Karnataka Election 2023 davangere district constituency wise election analysisದಾವಣಗೆರೆ ಜಿಲ್ಲೆ ಕ್ಷೇತ್ರ ಸಮೀಕ್ಷೆ: ಬಿಜೆಪಿಯ ಭದ್ರಕೋಟೆಯಲ್ಲಿ ಬದಲಾವಣೆಯ ಬಿರುಗಾಳಿ Vistara News
Connect with us

ಕರ್ನಾಟಕ ಎಲೆಕ್ಷನ್

ದಾವಣಗೆರೆ ಜಿಲ್ಲೆ ಕ್ಷೇತ್ರ ಸಮೀಕ್ಷೆ: ಬಿಜೆಪಿಯ ಭದ್ರಕೋಟೆಯಲ್ಲಿ ಬದಲಾವಣೆಯ ಬಿರುಗಾಳಿ

ದಾವಣಗೆರೆ ಜಿಲ್ಲೆ ಕ್ಷೇತ್ರ ಸಮೀಕ್ಷೆ: ಏಳು ವಿಧಾನಸಭಾ ಕ್ಷೇತ್ರ ಹೊಂದಿರುವ ದಾವಣಗೆರೆ ಜಿಲ್ಲೆಯಲ್ಲಿ ಕಳೆದ ಬಾರಿ 6 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ಭದ್ರ ಕೋಟೆ ಮಾಡಿಕೊಂಡಿತ್ತು. ಆದರೂ ಈ ಬಾರಿಯ ಚುನಾವಣೆ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಜಿಲ್ಲೆಯ ಕ್ಷೇತ್ರಗಳ ಸದ್ಯದ ಗ್ರೌಂಡ್‌ ರಿಪೋರ್ಟ್‌ ಇಲ್ಲಿದೆ.

VISTARANEWS.COM


on

Karnataka Election 2023 davangere district constituency wise election analysis
Koo
Karnataka Election 2023 davangere district constituency wise election analysis

ಯಶವಂತ್‌ ಕುಮಾರ್ ಎ. ವಿಸ್ತಾರ ನ್ಯೂಸ್, ದಾವಣಗೆರೆ
ಬೆಣ್ಣೆದೋಸೆ ಎಂದಾಕ್ಷಣ ನೆನಪಾಗೋದು ದಾವಣಗೆರೆ. ಈ ಬಾರಿಯ ದಾವಣಗೆರೆ ಜಿಲ್ಲೆಯ ಚುನಾವಣಾ ಕಣ ರಂಗೇರಿದೆ. 2018 ರ ಫಲಿತಾಂಶ ಉಳಿಸಿಕೊಳ್ಳಲು ಬಿಜೆಪಿ ಪ್ರಯತ್ನ ಪಡುತ್ತಿದ್ದರೆ, ಕಾಂಗ್ರೆಸ್ 2013ರ ಫಲಿತಾಂಶಕ್ಕಾಗಿ ಹೋರಾಟ ಮಾಡುತ್ತಿದೆ. ಜಿಲ್ಲೆಯಲ್ಲಿ ಈ ಮೊದಲು 8 ವಿಧಾನಸಭಾ ಕ್ಷೇತ್ರಗಳಿದ್ದು, ವಿಜಯನಗರ ಜಿಲ್ಲೆ ರೂಪುಗೊಂಡ ಮೇಲೆ ಹರಪನಹಳ್ಳಿ ತಾಲೂಕು ವಿಜಯನಗರಕ್ಕೆ ಸೇರಿದೆ. ಹೀಗಾಗಿ 7 ವಿಧಾನಸಭಾ ಕ್ಷೇತ್ರಗಳು ದಾವಣಗೆರೆ ಜಿಲ್ಲೆಯಲ್ಲಿ ಉಳಿದುಕೊಂಡಿವೆ.

Karnataka Election 2023 davangere district constituency wise election analysis

ಕಾಂಗ್ರೆಸ್‌ನಲ್ಲಿ ದಾವಣಗೆರೆ ಜಿಲ್ಲೆಯ ಹೈಕಮಾಂಡ್ ಎಂದೇ ಗುರುತಿಸಿಕೊಂಡಿರುವ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಮತ್ತು ಪುತ್ರ ಮಲ್ಲಿಕಾರ್ಜುನ್ ಈ ಬಾರಿ ತಮ್ಮ ಗೆಲುವಿಗಾಗಿ ಶ್ರಮಿಸುತ್ತಿದ್ದು, ಅಕ್ಕಪಕ್ಕದ ಕ್ಷೇತ್ರಗಳತ್ತ ತಿರುಗಿಯೂ ನೋಡುತ್ತಿಲ್ಲ. ಇದರಿಂದ ಉಳಿದ ವಿಧಾನಸಭಾ ಕ್ಷೇತ್ರಗಳಲ್ಲಿನ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಸ್ವಲ್ಪ ಹೊಡೆತ ಬೀಳುವ ಸಾಧ್ಯತೆ ಇದೆ. ಇನ್ನೂ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲೋಕಾಯುಕ್ತ ಪ್ರಕರಣ ಯಾರಿಗೆ ವರ, ಯಾರಿಗೆ ನಷ್ಟ ಎನ್ನುವ ಲೆಕ್ಕಾಚಾರ ಕೂಡ ನಡೆಯುತ್ತಿದೆ.

ದಾವಣಗೆರೆ ದಕ್ಷಿಣ:
ಕಾಂಗ್ರೆಸ್‌ ಬಿಜೆಪಿ
ನಡುವೆ ನೇರ ಹಣಾಹಣಿ

ಡಾ ಶಾಮನೂರು ಶಿವಶಂಕರಪ್ಪ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಡಾ.ಶಾಮನೂರು ಶಿವಶಂಕರಪ್ಪ ಅವರ ಶಕ್ತಿ ಕೇಂದ್ರ. 1994ರಲ್ಲಿ ಮೊದಲಬಾರಿಗೆ ಪಕ್ಷೇತರವಾಗಿ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪ ಶಾಸಕರಾಗಿ ಆಯ್ಕೆಯಾದರು. ಅಂದಿನಿಂದ ಇಲ್ಲಿಯವರೆಗೂ ಕ್ಷೇತ್ರದಲ್ಲಿ ಹಿಡಿತ ಸಾಧಿಸಿದ್ದಾರೆ.

ಬಿ ಜಿ ಅಜಯ್ ಕುಮಾರ್

2004, 2008, 2013, 2018 ಸತತವಾಗಿ ಡಾ. ಶಾಮನೂರು ಶಿವಶಂಕರಪ್ಪ ಗೆಲುವು ಸಾಧಿಸಿ ಸೋಲಿಲ್ಲದ ಸರದಾರರಾಗಿದ್ದಾರೆ. ಆದರೆ, ಈ ಬಾರಿ ಬಿಜೆಪಿ ಅಭ್ಯರ್ಥಿ ಬಿ. ಜಿ. ಅಜಯ್ ಕುಮಾರ್ ಭರ್ಜರಿ ಪೈಪೋಟಿ ನೀಡುತ್ತಿದ್ದಾರೆ. ಇನ್ನೂ ಜೆಡಿಎಸ್ ಅಸ್ವಿತ್ವಕ್ಕಾಗಿ ಹೋರಾಡುತ್ತಿದೆ.

ಬಿ.ಜಿ.ಅಜಯ್ ಕುಮಾರ್ ಹೊಸ ಅಭ್ಯರ್ಥಿಯಾದರೂ 1 ವರ್ಷ ಮಹಾನಗರ ಪಾಲಿಕೆ ಮೇಯರ್ ಆಗಿ ಜನರಿಗೆ ಹತ್ತಿರ ಆಗಿದ್ದಾರೆ. ಇಲ್ಲಿ ಮುಸ್ಲಿಮರ ಮತಗಳೇ ನಿರ್ಣಾಯಕವಾಗಿದ್ದು, ನೇರ ಹಣಾಹಣಿ ಇದೆ. ಶಾಮನೂರು ಶಿವಶಂಕರಪ್ಪ ಅವರಗೆ 92 ವರ್ಷ ವಯಸ್ಸಾಗಿದ್ದು, ಜನ ಒಪ್ಪುತ್ತಾರಾ ಅನ್ನೋ ಲೆಕ್ಕಾಚಾರ ಕೂಡ ಇದೆ.

