿಡಿದಿದ್ದರು. ಹಿಡಿಯುವ ಸಂದರ್ಭ ರಾಮಚಂದ್ರ ಅವರ ಕೈಗೆ ಹಾವಿನ ಮರಿ ಕಚ್ಚಿತ್ತು.

ಕಚ್ಚಿದ್ದು ಹೆಬ್ಬಾವಿನ ಮರಿ ಎಂದು ರಾಮಚಂದ್ರ ನಿರ್ಲಕ್ಷಿಸಿದ್ದರು. ಕೆಲ ಹೊತ್ತಿನಲ್ಲಿ ಅಸ್ವಸ್ಥಗೊಂಡಿದ್ದ ರಾಮಚಂದ್ರರನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ವಿಷ ಮೈವೇರಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ರಾಮಚಂದ್ರ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Self Harming : ಮುದ್ದಾದ ಮಕ್ಕಳಿಬ್ಬರ ಕತ್ತು ಹಿಸುಕಿ ಕೊಂದಳು; ಬಳಿಕ ತಾನೂ ನೇಣಿಗೆ ಶರಣಾದಳು ತಾಯಿ

ರಸ್ತೆಯಲ್ಲಿ ಕಾಡಾನೆ ಬಿಂದಾಸ್ ವಾಕ್

ರಾಜ್ಯ ಗಡಿಭಾಗ ಹೊಸೂರು ಸಮೀಪದ ಕೊಡಕರೈ ಮತ್ತು ಪೆಟ್ಟಮುಕಿಲಾಳ ಗ್ರಾಮದ ರಸ್ತೆಯಲ್ಲಿ ಕಾಡಾನೆ ಓಡಾಟವು ಜನರಲ್ಲಿ ಆತಂಕವನ್ನು ಹೆಚ್ಚಿಸಿತ್ತು. ವಾಹನಗಳನ್ನು ಓಡಾಡಲು ಬಿಡದೆ ರಸ್ತೆಯಲ್ಲಿ ಆನೆ ಬೀಡುಬಿಟ್ಟಿತ್ತು. ಗ್ರಾಮದ ಕೆರೆಯಲ್ಲಿ ಜಲಕ್ರೀಡೆ ಆಡಿ, ದೇಹ ತಂಪಾಗಿಸಿಕೊಂಡು ರಸ್ತೆಯಲ್ಲಿ ಓಡಾಡಿಕೊಂಡಿತ್ತು. ಈ ವೇಳೆ ಏಕಾಏಕಿ ಲಾರಿ ಕಡೆಗೆ ನುಗ್ಗಿದ್ದರಿಂದ ಕೆಲ ಸಮಯ ಭಯಭೀತರಾಗಿದ್ದರು. ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲಿಯೇ ಬೀಡು ಬಿಟ್ಟಿದ್ದ ಕಾಡಾನೆ, ಯಾವುದೇ ಅಪಾಯ ಮಾಡದೆ ಕಾಡಿನೊಳಗೆ ವಾಪಸ್ ಹೋಗಿದೆ. ಕಾಡಾನೆ ಹೋಗುತ್ತಿದ್ದಂತೆ ನಿಟ್ಟುಸಿರು ಬಿಟ್ಟರು.

Continue Reading

ರಾಜಕೀಯ

Hariprakash Konemane: ದಲಿತೋದ್ಧಾರದ ಮಾತುಗಳು ಮೊಸಳೆ ಕಣ್ಣೀರಷ್ಟೇ; ಕಾಂಗ್ರೆಸ್ ತನ್ನ ನಿಜಬಣ್ಣ ತೆರೆದಿಟ್ಟಿದೆ- ಹರಿಪ್ರಕಾಶ್ ಕೋಣೆಮನೆ

Hariprakash Konemane: ರಾಹುಲ್ ಮೀಸಲಾತಿ ಕುರಿತ ಹೇಳಿಕೆ ಉದ್ದೇಶಪೂರ್ವಕವಾಗೇ ಇದೆ. ಕಾಂಗ್ರೆಸ್ ಪಕ್ಷದ ಮುಖವಾಡ ಕಳಚಿದೆ, ದಲಿತೋದ್ಧಾರದ ಮಾತು ಮೊಸಳೆ ಕಣ್ಣೀರು ಅಂತ ದೃಢಪಡಿಸಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ ಟೀಕಿಸಿದ್ದಾರೆ.

