Mangalore blast | ಮಂಗಳೂರು ಸ್ಫೋಟ ಗುಪ್ತಚರ ವೈಫಲ್ಯದ ಫಲ: ಸಿದ್ದರಾಮಯ್ಯ ಆರೋಪ - Vistara News

ದಕ್ಷಿಣ ಕನ್ನಡ

Mangalore blast | ಮಂಗಳೂರು ಸ್ಫೋಟ ಗುಪ್ತಚರ ವೈಫಲ್ಯದ ಫಲ: ಸಿದ್ದರಾಮಯ್ಯ ಆರೋಪ

ಮಂಗಳೂರು ನಗರದಲ್ಲಿ ಆಟೊದಲ್ಲಿ ಸಂಭವಿಸಿರುವ ಬಾಂಬ್‌ ಸ್ಫೋಟ ಕೃತ್ಯವನ್ನು ( Mangalore blast ) ಖಂಡಿಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್‌ ಮೂಲಕ ಹೇಳಿದ್ದಾರೆ.

VISTARANEWS.COM


on

Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಭಯೋತ್ಪಾದಕ ಕೃತ್ಯ ಎಂದು ದೃಢೀಕರಿಸಿರುವ ಮಂಗಳೂರು ನಗರದ ಬಾಂಬ್ ಸ್ಫೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ‌ (Mangalore blast) ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕಳವಳಕಾರಿಯಾದ ಈ ಘಟನೆಯ ಬಗ್ಗೆ ಪೊಲೀಸರು ತ್ವರಿತಗತಿಯಲ್ಲಿ ತನಿಖೆ ನಡೆಸಿ, ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು. ಮಂಗಳೂರು ಬಾಂಬ್ ಸ್ಫೋಟ ಮತ್ತೊಮ್ಮೆ ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ.

ಈ ಘಟನೆಯ ಬಗ್ಗೆ ಊಹಾಪೋಹಗಳ ಸುದ್ದಿಗಳನ್ನು ನಂಬಿ ಉದ್ರಿಕ್ತರಾಗದೆ ಜನತೆ ಸಂಯಮ ಮತ್ತು ಎಚ್ಚರದಿಂದ ಇರಬೇಕೆಂದು ರಾಜ್ಯದ ಜನರಲ್ಲಿ ಕೇಳಿಕೊಳ್ಳುತ್ತಿದ್ದೇನೆ ಎಂದು ಮನವಿ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ

Bomb Threat: ಮಂಗಳೂರು ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ, ಪ್ರಕರಣ ತಡವಾಗಿ ಬೆಳಕಿಗೆ

Bomb Threat: ಉಗ್ರರ ಹೆಸರಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕಳಿಸಲಾಗಿದೆ. “ಏರ್‌ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಟ್ಟಿದ್ದೇವೆ. ಇನ್ನು ಕೆಲವೇ ಗಂಟೆಗಳಲ್ಲಿ ದೊಡ್ಡ ಮಟ್ಟದ ರಕ್ತಪಾತ ಆಗಲಿದೆ” ಎಂದು ಬೆದರಿಕೆ ಒಡ್ಡಲಾಗಿತ್ತು. “ಟೆರರೈಸರ್ಸ್ 111” ಸಂಘಟನೆ ಈ ಕೃತ್ಯದ ಹಿಂದೆ ಇದೆ ಎಂದು ಬೆದರಿಕೆ ಇಮೇಲ್ ತಿಳಿಸಿತ್ತು.

VISTARANEWS.COM


on

mangaluru airport bomb threat
Koo

ಮಂಗಳೂರು: ಮಂಗಳೂರು ಏರ್‌ಪೋರ್ಟ್ (Mangaluru Airport) ಕಚೇರಿಗೆ ಬಾಂಬ್ ಬೆದರಿಕೆ (Bomb Threat) ಬಂದಿದೆ. ಏರ್‌ಪೋರ್ಟ್‌ ಆವರಣದಲ್ಲಿ ಹಾಗೂ ಮೂರು ವಿಮಾನಗಳಲ್ಲಿಯೂ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಇಮೇಲ್‌ (threat Email) ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅನುಮಾನ ಬಂದ ಕಡೆಗಳಲ್ಲಿ ತಪಾಸಣೆ ಕೂಡ ನಡೆಸಲಾಗಿದೆ.

ಉಗ್ರರ ಹೆಸರಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕಳಿಸಲಾಗಿದೆ. “ಏರ್‌ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಟ್ಟಿದ್ದೇವೆ. ಇನ್ನು ಕೆಲವೇ ಗಂಟೆಗಳಲ್ಲಿ ದೊಡ್ಡ ಮಟ್ಟದ ರಕ್ತಪಾತ ಆಗಲಿದೆ” ಎಂದು ಬೆದರಿಕೆ ಒಡ್ಡಲಾಗಿತ್ತು. “ಟೆರರೈಸರ್ಸ್ 111” ಸಂಘಟನೆ ಈ ಕೃತ್ಯದ ಹಿಂದೆ ಇದೆ ಎಂದು ಬೆದರಿಕೆ ಇಮೇಲ್ ತಿಳಿಸಿತ್ತು.

ಎಪ್ರಿಲ್ 29ರಂದೇ ಬಾಂಬ್ ಇಟ್ಟಿರುವ ಬಗ್ಗೆ ಬೆದರಿಕೆ ಇಮೇಲ್ ಬಂದಿದ್ದು, ಅಂದೇ ತಪಾಸಣೆ ನಡೆದು ಇದೊಂದು ಹುಸಿ ಬೆದರಿಕೆ ಎಂಬುದು ರುಜುವಾತಾಗಿದೆ. ಇಮೇಲ್ ಸಂದೇಶದ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಂಬ್ ಬೆದರಿಕೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಬಾಂಬ್ ಬೆದರಿಕೆ ವಿಷಯವನ್ನು ಗೌಪ್ಯವಾಗಿಟ್ಟು ಪೊಲೀಸರು ಭದ್ರತೆ ಹೆಚ್ಚಿಸಿದ್ದರು.

ಎರಡು ದಿನಗಳ ಹಿಂದೆ ದಿಲ್ಲಿಯ ಶಾಲೆಗಳಿಗೆ ಇದೇ ರೀತಿಯ ಬಾಂಬ್‌ ಸ್ಫೋಟದ ಇಮೇಲ್‌ ಬೆದರಿಕೆ ಬಂದಿತ್ತು. ನೂರಾರು ಶಾಲೆಗಳಿಗೆ ಈ ಇಮೇಲ್‌ ಬಂದಿದ್ದು, ಇದರ ಮೂಲವನ್ನು ಪೊಲೀಸರು ಟ್ರೇಸ್‌ ಮಾಡಿದ್ದಾರೆ. ಬೆಂಗಳೂರಿನಲ್ಲಿಯೂ ಹಲವು ಶಾಲೆಗಳಿಗೆ ಇದೇ ರೀತಿಯ ಬೆದರಿಕೆ ಮೇಲ್‌ ಬಂದಿದ್ದುದನ್ನು ನೆನಪಿಸಿಕೊಳ್ಳಬಹುದು. ಇದುವರೆಗೂ ಇಂಥ ಬೆದರಿಕೆ ಮೇಲ್‌ಗಳು ನಿಜವಾದ ಉದಾಹರಣೆ ಇಲ್ಲ.

