ಶಾಸಕ ಹರೀಶ್‌ ಪೂಂಜಾ ಆಡಿದ ಮಾತು ತಿರುಗು ಬಾಣ: ಮನೆಗೆ ಬಂತು ಮುಸ್ಲಿಂ ಟೋಪಿ, ಶಾಲು - Vistara News

ದಕ್ಷಿಣ ಕನ್ನಡ

ಶಾಸಕ ಹರೀಶ್‌ ಪೂಂಜಾ ಆಡಿದ ಮಾತು ತಿರುಗು ಬಾಣ: ಮನೆಗೆ ಬಂತು ಮುಸ್ಲಿಂ ಟೋಪಿ, ಶಾಲು

ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಸಂಘ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸೂಚಿಸಿದರೆ ನನಗೆ ಮುಸ್ಲಿಮರ ಮತ ಬೇಡವೆಂದು ಹೇಳಿ ಶಾಸಕ ಹರೀಶ್‌ ಪೂಂಜಾ ಪೇಚಿಗೆ ಸಿಲುಕಿದ್ದರು.

VISTARANEWS.COM


on

ಮುಸ್ಲಿಮರ ಟೋಪಿ,ಶಾಲು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಮಾತು ಮನೆ ಕೆಡಿಸ್ತು, ತೂತು ಒಲೆ ಕೆಡಿಸ್ತು ಎನ್ನುವ ಗಾದೆ ಇದೆ. ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅನವಶ್ಯಕವಾದ ಮಾತು ಈಗ ಅವರಿಗೇ ತಿರುಗುಬಾಣವಾಗುತ್ತಿದೆ. ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಶಾಸಕ ಹರೀಶ್‌ ಪುಂಜಾ ಮುಂದಿನ ಚುನಾವಣೆಯಲ್ಲಿ ನನಗೆ ಮುಸ್ಲಿಮರ ವೋಟ್‌ ಬೇಡ ಎಂದಿದ್ದರು.

ಇದನ್ನೂ ಓದಿ | ಮಂಗಳೂರು ಕೋರ್ಟ್‌ನಲ್ಲಿ ಮಳಲಿ‌ ಮಸೀದಿ-ಮಂದಿರ ಫೈಟ್

ಹೀಗೆ ಬಹಿರಂಗ ಹೇಳಿಕೆ ನೀಡಿ ಸಾಕಷ್ಟು ಚರ್ಚೆಗೆ ಕಾರಣವಾದರು. ಬಳಿಕ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರೂ ಯಾವುದೇ ಪ್ರಯೋಜನವಾಗಲಿಲ್ಲ. ಇದೀಗ ಆ ಶಾಸಕರಿಗೆ ಮುಸ್ಲಿಂ ಟೋಪಿ ಹಾಗೂ ಹಸಿರು ಶಾಲು ಕಳುಹಿಸಿ ತಿರುಗೇಟು ಕೊಡಲಾಗಿದೆ.

ಇದೀಗ ಪೂಂಜಾ ಮಾತನ್ನು ಖಂಡಿಸಿರುವ ಬೆಳ್ತಂಗಡಿ ತಾಲೂಕು ಕಮ್ಯುನಿಸ್ಟ್ ಪಕ್ಷದ ಸದಸ್ಯರೊಬ್ಬರು, ಶಾಸಕ ಹರೀಶ್ ಪೂಂಜಾ ಅವರಿಗೆ ಮುಸ್ಲಿಂ ಟೋಪಿ ಹಾಗೂ ಹಸಿರು ಶಾಲು ಕಳುಹಿಸಿದ್ದಾರೆ. ಒಂದೆಡೆ ನೀವು ಮುಸ್ಲಿಮರ ಮತ ಬೇಡ ಎನ್ನುತ್ತೀರಿ. ಮತ್ತೊಂದೆಡೆ ಕೇಂದ್ರ ಬಿಜೆಪಿ ಸರ್ಕಾರದ ಎಂಟನೇ ವರ್ಷದ ಸಂಭ್ರಮಾಚರಣೆಗೆ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯಕ್ರಮ ಆಯೋಜಿಸುತ್ತದೆ. ನಿಮ್ಮ ಇಬ್ಬಗೆಯ ನೀತಿ ಬಿಡಿ. ಚುನಾವಣೆಗೆ ಮುಸ್ಲಿಮರ ಓಲೈಕೆ ಮಾಡಲು ಸಮಾವೇಶ ಮಾಡಬೇಡಿ. ಮುಂದಿನ ದಿನದಲ್ಲಿ ಸರ್ವ ಧರ್ಮದ ಜನರನ್ನು ಸಮನಾಗಿ ನೋಡಿ ನಾಡಿನ ಸೌಹಾರ್ದತೆಯನ್ನ ಎತ್ತಿ ಹಿಡಿಯಿರಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ | ಸ್ಯಾನಿಟರಿ ಪ್ಯಾಡ್‌ನಲ್ಲಿ ಅಕ್ರಮ ಚಿನ್ನ! ಮಂಗಳೂರು ಏರ್‌ ಪೋರ್ಟ್‌ನಲ್ಲಿ₹ 1.3 ಕೋಟಿ ಮೌಲ್ಯದ ಬಂಗಾರ ಜಪ್ತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಗಲಕೋಟೆ

Electric shock : ಬೋರ್‌ವೆಲ್‌ ಆನ್‌ ಮಾಡುತ್ತಿದ್ದಂತೆ ಕರೆಂಟ್‌ ಶಾಕ್‌; ಹಾರಿ ಬಿದ್ದ ರೈತ ಸ್ಪಾಟ್‌ ಡೆತ್‌

Electric shock : ಬೋರ್‌ವೆಲ್‌ ಆನ್‌ ಮಾಡಲು ಹೋದಾಗ ವಿದ್ಯುತ್‌ ಪ್ರವಹಿಸಿ ರೈತರೊಬ್ಬರು ಮೃತಪಟ್ಟರೆ, ಸ್ಟೇ ವೈಯರ್‌ಗೆ ವಿದ್ಯುತ್‌ ಸ್ಪರ್ಶಿಸಿ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿದ್ದಾಳೆ.

VISTARANEWS.COM


on

By

Electric Shock
Koo

ಬಾಗಲಕೋಟೆ: ವಿದ್ಯುತ್ ತಗುಲಿ (Electric shock) ರೈತರೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಟಗುಡ್ಡ ಗ್ರಾಮದಲ್ಲಿ ನಡೆದಿದೆ. ಭೀಮಪ್ಪ ಯಾದವಾಡ (45) ಮೃತ ದುರ್ದೈವಿ.

ಭೀಮಪ್ಪ ನೀರು ಹಾಯಿಸಲು ಬೆಳಗ್ಗೆ ಹೊಲಕ್ಕೆ ಹೋಗಿದ್ದರು. ಬೋರ್‌ವೆಲ್‌ ಮೆಷಿನ್‌ ಡೋರ್‌ ತೆರೆದು ಆನ್ ಮಾಡಲು ಹೋಗಿದ್ದಾರೆ. ಆದರೆ ವಿದ್ಯುತ್ ತಂತಿ ಕಟ್ ಆಗಿ ಬೋರ್ಡ್‌ಗೆ ಸಂಚರಿಸಿ ಕರೆಂಟ್‌ ಶಾಕ್‌ ಹೊಡೆದಿದೆ.

ಸ್ಥಳಕ್ಕೆ ಲೊಕಾಪೂರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಸ್ಟೇ ವೈಯರ್‌ಗೆ ವಿದ್ಯುತ್ ಸ್ವರ್ಶಿಸಿ ಯುವತಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ಸ್ಟೇ ವೈಯರ್‌ಗೆ ವಿದ್ಯುತ್‌ ಸ್ಪರ್ಶಿಸಿ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ ಮೃತ ದುರ್ದೈವಿ.

ಗಣೇಶ್ ಶೆಟ್ಟಿ ಮತ್ತು ರೋಹಿನಿ ಪುತ್ರಿ ಪ್ರತೀಕ್ಷಾ ಶೆಟ್ಟಿ(20) ಕೊಕ್ಕಡ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಮನೆಗೆ ಪಾರ್ಸೆಲ್ ಬಂದಿತ್ತು. ಹೀಗಾಗಿ ಅದನ್ನು ಪಡೆಯಲು ಹೋದಾಗ ಸ್ಟೇ ವೈಯರ್‌ನಿಂದ ನೀರಿಗೆ ವಿದ್ಯುತ್ ಪ್ರವಹಿಸಿದೆ. ಗಂಭೀರ ಗಾಯಗೊಂಡ ಪ್ರತೀಕ್ಷಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಆಕೆಯ ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

ನಡುರಸ್ತೆಯಲ್ಲಿ ಶಿಕ್ಷಕಿಯ ಹಣೆಗೆ ಸಿಂಧೂರ ಹಚ್ಚಿ ಬಲವಂತವಾಗಿ ಮದುವೆಯಾದ ಯುವಕ!

