Davanagere Chitrasanthe: ಚಿತ್ರಕಲಾ ಪರಿಷತ್‌ನಿಂದ ಫೆ.26ರಂದು ದಾವಣಗೆರೆ ಚಿತ್ರಸಂತೆ - Vistara News

ಕರ್ನಾಟಕ

Davanagere Chitrasanthe: ಚಿತ್ರಕಲಾ ಪರಿಷತ್‌ನಿಂದ ಫೆ.26ರಂದು ದಾವಣಗೆರೆ ಚಿತ್ರಸಂತೆ

Davanagere Chitrasanthe: ದಾವಣಗೆರೆ ಚಿತ್ರಸಂತೆಯನ್ನು ಸಂಸದ ಜಿ.ಎಂ ಸಿದ್ದೇಶ್ವರ್ ಉದ್ಘಾಟಿಸಲಿದ್ದಾರೆ ಎಂದು ಚಿತ್ರಸಂತೆ ಸ್ವಾಗತ ಸಮಿತಿಯ ಅಧ್ಯಕ್ಷ ಬಿ.ಜಿ‌.ಅಜಯ ಕುಮಾರ್ ಮಾಹಿತಿ ನೀಡಿದ್ದಾರೆ. ಅಂದು ಬೆಳಗ್ಗೆ 8 ಗಂಟೆಯಿಂದ ಸಂಹೆ 7 ಗಂಟೆವರೆಗೆ ಚಿತ್ರ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ.

VISTARANEWS.COM


on

Davanagere Chitrasanthe
ದಾವಣಗೆರೆ ಚಿತ್ರಸಂತೆಯ ವಿವರ ನೀಡಿದ ಚಿತ್ರಸಂತೆ ಸ್ವಾಗತ ಸಮಿತಿಯ ಅಧ್ಯಕ್ಷ ಬಿ.ಜಿ‌.ಅಜಯ ಕುಮಾರ್.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: “ಚಿತ್ರಕಲಾ ಪರಿಷತ್‌ನಿಂದ 2ನೇ ವರ್ಷದ ದಾವಣಗೆರೆ ಚಿತ್ರಸಂತೆಯನ್ನು (Davanagere Chitrasanthe) ಭಾನುವಾರ (ಫೆ.26) ದಂದು ನಗರದ ಎವಿಕೆ ಕಾಲೇಜು ರಸ್ತೆಯಲ್ಲಿ ಹಮ್ಮಿಕೊಳ್ಳಲಾಗಿದೆ” ಎಂದು ಮಾಜಿ ಮೇಯರ್ ಹಾಗೂ ಚಿತ್ರಸಂತೆ ಸ್ವಾಗತ ಸಮಿತಿಯ ಅಧ್ಯಕ್ಷ ಬಿ.ಜಿ‌.ಅಜಯ ಕುಮಾರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಫೆ.26 ರಂದು ಬೆಳಗ್ಗೆ 8 ರಿಂದ ಸಂಜೆ 7 ಗಂಟೆವರೆಗೂ “ಚಿತ್ರ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ” ಎಂದರು.

ಇದನ್ನೂ ಓದಿ: 7th Pay commission : ಮಾ.1 ರಿಂದ ಸರ್ಕಾರಿ ನೌಕರರ ಮುಷ್ಕರ ಖಚಿತ; ಆಸ್ಪತ್ರೆ, ಶಾಲೆ, ಸರ್ಕಾರಿ ಕಚೇರಿಗಳಲ್ಲಿ ಸೇವೆ ಬಂದ್‌

“ಎವಿಕೆ ರಸ್ತೆಯಲ್ಲಿನ ಶ್ರೀರಾಮ ದೇವಸ್ಥಾನದಿಂದ ಬಿ.ಎಸ್. ಚನ್ನಬಸಪ್ಪ ಶಾಪ್‌ವರೆಗೂ ಎರಡು ಮಹಾದ್ವಾರ ನಿರ್ಮಾಣ ಮಾಡಲಾಗಿದೆ. ಫೆ.26 ರಂದು ಬೆಳಗ್ಗೆ 10.30ಕ್ಕೆ ಸಂಸದ ಜಿ.ಎಂ ಸಿದ್ದೇಶ್ವರ್ ಅವರು ಚಿತ್ರಸಂತೆಯನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಎಸ್.ಎ ರವೀಂದ್ರನಾಥ್, ಎಂ.ಪಿ.ರೇಣುಕಾಚಾರ್ಯ, ಎಸ್.ವಿ.ರಾಮಚಂದ್ರ ಮತ್ತಿತರರು ಆಗಮಿಸಲಿದ್ದಾರೆ. ಮಾಜಿ ಮೇಯರ್ ಬಿ.ಜಿ ಅಜಯ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ” ಎಂದು ವಿವರಿಸಿದರು.

“ಚಿತ್ರ ಸಂತೆಗೆ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ಒಡಿಶಾ, ಜಾರ್ಖಂಡ್, ರಾಜಸ್ಥಾನ ಸಹಿತ ಎಲ್ಲೆಡೆಯಿಂದ ಒಟ್ಟು 130 ಕಲಾವಿದರು ಭಾಗವಹಿಸಲಿದ್ದಾರೆ. ಹೊರಗಿನಿಂದ ಬರುವ ಕಲಾವಿದರಿಗೆ ವಸತಿ ವ್ಯವಸ್ಥೆ, ಮಳಿಗೆ ಹಾಕುವ ಎಲ್ಲ ಕಲಾವಿದರಿಗೆ ದಾವಣಗೆರೆ ಬೆಣ್ಣೆ ದೋಸೆ, ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ” ಎಂದರು.