ಆದರೆ, ಭದ್ರತಾ ಪಡೆಗಳು ರಿಸ್ಕ್‌ ತೆಗೆದುಕೊಳ್ಳಲು ಇಚ್ಛಿಸದೆ ತೀವ್ರ ತಪಾಸಣೆ ನಡೆಸುತ್ತವೆ ಹಾಗೂ ಸೈಬರ್‌ ಪೊಲೀಸರು ಇಂಥ ಇಮೇಲ್‌ಗಳ ಮೂಲದ ಬೆನ್ನು ಬೀಳುತ್ತಾರೆ. ಆದರೆ ಹೆಚ್ಚಾಗಿ ಇಂಥ ಇಮೇಲ್‌ಗಳ ಮೂಲ ಪತ್ತೆಯಾಗದಂತೆ ವಿಪಿಎನ್‌ ಮೂಲಕ ಕಾರ್ಯಾಚರಿಸಿ, ಯಾವುದೋ ವಿದೇಶದ ಸರ್ವರ್‌ನಿಂದ ಬಂದದ್ದು ಎಂದು ಕಾಣಿಸುವಂತೆ ಮಾಡಲಾಗುತ್ತಿದೆ.

ಇದನ್ನೂ ಓದಿ: Bomb Threat: ದೆಹಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮಾಡಿದವ 16 ವರ್ಷದ ಪೋರ?

Continue Reading

ಮಳೆ

Karnataka Weather: ಯೆಲ್ಲೋ ಅಲರ್ಟ್‌; ಬೆಂಗಳೂರು ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ಬೆಂಗಳೂರು (Bengaluru Rains) ಸೇರಿದಂತೆ ಹಲವೆಡೆ ಗುಡುಗು ಸಿಡಿಲು ಸಹಿತ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ತಿಳಿಸಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದ್ದು, ಹೀಟ್‌ ವೇವ್‌ ಅಲರ್ಟ್‌ ನೀಡಲಾಗಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗಬಹುದು. ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರಿನ ಅಲ್ಲಲ್ಲಿ ಮಳೆಯಾಗಲಿದೆ.

ಗುಡುಗು ಸಹಿತ ಮಳೆಗೆ ಯೆಲ್ಲೋ ಅಲರ್ಟ್

ರಾಮನಗರ, ಮೈಸೂರು, ಮಂಡ್ಯ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯು ಅಬ್ಬರಿಸಲಿದ್ದರೆ, ಇತ್ತ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ಪ್ರಮುಖವಾಗಿ ತುಮಕೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ರಾಯಚೂರು ಸೇರಿ ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: Prajwal Revanna Case‌: ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆ ಪ್ರಜ್ವಲ್‌ರಿಂದ ರೇಪ್‌? ಎಫ್‌ಐಆರ್‌ನಲ್ಲಿದೆ ಇಂಚಿಂಚು ಡಿಟೇಲ್ಸ್!

ಉರಿ ಬಿಸಿಲಿನಲ್ಲಿ ಗಮನ ಸೆಳೆವ ನಟ ಶೈನ್‌ ಶೆಟ್ಟಿಯ ಕೂಲ್‌ ಸ್ಮೈಲ್‌ & ಸ್ಟೈಲ್‌!

ನಟ ಹಾಗೂ ಬಿಗ್‌ಬಾಸ್‌ ಕಂಟೆಸ್ಟಂಟ್‌ ಶೈನ್‌ ಶೆಟ್ಟಿ ಈ ಸಮ್ಮರ್‌ನಲ್ಲಿ (Summer Fashion) ಸಖತ್‌ ಕೂಲ್‌ ಆಗಿ ಕಾಣಿಸಿಕೊಂಡಿದ್ದಾರೆ.ಹೌದು, ಶೈನ್‌ ಶೆಟ್ಟಿಯವರ ಈ ಸೀಸನ್‌ನ ಸ್ಟೈಲ್‌ ಸ್ಟೇಟ್‌ಮೆಂಟ್ಸ್‌ ಯಾವ ಮಟ್ಟಿಗೆ ಪುರುಷರಿಗೆ ಇಷ್ಟವಾಗಿದೆ ಎಂದರೇ, ಇವರ ಫ್ಯಾನ್‌ ಫಾಲೋವಿಂಗ್‌ ಹುಡುಗರು ಮಾತ್ರವಲ್ಲ, ಕಾರ್ಪೋರೇಟ್‌ ಕ್ಷೇತ್ರದ ಹುಡುಗರು ಕೂಡ ಇವರ ಫ್ಯಾಷನ್‌ ಸ್ಟೇಟ್‌ಮೆಂಟ್‌ಗೆ ಮಾರು ಹೋಗಿದ್ದಾರೆ.

Shine Shetty Summer Fashion

ಶೈನ್‌ ಶೆಟ್ಟಿ ನ್ಯಾಚುರಲ್‌ ಲುಕ್‌

“ಶೈನ್‌ ಶೆಟ್ಟಿ ಮೊದಲಿನಿಂದಲೂ ನ್ಯಾಚುರಲ್‌ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇವರು ಮೂಲತಃ ಮಂಗಳೂರಿನವರಾಗಿರುವುದರಿಂದಲೋ ಏನೋ ಬಿಸಿಲಲ್ಲೂ ಆರಾಮಾಗಿ ಕಾಣಿಸಿಕೊಳ್ಳುತ್ತಾರೆ. ಅಲ್ಲದೇ, ತಮ್ಮ ಸಿಂಪಲ್‌ ಸ್ಟೈಲ್‌ ಸ್ಟೇಟ್‌ಮೆಂಟ್‌ನಿಂದಲೇ ಎಲ್ಲರನ್ನು ಸೆಳೆಯುತ್ತಾರೆ. ಹುಡುಗಿಯರು ಮಾತ್ರವಲ್ಲ, ಹುಡುಗರು ಕೂಡ ಇವರ ಲುಕ್‌ಗೆ ಫಿದಾ ಆಗುತ್ತಾರಂತೆ. ತೀರಾ ಫ್ಯಾಷನ್‌ ಕಾನ್ಶಿಯಸ್‌ ಕೂಡ ಅಲ್ಲದ ಇವರ ಪ್ರತಿಯೊಂದು ಫ್ಯಾಷನ್‌ ಸ್ಟೇಟ್‌ಮೆಂಟ್‌ಗಳು ಕೂಡ ಇವರನ್ನು ಸದಾ ನ್ಯಾಚುರಲ್‌ ಲುಕ್‌ನಲ್ಲಿ ಬಿಂಬಿಸುತ್ತವಂತೆ. ಇನ್ನು, ಇವರ ತಿಳಿ ವರ್ಣದ ಸ್ಕಿನ್‌ ಟೋನ್‌ನಿಂದಾಗಿ ಅವರು ಧರಿಸುವ ಎಲ್ಲಾ ಬಗೆಯ ಔಟ್‌ಫಿಟ್ಸ್‌ ಕೂಡ ಇವರಿಗೆ ಮ್ಯಾಚ್‌ ಆಗುತ್ತವಂತೆ. ಎಲ್ಲದಕ್ಕಿಂತ ಹೆಚ್ಚಾಗಿ ಇವರ ಯೂನಿಕ್‌ ಫ್ಯಾಷನ್‌ನಲ್ಲಿ ಸೇರಿರುವ ಸಿಂಪಲ್‌ ಸ್ಮೈಲ್‌ ಇಡೀ ಲುಕ್‌ಗೆ ಸಾಥ್‌ ನೀಡುವುದನ್ನು ಗಮನಿಸಬಹುದು” ಎನ್ನುತ್ತಾರೆ ಫ್ಯಾಷನ್‌ ವಿಮರ್ಶಕರಾದ ಅಮಿತ್‌ ಪಾಂಡ್ಯಾ ಅವರ ಪ್ರಕಾರ, ಕೆಲವು ನಟರು ತಮ್ಮ ನ್ಯಾಚುರಲ್‌ ಲುಕ್‌ನಿಂದಾಗಿಯೇ ಆಕರ್ಷಕವಾಗಿ ಕಾಣಿಸುತ್ತಾರೆ. ಇದು ಅವರ ಪ್ಲಸ್‌ ಪಾಯಿಂಟ್‌ ಎನ್ನುತ್ತಾರೆ.

