Murder Case : ಚಾಕುವಿನಿಂದ ಇರಿದು ಯುವಕನ ಕೊಲೆ; ಹಂತಕರಿಗಾಗಿ ಪೊಲೀಸರ ಹುಡುಕಾಟ - Vistara News

ದಾವಣಗೆರೆ

Murder Case : ಚಾಕುವಿನಿಂದ ಇರಿದು ಯುವಕನ ಕೊಲೆ; ಹಂತಕರಿಗಾಗಿ ಪೊಲೀಸರ ಹುಡುಕಾಟ

Murder Case : ದುಷ್ಕರ್ಮಿಗಳು ಯುವಕನೊಬ್ಬನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಹೊರವಲಯದಲ್ಲಿ ಶವವನ್ನು ಬಿಸಾಡಿ ಹೋಗಿದ್ದಾರೆ. ಪರಿಚಿತರೇ ಯಾರೋ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

VISTARANEWS.COM


on

Murder case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಿ (Murder case) ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ದಾವಣಗೆರೆ ತಾಲೂಕಿನ ಒಬಜ್ಜಿಹಳ್ಳಿಯ ಹೊರ ವಲಯದಲ್ಲಿ ಘಟನೆ ನಡೆದಿದೆ. ಸುದೀಪ್ (25) ಕೊಲೆಯಾದವನು.

ದಾವಣಗೆರೆ ನಗರದ ಬೂದಾಳ್ ರಸ್ತೆಯ ನಿವಾಸಿ ಸುದೀಪ್‌ನನ್ನು ಕಳೆದ ರಾತ್ರಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯಾಗಿರುವ ಸುದೀಪ್‌ ಕೂಡ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಠಾಣೆ ಸಿಪಿಐ ಕಿರಣ್ ಕುಮಾರ್, ದಾವಣಗೆರೆ ಎಸ್‌ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ರಾತ್ರಿ ವೇಳೆ ಗಲಾಟೆಯಾಗಿ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಕೊಲೆ ಕೇಸ್‌ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Murder case : ಕೊಳೆತ ಶವದಲ್ಲಿದ್ದ ಕಿವಿಯೋಲೆಯಿಂದಲೇ ಸಿಕ್ಕಿಬಿದ್ದರು ಹಂತಕರು

ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಬೆಂಗಳೂರು: ಬೆಂಗಳೂರಿನ (Bengaluru News) ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹುಡುಗಿಯೊಬ್ಬಳು ಅನುಮಾನಾಸ್ಪದ‌ವಾಗಿ (Suspicious Case) ಮೃತಪಟ್ಟಿದ್ದಾಳೆ. ಪ್ರಭುಧ್ಯಾ(21) ಮೃತ ದುರ್ದೈವಿ.

ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುದ್ಯಾ, ಬುಧವಾರ ಮಧ್ಯಾಹ್ನ ಮನೆಯ ಬಾತ್‌ ರೂಂನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಆಕೆಯ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

Suspicious Case in Bengaluru

ಪ್ರಭುಧ್ಯಾಳ ಸಾವು ಆಕಸ್ಮಿಕವೋ ಅಥವಾ ಆತ್ಮಹತ್ಯೆಯೋ, ಕೊಲೆಯೋ ಹೀಗೆ ಎಲ್ಲ‌ ಆಯಾಮದಲ್ಲೂ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಯುಡಿಆರ್ ದಾಖಲಿಸಿಕೊಂಡು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ.

ಇತ್ತ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗಳನ್ನು ಜೋಪಾನ ಮಾಡಿದ್ದೆ ಯಾರೋ ಕ್ರೂರವಾಗಿ ನನ್ನ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ತಾಯಿ ಸೌಮ್ಯ ಕಣ್ಣೀರು ಹಾಕಿದ್ದಾರೆ. ಆಫೀಸ್‌ನಲ್ಲಿದ್ದ ನನಗೆ ಮಧ್ಯಾಹ್ನ ಫೋನ್‌ ಮಾಡಿದ್ದಳು. ಫ್ರೆಂಡ್ಸ್‌ ಜತೆಗೆ ಇದ್ದೀನಿ ಪಾನಿಪುರಿ ತಿಂದು ಮನೆಗೆ ಹೋಗುತ್ತಿನಿ ಅಂದಿದ್ದಳು. ನಂತರ ಆಫೀಸ್‌ ಮುಗಿಸಿ ಮನೆಗೆ ಬಂದು ನೋಡಿದಾಗ ಮಗಳು ಬಾತ್‌ ರೂಮಿನಲ್ಲಿ ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು ಎಂದು ಘಟನೆ ಕುರಿತು ಮಾಹಿತಿ ನೀಡಿದ್ದಾರೆ.

