Series Accident | ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸರಣಿ ಅಪಘಾತ; ಒಬ್ಬರು ಸಾವು, 9 ಮಂದಿಗೆ ಗಂಭೀರ ಗಾಯ - Vistara News

ಕ್ರೈಂ

Series Accident | ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸರಣಿ ಅಪಘಾತ; ಒಬ್ಬರು ಸಾವು, 9 ಮಂದಿಗೆ ಗಂಭೀರ ಗಾಯ

ದಾವಣಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕಾರು, ಮಿನಿ ಬಸ್ ಹಾಗೂ ಟಾಟಾ ಏಸ್ ನಡುವೆ ಅಪಘಾತ ನಡೆದಿದೆ.

VISTARANEWS.COM


on

Series Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ತಾಲೂಕಿನ ಕೊಕ್ಕನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸರಣಿ ಅಪಘಾತ(Series Accident) ಸಂಭವಿಸಿದೆ. ಕಾರು, ಮಿನಿ ಬಸ್, ಟಾಟಾ ಏಸ್ ನಡುವೆ ಮಂಗಳವಾರ ರಾತ್ರಿ ನಡೆದ ಅಪಘಾತದಲ್ಲಿ ಒಬ್ಬರು ಮೃತಪಟ್ಟು, 9 ಜನರಿಗೆ ಗಂಭೀರ ಗಾಯಗಳಾಗಿವೆ.

ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಗುತ್ತಾಲ ಗ್ರಾಮದ ಹನುಮಂತಪ್ಪ (58) ಮೃತರು. ಅಪಘಾತದಲ್ಲಿ ಮೂರು ವಾಹನಗಳಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿದ್ದು, ಈ ಪೈಕಿ 5 ಜನರ ಮುರಿದ ಕಾಲು ಮುರಿದಿದೆ. ಟಾಟಾ ಏಸ್‌ನಲ್ಲಿ ರೈತರು ರೇಷ್ಮೆ ಬೆಳೆ ಮಾರಾಟ ಮಾಡಲು ರಾಮನಗರಕ್ಕೆ ಹೊರಟಿದ್ದರು. ಅವರಲ್ಲಿ ಒಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | Road Accident | ತುಮಕೂರಿನಲ್ಲಿ ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Mandya News : ಬೆಳ್ಳೂರಿನಲ್ಲಿ ಮುಸ್ಲಿಮ್ ಯುವಕರ ಗುಂಪಿನಿಂದ ಅಭಿಲಾಷ್​ ಎಂಬುವರ ಮೇಲೆ ಮಾರಕ ಹಲ್ಲೆ

Mandya News: ಕಳೆದ ಶುಕ್ರವಾರ ಮುಸ್ಲಿಂ ಯುವಕರ ಗುಂಪು ಬೆಳ್ಳೂರಿನ ಸಂತೆ ಬೀದಿಯಲ್ಇ ಅತಿ ವೇಗದಲ್ಲಿ ಪಟ್ಟಣದೊಳಗೆ ಕಾರು ಓಡಿಸಿಕೊಂಡು ಹೋಗಿದೆ. ಅಪಾಯಕಾರಿ ರೀತಿಯಲ್ಲಿ ವಾಹನ ಓಡಿಸಿದ್ದನ್ನು ಹಲ್ಲೆಗೆ ಒಳಗಾಗಿರುವ ಅಭಿಲಾಷ್ ಹಾಗೂ ಅವರ ಜತೆಗಾರ ನಾಗೇಶ್​ ಎಂಬುವರು ಪ್ರಶ್ನಿಸಿದ್ದರು. ಮಿತಿ ಮೀರಿದ ವೇಗದಲ್ಲಿ ಕಾರು ಓಡಿಸದಂತೆ ಆ ಗುಂಪಿಗೆ ಬುದ್ಧಿವಾದ ಹೇಳಿದ್ದರು.