ಕಳೆದ ಬಾರಿಯ ಫಲಿತಾಂಶ ಏನು?
ಡಾ.ಶಾಮನೂರು ಶಿವಶಂಕರಪ್ಪ (ಕಾಂಗ್ರೆಸ್): 71,369 | ಯಶವಂತರಾವ್ ಜಾಧವ್ (ಬಿಜೆಪಿ): 55,485 | ಅಮಾನುಲ್ಲಾ ಖಾನ್ (ಜೆಡಿಎಸ್): 6,020 | ಗೆಲುವಿನ ಅಂತರ : 15,884

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಗ್ರೌಂಡ್‌ ರಿಪೋರ್ಟ್‌ ಇಲ್ಲಿದೆ ನೋಡಿ.

ದಾವಣಗೆರೆ ಉತ್ತರ:
ಬಿಜೆಪಿ-ಕಾಂಗ್ರೆಸ್
ನಡುವೆ ಜಿದ್ದಾಜಿದ್ದಿ

ಎಸ್ಎಸ್ ಮಲ್ಲಿಕಾರ್ಜುನ್

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಬಿಜೆಪಿ-ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ. ಕಾಂಗ್ರೆಸ್ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಕಾಂಗ್ರೆಸ್‌ನಿಂದ ಕಣಕ್ಕಿಳಿದ್ದಿದ್ದು, ಅವರ ಗೆಲುವಿಗಾಗಿ ಇಡೀ ಶಾಮನೂರು ಕುಟುಂಬ ಚುನಾವಣಾ ಅಖಾಡಕ್ಕೆ ಧುಮುಕಿದೆ.

ಲೋಕಿಕೆರೆ ನಾಗರಾಜ್

2018 ರ ಚುನಾವಣೆಯಲ್ಲಿ ಮಲ್ಲಿಕಾರ್ಜುನ್ ಸೋಲು ಕಂಡಿದ್ದರು. ಈ ಬಾರಿ ಶತಾಯಗಥಾಯ ಗೆಲ್ಲಬೇಕು ಎಂದು ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಮತ್ತು ಮಕ್ಕಳು, ಸಹೋದರರು ಮಲ್ಲಿಕಾರ್ಜುನ್ ಪರ ಪ್ರಚಾರ ಮಾಡುತ್ತಿದ್ದಾರೆ.

ಇನ್ನೂ ಉತ್ತರದಲ್ಲಿ ಬಿಜೆಪಿ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷರಾಗಿದ್ದ ಲೋಕಿಕೆರೆ ನಾಗರಾಜ್ ಅವರನ್ನ ಚುನಾವಣಾ ಅಖಾಡಕ್ಕೆ ಇಳಿಸಿದೆ. ಲೋಕಿಕೆರೆ ನಾಗರಾಜ್ ರೈತ ಪರ ಹೋರಾಟಗಾರಾಗಿದ್ದು, ಕ್ಷೇತ್ರದ ಜನರಿಗೂ ಚಿರಪರಿಚಿತ. ಅಲ್ಲದೇ ಬಿಜೆಪಿ ಮಾಜಿ ಶಾಸಕ ಎಸ್.ಎ. ರವೀಂದ್ರನಾಥ್ ಲೋಕಿಕೆರೆ ನಾಗರಾಜ್‌ಗೆ ಸಾಥ್ ನೀಡಿದ್ದು, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌ಗೆ ಪ್ರಬಲ ಪೈಪೋಟಿ ನೀಡುತ್ತಿದ್ದಾರೆ.

ಕಳೆದ ಬಾರಿಯ ಫಲಿತಾಂಶ ಏನು?
ಎಸ್.ಎ.ರವೀಂದ್ರನಾಥ್ (ಬಿಜೆಪಿ): 76,540 | ಎಸ್.ಎಸ್.ಮಲ್ಲಿಕಾರ್ಜುನ್ (ಕಾಂಗ್ರೆಸ್): 72,469 | ಎಂ. ಆನಂದಪ್ಪ (ಜೆಡಿಎಸ್) 5,381 | ಗೆಲುವಿನ ಅಂತರ: 4,071

ಚನ್ನಗಿರಿ: ಸ್ವಾಭಿಮಾನ
ವರ್ಸಸ್ ಕಾಂಗ್ರೆಸ್

ಮಲ್ಲಿಕಾರ್ಜುನ್ ಮಾಡಾಳ್
ಬಸವರಾಜ್ ವಿ ಶಿವಗಂಗಾ

ಅಡಕೆ ನಾಡು ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಸ್ವಾಭಿಮಾನ ವರ್ಸಸ್ ಕಾಂಗ್ರೆಸ್ ನಡುವೆ ಸಮರ ಏರ್ಪಟ್ಟಿದೆ. ಹಾಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪುತ್ರನ ಲೋಕಾಯುಕ್ತ ಪ್ರಕರಣ ಬಿಜೆಪಿಗೆ ಸಂಕಷ್ಟ ತಂದೊಡ್ಡಿದೆ.

ಎಚ್ಎಸ್ ಶಿವಕುಮಾರ್

ಚನ್ನಗಿರಿಯಲ್ಲಿ ಚುನಾವಣೆಗೂ ಮುನ್ನ ಬಿಜೆಪಿ ಗೆಲುವು ಅಂತಾನೇ ಭಾವಿಸಲಾಗಿತ್ತು. ಆದರೆ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮಾಡಾಳ್ ಕುಟುಂಬಕ್ಕೆ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ್ ಮಾಡಾಳ್ ಸ್ವಾಭಿಮಾನದ ಭಾವುಟ ಹಾರಿಸಿ ಕಣಕ್ಕಿಳಿದಿದ್ದಾರೆ.

ಇಲ್ಲಿ ಬಿಜೆಪಿ ಅಭ್ಯರ್ಥಿ ಎಚ್.ಎಸ್. ಶಿವಕುಮಾರ್ ಲೆಕಕ್ಕಷ್ಟೇ. ಕಾಂಗ್ರೆಸ್‌ನಿಂದಹೊಸ ಅಭ್ಯರ್ಥಿ ಬಸವರಾಜ್ ವಿ ಶಿವಗಂಗಾ ಅಖಾಡದಲ್ಲಿದ್ದಾರೆ. ವಿರೂಪಾಕ್ಷಪ್ಪರ ಮನೆಯ ಮೇಲಿನ ಲೋಕಾಯುಕ್ತ ದಾಳಿ ಪ್ರಕರಣ ಕಾಂಗ್ರೆಸ್‌ಗೆ ಫ್ಲಸ್ ಎನ್ನಲಾಗ್ತಿದೆ. ಆದರೆ, ಮಲ್ಲಿಕಾರ್ಜುನ್ ಹಾರಿಸಿರುವ ಸ್ವಾಭಿಮಾನದ ಭಾವುಟವೂ ಜೋರಾಗಿದೆ. ಹೀಗಾಗಿ ಇಲ್ಲಿ ಕಾಂಗ್ರೆಸ್ ವರ್ಸಸ್ ಸ್ವಾಭಿಮಾನದ ಫೈಟ್ ಜೋರಾಗಿದೆ. ಜೆಡಿಎಸ್ ಅಭ್ಯರ್ಥಿಯಾಗಿ ರೈತ ನಾಯಕ ತೇಜಸ್ವಿ ಪಟೇಲ್ ಕಣಕ್ಕಿಳಿದಿದ್ದು, ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ.