ಮನೆಯ ಮುಂದಿನ ಡೋರ್‌ ಲಾಕ್‌ ಆಗಿತ್ತು. ಆದರೆ ಹಿಂದಿನ ಡೋರ್‌ ಓಪನ್‌ ಆಗಿತ್ತು. ಮಗಳ ಫೋನ್‌ ಸೋಫ್‌ ಮೇಲೆ ಇತ್ತು. ಆಕೆಯನ್ನು ಆಸ್ಪತ್ರೆಗೆ ಕೆರೆದುಕೊಂಡು ಹೋಗಿ ಬರುವಷ್ಟರಲ್ಲಿ ಫೋನ್‌ ಕೂಡ ಕಳ್ಳತನ ಆಗಿದೆ. ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವವಳು ಅಲ್ಲ.. ಯಾರೋ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದರು

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

Rain News : ಮುಲ್ಕಿ, ಉಡುಪಿ, ಭಾಗಮಂಡಲದಲ್ಲಿ ಭಾರಿ ಮಳೆಯಾಗಿದೆ. ವಾರಾಂತ್ಯದಲ್ಲೂ ಭಾರಿ ವರ್ಷಧಾರೆಯ (Heavy rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಒಮ್ಮೆ ಬಾರಿ ಜೋರಾಗಿ ಮಳೆ (Heavy Rain) ಬಂದರೂ ಜನರಿಗೆ ಕಷ್ಟ ಕಷ್ಟ ಎನ್ನುವ ಪರಿಸ್ಥಿತಿ ಇದೆ. ಈ ನಡುವೆ ಎಂದಿಗಿಂತ ತುಸು ಜೋರಾಗಿ ಹಾಗೂ ಹೆಚ್ಚಾಗಿಯೇ ಮಳೆಯಾಗುತ್ತಿರುವುದು (Rain News) ಜನರನ್ನು ಹೈರಣಾಗಿಸಿದೆ. ಸದ್ಯ ಇನ್ನೊಂದು ವಾರಕ್ಕೂ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ವಾರಾಂತ್ಯದಲ್ಲಿ ಕರಾವಳಿಯ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ನಿರಂತರ ಗಾಳಿ ಬೀಸಲಿದ್ದು ಗಂಟೆಗೆ 40-50 ಕಿ.ಮೀನಲ್ಲಿ ವೇಗ ಇರಲಿದೆ. ಉಳಿದೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ-ಮಲೆನಾಡಿನಲ್ಲಿ ವಿಪರೀತ ಮಳೆ

ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಇನ್ನೂ ಅತಿ ಹೆಚ್ಚು ಮಳೆಯು ದಕ್ಷಿಣ ಕನ್ನಡದ ಮುಲ್ಕಿಯಲ್ಲಿ 30 ಸೆಂ.ಮೀ, ಉಡುಪಿ ಹಾಗೂ ಕೊಡಗಿನ ಭಾಗಮಂಡಲದಲ್ಲಿ ತಲಾ 21 ಸೆಂ.ಮೀ ಮಳೆಯಾಗಿದೆ.