VISTARANEWS.COM


on

Mandya News
Koo

ಮಂಡ್ಯ : ಅತಿ ವೇಗದಲ್ಲಿ ಕಾರು ಚಾಲನೆ ಮಾಡಿದ್ದನ್ನು ಪ್ರಶ್ನಿಸಿದ್ದ ಅಭಿಲಾಷ್​ ಎಂಬುವರ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ಯುವಕರ ಗುಂಪೊಂದು ಹಲ್ಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ (Mandya News) ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ಸೋಮವಾರ ಸಂಜೆ ವೇಳೆ ನಡೆದಿದೆ. ಘಟನೆ ಬಳಿಕ ಬೆಳ್ಳೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಉಟಾಗಿದ್ದು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಶ್ರಮ ವಹಿಸುತ್ತಿದ್ದಾರೆ. ಗಂಭೀರವಾಗಿ ಪೆಟ್ಟು ತಿಂದಿರುವ ಅಭಿಲಾಷ್​ ಅವರನ್ನು ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ಶುಕ್ರವಾರ ಮುಸ್ಲಿಂ ಯುವಕರ ಗುಂಪು ಬೆಳ್ಳೂರಿನ ಸಂತೆ ಬೀದಿಯಲ್ಇ ಅತಿ ವೇಗದಲ್ಲಿ ಪಟ್ಟಣದೊಳಗೆ ಕಾರು ಓಡಿಸಿಕೊಂಡು ಹೋಗಿದೆ. ಅಪಾಯಕಾರಿ ರೀತಿಯಲ್ಲಿ ವಾಹನ ಓಡಿಸಿದ್ದನ್ನು ಹಲ್ಲೆಗೆ ಒಳಗಾಗಿರುವ ಅಭಿಲಾಷ್ ಹಾಗೂ ಅವರ ಜತೆಗಾರ ನಾಗೇಶ್​ ಎಂಬುವರು ಪ್ರಶ್ನಿಸಿದ್ದರು. ಮಿತಿ ಮೀರಿದ ವೇಗದಲ್ಲಿ ಕಾರು ಓಡಿಸದಂತೆ ಆ ಗುಂಪಿಗೆ ಬುದ್ಧಿವಾದ ಹೇಳಿದ್ದರು. ಈ ವೇಳೆ ಸಣ್ಣ ಮಟ್ಟಿನ ಮಾತಿನ ಚಕಮಕಿ ನಡೆದಿತ್ತು. ಅದೇ ದ್ವೇಷವನ್ನು ಇಟ್ಟುಕೊಂಡಿದ್ದ ಮುಸ್ಲಿಂ ಯುವಕರ ಗುಂಪಿ ಇನ್ನಷ್ಟು ದೊಡ್ಡ ಗುಂಪನ್ನು ಕಟ್ಟಿಕೊಂಡು ಬಂದು ಸೋಮವಾರ ಸಂಜೆ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: Bomb Threat: ಮುಂಬೈ ತಾಜ್‌ ಹೋಟೆಲ್‌, ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ; 26/11 ರೀತಿ ದಾಳಿಗೆ ಸಂಚು?

ದೊಡ್ಡ ಗುಂಪಿನಿಂದ ಏಟು ತಿಂದಿರುವ ಅಭಿಲಾಷ್​ ಅವರಿಗೆ ಬಹು ವಿಧದಲ್ಲಿ ಗಾಯಗಳಾಗಿವೆ ಎಂದು ಅವರ ಆಪ್ತರು ಹೇಳಿದ್ದಾರೆ. ತಕ್ಷಣ ಸ್ಥಳೀಯರು ಅವರನ್ನು ಏಮ್ಸ್​ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸುದ್ದಿಯಾದ ಬಳಿಕ ಬೆಳ್ಳೂರು ಪಟ್ಟಣದಲ್ಲಿ ಆತಂಕ ಮನೆ ಮಾಡಿದೆ. ಪಟ್ಟಣದಲ್ಲಿ ಪ್ರಕ್ಷುಬ್ದ ವಾತಾವರಣ ಉಂಟಾಗಿದ್ದು ಗಲಾಟೆ ಸಂಭವಿಸುವ ಸಾಧ್ಯತೆಗಳನ್ನು ಮನಗಂಡಿರುವ ಪೊಲೀಸರು ಬೆಳ್ಳೂರು ಪಟ್ಟಣ ಹಾಗೂ ಬಿಜಿಎಸ್ ಆಸ್ಪತ್ರೆಗೆ ಬಿಗಿ ಪೊಲೀಸ್ ಭದ್ರತೆ. ಒದಗಿಸಿದ್ದಾರೆ. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಲಾಕಪ್‌ ಡೆತ್‌ ಪ್ರಕರಣ; ಡಿವೈಎಸ್ಪಿ ಸೇರಿ ಮೂವರು ಪೊಲೀಸ್‌ ಅಧಿಕಾರಿಗಳ ಸಸ್ಪೆಂಡ್

ದಾವಣಗೆರೆ: ಚನ್ನಗಿರಿ ಯುವಕನ ಲಾಕಪ್‌ ಡೆತ್‌ ಪ್ರಕರಣ (Lockup Death) ಸಂಬಂಧ ಚನ್ನಗಿರಿ ಡಿವೈಎಸ್‌ಪಿ ಪ್ರಶಾಂತ್ ಮುನ್ನೊಳ್ಳಿ, ಸರ್ಕಲ್‌ ಇನ್‌ಸ್ಪೆಕ್ಟರ್ ನಿರಂಜನ. ಬಿ ಹಾಗೂ ಪಿಎಸ್‌ಐ ಅಕ್ತರ್ ಅಮಾನತುಗೊಂಡಿದ್ದಾರೆ. ಮೂವರು ಅಧಿಕಾರಿಗಳನ್ನ ಸೇವೆಯಿಂದ ಬಿಡುಗಡೆ ಮಾಡಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಆದೇಶ ಹೊರಡಿಸಿದ್ದಾರೆ.

ಮೇ 24 ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ಠಾಣೆಯಲ್ಲಿದ್ದ ಆದಿಲ್ ಎಂಬ ಯುವಕ ಮೃತಪಟ್ಟಿದ್ದರಿಂದ ಕುಟುಂಬಸ್ಥರು ಲಾಕಪ್ ಡೆತ್ ಆರೋಪ ಮಾಡಿ, ಪೊಲೀಸರೇ ಹೊಡೆದು ಯುವಕನನ್ನು ಕೊಂದಿದ್ದರು ಎಂದು ಹೇಳಿದ್ದರು. ನಂತರ ಸಂಬಂಧಿಕರು, ಸ್ಥಳೀಯರು ಚನ್ನಗಿರಿ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆ ವೇಳೆ ಕೆಲ ಕಿಡಿಗೇಡಿಗಳು ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಐದು ಪೊಲೀಸ್ ವಾಹನ‌‌ ಜಖಂಗೊಂಡು, ಹನ್ನೊಂದು ಪೊಲೀಸರಿಗೆ ಗಾಯಗಳಾಗಿದ್ದವು. ಹೀಗಾಗಿ ಪ್ರಕರಣ ಸಂಬಂಧ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ. ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ.

