Praveen Nettaru Murder | ಪುತ್ತೂರಿನಲ್ಲಿ ಪರಿಸ್ಥಿತಿ ಉದ್ವಿಗ್ನ, ಹಲವೆಡೆ ಸ್ವಯಂಪ್ರೇರಿತ ಬಂದ್‌ - Vistara News

ಕ್ರೈಂ

Praveen Nettaru Murder | ಪುತ್ತೂರಿನಲ್ಲಿ ಪರಿಸ್ಥಿತಿ ಉದ್ವಿಗ್ನ, ಹಲವೆಡೆ ಸ್ವಯಂಪ್ರೇರಿತ ಬಂದ್‌

ಸುಳ್ಯ ತಾಲೂಕಿನಲ್ಲಿ ಪ್ರವೀಣ್ ನೆಟ್ಟಾರು (Praveen Nettaru Murder)ಹತ್ಯೆಗೆ ಸಂಬಂಧಿಸಿದಂತೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಪೊಲೀಸರು ತನಿಖೆ ಅರಂಭಿಸಿದ್ದಾರೆ. ಹಿಂದೂ ಸಂಘಟನೆಗಳು ಬಂದ್‌ಗೆ ಕರೆ ಕೊಟ್ಟಿವೆ.

VISTARANEWS.COM


on

Praveen Nettaru
ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸುಳ್ಯ: ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ (ಜು.26) ರಾತ್ರಿ ಬಿಜೆಪಿ ಯುವ ಮೋರ್ಚಾ ಮುಖಂಡನ ಭೀಕರ ಹತ್ಯೆ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಕರಾವಳಿಯ ಹಲವೆಡೆ ಸ್ವಯಂಪ್ರೇರಿತ ಬಂದ್‌ ನಡೆಸಲಾಗಿದೆ. ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು (೨೯) (Praveen Nettaru Murder) ಅವರನ್ನು ಅವರ ಅಂಗಡಿಯಲ್ಲಿಯೇ ಹತ್ಯೆ ಮಾಡಲಾಗಿತ್ತು.

ಇದೀಗ ಪುತ್ತೂರಿನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಉದ್ರಿಕ್ತರಿಂದ ಕಲ್ಲು ತೂರಾಟ ನಡೆದಿದೆ. ಹಂತಕರನ್ನು ಕೂಡಲೇ ಸುಬಂಧಿಸುವಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ. ರಾತೋರಾತ್ರಿ ಆಸ್ಪತ್ರೆಯ ಎದುರು ನೂರಾರು ಮಂದಿ ಜಮಾಯಿಸಿ ಪ್ರತಿಭಟನೆಯಲ್ಲಿ ತೊಡಗಿದ್ದರು. ಇದೀಗ ಪೊಲೀಸರು ಮೂರು ಆಯಾಮದಲ್ಲಿ ತನಿಖೆ ಅರಂಭಿಸಿದ್ದಾರೆ. ದ.ಕ ಜಿಲ್ಲಾ ಎಸ್ಪಿ ಋಷಿಕೇಶ್‌ ಸೋನಾವಣೆ ಸ್ವತಃ ತನಿಖೆಗೆ ಇಳಿದಿದ್ದು, ಕೋಮು ದ್ವೇಷದಿಂದ ಹತ್ಯೆ ನಡೆದಿದೆಯಾ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | ಕೇರಳ ರಿಜಿಸ್ಟ್ರೇಷನ್‌ ಬೈಕ್‌ನಲ್ಲಿ ಬಂದಿದ್ದ 3 ದುಷ್ಕರ್ಮಿಗಳಿಂದ ಪ್ರವೀಣ್‌ ನೆಟ್ಟಾರು ಹತ್ಯೆ

ಪ್ರವೀಣ್‌ ಹತ್ಯೆ ಕುರಿತು ಸಚಿವ ಸುನೀಲ್‌ ಕುಮಾರ್‌ ಟ್ವೀಟ್‌ ಮಾಡಿ ʻಸರ್ಕಾರ ಹಾಗೂ ಸಮಾಜ ಪ್ರವೀಣ್‌ ಕುಟುಂಬದ ಜತೆಯಿದೆ. ಹಿಂದುಗಳ ಒಗ್ಗಟ್ಟು ಒಡೆಯುವುದಕ್ಕೆ‌ ಮತಾಂಧ ಶಕ್ತಿಗಳು ನಡೆಸುತ್ತಿರುವ ಇಂಥ ಹೇಯ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲʼ ಎಂದಿದ್ದಾರೆ.

ಬೈಕ್‌ನಲ್ಲಿ ಬಂದಿದ್ದ ಮೂವರು ಪ್ರವೀಣ್‌ ನೆಟ್ಟಾರು ಅವರನ್ನು ಮಾರಕಾಸ್ತ್ರಗಳಿಂದ ಕತ್ತು ಸೀಳಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಈ ಬೈಕ್‌ ಕೇರಳ ರಿಜಿಸ್ಟ್ರೇಷನ್‌ ಹೊಂದಿತ್ತು ಎಂಬುದು ಗೊತ್ತಾಗಿದೆ. ಹೀಗಾಗಿ ಕೇರಳ ಮೂಲದ ದುಷ್ಕರ್ಮಿಗಳು ಕೊಲೆ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಬೈಕ್‌ ಬಗ್ಗೆ ಮತ್ತಷ್ಟು ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್‌ ಅವರನ್ನು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

ಪುತ್ತೂರು ತಾಲ್ಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ಬಳಿಕ ಬುಧವಾರ (ಜು.27) ಬೆಳಗ್ಗೆ ೯ ಗಂಟೆಗೆ ಪ್ರವೀಣ್‌ ನೆಟ್ಟಾರು ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತಿದೆ. ಆಸ್ಪತ್ರೆ ಬಳಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಹುಟ್ಟೂರು ನೆಟ್ಟಾರಿನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ಬಂದ್‌ಗೆ ಕರೆ: ಪ್ರವೀಣ್‌ ಹತ್ಯೆಯನ್ನು ಖಂಡಿಸಿ ಸ್ಥಳೀಯ ಹಿಂದೂ ಪರ ಸಂಘಟನೆಗಳು ಇಂದು ಪುತ್ತೂರು, ಸುಳ್ಯ, ಕಡಬ ತಾಲ್ಲೂಕು ಬಂದ್‌ಗೆ ಕರೆ ನೀಡಿವೆ. ಈ ನಡುವೆ ದುಷ್ಕರ್ಮಿಗಳ ಪತ್ತೆಗೆ ಬೆಳ್ಳಾರೆ, ಪುತ್ತೂರು, ಕೇರಳದ ಗಡಿ ಭಾಗದಲ್ಲಿ ಮಂಗಳೂರು ಪೊಲೀಸರು ನಾಕಾಬಂದಿ ಮಾಡಿದ್ದಾರೆ.

