Road Accident: ಆಟೋಗೆ ಶಾಲಾ ಬಸ್‌ ಡಿಕ್ಕಿ, ಐವರ ದುರ್ಮರಣ Vistara News

ದಕ್ಷಿಣ ಕನ್ನಡ

Road Accident: ಆಟೋಗೆ ಶಾಲಾ ಬಸ್‌ ಡಿಕ್ಕಿ, ಐವರ ದುರ್ಮರಣ

ಬಸ್ ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ಛಿದ್ರವಾಗಿದ್ದು, ಆಟೋದಲ್ಲಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸಾವಿಗೀಡಾಗಿದ್ದಾರೆ.

VISTARANEWS.COM


on

bus auto accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಶಾಲಾ ಬಸ್ ಹಾಗೂ ಆಟೋ ನಡುವೆ (bus auto accident) ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಪ್ರಯಾಣಿಕರು ದುರ್ಮರಣ ಹೊಂದಿದ ಘಟನೆ (Road Accident) ಕೇರಳ- ಕರ್ನಾಟಕ ಗಡಿಭಾಗದಲ್ಲಿ ನಡೆದಿದೆ.

ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಸಮೀಪ ಈ ದುರ್ಘಟನೆ ನಿನ್ನೆ ಸಂಜೆ ವೇಳೆ ನಡೆದಿದೆ. ಕಾಸರಗೋಡಿನ ಮೊಗ್ರಾಲ್ ಪುತ್ತೂರು ಎಂಬಲ್ಲಿನ ಆಟೋ ರಿಕ್ಷಾಗೆ ಪೆರ್ಲ ಸಮೀಪದ ಆಂಗ್ಲ ಮಾಧ್ಯಮ ಶಾಲೆಯ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ಛಿದ್ರವಾಗಿದ್ದು, ಆಟೋದಲ್ಲಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸಾವಿಗೀಡಾಗಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಸ್‌ ಪಲ್ಟಿಯಾಗಿ 10 ಜನರಿಗೆ ಗಾಯ

ವಿಜಯನಗರ: ಖಾಸಗಿ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ವಿಜಯನಗರದ MB ಅಯ್ಯನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಗಾಯಗೊಂಡ ಡ್ರೈವರ್ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರಿನಿಂದ ಕಲ್ಬುರ್ಗಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರಗೆ ದಾಖಲು ಮಾಡಲಾಗಿದೆ. ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Road Accident: ಬಿಬಿಎಂಪಿ ಕಸದ ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Karnataka Weather: ಟಿ-20 ಕ್ರಿಕೆಟ್‌ ಪಂದ್ಯದಲ್ಲಿ ಮಳೆಯಾಟ!

Rain News : ರಾಜ್ಯದ ಹಲವೆಡೆ ಸೂರ್ಯ ಮರೆಯಾಗಿ ಮಳೆಯ ಸಿಂಚನವಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆ (Dry weather) ಇರಲಿದೆ.

VISTARANEWS.COM


on

By

Rain disrupted for two more days
Koo

ಬೆಂಗಳೂರು: ಕರಾವಳಿ, ದಕ್ಷಿಣ ಒಳನಾಡು ಹಾಗೂ ಮಲೆನಾಡಲ್ಲಿ (Rain News) ಹಗುರದಿಂದ ಸಾಧಾರಣ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಶುಷ್ಕ ವಾತಾವರಣ ಇರಲಿದೆ. ಇತ್ತ ಬೆಂಗಳೂರಲ್ಲಿ ಮಳೆ ಸೂಚನೆ ಇದ್ದು ಟಿ-20 ಕ್ರಿಕೆಟ್‌ ಪಂದ್ಯಕ್ಕೆ ಮಳೆಯಡ್ಡಿಯಾಗುವ ಸಾಧ್ಯತೆ ಇದೆ.

