Moral Policing : ಪಣಂಬೂರು ಬೀಚ್‌ನಲ್ಲಿ ತಿರುಗಾಡುತ್ತಿದ್ದ ಯುವಕ-ಯುವತಿಗೆ ಕಿರುಕುಳ, ಮೂವರ ಅರೆಸ್ಟ್‌ - Vistara News

ದಕ್ಷಿಣ ಕನ್ನಡ

Moral Policing : ಪಣಂಬೂರು ಬೀಚ್‌ನಲ್ಲಿ ತಿರುಗಾಡುತ್ತಿದ್ದ ಯುವಕ-ಯುವತಿಗೆ ಕಿರುಕುಳ, ಮೂವರ ಅರೆಸ್ಟ್‌

Moral Policing : ಮಂಗಳೂರಿನ ಪಣಂಬೂರು ಬೀಚ್‌ಗೆ ಬಂದಿದ್ದ ಅನ್ಯ ಧರ್ಮೀಯ ಜೋಡಿಯ ಮೇಲೆ ನೈತಿಕ ಪೊಲೀಸ್‌ ಗಿರಿ ನಡೆಸಿದ ಮೂವರು ಶ್ರೀ ರಾಮ ಸೇನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಯುವಕ ಕೇರಳದವನು, ಯುವತಿ ಬೆಂಗಳೂರಿನವಳು ಎನ್ನಲಾಗಿದೆ.

VISTARANEWS.COM


on

Moral Policing Panambur Beach Mangalore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮಂಗಳೂರು: ಮಂಗಳೂರು ನಗರದ (Mangalore News) ಹೊರವಲಯದಲ್ಲಿ ಪಣಂಬೂರು ಬೀಚ್‌ಗೆ (Panambur Beach) ಬಂದಿದ್ದ ಬೇರೆ ಬೇರೆ ಧರ್ಮಕ್ಕೆ ಸೇರಿದ ಯುವಕ ಮತ್ತು ಯುವತಿಯ (Harrassing man and woman) ಮೇಲೆ ನೈತಿಕ ಪೊಲೀಸ್‌ಗಿರಿ (Moral Policing) ನಡೆದಿದೆ. ಪಣಂಬೂರು ಪೊಲೀಸರು ಕೂಡಲೇ ಕ್ರಮ ಕೈಗೊಂಡು ಮೂವರನ್ನು ಬಂಧಿಸಿದ್ದಾರೆ.

ಕೇರಳ ಮೂಲದ ಯುವಕ ಮತ್ತು ಬೆಂಗಳೂರು ಮೂಲದ ಯುವತಿ ಪರಸ್ಪರ ಪರಿಚಿತರಾಗಿದ್ದು, ಜತೆಯಾಗಿ ಪಣಂಬೂರು ಬೀಚ್‌ನಲ್ಲಿ ತಿರುಗಾಡಲು ಬಂದಿದ್ದರು. ಆದರೆ, ಹೀಗೆ ಬಂದಿದ್ದ ಯುವಕ ಮುಸ್ಲಿಂ ಎಂಬ ಸಂಶಯ ಅಲ್ಲಿದ್ದ ಕೆಲವರಿಗೆ ಬಂದಿತ್ತು. ಹಾಗಾಗಿ ಅವರು ಸ್ಥಳೀಯ ಶ್ರೀರಾಮ ಸೇನೆಯ ಯುವಕರಿಗೆ ವಿಷಯ ತಿಳಿಸಿದ್ದರು. ಶ್ರೀ ರಾಮ ಸೇನೆಯ ಯುವಕರು ಬೀಚ್‌ಗೆ ಆಗಮಿಸಿ ಯುವಕ-ಯುವತಿ ಜೋಡಿಯನ್ನು ಅಡ್ಡಗಟ್ಟಿದರು.