VISTARANEWS.COM


on

By

They have done a disservice to the Constitution Congress has exposed its true colours Hariprakash Koonemane
Koo

ಮಂಗಳೂರು: ರಾಹುಲ್ ಗಾಂಧಿ ತನ್ನ ಜತೆಗೆ ನಕ್ಸಲರು, ಮತಾಂಧರು, ಭಯೋತ್ಪಾದಕರನ್ನು ಸೇರಿಸಿಕೊಂಡು ದೇಶದ ವಿರುದ್ಧ ತಾನಿದ್ದೇನೆಂದು ತೋರಿಸುತ್ತಿದ್ದಾರೆ. ದೇಶದ ಬಗ್ಗೆ, ಸೇನೆಯ ಬಗ್ಗೆ ಅಗೌರವ ತೋರುತ್ತಿದ್ದಾರೆ. ವಿದೇಶದಲ್ಲಿ ಕುಳಿತು ಭಾರತದ ಚುನಾವಣಾ ವ್ಯವಸ್ಥೆಯನ್ನು ಟೀಕಿಸುತ್ತಿದ್ದಾರೆ. ಸೂಕ್ತ ಸಂದರ್ಭದಲ್ಲಿ ದಲಿತರ, ಹಿಂದುಳಿದವರ ಮೀಸಲು ವ್ಯವಸ್ಥೆಯನ್ನು ತೆಗೆದುಹಾಕುವುದಾಗಿ ಹೇಳುತ್ತಿದ್ದಾರೆ. ಆ ಮೂಲಕ ಸಂವಿಧಾನಕ್ಕೆ ಒಂದೆಡೆ ಅಪಚಾರ ಎಸಗಿದ್ದು, ಮತ್ತೊಂದೆಡೆ ಕಾಂಗ್ರೆಸ್ ಪಕ್ಷದ ನಿಜಬಣ್ಣವನ್ನು ತೆರೆದಿಟ್ಟಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ (Hariprakash Konemane) ಟೀಕಿಸಿದ್ದಾರೆ.

ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಭಾರತದ ಬಗ್ಗೆ ತಪ್ಪು ಕಲ್ಪನೆ ಬರುವ ರೀತಿ ಅಮೆರಿಕಾದಲ್ಲಿ ನಿಂತು ರಾಹುಲ್ ಮಾತನಾಡಿದ್ದಾರೆ. ಸೂಕ್ತ ಸಂದರ್ಭದಲ್ಲಿ ಮೀಸಲಾತಿ ವ್ಯವಸ್ಥೆ ತೆಗೆದು ಹಾಕುವುದಾಗಿ ಹೇಳಿದ್ದು, ನಾವಿದನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ. ಮೀಸಲಾತಿ ತೆಗೆಯುವ ಸೂಕ್ತ ಸಂದರ್ಭ ಯಾವುದು ಎಂಬುದನ್ನು ಕೇಳಬಯಸುತ್ತೇನೆ ಎಂದರು. ಸಮಾಜದ ಕಟ್ಟಕಡೆಯ ಕೆಳಸ್ತರದ ಜಾತಿಗಳನ್ನು ಮೇಲೆ ತರುವುದಕ್ಕಾಗಿ ಮೀಸಲಾತಿ ಅನಿವಾರ್ಯ ಎಂದು ಕೋರ್ಟ್ ಹೇಳಿದೆ ಎಂಬುದಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಾಂಗ್ರೆಸ್‌ ಮುಖವಾಡ ಕಳಚಿದೆ