ಮೈಸೂರು ಟು ಮಂಡ್ಯ ಮಳೆ

ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಇದನ್ನೂ ಓದಿ: Velvet Lehenga Fashion: ವಿಂಟರ್‌ ವೆಡ್ಡಿಂಗ್‌ ಫ್ಯಾಷನ್‌ನಲ್ಲಿ ವೆಲ್ವೆಟ್‌ ಲೆಹೆಂಗಾ ಜಾದೂ

ಸಣ್ಣ ಪ್ರಮಾಣದಲ್ಲಿ ವರ್ಷಧಾರೆ

ಮಲೆನಾಡಿನ ಹಾಸನ ಮತ್ತು ಕೊಡಗಿನಲ್ಲಿ ಹಗುರದಿಂದ ಕೂಡಿದ ಮಳೆ ಇರಲಿದ್ದು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಣ್ಣದಾಗಿ ಮಳೆ ಸುರಿಯಲಿದೆ. ಉತ್ತರ ಕನ್ನಡದಲ್ಲೂ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.

ಬೆಂಗಳೂರಲ್ಲಿ ಕ್ರಿಕೆಟ್‌ಗೆ ಮಳೆ ಅಡ್ಡಿ

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗುವ ಸಾಧ್ಯತೆ ಇದೆ. ಭಾರತ -ಶ್ರೀಲಂಕಾ ಟಿ-20 ಪಂದ್ಯವಿದ್ದು, ಮಳೆಯು ಅಡ್ಡಿಯಾಗುವ ಆತಂಕ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -18 ಡಿ.ಸೆ
ಮಂಗಳೂರು: 36 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 18 ಡಿ.ಸೆ
ಗದಗ: 33 ಡಿ.ಸೆ – 18ಡಿ.ಸೆ
ಹೊನ್ನಾವರ: 36 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 20 ಡಿ.ಸೆ
ಬೆಳಗಾವಿ: 32 ಡಿ.ಸೆ – 18 ಡಿ.ಸೆ
ಕಾರವಾರ: 36 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka Weather : ದಿನ ಪೂರ್ತಿ ಮರೆಯಾಗುವ ಸೂರ್ಯ; ಸಂಜೆಗೆ ಮಳೆಯ ಸಿಂಚನ

Rain News : ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ (Karnataka Weather Forecast) ಸೂಚನೆ ಇದ್ದರೆ, ಉತ್ತರ ಒಳನಾಡಿನಲ್ಲಿ ಒಣ ಹವೆ (Dry weather) ಇರಲಿದೆ.

VISTARANEWS.COM


on

By

Rain alert karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮಂಕಾಗಿದ್ದ ಮಳೆಯು ಕರಾವಳಿಯಲ್ಲಿ ಮತ್ತೆ ಸಕ್ರಿಯಗೊಳ್ಳುತ್ತಿದೆ. ಉತ್ತರ ಒಳನಾಡಿನಲ್ಲಿ ಮಳೆಯು (Rain News) ಮಾಯವಾಗಿದ್ದು, ಒಣ ಹವೆ ಇರಲಿದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡಲ್ಲಿ ಮಳೆಯು (Karnataka Weather Forecast) ಮುಂದುವರಿಯಲಿದೆ. ಡಿ.3-4ರಂದು ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದ್ದು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಣ್ಣದಾಗಿ ಮಳೆ ಸುರಿಯಲಿದೆ. ಉತ್ತರ ಕನ್ನಡದಲ್ಲೂ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.