ಇದನ್ನೂ ಓದಿ: Basavaraja Bommai : ಎಲ್ಲ ಮುಖ್ಯಮಂತ್ರಿಗಳ ಆಡಳಿತ ಅನಾವರಣಕ್ಕೆ ಮ್ಯೂಸಿಯಂ ಸ್ಥಾಪನೆ ಪ್ರತಿಪಾದಿಸಿದ ಬೊಮ್ಮಾಯಿ

“ಚಿತ್ರಸಂತೆಯಲ್ಲಿ ಪ್ರತಿಭಾವಂತ ಕಲಾವಿದರಿಗೆ, ಉತ್ತಮ ಮಳಿಗೆ ಗುರುತಿಸಿ 9 ಬಹುಮಾನ ನೀಡಲಾಗುತ್ತಿದೆ. ಚಿತ್ರಸಂತೆಯ ತೀರ್ಪುಗಾರರಾಗಿ ಹಿರಿಯ ವ್ಯಂಗ್ಯ ಚಿತ್ರ ಕಲಾವಿದರಾದ ಎಚ್.ಬಿ. ಮಂಜುನಾಥ್ ನೇತೃತ್ವದಲ್ಲಿ ಹಿರಿಯ ಪತ್ರಕರ್ತ ಸಿದ್ದಯ್ಯ ಹಿರೇಮಠ, ಚಿತ್ರಕಲೆ ಮಾರುಕಟ್ಟೆ ತಜ್ಞರಾದ ರಷ್ಮಿ ಸುತಾರ್ ಭಾಗವಹಿಸಲಿದ್ದಾರೆ. ಅಂದು ಮಧ್ಯಾಹ್ನ 3ರಿಂದ 4 ಗಂಟೆಯೊಳಗೆ ಪ್ರಶಸ್ತಿ ವಿತರಣೆ ಮಾಡಲಾಗುವುದು ಎಂದರು.

“ಅಂದು ಸಂಜೆ 5.15ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ದಾವಣಗೆರೆ ವಿವಿ ಕುಲಪತಿ ಬಿ.ಡಿ ಕುಂಬಾರ, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ಜಿ.ಪಂ ಸಿಇಒ ಡಾ.ಎ.ಚೆನ್ನಪ್ಪ, ಬಿಜೆಪಿ ರೈತ ಮೋರ್ಚಾ ರಾಜ್ಯ ಸಂಚಾಲಕ ಸತೀಶ್ ಕೊಳೆನಹಳ್ಳಿ, ಸೈಯದ್ ಸೈಫುಲ್ಲಾ, ತೇಜಸ್ವಿ ಪಟೇಲ್ ಭಾಗವಹಿಸಲಿದ್ದಾರೆ” ಎಂದರು.

ಸುದ್ದಿಗೋಷ್ಠಿಯಲ್ಲಿ ಡಿ.ಶೇಷಾಚಲ, ರವಿ ಹುದ್ದಾರ್, ಸಂತೋಷ್, ಮಯೂರ್, ಗಣೇಶ್ ಆಚಾರ್, ಅಶೋಕ್ ಗೋಪನಾಳ್, ಶಿವಕುಮಾರ್, ಚನ್ನಬಸವನ ಗೌಡ್ರು, ಅನಿಲ್, ದಿವಾಕರ್, ರವಿ ಇದ್ದರು.

ಇದನ್ನೂ ಓದಿ: IPL 2023: ಹಾಲಿ ಚಾಂಪಿಯನ್​ ಗುಜರಾತ್​ ತಂಡಕ್ಕೆ ಹಿನ್ನಡೆ; ಸ್ಟಾರ್​ ಆಟಗಾರ ಟೂರ್ನಿಯಿಂದ ಔಟ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bengaluru Karaga: ಐತಿಹಾಸಿಕ ಬೆಂಗಳೂರು ಕರಗಕ್ಕೆ ಅದ್ಧೂರಿ ಚಾಲನೆ; ಉತ್ಸವ ವೀಕ್ಷಿಸಲು ಹರಿದು ಬಂದ ಜನಸಾಗರ

Bengaluru Karaga: ಬೆಂಗಳೂರಿನ ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ ರಥೋತ್ಸವ ಬಳಿಕ ರಾತ್ರಿ 2ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ ಚಾಲನೆ ನೀಡಲಾಯಿತು.

VISTARANEWS.COM


on

Bengaluru karaga
Koo

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮಂಗಳವಾರ ರಾತ್ರಿ ಅದ್ಧೂರಿಯಾಗಿ ಚಾಲನೆ ದೊರಕಿತು. ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ ರಥೋತ್ಸವ ಬಳಿಕ ರಾತ್ರಿ 2ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ (Bengaluru Karaga) ಚಾಲನೆ ನೀಡಲಾಯಿತು. ವೈಭವದ ಕರಗ ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಸಾವಿರಾರು ಜನರು ಆಗಮಿಸಿದ್ದರು.

ಬೆಳಗ್ಗೆಯಿಂದಲ್ಲೇ ತಾಯಿಗೆ ಬಳೆ ಶಾಸ್ತ್ರ, ತಾಳಿ ಶಾಸ್ತ್ರ, ಹೂ ಶಾಸ್ತ್ರ ವಿಶೇಷ ಪೂಜೆ ಸಲ್ಲಿಸಲಾಗಿದೆ. ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ವಾಪಸ್ ಬಂದು ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಭಕ್ತರ ಗೋವಿಂದ… ಗೋವಿಂದ… ಎಂಬ ಘೋಷಣೆಗಳ ನಡುವೆ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು.

ಮುಖ್ಯ ರಥ ಧರ್ಮರಾಯಸ್ವಾಮಿ ರಥದಲ್ಲಿ ಅರ್ಜುನ‌ ಮತ್ತು ದ್ರೌಪದಿ ದೇವಿ ವಿರಾಜಮಾನರಾಗಿದ್ದರು. ಚಿಕ್ಕ ರಥದಲ್ಲಿ ಗ್ರಾಮದೇವಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಪಾಂಡವರ ಮೂರ್ತಿಗಳು ಸೇರಿ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥಗಳು ಮುಂದೆ ಸಾಗುತ್ತಿದ್ದಂತೆ ದೇಗುಲದಿಂದ ದ್ರೌಪದಿ ದೇವಿ ಕರಗ ಹೊರಬಂದಿತು.