ರಾಹುಲ್ ಮೀಸಲಾತಿ ಕುರಿತ ಹೇಳಿಕೆ ಉದ್ದೇಶಪೂರ್ವಕವಾಗೇ ಇದೆ. 1960ರಲ್ಲಿ ಅಂದಿನ ಪ್ರಧಾನಿ ಜವಾಹರ್ ನೆಹರು ಭಾಷಣ ಮಾಡುತ್ತ ಸರ್ಕಾರಿ ವ್ಯವಸ್ಥೆಯಲ್ಲಿ ದಕ್ಷತೆ ತರುವುದಕ್ಕಾಗಿ ಮೀಸಲಾತಿ ತೆಗೆದು ಹಾಕಬೇಕೆಂದು ಹೇಳಿದ್ದರು. ಅದೇ ಹೇಳಿಕೆಯನ್ನು ಈಗ ಮರಿ ಮೊಮ್ಮಗ ಉಲ್ಲೇಖಿಸಿದ್ದಾರೆ. ಆಮೂಲಕ ಕಾಂಗ್ರೆಸ್ ಪಕ್ಷದ ಮುಖವಾಡ ಕಳಚಿದೆ, ದಲಿತೋದ್ಧಾರದ ಮಾತು ಮೊಸಳೆ ಕಣ್ಣೀರು ಅಂತ ದೃಢಪಡಿಸಿದೆ. ಈ ಹೇಳಿಕೆಯ ಕಾರಣಕ್ಕೆ ರಾಹುಲ್ ಗಾಂಧಿ ಕೋಟ್ಯಂತರ ದಲಿತ ವರ್ಗದ, ಹಿಂದುಳಿದ ವರ್ಗದ ಕ್ಷಮೆಯಾಚನೆ ಮಾಡಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಪಿಎಫ್ಐ, ಎಸ್ಡಿಪಿಐ ಮತ್ತು ವಿಭಜಕ ಶಕ್ತಿಗಳು ಆಡಳಿತ ನಡೆಸುತ್ತಿರುವಂತೆ ಕಾಣುತ್ತಿದೆ. ಮೊದಲೇ ನಮಗೆ ರಾಜ್ಯದಲ್ಲಿ ಪಿಎಫ್ಐ, ಎಸ್ಡಿಪಿಐ ಅಧಿಕಾರಕ್ಕೆ ಬಂದಿದೆ ಎಂಬ ಅನುಮಾನ ಇತ್ತು. ಈಗ ಆ ಮಾತು ದೃಢವಾಗಿದೆ. ಸತತ ಎರಡನೇ ವರ್ಷವೂ ರಾಜ್ಯದಲ್ಲಿ ಗಣಪತಿ ವಿಸರ್ಜನೆ ವೇಳೆ ಗಲಭೆ ಕೃತ್ಯ ನಡೆಸಿದ್ದಾರೆ. ನಾಗಮಂಗಲದ ಘಟನೆ ನೋಡಿದರೆ ಪೂರ್ವಯೋಜಿತ ಅನ್ನುವ ಸಂಶಯ ಬರುತ್ತದೆ. ಯಾಕಂದರೆ, ಅಲ್ಲಿ ಘಟನೆ ನಡೆಯುವಾಗ ಪೊಲೀಸರೇ ಇರಲಿಲ್ಲ. ಗಣೇಶನ ವಿಸರ್ಜನೆಗೆ ಭದ್ರತೆ ಕೊಡುವ ಕಾಳಜಿ ರಾಜ್ಯದ ಪೊಲೀಸರಿಗೆ, ಸರ್ಕಾರಕ್ಕೆ ಇಲ್ಲದಿರುವುದು ವಿಭಜಕ ಶಕ್ತಿ ಬಲಗೊಂಡಿರುವುದನ್ನು ಸೂಚಿಸುತ್ತದೆ ಎಂದು ಹೇಳಿದರು.