ಇದನ್ನೂ ಓದಿ: Star winter Fashion: ಸೀಸನ್‌ಗೆ ತಕ್ಕಂತೆ ಬದಲಾಯ್ತು ನಟಿ ಶಾನ್ವಿ ಶ್ರೀವಾತ್ಸವ್ ವಿಂಟರ್‌ ಫ್ಯಾಷನ್‌

ಬೆಂಗಳೂರಲ್ಲಿ ಘಳಿಗೆಗೊಂದು ವಾತಾವರಣ

ಮುಂದಿನ 24 ಗಂಟೆಯಲ್ಲಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಸೂರ್ಯ ದರ್ಶನ ನೀಡಲಿದ್ದಾನೆ. ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಇರಲಿದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬೆಳಗಾವಿಯಲ್ಲಿ ಮಳೆಯ ಸಿಂಚನ

ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಬೆಳಗಾವಿಯ ಗೋಕಾಕ್‌ನಲ್ಲಿ 3 ಸೆಂ.ಮೀ ಹಾಗೂ ಚಿಕ್ಕೋಡಿ, ಸಂಕೇಶ್ವರ, ಹಾಗೂ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕಡಿಮೆ ಉಷ್ಣಾಂಶ 15.2 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಕರ್ನಾಟಕ

Lawyers office : ಮಂಗಳೂರಿನ ಖ್ಯಾತ ನ್ಯಾಯವಾದಿ ಜಿನೇಂದ್ರ ಕುಮಾರ್‌ ಕಚೇರಿ ಈಗ ಬೆಂಗಳೂರಿನಲ್ಲಿ ಆರಂಭ

Lawyers office : ಕಳೆದ ಮೂರು ದಶಕಗಳಿಂದ ಮಂಗಳೂರಿನಲ್ಲಿ ನ್ಯಾಯವಾದಿಯಾಗಿ ದೊಡ್ಡ ಹೆಸರು ಮಾಡಿದ ಜಿನೇಂದ್ರ ಕುಮಾರ್‌ ಅವರು ಈಗ ಹೈಕೋರ್ಟ್‌ ನ್ಯಾಯವಾದಿಯಾಗಿ ಹೆಚ್ಚಿನ ಸೇವೆ ಸಲ್ಲಿಸಲು ಬೆಂಗಳೂರಿನಲ್ಲಿ ಕಚೇರಿಯನ್ನು ಆರಂಭಿಸಿದ್ದಾರೆ.

VISTARANEWS.COM


on

Advocate jinendra kumar office in Bangalore
Koo

ಬೆಂಗಳೂರು: ಮಂಗಳೂರಿನ ಖ್ಯಾತ ನ್ಯಾಯವಾದಿ ಬಿ.‌ ಜಿನೇಂದ್ರ ಕುಮಾರ್‌ (Advocate Jinendra Kumar) ಅವರು ತಮ್ಮ ಕಾರ್ಯ ಚಟುವಟಿಕೆಗಳನ್ನು (Lawyers office) ಬೆಂಗಳೂರಿಗೆ ವಿಸ್ತರಿಸಿದ್ದಾರೆ. ಹೈಕೋರ್ಟ್ ನ್ಯಾಯವಾದಿಯಾಗಿರುವ (High court Advocate) ಜಿನೇಂದ್ರ ಕುಮಾರ್ ಮತ್ತು ವಸುಧಾ ಬಿ ಹಾಗೂ ತಂಡದವರ ನೂತನ ಕಚೇರಿಯನ್ನು (Bangalore office) ಬೆಂಗಳೂರಿನ ಮಲ್ಲೇಶ್ವರದ ಮಂತ್ರಿ ಮಾಲ್ ಎದುರುಗಡೆ ಇರುವ ಶಿರೂರ್ ಪಾರ್ಕ್ ಪಕ್ಕ ಆರಂಭಿಸಲಾಗಿದೆ.