ಇದನ್ನೂ ಓದಿ | ಸುಳ್ಯದ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೋಲಾರ

Blackmail Case: ಗ್ರಾಮ ಪಂಚಾಯಿತಿಯಲ್ಲೇ ಬಲವಂತದ ರೊಮ್ಯಾನ್ಸ್‌, ಬ್ಲ್ಯಾಕ್‌ಮೇಲ್‌ ಎಸಗಿದ ಬಿಲ್‌ ಕಲೆಕ್ಟರ್‌ ಬಂಧನ

Blackmail Case: ಒಂದೆಡೆ ರಾಜ್ಯಾದ್ಯಂತ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದ್ದರೆ, ಇನ್ನೊಂದೆಡೆ ಈ ಬಿಲ್‌ ಕಲೆಕ್ಟರ್‌ ಗ್ರಾಮ ಪಂಚಾಯಿತಿ ಕಚೇರಿಯಲ್ಲಿಯೇ, ಕೆಲಸದ ಅವಧಿಯಲ್ಲೇ ರೊಮ್ಯಾನ್ಸ್‌ ನಡೆಸಿ ಅದನ್ನು ಚಿತ್ರೀಕರಿಸಿಕೊಂಡಿದ್ದ. ಅದನ್ನು ಹಂಚಿದ್ದ. ಈಗ ಮಹಿಳಾ ಉದ್ಯೋಗಿಯಿಂದ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಾಗಿದೆ.

VISTARANEWS.COM


on

blackmail case kgf
Koo

ಕೋಲಾರ: ಕೆಜಿಎಫ್‌ನ ರಾಮಸಾಗರ ಗ್ರಾಮ ಪಂಚಾಯಿತಿ (gram Panchayat) ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಯೊಬ್ಬರ ಜತೆ ಖಾಸಗಿ ಕ್ಷಣಗಳನ್ನು (romance) ಚಿತ್ರೀಕರಿಸಿಕೊಂಡು, ಅದನ್ನು ಹಂಚಿ ಬ್ಲ್ಯಾಕ್‌ಮೇಲ್‌ (Blackmail Case) ಎಸಗಿದ ಆರೋಪ ಎದುರಿಸುತ್ತಿರುವ ಬಿಲ್‌ ಕಲೆಕ್ಟರ್‌ ಅರ್ಜುನ್‌ ಹರಿಕೃಷ್ಣ ಎಂಬಾತನನ್ನು ಬೇತಮಂಗಲ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ವಿರುದ್ಧ ಲೈಂಗಿಕ ಕಿರುಕುಳ (Physical Abuse), ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಗೆ ಮುಜುಗರ, ಖಾಸಗಿ ಕ್ಷಣಗಳ ಫೋಟೋ ಹಂಚಿಕೆ ಹಾಗೂ ಬೆದರಿಕೆ (threat) ಒಡ್ಡಿದ ಕುರಿತು ಕೋಲಾರ ಜಿಲ್ಲೆ ಬೇತಮಂಗಲ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದಾರೆ. ಗ್ರಾಮ ಪಂಚಾಯಿತಿಯ ಕಚೇರಿಯ ಮೊದಲ ಮಹಡಿಯ ಕೊಠಡಿಯಲ್ಲಿ ಸಿಸಿಟಿವಿ ಸಂಪರ್ಕ ಕಡಿತಗೊಳಿಸಿದ ಆರೋಪಿಯು ತಮ್ಮ ಖಾಸಗಿ ಕ್ಷಣಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದ. ಸಂತ್ರಸ್ತೆ ನೀಡಿದ ದೂರಿನ ಮೇಲೆ ಅರ್ಜುನ್ ವಿಚಾರಣೆ ನಡೆಸಿದ ಬೇತಮಂಗಲ ಪೊಲೀಸರು ನಂತರ ಆತನನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಹೋದಾಗ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ ನಡೆಯಿತು. ತನ್ನ ಮಗನನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗದಂತೆ ಆರೋಪಿಯ ತಾಯಿ ಪೊಲೀಸರ ಜೀಪ್‌ ಮುಂದೆ ಅಡ್ಡಲಾಗಿ ಮಲಗಿ ತಡೆ ಒಡ್ಡಿದರು. ಕೊನೆಗೆ ಪೊಲೀಸರು ಅವರನ್ನು ಪಕ್ಕಕ್ಕೆ ಸರಿಸಿ ಆರೋಪಿಯನ್ನು ಕರೆದೊಯ್ದರು.

ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಮಸಾಗರ ಗ್ರಾಮ ಪಂಚಾಯಿತಿಯ 14 ಸದಸ್ಯರು ಮಂಗಳವಾರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಹರ್ತಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಆರೋಪಿ ಮತ್ತು ಸಂತ್ರಸ್ತೆಯನ್ನು ಸೇವೆಯಿಂದ ಅಮಾನತು ಮಾಡಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿರುವುದಾಗಿ ಹರ್ತಿ ತಿಳಿಸಿದ್ದಾರೆ. ಪ್ರಕರಣದ ತನಿಖೆಯನ್ನು ಸೈಬರ್ ಇನ್‌ಸ್ಪೆಕ್ಟರ್ ಲಕ್ಷ್ಮಿನಾರಾಯಣ ನಡೆಸುತ್ತಿದ್ದಾರೆ.

ಒಂದೆಡೆ ರಾಜ್ಯಾದ್ಯಂತ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದ್ದರೆ, ಇನ್ನೊಂದೆಡೆ ಈ ಬಿಲ್‌ ಕಲೆಕ್ಟರ್‌ ಗ್ರಾಮ ಪಂಚಾಯಿತಿ ಕಚೇರಿಯಲ್ಲಿಯೇ, ಕೆಲಸದ ಅವಧಿಯಲ್ಲೇ ರೊಮ್ಯಾನ್ಸ್‌ ನಡೆಸಿ ಅದನ್ನು ಚಿತ್ರೀಕರಿಸಿಕೊಂಡಿದ್ದ. ಅದನ್ನು ಹಂಚಿದ್ದ. ಈಗ ಮಹಿಳಾ ಉದ್ಯೋಗಿಯಿಂದ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಾಗಿದೆ.