ಮಂಗಳೂರು ವಿಮಾನ ನಿಲ್ದಾಣ , ಮಣಿ , ಕಾರ್ಕಳ, ಆಗುಂಬೆಯಲ್ಲಿ ತಲಾ 17 ಸೆಂ.ಮೀ, ಪಣಂಬೂರು , ಬೆಳ್ತಂಗಡಿ, ಹೊನ್ನಾವರ, ಧರ್ಮಸ್ಥಳದಲ್ಲಿ ತಲಾ 15 ಸೆಂ.ಮೀ ಮಳೆಯಾಗಿದೆ. ಶಿರಾಲಿ, ಕೋಟ, ಉಪ್ಪಿನಂಗಡಿ, ಕೊಟ್ಟಿಗೆಹಾರದಲ್ಲಿ ತಲಾ 14 ಸೆಂ.ಮೀ, ನಾಪೋಕ್ಲು13, ಪೊನ್ನಂಪೇಟೆ 12 ಸೆಂ.ಮೀ ಮಳೆಯಾಗಿದೆ. ಪುತ್ತೂರು , ಕೊಲ್ಲೂರು, ಸುಳ್ಯ, ಮೂರ್ನಾಡು, ವಿರಾಜಪೇಟೆಯಲ್ಲಿ 11 ಸೆಂ.ಮೀ, ಮಂಗಳೂರು 10 ಸೆಂ.ಮೀ, ಮಂಕಿ, ಕಳಸ, ಶೃಂಗೇರಿಯಲ್ಲಿ 9 ಸೆಂ.ಮೀ, ಕುಂದಾಪುರ, ಕುಮಟಾ, ಅಂಕೋಲಾದಲ್ಲಿ 8 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ.

ಗೋಕರ್ಣ, ಕೊಪ್ಪ6 ಸೆಂ.ಮೀ, ಸಿದ್ದಾಪುರ , ಜಯಪುರ 5 ಸೆಂ.ಮೀ, ಕದ್ರಾ , ತಾಳಗುಪ್ಪ , ಬಂಡೀಪುರದಲ್ಲಿ 4 ಸೆಂ.ಮೀ ಮಳೆಯಾಗಿದೆ. ಲೋಂಡಾ, ಕುಶಾಲನಗರ, ಸೋಮವಾರಪೇಟೆ, ಹಾರಂಗಿ, ಹುಣಸೂರಿನಲ್ಲಿ 3 ಸೆಂ.ಮೀ ಮಳೆಯಾಗಿದೆ. ಜೋಯಿಡಾ, ಯಲ್ಲಾಪುರ, ಬಾಳೆಹೊನ್ನೂರು, ಹುಂಚದಕಟ್ಟೆ , ಸರಗೂರು 2 ಸೆಂ.ಮೀ, ಮುಂಡಗೋಡ , ಕಾರವಾರ , ಬನವಾಸಿ, ಹಳಿಯಾಳ, ಕಿರವತ್ತಿ , ತ್ಯಾಗರ್ತಿ, ಹಾಸನ , ಕೃಷ್ಣರಾಜಸಾಗರ, ಆನವಟ್ಟಿ, ಎನ್ ಆರ್ ಪುರ, ಗುಂಡ್ಲುಪೇಟೆ, ನಂಜನಗೂಡು, ಕೆ ಆರ್ ನಗರದಲ್ಲಿ 1 ಸೆಂ.ಮೀ ಮಳೆಯಾಗಿದೆ.

ಇದನ್ನೂ ಓದಿ: Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

ಚಿಕ್ಕಮಗಳೂರಲ್ಲಿ ಭಾರಿ ಮಳೆಗೆ ರಸ್ತೆ ಕಾಣದೆ ನದಿಗೆ ಬಿದ್ದ ಕಾರು

ಭಾರಿ ಮಳೆಯಿಂದಾಗಿ ರಸ್ತೆ ಕಾಣದೆ ಕಾರೊಂದು ನದಿಗೆ ಬಿದ್ದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಜೂ 28ರಂದು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಘಟನೆ ನಡೆದಿದೆ. ನೋಡ ನೋಡುತ್ತಿದ್ದಂತೆ ‌ಕಾರು ಹೇಮಾವತಿ ನದಿಗೆ ಹಾರಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಕಾರು ನಿಯಂತ್ರಣ ತಪ್ಪಿರುವ ಶಂಕೆ ವ್ಯಕ್ತವಾಗಿದೆ. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯಿಂದ ಜಿಗಿದು ನದಿಗೆ ಕಾರು ಬಿದ್ದಿದೆ. ಕಳೆದ ಎರಡು ತಿಂಗಳ ಹಿಂದೆ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದರು. ಇದೀಗ ಇದೆ ಸ್ಥಳದಲ್ಲೇ ಮತ್ತೊಂದು ಅಪಘಾತ ಸಂಭವಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast : ಉಡುಪಿಯಲ್ಲಿ ಭಾರಿ ಮಳೆಗೆ (Heavy Rain) ಮನೆ ಮುಂದಿದ್ದ ಬಾವಿಯೊಂದು ಕುಸಿದರೆ ಇತ್ತ ಮಂಗಳೂರಿನಲ್ಲಿ ಕಡಲ ಅಬ್ಬರಕ್ಕೆ ಮನೆಯೊಂದು (Karnataka rain) ಸಮುದ್ರಪಾಲಾಗಿದೆ. ಕೊಡಗಿನಲ್ಲಿ ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ (Rain Effected) ಹಾನಿಯಾಗಿದೆ.

