Site icon Vistara News

Suicide Case: ಡೆತ್‌ನೋಟ್‌ ಬರೆದಿಟ್ಟು ಅಂಗಡಿಯಲ್ಲಿ ನೇಣು ಬಿಗಿದುಕೊಂಡ ವ್ಯಾಪಾರಿ; ಆತ್ಮಹತ್ಯೆಗೆ ಏನು ಕಾರಣ?

Suicide Case

ಮಂಗಳೂರು: ಜಿಲ್ಲೆಯ ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಎಂಬಲ್ಲಿ ತಮ್ಮದೇ ಅಂಗಡಿಯಲ್ಲಿ ವ್ಯಾಪಾರಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರವೀಣ್ ಆಳ್ವಾ (45) ಆತ್ಮಹತ್ಯೆ (Suicide Case) ಮಾಡಿಕೊಂಡವರು.

ಥ್ರೆಡ್ ಹೌಸ್‌ ಎಂಬ ಹೊಲಿಗೆ ನೂಲಿನ ಮಳಿಗೆ ಹೊಂದಿದ್ದ ಪ್ರವೀಣ್‌ ಟೈಲರಿಂಗ್ ವೃತ್ತಿಗೆ ಬೇಕಾದ ಕಚ್ಚಾ ವಸ್ತು ಪೂರೈಕೆ ಮಾಡುತ್ತಿದ್ದರು. ಸೋಮವಾರ (ಏ.10) ಮುಂಜಾನೆ 6.30ಕ್ಕೆ ಮನೆಯಿಂದ ಅಂಗಡಿಗೆ ಬಂದಿದ್ದಾರೆ. ಬಳಿಕ ಅಂಗಡಿಯಲ್ಲಿದ್ದ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವ್ಯಾಪಾರದಲ್ಲಿ ನಷ್ಟವಾಗಿ, ಆರ್ಥಿಕವಾಗಿ ಸಂಕಷ್ಟದಲ್ಲಿ ಇದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ. ಇನ್ನು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ. ಅದರಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿರುವ ಪತ್ರ ಸಿಕ್ಕಿದೆ.

ಇದನ್ನೂ ಓದಿ: Murder Case: ಬೆಂಗಳೂರಿನ ಬಾರ್‌ನಲ್ಲಿ ರೌಡಿ ಶೀಟರ್‌ಗಳ ಗಲಾಟೆ; ಓರ್ವನ ಹತ್ಯೆಯಲ್ಲಿ ಅಂತ್ಯ

ಸದ್ಯ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ. ಇತ್ತ ಪ್ರವೀಣ್‌ ಆಳ್ವಾ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Exit mobile version