ಕರಗ ಸಾಗುವ ರಾಜಬೀದಿಗಳೆಲ್ಲಾ ಬಣ್ಣ ಬಣ್ಣದ ಲೈಟಿಂಗ್‌ಗಳಿಂದ ಕಂಗೊಳಿಸುತ್ತಿರುವಂತದ್ದವು. ಈ ಬಾರಿಯೂ ಮಸ್ತಾನ್ ಸಾಬ್ ದರ್ಗಾಗೆ ಕರಗ ಭೇಟಿ ನೀಡಲಿದೆ. ನಸುಕಿನ ಜಾವ 4 ಗಂಟೆ ಹೊತ್ತಿಗೆ ದರ್ಗಾಗೆ ಭೇಟಿ ನೀಡಲಿದೆ.

ಕರಗ ಮೆರವಣಿಗೆ ಮಾರ್ಗ

ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಾಗಲಿದೆ. ನಂತರ ಕೆ.ಆರ್. ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ತೆರಳಲಿದೆ.

ಬಳಿಕ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ, ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸಾಗಲಿದೆ.

ಇದನ್ನೂ ಓದಿ | Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

ಕಿಲ್ಲಾರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಅವೆನ್ಯೂ ರಸ್ತೆ ಕ್ರಾಸ್, ಆರ್.ಟಿ.ರಸ್ತೆ, ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಣಕಲ್ ಪೇಟೆ ಮೂಲಕ ಬುಧವಾರ ಬೆಳಗ್ಗೆ 7 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಲಿದೆ. ಬೆಳಗ್ಗೆ 8 ಗಂಟೆಗೆ ತಾಯಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಕರಗಕ್ಕೆ ತೆರೆ ಬೀಳಲಿದೆ.

Continue Reading

ಬೆಂಗಳೂರು

Voters Pledge: ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಮತದಾನ ಪ್ರತಿಜ್ಞಾವಿಧಿ ಬೋಧನೆ

Voters Pledge: ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯ ಮತದಾನ ಮಾಡುವಂತೆ ಕರ್ನಾಟಕ ರಾಜ್ಯ ಸಹಕಾರ ತರಬೇತಿ ಸಂಸ್ಥೆಯಲ್ಲಿ ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧಿಸಲಾಗಿದೆ.

VISTARANEWS.COM


on

Voters' Pledge
Koo

ಬೆಂಗಳೂರು: ಲೋಕಸಭಾ ಚುನಾವಣೆ-2024ರಲ್ಲಿ ಪ್ರತಿಯೊಬ್ಬರೂ ಕಡ್ಡಾಯ ಮತದಾನ ಮಾಡುವಂತೆ, ಮತದಾನದ ಮಹತ್ವ ಮತ್ತು ಅದರ ಬಗ್ಗೆ ವ್ಯಾಪಕ ಪ್ರಚಾರ ಮಾಡುವಂತೆ ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಕರ್ನಾಟಕ ರಾಜ್ಯ ಸಹಕಾರ ತರಬೇತಿ ಸಂಸ್ಥೆಯಲ್ಲಿ ಸೋಮವಾರ ಪ್ರತಿಜ್ಞಾವಿಧಿ (Voters Pledge) ಬೋಧಿಸಲಾಯಿತು.

ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ಸದಸ್ಯರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವಂತೆ ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಲಕ್ಷ್ಮೀಪತಯ್ಯ ಅವರು ತಿಳಿಸಿದರು. ಇದೇ ವೇಳೆ ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಬೇಕು ಎಂದು ಪ್ರತಿಜ್ಞಾವಿಧಿ ಬೋಧಿಸಿದರು.

ಇದನ್ನೂ ಓದಿ | Voter ID: ಮತದಾನಕ್ಕೆ ವೋಟರ್ ಐಡಿ ಇಲ್ಲದಿದ್ದರೆ ಚಿಂತೆ ಬೇಡ, ಈ ದಾಖಲೆಗಳು ಸಾಕು

Continue Reading

ರಾಮನಗರ

Lok Sabha Election 2024: ಕೇಂದ್ರ ಸರ್ಕಾರದಿಂದ ರಾಜ್ಯದ ಬಗ್ಗೆ ತಾರತಮ್ಯ ಧೋರಣೆ: ಡಿ.ಕೆ. ಸುರೇಶ್

Lok Sabha Election 2024: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಡಿ.ಕೆ. ಸುರೇಶ್, ರಾಮನಗರದಲ್ಲಿ ಮಂಗಳವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಭರ್ಜರಿ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

VISTARANEWS.COM


on

DCM DK Shivakumar Election campaign for Bangalore Rural Lok Sabha Constituency Congress candidate DK Suresh In Ramanagara
Koo

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಡಿ.ಕೆ. ಸುರೇಶ್, ರಾಮನಗರದಲ್ಲಿ ಮಂಗಳವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಭರ್ಜರಿ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ (Lok Sabha Election 2024) ನಡೆಸಿದರು.

ರಾಮನಗರದಲ್ಲಿ ಮಂಗಳವಾರ ಅಪಾರ ಸಂಖ್ಯೆಯ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ನಡೆದ ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಸಂಸದ ಡಿ.ಕೆ. ಸುರೇಶ್ ಪರ ಡಿಸಿಎಂ ಡಿ.ಕೆ. ಶಿವಕುಮಾರ್, ಭರ್ಜರಿ ಮತಬೇಟೆ ನಡೆಸಿದರು.

