Site icon Vistara News

Kadri Temple : ಕದ್ರಿ ದೇವಸ್ಥಾನಕ್ಕೆ ನುಗ್ಗಿ ಅಣ್ಣಪ್ಪ ಸ್ವಾಮಿಯ ಗುಡಿಗೆ ಕಾಲಿನಿಂದ ಒದ್ದು ಯುವಕನ ರಂಪಾಟ

kadri temple

ಮಂಗಳೂರು: ಪ್ರಸಿದ್ಧ ಪುಣ್ಯಕ್ಷೇತ್ರ ಕದ್ರಿ ಮಂಜುನಾಥನ (Kadri Temple) ಸನ್ನಿಧಿಯಲ್ಲಿ ಯುವಕನೊಬ್ಬ ರಂಪಾಟವನ್ನೇ ನಡೆಸಿದ್ದಾನೆ. ಮಂಗಳೂರಿನ ಕದ್ರಿ ಶ್ರೀಮಂಜುನಾಥೇಶ್ವರ ದೇವಸ್ಥಾನದ ಪ್ರಾಂಗಣಕ್ಕೆ ನೇರ ಬೈಕ್ ಚಲಾಯಿಸಿಕೊಂಡು ಪ್ರವೇಶಿಸಿದ್ದಾನೆ. ಬಳಿಕ ದೇವಸ್ಥಾನದ ಒಳಗೆ ಪ್ರವೇಶ ಮಾಡಿ ರಂಪಾಟ ಮಾಡಿದ್ದಲ್ಲದೇ ಅಣ್ಣಪ್ಪ ಸ್ವಾಮಿಯ ಗುಡಿಯ ಮುಂದೆ ಹೋಗಿ ಕಾಲಿನಿಂದ ಬಾಗಿಲು ಒದ್ದು ಅಪಚಾರ ಮಾಡಿದ್ದಾನೆ ಎಂಬ ಆರೋಪವಿದೆ.

ಇನ್ನೂ ಇದೆಲ್ಲ ಕಂಡು ಪ್ರಶ್ನೆ ಮಾಡಿದ ಅರ್ಚಕರ ಮೇಲೂ ಹಲ್ಲೆಗೆ ಯತ್ನಿಸಿದ್ದಾನೆ. ದೈವಸ್ಥಾನದ ಬಳಿ ಇದ್ದ ಕತ್ತಿಯನ್ನು ಕೈಗೆತ್ತಿಕೊಂಡು ಕೆಲಕಾಲ ಆತಂಕದ ವಾತಾವರಣವನ್ನು ಸೃಷ್ಟಿಸಿದ್ದ. ದೇವಸ್ಥಾನದ ಮೇಲೆ ಹತ್ತಿ ಹಾನಿ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದವರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂಬ ಮಾಹಿತಿ ಇದೆ.

ಸದ್ಯ ಘಟನೆ ಬಗ್ಗೆ ಕದ್ರಿ ಠಾಣೆಗೆ ದೇವಸ್ಥಾನದ ಮುಖ್ಯಾಧಿಕಾರಿ ದೂರು ನೀಡಿದ್ದಾರೆ. ಯುವಕನ ವಶಕ್ಕೆ ಪಡೆದು ಪೊಲೀಸರು ವಿಚಾರಣೆಯನ್ನು ನಡೆಸುತ್ತಿದ್ದಾರೆ. ದಾಂಧಲೆ ನಡೆಸಿದ ಯುವಕ ಹೆಸರು ಪತ್ತೆಯಾಗಿಲ್ಲ. ಆದರೆ ಆತ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.

ಸವಾರನ ಮೇಲೆ ಎರಗಿದ ಆಟೋ ಚಾಲಕರು

ಬೆಂಗಳೂರಿನಲ್ಲಿ ಆಟೊ ಚಾಲಕರು ಬೈಕ್ ಸವಾರನ‌ ಮೇಲೆ ಹಲ್ಲೆ ನಡೆಸಿದ್ದಾರೆ. ಕಳೆದ ಜುಲೈ 7ರ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕೋರಮಂಗಲ ಜ್ಯೋತಿ ನಿವಾಸ್ ಕಾಲೇಜು ರಸ್ತೆಯಲ್ಲಿ ಕೃತ್ಯ ನಡೆದಿದೆ. ಬೈಕ್ ಸವಾರನ ಮೇಲೆ ದಾಳಿ ಮಾಡಿದ ಆಟೋ ಚಾಲಕರು ಮನಬಂದಂತೆ ಥಳಿಸಿದ್ದಾರೆ. ಘಟನೆಗೆ ನಿಖರ ಕಾರಣ ಇನ್ನು ತಿಳಿದಿಲ್ಲ. ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: Chikkamagaluru News : ಚಿಕ್ಕಮಗಳೂರು ಚಳಿಗೆ ನಶೆ ಏರಿಸಿಕೊಳ್ಳುತ್ತಿದ್ದವರ ಕಿಕ್ಕಿಳಿಸಿದ ಬಣಕಲ್ ಪಿಎಸ್ಐ ರೇಣುಕಾ