Continue Reading

ಕರ್ನಾಟಕ

Prajwal Revanna Case: ಪ್ರಜ್ವಲ್‌ ಬಂದ್ರೆ ಎಸ್‌ಐಟಿ ಮುಂದೆ ನಾನೂ ಹಾಜರಾಗುವೆ: ಆರೋಪಿ ನವೀನ್‌ ಗೌಡ

Prajwal Revanna Case: ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಮೇ 31ರಂದು ಬೆಂಗಳೂರಿಗೆ ಆಗಮಿಸುತ್ತೇನೆ ಎಂದು ಹೇಳಿದ ಬೆನ್ನಲ್ಲೇ ಆರೋಪಿ ನವೀನ್‌ ಗೌಡ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾನೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರು ಬರಲಿ ವಿಚಾರಣೆ ಎದುರಿಸಲಿ. ಸಂತ್ರಸ್ತೆಯರಲ್ಲಿ ಜೆಡಿಎಸ್‌ ಕಾರ್ಯಕರ್ತರೆಯರೇ ಹೆಚ್ಚಾಗಿದ್ದಾರೆ. ಅವರಿಗೆಲ್ಲ ನ್ಯಾಯ ದೊರಕಬೇಕು. ಪ್ರಜ್ವಲ್‌ ಕೇಸ್‌ನಿಂದ (Prajwal Revanna Case) ಎಷ್ಟೋ ಜನ ಹೆಣ್ಣು ಮಕ್ಕಳು ತಲೆ ಎತ್ತಿ ಓಡಾಡಲು ಆಗುತ್ತಿಲ್ಲ. ಎಸ್‌ಐಟಿ ಮುಂದೆ ವಿಚಾರಣೆಗೆ ಅವರೂ ಬರಲಿ, ನಾನೂ ಹಾಜರಾಗುತ್ತೇನೆ ಎಂದು ಅಶ್ಲೀಲ ವಿಡಿಯೊ ವೈರಲ್‌ ಪ್ರಕರಣದ ಆರೋಪಿ, ತಲೆಮರೆಸಿಕೊಂಡಿರುವ ನವೀನ್‌ ಗೌಡ ಹೇಳಿದ್ದಾನೆ.

ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಮೇ 31ರಂದು ಬೆಂಗಳೂರಿಗೆ ಆಗಮಿಸುತ್ತೇನೆ ಎಂದು ಹೇಳಿದ ಬೆನ್ನಲ್ಲೇ ನವೀನ್‌ ಗೌಡ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾನೆ.

ಅಶ್ಲೀಲ ವಿಡಿಯೊ ಆರೋಪದಲ್ಲಿ ಏ. 23ರಂದು ನನ್ನ ಮೇಲೆಯೂ ಎಫ್‌ಐಆರ್‌ ದಾಖಲಿಸಿದ್ದಾರೆ. ಹಾಸನದಲ್ಲಿ ಕಳೆದ 10 ವರ್ಷದಲ್ಲಿ ಎಷ್ಟು ಹೆಣ್ಣು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಹಾಗೂ ನಾಪತ್ತೆಯಾಗಿದ್ದಾರೆ ಎಂಬುವುದು ಮರು ತನಿಖೆಯಾಗಬೇಕಿದೆ. ಈ ಆತ್ಮಹತ್ಯೆಗಳಿಗೂ ಕೂಡ ಪ್ರಜ್ವಲ್‌ ರೇವಣ್ಣಗೆ ಸಂಬಂಧವಿದೆ. ಎಸ್‌ಐಟಿಯವರುವ ವಿಚಾರಣೆಗೆ ನನ್ನನ್ನು ಕರೆದಿಲ್ಲ. ಅವರು ಕರೆದರೆ ನಾನು ಹೋಗುತ್ತೇನೆ. ನಾನು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದಕ್ಕೆ ಕೇಸ್‌ ಹಾಕಿದ್ದಾರೆ ಹೇಳಿದ್ದಾನೆ.

ಇದನ್ನೂ ಓದಿ | Prajwal Revanna Case: ವಿಚಾರಣೆಗೆ ಬರುವ ಪ್ರಜ್ವಲ್‌ ನಿರ್ಧಾರ ಸ್ವಾಗತಿಸುವೆ ಎಂದ ಸಚಿವ ಪರಮೇಶ್ವರ್‌

ಅಶ್ಲೀಲ ವಿಡಿಯೊ ವಿಷಯ ಬಹಿರಂಗಪಡಿಸದಂತೆ ನನಗೂ ಪ್ರಜ್ವಲ್‌ ರೇವಣ್ಣ ಅವರು ಆಮಿಷ ಒಡ್ಡಿದ್ದರು. ಅವರ ಸಹಚರನನ್ನು ನನ್ನ ಭೇಟಿಯಾಗಲು ಕಳುಹಿಸಿದ್ದರು ಎಂದು ಆರೋಪಿಸಿದ್ದಾನೆ.

ನವೀನ್‌ ಗೌಡ ಯಾರು?