ಇಬ್ಬರೂ ಬೇರೆ ಬೇರೆ ಧರ್ಮಗಳಿಗೆ ಸೇರಿದವರಾಗಿದ್ದು ಏಕೆ ಒಟ್ಟಿಗೆ ಇದ್ದೀರಿ ಎಂದು ಪ್ರಶ್ನಿಸಿದರು. ನಿಮ್ಮ ಮನೆಗಳಿಗೆ ವಿಷಯ ತಿಳಿಸುವುದಾಗಿ ಬೆದರಿಸಿದರು. ಅವರ ಮೇಲೆ ಹಲ್ಲೆ ನಡೆಸಲು ಮುಂದಾದರು. ಆಗ ಅವರು ಕೂಡಾ ನಮ್ಮನ್ನು ಪ್ರಶ್ನೆ ಮಾಡಲು ನೀವು ಯಾರು ಎಂದು ತಿರುಗಿ ಪ್ರಶ್ನಿಸಿದರು.

ಒಂದು ಹಂತದಲ್ಲಿ ಗಲಾಟೆಯಾಗುವ ಸನ್ನಿವೇಶ ನಿರ್ಮಾಣವಾದಾಗ ಪಣಂಬೂರು ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಆರೋಪಿಗಳನ್ನು ವಶಕ್ಕೆ ಪಡೆದರು. ಅವರ ವಿಚಾರಣೆ ನಡೆಸಿ ಬಂಧಿಸಲಾಗಿದೆ. ಇವರೆಲ್ಲರೂ ಶ್ರೀರಾಮ ಸೇನೆಗೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : Moral Policing : ಹಿಂದು-ಮುಸ್ಲಿಂ ಯಾರೇ ಆಗಲಿ ನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ; ಸಿಎಂ, ಡಿಕೆಶಿ ವಾರ್ನಿಂಗ್

ಖಬರಸ್ಥಾನದ ಮರದ ಕೊಂಬೆ ಕಡಿದುದಕ್ಕೆ ಕೋಮು ಗಲಾಟೆ

ಶಿವಮೊಗ್ಗ: ಶಿವಮೊಗ್ಗದ ಹೊಳೆಹೊನ್ನೂರಿನ ಜಂಬರಘಟ್ಟ ಗ್ರಾಮದಲ್ಲಿ ಖಬರಸ್ಥಾನದಲ್ಲಿದ್ದ (ಸ್ಮಶಾನ) ಮರದ ಕೊಂಬೆಗಳನ್ನು ಕಡಿದ ಕಾರಣಕ್ಕೆ ಎರಡು ಕೋಮುಗಳ (Communal violence) ನಡುವೆ ಗಲಾಟೆ ನಡೆದಿತ್ತು. ಘಟನೆ ಸಂಬಂಧ ಇದೀಗ ಹೊಳೆಹೊನ್ನೂರು ಪೊಲೀಸರು ಜಾತಿ ನಿಂದನೆ ಹಾಗೂ ಗುಂಪುಗಾರಿಕೆ ಹಾಗೂ ಹಲ್ಲೆ ಮಾಡಿದ ಕಾರಣಕ್ಕೆ ಎಫ್‌ಐಆರ್ ದಾಖಲಿಸಿದ್ದಾರೆ. ಜತೆಗೆ ಹಿಂದು ಯುವಕರ ಮೇಲೆ ಹಲ್ಲೆ ನಡೆಸಿದ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸುತ್ತಿದ್ದಾರೆ. ಎರಡು ಕೋಮುಗಳ ನಡುವಿನ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಎಸ್‌ಪಿ ಮಿಥುನ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಗಲಾಟೆ ಸಂಬಂಧ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: Murder Case : ದುಡ್ಡು ಕೊಡೋ ಎಂದವನ ಮುಖಕ್ಕೆ ಕಡಗದಿಂದ ಗುದ್ದಿ, ಚಪ್ಪಲಿಯಿಂದ ತುಳಿದು ಕೊಂದ ಸ್ನೇಹಿತ

ಏನಿದು ಘಟನೆ?

ಫೆ.4 ರಂದು ಖಬರಸ್ಥಾನದಲ್ಲಿದ್ದ ಮರಗಳನ್ನು ಕಡಿದ ಆರೋಪದಲ್ಲಿ ಹಿಂದು ಯುವಕರ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಜಂಬರಘಟ್ಟ ಗ್ರಾಮದಲ್ಲಿ ನಡೆದಿತ್ತು. ಮರ ಕಡಿದಿದ್ದಾರೆ ಎಂಬ ಕಾರಣಕ್ಕೆ ಇಬ್ಬರು ಯುವಕರನ್ನು, ಮಸೀದಿಯಲ್ಲಿ ಮುಸ್ಲಿಂ ಯುವಕರ ಗುಂಪು ಇಟ್ಟುಕೊಂಡಿತ್ತು.