ಕಳೆದ ಬಾರಿಯ ಫಲಿತಾಂಶ ಏನು?
ಮಾಡಾಳ್ ವಿರೂಪಾಕ್ಷಪ್ಪ (ಬಿಜೆಪಿ): 73,794 | ವಡ್ನಾಳ್ ರಾಜಣ್ಣ (ಕಾಂಗ್ರೆಸ್‌): 48,014 | ಡಿ.ರಮೇಶ್ (ಜೆಡಿಎಸ್) : 29,106 | ಗೆಲುವಿನ ಅಂತರ : 25,780

ಮಾಯಕೊಂಡ: ರಾಷ್ಟ್ರೀಯ
ಪಕ್ಷಗಳಿಗೆ ಪಕ್ಷೇತರರ ಕಾಟ

ಕೆಎಸ್ಬಸವಂತಪ್ಪ
ಬಸವರಾಜ್ ನಾಯ್ಕ್‌

ಮಾಯಕೊಂಡ ಎಸ್ಸಿ ಮೀಸಲು ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಸ್ವಪಕ್ಷೀಯರೇ ಮಗ್ಗಲ ಮುಳ್ಳಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಎಸ್.ಬಸವಂತಪ್ಪಗೆ ಪಕ್ಷದ ಟಿಕೆಟ್‌ ಆಕಾಂಕ್ಷಿಯಾಗಿದ್ದ, ಈಗ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿರುವ ಸವಿತಾ ಬಾಯಿ ಸವಾಲೊಡ್ಡುತ್ತಿದ್ದಾರೆ.

ಎಚ್ಆನಂದಪ್ಪ

ಇನ್ನು ಬಿಜೆಪಿ ಅಭ್ಯರ್ಥಿ ಬಸವರಾಜ್ ನಾಯ್ಕ್‌ ಗೆ ಪಕ್ಷೇತರ ಅಭ್ಯರ್ಥಿ ಪುಷ್ಪಾ ವಾಗೀಶ್ ಅಡ್ಡಿಯಾಗಿದ್ದಾರೆ. ಪುಷ್ಪಾ ವಾಗೀಶ್ ಲಿಂಗಾಯತ ಮತಗಳ ಮೇಲೆ ಕಣ್ಣಿಟ್ಟಿದ್ದು, ಅದು ಬಿಜೆಪಿಗೆ ಸ್ಪಲ್ಪ ಮಟ್ಟಿಗೆ ಡ್ಯಾಮೇಜ್ ಮಾಡಲಿದೆ.

ಜೆಡಿಎಸ್ ಅಭ್ಯರ್ಥಿ ಎಚ್.ಆನಂದಪ್ಪ ʻಇಬ್ಬರ ಜಗಳ ಮೂರನೇಯವರಿಗೆ ಲಾಭʼ ಎಂಬ ಮಾತಿನಂತೆ, ಕಾಂಗ್ರೆಸ್‌ ಮತ್ತು ಬಿಜೆಪಿಯಲ್ಲಿನ ಪೈಪೋಟಿಯ ಲಾಭ ಮಾಡಿಕೊಳ್ಳಲು ಓಡಾಡುತ್ತಿದ್ದಾರೆ. ಕಳೆದ ಬಾರಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೂರನೇ ಸ್ಥಾನ ಪಡೆದಿದ್ದರು. ಇದು ಎಸ್ಸಿ ಮೀಸಲು ಕ್ಷೇತ್ರವಾದರೂ ಇಲ್ಲಿ ಲಿಂಗಾಯತ ಸಮುದಾಯ ಯಾರ ಕೈ ಹಿಡಿಯತ್ತೋ ಅವರು ಶಾಸಕರಾಗುತ್ತಾರೆ. ಈ ಬಾರಿ ಬೋವಿ, ಲಂಬಾಣಿ, ಮಾದಿಗ ಸಮುದಾಯ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಕಳೆದ ಬಾರಿಯ ಫಲಿತಾಂಶ ಏನು?
ಎನ್. ಲಿಂಗಣ್ಣ (ಬಿಜೆಪಿ) : 50,556 | ಕೆ.ಎಸ್.ಬಸವಂತಪ್ಪ (ಕಾಂಗ್ರೆಸ್) : 44,098 | ಎಚ್.ಆನಂದಪ್ಪ (ಪಕ್ಷೇತರ) : 27, 321 | ಗೆಲುವಿನ ಅಂತರ: 6,458

ಹೊನ್ನಾಳಿ : ಹೋರಿ ರೇಣು
ವರ್ಸಸ್ ಡಿಜಿಎಸ್ ಫೈಟ್

ಡಿ ಜಿ ಶಾಂತನಗೌಡ
ರೇಣುಕಾಚಾರ್ಯ

ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಹಳೇ ಕಲಿಗಳು ರಣಕಣದಲ್ಲಿದ್ದಾರೆ. ಬಿಜೆಪಿಯಿಂದ ಎಂ.ಪಿ.ರೇಣುಕಾಚಾರ್ಯ, ಕಾಂಗ್ರೆಸ್‌ನಿಂದ ಡಿ. ಜಿ. ಶಾಂತನಗೌಡ ಕಣಕ್ಕಿಳಿದಿದ್ದಾರೆ. ಇಬ್ಬರೂ ಕೂಡ ಶಾಸಕರಾಗಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ.

ಈ ಬಾರಿ ರೇಣುಕಾಚಾರ್ಯ ಕೋವಿಡ್ ಸಂದರ್ಭದಲ್ಲಿ ಮಾಡಿದ ಸೇವೆ, ಅನೇಕ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಜನರ ಮುಂದೆ ಹೋದರೆ, ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಇದು ನನ್ನ ಕಡೆಯ ಚುನಾವಣೆ ಎಂದು ಜನರ ಮುಂದೆ ಹೋಗುತ್ತಿದ್ದಾರೆ. ಇಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕವಾಗಿದ್ದು, ಡಿ.ಜಿ. ಶಾಂತನಗೌಡ ಲಿಂಗಾತರ ಸಮುದಾಯಕ್ಕೆ ಸೇರಿದವರು. ರೇಣುಕಾಚಾರ್ಯ ವೀರಶೈವ ಲಿಂಗಾಯತದಲ್ಲಿ ಜಂಗಮರು.

ಇತ್ತ ಕುರುಬ ಸಮುದಾಯವೂ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಎಂಪಿಆರ್ ಮತ್ತು ಡಿಜಿಎಸ್ ನಡುವೆ ನೇರ ಹಣಾಹಣಿ ನಡೆಯಲಿದೆ. ಜೆಡಿಎಸ್ ಅಭ್ಯರ್ಥಿ ಕೊನೆ ಕ್ಷಣದಲ್ಲಿ ನಾಮಪತ್ರ ವಾಪಸ್ ತೆಗೆದುಕೊಂಡು ಇವರಿಬ್ಬರ ಪೈಪೋಟಿಗೆ ಅವಕಾಶ ಮಾಡಿಕೊಟ್ಟಿದ್ದಾರೆ.

ಕಳೆದ ಬಾರಿಯ ಫಲಿತಾಂಶ ಏನು?
ಎಂ.ಪಿ.ರೇಣುಕಾಚಾರ್ಯ (ಬಿಜೆಪಿ) : 80,624| ಡಿ. ಜಿ. ಶಾಂತನಗೌಡ (ಕಾಂಗ್ರೆಸ್) : 76,391 | ಗೆಲುವಿನ ಅಂತರ: 4,233

ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಗ್ರೌಂಡ್‌ ರಿಪೋರ್ಟ್‌ ಇಲ್ಲಿದೆ ನೋಡಿ.

ಜಗಳೂರು: ಕಾಂಗ್ರೆಸ್‌ಗೆ
ಪಕ್ಷೇತರರದ್ದೇ ಸವಾಲು!

ಎಸ್ವಿರಾಮಚಂದ್ರ
ಬಿದೇವೇಂದ್ರಪ್ಪ
ಎಚ್ಪಿ ರಾಜೇಶ್

ಜಗಳೂರು ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲು ವಿಧಾನಸಭಾ ಕ್ಷೇತ್ರ. ಇಲ್ಲಿ ಈ ಮೊದಲು ಇಲ್ಲಿ ಬಿಜೆಪಿ ವರ್ಸಸ್ ಕಾಂಗ್ರೆಸ್ ಫೈಟ್ ಇತ್ತು. ಕಾಂಗ್ರೆಸ್ ಮಾಜಿ ಶಾಸಕ ಎಚ್.ಪಿ. ರಾಜೇಶ್ ಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದರಿಂದ ಪಕ್ಷೇತರವಾಗಿ ಸ್ಪರ್ಧಿಸಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಬಿ.ದೇವೇಂದ್ರಪ್ಪಗೆ ಮಗ್ಗಲ ಮುಳ್ಳಾಗಿದ್ದಾರೆ.

