Site icon Vistara News

Manohar Prasad: ಪತ್ರಕರ್ತ, ಕತೆಗಾರ ಮನೋಹರ ಪ್ರಸಾದ್ ಇನ್ನಿಲ್ಲ

manohar prasad

ಮಂಗಳೂರು: ಖ್ಯಾತ ಪತ್ರಕರ್ತ, ಬಹು ಬೇಡಿಕೆಯ ಕಾರ್ಯಕ್ರಮ ನಿರೂಪಕ, ಕತೆಗಾರ ಹಾಗೂ ಕವಿ ಮನೋಹರ ಪ್ರಸಾದ್ (Manohar Prasad) ಇಂದು ಮುಂಜಾನೆ ನಿಧನರಾಗಿದ್ದಾರೆ.

ಮೂಲತಃ ಕಾರ್ಕಳ ತಾಲೂಕಿನ ಕರುವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ ʼನವ ಭಾರತʼ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ʼಉದಯವಾಣಿ’ಗೆ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಆರಂಭಿಸಿ ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಮತ್ತು ಪ್ರಸ್ತುತ ಸಹಾಯಕ ಸಂಪಾದಕರ ಹುದ್ದೆಯವರೆಗೆ ಸತತ 36 ವರ್ಷಗಳ ಕಾಲ ಸೇವೆ ಸಲ್ಲಿಸಿ ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.

ಕರ್ನಾಟಕ ಕರಾವಳಿ ಇತಿಹಾಸದ ಕುರಿತು 608 ಸಂಶೋಧನ ಲೇಖನಗಳನ್ನು ಬರೆದಿದ್ದ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ, ಸಂದೇಶ ಪ್ರತಿಷ್ಠಾನದ ರಾಜ್ಯ ಪ್ರಶಸ್ತಿ, ಕೆನರಾ ಬ್ಯಾಂಕ್ ಅಮೃತೋತ್ಸವ ಪುರಸ್ಕಾರ ಮೊದಲಾದ ಹಲವು ಗೌರವಗಳು ದೊರೆತಿವೆ.

ಇದನ್ನೂ ಓದಿ: K Shivaram: ಮಧ್ಯಾಹ್ನ 3ರವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಕೆ ಶಿವರಾಂ ಅಂತಿಮ ದರ್ಶನ

Exit mobile version