ಕರ್ನಾಟಕ ಸರ್ಕಾರದ ಮಾಹಿತಿ ಹಕ್ಕು ಆಯೋಗದ ಮುಖ್ಯ ಆಯುಕ್ತ ಹಾಗೂ ಕರ್ನಾಟಕ ಸರ್ಕಾರದ ಮಾಜಿ ಕಾನೂನು ಪ್ರಧಾನ ಕಾರ್ಯದರ್ಶಿಯಾಗಿದ್ದ ಎನ್.ಸಿ ಶ್ರೀನಿವಾಸ್ ಕಚೇರಿಯನ್ನು ಉದ್ಘಾಟಿಸಿದರು. ಈ ವೇಳೆ, ಮಂಗಳೂರ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಪೃಥ್ವಿರಾಜ್ ರೈ, ಆಂತರಿಕ ಭದ್ರತೆಯ ಎಸ್ಪಿ ಐಪಿಎಸ್ ಅಧಿಕಾರಿ ಜಿನೇಂದ್ರ ಖನಗಾವಿ, ರೇಡಿಯೋಲಾಜಿಸ್ಟ್, ಮಣಿಪಾಲ್ ಹೆಲ್ತ್ ಮ್ಯಾಪ್ ಡಯಾಗ್ನಾಸ್ಟಿಕ್ ಮುಖ್ಯಸ್ಥ ಸಂದೀಪ್ ಬಲ್ಲಾಳ್, ಖ್ಯಾತ ಜ್ಯೋತಿಷಿ ಹಾಗೂ ಹಿರಿಯ ಲೆಕ್ಕಪರಿಶೋಧಕ ಎಚ್ ಟಿ ರಾಧಾಕೃಷ್ಣ ಶಾಸ್ತ್ರಿ, ಮತ್ತು ಆದಾಯ ಇಲಾಖೆಯ ಜಂಟಿ ಆಯುಕ್ತಾರಾದ ಸುಧೀಂದ್ರ ರಾವ್ ಉಪಸ್ಥಿತರಿದ್ದರು.

ಕಾನೂನಿನ ಸೇವೆಗೆ ವ್ಯಾಪ್ತಿಯಿಲ್ಲ: ಎನ್ ಸಿ ಶ್ರೀನಿವಾಸ್

ಕಚೇರಿ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಸರ್ಕಾರದ ಮಾಹಿತಿ ಹಕ್ಕು ಆಯೋಗದ ಮುಖ್ಯ ಆಯುಕ್ತ ಎನ್‌.ಸಿ ಶ್ರೀನಿವಾಸ್ ಅವರು, “ಕಾನೂನಿನ ಸೇವೆಗೆ ಯಾವುದೇ ವ್ಯಾಪ್ತಿಗಳಿಲ್ಲ.‌ ವಿದ್ಯಾರ್ಥಿ ಜೀವನದಿಂದ ಹಲವು ಸಮಾಜಮುಖಿ ಹೋರಾಟ ಮಾಡುತ್ತಾ ಬಂದಿರುವ ಜಿನೇಂದ್ರ ಕುಮಾರ್ ಮತ್ತು ತಂಡದರವರು ಸತತವಾಗಿ ಮಂಗಳೂರಿನಲ್ಲಿ ಮೂರು ದಶಕಗಳಿಂದ ಕಾನೂನು ಸೇವೆಯಲ್ಲಿ ಜನಾನುರಾಗಿಯಾಗಿದ್ದಾರೆ. ಈಗ ತಮ್ಮ ಸೇವೆಯನ್ನು ಹೈಕೋರ್ಟ್‌ ನ್ಯಾಯವಾದಿಗಳ ಅವರ ತಂಡ ಬೆಂಗಳೂರಿಗೆ ವಿಸ್ತರಿಸಿದೆʼʼ ಎಂದರು. ಕಳೆದ ಒಂದು ದಶಕಗಳ ಹಿಂದೆ ತಾವು ಮಂಗಳೂರಿನಲ್ಲಿ ನ್ಯಾಯಾಧೀಶರಾಗಿ ಸೇವೆ ಮಾಡಿದ ಸಂದರ್ಭದಲ್ಲಿ ಜಿನೇಂದ್ರ ಅವರ ಒಡನಾಟದ ಬಗ್ಗೆ ನೆನಪು ಮಾಡಿಕೊಂಡರು.