ಬಿಹಾರ: ಕೆಲವೊಂದು ಕಡೆಗಳಲ್ಲಿ ಮಹಿಳೆಯ ಕುತ್ತಿಗೆಗೆ ಮಾಂಗಲ್ಯ ಸರ ಕಟ್ಟಿದರೆ ಮದುವೆಯಾದ ಹಾಗೇ. ಅದೇರೀತಿ ಕೆಲವು ಕಡೆಗಳಲ್ಲಿ ಹಣೆಗ ಸಿಂಧೂರ ಹಚ್ಚಿದರೆ ಅವರಿಬ್ಬರು ದಂಪತಿ ಎಂದು ಪರಿಗಣಿಸುತ್ತಾರೆ. ಹಾಗಾಗಿ ಇಂತಹದೊಂದು ಸಂಪ್ರದಾಯವನ್ನಿಟ್ಟುಕೊಂಡು ಯುವಕನೊಬ್ಬ ಶಾಲಾ ಶಿಕ್ಷಕಿಯ ಹಣೆಗೆ ಸಿಂಧೂರ ಹಚ್ಚಿ ಆಕೆಯ ತಂದೆಯ ಎದುರೇ ಬಲವಂತವಾಗಿ ಮದುವೆಯಾಗಲು ಯತ್ನಿಸಿದ ಘಟನೆ ಬಿಹಾರದ ಬಂಕಾ ಜಿಲ್ಲೆಯ ಅಮರಪುರ ಬ್ಲಾಕ್‌ನಲ್ಲಿ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ವಿಡಿಯೊದಲ್ಲಿ ಶಾಲೆ ಕೆಲಸ ಮುಗಿಸಿ ಶಿಕ್ಷಕಿ ತನ್ನ ತಂದೆಯೊಂದಿಗೆ ಬೈಕಿನಲ್ಲಿ ಬರುವಾಗ ಯುವಕರಿಬ್ಬರು ಅವರನ್ನು ರಸ್ತೆಯಲ್ಲಿ ತಡೆದು ನಿಲ್ಲಿಸಿದ್ದಾರೆ. ಅದರಲ್ಲಿ ಒಬ್ಬ ಯುವಕ ಬಲವಂತವಾಗಿ ಆಕೆಯ ಹಣೆಗೆ ಸಿಂಧೂರವನ್ನು ಹಚ್ಚಲು ಪ್ರಯತ್ನಿಸಿದ್ದಾನೆ. ಯುವಕ ತನ್ನ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡಿದ್ದಾನೆ. ಹಾಗೇ ಶಿಕ್ಷಕಿಯ ತಂದೆ ಯುವಕನಿಂದ ತಮ್ಮ ಮಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ. ಶಿಕ್ಷಕಿ ತಲೆಯನ್ನು ತನ್ನ ದುಪ್ಪಟ್ಟದಿಂದ ಮುಚ್ಚಿಕೊಂಡಿದ್ದರು ಕೂಡ ಆತ ಸಿಂಧೂರ ಹಚ್ಚಿದ್ದಾನೆ. ಇನ್ನೊಬ್ಬ ಯುವಕ ಇದನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾನೆ. ಇದು ವೈರಲ್ ಆಗಿದೆ.