Shine Shetty Summer Fashion

ಶೈನ್‌ ಶೆಟ್ಟಿ ಸಮ್ಮರ್‌ ಲುಕ್‌ನಲ್ಲಿ ಏನಿದೆ?

ಮನಸ್ಸಿಗೆ ಮುದ ನೀಡುವಂತಹ ಶೇಡ್‌ನ ಔಟ್‌ಫಿಟ್‌! ವೈಟ್‌ ಪ್ಯಾಂಟ್‌ ಕಾಟನ್‌ ಪ್ರಿಂಟೆಡ್‌ ಶರ್ಟ್.‌ ಜೊತೆಗೆ ಅದಕ್ಕೆ ಹೊಂದುವ ಹೇರ್‌ಸ್ಟೈಲ್‌, ಸಿಂಪಲ್‌ ಚಪ್ಪಲಿ ಎಲ್ಲವೂ ಶೈನ್‌ ಸಮ್ಮರ್‌ ಲುಕ್‌ನಲ್ಲಿ ಸೇರಿದೆ. ಸನ್‌ ಗ್ಲಾಸ್‌ ಇವರನ್ನು ಮತ್ತಷ್ಟು ಹ್ಯಾಂಡ್‌ಸಮ್‌ ಆಗಿ ಕಾಣುವಂತೆ ಬಿಂಬಿಸಿದೆ. ಇವರ ಒಟ್ಟಾರೆ ಲುಕ್ಗೆ ಫ್ಯಾಷನ್‌ ಸ್ಟೈಲಿಸ್ಟ್‌ಗಳಾದ ತೇಜಸ್ವಿನಿ ಹಾಗೂ ಖುಷಿಯವರ ಸ್ಟೈಲಿಂಗ್‌ ಸಪೋರ್ಟ್‌ ಇದೆ.

Shine Shetty Summer Fashion

ಶೈನ್‌ ಶೆಟ್ಟಿ ಫ್ಯಾಷನ್‌ ಮಂತ್ರ

ಇನ್ನು, ಕಳೆದ ಬಾರಿ ವಿಸ್ತಾರ ನ್ಯೂಸ್‌ನೊಂದಿಗೆ ತಮ್ಮ ಫ್ಯಾಷನ್‌ ಹಾಗೂ ಸ್ಟೈಲ್‌ಸ್ಟೇಟ್‌ಮೆಂಟ್‌ ಬಗ್ಗೆ ಮಾತನಾಡಿದ್ದ ಶೈನ್‌ ಶೆಟ್ಟಿ, ನಾನಂತೂ ಇದುವೆರಗೂ ಇಂತಹದ್ದೇ ಫ್ಯಾಷನ್‌ ಹಾಗೂ ಸ್ಟೈಲ್‌ ಫಾಲೋಮಾಡಬೇಕೆಂಬ ರೂಲ್ಸ್‌ ಹಾಕಿಕೊಂಡಿಲ್ಲ! ಯಾವುದಾದರೂ ಸರಿಯೇ ನೋಡುಗರಿಗೆ ಪ್ಲೆಸೆಂಟ್‌ ಆಗಿ ಕಾಣಿಸಬೇಕು. ಧರಿಸಿದ ಮನಕ್ಕೂ ಮುದ ನೀಡಬೇಕು. ಸೀಸನ್‌ಗೆ ತಕ್ಕಂತೆ ಉಡುಪುಗಳನ್ನು ಆಯ್ಕೆ ಮಾಡಿ ಧರಿಸಬೇಕು. ಇನ್ನು ಕಲರ್‌ಗಳ ವಿಷಯಕ್ಕೆ ಬಂದಲ್ಲಿ, ನಮ್ಮ ಮುಖಕ್ಕೆ ಹಾಗೂ ಸಿನ್‌ ಟೋನ್‌ಗೆ ಹೊಂದುವಂತಹ ಬಣ್ಣದ ಉಡುಗೆಗಳನ್ನು ಸೆಲೆಕ್ಟ್‌ ಮಾಡುವುದು ಉತ್ತಮ ಎಂದಿದ್ದರು. ಇನ್ನು, ತಾರೆಯರ ಫ್ಯಾಷನ್‌ ಫಾಲೋ ಮಾಡಲು ಬಯಸುವ ಹುಡುಗರು, ಮೊದಲಿಗೆ ತಾವು ಕಾಪಿ ಮಾಡುತ್ತಿರುವ ಸ್ಟೈಲಿಂಗ್‌ ಮ್ಯಾಚ್‌ ಆಗುತ್ತವೆಯೇ! ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು. ಅದನ್ನು ಬಿಟ್ಟು, ಸುಖಸುಮ್ಮನೇ, ಕಂಡ ಕಂಡ ಫ್ಯಾಷನ್‌ ಫಾಲೋ ಮಾಡುವುದಲ್ಲ. ಇಮಿಟೇಟ್‌ ಮಾಡುವಾಗಲು ಅದು ತಮಗೆ ಹೊಂದುತ್ತದೆಯೇ ಎಂಬುದನ್ನು ಅರಿಯಬೇಕು ಎಂದು ಹುಡುಗರಿಗೆ ಸಲಹೆ ನೀಡಿದ್ದರು.

ಹುಡುಗರಿಗೆ ಫ್ಯಾಷನ್‌ ವಿಮರ್ಶಕರ ಟಿಪ್ಸ್‌

ಶೈನ್‌ ಶೆಟ್ಟಿಯಂತೆ ಸಮ್ಮರ್‌ ಫ್ಯಾಷನ್‌ ಫಾಲೋ ಮಾಡುವವರು ಕೆಲವು ವಿಷಯಗಳನ್ನು ಮನದಲ್ಲಿಟ್ಟುಕೊಳ್ಳಬೇಕು.