ಜನರ ಸೇವೆಗಾಗಿ ಬೆಂಗಳೂರಿನಲ್ಲಿ ಕಚೇರಿ: ಜಿನೇಂದ್ರ ಖನಗಾವಿ

ಕಚೇರಿಯ ಬಗ್ಗೆ ಮಾತನಾಡಿದ ಐಪಿಎಸ್ ಅಧಿಕಾರಿ ಜಿನೇಂದ್ರ ಖನಗಾವಿ ಇತ್ತೀಚಿನ ದಿನಗಳಲ್ಲಿ ಕಾನೂನಿನ ಬಗ್ಗೆ ಸಾರ್ವಜನಿಕರಿಗೆ ಅಪಾರ ನಂಬಿಕೆ ಹಾಗೂ ಗೌರವವನ್ನು ನ್ಯಾಯವಾದಿಗಳು ದೊರಕಿಸಿಕೊಟ್ಟಿದ್ದಾರೆ. ಇದರಲ್ಲಿ‌ ಜಿನೇಂದ್ರ ಕುಮಾರ್ ಹಾಗೂ ತಂಡದವರೂ ಸೇರಿದ್ದಾರೆ ಎಂದರು.

ಇದನ್ನೂ ಓದಿ: High court : ನಿಮಗೆ ಆಗದಿದ್ದರೆ, ಬೇರೆಯವರ ವೀರ್ಯ, ಅಂಡಾಣುನಿಂದ ಮಗು ಮಾಡ್ಕೊಬಹುದು!

ಈ ವೇಳೆ ಮಾತನಾಡಿದ ಬಿಜೆಕೆ ಅಸೋಸಿಯೇಟ್ಸ್ ಮುಖ್ಯಸ್ಥರಾದ ಜಿನೇಂದ್ರ ಕುಮಾರ್, ಕಾನೂನು ಸೇವೆ ನೀಡುವಲ್ಲಿ ನನ್ನ ತಂಡದವರ ಸಾಥ್ ಬಹಳಷ್ಟಿದೆ.‌ ಇದೀಗ ನಮ್ಮ‌ಸೇವೆ ರಾಜಧಾನಿಯಲ್ಲೂ ನಡೆಸಲು ಉತ್ಸುಕರಾಗಿದ್ದೇವೆ. ತಮ್ಮೆಲ್ಲರ ಸಹಕಾರ ಬೇಕು ಎಂದು ಕೇಳಿಕೊಂಡರು.

ಕಾರ್ಯಕ್ರಮದಲ್ಲಿ ಬಿಜೆಕೆ ಅಸೋಯೇಟ್ಸ್‌ನ ಬಂಧುವರ್ಗ, ಜಿನೇಂದ್ರ ಕುಮಾರ್ ಅವರ ಕುಟುಂಬ, ಸ್ನೇಹಿತರು, ಅಭಿಮಾನಿ ವರ್ಗ ಉಪಸ್ಥಿತರಿದ್ದರು.‌ ಕಚೇರಿಯ ರಚನೆ ಮತ್ತು ವಿನ್ಯಾಸದ ಬಗ್ಗೆ ಮಾತೃಶ್ರೀ ಬಿಲ್ಡರ್ಸ್ ಮತ್ತು ಇಂಟೀರಿಯರ್ಸ್ ಮಾಲಕರಾದ ಮಾಳ‌ ಹರ್ಷೇಂದ್ರ ಜೈನ್ ಮಾತನಾಡಿದರು. ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಹಿತರಕ್ಷಕ ಘಟಕ ನಿರ್ದೇಶಕ ಸೋಮಶೇಖರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Continue Reading

ಉಡುಪಿ

Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ಮಳೆಯಾಟ; ಇನ್ನೊಂದು ವಾರ ಮೋಡ ಕವಿದ ವಾತಾವರಣ

Rain News : ದಕ್ಷಿಣ ಒಳನಾಡು, ಮಲೆನಾಡಲ್ಲಿ ವ್ಯಾಪಕ ಮಳೆ ಸಾಧ್ಯತೆ ಇದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಟಕ್ಕೆ ಬ್ರೇಕ್‌ (Karnataka Weather Forecast) ಬಿದ್ದಿದೆ. ಎಲ್ಲೆಲ್ಲಿದೆ ಮಳೆ ಅಲರ್ಟ್‌?