ಪಂಚಾಯತಿ ಸಿಬ್ಬಂದಿಯ ಈ ಕಿಸ್ಸಿಂಗ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ಹಾಗೂ ಮಹಿಳಾ ಉದ್ಯೋಗಿ ಜೊತೆಗಿರುವ ಖಾಸಗಿ ಫೋಟೋಗಳು ವೈರಲ್ ಆಗಿವೆ. ಆರೋಪಿ ಅರ್ಜುನ್ ಹರಿಕೃಷ್ಣ ಗ್ರಾಮ ಪಂಚಾಯಿತಿ ಕಾರ್ಯಾಲಯದ ಮೊದಲ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಯ ಬಳಿ ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ. ವಿರೋಧಿಸಿದಾಗ, ನಿನ್ನ ಗಂಡನಿಗೆ ಗ್ರಾಮ ಪಂಚಾಯಿತಿಯಲ್ಲಿ ಜಲಗಾರ ಕೆಲಸ ಕೊಡಿಸುತ್ತೇನೆ. ಜೊತೆಗೆ ನಿಮಗೆ ವಾಸಕ್ಕೆಂದು ಪಂಚಾಯಿತಿಯಿಂದ ಉಚಿತ ಸರ್ಕಾರಿ ಮನೆ ಕಟ್ಟಿಸಿಕೊಡುತ್ತೇನೆ ಎಂದು ಆಮಿಷ ಒಡ್ಡಿದ್ದಾನೆ. ತನಗೆ ಮುತ್ತಿಡುವುದಕ್ಕೆ ಬಲವಂತವಾಗಿ ಪ್ರೇರೇಪಿಸಿ ಅದನ್ನು ತನ್ನ ಮೊಬೈಲ್‌ನಲ್ಲಿ ಸೆಲ್ಫಿ ಫೋಟೋ ತೆಗೆದುಕೊಂಡಿದ್ದಾನೆ. ನಂತರದ ದಿನಗಳಲ್ಲಿ ಲೈಂಗಿಕವಾಗಿ ಸಹಕರಿಸುವಂತೆ, ಇಲ್ಲದಿದ್ದರೆ ಕೆಲಸದಿಂದ ತೆಗೆದುಹಾಕುತ್ತೇನೆ ಎಂದು ಬೆದರಿಸಿದ್ದಾನೆ. ಮುತ್ತು ಕೊಡುವ ಕ್ಷಣಗಳ ಫೋಟೋ ವೈರಲ್‌ ಮಾಡಡುತ್ತೇನೆ ಎಂದು ಬೆದರಿಸಿದ್ದಾನೆ. ಆತನ ಕಿರುಕುಳದಿಂದ ನನ್ನ ಸಂಸಾರ ಹಾಗೂ ಜೀವನಕ್ಕೆ ಮುಳುವಾಗಿದೆ. ಈಗ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Continue Reading

ರಾಜಕೀಯ

Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

Prajwal Revanna Case: ಸಂತ್ರಸ್ತರ ಪೋಟೊ, ವಿಡಿಯೊ ದಾಖಲಿಸಿ ಇಟ್ಟುಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ? ಇದು ಹಲವಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಹಗರಣವೆಂದು ತಿಳಿಯುತ್ತದೆ. ಅಲ್ಲದೆ, ದೂರು ಕೊಡದಂತೆ ಬೆದರಿಕೆ ಹಾಕುವುದು, ಕಿಡ್ನ್ಯಾಪ್‌ ಮಾಡುವುದನ್ನೂ ಮಾಡಲಾಗಿದೆ. ರಾಜಕೀಯ ನಾಯಕರು ತಮ್ಮ ಹಿತಾಸಕ್ತಿಗಾಗಿ ಹಾಗೂ ಚುನಾವಣೆಯ ಲಾಭಕ್ಕಾಗಿ ಇದನ್ನೆಲ್ಲ ಬಳಸಿಕೊಳ್ಳುತ್ತಿರುವುದು ಸಹ ಆಘಾತಕಾರಿ ಅಂಶವಾಗಿದೆ ಎಂದು ಸಾಹಿತಿಗಳು ಪತ್ರದಲ್ಲಿ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮಹಿಳೆಯರು ಸುರಕ್ಷಿತವಾಗಿರಲು ಸಾಧ್ಯವೇ ಎಂಬ ಪ್ರಶ್ನೆ ಮೂಡಿದೆ ಎಂದೂ ಹೇಳಿದ್ದಾರೆ.

VISTARANEWS.COM


on

Prajwal Revanna Case Can women trust your government Writers open letter to Siddaramaiah
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಹಿತಿಗಳು, ಮಹಿಳಾ ಸಂಘಟನೆಗಳವರು ಬಹಿರಂಗ ಪತ್ರ ಬರೆದಿದ್ದಾರೆ. ಈ ಕೇಸ್‌ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಜತೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದ ಬಗ್ಗೆಯೂ ಅಸಮಾಧಾನವನ್ನು ಹೊರಹಾಕಿದ್ದಾರೆ. ಇನ್ನು ಈ ಸಂಬಂಧ 16 ಬೇಡಿಕೆಗಳನ್ನು ಮುಂದಿಡಲಾಗಿದೆ.

ಹಿರಿಯ ಲೇಖಕರಾದ ಡಾ. ವಿಜಯಾ, ಸಾಹಿತಿಗಳಾದ ಡಾ. ಜಿ. ರಾಮಕೃಷ್ಣ, ವಸುಂಧರಾ ಭೂಪತಿ, ಮೀನಾಕ್ಷಿ ಬಾಳಿ, ಕೆ, ನೀಲಾ, ಕೆ.ಎಸ್ ವಿಮಲಾ, ಕುಂ ವೀರಭದ್ರಪ್ಪ,‌ ಮುಜಫರ್ ಅಸ್ಸಾದಿ ಸೇರಿದಂತೆ ಒಟ್ಟು 107 ಜನರಿಂದ ಈ ಪತ್ರವನ್ನು ಬರೆಯಲಾಗಿದೆ. ಪಜ್ಞಾವಂತ ನಾಗರಿಕರ ಬಹಿರಂಗ ಪತ್ರ ಎಂದು ಬರೆದುಕೊಳ್ಳಲಾಗಿದೆ.

ಸಂತ್ರಸ್ತರ ಪೋಟೊ, ವಿಡಿಯೊ ದಾಖಲಿಸಿ ಇಟ್ಟುಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ? ಇದು ಹಲವಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಹಗರಣವೆಂದು ತಿಳಿಯುತ್ತದೆ. ಅಲ್ಲದೆ, ದೂರು ಕೊಡದಂತೆ ಬೆದರಿಕೆ ಹಾಕುವುದು, ಕಿಡ್ನ್ಯಾಪ್‌ ಮಾಡುವುದನ್ನೂ ಮಾಡಲಾಗಿದೆ. ರಾಜಕೀಯ ನಾಯಕರು ತಮ್ಮ ಹಿತಾಸಕ್ತಿಗಾಗಿ ಹಾಗೂ ಚುನಾವಣೆಯ ಲಾಭಕ್ಕಾಗಿ ಇದನ್ನೆಲ್ಲ ಬಳಸಿಕೊಳ್ಳುತ್ತಿರುವುದು ಸಹ ಆಘಾತಕಾರಿ ಅಂಶವಾಗಿದೆ ಎಂದು ಪತ್ರದಲ್ಲಿ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ದೇವೇಗೌಡರ ಕುಟುಂಬದ ಬಗ್ಗೆ ಬೇಸರ