ಈ ವಿಷಯ ತಿಳಿದು ಯುವಕರನ್ನು ಬಿಡಿಸಿಕೊಂಡು ಬರಲು ಹಿಂದು ಯುವಕರ ಗುಂಪು ಹೋಗಿದೆ. ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸಿದ್ದಾರೆ. ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದರಿಂದ 6 ಯುವಕರು ಗಾಯಗೊಂಡಿದ್ದರು. ಗಾಯಾಳುಗಳನ್ನು ಹೊಳೆಹೊನ್ನೂರು ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಘಟನೆ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇತ್ತ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಪೊಲೀಸ್‌ ಠಾಣೆ ಪ್ರತಿಭಟನೆಯನ್ನೂ ನಡೆಸಿದ್ದರು. ನಮ್ಮ ಮನೆಗಳಿಗೆ ನುಗ್ಗಿ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಗ್ರಾಮದ ಮಹಿಳೆಯರು ಆರೋಪಿಸಿದ್ದರು.

ಹೊಳೆಹೊನ್ನೂರು ಪೊಲೀಸ್ ಠಾಣೆ ಎದುರು ಭಾನುವಾರ ರಾತ್ರಿ ಪೂರ್ತಿ ನೂರಾರು ಸಂಖ್ಯೆಯಲ್ಲಿ ಜನರು ಸೇರಿ, ಹಲ್ಲೆ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸ್ಥಳಕ್ಕೆ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಡರಾತ್ರಿ ತೆರಳಿದ್ದ ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್, ಪ್ರತಿಭಟನಾಕಾರರ ಮನವಲಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading

ಮಳೆ

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Karnataka Rain : ಸತತ ಮಳೆ ಹಿನ್ನೆಲೆಯಲ್ಲಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಶಾಲೆಗಳಿಗೆ ಇಂದು ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

Karnataka Rain

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ (Karnataka Rain) ನಿರಂತರವಾಗಿ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿ ಮಾರ್ಪಾಡಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಮೌಖಿಕವಾಗಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Continue Reading

ಮಳೆ

Karnataka Rain: ತೊಯ್ದು ತೊಪ್ಪೆಯಾದ ಚಿಕ್ಕಮಗಳೂರು, ಶಿವಮೊಗ್ಗ; ನಾಳೆಗೂ ಭಾರಿ ಮಳೆ ಎಚ್ಚರಿಕೆ

VISTARANEWS.COM


on

Karnataka Rain

ಚಿಕ್ಕಮಗಳೂರು: ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶದಲ್ಲೇ ಭಾರಿ (Karnataka Rain) ಮಳೆಯಾಗುತ್ತಿದೆ. ಹಿಂಗಾರು ಮಳೆಗೆ ಪಶ್ಚಿಮಘಟ್ಟಗಳ ತಪ್ಪಲು ಅಲ್ಲೋಲ-ಕಲ್ಲೋಲವಾಗಿದೆ. ಚಿಕ್ಕಮಗಳೂರಿನ ದತ್ತಪೀಠದ ರಸ್ತೆಯಲ್ಲಿ 3 ಅಡಿ ಎತ್ತರದಲ್ಲಿ ನೀರು ಹರಿದಿದೆ. ಎಷ್ಟೇ ಮಳೆ ಬಂದರೂ ಪಶ್ಚಿಮ ಘಟ್ಟಕ್ಕೆ ಲೆಕ್ಕವೇ ಅಲ್ಲ, ಸಾವಿರಾರು ಅಡಿ ಆಳ, ಮುಗಿಲೆತ್ತರದ ಬೆಟ್ಟಗುಡ್ಡಗಳ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಕೆರೆಯಂತೆ ನೀರು ಹರಿಯುತ್ತಿದೆ. ಮಳೆರಾಯನ ಅಬ್ಬರಕ್ಕೆ ಪ್ರವಾಸಿಗರು ತೊಯ್ದು ತೊಪ್ಪೆ ಆಗಿದ್ದಾರೆ. ಮಳೆ ಮಧ್ಯೆ ಸಿಲುಕಿ ಚಿಕ್ಕಮಗಳೂರು ತಾಲ್ಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಸಹವಾಸವೇ ಬೇಡ ಎನ್ನುತ್ತಿದ್ದಾರೆ ಪ್ರವಾಸಿಗರು.