ನವೀನ್‌ ಗೌಡ ಕಾಂಗ್ರೆಸ್‌ ಕಾರ್ಯಕರ್ತರಾಗಿದ್ದು, ಶಾಸಕ ಜಮೀರ್‌ ಅಹಮ್ಮದ್‌ ಆಪ್ತರಲ್ಲೊಬ್ಬನಾಗಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ, ಈತ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೀಲ್‌ಗೂ ಆಪ್ತರಾಗಿದ್ದರು. ಚುನಾವಣೆ ವೇಳೆ ಶ್ರೇಯಸ್‌ ಪರವಾಗಿ ಪ್ರಚಾರವನ್ನೂ ಮಾಡಿದ್ದ. ಈತನೇ ಹಾಸನ ಜಿಲ್ಲಾದ್ಯಂತ ಪೆನ್‌ಡ್ರೈವ್‌ ಅನ್ನು ಹಂಚಿಕೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ನವೀನ್ ಗೌಡ ಮೇಲೆ ಏ.23ರಂದು ಹಾಸನ ಸೆನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ಬಳಿಕ ನವೀನ್ ಗೌಡ ನಾಪತ್ತೆಯಾಗಿದ್ದ. ಆದರೆ, ಭಾನುವಾರ ಫೇಸ್‌ಬುಕ್‌ನಲ್ಲಿ ದಿಢೀರನೆ ಪ್ರತ್ಯಕ್ಷವಾಗಿ ಶಾಸಕ ಎ. ಮಂಜು ವಿರುದ್ಧ ಪೋಸ್ಟ್ ಹಾಕಿ ಕೆಲವೇ ಸಮಯದ ಬಳಿಕ ಡಿಲೀಟ್‌ ಮಾಡಿದ್ದ.

ಇದನ್ನೂ ಓದಿ | Prajwal Revanna Case: ಪ್ರಜ್ವಲ್‌ ಪ್ರತ್ಯಕ್ಷವಾದ ಬೆನ್ನಲ್ಲೇ ನಿರೀಕ್ಷಣಾ ಜಾಮೀನಿಗೆ ಭವಾನಿ ರೇವಣ್ಣ ಅರ್ಜಿ

ಪೆನ್‌ಡ್ರೈವ್‌ ಹಂಚಿಕೆಯ ಪ್ರಮುಖ ಆರೋಪ ಹೊತ್ತಿರುವ ನವೀನ್‌ ಗೌಡ, ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಾಕಿ, ಅರಕಲಗೂಡು ಶಾಸಕ ಎ. ಮಂಜು ಮೇಲೆ ಬೊಟ್ಟು ಮಾಡಿದ್ದ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳುತ್ತಿರುವ ಮಹಾ ನಾಯಕ ಇವರೇ ಎಂದು ಆರೋಪ ಮಾಡಿದ್ದ. ನಂತರ ಸುಳ್ಳು ಆರೋಪ ಮಾಡಿದ್ದಾರೆ ಎಂದು ನವೀನ್‌ ಗೌಡ ವಿರುದ್ಧ ಶಾಸಕ ಎ. ಮಂಜು ಅವರು ಎಸ್‌ಐಟಿಗೆ ದೂರು ನೀಡಿದ್ದರು.

Continue Reading

ಕರ್ನಾಟಕ

Suspicious Death: ಕಾಂಗ್ರೆಸ್ ಮುಖಂಡನ ಸಾವಿಗೆ ಕೊನೆಗೂ ಸಿಕ್ತು ಟ್ವಿಸ್ಟ್; ನಿಗೂಢ ಸಾವನ್ನು ಭೇದಿಸಿದ ಖಾಕಿ

Suspicious Death: ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಕಾಂಗ್ರೆಸ್ ಮುಖಂಡನ ಸಾವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ವ್ಯಕ್ತಿಯನ್ನು ಕೊಲೆ ಮಾಡಿಲ್ಲ, ಇದು ಆತ್ಮಹತ್ಯೆ ಎಂದು ತನಿಖೆ ವೇಳೆ ತಿಳಿದುಬಂದಿದೆ.

VISTARANEWS.COM


on

Suspicious Death
Koo

ಗದಗ: ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಕಾಂಗ್ರೆಸ್ ಮುಖಂಡನ ಸಾವು ಪ್ರಕರಣಕ್ಕೆ ದೊಡ್ಡ ಟಿಸ್ಟ್‌ ಸಿಕ್ಕಿದೆ. ಏಕಾಏಕಿ ನಿಗೂಢವಾಗಿ ಸಾವನ್ನಪ್ಪಿದ್ದರಿಂದ ಕೊಲೆಯೆಂದೇ ಎಲ್ಲರೂ ಭಾವಿಸಿದ್ದರು. ಇಡೀ‌ ಗ್ರಾಮಸ್ಥರು ಇದು ಸಹಜ ಸಾವಲ್ಲ, ಭಯಾನಕ ಕೊಲೆಯೇ ಎಂದು ತೀರ್ಮಾನಿಸಿಬಿಟ್ಟಿದ್ದರು. ಆದರೆ ಆತನ ಸಾವಿಗೆ (Suspicious Death) ಇದೀಗ ತಿರುವು ಸಿಕ್ಕಿದ್ದು, ಮುಖಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುವುದು ತನಿಖೆಯಲ್ಲಿ ಬಯಲಾಗಿದೆ.