ಪ್ರಜಲ್ ರೇವಣ್ಣ ಅವರ ತಾತ, ತಂದೆ, ತಾಯಿ, ಚಿಕ್ಕಪ್ಪ, ಚಿಕ್ಕಮ್ಮ, ಅಣ್ಣ, ತಮ್ಮ ಎಲ್ಲರೂ ಪ್ರಜಾಪ್ರಭುತ್ವದ ಎಲ್ಲ ಹುದ್ದೆಗಳನ್ನು, ಸವಲತ್ತುಗಳನ್ನು ಪಡೆದುಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ಮತ್ತು ಅವರ ಕುಟುಂಬವು ಪ್ರಜಾಪ್ರಭುತ್ವದ ಮುಸುಕಿನೊಳಗೆ ಪ್ರಜಾಪ್ರತಿನಿಧಿಗಳೆಂಬ ಧಿರಿಸು ಧರಿಸಿಕೊಂಡಿದ್ದಾರೆ. ಪ್ರಕರಣ ಹೊರ ಬಂದ ತಕ್ಷಣ ಚುನಾವಣಾ ಸ್ಪರ್ಧೆಗೆ ಅವಕಾಶ ನೀಡಬಾರದಾಗಿತ್ತು. ಹಗರಣ ಬಯಲಾಗಿ ಐದು ದಿನಗಳು ಆರೋಪಿಯನ್ನು ಸ್ವತಂತ್ರವಾಗಿ ಬಿಡಲಾಗಿದೆ. ಆತನ ಮೇಲೆ ಕಣ್ಗಾವಲನ್ನು ಹಾಕಿಲ್ಲ. ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮಹಿಳೆಯರು ಸುರಕ್ಷಿತವಾಗಿರಲು ಸಾಧ್ಯವೇ ಎಂಬ ಪ್ರಶ್ನೆ ಮೂಡಿದೆ. ಸಂತ್ರಸ್ತರ ಕುಟುಂಬಗಳು ಮಾನಸಿಕ ಯಾತನೆಗಳಿಗೆ ಗುರಿಯಾಗಿವೆ. ಅಲ್ಲದೆ, ವಿಡಿಯೊಗಳು ಲಕ್ಷಾಂತರ ಜನರಿಗೆ ತಲುಪಿವೆ. ಇದರಿಂದ ಯುವಜನರು, ಕಾಮುಕರು, ಮಕ್ಕಳ ಮೇಲೆ ಪರಿಣಾಮ ಬೀರಬಹುದಾಗಿದೆ ಎಂದು ಸಾಹಿತಿಗಳು ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Prajwal Revanna Case: ಕಾಂಗ್ರೆಸ್‌ ಸರ್ಕಾರದಿಂದ ಪ್ರಜ್ವಲ್‌ ಕೇಸ್‌ ನಿಯಂತ್ರಣ; ಡೈವರ್ಟ್‌ ಮಾಡಲು ಬಿಜೆಪಿಗರ ಮೇಲೆ ದಾಳಿ ಎಂದ ಅಶೋಕ್‌!

ಸರ್ಕಾರಕ್ಕೆ ಸಲ್ಲಿಸಿದ ಪ್ರಮುಖ ಬೇಡಿಕೆಗಳು ಏನು?

  • ಆರೋಪಿಯನ್ನು ಕೂಡಲೇ ಬಂಧಿಸಬೇಕು,ಐಟಿ, ಐಪಿಸಿ ಕಾಯ್ದೆಗಳ ಅಡ್ಡಿಯಲ್ಲಿ ಮೊಕದ್ದಮೆ ಹೂಡಬೇಕು
  • ಸಂತ್ರಸ್ತ‌ ಮಹಿಳೆಯರು ಭೀತಿಯಿಲ್ಲದೆ ದೂರು ನೀಡುವ ವಾತಾವರಣ ನಿರ್ಮಾಣ ಮಾಡಬೇಕು
  • ತನಿಖೆ ಪೂರ್ಣಗೊಳ್ಳುವವರೆಗೆ ಎಚ್.ಡಿ. ರೇವಣ್ಣ ವಿಧಾನಸಭೆ ಸದಸ್ಯತ್ವ ತಾತ್ಕಾಲಿಕವಾಗಿ ರದ್ದು ಮಾಡಬೇಕು
  • ಆರೋಪ- ಪ್ರತ್ಯಾರೋಪಗಳಲ್ಲಿ ತೊಡಗಿರುವ ರಾಜಕೀಯ ನಾಯಕ ನಡವಳಿಕೆಗೆ ಕಡಿವಾಣ ಹಾಕಬೇಕು
  • ಎಸ್‌ಐಟಿ ತನಿಖೆಯು ಕಾಯ್ದೆ ಅನುಸಾರ ಕಾಲಮಿತಿಯೊಳಗೆ ನಡೆಯಬೇಕು
  • ಪ್ರಜ್ವಲ್ ಚಾಲಕ ಕಾರ್ತಿಕ್ ನನ್ನ ಕೂಡಲೇ ಬಂಧಿಸಬೇಕು
  • ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧವೂ ಗಂಭೀರ ಪ್ರಕರಣಗಳು ದಾಖಲು ಮಾಡಬೇಕು
  • ವಿಡಿಯೊಗಳನ್ನು ಹಂಚಿದವರ ವಿರುದ್ಧ ಮಾನವ ಹಕ್ಕುಗಳಿಗೆ ಧಕ್ಕೆ, ಎಲೆಕ್ಷನ್ ಸ್ಯಾಬೊಟೇಜ್ ಮಾಡಲು ಸಂಚು ಮಾಡಿರುವ ಆರೋಪಗಳ ಮೇಲೆ ಕೇಸ್ ಹೂಡಬೇಕು
  • ಹಳೇ ವಿಡಿಯೊ ಎಂದು ರೇವಣ್ಣ ಹೇಳಿದ್ದಾರೆ, ವಿಕೃತಿ ಮುಂದುವರೆಯಲು ಬಿಟ್ಟಿರುವ ಕುಟುಂಬದ ಎಲ್ಲ ಸದಸ್ಯರನ್ನು Accomplice ಗಳೆಂದು ಪರಿಗಣಿಸಿ
  • ಅವರ ಕುಟುಂಬ ಸದಸ್ಯರ ವಿರುದ್ಧವೂ ಮೊಕದ್ದಮೆ ಹೂಡಬೇಕು
  • ಪ್ರಜ್ವಲ್ ದೇಶ ಬಿಟ್ಟು ಪರಾರಿಯಾಗಿರುವುದು ಗೃಹ ಇಲಾಖೆ ಮತ್ತು ಗುಪ್ತಚರ ಇಲಾಖೆಯ ವೈಫಲ್ಯ
  • ಗೃಹ ಇಲಾಖೆ, ಗುಪ್ತಚರ ಇಲಾಖೆ ಅಧಿಕಾರಿಗಳನ್ನು ವಜಾ ಮಾಡಬೇಕು
Continue Reading

ಕ್ರೈಂ

Student Self Harming: ಪ್ರತಿಷ್ಠಿತ ಕಾಲೇಜು ಕಟ್ಟಡದಿಂದ ಜಿಗಿದು ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

Student Self Harming: ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪಿಇಎಸ್ ಯೂನಿವರ್ಸಿಟಿಯಲ್ಲಿ ನಿನ್ನೆ ಮಧ್ಯಾಹ್ನ ಘಟನೆ ನಡೆದಿದೆ. ಮೂಲತಃ ಆಂಧ್ರಪ್ರದೇಶದ ಕರ್ನೂಲಿನ ಕುಟುಂಬದ ಕರಸಾಲ ರಾಹುಲ್(21) ಮೃತ ವಿಧ್ಯಾರ್ಥಿ. ಕೆಲ ವರ್ಷಗಳಿಂದ ಇವರ ಕುಟುಂಬ ಬಳ್ಳಾರಿಯಲ್ಲಿ ನೆಲೆಸಿತ್ತು. ಈತ ಬಿಇ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದು, ಐದನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ. ತಂದೆ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ.