VISTARANEWS.COM


on

By

Rain in south interior and malnad Cloudy weather for another week
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆಗ್ನೇಯ ಮತ್ತು ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪ್ರಭಾವದಿಂದಾಗಿ ರಾಜ್ಯದಲ್ಲಿ ಘಳಿಗೆಗೊಂದು ವಾತಾವರಣ (Karnataka weather Forecast) ಇರಲಿದೆ. ಒಮ್ಮೊಮ್ಮೆ ಬಿಸಿಲು ಇದ್ದರೆ ಮತ್ತೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಸಮಯ ಸಣ್ಣ ಮಳೆಯೊಂದಿಗೆ ಭಾರಿ ಮಳೆಯಾಗುವ (rain News) ಸಾಧ್ಯತೆ ಇದೆ..

ಭಾರಿ ಮಳೆ ಎಚ್ಚರಿಕೆ

ದಕ್ಷಿಣ ಒಳನಾಡಲ್ಲಿ ಭರ್ಜರಿ ಮಳೆಯಾಗುವ ನಿರೀಕ್ಷೆ ಇದೆ. ಪ್ರಮುಖವಾಗಿ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆ ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಮಳೆ ಅಬ್ಬರ ಇರಲಿದೆ.

ಅಲ್ಲಲ್ಲಿ ಮಳೆ

ಉತ್ತರ ಒಳನಾಡಲ್ಲಿ ಸಕ್ರಿಯವಾಗಿದ್ದ ಮಳೆಯು ದುರ್ಬಲಗೊಳ್ಳಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಕಲಬುರಗಿ, ರಾಯಚೂರು, ಯಾದಗಿರಿ ವಿಜಯಪುರದ ಅಲ್ಲಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಉಳಿದಂತೆ ಗದಗ, ಕೊಪ್ಪಳದಲ್ಲಿ ಒಣಹವೆ ಇರಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾದರೆ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿಂದು ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 35.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಶಿವಮೊಗ್ಗ, ಉಡುಪಿ ಹಾಗೂ ಉತ್ತರ ಕನ್ನಡ, ಕೊಪ್ಪಳ, ಗದಗ, ಯಾದಗಿರಿ, ಕಲಬುರಗಿ, ಚಿಕ್ಕಮಗಳೂರು, ಹಾವೇರಿ, ವಿಜಯಪುರ, ದಾವಣಗೆರೆ, ಧಾರವಾಡ, ರಾಯಚೂರು, ಬೆಳಗಾವಿ, ಬಾಗಲಕೋಟೆ, ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ನಿಂದ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ಇದನ್ನೂ ಓದಿ: Mens Winter Fashion: ಚಳಿಗಾಲದ ಮೆನ್ಸ್ ಲೇಯರ್‌ ಲುಕ್‌ಗೆ 3 ಮಿಕ್ಸ್‌ ಮ್ಯಾಚ್‌ ಸ್ಟೈಲಿಂಗ್‌ ರೂಲ್ಸ್

ಹಾಸನ ಜಿಲ್ಲೆಯಲ್ಲಿ ಸರಾಸರಿ ಕನಿಷ್ಠ ಉಷ್ಣಾಂಶ 17.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಜತೆಗೆ ಚಾಮರಾಜನಗರ, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಬೀದರ್ ಮತ್ತು ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರಿನಲ್ಲಿ ಕನಿಷ್ಠ ಉಷ್ಣಾಂಶ 16 ರಿಂದ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ -18 ಡಿ.ಸೆ
ಮಂಗಳೂರು: 35 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 19 ಡಿ.ಸೆ
ಗದಗ: 33 ಡಿ.ಸೆ – 18ಡಿ.ಸೆ
ಹೊನ್ನಾವರ: 36 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 21 ಡಿ.ಸೆ
ಬೆಳಗಾವಿ: 32 ಡಿ.ಸೆ – 18 ಡಿ.ಸೆ
ಕಾರವಾರ: 35 ಡಿ.ಸೆ – 24 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ.ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading
Advertisement
Maratha Mahamela cannot be held Belagavi district administration denies permission for MES
ಕರ್ನಾಟಕ6 mins ago