ಇನ್ನೂ ಬಿಜೆಪಿ ಹಾಲಿ ಶಾಸಕ ಎಸ್.ವಿ.ರಾಮಚಂದ್ರ ಈ ಬಾರಿಯೂ ಕಣಕ್ಕಿಳಿದಿದ್ದು, ಸದ್ಯದ ಮಟ್ಟಿಗೆ ತ್ರಿಕೋನ ಸ್ಪರ್ಧೆಯಂತಿದೆ ಕ್ಷೇತ್ರ. ಎಚ್.ಪಿ.ರಾಜೇಶ್ ಹೊರತು ಪಡಿಸಿ, ಮತ್ತಿಬ್ಬರೂ ಆರ್ಥಿಕವಾಗಿ ಬಲಿಷ್ಠರಾಗಿರುವುದರಿಂದ ಈ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಯಲಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಇಲ್ಲಿ ಜೆಡಿಎಸ್ ಅಭ್ಯರ್ಥಿ ಆಟಕ್ಕುಂಟು ಲೆಕ್ಕಕ್ಕಿಲ್ಲದಂತಿದ್ದಾರೆ.

ಕಳೆದ ಬಾರಿಯ ಫಲಿತಾಂಶ ಏನು?
ಎಸ್. ವಿ. ರಾಮಚಂದ್ರ (ಬಿಜೆಪಿ): 78,948 | ಎಚ್.ಪಿ.ರಾಜೇಶ್ (ಕಾಂಗ್ರೆಸ್): 49,727 | ಬಿ.ದೇವೇಂದ್ರಪ್ಪ (ಜೆಡಿಎಸ್): 13,401 | ಗೆಲುವಿನ ಅಂತರ : 29, 221

ಹರಿಹರ: ತ್ರೀಕೋನ ಸ್ಪರ್ಧೆ

ಶ್ರೀನಿವಾಸ್ ನಂದಿಗಾವಿ
ಎಚ್ಎಸ್ಶಿವಶಂಕರ್

ಹರಿಹರ ವಿಧಾನಸಭಾ ಕ್ಷೇತ್ರ ದಾವಣಗೆರೆ ಜಿಲ್ಲೆಯಲ್ಲಿ ಪ್ರತಿಬಾರಿಯೂ ತ್ರಿಕೋನ ಫೈಟ್ ಇರುವಂತಹ ಕ್ಷೇತ್ರ. ಇಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಸಮಬಲದ ಹೋರಾಟ ನಡೆಸಿಕೊಂಡು ಬಂದಿವೆ. 2008ರಲ್ಲಿ ಬಿಜೆಪಿ ಗೆಲವು, 2013 ರಲ್ಲಿ ಜೆಡಿಎಸ್ ಗೆಲವು, 2018 ರಲ್ಲಿ ಕಾಂಗ್ರೆಸ್ ಗೆಲುವು. ಹೀಗೆ ಕ್ಷೇತ್ರದ ಜನ ಮೂರು ಪಕ್ಷಗಳಿಗೂ ಆಶೀರ್ವಾದ ಮಾಡಿದ್ದಾರೆ.

ಈ ಬಾರಿಯೂ ಕೂಡ ತ್ರಿಕೋನ ಸ್ಪರ್ಧೆ ಇದೆ. ಕಾಂಗ್ರೆಸ್ ಹಾಲಿ ಶಾಸಕ ಎಸ್.ರಾಮಪ್ಪಗೆ ಕೊನೆ ಕ್ಷಣದಲ್ಲಿ ಟಿಕೆಟ್ ಕೈತಪ್ಪಿ ಹೊಸ ಅಭ್ಯರ್ಥಿ ಶ್ರೀನಿವಾಸ್ ನಂದಿ ಕಣಕ್ಕಿಳಿದಿದ್ದಾರೆ, ಎಸ್. ರಾಮಪ್ಪ ಪಕ್ಷ ನಿಷ್ಠೆ ಎಂದು ಕಾಂಗ್ರೆಸ್‌ನಲ್ಲೇ ಉಳಿದುಕೊಂಡು ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುತ್ತಿದ್ದಾರೆ.

ಬಿಪಿಹರೀಶ್

ಬಿಜೆಪಿಯಿಂದ ಮಾಜಿ ಶಾಸಕ ಬಿ.ಪಿ.ಹರೀಶ್, ಜೆಡಿಎಸ್‌ನಿಂದ ಎಚ್.ಎಸ್.ಶಿವಶಂಕರ್ ಕಣಕ್ಕಿಳಿದ್ದಾರೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಕುರುಬ ಸಮುದಾಯಕ್ಕೆ ಸೇರಿದ್ದು, ಪ್ರಬಲ ಸ್ವಾಮೀಜಿಯೊಬ್ಬರು ಹಿಂದಿದ್ದಾರೆ ಎನ್ನಲಾಗಿದೆ. ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ವರಿಷ್ಠ ಜೆ ಪಿ ನಡ್ಡಾ ಹೀಗೆ ಅನೇಕ ನಾಯಕರು ಪ್ರಚಾರ ನಡೆಸಿದ್ದಾರೆ. ವಿವಿಧ ಮಠಗಳ ಸ್ವಾಮೀಜಿಗಳನ್ನು ಭೇಟಿ ಮಾಡಿದ್ದಾರೆ.

ಇನ್ನು ಜೆಡಿಎಸ್ ಅಭ್ಯರ್ಥಿ ಶಿವಶಂಕರ್ ಪಂಚಮಸಾಲಿ ಮತಗಳ ಜೊತೆ ಮುಸ್ಲಿಂ ಮತಗಳ ಮೇಲೆ ಕಣ್ಣಿಟ್ಟಿದ್ದು, ತ್ರಿಕೋನ ಸ್ಪರ್ಧೆಯಲ್ಲಿ ಯಾರು ಗೆಲುವಿನ ಹಾರ ಹಾಕಿಕೊಳ್ಳುತ್ತಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಕಳೆದ ಬಾರಿಯ ಫಲಿತಾಂಶ ಏನು?
ಎಸ್.ರಾಮಪ್ಪ (ಕಾಂಗ್ರೆಸ್): 64,801 | ಬಿ.ಪಿ.ಹರೀಶ್ (ಬಿಜೆಪಿ): 57,541 | ಎಚ್.ಎಸ್.ಶಿವಶಂಕರ್ (ಜೆಡಿಎಸ್): 38,204 | ಗೆಲುವಿನ ಅಂತರ : 7,260

ಹರಿಹರ ವಿಧಾನಸಭಾ ಕ್ಷೇತ್ರದ ಗ್ರೌಂಡ್‌ ರಿಪೋರ್ಟ್‌ ಇಲ್ಲಿದೆ ನೋಡಿ.

ಇದನ್ನೂ ಓದಿ: ಶಿವಮೊಗ್ಗ ಜಿಲ್ಲೆ ಕ್ಷೇತ್ರ ಸಮೀಕ್ಷೆ : ಬಿಜೆಪಿಗೆ ಪ್ರಾಬಲ್ಯ ಉಳಿಸಿಕೊಳ್ಳುವ ಸವಾಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Shadow CM: ಕಾಂಗ್ರೆಸ್‌ನ ಪೇಸಿಎಂ ಅಭಿಯಾನಕ್ಕೆ ಬಿಜೆಪಿಯಿಂದ ಶ್ಯಾಡೊ ಸಿಎಂ ಪೋಸ್ಟರ್ ವಾರ್

ಅಧಿಕಾರಿಗಳ ವರ್ಗಾವಣೆಯಿಂದ ಮೊದಲುಗೊಂಡು ಅನೇಕ ಕಾರ್ಯಗಳನ್ನು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ನಡೆಸುತ್ತಿದ್ದಾರೆ (Shadow CM) ಎಂದು ಬಿಜೆಪಿ ಆರೋಪಿಸಿದೆ.