ಇದನ್ನೂ ಓದಿ: Lok Sabha Election 2024: ಬೆಂಗಳೂರಲ್ಲಿ ನಾಳೆಯಿಂದ ಏ.26ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ; ಮದ್ಯ ಮಾರಾಟವೂ ಬಂದ್‌

ಈ ವೇಳೆ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಡಿ.ಕೆ. ಸುರೇಶ್ ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯದ ವಿಚಾರದಲ್ಲಿ ಮಲತಾಯಿ ಧೋರಣೆ ತೋರಿದ್ದು, ಎಲ್ಲರಿಗೂ ಅನ್ಯಾಯ ಮಾಡಿದೆ. ಈ ವಿಚಾರವನ್ನು ರಾಜ್ಯ ಹಾಗೂ ದೇಶದ ಜನರ ಗಮನಕ್ಕೆ ತಂದಿದ್ದೇನೆ. ನಮ್ಮ ಮುಂದಿನ ಪೀಳಿಗೆಗಳು ರಾಜ್ಯದಲ್ಲೇ ಸ್ವಾಭಿಮಾನದಿಂದ ಬದುಕಬೇಕಾದರೆ ತೆರಿಗೆ ಹಕ್ಕನ್ನು ಪ್ರತಿಪಾದನೆ ಮಾಡಬೇಕು ಎಂದ ಅವರು, ನಮ್ಮ ಉದ್ಯೋಗಗಳು, ಅಭಿವೃದ್ಧಿ, ಅನುದಾನವು ಉತ್ತರ ಪ್ರದೇಶ, ಗುಜರಾತ್, ಬಿಹಾರದ ಪಾಲಾಗುತ್ತಿವೆ ಎಂದು ಆರೋಪಿಸಿದರು.

ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ನಿಮ್ಮ ಸೇವೆ ಮಾಡಿದ್ದೇನೆ. ಈ ಜಿಲ್ಲೆಯಲ್ಲಿ ಅಭಿವೃದ್ಧಿ ಪ್ರಾರಂಭವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಮನಗರ ಪಟ್ಟಣದ ಅಭಿವೃದ್ಧಿಗೆ 800 ಕೋಟಿಗೂ ಹೆಚ್ಚು ಅನುದಾನವನ್ನು ಮಂಜೂರು ಮಾಡಿದ್ದೇವೆ. ಈ ಭಾಗದಲ್ಲಿ ರಸ್ತೆ, ಒಳಚರಂಡಿ ದುಸ್ಥಿತಿಯಲ್ಲಿದ್ದು, ಇದೆಲ್ಲವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ಈ ಬಾರಿಯ ಚುನಾವಣೆಯಲ್ಲಿ ಮತ್ತೊಮ್ಮೆ ತಮಗೆ ಅವಕಾಶ ನೀಡಿ, ಹಸ್ತದ ಗುರುತಿಗೆ ಮತ ನೀಡಿ ಗೆಲ್ಲಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: Money Guide: ಮನೆ ಪೂರ್ತಿಯಾಗುವ ಮುನ್ನವೇ ಸಾಲದ ಹಣ ಖರ್ಚಾಯ್ತೆ? ಚಿಂತೆ ಬೇಡ; ಟಾಪ್‌ ಅಪ್‌ ಲೋನ್‌ಗೆ ಅಪ್ಲೈ ಮಾಡಿ

ಈ ಸಂದರ್ಭದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Priyanka Gandhi: ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಮಂಗಳಸೂತ್ರ ಉಳಿಸೋದು ಗೊತ್ತಿಲ್ಲವೇ?; ಮೋದಿ ವಿರುದ್ಧ ಪ್ರಿಯಾಂಕ ಗಾಂಧಿ ವಾಗ್ದಾಳಿ

Priyanka Gandhi: ಬಿಜೆಪಿಯವರು ಯಾವ ರೀತಿ ಹೊಲಸು, ಸಣ್ಣತನದ ಮಾತನ್ನಾಡಿ ರಾಜಕಾರಣ ಮಾಡ್ತಿದ್ದಾರೆ ಅಂತ ನೋಡುತ್ತಿದ್ದೀರಿ ಎಂದು ಪ್ರಧಾನಿ ಮೋದಿ ಅವರ ಮಂಗಳಸೂತ್ರದ ಹೇಳಿಕೆಗೆ ಪ್ರಿಯಾಂಕ ಗಾಂಧಿ ತಿರುಗೇಟು ನೀಡಿದ್ದಾರೆ.

VISTARANEWS.COM


on

Priyanka Gandhi
Koo

ಬೆಂಗಳೂರು: ಕಳೆದ ಎರಡು ದಿನಗಳಿಂದ ಪ್ರಧಾನಿ ಮೋದಿ ಬಾಯಲ್ಲಿ ಎಂತೆಂಥ ಮಾತುಗಳು ಬರುತ್ತಿವೆಯೋ ನೋಡುತ್ತಿದ್ದೇವೆ. ಕಾಂಗ್ರೆಸ್‌ ಮಂಗಳಸೂತ್ರವನ್ನೇ ಕಿತ್ತುಕೊಳ್ಳುತ್ತದೆ ಎಂಬ ಮಾತುಗಳನ್ನಾಡಿದ್ದಾರೆ. ನನ್ನ ತಾಯಿಯ ಮಂಗಳಸೂತ್ರ ದೇಶಕ್ಕಾಗಿ ಬಲಿಯಾಗಿದೆ. ಮಹಿಳೆಯರ ಮನಸ್ಸಲ್ಲಿ ಇರುವ ಸೇವೆಯ ಭಾವನೆ ಬಿಜೆಪಿಗೆ ಅರ್ಥವಾಗುವುದಿಲ್ಲ. ಮಂಗಳಸೂತ್ರದ ಬಗ್ಗೆ ಮಾತನಾಡುವ ಮೋದಿ ಅವರಿಗೆ ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಮಂಗಳಸೂತ್ರ ಉಳಿಸುವುದು ಗೊತ್ತಿಲ್ಲವೇ? ಅವರಿಗೆ ನಾಚಿಕೆ ಆಗಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯಾದರ್ಶಿ ಪ್ರಿಯಾಂಕ ಗಾಂಧಿ (Priyanka Gandhi) ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು ದಕ್ಷಿಣದ ಕ್ಷೇತ್ರದ ಬೊಮ್ಮನಹಳ್ಳಿಯಲ್ಲಿ‌ ಆಯೋಜಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಸ್ವಂತ ಅಜ್ಜಿ ಅವರು ಒಡವೆ ಅಡವಿಟ್ಟು ಸೈನಿಕರಿಗೆ ನೆರವಾದರು. ನಮ್ಮದು ಸ್ವಾತಂತ್ರ್ಯ ತಂದು ಕೊಡುವಲ್ಲಿ ತ್ಯಾಗ ಬಲಿದಾನ ಮಾಡಿದ ಪಕ್ಷ. ಅದೇ ನಮ್ಮ ಕುಟುಂಬದ ಇತಿಹಾಸ ಎಂದು ತಿಳಸಿದರು.