ತರೀಕೆರೆ ತಾಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಗೆ ಹೊಲ-ಗದ್ದೆ, ತೋಟಗಳಿಗೆ ನೀರು ನುಗ್ಗಿದೆ. ಸಣ್ಣಬೋಕಿಕೆರೆ, ಗೊಲ್ಲರಹಳ್ಳಿ ಹೊಲಗಳು ಜಲಾವೃತಗೊಂಡಿದೆ. ಕೋರನಹಳ್ಳಿ, ಚಟ್ಟನಹಳ್ಳಿ, ಶಿವಪುರ ಭಾಗದಲ್ಲಿ ಹಳ್ಳಿ ಹರಿದು ಭಾರೀ ಅನಾಹುತವಾಗಿದೆ. ಗೊಲ್ಲರಹಳ್ಳಿಯಲ್ಲಿ ಹೂವಿನಹೊಲದಲ್ಲಿ ಮಳೆ ‌ನೀರು ನಿಂತಿದೆ.

ಕಾಫಿನಾಡ ಮಹಾಮಳೆಗೆ ಮಲೆನಾಡು ಭಾಗದ ಜನರು ಕಂಗಾಲಾಗಿದ್ದಾರೆ. ಭಾರೀ ಮಳೆಗೆ ಗ್ರಾಮೀಣ ಭಾಗದ ಸೇತುವೆಗಳು ಜಲಾವೃತಗೊಂಡಿದೆ. ಮುತ್ತೋಡಿ ವ್ಯಾಪ್ತಿಯ ಗ್ರಾಮದ ಜನ ಹಳ್ಳ ದಾಟಲು ಪರದಾಡಿದರು. ವೃದ್ಧೆಯನ್ನ ಹಳ್ಳಿಗರು ಅಂಗೈಲಿ ಹೊತ್ತು ಸಾಗಿದ ಘಟನೆ ಚಿಕ್ಕಮಗಳೂರು ತಾಲೂಕಿನ ಮಲಗಾರು ಗ್ರಾಮದಲ್ಲಿ ನಡೆದಿದೆ. ಮಲಗಾರು ಗ್ರಾಮ ಮುತ್ತೋಡಿ ಅರಣ್ಯ ವ್ಯಾಪ್ತಿಯ ಕುಗ್ರಾಮ ಇದಾಗಿದೆ. ನಿನ್ನೆ ಸಂಜೆ ಸುರಿದ ಭಾರೀ ಮಳೆಯಿಂದ ಅಪಾರ ಪ್ರಮಾಣದಲ್ಲಿ ನೀರು ಹರಿದು, ಕಿರು ಸೇತುವೆ ತುಂಬಿ ಹೋಗಿದೆ.

ಇತ್ತ ಕಳೆದ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಿಗೆ‌ ನೀರು ನುಗ್ಗಿದೆ. ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮ ನಗರದ ದೇವರಾಜು ಅರಸು ಬಡಾವಣೆಯ ಮನೆಗಳು ಜಲಾವೃತಗೊಂಡಿದೆ. ರಸ್ತೆ ಮೇಲೆ ನೀರು ಉಕ್ಕಿ ಹರಿಯುತ್ತಿದ್ದು, ಜನರ ಓಡಾಟಕ್ಕೂ ಸಂಕಷ್ಟ ಎದುರಾಗಿದೆ.