VISTARANEWS.COM


on

Edited by

Shadow CM Posters
Koo

ಬೆಂಗಳೂರು: ವಿಧಾನಸಭೆ ಎಲೆಕ್ಷನ್‌ಗೂ ಮುನ್ನ ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರದ ವಿರುದ್ಧ ಪೇಸಿಎಂ ಅಭಿಯಾನವನ್ನು ಕಾಂಗ್ರೆಸ್‌ ರೂಪಿಸಿತ್ತು. ಕರ್ನಾಟಕ ರಾಜ್ಯ ಕಾಂಟ್ರಾಕ್ಟರ್ಸ್‌ ಅಸೋಸಿಯೇಷನ್‌ ಮಾಡಿದ್ದ 40% ಕಮಿಷನ್‌ ಆರೋಪವನ್ನೇ ಆಧಾರವಾಗಿಸಿಕೊಂಡು ಪೆಸಿಎಂ ಪೋಸ್ಟರ್‌ಗಳನ್ನು ಬಹಿರಂಗವಾಗಿ ಅಂಟಿಸಿತ್ತು. (Shadow CM)

ಈ ಪೋಸ್ಟರ್‌ಗಳು ಸರ್ಕಾರಕ್ಕೆ ಸಾಕಷ್ಟ ಮುಜುಗರ ಉಂಟುಮಾಡಿದ್ದವು. ರಾಜ್ಯ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಜನರಿಗೆ ಮನವರಿಕೆ ಮಾಡುವಲ್ಲಿ ಸಾಕಷ್ಟು ಪರಿಣಾಮಕಾರಿಯಾಗಿದ್ದವು. ಇದೀಗ ಕಾಂಗ್ರೆಸ್‌ ಸರ್ಕಾರ ರಚನೆಯಾಗಿದ್ದು, ಶ್ಯಾಡೊ ಸಿಎಂ ಅಭಿಯಾನವನ್ನು ಬಿಜೆಪಿ ಕೈಗೆತ್ತಿಕೊಂಡಿದೆ.

ಅಧಿಕಾರಿಗಳ ವರ್ಗಾವಣೆಯಿಂದ ಮೊದಲುಗೊಂಡು ಅನೇಕ ಕಾರ್ಯಗಳನ್ನು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ನಡೆಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇದೇ ಆರೋಪಕ್ಕೆ ಅನಗುಣವಾಗಿ ಶ್ಯಾಡೊ ಸಿಎಂ ಪೋಸ್ಟರ್‌ಗಳನ್ನು ರೂಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದೆ.

1. ಕಲೆಕ್ಷನ್ ಏಜೆಂಟ್ ಸುರ್ಜೇವಾಲಾರ ಕೈಗೊಂಬೆಯಾಗಿರುವ ಸಿದ್ದರಾಮಯ್ಯ, ಪುತ್ರನನ್ನು ಶ್ಯಾಡೋ ಸಿಎಂ ಮಾಡಿ ತಾಳಕ್ಕೆ ಕುಣಿಯುತ್ತಿದ್ದಾರೆ. ಸೋನಿಯಾ ಗಾಂಧಿಯವರ ತಾಳಕ್ಕೆ ರಾಜ್ಯದ ಕಾಂಗ್ರೆಸ್ ನಾಯಕರು ಕುಣಿಯುತ್ತಿದ್ದಾರೆ. 2024ರ ಕಾಂಗ್ರೆಸ್ ಚುನಾವಣಾ ಖರ್ಚಿಗೆ ರಾಜ್ಯ ಬಲಿಯಾಗುತ್ತಿದೆ.

2. ಸರಕಾರದ ಎಲ್ಲಾ ಬಗೆಯ ಡೀಲ್‌ಗಳಿಗೆ ನೇರವಾಗಿ ಸಂಪರ್ಕಿಸಿ…

3. ಹುದ್ದೆಗಳು ಮಾರಾಟಕ್ಕಿವೆ… #ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು.

4. ಹುದ್ದೆಗಳು ಮಾರಾಟಕ್ಕಿವೆ.. #ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು.

5. CM ನೆರಳಿನಲ್ಲಿ #ShadowCM ಅವ್ಯವಹಾರ. ಅಂಕೆ ಮೀರಿದೆ ಇವರಿಬ್ಬರ ಭ್ರಷ್ಟಾಚಾರ.

6. Commission Master in the shadows of Chief Minister!

Continue Reading

ಕರ್ನಾಟಕ

Evm Machine : ಡೆಮಾಲಿಷನ್‌ ವೇಳೆ ಎಂಜಿನಿಯರ್ ಮನೆಯಲ್ಲಿ ಇವಿಎಂ ಯೂನಿಟ್‌ಗಳು ಪತ್ತೆ!

Evm Control Units : ಮನೆ ಡೆಮಾಲಿಷನ್‌ ಸಮಯದಲ್ಲಿ ಎಂಜಿನಿಯರ್‌ವೊಬ್ಬರ ಮನೆಯಲ್ಲಿ ಇವಿಎಂ ಕಂಟ್ರೋಲ್‌ ಯೂನಿಟ್‌ಗಳು ಪತ್ತೆಯಾಗಿವೆ. ಇವಿಎಂ ಕಂಟ್ರೋಲ್‌ ಯೂನಿಟ್‌ಗಳನ್ನು ತಹಸೀಲ್ದಾರ್‌ ವಶಕ್ಕೆ ಪಡೆದುಕೊಂಡಿದ್ದಾರೆ.

VISTARANEWS.COM


on

Edited by

EVM units
Koo

ಬೆಂಗಳೂರು ಗ್ರಾಮಾಂತರ: ಇಲ್ಲಿನ ದೊಡ್ಡಬಳ್ಳಾಪುರ ತಾಲೂಕಿನ ಮೋಪರಹಳ್ಳಿ ಗ್ರಾಮದಲ್ಲಿ ಮನೆ ಡೆಮಾಲಿಷನ್ ವೇಳೆ ಇವಿಎಂ ಕಂಟ್ರೋಲ್‌ ಯೂನಿಟ್‌ಗಳು (Evm Control Units ) ಪತ್ತೆ ಆಗಿವೆ. ದೊಡ್ಡಬಳ್ಳಾಪುರ ನಿರ್ಮಿತಿ ಕೇಂದ್ರದ ಎಂಜಿನಿಯರ್ ಶಿವಕುಮಾರ್ ಎಂಬುವವರ ಮನೆಯಲ್ಲಿ (Evm Machine) ಪತ್ತೆ ಆಗಿದೆ.

2018ರ ಚುನಾವಣೆಯಲ್ಲಿ ಬಳಸಿ ರಿಜೆಕ್ಟ್‌ ಆಗಿದ್ದ ಇವಿಎಂ ಕಂಟ್ರೋಲ್ ಯೂನಿಟ್ ಮಿಷನ್‌ಗಳು ಎನ್ನಲಾಗಿದೆ. ಅಂದಹಾಗೇ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ಮನೆಯನ್ನು ಡೆಮಾಲಿಷನ್ ಮಾಡಲಾಗುತ್ತಿತ್ತು. ಈ ವೇಳೆ ಮನೆಯ ಅವಶೇಷಗಳಲ್ಲಿ ಇವಿಎಂ ಕಂಟ್ರೋಲ್‌ ಯೂನಿಟ್‌ ಪತ್ತೆ ಆಗಿವೆ. ಯೂನಿಟ್‌ಗಳು ಪತ್ತೆಯಾದ ಹಿನ್ನೆಲೆ ಸ್ಥಳಕ್ಕೆ ತಹಸೀಲ್ದಾರ್‌ ಮೋಹನ ಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

EVM units found in demolition
ಎಂಜಿನಿಯರ್‌ ಮನೆ ಡೆಮಾಲಿಷನ್‌ ವೇಳೆ ಇವಿಎಂ ಯೂನಿಟ್‌ಗಳು ಪತ್ತೆ

ಮನೆಯ ಅವಶೇಷದಡಿ 7 ಯೂನಿಟ್‌ಗಳು ಪತ್ತೆ ಆಗಿದ್ದು, ತಹಸೀಲ್ದಾರ್‌ ಎಲ್ಲವನ್ನೂ ವಶಕ್ಕೆ ಪಡೆದು ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದಾರೆ. ತಹಸೀಲ್ದಾರ್‌ ಮೋಹನ ಕುಮಾರಿ ಮುಂದಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಶಿವಶಂಕರ್ ಅವರಿಗೆ ವರದಿಯನ್ನು ನೀಡಿದ್ದಾರೆ. ಸದ್ಯ, ರಿಜೆಕ್ಟ್‌ ಆಗಿರುವ ಇವಿಎಂ ಕಂಟ್ರೋಲ್‌ ಯೂನಿಟ್‌ ಮಿಷನ್‌ಗಳನ್ನು ಯಾಕಾಗಿ ಮನೆಯಲ್ಲಿ ಇರಿಸಿಕೊಂಡಿದ್ದರು ಎಂಬ ಪ್ರಶ್ನೆ ಕಾಡುತ್ತಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

MLC Election: ವಿಧಾನ ಪರಿಷತ್‌ಗೆ ಕಾಂಗ್ರೆಸ್‌ನ ಮೂವರು ಅವಿರೋಧ ಆಯ್ಕೆ; ಶೆಟ್ಟರ್‌ ಕಮ್‌ ಬ್ಯಾಕ್‌

MLC Election: ಕಾಂಗ್ರೆಸ್‌ನ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರು ಎಂಎಲ್‌ಸಿಯಾಗಿ ಅವಿರೋಧ ಆಯ್ಕೆಯಾಗಿದ್ದಾರೆ.