VISTARANEWS.COM


on

pes university student self harming
Koo

ಬೆಂಗಳೂರು: ರಾಜಧಾನಿಯ ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ (Electronic city) ಪ್ರತಿಷ್ಠಿತ ಪಿಇಎಸ್ ಯೂನಿವರ್ಸಿಟಿಯಲ್ಲಿ (PES university) ಎಂಜಿಯರಿಂಗ್‌ ವಿದ್ಯಾರ್ಥಿಯೊಬ್ಬ (Engineering Student) ಆತ್ಮಹತ್ಯೆ (Student Self harming) ಮಾಡಿಕೊಂಡಿದ್ದಾನೆ. ಪರೀಕ್ಷೆಗೆ (Exam) ತಡವಾಗಿ ಬಂದಿದ್ದಕ್ಕಾಗಿ ನಿಂದಿಸಿದ್ದರಿಂದ ನೊಂದ ಈತ, ಕಾಲೇಜಿನ 6ನೇ ಅಂತಸ್ತಿನಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇದು ಪಿಇಎಸ್‌ ಕಾಲೇಜಿನಲ್ಲಿ ಸಂಭವಿಸುತ್ತಿರುವ ಎರಡನೇ ವಿದ್ಯಾರ್ಥಿ ಆತ್ಮಹತ್ಯೆಯಾಗಿದೆ.

ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪಿಇಎಸ್ ಯೂನಿವರ್ಸಿಟಿಯಲ್ಲಿ ನಿನ್ನೆ ಮಧ್ಯಾಹ್ನ ಘಟನೆ ನಡೆದಿದೆ. ಮೂಲತಃ ಆಂಧ್ರಪ್ರದೇಶದ ಕರ್ನೂಲಿನ ಕುಟುಂಬದ ಕರಸಾಲ ರಾಹುಲ್(21) ಮೃತ ವಿಧ್ಯಾರ್ಥಿ. ಕೆಲ ವರ್ಷಗಳಿಂದ ಇವರ ಕುಟುಂಬ ಬಳ್ಳಾರಿಯಲ್ಲಿ ನೆಲೆಸಿತ್ತು. ಈತ ಬಿಇ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದು, ಐದನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ. ತಂದೆ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ.

ರಾಹುಲ್ ತನ್ನ ತಾಯಿಯೊಂದಿಗೆ ಕ್ಯಾಂಪಸ್‌ನಿಂದ 4 ಕಿಮೀ ದೂರದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಪರೀಕ್ಷೆ 8.30ಕ್ಕೆ ಆರಂಭವಾಗಲಿದ್ದ ಕಾರಣ 7.30ರ ಸುಮಾರಿಗೆ ಮನೆಯಿಂದ ಹೊರಟಿದ್ದ. ಆತನ ತಾಯಿ ಕಾಲೇಜು ಶಿಕ್ಷಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಪರೀಕ್ಷೆಗೆ ತಡವಾಗಿ ಬಂದ ಕಾರಣ ಪ್ರವೇಶ ನಿರಾಕರಿಸಲಾಗಿತ್ತು. ಅಧ್ಯಯನದಲ್ಲಿ ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದ ರಾಹುಲ್, ಇದರಿಂದ ನೊಂದಿದ್ದ ಎನ್ನಲಾಗಿದೆ.

ನಂತರ ಸ್ವಲ್ಪ ಹೊತ್ತಿನ ಬಳಿಕ ಕಾಲೇಜಿನ ಐದನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿದ್ದಾರೆ.

ಕೆಲ ತಿಂಗಳ ಹಿಂದೆ ಹೊಸಕೆರೆಹಳ್ಳಿ ಬಳಿಯ ಪಿಇಎಸ್ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿ ಆತ್ಮಹತ್ಯೆ ‌ಮಾಡಿಕೊಂಡಿದ್ದ. 2023ರಲ್ಲಿ 19 ವರ್ಷದ ಆದಿತ್ಯ ಪ್ರಭು ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದುದು ವರದಿಯಾಗಿತ್ತು. ಇದೀಗ ಪಿಇಎಸ್‌ ಕಾಲೇಜಿನಲ್ಲಿ ಎರಡನೇ ಆತ್ಮಹತ್ಯೆ ಸಂಭವಿಸಿದೆ. ಇದು ಸ್ಪರ್ಧಾತ್ಮಕ ಕೋರ್ಸ್‌ಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಮೇಲಿರುವ ಮಾನಸಿಕ ಒತ್ತಡದತ್ತ ಬೆಟ್ಟು ಮಾಡಿದೆ.

ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

ಬೆಂಗಳೂರು: ಮಾಡಿಕೊಂಡ ಸಾಲ ತೀರಿಸಲು, ಶೋಕಿ ಜೀವನ ನಡೆಸಲು ಹಾಗೂ ಪ್ರಿಯತಮನ ಜೊತೆ ಮಜಾ ಉಡಾಯಿಸಲು ಯುವತಿಯೊಬ್ಬಳು ತಾನು ಬಾಡಿಗೆಗೆ ಇದ್ದ ಮನೆಯ ಮಾಲಕಿಯನ್ನೇ ಕೊಲೆ (Woman murder case) ಮಾಡಿದ್ದಾಳೆ. ಮಾಲಕಿ ಕೊರಳಲ್ಲಿ ಧರಿಸಿದ್ದ ಚಿನ್ನದ ಸರದ ಆಕರ್ಷಣೆ ಕೊಲೆಗೆ ಮೂಲವಾಗಿದೆ.

woman murder case kengeri

ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗೃಹಿಣಿ ಕೊಲೆ (kengeri murder, bangalore crime) ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೇ 10ರಂದು ಕೆಂಗೇರಿ ಠಾಣೆ ವ್ಯಾಪ್ತಿಯ ಕೋನಸಂದ್ರದಲ್ಲಿ ಘಟನೆ ನಡೆದಿತ್ತು. ದಿವ್ಯಾ ಕೊಲೆಯಾದ ಮಹಿಳೆ. ಮೋನಿಕಾ (24) ಬಂಧಿತ ಆರೋಪಿ. ಶೋಕಿ ಜೀವನಕ್ಕಾಗಿ ಮನೆ ಮಾಲಕಿಯನ್ನೆ ಹತ್ಯೆ ಮಾಡಿದ ದಿವ್ಯಾಳನ್ನು ಬಂಧಿಸಲಾಗಿದೆ.

