Site icon Vistara News

Dam Water | ಜುಲೈ 20ರಂದು ಕೆಆರ್‌ಎಸ್‌, ಕಬಿನಿ ಜಲಾಶಯಕ್ಕೆ ಸಿಎಂ ಬೊಮ್ಮಾಯಿ ಬಾಗಿನ

ಸಿಎಂ ಬೊಮ್ಮಾಯಿ

ಮೈಸೂರು: ಭಾರಿ ಮಳೆಯಿಂದ ಬಹುತೇಕ ತುಂಬಿರುವ ಕಾವೇರಿ ಹಾಗೂ ಕಬಿನಿ ಜಲಾಶಯಕ್ಕೆ (Dam Water) ಜುಲೈ 20 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಸಲ್ಲಿಸಲಿದ್ದಾರೆ. ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ ಒಂದು ವರ್ಷದ ಅವಧಿಯಲ್ಲಿ ಎರಡನೇ ಬಾರಿಗೆ ಈ ಜಲಾಶಯಗಳಿಗೆ ಬಾಗಿನ ಸಲ್ಲಿಸುತ್ತಿರುವುದು ವಿಶೇಷವಾಗಿದೆ.

ಜುಲೈ 20 ರಂದು ಸಿಎಂ ಬೊಮ್ಮಾಯಿ ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಜುಲೈ 20ರಂದು ಬೆಳಗ್ಗೆ 10 ಗಂಟೆಗೆ ಮೊದಲು ಚಾಮುಂಡಿ ಬೆಟ್ಟಕ್ಕೆ ಸಿಎಂ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ 11.30ಕ್ಕೆ ಜಿಲ್ಲೆ ಎಚ್‌.ಡಿ.ಕೋಟೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ತೆರಳಿ ಬಾಗಿನ ಸಮರ್ಪಿಸಲಿದ್ದಾರೆ. ಆನಂತರ ಮಧ್ಯಾಹ್ನ 12.10ಕ್ಕೆ ಕೃಷ್ಣರಾಜಸಾಗರ ಜಲಾಶಯಕ್ಕೆ (ಕೆಆರ್‌ಎಸ್) ಬಾಗಿನ ನೀಡಲಿದ್ದಾರೆ.

ಇದನ್ನೂ ಓದಿ | ಕುಸಿಯುವ ಹಂತದಲ್ಲಿ ಕೊಡಗು ಜಿಲ್ಲಾಡಳಿತ ಕಚೇರಿಯ ತಡೆಗೋಡೆ; ರಾಷ್ಟ್ರೀಯ ಹೆದ್ದಾರಿ 275 ಬಂದ್

Exit mobile version