ನಾಗಮಂಗಲದಲ್ಲಿ ಗಲಭೆ ನಡೆಸಿದವರ ಜತೆಗೆ ಗಣೇಶೋತ್ಸವ ಆಯೋಜಕರ ಮೇಲೂ ಕೇಸು ದಾಖಲಿಸಿದ್ದಾರೆ. ದಾಳಿ ನಡೆಸಿದವರೊಂದಿಗೆ 26ನೇ ಆರೋಪಿಯೆಂದು ಆಯೋಜಕರನ್ನು ಸೇರಿಸಿದ್ದಾರೆ. ದೊಂಬಿ ನಡೆದು ಹತ್ತಾರು ಅಂಗಡಿ, ವಾಹನಗಳಿಗೆ ಬೆಂಕಿ ಹಾಕಿದ್ದರೂ ಅದೊಂದು ಸಣ್ಣ ಘಟನೆ, ಮರೆತು ಬಿಡಿ ಎಂದು ಗೃಹ ಸಚಿವರು ಕ್ಷುಲ್ಲಕ ಮಾತಗಳನ್ನಾಡಿದ್ದಾರೆ. ಮಂಗಳೂರಿನ ಕುಕ್ಕರ್ ಬಾಂಬ್ ಸಂದರ್ಭದಲ್ಲಿ ಡಿಕೆಶಿ ಹೇಳಿರುವ ಮಾತಿಗೂ ಪರಮೇಶ್ವರ್ ಮಾತಿಗೂ ತಾಳೆಯಾಗುತ್ತಿದೆ. ಇವರು ವಿಭಜಕ ಶಕ್ತಿಗಳ ಪರವಾಗಿದ್ದಾರೆ ಎನ್ನುವುದನ್ನು ಇದು ತೋರಿಸುತ್ತದೆ ಎಂದು ಹೇಳಿದರು.

ದೇಶ ಒಡೆಯುವುದರಲ್ಲೇ ಕಾಂಗ್ರೆಸಿಗೆ ಆಸಕ್ತಿ

ಜಮ್ಮು ಕಾಶ್ಮೀರದಲ್ಲಿ ಚುನಾವಣೆ ಆಗುತ್ತಿರುವುದಕ್ಕೆ ಪ್ರಧಾನಿ ಮೋದಿಯವರ ದಿಟ್ಟ ನಿರ್ಧಾರ ಕಾರಣ. ಅಲ್ಲಿ ದೇಶದ ಧ್ವಜ ಹಾರಿಸುವುದಕ್ಕೂ ನಿರ್ಬಂಧ ವಿಧಿಸಿದ್ದ 370 ವಿಧಿಯನ್ನು ತೆಗೆದು ಹಾಕಿ, ಉಗ್ರರನ್ನು ಸದೆಬಡಿದು ಚುನಾವಣೆ ನಡೆಸುತ್ತಿದ್ದರೆ, ಕಾಂಗ್ರೆಸ್ ಪಕ್ಷವು ಪಾಕಿಸ್ತಾನದ ಪರವಾಗಿರುವ ರಾಜಕೀಯ ಶಕ್ತಿಗಳ ಜತೆ ನಿಂತು ತಾವು ಅಧಿಕಾರಕ್ಕೆ ಬಂದರೆ ಮತ್ತೆ ಪ್ರತ್ಯೇಕ ಸ್ಥಾನ ಕೊಡಿಸುವ 370 ವಿಧಿ ಜಾರಿಗೆ ತರುತ್ತೇವೆಂದು ಪ್ರಣಾಳಿಕೆಯಲ್ಲಿ ಹೇಳಿದೆ. ಕಾಂಗ್ರೆಸ್ ಗೆ ಈ ದೇಶವನ್ನು ಜೋಡಿಸುವುದರಲ್ಲಿ ನಂಬಿಕೆ ಇಲ್ಲ. ಜಾತಿ, ಧರ್ಮದ ಹೆಸರಲ್ಲಿ ದೇಶ ಒಡೆಯುವುದರಲ್ಲೇ ಇದೆ, ಮತ್ತೆ ದೇಶ ವಿಭಜನೆಯ ನೆನಪನ್ನು ಮಾಡಿಕೊಟ್ಟಿದೆ ಎಂದು ಹೇಳಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Use nandini ghee compulsorily in temple prasadam Order of the Department of Religious Endowments
ಕರ್ನಾಟಕ11 ಗಂಟೆಗಳು ago