VISTARANEWS.COM


on

Edited by

New MLC Jagadish Shettar NS Boseraju and Tippanna Kamakanoor
ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಎನ್.ಎಸ್. ಬೋಸರಾಜು
Koo

ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ (MLC Election) ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಅಯ್ಕೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅವರ ಅವಿರೋಧ ಆಯ್ಕೆ ಘೋಷಿಸಲಾಗಿದೆ.

ನಾಮಪತ್ರ ವಾಪಸ್ ಪಡೆಯಲು ಶುಕ್ರವಾರ ಕೊನೆಯ ದಿನವಾಗಿತ್ತು. ಪಕ್ಷೇತರ ಅಭ್ಯರ್ಥಿ ಡಾ.ಕೆ ಪದ್ಮರಾಜನ್‌ ಅವರ ನಾಮಪತ್ರ ಸೂಚಕರಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಹೀಗಾಗಿ ಉಳಿದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಈ ಬಗ್ಗೆ ವಿಧಾನಸಭಾ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಮಾಹಿತಿ ನೀಡಿದ್ದಾರೆ.

ಶೆಟ್ಟರ್‌ 5 ವರ್ಷ, ಬೋಸರಾಜು 1 ವರ್ಷ, ಕಮಕನೂರು 3 ವರ್ಷ ಎಂಎಲ್‌ಸಿ

ರಾಜ್ಯದಲ್ಲಿ ಖಾಲಿಯಾಗಿರುವ ವಿಧಾನ ಪರಿಷತ್‌ನ (MLC Election) ಮೂರು ಸ್ಥಾನಗಳಿಗೆ ಜೂನ್‌ 30ರಂದು ಚುನಾವಣೆ ನಡೆಯಬೇಕಿತ್ತು. ಆದರೆ, ಕಾಂಗ್ರೆಸ್‌ ಮೂವರು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಇನ್ನು ಇವರ ಅಧಿಕಾರಾವಧಿ ನೋಡುವುದಾದರೆ, ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ 5 ವರ್ಷ, ಹಾಲಿ ಸಚಿವ ಎನ್.ಎನ್‌. ಬೋಸ್‌ ರಾಜು 1 ವರ್ಷ ಮತ್ತು ತಿಪ್ಪಣ್ಣ ಕಮಕನೂರು 3 ವರ್ಷ ಎಂಎಲ್‌ಸಿಯಾಗಿ ಇರಲಿದ್ದಾರೆ.

ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‌ ನಡೆಯುವ ಚುನಾವಣೆ ಇದಾಗಿದೆ. 135 ಶಾಸಕರನ್ನು ಹೊಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಎಲ್ಲ ಮೂರು ಸ್ಥಾನಗಳನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ | ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ? ಸುಳಿವು ಬಿಚ್ಚಿಟ್ಟ ಸಿ.ಪಿ.ಯೋಗೇಶ್ವರ್

ಶೆಟ್ಟರ್‌ಗೆ ದೊಡ್ಡ ಗೌರವ

ಕಳೆದ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಯಲ್ಲಿ ಟಿಕೆಟ್‌ ನಿರಾಕರಿಸಲ್ಪಟ್ಟು ಕಾಂಗ್ರೆಸ್‌ ಸೇರಿದ್ದ ಜಗದೀಶ್‌ ಶೆಟ್ಟರ್‌ ಅವರು ಚುನಾವಣೆಯಲ್ಲಿ ಸೋಲು ಕಂಡರೂ ಅವರಿಗೆ ಪಕ್ಷ ದೊಡ್ಡ ಗೌರವವನ್ನೇ ನೀಡಿದೆ. ಬಾಬುರಾವ್‌ ಚಿಂಚನಸೂರು ಅವರಿಂದ ತೆರವಾಗಿರುವ ಸ್ಥಾನಕ್ಕೆ ಜಗದೀಶ್‌ ಶೆಟ್ಟರ್‌ ಅವರು ಆಯ್ಕೆಯಾಗಿದ್ದು, ಐದು ವರ್ಷ ಸದಸ್ಯರಾಗಿರಲಿದ್ದಾರೆ.

ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಆಗಿದ್ದರಿಂದ ಈ ಬಾರಿ ಕಾಂಗ್ರೆಸ್ ಗೆ ಲಾಭವಾಗಿತ್ತು. 39 ಲಿಂಗಾಯತ ಸಮುದಾಯದ ಶಾಸಕರು ಗೆಲ್ಲುವುದರಲ್ಲಿ ಶೆಟ್ಟರ್‌ ಅವರ ವರ್ಚಸ್ಸಿನ ಪ್ರಭಾವವೂ ಇದೆ ಎಂದು ಕಾಂಗ್ರೆಸ್‌ ಕಂಡುಕೊಂಡಿದೆ. ಇದರ ಲಾಭವನ್ನು ಲೋಕಸಭಾ ಚುನಾವಣೆಯಲ್ಲಿಯೂ ಪಡೆಯಲು ಶೆಟ್ಟರ್‌ಗೆ ಮಣೆ ಹಾಕಲಾಗಿದೆ ಎಂದು ಹೇಳಲಾಗಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಶೆಟ್ಟರ್ ಗೆ ಐದು ವರ್ಷಗಳ ಅವಧಿ ಇರೋ ಎಂಎಲ್ಸಿ ಸ್ಥಾನವನ್ನು ಕಾಂಗ್ರೆಸ್‌ ಕೊಟ್ಟಿದೆ ಎನ್ನಲಾಗಿದೆ.

ಇದನ್ನೂ ಓದಿ | Congress Guarantee: ರಾಜ್ಯ ಬಿಜೆಪಿ ಅಧ್ಯಕ್ಷ ಮನೆಗೆ ಮಾರಿ ಪರರಿಗೆ ಉಪಕಾರಿ: ಸಚಿವ ದಿನೇಶ್‌ ಗುಂಡೂರಾವ್‌ ವಾಗ್ದಾಳಿ

ಎನ್.ಎಸ್‌. ಬೋಸರಾಜು ಅವರಿಗೆ 1 ವರ್ಷ ಅವಕಾಶವಿರುವ ಪರಿಷತ್‌ ಸದಸ್ಯತ್ವವನ್ನು ನೀಡಲಾಗಿದೆ. ಬೋಸರಾಜು ಅವರನ್ನು ಈಗಾಗಲೇ ಸಣ್ಣ ನೀರಾವರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಇವರು ಆರ್‌.ಶಂಕರ್‌ ಅವರಿಂದ ತೆರವಾಗಿರುವ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

ಇತ್ತ ತಿಪ್ಪಣ್ಣ ಕಮಕನೂರು ಅವರಿಗೆ ಲಕ್ಷ್ಮಣ ಸವದಿ ಅವರಿಂದ ತೆರವಾದ ಮೂರು ವರ್ಷಗಳ ಅವಧಿಯ ಮೇಲ್ಮನೆ ಸ್ಥಾನವನ್ನು ನೀಡಲಾಗಿದೆ.