  • 1. ಲೈಟ್‌ ಶೇಡ್‌ ಆಯ್ಕೆ ಮಾಡಬೇಕು.
  • 2. ಕಾಟನ್‌ ಶರ್ಟ್‌ ಆಯ್ಕೆ ಉತ್ತಮ.
  • 3. ಗಾಳಿಯಾಡುವಂತಹ ಪಾದರಕ್ಷೆಗಳು ಕೂಲ್‌ ಆಗಿರಿಸುತ್ತವೆ.
  • 4. ಸನ್‌ಗ್ಲಾಸ್‌ ಬಿಸಿಲಿನಿಂದ ಕಣ್ಣುಗಳನ್ನು ಸಂರಕ್ಷಿಸುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ನವ ವಿವಾಹಿತ ಸಾವು, ಕಾರ್ಮಿಕನ ಸ್ಥಿತಿ ಗಂಭೀರ

Rain News: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಸಿಡಿಲು ಬಡಿದು ನವವಿವಾಹಿತ ಮೃತಪಟ್ಟಿದ್ದು, ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ಬೆಟ್ಟಗೇರಿಯಲ್ಲಿ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ.

VISTARANEWS.COM


on

Rain News
ಕಡಬ ತಾಲೂಕಿನ ಸುಬ್ರಹ್ಮಣ್ಯದ ಗ್ರಾಮದ ಪರ್ವತಮುಖಿಯಲ್ಲಿ ಸಿಡಿಲು ಬಡಿದು‌ ಮೃತಪಟ್ಟ ಸೋಮಸುಂದರ್.
Koo

ಮಂಗಳೂರು/ ಕೊಡಗು: ಪ್ರತ್ಯೇಕ ಮಳೆ (Rain News) ಅವಘಡಗಳಲ್ಲಿ ಸಿಡಿಲು ಬಡಿದು (lightning strike) ನವ ವಿವಾಹಿತ ಮೃತಪಟ್ಟು, ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನವವಿವಾಹಿತ ಮೃತಪಟ್ಟಿದ್ದರೆ, ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ಬೆಟ್ಟಗೇರಿಯಲ್ಲಿ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಸುಬ್ರಹ್ಮಣ್ಯದಲ್ಲಿ ನವ ವಿವಾಹಿತ ಮೃತ್ಯು

ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸುಬ್ರಹ್ಮಣ್ಯದ ಗ್ರಾಮದ ಪರ್ವತಮುಖಿಯಲ್ಲಿ ಸಿಡಿಲು ಬಡಿದು ಸೋಮಸುಂದರ್ (34) ಸಾವು ಮೃತಪಟ್ಟಿದ್ದಾನೆ. ಈತ ಹತ್ತು ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ. ಸಂಜೆ ವೇಳೆ ಸುಬ್ರಮಣ್ಯ ಭಾಗದಲ್ಲಿ ಗುಡುಗು ಸಿಡಿಲು ಸಹಿತ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮನೆ ಅಂಗಳದಲ್ಲಿ ಅಡಿಕೆಯನ್ನು ಯುವಕ ರಾಶಿ ಮಾಡುತ್ತಿದ್ದ. ಈ ವೇಳೆ ಸೋಮ ಸುಂದರ್‌ಗೆ ಸಿಡಿಲು ಬಡಿದಿದ್ದರಿಂದ ಮೃತಪಟ್ಟಿದ್ದಾನೆ.

ಮಡಿಕೇರಿಯಲ್ಲಿ ಕಾರ್ಮಿಕನ ಸ್ಥಿತಿ ಗಂಭೀರ

ಕೊಡಗು: ಸಿಡಿಲು ಬಡಿದು ಅಸ್ಸಾಂ ಮೂಲದ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಮಡಿಕೇರಿ ಸಮೀಪದ ಬೆಟ್ಟಗೇರಿಯಲ್ಲಿ ನಡೆದಿದೆ. ಕಾರ್ಮಿಕ ಪ್ರಮಾತ್ ಗರ್ಮಾನಿ (37) ಗಾಯಾಳು. ಮನೆಯ ಹೊರಭಾಗದಲ್ಲಿ ನಿಂತಿದ್ದಾಗ ಕಾರ್ಮಿಕನಿಗೆ ಸಿಡಿಲು ಬಡಿದಿದೆ. ಕಾರ್ಮಿಕನಿಗೆ ಮಡಿಕೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಬ್ಬಬ್ಬಾ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Bengaluru Rains

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ (Karnataka Rains) ಬಿರುಗಾಳಿ ಸಹಿತ ಮಳೆ ಬಂದು ಹೋಯಿತು. ಆದರೆ ರಾಜಧಾನಿ ಬೆಂಗಳೂರಲ್ಲಿ ಒಂದು ಸಣ್ಣ ಹನಿಯು (Karnataka weather Forecast) ಬೀಳಲಿಲ್ಲ. ಬೆಂಗಳೂರು ಕರಗ ಸಮಯದಲ್ಲಿ ಸಣ್ಣ ಪ್ರಮಾಣದಲ್ಲಿ ಆದರೂ ಮಳೆ ಬಂದೇ ಬರುತ್ತೆ ಎಂಬ ನಂಬಿಕೆ ಇದೆ. ಆದರೆ ಆಗಲೂ ಮಳೆಯು ಕಾಣಲಿಲ್ಲ. ಇದೀಗ ಬಿಸಿಲ ಧಗೆಯಿಂದ ಸುಸ್ತಾಗಿದ್ದ ಮಂದಿಗೆ ಮಳೆಯು ತನ್ನ ಭರ್ಜರಿ ಪ್ರದರ್ಶನ (Bengaluru Rains) ತೋರಿದೆ.

ಲೇಟ್‌ ಆದರೂ ಲೇಟೆಸ್ಟ್‌ ಆಗಿ ಮಳೆರಾಯ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದಾನೆ. ಇದರಿಂದಾಗಿ ಸೋಶಿಯಲ್‌ ಮೀಡಿಯಾದಲ್ಲಿ ನೆಟ್ಟಿಗರು ಅಬ್ಬಬ್ಬಾ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್ ಎಂದು ಬೆಂಗಳೂರಿಗರಿಗೆ ವಿಷ್‌ ಮಾಡಿದ್ದಾರೆ. ಜತೆಗೆ ಟ್ವಿಟರ್‌, ಇನ್ಸ್ಟಾಗ್ರಾಂನಲ್ಲಿ Bengaluru rains ಹ್ಯಾಶ್‌ ಟ್ಯಾಗ್‌ ಹಾಕಿ ಸಂತಸವನ್ನು ಹಂಚಿಕೊಳ್ಳುತ್ತಿದ್ದಾರೆ. ಅಂತೂ-ಇಂತೂ ಬೆಂಗಳೂರಲ್ಲಿ ಮಳೆ ಬಂತಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದಾರೆ.

ಶಿವಾಜಿನಗರ, ಮಲ್ಲೇಶ್ವರಂ, ವಿಧಾನಸೌಧ, ರಾಜಾಜಿನಗರ, ರೇಸ್ ಕೋರ್ಸ್, ಮೆಜೆಸ್ಟಿಕ್, ಮಹಾರಾಣಿ ಕಾಲೇಜು, ಸಿಐಡಿ ಆಫೀಸ್, ಪ್ಯಾಲೇಸ್ ರಸ್ತೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಮಧ್ಯಾಹ್ನ ಮೂರು ಗಂಟೆ ಸಮಯವು ರಾತ್ರಿಯಂತೆ ಕತ್ತಲೆ ಆವರಿಸಿತ್ತು. ದಿಢೀರ್ ಮಳೆಗೆ ದ್ವಿಚಕ್ರ ವಾಹನ ಸವಾರರು ಸೇತುವೆ ಕೆಳಗೆ ಹಾಗೂ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದರು.