ವಿಡಿಯೊದಲ್ಲಿ ಯುವಕ ತನ್ನ ಜೀವನ ಆಕೆಯಿಂದ ಹಾಳಾಗಿದೆ ಎಂದು ಹೇಳಿದ್ದಾನೆ. ಈ ಘಟನೆ ಬಳಿಕ ಶಿಕ್ಷಕಿ ಯುವಕನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ದೂರಿನಲ್ಲಿ ಶಿಕ್ಷಕಿ, ಬಭಂಗಮಾ ನಿವಾಸಿ ಸೌರಭ್ ಸೋನು ಎಂಬ ಯುವಕನೊಬ್ಬ ಪೋನ್‌ನಲ್ಲಿ ತನಗೆ ವೈಯಕ್ತಿಕವಾಗಿ ಕಿರುಕುಳ ನೀಡುತ್ತಿದ್ದಾನೆ. ತಾನು ಬಿಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅಮರಪುರದ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಲು ಶುರುಮಾಡಿದಾಗಿನಿಂದ ತನ್ನನ್ನು ಮದುವೆಯಾಗುವಂತೆ ಆತ ಒತ್ತಡ ಹಾಕುತ್ತಿದ್ದಾನೆ ಎಂದು ತಿಳಿಸಿದ್ದಾಳೆ. ಅಲ್ಲದೇ ಎರಡು ತಿಂಗಳ ಹಿಂದೆ ಯುವಕನ ವಿರುದ್ಧ ಲಿಖಿತ ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸರು ಆತನನ್ನು ಕರೆದು ಎಚ್ಚರಿಕೆ ನೀಡಿದ್ದರೂ ಕೂಡ ಆತ ಆಕೆಗೆ ಕಿರುಕುಳ ನೀಡುವುದನ್ನು ಮುಂದುವರಿಸಿದ್ದಾನೆ. ಇದೀಗ ಆತನ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಶಿಕ್ಷಕಿ ನ್ಯಾಯಕ್ಕಾಗಿ ಕಾಯುತ್ತಿದ್ದಾಳೆ.

ಈ ವಿಡಿಯೊ ಜೂನ್ 27ರಂದು ಪೋಸ್ಟ್ ಆಗಿದ್ದು, ಇದಕ್ಕೆ 3.5 ಲಕ್ಷ ಲೈಕ್ಸ್ ಬಂದಿದೆ. ಹಾಗೇ ಅನೇಕ ಜನರು ಇದಕ್ಕೆ ಕಾಮೆಂಟ್ ಮಾಡಿದ್ದಾರೆ. ಇಂತಹ ಘಟನೆಗಳು ಹಲವು ಕಡೆ ನಡೆಯುತ್ತಿರುತ್ತದೆ. ಇದರಿಂದ ಅದೆಷ್ಟೋ ಹೆಣ್ಣುಮಕ್ಕಳ ಜೀವನ ಹಾಳಾಗಿದೆ. ಹಾಗಾಗಿ ಭವಿಷ್ಯದಲ್ಲಿ ಮಹಿಳೆಯರ ಮೇಲೆ ಮತ್ತೆ ಇಂತಹ ಘಟನೆಗಳು ನಡೆಯದಂತೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗದುಕೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast : ಉಡುಪಿಯಲ್ಲಿ ಭಾರಿ ಮಳೆಗೆ (Heavy Rain) ಮನೆ ಮುಂದಿದ್ದ ಬಾವಿಯೊಂದು ಕುಸಿದರೆ ಇತ್ತ ಮಂಗಳೂರಿನಲ್ಲಿ ಕಡಲ ಅಬ್ಬರಕ್ಕೆ ಮನೆಯೊಂದು (Karnataka rain) ಸಮುದ್ರಪಾಲಾಗಿದೆ. ಕೊಡಗಿನಲ್ಲಿ ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ (Rain Effected) ಹಾನಿಯಾಗಿದೆ.

VISTARANEWS.COM


on

By

karnataka Rain
Koo

ಉಡುಪಿ: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು (Rain News), ನೋಡ ನೋಡುತ್ತಿದ್ದಂತೆ ಮನೆ ಮುಂದಿದ್ದ ಬಾವಿಯೊಂದು ಪಾತಾಳ (well collapsed) ಸೇರಿದೆ. ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭೂಕುಸಿತಕ್ಕೆ ಮನೆಯ ಬಾವಿ ಧಾರಾಶಾಹಿಯಾಗಿದೆ.

ಬಾವಿಯೊಂದು ಕುಸಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಉಡುಪಿಯ ಕಾರ್ಕಳ ತಾಲೂಕಿನ ನೆಲ್ಲಿಕಟ್ಟೆಯ ಸರ್ವಿಸ್ ಸ್ಟೇಶನ್ ಸಮೀಪ ಘಟನೆ ನಡೆದಿದೆ. ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಭೂಮಿ ಒಳಗೆ ಬಾವಿ ಜಾರಿದೆ. ಬಾವಿ ಪಕ್ಕದಲ್ಲೆ ಮನೆ ಇದ್ದು, ಭೂಕುಸಿತದಿಂದಾಗಿ ಆತಂಕ ಹೆಚ್ಚಾಗಿದೆ.

