ಗೋಡಂಬಿ ಅಲ್ಲ ಇದು ಮೊಟ್ಟೆ! Vistara News

ದಕ್ಷಿಣ ಕನ್ನಡ

ಗೋಡಂಬಿ ಅಲ್ಲ ಇದು ಮೊಟ್ಟೆ!

ಈ ಮೊಟ್ಟೆಯ ಆಕಾರ ನೋಡಿ ಎಲ್ಲರೂ ಅಶ್ಚರ್ಯಪಡುವಂತಾಗಿದೆ.‌

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲಾ ಅನ್ನೋ ಗ್ರಾಮದಲ್ಲಿ ಕೋಳಿಯೊಂದು ಗೋಡಂಬಿ ಆಕಾರದ ಮೊಟ್ಟೆಗಳನ್ನ ಇಡ್ತಾ ಇದೆ.

ಬೇಲಾಜೆ ಪ್ರಶಾಂತ್ ಎಂಬವರ ಮನೆಯಲ್ಲಿ ಸಾಕಿದ್ದ ಕೋಳಿಯೊಂದು ಕಳೆದ ಕೆಲವು ದಿನಗಳಿಂದ ಮೊಟ್ಟೆ ಇಡುತ್ತಿದೆ. ಇದನ್ನು ಗಮನಿಸಿದಾಗ ಗೋಡಂಬಿ ರೀತಿಯಲ್ಲಿ ಕಂಡು ಬರುತ್ತಿದೆ. ಈ ಮೊಟ್ಟೆಯ ಆಕಾರ ನೋಡಿ ಎಲ್ಲರೂ ಅಶ್ಚರ್ಯಪಡುವಂತಾಗಿದೆ.‌

ಇದನ್ನೂ ಓದಿ: ಚಿಕನ್‌ ಖರೀದಿಸಿದರೆ ಮೊಟ್ಟೆ Free !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Karnataka Weather : ನಾಳೆ ಭಾರಿ ಮಳೆ ಎಚ್ಚರಿಕೆ; ಯಾವ್ಯಾವ ಜಿಲ್ಲೆಗಳಿಗೆ ಅಲರ್ಟ್‌!

Karnataka Weather Forecast : ತಿಂಗಳಾಂತ್ಯದವರೆಗೆ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka weather forecast Heavy rain alert
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಮಲೆನಾಡಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಂಡ್ಯ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಮೈಸೂರು ಮತ್ತು ತುಮಕೂರಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಕಲಬುರಗಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಇತ್ತ ಕರಾವಳಿಯ ದಕ್ಷಿಣ ಕನ್ನಡದಲ್ಲಿ ಚದುರಿದಂತೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದೆ.

ಇದನ್ನೂ ಓದಿ: Viral News: ಪತ್ನಿಯ ಬರ್ತ್‌ಡೇ, ಪತಿಗೆ ಡೆತ್‌ಡೇ: ದುಬೈಗೆ ಕರೆದೊಯ್ಯದ್ದಕ್ಕೆ ಮೂಗಿಗೆ ಗುದ್ದಿ ಗಂಡನ ಪ್ರಾಣ ತೆಗೆದ ಹೆಂಡತಿ

ಆಗೊಮ್ಮೆ ಈಗೊಮ್ಮೆ ದರ್ಶನ ಕೊಡುವ ಸೂರ್ಯ

ನ.29ರಂದು ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ ದಾಖಲು

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸೋಮವಾರ ಮಳೆಯಾಗಿದ್ದು, ಕರಾವಳಿಯಲ್ಲಿ ಒಣ ಹವೆ ಇತ್ತು. ಕಡಿಮೆ ಉಷ್ಣಾಂಶ 17.3 ಡಿ.ಸೆ. ಚಾಮರಾಜನಗರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka Weather : ಕರ್ನಾಟಕದಲ್ಲಿ ಇಂದಿನಿಂದ ಡಿಸೆಂಬರ್‌ 3ರವರೆಗೆ ಮಳೆ ಸಾಧ್ಯತೆ!