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ

ಇನ್ನೂ ಬೆಂಗಳೂರಿನ ಆರ್‌.ಟಿ‌ ನಗರದಲ್ಲಿ ಮರವು ಉರುಳಿ ಬಿದ್ದಿತ್ತು. ಇನೋವಾ ಹಾಗೂ ಓಮಿನಿ ಕಾರು ಜಖಂಗೊಂಡಿತ್ತು. ರವೀಂದ್ರನಾಥ್ ಠಾಗೋರ್ ಸರ್ಕಲ್‌ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿತ್ತು. ಅದೃಷ್ಟವಶಾತ್‌ ಕಾರಿನಲ್ಲಿ ಇದ್ದವರಿಗೆ ಯಾವುದೇ ತೊಂದರೆ ಆಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ, ಬಿಬಿಎಂಪಿ ಸಿಬ್ಬಂದಿ ದೌಡಾಯಿಸಿದ್ದು, ಮರ ತೆರವು ಮಾಡುತ್ತಿದ್ದಾರೆ. ಇತ್ತ ಕೊತ್ತನೂರು ಬಳಿ ಕಾರಿನ ಮೇಲೆ ವಿದ್ಯುತ್‌ ಕಂಬ ಬಿದ್ದು ಕಾರಿನ ಬ್ಯಾನೆಟ್ ಹಾಳಾಗಿತ್ತು. ವಿದ್ಯುತ್‌ ಕಂಬ ಕಳಚಿ ಬಿದ್ದ ಕಾರಣ ಕರೆಂಟ್‌ ಕಟ್ಟ್‌ ಆಗಿತ್ತು.

Bengaluru Rains

ಮೈಸೂರು, ಮಂಡ್ಯದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ

ಮಂಡ್ಯದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗುತ್ತಿದೆ. ಹಲವು ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ಮಂಡ್ಯ ಜನರು ಖುಷಿಯಾಗಿದ್ದಾರೆ. ಭಾರಿ ಶಬ್ಧದೊಂದಿಗೆ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದೆ. ಮೈಸೂರಿನಲ್ಲಿ ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಜನರಿಗೆ ವರುಣ ಸಿಂಚನವಾಗಿದೆ. ತಿ.ನರಸೀಪುರ ತಾಲೂಕಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ಕೆಲವೆಡೆ ಜೋರು ಗಾಳಿ ನಡುವೆ ಆಲಿಕಲ್ಲು ಮಳೆಯಾಗಿದೆ.

ಟ್ರಾನ್ಸ್ ಫಾರ್ಮರ್ ಸ್ಫೋಟ

ಬೆಂಗಳೂರಿನ ಐಟಿಐ ಲೇಔಟ್‌ನಲ್ಲಿ ಮಳೆಗೆ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದೆ. ಗಾಳಿ ಮಳೆಗೆ ಮರಗಳ ಎಲೆ ತಾಗಿ ಟ್ರಾನ್ಸ್ ಫಾರ್ಮನರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಬ್ಲಾಸ್ಟ್‌ ಆಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟ್ರಾನ್ಸ್‌ಫಾರ್ಮನರ್‌ ಸ್ಫೋಟದಿಂದಾಗಿ ವಿದ್ಯುತ್‌ ಕಡಿತವಾಗಿದೆ.

ಹೊಸಕೋಟೆಯಲ್ಲೂ ಬಿರುಗಾಳಿ ಮಳೆ

ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗಿದೆ. ವರ್ಷದ ಮೊದಲ ಮಳೆ ಕಂಡು ಜನರು ಸಂತಸಗೊಂಡಿದ್ದಾರೆ. ಇನ್ನೂ ಗಾಳಿ ಸಹಿತ ಮಳೆಯಿಂದಾಗಿ ದೇವಸ್ಥಾನ ಜೀರ್ಣೋದ್ಧಾರದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಲ್ ಎಲ್ಲಾ ಚೆಲ್ಲಾಪಿಲ್ಲಿಯಾಗಿದ್ದವು. ಊಟ ಮಾಡುತ್ತಿದ್ದವರೆಲ್ಲೂ ಎಲೆ ಬಿಟ್ಟು, ಓಡಿ ಹೋದರು. ಟೇಬಲ್ ಮೇಲಿನ ಊಟವೆಲ್ಲ ನೀರುಪಾಲಾಗಿತ್ತು‌. ಹೊಸಕೋಟೆ ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಚಾಮರಾಜನಗರದಲ್ಲೂ ಮಳೆಯ ಸಿಂಚನ

ಚಾಮರಾಜನಗರದಲ್ಲೂ ವರುಣ ಭೂ ಸ್ಪರ್ಶಿಸಿದ್ದಾನೆ. ಚಾಮರಾಜನಗರ ತಾಲೂಕಿನ ಅಂಕಶೆಟ್ಟಿಪುರ, ಚೆನ್ನಪ್ಪಪುರ, ಅರಕಲವಾಡಿ ವೆಂಕಟಯ್ಯನ ಛತ್ರ ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಬೇಸಿಗೆಯಿಂದ ಬೇಸತ್ತಿದ್ದ ರೈತರ ಮುಖದಲ್ಲಿ ಕೊಂಚ ಮಂದಹಾಸ ಮೂಡಿದೆ. ಚಾಮರಾಜನಗರ ತಾಲೂಕಿನ ತಮ್ಮಡಹಳ್ಳಿ, ಉಡಿಗಾಲ, ಕೆಂಗಾಕಿ, ಕುಮಚಹಳ್ಳಿ ಗ್ರಾಮದಲ್ಲಿ ಗಾಳಿಯ ಅಬ್ಬರದೊಂದಿಗೆ ಮಳೆಯಾಗಿದೆ.

ರಾಮನಗರದಲ್ಲೂ ತಂಪೆರೆದ ಮಳೆ

ಬರಗಾಲದಿಂದ ಬೇಸತ್ತಿದ್ದ ರೇಷ್ಮೆನಾಡು ರಾಮನಗರ ಜಿಲ್ಲೆಯಲ್ಲೂ ಹಲವೆಡೆ ವರುಣ ದರ್ಶನ ಕೊಟ್ಟಿದ್ದಾನೆ. ಗುಡುಗು ಸಹಿತ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಪೂರ್ವಜರ ನಂಬಿಕೆಯಂತೆ ಭರಣಿ ಮಳೆ ಆಗಮಿಸಿದೆ. ಭರಣಿ ಮಳೆ ಬಂದರೆ ರೈತರ ಕೃಷಿ ಚುಟುವಟಿಕೆ ಆರಂಭಿಸಲು ಯಶಸ್ವಿ ಎಂಬ ನಂಬಿಕೆ ಇದೆ. ಸದ್ಯ ಭರಣಿ ಮಳೆಯ ಸಿಂಚನದಿಂದ ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿದೆ.