ಬಿಜೆಪಿ ಪಕ್ಷಕ್ಕೆ ಹೆಣ್ಣು ಮಕ್ಕಳ ಕಷ್ಟ ಅರ್ಥವಾಗಲ್ಲ. ಪ್ರಧಾನಿ ಮೋದಿ ಅವರಿಗೆ ಮಾಂಗಲ್ಯ ಬೆಲೆ ಗೊತ್ತಿಲ್ಲ. ರೈತರ ಸಾಲ ಹೆಚ್ಚಾದಾಗ ಆ ಮಹಿಳೆ ಮಾಂಗಲ್ಯ ಅಡಮಾನ ಇಡುತ್ತಾರೆ. ಮನೆಯಲ್ಲಿ ಯಾರಿಗಾದರೂ ಕಷ್ಟ ಎದುರಾದರೆ ಮಾಂಗಲ್ಯ ಇಡುತ್ತಾಳೆ. ದೇಶದಲ್ಲಿ ಲಾಕ್‌ಡೌನ್‌ ಆದಾಗ ಬಡವರಿಗೆ ಊಟ ಇಲ್ಲ. ಎಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ರೈತರು ಪ್ರತಿಭಟನೆ ಮಾಡಿದರ 609 ರೈತರು ಸತ್ತರು. ಆಗ ಮೋದಿ ಅವರಿಗೆ ಮಾಂಗಲ್ಯ ನೆನಪಾಗಲಿಲ್ವಾ? ಮಣಿಪುರದಲ್ಲಿ ಒಂದು ಹೆಣ್ಣನ್ನು ಬೆತ್ತಲೆ ಮಾಡಿದಾಗ ಮೋದಿ ಎಲ್ಲಿದ್ದರು? ಆ ಮಹಿಳೆ ಮಂಗಳಸೂತ್ರದ ಬಗ್ಗೆ ಗೌರವ ಯಾಕೆ ಇರಲಿಲ್ಲ. ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಮಂಗಳಸೂತ್ರ ಉಳಿಸೋದು ಗೊತ್ತಿಲ್ಲವೇ? ದೇಶದ ಬಗ್ಗೆ ಇವರಿಗೆ ಒಂದು ಚೂರು ಕಾಳಜಿ ಇಲ್ವಾ? ಮೋದಿ ಅವರಿಗೆ ನಾಚಿಕೆ ಆಗಬೇಕು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ | Lok Sabha Election 2024: ಸಂವಿಧಾನ ತಿದ್ದುಪಡಿ ಮಾಡುವುದಾಗಿ ಘೋಷಿಸಿದ ಪ್ರಿಯಾಂಕಾ ಗಾಂಧಿ!

ಕಾಂಗ್ರೆಸ್‌ ಗ್ಯಾರಂಟಿಗಳಿಂದ ರಾಜ್ಯದ ಕೋಟ್ಯಂತರ ಜನರಿಗೆ ಅನುಕೂಲವಾಗುತ್ತಿದೆ. ದೇಶಾದ್ಯಂತ ನುಡಿದಂತೆ ನಡೆಯುವ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ. ಕರ್ನಾಟದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಇನ್ನು ಪ್ರತಿಯೊಬ್ಬರಿಗೂ ನ್ಯಾಯ ಒದಗಿಸುತ್ತೇವೆ ಎಂದು ನಿಮ್ಮ ಮುಂದೆ ಬಂದಿದ್ದೇವೆ. ಹೆಣ್ಣು ಮಕ್ಕಳಿಗೆ ಒಂದು ಲಕ್ಷ ಕೊಡುವ ನಿರ್ಧಾರ ಕಾಂಗ್ರೆಸ್ ಮಾಡಿದೆ. ಯುವಕರಿಗೆ ಉದ್ಯೋಗ ನೀಡೊದಕ್ಕೆ ಅಪ್ರೆಂಟಿಷಿಪ್ ಕಾರ್ಯಕ್ರಮ ಶುರು ಮಾಡ್ತಿದ್ದೇವೆ. ಶ್ರಮಿಕ್ ನ್ಯಾಯ್ ಕೂಲಿ ಕೆಲಸ ಮಾಡುವವರಿಗೆ ಇನ್ಶೂರೆನ್ಸ್ ಕೊಡುತ್ತೇವೆ ಎಂದು ಭರವಸೆ ನೀಡಿದರು.