ಮಂಗಳೂರಿನಲ್ಲಿ ಹೆಚ್ಚಾದ ಕಡಲ ಅಬ್ಬರ

ಮಂಗಳೂರಿನಲ್ಲಿ ಕಡಲ ಅಬ್ಬರ ಹೆಚ್ಚಾಗುತ್ತಿದ್ದು, ನೋಡ ನೋಡುತ್ತಿದ್ದಂತೆ ಮನೆಯೊಂದು ಸಮುದ್ರಕ್ಕುರುಳಿದೆ. ಉಳ್ಳಾಲದ ಬಟ್ಟಪಾಡಿ ಕಡಲ ತೀರದಲ್ಲಿದ್ದ ಮನೆಯು ಅಲೆಗಳ ಹೊಡೆತಕ್ಕೆ ಸಿಲುಕಿ ಬಿದ್ದು ಹೋಗಿದೆ. ಮನೆಯಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಕಡಲ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮನೆಯವರನ್ನು ಸ್ಥಳಾಂತರ ಮಾಡಿತ್ತು. ಮನೆ ಬೀಳುವ ದೃಶ್ಯ ಮೊಬೈಲ್‌ನಲ್ಲಿ‌ ಸೆರೆಯಾಗಿದೆ.

karnataka rain

ಇದನ್ನೂ ಓದಿ: Rain News: ಅಬ್ಬರಿಸುತ್ತಿರುವ ಮುಂಗಾರು: 3 ಜಿಲ್ಲೆಗೆ ರೆಡ್‌ ಅಲರ್ಟ್‌, ಇನ್ನೂ ನಾಲ್ಕು ದಿನ ಜೋರು ಮಳೆ

ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ ಹಾನಿ

ಕೊಡಗು ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ಅನಾಹುತವನ್ನೇ ಸೃಷ್ಟಿಸಿದೆ. ಭಾರೀ ಮಳೆಗೆ ಶಾಲಾ ಕಟ್ಟಡದ ಮೇಲೆ ಗುಡ್ಡ ಕುಸಿದಿದೆ. ಕೊಡಗಿನ ಮಡಿಕೇರಿ ತಾಲೂಕಿನ ಕೊಯನಾಡಿನಲ್ಲಿ ಘಟನೆ ನಡೆದಿದೆ. ಕೊಯನಾಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾತ್ರಿ ವೇಳೆ ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ ಹಾನಿ ಯಾಗಿದೆ.

ಗುಡ್ಡದ ಮಣ್ಣು ಬಿದ್ದ ರಭಸಕ್ಕೆ ಶಾಲೆಯ ಗೋಡೆ ಧ್ವಂಸವಾಗಿದೆ. ಸುಮಾರು 80ಕ್ಕೂ ಅಧಿಕ ಮಕ್ಕಳು ಓದುತ್ತಿರುವ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ನಡೆಯುತ್ತಿದ್ದ ತರಗತಿಗೂ ಹಾನಿಯಾಗಿದೆ. ಮಳೆ ಹೆಚ್ಚಾದರೆ ಮಣ್ಣು ಮತ್ತಷ್ಟು ಕುಸಿಯುವ ಸಾಧ್ಯತೆ ಇದ್ದು, ಶಾಲೆ ಬಳಿಯ ಗುಡ್ಡದ ಮಣ್ಣು ತೆರವಿಗೆ ಪೋಷಕರು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಭಾರಿ ಗಾಳಿ-ಮಳೆಗೆ ರಸ್ತೆಗೆ ಬಿದ್ದ ಬೃಹತ್ ಮರ

ಮಲೆನಾಡು ಭಾಗದಲ್ಲಿ ಗಾಳಿ ಮಳೆ ಅಬ್ಬರ ಮುಂದುವರಿದಿದೆ. ಮೂಡಿಗೆರೆ ತಾಲೂಕಿನ ಸಂಪಿಗೆಖಾನ್ ಬಳಿ ಬೃಹತ್‌ ಮರವೊಂದು ಬುಡ ಸಮೇತ ಕಿತ್ತುಬಂದಿದೆ. ರಾಜ್ಯ ಹೆದ್ದಾರಿಗೆ ಬೃಹತ್ ಮರ ಉರುಳಿದೆ. ಮೂಡಿಗೆರೆಯಿಂದ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಇದಾಗಿದ್ದು, ಮರ ತೆರವು ಮಾಡಿ ಸುಗಮ ಸಂಚಾರಕ್ಕೆ ಸ್ಥಳೀಯರು ಅವಕಾಶ ಮಾಡಿಕೊಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Rain News: ಅಬ್ಬರಿಸುತ್ತಿರುವ ಮುಂಗಾರು: 3 ಜಿಲ್ಲೆಗೆ ರೆಡ್‌ ಅಲರ್ಟ್‌, ಇನ್ನೂ ನಾಲ್ಕು ದಿನ ಜೋರು ಮಳೆ