ಆಲಿಕಲ್ಲು ಸಹಿತ ಮಳೆಯಾರ್ಭಟ

ಇನ್ನೂ ರಾಜ್ಯ ಗಡಿ ಡೆಂಕಣಿಕೋಟೆ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ತಮಿಳುನಾಡಿನ ಡೆಂಕಣಿಕೋಟೆ, ಹೊಸೂರು, ಸೂಲಗಿರಿ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಆನೇಕಲ್, ಎಲೆಕ್ಟ್ರಾನಿಕ್ ಸಿಟಿ, ಚಂದಾಪುರ, ಅತ್ತಿಬೆಲೆ, ಹೆಬ್ಬಗೋಡಿ ಸೇರಿದಂತೆ ಜೋರು ಮಳೆಯಾಗುತ್ತಿದೆ.

Bengaluru rains

ಬ್ಯಾರಿಕೇಡ್ ಹಾಕಿ ಅಂಡರ್‌ಪಾಸ್‌ ಕ್ಲೋಸ್‌

ಅರ್ಧ ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಯಿಂದಾಗಿ ಬೆಂಗಳೂರಿನ ರಸ್ತೆಗಳು ನದಿಯಂತಾಗಿತ್ತು. ವಿಧಾನಸೌಧ ಪಕ್ಕದಲ್ಲಿರುವ ಎಂ.ಎಸ್ ಬಿಲ್ಡಿಂಗ್ ಸುತ್ತಮುತ್ತಲಿನ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಎಂಎಸ್‌ ಬಿಲ್ಡಿಂಗ್‌ ಸಮೀಪವೇ ಇರುವ ಅಂಡರ್ ಪಾಸ್‌ಗಳಿಗೆ ಬ್ಯಾರಿಕೇಟ್ ಹಾಕಿ ಕ್ಲೋಸ್ ಮಾಡಲಾಗಿದೆ.

ಧರೆಗೆ ಬಿದ್ದ ಮರಗಳು

ಮಳೆಯಿಂದ ಬೆಂಗಳೂರು ನಗರದಲ್ಲಿ ಮೂರು ಕಡೆ ಬೃಹತ್ ಗಾತ್ರದ ಮರ ಧರೆಗೆ ಬಿದ್ದಿದೆ. ಕೆ.ಆರ್.ಪುರಂನ ಕಸ್ತೂರಿ ನಗರ, ಆರ್‌ಟಿ ನಗರದಲ್ಲಿ ಮಳೆಗೆ ಮರ ಬಿದ್ದಿದೆ. ಇನ್ನೂ ನಾರಾಯಣಪುರದಲ್ಲಿ ಮರ ಬಿದ್ದು, ಕಾರು, ಬೈಕ್ ಜಖಂಗೊಂಡಿದೆ. ಸದ್ಯ ರಸ್ತೆಗೆ ಬಿದ್ದಿದ ಮರವನ್ನು ಬಿಬಿಎಂಪಿ ಸಿಬ್ಬಂದಿ ತೆರವು ಮಾಡಿದ್ದಾರೆ. ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣದ ಎಟಿಎಂ ಕೊಠಡಿಗೆ ಮಳೆ ನೀರು ನುಗ್ಗಿತ್ತು.

Continue Reading

ಮಳೆ

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Bengaluru Rains: ಬೆಂಗಳೂರು ಸುತ್ತಮುತ್ತ ಗಾಳಿ ಜತೆಗೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ದೇವಸ್ಥಾನ ಜೀರ್ಣೋದ್ಧಾರದಲ್ಲಿ ಊಟ ಮಾಡುತ್ತಿದ್ದಾಗ ದಿಢೀರ್‌ ಮಳೆಯಿಂದ ಜನರು ಊಟ ಬಿಟ್ಟು ಓಡಿ ಹೋದರು. ಟೇಬಲ್ ಮೇಲಿನ ಊಟವೆಲ್ಲ ನೀರುಪಾಲಾಗಿತ್ತು‌. ಕೆಲವೆಡೆ ಮಳೆ ಅನಾಹುತಗಳು ಸಂಭವಿಸಿವೆ.

VISTARANEWS.COM


on

By

Bengaluru Rains
Koo

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ (Karnataka Rains) ಬಿರುಗಾಳಿ ಸಹಿತ ಮಳೆ ಬಂದು ಹೋಯಿತು. ಆದರೆ ರಾಜಧಾನಿ ಬೆಂಗಳೂರಲ್ಲಿ ಒಂದು ಸಣ್ಣ ಹನಿಯು (Karnataka weather Forecast) ಬೀಳಲಿಲ್ಲ. ಬೆಂಗಳೂರು ಕರಗ ಸಮಯದಲ್ಲಿ ಸಣ್ಣ ಪ್ರಮಾಣದಲ್ಲಿ ಆದರೂ ಮಳೆ ಬಂದೇ ಬರುತ್ತೆ ಎಂಬ ನಂಬಿಕೆ ಇದೆ. ಆದರೆ ಆಗಲೂ ಮಳೆಯು ಕಾಣಲಿಲ್ಲ. ಇದೀಗ ಬಿಸಿಲ ಧಗೆಯಿಂದ ಸುಸ್ತಾಗಿದ್ದ ಮಂದಿಗೆ ಮಳೆಯು ತನ್ನ ಭರ್ಜರಿ ಪ್ರದರ್ಶನ (Bengaluru Rains) ತೋರಿದೆ.

ಲೇಟ್‌ ಆದರೂ ಲೇಟೆಸ್ಟ್‌ ಆಗಿ ಮಳೆರಾಯ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದಾನೆ. ಇದರಿಂದಾಗಿ ಸೋಶಿಯಲ್‌ ಮೀಡಿಯಾದಲ್ಲಿ ನೆಟ್ಟಿಗರು ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್ ಎಂದು ಬೆಂಗಳೂರಿಗರಿಗೆ ವಿಷ್‌ ಮಾಡಿದ್ದಾರೆ. ಜತೆಗೆ ಟ್ವಿಟರ್‌, ಇನ್ಸ್ಟಾಗ್ರಾಂನಲ್ಲಿ Bengaluru rains ಹ್ಯಾಶ್‌ ಟ್ಯಾಗ್‌ ಹಾಕಿ ಸಂತಸವನ್ನು ಹಂಚಿಕೊಳ್ಳುತ್ತಿದ್ದಾರೆ. ಅಂತೂ-ಇಂತೂ ಬೆಂಗಳೂರಲ್ಲಿ ಮಳೆ ಬಂತಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದಾರೆ.

ಶಿವಾಜಿನಗರ, ಮಲ್ಲೇಶ್ವರಂ, ವಿಧಾನಸೌಧ, ರಾಜಾಜಿನಗರ, ರೇಸ್ ಕೋರ್ಸ್, ಮೆಜೆಸ್ಟಿಕ್, ಮಹಾರಾಣಿ ಕಾಲೇಜು, ಸಿಐಡಿ ಆಫೀಸ್, ಪ್ಯಾಲೇಸ್ ರಸ್ತೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಮಧ್ಯಾಹ್ನ ಮೂರು ಗಂಟೆ ಸಮಯವು ರಾತ್ರಿಯಂತೆ ಕತ್ತಲೆ ಆವರಿಸಿತ್ತು. ದಿಢೀರ್ ಮಳೆಗೆ ದ್ವಿಚಕ್ರ ವಾಹನ ಸವಾರರು ಸೇತುವೆ ಕೆಳಗೆ ಹಾಗೂ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದರು.