VISTARANEWS.COM


on

By

karnataka Rain
Koo

ಉಡುಪಿ: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು (Rain News), ನೋಡ ನೋಡುತ್ತಿದ್ದಂತೆ ಮನೆ ಮುಂದಿದ್ದ ಬಾವಿಯೊಂದು ಪಾತಾಳ (well collapsed) ಸೇರಿದೆ. ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭೂಕುಸಿತಕ್ಕೆ ಮನೆಯ ಬಾವಿ ಧಾರಾಶಾಹಿಯಾಗಿದೆ.

ಬಾವಿಯೊಂದು ಕುಸಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಉಡುಪಿಯ ಕಾರ್ಕಳ ತಾಲೂಕಿನ ನೆಲ್ಲಿಕಟ್ಟೆಯ ಸರ್ವಿಸ್ ಸ್ಟೇಶನ್ ಸಮೀಪ ಘಟನೆ ನಡೆದಿದೆ. ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಭೂಮಿ ಒಳಗೆ ಬಾವಿ ಜಾರಿದೆ. ಬಾವಿ ಪಕ್ಕದಲ್ಲೆ ಮನೆ ಇದ್ದು, ಭೂಕುಸಿತದಿಂದಾಗಿ ಆತಂಕ ಹೆಚ್ಚಾಗಿದೆ.

ಮಂಗಳೂರಿನಲ್ಲಿ ಹೆಚ್ಚಾದ ಕಡಲ ಅಬ್ಬರ

ಮಂಗಳೂರಿನಲ್ಲಿ ಕಡಲ ಅಬ್ಬರ ಹೆಚ್ಚಾಗುತ್ತಿದ್ದು, ನೋಡ ನೋಡುತ್ತಿದ್ದಂತೆ ಮನೆಯೊಂದು ಸಮುದ್ರಕ್ಕುರುಳಿದೆ. ಉಳ್ಳಾಲದ ಬಟ್ಟಪಾಡಿ ಕಡಲ ತೀರದಲ್ಲಿದ್ದ ಮನೆಯು ಅಲೆಗಳ ಹೊಡೆತಕ್ಕೆ ಸಿಲುಕಿ ಬಿದ್ದು ಹೋಗಿದೆ. ಮನೆಯಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಕಡಲ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮನೆಯವರನ್ನು ಸ್ಥಳಾಂತರ ಮಾಡಿತ್ತು. ಮನೆ ಬೀಳುವ ದೃಶ್ಯ ಮೊಬೈಲ್‌ನಲ್ಲಿ‌ ಸೆರೆಯಾಗಿದೆ.

karnataka rain

ಇದನ್ನೂ ಓದಿ: Rain News: ಅಬ್ಬರಿಸುತ್ತಿರುವ ಮುಂಗಾರು: 3 ಜಿಲ್ಲೆಗೆ ರೆಡ್‌ ಅಲರ್ಟ್‌, ಇನ್ನೂ ನಾಲ್ಕು ದಿನ ಜೋರು ಮಳೆ

ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ ಹಾನಿ

ಕೊಡಗು ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ಅನಾಹುತವನ್ನೇ ಸೃಷ್ಟಿಸಿದೆ. ಭಾರೀ ಮಳೆಗೆ ಶಾಲಾ ಕಟ್ಟಡದ ಮೇಲೆ ಗುಡ್ಡ ಕುಸಿದಿದೆ. ಕೊಡಗಿನ ಮಡಿಕೇರಿ ತಾಲೂಕಿನ ಕೊಯನಾಡಿನಲ್ಲಿ ಘಟನೆ ನಡೆದಿದೆ. ಕೊಯನಾಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾತ್ರಿ ವೇಳೆ ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ ಹಾನಿ ಯಾಗಿದೆ.