ಮೋನಿಕಾ ಕಂಪೆನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡುತ್ತಿದ್ದಳು. ಮೂಲತಃ ಕೋಲಾರ ಜಿಲ್ಲೆಯ ಮೋನಿಕ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಗುರುಮೂರ್ತಿ ಎಂಬವರ ಮನೆಯಲ್ಲಿ ಮೂರು ತಿಂಗಳ ಹಿಂದಷ್ಟೇ ಬಾಡಿಗೆಗೆ ಬಂದಿದ್ದಳು. ಪ್ರಿಯಕರನನ್ನು ಗಂಡ ಎಂದು ಹೇಳಿ ಬಾಡಿಗೆಗೆ ಮನೆ ಗಿಟ್ಟಿಸಿದ್ದಳು. ಆದರೆ ಒಬ್ಬಳೇ ವಾಸವಿದ್ದು, ಮೋನಿಕ ಮನೆಗೆ ಪ್ರಿಯಕರ ಆಗಾಗ ಬಂದು ಹೋಗುತ್ತಿದ್ದ.

ಮೋನಿಕಾ ಶೋಕಿಗಾಗಿ ವಿಪರೀತ ಕೈಸಾಲ ಮಾಡಿಕೊಂಡಿದ್ದಳಲ್ಲದೆ, ಜೊತೆಗೆ ಪ್ರಿಯಕರನಿಗೆ ಟಾಟಾ ಏಸ್ ವಾಹನ ಖರೀದಿಸಿಕೊಡಲು ಹಣಕ್ಕಾಗಿ ಹುಡುಕಾಡುತ್ತಿದ್ದಳು. ಅಷ್ಟರಲ್ಲಿ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಆಕೆಯ ಕಣ್ಣು ಬಿದ್ದಿತ್ತು. ದಿವ್ಯ ಪತಿ ಗುರುಮೂರ್ತಿ ಕೆಂಗೇರಿ ಉಪನಗರದ ಶಿವನಪಾಳ್ಯದಲ್ಲಿ ಸಲೂನ್ ನಡೆಸುತ್ತಿದ್ದರು. ದಿವ್ಯಾ ಅತ್ತೆ ಮಾವ ಸಹ ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದರು. ಮನೆಯಲ್ಲಿ ದಿವ್ಯಾ ಹಾಗೂ 2 ವರ್ಷದ ಮಗು ಮಾತ್ರ ಇರುತ್ತಿದ್ದರು.

ಇದನ್ನು ಗಮನಿಸಿ ಸ್ಕೆಚ್‌ ಹಾಕಿದ ಮೋನಿಕಾ, ಯಾರೂ ಇಲ್ಲದ ಸಮಯ ನೋಡಿ ಹಿಂಬದಿಯಿಂದ ಬಂದು ದಿವ್ಯಾಳ ಕುತ್ತಿಗೆ ಹಿಸುಕಿ (Strangle) ಕೊಲೆ ಮಾಡಿದ್ದಾಳೆ. ನಂತರ ಕುತ್ತಿಗೆಯಲ್ಲಿದ್ದ 36 ಗ್ರಾಂ ಚಿನ್ನದ ಸರವನ್ನು ತೆಗೆದುಕೊಂಡು ಪರಾರಿಯಾಗಿದ್ದಳು. ಸದ್ಯ ಪ್ರಕರಣ ದಾಖಲಿಸಿ ಮೋನಿಕಾಳನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Murder Case: ʼನೇಹಾ ಹಿರೇಮಠ ಥರ ಕೊಲೆ ಮಾಡ್ತೀನಿ…ʼ ಎಂದವನು ಮಾಡಿಯೇ ಬಿಟ್ಟ! ಪಾಗಲ್‌ ಪ್ರೇಮಿಯಿಂದ ಮತ್ತೊಬ್ಬ ಯುವತಿಯ ಹತ್ಯೆ

Continue Reading

ರಾಜಕೀಯ

Prajwal Revanna Case: ಕಾಂಗ್ರೆಸ್‌ ಸರ್ಕಾರದಿಂದ ಪ್ರಜ್ವಲ್‌ ಕೇಸ್‌ ನಿಯಂತ್ರಣ; ಡೈವರ್ಟ್‌ ಮಾಡಲು ಬಿಜೆಪಿಗರ ಮೇಲೆ ದಾಳಿ ಎಂದ ಅಶೋಕ್‌!

Prajwal Revanna Case: ಎಸ್ಐಟಿ ನಡೆಸುವ ತನಿಖೆಯ ಪಿನ್ ಟು ಪಿನ್ ಮಾಹಿತಿ‌ ಕಾಂಗ್ರೆಸ್ ಸರ್ಕಾರಕ್ಕೆ ಹೋಗುತ್ತಿದೆ. ಅದಕ್ಕಾಗಿಯೇ ಇಡೀ ಕೇಸ್‌ ಅನ್ನು ಬಿಜೆಪಿ ಕಡೆ ತಿರುಗಿಸುತ್ತಿದ್ದಾರೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕಾದರೆ ಸಿಬಿಐಗೆ ತನಿಖೆಯನ್ನು ವಹಿಸಬೇಕು. ಪ್ರಜ್ವಲ್ ವಾಪಸ್ ಬಂದಿಲ್ಲ ಎಂದರೆ ಅದು ಸರ್ಕಾರದ ವೈಫಲ್ಯ. ಎಸ್ಐಟಿ ಟೀಂನವರು ಅವರನ್ನು ಬಂಧಿಸಿ ಕರೆ ತಂದಿಲ್ಲ. ಅದೇ ಈ ಕೇಸ್‌ ಅನ್ನು ಸಿಬಿಐಗೆ ವಹಿಸಿದರೆ ಅವರು ಬಂಧಿಸಿ ಕರೆತರುತ್ತಾರೆ ಎಂದು ಆರ್.‌ ಅಶೋಕ್‌ ಹೇಳಿದ್ದಾರೆ.