Assembly Session: ಮರಾಠ ಮಹಾಮೇಳಾವ್‌ ನಡೆಸುವಂತಿಲ್ಲ; ಎಂಇಎಸ್‌ಗೆ ಟಕ್ಕರ್‌ ಕೊಟ್ಟ ಜಿಲ್ಲಾಡಳಿತ

Tulu Language
ಕರ್ನಾಟಕ8 mins ago

Tulu Language : ತುಳುಗೆ ಸಿಗಲಿದೆಯೇ ಭಾಷಾ ಪ್ರಾತನಿಧ್ಯ? ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ!

Rajastan Elections: 10 reasons for BJP Win
ದೇಶ22 mins ago

Rajastan Elections 2023 : ರಾಜಸ್ಥಾನದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ; ದಿಗ್ವಿಜಯಕ್ಕೆ 10 ಕಾರಣ

raman singh bhupesh baghel
ದೇಶ23 mins ago

Election Result 2023: ಛತ್ತೀಸ್‌ಗಢದಲ್ಲಿ ಸುಳ್ಳಾದ ಎಕ್ಸಿಟ್‌ ಪೋಲ್‌, ಗೆಲುವಿನತ್ತ ಬಿಜೆಪಿ ದಾಪುಗಾಲು

Ration card not cancelled and Vidhanasoudha
ಕರ್ನಾಟಕ35 mins ago

Ration Card : ಆರು ತಿಂಗಳಿಂದ ರೇಷನ್‌ ಪಡೆದಿಲ್ಲವೇ? ನಿಮ್ಮ ಕಾರ್ಡ್‌ ರದ್ದಾಗುವ ಭಯ ಬೇಡ! ಆದರೆ..?

Sachin Tendulkar says he is super impressed by Vicky Kaushal
ಕ್ರಿಕೆಟ್43 mins ago

Sachin Tendulkar: ವಿಕ್ಕಿ ಕೌಶಲ್‌ ಸಿನಿಮಾ ಕಂಡು ʻಸೂಪರ್ ಇಂಪ್ರೆಸ್ಡ್ʼ ಆದ ಸಚಿನ್ ತೆಂಡೂಲ್ಕರ್‌!

Crime Sense Murder Case
ಕರ್ನಾಟಕ1 hour ago

Murder Case : ವ್ಯಕ್ತಿಯ ತಲೆ ಸೀಳಿ ಮೋರಿಗೆ ಶವ ಎಸೆದ ಹಂತಕರು!

election five states
ದೇಶ1 hour ago

Election Results 2023: ಲೋಕಸಭೆ 65 ಸ್ಥಾನಗಳ ಮೇಲೆ ಇದೀಗ ಬಿಜೆಪಿ ಹಿಡಿತ! ಮೋದಿ ಹಾದಿ ಸುಲಭ!

Police call off protest FIR against lawyer who slapped police
ಕರ್ನಾಟಕ1 hour ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Shivraj Singh Chouhan
ದೇಶ2 hours ago

Ladli Behna: ಚೌಹಾಣ್‌ ‘ಗ್ಯಾರಂಟಿ’ಗೆ ಜೈ ಎಂದ ಮಧ್ಯಪ್ರದೇಶ ಜನ;‌ ಏನಿದು ಲಾಡ್ಲಿ ಬೆಹ್ನಾ?

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Police call off protest FIR against lawyer who slapped police
ಕರ್ನಾಟಕ1 hour ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ8 hours ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ20 hours ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ2 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ2 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ3 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ3 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

ಟ್ರೆಂಡಿಂಗ್‌