Rain News: ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ
ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

rain news bhagamandala
ಭಾಗಮಂಡಲದಲ್ಲಿ ರಸ್ತೆ ಮುಳುಗಡೆ, ಕೊಯ್ನಾಡಿನಲ್ಲಿ ಶಾಲೆ ಮೇಲೆ ಕುಸಿದ ಗುಡ್ಡ
Koo

ಬೆಂಗಳೂರು: ರಾಜ್ಯದಲ್ಲಿ ಮುಂಗಾರು (Monsoon) ಅಬ್ಬರಿಸುತ್ತಿದೆ. ಕರಾವಳಿ (Coast), ಮಲೆನಾಡಿನಲ್ಲಿ (Wester Gaht) ಮಳೆಯ ಆರ್ಭಟ (Rain News) ಜೋರಾಗಿದೆ. ಒಳನಾಡು, ಬಯಲುಸೀಮೆ ಹಾಗೂ ರಾಜಧಾನಿಯಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಕರಾವಳಿ, ಮಲೆನಾಡಿನಲ್ಲಿ ನದಿಗಳು ತುಂಬಿ ಹರಿಯುತ್ತಿದೆ; ಜಲಪಾತಗಳು ಧುಮ್ಮಿಕ್ಕುತ್ತಿವೆ. ಹಲವೆಡೆ ಧರೆ ಕುಸಿದು ಮನೆಗಳು ನೆಲಕಚ್ಚಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಅನಾಹುತಗಳಿಂದ ಎರಡೇ ದಿನಗಳಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಉಳ್ಳಾಲ ತಾಲೂಕಿನ ಕುತ್ತಾರುವಿನ ಮದನಿನಗರದಲ್ಲಿ ಮನೆ ಕುಸಿದು ನಾಲ್ವರು ಮೃತಪಟ್ಟಿದ್ದರೆ, ಮಂಗಳೂರು ನಗರದ ರೋಸಾರಿಯೊ ಶಾಲೆ ಹಿಂಭಾಗದಲ್ಲಿ ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ್ದಾರೆ. ಗುರುವಾರ ಸಂಜೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ಮಳೆ ನೀರಿನಲ್ಲಿ ವಿದ್ಯುತ್ ಪ್ರವಹಿಸಿ 20 ವರ್ಷದ ಯುವತಿ ಪ್ರತೀಕ್ಷಾ ಶೆಟ್ಟಿ ಅಸುನೀಗಿದ್ದಾರೆ.

ದಕ್ಷಿಣ ಕನ್ನಡ, ಚಿಕ್ಕಮಗಳೂರಿನಲ್ಲಿ ಶಾಲೆಗಳಿಗೆ ರಜೆ

ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರಿನ ಶಾಲೆಗಳಿಗೆ ಇಂದೂ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಶುಕ್ರವಾರ ಕೂಡಾ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ. ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೂಡಿಗೆರೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಿ ತಹಶೀಲ್ದಾರ್ ಪರಮಾನಂದ ಆದೇಶ ಹೊರಡಿಸಿದ್ದಾರೆ. ಪಿಯುಸಿ ಹಾಗೂ ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿವೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನದಲ್ಲಿ ಭಾರಿ ಮಳೆಗೆ ಮಣ್ಣು ಶಕ್ತಿ ಕಳೆದುಕೊಂಡಿದ್ದು, ಮನೆಯ ಆವರಣದಲ್ಲಿದ್ದ ಬಾವಿ ಕಣ್ಣೆದುರಿಗೇ ಕುಸಿದುಹೋಗಿದೆ. ಬಾವಿ ಕುಸಿಯುವ ದೃಶ್ಯ ಮೊಬೈಲ್ ಫೋನ್‌ನಲ್ಲಿ ಸೆರೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಬಳಿ ಭದ್ರಾ ನದಿ ಮೈತುಂಬಿದೆ. ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆಗೆ 4-5 ಅಡಿಯಷ್ಟೇ ಬಾಕಿ ಇದೆ. ಕಾಸರಗೋಡಿನ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತಗೊಂಡಿದೆ

ಮೈದುಂಬಿದ ಜೋಗ ಜಲಪಾತ

ಶಿವಮೊಗ್ಗ ಸುತ್ತಮುತ್ತಲೂ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ವಿಶ್ವವಿಖ್ಯಾತ ಜೋಗ ಜಲಪಾತ ಭೋರ್ಗರೆದು ಧುಮ್ಮಿಕ್ಕುತ್ತಿದೆ. ತೀರ್ಥಹಳ್ಳಿ ಭಾಗದಲ್ಲಿ ವರ್ಷಧಾರೆಯಿಂದಾಗಿ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಆಗುಂಬೆಯಲ್ಲಿ ಭೂಕುಸಿತ ಭೀತಿ ಇರುವುದರಿಂದ ಸೆಪ್ಟೆಂಬರ್ 15ರವರೆಗೆ ವಾಹನ ಸಂಚಾರ ಬಂದ್‌ ಮಾಡಲಾಗಿದೆ.

ಘಟ್ಟ ಪ್ರದೇಶದಲ್ಲಿನ ಮಳೆಗೆ ಕುಮಾಧಾರಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ಕುಕ್ಕೆ ಸುಬ್ರಹ್ಮಣ್ಯ ಬಳಿ ಸ್ನಾನಘಟ್ಟ, ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆ ಆಗಿದೆ. ನೇತ್ರಾವತಿ ನದಿ ಕೂಡಾ ಮೈದುಂಬಿ ಹರಿಯುತ್ತಿದೆ. ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತವಾಗಿದೆ. ಪವಿತ್ರ ಸ್ನಾನಘಟ್ಟ ಮುಳುಗಿ, ಮುಖ್ಯ ದ್ವಾರದವೆರಗೂ ನೀರು ತಲುಪಿದೆ. ಭಕ್ತರು ಪುಣ್ಯ ಸ್ನಾನ ಹಾಗೂ ಪಿಂಡ ಪ್ರದಾನ ಮಾಡಲು ಸಾಧ್ಯವಾಗುತ್ತಿಲ್ಲ. ಕೊಡಗಿನ ಕೊಯ್ನಾಡಿನಲ್ಲಿ ಶಾಲಾ ಕಟ್ಟಡ ಮೇಲೆ ಗುಡ್ಡ ಕುಸಿದು ಶಾಲಾ ಕೊಠಡಿಯ ಗೋಡೆ, ಕಿಟಕಿ ಜಖಂ ಆಗಿವೆ. ಶಾಲೆಗೆ ರಜೆ ಇದ್ದುದ್ದರಿಂದ ಅನಾಹುತ ತಪ್ಪಿದೆ. ಕಳೆದ ಮಳೆಗಾಲದಲ್ಲೂ ಶಾಲೆಯ ಮೇಲೆ ಗುಡ್ಡ ಕುಸಿದು ಹಾನಿಯಾಗಿತ್ತು.

ಅರಬ್ಬಿ ಸಮುದ್ರದಲ್ಲಿ ಭಾರಿ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಕಡಲ ಕೊರೆತ ಆರಂಭವಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯವುದನ್ನು ನಿಲ್ಲಿಸಿದ್ದಾರೆ. ಕಾರವಾರದ ದೇವಬಾಗ್ ಕಡಲತೀರದಲ್ಲಿ ಕಡಲಕೊರೆತ ಹೆಚ್ಚಾಗಿದ್ದು, ರೆಸಾರ್ಟ್‌ಗೆ ಹಾನಿಯಾಗಿದೆ. ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ
ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Agumbe Ghat: ಭಾರಿ ಮಳೆ; ಸೆ.15ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ!