ದೇಶದಲ್ಲಿ ಬೆಲೆ ಏರಿಕೆಯಿಂದ ಸಾಮಾನ್ಯರಿಗೆ ಕಷ್ಟ ಆಗುತ್ತಿದೆ. ಬೆಲೆ ಏರಿಕೆ, ನಿರುದ್ಯೋಗ ಎರಡು ಕಷ್ಟಗಳು ನಿಮ್ಮ ಮುಂದಿವೆ. ಮಹಿಳೆಯರಿಗೆ ಮನೆ ನಡೆಸುವ ಕಷ್ಟ ಗೊತ್ತಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ಚಿನ್ನ, ಬೆಳ್ಳಿ ಎಲ್ಲ ಬೆಲೆ ಏರಿದೆ. ಸಮಾಜದಲ್ಲಿ ಎಲ್ಲಾ ವರ್ಗದವರೂ ಬೆಲೆ ಏರಿಕೆ ಹೊರೆ ಎದುರಿಸುತ್ತಿದ್ದಾರೆ. ನಿರುದ್ಯೋಗ ಸಮಸ್ಯೆ ಎಲ್ಲರನ್ನೂ ಕಾಡುತ್ತಿದೆ. ಪ್ರಧಾನಿ ಮೋದಿಯವರ 10 ವರ್ಷ ಆಡಳಿತ ನೋಡಿದ್ದೀರಾ? ನಿಮ್ಮ ಜೀವನದಲ್ಲಿ ಬದಲಾವಣೆ ಆಗಿದ್ಯಾ? ಅನ್ನೋ ಪ್ರಶ್ನೆ ಮಾಡಬೇಕಿದೆ. ನಿಮ್ಮೆಲ್ಲರ ಮುಂದೆ ಸೂಪರ್ ಮ್ಯಾನ್ ತರ ಬಂದು ನಿಂತಿದ್ರು. ಅಚ್ಚೇ ದಿನ್ ಬಂತಾ ಎಂದು ಪ್ರಶ್ನಿಸಿದರು.

ನೀವೆಲ್ಲರೂ ಮೋದಿ ಅವರ 10 ವರ್ಷ ನೋಡಿದ್ದೀರಿ, ಹೀಗಾಗಿ ಮೋದಿ ಅವರನ್ನ ಪ್ರಶ್ನೆ ಮಾಡಬೇಕು. ನಾವೇನು ಕಷ್ಟ ಪಡುತ್ತಿದ್ದೇವೆಯೋ ಅದೇ ನಿಜಾಂಶ. ಪ್ರಧಾನಿ ಅವರಿಗೆ ಮುಖ್ಯವಾದ ಸ್ನೇಹಿತರಿದ್ದಾರೆ. ಅವರಿಗೋಸ್ಕರ ನೀತಿ ನಿಯಮವನ್ನೇ ಬದಲಾಯಿಸುತ್ತಿದ್ದಾರೆ. ದೇಶದ ವಿಮಾನ ನಿಲ್ದಾಣ ಸೇರಿದಂತೆ ಪ್ರತಿಯೊಂದು ಯೋಜನೆ ಅವರಿಗೆ ಮೀಸಲಿಡುತ್ತಿದ್ದಾರೆ. ಸಣ್ಣಪುಟ್ಟ ಉದ್ಯಮಿಗಳಿಗೆ ಏನು ಸಹಾಯ ಆಗ್ತಾ ಇಲ್ಲ. ರೈತರಿಗೆ ಬಡವರಿಗೆ ಯಾರಿಗೂ ಏನು ಸಹಾಯ ಇಲ್ಲ. ಸಹಾಯ ಮಾಡಿದರೆ 5 ಕೆಜಿ ಅಕ್ಕಿ ಕೊಟ್ಟು ತೃಪ್ತಿ ಪಡಿಸುತ್ತಿದ್ದಾರೆ. ಇವತ್ತು ಪ್ರಜಾಪ್ರಭುತ್ವವನ್ನು ದುರ್ಬಲ ಮಾಡಲು ಅವರು ಹೊರಟಿದ್ದು, ಸಂವಿಧಾನ ಬದಲಾಯಿಸಲು ಹೊರಟ್ಡಿದ್ದಾರೆ ಎಂದು ತಿಳಿಸಿದರು.

ಚುನಾವಣಾ ಬಾಂಡ್ ಅಂತ ದೊಡ್ಡ ಸ್ಕ್ಯಾಂ ನಡೆದಿತ್ತು. ಅದಕ್ಕೆ ಯಾರು ಫಂಡ್ ಕೊಟ್ಟಿದ್ದಾರೋ ಗೊತ್ತಾಗುವುದಿಲ್ಲ. ಸುಪ್ರೀಂಕೋರ್ಟ್ ಮಧ್ಯ ಪ್ರವೇಶ ಆದಾಗ ಗೊತ್ತಾಯಿತು. ಇವರೇನು ಮಾಡಿದರೂ ನಮಗೆ ಗೊತ್ತಾಗುವುದಿಲ್ಲ ಅಂತ ಬಿಜೆಪಿಯವರು ವಾಷಿಂಗ್ ಮಷಿನ್ ತೆರೆದಿಟಿದ್ದಾರೆ. ಕಪ್ಪು ಹಣ ಹಾಕಿ ಬಿಳಿ ಹಣ ಬರುತ್ತೆ ಎಂದು ಹೇಳುತ್ತಿದ್ದಾರೆ. ಭ್ರಷ್ಟಾಚಾರ ಮಾಡಿದವರನ್ನು ವಾಷಿಂಗ್‌ ಮಷಿನ್‌ನೊಳಗೆ ಹಾಕಿದರೆ ಹೊರಗೆ ಕ್ಲೀನ್ ಆಗಿ ಬರುತ್ತಾರೆ ಎಂದು ವ್ಯಂಗ್ಯವಾಡಿದರು.

ಚುನಾವಣೆ ಸಮಯದಲ್ಲಿ ಯಾರೊಬ್ಬರೂ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ. ಪ್ರಧಾನಿ ಅವರ ಫೋಟೊ ಇಟ್ಡುಕೊಂಟು ಮತ ಕೇಳುತ್ತಿದ್ದಾರೆ. ಬೆಂಗಳೂರಿನಂತಹ ನಗರಕ್ಕೆ ನಿಜವಾದ ನಾಯಕ ಬೇಕು. ಇವರು ಭಾವನಾತ್ಮಕ ರಾಜಕೀಯ ಮಾಡುತ್ತಿದ್ದಾರೆ.