ಗುಡ್ಡದ ಮಣ್ಣು ಬಿದ್ದ ರಭಸಕ್ಕೆ ಶಾಲೆಯ ಗೋಡೆ ಧ್ವಂಸವಾಗಿದೆ. ಸುಮಾರು 80ಕ್ಕೂ ಅಧಿಕ ಮಕ್ಕಳು ಓದುತ್ತಿರುವ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ನಡೆಯುತ್ತಿದ್ದ ತರಗತಿಗೂ ಹಾನಿಯಾಗಿದೆ. ಮಳೆ ಹೆಚ್ಚಾದರೆ ಮಣ್ಣು ಮತ್ತಷ್ಟು ಕುಸಿಯುವ ಸಾಧ್ಯತೆ ಇದ್ದು, ಶಾಲೆ ಬಳಿಯ ಗುಡ್ಡದ ಮಣ್ಣು ತೆರವಿಗೆ ಪೋಷಕರು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಭಾರಿ ಗಾಳಿ-ಮಳೆಗೆ ರಸ್ತೆಗೆ ಬಿದ್ದ ಬೃಹತ್ ಮರ

ಮಲೆನಾಡು ಭಾಗದಲ್ಲಿ ಗಾಳಿ ಮಳೆ ಅಬ್ಬರ ಮುಂದುವರಿದಿದೆ. ಮೂಡಿಗೆರೆ ತಾಲೂಕಿನ ಸಂಪಿಗೆಖಾನ್ ಬಳಿ ಬೃಹತ್‌ ಮರವೊಂದು ಬುಡ ಸಮೇತ ಕಿತ್ತುಬಂದಿದೆ. ರಾಜ್ಯ ಹೆದ್ದಾರಿಗೆ ಬೃಹತ್ ಮರ ಉರುಳಿದೆ. ಮೂಡಿಗೆರೆಯಿಂದ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಇದಾಗಿದ್ದು, ಮರ ತೆರವು ಮಾಡಿ ಸುಗಮ ಸಂಚಾರಕ್ಕೆ ಸ್ಥಳೀಯರು ಅವಕಾಶ ಮಾಡಿಕೊಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌; ತಿಂಗಳಾಂತ್ಯದವರೆಗೆ ಮೀನುಗಾರರಿಗೆ ನಿರ್ಬಂಧ

Karnataka Weather Forecast: ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಕರಾವಳಿ ಭಾಗಕ್ಕೆ ರೆಡ್‌ ಹಾಗೂ ಮಲೆನಾಡಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ತಿಂಗಳಾಂತ್ಯದವರೆಗೆ ಮೀನುಗಾರರಿಗೆ ಕಡಲತೀರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿದೆ. ಇನ್ನೊಂದು ವಾರ ಮಳೆಯು (Rain News) ಅಬ್ಬರಿಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಈ ದಿನ ಕರ್ನಾಟಕ ಕರಾವಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಹಗುರವಾದ ವರ್ಷಧಾರೆಯಾಗಲಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಭಾಗಗಳಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸುತ್ತಮುತ್ತ ಸಾಧಾರಣ ಮಳೆಯೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾದ ಮಧ್ಯಮದಿಂದ ಭಾರಿ ಮಳೆಯಾಗಲಿದ್ದು, ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಈ ಜಿಲ್ಲೆಗಳಲ್ಲಿ ಭಯಂಕರ ಮಳೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 45-55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ. ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನ ಜಿಲ್ಲೆಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.

ಮೀನುಗಾರರಿಗೆ ಮುಂದುವರಿದ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್‌ 30ರವರೆಗೆ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

Karnataka Weather : ಗುಡುಗು ಸಹಿತ ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

VISTARANEWS.COM


on

By

Karnataka Weather Forecast
Koo

ಮಂಗಳೂರು/ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ (Rain news) ಸುರಿಯುತ್ತಿರುವ ಹಿನ್ನೆಲೆ ಜೂ.28ರಂದು ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ (Karnataka weather Forecast) ಮಾಡಲಾಗಿದೆ. ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸುವಂತೆ ತಿಳಿಸಲಾಗಿದೆ.