ಹಳಿ ಮೇಲೆ ಬಿದ್ದ ಮಹಿಳೆ; ರೈಲೇ ರಿವರ್ಸ್‌! ಆದರೆ ಎರಡೂ ಕಾಲು ಕಟ್‌

ನವದೆಹಲಿ: ನವಿ ಮುಂಬೈನಲ್ಲಿ ಸೋಮವಾರ ಆಯತಪ್ಪಿ ರೈಲ್ವೆ ಹಳಿಯ ಮೇಲೆ ಬಿದ್ದ 50 ವರ್ಷದ ಮಹಿಳೆಗೆ ಚಲಿಸುತ್ತಿದ್ದ ರೈಲು ಡಿಕ್ಕಿ ಹೊಡೆದ ಪರಿಣಾಮ ಆಕೆ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದಾಳೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ವೈರಲ್ (Train Accident) ಆಗಿದೆ. ಈ ವಿಡಿಯೊ ನೋಡಿ ಅನೇಕರು ದಂಗಾಗಿದ್ದಾರೆ.

ಥಾಣೆಗೆ ಹೋಗಲು ರೈಲಿಗಾಗಿ ಕಾಯುತ್ತಿದ್ದ ಮಹಿಳೆ ಬೆಳಗ್ಗೆ 10 ಗಂಟೆ ಸುಮಾರಿಗೆ ಬೇಲಾಪುರ ನಿಲ್ದಾಣದಲ್ಲಿ ಆಯತಪ್ಪಿ ರೈಲು ಹಳಿಗಳ ಮೇಲೆ ಬಿದ್ದಿದ್ದಾಳೆ. ಆಗ ಚಲಿಸುತ್ತಿದ್ದ ರೈಲು ಆಕೆಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಆಕೆಯ ಕಾಲುಗಳಿಗೆ ತೀವ್ರ ಗಾಯಗಳಾಗಿವೆ. ಆ ಮಹಿಳೆಯ ಜೀವ ಉಳಿಸಲು ಬೇಲಾಪುರ ನಿಲ್ದಾಣದ ಪ್ಲಾಟ್‌ಫಾರ್ಮ್‌ ಸಂಖ್ಯೆ 3 ರಲ್ಲಿ ಪನ್ವೇಲ್-ಥಾಣೆ ರೈಲನ್ನು ಹಿಂದಕ್ಕೆ ಚಲಿಸುವಂತೆ ಹೇಳಿ ನಂತರ ಮಹಿಳೆಯನ್ನು ಹಳಿಯಿಂದ ಮೇಲಕ್ಕೆತ್ತಿ ಹತ್ತಿರದ ಎಂಜಿಎಂ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಕೇಂದ್ರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸ್ವಪ್ನಿಲ್ ನೀಲಾ ಅವರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೊವನ್ನು ಸಹ ಪ್ರಯಾಣಿಕರೊಬ್ಬರು ಸೆರೆಹಿಡಿದಿದ್ದು,ಇದರಲ್ಲಿ ರೈಲು ನಿಧಾನವಾಗಿ ಹಿಂದಕ್ಕೆ ಚಲಿಸುತ್ತಿರುವಾಗ ಮಹಿಳೆ ಹಳಿಯ ಮೇಲೆ ಮಲಗಿರುವುದನ್ನು ತೋರಿಸುತ್ತದೆ. ಆಕೆಯ ಕಾಲುಗಳು ರಕ್ತಸಿಕ್ತವಾಗಿರುವುದು ಕಾಣಿಸುತ್ತದೆ. ಪೊಲೀಸರು ಜನರನ್ನು ನಿಯಂತ್ರಿಸುತ್ತಾ ಮಹಿಳೆಯನ್ನ ರಕ್ಷಿಸಲು ತೆರಳುತ್ತಿರುವುದು ಕಂಡುಬಂದಿದೆ. ಮಹಿಳೆಯನ್ನು ರೈಲ್ವೆ ಪೊಲೀಸ್ ಅಧಿಕಾರಿಗಳು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು ಆಕೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಮುಂಬೈ ಮತ್ತು ಅದರ ಉಪನಗರ ಪ್ರದೇಶಗಳಲ್ಲಿ ಇಂದು ಬೆಳಿಗ್ಗೆ ನಿರಂತರ ಮಳೆಯಾಗಿದ್ದು, ರೈಲು ಸಂಚಾರದ ಮೇಲೂ ಇದು ಪರಿಣಾಮ ಬೀರಿದೆ. ಹಳಿಗಳು ನೀರಿನಲ್ಲಿ ಮುಳುಗಿದ್ದರಿಂದ ಸ್ಥಳೀಯ ರೈಲುಗಳನ್ನು ಸ್ವಲ್ಪ ಸಮಯದವರೆಗೆ ನಿಲ್ಲಿಸಲಾಗಿತ್ತು ಎನ್ನಲಾಗಿದೆ. ಹಳಿಗಳಲ್ಲಿ ನೀರು ನಿಂತು ಪ್ರವಾಹ ಉಂಟಾದ ಹಿನ್ನೆಲೆಯಲ್ಲಿ ವಡಾಲಾ ಮತ್ತು ಮನ್ಖುರ್ದ್ ನಿಲ್ದಾಣಗಳ ನಡುವೆ ಹಾರ್ಬರ್ ಲೈನ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎನ್ನಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version