ಹೌದು,‌ ಮಾರ್ಚ್‌ 12 ರಂದು ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ವ್ಯಾಪ್ತಿಯ ಬೆಟ್ಟದ‌ ಮೇಲೆ ನಡೆದ ಘಟನೆ ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿತ್ತು. ಡೋಣಿ ಗ್ರಾಮದ ಶರಣಪ್ಪ ಸಂದಿಗೌಡರ್ ಎಂಬ 40 ವರ್ಷದ ವ್ಯಕ್ತಿ ನಿಗೂಢವಾಗಿ ಸಾವನ್ನಪ್ಪಿದ್ದ. ಸಾವಿನ ಹಿಂದಿನ ದಿನವಷ್ಟೇ ಸವದತ್ತಿ ಯಲ್ಲಮ್ಮ ದೇವಿ ದರ್ಶನ ಪಡೆದು ಸ್ವಗ್ರಾಮಕ್ಕೆ ವಾಪಾಸ್ ಬರ್ತಿದ್ದ ಶರಣಪ್ಪನನ್ನು ಅದ್ಯಾರೋ ಬೆನ್ನಟ್ಟಿ ಹಲ್ಲೆ ಮಾಡಿದ್ದರು. ಡೋಣಿ ಗ್ರಾಮದ ಹೊರವಲಯದ ಗುಡ್ಡದ ಬಳಿ ಕರೆದುಕೊಂಡು ಬಂದು, ಕಣ್ಣಿಗೆ ಖಾರದ ಪುಡಿ ಎರಚಿ, ಹೆಲ್ಮೆಟ್‌ನಿಂದ ಹಲ್ಲೆ ಮಾಡಿ, ಹಗ್ಗದಿಂದ ಕೈ,‌ಕಾಲು ಕಟ್ಟಿ, ಮರಕ್ಕೆ ನೇಣು ಬಿಗಿದು ಹಾಕಿ ಆರೋಪಿಗಳು ಪರಾರಿಯಾಗಿದ್ದಾರೆ‌ ಅನ್ನೋ ಸುದ್ದಿ ಎಲ್ಲರ ಬಾಯಲ್ಲೂ ಸರಸರನೇ ಹರಿದಾಡಿತ್ತು.

ಅಷ್ಟೇ ಯಾಕೆ ಸ್ಥಳಕ್ಕೆ ಬಂದ ಖಾಕಿಪಡೆ ಸಹ ಇದು ಪಕ್ಕಾ ಇದೇ ರೀತಿ ಕೊಲೆಯಾಗಿರಬಹುದು‌‌ ಎಂದು ಡಿಸೈಡ್ ಮಾಡಿದ್ದರೇನೋ… ಆದರೆ, ವಿಚಿತ್ರ‌‌ ಅಂದರೂ ನಂಬಲೇಬೇಕು, ಶರಣಪ್ಪ ಸಂದಿಗೌಡರ್ ಸತ್ತಿದ್ದು, ಯಾರೋ ಮಾಡಿದ‌ ಕೊಲೆಯಿಂದ ಅಲ್ಲಾ, ಬದಲಾಗಿ ಕೊಲೆ ಕಥೆ ಸೃಷ್ಟಿ ಮಾಡಿ,‌ ಸ್ವತಃ ತಾನೇ ಸೆಲ್ಫ್ ಸೂಸೈಡ್ ಮಾಡಿಕೊಂಡಿದ್ದಾನೆ ಅನ್ನೋ ಬಲವಾದ ಸತ್ಯ ಇದೀಗ ಹೊರಬಿದ್ದಿದೆ.

ಶರಣಪ್ಪ ಮತ್ತು ಆತನ ಪತ್ನಿ ನಡುವೆ ಮೊದಲಿನಿಂದಲೂ ವೈವಾಹಿಕ ಜೀವನ ಅಷ್ಟಕಷ್ಟೇ ಇತ್ತು. ಹೀಗಾಗಿ ಶರಣಪ್ಪನಿಂದ ಪತ್ನಿ ದೂರವೇ ಉಳಿದಿದ್ದಳು. ಇದರಿಂದ ಪತ್ನಿ ಮೇಲೆ ಶರಣಪ್ಪನಿಗೆ ಕೆಂಡದಂಥ ವೈಮನಸ್ಸು ಹುಟ್ಟಿಕೊಂಡಿತ್ತು. ಹೀಗಾಗಿ ಶರಣಪ್ಪ ತಾನು ಸಾವಿಗೆ ಶರಣಾಗುವ ಮುನ್ನ ತನ್ನನ್ನು ಪತ್ನಿಯೇ ಕೊಲೆ ಮಾಡಿಸಿದ್ದಾಳೆ ಅನ್ನೋ ರೀತಿ ಪ್ಲ್ಯಾನ್ ಸೃಷ್ಟಿ ಮಾಡಿದ್ದ. ತನ್ನ ಸೆಲ್ಫ್ ಸೂಸೈಡ್ ಅನ್ನ ಕೊಲೆಯಾಗಿ ಕನ್ವರ್ಟ್ ಮಾಡುವುದು ಹೇಗೆಂದು ಹಲವು ದಿನಗಳ ಮುಂಚೆಯೇ‌ ಫ್ಲ್ಯಾನ್ ಮಾಡಿಕೊಂಡಿದ್ದನಂತೆ.‌ ಇದನ್ನು ಭೇದಿಸಲು ಹೊರಟ ಖಾಕಿಪಡೆಗೆ ಶರಣಪ್ಪನ ಕಣ್ಣಿಗೆ ಬೀಳದ‌ ಖಾರದ ಪುಡಿ, ಒಡೆಯದೇ ಇರೋ‌ ಹೆಲ್ಮೆಟ್, ಕೊಂಚವೂ ಗಾಯವಾಗದ ದೇಹ, ತನ್ನ ಕುಟುಂಬಸ್ಥರಿಗೆ ಮಾಡಿದ ಸುಳ್ಳು ದೂರವಾಣಿ ಕರೆಗಳು, ಸುಳ್ಳು ಕೊಲೆಯ ಕಟ್ಟು ಕಥೆಯನ್ನು ಬಿಚ್ಚಿಟ್ಟಿದ್ದವು. ಇದೆಲ್ಲವನ್ನೂ ಭೇದಿಸಿದ ಖಾಕಿ, ವೈದ್ಯಕೀಯ ವರದಿ ಮತ್ತು FSL ವರದಿ ಆಧರಿಸಿ, ಶರಣಪ್ಪನ ಸಾವು ಕೊಲೆ ಅಲ್ಲ, ಇದು ಸೆಲ್ಫ್ ಸೂಸೈಡ್ ಅನ್ನೋದನ್ನು ಖಾತ್ರಿಪಡಿಸಿದೆ.