Karnataka Weather Forecast : ಇಂದಿನಿಂದ (ನ.28) ಡಿ.3ರ ವರೆಗೂ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ.

VISTARANEWS.COM


on

By

Girl plying in Rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ (Karnataka Weather Forecast) ಆಗಿದೆ. ಕರಾವಳಿಯಲ್ಲಿ ಒಣಹವೆ ಇತ್ತು. ಕಡಿಮೆ ಉಷ್ಣಾಂಶ 17.2 ಡಿ.ಸೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ. ಮುಂದಿನ ಒಂದು ವಾರ ರಾಜ್ಯಾದ್ಯಂತ ಗುಡುಗು ಸಹಿತ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ.

ಒಳನಾಡು ಹಾಗೂ ಕರಾವಳಿ, ಮಲೆನಾಡಿನ ಕೆಲವು ಕಡೆಗಳಲ್ಲಿ ಮಳೆ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಕೆಲವೊಮ್ಮೆ ಸಾಧಾರಣದಿಂದ ಜೋರು ಮಳೆ ಸುರಿಯಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಹಾಗೂ ಕನಿಷ್ಠ ಉಷ್ಣಾಂಶ 19 ಡಿ.ಸೆ ಇರಲಿದೆ.

ನ.28 ರಿಂದ ಡಿ.3 ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಯಾದಗಿರಿ, ವಿಜಯಪುರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಬಳ್ಳಾರಿ, ಮಂಡ್ಯದಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Child trade : ಮಕ್ಕಳ ಮಾರಾಟದ ಬೃಹತ್‌ ಜಾಲ ಪತ್ತೆ;‌ ಹೊಟ್ಟೆಯಲ್ಲಿ ಇರುವಾಗಲೇ ಬುಕಿಂಗ್!

ಒಣ ಹವೆ ಮುಂದುವರಿಕೆ

ಬೀದರ್‌, ಹಾವೇರಿ, ಕಲಬುರಗಿ, ಕೊಪ್ಪಳ ಹಾಗೂ ಚಾಮರಾಜನಗರ, ಹಾಸನ, ಮೈಸೂರಿಗೆ ಯಾವುದೇ ಮಳೆಯ ಸೂಚನೆ ಇಲ್ಲ. ಬದಲಿಗೆ ಒಣಹವೆ ಮುಂದುವರಿಯಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -18 ಡಿ.ಸೆ
ಮಂಗಳೂರು: 33 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 20 ಡಿ.ಸೆ
ಗದಗ: 31 ಡಿ.ಸೆ – 19ಡಿ.ಸೆ
ಹೊನ್ನಾವರ: 35 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 20 ಡಿ.ಸೆ
ಬೆಳಗಾವಿ: 30 ಡಿ.ಸೆ – 18 ಡಿ.ಸೆ
ಕಾರವಾರ: 34 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

ಸ್ಕೂಟರ್‌ನಲ್ಲಿ ಸುತ್ತಾಡುತ್ತಿದ್ದ ಅನ್ಯಕೋಮಿನ ಜೋಡಿಗೆ ಬಜರಂಗ ದಳ ಕಾರ್ಯಕರ್ತರ ತರಾಟೆ

ಒಂದೇ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಜೋಡಿ ಸ್ಕೂಟರ್‌ನಲ್ಲಿ ಸುತ್ತಾಡುತ್ತಿದ್ದುದನ್ನು ಕಂಡು ಬಜರಂಗ ದಳ ಕಾರ್ಯಕರ್ತರು ತಡೆದು ತರಾಟೆಗೆ ತೆಗೆದುಕೊಂಡಿದ್ದಾರೆ.