5 ದಶಕಗಳ ನಂತರ ಕೋಡಿ ಬಿದ್ದ ಹುಲಿಕೆರೆ ಗ್ರಾಮದ ಕೆರೆ

ಕಳೆದ ಮೂರ್ನಾಲ್ಕು ದಿನದಿಂದ ಸುರಿಯುತ್ತಿರುವ ಮಳೆಗೆ ಐದು ದಶಕಗಳ ನಂತರ ಹುಲಿಕೆರೆ ಗ್ರಾಮದ ಕೆರೆ ಕೋಡಿ ಬಿದ್ದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿರುವ ಹುಲಿಕೆರೆ ನೋಡಲು ಜನಸಾಗರವೇ ಹರಿದುಬಂದಿತ್ತು. ಕಲ್ಯಾಣ ಚಾಲುಕ್ಯರ ಕಾಲಘಟ್ಟದಲ್ಲಿ ಕಟ್ಟಿಸಿದ ಕೆರೆಯು ಹುಲಿಕೆರೆ ಗ್ರಾಮ ಸೇರಿ ಸುತ್ತಮುತ್ತಲಿನ ಹತ್ತಾರು ಹಳ್ಳಿಯ ಜೀವನಾಡಿಯಾಗಿದೆ. ಕೆರೆ ಭರ್ತಿಯಾಗಿ ಕೋಡಿ ಬಿದ್ದಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕೆರೆಗಳು ಭರ್ತಿ

ಬರದ ನಾಡು ಎಂದೇ ಕರೆಯುತ್ತಿದ್ದ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಗೆ ತಾಲೂಕಿನ ಬಹುತೇಕ ಕೆರೆಗಳು ಭರ್ತಿಯಾಗಿದೆ. ಬತ್ತಿ ಹೋಗಿದ್ದ ಬೋರ್ ವೆಲ್‌ನಲ್ಲಿ ನೀರು ಉಕ್ಕಿ ಬರುತ್ತಿದೆ. ಜಗಳೂರು ತಾಲ್ಲೂಕಿನ ಕಾನನಕಟ್ಟೆ, ಅಣಬೂರು ಗ್ರಾಮದಲ್ಲಿ ನೀರು ಉಕ್ಕಿ ಬರುತ್ತಿದೆ. ಅಂತರ್ಜಲ ಹೆಚ್ಚಾಗಿ ಬೋರ್ ವೆಲ್ ಗಳಲ್ಲಿ ನೀರು ಉಕ್ಕಿ ಬರುತ್ತಿದ್ದು, ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

ಮಲೆನಾಡಿನಂತಾದ ಹೊಸಪೇಟೆ ಪಟ್ಟಣ

ವಿಜಯನಗರದ ಹೊಸಪೇಟೆ ಪಟ್ಟಣ ಮಿನಿ ಮಲೆನಾಡಿನಂತಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇಡೀ ಹೊಸಪೇಟೆ ತಾಲೂಕು ಮಂಜಿನಿಂದ ಆವರಿಸಿದೆ. ಐತಿಹಾಸಿಕ ಜೋಳದ ರಾಶಿ ಗುಡ್ಡ ಸೇರಿದಂತೆ ನಾನಾ ಕಡೆ ಮಂಜಿನ ವಾತಾವರಣ ಕ್ಕೆ ಜನರು ಫುಲ್ ಫಿದಾ ಆಗಿದ್ದಾರೆ. ಮಂಜಿನಲ್ಲೇ ಕುಳಿತು ಪ್ರಕೃತಿ ಸೌಂದರ್ಯ ಸವಿಯುತ್ತಿದ್ದಾರೆ.

Continue Reading
Advertisement
Latest9 hours ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest10 hours ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

Latest11 hours ago

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

bigbreaking11 hours ago

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

Latest12 hours ago

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

Latest14 hours ago

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

Latest15 hours ago

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

Rakshit Shetty Richard Anthony Produce By Hombale
ಅವಿಭಾಗೀಕೃತ15 hours ago

ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Latest16 hours ago

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

Latest17 hours ago

ಯಶ್ ಫ್ಯಾನ್ಸ್‌ಗೆ ಶಾಕ್: ಮತ್ತೆ ಮುಂದೂಡಲ್ಪಟ್ಟ ‘ಟಾಕ್ಸಿಕ್’ ರಿಲೀಸ್ ಡೇಟ್! ಹೊಸ ದಿನಾಂಕದ ಬಗ್ಗೆ ಅಪ್‌ಡೇಟ್ ನೀಡಿದ ಚಿತ್ರತಂಡ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