ಇವತ್ತು ಪ್ರಗತಿಪರ ವಿಷಯಗಳ ಬಗ್ಗೆ ಚುನಾವಣೆ ಮಾಡುತ್ತಿಲ್ಲ. ಪ್ರಧಾನಿ ಮಂತ್ರಿ ಫೋಟೊ ಹಾಕಿ ಚುನಾವಣೆ ಎದುರಿಸುತ್ತಿದ್ದಾರೆ. ಸಂವಿಧಾನ ಬದಲಾವಣೆ ಮಾಡುತ್ತೀವಿ ಎಂದು ಚುನಾವಣೆ ಮಾಡುತ್ತಿದ್ದಾರೆ. ಬೆಂಗಳೂರು ಅಂತ ಸಿಟಿಗೆ ಪ್ರಗತಿ, ಉನ್ನತಿ ಬಗೆಗಿನ‌ ನಾಯಕರು ಬೇಕು. ಆದರೆ ಇವರು ಭಾವನಾತ್ಮಕ ವಿಚಾರಗಳಲ್ಲಿ ಚುನಾವಣೆ ಮಾಡುತ್ತಿದ್ದಾರೆ. ಈ ರೀತಿಯ ನಾಯಕರು ಕರ್ನಾಟಕಕ್ಕೆ ಬೇಕಿಲ್ಲ ಎಂದರು.

ಬಿಜೆಪಿ ಪಕ್ಷಕ್ಕೆ ಹೆಣ್ಮಕ್ಕಳ ಕಷ್ಟ ಅರ್ಥವಾಗಲ್ಲ, ಹೆಣ್ಮಕ್ಕಳ ಸೇವಾ ಮನೋಭಾವ ಕುಟುಂಬ ನಿರ್ವಹಣೆಗೆ ಮಂಗಳಸೂತ್ರ ಅಡವಿಟ್ಟು ಜೀವನ ಮಾಡುತ್ತಾರೆ. ಮಂಗಳ ಸೂತ್ರದ ಬಗ್ಗೆ ಮಾತನಾಡುವ ಮೋದಿ ನೋಟ್ ಬ್ಯಾನ್ ಆದಾಗ ಹೆಣ್ಮಕ್ಕಳು ಪಟ್ಟ ಕಷ್ಟ ಎಲ್ಲಿ ಹೋಗಿದ್ದರು. ರಾತ್ರೋರಾತ್ರಿ ಲಾಕ್‌ಡೌನ್ ಮಾಡಿದಾಗ ಅದೆಷ್ಟೋ ಮಂದಿ ಸಾವನ್ನಪ್ಪಿದರು. ಆ ಹೆಣ್ಣು ಮಕ್ಕಳು ಕಷ್ಟಪಟ್ಟಾಗ ಎಲ್ಲಿಹೋಗಿದ್ದರು. ರೈತರು ಅನೇಕ ಪ್ರತಿಭಟನೆ ಮಾಡಿದರು, 600 ರೈತರು ಪ್ರಾಣ ಬಿಟ್ಟರು, ಆ ರೈತ ಕುಟುಂಬದ ಮಹಿಳೆಯರ ಮಂಗಳಸೂತ್ರ ನೆನಪಾಗಲಿಲ್ಲವೇ? ಮಣಿಪುರ ಮಹಿಳೆಯ ವಸ್ತ್ರಾಪಹರಣ ಮಾಡಿದಾಗ ಮಂಗಳಸೂತ್ರ ನೆನಪಾಗಲಿಲ್ಲವೇ? ಮತದಾರರನ್ನು ಹೆದರಿಸಿ ಮತಹಾಕಿಸಿಕೊಳ್ಳಲು ಮುಂದಾಗಿರುವ ಪ್ರಧಾನಿಗೆ ನಾಚಿಕೆಯಾಗಬೇಕು‌.

ಬಿಜೆಪಿಯವರು ಹಿಂದು-ಮುಸ್ಲಿಮರ ನಡುವೆ ಒಡಕು ಮೂಡಿಸಿ ರಾಜಕೀಯ ಲಾಭ ಪಡೆಯುತ್ತಿದ್ದಾರೆ. ನಿಮಗೆ ನೈತಿಕತೆಯ ರಾಜಕಾರಣ ಬೇಕೋ, ನಾಟಕ ಮಾಡುವ ಪಕ್ಷ ಬೇಕೋ? ರಾಮ ಎನ್ನುವುದು ನೈತಿಕತೆ, ಸತ್ಯದ ಹಾದಿಯಲ್ಲಿ ನಡೆದವರು. ಮಹಾತ್ಮಗಾಂಧಿ ಕೂಡ ನಡೆದಿದ್ದು ಸತ್ಯದ ದಾರಿ. ಆದರೆ, ಅವರ ಮೇಲೆ ಗುಂಡು ಹಾರಿಸಿದಾಗಲೂ ಹೇ ರಾಮ್ ಅಂದ್ರು. ಸತ್ಯದ ಹಾದಿಯಲ್ಲಿ ನಡೆದು ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ ನಾವು. ಆದರೆ, ಬಿಜೆಪಿಯವರು ಪ್ರತಿದಿನ ನಾಟಕ ಮಾಡಿ ರಾಜಕೀಯ ಮಾಡುತ್ತಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯಾದರ್ಶಿ ಪ್ರಿಯಾಂಕ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ | Lok Sabha Election 2024: ಬಿಜೆಪಿ, ಕಾಂಗ್ರೆಸ್‌ ಜತೆ ಇರುವ ಮಿತ್ರ ಪಕ್ಷಗಳ ಯಾವವು? ಇಲ್ಲಿದೆ ಅಂತಿಮ ಚಿತ್ರಣ