VISTARANEWS.COM


on

moral police mng1
Koo

ಮಂಗಳೂರು: ಮಂಗಳೂರಿನಲ್ಲಿ ಸ್ಕೂಟರ್‌ನಲ್ಲಿ ಸುತ್ತಾಡುತ್ತಿದ್ದ ಅನ್ಯಕೋಮಿನ ಜೋಡಿಯನ್ನು ಬೆನ್ನಟ್ಟಿ ಹೋದ ಬಜರಂಗದಳ (Bhajarang Dal) ಕಾರ್ಯಕರ್ತರು, ಅವರನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಂಗಳೂರಿನ ಮೋರ್ಗನ್ಸ್ ಗೇಟ್ ಬಳಿ‌ ಘಟನೆ ನಡೆದಿದೆ. ಮಂಗಳೂರಿನ ಮಂಕಿ ಸ್ಟಾಂಡ್ ನಿವಾಸಿ, ಅನ್ಯಕೋಮಿನ ಯುವಕನೊಂದಿಗೆ‌ ಚಿಕ್ಕಮಗಳೂರಿನ‌ ಯುವತಿ ಸುತ್ತಾಡುತ್ತಿದ್ದುದನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಗಮನಿಸಿ ಬೆನ್ನಟ್ಟಿದ್ದರು.

ಮಂಕಿ ಸ್ಟಾಂಡ್‌ನ ಮಳಿಗೆಯೊಂದರಲ್ಲಿ ಈ ಜೋಡಿ ಉದ್ಯೋಗದಲ್ಲಿದೆ. ಸ್ಕೂಟರ್‌ನಲ್ಲಿ ಜೋಡಿಯ ಸುತ್ತಾಟ ಗಮನಿಸಿ ಬೈಕ್‌ಗಳಲ್ಲಿ ಬೆನ್ನಟ್ಟಿದ ಬಜರಂಗದಳ ಕಾರ್ಯಕರ್ತರು, ಮಂಕಿಸ್ಟಾಂಡ್ ಬಳಿ ಸ್ಕೂಟರ್ ಅಡ್ಡ ಹಾಕಿ ಜೋಡಿಯನ್ನು ತರಾಟೆಗೆ ತೆಗೆದುಕೊಂಡರು.

ಕೂಡಲೇ ಇನ್ನೊಂದು ಕೋಮಿನ ಯುವಕರ ತಂಡವೂ ಸ್ಥಳದಲ್ಲಿ ಜಮಾಯಿಸಿದೆ. ಎರಡೂ ಕೋಮುಗಳ ತಂಡಗಳ ನಡುವೆ ಮಾತಿನ ಚಕಮಕಿ ನಡೆಯಿತು. ಪರಿಸ್ಥತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪಾಂಡೇಶ್ವರ ಠಾಣೆಯ ಪೊಲೀಸರು ಮಧ್ಯ ಪ್ರವೇಶಿಸಿ, ಗುಂಪನ್ನು ಚದುರಿಸಿದರು. ಜೋಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ‌ ನಡೆಸುತ್ತಿದ್ದಾರೆ. ‌ಗುಂಪಿನ ಇಬ್ಬರು ಆರೋಪಿಗಳನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಒಂದು ತಿಂಗಳ ಹಿಂದೆ ಶೃಂಗೇರಿ ದೇವಸ್ಥಾನದಿಂದ (Shringeri Temple) ಮರಳುತ್ತಿದ್ದ, ಮಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ವೈದ್ಯರಾಗಿದ್ದವರ ಕಾರೊಂದನ್ನು ಅಡ್ಡಗಟ್ಟಿದ ಐವರ ತಂಡ ಅದರಲ್ಲಿದ್ದವರ ಮೇಲೆ ಹಲ್ಲೆ ಮಾಡಿತ್ತು. ಇನ್ನೊಂದು ಪ್ರಕರಣದಲ್ಲಿ ವೈದ್ಯ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಲಾಗಿತ್ತು.