VISTARANEWS.COM


on

Prajwal Revanna Case Prajwal case controlled by Congress government says R Ashok
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣವನ್ನು ಕಾಂಗ್ರೆಸ್‌ ನಿಯಂತ್ರಣ ಮಾಡುತ್ತಿದೆ. ಇದೆಲ್ಲವೂ ಕಾಂಗ್ರೆಸ್‌ ಸರ್ಕಾರದ ಪ್ರೀ ಪ್ಲ್ಯಾನ್‌ ಆಗಿದೆ. ಈ ಪೆನ್‌ಡ್ರೈವ್‌ ಹಂಚಿಕೆಯಲ್ಲಿ ಮಹಾ ನಾಯಕನ ಕೈವಾಡ ಇದೆ ಎಂಬುದಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೀಡಿದ್ದ ಹೇಳಿಕೆಯಿಂದ ಮುಜುಗರವಾಗಿ ಈಗ ಇಡೀ ಕೇಸ್‌ ಅನ್ನು ಬಿಜೆಪಿ ಕಡೆ ತಿರುಗಿಸಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರ ಮೊಬೈಲ್‌ನಲ್ಲಿ ಈ ಕೇಸ್‌ಗೆ ಸಂಬಂಧಿಸಿದ ವಿಡಿಯೊಗಳಿಲ್ಲವಾ? ಅಲ್ಲದೇ, ಪ್ರಜ್ವಲ್‌ ಮಾಜಿ ಡ್ರೈವರ್‌ ಕಾರ್ತಿಕ್‌ನನ್ನು ಏಕೆ ಬಂಧಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್.‌ ಅಶೋಕ್‌, ಎಚ್‌.ಡಿ. ಕುಮಾರಸ್ವಾಮಿಯವರು ಮಹಾನಾಯಕನ ಹೆಸರು ಹೇಳಿರುವ ಕಾರಣಕ್ಕಾಗಿಯೇ ಈಗ ಪ್ರಕರಣವನ್ನು ಬಿಜೆಪಿ ಕಡೆಗೆ ತಿರುಗಿಸಲಾಗುತ್ತಿದೆ. ಏಕೆಂದರೆ ಕಾಂಗ್ರೆಸ್‌ನವರಿಗೆ ಈಗ ಇದರಿಂದ ಮುಜುಗರವಾಗತೊಡಗಿದೆ. ಹೀಗಾಗಿ ಪ್ರಕರಣವನ್ನು ತಮ್ಮ ಕಂಟ್ರೋಲ್‌ಗೆ ತೆಗೆದುಕೊಂಡಿದ್ದಾರೆ. ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ನಿರಾಕರಣೆ ಆದ ಕೂಡಲೇ ಬಂಧಿಸಲಾಗುತ್ತದೆ. ಆದರೆ, ಅದೇ ಪೆನ್‌ಡ್ರೈವ್‌ ಅನ್ನು ಹರಿಬಿಟ್ಟ ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ನನ್ನು ಮಾತ್ರ ಈವರೆಗೆ ಏಕೆ ಬಂಧಿಸಿಲ್ಲ? ಈಗ ಹಾಸನದಲ್ಲಿ ಆಗಿರುವ ಎಸ್ಐಟಿ ದಾಳಿ ಉದ್ದೇಶವೇನೆಂದರೆ ಇಡೀ ಪ್ರಕರಣವನ್ನು ಬೇರೆ ಕಡೆ ಡೈವರ್ಟ್ ಮಾಡುವುದಾಗಿದೆ ಎಂದು ಕಿಡಿಕಾರಿದರು.

ಸಿಬಿಐಗೆ ಪ್ರಕರಣ ವಹಿಸಿ

ಎಸ್ಐಟಿ ನಡೆಸುವ ತನಿಖೆಯ ಪಿನ್ ಟು ಪಿನ್ ಮಾಹಿತಿ‌ ಕಾಂಗ್ರೆಸ್ ಸರ್ಕಾರಕ್ಕೆ ಹೋಗುತ್ತಿದೆ. ಅದಕ್ಕಾಗಿಯೇ ಇಡೀ ಕೇಸ್‌ ಅನ್ನು ಬಿಜೆಪಿ ಕಡೆ ತಿರುಗಿಸುತ್ತಿದ್ದಾರೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕಾದರೆ ಸಿಬಿಐಗೆ ತನಿಖೆಯನ್ನು ವಹಿಸಬೇಕು. ಪ್ರಜ್ವಲ್ ವಾಪಸ್ ಬಂದಿಲ್ಲ ಎಂದರೆ ಅದು ಸರ್ಕಾರದ ವೈಫಲ್ಯ. ಎಸ್ಐಟಿ ಟೀಂನವರು ಅವರನ್ನು ಬಂಧಿಸಿ ಕರೆ ತಂದಿಲ್ಲ. ಅದೇ ಈ ಕೇಸ್‌ ಅನ್ನು ಸಿಬಿಐಗೆ ವಹಿಸಿದರೆ ಅವರು ಬಂಧಿಸಿ ಕರೆತರುತ್ತಾರೆ ಎಂದು ಆರ್.‌ ಅಶೋಕ್‌ ಹೇಳಿದರು.

ಇದೆಲ್ಲ ಪ್ರೀ ಪ್ಲ್ಯಾನ್‌

ಹಾಸನದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಈಗ ಎಸ್‌ಐಟಿ ತಂಡದವರು ದಾಳಿ ಮಾಡುತ್ತಿದ್ದಾರೆ. ಇದು ಬೇಕೆಂದೇ ಮಾಡುತ್ತಿರುವ ಕೃತ್ಯವಾಗಿದೆ. ಹಾಗಾದರೆ, ಹಾಸನ ಕಾಂಗ್ರೆಸ್ ಕಾರ್ಯಕರ್ತರ ಬಳಿ ವಿಡಿಯೊಗಳು ಇಲ್ಲವೇ? ಅವರ ಮೊಬೈಲ್‌ಗಳನ್ನು ಚೆಕ್‌ ಮಾಡಲಿ. ಅವರ ಬಳಿ ಇದಕ್ಕಿಂತಲೂ ಹೆಚ್ಚು ವಿಡಿಯೊ ಮತ್ತು ಪೆನ್‌ಡ್ರೈವ್ ಇದೆ. ಕಾಂಗ್ರೆಸ್‌ನ ಯಾವೊಬ್ಬ ಕಾರ್ಯಕರ್ತನ ವಿಚಾರಣೆಯನ್ನು ಇದುವರೆಗೆ ಏಕೆ ಮಾಡಿಲ್ಲ? ಇದೆಲ್ಲ ಪ್ರೀ ಪ್ಲ್ಯಾನ್‌ ಆಗಿದೆ ಎಂದು ಆರ್.‌ ಅಶೋಕ್‌ ದೂರಿದರು.

ಗೌಡರ ಕುಟುಂಬದ ಬಗ್ಗೆ ಡಿಕೆಶಿ ಕಿಂಡಲ್‌

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬ ಮೇಲೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಅನುಕಂಪ ತೋರಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಆರ್.‌ ಅಶೋಕ್, ಡಿ.ಕೆ. ಶಿವಕುಮಾರ್‌ ಅವರು ಕಿಂಡಲ್‌ ಮಾಡುತ್ತಿದ್ದಾರೆ. ಅವರು ದೇವೇಗೌಡರ ಕುಟುಂಬಕ್ಕೆ ಈ ಹೇಳಿಕೆ ಮೂಲಕ ಲೇವಡಿ ಮಾಡಿದ್ದಾರೆ ಎಂದು ವ್ಯಾಖ್ಯಾನಿಸಿದರು.