Nandini ghee: ದೇವಸ್ಥಾನಗಳ ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸಿ; ಧಾರ್ಮಿಕ ದತ್ತಿ ಇಲಾಖೆ ಆದೇಶ

Temporary additional coaches to be attached to 34 trains for Dasara 2024
ಬೆಂಗಳೂರು12 ಗಂಟೆಗಳು ago

Dasara 2024: ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ದಸರಾ ಹಬ್ಬಕ್ಕೆ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ

Theft case
ಬೆಂಗಳೂರು12 ಗಂಟೆಗಳು ago

Theft case : ಮಧ್ಯರಾತ್ರಿಯಲ್ಲಿ ವಕೀಲನಿಗೆ ಚಾಕು ತೋರಿಸಿ ಸುಲಿಗೆ ಮಾಡಿ ಬೆದರಿಕೆ ಹಾಕಿದ ಖದೀಮರು

Also test the prasadam of the holy places of the state Pralhad Joshi urges state government
ಬೆಂಗಳೂರು15 ಗಂಟೆಗಳು ago

Tirupati laddu Row : ತಿರುಪತಿ ಲಡ್ಡು ಬಳಿಕ ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ; ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

Road Accident
ಬೆಂಗಳೂರು16 ಗಂಟೆಗಳು ago

Road Accident : ಚಾಲಕ ಕಾರಿನೊಳಗೆ ಮಲಗಿದ್ದಾಗಲೇ ನಡುರಾತ್ರಿ ಹೊತ್ತಿ ಉರಿದ ಕಾರು! ಅಗ್ನಿ ಅವಘಡಕ್ಕೆ ಕಾರಣ ನಿಗೂಢ!

Road Accident
ಕೋಲಾರ16 ಗಂಟೆಗಳು ago

Road Accident: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನ ತಲೆಯೇ ಕಟ್‌! ಭೀಕರ ದೃಶ್ಯಕ್ಕೆ ಬೆಚ್ಚಿ ಬಿದ್ದ ಜನರು

Good news for the children of yellow board drivers Do this to get a scholarship under Vidyanidhi
ಬೆಂಗಳೂರು ಟೆಕ್ ಸಮ್ಮಿಟ್17 ಗಂಟೆಗಳು ago

Students Scholarship : ಯೆಲ್ಲೋ ಬೋರ್ಡ್‌ ವಾಹನ ಚಾಲಕರ ಮಕ್ಕಳಿಗೆ ಗುಡ್‌ ನ್ಯೂಸ್‌; ವಿದ್ಯಾನಿಧಿಯಡಿ ಸ್ಕಾಲರ್‌ಶಿಪ್‌ ಪಡೆಯಲು ಹೀಗೆ ಮಾಡಿ

allegations of rape honeytrap Mla Munirathna arrested again by Kaggalipura police as soon as he came out of jail
ರಾಜಕೀಯ17 ಗಂಟೆಗಳು ago

MLA Muniratna: ಅತ್ಯಾಚಾರ, ಹನಿಟ್ರ್ಯಾಪ್‌ ಆರೋಪ; ಜೈಲಿನಿಂದ ಹೊರಬರುತ್ತಿದ್ದಂತೆ ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

Dina Bhavishya
ಭವಿಷ್ಯ23 ಗಂಟೆಗಳು ago

Dina Bhavishya : ಈ ರಾಶಿಯವರು ಇಂದು ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ

MCC Seat Retention, Opportunity to Cancel KEA Seat Deadline to Cancel Seats by 11 AM on September 20
ಬೆಂಗಳೂರು1 ದಿನ ago

KEA : ಎಂಸಿಸಿ ಸೀಟು ಉಳಿಸಿಕೊಂಡು, ಕೆಇಎ ಸೀಟು ರದ್ದತಿಗೆ ಅವಕಾಶ; ಸೀಟು ರದ್ದು ಪಡಿಸಿಕೊಳ್ಳಲು ನಾಳೆವರೆಗೂ ಗಡುವು

Kannada Serials
ಕಿರುತೆರೆ11 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್3 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ4 ವಾರಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 ತಿಂಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 ತಿಂಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 ತಿಂಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