ಇದನ್ನೂ ಓದಿ: ಅನ್ಯಕೋಮಿನ ಯುವತಿ ಜತೆ ಇದ್ದ ಯುವಕನಿಗೆ ಮಾರಣಾಂತಿಕ ಹಲ್ಲೆ! ಪೊಲೀಸರೆದುರೇ ನೈತಿಕ ಪೊಲೀಸ್‌ಗಿರಿ

Continue Reading

ಕರ್ನಾಟಕ

Bangalore Kambala : ಚಿನ್ನ ಗೆದ್ದ ಮಲೆಕುಡಿಯರ ಕೋಣಗಳು: ಇತಿಹಾಸದಲ್ಲೇ ಮೊದಲು

Bangalore kambala; ಕಂಬಳ ಕೇವಲ ಕೆಲವೇ ಸಮುದಾಯಕ್ಕೆ ಸೀಮಿತವಾದುದಲ್ಲ. ಅದು ಎಲ್ಲರ ಪಾಲ್ಗೊಳ್ಳುವಿಕೆಯನ್ನೂ ಹೊಂದಿರುವ ಕೂಟ ಎನ್ನುವುದು ಸಾಬೀತಾಗಿದೆ. ಮಲೆಕುಡಿಯರ ಕೋಣಗಳು ಚಿನ್ನ ಗೆಲ್ಲುವ ಮೂಲಕ ಇದು ಇನ್ನಷ್ಟು ಗಟ್ಟಿಯಾಗಿದೆ.

VISTARANEWS.COM


on

Buffalos of Narayana Malekudiya
Koo

ಬೆಂಗಳೂರು: ನವೆಂಬರ್‌ 25 ಮತ್ತು 26ರಂದು ನಡೆದ ಬೆಂಗಳೂರು ಕಂಬಳ (Bangalore Kambala) ಹಲವು ಹೊಸ ದಾಖಲೆಗಳನ್ನು ನಿರ್ಮಿಸಿದೆ. ಕರಾವಳಿಯನ್ನು ಬಿಟ್ಟು ಹೊರಗಡೆ ನಡೆದ ಮೊದಲ ಕಂಬಳ ಇದು. ಲಕ್ಷಾಂತರ ಜನರು ಈ ಕಂಬಳವನ್ನು ನೋಡಿ ಆನಂದಿಸಿದ್ದಾರೆ. ಇದರ ಜತೆಗೆ ಇತಿಹಾಸದಲ್ಲೇ ಮೊದಲ ಬಾರಿಗೆ ಮಲೆಕುಡಿಯ ಸಮುದಾಯದ (Malekudiya community) ಯಜಮಾನರೊಬ್ಬರ ಕೋಣಗಳು ಚಿನ್ನದ ಪದಕ ಪಡೆದು ವಿಜ್ರಂಭಿಸಿವೆ. ಈ ಮೂಲಕ ಕಂಬಳ ಎನ್ನುವುದು ಸರ್ವ ಜನಾಂಗದ ಕೂಟ ಎಂಬ ತನ್ನ ಹೆಗ್ಗಳಿಕೆಯನ್ನು ಇನ್ನಷ್ಟು ವಿಸ್ತರಿಸಿಕೊಂಡಿವೆ.

ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯ (Narayana Malekudiya) ಅವರ ಕೋಣಗಳು ಈ ಹೊಸ ಇತಿಹಾಸವನ್ನು ಸೃಷ್ಟಿ ಮಾಡಿವೆ. ಪಾರಂಬೇರಿನ ಗುಂಡ ಮತ್ತು ಬಿಳಿಯೂರು ದಾಸ ಎಂಬ ಕೋಣಗಳು ಮಹಾರಾಜ ಕರೆಯಲ್ಲಿ ಓಡಿ ಹೊಸ ದಾಖಲೆಯನ್ನು ಬರೆದವು. ಸರಪಾರಿ ಧನಂಜಯ ಗೌಡ ಅವರು ಈ ಕೋಣಗಳನ್ನು ಓಡಿಸಿದ್ದರು. ಅಂತಿಮ ಸ್ಪರ್ಧೆ ಬೋಳದ ಗುತ್ತು ಸತೀಶ್‌ ಶೆಟ್ಟಿ ಮತ್ತು ನಾರಾಯಣ ಮಲೆಕುಡಿಯರ ನಡುವಿನ ಕೋಣಗಳ ನಡುವೆ ನಡೆದಿತ್ತು. ಬೋಳದ ಗುತ್ತು ಸತೀಶ್‌ ಶೆಟ್ಟಿ ಅವರ ಕೋಣಗಳು ಅತ್ಯಂತ ಪ್ರಬಲವಾಗಿದ್ದು, ಹಲವು ಪ್ರಶಸ್ತಿಗಳನ್ನು ಗೆದ್ದುಕೊಂಡ ಖ್ಯಾತಿಯನ್ನು ಹೊಂದಿವೆ.