Continue Reading

ಕರ್ನಾಟಕ

‌Brand Bengaluru: ವಿದ್ಯುತ್‌ ಜತೆಗೆ ಕಸದ ಶುಲ್ಕವೂ ಸೇರ್ಪಡೆಗೆ ಸಲಹೆ: ಖಚಿತಪಡಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌

ಬೆಂಗಳೂರನ್ನು ಉತ್ತಮಪಡಿಸಲು ಪೋರ್ಟಲ್‌ ಲಾಂಚ್ ಮಾಡ್ತಿದ್ದೇನೆ. ಪ್ರಮುಖ ನಗರಗಳಲ್ಲಿ ಪುಟ್ ಪಾತ್ ಸಮಸ್ಯೆ ಇದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

VISTARANEWS.COM


on

Edited by

DK Shivakumar Thushar girinath
Koo

ಬೆಂಗಳೂರು: ಅನೇಕ ನಗರಗಳಲ್ಲಿ ಕಸ ಸಂಗ್ರಹಣೆಗೆ ಶುಲ್ಕ ವಿಧಿಸಲಾಗುತ್ತಿದೆ. ಬೆಂಗಳೂರಿನಲ್ಲೂ ಶುಲ್ಕ ವಿಧಿಸಿ ವಿದ್ಯುತ್‌ ಬಿಲ್‌ ಜತೆಗೆ ಸೇರಿಸಬೇಕು ಎಂಬ ಸಲಹೆ ಬಂದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ನಾಗರಿಕರು ಹಾಗೂ ತಜ್ಞರಿಂದ ಸಲಹೆ ಕೇಳುವ BrandBengaluru.karnataka.gov.in ಪೋರ್ಟಲ್‌ಗೆ ಚಾಲನೆ ನೀಡಿದ ನಂತರ ಮಾತನಾಡಿದರು.

1 ಕೋಟಿ 60 ಲಕ್ಷ ಜನಸಂಖ್ಯೆ ಬೆಂಗಳೂರಿನಲ್ಲಿ ಇದೆ. 1 ಕೋಟಿ 30 ಲಕ್ಷ ಅಧಿಕೃತ ಜನಸಂಖ್ಯೆ. ಆದರೆ ಪ್ರತಿದಿನ ಬಂದು ಹೋಗವರ ಸಂಖ್ಯೆ ಹೆಚ್ಚಿದೆ. ಬೆಂಗಳೂರಿನ ಪ್ರಕೃತಿ ಗಮನದಲ್ಲಿಟ್ಟುಕೊಂಡು ಇಲ್ಲಿ ಬಂದು ನೆಲೆಸಲು ಇಚ್ಚೆ ಪಡುತ್ತಾರೆ. ಬೆಂಗಳೂರಿಗೆ ಬಂದವರು ಯಾರು ವಾಪಸು ಹೋಗಲ್ಲ.

ನಾನು ಸಹ ಬೆಂಗಳೂರಿನ ನಿವಾಸಿ. ಜನ ಸಮಾನ್ಯರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇನೆ. ಬಿಲ್ಡರ್ಸ್, ಉದ್ಯಮಿಗಳು ಸಹ ಕರೆಸಿದ್ದೆ ಅವರ ಅಭಿಪ್ರಾಯ ಪಡೆದಿದ್ದೇನೆ. ಹಿರಿಯ ನಾಯಕರ ಅಭಿಪ್ರಾಯ ಸಹ ಸಂಗ್ರಹ ಮಾಡಿದ್ದೇನೆ. ಮಾಜಿ ಸಿಎಂಗಳನ್ನ ಭೇಟಿ ಮಾಡ್ತೀನಿ. ಬೊಮ್ಮಾಯಿ ಸಮಯ ಕೇಳಿದ್ದೆ. ಕಸಕ್ಕೆ ಕೆಲ ನಗರಗಳಲ್ಲಿ ತೆರಿಗೆ ಹಾಕುತ್ತಿದ್ದಾರೆ. ಇಲ್ಲೂ ಹಾಕಿ ಅಂತ ಸಲಹೆ ನೀಡಿದ್ದಾರೆ. ವಿದ್ಯುತ್ ಬಿಲ್ ಜತೆಗಿನ ಇದನ್ನ ಹಾಕಲು ಸಲಹೆ ಬಂದಿದೆ. ಆದರೆ ಈಗ ವಿದ್ಯುತ್ ಬಿಲ್ ಜತೆ ಹಾಕಲು ಸಾಧ್ಯವಿಲ್ಲ ಎಂದರು.

ಬೆಂಗಳೂರನ್ನು ಉತ್ತಮಪಡಿಸಲು ಪೋರ್ಟಲ್‌ ಲಾಂಚ್ ಮಾಡ್ತಿದ್ದೇನೆ. ಪ್ರಮುಖ ನಗರಗಳಲ್ಲಿ ಪುಟ್ ಪಾತ್ ಸಮಸ್ಯೆ ಇದೆ. ಮಲ್ಲೇಶ್ವರ, ಬಸವನಗುಡಿಯಲ್ಲಿ ಪುಟ್ ಪಾತ್ ಸಮಸ್ಯೆ ಇದೆ. ಬೆಂಗಳೂರು ಟ್ರಾಫಿಕ್‌ನಲ್ಲಿ ಕೆಲಸ ಮಾಡಿದ ನಿವೃತ್ತ ಅಧಿಕಾರಿಗಳ ಅಭಿಪ್ರಾಯ ಸಂಗ್ರಹ ಮಾಡ್ತೀನಿ. ಟ್ರೈನ್ ಮತ್ತು ಬಸ್ಸು ಹೋಗುವ ರೀತಿ ಟನಲ್‌ ಮಾಡಬೇಕು ಅನ್ನೋ ಅಭಿಪ್ರಾಯ ಇದೆ. ಜಯದೇವ ಬಳಿ ಪೈಲಟ್ ಯೋಜನೆ ಅಂತ ಪರಿಗಣಿಸುತ್ತಿದ್ದೇವೆ. ಬೆಂಗಳೂರು ಪ್ಲಾನ್ಡ್‌ ಸಿಟಿ ಅಲ್ಲ. ಮುಂಬಯಿ, ದೆಹಲಿ ರೀತಿಯಲ್ಲಿ ಪ್ಲಾನ್ ಸಿಟಿ ಅಲ್ಲ. ಆದರೆ ಮುಂಬಯಿ ಮತ್ತು ದೆಹಲಿಯಲ್ಲಿ ಟ್ರಾಫಿಕ್ ಜಾಸ್ತಿ ಇದೆ. ನಮಗಿಂತಲೂ ಹೆಚ್ಚಿಜ ಟ್ರಾಫಿಕ್ ಇದೆ. ಇಲ್ಲಿ ನೀರು ನುಗ್ಗಿದರೂ ಸಮಸ್ಯೆ ಆಗುತ್ತೆ, ಅದನ್ನೇ ದೊಡ್ಡದಾಗಿ ಬರೆಯುತ್ತೀರಿ ಎಂದರು.

ಹಿಂದಿನ ಕಾಮಗಾರಿಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ ಎಂಭ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿ, ಇನ್ನಷ್ಟು ದೊಡ್ಡಮಟ್ಟದಲ್ಲಿ ಮಾತನಾಡಲಿ. ಎಲ್ಲ ಬಿಚ್ಚಿಸ್ತೀನಿ. ಟೆಂಡರ್ ಡಬಲ್ ಆಗ್ತಿದೆ, ನಾವು ಅಧಿಕಾರಕ್ಕೆ ಬಂದ್ರೆ ಇದಕ್ಕೆ ಅವಕಾಶ ಕೊಡಲ್ಲ ಎಂದು ನಾವು ಚುನಾವಣೆ ಸಂದರ್ಭದಲ್ಲಿ ಹೇಳಿದ್ದೆವು. ನಾವು ಅದಕ್ಕೆ ಬದ್ಧರಾಗಿದ್ದೇವೆ. ಯಾವ ಗುತ್ತಿಗೆದಾರ ಏನು ಬೇಕಾದರೂ ಮಾಡಿಕೊಳ್ಳಲಿ. ಕಾನೂನಾತ್ಮಕವಾಗಿ ಪರಿಶೀಲನೆ ಮಾಡುವವರೆಗೂ ನಾವು ವರ್ಕ್ ಆರ್ಡರ್ ಕೊಡಲ್ಲ. ತನಿಖೆ ಬಳಿಕವೇ ಕಾಮಗಾರಿ ಬಿಲ್ ಬಿಡುಗಡೆ ಮಾಡ್ತೀವಿ ಎಂದರು.