ತಿಮಿಂಗಿಲ ಬಗ್ಗೆ ಗೊತ್ತಾಗುತ್ತೆ

ಎಚ್.ಡಿ. ಕುಮಾರಸ್ವಾಮಿ ಅವರು ಡಿಕೆಶಿಗೆ ಪರೋಕ್ಷವಾಗಿ ತಿಮಿಂಗಿಲ ಎಂದಿರುವ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡ ಆರ್.‌ ಅಶೋಕ್‌, ಪ್ರಕರಣದಲ್ಲಿ ತಿಮಿಂಗಿಲ ಯಾರು ಅಂತ ಗೊತ್ತಾಗಲೇಬೇಕು. ಸಮುದ್ರದಲ್ಲಿರುವ ತಿಮಿಂಗಿಲ ಆಮ್ಲಜನಕಕ್ಕಾಗಿ ನೀರಿಂದ ಹೊರಗೆ ಬರಲೇಬೇಕು. ಆಗ ಆ ತಿಮಿಂಗಿಲ ಕಾಂಗ್ರೆಸ್‌ದಾ? ಜೆಡಿಎಸ್‌ದಾ ಅಂತ ಗೊತ್ತಾಗುತ್ತದೆ ಎಂದು ಹೇಳಿದರು.

ಹಗಲು ಕನಸು ಕಾಣುತ್ತಿರುವ ಸಿದ್ದರಾಮಯ್ಯ

ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆಯನ್ನು ನಿರಾಕರಣೆ ಮಾಡಿರುವ ಸಿಎಂ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಆರ್.‌ ಅಶೋಕ್‌, ಬಿಜೆಪಿಯವರು ಭ್ರಮೆಯಲ್ಲಿದ್ದಾರೆಂದು ಅವರು ಹೇಳುತ್ತಿರಬಹುದು. ಆದರೆ, ಭ್ರಮೆಯಲ್ಲಿರುವುದು ನಾವಲ್ಲ. ಹಗಲು ಕನಸು ಕಾಣುತ್ತಿರುವುದು ನಾವಲ್ಲ, ಸಿದ್ದರಾಮಯ್ಯ ಅವರಾಗಿದ್ದಾರೆ. ಈ ಹಿಂದೆ 17 ಶಾಸಕರು ಹೋಗ್ತಾರಾ? ಸಾಧ್ಯವಿಲ್ಲ ಅಂದಿದ್ದರು. ಆದರೆ, ಅದು ಸಾಧ್ಯವಾಗಿಲ್ಲವಾ? 17 ಶಾಸಕರು ಬಂದರಲ್ಲವೇ? ಮಹಾರಾಷ್ಟ್ರದಲ್ಲೂ 90 ಜನ ಶಾಸಕರು ಆಚೆ ಹೋದರಲ್ಲ. ಇದೆಲ್ಲವೂ ಹೇಗಾಯ್ತು? ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಕಾಂಗ್ರೆಸ್‌ ಮೊದಲು ಬಿಡುವವರು ಇವರೇ

ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಿ ಚುನಾಯಿತರಾದರೆ ಕಾಂಗ್ರೆಸ್‌ನವರಿಗೆ ಗಂಟು ಮೂಟೆ ಕಟ್ಟೋದಷ್ಟೇ ಬಾಕಿ. ಯಾರು ನಾನಲ್ಲ, ನಾನಲ್ಲ ಅಂತ ಹೇಳುತ್ತಿದ್ದಾರೋ, ಅವರೇ ಮೊದಲು ಕಾಂಗ್ರೆಸ್ ಬಿಡುತ್ತಾರೆ. ಆ ರೀತಿಯ ಸನ್ನಿವೇಶ ನಿರ್ಮಾಣವಾದರೆ ಅವರೇ ಬಿಜೆಪಿಗೆ ಬರಲು ಮೊದಲು ನಿಂತುಕೊಳ್ಳುತ್ತಾರೆ ಎಂದು ಆರ್.‌ ಅಶೋಕ್‌ ಹೇಳಿದರು.

Continue Reading
Advertisement
Rishabh Pant
ಕ್ರೀಡೆ12 mins ago

Rishabh Pant: ಬಿಸಿಸಿಐ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ ರಿಷಭ್​ ಪಂತ್​

LIC
ವಾಣಿಜ್ಯ16 mins ago

LIC: ಎಲ್‌ಐಸಿಗೆ ಬಿಗ್‌ ರಿಲೀಫ್‌; ಸಾರ್ವಜನಿಕರ ಷೇರು ಪಾಲು ಶೇ. 10ಕ್ಕೆ ಹೆಚ್ಚಿಸಲು 3 ವರ್ಷ ಹೆಚ್ಚುವರಿ ಕಾಲಾವಕಾಶ

Mobile Phone Recharges:
ದೇಶ38 mins ago

Mobile Phone Recharges: ಮೊಬೈಲ್‌ ಗ್ರಾಹಕರಿಗೆ ಬಿಗ್‌ ಶಾಕ್‌! ಮತ್ತೆ ರಿಚಾರ್ಜ್‌ ಮೊತ್ತ ಏರಿಕೆ

IPL 2024
ಕ್ರೀಡೆ50 mins ago

IPL 2024: ಲಕ್ನೋಗೆ ಸೋಲು; ಪ್ಲೇ ಆಫ್​ ಪ್ರವೇಶಿಸಿದ ರಾಜಸ್ಥಾನ್​ ರಾಯಲ್ಸ್​

blackmail case kgf
ಕೋಲಾರ53 mins ago

Blackmail Case: ಗ್ರಾಮ ಪಂಚಾಯಿತಿಯಲ್ಲೇ ಬಲವಂತದ ರೊಮ್ಯಾನ್ಸ್‌, ಬ್ಲ್ಯಾಕ್‌ಮೇಲ್‌ ಎಸಗಿದ ಬಿಲ್‌ ಕಲೆಕ್ಟರ್‌ ಬಂಧನ

Madhuri Dixit birthday extend wishes
ಬಾಲಿವುಡ್1 hour ago

Madhuri Dixit: ಮಾಧುರಿ ದೀಕ್ಷಿತ್‌ಗೆ ಇಂದು ಜನುಮದಿನ ಸಂಭ್ರಮ; ಅವರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

Prajwal Revanna Case Can women trust your government Writers open letter to Siddaramaiah
ರಾಜಕೀಯ1 hour ago

Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

Acharya Shankara Jayanthyutsava programme at Ranebennur
ಹಾವೇರಿ1 hour ago

Ranebennur News: ಆಧುನಿಕ ವಿಜ್ಞಾನಕ್ಕೆ ಶಂಕರಾಚಾರ್ಯರು ನೀಡಿದ ಕೊಡುಗೆ ಅಪಾರ; ವಿ. ನವೀನಶಾಸ್ತ್ರಿ ರಾ. ಪುರಾಣಿಕ

Miyazaki Mango
ಪ್ರಮುಖ ಸುದ್ದಿ2 hours ago

Miyazaki Mango: ಧಾರವಾಡಕ್ಕೆ ಬಂತು 2.7 ಲಕ್ಷ ರೂ. ಬೆಲೆಯ ಮಾವು!

Bomb Threat
ದೇಶ2 hours ago

Bomb Threat: ದೆಹಲಿ, ಅಹಮದಾಬಾದ್‌ ಬಳಿಕ ಕಾನ್ಪುರ ಶಾಲೆಗಳಿಗೂ ಬಾಂಬ್‌ ಬೆದರಿಕೆ; ಇಮೇಲ್‌ ಮೂಲಕ ಸಂದೇಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ8 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ10 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ20 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202423 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