Site icon Vistara News

ಕಾಲೇಜಿನಲ್ಲಿ ಸಾವರ್ಕರ್ ಪೋಟೊ ಅಳವಡಿಕೆ: ವಿದ್ಯಾರ್ಥಿಗಳ ನಡುವೆ ಹೊಡೆದಾಟ

ಸಾವರ್ಕರ್

ಮಂಗಳೂರು: ಹಂಪನಕಟ್ಟೆಯಲ್ಲಿರುವ ಮಂಗಳೂರು ವಿವಿ ಕಾಲೇಜಿನ ತರಗತಿಯೊಂದರಲ್ಲಿ ವಿನಾಯಕ ದಾಮೋದರ ಸಾವರ್ಕರ್ ಭಾವಚಿತ್ರವನ್ನು ಅಳವಡಿಸಿರುವುದು ಈ ಹಿಂದೆ ಬೆಳಕಿಗೆ ಬಂದಿತ್ತು. ಈ ವಿಚಾರವಾಗಿ ವಿದ್ಯಾರ್ಥಿಗಳ ಎರಡು ಗುಂಪಿನ ನಡುವೆ ಹೊಡೆದಾಟವಾಗಿದೆ. ಹೊಡೆದಾಟದಲ್ಲಿ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಹಿಜಾಬ್‌ ವಿವಾದದ ಬೆನ್ನಲ್ಲೇ ಮಂಗಳೂರು ವಿವಿ ಕಾಲೇಜಿನ ತರಗತಿಯಲ್ಲಿ ಸಾವರ್ಕರ್ ಭಾವಚಿತ್ರವನ್ನು ವಿದ್ಯಾರ್ಥಿಗಳು ಅಳವಡಿಸಿದ್ದರು. ಇದನ್ನು ಕಾಲೇಜಿನ ಇತರ ವಿದ್ಯಾರ್ಥಿಗಳು ಪ್ರಾಂಶುಪಾಲರ ಗಮನಕ್ಕೆ ತಂದಾಗ ಅದನ್ನು ತೆರವುಗೊಳಿಸಲಾಗಿತ್ತು.

ಇದನ್ನೂ ಓದಿ | ಕೇಸರಿ ಅಂದರೆ ಕೆಲವರಿಗೆ ತುರಿಕೆ: ಹಿಜಾಬ್‌ ವಿರುದ್ಧ ಕಲ್ಲಡ್ಕ ಪ್ರಭಾಕರ ಭಟ್‌ ಕಿಡಿ

ತರಗತಿಯಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿ, ವ್ಯಾಪಕ ಟೀಕೆಗೆ ಗುರಿಯಾಗಿತ್ತು.

Exit mobile version