Continue Reading

ಮಳೆ

Karnataka Weather : ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌; ತಿಂಗಳಾಂತ್ಯದವರೆಗೆ ಮೀನುಗಾರರಿಗೆ ನಿರ್ಬಂಧ

Karnataka Weather Forecast: ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಕರಾವಳಿ ಭಾಗಕ್ಕೆ ರೆಡ್‌ ಹಾಗೂ ಮಲೆನಾಡಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ತಿಂಗಳಾಂತ್ಯದವರೆಗೆ ಮೀನುಗಾರರಿಗೆ ಕಡಲತೀರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿದೆ. ಇನ್ನೊಂದು ವಾರ ಮಳೆಯು (Rain News) ಅಬ್ಬರಿಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಈ ದಿನ ಕರ್ನಾಟಕ ಕರಾವಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಹಗುರವಾದ ವರ್ಷಧಾರೆಯಾಗಲಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಭಾಗಗಳಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸುತ್ತಮುತ್ತ ಸಾಧಾರಣ ಮಳೆಯೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾದ ಮಧ್ಯಮದಿಂದ ಭಾರಿ ಮಳೆಯಾಗಲಿದ್ದು, ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಈ ಜಿಲ್ಲೆಗಳಲ್ಲಿ ಭಯಂಕರ ಮಳೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 45-55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ. ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನ ಜಿಲ್ಲೆಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.

ಮೀನುಗಾರರಿಗೆ ಮುಂದುವರಿದ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್‌ 30ರವರೆಗೆ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
CM Siddaramaiah
ಕರ್ನಾಟಕ11 mins ago

CM Siddaramaiah: ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

Dhanya Ramkumar heroine in choukidaar cinema
ಸ್ಯಾಂಡಲ್ ವುಡ್20 mins ago

Dhanya Ramkumar: ʻದಿಯಾʼ ಹೀರೊಗೆ ಜೋಡಿಯಾದ ದೊಡ್ಮನೆ ಬ್ಯೂಟಿ!

Road Accident A huge tree fell on the bike Riders are serious
ಉತ್ತರ ಕನ್ನಡ22 mins ago

Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

Viral Video
Latest28 mins ago

Viral Video: ಸಲಿಂಗ ಪ್ರೇಮ ಪ್ರಕರಣ; ಯುವತಿಯನ್ನು ಮೆಚ್ಚಿ ಮದುವೆಯಾದ ಟಿವಿ ನಟಿ!

US Presidential Election
ವಿದೇಶ29 mins ago

US Presidential Election: ನೀಲಿ ಚಿತ್ರ ತಾರೆ ಜತೆ ಡೊನಾಲ್ಡ್‌ ಟ್ರಂಪ್‌ ಸೆಕ್ಸ್;‌ ಚರ್ಚೆ ವೇಳೆ ಬೈಡೆನ್‌ ಆರೋಪ

Paris olympics 2024
ಕ್ರೀಡೆ29 mins ago

Paris Olympics 2024 : ಒಲಿಂಪಿಕ್ಸ್​​ ಸ್ಮರಣೆಗಾಗಿ ಜೆಎಸ್​ಡಬ್ಲ್ಯುನಿಂದ ಪ್ಯಾರಿಸ್​ನಲ್ಲಿ ವಿಶೇಷ ಪ್ರದರ್ಶನ

Viral Video
ವೈರಲ್ ನ್ಯೂಸ್34 mins ago

Viral Video: ಐಸ್‌ ಕ್ರೀಂನಲ್ಲಿ ಮನುಷ್ಯನ ಬೆರಳು! ತನಿಖೆಯಲ್ಲಿ ಬಯಲಾಯ್ತು ಭಯಾನಕ ಸತ್ಯ

Kalki 2898 AD 2
ಸಿನಿಮಾ38 mins ago

Kalki 2898 AD 2: ಶೀಘ್ರದಲ್ಲೇ ಬರಲಿದೆ ಕಲ್ಕಿ 2898ಎಡಿ ಭಾಗ- 2!

Bigg Boss OTT 3 Armaan Malik both Kritika Malik and Payal Malik in bigg bos house
ಬಾಲಿವುಡ್40 mins ago

Bigg Boss OTT 3: ಬಿಗ್‌ ಬಾಸ್‌ ಒಟಿಟಿಯಲ್ಲಿ ಇಬ್ಬರ ಹೆಂಡಿರ ಮುದ್ದಿನ ಗಂಡ; ಗೋಳೋ ಎಂದು ಅತ್ತ ಮೊದಲ ಪತ್ನಿ!

CM Siddaramaiah
ಕರ್ನಾಟಕ47 mins ago

CM Siddaramaiah: ಭಾರತ ಹಿಂದು ರಾಷ್ಟ್ರವಲ್ಲ; ಅಮರ್ತ್ಯ ಸೇನ್ ಹೇಳಿಕೆ ಸಮರ್ಥಿಸಿದ ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ6 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ22 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ24 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