ಇದನ್ನೂ ಓದಿ | Drowns in Farm Pond: ಜಾನುವಾರು ಮೇಯಿಸುತ್ತಿದ್ದಾಗ ಕೃಷಿ ಹೊಂಡದಲ್ಲಿ ಬಿದ್ದು ಬಾಲಕ ಸಾವು

ಶರಣಪ್ಪ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೂ ಪಕ್ಷಾತೀತವಾಗಿ‌ ಸಹಾಯ ಮಾಡುವ ವ್ಯಕ್ತಿಯಾಗಿದ್ದನಂತೆ. ರಾಜಕೀಯ ಕಾರಣಕ್ಕೆ ಜಗಳ ತೆಗೆಯುವ ಆಸಾಮಿಯಂತೂ‌ ಅಲ್ಲವೇ‌ ಅಲ್ಲ‌. ಆಗಾಗ ಪತ್ನಿ ಜತೆ ಕಲಹವಿದ್ದ ಕಾರಣ, ಶರಣಪ್ಪನ ಸಾವಿನ ಹಿಂದೆ ಪತ್ನಿಯ ಕೈವಾಡವಿದೆ‌ ಅಂತ, ಸಾವು ನಡೆದ ದಿ‌ನವೇ ಗ್ರಾಮಸ್ಥರು ತೀರ್ಮಾನಿಸಿಬಿಟ್ಟಿದ್ದರು. ಅಲ್ಲದೇ ತನ್ನ ಕುಟುಂಬಸ್ಥರಲ್ಲಿಯೂ ಪತ್ನಿಯಿಂದ ಕೊಲೆ ಸಂಚು ನಡೆದಿದೆ ಅನ್ನೋ ರೀತಿ ಶರಣಪ್ಪ ಕಥೆ ಸೃಷ್ಟಿ ಮಾಡಿದ್ದ. ಆದರೆ ಅದೆಲ್ಲವೂ ಇದೀಗ ಉಲ್ಟಾ ಹೊಡೆದಿದೆ. ಹಾವಿನ ದ್ವೇಷ ಹನ್ನೆರೆಡು ವರುಷ ಅಂತ ಹೇಳ್ತಾರೆ. ಆದರೆ ಶರಣಪ್ಪ ತನ್ನ ಸಾವಿನಲ್ಲಿಯೂ ಪತ್ನಿ‌ ಮೇಲೆ ದ್ವೇಷ ಸಾಧಿಸುವ ಪ್ರಯತ್ನ ವಿಫಲವಾಗಿದೆ.‌

Continue Reading

ಕರ್ನಾಟಕ

Drowns in Farm Pond: ಜಾನುವಾರು ಮೇಯಿಸುತ್ತಿದ್ದಾಗ ಕೃಷಿ ಹೊಂಡದಲ್ಲಿ ಬಿದ್ದು ಬಾಲಕ ಸಾವು

Drowns in Farm Pond: ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು-ತಲಕಾಲಕೊಪ್ಪ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಜಾನುವಾರು ಮೇಯಿಸಲು ತೆರಳಿದ್ದಾಗ, ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಮೃತಪಟ್ಟಿದ್ದಾನೆ.

VISTARANEWS.COM


on

Drowns in Farm Pond
Koo

ಶಿವಮೊಗ್ಗ: ಜಾನುವಾರು ಮೇಯಿಸಲು ತೆರಳಿದ್ದ ಬಾಲಕ, ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿರುವ ಘಟನೆ (Drowns in Farm Pond) ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು-ತಲಕಾಲಕೊಪ್ಪ ಗ್ರಾಮದಲ್ಲಿ ನಡೆದಿದೆ. ಶಾಲೆ ರಜೆ ಇರುವ ಹಿನ್ನೆಲೆ ಜಾನುವಾರು ಮೇಯಿಸಲು ತೆರಳಿದ್ದಾಗ, ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಕೊನೆಯುಸಿರೆಳೆದಿದ್ದಾನೆ.