ದೇಶದ ಮಾಧ್ಯಮಗಳಲ್ಲಿ ಎಲ್ಲವೂ ಚೆನ್ನಾಗಿದೆ ಅಂತ ತೋರಿಸುತ್ತಾರೆ, ವಿಪಕ್ಷಗಳ ಮೇಲಷ್ಟೇ ಅಲ್ಲ ಮಾದ್ಯಮಗಳ ಮೇಲೂ ಹಿಡಿತ ಸಾಧಿಸಿ ದುರಾಡಳಿತ ನಡೆಸುತ್ತಿದ್ದಾರೆ. ನಿಮ್ಮ ಹೋರಾಟ ಈಗ ಶುರು ಮಾಡಬೇಕು. ನಮಗೆ ಕಾಡುತ್ತಿರುವ ಸಮಸ್ಯೆಗಳ ಮೇಲೆ‌ ಚುನಾವಣೆ ನಡೆಯಬೇಕು. ಹೀಗಾಗಿ ಬಿಜೆಪಿಗೆ ತಕ್ಕಪಾಠ ಕಲಿಸಬೇಕು. ಇವತ್ತು ಬೆಲೆ ಏರಿಕೆ, ನಿರುದ್ಯೋಗ, ಶಿಕ್ಷಣ, ಆರೋಗ್ಯ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚೆಯ ಮೂಲಕ‌ ಚುನಾವಣೆ ಎದುರಿಸಿ. ನಾನು ಪ್ರಧಾನಿ ಮೋದಿಗೆ ಸವಾಲು ಹಾಕ್ತೇನೆ, ಇದು ನಿಮ್ಮ ಹೋರಾಟ, ದೇಶದ ಸಮಸ್ಯೆಗಳ ಮೇಲೆ ಚುನಾವಣೆ ನಡೆಯಬೇಕು ಎಂದು ಆಗ್ರಹಿಸಿದರು.

Continue Reading
Advertisement
Dina Bhavishya
ಭವಿಷ್ಯ12 mins ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Bengaluru karaga
ಕರ್ನಾಟಕ3 hours ago

Bengaluru Karaga: ಐತಿಹಾಸಿಕ ಬೆಂಗಳೂರು ಕರಗಕ್ಕೆ ಅದ್ಧೂರಿ ಚಾಲನೆ; ಉತ್ಸವ ವೀಕ್ಷಿಸಲು ಹರಿದು ಬಂದ ಜನಸಾಗರ

vistara Editorial ವಿಸ್ತಾರ ಸಂಪಾದಕೀಯ
ದೇಶ5 hours ago

ವಿಸ್ತಾರ ಸಂಪಾದಕೀಯ: ರಕ್ಷಣಾ ರಫ್ತು ಕ್ಷೇತ್ರದಲ್ಲಿ ಬೆಳವಣಿಗೆ ನಮ್ಮ ಹೆಗ್ಗಳಿಕೆ

IPL 2024
ಪ್ರಮುಖ ಸುದ್ದಿ5 hours ago

IPL 2024 : ಸ್ಟೊಯ್ನಿಸ್​​ ಶತಕ, ಚೆನ್ನೈ ವಿರುದ್ಧ 6 ವಿಕೆಟ್​ ಗೆಲವು ಸಾಧಿಸಿದ ಲಕ್ನೊ

Voters' Pledge
ಬೆಂಗಳೂರು6 hours ago

Voters Pledge: ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಮತದಾನ ಪ್ರತಿಜ್ಞಾವಿಧಿ ಬೋಧನೆ

Lok Sabha Election 2024
Lok Sabha Election 20246 hours ago

Lok Sabha Election 2024: ರಾಹುಲ್‌ ಗಾಂಧಿಯ ಡಿಎನ್‌ಎ ಪರೀಕ್ಷಿಸಬೇಕು; ವಿವಾದ ಹುಟ್ಟುಹಾಕಿದ ಶಾಸಕ ಅನ್ವರ್ ಹೇಳಿಕೆ

DCM DK Shivakumar Election campaign for Bangalore Rural Lok Sabha Constituency Congress candidate DK Suresh In Ramanagara
ರಾಮನಗರ6 hours ago

Lok Sabha Election 2024: ಕೇಂದ್ರ ಸರ್ಕಾರದಿಂದ ರಾಜ್ಯದ ಬಗ್ಗೆ ತಾರತಮ್ಯ ಧೋರಣೆ: ಡಿ.ಕೆ. ಸುರೇಶ್

Priyanka Gandhi
ಕರ್ನಾಟಕ6 hours ago

Priyanka Gandhi: ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಮಂಗಳಸೂತ್ರ ಉಳಿಸೋದು ಗೊತ್ತಿಲ್ಲವೇ?; ಮೋದಿ ವಿರುದ್ಧ ಪ್ರಿಯಾಂಕ ಗಾಂಧಿ ವಾಗ್ದಾಳಿ

Lok Sabha Election 2024
Lok Sabha Election 20247 hours ago

Lok Sabha Election 2024: ಕಾಂಗ್ರೆಸ್‌ ಅಧಿಕಾರಕ್ಕೆ ಬಂದೆ ದೇಶದಲ್ಲಿ ಶರಿಯಾ ಕಾನೂನು ಜಾರಿ; ಯೋಗಿ ಆದಿತ್ಯನಾಥ್ ವಾಗ್ದಾಳಿ

Amit Shah
ಕರ್ನಾಟಕ7 hours ago

Amit Shah: ಬೆಂಗಳೂರಲ್ಲಿ ಅಮಿತ್‌ ಶಾ ಹವಾ; ತೇಜಸ್ವಿ ಸೂರ್ಯ ಪರ ಭರ್ಜರಿ ರೋಡ್‌ ಶೋ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 mins ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