Bengaluru Rains

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ

ಇನ್ನೂ ಬೆಂಗಳೂರಿನ ಆರ್‌.ಟಿ‌ ನಗರದಲ್ಲಿ ಮರವು ಉರುಳಿ ಬಿದ್ದಿತ್ತು. ಇನೋವಾ ಹಾಗೂ ಓಮಿನಿ ಕಾರು ಜಖಂಗೊಂಡಿತ್ತು. ರವೀಂದ್ರನಾಥ್ ಠಾಗೋರ್ ಸರ್ಕಲ್‌ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿತ್ತು. ಅದೃಷ್ಟವಶಾತ್‌ ಕಾರಿನಲ್ಲಿ ಇದ್ದವರಿಗೆ ಯಾವುದೇ ತೊಂದರೆ ಆಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ, ಬಿಬಿಎಂಪಿ ಸಿಬ್ಬಂದಿ ದೌಡಾಯಿಸಿದ್ದು, ಮರ ತೆರವು ಮಾಡುತ್ತಿದ್ದಾರೆ. ಇತ್ತ ಕೊತ್ತನೂರು ಬಳಿ ಕಾರಿನ ಮೇಲೆ ವಿದ್ಯುತ್‌ ಕಂಬ ಬಿದ್ದು ಕಾರಿನ ಬ್ಯಾನೆಟ್ ಹಾಳಾಗಿತ್ತು. ವಿದ್ಯುತ್‌ ಕಂಬ ಕಳಚಿ ಬಿದ್ದ ಕಾರಣ ಕರೆಂಟ್‌ ಕಟ್ಟ್‌ ಆಗಿತ್ತು.

Bengaluru Rains

ಮೈಸೂರು, ಮಂಡ್ಯದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ

ಮಂಡ್ಯದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗುತ್ತಿದೆ. ಹಲವು ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ಮಂಡ್ಯ ಜನರು ಖುಷಿಯಾಗಿದ್ದಾರೆ. ಭಾರಿ ಶಬ್ಧದೊಂದಿಗೆ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದೆ. ಮೈಸೂರಿನಲ್ಲಿ ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಜನರಿಗೆ ವರುಣ ಸಿಂಚನವಾಗಿದೆ. ತಿ.ನರಸೀಪುರ ತಾಲೂಕಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ಕೆಲವೆಡೆ ಜೋರು ಗಾಳಿ ನಡುವೆ ಆಲಿಕಲ್ಲು ಮಳೆಯಾಗಿದೆ.

ಟ್ರಾನ್ಸ್ ಫಾರ್ಮರ್ ಸ್ಫೋಟ

ಬೆಂಗಳೂರಿನ ಐಟಿಐ ಲೇಔಟ್‌ನಲ್ಲಿ ಮಳೆಗೆ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದೆ. ಗಾಳಿ ಮಳೆಗೆ ಮರಗಳ ಎಲೆ ತಾಗಿ ಟ್ರಾನ್ಸ್ ಫಾರ್ಮನರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಬ್ಲಾಸ್ಟ್‌ ಆಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟ್ರಾನ್ಸ್‌ಫಾರ್ಮನರ್‌ ಸ್ಫೋಟದಿಂದಾಗಿ ವಿದ್ಯುತ್‌ ಕಡಿತವಾಗಿದೆ.

ಹೊಸಕೋಟೆಯಲ್ಲೂ ಬಿರುಗಾಳಿ ಮಳೆ

ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗಿದೆ. ವರ್ಷದ ಮೊದಲ ಮಳೆ ಕಂಡು ಜನರು ಸಂತಸಗೊಂಡಿದ್ದಾರೆ. ಇನ್ನೂ ಗಾಳಿ ಸಹಿತ ಮಳೆಯಿಂದಾಗಿ ದೇವಸ್ಥಾನ ಜೀರ್ಣೋದ್ಧಾರದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಲ್ ಎಲ್ಲಾ ಚೆಲ್ಲಾಪಿಲ್ಲಿಯಾಗಿದ್ದವು. ಊಟ ಮಾಡುತ್ತಿದ್ದವರೆಲ್ಲೂ ಎಲೆ ಬಿಟ್ಟು, ಓಡಿ ಹೋದರು. ಟೇಬಲ್ ಮೇಲಿನ ಊಟವೆಲ್ಲ ನೀರುಪಾಲಾಗಿತ್ತು‌. ಹೊಸಕೋಟೆ ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಚಾಮರಾಜನಗರದಲ್ಲೂ ಮಳೆಯ ಸಿಂಚನ

ಚಾಮರಾಜನಗರದಲ್ಲೂ ವರುಣ ಭೂ ಸ್ಪರ್ಶಿಸಿದ್ದಾನೆ. ಚಾಮರಾಜನಗರ ತಾಲೂಕಿನ ಅಂಕಶೆಟ್ಟಿಪುರ, ಚೆನ್ನಪ್ಪಪುರ, ಅರಕಲವಾಡಿ ವೆಂಕಟಯ್ಯನ ಛತ್ರ ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಬೇಸಿಗೆಯಿಂದ ಬೇಸತ್ತಿದ್ದ ರೈತರ ಮುಖದಲ್ಲಿ ಕೊಂಚ ಮಂದಹಾಸ ಮೂಡಿದೆ. ಚಾಮರಾಜನಗರ ತಾಲೂಕಿನ ತಮ್ಮಡಹಳ್ಳಿ, ಉಡಿಗಾಲ, ಕೆಂಗಾಕಿ, ಕುಮಚಹಳ್ಳಿ ಗ್ರಾಮದಲ್ಲಿ ಗಾಳಿಯ ಅಬ್ಬರದೊಂದಿಗೆ ಮಳೆಯಾಗಿದೆ.

ರಾಮನಗರದಲ್ಲೂ ತಂಪೆರೆದ ಮಳೆ

ಬರಗಾಲದಿಂದ ಬೇಸತ್ತಿದ್ದ ರೇಷ್ಮೆನಾಡು ರಾಮನಗರ ಜಿಲ್ಲೆಯಲ್ಲೂ ಹಲವೆಡೆ ವರುಣ ದರ್ಶನ ಕೊಟ್ಟಿದ್ದಾನೆ. ಗುಡುಗು ಸಹಿತ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಪೂರ್ವಜರ ನಂಬಿಕೆಯಂತೆ ಭರಣಿ ಮಳೆ ಆಗಮಿಸಿದೆ. ಭರಣಿ ಮಳೆ ಬಂದರೆ ರೈತರ ಕೃಷಿ ಚುಟುವಟಿಕೆ ಆರಂಭಿಸಲು ಯಶಸ್ವಿ ಎಂಬ ನಂಬಿಕೆ ಇದೆ. ಸದ್ಯ ಭರಣಿ ಮಳೆಯ ಸಿಂಚನದಿಂದ ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿದೆ.