ಸಾತ್ವಿಕ್ (14) ಮೃತ ಬಾಲಕ. ಶಾಲೆ ರಜೆ ಇದ್ದ ಹಿನ್ನೆಲೆಯಲ್ಲಿ ಜಾನುವಾರು ಮೇಯಿಸಲು ಸಾತ್ವಿಕ್ ತೆರಳಿದ್ದ. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದಿದ್ದಾನೆ. ಬಾಲಕನ ಮೃತದೇಹವನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹೊರತೆಗೆದಿದೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Snake Bite : ಮುಳ್ಳು ಚುಚ್ಚಿದೆ ಎಂದು ನಿದ್ರೆಗೆ ಜಾರಿದವನ ಮೈ ಸೇರಿತು ಹಾವಿನ ವಿಷ! ಬೆಳಗಾಗುವಷ್ಟರಲ್ಲಿ ಮೃತ್ಯು

ಬರ್ತ್ ಡೇ ಆಚರಣೆ ವಿಚಾರಕ್ಕೆ ಕಿರಿಕ್; ಇಬ್ಬರು ಯುವಕರಿಗೆ ಚಾಕು ಇರಿತ

ಶಿವಮೊಗ್ಗ: ಬರ್ತ್ ಡೇ ಆಚರಣೆ ವಿಚಾರಕ್ಕೆ ಯುವಕರ‌ ಮಧ್ಯೆ ಕಿರಿಕ್ ನಡೆದು, ಇಬ್ಬರಿಗೆ ಚಾಕು ಇರಿದಿರುವುದು ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದಲ್ಲಿ ನಡೆದಿದೆ. ಹುಟ್ಟು ಹಬ್ಬ ಆಚರಿಸಿಕೊಳ್ಳುವಾಗ ಪಟಾಕಿ ಹೊಡೆಯುವುದನ್ನು ಪ್ರಶ್ನಿಸಿದ್ದಕ್ಕೆ ಗಲಾಟೆ ನಡೆದಿದೆ.

ನಿರಂಜನ್ ಹಾಗೂ ಗೌತಮ್ ಗಾಯಾಳುಗಳು. ಅಭಿ ಅಲಿಯಾಸ್ ಅಭಿಷೇಕ್ ಆರೋಪಿಯಾಗಿದ್ದಾನೆ. ಹುಟ್ಟು ಹಬ್ಬ ಆಚರಿಸಿಕೊಳ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ಯುವಕರ ಮಧ್ಯೆ ಗಲಾಟೆ ಶುರುವಾಗಿ. ಈ ವೇಳೆ ನಿರಂಜನ್ ಹಾಗೂ ಗಲಾಟೆ ಬಿಡಿಸಲು ಬಂದ ಗೌತಮ್‌ಗೆ ಆರೋಪಿ ಅಭಿ ಚಾಕು ಇರಿದಿದ್ದಾನೆ. ಕಳೆದ ಎರಡು ದಿನಗಳ ಹಿಂದೆ ಪ್ರಕರಣ ನಡೆದಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಕೆರೆಯಲ್ಲಿ ಈಜಲು ಹೋದ ಬಾಲಕ ಸಾವು

Road Accident

ಚಿಕ್ಕಮಗಳೂರು/ಗದಗ: ಕೆರೆಯಲ್ಲಿ ಈಜಲು ಹೋದ (Drowned in water) ಬಾಲಕನೊರ್ವ ಮೃತಪಟ್ಟಿದ್ದಾನೆ. ಶಶಾಂಕ್ ಮೃತ ದುರ್ದೈವಿ. ಚಿಕ್ಕಮಗಳೂರು ನಗರದ ಕೋಟೆ ಕೆರೆಯಲ್ಲಿ ಘಟನೆ (Accident News) ನಡೆದಿದೆ.

ಚಿಕ್ಕಮಗಳೂರು ನಗರದ ಗಾಂಧಿನಗರ ಬಡಾವಣೆಯ ಶಶಾಂಕ್‌ 8ನೇ ತರಗತಿಯಲ್ಲಿ ಓದುತ್ತಿದ್ದ. ತನ್ನ ನಾಲ್ವರು ಗೆಳೆಯರೊಂದಿಗೆ ಈಜಲು ಕೆರೆಗೆ ಬಂದಿದ್ದ. ಈಜಲು ಜಿಗಿಯಲು ಹೋದಾಗ ಕೆರೆಯಲ್ಲಿ ಕಾಲು ಹೂತುಕೊಂಡಿದೆ. ಕೆರೆಯಿಂದ ಮೇಲೆ ಬಾರಲು ಆಗದೆ ಶಶಾಂಕ್‌ (13) ದುರ್ಮರಣ ಹೊಂದಿದ್ದಾನೆ.

ಉಳಿದ ಬಾಲಕರು ಪಾಯದಿಂದ ಪಾರಾಗಿದ್ದು, ಕೂಡಲೇ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಕೆರೆಯಿಂದ ವಿದ್ಯಾರ್ಥಿ ಶವವನ್ನು ಮೇಲೆತ್ತಿದ್ದಾರೆ. ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident : ಬೈಕ್‌-ಕ್ಯಾಂಟರ್‌ ಡಿಕ್ಕಿಗೆ ಯುವತಿ ನಾಲಿಗೆ ಕಟ್! ಸವಾರ ಸ್ಪಾಟ್‌ ಡೆತ್‌

ಬಸ್‌-ಬೈಕ್‌ ಡಿಕ್ಕಿಯಾಗಿ ಇಬ್ಬರು ರೈತರ ದುರ್ಮರಣ

ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ರೈತರಿಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದಲ್ಲಿ ಬಳಿ ಘಟನೆ ನಡೆದಿದೆ.