Buffalos of Narayana Malekudiya
ಕೋಣಗಳ ಜತೆಗೆ ನ್ಯಾಯವಾದಿ ದಿನೇಶ್‌ ಹೆಗ್ಡೆ ಉಳೆಪಾಡಿ

ಈ ಮೂಲಕ ನಾರಾಯಣ ಮಲೆಕುಡಿಯ ಅವರ ಕೋಣಗಳು ಪ್ರಥಮ ಸ್ಥಾನ ವಿಜೇತರಿಗೆ ನೀಡಲಾಗುವ 16 ಗ್ರಾಂ ಚಿನ್ನ ಮತ್ತು 1 ಲಕ್ಷ ರೂ. ನಗದು ಬಹುಮಾನಕ್ಕೆ ಭಾಜನವಾಗಿವೆ.

ಕಂಬಳ ಎನ್ನುವುದು ಸರ್ವ ಜನಾಂಗದ ಶಾಂತಿಯ ಕೂಟ

ಕಂಬಳ ಎಂದ ಕೂಡಲೇ ಅದು ಬಲಿಷ್ಠರ ಕೂಟ, ಶ್ರೀಮಂತರು ಮಾತ್ರ ಕೋಣ ಕಟ್ಟಬಹುದು, ಮೇಲ್ವರ್ಗದವರು ಮಾತ್ರ ಕೋಣಗಳ ಮಾಲೀಕರು ಎಂಬ ತಪ್ಪು ಕಲ್ಪನೆಯೂ ಕೆಲವು ಕಡೆ ಇದೆ. ಆದರೆ, ಕಂಬಳದಲ್ಲಿ ಎಲ್ಲ ಜನ ವರ್ಗವೂ ಮಿಳಿತವಾಗಿದೆ ಎನ್ನುವುದು ಕಂಬಳದಲ್ಲಿ ಭಾಗವಹಿಸುವ ಕೋಣಗಳ ಮಾಲೀಕರ ಹೆಸರುಗಳನ್ನು ನೋಡಿದರೇ ಸ್ಪಷ್ಟವಾಗುತ್ತದೆ. ಇಲ್ಲಿ ಜೈನರು, ಬಂಟರು ಮತ್ತು ಬಿಲ್ಲವರ ಕೋಣಗಳು ಸಾಕಷ್ಟು ಸಂಖ್ಯೆಯಲ್ಲಿ ಇರುವುದು ನಿಜವಾದರೂ ಬ್ರಾಹ್ಮಣರು, ಪರಿಶಿಷ್ಟ ಜಾತಿ ಮತ್ತು ವರ್ಗದವರು ಕೂಡಾ ಕೋಣ ಕಟ್ಟುತ್ತಿದ್ದಾರೆ. ಮುಸ್ಲಿಂ ಮತ್ತು ಕ್ರೈಸ್ತ ಜನಾಂಗದವರ ಕೋಣಗಳನ್ನೂ ಕಾಣಬಹುದು.

