Site icon Vistara News

Lovers suicide | ಬೆಂಕಿಕೆರೆ ಕೆರೆಗೆ ಹಾರಿ ಬೆಂಗಳೂರಿನ ಪ್ರೇಮಿಗಳ ಆತ್ಮಹತ್ಯೆ

suicide

ದಾವಣಗೆರೆ: ಇಲ್ಲಿನ ಚನ್ನಗಿರಿ ತಾಲೂಕಿನ ಬೆಂಕಿಕೆರೆ ಗ್ರಾಮದ ಕೆರೆಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತಪಟ್ಟವರು ಬೆಂಗಳೂರು ಮೂಲದ ಚರಣ್ ಮತ್ತು ನಾಗವೇಣಿ ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿ ಪಲ್ಸರ್ ಬೈಕ್‌ನಲ್ಲಿ ಬಂದಿದ್ದ ಈ ಪ್ರೇಮಿಗಳು ಏಕಕಾಲದಲ್ಲಿ ಕೆರೆಗೆ ಹಾರಿದ್ದರು ಎಂದು ಗೊತ್ತಾಗಿದೆ.

ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ‌ ಸ್ನೇಹಿತನಿಗೆ ಚರಣ್ ಫೋನ್‌ ಕರೆ ಮಾಡಿ ತಿಳಿಸಿದ್ದ. ಮನೆಯಲ್ಲಿ ನಮ್ಮಿಬ್ಬರ ಪ್ರೀತಿಯನ್ನು ಒಪ್ಪುತ್ತಿಲ್ಲವೆಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದಿದ್ದ. ಈ ಫೋನ್‌ ಕರೆಯ ಆಡಿಯೋ ಪೊಲೀಸರಿಗೆ ಲಭ್ಯವಾಗಿದೆ.

ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹಗಳನ್ನು ಕೆರೆಯಿಂದ ಹೊರಗೆ ತೆಗೆದಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | ಬೆಂಗಳೂರು | ಬಿಜೆಪಿ ಯುವ ಮೋರ್ಚಾ ಮುಖಂಡ ಆತ್ಮಹತ್ಯೆ

Exit mobile version