ಆಲಿಕಲ್ಲು ಸಹಿತ ಮಳೆಯಾರ್ಭಟ

ಇನ್ನೂ ರಾಜ್ಯ ಗಡಿ ಡೆಂಕಣಿಕೋಟೆ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ತಮಿಳುನಾಡಿನ ಡೆಂಕಣಿಕೋಟೆ, ಹೊಸೂರು, ಸೂಲಗಿರಿ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಆನೇಕಲ್, ಎಲೆಕ್ಟ್ರಾನಿಕ್ ಸಿಟಿ, ಚಂದಾಪುರ, ಅತ್ತಿಬೆಲೆ, ಹೆಬ್ಬಗೋಡಿ ಸೇರಿದಂತೆ ಜೋರು ಮಳೆಯಾಗುತ್ತಿದೆ.

Bengaluru rains

ಬ್ಯಾರಿಕೇಟ್‌ ಹಾಕಿ ಅಂಡರ್‌ಪಾಸ್‌ ಕ್ಲೋಸ್‌

ಅರ್ಧ ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಯಿಂದಾಗಿ ಬೆಂಗಳೂರಿನ ರಸ್ತೆಗಳು ನದಿಯಂತಾಗಿತ್ತು. ವಿಧಾನಸೌಧ ಪಕ್ಕದಲ್ಲಿರುವ ಎಂ.ಎಸ್ ಬಿಲ್ಡಿಂಗ್ ಸುತ್ತಮುತ್ತಲಿನ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಎಂಎಸ್‌ ಬಿಲ್ಡಿಂಗ್‌ ಸಮೀಪವೇ ಇರುವ ಅಂಡರ್ ಪಾಸ್‌ಗಳಿಗೆ ಬ್ಯಾರಿಕೇಟ್ ಹಾಕಿ ಕ್ಲೋಸ್ ಮಾಡಲಾಗಿದೆ.

ಧರೆಗೆ ಬಿದ್ದ ಮರಗಳು

ಮಳೆಯಿಂದ ಬೆಂಗಳೂರು ನಗರದಲ್ಲಿ ಮೂರು ಕಡೆ ಬೃಹತ್ ಗಾತ್ರದ ಮರ ಧರೆಗೆ ಬಿದ್ದಿದೆ. ಕೆ.ಆರ್.ಪುರಂನ ಕಸ್ತೂರಿ ನಗರ, ಆರ್‌ಟಿ ನಗರದಲ್ಲಿ ಮಳೆಗೆ ಮರ ಬಿದ್ದಿದೆ. ಇನ್ನೂ ನಾರಾಯಣಪುರದಲ್ಲಿ ಮರ ಬಿದ್ದು, ಕಾರು, ಬೈಕ್ ಜಖಂಗೊಂಡಿದೆ. ಸದ್ಯ ರಸ್ತೆಗೆ ಬಿದ್ದಿದ ಮರವನ್ನು ಬಿಬಿಎಂಪಿ ಸಿಬ್ಬಂದಿ ತೆರವು ಮಾಡಿದ್ದಾರೆ. ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣದ ಎಟಿಎಂ (ATM) ಕೊಠಡಿಗೆ ಮಳೆ ನೀರು ನುಗ್ಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Gold smuggling
ದೇಶ2 mins ago

Gold Smuggling: ಜ್ಯಾಕೆಟ್‌, ಲೆಗ್ಗಿನ್ಸ್‌ನಲ್ಲಿ, ಬೆಲ್ಟ್‌ನಲ್ಲಿ 25 ಕೆ.ಜಿ ಚಿನ್ನ; ಆಫ್ಘಾನ್‌ ರಾಜತಾಂತ್ರಿಕ ಅಧಿಕಾರಿ ಕಸ್ಟಮ್ಸ್‌ ಬಲೆಗೆ

Prajwal Revanna Case
ಕರ್ನಾಟಕ7 mins ago

Prajwal Revanna Case: ಜರ್ಮನಿ ಆಯ್ತು, ದುಬೈ ಬಿಟ್ಟಾಯ್ತು; ಮತ್ತೊಂದು ದೇಶಕ್ಕೆ ಹಾರಿದ ಪ್ರಜ್ವಲ್‌ ರೇವಣ್ಣ!

Money Guide
ಮನಿ-ಗೈಡ್17 mins ago

Money Guide: ಈ ರಜೆಯಲ್ಲಿ ಮಕ್ಕಳಿಗೆ ಆರ್ಥಿಕತೆಯ ಪ್ರಾಕ್ಟಿಕಲ್‌ ಪಾಠ ಮಾಡಿ

mangaluru airport bomb threat
ದಕ್ಷಿಣ ಕನ್ನಡ29 mins ago

Bomb Threat: ಮಂಗಳೂರು ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ, ಪ್ರಕರಣ ತಡವಾಗಿ ಬೆಳಕಿಗೆ

Elvish Yadav
ದೇಶ59 mins ago

Elvish Yadav: ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ಗೆ ಮತ್ತೆ ಸಂಕಷ್ಟ; ಎಲ್ವಿಶ್‌ ವಿರುದ್ಧ ಇಡಿ ಕೇಸ್‌

Urvashi Rautela
ಕ್ರೀಡೆ1 hour ago

Urvashi Rautela: ಪಂತ್​ ಜತೆ ಮದುವೆಯಾಗುತ್ತೀರಾ?; ಅಭಿಮಾನಿಯ ಪ್ರಶ್ನೆಗೆ ಉತ್ತರಿಸಿದ ಊರ್ವಶಿ ರೌಟೇಲಾ; ವಿಡಿಯೊ ವೈರಲ್​

Self Harming
ತುಮಕೂರು1 hour ago

Self Harming : ಸಾಲಬಾಧೆಗೆ ನೊಂದು ಮನೆಯೊಳಗೆ ನೇಣಿಗೆ ಕೊರಳೊಡ್ಡಿದ ಗೃಹಿಣಿ

Bandaru Supritha Naidu surekha vani daughter wants to marry vijay deverakonda
ಟಾಲಿವುಡ್2 hours ago

Bandaru Supritha Naidu: ವಿಜಯ್‌ದೇವರಕೊಂಡರನ್ನು ಮದುವೆಯಾಗುತ್ತಿದ್ದಾರಂತೆ ತೆಲುಗು ಖ್ಯಾತ ನಟಿಯ ಮಗಳು!

gold rate today
ಚಿನ್ನದ ದರ2 hours ago

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಇಂದು ಖರೀದಿಗೆ ಮುನ್ನ ದರದ ಜೊತೆಗೆ ಇದು ತಿಳಿದಿರಲಿ

prajwal revanna case cm siddaramaiah rahul gandhi
ಪ್ರಮುಖ ಸುದ್ದಿ2 hours ago

Prajwal Revanna Case: ಸಿಎಂಗೆ ಪತ್ರ ಬರೆದು ಚುರುಕು ಮುಟ್ಟಿಸಿದ ರಾಗಾ; ಎಸ್‌ಐಟಿ ಜೊತೆ ಸಭೆ ನಡೆಸಿ ಸಿಎಂ ಖಡಕ್‌ ಸೂಚನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ24 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