Buffalos of Narayana Malekudiya winning gold medal

ಈ ನಡುವೆ, ಕರಾವಳಿಯಲ್ಲಿ ಅತ್ಯಂತ ಸಣ್ಣ ಸಮುದಾಯಗಳಲ್ಲಿ ಒಂದಾದ ಮಲೆಕುಡಿಯರ ಸಮುದಾಯದಿಂದ ಮೊದಲ ಬಾರಿಗೆ ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯ ಅವರು ಕೋಣ ಕಟ್ಟಿದ್ದಾರೆ. ತಳ ಸಮುದಾಯವಾಗಿರುವ ಮಲೆಕುಡಿಯರ ಈ ಕೋಣಗಳು ಬೆಳ್ತಂಗಡಿ ಆಸುಪಾಸಿನ ಸ್ಪರ್ಧೆಗಳಲ್ಲಿ ಮಾತ್ರ ಭಾಗವಹಿಸುತ್ತಿದ್ದವು. ಮತ್ತು ದೊಡ್ಡ ಯಶಸ್ಸನ್ನೇನೂ ಕಂಡಿರಲಿಲ್ಲ. ಆದರೆ, ಈಗ ಬೆಂಗಳೂರು ಕಂಬಳದಲ್ಲಿ ಅವರು ಚಿನ್ನವನ್ನೇ ಗೆದ್ದಿವೆ.

ಮಲೆಕುಡಿಯರಿಗೆ ಬೆಂಬಲವಾಗಿ ನಿಂತದ್ದು ನ್ಯಾಯವಾದಿ ದಿನೇಶ್‌ ಹೆಗ್ಡೆ

ನಾರಾಯಣ ಮಲೆಕುಡಿಯರ ಈ ಕೋಣಗಳು ಬೆಂಗಳೂರಿನ ಕಂಬಳದಲ್ಲಿ ಪಾಲ್ಗೊಳ್ಳಲು ನೆರವಾದವರು ಮತ್ತು ಚಿನ್ನದ ಪದಕ ಪಡೆಯುವಲ್ಲಿ ಸ್ಫೂರ್ತಿ ತುಂಬಿದವರು ಮಂಗಳೂರಿನ ನ್ಯಾಯವಾದಿ ದಿನೇಶ್‌ ಹೆಗ್ಡೆ ಉಳೆಪಾಡಿ ಅವರು. ಕರಾವಳಿಯಲ್ಲಿ ತಳ ಸಮುದಾಯದ ನೋವುಗಳಿಗೆ ಸದಾ ಸ್ಪಂದಿಸುವ, ಅವರೂ ಸಬಲೀಕರಣಗೊಂಡು ಪ್ರಧಾನ ವಾಹಿನಿಗೆ ಬರಬೇಕೆಂದು ಪ್ರಯತ್ನ ಮಾಡುತ್ತಿರುವವರು ದಿನೇಶ್‌ ಹೆಗ್ಡೆ ಉಳೆಪಾಡಿ.

ದಿನೇಶ್‌ ಹೆಗ್ಡೆ ಉಳೆಪಾಡಿ ಅವರು ಇತ್ತೀಚೆಗೆ ಬಂಗಾಡಿಯ ಪಾರಂಬೇರಿಗೆ ಭೇಟಿ ನೀಡಿದ್ದರು. ಆಗ ನಾರಾಯಣ ಮಲೆಕುಡಿಯರು ಸಿಕ್ಕಿದಾಗ ಬೆಂಗಳೂರು ಕಂಬಳಕ್ಕೆ ಹೋಗುವುದಿಲ್ಲವೇ ಎಂದು ಪ್ರಶ್ನಿಸಿದ್ದರು. ಆಗ ನಾರಾಯಣ ಅವರು, ಅದಕ್ಕೆ ಬಹಳಷ್ಟು ಖರ್ಚು ವೆಚ್ಚ ತಗಲುತ್ತದೆ. ಹೊಂದಿಸುವುದು ಕಷ್ಟ ಎಂದು ಹೇಳಿದ್ದರು.