ನಿರಂತರ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರ

ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಭಾರೀ ಮಳೆಯೊಂದಿಗೆ 40-50ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ವ್ಯಾಪಕ ಮಳೆಯಾದರೆ, ಕರ್ನಾಟಕದ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ರಭಸವಾಗಿ ಗಾಳಿ ಬೀಸಲಿದೆ.

ಕಾರವಾರದಲ್ಲಿ ಕಾಟೇಜ್‌ಗಳು ನೆಲಸಮ

ಭಾರಿ ಗಾಳಿ ಮಳೆಗೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ದೇವಭಾಗದಲ್ಲಿ ಕಡಲಕೊರೆತ ಜೋರಾಗಿದೆ. ಜಂಗಲ್ ಲಾಡ್ಜಸ್‌‌ಗೆ ಸೇರಿದ ದೇವಭಾಗ ಬೀಚ್ ರೆಸಾರ್ಟ್ಸ್‌ನ 4 ಕಾಟೇಜ್‌ಗಳಿಗೆ ಹಾನಿಯಾಗಿದೆ. 18 ಕಾಟೇಜ್‌ಗಳಿದ್ದ ದೇವಭಾಗ್ ಬೀಚ್ ರೆಸಾರ್ಟ್‌ನಲ್ಲಿ ಮೂರ್ನಾಲ್ಕು ದಿನಗಳ ಅಂತರದಲ್ಲೇ 4 ಕಾಟೇಜ್‌ಗಳು ನೆಲಸಮವಾಗಿದೆ. ದಡಕ್ಕೆ ಅಪ್ಪಳಿಸುತ್ತಿರುವ ಆಳೆತ್ತರದ ಅಲೆಗಳಿಂದಾಗಿ ಕಾಟೇಜ್‌ಗಳು ಸಮುದ್ರಪಾಲಾದ ಪರಿಣಾಮ 1 ಕೋಟಿಗೂ ಅಧಿಕ ಹಾನಿಯಾಗಿದೆ. ಕಡಲ ತೀರಪ್ರದೇಶಕ್ಕೆ ಹೊಂದಿಕೊಂಡಿದ್ದ ಕಾಟೇಜ್‌ಗಳಿಗೆ ಹಾನಿಯಾಗಿದ್ದು, ಅರಣ್ಯ ಇಲಾಖೆಯ ನೂರಾರು ಮರಗಳು ನೆಲಕ್ಕುರುಳಿವೆ.

ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಭಾಸ್ಕೇರಿ ಬಳಿ ಬುಧವಾರ ರಾತ್ರಿ ಗುಡ್ಡ ಕುಸಿದಿತ್ತು. ಗುಡ್ಡ ಕುಸಿತದಿಂದ ಹೊನ್ನಾವರ ಬೆಂಗಳೂರು ನಡುವಿನ ಸಂಚಾರ ಅಸ್ತವ್ಯಸ್ಥವಾಗಿತ್ತು. ಇದೀಗ ಸ್ಥಳೀಯರ ಸಹಾಯದಿಂದ ಗುಡ್ಡದ ಮಣ್ಣನ್ನು ತಾಲೂಕು ಆಡಳಿತ ತೆರವು ಮಾಡಿದೆ.