ನಗರದಲ್ಲಿ ಇರೋ ಸ್ಲಮ್ ಶಿಫ್ಟ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಂತಹ ಸಲಹೆಗಳು ಬಂದಿವೆ. ಕೆಲವರು ಸರ್ಕಾರಿ ಜಾಗದಲ್ಲಿ ಇದ್ದಾರೆ. ಕೆಲ ಸ್ಲಮ್ ನಗರದ ಒಳಗೆ ಇವೆ. ಅದನ್ನ ಶಿಫ್ಟ್ ಮಾಡಲು ಸಮಯ ಬೇಕಾಗುತ್ತದೆ ಎಂದರು.

ಇದನ್ನೂ ಓದಿ: Rice Politics: ನಾಳೆ ಅಮಿತ್‌ ಶಾ ಭೇಟಿಗೆ ಸಿದ್ದರಾಮಯ್ಯ ದೆಹಲಿ ಪ್ರವಾಸ; ನಾನೂ ಹೋಗುವೆ ಎಂದ ಡಿಕೆಶಿ

Continue Reading
Advertisement
Old Pension Scheme Madhu Bangarappa
ಕರ್ನಾಟಕ9 mins ago

Old Pension Scheme : ಸರ್ಕಾರಿ ನೌಕರರಿಗೆ Good News; ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಎಂದ ಮಧು ಬಂಗಾರಪ್ಪ

No Rain Girl waiting For rain and holding Umbrella
ಉಡುಪಿ37 mins ago

karnataka weather forecast : ಮುಕ್ಕಾಲು ಜಿಲ್ಲೆಗೆ ಕೈಕೊಟ್ಟ ಮಳೆರಾಯ; ಮತ್ತೆ ಮುಂಗಾರು ದುರ್ಬಲ

Paris facing bed bugs and France government is trying to tackle crisis
ಪ್ರಮುಖ ಸುದ್ದಿ38 mins ago

Bed Bugs: ಪ್ಯಾರಿಸ್‌ನಲ್ಲಿ ಸಿಕ್ಕಾಪಟ್ಟೆ ತಿಗಣೆ ಕಾಟ! ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಎಂಟ್ರಿ ಕೊಟ್ಟ ಫ್ರಾನ್ಸ್ ಸರ್ಕಾರ

Parul won gold medal in asian Games
ಕ್ರೀಡೆ40 mins ago

Asian Games : ಭಾರತಕ್ಕೆ ಮತ್ತೊಂದು ಚಿನ್ನದ ಪದಕ, 5000 ಮೀಟರ್​ ಓಟದಲ್ಲಿ ಮೊದಲ ಸ್ಥಾನ ಪಡೆದ ಪಾರುಲ್​

Siddaramaiah felicitated at Shepherds India International Conference
ಕರ್ನಾಟಕ52 mins ago

Kuruba Conference: ಬೆಳಗಾವಿಯಲ್ಲಿ ಬೃಹತ್‌ ಕುರುಬ ಸಮಾವೇಶದ ಮೂಲಕ ಸಿದ್ದರಾಮಯ್ಯ ಮತ್ತೊಮ್ಮೆ ಶಕ್ತಿ ಪ್ರದರ್ಶನ

Shivamogga encounter Fake News
ಕರ್ನಾಟಕ58 mins ago

Shivamogga Violence : ಎನ್‌ಕೌಂಟರ್‌ ಸುದ್ದಿ ಸುಳ್ಳು, ಮುಸ್ಲಿಮರು ಬಳಸಿದ್ದು ಆಟಿಕೆ ತಲವಾರ್‌ ಎಂದ ಎಸ್ಪಿ

boney kapoor
ಬಾಲಿವುಡ್1 hour ago

Boney Kapoor: ನಟಿ ಶ್ರೀದೇವಿ ಸಾವಿನ ಹಿಂದಿನ ಸತ್ಯ ಬಿಚ್ಚಿಟ್ಟ ಪತಿ ಬೋನಿ ಕಪೂರ್! ಅಂದು ಆಗಿದ್ದೇನು?

indvsned practice match
ಕ್ರಿಕೆಟ್1 hour ago

ICC World Cup 2023 : ಭಾರತ- ನೆದರ್ಲ್ಯಾಂಡ್ಸ್​ ​​​ ಅಭ್ಯಾಸ ಪಂದ್ಯವೂ ರದ್ದು

Bhagwant Mann
ದೇಶ1 hour ago

Punjab Debt: 47,107 ಕೋಟಿ ರೂ. ಸಾಲದ ಪೈಕಿ ಅರ್ಧದಷ್ಟು ಬಡ್ಡಿ ಪಾವತಿಗೆ ಬಳಕೆ ಎಂದ ಪಂಜಾಬ್ ಸಿಎಂ

Side Effects Of Bananas
ಆರೋಗ್ಯ1 hour ago

Side Effects Of Bananas: ಬಾಳೆಹಣ್ಣು ಹೆಚ್ಚು ತಿಂದರೆ ಏನಾಗುತ್ತದೆ?

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Karnataka bandh Majestic
ಕರ್ನಾಟಕ1 week ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ3 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ10 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

The maintenance train finally lifted Metro services as usual
ಕರ್ನಾಟಕ3 hours ago

Namma Metro : ಕೊನೆಗೂ ಲಿಫ್ಟ್ ಆಯ್ತು ಮೆಂಟೈನ್ಸ್‌ ವೆಹಿಕಲ್‌; ಎಂದಿನಂತೆ ಮೆಟ್ರೋ ಓಡಾಟ

BBK Season 10 KicchaSudeep
ಕಿರುತೆರೆ4 hours ago

BBK Season 10 : ಅಕ್ಟೋಬರ್‌ 8 ರಿಂದ ಬಿಗ್‌ ಬಾಸ್‌ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?

dina bhavishya
ಪ್ರಮುಖ ಸುದ್ದಿ14 hours ago

Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!

Actor Nagabhushana
ಕರ್ನಾಟಕ1 day ago

Actor Nagabhushana : ಡ್ರಂಕ್‌ ಆ್ಯಂಡ್‌ ಡ್ರೈವ್‌ನಲ್ಲಿ ನಟ ನಾಗಭೂಷಣ್‌ ನೆಗಟಿವ್‌; ವಿಚಾರಣೆಗೆ ಕರೆದ ಪೊಲೀಸರು

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಆಪ್ತರೊಂದಿಗೆ ಮಾಡುವ ವ್ಯಾಪಾರ ನಷ್ಟ ತಂದೀತು ಹುಷಾರ್‌!

Terrorist Attack in Turkey Suicide bomber blows himself near parliament
ಪ್ರಮುಖ ಸುದ್ದಿ2 days ago

Terrorist Attack: ಟರ್ಕಿ ಸಂಸತ್ ಬಳಿ ಆತ್ಮಹತ್ಯಾ ಬಾಂಬ್ ದಾಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸ್ಫೋಟದ ಕ್ಷಣಗಳು!

prajwal and yashswini
ಕರ್ನಾಟಕ2 days ago

Actor Nagabhushana : ಆ್ಯಕ್ಟಿಂಗ್‌ ನೋಡಿ ಮೆಚ್ಚಿದವರ ಪಾಲಿಗೆ ಯಮನಾಗಿಬಿಟ್ಟ; ಮೃತ ಕುಟುಂಬಸ್ಥರ ಆಕ್ರೋಶ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಆಪ್ತರೊಂದಿಗೆ ಅತಿಯಾದ ಸಲುಗೆ ಈ ರಾಶಿಯವರಿಗೆ ಒಳ್ಳೆಯದಲ್ಲ!

dina bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನ ಪೂರ್ತಿ ಈ ರಾಶಿಯವರಿಗೆ ಟೆನ್ಷನ್‌ ಜತೆಗೆ ಪ್ರೆಶರ್‌

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಮನೆಯಲ್ಲೂ ಕಿರಿಕಿರಿ, ಆಫೀಸ್‌ನಲ್ಲೂ ಕಿರಿಕ್‌!

ಟ್ರೆಂಡಿಂಗ್‌