ಆಗ ದಿನೇಶ್‌ ಹೆಗ್ಡೆ ಉಳೆಪಾಡಿ ಅವರು ಬೆಂಗಳೂರಿಗೆ ಕರೆದುಕೊಂಡು ಹೋಗಲೇಬೇಕು. ಬೆಂಗಳೂರು ಕಂಬಳದಲ್ಲಿ ಮಲೆಕುಡಿಯರ ಕೋಣಗಳು ಪ್ರಾತಿನಿಧ್ಯ ಪಡೆಯಲೇಬೇಕು ಎಂದು ಗಂಟುಬಿದ್ದರು. ಮಾತ್ರವಲ್ಲ ಬೆಂಗಳೂರಿಗೆ ಕಳುಹಿಸುವ ಸಂಪೂರ್ಣ ವೆಚ್ಚವನ್ನು ತಾವೇ ಭರಿಸುವುದಾಗಿ ಹೇಳಿದರು. ಅದರೊಂದಿಗೆ ಕೋಣಗಳನ್ನು ಬೆಂಗಳೂರಿಗೆ ಕಳುಹಿಸುವ ಕನಸು ನನಸಾಯಿತು.

ದಿನೇಶ್‌ ಹೆಗ್ಡೆಯವರು ಸ್ವತಃ ತಾವೇ ಕೋಣಗಳ ಜತೆಗೆ ಬಂದು, ಅವು ಚಿನ್ನ ಗೆಲ್ಲುವವರೆಗೂ ಜತೆಗಿದ್ದರು. ಈ ಮೂಲಕ ಮಲೆಕುಡಿಯರ ಕೋಣಗಳು ರಾಜ್ಯ ಮಟ್ಟದಲ್ಲಿ ಸದ್ದು ಮಾಡುವಂತಾಗಿದೆ.

ಇದನ್ನೂ ಓದಿ: Bangalore Kambala : ಬೆಂಗಳೂರು ಕಂಬಳ ಸಂಪನ್ನ, ಅಂತಿಮ ಫಲಿತಾಂಶ ಇಲ್ಲಿದೆ

ಬಂಗಾಡಿಯಲ್ಲಿ ಸಂಭ್ರಮಾಚರಣೆ

ನಾರಾಯಣ ಮಲೆಕುಡಿಯ ಅವರ ಕೋಣಗಳ ಗೆಲುವಿಗಾಗಿ ಬಂಗಾಡಿಯಲ್ಲಿ ಮೆರವಣಿಗೆ ಮೂಲಕ ಸಂಭ್ರಮಾಚರಣೆ ನಡೆದಿದೆ. ಭಾನುವಾರ ಮಧ್ಯರಾತ್ರಿಯ ಬಳಿಕ ಹೊರಟ ಕೋಣಗಳು ಸೋಮವಾರ ಮಧ್ಯಾಹ್ನದ ಹೊತ್ತಿಗೆ ಊರು ತಲುಪಿದ್ದು, ಅಲ್ಲಿ ದೊಡ್ಡ ಮಟ್ಟದಲ್ಲಿ ಸ್ವಾಗತ ನೀಡಲಾಗಿದೆ. ಈ ಕೋಣಗಳ ಜತೆಗೆ ಬಂದ ತಂಡದಲ್ಲಿ ಮಲೆಕುಡಿಯರೇ ಹೆಚ್ಚಾಗಿದ್ದರು ಎನ್ನುವುದು ಇನ್ನೊಂದು ವಿಶೇಷ.