ಬಿತ್ತನೆ ಬೀಜ ಖರೀದಿ ಮಾಡಿ ಬೈಕ್‌ನಲ್ಲಿ ಊರಿಗೆ ಹೊರಟ್ಟಿದ್ದಾಗ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ ಕೊಪ್ಪಳದಿಂದ ಗದಗ ಕಡೆಗೆ ಬರುತ್ತಿತ್ತು. ಮುಂಡರಗಿ ಕಡೆಯಿಂದ ಬೈಕ್ ಸವಾರರು ಹಳ್ಳಿಗುಡಿಗೆ ಹೊರಟ್ಟಿದ್ದರು. ಹುಬ್ಬಳ್ಳಿ-ವಿಜಯನಗರ ಹೆದ್ದಾರಿ ಕ್ರಾಸಿಂಗ್ ಮಾಡಿ ಹಳ್ಳಿಗುಡಿಗೆ ಹೊರಟ್ಟಿದ್ದಾಗ ಬೈಕ್‌ಗೆ ಬಸ್ ಡಿಕ್ಕಿ ಹೊಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಡಿಕ್ಕಿ ರಭಸಕ್ಕೆ ಬೈಕ್‌ ಸಮೇತ ಬಸ್‌ನಡಿ ಸಿಲುಕಿದ ಹಳ್ಳಿಗುಡಿ ಗ್ರಾಮದ ರೈತ ಪರಸಪ್ಪ ಜೋಗಿನ ಹಾಗೂ ಪೇಠಾಲೂರ ಗ್ರಾಮದ ಮಾರುತಿ ಯಾಟಿ ಮೃತಪಟ್ಟಿದ್ದಾರೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading
Advertisement
Prajwal Revanna Case
ಪ್ರಮುಖ ಸುದ್ದಿ12 mins ago

Prajwal Revanna Case : ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಚೇತನ್​ಗೆ ಎಸ್ಐಟಿ ನೋಟಿಸ್

Yuvraj Singh
ಕ್ರೀಡೆ38 mins ago

Yuvraj Singh : ಅಪಾರ್ಟ್​ಮೆಂಟ್ ವಿತರಣೆಯಲ್ಲಿ ಮೋಸ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ನೋಟಿಸ್​ ಕೊಟ್ಟ ಯುವರಾಜ್ ಸಿಂಗ್

Kavya Maran
ಪ್ರಮುಖ ಸುದ್ದಿ1 hour ago

Kavya Maran : ಸೋತಾಗ ಕಣ್ಣೀರು ಹಾಕಿದ ಕಾವ್ಯಾ ಮಾರನ್​, ​ ಡ್ರೆಸಿಂಗ್​ ರೂಮ್​ಗೆ ತೆರಳಿ ಆಟಗಾರರನ್ನೇ ನಗಿಸಿದರು; ಇಲ್ಲಿದೆ ವಿಡಿಯೊ

Viral Video
ದೇಶ1 hour ago

Viral Video: ಬೆಂಗಳೂರಿನಲ್ಲಷ್ಟೇ ಅಲ್ಲ, ಮೌಂಟ್ ಎವರೆಸ್ಟ್ ನಲ್ಲೂ ಈಗ ಟ್ರಾಫಿಕ್ ಜಾಮ್!!

Samsung Galaxy F55 5G Smartphone Released With Exciting Classy Veegan Leather Design
ದೇಶ1 hour ago

Samsung Galaxy: ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಫ್ 55 5ಜಿ ಸ್ಮಾರ್ಟ್‌ಫೋನ್ ರಿಲೀಸ್‌; ಏನಿದರ ವಿಶೇಷತೆ?

Kannada New Movie
ಕರ್ನಾಟಕ2 hours ago

Kannada New Movie: ʼಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿʼ ಚಿತ್ರದ ಅನಿಮೇಷನ್‌ ಟೀಸರ್‌ ರಿಲೀಸ್‌

Golden Star Ganesh Krishnam Pranaya Sakhi movie first song release in Mysore
ಕರ್ನಾಟಕ2 hours ago

Golden Star Ganesh: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ʼಕೃಷ್ಣಂ ಪ್ರಣಯ ಸಖಿʼ

Mandya News
ಪ್ರಮುಖ ಸುದ್ದಿ2 hours ago

Mandya News : ಬೆಳ್ಳೂರಿನಲ್ಲಿ ಮುಸ್ಲಿಮ್ ಯುವಕರ ಗುಂಪಿನಿಂದ ಅಭಿಲಾಷ್​ ಎಂಬುವರ ಮೇಲೆ ಮಾರಕ ಹಲ್ಲೆ

11th Annual Mahotsav of Sri Annapurneswari Temple in Belagavi from 29th May
ಬೆಳಗಾವಿ2 hours ago

Belagavi News: ಬೆಳಗಾವಿಯಲ್ಲಿ ಮೇ 29ರಿಂದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11ನೇ ವಾರ್ಷಿಕ ಮಹೋತ್ಸವ

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ಬಂದ್ರೆ ಎಸ್‌ಐಟಿ ಮುಂದೆ ನಾನೂ ಹಾಜರಾಗುವೆ: ಆರೋಪಿ ನವೀನ್‌ ಗೌಡ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ6 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