ಕೊಡಗಿನಲ್ಲಿ ಕುಸಿದು ಬಿದ್ದ ತಡೆಗೋಡೆ

ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರಿದಿದ್ದು, ಬುಧವಾರ ಸುರಿದ ಗಾಳಿ‌ ಮಳೆಗೆ ತಡರಾತ್ರಿ ತಡೆಗೋಡೆ ಕುಸಿದಿದೆ. ಮಡಿಕೇರಿಯ ತ್ಯಾಗರಾಜ ಕಾಲೋನಿಯಲ್ಲಿ ಘಟನೆ ನಡೆದಿದೆ. ಮನೆಗಳ ರಕ್ಷಣೆಗಾಗಿ ನಿರ್ಮಿಸಿದ ತಡೆಗೋಡೆ ಕುಸಿದ ಹಿನ್ನೆಲೆಯಲ್ಲಿ ಹಿಂಬದಿಯ ಮನೆಗಳಿಗೆ ಅಪಾಯ ಕಾಡುತ್ತಿದೆ. ತಡೆಗೋಡೆ ಕುಸಿತ ಹಿನ್ನೆಲೆಯಲ್ಲಿ ಮನೆಯ ಮುಂಭಾಗಕ್ಕೆ ಟಾರ್ಪಲ್ ಹೊದಿಕೆ ಹಾಕಲಾಗಿದೆ. ಸ್ಥಳಕ್ಕೆ ಮಡಿಕೇರಿ ನಗರಸಭೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಡಗು ಜಿಲ್ಲೆಯ ಸಂಪಾಜೆ ಸಮೀಪದ ಕೊಯ್ನಾಡಿನಲ್ಲಿ ಭಾರಿ ಗಾಳಿ ಮಳೆಗೆ ಶಾಲಾ ಕೊಠಡಿಯ ಮೇಲೆ ಗುಡ್ಡ ಕುಸಿದಿದೆ. ಶಾಲಾ ಕೊಠಡಿಯ ಮೇಲೆ ಗುಡ್ಡ ಕುಸಿದು ಗೋಡೆ, ಕಿಟಕಿ ಜಖಂಗೊಂಡಿದೆ. ಶಾಲೆಗೆ ರಜೆ ಇದ್ದಿದ್ದರಿಂದ ಅನಾಹುತ ತಪ್ಪಿದೆ. ಸುಮಾರು 80 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಳೆದ ಬಾರಿ ಮಳೆಗಾಲದಲ್ಲಿ ಇದೇ ಸಮಸ್ಯೆ ಎದುರಾಗಿತ್ತು.

ಮಳೆ ನಿಂತರೂ ನಿಲ್ಲದ ನೆರೆಹಾವಳಿ

ಉಡುಪಿ ನಗರದ ಹಲವೆಡೆ ಮಳೆ ನಿಂತರೂ ನೆರೆಹಾವಳಿ ಕಡಿಮೆ ಆಗಿಲ್ಲ. ಮೂಡನಿಡಂಬೂರು ಪರಿಸರದಲ್ಲಿ ನೀರಿನ ಮಟ್ಟ ಹೆಚ್ಚಿದೆ. ಅವೈಜ್ಞಾನಿಕ ಕಾಮಗಾರಿಯಿಂದ ಮನೆ ದೇವಾಲಯಗಳಿಗೆ ನೀರು ನುಗ್ಗಿದೆ. ದೈವಾರಾದನೆ ನಡೆಯುವ ಮೂಡನಿಡಂಬೂರು ಗರಡಿಯು ಜಲಾವೃತಗೊಂಡಿದೆ.

ಉಡುಪಿ ಜಿಲ್ಲೆಯಲ್ಲಿ ಎರಡು ದಿನಗಳಿಂದ ಸುರಿದ ಭಾರಿ ಮಳೆ ಹಿನ್ನೆಲೆ ವಿಶ್ವ ಪ್ರಸಿದ್ಧ ಮರವಂತೆ ಬೀಚ್ ಬಳಿ ಸಮುದ್ರದ ರುದ್ರನರ್ತನ ಜೋರಾಗಿದೆ. ತೀರದಲ್ಲಿ ಹಾಕಲಾಗಿರುವ ಟೆಟ್ರಾ ಪಾರ್ಟ್ಸ್ ಗೆ ಬಂದು ಅಲೆಗಳು ಬಡಿಯುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು, ಪ್ರವಾಸಿಗರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಉಡುಪಿಯ ಕಲ್ಸಂಕದ ಹೋಟೆಲ್- ಲಾಡ್ಜ್ ಗೆ ಮಳೆ ನೀರು ನುಗ್ಗಿದ್ದು, ಎರಡು ಪಂಪ್ ಇಟ್ಟು ನೀರು ಖಾಲಿ ಮಾಡಲಾಗಿದೆ. ಕೃಷ್ಣಮಠ, ಕಲ್ಸಂಕ, ಬೈಲಕೆರೆ ಭಾಗದ ಕೆಲ ಮನೆ ಕಟ್ಟಡಗಳಿಗೆ ನೀರು ನುಗ್ಗಿದೆ. ಲಾಡ್ಜ್, ಹೋಟೆಲ್‌ನ ಬೇಸ್ ಮೆಂಟ್‌ಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಇಂದ್ರಾಣಿ ನದಿ ತುಂಬಿ ಹರಿದ ಪರಿಣಾಮ ಸುತ್ತಮುತ್ತ ಜಲಾವೃತಗೊಂಡಿದೆ.

ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯತ್ ಬಳಿ ಕೃತಕ ನೆರೆ ಸೃಷ್ಟಿಯಾಗಿದೆ. ಯಡ್ತರೆ ಗ್ರಾಮದ ಬಂಕೇಶ್ವರ ಅಂಗನವಾಡಿ ಕೇಂದ್ರಕ್ಕೆ ನೀರು ನುಗಿದ್ದು, ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ, ಪಟ್ಟಣಪಂಚಾಯತ್ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ತರಾಟೆಗೆ ತೆಗೆದುಕೊಂಡರು. ಅಂಗನವಾಡಿಯ ಆಹಾರ ಸಾಮಾಗ್ರಿ ದಾಸ್ತಾನ ನೀರುಲಾಗಿತ್ತು. ಎರಡು ದಿನದಲ್ಲಿ ಒಳಚರಂಡಿ ವ್ಯವಸ್ಥೆ ಸರಿಪಡಿಸುವಂತೆ ಸೂಚನೆ ನೀಡಲಾಗಿದೆ.

Continue Reading
Advertisement
UGC NET Exam
ದೇಶ1 hour ago

UGC NET Exam: ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ; ಪರೀಕ್ಷೆಗೆ ಹೊಸ ವಿಧಾನ, ಇಲ್ಲಿದೆ ವಿವರ‌

Vodafone Idea
ದೇಶ1 hour ago

Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಭಾರತ ತಂಡವನ್ನು ಟೀಕಿಸಿದ ಮೈಕೆಲ್​ ವಾನ್​ಗೆ ತಿರುಗೇಟು ಕೊಟ್ಟ ಗಂಗೂಲಿ

CM SIddaramaiah
ಪ್ರಮುಖ ಸುದ್ದಿ2 hours ago

Siddaramaiah: ಅಮಿತ್‌ ಶಾ-ಸಿದ್ದರಾಮಯ್ಯ ಭೇಟಿ; ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ

Religious Freedom
ದೇಶ3 hours ago

Religious Freedom: ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಹುಸಿ ಕಳವಳ; ಭಾರತ ತಿರುಗೇಟು

Virat Kohli
ಪ್ರಮುಖ ಸುದ್ದಿ3 hours ago

Virat Kohli : ಫಾರ್ಮ್​ ಕಳೆದುಕೊಂಡಿರುವ ವಿರಾಟ್​ ಕೊಹ್ಲಿಯ ಬೆಂಬಲಕ್ಕೆ ನಿಂತ ಗಂಗೂಲಿ

Application Invitation to Join Air Wing NCC July 09 is the last day for submission of application
ಕರ್ನಾಟಕ4 hours ago

Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

Tulu language
ತಂತ್ರಜ್ಞಾನ4 hours ago

Tulu Translate Google: ಗೂಗಲ್ ಟ್ರಾನ್ಸ್‌ಲೇಟ್‌ನಲ್ಲಿ ತುಳು ಭಾಷೆ ಸೇರ್ಪಡೆ

India is a secular nation because Hindus are the majority says Union Minister Pralhad Joshi
ಕರ್ನಾಟಕ4 hours ago

Pralhad Joshi: ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯತೀತವಾಗಿ ಉಳಿಯದು; ಪ್ರಲ್ಹಾದ್‌ ಜೋಶಿ ಆತಂಕ

IND vs SA
ಪ್ರಮುಖ ಸುದ್ದಿ4 hours ago

IND vs SA: ದಕ್ಷಿಣ ಆಫ್ರಿಕಾದ ಬೌಲಿಂಗ್​ ಶಕ್ತಿ ಭಾರತದ ಬ್ಯಾಟಿಂಗ್​ಗೆ ಲೆಕ್ಕಕ್ಕೇ ಇಲ್ಲ; ಮಾಜಿ ಆಟಗಾರನ ಭವಿಷ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ7 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ14 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