Continue Reading
Advertisement
PM Narendra Modi phone call to workers, who rescued from collapsed tunnel
ದೇಶ2 hours ago

ಸುರಂಗದಿಂದ ರಕ್ಷಿಸಲಾದ ಕಾರ್ಮಿಕರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ!

mantralaya mutt
ಕರ್ನಾಟಕ3 hours ago

ಮಂತ್ರಾಲಯ ಮಠಕ್ಕೆ ಭಕ್ತರೊಬ್ಬರಿಂದ ಹೆಲಿಕಾಪ್ಟರ್‌ ಕೊಡುಗೆ

Uttarakhand CM announces rs 1 lakh rupees to trapped labourers Who rescued after 17 days
ದೇಶ3 hours ago

ಬದುಕುಳಿದು ಬಂದ ಕಾರ್ಮಿಕರಿಗೆ 1 ಲಕ್ಷ ಪರಿಹಾರ ಎಂದ ಉತ್ತರಾಖಂಡ ಸಿಎಂ ಧಾಮಿ

Maxwell
ಕ್ರಿಕೆಟ್3 hours ago

Ind vs Aus : ಮ್ಯಾಕ್ಸ್​ವೆಲ್​ ಸ್ಫೋಟಕ ಶತಕ; 3ನೇ ಪಂದ್ಯದಲ್ಲಿ ಭಾರತಕ್ಕೆ ಸೋಲು

Siddaramaiah
ಕರ್ನಾಟಕ4 hours ago

ಕಾರ್ಮಿಕರಿಗೆ ಮರುಹುಟ್ಟು ನೀಡಿದ ರಕ್ಷಣಾ ಸಿಬ್ಬಂದಿಗೆ ಸಿದ್ದರಾಮಯ್ಯ ಧನ್ಯವಾದ

Uttarkashi Tunnel Rescue and Makeshift hospital
ದೇಶ4 hours ago

ಸುರಂಗದಿಂದ 41 ಕಾರ್ಮಿಕರ ರಕ್ಷಣೆ; ಮುಂದೇನಾಗುತ್ತದೆ ಎಂಬುದರ ಕಂಪ್ಲೀಟ್‌ ಮಾಹಿತಿ ಇಲ್ಲಿದೆ

Top 10 news
ಕರ್ನಾಟಕ4 hours ago

VISTARA TOP 10 NEWS: ಸುರಂಗದಲ್ಲಿ ಸಿಲುಕಿದ್ದ ಎಲ್ಲ ಕಾರ್ಮಿಕರ ರಕ್ಷಣೆ, ಮಕ್ಕಳ ಮಾರಾಟ ಬೃಹತ್​ ಜಾಲ ಪತ್ತೆ ಮತ್ತಿತರ ದಿನದ ಪ್ರಮುಖ ಸುದ್ದಿಗಳು

Uttarakhand Tunnel Collapse
EXPLAINER5 hours ago

150 ಮೀಟರ್‌ ಸುರಂಗ ಕುಸಿತ, 57 ಮೀಟರ್‌ ಕೊರೆತ! 41 ಕಾರ್ಮಿಕರನ್ನು ರಕ್ಷಿಸಿದ್ದು ಹೇಗೆ?

Uttarkashi Tunnel rescue success makes us emotional says PM Narendra Modi
ದೇಶ5 hours ago

ಕಾರ್ಮಿಕರ ರಕ್ಷಣೆಯ ಯಶಸ್ಸು ನಮ್ಮನ್ನೆಲ್ಲ ಭಾವುಕರನ್ನಾಗಿಸಿದೆ ಎಂದ ಪ್ರಧಾನಿ ಮೋದಿ

Ruturaj Gaikwad
ಕ್ರಿಕೆಟ್5 hours ago

Ruturaj Gaikwad : ಆಸ್ಟ್ರೇಲಿಯಾ ವಿರುದ್ಧ ಶತಕ ಬಾರಿಸಿ ವಿಶೇಷ ಸಾಧನೆ ಮಾಡಿದ ಋತುರಾಜ್​

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ21 hours ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ1 day ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ2 days ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ2 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ2 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

BY Vijayendra and HD Kumarswamy
ಕರ್ನಾಟಕ2 days ago

BJP JDS Alliance: ಎಚ್‌ಡಿಕೆ-ವಿಜಯೇಂದ್ರ ಭೇಟಿ; 28ಕ್ಕೆ 28 ಸ್ಥಾನ ಗೆಲ್ಲುವ ಪಣ!

ಟ್ರೆಂಡಿಂಗ್‌